Tag: ವಿವೇಕಾನಂದ ಕಾಲೇಜು

  • ಸಿಇಟಿಯಲ್ಲಿ ಪುತ್ತೂರು ವಿವೇಕಾನಂದ ವಿದ್ಯಾರ್ಥಿ ಗೌರೀಶ್ ಕಜಂಪಾಡಿಗೆ 9ನೇ ರ‍್ಯಾಂಕ್

    ಸಿಇಟಿಯಲ್ಲಿ ಪುತ್ತೂರು ವಿವೇಕಾನಂದ ವಿದ್ಯಾರ್ಥಿ ಗೌರೀಶ್ ಕಜಂಪಾಡಿಗೆ 9ನೇ ರ‍್ಯಾಂಕ್

    ಮಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ವೃತ್ತಿಪರ ಕೋರ್ಸುಗಳಿಗೆ ನಡೆಸಿದ 2020 ನೇ ಸಾಲಿನ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಹೊರ ಬಿದ್ದಿದೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಗೌರೀಶ್ ಕಜಂಪಾಡಿ ಅವರಿಗೆ ಎಂಜಿನಿಯರಿಂಗ್‍ನಲ್ಲಿ ರಾಜ್ಯಕ್ಕೆ 9ನೇ ರ‍್ಯಾಂಕ್ ಹಾಗೂ ಫಾರ್ಮಾದಲ್ಲಿ 10ನೇ ರ‍್ಯಾಂಕ್ ಲಭಿಸಿದೆ.

    ಇವರು ಪೆರ್ಲದ ಬಾಲರಾಜ್ ಹಾಗೂ ರಾಜನಂದಿನಿ ಕಜಂಪಾಡಿ ಇವರ ಪುತ್ರ. ಗೌರೀಶ್ 99.864 ಅಂಕಗಳೊಂದಿಗೆ ಜಿಇಇ 2020ರ ದಕ್ಷಿಣ ಕನ್ನಡದ ಟಾಪರ್ ಹಾಗೂ ಕೆವಿಪಿವೈ 2019 ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದ 454 ನೇ ರ‍್ಯಾಂಕ್ ಸಾಧನೆ ಮಾಡಿದ್ದಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ. ಇದನ್ನೂ ಓದಿ: ಸಿಇಟಿ ಫಲಿತಾಂಶ ಪ್ರಕಟ – ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳ ವಿವರ ಇಲ್ಲಿದೆ

    ಬೆಂಗಳೂರಿನ ಆರ್‌ವಿ ಪಿಯು ಕಾಲೇಜಿನ ರಕ್ಷಿತ್ ಎಂ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಎಂಜಿನಿಯರಿಂಗ್ ವಿಭಾಗದ ರ‍್ಯಾಂಕ್ ವಿಜೇತರ ಪಟ್ಟಿ ಇಂತಿದೆ.
    1. ರಕ್ಷಿತ್ ಎಂ- ಆರ್‌ವಿವಿ ಕಾಲೇಜ್ ಬೆಂಗಳೂರು
    2. ಶುಭನ – ಶ್ರೀ ಚೈತ್ಯನ್ಯ ಟೆಕ್ನೋ ಸ್ಕೂಲ್ ಬೆಂಗಳೂರು
    3. ಎಂ ಶಶಾಂಕ್ ಬಾಲಾಜಿ – ಬೇಸ್ ಪಿಯು ಕಾಲೇಜ್ ಹುಬ್ಬಳ್ಳಿ
    4. ಶಶಾಂಕ್ ಪಿ – ಎಕ್ಸ್ ಪರ್ಟ್ ಪಿಯು ಕಾಲೇಜ್, ಮಂಗಳೂರು
    5. ಸಂದೀಪ್ ನಾಸ್ಕರ್ – ಹೊರ ರಾಜ್ಯದ ವಿದ್ಯಾರ್ಥಿ
    6. ನಕುಲ್ ಅಭಯ್ – ವಿದ್ಯಾನಿಕೇತನ ಕಾಲೇಜ್, ಹುಬ್ಬಳ್ಳಿ
    7. ಎಸ್.ಶ್ರೀನಿವಾಸ್ – ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ಬೆಂಗಳೂರು
    8. ಅದ್ವೈತ್ ಪ್ರಸಾದ್ – ಏರ್‍ಫೋರ್ಸ್ ಸ್ಕೂಲ್ ಹೆಬ್ಬಾಳ, ಬೆಂಗಳೂರು
    9. ಗೌರೀಶ. ಕಜಂಪಾಡಿ – ವಿವೇಕಾನಂದ ಕಾಲೇಜ್, ಪುತ್ತೂರು
    10 ದೀಪ್ತೀ ಎಸ್. ಪಾಟೀಲ್ – ಬೇಸ್ ಪಿಯು ಕಾಲೇಜ್, ಬೆಂಗಳೂರು

    ಬಿ ಫಾರ್ಮಾ
    1. ಸಾಯಿ ವಿವೇಕ್.ಪಿ – ನಾರಾಯಣ ಇ-ಟೆಕ್ನೋ ಶಾಲೆ, ಬೆಂಗಳೂರು
    2. ಸಂದೀಪನ್ ನಸ್ಕರ್ – ಹೊರ ರಾಜ್ಯ
    3. ಪವನ್ ಎಸ್. ಗೌಡ – ನಾರಾಯಣ ಪಿಯು ಕಾಲೇಜ್, ಬೆಂಗಳೂರು
    4. ಆರ್ಯನ್ ಮಹಲಿಂಗಪ್ಪ ಚನ್ನಲ್ – ಪ್ರಗತಿ ಪಬ್ಲಿಕ್ ಸೆಕ್ಟರ್ ಸ್ಕೂಲ್ ಕೋಟ
    5. ಸಂಜನಾ ಕೆ. – ಬಿಎಎಸ್‍ಇ ಪಿಯು ಕಾಲೇಜ್, ಮೈಸೂರು
    6. ಎಂ.ಶಶಾಂಕ್ ಬಾಲಾಜಿ – ಬಿಎಎಸ್‍ಇ ಪಿಯು ಕಾಲೇಜ್, ಹುಬ್ಬಳ್ಳಿ
    7. ಅರ್ನವ್ ಅಯ್ಯಪ್ಪ ಪಿ.ಪಿ. – ಆಳ್ವಾಸ್ ಪಿಯು ಕಾಲೇಜ್ ಮೂಡುಬಿದ್ರೆ, ದಕ್ಷಿಣ ಕನ್ನಡ
    8. ವರುಣ್ ಗೌಡ ಎ.ಬಿ. – ಎಕ್ಸ್ ಪರ್ಟ್ ಪಿಯು ಕಾಲೇಜ್, ಮಂಗಳೂರು
    9. ಎಂ.ಡಿ. ಅರ್ಬಾಜ್ ಅಹ್ಮದ್ – ಶಾಹೀನ್ ಇಂಡಿಪೆಂಡೆಂಟ್ ಪಿಯು ಕಾಲೇಜ್, ಬೀದರ್
    10. ಗೌರೀಶ್ ಕಜಂಪಡಿ – ವಿವೇಕಾನಂದ ಪಿಯು ಕಾಲೇಜ್ ಪುತ್ತೂರು, ದಕ್ಷಿಣ ಕನ್ನಡ

  • 68 ವರ್ಷ ಮುಚ್ಚಿದ್ದ ದೇಶದ ಭವಿಷ್ಯದ ಬಾಗಿಲನ್ನು 2014ರಲ್ಲಿ ತೆರೆದೆವು- ಕಾಂಗ್ರೆಸ್ಸಿಗೆ ಶಾ ಪಂಚ್

    68 ವರ್ಷ ಮುಚ್ಚಿದ್ದ ದೇಶದ ಭವಿಷ್ಯದ ಬಾಗಿಲನ್ನು 2014ರಲ್ಲಿ ತೆರೆದೆವು- ಕಾಂಗ್ರೆಸ್ಸಿಗೆ ಶಾ ಪಂಚ್

    ಉಡುಪಿ: ವೇದಿಕೆಯಲ್ಲಿ ರಾಜಕಾರಣದಲ್ಲಿ ಐವತ್ತು ದಾಟಿದವರು ಇದ್ದೇವೆ. ಕೆಲವೇ ವರ್ಷದಲ್ಲಿ ಯುವಕರು ನಮ್ಮ ಜಾಗದಲ್ಲಿ ಇರಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದರು.

    ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜೊತೆಗಿನ ಸಂವಾದಕ್ಕೂ ಮುನ್ನ ನವ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ವಿಚಾರದಲ್ಲಿ ಶಾ ಮಾತನಾಡಿದರು. ಪಕ್ಷವನ್ನು ಪಕ್ಕಕ್ಕಿಟ್ಟು ಮಾತನಾಡುತ್ತೇನೆ, ಸ್ವಾತಂತ್ರ್ಯ ಹೋರಾಟ ಸಂದರ್ಭ ಪಕ್ಷ, ಜಾತಿ ಇರಲಿಲ್ಲ. ಸ್ವರಾಜ್ಯದ ಚಿಂತನೆ ಎಲ್ಲರ ಮನದಲ್ಲಿತ್ತು. ಈಗ ನವ ಭಾರತ ನಿರ್ಮಾಣಕ್ಕೆ ಯುವ ಪಡೆ ಟೊಂಕಕಟ್ಟಿ ನಿಲ್ಲಬೇಕು ಎಂದು ಕರೆ ನೀಡಿದರು.

    68 ವರ್ಷ ಭಾರತದ ಭವಿಷ್ಯದ ಬಾಗಿಲು ಮುಚ್ಚಿತ್ತು. ಭ್ರಷ್ಟಾಚಾರ ಭಾರತ ದೇಶವನ್ನು ಆವರಿಸಿತ್ತು. ನಾಲ್ಕು ವರ್ಷದ ಹಿಂದೆ ಬಾಗಿಲು ತೆರೆದಿದ್ದೇವೆ. 2014 ಚುನಾವಣೆ ಸುವರ್ಣಾಕ್ಷರದಲ್ಲಿ ಬರೆದೆವು. 30 ವರ್ಷದ ನಂತರ ಒಂದೇ ಪಕ್ಷ ಬಹುಮತ ಪಡೆಯಿತು, ಕಿಚಡಿ ಸರಕಾರಗಳಿಂದ ಭಾರತಕ್ಕೆ ಮುಕ್ತಿಯಾಯ್ತು. ಬಿಜೆಪಿ ಪಕ್ಷ ಸರಕಾರ ಮಾಡಲು ಅಧಿಕಾರ ಕ್ಕೆ ಬಂದಿಲ್ಲ. ಭಾರತದ ಸದೃಢತೆಯ ನಿಲುವು ಬಿಜೆಪಿದ್ದು. ಓಟ್ ಬ್ಯಾಂಕ್ ರಾಜಕಾರಣ ನಾವು ಮಾಡಲ್ಲ. ಯಾರನ್ನು ಓಲೈಕೆ ಮಾಡುವ ಉದ್ದೇಶ ನಮಗಿಲ್ಲ ಎಂದು ವಿಪಕ್ಷಗಳಿಗೆ ಟಾಂಗ್ ಕೊಟ್ಟರು.

    ದೇಶದಲ್ಲಿ ಅಂಧಕಾರ ಕವಿದಿತ್ತು. ಬಡವರ ಮನೆಯಲ್ಲಿ ಒಲೆ ಉರಿಯುತ್ತಿರಲಿಲ್ಲ, ಈಗ ಮನೆಗಳಲ್ಲಿ ಬೆಳಕು ಬಂದಿದೆ. ಅಡುಗೆ ಮನೆಗೆ ಉಚಿತ ಸಿಲಿಂಡರ್ ಬಂದಿದೆ. ಮೋದಿಯ ಸ್ವಚ್ಛ ಆಡಳಿತ ಶುರುಮಾಡಿರೋದ್ರಿಂದ ದಿನಗಳು ಕಠಿಣವಾಗಿ ಕಾಣಿಸುತ್ತಿರಬಹುದು. ಭಾರತದ ಮುಂದಿನ ದಿನಗಳು ಒಳ್ಳೆಯದಿರುತ್ತದೆ. ದೇಶಾದ್ಯಂತ ಕೋಟ್ಯಾಂತರ ಶೌಚಾಲಯ ನಿರ್ಮಾಣವಾಗಿದೆ, ಮೋದಿ ಕೇರ್, ಮುಂದಿನ 4 ವರ್ಷಗಳಲ್ಲಿ ಎಲ್ಲಾ ಮನೆಗಳಲ್ಲಿ ಎಲ್ಲಾ ಸವಲತ್ತು ಇರುತ್ತದೆ ಎಂದು ಹೇಳಿದರು.

    ಉರಿಯಲ್ಲಿ 12 ಯೋಧರ ಹತ್ಯೆಯಾಯ್ತು. ಮೋದಿ ಭಾಷಣ ಮಾಡಲಿಲ್ಲ. ಸರ್ಜಿಕಲ್ ಸ್ಟ್ರೈಕ್ ಮೂಲಕ ಉತ್ತರ ಕೊಟ್ಟರು. ಅಮೇರಿಕ, ಇಸ್ರೇಲ್ ರೀತಿ ಭಾರತೀಯ ಯೋಧರಿಗೂ ವಿಶ್ವದಲ್ಲಿ ಗೌರವವಿದೆ ಎಂದರು.

    ಯೋಧರ ಕೈಯಲ್ಲಿರುವ ಬಂದೂಕಿನ ಗೋಲಿಗೆ ಗೋಲ್ ಯಾವುದೆಂದು ಗೊತ್ತಿದೆ. ವಿರೋಧಿಗರಿಗೆ ಉತ್ತರಿಸಲು ನಮಗೆ ಗೊತ್ತಿದೆ. ನಾವು ಶಾಂತಿಯನ್ನು ಅಪೇಕ್ಷಿಸುವ ಭಾರತೀಯರು ಎಂದು ಶಾ ವಿರೋಧಿ ಪಾಕ್ ಮತ್ತು ಚೀನಾ ಕುರಿತು ಹೇಳಿದರು. ಸ್ಕಿಲ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ ನೆನಪಿಸಿದ ಶಾ, ಯುವಕರಿಗಾಗಿ ಕೇಂದ್ರ ಸರ್ಕಾರ ಬೆನ್ನೆಲುಬಾಗಿ ನಿಲ್ಲುತ್ತದೆ ಎಂದರು.

  • ಮಾತೃಭಾಷೆಯನ್ನು ಕಡೆಗಣಿಸಿ ಮಕ್ಕಳಿಗೆ ಬಲವಂತದ ಮಾಘ ಸ್ನಾನ ಮಾಡೋದು ಅವಮಾನದ ಲಕ್ಷಣ: ಹೆಗ್ಡೆ

    ಮಾತೃಭಾಷೆಯನ್ನು ಕಡೆಗಣಿಸಿ ಮಕ್ಕಳಿಗೆ ಬಲವಂತದ ಮಾಘ ಸ್ನಾನ ಮಾಡೋದು ಅವಮಾನದ ಲಕ್ಷಣ: ಹೆಗ್ಡೆ

    ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಭಾಷೆಯ ಕುರಿತಂತೆ ನೀಡಿದ್ದ ಹೇಳಿಕೆ ಸುದ್ದಿಯಾಗುತ್ತಿದ್ದಂತೆಯೇ ಕೌಶಾಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆಯವರು ಸ್ಪಷ್ಟನೆ ನೀಡಿದ್ದಾರೆ.

    ಭಾಷೆಯ ಕುರಿತು ಮಾತನಾಡಿದರ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಸ್ಪಷ್ಟನೆ ನಿಡಿದ್ದಾರೆ. ಅಲ್ಲದೇ ಅದರ ಜೊತೆಗೆ ಒಂದು ವಿಡಿಯೋ ಕೂಡ ಅಪ್ಲೋಡ್ ಮಾಡಿದ್ದಾರೆ.

    ಫೇಸ್‍ಬುಕ್ ನಲ್ಲಿ ಬರೆದುಕೊಂಡಿರೋದೇನು?: ಮಾತೃ ಭಾಷೆಯ ಉಳಿವು ಪ್ರಶ್ನೆಯಲ್ಲ. ಬದಲಿಗೆ ಇಂದು ಅವು ಗಟ್ಟಿಯಾಗಿ ಇನ್ನು ಹಲವಾರು ತಲೆಮಾರಿಗೆ ಶ್ರೀಮಂತವಾಗಿ ಧಾರೆಯೆರೆಯುವ ಒಂದು ಸುವ್ಯವಸ್ಥೆಯನ್ನು ನಿರ್ಮಾಣ ಮಾಡಬೇಕಿದೆ. ಇಂದು ಬಹುತೇಕ ಭಾಷೆಯ ಬಗ್ಗೆ ಹೋರಾಟ ಕೇವಲ ವೈಯಕ್ತಿಕ ಮತ್ತು ರಾಜಕೀಯ ಕೀಳು ದೊಂಬರಾಟವಾಗಿ ಮಾರ್ಪಟ್ಟಾಗಿರುವುದು ಪ್ರಸ್ತುತ ನಮ್ಮ ಸಮಾಜದ ಒಂದು ದೊಡ್ಡ ದುರಂತ. ಆಂಗ್ಲ ಮಾಧ್ಯಮದ ಪ್ರಭಾವ ನಮ್ಮ ಶಾಲಾ ಶಿಕ್ಷಣ ವ್ಯವಸ್ಥೆಯನ್ನೇ ಬುಡಮೇಲುಗೊಳಿಸಿದೆ. ಶುದ್ಧವಾಗಿ ಕನ್ನಡ ಭಾಷೆ ಮಾತನಾಡುವುದು ಸಹ ಇಂದು ಒಂದು ಅಪರೂಪದ ಕಲೆಯಾಗಿ ನೋಡಲಾಗುತ್ತಿದೆ ಮತ್ತು ಇಂದಿನ ತಲೆಮಾರಿನ ಹಲವರಿಗೆ ಶುದ್ಧ ಕನ್ನಡ ಅರ್ಥವಾಗದಿರುವ ಭಾಷೆಯು ಹೌದು. ಕನ್ನಡ ಸಂಭಾಷಣೆಯಲ್ಲಿ ಆಂಗ್ಲ ಮತ್ತು ಇನ್ನಿತರ ಭಾಷೆಯ ಕಲಸು ಮಿಶ್ರಿತ ಮಾಡದಿದ್ದರೆ ಸಂವಹನ ಪೂರ್ಣಗೊಳ್ಳುವುದಿಲ್ಲ ಮತ್ತು ಅದು ಒಂದು sಣಚಿಣus ನಿರ್ಮಾಣ ಮಾಡುವುದಿಲ್ಲವೆನ್ನುವುದು ಸಹ ಇಂದಿನ ಹದೆಗೆಟ್ಟ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಇದು ಹೆಚ್ಚಾಗಿ ಬೆಂಗಳೂರು ನಗರದಲ್ಲಿ ಕಂಡು ಬರುತ್ತಿದ್ದ ಒಂದು ನಕಾರಾತ್ಮಕ ಬೆಳವಣಿಗೆ. ಇಂದು ಬೇರೆ ಗ್ರಾಮಾಂತರ ಹಳ್ಳಿ- ಪಟ್ಟಣಗಳಿಗೆ ಸಹ ದಟ್ಟವಾಗಿ ವ್ಯಾಪಿಸುತ್ತಿದೆ. ಇದನ್ನೂ ಓದಿ: ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ತಿರುಗಿ ಬಿದ್ದ ಶಾಸಕ ಸುರೇಶ್ ಕುಮಾರ್

    ಭಾಷೆಯ ಶ್ರೀಮಂತಿಕೆಯನ್ನು ಹೆಮ್ಮೆಯಿಂದ ಮೆರೆಯಬೇಕಾದವರು ಇಂದು ಅದನ್ನು ಕಡೆಗಣಿಸುತ್ತಿದ್ದೇವೆ. ಇಂದು ಹಲವಾರು ಭಾರತೀಯರ ಮನೆಮಾತು ಆಂಗ್ಲ ಭಾಷೆಯಾಗಿ ಬದಲಾಗಿದೆ. ಹಾಗಾದರೆ ನಮ್ಮ ಎಲ್ಲ ಭಾರತೀಯ ಭಾಷೆಗಳು ನಮ್ಮ ಇಂದಿನ ಸ್ಥಿತಿ-ಗತಿಗೆ ಸಮರ್ಥವಲ್ಲವೇ? ನಮ್ಮ ಕನ್ನಡದಷ್ಟು ವೈವಿಧ್ಯ ಚೆಲುವನ್ನು ಇನ್ನೆಲ್ಲಿ ಕಾಣಲು ಸಾಧ್ಯ? ನಗರಗಳಲ್ಲಿ ಇಂದು ಅಂತರರಾಷ್ಟ್ರೀಯ ಶಾಲೆಗಳಲ್ಲಿ ನಮ್ಮ ಮಾತೃ ಭಾಷೆಯನ್ನು ಸಂಪೂರ್ಣವಾಗಿ ಕಡೆಗಣಿಸಿ, ಐರೋಪ್ಯ ಭಾಷೆಗಳ ಹೇರಿಕೆ ನಡೆಯುತ್ತಿದೆ. ಈ ಭಾಷೆಗಳು ಇಂದು ಯುರೋಪ್ ಖಂಡದ ಆಯಾ-ಪ್ರದೇಶ ದೇಶಗಳಲ್ಲೇ ಅವನತಿಯತ್ತ ಸಾಗುತ್ತಿದೆ. ಮೂಲ ಜನಸಂಖ್ಯೆ ಕುಸಿತ, ವಲಸೆ ಭಾಷೆಯ ಬೆಳೆಯುತ್ತಿರುವ ಪ್ರಭಾವ, ಬದಲಾಗುತ್ತಿರುವ ಜನಸಂಖ್ಯೆ ಪರಿವರ್ತನೆ, ಇಂದು ಈ ಖಂಡದ ಪ್ರಮುಖ ಸವಾಲಾಗಿದೆ. ಆದರೆ ನಾವು ಇಂದು, ಅರ್ಥವಾಗದ ಮತ್ತು ನಮ್ಮ ಪರಂಪರೆಗೆ ಯಾವುದೇ ಸಂಬಂಧವಿಲ್ಲದ ಈ ವಿದೇಶಿ ಭಾಷೆಗಳಿಗೆ ಮನ್ನಣೆ ನೀಡುತ್ತಿದ್ದೇವೆ. ಹಾಗೂ ನಮ್ಮ ಮಾತೃಭಾಷೆಯನ್ನು ಕಡೆಗಣಿಸಿ ಮಕ್ಕಳಿಗೆ ಬಲವಂತದ ಮಾಘಸ್ನಾನ ಮಾಡಿಸುತ್ತಿರುವುದು ಅವಮಾನದ ಲಕ್ಷಣವೆಂದೇ ಪರಿಗಣಿಸುತ್ತೇನೆ. ಇದನ್ನೂ ಓದಿ: ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ನಟ ಜಗ್ಗೇಶ್ ಟಾಂಗ್

    ಭಾಷೆ ನಮ್ಮ ಸಂಸ್ಕೃತಿಯನ್ನು ಸೂಚಿಸುತ್ತದೆ. ಇಂದು ಕನ್ನಡಿಗರಿಗೆ ಸಿಗುತ್ತಿರುವ ಸ್ಥಾನ-ಮಾನ, ಮರ್ಯಾದೆ ಎಲ್ಲವೂ ನಮ್ಮ ಶ್ರೀಮಂತ ಪರಂಪರೆಯ ಬಳುವಳಿಯಿಂದ ಬಂದದ್ದು. ಅದನ್ನು ನಾವು ಹೆಮ್ಮೆಯಿಂದ ಬಳಸಿ, ಉಳಿಸಿ ಇನ್ನಷ್ಟು ಮೆರುಗುಗೊಳಿಸುವುದು ನಮ್ಮನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುತ್ತದೆ. ಶುದ್ಧ ಕನ್ನಡ ಬಳಕೆ ನಮ್ಮ ವ್ಯಕ್ತಿತ್ವ ನಿರ್ಮಾಣ ಮಾಡುವುದು ಹಾಗೂ ಸಂವಹನದಲ್ಲಿ ಹೆಚ್ಚಿನ ಆಲೋಚನೆಯ ನಿಖರತೆಯನ್ನು ತಲುಪಬಹುದಾಗಿದೆ.

    ವಿಡಿಯೋದಲ್ಲೇನಿದೆ?: ಇದಷ್ಟು ಹೇಳಲು ಕಾರಣ ನಮ್ಮ ಕೆಲವು ದೃಶ್ಯ ಮಾಧ್ಯಮದವರು ಭಾಷೆಗೆ ಸಂಬಂಧಿಸಿದಂತೆ ಪುತ್ತೂರಿನ ಕಾರ್ಯಕ್ರಮ ಒಂದರಲ್ಲಿ ನನ್ನ ಮಾತು ಮತ್ತು ಆಲೋಚನೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿರುವುದ್ದಕ್ಕೆ ಹೃದಯಪೂರ್ವಕ ಸ್ವಾಗತ. ಹೀಗೆ ಕಳೆದ 2 ದಶಕಕ್ಕೂ ಹೆಚ್ಚಿನ ನನ್ನ ರಾಜಕಾರಣದ ಜೀವನದ ಉದ್ದಕ್ಕೂ ಸದಾ ನನ್ನ ಬಗ್ಗೆ ವಿಷಕಾರುತ್ತಲೇ ನನ್ನನ್ನು ಅನಾವರಣಗೊಳಿಸಿದ ಈ ಕೆಲವು ಮಾಧ್ಯಮದ ಮಂದಿಗೆ ಈ ವಿಷಯವನ್ನು ಇನ್ನು ಹೆಚ್ಚಾಗಿ ನಿಮ್ಮ ಅಪ್ರಬುದ್ಧ ಭಾಷೆಯಲ್ಲೇ ಚರ್ಚೆ ಮುಂದುವರಿಸುವಂತೆ ಶುಭ ಕೋರುತ್ತೇನೆ. ಅನಂತ ಧನ್ಯವಾದಗಳು ಅಂತ ಹೇಳಿದ್ದಾರೆ.

    https://www.youtube.com/watch?v=tlNDCv9myi4&feature=youtu.be

    https://www.youtube.com/watch?v=jE4xn6DpZhY

    https://www.youtube.com/watch?v=24frMpm0HGY