Tag: ವಿನಯ ಪ್ರಸಾದ್

  • ಬಹುಭಾಷಾ ಹಿರಿಯ ನಟಿ ವಿನಯ ಪ್ರಸಾದ್ ಮನೆ ದೋಚಿದ ಖದೀಮರು

    ಬಹುಭಾಷಾ ಹಿರಿಯ ನಟಿ ವಿನಯ ಪ್ರಸಾದ್ ಮನೆ ದೋಚಿದ ಖದೀಮರು

    ಬೆಂಗಳೂರು: ಬೆಳಕಿನ ಹಬ್ಬ ಈ ಬಾರಿ ಬೆಂಗಳೂರಿನ ಕೆಲವರ ಮನೆಯಲ್ಲಿ ಕತ್ತಲೆ ಆವರಿಸುವಂತೆ ಮಾಡಿದೆ. ದೀಪಾವಳಿ (Deepavali) ಹಬ್ಬದ ಪಟಾಕಿ ಸದ್ದಿನ ಭದ್ರತೆಯಲ್ಲಿ ಖ್ಯಾತ ಬಹುಭಾಷಾ ಹಿರಿಯ ನಟಿಯ ಮನೆ ಸೇರಿ ಹಲವು ಮನೆಗಳಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ.

    ಹೌದು, ಬಹುಭಾಷಾ ಹಿರಿಯ ನಟಿ ವಿನಯಪ್ರಸಾದ್ (Vinaya Prasad) ಮನೆಯ ಬಾಗಿಲು ಮುರಿದು ಖದೀಮರು ಮನೆಯಲ್ಲಿದ್ದ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನ ದೋಚಿಕೊಂಡು ಹೋಗಿದ್ದಾರೆ. ದೀಪಾವಳಿ ಹಬ್ಬಕ್ಕೆ ಕುಟುಂಬ ಸಮೇತರಾಗಿ ಹಿರಿಯ ನಟಿ ವಿನಯ ಪ್ರಸಾದ್ ಅವರು, ತಮ್ಮ ಹುಟ್ಟೂರು ಉಡುಪಿಗೆ ಹೋಗಿದ್ದರು. ಊರಿಗೆ ಹೋಗಿರುವುದನ್ನು ಗಮನಿಸಿದ ಕಳ್ಳರು ದೀಪಾವಳಿ ಹಬ್ಬದ ದಿನ ಮನೆ ಬೀಗ ಮುರಿದು 7 ಸಾವಿರ ರೂಪಾಯಿ ನಗದು ದೋಚಿಕೊಂಡು ಹೋಗಿದ್ದಾರೆ.

    ವಿನಯ ಪ್ರಸಾದ್ ಕುಟುಂಬ ಹಬ್ಬ ಮುಗಿಸಿ ನಂದಿನಿ ಲೇಔಟ್‍ನಲ್ಲಿರುವ (Nandini Layout) ತಮ್ಮ ಮನೆಗೆ ಬಂದಾಗ ಕಳ್ಳತನ ಆಗಿರುವ ವಿಚಾರ ಬೆಳಕಿಗೆ ಬಂದಿದೆ. ಕಳ್ಳತನ ಸಂಬಂಧ ಸದ್ಯ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕಳ್ಳರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇದನ್ನೂ ಓದಿ: ಸಿಗರೇಟು ಸೇದೋಕೆ ಕಾರು ನಿಲ್ಲಿಸಿದ ಮಾಲೀಕ – 75 ಲಕ್ಷ ಹಣದೊಂದಿಗೆ ಚಾಲಕ ಎಸ್ಕೇಪ್

    POLICE JEEP

    ದೀಪಾವಳಿ ಹಬ್ಬದ ದಿನವೇ ಉತ್ತರ ವಿಭಾಗದ ನಾಲ್ಕೈದು ಠಾಣಾ ವ್ಯಾಪ್ತಿಯಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ. ಜೆಸಿ ನಗರ, ಮಲ್ಲೇಶ್ವರಂ, ಸುಬ್ರಹ್ಮಣ್ಯನಗರ, ರಾಜಗೋಪಾಲನಗರ ಠಾಣಾ ವ್ಯಾಪ್ತಿಯಲ್ಲಿ ಖದೀಮರು ತಮ್ಮ ಕರಾಮತ್ತನ್ನು ತೋರಿಸಿದ್ದಾರೆ. ಕಳ್ಳರು ಮನೆ ಮಾಲೀಕರು ಮನೆಯಲ್ಲಿ ಇಲ್ಲದೇ ಇರುವುದು ಮತ್ತು ದೀಪಾವಳಿ ಹಬ್ಬದಲ್ಲಿ ದೊಡ್ಡ ಮಟ್ಟದ ಪಟಾಕಿ ಹೊಡೆಯುವುದನ್ನೇ ಕಳ್ಳರು ಬಂಡವಾಳವಾನ್ನಾಗಿ ಮಾಡಿಕೊಂಡಿದ್ದಾರೆ. ಪಟಾಕಿ ಸದ್ದಿನ ನಡುವೆ ಮನೆಗಳ ಬೀಗ ಮುರಿಯುವ ಶಬ್ಧ ಆಚೇ ಬರದ ರೀತಿಯಲ್ಲಿ ನೋಡಿಕೊಂಡು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.

    ಒಟ್ಟಾರೆ ದೀಪಾವಳಿ ಹಬ್ಬದ ಸಮಯದಲ್ಲಿ ಸರಣಿ ಮನೆಗಳ್ಳತನವಾಗಿರುವುದು ಉತ್ತರ ವಿಭಾಗದ ಪೊಲೀಸರ ನಿದ್ದೆಗೆಡಿಸಿದ್ದು ಕಳ್ಳತನವಾಗಿರುವ ರಾಜಗೋಪಾಲ ನಗರ, ಮಲ್ಲೇಶ್ವರಂ, ಜೆ.ಸಿ ನಗರ, ಸುಬ್ರಮಣ್ಯ ನಗರ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಿಸಿಕೊಂಡು ಖದೀಮರ ಬೇಟೆಗೆ ಪೊಲೀಸರು ಇಳಿದಿದ್ದಾರೆ. ಇದನ್ನೂ ಓದಿ: ಶಾಸಕ ಬೆಲ್ಲದ್‌ ಹೆಸರಿನಲ್ಲಿ ಡೆತ್‌ನೋಟ್‌ ಬರೆದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    Live Tv
    [brid partner=56869869 player=32851 video=960834 autoplay=true]

  • ಕನ್ನಡದ ‘ಸೆಪ್ಟೆಂಬರ್ 13′ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಸ್ಟಾರ್ ನಟ ಮಮ್ಮುಟ್ಟಿ

    ಕನ್ನಡದ ‘ಸೆಪ್ಟೆಂಬರ್ 13′ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಸ್ಟಾರ್ ನಟ ಮಮ್ಮುಟ್ಟಿ

    ಕೊರೋನಾ ಸಂದಿಗ್ದ ಪರಿಸ್ಥಿತಿಯಲ್ಲಿ ದಾದಿಯರ ಸೇವೆ, ತ್ಯಾಗವನ್ನು ಬಿಂಬಿಸುವ ಸೆಪ್ಟೆಂಬರ್ 13 ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಶೀಘ್ರದಲ್ಲಿಯೇ ತೆರೆಗೆ ಬರಲಿರುವ ಈ ಚಿತ್ರದ ಹೊಸ ಪೋಸ್ಟರ್ ನ್ನು ಮಾಲಿವುಡ್ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

    ರುಬಿ ಫಿಲ್ಮಂಸ್ ನಡಿ ಮಾಜಿ ಶಾಸಕ ಇವಾನ್ ನಿಗ್ಲಿ ಕಥೆ ಬರೆದು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹೆಸರಾಂತ ನಿರ್ಮಾಪಕ ಡಾ.ರಾಜ ಬಾಲಕೃಷ್ಣನ್ ಈ ಸಿನಿಮಾಗೆ ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಸಂಕಲನ, ಛಾಯಾಗ್ರಾಹಣ ಜವಾಬ್ದಾರಿಯನ್ನೂ ನಿಭಾಯಿಸಿ ಸಿನಿಮಾದಲ್ಲಿ ಖಳನಾಯಕನಾಗಿಯೂ ಬಣ್ಣ ಹಚ್ಚಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಜಯಶ್ರೀ ಆರಾಧ್ಯ

    ‘ಸೆಪ್ಟಂಬರ್ 13′ ಸಿನಿಮಾದಲ್ಲಿ ಹಿರಿಯ ಕಲಾವಿದರಾದ ವಿನಯ ಪ್ರಸಾದ್, ಜೈ ಜಗದೀಶ್, ಯಮುನಾ ಶ್ರೀನಿಧಿ ನಟಿಸಿದ್ದು, ಶ್ರೀಯಾರಿಧಿಬನ್ ನಾಯಕಿಯಾಗಿ ಈ ಚಿತ್ರದ ಮೂಲಕ ಕನ್ನಡ ಇಂಡಸ್ಟ್ರೀಗೆ ಪಾದಾರ್ಪಣೆ ಮಾಡಿದ್ದಾರೆ. ಉಳಿದಂತೆ ಒಂದಷ್ಟು ಯುವ ಪ್ರತಿಭೆಗಳು ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಶೀರ್ಘದಲ್ಲಿ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ.

    Live Tv
    [brid partner=56869869 player=32851 video=960834 autoplay=true]

  • ವಿನಯ್ ಪ್ರಸಾದ್ ನಟನೆಯ ಮಾರಾಯ ಚಿತ್ರದ ಟ್ರೈಲರ್ ರಿಲೀಸ್

    ವಿನಯ್ ಪ್ರಸಾದ್ ನಟನೆಯ ಮಾರಾಯ ಚಿತ್ರದ ಟ್ರೈಲರ್ ರಿಲೀಸ್

    ವಿಭಿನ್ನ ಶೀರ್ಷಿಕೆಗಳ ಮೂಲಕ ಹೊರ ಬರುತ್ತಿರುವ ಚಿತ್ರಗಳ ಪೈಕಿ ’ಮಾರಾಯ’ ಸಿನಿಮಾವೊಂದು ಸೇರ್ಪಡೆಯಾಗಿದೆ. ಇತ್ತೀಚೆಗಷ್ಟೇ ಸಿನಿಮಾವನ್ನು ನೋಡಿದ ಸೆನ್ಸಾರ್ ಮಂಡಳಿಯು ಪ್ರಶಂಸೆ ವ್ಯಕ್ತಪಡಿಸಿ ’ಯುಎ’ ಪ್ರಮಾಣಪತ್ರ ನೀಡಿದ್ದಾರೆ. ಉದಯ್‌ಪ್ರೇಮ್ ನಿರ್ದೇಶನ ಮಾಡುವುದರ ಜತೆಗೆ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ಬರೆದಿರುವುದು ಹೊಸ ಅನುಭವವಂತೆ. ಇದನ್ನೂ ಓದಿ: ನಿರ್ದೇಶಕ ರಾಜಮೌಳಿ ಮೇಲೆ ಆಲಿಯಾ ಭಟ್ ಕೋಪ – ಬೇರೆ ರೀತಿಯಲ್ಲೇ ಸಿಟ್ಟು ತೋರಿಸಿ ಆಲಿಯಾ

    ಇವರ ಶ್ರಮಕ್ಕೆ ಎನ್.ಜಿ.ಸುಜಾತ ನಂದನ್ ಸಾಥ್ ನೀಡಿದ್ದಾರೆ. ತಾರಗಣದಲ್ಲಿ ಹಿರಿಯ ನಟಿ ವಿನಯಪ್ರಸಾದ್, ಡಿಂಗ್ರಿನಾಗರಾಜ್, ಬಿಗ್‌ಬಾಸ್ ಖ್ಯಾತಿಯ ದಿವಾಕರ್, ಸಲಗ ಸೂರಿಯಣ್ಣ(ದಿನೇಶ್), ಮಹಾಭಾರತದ ಚಿಲ್ಲರ್‌ಮಂಜು, ಬಸು, ಜಿಕೆ, ಮೈ ಆಟೋ ಗ್ರಾಫ್‌ನ ಕುಮಾರ್‌ದೇವ್, ಮಣಿ, ಶ್ರೇಯ, ತೀನಾತಿಮಯ್ಯ, ಸ್ನೇಹ ಮುಂತಾದವರು ನಟಿಸಿದ್ದಾರೆ. ಇದನ್ನೂ ಓದಿ: ‘Lockup’ ಶೋಗೆ ಬರುವಂತೆ ವಿಲ್ ಸ್ಮಿತ್‍ಗೆ ಆಫರ್ ಕೊಟ್ಟ ಕ್ವಿನ್ ಕಂಗನಾ

    ಚಿತ್ರದ ಟೈಟಲ್ ಟ್ರಾಕ್‌ನ್ನು ರಾಜೇಶ್‌ಕೃಷ್ಣನ್ ಹಾಡಿದ್ದು, ಎರಡು ಲಕ್ಷ ಜನರು ವೀಕ್ಷಣೆ ಮಾಡಿರುವುದು ತಂಡಕ್ಕೆ ಸಂತಸ ತಂದಿದೆ.  ಅಲ್ಲದೆ ಯುಗಾದಿ ಹಬ್ಬದಂದು ಟ್ರೇಲರ್ ಬಿಡುಗಡೆಗೊಂಡಿದ್ದು ವೈರಲ್ ಆಗಿದೆ. ಸಂಗೀತ ವಿನುಮನಸು, ಛಾಯಾಗ್ರಹಣ ಉದಯಾನಂದ ಬರ್ಕೆ, ಸಂಕಲನ ಶಿವಕುಮಾರ್.ಎ, ಸಾಹಸ ಚಂದ್ರುಬಂಡೆ ಅವರದಾಗಿದೆ.