Tag: ವಿನಯ್ ರಾಜ್‍ಕುಮಾರ್

  • ಅಮೆರಿಕದಲ್ಲಿ ವಿನಯ್ & ವಂದಿತಾ ಜೊತೆ ರಮ್ಯಾ ಸುತ್ತಾಟ

    ಅಮೆರಿಕದಲ್ಲಿ ವಿನಯ್ & ವಂದಿತಾ ಜೊತೆ ರಮ್ಯಾ ಸುತ್ತಾಟ

    ಪ್ರತಿ ವರ್ಷ ಅಮೆರಿಕದಲ್ಲಿ ನಡೆಯುವ ನಾವಿಕ ಕಾರ್ಯಕ್ರಮಕ್ಕೆ ಈ ಬಾರಿ ರಮ್ಯಾ ಅತಿಥಿಯಾಗಿ ಹೋಗಿದ್ದರು. ಈ ಸಮಾರಂಭಕ್ಕೆ ರಮ್ಯಾ ಜೊತೆ ನಟ ವಿನಯ್ ರಾಜ್‌ಕುಮಾರ್ ಕೂಡ ಹೋಗಿದ್ದಾರೆ. ವಿಶೇಷ ಅಂದ್ರೆ ಇವರಿಗೆ ಪುನೀತ್ ರಾಜ್‌ಕುಮಾರ್ ಕಿರಿಯ ಪುತ್ರಿ ವಂದಿತಾ ಕೂಡ ಸಾಥ್ ಕೊಟ್ಟಿದ್ದಾರೆ.

    ಅಮೆರಿಕದಲ್ಲಿ ಮೂವರೂ ಎಂಜಾಯ್ ಮಾಡ್ತಿರುವ ಫೋಟೋಗಳನ್ನ ರಮ್ಯಾ ಇದೀಗ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡ್ಕೊಂಡಿದ್ದಾರೆ. ಅದಕ್ಕೆ ಕ್ಯಾಪ್ಷನ್ ಹಾಕಿರುವ ರಮ್ಯಾ ‘ನಾನು ಹಾಗೂ ಬೆಸ್ಟ್ ಕಂಪನಿ’ ಎಂದು ವಿನಯ್ ರಾಜ್‌ಕುಮಾರ್ ಮತ್ತು ವಂದಿಯಾ ಪುನೀತ್‌ ರಾಜ್‌ಕುಮಾರ್ ಹೆಸರನ್ನು ಮೆನ್ಷನ್ ಮಾಡಿದ್ದಾರೆ.

    ಅಮೆರಿಕದಲ್ಲಿ ತೆಗೆದಿರುವ ಒಂದಷ್ಟು ಕ್ಯಾಂಡಿಡ್ ಫೋಟೋಗಳನ್ನ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ ರಮ್ಯಾ. ಇಲ್ಲಿ ಮೋಹಕತಾರೆ ಮೇಕಪ್ ಮಾಡಿಸಿಕೊಳ್ತಿರುವ ಫೋಟೋ ಸಮೇತ ಜಾಲಿ ಸಮಯದ ಹತ್ತಾರು ಫೋಟೋಗಳನ್ನ ಶೇರ್ ಮಾಡಿದ್ದಾರೆ. ರಮ್ಯಾ ಜೊತೆ ವಿನಯ್ ರಾಜ್‌ಕುಮಾರ್ ಹಲವು ಬಾರಿ ಪ್ರವಾಸ ಕೈಗೊಂಡಿರುವುದು ಗೊತ್ತಿರೋದೆ. ಆದರೆ ಈ ಬಾರಿ ರಮ್ಯಾ ಕಂಪನಿಗೆ ವಂದಿತಾ ಪುನೀತ್‌ ರಾಜ್‌ಕುಮಾರ್ ಸೇರಿಕೊಂಡಿರುವುದು ವಿಶೇಷ.

    ಮೂವರು ಒಟ್ಟಾಗಿ ಜಾಲಿ ಮಾಡ್ತಿರೋದು ಬಹಳ ವಿಶೇಷ. ರಮ್ಯಾ ಪೋಸ್ಟ್‌ಗೆ ಅದಿತಿ ಪ್ರಭುದೇವ ಹಾಗೂ ಪ್ರಣಿತ ಇನ್ನಿತರ ತಾರೆಯರು ಪ್ರೀತಿಪೂರ್ವಕ ಇಮೋಜಿ ಕಳಿಸಿದ್ದಾರೆ. ಇನ್ನು ಕೆಲವರು ನೀವು ವಿನಯ್ ರಾಜ್‌ಕುಮಾರ್ ಜೊತೆ ಡೇಟ್ ಮಾಡುತ್ತಿದ್ದೀರಾ ಎಂದು ಕಾಮೆಂಟ್‌ನ್ನೂ ಹಾಕಿದ್ದಾರೆ. ಯಾವುದಕ್ಕೂ ತಲೆಕೆಡಿಸಿಕೊಳ್ಳದ ರಮ್ಯಾ ಆಪ್ತರೊಂದಿಗೆ ಉತ್ತಮ ಸಮಯ ಕಳೆಯುತ್ತಿದ್ದಾರೆ.

  • ಡಿ-ಬಾಸ್ ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್ – ನಟಿ ರಮ್ಯಾ ಬೆಂಬಲಕ್ಕೆ ನಿಂತ ದೊಡ್ಮನೆ ಕುಟುಂಬ

    ಡಿ-ಬಾಸ್ ಫ್ಯಾನ್ಸ್‌ನಿಂದ ಅಶ್ಲೀಲ ಮೆಸೇಜ್ – ನಟಿ ರಮ್ಯಾ ಬೆಂಬಲಕ್ಕೆ ನಿಂತ ದೊಡ್ಮನೆ ಕುಟುಂಬ

    – ನಿಮ್ಮ ನಿಲುವು ಸರಿಯಿದೆ ಎಂದ ಶಿವಣ್ಣ ದಂಪತಿ

    ರ್ಶನ್ ಅಭಿಮಾನಿಗಳ ವಿರುದ್ಧ ಕಾನೂನು ಸಮರಕ್ಕಿಳಿದಿರುವ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆ (Actress Ramya) ದೊಡ್ಮನೆ ಕುಟುಂಬ ಸಾಥ್ ನೀಡಿದೆ.

    ನಟ ಶಿವರಾಜ್‌ಕುಮಾರ್ (Shivarajkumar) ಹಾಗೂ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ. ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ. ಇದು ಸರಿಯಲ್ಲ ಎಂದು ಪರೋಕ್ಷವಾಗಿ ಡಿ-ಬಾಸ್ ಅಭಿಮಾನಿಗಳ ವಿರುದ್ಧ ಸಿಡಿದೆದ್ದಿದ್ದಾರೆ.ಇದನ್ನೂ ಓದಿ: ಬೆಳಗಾವಿ | ಕೆಲಸದಿಂದ ವಜಾ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

    ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ. ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ-ಅಸೂಯೆಯನ್ನು ಬಿತ್ತಲು ಬಳಸಬಾರದು. ರಮ್ಯಾ ನಿಮ್ಮ ನಿಲುವು ಸರಿಯಿದೆ, ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ ಎಂದು ಬೆಂಬಲ ಸೂಚಿಸಿದ್ದಾರೆ.

    ಶಿವಣ್ಣನ ಪೋಸ್ಟ್ ಬೆನ್ನಲ್ಲೇ ನಟ ಯುವ ರಾಜ್‌ಕುಮಾರ್ (Yuva Rajkumar) ಕೂಡ ಅದೇ ಪೋಸ್ಟ್‌ನ್ನು ರೀ-ಪೋಸ್ಟ್ ಮಾಡುವ ಮೂಲಕ ರಮ್ಯಾ ಪರ ನಿಂತಿದ್ದಾರೆ. ಇನ್ನೂ ಸೋಮವಾರ (ಜು.28) ನಟ ವಿನಯ್ ರಾಜ್‌ಕುಮಾರ್ (Vinay Rajkumar) ಅವರು ಸೋಶಿಯಲ್ ಮೀಡಿಯಾದಲ್ಲಿ ರಮ್ಯಾ ಪರ ಬರೆದುಕೊಂಡಿದ್ದರು.

    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾ ಪದೇ ಪದೇ ದರ್ಶನ್ ಫ್ಯಾನ್ಸ್ ಆಕ್ರೋಶಕ್ಕೆ ಕಾರಣರಾಗುತ್ತಿದ್ದಾರೆ. ಜೊತೆಗೆ ಡಿ-ಬಾಸ್ ಅಭಿಮಾನಿಗಳು ನಿರಂತರವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಟಿ ಕೂಡ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆಗಿದ್ದಾರೆ. ಜೊತೆಗೆ ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದವರ ಅಕೌಂಟ್‌ಗಳನ್ನು ಬಹಿರಂಗಗೊಳಿಸಿದ್ದು, ಸದ್ಯ 43 ಅಕೌಂಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಇದನ್ನೂ ಓದಿ: 56 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ಖದೀಮರು ಅರೆಸ್ಟ್

  • ಅರೇರೇ ಯಾರೋ ಇವಳು ಅಂತಿದ್ದಾರೆ ವಿನಯ್ ರಾಜ್ ಕುಮಾರ್!

    ಅರೇರೇ ಯಾರೋ ಇವಳು ಅಂತಿದ್ದಾರೆ ವಿನಯ್ ರಾಜ್ ಕುಮಾರ್!

    ಈಗಾಗಲೇ ಸಿನಿಪ್ರಿಯರ ಮನಸ್ಸನ್ನ ಗೆದ್ದಿರುವಂತಹ `ಅಂದೊಂದಿತ್ತು ಕಾಲ’ (Andondittu Kaala) ಚಿತ್ರದ `ಮುಂಗಾರು ಮಳೆಯಲ್ಲಿ…’ ಎಂಬ ಹಾಡು ಸೂಪರ್ ಹಿಟ್ ಆಗಿದ್ದು, ಯೂಟ್ಯೂಬ್‌ನಲ್ಲಿ 36.4 ಮಿಲಿಯನ್ ವೀವ್ಸ್ ಆಗಿದೆ. ಹಾಗೆಯೇ ಈ ಸಾಂಗ್‌ನ ರೀಲ್ಸ್ ಬಹಳಷ್ಟು ಅಭಿಮಾನಿಗಳು ಮಾಡಿ ಅಪ್ಲೋಡ್ ಕೂಡ ಮಾಡಿದ್ದಾರೆ. ಇದು ಇಡೀ ಚಿತ್ರತಂಡದ ಸಂಭ್ರಮವನ್ನು ಹೆಚ್ಚು ಮಾಡಿದ್ದು, ಚಿತ್ರ ಯಶಸ್ವಿ ಆಗುವ ನಿರೀಕ್ಷೆಯಲ್ಲಿದ್ದಾರೆ. ಈಗ ತಮ್ಮ ಚಿತ್ರದ ಎರಡನೇ ಹಾಡನ್ನು ರಿಲೀಸ್ ಮಾಡುವುದರ ಜೊತೆಗೆ ಪತ್ರಿಕಾಗೋಷ್ಠಿ ಆಯೋಜನೆ ಮಾಡಿತ್ತು ಚಿತ್ರತಂಡ.

    ವೇದಿಕೆಯ ಮೇಲೆ ಈ ಚಿತ್ರದ ಮೊದಲ ಹಾಡಿನ ಫೀಮೇಲ್ ವರ್ಷನ್ ರುಚಿತ ರಾಜೇಶ್ ಎಂಬ ಯುವ ಗಾಯಕಿ ಹಾಡಿ ಗಮನ ಸೆಳೆದರು. ತದನಂತರ ಎರಡನೇ ಗೀತೆಯನ್ನು ಇಡೀ ರಾಜ್ಯಕ್ಕೆ 10ನೇ ತರಗತಿಯಲ್ಲಿ ಫಸ್ಟ್ ಬಂದ ಮಲ್ಲಸಂದ್ರದಲ್ಲಿರುವ ಬಿ.ಎನ್ ಆರ್ ಪಬ್ಲಿಕ್ ಸ್ಕೂಲ್ ಶಾಲೆಯ ವಿದ್ಯಾರ್ಥಿಗಳಿಂದ (School Students) ರಿಲೀಸ್ ಮಾಡಿಸಿದ್ದು ಮತ್ತೊಂದು ವಿಶೇಷವಾಗಿದ್ದು, ಇದಕ್ಕೆ ಕಾರಣ ಏನು ಎಂಬುವುದು ಹಾಡಿನಲ್ಲಿ ತಿಳಿಯುತ್ತದೆ.

    ನಟ ವಿನಯ್ ರಾಜಕುಮಾರ್ (Vinay Rajkumar) ಮಾತನಾಡುತ್ತಾ ಈ ಚಿತ್ರದ ಮೊದಲ ಸಾಂಗ್ ದೊಡ್ಡ ಹಿಟ್ ಆಗಿದೆ. ನಾನು ಕೂಡ ಸಾಂಗ್ ಅನ್ನು ಫ್ಯಾನ್ಸುಗಳು ರೀಲ್ಸ್ ಮಾಡಿದ್ದು ನೋಡಿದೆ. ಮಿಲಿಯನ್ಸ್ ವಿವ್ಯೂ ರಿಚ್ ಆಗಿರೋದು ನಮ್ಮ ತಂಡಕ್ಕೂ ನನಗೂ ಖುಷಿ ಇದೆ. ಈಗ ನಮ್ಮ ಚಿತ್ರದ 2ನೇ ಹಾಡು ಬಿಡುಗಡೆಯಾಗುತ್ತಿದೆ, ಇದು ನನ್ನ ಪೆವರೇಟ್ ಗೀತೆ. ನಾನು ನಿರ್ದೇಶಕ ಕೀರ್ತಿಗೆ ಇದನ್ನೇ ಮೊದಲು ಬಿಡಿ ಎಂದಿದ್ದೆ. ಈ ಚಿತ್ರದಲ್ಲಿ ನಾನು 16 ವರ್ಷದ ಹುಡುಗನ ಗೆಟಪ್‌ನಲ್ಲಿ ಮಾಡುವುದು ಚಾಲೆಂಜ್ ಆಗಿತ್ತು. ವೈಟ್ ಲಾಸ್ ಮಾಡುವುದು ಕಷ್ಟ ಆಗಿತ್ತು. ಹಾಡು ತುಂಬಾ ಚೆನ್ನಾಗಿ ಬಂದಿದೆ. ಲೊಕೇಶನ್, ಸಾಂಗ್ ಎಲ್ಲವೂ ಸೊಗಸಾಗಿದೆ. ಶಾಲಾ ದಿನಗಳಲ್ಲಿ ಇಷ್ಟಪಟ್ಟ ಹುಡುಗಿಯ ಹಿಂದೆ ಓಡಾಡಿದ್ದೇನೆ. ಆದರೆ ನಿಜ ಜೀವನದಲ್ಲಿ ಹತ್ತನೇ ತರಗತಿ ಓದುವಾಗ ನಾನು ಬಹಳ ಮುಗ್ಧ ಹುಡುಗ. ಮೂರು ಶೇಡ್ ಗಳಲ್ಲಿ ನನ್ನ ಪಾತ್ರ ಸಾಗುತ್ತದೆ. ಸಿನಿಮಾ ಎಲ್ಲರಿಗೂ ಇಷ್ಟವಾಗುತ್ತದೆ. ನಿಮ್ಮ ಬೆಂಬಲ ಇರಲಿ ಎಂದರು. ಇನ್ನು ಈ ಚಿತ್ರದ ಶಾಲಾ ವಿದ್ಯಾರ್ಥಿಯ ಹಾಡಿನಲ್ಲಿ ಕಾಣಿಸಿಕೊಂಡಿರುವ ಯುವ ನಟಿ ನಿಶಾ ರವಿಕೃಷ್ಣನ್ ಮಾತನಾಡುತ್ತಾ ಇದರಲ್ಲಿ ನನ್ನದೊಂದು ಸಣ್ಣ ಪಾತ್ರವಾದರೂ ಬಹಳ ಇಂಪಾರ್ಟೆಂಟ್ ಆಗಿದೆ. ನಿರ್ದೇಶಕರು, ನಿರ್ಮಾಪಕರು ತುಂಬಾ ಸಹಕಾರ ನೀಡಿದ್ದಾರೆ. ಅದೇ ರೀತಿ ನಟ ವಿನಯ್ ರಾಜಕುಮಾರ್ ಜೊತೆ ಅಭಿನಯಿಸಿದ್ದು ಖುಷಿ ತಂದಿದೆ. ಸುಂದರ ಪ್ರಮುಖ ಪಾತ್ರವಾಗಿದ್ದು, ಖಂಡಿತ ಈ ಚಿತ್ರ ಎಲ್ಲರಿಗೂ ಇಷ್ಟವಾಗುತ್ತದೆ ಎಂದರು.

    ನಿರ್ದೇಶಕ ಕೀರ್ತಿ ಕೃಷ್ಣಪ್ಪ ಮಾತನಾಡುತ್ತಾ ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಈಗಾಗಲೇ ನಮ್ಮ ಚಿತ್ರದ ಮೊದಲ ಸಾಂಗ್ಸ್ ಮಿಲಿಯನ್ಸ್ ಗಟ್ಟಲೆ ಪ್ರೇಕ್ಷಕರ ಮನಸ್ಸನ್ನು ಗೆದ್ದಿದ್ದು, ಒಳ್ಳೆ ರೆಸ್ಪಾನ್ಸ್ ನಮಗೆ ಸಿಕ್ಕಿದೆ. ನಾವು ಆ ಸಾಂಗ್ ಶೂಟಿಂಗ್ ಮಾಡುವ ಬಹಳಷ್ಟು ಮಳೆ ಇತ್ತು, ಕೊರೋನಾ ಸಂದರ್ಭದಲ್ಲಿ ಚಿತ್ರೀಕರಣ ಮಾಡಿದ್ದು, ಆಗ ಯುಗಾದಿಯ ಹಬ್ಬ, ನಿರ್ಮಾಪಕರು ನಮ್ಮ ಜೊತೆ ಇದ್ದು ಸಂಭ್ರಮಿಸಿದ್ದ ಕ್ಷಣ ಮರೆಯಲು ಸಾಧ್ಯವಿಲ್ಲ. ನಮಗೆ ಏನು ಬೇಕು ಅದೆಲ್ಲವನ್ನು ನಿರ್ಮಾಪಕ ಭುವನ್ ಸುರೇಶ್ ನೀಡಿದ್ದಾರೆ. ನಿರ್ಮಾಪಕರು ಚಿತ್ರ ಚೆನ್ನಾಗಿ ಬರಲು ಬಹಳಷ್ಟು ಸಪ್ಪೋರ್ಟ್ ಮಾಡುತ್ತಿದ್ದಾರೆ. ನಮ್ಮ ಚಿತ್ರದಲ್ಲಿ ವಿನಯ್ ರಾಜಕುಮಾರ್ ಬಹಳ ಸಪೋರ್ಟ್ ಮಾಡಿದ್ದು, ತುಂಬಾ ಸೈಲೆಂಟ್ ವ್ಯಕ್ತಿತ್ವ, ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.

    ಈಗ ಬಿಡುಗಡೆಯಾಗಿರುವ ಹಾಡಿಗೆ ಅರಸು ಅಂತಾರೆ ಸಾಹಿತ್ಯ ಬರೆದಿದ್ದು, ವಿನಯ್ ರಾಜಕುಮಾರ್ ಹಾಗೂ ನಿಶಾ ಬಹಳ ಸೊಗಸಾಗಿ ಅಭಿನಯಿಸಿದ್ದಾರೆ. ನಿರ್ಮಾಪಕರ ಪತ್ನಿಯವರು ನಟಿ ನಿಶಾ ರನ್ನು ಆಯ್ಕೆ ಮಾಡಿದ್ದು ಮರೆಯುವಂತಿಲ್ಲ. ನಮ್ಮ ಚಿತ್ರದ ಇನ್ನೂ ಮೂರು ಹಾಡು, ಟ್ರೇಲರ್ ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ. ಆಗಸ್ಟ್ 29ರಂದು ಸಿನಿಮಾ ರಿಲೀಸ್ ಆಗಲಿದೆ. ಇದೊಂದು ಪ್ಯೂರ್ ಲವ್ ಹಾಗೂ ಗೆಳೆತನ ಚಿತ್ರವಾಗಿದ್ದು, ಪ್ರೇಕ್ಷಕರ ಮನಸ್ಸನ್ನು ಗೆಲ್ಲುತ್ತೆ ಎಂದರು.

    ಭುವನ್ ಮ್ಯೂವಿಸ್ ಬ್ಯಾನರ್ ನ ಭುವನ್ ಸುರೇಶ್ ಮಾತನಾಡುತ್ತಾ ನನಗೆ ನಮ್ಮ ಹುಡುಗರ ಶ್ರಮದ ಬಗ್ಗೆ ಬಹಳ ನಂಬಿಕೆ ಇದೆ. ಚಿತ್ರ ಚೆನ್ನಾಗಿ ಬಂದಿದೆ. ಇದಕ್ಕೂ ಮೊದಲು ನಾನು ಕಾಲಾಪತ್ತರ ಚಿತ್ರ ಮಾಡಿದ್ದೆ. ಇದು ನನ್ನ ಎರಡನೇ ಚಿತ್ರ. ಈಗಾಗಲೇ ಮುಂಗಾರು ಮಳೆಯಲ್ಲಿ… ಹಾಡು ದೊಡ್ಡ ಹಿಟ್ ಆಗಿದ್ದು , ನನ್ನ ರಾಜಕೀಯ ಸ್ನೇಹಿತರು ಹಾಗೂ ನಮ್ಮೂರಿನ ಜನರು ಹಾಡಿನ ಬಗ್ಗೆ ಮೆಚ್ಚುಗೆಯನ್ನು ತಿಳಿಸಿದ್ದಾರೆ. ಈಗ ನಮ್ಮ ಚಿತ್ರದ ಎರಡನೇ ಹಾಡು ಕೂಡ ಹಿಟ್ ಆಗಲಿ. ನಾನು ನನ್ನ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುತ್ತೇನೆ. ನೀವು ಎಲ್ಲರೂ ಬಂದು ನೋಡಿ ಹರಸಿ ಎಂದರು. ಸಂಗೀತ ನಿರ್ದೇಶಕ ರಾಘವೇಂದ್ರ .ವಿ ಮಾತನಾಡುತ್ತಾ ನಮ್ಮ ಮೊದಲ ಸಾಂಗ್ ಮೇಘಾ ಹಿಟ್ ಆಗಿದ್ದು , ನಿಮ್ಮಗಳ ಪ್ರೋತ್ಸಾಹ ಇದಕ್ಕೆ ಕಾರಣ. ಈಗ ಎರಡನೇ ಹಾಡು ಎ2 ಮ್ಯೂಸಿಕ್ ನಲ್ಲಿ ರಿಲೀಸ್ ಆಗಿದೆ. ನಿರ್ದೇಶಕ, ನಿರ್ಮಾಪಕರಿಗೆ ಧನ್ಯವಾದ ಹೇಳುವೆ. ಇಡೀ ಸಾಂಗ್ ನಲ್ಲಿ ನಿಶಾ ಅವರ ಲುಕ್ ಹಾಗೂ ವಿನಯ್ ಇನೂಸೆಂಟ್ ಹೈಲಟ್ ಆಗಿದೆ. ಪ್ರತಿ ಶಾಟ್ ಕೂಡ ಅದ್ಭುತವಾಗಿ ಬಂದಿದೆ. ಚಿತ್ರದಲ್ಲಿ ಇನ್ನೂ ಮೂರು ಹಾಡುಗಳಿವೆ ಎಂದರು. ಇನ್ನೂ ಛಾಯಾಗ್ರಹಕ ಅಭಿಷೇಕ್ ಕಾಸರಗೋಡು , ಸಂಕಲನಗಾರ ಕೀರ್ತಿ, ನೃತ್ಯ ನಿರ್ದೇಶಕ ರಘು ಆರ್.ಜೆ ಚಿತ್ರದ ಕುರಿತು ತಮ್ಮ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

    ಈಗ ‘ಅರೇರೇ ಯಾರೋ ಇವಳು …’ ಸಾಂಗ್ ರಿಲೀಸ್ ಆಗಿದ್ದು , 90ರ ಕಾಲಘಟ್ಟದಲ್ಲಿ ನಾಯಕ ವಿನಯ್ ರಾಜ್ ಕುಮಾರ್ ಹಾಗೂ ನಾಯಕಿ ನಿಶಾ ಹರಿಕೃಷ್ಣನ್ 10ನೇ ತರಗತಿ ವಿದ್ಯಾರ್ಥಿಗಳಾಗಿ ಅಭಿನಯಿಸಿದ್ದಾರೆ. ಹಾಡು ಮಧುರವಾಗಿ ಮನಮುಟ್ಟುವಂತಿದೆ. ಈ “ಅಂದೊಂದಿತ್ತು ಕಾಲ” ಚಿತ್ರದಲ್ಲಿ ವಿನಯ್ ರಾಜ್ಕುಮಾರ್ ಮತ್ತು ಅದಿತಿ ಜೊತೆಗೆ ನಿಶಾ ರವಿಕೃಷ್ಣನ್, ಜಗ್ಗಪ್ಪ, ಅರುಣಾ ಬಾಲರಾಜ್ ಮುಂತಾದವರು ನಟಿಸಿದ್ದು, ರವಿಚಂದ್ರನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರು, ತೀರ್ಥಹಳ್ಳಿ ಮುಂತಾದ ಕಡೆ ಚಿತ್ರದ ಚಿತ್ರೀಕರಣವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ಚಿತ್ರ ತಂಡ ನೀಡಿದೆಯಂತೆ.

  • ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಚಿತ್ರದ ಪೋಸ್ಟರ್ ಔಟ್

    ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಚಿತ್ರದ ಪೋಸ್ಟರ್ ಔಟ್

    ಟ, ನಿರ್ದೇಶಕನಾಗಿ ಗೆದ್ದಿರುವ ದುನಿಯಾ ವಿಜಯ್ (Duniya Vijay) ನಿರ್ದೇಶನದ ಹೊಸ ಸಿನಿಮಾ ‘ಸಿಟಿ ಲೈಟ್ಸ್’ (City Lights) ಚಿತ್ರದ ಪೋಸ್ಟರ್ ರಿವೀಲ್ ಆಗಿದೆ. ಪುತ್ರಿ ಮೋನಿಷಾ (Monisha) ಹಾಗೂ ವಿನಯ್ ರಾಜ್‌ಕುಮಾರ್ (Vinay Rajkumar) ಲುಕ್ ಅನಾವರಣ ಆಗಿದೆ. ಈ ಕುರಿತು ಸೋಶಿಯಲ್‌ ಮೀಡಿಯಾದಲ್ಲಿ ವಿಜಯ್‌ ಮಾಹಿತಿ ಹಂಚಿಕೊಂಡಿದ್ದಾರೆ.

    ಸದ್ಯ ರಿಲೀಸ್ ಆಗಿರುವ ಪೋಸ್ಟರ್‌ನಲ್ಲಿ ವಿನಯ್ ಮತ್ತು ಮೋನಿಷಾ ತಲೆಯ ಮೇಲೆ ದೇವಿಯನ್ನು ಇಟ್ಟುಕೊಂಡು ಚಾಟಿ ಏಟು ಹೊಡೆದುಕೊಂಡು ಓಡಾಡುತ್ತಿರುವ ಲುಕ್ ಅನಾವರಣ ಆಗಿದೆ. ಇದರ ಸುತ್ತ ಹೆಣೆಯಲಾದ ಕಥೆ ಇದಾಗಿದೆ. ಇದನ್ನೂ ಓದಿ:ಅರಣ್ಯ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಚಿತ್ರೀಕರಣ – ಕಲ್ಟ್ ಚಿತ್ರದ ವಿರುದ್ಧ ಕೇಸ್

     

    View this post on Instagram

     

    A post shared by Duniya Vijay (@duniyavijayofficial)

    ಚಿತ್ರದ ಅಫಿಷಯಲ್ ಇನ್ಸ್ಟಾಗ್ರಾಂ ಖಾತೆಯಲ್ಲಿ, ‘ಚಡಿ ಏಟಿನಷ್ಟೇ ಚುರುಕಾದ ಸಿಟಿ ಲೈಟ್ಸ್ ಫಸ್ಟ್ ಲುಕ್’ ಎಂದು ಬರೆಯಲಾಗಿದೆ. ಸದ್ಯ ದುನಿಯಾ ವಿಜಯ್ ಅವರು ಮಗಳು ಮೋನಿಷಾ ಮತ್ತು ವಿನಯ್ ಮೂಲಕ ಹೇಳಲು ಹೊರಟಿರುವ ಕಥೆ ವಿಭಿನ್ನವಾಗಿರಲಿದೆ ಎಂಬ ನಿರೀಕ್ಷೆ ಅಭಿಮಾನಿಗಳಿಗಿದೆ. ಚಿತ್ರದ ಪೋಸ್ಟರ್ ಲುಕ್‌ನಿಂದ ನಿರೀಕ್ಷೆ ದುಪ್ಪಟ್ಟಾಗಿದೆ.

    ಅಂದಹಾಗೆ, ‘ಸಿಟಿ ಲೈಟ್ಸ್‌’ ಸಿನಿಮಾದ ಜೊತೆಗೆ ದೊಡ್ಡ ಮಗಳು ರಿತನ್ಯಾ ಜೊತೆಗೂ ಸಿನಿಮಾ ಮಾಡುತ್ತಿದ್ದಾರೆ. ಅದನ್ನು ಜಡೇಶ್‌ ಕುಮಾರ್‌ ಹಂಪಿ ಅವರು ನಿರ್ದೇಶನ ಮಾಡುತ್ತಿದ್ದಾರೆ.

  • ಅಮ್ಮನಿಲ್ಲದ ಜೀವನ ಎಷ್ಟು ಕಷ್ಟ ಅಂತ ಗೊತ್ತಿದೆ: ಸುದೀಪ್ ತಾಯಿ ಅಂತಿಮ ದರ್ಶನ ಪಡೆದ ರಾಘಣ್ಣ

    ಅಮ್ಮನಿಲ್ಲದ ಜೀವನ ಎಷ್ಟು ಕಷ್ಟ ಅಂತ ಗೊತ್ತಿದೆ: ಸುದೀಪ್ ತಾಯಿ ಅಂತಿಮ ದರ್ಶನ ಪಡೆದ ರಾಘಣ್ಣ

    ಸ್ಯಾಂಡಲ್‌ವುಡ್ ನಟ ಸುದೀಪ್ ಅವರ ತಾಯಿ ಇಂದು (ಅ.20) ಬೆಳಗ್ಗೆ ನಿಧನರಾಗಿದ್ದಾರೆ. ಈ ಹಿನ್ನೆಲೆ ಸುದೀಪ್ ತಾಯಿ ಅಂತಿಮ ದರ್ಶನ ಪಡೆಯಲು ರಾಘವೇಂದ್ರ ರಾಜ್‌ಕುಮಾರ್ (Raghavendra Rajkumar) ಕುಟುಂಬ ನಟನ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ, ಅಮ್ಮನಿಲ್ಲದ ಜೀವನ ಎಷ್ಟು ಕಷ್ಟ ಅಂತ ಗೊತ್ತಿದೆ ಎಂದು ರಾಘವೇಂದ್ರ ರಾಜ್‌ಕುಮಾರ್ ಮಾತನಾಡಿದ್ದಾರೆ. ಇದನ್ನೂ ಓದಿ:BBK 11: ದೊಡ್ಮನೆಗೆ ಹನುಮಂತ ವೈಲ್ಡ್ ಕಾರ್ಡ್ ಎಂಟ್ರಿ

    ಅಂತಿಮ ದರ್ಶನದ ಬಳಿಕ ಮಾಧ್ಯಮಕ್ಕೆ ರಾಘಣ್ಣ ಮಾತನಾಡಿ, ಸುದೀಪ್ ಅವರ ತಾಯಿ, ನಮ್ಮ ತಾಯಿ ಸ್ನೇಹಿತರು. ಅವರ ಮನೆಗೆ ನಾವು ಹೋಗೋದು, ನಮ್ಮ ಮನೆಗೆ ಅವರು ಬರುತ್ತಿದ್ದರು. ನಾವು ಹೊರಗಡೆ ಹೋಗುವಾಗ ಅವರ ಆಶೀರ್ವಾದ ಪಡೆದುಕೊಳ್ಳುತ್ತಿದ್ವಿ. ಸುದೀಪ್ ಅವರನ್ನು ನೋಡಿದ್ರೆ ತುಂಬಾ ಕಷ್ಟ ಆಗುತ್ತಿದೆ. ಅಮ್ಮನಿಲ್ಲದ ಜೀವನ ಎಷ್ಟು ಕಷ್ಟ ಅಂತ ನಮಗೆ ಗೊತ್ತಿದೆ. ನಾನು ಅನುಭವಿಸಿದ್ದೇನೆ. ಸುದೀಪ್ ಆ ಕಷ್ಟ, ನೋವು ಹೇಗೆ ತೆಡೆದುಕೊಳ್ತಾರೋ ಏನೋ ಅನಿಸುತ್ತಿದೆ. ಈ ನೋವು ಭರಿಸುವ ಶಕ್ತಿಯನ್ನ ಅವರಿಗೆ ದೇವರು ಕೊಡಲಿ ಎಂದು ನಟ ರಾಘವೇಂದ್ರ ರಾಜ್‌ಕುಮಾರ್ ಮಾತನಾಡಿದ್ದಾರೆ.

    ಅಂದಹಾಗೆ, ಸುದೀಪ್ ತಾಯಿ ಸರೋಜಾ ಅಂತಿಮ ದರ್ಶನ ಪಡೆಯಲು ರಾಘವೇಂದ್ರ ರಾಜ್‌ಕುಮಾರ್ ಜೊತೆ ಪುತ್ರರಾದ ಯುವ, ವಿನಯ್ ಕೂಡ ಭೇಟಿ ಕೊಟ್ಟಿದ್ದಾರೆ. ಬಳಿಕ ‘ವಿಕ್ರಾಂತ್ ರೋಣ’ ಡೈರೆಕ್ಟರ್ ಅನೂಪ್ ಭಂಡಾರಿ ಕೂಡ ಆಗಮಿಸಿದ್ದಾರೆ.

  • ವಿನಯ್ ರಾಜ್‌ಕುಮಾರ್ ನಟನೆಯ ‘ಪೆಪೆ’ ಸಿನಿಮಾದ ಜೇನು ಕುರುಬ ಸಾಂಗ್ ರಿಲೀಸ್

    ವಿನಯ್ ರಾಜ್‌ಕುಮಾರ್ ನಟನೆಯ ‘ಪೆಪೆ’ ಸಿನಿಮಾದ ಜೇನು ಕುರುಬ ಸಾಂಗ್ ರಿಲೀಸ್

    ಪ್ರತಿ ಸಿನಿಮಾದಲ್ಲಿಯೂ ತಾನೊಬ್ಬ ಕ್ಲಾಸ್ ಆ್ಯಕ್ಟರ್ ಅನ್ನೋದನ್ನು ಸಾಬೀತುಪಡಿಸಿಕೊಂಡು ಬಂದಿರುವ ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ (Vinay Rajkumar) ‘ಪೆಪೆ’ (Pe Pe) ಸಿನಿಮಾ ಮೂಲಕ ಮಾಸ್ ಅವತಾರ ತಾಳಿದ್ದಾರೆ. ‘ಪೆಪೆ’ ಚಿತ್ರದ ಟೀಸರ್ ಈಗಾಗಲೇ ಹಿಟ್ ಲೀಸ್ಟ್ ಸೇರಿದ್ದು, ಇದೀಗ ಬಿಡುಗಡೆಯಾಗಿರುವ ಹಾಡು ಭಾರೀ ಸದ್ದು ಮಾಡುತ್ತಿದೆ.‌ ಇದನ್ನೂ ಓದಿ:ಫ್ಯಾನ್ಸ್‌ಗೆ ಗುಡ್‌ ನ್ಯೂಸ್-‌ ಶೋಭಿತಾ ಜೊತೆ ಸಮಂತಾ ಮಾಜಿ ಪತಿ ನಿಶ್ಚಿತಾರ್ಥ

    ‘ಪೆಪೆ’ ಚಿತ್ರತಂಡ ಪ್ರಿಸೆಟ್ ಎಂಬ ಟ್ಯಾಗ್ ಲೈನ್ ಅಡಿ ಚಿತ್ರ ಹಾಡೊಂದನ್ನು ಅನಾವರಣ ಮಾಡಿದೆ. ಪಿಆರ್‌ಕೆ ಆಡಿಯೋದಲ್ಲಿ ರಿಲೀಸ್ ಆಗಿರುವ ಗಾನಬಜಾನ ವಿಭಿನ್ನತೆಯಿಂದ ಕೂಡಿದೆ. ಜೇನು ಕುರುಬ ಬುಡಗಟ್ಟು ಜನಾಂಗದ ಆಚಾರ ವಿಚಾರ ತೆರೆದಿಡುವ ಗೀತೆಗೆ ಗಿರಿಜನ ಸಮಗ್ರ ಅಭಿವೃದ್ದಿ ಕಲಾ ಸಂಸ್ಥೆ ಹಾಗೂ ಜೆ.ಜಿ.ಕುಮಾರ ಧ್ವನಿಯಾಗಿದ್ದು, ಪೂರ್ಣಚಂದ್ರ ತೇಜಸ್ವಿ ಟ್ಯೂನ್ ಹಾಕಿದ್ದಾರೆ. ಇನ್ನೂ ಚಿತ್ರತಂಡ ಖುದ್ದು ಹೇಳಿಕೊಂಡಂತೆ ಇಡೀ ಚಿತ್ರದ ಸೌಂಡ್ ಡಿಸೈನ್ ಬೇರೆ ರೀತಿ ಇದೆ ಅನ್ನೋದಕ್ಕೆ ಬಿಡುಗಡೆಯಾಗಿರುವ ಈ ಹಾಡು ಸೂಕ್ತ ಉದಾಹರಣೆ.

    ಶ್ರೀಲೇಶ್ ಎಸ್ ನಾಯರ್ ನಿರ್ದೇಶನ ಮೂಡಿ ಬರುತ್ತಿರುವ ‘ಪೆಪೆ’ ಒಂದು ರೀತಿ ಪರಿಪೂರ್ಣ ವಿಭಿನ್ನ ಸಿನಿಮಾ. ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಮಯೂರ್ ಪಟೇಲ್, ಯಶ್ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್, ನವೀನ್ ಡಿ. ಪಡೀಲ್‌ರನ್ನು ಒಳಗೊಂಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್ ಜಿ. ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿಯವರ ಸಂಗೀತ ನಿರ್ದೇಶನವಿದೆ.

    ಡಾ. ರವಿವರ್ಮ, ಚೇತನ್ ಡಿಸೋಜಾ, ಡಿಫ್ರೆಂಟ್ ಡ್ಯಾನಿ, ನರಸಿಂಹ ಅವರ ತಂಡ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರಗಳಲ್ಲಿ ‘ಪೆಪೆ’ ಸಿನಿಮಾವನ್ನು ಸೆರೆಹಿಡಿಯಲಾಗಿದೆ. ಉದಯ್ ಸಿನಿ ವೆಂಚರ್, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ.

  • ಪ್ರಿಯತಮೆ ಹುಡುಕಾಟದಲ್ಲಿ ವಿನಯ್ ರಾಜ್‌ಕುಮಾರ್- ‘ಒಂದು ಸರಳ ಪ್ರೇಮಕಥೆ’ ಚಿತ್ರದ ಸಾಂಗ್ ರಿಲೀಸ್

    ಪ್ರಿಯತಮೆ ಹುಡುಕಾಟದಲ್ಲಿ ವಿನಯ್ ರಾಜ್‌ಕುಮಾರ್- ‘ಒಂದು ಸರಳ ಪ್ರೇಮಕಥೆ’ ಚಿತ್ರದ ಸಾಂಗ್ ರಿಲೀಸ್

    ಒಂದು ಸರಳ ಪ್ರೇಮಕಥೆಯ ರೂವಾರಿ ಸಿಂಪಲ್ ಸುನಿ (Simple Suni) ಹೊಸ ವರ್ಷಕ್ಕೆ ಸಂಗೀತ ಪ್ರಿಯರಿಗೆ ಚೆಂದದ ಹಾಡನ್ನು ಉಡುಗೊರೆಯಾಗಿ ನೀಡಿದ್ದಾರೆ. ‘ನೀನ್ಯಾರೆಲೆ ನಿನಗಾಗಿಯೇ ಈ ಜೀವ ಭಾವ ಸೋಜಿಗ’ ಎಂಬ ಕ್ಯಾಚಿ ಮ್ಯಾಚಿ ಸಾಹಿತ್ಯದ ಮೆಲೋಡಿ ಮಸ್ತಿಯನ್ನು ರಿಲೀಸ್ ಮಾಡಿದ್ದಾರೆ. ಸಿದ್ದು ಕೋಡಿಪುರ ಹಾಗೂ ಸುನಿ ಸಾಹಿತ್ಯದ ಈ ಹಾಡಿಗೆ ಅರ್ಮಾನ್ ಮಲಿಕ್ ಧ್ವನಿಯಾಗಿದ್ದಾರೆ.

    ಇದೇ ಮೊದಲ ಬಾರಿಗೆ ದೊಡ್ಮನೆಯ ಹೀರೋ ವಿನಯ್ ರಾಜ್ ಕುಮಾರ್ ಗೆ (Vinay Rajkumar) ಸಿಂಪಲ್ ಸುನಿ ನಿರ್ದೇಶನ ಮಾಡಿದ್ದಾರೆ. ವಿನಯ್ ನಾಯಕನಾಗಿ ನಟಿಸಿರುವ ಚಿತ್ರಕ್ಕೆ ಸ್ವಾತಿಷ್ಠ ಕೃಷ್ಣನ್, ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ (Malika Singh) ಎಂಬ ಇಬ್ಬರು ಚೆಲುವೆಯರ ನಾಯಕಿಯಾರಾಗಿ ನಟಿಸಿದ್ದಾರೆ.

    ರಾಘವೇಂದ್ರ ರಾಜ್ ಕುಮಾರ್ (Raghavendra Rajkumar) ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆದಿ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ನೀಡುತ್ತಿದ್ದು, ಕಾರ್ತಿಕ್ ಕ್ಯಾಮೆರಾ ಹಿಡಿದಿದ್ದಾರೆ. ಇದನ್ನೂ ಓದಿ:ಶಿವಣ್ಣ ನಟನೆಯ 131ನೇ ಸಿನಿಮಾದ ಪೋಸ್ಟರ್ ಹಂಚಿಕೊಂಡ ಟೀಮ್

    ತಮ್ಮ ವಿಭಿನ್ನ ಸಿನಿಮಾಗಳಿಂದ ನಿರ್ದೇಶಕ ಸಿಂಪಲ್ ಸುನಿ ಗಮನ ಸೆಳೆಯುತ್ತಾ ಬರ್ತಿದ್ದಾರೆ. ‘ಅವತಾರ್ ಪುರುಷ’ ಬಳಿಕ ಸುನಿ ‘ಗತವೈಭವ’ ಸಿನಿಮಾ ಕೈಗೆತ್ತಿಕೊಂಡಿದ್ದರು. ಬಳಿಕ ಸದ್ದಿಲ್ಲದೇ ‘ಒಂದು ಸರಳ ಪ್ರೇಮಕಥೆ’ ಶುರು ಮಾಡಿದ್ದಾರೆ. ಇದೀಗ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಬಿಡುಗಡೆಗೆ ಸಜ್ಜಾಗಿದೆ. ಅಂದಹಾಗೇ ಈ ಸಿನಿಮಾಗೆ ಮೈಸೂರು ರಮೇಶ್ ನಿರ್ಮಾಣ ಮಾಡಿದ್ದಾರೆ.

  • ದೊಡ್ಮನೆ ಹೀರೋಗೆ ಮೇಘಾ ಶೆಟ್ಟಿ ಹೀರೋಯಿನ್

    ದೊಡ್ಮನೆ ಹೀರೋಗೆ ಮೇಘಾ ಶೆಟ್ಟಿ ಹೀರೋಯಿನ್

    ಕಿರುತೆರೆಯ ಜನಪ್ರಿಯ ನಟಿ ಮೇಘಾ ಶೆಟ್ಟಿ (Megha Shetty)  ಈಗ ಬೆಳ್ಳಿತೆರೆಯಲ್ಲಿ ಬಂಪರ್ ಆಫರ್ ಬಾಚಿಕೊಳ್ತಿದ್ದಾರೆ. ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ ಚಿತ್ರಕ್ಕೆ (Vinay Rajkumar) ನಾಯಕಿಯಾಗಿ ನಟಿ ಸೆಲೆಕ್ಟ್ ಆಗಿದ್ದಾರೆ. ‘ಗ್ರಾಮಾಯಣ’ (Gramayana Film) ಚಿತ್ರಕ್ಕೆ ಜೊತೆ ಜೊತೆಯಲಿ ನಟಿ ಎಂಟ್ರಿ ಕೊಡುತ್ತಿದ್ದಾರೆ.

    ದೊಡ್ಮನೆ ಹೀರೋ ವಿನಯ್ ರಾಜ್‌ಕುಮಾರ್ ನಟನೆಯ ಗ್ರಾಮಾಯಣ ಚಿತ್ರ ಇತ್ತೀಚೆಗೆ ಮಗದೊಮ್ಮೆ ಚಾಲನೆ ನೀಡಲಾಗಿದ್ದು, ಈ ಸಿನಿಮಾದಲ್ಲಿ ವಿನಯ್ ಎದುರು ನಾಯಕಿಯಾಗಿ ಕರಾವಳಿ ನಟಿ ಮೇಘಾ ಶೆಟ್ಟಿ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ:ದುನಿಯಾ ವಿಜಯ್ ನಿರ್ದೇಶನದ ಭೀಮನ ‘ಸೈಕ್ ಸಾಂಗ್’ ರಿಲೀಸ್

    ‘ಗ್ರಾಮಾಯಣ’ ಹಳ್ಳಿ ಸೊಗಡಿನ ಕಥೆಯಾಗಿದ್ದು, ಮೇಘಾ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಅಕ್ಟೋಬರ್ 4ರಿಂದ ಹೊಸದಾಗಿ ಚಿತ್ರೀಕರಣ ಶುರು ಮಾಡಲಾಗುತ್ತದೆ. ಕೆಲ ವರ್ಷಗಳ ಹಿಂದೆ ಆರಂಭವಾಗಿದ್ದ ಗ್ರಾಮಾಯಣ ಚಿತ್ರ ಈಗ ಹೊಸ ಟೀಮ್‌ನೊಂದಿಗೆ ಮತ್ತೆ ಶುರುವಾಗುತ್ತಿದೆ.

    ಗೋಲ್ಡನ್ ಹೀರೋ ಗಣೇಶ್‌ಗೆ (Golden Star Ganesh) ನಾಯಕಿ ‘ತ್ರಿಬಲ್ ರೈಡಿಂಗ್’ (Triple Riding) ಸಿನಿಮಾದಲ್ಲಿ ನಟಿಸಿದ್ದರು. ಧನ್ವೀರ್ ಗೌಡ ನಟನೆಯ ಕೈವ ಸಿನಿಮಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾದಲ್ಲೂ ನಾಯಕಿಯಾಗಿ ನಟಿಸಿದ್ದಾರೆ. ಸದ್ಯದಲ್ಲೇ ರಿಲೀಸ್ ಅಪ್‌ಡೇಟ್ ಸಿಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೆ ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಸಿನಿಮಾಗೆ ಚಾಲನೆ

    ಮತ್ತೆ ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಸಿನಿಮಾಗೆ ಚಾಲನೆ

    ದೊಡ್ಮನೆ ಕುಡಿ ನಟ ವಿನಯ್ ರಾಜ್‌ಕುಮಾರ್ (Vinay Rajkumar) ಅವರು ಗ್ರಾಮಾಯಣ ಚಿತ್ರಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ಮೂರ್ನಾಲ್ಕು ವರ್ಷಗಳ ಹಿಂದೆ ಶುರುವಾಗಿದ್ದ ಸಿನಿಮಾಗೆ ಹಲವು ಕಾರಣಗಳಿಂದ ನಿಂತು ಹೋಗಿತ್ತು. ಇದೀಗ ಮತ್ತೆ ‘ಗ್ರಾಮಾಯಣ’ (Gramayana) ಸಿನಿಮಾ ತರಲು ಭರ್ಜರಿ ತಯಾರಿ ನಡೆಯುತ್ತಿದೆ. ಅದಕ್ಕೆ ಅದ್ದೂರಿ ಮುಹೂರ್ತ ಕೂಡ ಫಿಕ್ಸ್ ಆಗಿದೆ.

    ‘ಸಿದ್ಧಾರ್ಥ್’ (Siddarth) ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ವಿನಯ್ ರಾಜ್‌ಕುಮಾರ್ ಅವರು ಇತ್ತೀಚಿಗೆ ಹೊಸ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಗ್ರಾಮಾಯಣ’ ಚಿತ್ರದ ವಿಚಾರವಾಗಿ ನಟ ವಿನಯ್ ಸುದ್ದಿಯಲ್ಲಿದ್ದಾರೆ. ಈ ಹೆಸರು ಕೇಳಿದ ತಕ್ಷಣ ಹಲವರಿಗೆ ಇದು ಈಗಾಗಲೇ ಆರಂಭವಾಗಿರುವ ಸಿನಿಮಾವಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ. ಹೌದು, ‘ಗ್ರಾಮಾಯಣ’ ಸಿನಿಮಾ ಆರಂಭವಾಗಿ ಮೂರ್ನಾಲ್ಕು ವರ್ಷಗಳಾಗಿವೆ. ಆದರೆ ಹಲವು ಕಾರಣಗಳಿಂದ ನಿಂತು ಹೋಗಿದ್ದ ಚಿತ್ರವನ್ನು ಖ್ಯಾತ ನಿರ್ಮಾಪಕ ಕೆ.ಪಿ ಶ್ರಿಕಾಂತ್ ಅವರು ಲಹರಿ ಫಿಲ್ಮ್ಸ್ ಮನೋಹರ್ ನಾಯ್ಡು ಜೊತೆಗೆ ಸೇರಿ ಆರಂಭಿಸುತ್ತಿದ್ದಾರೆ. ‘ಯುಐ’ ಸಿನಿಮಾದ ನಂತರ ಶ್ರಿಕಾಂತ್ ಮತ್ತು ಮನೋಹರ್ ನಾಯ್ಡು ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಇದನ್ನೂ ಓದಿ:ಅಂಬಿ ಪುತ್ರನ ಅದ್ದೂರಿ ಕಲ್ಯಾಣ- ಮದುವೆಯ ಕಲರ್‌ಫುಲ್ ಫೋಟೋಸ್

    ದೇವನೂರು ಚಂದ್ರು ನಿರ್ದೇಶನದ ‘ಗ್ರಾಮಾಯಣ’ ಸಿನಿಮಾ ಒಂದೇ ಒಂದು ಟೀಸರ್‌ನಿಂದ ಹಲವರ ಗಮನ ಸೆಳೆದಿತ್ತು. ಕೋವಿಡ್‌ನಿಂದ ಮತ್ತು ಹಲವು ಕಾರಣಗಳಿಂದ ಸಿನಿಮಾ ಅರ್ಧಕ್ಕೆ ನಿಂತು ಹೋಗಿತ್ತು. ಇದೀಗ ಹೊಸದಾಗಿ ಚಿತ್ರವನ್ನ ಶುರು ಮಾಡ್ತಿದ್ದಾರೆ. ಜೂನ್ 8ರಂದು ಈ ಸಿನಿಮಾದ ಮುಹೂರ್ತ ನಡೆಯಲಿದೆ ಎಂಬ ಮಾಹಿತಿ ಚಿತ್ರತಂಡದಿಂದ ಅಪ್‌ಡೇಟ್ ಸಿಕ್ಕಿದೆ.

    ‘ಗ್ರಾಮಾಯಣ’ ಹೆಸರೇ ಹೇಳುವಂತೆ ಹಳ್ಳಿ ಬ್ಯಾಕ್‌ಗ್ರೌಂಡ್‌ನಲ್ಲಿ ನಡೆಯುವ ಕಥೆಯಾಗಿದೆ. ನಮ್ಮ ನೆಲದ ಕಥೆಯಾಗಿದ್ದು, ಒಂದು ಹಳ್ಳಿಯಲ್ಲಿ ಏನೇನು ನಡೆಯುತ್ತದೆ, ಅಲ್ಲಿನ ವಾತಾವರಣ, ಜನ ಜೀವನವನ್ನು ಈ ಸಿನಿಮಾ ಮೂಲಕ ತೆರೆದಿಡುವ ಪ್ರಯತ್ನ ಮಾಡಲಾಗುತ್ತಿದೆ. ‘ಗ್ರಾಮಾಯಣ’ ಸಿನಿಮಾಗೆ ಬೆಂಗಳೂರಿನಲ್ಲಿ ಜೂನ್ 8ರಂದು ಅದ್ಧೂರಿ ಮುಹೂರ್ತ ನಡೆಯಲಿದ್ದು, ಈ ಸಮಾರಂಭದಲ್ಲಿ ಡಾ. ರಾಜ್‌ಕುಮಾರ್ ಕುಟುಂಬದ ಎಲ್ಲಾ ಸದಸ್ಯರು, ರಾಜ್ಯದ ಹಿರಿಯ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ಪಾಲ್ಗೊಳ್ಳಲಿದ್ದಾರೆ.

  • ಅಪ್ಪು ನಟಿಸಬೇಕಿದ್ದ ಕತೆಯಲ್ಲಿ ವಿನಯ್ ರಾಜ್‌ಕುಮಾರ್ ಹೀರೋ

    ಅಪ್ಪು ನಟಿಸಬೇಕಿದ್ದ ಕತೆಯಲ್ಲಿ ವಿನಯ್ ರಾಜ್‌ಕುಮಾರ್ ಹೀರೋ

    ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ ಇದೀಗ `ಒಂದು ಸರಳ ಪ್ರೇಮಕಥೆ’ ಚಿತ್ರದ ಮೂಲಕ ನವಿರಾದ ಪ್ರೇಮಕಥೆಯನ್ನ ತೆರೆಯ ಮೇಲೆ ಹೇಳಲು ರೆಡಿಯಾಗಿದ್ದಾರೆ. ಈ ಹಿಂದೆ ಅಪ್ಪು ಇಷ್ಟಪಟ್ಟಿದ್ದ ಕಥೆಯಲ್ಲಿ ವಿನಯ್ ರಾಜ್‌ಕುಮಾರ್ ನಾಯಕನಾಗಿ ನಟಿಸಿದ್ದಾರೆ.

    `ಒಂದು ಸರಳ ಪ್ರೇಮಕಥೆ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ಭರದಿಂದ ಚಿತ್ರೀಕರಣ ನಡೆಯುತ್ತಿದ್ದು, ಮಾ.08ರಂದು ಸಿನಿಮಾದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಸಿಂಪಲ್ ಸುನಿ ನಿರ್ದೇಶನದ `ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಸಿನಿಮಾ ಬಿಡುಗಡೆ ಆಗಿ ಹತ್ತು ವರ್ಷವಾದ ಹಿನ್ನೆಲೆಯಲ್ಲಿ `ಒಂದು ಸರಳ ಪ್ರೇಮ ಕತೆ’ ಸಿನಿಮಾದ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ವೇಳೆ 2 ವರ್ಷಗಳ ಹಿಂದೆ ನಡೆದ ಅಪ್ಪು ಜೊತೆಗಿನ ಸಂಭಾಷಣೆ ಬಗ್ಗೆ ಸಿಂಪಲ್ ಸುನಿ ಹಂಚಿಕೊಂಡಿದ್ದಾರೆ.‌ ಸುನಿ ರಚಿಸಿದ ಸ್ಟೋರಿಯನ್ನ ಅಪ್ಪು ಮೆಚ್ಚಿಕೊಂಡಿದ್ದರು. ಈ ಬಗ್ಗೆ ಸುನಿ ಮಾತನಾಡಿದ್ದಾರೆ. ಇದನ್ನೂ ಓದಿ: ತಾಯಿ ದೀಪಾ ಅಯ್ಯರ್ ಡ್ರೆಸ್ ಬಗ್ಗೆ ಕೆಟ್ಟ ಕಾಮೆಂಟ್ ಮಾಡಿದವರಿಗೆ ಬೆಂಡೆತ್ತಿದ ಸಾನ್ಯ

    ಈ ಸಿನಿಮಾದ ಕತೆಯನ್ನು ಪುನೀತ್ ರಾಜ್‌ಕುಮಾರ್ ಇಷ್ಟಪಟ್ಟಿದ್ದರು. ಮೊದಲು ನಾಲ್ಕು ಸಾಲಲ್ಲಿ ಕತೆ ಹೇಳಿದ್ದೆ ಆಗ ಅಪ್ಪು ಸರ್ ಒಪ್ಪಿದ್ದರು. ಕತೆಯನ್ನು ಡೆವೆಲಪ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ದುರ್ಘಟನೆ ಸಂಭವಿಸಿತು. ಈಗ ಅದೇ ಕತೆಯಲ್ಲಿ ವಿನಯ್ ರಾಜ್‌ಕುಮಾರ್ ನಟಿಸುತ್ತಿದ್ದಾರೆ ಎಂದು ನಿರ್ದೇಶಕ ಸುನಿ ತಿಳಿಸಿದ್ದಾರೆ. ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ಒಂದು ಸರಳ ಪ್ರೇಮಕಥೆ. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್, `ರಾಧಾ ಕೃಷ್ಣ’ ಧಾರಾವಾಹಿ ನಟಿ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ.

    ನಟ ವಿನಯ್ ರಾಜ್ ಕುಮಾರ್ ಮಾತನಾಡಿ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ಮೊದಲಿನಿಂದಲೂ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ತುಂಬಾ ಇಷ್ಟ ಜೊತೆಗೆ ಸುನಿ ಅವರ ನಿರ್ದೇಶನದ ಶೈಲಿ ಕೂಡ ತುಂಬಾ ಇಷ್ಟ. ಸುನಿ ಅವರು ಈ ಸಿನಿಮಾ ಕಥೆ ಹೇಳಲು ಬಂದಾಗ ಅವರ ನಿರ್ದೇಶನದಲ್ಲಿ ಸಿನಿಮಾ ಮಾಡ್ತಿದ್ದೀನಿ ಅನ್ನೋದೇ ತುಂಬಾ ಖುಷಿ ಕೊಟ್ಟಿತ್ತು. ಈ ಚಿತ್ರದಲ್ಲಿ ಅತಿಶಯ್ ಪಾತ್ರದಲ್ಲಿ ನಟಿಸಿದ್ದೇನೆ. ಸಂಗೀತ ನಿರ್ದೇಶಕನ ಪಾತ್ರ. ದೊಡ್ಡ ಮ್ಯೂಸಿಕ್ ಡೈರೆಕ್ಟರ್ ಆಗಬೇಕು ಅನ್ನೋದು ಅವನ ಕನಸು. ಆತನ ಮನಸ್ಸಲ್ಲಿ ಒಂದು ಹುಡುಗಿಯ ಹುಡುಕಾಟ ಯಾವಾಗಲೂ ಇರುತ್ತೆ ಇದು ಸಿನಿಮಾದ ಒಂದು ಎಳೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ ʻಸಿಂಪಲ್ಲಾಗ್ ಒಂದ್ ಲವ್ ಸ್ಟೋರಿʼಗೆ ಇಟ್ಟ ಮೊದಲ ಟೈಟಲ್ ʻಒಂದು ಸರಳ ಪ್ರೇಮಕಥೆʼ. ಯಾವುದಾದರೂ ಸಿನಿಮಾಗೆ ಈ ಟೈಟಲ್ ಇಡೋಣ ಎಂದು ಹತ್ತು ವರ್ಷದಿಂದ ಟೈಟಲ್ ರಿನಿವಲ್ ಮಾಡಿಕೊಂಡು ಬಂದಿದ್ದೆ. ಈ ಚಿತ್ರದ ಕಥೆ ಕೇಳಿ ವಿನಯ್ ರಾಜ್ ಕುಮಾರ್ ಒಕೆ ಮಾಡಿದರು. ಚಿತ್ರಕ್ಕೆ ಪ್ರಸನ್ನ ಅವರು ಕಥೆ ಬರೆದಿದ್ದಾರೆ. ಜ.23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಮೈಸೂರಿನಲ್ಲಿ ಇವತ್ತು ಕೊನೆಯ ದಿನದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಶೇಕಡಾ 50%ರಷ್ಟು ಚಿತ್ರೀಕರಣ ಮುಗಿದಿದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

     

    View this post on Instagram

     

    A post shared by ಸುನಿ SuNi (@simplesuni)

    ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ತುಂಬಾ ಖುಷಿ ಕೊಟ್ಟಿದೆ. ಕನ್ನಡ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಿದ್ದಕ್ಕಾಗಿ ತುಂಬಾ ಧನ್ಯವಾದಗಳು ಎಂದು ಮಲ್ಲಿಕಾ ಸಿಂಗ್ ಮೊದಲ ಕನ್ನಡ ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡರು. ಸಾಧುಕೋಕಿಲ, ರಾಜೇಶ್ ನಟರಂಗ, ಅರುಣ ಬಾಲರಾಜ್ ಒಳಗೊಂಡ ಕಲಾವಿದರು ಒಂದು ಸರಳ ಪ್ರೇಮಕಥೆ ಚಿತ್ರದಲ್ಲಿದ್ದು, ಕಾರ್ತಿಕ್ ಛಾಯಾಗ್ರಹಣ, ಆದಿ ಸಂಕಲನ, ವೀರ್ ಸಮರ್ಥ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.