Tag: ವಿಲೀನ

  • ಓಲಾ, ಉಬರ್ ವಿಲೀನವಾಗುತ್ತಾ? ಊಹಾಪೋಹಗಳಿಗೆ ತೆರೆಯೆಳೆದ ಓಲಾ ಸಿಇಒ

    ಓಲಾ, ಉಬರ್ ವಿಲೀನವಾಗುತ್ತಾ? ಊಹಾಪೋಹಗಳಿಗೆ ತೆರೆಯೆಳೆದ ಓಲಾ ಸಿಇಒ

    ನವದೆಹಲಿ: ಓಲಾ ಹಾಗೂ ಉಬರ್ ಕಂಪನಿಗಳು ವಿಲೀನಗೊಳ್ಳುತ್ತವೆ ಎಂಬ ಬಗ್ಗೆ ಇತ್ತೀಚೆಗೆ ಭಾರೀ ಚರ್ಚೆಯಾಗುತ್ತಿದ್ದು, ಇದೀಗ ಈ ಬಗ್ಗೆ ಓಲಾ ಸಿಇಒ ಸ್ಪಷ್ಟನೆ ನೀಡಿದ್ದಾರೆ. ಓಲಾ ಹಾಗೂ ಉಬರ್ ಎರಡೂ ವಿಲೀನವಾಗುತ್ತಾ ಎಂಬ ಊಹಾಪೋಹಗಳಿಗೆ ಓಲಾ ಸಿಇಒ ಭವಿಷ್ ಅಗರ್ವಾಲ್ ಇದೀಗ ತೆರೆ ಎಳೆದಿದ್ದಾರೆ.

    ಎರಡೂ ಕಂಪನಿಗಳು ವಿಲೀನಗೊಳ್ಳುತ್ತವೆ ಎಂಬ ಚರ್ಚೆಯ ನಡುವೆ ಮಾತನಾಡಿರುವ ಓಲಾ ಸಿಇಒ ಭವಿಷ್ ಅಗರ್ವಾಲ್, ಈ ಚರ್ಚೆ ಸಂಪೂರ್ಣ ಅರ್ಥಹೀನ. ನಾವು ತುಂಬಾ ಲಾಭದಾಯಕವಾಗಿ ಹಾಗೂ ಉತ್ತಮವಾಗಿ ಬೆಳೆಯುತ್ತಿದ್ದೇವೆ. ಕೆಲವು ಇತರ ಕಂಪನಿಗಳು ತಮ್ಮ ವ್ಯವಹಾರವನ್ನು ಭಾರತದಲ್ಲಿ ಸ್ಥಗಿತಗೊಳಿಸಲು ಬಯಸಿದರೆ ನಾವು ಈ ವಿಚಾರವನ್ನು ಸ್ವಾಗತಿಸುತ್ತೇವೆ. ಆದರೆ ಎಂದಿಗೂ ವಿಲೀನಗೊಳ್ಳುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕಾಮನ್‌ವೆಲ್ತ್‌ನಲ್ಲಿ ಕರ್ನಾಟಕದ ಗುರುರಾಜ್‌ಗೆ ಕಂಚು – ಭಾರತಕ್ಕೆ 2ನೇ ಪದಕ

    OLA

    ಓಲಾ ಜೊತೆಗಿನ ವಿಲೀನದ ವಿಚಾರವನ್ನು ಉಬರ್ ಕೂಡ ನಿರಾಕರಿಸಿದೆ. ಈ ವರದಿ ತಪ್ಪಾಗಿದೆ, ನಾವು ಓಲಾ ಜೊತೆಗೆ ವಿಲೀನದ ಬಗ್ಗೆ ಮಾತುಕತೆ ನಡೆಸಿಲ್ಲ ಎಂದು ಉಬರ್ ಕಂಪನಿ ತಿಳಿಸಿದೆ. ಇದನ್ನೂ ಓದಿ: ದೇಶದ ಮೊದಲ ಮಂಕಿಪಾಕ್ಸ್ ರೋಗಿ ಸಂಪೂರ್ಣ ಗುಣಮುಖ

    ಒಂದಕ್ಕೊಂದು ಪೈಪೋಟಿ ನಡೆಸುತ್ತಿರು ಓಲಾ ಹಾಗೂ ಉಬರ್ ಕಂಪನಿಗಳಲ್ಲಿ ಹೂಡಿಕೆದಾರರಾಗಿರುವ ಅಮೆರಿಕ ಮೂಲದ ಮಸಯೋಶಿ ಸನ್ ನೇತೃತ್ವದ ಸಾಫ್ಟ್‌ಬ್ಯಾಂಕ್ ಅವೆರಡರ ವಿಲೀನಕ್ಕೆ ಒತ್ತಾಯಿಸಿತ್ತು. ಈ ಹಿನ್ನೆಲೆ ಪರಸ್ಪರ ತೀವ್ರವಾದ ಸ್ಪರ್ಧೆಯಲ್ಲಿರುವ ಕಂಪನಿಗಳು ಇತ್ತೀಚೆಗೆ ವಿಲೀನದ ಬಗ್ಗೆ ಮಾತುಕತೆ ನಡೆಸಿವೆ ಎಂದು ವರದಿಯಾಗಿದೆ. ಆದರೆ ಅವೆರಡರ ಒಪ್ಪಂದ ಕಾರ್ಯರೂಪಕ್ಕೆ ಬಂದಿಲ್ಲ ಎನ್ನಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಯಾವುದೇ ಪಕ್ಷದ ಜೊತೆ ಜೆಡಿಎಸ್ ವಿಲೀನ ಇಲ್ಲ: ಕುಮಾರಸ್ವಾಮಿ ಸ್ಪಷ್ಟನೆ

    ಯಾವುದೇ ಪಕ್ಷದ ಜೊತೆ ಜೆಡಿಎಸ್ ವಿಲೀನ ಇಲ್ಲ: ಕುಮಾರಸ್ವಾಮಿ ಸ್ಪಷ್ಟನೆ

    ಬೆಂಗಳೂರು: ಜೆಡಿಎಸ್ ಸ್ವತಂತ್ರವಾಗಿಯೇ ಹೋರಾಟ ನಡೆಸಲಿದೆ, ಯಾವುದೇ ಪಕ್ಷದ ಜೊತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, 1973ರಲ್ಲಿ 22 ಜನ ಶಾಸಕರನ್ನು ಇಟ್ಟುಕೊಂಡು ಎಚ್.ಡಿ.ದೇವೇಗೌಡರು ವಿರೋಧ ಪಕ್ಷದ ನಾಯಕರಾಗಿ ಹೋರಾಟ ಆರಂಭಿಸಿದರು. ಕಾಂಗ್ರೆಸ್ ಹಾಗೂ ಜನತಾ ದಳ ಒಡೆದು ಹೋದ ಬಳಿಕ ಶ್ರಮಪಟ್ಟು ಪಕ್ಷವನ್ನು ಉಳಿಸಿಕೊಂಡು ಬಂದಿದ್ದೇವೆ. ರಾಜ್ಯದ ಸಮಸ್ಯೆಗಳಿಗೆ ಹೋರಾಟ ಮಾಡಿದ ದೇವೇಗೌಡರ ಕಳಕಳಿಯನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ನಾವು ಸ್ವತಂತ್ರವಾಗಿರುವ ನಿಟ್ಟಿನಲ್ಲಿ ಪಕ್ಷವನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಯಾವುದೇ ಕಾರಣಕ್ಕೂ ಪಕ್ಷವನ್ನು ವಿಲೀನ ಮಾಡುವುದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು. ಇದನ್ನೂ ಓದಿ: ಮುಂದೆ ರಾಜಕೀಯ ಧ್ರುವೀಕರಣ, ಒಂದು ಪಕ್ಷವೇ ವಿಲೀನವಾಗಬಹುದು – ಲಿಂಬಾವಳಿ

    ಅರವಿಂದ ಲಿಂಬಾವಳಿ ಯಾವ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಅಲ್ಲದೆ ಈ ಗುಮಾನಿ ಯಾಕೆ ಎದ್ದಿದೆ ಎಂಬುದು ಸಹ ತಿಳಿದಿಲ್ಲ. ಈಗ ಬಿಜೆಪಿ ಸ್ವತಂತ್ರವಾಗಿ ಆಡಳಿತ ನಡೆಸುವಷ್ಟು ಸ್ಥಾನ ಹೊಂದಿದೆ. ಬೇರೆ ಪಕ್ಷದ ಬೆಂಬಲದ ಅವಶ್ಯವಿಲ್ಲ. ಹೀಗಿರುವಾಗ ನಮ್ಮ ಪಕ್ಷವನ್ನು ವಿಲೀನ ಮಾಡಿ ಎಂಬ ಒತ್ತಡ ಹೇರುವ ಪ್ರಶ್ನೆ ಉದ್ಭವವಾಗುವುದೇ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು ದೇವೇಗೌಡರು ಹಾಗೂ ನನ್ನ ಬಗೆಗೆ ಇಟ್ಟಿರುವ ವಿಶೇಷ ಗೌರವದಿಂದಾಗಿ ಈ ರೀತಿಯ ಗುಮಾನಿ ಎದ್ದಿದೆ ಎಂದು ತಿಳಿಸಿದರು.

    ಸಮ್ಮಿಶ್ರ ಸರ್ಕಾರ ಇದ್ದಾಗ ಕಾಂಗ್ರೆಸ್ ಜೊತೆ ಆಡಳಿತ ನಡೆಸಿದರೂ ಪ್ರಧಾನಿ ನರೇಂದ್ರ ಮೋದಿ, ನಾನು ಮುಖ್ಯಮಂತ್ರಿಯಾಗಿದ್ದಾಗ ಉತ್ತಮ ಸಹಕಾರ ನೀಡಿದರು. ಇದನ್ನೇ ಕೆಲವರು ಬೇರೆ ರೀತಿಯಲ್ಲಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಬಸವರಾಜ್ ಹೊರಟ್ಟಿ ಹಾಗೂ ಜಿ.ಟಿ.ದೇವೇಗೌಡರು ಅವರ ವೈಯಕ್ತಿಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದು ಪಕ್ಷದ ನಿರ್ಧಾರ ಅಲ್ಲ. ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ನಮ್ಮ ಮುಖಂಡರು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

    ಸಿದ್ದರಾಮಯ್ಯನವರು ಜೆಡಿಎಸ್‍ನ್ನು ಬಿಜೆಪಿಯ ಬಿ ಟೀಮ್ ಎಂದರು. 29 ಕ್ಷೇತ್ರಗಳಲ್ಲಿ ಒಳ ಒಪ್ಪಂದ ಆಗಿತ್ತು ಎಂದು ಹೇಳಿದ್ದಾರೆ. ಹೀಗೆ ಒಳ ಒಪ್ಪಂದ ಮಾಡಿಕೊಂಡಿದ್ದರೆ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ಮಾಡಲು ಸಾಧ್ಯವಾಗುತ್ತಿತ್ತಾ? ಹೀಗೆ ನಮ್ಮ ಪಕ್ಷವನ್ನು ಬಿಜೆಪಿ ಬಿ ಟೀಮ್ ಎನ್ನುವವರು ನಮ್ಮೊಂದಿಗೆ ಹೇಗೆ ಸರ್ಕಾರ ಮಾಡಿದರು. ರಾಜಕಾರಣದಲ್ಲಿ ಇದೇ ರೀತಿಯ ತೀರ್ಮಾನ ಆಗುತ್ತದೆ ಎಂದು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ. ಆದರೆ ವಿಲೀನವಾಗುವುದು ಸಾಧ್ಯವೇ ಇಲ್ಲ ಎಂದು ತಿಳಿಸಿದರು.

  • ದೇನಾ ಬ್ಯಾಂಕ್, ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ವಿಲೀನ

    ದೇನಾ ಬ್ಯಾಂಕ್, ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ವಿಲೀನ

    ನವದೆಹಲಿ: ಸಾರ್ವಜನಿಕ ಸ್ವಾಮ್ಯದ ದೇನಾ ಬ್ಯಾಂಕ್, ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್‍ಗಳನ್ನು ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ವಿಲೀನಗೊಳ್ಳುವ ಮೂಲಕ ದೇಶದ ಮೂರನೇ ಅತಿ ದೊಡ್ಡ ಬ್ಯಾಂಕ್ ಆಗಿ ಹೊರಹೊಮ್ಮಲಿದೆ.

    ಹಣಕಾಸು ಸಚಿವ ಅರುಣ್ ಜೇಟ್ಲಿ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆಯನ್ನು ಬಜೆಟ್ ನಲ್ಲಿ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ದೇನಾ ಬ್ಯಾಂಕ್, ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ಗಳ ವಿಲೀನವಾಗಲಿದೆ. ಇರುವ ಸಿಬ್ಬಂದಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದರು.

    ಪ್ರಸ್ತುತ ದೇಶದಲ್ಲಿ ಅತಿ ದೊಡ್ಡ ಬ್ಯಾಂಕ್ ಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೊದಲ ಸ್ಥಾನದಲ್ಲಿದೆ. ಖಾಸಗಿ ಬ್ಯಾಂಕ್ ಗಳ ಪೈಕಿ ಎಚ್‍ಡಿಎಫ್‍ಸಿ ಮತ್ತು ಐಸಿಐಸಿಐ ಬ್ಯಾಂಕ್ ಮುಂಚೂಣಿಯಲ್ಲಿದೆ.

    ವಿಲೀನ ಯಾಕೆ?
    ವಿಶ್ವದ ಟಾಪ್ 50 ಪಟ್ಟಿಯಲ್ಲಿ ಭಾರತದ ಯಾವೊಂದು ಬ್ಯಾಂಕ್ ಸ್ಥಾನ ಪಡೆದಿಲ್ಲ. ಹೀಗಾಗಿ ಸಾರ್ವಜನಿಕ ವಲಯದಲ್ಲಿರುವ 21 ಬ್ಯಾಂಕ್ ಗಳನ್ನು 12ಕ್ಕೆ ಇಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಮತ್ತೊಂದು ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆ ನಡೆಯಲಿದೆ.

    ಈ ಹಿಂದೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು(ಎಸ್‍ಬಿಎಂ), ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಹಾಗೂ ಜೈಪುರ್ (ಎಎಸ್‍ಬಿಜೆ), ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್(ಎಸ್‍ಟಿ), ಸ್ಟೇಟ್ ಬ್ಯಾಂಕ್ ಪಟಿಯಾಲಾ (ಎಎಸ್‍ಬಿಪಿ), ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ (ಎಎಸ್‍ಬಿಎಚ್)ಹಾಗೂ ಭಾರತೀಯ ಮಹಿಳಾ ಬ್ಯಾಂಕ್ (ಬಿಬಿಎಂ)ಗಳು ಎಸ್‍ಬಿಐ ಜೊತೆ 2017ರ ಏಪ್ರಿಲ್ 1ರಂದು ವಿಲೀನವಾಗಿತ್ತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಜೊತೆ 5 ಬ್ಯಾಂಕ್ ಗಳು ವಿಲೀನ ಪ್ರಕ್ರಿಯೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಮತ್ತಷ್ಟು ಬ್ಯಾಂಕ್ ಗಳನ್ನು ವಿಲೀನಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಈ ಹಿಂದೆಯೇ ವರದಿಯಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಸ್ಪತ್ರೆಯ ವಿಲೀನ ಖಂಡಿಸಿ ಗದಗ ವೈದ್ಯರು ಹಾಗೂ ಸಿಬ್ಬಂದಿ ಪ್ರತಿಭಟನೆ

    ಆಸ್ಪತ್ರೆಯ ವಿಲೀನ ಖಂಡಿಸಿ ಗದಗ ವೈದ್ಯರು ಹಾಗೂ ಸಿಬ್ಬಂದಿ ಪ್ರತಿಭಟನೆ

    ಗದಗ: ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಗದಗ ಜಿಮ್ಸ್ ಸಂಸ್ಥೆಗೆ ವಿಲೀನಗೊಳಿಸಿರುವುದನ್ನು ವಿರೋಧಿಸಿ ವೈದ್ಯರು ಹಾಗೂ ಸಿಬ್ಬಂದಿ ನಗರದ ಹೆರಿಗೆ ಆಸ್ಪತ್ರೆಯ ಬಳಿ ಪ್ರತಿಭಟನೆ ನಡೆಸಿದ್ದಾರೆ.

    ಗದಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಗದಗ ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯಕ್ಕೆ ವಿಲೀನಮಾಡುವುದಾಗಿ ಸರ್ಕಾರ ಆದೇಶ ಹೊರಡಿಸಿದ್ದು, ಈ ಆದೇಶವನ್ನು ಕೂಡಲೇ ಹಿಂಪಡೆದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಸ್ಟಾಫ್ ನರ್ಸ್ ಅಸೋಸಿಯೇಷನ್, ಫಾರ್ಮಸಿ ಅಸೋಸಿಯೇಷನ್, ಲ್ಯಾಬ್ ಟೆಕ್ನಿಷಿಯನ್, ಆರೋಗ್ಯ ಇಲಾಖೆಯ ವಿವಿಧ ವರ್ಗ ಹಾಗೂ ನೌಕರರ ಸಂಘದಿಂದ ಹೆರಿಗೆ ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

    ಹೆರಿಗೆ ಆಸ್ಪತ್ರೆಯನ್ನು ಗದಗ ಜಿಮ್ಸ್ ನೊಂದಿಗೆ ವಿಲೀನ ಮಾಡಿದರೆ ರೋಗಿಗಳು ಹಾಗೂ ಸಿಬ್ಬಂದಿಗೆ ಸಾಕಷ್ಟು ತೊಂದರೆಯಾಗುತ್ತದೆ. ತಾಲೂಕು ಮಟ್ಟದ ಆಸ್ಪತ್ರೆ, ಸಾರ್ವಜನಿಕ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಪದೋನ್ನತಿ ಅಥವಾ ವರ್ಗಾವಣೆಗೊಂಡು ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಅವಕಾಶದಿಂದ ವಂಚಿತರಾಗುತ್ತಾರೆ. ಆದ್ದರಿಂದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿಯೇ ಮುಂದುವರಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

  • ಮತ್ತೊಮ್ಮೆ ಬ್ಯಾಂಕ್ ಗಳ ವಿಲೀನ: ಯಾವ ಬ್ಯಾಂಕ್ ಜೊತೆ ಯಾವ ಬ್ಯಾಂಕ್ ಗಳು ವಿಲೀನ?

    ಮತ್ತೊಮ್ಮೆ ಬ್ಯಾಂಕ್ ಗಳ ವಿಲೀನ: ಯಾವ ಬ್ಯಾಂಕ್ ಜೊತೆ ಯಾವ ಬ್ಯಾಂಕ್ ಗಳು ವಿಲೀನ?

    ನವದೆಹಲಿ: ಸಾರ್ವಜನಿಕ ವಲಯದಲ್ಲಿರುವ 21 ಬ್ಯಾಂಕ್ ಗಳನ್ನು 12ಕ್ಕೆ ಇಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಮತ್ತೊಂದು ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ.

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಜೊತೆ 5 ಬ್ಯಾಂಕ್ ಗಳು ವಿಲೀನ ಪ್ರಕ್ರಿಯೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಮತ್ತಷ್ಟು ಬ್ಯಾಂಕ್ ಗಳನ್ನು ವಿಲೀನಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

    ಮೂರು ಬ್ಯಾಂಕ್ ಗಳನ್ನು ಒಂದು ಬ್ಯಾಂಕಿನಲ್ಲಿ ವಿಲೀನಗೊಳಿಸುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಝೀ ಬಿಸಿನೆಸ್ ವಾಹಿನಿಯು ಯಾವೆಲ್ಲ ಬ್ಯಾಂಕ್ ಗಳು ಯಾವ ಬ್ಯಾಂಕ್ ಜೊತೆ ವಿಲೀನಗೊಳ್ಳಲಿದೆ ಎನ್ನುವ ವರದಿಯನ್ನು ಪ್ರಕಟಿಸಿದೆ.

    21 ಸಣ್ಣ ಪುಟ್ಟ ಬ್ಯಾಂಕ್ ಗಳ ಬದಲಿಗೆ 12 ದೊಡ್ಡ ಬ್ಯಾಂಕ್ ಗಳನ್ನು ಸೃಷ್ಟಿಸಲು ಸರ್ಕಾರ ಮುಂದಾಗಿದೆ. ಎಸ್‍ಬಿಐ ವಿಲೀನದಂತೆ ಮತ್ತಷ್ಟು ಬ್ಯಾಂಕ್ ಗಳನ್ನು ಮುಂದೆ ವಿಲೀನ ಮಾಡಲಾಗುವುದು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಜೂನ್ ಮೊದಲ ವಾರದಲ್ಲಿ ಹೇಳಿಕೆ ನೀಡಿದ್ದರು.

    ಯಾವ ಬ್ಯಾಂಕ್ ಯಾವ ಬ್ಯಾಂಕ್ ಜೊತೆ ವಿಲೀನ
    1. ಯುನೈಟೆಡ್ ಬ್ಯಾಂಕ್ + ಪಂಜಾಬ್ ಆಂಡ್ ಸಿಂಧ್ ಬ್ಯಾಂಕ್ —-> ಬ್ಯಾಂಕ್ ಆಫ್ ಬರೋಡಾ
    2. ಸಿಂಡಿಕೇಟ್ ಬ್ಯಾಂಕ್ + ಇಂಡಿಯನ್ ಓವರ್‍ಸೀಸ್ ಬ್ಯಾಂಕ್ + ಯುಕೋ ಬ್ಯಾಂಕ್ —-> ಕೆನರಾ ಬ್ಯಾಂಕ್
    3. ಐಡಿಬಿಐ ಬ್ಯಾಂಕ್ + ಸೆಂಟ್ರಲ್ ಬ್ಯಾಂಕ್ + ದೆನಾ ಬ್ಯಾಂಕ್ —-> ಯೂನಿಯನ್ ಬ್ಯಾಂಕ್
    4. ಆಂಧ್ರ ಬ್ಯಾಂಕ್ + ಬ್ಯಾಂಕ್ ಆಫ್ ಮಹಾರಾಷ್ಟ್ರ+ ವಿಜಯ ಬ್ಯಾಂಕ್ —-> ಬ್ಯಾಂಕ್ ಆಫ್ ಇಂಡಿಯಾ

    ಬ್ಯಾಂಕ್ ಗಳು ಎಸ್‍ಬಿಐ ಜೊತೆ ವಿಲೀನವಾಗಿದ್ದು ಯಾಕೆ?
    ವಿಶ್ವದ ಟಾಪ್ 50 ಪಟ್ಟಿಯಲ್ಲಿ ಭಾರತದ ಯಾವೊಂದು ಬ್ಯಾಂಕ್ ಸ್ಥಾನ ಪಡೆದಿಲ್ಲ. ಈ ಪಟ್ಟಿಯಲ್ಲಿ ಸ್ಥಾನ ಪಡೆಯಲು ಎಸ್‍ಬಿಐ ಮುಂದಾಗುತ್ತಿದ್ದು, ಕೇಂದ್ರದ ಒಪ್ಪಿಗೆಯ ಹಿನ್ನೆಲೆಯಲ್ಲಿ ಬ್ಯಾಂಕ್‍ಗಳ ವಿಲೀನ ಪ್ರಕ್ರಿಯೆ ನಡೆದಿದೆ. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು(ಎಸ್‍ಬಿಎಂ), ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಹಾಗೂ ಜೈಪುರ್ (ಎಎಸ್‍ಬಿಜೆ), ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್(ಎಸ್‍ಟಿ), ಸ್ಟೇಟ್ ಬ್ಯಾಂಕ್ ಪಟಿಯಾಲಾ (ಎಎಸ್‍ಬಿಪಿ), ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ (ಎಎಸ್‍ಬಿಎಚ್)ಹಾಗೂ ಭಾರತೀಯ ಮಹಿಳಾ ಬ್ಯಾಂಕ್ (ಬಿಬಿಎಂ)ಗಳು ಎಸ್‍ಬಿಐ ಜೊತೆ ಏಪ್ರಿಲ್ 1ರಂದು ವಿಲೀನವಾಗಿತ್ತು.