Tag: ವಿಭಜನೆ

  • ವಿಟಿಯು ವಿಭಜನೆಯಿಂದ ಹಿಂದೆ ಸರಿದ ಸಮ್ಮಿಶ್ರ ಸರ್ಕಾರ

    ವಿಟಿಯು ವಿಭಜನೆಯಿಂದ ಹಿಂದೆ ಸರಿದ ಸಮ್ಮಿಶ್ರ ಸರ್ಕಾರ

    ಬೆಂಗಳೂರು: ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ವಿಭಜನೆಗೆ ವಿರೋಧ ಹೆಚ್ಚಾದ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರ ಈ ಪ್ರಸ್ತಾಪದಿಂದ ಹಿಂದಕ್ಕೆ ಸರಿದಿದೆ.

    ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ವಿಭಜಿಸಿ ಹಾಸನದಲ್ಲಿ ಪ್ರತ್ಯೇಕ ತಾಂತ್ರಿಕ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಪ್ರಸ್ತಾವನೆ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟ ಪಡಿಸಿದ್ದಾರೆ ಎಂದು ಸಿಎಂ ಅವರ ಅಧಿಕೃತ ಟ್ವಿಟ್ಟರ್ ಖಾತೆ ತಿಳಿಸಿದೆ.

    ಸಿಎಂ ಹೇಳಿದ್ದು ಏನು?
    ನಮ್ಮ ಸರ್ಕಾರವು ರಾಜ್ಯದ ತಾಂತ್ರಿಕ ಶಿಕ್ಷಣ ಕ್ಷೇತ್ರವನ್ನು ಸುಧಾರಿಸಲು ಉದ್ದೇಶಿಸಿದೆ. ಈಗ ಕರ್ನಾಟಕದ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳ ಆಡಳಿತಾತ್ಮಕ, ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಸಂಬಂಧಿತ ವಿಷಯಗಳು ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಕೇಂದ್ರೀಕೃತವಾಗಿವೆ. ಆದ್ದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಭೌಗೋಳಿಕ ಆಧಾರದ ಮೇಲೆ ಎಂಜಿನಿಯರಿಂಗ್ ಕಾಲೇಜುಗಳನ್ನು ಮರುವಿಂಗಡಣೆ ಮಾಡಿ ಹಾಸನದಲ್ಲಿ ಒಂದು ಹೊಸ ತಾಂತ್ರಿಕ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಬಜೆಟ್‍ನಲ್ಲಿ ಪ್ರಕಟಿಸಿದ್ದರು.

    ಕುಮಾರಸ್ವಾಮಿ ಅವರ ಈ ನಿರ್ಧಾರಕ್ಕೆ ರಾಜ್ಯದಲ್ಲಿ ಪ್ರತಿಭಟನೆ ಆರಂಭವಾಗಿತ್ತು. ವಿಶೇಷವಾಗಿ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಆಕ್ರೋಶ ಕೇಳಿ ಬಂದಿತ್ತು. ವಿಟಿಯುಗೆ ಸುಮಾರು 2 ದಶಕದ ಇತಿಹಾಸವಿದೆ, ಕೇವಲ ನಿಮ್ಮ ರಾಜಕೀಯ ದುರುದ್ದೇಶಕ್ಕಾಗಿ ಇಬ್ಭಾಗ ಮಾಡುತ್ತಿರುವುದು ಎಷ್ಟು ಸಮಂಜಸ? ಇದು ಬೆಳಗಾವಿ ಜನತೆಗೆ ಮೈತ್ರಿ ಸರಕಾರ ಮಾಡುತ್ತಿರುವ ದ್ರೋಹ. ಕಾಂಗ್ರೆಸ್ ಪಕ್ಷದ ಮುಖಂಡರು ಇದರ ನೇರ ಹೊಣೆಗಾರರಾಗುತ್ತಾರೆ. ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಬೆಳಗಾವಿ ಸಂಸದ ಸುರೇಶ್ ಅಂಗಡಿ ಆಗ್ರಹಿಸಿದ್ದರು.

    ಹಾಸನ ಸೇರಿದಂತೆ ರಾಜ್ಯದ ಯಾವುದೇ ಭಾಗವನ್ನು ಅಭಿವೃದ್ಧಿ ಮಾಡುವ ವಿಚಾರದಲ್ಲಿ ನಮ್ಮ ವಿರೋಧ ಇಲ್ಲ. ಆದರೆ ಉತ್ತರ ಕರ್ನಾಟಕ ಮತ್ತು ಬೆಳಗಾವಿಗೆ ಅನ್ಯಾಯ ಮಾಡುತ್ತಿರುವುದು ಎಷ್ಟು ಸರಿ? ಈ ಮೂಲಕ ಉತ್ತರ ಕರ್ನಾಟಕದ ಮೇಲೆ ಮಲತಾಯಿ ಧೋರಣೆ ತೋರಿಸಲಾಗುತ್ತಿದೆ. ವಿಟಿಯು ಒಡೆಯುವ ನಿರ್ಧಾರವನ್ನು ನಾನು ವಿರೋಧಿಸುತ್ತೇನೆ ಎಂದು ಅಂಗಡಿ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೋದಿ ಕೊಂದು ಭಾರತದ ವಿಭಜನೆ: ಉಗ್ರರಿಗೆ ಹಫೀಜ್ ಸಯೀದ್ ಕರೆ

    ಮೋದಿ ಕೊಂದು ಭಾರತದ ವಿಭಜನೆ: ಉಗ್ರರಿಗೆ ಹಫೀಜ್ ಸಯೀದ್ ಕರೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಿ ಭಾರತವನ್ನು ವಿಭಜನೆ ಮಾಡುತ್ತೇವೆ ಎಂದು ಜಮಾತ್-ಉದ್-ದವ(ಜೆಯುಡಿ) ನಿಷೇಧಿತ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಹೇಳಿದ್ದಾನೆ.

    ರಂಜಾನ್ ಪ್ರಯುಕ್ತ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಪೂಂಚ್ ಜಿಲ್ಲೆಯ ರಾವಲ್ಕೋಟ್‍ನ ಸಾರ್ವಜನಿಕ ಸಮಾರಂಭದಲ್ಲಿ ಹಫಿಜ್ ಸಯೀದ್ ಈ ಹೇಳಿಕೆಯನ್ನು ನೀಡಿದ್ದಾನೆ.

    ಸಂಘಟನೆಯ ಹಿರಿಯ ಮುಖಂಡನಾದ ಮೌಲಾನ ಬಶೀರ್ ಅಹ್ಮದ್ ಖಾಖಿ, ಇಸ್ಲಾಂನ ಬಾವುಟವನ್ನು ಶೀಘ್ರವೇ ಭಾರತ ಮತ್ತು ಅಮೆರಿಕಾ ದೇಶದಲ್ಲಿ ಹಾರಿಸಿತ್ತೇವೆ. ಭಾರತದ ಪ್ರಧಾನಿ ಮೋದಿಯವರನ್ನು ಕೊಂದು ಹಾಕಿ, ಭಾರತ ಮತ್ತು ಇಸ್ರೇಲ್ ವಿಭಜನೆಯಲ್ಲಿ ಹೆಚ್ಚು ಮಂದಿ ಹುತಾತ್ಮರಾಗುತ್ತೇವೆ ಎಂದು ಎಂದು ಖಾಸಗಿ ಸುದ್ದಿ ವಾಹಿನಿಗೆ ಹೇಳಿಕೆ ನೀಡಿದ್ದಾನೆ.

    ರಂಜಾನ್ ತಿಂಗಳು ನಮಗೆ ಪವಿತ್ರ ದಿನವಾಗಿದ್ದು, ಈ ಸಮಯದಲ್ಲಿ ಜಿಹಾದ್(ಯುದ್ಧ) ನಡೆಸಿದರೆ ಗೆಲುವು ನಮ್ಮದೆ. ಒಂದು ವೇಳೆ ಜಿಹಾದ್‍ನಲ್ಲಿ ಹುತಾತ್ಮರಾದರೆ ನೇರವಾಗಿ ಸ್ವರ್ಗಕ್ಕೆ ಹೋಗುತ್ತೇವೆ. ಸಂಘಟನೆಯು ಈಗಾಗಲೇ ಭಾರತ ಸೇನೆಯೊಂದಿಗೆ ಕಾಶ್ಮೀರ ವಿಭಜನೆಗೋಸ್ಕರ ಹೋರಾಟ ನಡೆಯುತ್ತಿದೆ. ಕಾಶ್ಮೀರ ಸ್ವಾತಂತ್ರ್ಯ ಮತ್ತು ಭಾರತದ ನಾಶಕ್ಕೆ ಮತ್ತು ಇಸ್ಲಾಂ ಧ್ವಜ ಹಾರಿಸಲು ಸಂಘಟನೆಗೆ ತಮ್ಮ ಮಕ್ಕಳನ್ನು ಸೇರಿಸಬೇಕೆಂದು ಜನರಲ್ಲಿ ಸಯೀದ್ ಮನವಿ ಮಾಡಿದ್ದಾನೆ.

    ರಂಜಾನ್ ತಿಂಗಳಲ್ಲಿ ದವಸ-ಧಾನ್ಯ ಹಾಗೂ ಹಣ ನೀಡಬೇಕು. ಕಾಶ್ಮೀರದ ಸ್ವಾತಂತ್ರ್ಯಕ್ಕೆ ತಮ್ಮ ಮಕ್ಕಳನ್ನು ಸಂಘಟನೆಗೆ ಸೇರಿಸುವಂತೆ ಮಹಿಳೆಯರಿಗೆ ಕರೆ ನೀಡಿದ್ದಾನೆ. ಇದನ್ನೂ ಓದಿ : ಮುಂಬೈ ಸ್ಫೋಟದ ರೂವಾರಿ ಹಫೀಜ್ ಸಯೀದ್ ಬಿಡುಗಡೆ-ಉತ್ತರ ಪ್ರದೇಶದಲ್ಲಿ ಸಂಭ್ರಮಾಚರಣೆ