Tag: ವಿವಾದಾತ್ಮಕ ಹೇಳಿಕೆ

  • ವಿವಾದಾತ್ಮಕ ಟ್ವೀಟ್ – ಹರಿಯಾಣ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ವಜಾ

    ವಿವಾದಾತ್ಮಕ ಟ್ವೀಟ್ – ಹರಿಯಾಣ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ವಜಾ

    ಚಂಡೀಗಢ: ಪ್ರವಾದಿ ಹಾಗೂ ಇಸ್ಲಾಂ ಧರ್ಮದ ಕುರಿತು 2017ರಲ್ಲಿ ಮಾಡಿದ್ದ ಟ್ವೀಟ್‌ಗೆ ಸಂಬಂಧಿಸಿದಂತೆ ಹರಿಯಾಣದ ಐಟಿ ಸೆಲ್ ಮುಖ್ಯಸ್ಥ ಅರುಣ್ ಯಾದವ್‌ನನ್ನು ಬಿಜೆಪಿ ಪಕ್ಷದಿಂದ ವಜಾ ಮಾಡಿದೆ.

    ಇತ್ತೀಚೆಗೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು 4 ವರ್ಷಗಳ ಹಿಂದಿನ ಟ್ವೀಟ್‌ಗೆ ಸಂಬಂಧಿಸಿದಂತೆ ಬಂಧಿಸಿದ ಹಿನ್ನೆಲೆ ಅರುಣ್ ಯಾದವ್ ಬಂಧನಕ್ಕೂ ಸಾಮಾಜಿಕ ಮಾಧ್ಯಮಗಳಲ್ಲಿ ಕರೆಗಳು ಬಂದಿತ್ತು. ಈ ಒತ್ತಡದ ನಡುವೆ ಬಿಜೆಪಿ ಗುರುವಾರ ಸಂಜೆ ಹರಿಯಾಣದ ಐಟಿ ಸೆಲ್ ಮುಖ್ಯಸ್ಥ ಸ್ಥಾನದಿಂದ ಅವರನ್ನು ತೆಗೆದುಹಾಕಿದೆ. ಇದನ್ನೂ ಓದಿ: 51 ರನ್‌ ಚಚ್ಚಿ 4 ವಿಕೆಟ್‌ ಕಿತ್ತ ಪಾಂಡ್ಯ – ನಂಬರ್ ಗೇಮ್‍ನಲ್ಲಿ ಸೋತ ಆಂಗ್ಲರು

    ಟ್ವಿಟ್ಟರ್‌ನಲ್ಲಿ ಅರುಣ್ ಯಾದವ್‌ನನ್ನು ಬಂಧಿಸಿ ಎಂಬ ಕರೆ ಮೂಲಕ #ArrestArunYadav ಟ್ರೆಂಡಿಂಗ್‌ನಲ್ಲಿದೆ. ಈ ಹ್ಯಾಶ್ ಟ್ಯಾಗ್ ಮೇ ತಿಂಗಳಿನಿಂದ ಹಾಗೂ ಜುಬೇರ್ ಬಂಧನದ ಬಳಿಕ ತೀವ್ರವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಹ್ಯಾಶ್‌ಟ್ಯಾಗ್‌ನಲ್ಲಿ 50,000 ಕ್ಕೂ ಹೆಚ್ಚು ಟ್ವೀಟ್ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – 10 ಮಂದಿಗೆ ಗಾಯ

    ಕಳೆದ ತಿಂಗಳು ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾರನ್ನು ತನ್ನ ಸ್ಥಾನದಿಂದ ಬಿಜೆಪಿ ಕಿತ್ತು ಹಾಕಿತ್ತು. ಬಳಿಕ ವಿವಾದಾತ್ಮಕ ಕಾಮೆಂಟ್ ಹಾಗೂ ಟ್ವೀಟ್ ಮಾಡಿದ್ದ ಮತ್ತೊಬ್ಬ ಕಾರ್ಯಕಾರಿ ನವೀನ್ ಜಿಂದಾಲ್ ಅವರನ್ನು ಬಿಜೆಪಿ ಹೊರ ಹಾಕಿತ್ತು.

    Live Tv
    [brid partner=56869869 player=32851 video=960834 autoplay=true]

  • ರೇಣುಕಾಚಾರ್ಯ ಹೇಳಿಕೆಯಲ್ಲಿ ತಪ್ಪಿಲ್ಲ ಎಂದ ಹೆಚ್ ಆಂಜನೇಯ

    ರೇಣುಕಾಚಾರ್ಯ ಹೇಳಿಕೆಯಲ್ಲಿ ತಪ್ಪಿಲ್ಲ ಎಂದ ಹೆಚ್ ಆಂಜನೇಯ

    ಕೊಪ್ಪಳ: ಹೆಣ್ಣು ಮಕ್ಕಳ ಉಡುಪುಗಳೇ ಪ್ರಚೋದನೆಗೆ ಕಾರಣ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಮಾಜಿ ಸಚಿವ ಎಚ್ ಆಂಜನೇಯ ಪ್ರತಿಕ್ರಿಯೆ ನೀಡಿದ್ದಾರೆ.

    ಕಾಲೇಜು ಮುಂದೆ ಹೋಗಿ ನೋಡಿ ಮುಸ್ಲಿಂ ಹೆಣ್ಣು ಮಕ್ಕಳ ಉಡುಪು ಪ್ರಚೋದನೆ ಕೊಡುತ್ತೋ ಅಥವಾ ನಮ್ಮ ಮಕ್ಕಳ ಉಡುಪು ಪ್ರಚೋದನೆ ಕೊಡುತ್ತೋ ಎಂದು. ರೇಣುಕಾಚಾರ್ಯ ಬಹಳ ಒಳ್ಳೇ ಮಾತು ಹೇಳಿದ್ದಾರೆ ಎಂದು ಆಂಜನೇಯ ಪರೋಕ್ಷವಾಗಿ ಹಿಜಬ್‍ಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ: ರೇಣುಕಾಚಾರ್ಯ

    ಮುಸ್ಲಿಂ ಮಹಿಳೆಯರು ಹಿಜಬ್ ಧರಿಸುತ್ತಾರೆ ಹೀಗಾಗಿ ಅವರನ್ನು ಯಾರೂ ನೋಡಲ್ಲ. ಮೊದಲು ಚುನಾವಣೆಗೆ ಗಲಾಟೆ ನಡೆಯುತ್ತಿತ್ತು. ಇದೀಗ ಕಾಲೇಜು ಮಕ್ಕಳು ಬೀದಿಗಿಳಿದಿದ್ದಾರೆ. ಮಕ್ಕಳ ಕೈಯಲ್ಲಿ ಕಲ್ಲು, ಚಾಕು ಕೊಟ್ಟಿರುವುದು ಬಿಜೆಪಿಯವರು ಎಂದು ಹೇಳಿದರು.

    ನಾವು ಎತ್ತಿ ಕಟ್ಟೋ ಕೆಲಸ ಮಾಡಲ್ಲ. ಇದು ಬಿಜೆಪಿಯವರು ಮಾಡಿದ್ದು. ನಾವು ಅವರ ಹಿಂದಿದ್ದರೆ ಅವರಿಗೆ ಕಾಂಗ್ರೆಸ್ ಧ್ವಜ ಕೊಡುತ್ತಿದ್ದೆವು. ಹಿಜಬ್ ಗಲಾಟೆಗೆ ಬಿಜೆಪಿ ಕಾರಣ ಎಂದರು. ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೋರಿದ ರೇಣುಕಾಚಾರ್ಯ

    ಮೊದಲು ಇದ್ದ ಪದ್ಧತಿಯೇ ಮುಂದೆಯೂ ಇರಲಿ. ಅವರು ನೂರಾರು ವರ್ಷಗಳಿಂದ ಹೇಗೆ ಇದ್ದರು ಹಾಗೇ ಇರಲಿ. ಬಟ್ಟೆ ಇದನ್ನೇ ಹಾಕಬೇಕು ಎನ್ನುವುದು ಯಾವ ನ್ಯಾಯ? ಬಿಜೆಪಿಯವರು ಶಾಲು, ಪೇಟಾ ವಿತರಣೆ ಮಾಡಿದ್ದಾರೆ ಎಂದು ಆಂಜನೇಯ ಆರೋಪಿಸಿದರು.

  • ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ತಿದ್ದಾರೆ- ಶ್ವೇತಾ ತಿವಾರಿ ವಿವಾದಾತ್ಮಕ ಹೇಳಿಕೆ

    ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ತಿದ್ದಾರೆ- ಶ್ವೇತಾ ತಿವಾರಿ ವಿವಾದಾತ್ಮಕ ಹೇಳಿಕೆ

    ಭೋಪಾಲ್: ಜನಪ್ರಿಯ ಕಿರುತೆರೆ ನಟಿ ಶ್ವೇತಾ ತಿವಾರಿ ಅವರು ಹೇಳಿಕೆಯೊಂದನ್ನು ನೀಡಿ ಇದೀಗ ವಿವಾದಕ್ಕೀಡಾಗಿದ್ದಾರೆ. ಈ ಹೇಳಿಕೆ ಸಂಬಂಧ ತನಿಖೆ ನಡೆಸುವಂತೆ ಭೋಪಾಲ್ ಕಮಿಷನರ್‍ಗೆ ಗೃಹ ಸಚಿವರು ಸೂಚನೆ ನೀಡಿದ್ದಾರೆ.

    ತಮ್ಮ ಮುಂಬರುವ ವೆಬ್ ಸೀರಿಸ್ ವೇಳೆ ನಟಿ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಟಿಯ ಹೇಳಿಕೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಪರ ವಿರೋಧ ಕಾಮೆಂಟ್ ಗಳು ಬರುತ್ತಿವೆ.

    ಶ್ವೇತಾ ಹೇಳಿದ್ದೇನು..?
    ಮಹಾಭಾರತ ಧಾರಾವಾಹಿಯಲ್ಲಿ ಭಗವಾನ್ ಕೃಷ್ಣ ಖ್ಯಾತಿಯ ಸೌರಭ್ ರಾಜ್ ಜೈನ್ ಜೊತೆ ಫ್ಯಾಷನ್ ಸಂಬಂಧಿತ ವೆಬ್ ಸರಣಿಯಲ್ಲಿ ಶ್ವೇತಾ ತಿವಾರಿ ನಟಿಸಿದ್ದಾರೆ. ಈ ವೆಬ್ ಸೀರಿಸ್ ಪ್ರಮೋಷನ್ ಇತ್ತೀಚೆಗೆ ಭೋಪಾಲ್ ನಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಶ್ವೇತಾ ಕೂಡ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಶ್ವೇತಾ, ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಮಾತಿನ ಭರದಲ್ಲಿ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅನೇಕ ಬಳಕೆದಾರರು, ದೇವರ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಕ್ಕೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಗನ ವಿಚ್ಛೇದನಕ್ಕೆ ನಿಜವಾದ ಕಾರಣವನ್ನು ಬಹಿರಂಗ ಪಡಿಸಿದ ನಾಗಾರ್ಜುನ

    ತನಿಖೆಗೆ ಸೂಚನೆ:
    ನಟಿಯ ಈ ಹೇಳಿಕೆಯ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಭೋಪಾಲ್ ಕಮಿಷನರ್ ಗೆ ತ ಈ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಶ್ವೇತಾ ತಿವಾರಿ ಅವರು ನೀಡಿರುವ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಅಲ್ಲದೆ ಅವರ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಬಗ್ಗೆ ತನಿಖೆ ನಡೆಸಿ ವರದಿಯನ್ನು ನನಗೆ ಸಲ್ಲಿಸುವಂತೆ ಭೋಪಾಲ್ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • ಅತ್ಯಾಚಾರ ಕುರಿತ ರಮೇಶ್‌ ಕುಮಾರ್‌ ಹೇಳಿಕೆಗೆ ಕಾಂಗ್ರೆಸ್‌ ನಾಯಕರಿಂದಲೇ ಟೀಕೆ

    ಅತ್ಯಾಚಾರ ಕುರಿತ ರಮೇಶ್‌ ಕುಮಾರ್‌ ಹೇಳಿಕೆಗೆ ಕಾಂಗ್ರೆಸ್‌ ನಾಯಕರಿಂದಲೇ ಟೀಕೆ

    ಬೆಂಗಳೂರು: ಅತ್ಯಾಚಾರದ ಕುರಿತು ಶಾಸಕ ರಮೇಶ್‌ ಕುಮಾರ್‌ ಅವರು ಬೆಳಗಾವಿ ವಿಧಾನಸಭೆಯಲ್ಲಿ ನೀಡಿದ ಹೇಳಿಕೆಗೆ ಕಾಂಗ್ರೆಸ್‌ ನಾಯಕರೇ ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ.

    ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ ಎಂದು ರಮೇಶ್‌ ಕುಮಾರ್‌ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್‌ ನಾಯಕರೇ ಕಿಡಿಕಾರಿದ್ದಾರೆ. ರಮೇಶ್‌ ಕುಮಾರ್‌ ಅವರು ಹೆಣ್ಣಿನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅವರ ಹೇಳಿಕೆಯನ್ನು ಕಡತದಿಂದ ತೆಗೆಯಬೇಕು ಎಂದು ಶಾಸಕಿ ಅಂಜಲಿ ನಿಂಬಾಳ್ಕರ್‌ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಎಚ್ಚರಿಕೆಯಿಂದ ಮಾತಾಡ್ತೀನಿ- ಕ್ಷಮೆಯಾಚಿಸಿದ ರಮೇಶ್ ಕುಮಾರ್

    ಇನ್ನು ಕೆಪಿಸಿಸಿ ರಾಮಲಿಂಗ ರೆಡ್ಡಿ ಅವರು ಕೂಡ ರಮೇಶ್‌ ಹೇಳಿಕೆಗೆ ಅಪಸ್ವರ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರು ಇಂತಹ ಹೇಳಿಕೆ ನೀಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ವಿಧಾನಸಭೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ನೀಡಿದ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಶಾಸಕರು, ಸಚಿವರು ಒತ್ತಾಯಿಸಿದ್ದರು. ನಂತರ ರಮೇಶ್‌ ಕುಮಾರ್‌ ಟ್ವೀಟ್‌ ಮಾಡಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ರಿಲೇಶನ್‌ಶಿಪ್‌ನಲ್ಲಿ ಡಿಸ್ಟೆನ್ಸ್ ಹೆಚ್ಚಾಗಿದ್ದಕ್ಕೆ ಪ್ರಿಯಕರನಿಗೆ ಗುಂಡಿಟ್ಟ ಕಿರಾತಕಿ

  • ಜೈ ಶ್ರೀರಾಮ್ ಅನ್ನೋರು ರಾಕ್ಷಸರು: ರಶೀದ್ ಅಲ್ವಿ

    ಜೈ ಶ್ರೀರಾಮ್ ಅನ್ನೋರು ರಾಕ್ಷಸರು: ರಶೀದ್ ಅಲ್ವಿ

    ನವದೆಹಲಿ: ರಾಮರಾಜ್ಯ, ಜೈ ಶ್ರೀರಾಮ್ ಘೋಷಣೆ ಕೂಗುವವರು ರಾಕ್ಷಸರು ಎಂದು ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಉತ್ತರಪ್ರದೇಶದ ಸಂಭಾಲ್ ಜಿಲ್ಲೆಯ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ರಶೀದ್ ಅಲ್ವಿ, ಈ ದೇಶದಲ್ಲಿ ರಾಮರಾಜ್ಯ ಆಗಬೇಕು ಎನ್ನುವುದು ನಮಗೂ ಇದೆ. ಮೇಕೆಗಳು ಮತ್ತು ಸಿಂಹಗಳು ನೀರು ಕುಡಿಯುವ ರಾಜ್ಯದಲ್ಲಿ ದ್ವೇಷ ಹೇಗೆ ಉಂಟಾಗುತ್ತದೆ? ಈ ದೇಶದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಮೂಲಕಜನರನ್ನು ದಾರಿ ತಪ್ಪಿಸುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ. ಇದನ್ನೂ ಓದಿ  ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ನಾಯಕರೇ ಕಾರಣ: ಓವೈಸಿ

    ರಾಮರಾಜ್ಯ ಇದೆ ಎಂದು ಹೇಳುತ್ತೇವೆ. ಆದರೆ ರಾಮರಾಜ್ಯ ಹೇಗೆ ಇರಬೇಕು? ಜೈ ಶ್ರೀರಾಮ್ ಎಂದು ಘೋಷಣೆ ಕೂಗುವವರು ರಾಮಾಯಣದ ಕಾಲನೇಮಿ ರಾಕ್ಷಸರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಅಲ್ವಿ ಹೇಳಿಕೆಯ ವೀಡಿಯೋವನ್ನು ಟ್ವೀಟ್ ಮಾಡಿರುವ ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ, ಸಲ್ಮಾನ್ ಖುರ್ಷಿದ್ ನಂತರ ಕಾಂಗ್ರೆಸ್ ನಾಯಕ ರಶೀದ್ ಅಲ್ವಿ ಜೈ ಶ್ರೀರಾಮ್ ಹೇಳುವವರನ್ನು ನಿಶಾಚರರು ಎಂದು ಕರೆಯುತ್ತಾರೆ. ಭಕ್ತರ ಬಗ್ಗೆ ಕಾಂಗ್ರೆಸ್ಸಿನ ಚಿಂತನೆಗಳಲ್ಲಿ ಎಷು ವಿಷ ಬೆರೆತಿದೆ ಎಂದು ಆಕ್ರೋಶವನ್ನು ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೇಂಟಿಂಗ್‌ ಕೆಲಸಕ್ಕೆ ಬಂದು ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ- ಖತರ್ನಾಕ್‌ ಕಳ್ಳ ಅಂದರ್‌!

  • ಅತ್ಯಾಚಾರ, ಭ್ರಷ್ಟಾಚಾರ, ಭಯೋತ್ಪಾದನೆ ನೆಹರು ಕುಟುಂಬದ ಕೊಡುಗೆ: ಸಾಧ್ವಿ ಪ್ರಾಚಿ

    ಅತ್ಯಾಚಾರ, ಭ್ರಷ್ಟಾಚಾರ, ಭಯೋತ್ಪಾದನೆ ನೆಹರು ಕುಟುಂಬದ ಕೊಡುಗೆ: ಸಾಧ್ವಿ ಪ್ರಾಚಿ

    ನವದೆಹಲಿ: ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ವಿಶ್ವ ಹಿಂದು ಪರಿಷದ್ ನಾಯಕಿ ಸಾಧ್ವಿ ಪ್ರಾಚಿ, ಅತ್ಯಾಚಾರ, ಭ್ರಷ್ಟಾಚಾರ, ಭಯೋತ್ಪಾದನೆ ಎಲ್ಲವೂ ಸಮಾಜಕ್ಕೆ ನೆಹರು ಕುಟುಂಬದ ಕೊಡುಗೆ ಎಂದು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಾಧ್ವಿ ಪ್ರಾಚಿ, ಭಾರತ ಅತ್ಯಾಚಾರದ ರಾಜಧಾನಿಯಾಗಿ ಬೆಳೆಯುತ್ತಿದೆ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಕಿಡಿಕಾರಿದ್ದಾರೆ. ನಕ್ಸಲಿಸಂ, ಭಯೋತ್ಪಾದನೆ, ಅತ್ಯಾಚಾರಗಳೆಲ್ಲ ನೆಹರು ಕುಟುಂಬದಿಂದಲೇ ಬಂದಿದ್ದು ಎಂಬ ಗಂಭೀರ ಆರೋಪ ಮಾಡಿದ್ದಾರೆ. ಇದನ್ನು ಓದಿ: ಭಾರತ ವಿಶ್ವದ ಅತ್ಯಾಚಾರಗಳ ರಾಜಧಾನಿ: ರಾಹುಲ್ ಗಾಂಧಿ

    ನಮ್ಮ ದೇಶ ರಾಮ, ಕೃಷ್ಣನಂತವರು ಜನಿಸಿದ ಪುಣ್ಯಭೂಮಿ. ರಾಹುಲ್ ಗಾಂಧಿ ಹೇಳಿರುವುದು ಸರಿಯಲ್ಲ. ರಾಮ ಮತ್ತು ಕೃಷ್ಣನ ಸಂಸ್ಕೃತಿಯನ್ನು ನಮ್ಮ ದೇಶದಲ್ಲಿ ಹಾಳು ಮಾಡಿದ ನೆಹರು ಅವರೇ ಅತಿ ದೊಡ್ಡ ಅತ್ಯಾಚಾರಿ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ಮಾಡಿದ ಪ್ರಾಚಿ ಅಖಿಲೇಶ್ ಅಧಿಕಾರದಲ್ಲಿದ್ದಾಗ ಅತ್ಯಾಚಾರಿಗಳನ್ನೆಲ್ಲ ಕಾಪಾಡಿ, ಈಗ ಪ್ರತಿಪಕ್ಷದಲ್ಲಿ ಇದ್ದೇನೆ ಎಂದು ಧರಣಿ ಮಾಡುತ್ತಿದ್ದಾರೆ ಎಂದರು.

    ಹೈದರಾಬಾದ್‍ನ ಮಹಿಳಾ ಪಶುವೈದ್ಯಾಧಿಕಾರಿ ದಿಶಾ ಮೇಲೆ ಅತ್ಯಾಚಾರ ಮಾಡಿ ಹತ್ಯೆ ಮಾಡಿದ ನಾಲ್ವರು ಆರೋಪಿಗಳನ್ನು ಎನ್‍ಕೌಂಟರ್ ನಲ್ಲಿ ಕೊಂದ ಹೈದರಾಬಾದ್ ಪೊಲೀಸರನ್ನು ಸಾಧ್ವಿ ಪ್ರಾಚಿ ಶ್ಲಾಘಿಸಿದರು. ಉನ್ನಾವೋ ಸಂತ್ರಸ್ತೆಯ ಸಾವಿಗೆ ಕಾರಣವಾದವರ ಮೇಲೆ ಕೂಡ ಇದೇ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.

  • ಸ್ವತಂತ್ರ ಭಾರತದ ಮೊದಲ ಉಗ್ರ `ಹಿಂದೂ’: ಕಮಲ್ ಹಾಸನ್

    ಸ್ವತಂತ್ರ ಭಾರತದ ಮೊದಲ ಉಗ್ರ `ಹಿಂದೂ’: ಕಮಲ್ ಹಾಸನ್

    ಚೆನ್ನೈ: ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

    ಮೇ 19ರಂದು ಅರವಕುರುಚ್ಚಿ ವಿಧಾನಸಭಾ ಉಪಚುನಾವಣೆ ನಡೆಯಲಿದ್ದು, ಮಕ್ಕಳ್ ನೀದಿಮೈಯ್ಯಂ ಪಕ್ಷದ ಪರವಾಗಿ ಉಪಚುನಾವಣೆ ರ‍್ಯಾಲಿಯಲ್ಲಿ ಭಾಗಿಯಾಗಿ ಈ ಹೇಳಿಕೆ ನೀಡಿದ್ದಾರೆ. ಅರವಕುರುಚ್ಚಿ ವಿಧಾನಸಭಾ ಉಪಚುನಾವಣೆಗೆ ತಮ್ಮ ಎಂಎನ್‍ಎಂ ಪಕ್ಷದ ಅಭ್ಯರ್ಥಿಯ ಪ್ರಚಾರದ ರ್ಯಾಲಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತಾ ವಿವಾದವನ್ನು ಸೃಷ್ಟಿಸಿದ್ದಾರೆ.

    ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ಹೇಳಿದ್ದಾರೆ.

    ತಮಿಳುನಾಡಿನಲ್ಲಿ ಬಾಬ್ರಿ ಮಸೀದ್ ಬಗ್ಗೆ ಮೊದಲು ಧ್ವನಿ ಎತ್ತಿದ್ದು ನಾನು. ಅಲ್ಲದೆ ಒಳ್ಳೆಯ ಹೃದಯವಿರುವ ಮುಸಲ್ಮಾನರು ಎಂದಿಗೂ ಭಯೋತ್ಪಾದನೆಗೆ ಬೆಂಬಲ ನೀಡಲ್ಲ. ಈ ಬಗ್ಗೆ ಅವರು ಅವರ ಶ್ರೇಷ್ಠ ಗ್ರಂಥವನ್ನು ಮುಟ್ಟಿ ಹೇಳುತ್ತಾರೆ. ತ್ರಿವರ್ಣ ಧ್ವಜವೇ ಎಲ್ಲಕ್ಕಿಂತ ಶ್ರೇಷ್ಠವಾದದ್ದು. ಆದರೆ ತ್ರಿವರ್ಣದಲ್ಲಿ ಕೇವಲ ಒಂದು ಬಣ್ಣ ಉಳಿದ ಬಣ್ಣಗಳ ಮೇಲೆ ತನ್ನ ಹಿಡಿತವನ್ನು ಸಾಧಿಸುವಂತೆ ಆಗಬಾರದು. ಒಂದು ವೇಳೆ ಈ ರೀತಿಯಾದಲ್ಲಿ ನಾವು ಅದನ್ನು ತಡೆಯಬೇಕು. ದೇಶವನ್ನು ಒಡೆಯಲು ಪ್ರಯತ್ನಿಸುವ ಗುಂಪನ್ನು ಅಥವಾ ವ್ಯಕ್ತಿಯನ್ನು ಅಧಿಕಾರದಿಂದ ಇಳಿಸಬೇಕು ಎಂದರು.

    ಕಮಲ್‍ಹಾಸನ್ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಪುಲ್ವಾಮಾದಲ್ಲಿ ನಡೆದ ದಾಳಿಯಲ್ಲಿ 40 ಮಂದಿ ಸಿಆರ್ ಪಿಎಫ್ ಯೋಧರು ಹುತಾತ್ಮರಾದಾಗ ಪಾಕ್ ಆಕ್ರಮಿತ ಕಾಶ್ಮೀರವನ್ನು ಆಜಾದ್ ಕಾಶ್ಮೀರ, ಅಲ್ಲಿ ಜನಮತಗಣನೆ ನಡೆಯಲಿ ಎಂದು ಆಗ್ರಹಿಸುವ ಮೂಲಕ ವಿವಾದ ಸೃಷ್ಟಿಸಿದ್ದರು. ಬಳಿಕ ಎಲ್ಲ ರಾಜಕಾರಣಿಗಳಂತೆ, ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದರು.

  • ದೇಶದಲ್ಲಿ ಅಲ್ಪಸಂಖ್ಯಾತರು ಭಯದಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ: ಶಿವಶಂಕರ ರೆಡ್ಡಿ

    ದೇಶದಲ್ಲಿ ಅಲ್ಪಸಂಖ್ಯಾತರು ಭಯದಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ: ಶಿವಶಂಕರ ರೆಡ್ಡಿ

    ಚಿಕ್ಕಬಳ್ಳಾಪುರ: ಭಾರತ ಜಾತ್ಯಾತೀತವಾದ ದೇಶವಾಗಿದ್ದು, ಎಲ್ಲಾ ಜನಾಂಗದವರು, ಧರ್ಮೀಯರು ಸಮಾನತೆಯಿಂದ ಬದುಕುವಂತಹ ಸಂವಿಧಾನವನ್ನ ನಾವು ಒಪ್ಪಿಕೊಂಡಿದ್ದೇವೆ. ಆದರೂ ಕೂಡ ದೇಶದಲ್ಲಿ ಅಲ್ಪಸಂಖ್ಯಾತರು ಭಯದಿಂದ ಬದುಕುವಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಕೃಷಿ ಸಚಿವ ಶಿವಶಂಕರರೆಡ್ಡಿ ಹೇಳಿಕೆ ನೀಡಿದ್ದಾರೆ.

    ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಶಾದಿ ಮಹಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಜಾತಿ, ಧರ್ಮದ ವಿರುದ್ಧ ಕೆಲ ಮತೀಯ ಶಕ್ತಿಗಳು ಅಸ್ಥಿರಗೊಳಿಸುವ ಪ್ರಯತ್ನ ನಡೆಸುತ್ತಿವೆ. ಹೀಗಾಗಿ ಜಾತ್ಯಾತೀತ ತತ್ವಗಳಿಗೆ ತಿಲಾಂಜಲಿ ಇಡುವಂತಹ ಪ್ರಯತ್ನಗಳು ನಡೆಯುತ್ತಿವೆ. ಇದರಿಂದಾಗಿ ಈ ದೇಶದಲ್ಲಿ ಅಲ್ಪ ಸಂಖ್ಯಾತರು ಭಯದಿಂದ ಬದುಕುವಂತಾಗಿದೆ ಎಂದು ತಮ್ಮ ಮಾತನ್ನು ಸಮರ್ಥಿಸಿಕೊಂಡರು.

    ಈ ಮತೀಯ ಶಕ್ತಿಗಳಿಂದ ದೇಶವನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ತಮ್ಮದು ಜಾತ್ಯಾತೀತ ದೇಶವಾಗಿರುವುದರಿಂದ ಇಲ್ಲಿ ಎಲ್ಲಾ ವರ್ಗದ ಜನರು ಇದ್ದಾರೆ. ಆದರಿಂದ ನಾವೆಲ್ಲರೂ ಸೇರಿ ಜಾತ್ಯಾತೀತ ಸಂವಿಧಾನವನ್ನು ಉಳಿಸುವಂತಹ ಕೆಲಸ ಮಾಡಬೇಕಿದೆ ಎಂದು ಅಲ್ಪಸಂಖ್ಯಾತರಲ್ಲಿ ಶಿವಶಂಕರ್ ರೆಡ್ಡಿ ಮನವಿ ಮಾಡಿಕೊಂಡರು.

    ಇದೇ ವೇಳೆ ಇಂದು ಬೆಂಗಳೂರಿನಲ್ಲಿ ಏರ್ ಶೋ ತಾಲೀಮು ವೇಳೆ ಯುದ್ಧವಿಮಾನಗಳ ಅಪಘಾತ ದುರಾದೃಷ್ಟಕರ ಎಂದು ಬೇಸರ ವ್ಯಕ್ತ ಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯುದ್ಧಭೂಮಿಯಲ್ಲಿ ಮಹಿಳಾ ನೇಮಕಾತಿ ಕಷ್ಟ – ಸೇನಾ ಮುಖ್ಯಸ್ಥರ ವಿರುದ್ಧ ಆಕ್ರೋಶ

    ಯುದ್ಧಭೂಮಿಯಲ್ಲಿ ಮಹಿಳಾ ನೇಮಕಾತಿ ಕಷ್ಟ – ಸೇನಾ ಮುಖ್ಯಸ್ಥರ ವಿರುದ್ಧ ಆಕ್ರೋಶ

    – ಸೇನಾ ಮುಖ್ಯಸ್ಥ ರಾವತ್ ವಿರುದ್ಧ ಆನ್‍ಲೈನ್‍ನಲ್ಲಿ ಆಕ್ರೋಶ
    – ಹುತಾತ್ಮ ಮಹಿಳಾ ಯೋಧರ ಮೃತದೇಹ ನೋಡಲು ನಮ್ಮ ದೇಶ ಸಿದ್ಧವಿಲ್ಲ ಎಂದಿದ್ದ ಬಿಪಿನ್ ರಾವತ್

    ನವದೆಹಲಿ: ಯುದ್ಧಭೂಮಿಯಲ್ಲಿ ಕಾರ್ಯನಿರ್ವಹಿಸಲು ಮಹಿಳಾ ನೇಮಕಾತಿಗೆ ಇರುವ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ಬಳಕೆದಾರರು, ರಾವತ್ ಹೇಳಿಕೆ ಸೇನೆಯನ್ನು ಮುಜುಗರಕ್ಕೀಡು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಸೇನಾ ಮುಖ್ಯಸ್ಥರು ಹೇಳಿದ್ದೇನು?: ಖಾಸಗಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದ ವೇಳೆ ರಾವತ್ ಅವರು, ಮಹಿಳಾ ನೇಮಕಾತಿಯ ಹಲವು ಆಯಾಮಗಳ ಬಗ್ಗೆ ಮಾತನಾಡಿದ್ದರು.

    ಮಹಿಳೆಯರಿಗೆ ಯುದ್ಧ ಭೂಮಿಯಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕೊಡಲು ನಾನು ಸಿದ್ಧನಿದ್ದೇನೆ. ಆದರೂ ಸೇನೆಯಲ್ಲಿರುವ ಯೋಧರು ಗ್ರಾಮೀಣ ಪ್ರದೇಶಗಳಿಂದ ಬಂದಿರುತ್ತಾರೆ. ಅವರೆಲ್ಲಾ ಮಹಿಳಾ ಕಮಾಂಡರ್ ಗಳು ತಮ್ಮ ನೇತೃತ್ವ ವಹಿಸುವುದನ್ನು ಒಪ್ಪಲ್ಲ ಎಂದು ಹೇಳಿದ್ದರು.

    ಸೇನೆಯಲ್ಲಿ ಮಹಿಳೆಯರು ಎಂಜಿನಿಯರ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಾಯು ಪಡೆಯಲ್ಲಿ ಅವರೇ ನಮ್ಮ ಶಸ್ತ್ರ ವ್ಯವಸ್ಥೆಯನ್ನು ನಿಯಂತ್ರಿಸುತ್ತಾರೆ. ಯುದ್ಧಭೂಮಿಯಲ್ಲಿ ಆ ಮಹಿಳಾ ಯೋಧರು ಮೃತಪಡುವ ಸಾಧ್ಯತೆ ಇರುತ್ತವೆ. ಒಂದು ವೇಳೆ ಅವರು ಯುದ್ಧಭೂಮಿಯಲ್ಲಿ ಸಾವನ್ನಪ್ಪಿದರೆ ಮೃತದೇಹ ಮನೆಗೆ ಮರಳಿದಾಗ ಅದನ್ನು ನೋಡಲು ನಮ್ಮ ದೇಶ ಸಿದ್ಧವಿಲ್ಲ ಎಂದು ಹೇಳಿದ್ದರು.

    ಹಾಗಂತ ಅವರು ಬೇರೆಲ್ಲೂ ಸಾಯಲ್ಲ ಎಂದು ನಾನು ಹೇಳಲ್ಲ. ಮಕ್ಕಳನ್ನು ಹೊಂದಿರುವ ಮಹಿಳೆಯರು ರಸ್ತೆ ಅಪಘಾತಗಳಲ್ಲೂ ಸಾಯುತ್ತಾರೆ. ಆದರೆ ಯುದ್ಧಭೂಮಿಯಲ್ಲಿ ಸಾವನ್ನಪ್ಪಿದ ಮಹಿಳೆಯನ್ನು ನೋಡಲು ದೇಶ ಬಯಸುವುದೇ ಎಂದು ಪ್ರಶ್ನಿಸಿದರು.

    ಯುದ್ಧರಂಗದಲ್ಲಿ ಕರ್ತವ್ಯ ನಿರ್ವಹಿಸಲು ಮಹಿಳೆಯರಿಗೆ ಅವಕಾಶ ನೀಡಲು ಸೇನೆ ಸಿದ್ಧವಿಲ್ಲ ಎಂದಲ್ಲ. ಒಂದು ವೇಳೆ ಕಮಾಂಡರ್ ಹುದ್ದೆ ನೀಡಿದರೆ ಅವರು ದೀರ್ಘಾವಧಿಗೆ ಕುಟುಂಬದ ಹೊಣೆಗಾರಿಕೆಯಿಂದ ದೂರ ಉಳಿಯಬಹುದೇ? ಆಗ ಅವರಿಗೆ ಹೆರಿಗೆ ರಜೆ ನೀಡಲಾಗುವುದಿಲ್ಲ ಎಂದು ನಿರ್ಬಂಧ ಹೇರಬಹುದೇ? ಎಂದು ಪ್ರಶ್ನಿಸಿದ ಅವರು ನಾನು ಹೀಗೆ ಹೇಳಿದರೆ ವಿವಾದಕ್ಕೆ ಗುರಿಯಾಗುತ್ತದೆ ಎಂದು ಹೇಳಿದ್ದಾರೆ.

    ಟ್ಟೀಟ್ ನಲ್ಲಿ ಏನಿದೆ?:
    ಬಟ್ಟೆ ಬದಲಾಯಿಸುವಾಗ ಯೋಧರು ಇಣುಕುವ ಸಾಧ್ಯತೆ ಇದೆ. ಹೀಗಾಗಿ ಮಹಿಳೆಯರಿಗೆ ಯುದ್ಧಭೂಮಿಯಲ್ಲಿ ಅವಕಾಶ ನೀಡಲು ಸಾಧ್ಯವಿಲ್ಲ ಎನ್ನುವ ಮೂಲಕ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಸೇನೆ ಹಾಗೂ ದೇಶವನ್ನು ಮುಜುಗರಕ್ಕೀಡುಮಾಡಿದ್ದಾರೆ ಎಂದು ವಿಷ್ಣುಕಾಂತ್ ಶರ್ಮಾ ಎಂಬವರು ಟ್ವೀಟ್ ಮಾಡಿದ್ದಾರೆ.

    https://twitter.com/Dibyendu69/status/1074174987802599425

    ರಾವತ್ ಹೇಳಿಕೆ ನಿಜಕ್ಕೂ ಆಘಾತಕರ. ಅವರೀಗ ಸೇನೆ ಮತ್ತು ದೇಶವನ್ನು ಮುಜುಗರಕ್ಕೀಡುಮಾಡಲು ಶುರು ಮಾಡಿದ್ದಾರೆ. ಅವರ ನಿವೃತ್ತಿಗೆ ಇನ್ನೆಷ್ಟು ತಿಂಗಳುಗಳು ಬಾಕಿ ಇದೆ ಎಂದು ಪ್ರಶ್ನಿಸಿ ಜಸ್ಕಿರಾತ್ ಸಿಂಗ್ ನಗ್ರ ಎಂಬವರು ಕಿಡಿಕಾಡಿದ್ದಾರೆ.

    ಮಹಿಳೆಯರಿಗೆ ಖಾಸಗಿತನ ನೀಡಲಾಗದ್ದರ ಬಗ್ಗೆ ರಾವತ್ ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಮತ್ತು ಬುದ್ಧಿ ಇಲ್ಲದವರು ಕೊನೆಗೆ ಸೇನೆ ಸೇರಿದಾಗ ಹೀಗಾಗಲು ಸಾಧ್ಯ ಎಂದು ಲಿಂಡ್ಸೆ ಪೆರೆರಾ ಎಂಬವರು ಬಿಪಿನ್ ರಾವತ್ ಅವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com

  • ಬ್ರಾಹ್ಮಣರನ್ನು ಹೀಯಾಳಿಸಿ ಕ್ಷಮೆ ಕೇಳಿದ ಶಾಸಕ ಆನಂದ್ ನ್ಯಾಮಗೌಡ

    ಬ್ರಾಹ್ಮಣರನ್ನು ಹೀಯಾಳಿಸಿ ಕ್ಷಮೆ ಕೇಳಿದ ಶಾಸಕ ಆನಂದ್ ನ್ಯಾಮಗೌಡ

    ಬಾಗಲಕೋಟೆ: ಜಮಖಂಡಿ ಕ್ಷೇತ್ರದ ನೂತನ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಆನಂದ್ ನ್ಯಾಮಗೌಡ ಅವರು ಅಲ್ಪಸಂಖ್ಯಾತರನ್ನು ಒಲೈಸಲು ಹೋಗಿ ಬ್ರ್ರಾಹ್ಮಣರನ್ನು ಹೀಯಾಳಿಸಿ ಬಳಿಕ ಕ್ಷಮೆಯಾಚಿಸಿದ ಘಟನೆ ಇಂದು ನಡೆದಿದೆ.

    ಜಮಖಂಡಿಯಲ್ಲಿ ಇಂದು ನಡೆದ ಅಲ್ಪಸಂಖ್ಯಾತ ಸಮುದಾಯದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಆನಂದ್ ನ್ಯಾಮಗೌಡ, 1990 ರಲ್ಲಿ ನಮ್ಮ ತಂದೆ ಸಿದ್ದು ನ್ಯಾಮಗೌಡ ಬ್ರಾಹ್ಮಣ ಸಮುದಾಯದ ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿ ದೇಶಕ್ಕೆ ಚಿರಪರಿಚಿತರಾಗಿದ್ರು. ಸದ್ಯ ನಾನು ಬ್ರಾಹ್ಮಣ ವ್ಯಕ್ತಿಯನ್ನು ಸೋಲಿಸಿ ಶಾಸಕನಾಗಿದ್ದೇನೆ. ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು ಅವರನ್ನು ಸೋಲಿಸಿ ಇಂದು ಅಧಿಕಾರದಲ್ಲಿದ್ದೇನೆ ಎಂದು ವ್ಯಂಗ್ಯವಾಡಿದ್ದರು.

    ಆನಂದ್ ನ್ಯಾಮಗೌಡರ ಹೇಳಿಕೆಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬ್ರಾಹ್ಮಣ ಸಮಾಜದವರಿಂದ ಆನಂದ್ ನ್ಯಾಮಗೌಡರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿತ್ತು. ಈ ವಿಡಿಯೋ ಪಬ್ಲಿಕ್ ಟಿವಿಗೆ ಲಭಿಸಿದ್ದು, ಪ್ರಸಾರವಾದ ಬೆನ್ನಲ್ಲೇ ಶಾಸಕರು ಕ್ಷಮೆ ಕೋರಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕರು, `ಬ್ರಾಹ್ಮಣ ಸಮುದಾಯವನ್ನು ಹೀಯಾಳಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನನಗಿಂತ ಮೊದಲು ಭಾಷಣ ಮಾಡಿದವರು ಹೇಳಿದ ಮಾತನ್ನು ನಾನು ಮತ್ತೊಮ್ಮೆ ಹೇಳಿದ್ದೆ ಅಷ್ಟೆ. ಬ್ರಾಹ್ಮಣರನ್ನ ಸೋಲಿಸೋದು ನನ್ನ ಉದ್ದೇಶವಲ್ಲ ಚುನಾವಣೆ ಗೆಲ್ಲೋದು ನನಗೆ ಮುಖ್ಯವಾಗಿತ್ತು ಎಂದು ಸ್ಪಷ್ಟ ಪಡೆಸಲು ಆ ಮಾತು ಹೇಳಿದ್ದೆ. ಎಲ್ಲ ಸಮುದಾಯವನ್ನು ನಾವು ಸಮನಾಗಿ ನೋಡುತ್ತೇವೆ. ನನ್ನ ಹೇಳಿಕೆಯಿಂದ ಬ್ರಾಹ್ಮಣ ಸಮಾಜದವರಿಗೆ ನೋವಾಗಿದ್ದರೆ ಕ್ಷಮೆ ಕೇಳಲು ನಾನು ಸಿದ್ಧ ಎಂದು ಆನಂದ್ ನ್ಯಾಮಗೌಡ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews