Tag: ವಿರೋಧ

  • ‘ರಾಮಾಯಣ’ದಲ್ಲಿ ಸಾಯಿ ಪಲ್ಲವಿ: ಸಿನಿಮಾ ನೋಡಲ್ಲ ಎಂದ ನೆಟ್ಟಿಗರು

    ‘ರಾಮಾಯಣ’ದಲ್ಲಿ ಸಾಯಿ ಪಲ್ಲವಿ: ಸಿನಿಮಾ ನೋಡಲ್ಲ ಎಂದ ನೆಟ್ಟಿಗರು

    ಬಾಲಿವುಡ್ ನಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣ ಸಿನಿಮಾದಲ್ಲಿ ಸಾಯಿ ಪಲ್ಲವಿ (Sai Pallavi) ಅವರು ಸೀತಾ ಪಾತ್ರ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿ ಸಾಕಷ್ಟು ನೆಟ್ಟಿಗರು ವಿರೋಧ ವ್ಯಕ್ತ ಪಡಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಂದಾಗ ಹಿಂದೂ ವಿರೋಧಿ ಹೇಳಿಕೆಯನ್ನು ಸಾಯಿ ಪಲ್ಲವಿ ನೀಡಿದ್ದರು. ಈ ಕಾರಣದಿಂದಾಗಿ ಭಾರೀ ವಿರೋಧವನ್ನು ಸೋಷಿಯಲ್ ಮೀಡಿಯಾದಲ್ಲಿ ಮಾಡಲಾಗುತ್ತಿದೆ.

    ರಾಮಾಯಣ ಸಿನಿಮಾದ ಬಜೆಟ್, ಸಂಭಾವನೆಯದ್ದೇ ಸುದ್ದಿ. ಮೂರು ಪಾರ್ಟ್ ನಲ್ಲಿ ಈ ರಾಮಾಯಣ ಸಿನಿಮಾ ಮೂಡಿ ಬರಲಿದ್ದು, ಒಟ್ಟು ಬಜೆಟ್ ಎಷ್ಟು, ಯಾರಿಗೆ ಎಷ್ಟು ಸಂಭಾವನೆ (Remuneration) ನೀಡಲಾಗಿದೆ, ಅತೀ ಹೆಚ್ಚು ಸಂಭಾವನೆ ಪಡೆದ ನಟ ಯಾರು ಹೀಗೆ ಸಿನಿ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಅಧಿಕೃತವಾಗಿ ಚಿತ್ರತಂಡ ಹೇಳಿಕೊಳ್ಳದೇ ಇದ್ದರೂ, ನಟ, ನಟಿಯರು ಭರ್ಜರಿ ಸಂಭಾವನೆಯನ್ನೇ ಪಡೆದಿದ್ದಾರೆ.

    ರಾಮನ ಪಾತ್ರದಲ್ಲಿ ಮಿಂಚಲಿರುವ ಬಾಲಿವುಡ್ ನಟ ರಣಬೀರ್ ಕಪೂರ್ ಬರೋಬ್ಬರಿ 75 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಮೂರು ಪಾರ್ಟ್ ಸೇರಿ ಇವರಿಗೆ 225 ಕೋಟಿ ರೂಪಾಯಿ ಸಂದಾಯವಾಗಲಿದೆಯಂತೆ. ರಾವಣನ ಪಾತ್ರಧಾರಿ ಯಶ್ (Yash) ಮೂರೂ ಪಾರ್ಟ್ ಸೇರಿ 150 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರಂತೆ. ನಟಿ ಸಾಯಿ ಪಲ್ಲವಿ 18 ಕೋಟಿ ರೂಪಾಯಿ ನೀಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಾವುದೂ ಖಚಿತ ಮಾಹಿತಿ ಅಲ್ಲ ಎನ್ನುವುದು ನೆನಪಿನಲ್ಲಿಡಬೇಕಾದ ಸಂಗತಿ.

     

    ಈ ನಡುವೆ ಸಿನಿಮಾಗಾಗಿ ರಣ್‌ಬೀರ್ (Ranbir Kapoor) ಹಳ್ಳಿಯಲ್ಲಿ ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ರಾಮನ ಅವತಾರದಲ್ಲಿ ಬರಲು ‘ಅನಿಮಲ್‌’ ಹೀರೋ ಭಾರೀ ತಯಾರಿ ಮಾಡಿಕೊಳ್ತಿದ್ದಾರೆ. ‘ದಂಗಲ್’ ಸಿನಿಮಾ ನಂತರ ರಾಮಾಯಣ (Ramayana) ಚಿತ್ರಕ್ಕಾಗಿ ಡೈರೆಕ್ಟರ್ ಹ್ಯಾಟ್ ತೊಟ್ಟಿದ್ದಾರೆ ನಿತೇಶ್ ತಿವಾರಿ. ಚಿತ್ರತಂಡ ಕೂಡ ಪಾತ್ರಕ್ಕಾಗಿ ಏನೆಲ್ಲಾ ತಯಾರಿ ಮಾಡಲು ತಿಳಿಸಿದ್ದಾರೋ ಅದನ್ನು ಪ್ರಾಮಾಣಿಕವಾಗಿ ರಣ್‌ಬೀರ್ ಕಪೂರ್ ಮಾಡುತ್ತಿದ್ದಾರೆ. ‘ಆದಿಪುರುಷ್’ (Adipurush Film) ಸಿನಿಮಾದಂತೆ ತಮ್ಮ ಸಿನಿಮಾ ಆಗಬಾರದು ಎಂದು ಎಚ್ಚರಿಕೆಯಿಂದ ರಣ್‌ಬೀರ್ ಹೆಜ್ಜೆ ಇಡುತ್ತಿದ್ದಾರೆ.

  • ‘ದಿ ಕೇರಳ ಸ್ಟೋರಿ’ ಸಿನಿಮಾಗೆ ಭಾರೀ ವಿರೋಧ: ಮೇ 5ರಂದು ರಿಲೀಸ್ ಅನುಮಾನ?

    ‘ದಿ ಕೇರಳ ಸ್ಟೋರಿ’ ಸಿನಿಮಾಗೆ ಭಾರೀ ವಿರೋಧ: ಮೇ 5ರಂದು ರಿಲೀಸ್ ಅನುಮಾನ?

    ಪೋಕಲ್ಪಿತ ಕಥೆ ಹಾಗೂ ಕೇರಳ ರಾಜ್ಯಕ್ಕೇ ಕೆಟ್ಟ ಹೆಸರು ತರುವ ನಿಟ್ಟಿನಲ್ಲಿ  ದಿ ಕೇರಳ ಸ್ಟೋರಿ (The Kerala Story) ಸಿನಿಮಾ ಮಾಡಲಾಗಿದೆ ಎನ್ನುವ ಆರೋಪ ಹಲವರದ್ದು. ಒಂದು ಧರ್ಮವನ್ನು ಇಕ್ಕಟ್ಟಿಗೆ ಸಿಲುಕಿಸುವಂತಹ ಇಂತಹ ಚಿತ್ರವನ್ನು ರಿಲೀಸ್ ಮಾಡದಂತೆ ಕೇರಳದ ಅನೇಕ ಸಂಘಟನೆಗಳು ಒತ್ತಾಯಿಸಿವೆ. ಈ ಚಿತ್ರಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ಸಿನಿಮಾ ಮೇ 5ಕ್ಕೆ ಬಿಡುಗಡೆ (Release) ಆಗತ್ತಾ ಎನ್ನುವ ಅನುಮಾನ ಕೂಡ ಮೂಡಿದೆ.

    ಕಾಂಗ್ರೆಸ್ ಜೊತೆಗೆ ಡೆಮಾಕ್ರೆಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (DYFI) ಕೂಡ ವಿರೋಧವನ್ನು ವ್ಯಕ್ತ ಪಡಿಸಿದ್ದು, ಸಂಘ ಪರಿವಾರದವರು ಸೇರಿಕೊಂಡು, ಒಂದು ಸಮುದಾಯದ ವಿರುದ್ಧ ಕೆಟ್ಟ ಅಭಿಪ್ರಾಯ ಹುಟ್ಟುವಂತೆ ಈ ಸಿನಿಮಾವನ್ನು ತೋರಿಸಲು ಹೊರಟಿದ್ದಾರೆ. ಇದು ಕೇರಳ ರಾಜ್ಯಕ್ಕೂ ಅಪಮಾನ ಮಾಡುವಂತಹ ಚಿತ್ರ. ಹಾಗಾಗಿ ಕೂಡಲೇ ಬಿಡುಗಡೆಯನ್ನು ತಡೆಯಬೇಕು ಎಂದು ಮನವಿ ಮಾಡಿವೆ. ಇದನ್ನೂ ಓದಿ:ತಪ್ಪೆಲ್ಲ ನನ್ನದೇ ಎಂದು ಮಾಜಿ ಪ್ರೇಯಸಿಯರ ಬಗ್ಗೆ ಮೌನ ಮುರಿದ ಸಲ್ಮಾನ್ ಖಾನ್

    ಎರಡು ದಿನಗಳ ಹಿಂದೆಯಷ್ಟೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಲವ್ ಜಿಹಾದ್ ಸುತ್ತಾ ಹೆಣೆದಿರುವ ಕಥಾ ಹಂದರ ಬಿಜೆಪಿಗೆ ಚುನಾವಣೆ ಅಸ್ತ್ರವಾಗಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಮೇ 05 ರಂದು ದೇಶದಾದ್ಯಂತ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಹಲವು ಕಡೆ ವಿಶೇಷ ಪ್ರದರ್ಶನವನ್ನೂ ಆಯೋಜಿಸಲಾಗಿದೆ.

    ಈ ಸಿನಿಮಾದಲ್ಲಿ ಲವ್ ಜಿಹಾದ್ ಜೊತೆಗೆ ಐಸಿಸ್ ಸೇರುವ ಮುನ್ನ ಮಾಡಲಾಗುವ ಬ್ರೈನ್ ವಾಷ್ ಸೇರಿದಂತೆ ಹತ್ತಾರು ವಿಷಯಗಳನ್ನು ಕಥಾಹಂದರದಲ್ಲಿ ಜೋಡಿಸಲಾಗಿದೆಯಂತೆ. ಕೇರಳದ ಯುವತಿಯರ ನಾಪತ್ತೆ ಆದ ಬಳಿಕ ಲವ್ ಜಿಹಾದ್ (Love Jihad) ಬಲೆ, ಐಸಿಸ್ ಸೇರಿದ ಕಾಲೇಜು ಯುವತಿಯರ ರಿಯಲ್ ಸ್ಟೋರಿಯನ್ನು ತೆರೆಯ ಮೇಲೆ ತಂದಿರೋದಾಗಿ ನಿರ್ದೇಶಕರು ಹೇಳಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷವು ಈ ವಿಷಯವನ್ನು ಇಟ್ಟುಕೊಂಡು ಹಲವು ಲಾಭಗಳನ್ನು ಪಡೆದುಕೊಳ್ಳಲಿದೆ ಎನ್ನುವುದು ಲೆಕ್ಕಾಚಾರ.

    ಕೇರಳದಿಂದ ವಿದೇಶಕ್ಕೆ ಉದ್ಯೋಗ ಅರಸಿಕೊಂಡು ಹೋದ ಮಹಿಳೆಯ ಕಥೆಯನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ವಿವಾದಿತ (Controversy) ಅಂಶಗಳು ಇವೆ ಎಂದು ವಿರೋಧ ವ್ಯಕ್ತವಾಗಿತ್ತು. ಬುರ್ಖಾ ಧರಿಸಿದ ಪ್ರಧಾನ ಪಾತ್ರಧಾರಿ ‘ನಾನು ಶಾಲಿನಿ, ನರ್ಸ್ ಆಗಿ ಜನಸೇವೆ ಮಾಡಬೇಕು ಅಂತಿದ್ದೆ. ಆದರೆ, ನಾನು ಫಾತಿಮಾ ಆಗಿ ಐಸಿಎಸ್ ಉಗ್ರಸಂಘಟನೆಗೆ ಸೇರಿಕೊಂಡು ಭಯೋತ್ಪಾದಕಿ ಆಗಿದ್ದೇನೆ’ ಈ ರೀತಿಯ ಸಂಭಾಷಣೆ ಇತ್ತು. ಇಂತಹ ಮಾತು ಮತ್ತು ಕಥೆ ವಿವಾದಕ್ಕೀಡಾಗಿತ್ತು.

  • ‘ದಿ ಕೇರಳ ಸ್ಟೋರಿ’ ಸಿನಿಮಾ ವಿರೋಧಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

    ‘ದಿ ಕೇರಳ ಸ್ಟೋರಿ’ ಸಿನಿಮಾ ವಿರೋಧಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

    ಲಯಾಳಂನಲ್ಲಿ ತಯಾರಾದ ‘ದಿ ಕೇರಳ ಸ್ಟೋರಿ’ (The Kerala Story) ಚಿತ್ರಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸಿನಿಮಾದಾಚೆ ಈ ಸಿನಿಮಾವನ್ನು ರಾಜಕಾರಣದ ಪಡಸಾಲೆಗೆ ಎಳೆದು ತಂದಿರುವ ಹಿನ್ನೆಲೆಯಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಕೂಡ ಚಿತ್ರವನ್ನು ವಿರೋಧಿಸಿದ್ದಾರೆ. ಹಲವಾರು ತಪ್ಪು ಕಲ್ಪನೆಗಳನ್ನು ಈ ಸಿನಿಮಾದಲ್ಲಿ ಬಿಂಬಿಸಿರುವುದರಿಂದ ಕೇರಳಕ್ಕೆ ಇದು ಕೆಟ್ಟ ಹೆಸರು ತರುತ್ತಿದೆ ಎಂದಿದ್ದಾರೆ.  ಮೇ 5 ರಂದು ದೇಶದಾದ್ಯಂತ ರಿಲೀಸ್ ಆಗುತ್ತಿರುವ ಈ ಸಿನಿಮಾವನ್ನು ತಡೆಯುವಂತೆ ಕೇರಳ ಕಾಂಗ್ರೆಸ್ (Congress) ಪಕ್ಷ ಸರಕಾರವನ್ನು ಒತ್ತಾಯಿಸಿದೆ. ಹಸಿ ಸುಳ್ಳುಗಳೇ ತುಂಬಿರುವ ಈ ಸಿನಿಮಾ ಸಮಾಜವನ್ನು ಹಾದಿ ತಪ್ಪಿಸುವುದರಿಂದ ಚಿತ್ರವನ್ನು ರಿಲೀಸ್ ಮಾಡಲು ಬಿಡಬಾರದು ಎಂದು ಮನವಿ ಸಲ್ಲಿಸಿದೆ.

    ಕಾಂಗ್ರೆಸ್ ಜೊತೆಗೆ ಡೆಮಾಕ್ರೆಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (DYFI) ಕೂಡ ವಿರೋಧವನ್ನು ವ್ಯಕ್ತ ಪಡಿಸಿದ್ದು, ಸಂಘ ಪರಿವಾರದವರು ಸೇರಿಕೊಂಡು, ಒಂದು ಸಮುದಾಯದ ವಿರುದ್ಧ ಕೆಟ್ಟ ಅಭಿಪ್ರಾಯ ಹುಟ್ಟುವಂತೆ ಈ ಸಿನಿಮಾವನ್ನು ತೋರಿಸಲು ಹೊರಟಿದ್ದಾರೆ. ಇದು ಕೇರಳ ರಾಜ್ಯಕ್ಕೂ ಅಪಮಾನ ಮಾಡುವಂತಹ ಚಿತ್ರ. ಹಾಗಾಗಿ ಕೂಡಲೇ ಬಿಡುಗಡೆಯನ್ನು ತಡೆಯಬೇಕು ಎಂದು ಮನವಿ ಮಾಡಿವೆ. ಇದನ್ನೂ ಓದಿ:ಪತಿ ಸಿದ್‌ಗಾಗಿ ಕೈಯಾರೇ ಉಪಾಹಾರ ರೆಡಿ ಮಾಡಿದ ಕಿಯಾರಾ

    ಎರಡು ದಿನಗಳ ಹಿಂದೆಯಷ್ಟೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಲವ್ ಜಿಹಾದ್ ಸುತ್ತಾ ಹೆಣೆದಿರುವ ಕಥಾ ಹಂದರ ಬಿಜೆಪಿಗೆ ಚುನಾವಣೆ ಅಸ್ತ್ರವಾಗಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಮೇ 05 ರಂದು ದೇಶದಾದ್ಯಂತ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಹಲವು ಕಡೆ ವಿಶೇಷ ಪ್ರದರ್ಶನವನ್ನೂ ಆಯೋಜಿಸಲಾಗಿದೆ.

    ಈ ಸಿನಿಮಾದಲ್ಲಿ ಲವ್ ಜಿಹಾದ್ ಜೊತೆಗೆ ಐಸಿಸ್ ಸೇರುವ ಮುನ್ನ ಮಾಡಲಾಗುವ ಬ್ರೈನ್ ವಾಷ್ ಸೇರಿದಂತೆ ಹತ್ತಾರು ವಿಷಯಗಳನ್ನು ಕಥಾಹಂದರದಲ್ಲಿ ಜೋಡಿಸಲಾಗಿದೆಯಂತೆ. ಕೇರಳದ ಯುವತಿಯರ ನಾಪತ್ತೆ ಆದ ಬಳಿಕ ಲವ್ ಜಿಹಾದ್ (Love Jihad) ಬಲೆ, ಐಸಿಸ್ ಸೇರಿದ ಕಾಲೇಜು ಯುವತಿಯರ ರಿಯಲ್ ಸ್ಟೋರಿಯನ್ನು ತೆರೆಯ ಮೇಲೆ ತಂದಿರೋದಾಗಿ ನಿರ್ದೇಶಕರು ಹೇಳಿದ್ದಾರೆ. ಹೀಗಾಗಿ ಬಿಜೆಪಿ ಪಕ್ಷವು ಈ ವಿಷಯವನ್ನು ಇಟ್ಟುಕೊಂಡು ಹಲವು ಲಾಭಗಳನ್ನು ಪಡೆದುಕೊಳ್ಳಲಿದೆ ಎನ್ನುವುದು ಲೆಕ್ಕಾಚಾರ.

    ಕೇರಳದಿಂದ ವಿದೇಶಕ್ಕೆ ಉದ್ಯೋಗ ಅರಸಿಕೊಂಡು ಹೋದ ಮಹಿಳೆಯ ಕಥೆಯನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ವಿವಾದಿತ (Controversy) ಅಂಶಗಳು ಇವೆ ಎಂದು ವಿರೋಧ ವ್ಯಕ್ತವಾಗಿತ್ತು. ಬುರ್ಖಾ ಧರಿಸಿದ ಪ್ರಧಾನ ಪಾತ್ರಧಾರಿ ‘ನಾನು ಶಾಲಿನಿ, ನರ್ಸ್ ಆಗಿ ಜನಸೇವೆ ಮಾಡಬೇಕು ಅಂತಿದ್ದೆ. ಆದರೆ, ನಾನು ಫಾತಿಮಾ ಆಗಿ ಐಸಿಎಸ್ ಉಗ್ರಸಂಘಟನೆಗೆ ಸೇರಿಕೊಂಡು ಭಯೋತ್ಪಾದಕಿ ಆಗಿದ್ದೇನೆ’ ಈ ರೀತಿಯ ಸಂಭಾಷಣೆ ಇತ್ತು. ಇಂತಹ ಮಾತು ಮತ್ತು ಕಥೆ ವಿವಾದಕ್ಕೀಡಾಗಿತ್ತು.

  • ದೈವಾರಾಧನೆ ಕುರಿತು ಸಿನಿಮಾ ಮಾಡಿದರೆ ವಿರೋಧ: ದೈವಾರಾಧಕರು

    ದೈವಾರಾಧನೆ ಕುರಿತು ಸಿನಿಮಾ ಮಾಡಿದರೆ ವಿರೋಧ: ದೈವಾರಾಧಕರು

    ತುಳುನಾಡ ದೈವಾರಾಧನೆ ಹೆಸರಿನಲ್ಲಿ ದುಡ್ಡು ಮಾಡುವವರ ವಿರುದ್ಧ ದೈವಾರಾಧಕರು ತೊಡೆತಟ್ಟಿದ್ದಾರೆ. ಇನ್ಮುಂದೆ ವ್ಯಾಪಾರದ ಹೆಸರಿನಲ್ಲಿ ದೈವಾರಾಧನೆ ನಡೆಸಿದವರು, ಮುಂದೊಂದು ದಿನ ಕಾನೂನು ಕ್ರಮ ಹಾಗೂ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ದೈವಾರಾಧಕರು ತಿಳಿಸಿದ್ದಾರೆ. ದೈವಾರಾಧನೆ ಸಿನಿಮಾ ಮಾಡಿದರೆ, ಮುಲಾಜಿಲ್ಲದೇ ವಿರೋಧಿಸಲಾಗುವುದು ಎಂದಿದ್ದಾರೆ.

    ದೈವದ ಕೋಲಾ (Buta Kola), ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂ. ಲೂಟಿ ಮಾಡುತ್ತಿದ್ದಾರೆ ಎಂದು ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿಗಳು ಆರೋಪಿಸಿವೆ. ದೈವ ನಿಂದನೆ ಮಾಡಿ ದಂಧೆ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿವೆ. ಇದನ್ನೂ ಓದಿ: `ಗಾಲ್ವಾನ್ ಹಾಯ್’ ಎಂದ ನಟಿಗೆ ಚಳಿ ಬಿಡಿಸಿದ ಸಚಿವ – ಕಾನೂನು ಕ್ರಮಕ್ಕೆ ಚಿಂತನೆ

    ಕರಾವಳಿ (Karavali) ಹೊರಗಿನ ದೈವಾರಾಧನೆ ವಿರುದ್ಧ ಮಂಗಳೂರಿನ ಜನ ಸಿಡಿದೆದ್ದಿದ್ದಾರೆ. ದೈವಗಳ ಹೆಸರಲ್ಲಿ ದಂಧೆಗೆ ಇಳಿದವರ ವಿರುದ್ಧ ಮಂಗಳೂರಿನ ಕುತ್ತಾರು ಬಳಿಕ ಕೊರಗಜ್ಜನ (Koragajja) ಆದಿಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ತುಳುನಾಡ ದೈವಾರಾಧನ ಸಂರಕ್ಷಣಾ ಯುವವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿ ಮಂಗಳೂರು (Mangaluru) ಹಾಗೂ ಸಮಸ್ತ ದೈವಾರಾಧಕರಿಂದ ಪ್ರಾರ್ಥನೆ ಸಲ್ಲಿಸಲಾಗಿದೆ. ಮೈಸೂರು ಮೂಲದ ಕೆಲ ಭಕ್ತರೂ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

    ಆದಿ ಸ್ಥಳ ಮತ್ತು ತುಳುನಾಡು ಹೊರತುಪಡಿಸಿ ಕೊರಗಜ್ಜನ ಪ್ರತಿಷ್ಠೆಗೆ ಅವಕಾಶ ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಕೊರಗಜ್ಜ ಆದಿಸ್ಥಳ ಬಿಟ್ಟು ಬೇರೆ ಕಡೆ ಆರಾಧನೆ ಮಾಡುತ್ತಿರೋದು ವ್ಯವಹಾರದ ಉದ್ದೇಶ. ಇದನ್ನ ತಡೆದ ಮೈಸೂರಿನ ಕೆಲವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಸಿನಿಮಾ ಮತ್ತು ಸಾಮಾಜಿಕ ತಾಣಗಳ ಕಾರಣದಿಂದ ಈ ದಂಧೆ ನಡೀತಾ ಇದೆ. ಇದನ್ನ ನಿಲ್ಲಿಸದೇ ಇದ್ದರೇ ಉಗ್ರ ಹೋರಾಟ ಮಾಡುವುದಾಗಿ ಕರಾವಳಿಯ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಟೀಸರ್ ಗೆ ಭಾರೀ ವಿರೋಧ

    ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಟೀಸರ್ ಗೆ ಭಾರೀ ವಿರೋಧ

    ಒಂದಿಲ್ಲೊಂದು ಕಾರಣಕ್ಕಾಗಿ ವಿವಾದ ಮಾಡಿಕೊಳ್ಳುತ್ತಲೇ ಇರುತ್ತಾರೆ ಬಾಲಿವುಡ್ ನಟಿ ಕಂಗನಾ ರಣಾವತ್. ಅವರ ಬಹುತೇಕ ವಿವಾದಗಳು ಸಿದ್ಧಾಂತ ಮತ್ತು ನಿಲುವುಗಳ ತಳಹದಿಯಲ್ಲೇ ಹುಟ್ಟಿಕೊಂಡಿರುತ್ತವೆ. ಆದರೂ, ಅವುಗಳನ್ನು ಎದುರಿಸುತ್ತಲೇ ಮತ್ತೊಂದು ವಿವಾದಕ್ಕೆ ಜಂಪ್ ಆಗಿರುತ್ತಾರೆ. ಈಗ ಆಗಿರುವುದು ಅದೇ, ಅವರ ಧಾಕಡ್ ಸಿನಿಮಾ ಮಕಾಡೆ ಮಲಗಿದೆ. ನಿರ್ಮಾಪಕರನ್ನು ಅವರು ಆರ್ಥಿಕ ಸಂಕಷ್ಟಕ್ಕೀಡು ಮಾಡಿದ್ದಾರೆ ಎನ್ನುವ ಆರೋಪವಿದೆ. ಅದೆಲ್ಲವನ್ನೂ ಬಿಟ್ಟು ಕಂಗನಾ ಹೊಸ ಸಿನಿಮಾಗೆ ಸಹಿ ಮಾಡಿದ್ದಾರೆ.

    ಹೌದು, ಮೊನ್ನೆಯಷ್ಟೇ ಕಂಗನಾ ರಣಾವತ್ ನಟನೆಯ ಹೊಸ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಎಮರ್ಜೆನ್ಸಿ ಘಟನೆಯನ್ನಿಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ. ಹೀಗಾಗಿಯೇ ಚಿತ್ರಕ್ಕೆ ಎಮರ್ಜೆನ್ಸಿ ಎಂದೇ ಹೆಸರಿಟ್ಟಿದ್ದಾರೆ. ಹಾಗಾಗಿ ಈ ಸಿನಿಮಾ ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಟೀಸರ್ ನೋಡಿ ವಿರೋಧ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ:ರಣ್‌ವೀರ್ ಸಂಪೂರ್ಣ ಬೆತ್ತಲೆ:ಕಣ್ಣುಮುಚ್ಚಿಕೊಂಡ ದೀಪಿಕಾ

    ಎಮರ್ಜೆನ್ಸಿ ಕುರಿತಾಗಿ ಸಿನಿಮಾ ಮಾಡುತ್ತಿದ್ದರು, ಅದನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎನ್ನುವುದು ಕಾಂಗ್ರೆಸ್ ಪಕ್ಷದ ಆರೋಪ. ಅದರಲ್ಲೂ ಸಮಾಜಕ್ಕೆ ತಪ್ಪು ಸಂದೇಶಗಳನ್ನು ಕೊಡುವ ಸಿನಿಮಾಗಳಿದ್ದರೆ, ಮೊದಲು ಅದರಲ್ಲಿ ಕಂಗನಾ ಕಾಣಿಸಿಕೊಳ್ಳುತ್ತಾರೆ. ಅಲ್ಲದೇ, ಕಂಗನಾ ಪಾತ್ರವು ಇಂದಿರಾ ಗಾಂಧಿ ಅವರನ್ನು ಅವಮಾನಿಸುವಂತ ರೀತಿಯಲ್ಲಿ ಇದೆ ಎಂದು ಆರೋಪಿಸಿ, ಟೀಸರ್ ಗೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಈ ಕೂಡಲೇ ಈ ಸಿನಿಮಾವನ್ನು ನಿಲ್ಲಿಸಬೇಕೆಂದು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಾಯಿ ಪಲ್ಲವಿ ನಟನೆಯ ‘ಗಾರ್ಗಿ’ಗೆ ಕರ್ನಾಟಕದಲ್ಲಿ ಧರ್ಮ ಸಂಕಟ

    ಸಾಯಿ ಪಲ್ಲವಿ ನಟನೆಯ ‘ಗಾರ್ಗಿ’ಗೆ ಕರ್ನಾಟಕದಲ್ಲಿ ಧರ್ಮ ಸಂಕಟ

    ದೇ ಜುಲೈ 15 ರಂದು ದೇಶಾದ್ಯಂತ ಸಾಯಿ ಪಲ್ಲವಿ ನಟನೆಯ ಗಾರ್ಗಿ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಹಿಂದೆ ಸಾಯಿ ಪಲ್ಲವಿ ನೀಡಿದ ಹೇಳಿಕೆಯಿಂದಾಗಿ ಚಿತ್ರಕ್ಕೆ ಧರ್ಮ ಸಂಕಟ ಎದುರಾಗಿದೆ. ಕಾಶ್ಮೀರ ಪಂಡಿತರ ಹತ್ಯೆಯನ್ನು ಗೋವು ಹತ್ಯೆ ಮಾಡುವವರಿಗೆ ಹೋಲಿಸಿ ಹೇಳಲಾದ ಹೇಳಿಕೆಯನ್ನು ಮುಂದಿಟ್ಟುಕೊಂಡು ಗಾರ್ಗಿ ಸಿನಿಮಾವನ್ನು ಬೈಕಾಟ್ ಮಾಡುವಂತೆ ಹಿಂದೂ ಪರ ಸಂಘಟನೆಗಳು ಕರೆ ನೀಡಿವೆ.

    ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಕನ್ನಡದಲ್ಲಿ ಈ ಸಿನಿಮಾವನ್ನು ರಕ್ಷಿತ್ ಶೆಟ್ಟಿ ಅರ್ಪಿಸುತ್ತಿದ್ದಾರೆ. ಅಲ್ಲದೇ, ಈ ಸಿನಿಮಾವನ್ನು ಕನ್ನಡದಲ್ಲಿ ತಾವು ಏಕೆ ಬಿಡುಗಡೆ ಮಾಡುತ್ತಿದ್ದೇವೆ ಎನ್ನುವ ಕುರಿತಾಗಿಯೂ ಈಗಾಗಲೇ ರಕ್ಷಿತ್ ಹೇಳಿಕೊಂಡಿದ್ದಾರೆ. ಆದರೆ, ಯಾರೇ ಈ ಸಿನಿಮಾವನ್ನು ಕನ್ನಡದಲ್ಲಿ ರಿಲೀಸ್ ಮಾಡಿದರೂ, ಆ ಸಿನಿಮಾವನ್ನು ತಾವು ನೋಡುವುದಿಲ್ಲ ಎಂದು ಹಿಂದೂಪರ ಸಂಘಟನೆಯವರು ಅನೇಕ ಸೋಷಿಯಲ್ ಮೀಡಿಯಾ ಪೇಜ್ ಗಳಲ್ಲಿ ಟ್ರೋಲ್ ಮಾಡುತ್ತಿದ್ದಾರೆ. ಇದನ್ನೂ ಓದಿ:ಸಮಂತಾ ಮೊದಲ ಸಂಭಾವನೆ ಕೇಳಿದ್ರೆ ನೀವು ಶಾಕ್‌ ಆಗುತ್ತೀರಾ

    ರಕ್ಷಿತ್ ಮುಖ ನೋಡಿ ಚಾರ್ಲಿ ನೋಡ್ತೀವಿ . ಆದರೆ, ಗಾರ್ಗಿ ಸಿನಿಮಾ ನೋಡಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನವನ್ನೇ ಕೆಲವರು ಶುರು ಮಾಡಿದ್ದಾರೆ. ಸಾಯಿ ಪಲ್ಲವಿಯ ಸಿನಿಮಾವನ್ನು ಮಲಗಿಸಿಯೇ ಬಿಡಲು ಹಿಂದೂ ಸಮಾಜ ತೀರ್ಮಾನ ಮಾಡಿದೆ ಅಂತ ಅಭಿಯಾನ ಈಗಾಗಲೇ ಸೋಷಿಯಲ್ ಮಿಡಿಯಾಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ದೊಡ್ಡಮಟ್ಟದಲ್ಲೇ ಅಭಿಯಾನ ಮಾಡುವುದಾಗಿ ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೊರಟ್ಟಿ ಬಿಜೆಪಿ ಸೇರ್ಪಡೆಗೆ ಬಿಜೆಪಿಗರಿಂದಲೇ ತೀವ್ರ ವಿರೋಧ

    ಹೊರಟ್ಟಿ ಬಿಜೆಪಿ ಸೇರ್ಪಡೆಗೆ ಬಿಜೆಪಿಗರಿಂದಲೇ ತೀವ್ರ ವಿರೋಧ

    – ಜೆಪಿ ನಡ್ಡಾಗೆ ಬಿಜೆಪಿ ಪ್ರಮುಖರಿಂದ ಪತ್ರ
    – ಹೊರಟ್ಟಿ ವಿರುದ್ಧ ದಾಖಲೆ ಸಹಿತ ಗಂಭೀರ ಆರೋಪ

    ಹುಬ್ಬಳ್ಳಿ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಮೇಲ್ಮನೆ ಸದಸ್ಯತ್ವದ ಅವಧಿ ಮುಗಿಯುತ್ತಿದ್ದು, ಇದೀಗ ಅವರು ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ಊಹಾಪೋಹಗಳು ಎದ್ದಿವೆ.

    ಒಂದು ಕಡೆ ಪಕ್ಷಕ್ಕೆ ಹೊರಟ್ಟಿ ಸೇರ್ಪಡೆಯಾಗುವುದಾದರೆ ಸ್ವಾಗತ ಎಂದು ಬಿಜೆಪಿಯ ಹಿರಿಯ ನಾಯಕರು ಹೇಳಿಕೆ ನೀಡಿದ್ದಾರೆ. ಮತ್ತೊಂದು ಕಡೆ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ಕೆಲವು ಬಿಜೆಪಿಗರೇ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

    ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಬಿಜೆಪಿ ಪ್ರಮುಖರು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಹೊರಟ್ಟಿ ವಿರುದ್ಧ ಎಫ್‌ಐಆರ್ ಸಹಿತ ಆರೋಪಗಳ ಸುರಿಮಳೆಯಿದೆ. ಇದರ ಜೊತೆಗೆ ಪ್ರಮುಖ ಹತ್ತು ಅಂಶಗಳನ್ನು ಪತ್ರದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: 8ಕ್ಕೂ ಹೆಚ್ಚು ಸ್ವಾಮೀಜಿಗಳೊಂದಿಗೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ವೀಕ್ಷಿಸಿದ ಸಿದ್ದಗಂಗಾ ಶ್ರೀ

    ಹತ್ತು ಅಂಶಗಳು:
    1) ಬಸವರಾಜ್ ಹೊರಟ್ಟಿಗೆ 76 ವರ್ಷ. ಪಕ್ಷದ ನಿಯಮದಂತೆ ಇವರಿಗೆ ಟಿಕೆಟ್ ನೀಡಲು ಅವಕಾಶವಿಲ್ಲ.
    2) ಈ ಹಿಂದೆ ಹೊರಟ್ಟಿ ಒಂದೇ ಸಮಯದಲ್ಲಿ ಎರಡೆರಡು ವೇತನ ಪಡೆದಿದ್ದರು. 1980ರಲ್ಲಿ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರೂ 1999ರ ವರೆಗೆ ಲ್ಯಾಮಿಂಗ್ಟನ್ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ವೇತನ ಪಡೆದಿದ್ದರು.
    3) ಧಾರವಾಡದಲ್ಲಿ ಎಸ್‌ಟಿ ಸಮಾಜಕ್ಕೆ ಸೇರಿದ ಸರ್ವೋದಯ ಶಿಕ್ಷಣ ಸಂಸ್ಥೆ ಆಸ್ತಿ ಕಬಳಿಸಿದ ಆರೋಪ ಇವರ ಮೇಲಿದೆ.
    4) ಶಿಕ್ಷಣ ಸಂಸ್ಥೆ ವಿಚಾರದಲ್ಲಿ ಇವರ ಮೇಲೆ ಎಫ್‌ಐಆರ್ ದಾಖಲಾಗಿದೆ.
    5) ಹಿಂದುತ್ವ ವಿರುದ್ಧದ ಚಳುವಳಿಯಲ್ಲಿ ಕಾಂಗ್ರೆಸ್ ಜೊತೆ ಹೊರಟ್ಟಿ ಗುರುತಿಸಿಕೊಂಡಿದ್ದರು.
    6) ಬಿಜೆಪಿ ಪಕ್ಷದ ಸಿದ್ಧಾಂತಗಳನ್ನು ಇವರು ಒಪ್ಪಿಕೊಂಡಿಲ್ಲ.
    7) ಹಾವೇರಿ, ಧಾರವಾಡ, ಗದಗ, ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲವಾಗಿದೆ.
    8) ಕ್ಷೇತ್ರದಲ್ಲಿ 17 ಶಾಸಕರು, 3 ಸಂಸತ್ ಸದಸ್ಯರು, 4 ಪರಿಷತ್ ಸದಸ್ಯರು, ಓರ್ವ ಸಭಾಪತಿ, 3 ಕ್ಯಾಬಿನೆಟ್ ಸಚಿವರು, ಒಬ್ಬ ಕೇಂದ್ರ ಸಚಿವ, ರಾಜ್ಯದ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳು ಕ್ಷೇತ್ರದಲ್ಲಿದ್ದಾರೆ.
    9) ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಯಾರೊಬ್ಬರೂ ಶಾಸಕರಿಲ್ಲ.
    10) ಬಸವರಾಜ್ ಹೊರಟ್ಟಿ ಒಬ್ಬ ಕಳಂಕಿತ ವ್ಯಕ್ತಿ, ಇಂತಹ ಕಳಂಕಿತ ವ್ಯಕ್ತಿಗೆ ಟಿಕೆಟ್ ಕೊಟ್ಟು ಸಾಧಿಸುವುದು ಏನಿದೆ? ಇದನ್ನೂ ಓದಿ: 21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ- ರಾಜ್ಯದಲ್ಲಿಂದು 92 ಮಂದಿಗೆ ಕೊರೊನಾ, ಇಬ್ಬರು ಸಾವು

    ಹೀಗೆ ಪತ್ರದ ಜೊತೆಗೆ ಹಲವು ದಾಖಲೆಗಳನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದಾರೆ. ಯಾವುದೇ ಕಾರಣಕ್ಕೂ ಹೊರಟ್ಟಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಬಾರದು ಎಂದು ಮನವಿ ಮಾಡಲಾಗಿದೆ.

  • ಆಸೀಸ್‍ನಿಂದ ಕೊಹ್ಲಿ ಕಳುಹಿಸಿದ ದೀಪಾವಳಿ ಸಂದೇಶಕ್ಕೆ ಭಾರೀ ವಿರೋಧ

    ಆಸೀಸ್‍ನಿಂದ ಕೊಹ್ಲಿ ಕಳುಹಿಸಿದ ದೀಪಾವಳಿ ಸಂದೇಶಕ್ಕೆ ಭಾರೀ ವಿರೋಧ

    ನವದೆಹಲಿ: ಆಸ್ಟ್ರೇಲಿಯಾದಿಂದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕಳುಹಿಸಿದ ದೀಪಾವಳಿ ಸಂದೇಶಕ್ಕೆ ಇಂಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.

    ಸದ್ಯ ಟೀಂ ಇಂಡಿಯಾ ಆಸೀಸ್ ಪ್ರವಾಸಕ್ಕೆ ಆಸ್ಟ್ರೇಲಿಯಾಗೆ ತೆರಳಿದೆ. ಐಪಿಎಲ್ ಮುಗಿದ ನಂತರ ನೇರವಾಗಿ ಕೊಹ್ಲಿ ಪಡೆ ಆಸೀಸ್‍ಗೆ ಹಾರಿದೆ. ಈ ನಡುವೆ ದೀಪಾವಳಿ ಹಬ್ಬದ ಸಲುವಾಗಿ ತನ್ನ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿಯವರು ಪಟಾಕಿ ಸಿಡಿಸದೇ ಶಾಂತಿಯುತವಾದ ದೀಪಾವಳಿ ಆಚರಿಸಿ ಎಂದು ಟ್ವಿಟ್ಟರ್ ಸಂದೇಶ ರವಾನೆ ಮಾಡಿದ್ದರು.

    ವಿರಾಟ್ ಕೊಹ್ಲಿಯವರ ಈ ಮಾತಿಗೆ ಕೆಲ ಭಾರತೀಯರು ಟ್ವಿಟ್ಟರಿನಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕಳೆದ ನವೆಂಬರ್ 5ರಂದು ಯುಎಇನಲ್ಲಿ ನಡೆದ ವಿರಾಟ್ ಕೊಹ್ಲಿ ಹುಟ್ಟುಹಬ್ಬದಂದು ಪಟಾಕಿ ಸಿಡಿಸಲಾಗಿತ್ತು ಈ ಫೋಟೋವನ್ನು ಬಳಸಿಕೊಂಡು ಕೊಹ್ಲಿಯವರನ್ನು ಟ್ರೋಲ್ ಮಾಡುತ್ತಿದ್ದಾರೆ. ಇದರ ಮಧ್ಯೆ ಅನುಷ್ಕಾ ಶರ್ಮಾ ಅವರನ್ನು ಎಳೆದು ತಂದು ಪಟಾಕಿಗೆ ವಿರೋಧ ವ್ಯಕ್ತಪಡಿಸಿದವರ ವಿರುದ್ಧ ಕೆಲ ನೆಟ್ಟಿಗರು ಕಿಡಿಕಾರಿದ್ದಾರೆ.

    https://twitter.com/ur_voiceAkash/status/1327935006539321344

    ಕೊಹ್ಲಿ ಸಂದೇಶವೇನು?
    ಶನಿವಾರ ತಮ್ಮ ಟ್ವಿಟ್ಟರಿನಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿದ್ದ ವಿರಾಟ್ ಕೊಹ್ಲಿ, ನನ್ನ ಕಡೆಯಿಂದ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ದೀಪಾವಳಿ ಹಬ್ಬದ ಶುಭಾಶಯಗಳು. ದೇವರು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ. ಜೊತೆಗೆ ಈ ಬಾರಿ ದೀಪಾವಳಿಯಲ್ಲಿ ಪಟಾಕಿಯನ್ನು ಸಿಡಿಸಬೇಡಿ. ಪರಿಸರವನ್ನು ಸಂರಕ್ಷಿಸಿ ಜೊತೆಗೆ ನಿಮ್ಮ ಪ್ರೀತಿ ಪಾತ್ರರ ಜೊತೆ ಮನೆಯಲ್ಲೇ ದೀಪಾವಳಿಯನ್ನು ಆಚರಿಸಿ ಎಂದು ಕೇಳಿಕೊಂಡಿದ್ದರು.

    ಭಾರತ-ಆಸ್ಟ್ರೇಲಿಯಾ ಸರಣಿಯು ನವೆಂಬರ್ 27ರಂದು ಮೂರು ಪಂದ್ಯಗಳ ಏಕದಿನ ಸರಣಿಯೊಂದಿಗೆ ಪ್ರಾರಂಭವಾಗಲಿದೆ. ಏಕದಿನ ಪಂದ್ಯದ ನಂತರ ಉಭಯ ತಂಡಗಳು ಮೂರು ಪಂದ್ಯಗಳ ಟಿ-20 ಸರಣಿ ಆಡಲಿವೆ. ನಂತರ ಡಿಸೆಂಬರ್ 17ರಿಂದ ಇಂಡಿಯಾ ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪ್ರಾರಂಭವಾಗಲಿದೆ. ಅಡಿಲೇಡ್‍ನಲ್ಲಿ ಆಡಲಿರುವ ಡೇ/ನೈಟ್ ಪಂದ್ಯದ ನಂತರ ಕೊಹ್ಲಿ ಭಾರತಕ್ಕೆ ಮರಳಲಿದ್ದಾರೆ.

  • ಮರಾಠ ಅಭಿವೃದ್ಧಿಗೆ 50 ಕೋಟಿ – ಸರ್ಕಾರದ ನಿರ್ಧಾರಕ್ಕೆ ಸಾ.ರಾ ಗೋವಿಂದ್ ವಿರೋಧ

    ಮರಾಠ ಅಭಿವೃದ್ಧಿಗೆ 50 ಕೋಟಿ – ಸರ್ಕಾರದ ನಿರ್ಧಾರಕ್ಕೆ ಸಾ.ರಾ ಗೋವಿಂದ್ ವಿರೋಧ

    – ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ, ಪ್ರತಿಭಟನೆ ಮಾಡ್ತೇವೆ

    ಬೆಂಗಳೂರು: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ 50 ಕೋಟಿ ರೂಪಾಯಿ ಅನುದಾನ ನೀಡಿರುವುದನ್ನು ನಾನು ವಿರೋಧಿಸುತ್ತೇನೆ ಎಂದು ಸಾ.ರಾ ಗೋವಿಂದ್ ಅವರು ಹೇಳಿದ್ದಾರೆ.

    ಇಂದು ನಗರದಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಸಿಎಂ ನಿರ್ಧಾರವನ್ನು ಖಂಡಿಸಿ ನಾಡಿದ್ದು ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ಮಾಡುತ್ತೇವೆ. ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ, ಕನ್ನಡಪರ ಸಂಘಟನೆಗಳು ಹೋರಾಟಕ್ಕೆ ಮುಂದಾಗಿ ಎಂದು ಮನವಿ ಮಾಡಿದರು.

    ಬೇರೆ ರಾಜ್ಯಗಳಲ್ಲಿ ಭಾಷೆಯನ್ನು ಅಭಿವೃದ್ಧಿ ಮಾಡುವ ಕೆಲಸವಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಆಗಲೇ ಇಲ್ಲ. ಮರಾಠಿ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂಪಾಯಿ ಕೊಟ್ಟಿದ್ದಾರೆ. 2020-21ರಲ್ಲಿ ಕನ್ನಡ ಅನುಷ್ಟಾನ ಮತ್ತು ಅಭಿವೃದ್ಧಿಗಾಗಿ ಪ್ರಯತ್ನ ಮಾಡೋಣ ಅಂತ ಸಿಎಂ ಹೇಳಿದ್ದರು, ಆದರೆ ಇಲ್ಲಿಯವರೆಗೆ 2 ಕೋಟಿ ಕೇಳಿದರೂ ಕನ್ನಡ ಅಭಿವೃದ್ಧಿಗೆ ಕೊಡುವುದಕ್ಕೆ ಆಗಲಿಲ್ಲ. ಆದರೆ ಮರಾಠ ಅಭಿವೃದ್ಧಿಗೆ 50 ಕೋಟಿ ಕೊಟ್ಟಿದ್ದಾರೆ ಎಂದು ಗುಡುಗಿದರು.

    ನಿಮ್ಮ ಈ ನಿರ್ಧಾರಕ್ಕೆ ಸಲಹೆ ಕೊಟ್ಟವರು ಯಾರು? ಮರಾಠಿಗರು ನವೆಂಬರ್ 1ಕ್ಕೆ ಕರಾಳ ದಿನ ಆಚರಣೆ ಮಾಡುತ್ತಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ ನೀಡುವ ಮೂಲಕ ಕನ್ನಡ ಪ್ರಾಧಿಕಾರವನ್ನು ಮುಚ್ಚುತ್ತಿರಾ? ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದು ಮಾಡಿ. ಕನ್ನಡ ಪರ ಹೋರಾಟಗಾರನಾಗಿ ನಾನು ವಿರೋಧ ಮಾಡುತ್ತೇನೆ ಎಂದು ಹೇಳಿದರು.

    ಬೆಳಗಾವಿ ಬಸವ ಕಲ್ಯಾಣ ಉಪ ಚುನಾವಣೆ ಘೋಷಣೆಗೂ ಮುನ್ನವೇ, ಮರಾಠ ಸಮುದಾಯ ಓಲೈಸುವ ಸಲುವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಸಿಎಂ ಬಿಎಸ್‍ವೈ ಆದೇಶ ಹೊರಡಿಸಿದ್ದರು. ಅಲ್ಲದೇ 50 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ.

  • ಬ್ಲಡ್‍ಲೆಸ್ ಬಕ್ರಿದ್, ನಾಯ್ಸ್ ಲೆಸ್ ಫ್ರೈಡೇನೂ ಮಾಡೋಣ – ಪಟಾಕಿ ನಿಷೇಧಕ್ಕೆ ಯತ್ನಾಳ್ ಗರಂ

    ಬ್ಲಡ್‍ಲೆಸ್ ಬಕ್ರಿದ್, ನಾಯ್ಸ್ ಲೆಸ್ ಫ್ರೈಡೇನೂ ಮಾಡೋಣ – ಪಟಾಕಿ ನಿಷೇಧಕ್ಕೆ ಯತ್ನಾಳ್ ಗರಂ

    ಬೆಂಗಳೂರು: ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿರುವುದಕ್ಕೆ ಅಡಳಿತ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ತಮ್ಮದೇ ಸರ್ಕಾರವನ್ನು ಕುಟುಕಿರುವ ಯತ್ನಾಳ್, ಇಕೋ ಫ್ರೆಂಡ್ಲಿ ಗಣೇಶ ಹಬ್ಬ ಮತ್ತು ನಾಯ್ಸ್ ಲೆಸ್ ದೀಪಾವಳಿ ರೀತಿಯಲ್ಲೇ ಬ್ಲಡ್‍ಲೆಸ್ ಬಕ್ರೀದ್, ನಾಯ್ಸ್ ಲೆಸ್ ಫ್ರೈಡೇನೂ ಮಡೋಣ ಎಂದು ಪೋಸ್ಟ್ ಹಾಕಿದ್ದಾರೆ.

    ಈ ವಿಚಾರವಾಗಿ ಫೇಸ್‍ಬುಕ್ ಪೋಸ್ಟ್ ಹಾಕಿರುವ ಅವರು, ಹಿಂದೂಗಳು ಸಾಮೂಹಿಕವಾಗಿ ಸೇರುವುದೇ ವರ್ಷಕ್ಕೊಮ್ಮೆ ಬರುವ ಗಣೇಶ ಹಬ್ಬ, ದಸರಾ-ದುರ್ಗಪೂಜೆ ಮತ್ತು ದೀಪವಾಳಿ ಸಮಯದಲ್ಲಿ. ಆದರೆ ಗಣೇಶ ಹಬ್ಬ ಬಂದ್ರೆ ಇಕೋ ಫ್ರೆಂಡ್ಲಿ ಗಣೇಶ ಹಬ್ಬ, ದೀಪಾವಳಿ ಬಂದ್ರೆ ನಾಯ್ಸ್ ಲೆಸ್ ದೀಪಾವಳಿ ಮಾಡಿ ಎಂದು ಭೋದನೆ ಮಾಡುತ್ತಾರೆ ಎಂದು ತಮ್ಮದೇ ಪಕ್ಷದ ತೀರ್ಮಾನಕ್ಕೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

    ಇದರ ಜೊತೆಗೆ ಇಕೋ ಫ್ರೆಂಡ್ಲಿ ಗಣೇಶ ಹಬ್ಬ ಮತ್ತು ನಾಯ್ಸ್ ಲೆಸ್ ದೀಪಾವಳಿ ಇವುಗಳ ಜೊತೆಗೆ ನಾಯ್ಸ್ ಲೆಸ್ ಫ್ರೈಡೇ, ಬ್ಲಡ್‍ಲೆಸ್ ಬಕ್ರಿದ್ ನತ್ತು ಕ್ರ್ಯಾಕರ್ಲೆಸ್ ಡಿಸೆಂಬರ್ 31 ನೈಟ್ ಇವೆಲ್ಲವುಗಳನ್ನು ಮಡೋಣ. ಬಕ್ರಿದ್‍ನಲ್ಲಿ ರಕ್ತ ಹರಿಸುವುದು ಬೇಡ. ಡಿಸೆಂಬರ್ 31ರಂದು ಪಟಾಕಿ ಹೊಡೆಯುವುದು ಬೇಡ. ಫ್ರೈಡೇ ಸ್ಪೀಕರಿನಲ್ಲಿ ಕೂಗುವುದು ಬೇಡ. ರಸ್ತೆ ಮೇಲೆ ನಮಾಜು ಮಾಡುವುದು ಬೇಡ. ಬೀದಿಲಿ ಪಟಾಕಿ ಹೊಡೆಯೋದು ಬೇಡ. ನಾವೆಲ್ಲ ಮನೆಯಲ್ಲಿ ದೀಪ ಹಚ್ಚುತ್ತೇವೆ, ಅವರು ಸ್ಪೀಕರ್ ಹಚ್ಚದೇ ನಾಮಜು ಮಾಡಲಿ ರಸ್ತೆ ಮೇಲೆ ಬೇಡ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ.