Tag: ವಿರಾಜ ಪೇಟೆ

  • ನಾಪತ್ತೆಯಾಗಿದ್ದ ಅರಣ್ಯ ವೀಕ್ಷಕ ಶವವಾಗಿ ಪತ್ತೆ

    ನಾಪತ್ತೆಯಾಗಿದ್ದ ಅರಣ್ಯ ವೀಕ್ಷಕ ಶವವಾಗಿ ಪತ್ತೆ

    ಮಡಿಕೇರಿ: ಕಳೆದ ನಾಲ್ಕು ದಿನಗಳ ಹಿಂದೆ ವಿರಾಜಪೇಟೆ ತಾಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದಾಗ ನಾಪತ್ತೆಯಾಗಿದ್ದ ಅರಣ್ಯ ವೀಕ್ಷಕ (Forest Guard) ಇಂದು ಶವವಾಗಿ ಪತ್ತೆಯಾಗಿದ್ದಾರೆ.

    ಅರಣ್ಯ ರಕ್ಷಕ ತರುಣ್(23) ಮೃತ ದುರ್ದೈವಿ. ಅರಣ್ಯದಲ್ಲಿ ಬೀಟ್ ಹೋಗಿದ್ದ ಸಂದರ್ಭ ನಾಪತ್ತೆಯಾಗಿದ್ದ ತರುಣ್ ವಿ. ಬಾಡಗ ಗ್ರಾಮದ ಕೊಕ್ಕದಲ್ಲಿರುವ ನದಿಯಲ್ಲಿ (River) ಶವವಾಗಿ ಪತ್ತೆಯಾಗಿದ್ದಾರೆ.

    ಕೊಡಗು (Kodagu) ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಅರಣ್ಯದಲ್ಲಿ ಸಹೋದ್ಯೋಗಿಗಳ ಬೀಟ್‌ಗೆ ಹೋಗಿರುವ ಸಂದರ್ಭದಲ್ಲಿ ಬರೋಪೋಳೆ ನದಿಯ ಸಮೀಪದಲ್ಲಿ ಕಾಲು ಜಾರಿ ಬಿದ್ದಿರುವ ಬಗ್ಗೆ ತರುಣ್ ಸಹೋದ್ಯೋಗಿಗಳು ಮಾಹಿತಿ ನೀಡಿದರು. ಇದನ್ನೂ ಓದಿ: ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ ನಾಪತ್ತೆ

    ಈ ಹಿನ್ನೆಲೆಯಲ್ಲಿ ಎನ್.ಡಿಆರ್.ಎಫ್ ನುರಿತ ಮುಳುಗು ತಜ್ಞರ ತಂಡ ಕಾರ್ಯಾಚರಣೆ ನಡೆಸಿ ಇಂದು ಮುಂಜಾನೆ ಮೃತದೇಹ ಹೊರ ತೆಗೆಯಲಾಯಿತು. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಘಟನೆ ಸಂಬಂಧಿಸಿದಂತೆ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸೇತುವೆ ನೆಲಸಮ ಮಾಡುವಾಗ ನದಿಗೆ ಬಿದ್ದ ಜೆಸಿಬಿ- ಪ್ರಾಣಾಪಾಯದಿಂದ ಚಾಲಕ ಪಾರು

    Live Tv
    [brid partner=56869869 player=32851 video=960834 autoplay=true]

  • ಅಕ್ರಮವಾಗಿ ಸಾಗಿಸ್ತಿದ್ದ ಬೀಟೆ ಮರ, ವಾಹನ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

    ಅಕ್ರಮವಾಗಿ ಸಾಗಿಸ್ತಿದ್ದ ಬೀಟೆ ಮರ, ವಾಹನ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

    ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಿಂದ ಕುಶಾಲನಗರ ಮಾರ್ಗವಾಗಿ ಗೂಡ್ಸ್ ಜೀಪಿನಲ್ಲಿ ಅಕ್ರಮವಾಗಿ ಬೀಟೆ ನಾಟಾಗಳನ್ನು ಸಾಗಿಸುತ್ತಿರುವ ವಾಹನ ಹಾಗೂ ಮರದ ನಾಟಾಗಳನ್ನು ವಶಪಡಿಸಿಕೊಳ್ಳುವಲ್ಲಿ ಅರಣ್ಯ ಇಲಾಖಾ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

    ಸಿದ್ದಾಪುರ ಭಾಗದಿಂದ ಗೂಡ್ಸ್ ಜೀಪಿನಲ್ಲಿ (ಕೆಎ 18 ಬಿ 9888) ಅಕ್ರಮವಾಗಿ ಬೀಟೆ ಮರದ ನಾಟಾಗಳನ್ನು ತುಂಬಿಸಿಕೊಂಡು ಕುಶಾಲನಗರದತ್ತ ಬೆಳಗ್ಗಿನ ಜಾವ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಬಗ್ಗೆ ಖಚಿತ ಸುಳಿವಿನ ಮೇರೆಗೆ ಕುಶಾಲನಗರ ಮೀನುಕೊಲ್ಲಿ ವ್ಯಾಪ್ತಿಯ ಅರಣ್ಯ ಸಿಬ್ಬಂದಿ ವಾಹನವನ್ನು ಹಿಂಬಾಲಿಸಿಕೊಂಡು ಬೆನ್ನಟ್ಟಿ ಸೆರೆಹಿಡಿಯಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ನಂಜರಾಯಪಟ್ಟಣ ಗ್ರಾಮದ ದುಬಾರೆ ಬಳಿ ಜೀಪು ಚಾಲಕ ವಾಹನವನ್ನು ವೇಗವಾಗಿ ಚಾಲನೆ ಮಾಡಿಕೊಂಡು ಹೋಗಿ ದುಬಾರೆ ಗದ್ದೆಯಲ್ಲಿ ನಿಲ್ಲಿಸಿ ಆರೋಪಿ ಪರಾರಿಯಾಗಿದ್ದಾನೆ.

    ಅರಣ್ಯ ಸಿಬ್ಬಂದಿ ಜೀಪು ಹಾಗೂ 1.50 ಲಕ್ಷ ಮೌಲ್ಯದ ಮರ ಸೇರಿದಂತೆ ಒಟ್ಟು ರೂ.6 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

  • ಶಬರಿಮಲೆ ಎಂಟ್ರಿಗೆ ಕೊಡಗಲ್ಲೇ ಸ್ಕೆಚ್- ಲಾಡ್ಜ್‌ನಲ್ಲಿ ಉಳಿದಿದ್ರು ಬಿಂದು, ಕನಕದುರ್ಗ

    ಶಬರಿಮಲೆ ಎಂಟ್ರಿಗೆ ಕೊಡಗಲ್ಲೇ ಸ್ಕೆಚ್- ಲಾಡ್ಜ್‌ನಲ್ಲಿ ಉಳಿದಿದ್ರು ಬಿಂದು, ಕನಕದುರ್ಗ

    – ಮಾಂಸ ತಿಂದು ಅಯ್ಯಪ್ಪನ ದರ್ಶನ ಪಡೆದ್ರಾ..?

    ಮಡಿಕೇರಿ: ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದು 8 ಶತಮಾನದ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ ಮಹಾನ್ ಸಾಧಕಿಯರು ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ವೀರಮಣಿಕಂಠನ ಸನ್ನಿಧಿಗೆ ಪ್ರವೇಶಿಸಲು ಸಂಚು ರೂಪಿಸಿರುವ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಪ್ರವೇಶಕ್ಕೂ 4 ದಿನಗಳ ಮೊದಲೇ ಅಂದ್ರೆ ಡಿಸೆಂಬರ್ 29ರ ಮಧ್ಯಾಹ್ನ 2 ಗಂಟೆ ವೇಳೆಗೆ ಬಿಂದು ಮತ್ತು ಕನಕದುರ್ಗ ಕೊಡಗಿನ ವಿರಾಜಪೇಟೆಗೆ ಬಂದಿಳಿದಿದ್ದರು. ದೊಡ್ಡೆಟ್ಟಿ ವೃತ್ತದ ಬಳಿಯಿರೋ ಸೀತಾಲಕ್ಷ್ಮೀ ಲಾಡ್ಜ್‍ನಲ್ಲಿ ಬಿಂದು ಹೆಸರಲ್ಲಿ ರೂಂ ಬುಕ್ ಮಾಡಿದ್ರು. ಇವರೊಂದಿಗೆ ಬಂದಿದ್ದ ಪುರುಷ ಇವರನ್ನು ಬಿಟ್ಟು ವಾಪಸ್ ಹೋಗಿದ್ದನು. ಲಾಡ್ಜ್‍ನಲ್ಲಿ ಬಿರಿಯಾನಿ ಅದು ಇದು ಅಂತ ಭರ್ಜರಿ ಮಾಂಸದೂಟ ಮಾಡಿದ್ದ ಈ ಮಹಿಳೆಯರು ಯಾವುದೇ ವೃತ ಪಾಲಿಸಿರಲಿಲ್ಲ. 2 ದಿನ ಅಲ್ಲೇ ಉಳಿದುಕೊಂಡಿದ್ದ ಇವರು ಡಿಸೆಂಬರ್ 31ರಂದು ರೂಂ ಖಾಲಿ ಮಾಡಿದ್ರು. ಈ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ ಅಂತ ಲಾಡ್ಜ್ ಮಾಲೀಕ ಹರಿಹರನ್ ತಿಳಿಸಿದ್ದಾರೆ.

    ಬಿಂದು ಮತ್ತು ಕನಕದುರ್ಗ ಅಲ್ಲಿಂದ ನೇರವಾಗಿ ಅಯ್ಯಪ್ಪನ ಸನ್ನಿಧಿಗೆ ಹೊರಟಿದ್ರು. ಕುಟುಂಬದ ಜೊತೆ ಸಂಪರ್ಕದಲ್ಲಿರದೇ ಅಜ್ಞಾತವಾಗಿದ್ದ ಇವರು ಜನವರಿ 2ರಂದು ನಸುಕಿನಲ್ಲಿ ದೇವಾಲಯ ಪ್ರವೇಶಿಸಿದ್ರು. ಶತಶತಮಾನಗಳಿಂದ ವೀರಮಣಿಕಂಠನ ಸನ್ನಿಧಿಯಲ್ಲಿ ನಡೆದುಕೊಂಡು ಬಂದಿದ್ದ ಸಂಪ್ರದಾಯವನ್ನು ಮೀರಿ ದೇಶಾದ್ಯಂತ ಸುದ್ದಿಯಾದ್ರು. ಇದನ್ನೂ ಓದಿ:  ಕೊನೆಗೂ ಶಬರಿಮಲೆ ದೇವಾಲಯಕ್ಕೆ ಇಬ್ಬರು ಮಹಿಳೆಯರು ಎಂಟ್ರಿ!


    ಈ ಮಹಿಳೆಯರಿಗೆ ನಿಜವಾಗಿಯೂ ಅಯ್ಯಪ್ಪನ ಮೇಲೆ ಭಕ್ತಿ ಇದ್ದಿದ್ದರೆ, ವ್ರತ ಪಾಲಿಸಿ ದರ್ಶನಕ್ಕೆ ತೆರಳಬಹುದಿತ್ತು. ಆದ್ರೆ ಇವರು ಮಾಂಸದೂಟ ಸೇವಿಸಿ, ಯಾವ ವ್ರತವನ್ನೂ ಪಾಲಿಸದೇ ದೇವಸ್ಥಾನಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇವರಿಗೆ ಲಾಡ್ಜ್‍ನಲ್ಲಿ ಪೊಲೀಸರೇ ರೂಂ ಬುಕ್ ಮಾಡಿದ್ದು, ಎಲ್ಲವೂ ಕೇರಳ ಸರ್ಕಾರವೇ ಮಾಡಿಸಿತಾ ಅನ್ನೋ ಅನುಮಾನ ಹುಟ್ಟುಹಾಕಿದೆ. ಇದ್ರಿಂದಾಗಿ ದೇವರ ನಾಡು ಮತ್ತಷ್ಟು ಧಗಧಗಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಇಬ್ಬರು ಮಹಿಳೆಯರ ಪ್ರವೇಶ: ಶಬರಿಮಲೆ ಅಯ್ಯಪ್ಪ ದೇವಾಲಯ ಬಂದ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv