Tag: ವಿನಯಾ ಪ್ರಸಾದ್‌

  • ಮ್ಯೂಸಿಕಲ್ ಲವ್ ಸ್ಟೋರಿಗೆ ನಾಯಕಿಯಾದ ಮೇಘಶ್ರೀ

    ಮ್ಯೂಸಿಕಲ್ ಲವ್ ಸ್ಟೋರಿಗೆ ನಾಯಕಿಯಾದ ಮೇಘಶ್ರೀ

    ನ್ನಡ ಚಿತ್ರರಂಗದಲ್ಲಿ ಬಹಳ ದಿನಗಳ ನಂತರ ಮ್ಯೂಸಿಕಲ್ ಲವ್‌ಸ್ಟೋರಿ ಹೊಂದಿರುವ ಚಿತ್ರವೊಂದು ರೆಡಿಯಾಗಿದೆ. ಪ್ರೇಮಲೋಕ, ಎಕ್ಸ್ಕ್ಯೂಸ್‌ಮಿ ಚಿತ್ರಗಳ ನಂತರ ಅದೇ ಜಾನರ್‌ನಲ್ಲಿ ತಯಾರಾಗಿರುವ ಮತ್ತೊಂದು ಚಿತ್ರದ ಹೆಸರು ರಿದಂ. ಚಿತ್ರೋದ್ಯಮದಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಪಳಗಿರುವ ಮಂಜು ಮಿಲನ್ ಅವರ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರವಿದು. ಈಗಾಗಲೇ ಬಿಡುಗಡೆಯ ಹಂತ ತಲುಪಿರುವ ರಿದಂ, ಸದ್ಯದಲ್ಲೇ ಸೆನ್ಸಾರ್ ಮನೆಗೆ ತೆರಳಲಿದೆ.

    ಚಿತ್ರದಲ್ಲಿ ನಾಯಕನಾಗೂ ನಟಿಸಿರುವ ಮಂಜುಮಿಲನ್ ಈಗಾಗಲೇ ತಮ್ಮ ಬ್ಯಾನರ್ ಮೂಲಕ ೨ ಚಿತ್ರಗಳನ್ನು ಕನ್ನಡಿಗರಿಗೆ ನೀಡಿದ್ದು, ಇದು ಅವರ ಮೂರನೇ ಚಿತ್ರ. ಜೋಗಿ ಪ್ರೇಮ್, ಕಾಶೀನಾಥ್, ವಾಸು ಅವರಂಥ ನಿರ್ದೇಶಕರ ಬಳಿ ಪಳಗಿರುವ ಇವರು,  ಒಬ್ಬ ಸಿಂಗರ್ ಹಾಗೂ ವಯಲಿನ್ ನುಡಿಸೋ ಯುವತಿಯ  ನಡುವೆ ನಡೆಯುವ ಲವ್‌ಸ್ಟೋರಿಯನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ಚಿತ್ರದ ನಾಯಕಿಯಾಗಿ ಕೃಷ್ಣತುಳಸಿ ಖ್ಯಾತಿಯ ಮೇಘಶ್ರೀ ಅವರು ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ನೂಡಲ್ಸ್ ಬಿಡಿಸು ಅಂದ್ರೆ ಮೂಲಂಗಿ ಬಿಡಿಸ್ತಾಳೆ – ಸೋನು ಪೇಂಟಿಂಗ್‌ಗೆ ರಾಕೇಶ್ ಫುಲ್ ಶಾಕ್..!

    ಈಗಾಗಲೇ ಬೆಂಗಳೂರು, ಮೈಸೂರು, ಮೇಲುಕೋಟೆ ಅಲ್ಲದೆ ಸಾಗರದಾಚೆಯ ಸಿಂಗಪೂರ್‌ನಲ್ಲಿ ಸುಮಾರು ೬೨ ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಿಕೊಂಡು ಬಂದಿದ್ದಾರೆ. ಚಿತ್ರದಲ್ಲಿ ಸಪ್ತಸ್ವರಗಳನ್ನು ಪ್ರತಿನಿಧಿಸುವಂತೆ ಏಳು ಸುಂದರವಾದ. ಹಾಡುಗಳಿದ್ದು, ಎ.ಟಿ. ರವೀಶ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಮಂಜುನಾಥ್ ಹಾಗೂ ಮಲ್ಲಿಕಾರ್ಜುನ್ ಚಿತ್ರಕ್ಕೆ ಕ್ಯಾಮೆರಾ ವರ್ಕ್ ನಿಭಾಯಿಸಿದ್ದಾರೆ.  ಹಿರಿಯ ಕಲಾವಿದರಾದ ಸುಮನ್, ಪದ್ಮಾವಾಸಂತಿ, ವಿನಯಾಪ್ರಸಾದ್, ಗಿರಿಜಾ ಲೋಕೇಶ್ ಈ ಚಿತ್ರದಲ್ಲಿ ನಟಿಸಿದ್ದಾರೆ.

    ಫ್ಯಾಮಿಲಿ ಸೆಂಟಿಮೆಂಟ್ ಜೊತೆಗೆ ಒಂದು ಎಮೋಷನಲ್ ಲವ್‌ಸ್ಟೋರಿಯನ್ನು ರಿದಂ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ಹೇಳಹೊರಟಿರುವ ನಿರ್ದೇಶಕ ಕಮ್ ನಾಯಕ ಮಂಜು ಮಿಲನ್ ಅವರು ಮುಂದಿನ ತಿಂಗಳು ಚಿತ್ರದ ಟ್ರೈಲರನ್ನು ಸ್ಟಾರ್ ನಟರೊಬ್ಬರ ಕೈಲಿ ಬಿಡುಗಡೆ ಮಾಡಿಸುವ ಯೋಜನೆಯನ್ನೂ ಹಾಕಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚೇತನಾ ರಾಜ್ ಸಾವಿನ ಬೆನ್ನಲ್ಲೇ ಬಾಡಿ ಶೇಮಿಂಗ್ ಬಗ್ಗೆ ವಿನಯಾ ಪ್ರಸಾದ್ ಪುತ್ರಿ ಖಡಕ್ ಮಾತು

    ಚೇತನಾ ರಾಜ್ ಸಾವಿನ ಬೆನ್ನಲ್ಲೇ ಬಾಡಿ ಶೇಮಿಂಗ್ ಬಗ್ಗೆ ವಿನಯಾ ಪ್ರಸಾದ್ ಪುತ್ರಿ ಖಡಕ್ ಮಾತು

    ಸ್ಯಾಂಡಲ್‌ವುಡ್ ನಟಿ ವಿನಯಾ ಪ್ರಸಾದ್ ಪುತ್ರಿ ಪ್ರಥಮ ಪ್ರಸಾದ್, ಚೇತನಾ ರಾಜ್ ಸಾವಿನ ಬೆನ್ನಲ್ಲೇ ಬಾಡಿ ಶೇಮಿಂಗ್ ಬಗ್ಗೆ ಸಿಡಿದೆದ್ದಿದ್ದಾರೆ. ಹಲವು ನಟಿಯರು ಈ ಕುರಿತು ಮಾತನಾಡಿದ್ದರು, ಈಗ ವಿನಯಾ ಪ್ರಸಾದ್ ಪುತ್ರಿ ಬಾಡಿ ಶೇಮಿಂಗ್ ಬಗ್ಗೆ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ

    ಈಗ ತಾನೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕು ಅಂತಾ ಕಣ್ತುಂಬ ಕನಸುಗಳನ್ನಿಟ್ಟು ಬಂದಿರೋ ನಟಿ, ಕೆಲ ದಿನಗಳ ಹಿಂದೆ ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಚೇತನಾ ರಾಜ್ ಬಗ್ಗೆ ವಿನಯಾ ಪ್ರಸಾದ್ ಪುತ್ರಿ ಪ್ರಥಮ ಪ್ರಸಾದ್ ಮಾತನಾಡಿದ್ದಾರೆ. ಜೊತೆಗೆ ತಮಗಾದ ಬಾಡಿ ಶೇಮಿಂಗ್ ಕುರಿತು ಮಾತನಾಡಿದ್ದಾರೆ. ಇದನ್ನೂ ಓದಿ: ಮುನಿಸು ಮರೆತು ಮತ್ತೆ ಒಂದಾದ್ರು ಕಿಯಾರಾ- ಸಿದ್ಧಾರ್ಥ್ ಮಲ್ಹೋತ್ರಾ

    ಚೇತನಾ ರಾಜ್ ತೀರಿಕೊಂಡಿದ್ದ ಹಿಂದಿನ ದಿನವಷ್ಟೇ ಭೇಟಿಯಾಗಿದ್ದೆ, ಬೆಳಿಗ್ಗೆ ಏಳುವಷ್ಟರಲ್ಲಿ ಆಕೆ ಇಲ್ಲ ಅನೋದಾದ್ರೆ ಹೇಗೆ ಎಂದು ಪ್ರಥಮ ಪ್ರಸಾದ್ ಪ್ರಶ್ನಿಸಿದ್ದಾರೆ. ಈ ರೀತಿ ಯಾರಿಗೂ ಆಗಬಾರದು. ಇದು ನನ್ನ ದೇಹ ನನ್ನಗಿಷ್ಟವಾದ ರೀತಿಯಲ್ಲಿ ನಾವು ಬದುಕಬೇಕು ಬೇರೆಯವರ ಮಾತಿಗೆ ತಲೆಕೆಡಿಸಿಕೊಳ್ಳಬಾರದು ಎಂದು ಪ್ರಥಮ ಪ್ರಸಾದ್ ಮಾತನಾಡಿದ್ದಾರೆ.

    ಇನ್ನು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುವ ಪ್ರಥಮ ಪ್ರಸಾದ್‌ಗೆ ಸಣ್ಣಗಾಗುವ ಕುರಿತು ಪ್ರತಿನಿತ್ಯ ನೂರಾರು ಮೆಸೇಜ್‌ಗಳು ಬರುತ್ತಂತೆ. ತಾಯಿ ವಿನಯಾ ಪ್ರಸಾದ್‌ಗೆ ಹೋಲಿಕೆ ಮಾಡಿ, ನಿಮ್ಮ ತಾಯಿ ಅಷ್ಟು ಸಣ್ಣಗೆ ಇದ್ದೀರೆ ನೀವು ಯಾಕೆ ಅಷ್ಟು ದಪ್ಪಗೆ ಇದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದು ನನ್ನ ದೇಹ, ನನ್ನ ದೇಹದ ಜೊತೆ ಕೊನೆ ಉಸಿರು ಇರುವರೆಗೂ ಇರುತ್ತೇನೆ. ನಾನು ಯಾರ ಮಾತಿಗೂ ತಲೆಕೆಡಿಸಿಕೊಳ್ಳವುದಿಲ್ಲ ಎಂದು ನಿರ್ಧಾರ ಮಾಡಿದ್ದೇನೆ ಎಂದು `ಮಹಾದೇವಿ’ ಸೀರಿಯಲ್ ಖ್ಯಾತಿಯ ಪ್ರಥಮಾ ಪ್ರಸಾದ್ ಮಾತನಾಡಿದ್ದಾರೆ.