Tag: ವಿಧಾನ ಸಭೆ

  • ಇನ್ನು ಮುಂದೆ ಬಲವಂತದ ಮತಾಂತರ ಅಪರಾಧ: ಕಾಯ್ದೆಯಲ್ಲಿ ಏನಿದೆ?

    ಇನ್ನು ಮುಂದೆ ಬಲವಂತದ ಮತಾಂತರ ಅಪರಾಧ: ಕಾಯ್ದೆಯಲ್ಲಿ ಏನಿದೆ?

    ಬೆಂಗಳೂರು: ಬಲವಂತದ, ಆಮಿಷದ, ಒತ್ತಡದ ಮತಾಂತರಕ್ಕೆ ರಾಜ್ಯ ಸರ್ಕಾರ ಕೊನೆಗೂ ಕಾನೂನು ಅಸ್ತ್ರ ಪ್ರಯೋಗ ಮಾಡಿದೆ. ರಾಜ್ಯದಲ್ಲಿ ಇನ್ನು ಮುಂದೆ ಬಲವಂತದ ಮತಾಂತರ ಅಪರಾಧವಾಗಲಿದೆ.

    ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2021 ಅನ್ನು ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಲು ಇಂದಿನ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರವಾಗಿತ್ತು.

    ವಿಧಾನ ಪರಿಷತ್ ನಲ್ಲಿ ಬಹುಮತ ಇಲ್ಲದ ಕಾರಣ ಮಸೂದೆ ಮಂಡನೆ ಮಾಡಿರಲಿಲ್ಲ. ಈಗ ಕಾಯ್ದೆ ಜಾರಿಗೆ ಸುಗ್ರಿವಾಜ್ಞೆ ಹೊರಡಿಸಲು ಸರ್ಕಾರ ಮುಂದಾಗಿದೆ. ಈ ಸುಗ್ರಿವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ ಕೂಡಲೇ ಕಾಯ್ದೆ ಜಾರಿ ಆಗಲಿದೆ. ಇದನ್ನೂ ಓದಿ: ಪಿಎಸ್‌ಐ ಅಕ್ರಮ ಪ್ರಕರಣ – ಒಎಂಆರ್‌ ತಿದ್ದಲು ನೆರವಾಗಿದ್ದ ಡಿವೈಎಸ್‌ಪಿ ಶಾಂತಕುಮಾರ್‌ ಬಂಧನ

    BASAVARAJ BOMMAI

    ಕಾಯ್ದೆಯಲ್ಲಿ ಏನಿದೆ?
    * ಬಲವಂತದ ಮತಾಂತರ ಜಾಮೀನುರಹಿತ ಅಪರಾಧ ಮತ್ತು ಅಸಿಂಧು
    * ಉಡುಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ.
    * ಅಮಿಷ ಒಡ್ಡಿ ಮತಾಂತರಗೊಂಡು ವಿವಾಹ ಆಗಿದ್ದರೆ ಆ ಮದುವೆ ಅಸಿಂಧು
    * ಮತಾಂತರದಲ್ಲಿ ಶಿಕ್ಷಣ ಸಂಸ್ಥೆ, ಆಶ್ರಮ, ಧಾರ್ಮಿಕ ಮಿಷನರಿ, ಎನ್‍ಜಿಓಗಳು ಪಾಲ್ಗೊಳ್ಳುವಂತಿಲ್ಲ.
    * ಸಾಮೂಹಿಕ ಮತಾಂತರದಲ್ಲಿ ಭಾಗಿಯಾದ ಸಂಸ್ಥೆಗಳಿಗೆ ಸರ್ಕಾರದ ಅನುದಾನ ಸ್ಥಗಿತ
    * ಧರ್ಮ ಬದಲಿಸುವ 60 ದಿನ ಮೊದಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು.
    * ಮತಾಂತರಗೊಂಡ ಎಸ್‍ಸಿ, ಎಸ್‍ಟಿ ವ್ಯಕ್ತಿಗಳಿಗೆ ಸಿಗುವ ಮೀಸಲಾತಿ,ಇತರೆ ಸೌಲಭ್ಯ ರದ್ದು

    ದಂಡ ಮತ್ತು ಶಿಕ್ಷೆ
    * ಎಸ್‍ಸಿ,ಎಸ್‍ಟಿ ಸಮುದಾಯದವರನ್ನು ಬಲವಂತವಾಗಿ ಮತಾಂತರ ಮಾಡುವಂತಿಲ್ಲ
    * ಅಪ್ರಾಪ್ತರು, ಮಹಿಳೆಯರು, ಬುದ್ದಿಮಾಂಧ್ಯರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡಬಾರದು.
    * ಕಾಯ್ದೆ ಉಲ್ಲಂಘಿಸಿದಲ್ಲಿ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ.
    * ಇತರರನ್ನು ಬಲವಂತವಾಗಿ ಮತಾಂತರಿಸಿದ್ದಲ್ಲಿ 3 ರಿಂದ 5 ವರ್ಷ ಜೈಲು ಶಿಕ್ಷೆ, 25 ಸಾವಿರ ರೂ. ದಂಡ.
    * ಸಾಮೂಹಿಕ ಮತಾಂತರ ಮಾಡಿದವರಿಗೆ 3ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ.
    * ಬಲವಂತದ ಮತಾಂತರ ಸಾಬೀತಾದಲ್ಲಿ ಮತಾಂತರಕ್ಕೆ ಒಳಗಾದವನಿಗೆ ಗರಿಷ್ಠ 5 ಲಕ್ಷ ಪರಿಹಾರ
    * ಪರಿಹಾರದ ಮೊತ್ತವನ್ನು ಮತಾಂತರ ಮಾಡಿದವನಿಂದಲೇ ವಸೂಲಿ
    * ಈ ಹಿಂದೆಯೂ ಮತಾಂತರ ಮಾಡಿದ್ದು ಸಾಬೀತಾದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.

  • ಕೈ ಕುಲುಕಿ ಶುಭಾಶಯ ಕೋರಿದ ಯೋಗಿ- ಅಖಿಲೇಶ್ ಯಾದವ್

    ಕೈ ಕುಲುಕಿ ಶುಭಾಶಯ ಕೋರಿದ ಯೋಗಿ- ಅಖಿಲೇಶ್ ಯಾದವ್

    ಲಕ್ನೋ: ಉತ್ತರ ಪ್ರದೇಶದ ರಾಜಕೀಯದಲ್ಲಿ ವೈರಿಗಳಂತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಪರಸ್ಪರ ಕೈ ಕುಲುಕಿ ಶುಭಾಶಯ ಕೋರಿದ ಅಪರೂಪದ ಘಟನೆ ಇಂದು ವಿಧಾನಸಭೆಯಲ್ಲಿ ಸಾಕ್ಷಿಯಾಗಿದೆ.

    ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿ ಶುಭ ಕೋರಿದರು. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ.

    ವೀಡಿಯೋದಲ್ಲಿ ಏನಿದೆ?: ಉತ್ತರಪ್ರದೇಶದ ವಿಧಾನಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸುತ್ತಿದ್ದ ಯೋಗಿ ಆದಿತ್ಯನಾಥ್ ಹಾಗೂ ಅಖಿಲೇಶ್ ಯಾದವ್ ಇಂದು ಪರಸ್ಪರ ಶುಭ ಕೋರಿ ಕೈ ಕುಲುಕಿದ್ದಾರೆ. ನಂತರ ಯೋಗಿ ಆದಿತ್ಯನಾಥ್ ಅವರು ನಗೆ ಬೀರುತ್ತಾ ಅಖಿಲೇಶ್ ಯಾದವ್ ಅವರ ಭುಜವನ್ನು ತಟ್ಟಿದ್ದಾರೆ. ಇದನ್ನೂ ಓದಿ: 32 ವರ್ಷಗಳ ನಂತ್ರ ಕಾಶ್ಮೀರಿ ಪಂಡಿತರಿಗೆ ಸಿಕ್ಕಿದ್ದು ಸಿನಿಮಾ, ನ್ಯಾಯವಲ್ಲ: ಕೇಜ್ರಿವಾಲ್

    ಚುನಾವಣಾ ಪೂರ್ವದಲ್ಲಿ ಉಭಯ ನಾಯಕರಿಬ್ಬರು ಪರಸ್ಪರ ಒಬ್ಬರನ್ನೊಬ್ಬರು ಟೀಕಿಸಿದ್ದರು. ಅಖಿಲೇಶ್ ಯಾದವ್, ಯೋಗಿ ಆದಿತ್ಯನಾಥ್ ಅವರನ್ನು ಬಾಬಾ ಬುಲ್ಡೋಜರ್ ಎಂದು ಕರೆದಿದ್ದರು. ಅದಕ್ಕೆ ತಿರುಗೇಟು ನೀಡಿದ್ದ ಯೋಗಿ ಆದಿತ್ಯನಾಥ್, ಅಖಿಲೇಶ್ ಯಾದವ್ ಯಾವಾಗಲೂ ಬಾಬುವಾಗಿಯೇ ಉಳಿಯುತ್ತಾರೆ ಎಂದು ಟೀಕಿಸಿದ್ದರು.

    ಮಾರ್ಚ್ 10ರಂದು ಪ್ರಕಟವಾದ ಉತ್ತರಪ್ರದೇಶದ ಚುನಾವಣಾ ಫಲಿತಾಂಶದಲ್ಲಿ 403 ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ 273 ಸ್ಥಾನಗಳನ್ನು ಪಡೆದುಕೊಂದು ಸರ್ಕಾರವನ್ನು ರಚಿಸಿತು. ಹಾಗೂ 111 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಸಮಾಜವಾದಿ ಪಕ್ಷ ವಿರೋಪಕ್ಷದ ಸ್ಥಾನವನ್ನೇರಿದೆ. ಇದನ್ನೂ ಓದಿ: ಎರಡನೇ ಬಾರಿ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣವಚನ

  • ಸ್ಪೀಕರ್ ಕಾಗೇರಿಗೆ ವೆರಿಗುಡ್ ಎಂದ ಸಿದ್ದರಾಮಯ್ಯ

    ಸ್ಪೀಕರ್ ಕಾಗೇರಿಗೆ ವೆರಿಗುಡ್ ಎಂದ ಸಿದ್ದರಾಮಯ್ಯ

    ಬೆಂಗಳೂರು: ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವೆರಿ ಗುಡ್ ಹೇಳಿದ್ದಾರೆ.

    ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಪ್ರಶ್ನೋತ್ತರ ಕಲಾಪದ ಬಳಿಕ ಬಜೆಟ್ ಮೇಲಿನ ಚರ್ಚೆಗೆ ಅವಕಾಶ ಕೊಟ್ಟಿದ್ದೇನೆ ಎಂದು ತಿಳಿಸಿದರು. ಆಗ ಸಿದ್ದರಾಮಯ್ಯ ಅವರು, ಸ್ಪೀಕರ್‌ಗೆ ವೆರಿ ಗುಡ್.. ಗುಡ್ ಎಂದು ಹೇಳಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್, ನನಗೆ ನೀವು ಗುಡ್ ಅನ್ನಲೇಬೇಕು ಅಲ್ಲವಾ ಎಂದು ತಮಾಷೆ ಮಾಡಿದರು. ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಹೌದು.. ಹೌದು ಯು ಆರ್ ಮೈ ಗುಡ್ ಫ್ರೆಂಡ್ ಎಂದು ತಿಳಿಸಿದರು.

    ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಲು ಎದ್ದ ವೇಳೆ ಕಂದಾಯ ಸಚಿವ ಅಶೋಕ್ ಸದನದಿಂದ ಹೊರ ನಡೆಯಲು ಮುಂದಾದರು. ಈ ವೇಳೆ ಸಿದ್ದರಾಮಯ್ಯ ಮಾತನಾಡಿ, ಎ.ಮುನಿರತ್ನ, ಅಶೋಕ್ ಕೂತ್ಕೊಳ್ರಪ್ಪ ಎಂದು ತಿಳಿಸಿದ್ದಾರೆ. ಇದಕ್ಕೆ ಅಶೋಕ್ ನಾನು ನೀರು ಕುಡಿಯೋಕೆ ಹೋಗ್ತಿದ್ದೇನೆ ಎಂದು ಉತ್ತರಿಸಿದರು. ಆಗ ಸಿದ್ದರಾಮಯ್ಯ ಅವರು ಇಲ್ಲಿಗೇ ನೀರು ಕೊಡ್ತಾರೆ ಕೂತ್ಕೊಳಪ್ಪ ಎಂದು ತಿಳಿಸಿದರು. ಸಿದ್ದರಾಮಯ್ಯ ಅವರು ಈ ರೀತಿ ಹೇಳುತ್ತಲೇ ಅಲ್ಲೇ ಅಶೋಕ್ ಕುಳಿತಿದ್ದಾರೆ. ಇದನ್ನೂ ಓದಿ:  ಮಧ್ಯೆ ಕೆಟ್ಟು ನಿಂತ ಬಸ್ – ರೊಮೆನಿಯಾ ತಲುಪದ 37 ಕನ್ನಡಿಗರು

    ಈ ವೇಳೆ ಬಿಎಸ್‍ವೈ ಮಧ್ಯಪ್ರವೇಶಿಸಿ, ಅವರು ಸುಮ್ಮನೆ ಹೊರಗೆ ಹೋಗ್ತಿದ್ರು, ನೀರು ಕುಡಿಯಲು ಹೋಗ್ತಿರಲಿಲ್ಲ. ನೀವು ಹೇಳಿದ್ಮೇಲೆ ಅಶೋಕ್ ಕೂತ್ಕೊಂಡ್ರು ಎಂದು ಕಿಚಾಯಿಸಿದರು. ಇದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಹೌದು ನೀವು ಹಿಂದೆ ಕುಳಿತಿದ್ದೀರಿ, ಇಂತದ್ದನ್ನೆಲ್ಲ ಗಮನಿಸುತ್ತೀರಿ ಅಂತಾ ಗೊತ್ತು ಎಂದು ಕಾಲೆಳೆದರು.

    ಒಟ್ಟಾರೆಯಾಗಿ ಸಿದ್ದರಾಮಯ್ಯ ಅವರ ಭಾಷಣದ ವೇಳೆ ಇಡೀ ಸದನ ನಗೆಗಡಲಲ್ಲಿ ತೇಲಿತು. ಇದನ್ನೂ ಓದಿ: ಪರೀಕ್ಷೆ ನಡೆಸಿ ಕರ್ನಾಟಕದ ಮೆಡಿಕಲ್‌ ಕಾಲೇಜುಗಳಲ್ಲಿ ಸೀಟ್‌ ನೀಡಿ: ಎಚ್‌ಡಿಕೆ

  • ಕಾಂಗ್ರೆಸ್ ಅಹೋರಾತ್ರಿ ಧರಣಿ – ಸಿಎಂ, ಬಿಎಸ್‍ವೈ ಸಂಧಾನ ಯತ್ನ ವಿಫಲ

    ಕಾಂಗ್ರೆಸ್ ಅಹೋರಾತ್ರಿ ಧರಣಿ – ಸಿಎಂ, ಬಿಎಸ್‍ವೈ ಸಂಧಾನ ಯತ್ನ ವಿಫಲ

    ಬೆಂಗಳೂರು: ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ವಿಧಾನಸಭೆ ಹಾಗೂ ವಿಧಾನ ಪರಿಷತ್‍ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದೆ. ಕಾಂಗ್ರೆಸ್ ಧರಣಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕರಿಗೆ ಬೆಡ್, ತಲೆ ದಿಂಬುಗಳು ಹಾಗೂ ಹೊದಿಕೆ ವ್ಯವಸ್ಥೆ ಮಾಡಲಾಗಿತ್ತು. ಧರಣಿ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಅವರು ಟ್ರಾಕ್ ಪ್ಯಾಂಟ್ ಹಾಗೂ ಟೀ ಶರ್ಟ್ ಧರಿಸಿ ಆಗಮಿಸಿದ್ದರು.

    ಆಹೋರಾತ್ರಿ ಧರಣಿ ಹಿನ್ನೆಲೆಯಲ್ಲಿ ಧರಣಿ ನಿರತ ಕಾಂಗ್ರೆಸ್ ನಾಯಕರು ಹಾಗೂ ಶಾಸಕರಿಗೆ ಭರ್ಜರಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಸ್ಪೀಕರ್ ಸೂಚನೆ ಮೇರೆಗೆ ವಿಧಾನಸಭೆ ಸಚಿವಾಲಯದಿಂದ ಊಟ ವ್ಯವಸ್ಥೆ ಮಾಡಿದ್ದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸೌತ್ ರುಚಿ ಹೋಟೆಲ್‍ನಿಂದ 120 ಜನರಿಗಾಗಿ ವೆಜ್ ಊಟದ ವ್ಯವಸ್ಥೆ ಮಾಡಲಾಗಿತ್ತು.

    ಊಟದ ಮೆನು!: ಊಟದಲ್ಲಿ 15 ಬಗೆಯ ಪದಾರ್ಥಗಳಿದ್ದವು. ಚಪಾತಿ, ಮುದ್ದೆ, ಫ್ರೂಟ್ ಸಲಾಡ್, ಅನ್ನ ರಸಂ, ಸಾಂಬಾರ್, ತರಕಾರಿ ಸಲಾಡ್, ಪಲ್ಯ, ರೈಸ್ ಬಾತ್, ಮೊಸರು, ಡ್ರೈ ಜಾಮೂನ್ ಸೇರಿದಂತೆ ಒಟ್ಟು 15 ತರಹದ ಪದಾರ್ಥಗಳು ಇಂದಿನ ಊಟದ ಮೆನುವಿನಲ್ಲಿತ್ತು.

    ಸಂಧಾನ ಯತ್ನ!: ಕಾಂಗ್ರೆಸ್ ನಾಯಕರ ಮನವೊಲಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಸಂಧಾನ ಯತ್ನ ನಡೆಸಿದರು. ಸ್ಪೀಕರ್ ಕಾಗೇರಿ ಅವರ ಸಮ್ಮುಖದಲ್ಲೇ ಸಂಧಾನ ಮಾತುಕತೆ ನಡೆದರೂ ಕಾಂಗ್ರೆಸ್ ನಾಯಕರು ಒಪ್ಪಲಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ಈಶ್ವರಪ್ಪ ರಾಜೀನಾಮೆ ಪಡೆಯಿರಿ, ಇಲ್ಲ ಅಮಾನತು ಮಾಡಿ ಎಂದು ಕೈ ನಾಯಕರು ಪಟ್ಟು ಹಿಡಿದರು. ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗಕ್ಕೆ ಸಮಿತಿ ರಚನೆ: ಬೊಮ್ಮಾಯಿ

    ರಾತ್ರಿ ಇಲ್ಲಿ ಮಲಗೋದು ಬೇಡ ಅಂದ್ವಿ!: ಸಂಧಾನ ಯತ್ನದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಅಶೋಕ್ ಸೇರಿ ಎರಡು ಗಂಟೆಗಳ ಕಾಲ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಿಕೆಶಿ, ಹಾಗೂ ಕಾಂಗ್ರೆಸ್ ಮುಖಂಡರಲ್ಲಿ ವಿನಂತಿ ಮಾಡಿದ್ದೇವೆ. ರಾತ್ರಿ ಇಲ್ಲಿ ಧರಣಿ ಮಾಡುವುದು ಬೇಡ, ಆ ರೀತಿ ವಿಶೇಷವಾದ ಘಟನೆ ನಡೆದಿಲ್ಲ ಎಂದಿದ್ದೇವೆ. ರಾತ್ರಿ ಮಾತ್ರ ಇಲ್ಲಿ ಮಲಗೋದು ಬೇಡ, ಇದು ಒಳ್ಳೆಯ ಪದ್ಧತಿ ಆಗಲ್ಲ ಎಂದು ಮನವೊಲಿಕೆ ಮಾಡಿದ್ದೇವೆ. ಆದರೆ ಅವರು ಮನಸ್ಸಿನಲ್ಲಿ ತೀರ್ಮಾನ ಮಾಡಿ ಆಗಿದೆ, ರಾತ್ರಿ ಇಲ್ಲೇ ಇರುತ್ತೇವೆ ಎಂದು ಹೇಳಿದರು. ಸ್ಪೀಕರ್ ಕೂಡಾ ಮನವೊಲಿಕೆ ಮಾಡುವ ಪ್ರಯತ್ನ ನಡೆಸಿದ್ದಾರೆ. ನಾಳೆ ಧರಣಿ ಮುಂದುವರಿಸಿ ಎಂದರೂ ಯಾವುದಕ್ಕೂ ಒಪ್ಪಿಗೆ ಕೊಡಲಿಲ್ಲ. ನಮ್ಮ ಪ್ರಯತ್ನ ನಾವು ಮಾಡಿದ್ದೇವೆ. ನಾಳೆ ಮತ್ತೆ ಮನವೊಲಿಕೆಗೆ ಮಾತನಾಡುತ್ತೇವೆ ಎಂದು ಹೇಳಿದರು.

    ಪರಿಷತ್‍ನಲ್ಲಿ ಕೂಡಾ ಕಾಂಗ್ರೆಸ್ ಸದಸ್ಯರ ಅಹೋರಾತ್ರಿ ಧರಣಿ ನಡೆಯುತ್ತಿದೆ. ಪರಿಷತ್‍ನಲ್ಲಿ ಧರಣಿ ನಿರತರನ್ನು ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿಯಾದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ರಾಮಲಿಂಗರೆಡ್ಡಿ ಅವರು ವಿಧಾನ ಪರಿಷತ್ತಿಗೆ ಭೇಟಿ ನೀಡಿ ವಿಪಕ್ಷ ನಾಯಕ ಹರಿಪ್ರಸಾದ್ ಹಾಗೂ ಧರಣಿ ನಿರತ ಸದಸ್ಯರ ಜೊತೆ ಮಾತುಕತೆ ನಡೆಸಿದರು. ಇದನ್ನೂ ಓದಿ: ಅವನು ನಮ್ಮ ಅಪ್ಪನ ಮೀಟ್ ಮಾಡಬೇಕು ಅಂತಿದಾನೆ, ನಾನೇ ಅವನನ್ನ ಎಲ್ಲಿ, ಹೇಗೆ, ಯಾವಾಗ ಮೀಟ್ ಮಾಡಬೇಕೋ ಮಾಡ್ತೀನಿ!

  • ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ

    ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ

    ಬೆಂಗಳೂರು: 2021ನೇ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕವನ್ನು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್. ನಾಗರಾಜು ಎಂ.ಟಿ.ಬಿ ಅವರ ಪರವಾಗಿ ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ವಿಧಾನ ಸಭೆಯಲ್ಲಿ ಮಂಡಿಸಿದರು.

    ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಮತ್ತು ಸಭೆಯಲ್ಲಿ ಪರಿಣಾಮಕಾರಿಯಾಗಿ ಹಾಗೂ ವಿಷಯಾಧಾರಿತ ಚರ್ಚೆಯನ್ನು ನಡೆಸುವುದಕ್ಕಾಗಿ, ನಿರ್ದೇಶಕರ ಮಂಡಳಿಯಲ್ಲಿ ಸರ್ಕಾರೇತರ ಸದಸ್ಯರ ಸಂಖ್ಯೆಯನ್ನು ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದ ಒಬ್ಬ ವ್ಯಕ್ತಿಯ ಬದಲಾಗಿ, ಪ್ರತಿಯೊಂದು ಕಂದಾಯವಲಯದಿಂದ ಮೂವರು ವ್ಯಕ್ತಿಗಳಂತೆ, ಆದರೆ ಒಂದೇ ಜಿಲ್ಲೆಯಿಂದ ಒಂದಕ್ಕಿಂತ ಹೆಚ್ಚಿರದಂತೆ ಹನ್ನೆರಡು ಸರ್ಕಾರೇತರ ಸದಸ್ಯರಿಗೆ ಕಡಿತಗೊಳಿಸಲು ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯಮಗಳ ಅಧಿನಿಯಮ, 1956ನ್ನು (1957ರ ಕರ್ನಾಟಕ ಅಧಿನಿಯಮ ಸಂಖ್ಯೆ 7) ತಿದ್ದುಪಡಿ ಮಾಡುವುದಯ ಅವಶ್ಯಕವೆಂದು ಪರಿಗಣಿಸಿದ ವಿಧೇಯಕವಾಗಿದೆ.

    2021ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್(ತಿದ್ದುಪಡಿ) ವಿಧೇಯಕವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ವಿಧಾನ ಸಭೆಯಲ್ಲಿ ಮಂಡಿಸಿದರು.

     

    2021ನೇ ಸಾಲಿನ ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ವಿಧಾನ ಸಭೆಯಲ್ಲಿ ಮಂಡಿಸಿದರು. ಇದನ್ನೂ ಓದಿ: ಮಂಡ್ಯ ಮೈಶುಗರ್ ಕಾರ್ಖಾನೆಗೆ ಬಿಡ್ ಮಾಡಲ್ಲ – ಪರಿಷತ್‍ನಲ್ಲಿ ನಿರಾಣಿ ಪ್ರಕಟ

    2021ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪೌರಾಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್.ನಾಗರಾಜು, ಎಂ.ಟಿ.ಬಿ. ಅವರ ಪರವಾಗಿ ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ವಿಧಾನ ಸಭೆಯಲ್ಲಿ ಮಂಡಿಸಿದರು.

  • ಸದನಕ್ಕೆ ಮಾಸ್ಕ್ ಧರಿಸಿ ಬಂದ ಸಿದ್ದರಾಮಯ್ಯ

    ಸದನಕ್ಕೆ ಮಾಸ್ಕ್ ಧರಿಸಿ ಬಂದ ಸಿದ್ದರಾಮಯ್ಯ

    ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಎಲ್ಲರಿಗೂ ಇಂದು ಅಚ್ಚರಿ ಕಾದಿತ್ತು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಭಿನ್ನ ಲುಕ್ ನಲ್ಲಿ ಕಲಾಪಕ್ಕೆ ಬಂದಿದ್ರು. ಎಲ್ಲೆಡೆ ಕೊರೊನಾ ಹಬ್ಬಿರುವ ಭೀತಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೂ ಬಿಟ್ಟಿಲ್ಲ ಅನ್ಸತ್ತೆ. ಅದಕ್ಕಾಗಿಯೇ ಇಂದಿನಿಂದ ಸಿದ್ದರಾಮಯ್ಯ ಅವರು ಕಲಾಪಕ್ಕೆ ಮಾಸ್ಕ್ ಧರಿಸಿ ಬರಲಾರಂಭಿಸಿದ್ದಾರೆ.

    ಇದೇ ಮೊದಲ ಬಾರಿಗೆ ಮಾಸ್ಕ್ ನಲ್ಲಿ ಬಹಿರಂಗವಾಗಿ ಕಾಣಿಸಿಕೊಂಡಿದ್ದರಿಂದಲೋ ಏನೋ ಮಾಸ್ಕ್ ಧಾರಿ ಸಿದ್ದರಾಮಯ್ಯರನ್ನು ಕಂಡವರೆಲ್ಲ ಹುಬ್ಬು ಮೇಲಕ್ಕೆತ್ತಿ ಮುಗುಳ್ನಕ್ಕು ಅಚ್ಚರಿ ವ್ಯಕ್ತಪಡಿಸುತ್ತಿದ್ರು. ವಿಧಾನಸೌಧಕ್ಕೆ ಮಾಸ್ಕ್ ಹಾಕಿಕೊಂಡೇ ಆಗಮಿಸಿದ ಸಿದ್ದರಾಮಯ್ಯಗೆ ಪ್ರವೇಶ ದ್ವಾರದಲ್ಲಿ ಎದುರಾದ ಮೊದಲ ವ್ಯಕ್ತಿ ಅವರ ಮಾಜಿ ಮತ್ತು ಹಾಲಿ ಶಿಷ್ಯ ಸಚಿವ ರಮೇಶ್ ಜಾರಕಿಹೊಳಿ. ಈ ವೇಳೆ ಮಾಸ್ಕ್ ಧರಿಸಿದ ಸಿದ್ದರಾಮಯ್ಯ ಮತ್ತು ರಮೇಶ್ ಜಾರಕಿಹೊಳಿ ಮಧ್ಯೆ ಸ್ವಾರಸ್ಯಕರ ಸಂಭಾಷಣೆ ಸಹ ನಡೆಯಿತು.

    ಮಾಸ್ಕ್ ಧರಿಸಿ ಬಂದ ಸಿದ್ದರಾಮಯ್ಯಗೆ, “ಏನ್ ಸರ್ ಮಾಸ್ಕ್ ಹಾಕ್ಕೊಂಡು ಬಂದಿದ್ದೀರ” ಸಚಿವ ರಮೇಶ್ ಜಾರಕಿಹೊಳಿ ಅಚ್ಚರಿಯಿಂದ ಕೇಳಿದ್ರು. ಇದಕ್ಕೆ ಸಿದ್ದರಾಮಯ್ಯನವರು, “ವಯಸ್ಸಾಯ್ತಲ್ಲಯ್ಯ, ನನ್ನಿಂದ ಯಾರಿಗೂ ತೊಂದ್ರೆ ಆಗಬಾರದು, ಅದಕ್ಕೆ ಹಾಕಿದ್ದೀನಿ ಕಣಯ್ಯ. ನಿಂಗೆಷ್ಟು ವಯಸ್ಸು? ಅರವತ್ತಾಯ್ತಾ ನಿಂಗೆ?” ಅಂತ ತಮಾಷೆಯಾಗಿ ರಮೇಶ್ ಜಾರಕಿಹೊಳಿಗೆ ಕೇಳಿದ್ರು. ಆಗ ರಮೇಶ್ ಜಾರಕಿಹೊಳಿಯವರು, “ನಿಮಗೆ ಕೊರೊನಾ ಬರಲ್ಲ ಬಿಡಿ ಸರ್” ಎಂದು ಹೇಳಿ ಧೈರ್ಯ ಹೇಳುತ್ತಲೇ ವಿಧಾನಸಭೆ ಒಳಗೆ ಒಟ್ಟಿಗೆ ಹೆಜ್ಜೆ ಹಾಕಿದ್ರು.

  • ಸಂವಿಧಾನದ ಮೇಲಿನ ಚರ್ಚೆ ಪೂರ್ಣ- ಸದನದಲ್ಲಿ ಸ್ಪೀಕರ್ ಕಣ್ಣೀರು

    ಸಂವಿಧಾನದ ಮೇಲಿನ ಚರ್ಚೆ ಪೂರ್ಣ- ಸದನದಲ್ಲಿ ಸ್ಪೀಕರ್ ಕಣ್ಣೀರು

    ಬೆಂಗಳೂರು: ವಿಧಾನಸಭೆಯಲ್ಲಿ ನಡೆಯುತ್ತಿದ್ದ ಸಂವಿಧಾನ ಮೇಲಿನ ಚರ್ಚೆ ಪೂರ್ಣಗೊಂಡಿದೆ. ಸಂವಿಧಾನದ 70ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಸಂವಿಧಾನದ ಚರ್ಚೆ ಏರ್ಪಡಿಸಿದ್ರು. ಅಂತಿಮ ದಿನವಾದ ಇಂದು ಚರ್ಚೆ ಯಶಸ್ವಿಯಾಗಿ ಪೂರ್ಣಗೊಂಡಿದ್ದಕ್ಕೆ ಸ್ಪೀಕರ್ ಭಾವುಕರಾಗಿ ಕಣ್ಣೀರು ಹಾಕಿದ ಘಟನೆಯೂ ನಡೆಯಿತು.

    ಅಂದಹಾಗೆ ಒಟ್ಟು 7 ದಿನಗಳ ಕಾಲ 28 ಗಂಟೆ ವಿಧಾನಸಭೆಯಲ್ಲಿ ಸಂವಿಧಾನದ ಮೇಲಿನ ಚರ್ಚೆ ನಡೆಯಿತು. ಸುಮಾರು 48 ಶಾಸಕರು ಸಂವಿಧಾನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ರು. ಸಂವಿಧಾನ ಮೇಲಿನ ಚರ್ಚೆಯ ಅಂತಿಮ ದಿನವಾದ ಇಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿದ್ರು. ಸಿದ್ದರಾಮಯ್ಯ ಮಾತನಾಡುವಾಗ ಪಕ್ಷಾಂತರ ಪಿಡುಗು ಪ್ರಜಾಪ್ರಭುತ್ವಕ್ಕೆ ಮಾರಕ. ಷೆಡ್ಯೂಲ್ 10 ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಯಾರೇ ಪಕ್ಷಾಂತರ ಮಾಡಿದ್ರೂ ತಪ್ಪು. ನಾನು ಪಕ್ಷಾಂತರ ಮಾಡಲಿಲ್ಲ. ನನ್ನ ಉಚ್ಛಾಟನೆ ಮಾಡಿದ್ರು. ಹಾಗಾಗಿ ನಾನು ಕಾಂಗ್ರೆಸ್ ಸೇರಬೇಕಾಯ್ತು ಅಂತ ಹೇಳಿದ್ರು.

    ಸಂವಿಧಾನ ಮೇಲಿನ ಚರ್ಚೆಯ ಒಟ್ಟಾರೆ ನಿರ್ಣಯವನ್ನು ಸ್ಪೀಕರ್ ಓದಿದ್ರು. ಸಂವಿಧಾನದ ಮೇಲಿನ ಚರ್ಚೆಯ ಎಲ್ಲ ಅಂಶಗಳನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ, ಲೋಕಸಭಾ ಸ್ಪೀಕರ್ ಅವರಿಗೆ ಕಳುಹಿಸಿಕೊಡಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಹೇಳಿದ್ರು. ಇದೇ ವೇಳೆ ಸಂವಿಧಾನ ಮೇಲಿನ ಚರ್ಚೆಯ ಸಾರಾಂಶ ಓದುವಾಗ ಭಾವುಕರಾಗಿ ಪೀಠದ ಮೇಲಿಯೇ ಸ್ಪೀಕರ್ ಕಣ್ಣೀರು ಹಾಕಿದ್ರು. ಬಳಿಕ ರಮೇಶ್ ಕುಮಾರ್, ಬಸವರಾಜ ಬೊಮ್ಮಾಯಿ, ಹೆಚ್.ಕೆ.ಕುಮಾರಸ್ವಾಮಿ ಅವರು ಸ್ಪೀಕರ್ ನಿರ್ಧಾರವನ್ನು ಶ್ಲಾಘಿಸಿದರು.

  • ರಮೇಶ್ ಕುಮಾರ್ ಪಲಾಯನವಾದಿ- ಕೈ, ಬಿಜೆಪಿ ವಾಕ್ಸಮರಕ್ಕೆ ಕಲಾಪ ಬಲಿ

    ರಮೇಶ್ ಕುಮಾರ್ ಪಲಾಯನವಾದಿ- ಕೈ, ಬಿಜೆಪಿ ವಾಕ್ಸಮರಕ್ಕೆ ಕಲಾಪ ಬಲಿ

    – ಸುಧಾಕರ್ ವಿರುದ್ಧ ಕಾಂಗ್ರೆಸ್, ರಮೇಶ್ ವಿರುದ್ಧ ಬಿಜೆಪಿ ಹಕ್ಕುಚ್ಯುತಿ ನೋಟಿಸ್

    ಬೆಂಗಳೂರು: ವಿಧಾನಸಭೆ ಕಲಾಪ ಇಂದು ಬೆಳಗ್ಗೆ ಆರಂಭವಾಗುತ್ತಲೇ ಮತ್ತೆ ರಮೇಶ್ ಕುಮಾರ್ ಮತ್ತು ಸುಧಾಕರ್ ನಿಂದನೆ ವಿಷಯ ಪ್ರಸ್ತಾಪವಾಗಿ ಸದನ 15 ನಿಮಿಷ ಮುಂದೂಡಿಕೆಯಾದ ಪ್ರಸಂಗ ನಡೆಯಿತು.

    ವಿಧಾನಸಭೆ ಕಲಾಪದ ಆರಂಭದಲ್ಲೇ ರಮೇಶ್ ಕುಮಾರ್ ಅಮಾನತಿಗೆ ಸಚಿವ ಈಶ್ವರಪ್ಪ ಸ್ಪೀಕರ್ ಕಾಗೇರಿಗೆ ಆಗ್ರಹಿಸಿದರು. ಇದಕ್ಕೆ ಬಿಜೆಪಿ ಸದಸ್ಯರು ಬೆಂಬಲ ನೀಡಿದರು. ಇತ್ತ ಕಾಂಗ್ರೆಸ್ಸಿನಿಂದಲೂ ಸುಧಾಕರ್ ವಿರುದ್ಧ ಹಕ್ಕುಚ್ಯುತಿ ನೊಟೀಸ್ ಮೇಲಿನ ಚರ್ಚೆಗೆ ಸಿದ್ದರಾಮಯ್ಯ ಆಗ್ರಹ ಮಂಡಿಸಿದರು. ಈ ವೇಳೆ ಉಭಯ ಪಕ್ಷಗಳ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿಗೆ ಸದನ ಸಾಕ್ಷಿಯಾಯ್ತು.

    ಗದ್ದಲದ ನಡುವೆಯೇ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಎರಡು ಹಕ್ಕುಚ್ಯುತಿ ನೋಟಿಸ್ ಕೊಟ್ಟಿರುವ ಬಗ್ಗೆ ಸ್ಪೀಕರ್ ಕಾಗೇರಿಯವರು ಸದನದ ಗಮನಕ್ಕೆ ತಂದರು. ಸುಧಾಕರ್ ವಿರುದ್ಧ ಕಾಂಗ್ರೆಸ್, ರಮೇಶ್ ಕುಮಾರ್ ವಿರುದ್ಧ ಬಿಜೆಪಿ ಹಕ್ಕುಚ್ಯುತಿಗೆ ನೋಟಿಸ್ ಕೊಟ್ಟಿದ್ದಾರೆಂದು ಕಲಾಪದಲ್ಲಿ ಸ್ಪೀಕರ್ ಹೇಳಿದರು. ಈ ನೋಟಿಸ್‍ಗಳ ಮೇಲಿನ ಚರ್ಚೆಗೆ ಪ್ರಶ್ನೋತ್ತರ ವೇಳೆಯ ಬಳಿಕ ಚರ್ಚೆಗೆ ಅವಕಾಶ ಕೊಡುವುದಾಗಿ ಸ್ಪೀಕರ್ ಹೇಳಿದರು.

    ನಮ್ಮ ನೋಟಿಸ್ ಮೊದಲು ಚರ್ಚೆಯಾಗಬೇಕೆಂದು ಉಭಯ ಪಕ್ಷಗಳು ಪಟ್ಟು ಹಿಡಿದವು. ಈ ವೇಳೆ ಸದನದಲ್ಲಿ ಗದ್ದಲ, ಕೋಲಾಹಲ ನಿಲ್ಲದೇ ಮುಂದುವರಿದಿತ್ತು. ಈ ಮಧ್ಯೆ ರಮೇಶ್ ಕುಮಾರ್ ಸದನಕ್ಕೆ ಬಾರದಿರುವುದನ್ನು ಕಂಡ ಬಿಜೆಪಿ ಸದಸ್ಯರು ತೀವ್ರ ಟೀಕೆ ವ್ಯಕ್ತಪಡಿಸಿದರು. ರಮೇಶ್ ಕುಮಾರ್ ಪಲಾಯನವಾದಿ. ಹಾಗಾಗಿ ಇಂದು ಅವರು ಸದನಕ್ಕೆ ಬಂದಿಲ್ಲ. ಎಲ್ಲಿ ಪಲಾಯನವಾದಿ ರಮೇಶ್ ಕುಮಾರ್ ಎಂದು ಬಿಜೆಪಿಯ ರೇಣುಕಾಚಾರ್ಯ ಮತ್ತಿತರೆ ಸದಸ್ಯರು ಕೂಗಿದರು. ಸದನದಲ್ಲಿ ಕೋಲಾಹಲ ನಿಲ್ಲದ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ಕಲಾಪವನ್ನು 15 ನಿಮಿಷಗಳ ಕಾಲ ಮುಂದೂಡಬೇಕಾಯಿತು.

  • ಛೋಟಾ ರಾಜನ್ ಸಹೋದರನಿಗೆ ಬಿಜೆಪಿ ಮೈತ್ರಿಯಿಂದ ವಿಧಾನಸಭೆ ಟಿಕೆಟ್

    ಛೋಟಾ ರಾಜನ್ ಸಹೋದರನಿಗೆ ಬಿಜೆಪಿ ಮೈತ್ರಿಯಿಂದ ವಿಧಾನಸಭೆ ಟಿಕೆಟ್

    ಮುಂಬೈ: ಭೂಗತ ಪಾತಕಿ ಛೋಟಾ ರಾಜನ್ ಸಹೋದರನಿಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ಮಿತ್ರ ಪಕ್ಷವಾದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ವಿಧಾನಸಭೆಗೆ ಟಿಕೆಟ್ ನೀಡಲಾಗಿದೆ.

    ಜೈಲಿನಲ್ಲಿರುವ ಭೂಗತ ಪಾತಕಿ ಛೋಟಾ ರಾಜನ್ ಸಹೋದರ ದೀಪಕ್ ನಿಕಾಲ್ಜೆ ಅವರನ್ನು ಬಿಜೆಪಿ, ಶಿವಸೇನಾ ಮತ್ತು ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಸೇರಿ ಜಂಟಿ ಅಭ್ಯರ್ಥಿಯನ್ನಾಗಿ ಮಾಡಿ ಕಣಕ್ಕೆ ಇಳಿಸಲಿದ್ದಾರೆ. ದೀಪಕ್‍ಗೆ ಪಶ್ಚಿಮ ಮಹಾರಾಷ್ಟ್ರದ ಫಾಲ್ಟನ್ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

    ಆಕ್ಟೋಬರ್ 21 ರಂದು ಮಹಾರಾಷ್ಟ್ರದ ವಿಧಾನ ಸಭಾ ಚುನಾವಣೆಗೆ ಬಿಜೆಪಿ, ಶಿವಸೇನಾ ಮತ್ತು ಇತರ ಪ್ರಾದೇಶಿಕ ಪಕ್ಷಗಳು ಸೇರಿ ಸಮ್ಮಿಶ್ರ ಮಾಡಿಕೊಂಡು ಸೀಟನ್ನು ಹಂಚಿಕೆ ಮಾಡಿಕೊಂಡಿವೆ. ಇದರಲ್ಲಿ ಕೇಂದ್ರ ಸಚಿವ ರಾಮದಾಸ್ ಅಠವಾಳೆ ನೇತೃತ್ವದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷಕ್ಕೆ ಆರು ಸೀಟುಗಳನ್ನು ನೀಡಲಾಗಿದೆ.

    ಸಮ್ಮಿಶ್ರ ಪಕ್ಷಗಳಿಂದ ಹಂಚಿಕೆಯಾಗಿರುವ ಸೀಟುಗಳನ್ನು ಇಂದು ರಾಮದಾಸ್ ಅಠವಾಳೆ ತಮ್ಮ ಪಕ್ಷದ ಕೆಲ ಮುಖಂಡರಿಗೆ ಹಂಚಿಕೆ ಮಾಡಿದ್ದು, ಇದರಲ್ಲಿ ಫಾಲ್ಟನ್ ಕ್ಷೇತ್ರದಿಂದ ಛೋಟಾ ರಾಜನ್ ಸಹೋದರ ದೀಪಕ್ ನಿಕಾಲ್ಜೆ ಟಿಕೆಟ್ ನೀಡಿದ್ದಾರೆ. ಹಲವಾರು ವರ್ಷಗಳಿಂದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದಲ್ಲಿ ಗುರುತಿಸಿಕೊಂಡಿರುವ ದೀಪಕ್ ಗೆ ಈ ಹಿಂದೆ ಮುಂಬೈನ ಚೆಂಬೂರಿನಿಂದ ಈ ಪಕ್ಷ ಟಿಕೆಟ್ ನೀಡಿತ್ತು. ಆದರೆ ದೀಪಕ್ ಆ ಚುನಾವಣೆಯಲ್ಲಿ ಸೋತಿದ್ದರು.

    ಈ ಕ್ಷೇತ್ರವನ್ನು ಬಿಟ್ಟರೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಸೋಲಾಪುರ ಜಿಲ್ಲೆಯ ಮಲ್ಶಿರಾಸ್, ನಾಂದೇಡ್ ಜಿಲ್ಲೆಯ ಭಂಡಾರ ಮತ್ತು ನೈಗಾಂವ್, ಪರಭಾನಿಯ ಪಾತ್ರಿ ಮತ್ತು ಮುಂಬೈನ ಮನ್ಖುರ್ಡ್-ಶಿವಾಜಿ ನಗರ ಕ್ಷೇತ್ರದಿಂದ ಉಳಿದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

  • ವಿಶ್ವಾಸಮತಕ್ಕೆ ಮುನ್ನವೇ ಕೈಚೆಲ್ಲಿ ಕುಳಿತ ಕಾಂಗ್ರೆಸ್ – ಇನ್ನೂ ಏನೋ ಒಂದು ಆಸೆಯಲ್ಲಿದೆ ಜೆಡಿಎಸ್

    ವಿಶ್ವಾಸಮತಕ್ಕೆ ಮುನ್ನವೇ ಕೈಚೆಲ್ಲಿ ಕುಳಿತ ಕಾಂಗ್ರೆಸ್ – ಇನ್ನೂ ಏನೋ ಒಂದು ಆಸೆಯಲ್ಲಿದೆ ಜೆಡಿಎಸ್

    ಬೆಂಗಳೂರು: ವಿಧಾನಸಭೆಯಲ್ಲಿ ಗುರುವಾರ ಮುಖ್ಯಮಂತ್ರಿಗಳು ವಿಶ್ವಾಸಮತಯಾಚಿಸಲಿದ್ದು, ಅದಕ್ಕೂ ಮುನ್ನವೇ ಕಾಂಗ್ರೆಸ್ ನಾಯಕರು ಕೈ ಚೆಲ್ಲಿ ಕುಳಿತಿದ್ದಾರೆ.

    ಮುಂಬೈಗೆ ಹೋಗಿರೋ ಅತೃಪ್ತರನ್ನು ಮನವೊಲಿಸಿ ಕರೆತರೋದು ಸಾಧ್ಯವಿಲ್ಲ ಅನ್ನೋ ನಿರ್ಧಾರಕ್ಕೆ ಬಂದಿದ್ದಾರೆ. ಹೋಗಿರೋರು ಬರಲ್ಲ. ಇದ್ದವರು ಹೋಗಬೇಡ್ರಪ್ಪಾ ಎಂದು ರೆಸಾರ್ಟ್ ನಲ್ಲಿರೋ ಕಾಂಗ್ರೆಸ್ ಶಾಸಕರಿಗೆ ಹಿರಿಯ ನಾಯಕರು ಮನವಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಕಾಂಗ್ರೆಸ್ ನಾಯಕರು ಮತ್ತು ಶಾಸಕರಿಗೆ ಈ ಸರ್ಕಾರ ಉಳಿಯೋದು ಕಷ್ಟ ಅನ್ನೋದು ಈಗಾಗಲೇ ಗೊತ್ತಾಗಿದೆ. ಆದರೆ ಜೆಡಿಎಸ್ ನಾಯಕರು ಮಾತ್ರ ಕೊನೆ ಕ್ಷಣದ ಮ್ಯಾಜಿಕ್ ನಿರೀಕ್ಷೆಯಲ್ಲಿದ್ದಾರೆ. ಅತೃಪ್ತರು ವಾಪಸ್ ಬರ್ತಾರೆ, ಸರ್ಕಾರ ಉಳಿಯುತ್ತದೆ ಅನ್ನೋ ನಂಬಿಕೆಯಲ್ಲಿದ್ದಾರೆ. ಇತ್ತ ನಿನ್ನೆ ರಾತ್ರಿ ಜೆಡಿಎಸ್ ಶಾಸಕರು ತಂಗಿರೋ ದೇವನಹಳ್ಳಿಯ ಖಾಸಗಿ ರೆಸಾರ್ಟ್ ಗೆ ಸಿಎಂ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.

    ಕಳೆದ 8 ದಿನಗಳಿಂದ ಜೆಡಿಎಸ್ ಶಾಸಕರು ಇದೇ ರೆಸಾರ್ಟ್ ನಲ್ಲಿ ತಂಗಿದ್ದು, ಸಿಎಂ ಐದು ಬಾರಿ ಭೇಟಿ ನೀಡಿದ್ದಾರೆ. ಈ ನಡುವೆ ಮತ್ತಷ್ಟು ಶಾಸಕರು ಕೈಕೊಡುವ ಭೀತಿಯಲ್ಲಿರುವ ದೋಸ್ತಿಗಳು, ತಮ್ಮ ತಮ್ಮ ಶಾಸಕರು ಇರುವ ರೆಸಾರ್ಟ್ ಗಳಿಗೆ ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಸ್ವತಃ ಗೃಹ ಸಚಿವ ಎಂ ಬಿ ಪಾಟೀಲ್, ರೆಸಾರ್ಟ್ ಗಳಿಗೆ ಭೇಟಿ ನೀಡಿ ಪೊಲೀಸ್ ಭದ್ರತೆ ಪರಿಶೀಲಿಸಿದ್ದಾರೆ ಎನ್ನಲಾಗಿದೆ.

    ರಾಜ್ಯದ ಮೈತ್ರಿ ಸರ್ಕಾರದ ಅಳಿವು, ಉಳಿವಿನ ಪ್ರಶೆಯಾಗಿರೋ ಅತೃಪ್ತ ಶಾಸಕರ ರಾಜೀನಾಮೆ ಮತ್ತು ಅನರ್ಹತೆ ಸಂಬಂಧಿತ ತೀರ್ಪನ್ನು ಇಂದು ಸುಪ್ರೀಂಕೋರ್ಟ್ ನೀಡಲಿದೆ. ಮಂಗಳವಾರ ಸುದೀರ್ಘ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ತ್ರಿಸದಸ್ಯ ಪೀಠ ಇಂದು ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ.