Tag: ವಿರೂಪಾಕ್ಷ

  • ಸಾಯಿಧರಮ್ ತೇಜ್ ನಟನೆಯ ‘ವಿರೂಪಾಕ್ಷ’ ಚಿತ್ರದ ಟೈಟಲ್ ಗ್ಲಿಂಪ್ಸ್ ರಿಲೀಸ್

    ಸಾಯಿಧರಮ್ ತೇಜ್ ನಟನೆಯ ‘ವಿರೂಪಾಕ್ಷ’ ಚಿತ್ರದ ಟೈಟಲ್ ಗ್ಲಿಂಪ್ಸ್ ರಿಲೀಸ್

    ‘ಸುಪ್ರೀಂ ಹೀರೋ’ ಸಾಯಿಧರಮ್ ತೇಜ್ ಅಭಿನಯದ ಪ್ಯಾನ್-ಇಂಡಿಯಾ ಮಿಸ್ಟಿಕ್ ಥ್ರಿಲ್ಲರ್ ಚಿತ್ರಕ್ಕೆ ‘ವಿರೂಪಾಕ್ಷ’ ಎಂಬ ಹೆಸರಿಡಲಾಗಿದ್ದು, ಟೈಟಲ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. ‘ವಿರೂಪಾಕ್ಷ’ ಚಿತ್ರವನ್ನು ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿ ಚಿತ್ರ ಎಲ್‌ಎಲ್‌ಪಿ ನಿರ್ಮಿಸುತ್ತಿದೆ. ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಬಿ.ವಿ.ಎಸ್.ಎನ್. ಪ್ರಸಾದ್ ನಿರ್ಮಿಸಿದರೆ, ಬಾಪಿನೀಡು ಪ್ರಸ್ತುತಪಡಿಸಿದ್ದಾರೆ.

    ಇದು 1990ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು, ಕಾಡಿಗೆ ಅಂಟಿಕೊಂಡಿರುವ ಹಳ್ಳಿಯೊಂದರಲ್ಲಿ ಮೂಢನಂಬಿಕೆಗಳ ಹೆಸರಿನಲ್ಲಿ ನಡೆಯುವ ಕೆಲವು ವಿಲಕ್ಷಣ ಘಟನೆಗಳನ್ನು ನಾಯಕ ಹೇಗೆ ನಿಭಾಯಿಸುತ್ತಾನೆ ಎಂಬುದು ತೋರಿಸಲಾಗಿದೆ.  ಇದನ್ನೂ ಓದಿ: ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’ ಸಿನಿಮಾ ಫಸ್ಟ್ ಲುಕ್ ರಿಲೀಸ್

    ಕಳೆದ ವರ್ಷ ಹೈದರಾಬಾದ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಿಂದ ಚೇತರಿಸಿಕೊಂಡಿರುವ ಸಾಯಿಧರಮ್​ ತೇಜ್ ಈ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಕಾರ್ತಿಕ್​ ದಂಡು ನಿರ್ದೇಶಿಸಿದ್ದು, ಶ್ಯಾಮ್​ ದತ್​ ಅವರ ಛಾಯಾಗ್ರಹಣ ಮತ್ತು ಕನ್ನಡದ ಅಜನೀಶ್​ ಲೋಕನಾಥ್​ ಸಂಗೀತವಿದೆ. ‘ವಿರೂಪಾಕ್ಷ’ ಚಿತ್ರವು ಏಪ್ರಿಲ್ 21, 2023ರಂದು ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಪ್ಯಾನ್​ ಇಂಡಿಯಾ ಚಿತ್ರವಾಗಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ನಾನೆಂದೂ ಬ್ರಿಗೇಡ್, ಬಿಜೆಪಿಗೆ ಕೈ ಕೊಟ್ಟಿಲ್ಲ, ಅವರೇ ನನ್ನನ್ನು ಬಿಟ್ಟಿದ್ದಾರೆ- ಕೆ ವಿರೂಪಾಕ್ಷಪ್ಪ

    ನಾನೆಂದೂ ಬ್ರಿಗೇಡ್, ಬಿಜೆಪಿಗೆ ಕೈ ಕೊಟ್ಟಿಲ್ಲ, ಅವರೇ ನನ್ನನ್ನು ಬಿಟ್ಟಿದ್ದಾರೆ- ಕೆ ವಿರೂಪಾಕ್ಷಪ್ಪ

    ಬೆಂಗಳೂರು: ನಾನು ಬ್ರಿಗೇಡ್ ಹಾಗೂ ಬಿಜೆಪಿಗೆ ಯಾವತ್ತೂ ಕೈಕೊಟ್ಟಿಲ್ಲ. ಬಿಜೆಪಿಯವರೇ ನನ್ನನ್ನ ಕೈಬಿಟ್ಟಿದ್ದಾರೆ. ಹೀಗಾಗಿ ಇಂದು ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿ, ಔಪಚಾರಿಕವಾಗಿ ಕಾಂಗ್ರೆಸ್ ಸೇರಿರುವುದಾಗಿ ಕೆ ವಿರೂಪಾಕ್ಷಪ್ಪ ಹೇಳಿದ್ದಾರೆ.

    ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ಅವರು, ಹಿಂದುಳಿದ ವರ್ಗದವರಿಗೆ ಬಿಜೆಪಿಯಲ್ಲಿ ಉಳಿಗಾಲವಿಲ್ಲ. ಈಶ್ವರಪ್ಪ ನಮ್ಮನ್ನು ಕೈ ಬಿಟ್ಟಿದ್ದಾರೆ. ಅವರೇನು ಅಂತಾ ನಿಮಗೆ ಗೊತ್ತಿದೆ. ನಾನು ಆಸೆ ಇಟ್ಟುಕೊಂಡಿದ್ದು ಅಲ್ಲಿ ಸಿಗಲಿಲ್ಲ. ಅದಕ್ಕೆ ಕಾಂಗ್ರೆಸ್ ಸೇರಿದ್ದೇನೆ. ನಾನು ಮತ್ತು ಶಿವರಾಮೇ ಗೌಡ ಇಂದು ಮಧ್ಯಾಹ್ನ ಅಧಿಕೃತವಾಗಿ ಪಕ್ಷದ ಕಚೇರಿಯಲ್ಲಿ ಸೇರ್ಪಡೆಯಾಗುತ್ತೇವೆ ಅಂದ್ರು.

    ರಾಯಣ್ಣ ಬ್ರಿಗೇಡ್ ಸ್ವಲ್ಪ ಕಾಲ ತಟಸ್ಥವಾಗಿತ್ತು. ಇದೀಗ ಮತ್ತೆ ಬ್ರಿಗೇಡ್ ಗೆ ಚಾಲನೆ ಸಿಗಲಿದೆ. ಬ್ರಿಗೇಡ್ ಒಂದು ಸ್ವಯಂ ಸಂಘಟನೆಯಾಗಿದೆ. ಚುನಾವಣೆ ಅಂತಾ ರಾಯಣ್ಣ ಬ್ರಿಗೇಡ್ ಸಭೆ ಮಾಡಿಲ್ಲ. ಚುನಾವಣೆ ಮುಗಿದ ಬಳಿ ಸಭೆ ಮಾಡ್ತೀವಿ ಅದಕ್ಕೆ ಈಶ್ವರಪ್ಪಗೂ ಆಹ್ವಾನ ಮಾಡ್ತೇವೆ. ಸಭೆಗೆ ಬರೋದು ಬಿಡೋದು ಅವರಿಗೆ ಬಿಟ್ಟಿದ್ದು ಅಂದ್ರು.

    ಕೊಪ್ಪಳ, ರಾಯಚೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡ್ತೇನೆ. ಕಾಂಗ್ರೆಸ್ ಪಕ್ಷವನ್ನು ಬಲ ಪಡಿಸಿ, ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇನೆ ಅಂತ ವಿರೂಪಾಕ್ಷಪ್ಪ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಬ್ರಿಗೇಡ್ ರಾಜ್ಯಾಧ್ಯಕ್ಷ ಕೆ ವಿರೂಪಾಕ್ಷಪ್ಪ ಅವರು ಸಿಂಧನೂರಿನಿಂದ ಟಿಕೆಟ್ ಬೇಡಿಕೆ ಇಟ್ಟಿದ್ದರು. ಆದ್ರೆ ಇದೀಗ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ಸೇರಿದ್ದಾರೆ. ಇವರು ಈಶ್ವರಪ್ಪರ ಸಲಹೆಯಂತೆ ರಾಯಣ್ಣ ಬ್ರಿಗೇಡ್ ಮುನ್ನಡೆಸಿದ್ದರು. ಇವರ ಜೊತೆ ಶಿವರಾಮೇ ಗೌಡ ಕೂಡ ಕಾಂಗ್ರೆಸ್ ಸೇರಿದ್ದಾರೆ.

  • ಬಳ್ಳಾರಿಯಲ್ಲಿ ವಿದೇಶಿಗರ ದರ್ಬಾರ್ – ಹಂಪಿ ದೇಗುಲದಲ್ಲೇ ಮದ್ಯಾರಾಧನೆ

    ಬಳ್ಳಾರಿಯಲ್ಲಿ ವಿದೇಶಿಗರ ದರ್ಬಾರ್ – ಹಂಪಿ ದೇಗುಲದಲ್ಲೇ ಮದ್ಯಾರಾಧನೆ

    – ಚಪ್ಪಲಿ ಹಾಕಿ ಭಾರತೀಯ ಸಂಸ್ಕೃತಿಗೆ ಅಪಮಾನ

    ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿ ಬರಬರುತ್ತಾ ಅನೈತಿಕ ತಾಣವಾಗುತ್ತಿದೆಯಾ ಎಂಬ ಅನುಮಾನಗಳು ಇದೀಗ ಮೂಡಿವೆ. ಯಾಕಂದ್ರೆ ಮಂಗಳವಾರ ಸಂಜೆ ವಿದೇಶಿ ಪ್ರವಾಸಿಗರು ವಿಶ್ವ ಪ್ರಸಿದ್ದಿ ವಿರೂಪಾಕ್ಷೇಶ್ವರ ದೇವಾಲಯದಲ್ಲೇ ಕೈಯಲ್ಲಿ ಬಿಯರ್ ಬಾಟಲಿ ಹಿಡಿದುಕೊಂಡು ದೇವಸ್ಥಾನದ ಆವರಣದಲ್ಲೆಲ್ಲಾ ಮದ್ಯಸೇವನೆ ಮಾಡುತ್ತಾ ಓಡಾಡಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

    ಅಲ್ಲದೇ ದೇವಸ್ಥಾನದ ಪ್ರಾಗಂಣದಲ್ಲಿ ಚಪ್ಪಲಿ ಧರಿಸಿಕೊಂಡು ನಡೆದಾಡಿದ್ದು ಸಹ ವಿದೇಶಿ ಪ್ರವಾಸಿಗರ ಸ್ವೇಚ್ಛಾಚಾರವನ್ನು ಎತ್ತಿತೋರಿಸುತ್ತಿತ್ತು. ದೇವಸ್ಥಾನದಲ್ಲಿ ಹತ್ತಾರು ಕಾವಲುಗಾರರು, ಹಾಗೂ ಧಾರ್ಮಿಕ ದತ್ತಿ ಇಲಾಖೆ ಕಚೇರಿಯಿದ್ದರೂ ಸಹ ಯಾರೊಬ್ಬರು ಸಹ ವಿದೇಶಿ ಪ್ರವಾಸಿಗರ ಈ ವರ್ತನೆಯನ್ನು ವಿರೋಧಿಸದೇ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

    ದೇವಸ್ಥಾನದ ಆವರಣದಲ್ಲಿ ಮದ್ಯಪಾನ-ಚಪ್ಪಲಿಯನ್ನು ನಿಷೇಧಿಸಿದ್ರೂ ವಿದೇಶಿ ಪ್ರವಾಸಿಗರು ಕ್ಯಾರೆ ಎನ್ನದೇ ದುರ್ವವರ್ತನೆ ತೋರಿದ್ದಾರೆ. ವಿದೇಶಿ ಪ್ರವಾಸಿಗರು ಪ್ರವಾಸದ ನೆಪದಲ್ಲಿ ಹಂಪಿಯಲ್ಲಿ ಸ್ವೇಚ್ಛಾಚಾರದಿಂದ ವರ್ತನೆ ಮಾಡುತ್ತಿದ್ದಾರೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.