Tag: ವಿನಯ್ ರಾಜಕುಮಾರ್

  • ‘ಗ್ರಾಮಾಯಣ’ ಸೆಟ್ ನಲ್ಲಿ ಕಾಣಿಸಿಕೊಂಡ ನಟ ಶಿವರಾಜ್ ಕುಮಾರ್

    ‘ಗ್ರಾಮಾಯಣ’ ಸೆಟ್ ನಲ್ಲಿ ಕಾಣಿಸಿಕೊಂಡ ನಟ ಶಿವರಾಜ್ ಕುಮಾರ್

    ವಿನಯ ರಾಜ್ ಕುಮಾರ್ ನಟನೆಯ ಗ್ರಾಮಾಯಣ (Gramayana) ಸಿನಿಮಾದ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಈ ಸಮಯದಲ್ಲಿ ಶೂಟಿಂಗ್ ಸೆಟ್ ಗೆ ವಿಜಿಟ್ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ ನಟ ಶಿವರಾಜ್ ಕುಮಾರ್ (Shivaraj Kumar) ಮತ್ತು ಗೀತಾ ಶಿವರಾಜ್ ಕುಮಾರ್. ಇವರಿಗೆ ನಿರ್ಮಾಪಕ ಶ್ರೀಕಾಂತ್ ಕೂಡ ಸಾಥ್ ನೀಡಿದ್ದಾರೆ.  ಈ ನಡುವೆ ಸಿನಿಮಾ ತಂಡಕ್ಕೆ ಲೂಸ್ ಮಾದ ಖ್ಯಾತಿಯ ಯೋಗಿ (Loose Mada Yogi) ಕೂಡ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರವೊಂದನ್ನು ನಿಭಾಯಿಸಲಿದ್ದಾರೆ.

    ‘ಸಿದ್ಧಾರ್ಥ್’ (Siddarth) ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ವಿನಯ್ ರಾಜ್‌ಕುಮಾರ್ ಅವರು ಇತ್ತೀಚಿಗೆ ಹೊಸ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಗ್ರಾಮಾಯಣ’ ಚಿತ್ರದ ವಿಚಾರವಾಗಿ ನಟ ವಿನಯ್ ಸುದ್ದಿಯಲ್ಲಿದ್ದಾರೆ. ಈ ಹೆಸರು ಕೇಳಿದ ತಕ್ಷಣ ಹಲವರಿಗೆ ಇದು ಈಗಾಗಲೇ ಆರಂಭವಾಗಿರುವ ಸಿನಿಮಾವಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ. ಹೌದು, ‘ಗ್ರಾಮಾಯಣ’ ಸಿನಿಮಾ ಆರಂಭವಾಗಿ ಮೂರ್ನಾಲ್ಕು ವರ್ಷಗಳಾಗಿವೆ. ಆದರೆ ಹಲವು ಕಾರಣಗಳಿಂದ ನಿಂತು ಹೋಗಿದ್ದ ಚಿತ್ರವನ್ನು ಖ್ಯಾತ ನಿರ್ಮಾಪಕ ಕೆ.ಪಿ ಶ್ರಿಕಾಂತ್ ಅವರು ಲಹರಿ ಫಿಲ್ಮ್ಸ್ ಮನೋಹರ್ ನಾಯ್ಡು ಜೊತೆಗೆ ಸೇರಿ ಆರಂಭಿಸುತ್ತಿದ್ದಾರೆ. ‘ಯುಐ’ ಸಿನಿಮಾದ ನಂತರ ಶ್ರಿಕಾಂತ್ ಮತ್ತು ಮನೋಹರ್ ನಾಯ್ಡು ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ.

    ದೇವನೂರು ಚಂದ್ರು (Devanur Chandru) ನಿರ್ದೇಶನದ ‘ಗ್ರಾಮಾಯಣ’ ಸಿನಿಮಾ ಒಂದೇ ಒಂದು ಟೀಸರ್‌ನಿಂದ ಹಲವರ ಗಮನ ಸೆಳೆದಿತ್ತು. ಕೋವಿಡ್‌ನಿಂದ ಮತ್ತು ಹಲವು ಕಾರಣಗಳಿಂದ ಸಿನಿಮಾ ಅರ್ಧಕ್ಕೆ ನಿಂತು ಹೋಗಿತ್ತು. ಇದೀಗ ಹೊಸದಾಗಿ ಚಿತ್ರವನ್ನ ಶುರು ಮಾಡಿದ್ದಾರೆ. ಜೂನ್ 8ರಂದು ಈ ಸಿನಿಮಾದ ಮುಹೂರ್ತ ನಡೆದಿದೆ.

    ‘ಗ್ರಾಮಾಯಣ’ ಹೆಸರೇ ಹೇಳುವಂತೆ ಹಳ್ಳಿ ಬ್ಯಾಕ್‌ಗ್ರೌಂಡ್‌ನಲ್ಲಿ ನಡೆಯುವ ಕಥೆಯಾಗಿದೆ. ನಮ್ಮ ನೆಲದ ಕಥೆಯಾಗಿದ್ದು, ಒಂದು ಹಳ್ಳಿಯಲ್ಲಿ ಏನೇನು ನಡೆಯುತ್ತದೆ, ಅಲ್ಲಿನ ವಾತಾವರಣ, ಜನ ಜೀವನವನ್ನು ಈ ಸಿನಿಮಾ ಮೂಲಕ ತೆರೆದಿಡುವ ಪ್ರಯತ್ನ ಮಾಡಲಾಗುತ್ತಿದೆ.

     

    ಗ್ರಾಮಾಯಣ ಇದು ಗ್ರಾಮದಲ್ಲೇ ನಡೆಯುವ ಕಥೆ.  ಸಿಂಪಲ್ ಸುನಿ ಅವರ ಮದುವೆ ಸಂದರ್ಭದಲ್ಲಿ ವಿನಯ್ ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರನ್ನು ನೋಡಿದ ಕೂಡಲೆ ಈ ಕಥೆಗೆ ಇವರೆ ಸೂಕ್ತ ನಾಯಕ ಅಂದುಕೊಂಡೆ. ಅವರು ಕಥೆ ಒಪ್ಪಿದರು. ನೀವು ಈವರೆಗೂ ನೋಡಿರದ ವಿನಯ್ ರಾಜಕುಮಾರ್ ಅವರನ್ನು ಈ ಚಿತ್ರದಲ್ಲಿ ನೋಡಬಹುದು. ಚಿಕ್ಕಮಗಳೂರು, ದೇವರಾಯಸಮುದ್ರ, ಅರಸಿಕೆರೆ, ಕಡೂರು ಸುತ್ತಮುತ್ತ ಚಿತ್ರೀಕರಣ ಮಾಡಲಿದ್ದೇವೆ. ಯಶಸ್ವಿನಿ ಅಂಚಲ್  ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಅಪರ್ಣ(ನಿರೂಪಕಿ), ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುತ್ತಾರೆ  ನಿರ್ದೇಶಕ ದೇವನೂರು ಚಂದ್ರು.

  • ಗ್ರಾಮಾಯಣಕ್ಕೆ ಎಂಟ್ರಿ ಕೊಟ್ಟ ಲೂಸ್ ಮಾದ ಯೋಗಿ

    ಗ್ರಾಮಾಯಣಕ್ಕೆ ಎಂಟ್ರಿ ಕೊಟ್ಟ ಲೂಸ್ ಮಾದ ಯೋಗಿ

    ದೊಡ್ಮನೆ ಕುಡಿ ವಿನಯ್ ರಾಜಕುಮಾರ್ (Vinay Rajkumar) ಅಭಿನಯದ ಗ್ರಾಮಾಯಣ (Gramayana) ಸಿನಿಮಾ ತಂಡಕ್ಕೆ ಲೂಸ್ ಮಾದ ಖ್ಯಾತಿಯ ಯೋಗಿ (Loose Mada Yogi) ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರವೊಂದನ್ನು ನಿಭಾಯಿಸಲಿದ್ದಾರೆ. ಅದೊಂದು ಪ್ರಮುಖ ಪಾತ್ರವಾಗಿದ್ದರೂ, ಪಾತ್ರದ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ ಚಿತ್ರತಂಡ.

    ‘ಸಿದ್ಧಾರ್ಥ್’ (Siddarth) ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ವಿನಯ್ ರಾಜ್‌ಕುಮಾರ್ ಅವರು ಇತ್ತೀಚಿಗೆ ಹೊಸ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಗ್ರಾಮಾಯಣ’ ಚಿತ್ರದ ವಿಚಾರವಾಗಿ ನಟ ವಿನಯ್ ಸುದ್ದಿಯಲ್ಲಿದ್ದಾರೆ. ಈ ಹೆಸರು ಕೇಳಿದ ತಕ್ಷಣ ಹಲವರಿಗೆ ಇದು ಈಗಾಗಲೇ ಆರಂಭವಾಗಿರುವ ಸಿನಿಮಾವಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ. ಹೌದು, ‘ಗ್ರಾಮಾಯಣ’ ಸಿನಿಮಾ ಆರಂಭವಾಗಿ ಮೂರ್ನಾಲ್ಕು ವರ್ಷಗಳಾಗಿವೆ. ಆದರೆ ಹಲವು ಕಾರಣಗಳಿಂದ ನಿಂತು ಹೋಗಿದ್ದ ಚಿತ್ರವನ್ನು ಖ್ಯಾತ ನಿರ್ಮಾಪಕ ಕೆ.ಪಿ ಶ್ರಿಕಾಂತ್ ಅವರು ಲಹರಿ ಫಿಲ್ಮ್ಸ್ ಮನೋಹರ್ ನಾಯ್ಡು ಜೊತೆಗೆ ಸೇರಿ ಆರಂಭಿಸುತ್ತಿದ್ದಾರೆ. ‘ಯುಐ’ ಸಿನಿಮಾದ ನಂತರ ಶ್ರಿಕಾಂತ್ ಮತ್ತು ಮನೋಹರ್ ನಾಯ್ಡು ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ.

    ದೇವನೂರು ಚಂದ್ರು (Devanur Chandru) ನಿರ್ದೇಶನದ ‘ಗ್ರಾಮಾಯಣ’ ಸಿನಿಮಾ ಒಂದೇ ಒಂದು ಟೀಸರ್‌ನಿಂದ ಹಲವರ ಗಮನ ಸೆಳೆದಿತ್ತು. ಕೋವಿಡ್‌ನಿಂದ ಮತ್ತು ಹಲವು ಕಾರಣಗಳಿಂದ ಸಿನಿಮಾ ಅರ್ಧಕ್ಕೆ ನಿಂತು ಹೋಗಿತ್ತು. ಇದೀಗ ಹೊಸದಾಗಿ ಚಿತ್ರವನ್ನ ಶುರು ಮಾಡಿದ್ದಾರೆ. ಜೂನ್ 8ರಂದು ಈ ಸಿನಿಮಾದ ಮುಹೂರ್ತ ನಡೆದಿದೆ. ಇದನ್ನೂ ಓದಿ:ರಜನಿ 170ನೇ ಸಿನಿಮಾಗೆ ಇಬ್ಬರು ನಾಯಕಿಯರು

    ‘ಗ್ರಾಮಾಯಣ’ ಹೆಸರೇ ಹೇಳುವಂತೆ ಹಳ್ಳಿ ಬ್ಯಾಕ್‌ಗ್ರೌಂಡ್‌ನಲ್ಲಿ ನಡೆಯುವ ಕಥೆಯಾಗಿದೆ. ನಮ್ಮ ನೆಲದ ಕಥೆಯಾಗಿದ್ದು, ಒಂದು ಹಳ್ಳಿಯಲ್ಲಿ ಏನೇನು ನಡೆಯುತ್ತದೆ, ಅಲ್ಲಿನ ವಾತಾವರಣ, ಜನ ಜೀವನವನ್ನು ಈ ಸಿನಿಮಾ ಮೂಲಕ ತೆರೆದಿಡುವ ಪ್ರಯತ್ನ ಮಾಡಲಾಗುತ್ತಿದೆ.

    ಗ್ರಾಮಾಯಣ ಇದು ಗ್ರಾಮದಲ್ಲೇ ನಡೆಯುವ ಕಥೆ.  ಸಿಂಪಲ್ ಸುನಿ ಅವರ ಮದುವೆ ಸಂದರ್ಭದಲ್ಲಿ ವಿನಯ್ ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರನ್ನು ನೋಡಿದ ಕೂಡಲೆ ಈ ಕಥೆಗೆ ಇವರೆ ಸೂಕ್ತ ನಾಯಕ ಅಂದುಕೊಂಡೆ. ಅವರು ಕಥೆ ಒಪ್ಪಿದರು. ನೀವು ಈವರೆಗೂ ನೋಡಿರದ ವಿನಯ್ ರಾಜಕುಮಾರ್ ಅವರನ್ನು ಈ ಚಿತ್ರದಲ್ಲಿ ನೋಡಬಹುದು. ಚಿಕ್ಕಮಗಳೂರು, ದೇವರಾಯಸಮುದ್ರ, ಅರಸಿಕೆರೆ, ಕಡೂರು ಸುತ್ತಮುತ್ತ ಚಿತ್ರೀಕರಣ ಮಾಡಲಿದ್ದೇವೆ. ಯಶಸ್ವಿನಿ ಅಂಚಲ್  ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಅಪರ್ಣ(ನಿರೂಪಕಿ), ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುತ್ತಾರೆ  ನಿರ್ದೇಶಕ ದೇವನೂರು ಚಂದ್ರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಲ್ಲಿಕಾ ಸಿಂಗ್ ಪಾತ್ರ ಪರಿಚಯಿಸಿದ ನಿರ್ದೇಶಕ ಸಿಂಪಲ್ ಸುನಿ

    ಮಲ್ಲಿಕಾ ಸಿಂಗ್ ಪಾತ್ರ ಪರಿಚಯಿಸಿದ ನಿರ್ದೇಶಕ ಸಿಂಪಲ್ ಸುನಿ

    ಸಿಂಪಲ್ ಸುನಿ (Simple Suni) ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ (Vinay Rajkumar) ನಟಿಸುತ್ತಿರುವ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಒಂದು ಸರಳ ಪ್ರೇಮಕಥೆ’. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್ (Swathistha Krishnan) ಹಾಗೂ ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಮಲ್ಲಿಕಾ ಸಿಂಗ್ (Mallika Singh) ಅವರ ಪಾತ್ರ ಮತ್ತು ಪಾತ್ರದ ಹಿನ್ನೆಲೆಯನ್ನು ಪರಿಚಯಿಸುವಂತಹ ವಿಡಿಯೋ ಮತ್ತು ಫಸ್ಟ್ ಲುಕ್ ಅನ್ನು ಮಲ್ಲಿಕಾ ಅವರ ಹುಟ್ಟು ಹಬ್ಬಕ್ಕಾಗಿ ನಿರ್ದೇಶಕರು ರಿಲೀಸ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಮಲ್ಲಿಕಾ ಅವರು ಮಧುರಾ ಹೆಸರಿನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇದು ಗಾಯಕಿಯ ಪಾತ್ರವಾಗಿದೆ

    ಸಿನಿಮಾ ಕುರಿತು ಮಾತನಾಡಿದ ನಟ ವಿನಯ್ ರಾಜ್ ಕುಮಾರ್, ‘ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ಮೊದಲಿನಿಂದಲೂ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ತುಂಬಾ ಇಷ್ಟ ಜೊತೆಗೆ ಸುನಿ ಅವರ ನಿರ್ದೇಶನದ ಶೈಲಿ ಕೂಡ ತುಂಬಾ ಇಷ್ಟ. ಸುನಿ ಅವರು ಈ ಸಿನಿಮಾ ಕಥೆ ಹೇಳಲು ಬಂದಾಗ ಅವರ ನಿರ್ದೇಶನದಲ್ಲಿ ಸಿನಿಮಾ ಮಾಡ್ತಿದ್ದೀನಿ ಅನ್ನೋದೇ ತುಂಬಾ ಖುಷಿ ಕೊಟ್ಟಿತ್ತು’ ಎಂದಿದ್ದಾರೆ.

    ಈ ಚಿತ್ರದಲ್ಲಿ ವಿನಯ್ ಅವರದ್ದು ಅತಿಶಯ್ ಪಾತ್ರ. ಅದೊಂದು ಸಂಗೀತ ನಿರ್ದೇಶಕನ ಪಾತ್ರ. ದೊಡ್ಡ ಮ್ಯೂಸಿಕ್ ಡೈರೆಕ್ಟರ್ ಆಗಬೇಕು ಅನ್ನೋದು ಅವನ ಕನಸು. ಆತನ ಮನಸ್ಸಲ್ಲಿ ಒಂದು ಹುಡುಗಿಯ ಹುಡುಕಾಟ ಯಾವಾಗಲೂ ಇರುತ್ತೆ. ಇದು ಸಿನಿಮಾದ ಒಂದು ಎಳೆಯಾಗಿದೆ. ಇದನ್ನೂ ಓದಿ:‘ರವಿಕೆ’ ಹೆಸರಿನಲ್ಲೊಂದು ಸಾಂಗ್ : ಇದು ರವಿಕೆ ಪ್ರಸಂಗ

    ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಗೆ ಇಟ್ಟ ಮೊದಲ ಟೈಟಲ್ ‘ಒಂದು ಸರಳ ಪ್ರೇಮಕಥೆ’. ಯಾವುದಾದರೂ ಸಿನಿಮಾಗೆ ಈ ಟೈಟಲ್ ಇಡೋಣ ಎಂದು ಹತ್ತು ವರ್ಷದಿಂದ ಟೈಟಲ್ ರಿನಿವಲ್ ಮಾಡಿಕೊಂಡು ಬಂದಿದ್ದೆ. ಈ ಚಿತ್ರದ ಕಥೆ ಕೇಳಿ ವಿನಯ್ ರಾಜ್ ಕುಮಾರ್ ಓಕೆ ಮಾಡಿದ್ರು, ಚಿತ್ರಕ್ಕೆ  ಎಂ.ಎಲ್. ಪ್ರಸನ್ನ ಅವರು ಕಥೆ ಬರೆದಿದ್ದಾರೆ. ಜನವರಿ 23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣ, ಮೈಸೂರಿನಲ್ಲಿ ಎರಡನೇ ಹಂತದ ಶೂಟಿಂಗ್ ಮುಗಿದಿದೆ. ಈಗಾಗಲೇ ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

     

    ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಕನ್ನಡ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಿದ್ದಕ್ಕಾಗಿ ತುಂಬಾ ಧನ್ಯವಾದಗಳು ಎಂದು ಮಲ್ಲಿಕಾ ಸಿಂಗ್ ಮೊದಲ ಕನ್ನಡ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು.  ಸಾಧುಕೋಕಿಲ, ರಾಜೇಶ್ ನಟರಂಗ, ಅರುಣ ಬಾಲರಾಜ್ ಒಳಗೊಂಡ ಕಲಾವಿದರು ಒಂದು ಸರಳ ಪ್ರೇಮಕಥೆ ಚಿತ್ರದಲ್ಲಿದ್ದು, ಕಾರ್ತಿಕ್ ಛಾಯಾಗ್ರಹಣ, ಆದಿ ಸಂಕಲನ, ವೀರ್ ಸಮರ್ಥ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]