Tag: ವಿವೇಕ್ ಅಗ್ನಿಹೋತ್ರಿ

  • ಆಸ್ಕರ್ ವೇದಿಕೆಯಲ್ಲಿ ದೀಪಿಕಾ : ‘ಅಚ್ಚೇ ದಿನ್’ ಎಂದ ವಿವೇಕ್ ಅಗ್ನಿಹೋತ್ರಿ

    ಆಸ್ಕರ್ ವೇದಿಕೆಯಲ್ಲಿ ದೀಪಿಕಾ : ‘ಅಚ್ಚೇ ದಿನ್’ ಎಂದ ವಿವೇಕ್ ಅಗ್ನಿಹೋತ್ರಿ

    ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಈ ಬಾರಿಯ ಆಸ್ಕರ್ (Oscar) ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಡೆಸಿಕೊಡಲಿದ್ದಾರೆ. ಈ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಒಟ್ಟು 16 ಜನರನ್ನು ನಿರೂಪಕರನ್ನಾಗಿ ಆಯ್ಕೆ ಮಾಡಿದ್ದು, ಅದರಲ್ಲಿ ದೀಪಿಕಾ ಪಡುಕೋಣೆ ಕೂಡ ಒಬ್ಬರು ಎನ್ನುವುದು ವಿಶೇಷ. ಈ ಆಯ್ಕೆಯನ್ನು ದಿ ಕಾಶ್ಮೀರ್ ಫೈಲ್ಸ್  (The Kashmir Files) ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಸ್ವಾಗತಿಸಿದ್ದಾರೆ. ಭಾರತವು ಎಲ್ಲ ಕ್ಷೇತ್ರದಲ್ಲೂ ಮುನ್ನುಗ್ಗುತ್ತಿದೆ. ಇದೇ ಅಚ್ಚೇ ದಿನ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಪ್ರತಿ ವರ್ಷವೂ ಒಂದಿಲ್ಲೊಂದು ಮಹತ್ವದ ಜವಾಬ್ದಾರಿಯನ್ನು ದೀಪಿಕಾ ನಿರ್ವಹಿಸುತ್ತಿದ್ದಾರೆ. 2022ನೇ ಸಾಲಿನ ಕೇನ್ಸ್ ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್ ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ. ಈ ಮಾಹಿತಿಯನ್ನು ಸ್ವತಃ ದೀಪಿಕಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಆ ದಿನಕ್ಕಾಗಿ ಕಾಯುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ನಟ ಗೋಪಿಚಂದ್‌ಗೆ ಸ್ಯಾಂಡಲ್‌ವುಡ್‌ ನಿರ್ದೇಶಕ ಎ.ಹರ್ಷ ಆ್ಯಕ್ಷನ್ ಕಟ್

    ಇದೇ ಮಾರ್ಚ್ 12ರಂದು (ಭಾರತೀಯ ಕಾಲಮಾನದ ಪ್ರಕಾರ ಮಾರ್ಚ್ 13) ಲಾಸ್ ಏಂಜಲೀಸ್ ನಲ್ಲಿ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಹತ್ತು ಜನ ನಿರೂಪಕರು ಕೆಲಸ ಮಾಡಲಿದ್ದಾರೆ. ಅದರಲ್ಲಿ ದೀಪಿಕಾ ಪಡುಕೋಣೆ ಕೂಡ ಒಬ್ಬರು. ದೀಪಿಕಾ ಜೊತೆ ಮೆಲಿಸ್ಸಾ ಮೆಕಾರ್ಥಿ, ಜಾನೆಲ್ಲೆ ಮೋನೆ, ಜೆನ್ನಿಫರ್ ಕೊನ್ನೆಲ್ಲಿ, ಸ್ಯಾಮ್ಯುಯೆಲ್ ಎಲ್ ಜಾಕ್ಸನ್, ಜೋ ಸಲ್ಡಾನಾ ಸೇರಿದಂತೆ ಇತರರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

    ಈ ಬಾರಿ ಆಸ್ಕರ್ ವೇದಿಕೆಯ ಮೇಲೆ ನಿರಂತರವಾಗಿ ದೀಪಿಕಾ ಕಾಣಿಸಿಕೊಂಡರೆ, ರಾಮ್ ಚರಣ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಲೈವ್ ಆಗಿ ಡ್ಯಾನ್ಸ್ ಮಾಡಲಿದ್ದಾರೆ. ಅಲ್ಲದೇ, ಅದೇ ವೇದಿಕೆಯಲ್ಲೇ ಗಾಯಕರಾದ ರಾಹುಲ್ ಸಿಪ್ಲಿಗುಂಜ್ ಮತ್ತು ಕಾಲಾ ಭೈರವ ಹಾಡಲಿದ್ದಾರೆ. ಭಾರತದಿಂದ ಆಲ್ ದಟ್ ಬ್ರೀಥ್ಸ್, ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಗಳು ನಾಮ ನಿರ್ದೇಶನಗೊಂಡಿವೆ. ಆರ್.ಆರ್.ಆರ್ ಸಿನಿಮಾದ ನಾಟು ನಾಟು ಕೂಡ ಪ್ರಶಸ್ತಿಯ ರೇಸ್ ನಲ್ಲಿದೆ.

  • ಬಾಯ್ಕಾಟ್ ಗ್ಯಾಂಗಿಗೆ ಅಕ್ಷಯ್ ಕುಮಾರ್ ತಿರುಗೇಟು: ಶಾರುಖ್ ಪರ ನಿಂತ ನಟ

    ಬಾಯ್ಕಾಟ್ ಗ್ಯಾಂಗಿಗೆ ಅಕ್ಷಯ್ ಕುಮಾರ್ ತಿರುಗೇಟು: ಶಾರುಖ್ ಪರ ನಿಂತ ನಟ

    ಬಾಲಿವುಡ್ ನಲ್ಲಿ ಬಾಯ್ಕಾಟ್ ಕಾವು ಜೋರಾಗಿದೆ. ಇದಕ್ಕೆ ಬಾಲಿವುಡ್ ನಿರ್ಮಾಪಕರು ಬೇಸತ್ತು ಹೋಗಿದ್ದಾರೆ. ಬಾಯ್ಕಾಟ್ ಗಾಳಿ ಎಷ್ಟೇ ಜೋರಾದರೂ, ಪಠಾಣ್ ಸಿನಿಮಾವನ್ನು ಏನೂ ಮಾಡುವುದಕ್ಕೆ ಆಗಲಿಲ್ಲ. ಹಾಗಾಗಿ ಅಕ್ಷಯ್ ಕುಮಾರ್ ತಮ್ಮ ಮುಂದಿನ ಸಿನಿಮಾ ಸೆಲ್ಫಿಯಲ್ಲಿ ಬಾಯ್ಕಾಟ್ ಮಾಡುವವರನ್ನೇ ಟ್ರೋಲ್ ಮಾಡಿದ್ದಾರೆ. ಈ ಮೂಲಕ ಅಕ್ಷಯ್ ಹೊಸದೊಂದು ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಸಡನ್ನಾಗಿ ಶಾರುಖ್ ಪರ ಅಕ್ಷಯ್ ನಿಂತಿದ್ದು ಅಚ್ಚರಿಯನ್ನೂ ಮೂಡಿಸಿದೆ.

    ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದ ಗೆಲುವನ್ನು ಅನೇಕರು, ಅನೇಕ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಬಾಲಿವುಡ್ ಸಿನಿಮಾ ರಂಗಕ್ಕೆ ಚೈತನ್ಯ ತುಂಬಿದ ಸಿನಿಮಾವಿದು ಎಂದು ಕೆಲವರು ಪ್ರಶಂಸೆ ಮಾಡುತ್ತಿದ್ದರೆ, ಶಾರುಖ್ ವಿರೋಧಿಗಳು ಈ ಗೆಲುವನ್ನು ಅರ್ಥೈಸುತ್ತಿರುವ ಪರಿಯೇ ವಿಚಿತ್ರವಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರಖ್ಯಾತಿಯ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಬಾಯ್ಕಾಟ್ ಪರಿಯನ್ನೇ ಅವರು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಸಮಂತಾಗೆ ಹೋಲಿಸಿದ ನೆಟ್ಟಿಗರಿಗೆ `ಗಾಳಿಪಟ 2′ ನಾಯಕಿ ಏನಂದ್ರು ಗೊತ್ತಾ?

    ಪಠಾಣ್ ಸಿನಿಮಾ ಅತೀ ಹೆಚ್ಚು ಜನರಿಗೆ ತಲುಪುವಂತೆ ಮಾಡಿದ್ದು, ಸಿನಿಮಾದ ಕಂಟೆಂಟ್ ಗಿಂತಲೂ ವಿರೋಧಿಗಳು ನಡೆಸಿದ ಬಾಯ್ಕಾಟ್ ಎನ್ನುವ ಮಾತಿದೆ. ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಹಲವು ಪ್ರತಿಭಟನೆಗಳು ಕೂಡ ನಡೆದವು. ಈ ಬಾಯ್ಕಾಟ್ ಸಿನಿಮಾಗೆ ವರವಾಯಿತು ಎಂದು ಹೇಳಲಾಗುತ್ತಿದೆ. ಇದೀಗ ಆ ಬಾಯ್ಕಾಟ್ ಬಗ್ಗೆಯೇ ಅಗ್ನಿಹೋತ್ರಿ ಅನುಮಾನ ವ್ಯಕ್ತಪಡಿಸಿದ್ದಾರೆ.

    ‘ನಿಜವಾಗಿಯೂ ಬಾಯ್ಕಾಟ್ ಮಾಡಿದ್ದು ಯಾರು? ಶಾರುಖ್ ಖಾನ್ ಅವರ ಗ್ಯಾಂಗೇ ಈ ರೀತಿಯಲ್ಲಿ ಪ್ರಚಾರ ಮಾಡಿತಾ ಎನ್ನುವ ಅನುಮಾನ ನನ್ನದು. ಬಾಯ್ಕಾಟ್ ಎನ್ನುವುದು ಸಿನಿಮಾ ಪ್ರಚಾರದ ಒಂದು ಭಾಗ ಆಗಿತ್ತಾ? ‘ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಪಠಾಣ್ ಗೆಲುವನ್ನು ತಾವು ಗೆಲುವು ಎಂದು ಕರೆಯುವುದಿಲ್ಲ ಎಂದೂ ಅವರು ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪಠಾಣ್’ ಬಾಯ್ಕಾಟ್ ಗ್ಯಾಂಗ್ ಬಗ್ಗೆ ಅನುಮಾನವಿದೆ :  ವಿವೇಕ್ ಅಗ್ನಿಹೋತ್ರಿ

    ‘ಪಠಾಣ್’ ಬಾಯ್ಕಾಟ್ ಗ್ಯಾಂಗ್ ಬಗ್ಗೆ ಅನುಮಾನವಿದೆ : ವಿವೇಕ್ ಅಗ್ನಿಹೋತ್ರಿ

    ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ (Pathan) ಸಿನಿಮಾದ ಗೆಲುವನ್ನು ಅನೇಕರು, ಅನೇಕ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಬಾಲಿವುಡ್ ಸಿನಿಮಾ ರಂಗಕ್ಕೆ ಚೈತನ್ಯ ತುಂಬಿದ ಸಿನಿಮಾವಿದು ಎಂದು ಕೆಲವರು ಪ್ರಶಂಸೆ ಮಾಡುತ್ತಿದ್ದರೆ, ಶಾರುಖ್ ವಿರೋಧಿಗಳು ಈ ಗೆಲುವನ್ನು ಅರ್ಥೈಸುತ್ತಿರುವ ಪರಿಯೇ ವಿಚಿತ್ರವಿದೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರಖ್ಯಾತಿಯ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಮತ್ತೊಂದು ಹೆಜ್ಜೆ ಮುಂದೆ ಹೋಗಿ, ಬಾಯ್ಕಾಟ್ (Boycott) ಪರಿಯನ್ನೇ ಅವರು ಪ್ರಶ್ನೆ ಮಾಡಿದ್ದಾರೆ.

    ಪಠಾಣ್ ಸಿನಿಮಾ ಅತೀ ಹೆಚ್ಚು ಜನರಿಗೆ ತಲುಪುವಂತೆ ಮಾಡಿದ್ದು, ಸಿನಿಮಾದ ಕಂಟೆಂಟ್ ಗಿಂತಲೂ ವಿರೋಧಿಗಳು ನಡೆಸಿದ ಬಾಯ್ಕಾಟ್ ಎನ್ನುವ ಮಾತಿದೆ. ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಹಲವು ಪ್ರತಿಭಟನೆಗಳು ಕೂಡ ನಡೆದವು. ಈ ಬಾಯ್ಕಾಟ್ ಸಿನಿಮಾಗೆ ವರವಾಯಿತು ಎಂದು ಹೇಳಲಾಗುತ್ತಿದೆ. ಇದೀಗ ಆ ಬಾಯ್ಕಾಟ್ ಬಗ್ಗೆಯೇ ಅಗ್ನಿಹೋತ್ರಿ ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಸಮಂತಾ ಬಳಿಕ ವಿಚಿತ್ರ ಕಾಯಿಲೆ ಬಗ್ಗೆ ಬಾಯ್ಬಿಟ್ಟ ಅನುಷ್ಕಾ ಶೆಟ್ಟಿ

    ‘ನಿಜವಾಗಿಯೂ ಬಾಯ್ಕಾಟ್ ಮಾಡಿದ್ದು ಯಾರು? ಶಾರುಖ್ ಖಾನ್ ಅವರ ಗ್ಯಾಂಗೇ ಈ ರೀತಿಯಲ್ಲಿ ಪ್ರಚಾರ ಮಾಡಿತಾ ಎನ್ನುವ ಅನುಮಾನ ನನ್ನದು. ಬಾಯ್ಕಾಟ್ ಎನ್ನುವುದು ಸಿನಿಮಾ ಪ್ರಚಾರದ ಒಂದು ಭಾಗ ಆಗಿತ್ತಾ? ‘ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಪಠಾಣ್ ಗೆಲುವನ್ನು ತಾವು ಗೆಲುವು ಎಂದು ಕರೆಯುವುದಿಲ್ಲ ಎಂದೂ ಅವರು ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಕಾಶ್ ರೈ ‘ಅರ್ಬನ್ ನಕ್ಸಲ್’ : ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್

    ಪ್ರಕಾಶ್ ರೈ ‘ಅರ್ಬನ್ ನಕ್ಸಲ್’ : ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್

    ಹೆಸರಾಂತ ನಟ ಪ್ರಕಾಶ್ ರೈ (Prakash Rai) ಗೆ ದಿ ಕಾಶ್ಮೀರ್ ಫೈಲ್ಸ್ (The Kashmir Files)ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅರ್ಬನ್ ನಕ್ಸಲ್ (Urban Naxal) ಎಂದು ಕರೆದಿದ್ದಾರೆ. ಅಲ್ಲದೇ, ಅಂಧಕಾರ್ ರಾಜ್ ಎಂದೂ ಅವರನ್ನು ಸಂಬೋಧಿಸಿದ್ದಾರೆ. ಈ ಹಿಂದಿ ಪ್ರಕಾಶ್ ರೈ ಪಠಾಣ್ (Pathan) ಸಿನಿಮಾದ ಬಗ್ಗೆ ಮಾತನಾಡುತ್ತಾ, ‘ಪಠಾಣ್ ಸಿನಿಮಾ 700 ಕೋಟಿ ಸಂಪಾದಿಸಿದೆ. ಕೆಲವರು ಈ ಸಿನಿಮಾವನ್ನು ಬ್ಯಾನ್ ಮಾಡಲು ಹೊರಟಿದ್ದರು. ಮೂರ್ಖರು, ಮತಾಂಧರು ಪಠಾಣ್ ಸಿನಿಮಾಗೆ ತೊಂದರೆ ಕೊಟ್ಟರು. ಮೋದಿ (Modi) ಸಿನಿಮಾ 30 ಕೋಟಿಯೂ ಕಲೆಕ್ಷನ್ ಮಾಡಲಿಲ್ಲ. ಅವರು ಬೊಗಳುತ್ತಾರೆ ಕಚ್ಚುವುದಿಲ್ಲ’ ಎಂದು ಟೀಕೆ ಮಾಡಿದ್ದರು.

    ಮುಂದುವರೆದು ಮಾತನಾಡಿದ್ದ ಪ್ರಕಾಶ್ ರೈ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನೂ ಟೀಕಿಸಿದ್ದರು. ಭಾಸ್ಕರ್ ಪ್ರಶಸ್ತಿಯನ್ನೂ ಪಡೆಯದವರು ಆಸ್ಕರ್ ಪ್ರಶಸ್ತಿ ಕೇಳುತ್ತಿದ್ದಾರೆ ಎಂದು ಪರೋಕ್ಷವಾಗಿ ವಿವೇಕ್ ಅಗ್ನಿಹೋತ್ರಿಯನ್ನು ಕಾಲೆಳೆದಿದ್ದರು. ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಅಂತಾರಾಷ್ಟ್ರೀಯ ಜ್ಯೂರಿಗಳು ತೆಗಳಿದ್ದರು ಎಂದು ನೆನಪಿಸಿದ್ದರು. ಹೀಗಾಗಿ ಅಗ್ನಿಹೋತ್ರಿ ಮತ್ತೆ ಪ್ರಕಾಶ್ ರೈಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾ ರ್ಥ್ -ಕಿಯಾರಾ ಜೋಡಿ

    ಸೋಷಿಯಲ್ ಮೀಡಿಯಾದಲ್ಲಿ ಪ್ರಕಾಶ್ ರೈ ಅವರ ಬಗ್ಗೆ ಬರೆದಿರುವ ವಿವೇಕ್ ಅಗ್ನಿಹೋತ್ರಿ, ‘ಅರ್ಬನ್ ನಕ್ಸಲ್ ಗಳ ನಿದ್ದೆ ಕೆಡಿಸಿದೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ. ಚಿತ್ರವು ಬಿಡುಗಡೆಯಾಗಿ ಒಂದು ವರ್ಷ ಕಳೆದರೂ, ಓರ್ವ ವ್ಯಕ್ತಿಯ ನಿದ್ದೆ ಕೆಡಿಸಿದೆ ಆ ಸಿನಿಮಾ. ಭಾಸ್ಕರ್ ಪ್ರಶಸ್ತಿಯು ನಿಮ್ಮ ಬಳಿಯೇ ಇರುವಾಗ  ಅದನ್ನು ನಾನು ಪಡೆಯಲು ಸಾಧ್ಯವಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.

    ಪಠಾಣ್ ಸಿನಿಮಾದ ಗೆಲುವಿನ ಹಿನ್ನೆಲೆಯಲ್ಲಿ ಶಾರುಖ್ ಖಾನ್ ಪರವಾಗಿ ಪ್ರಕಾಶ್ ರೈ ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ಭಕ್ತರು ಎಷ್ಟೇ ಚೀರಾಡಿದರೂ ಸಿನಿಮಾ ಗೆದ್ದಿತು. ಆದರೆ, ಮೋದಿ ಸಿನಿಮಾ ಮೂವತ್ತು ಕೋಟಿ ರೂಪಾಯಿಯನ್ನೂ ಮಾಡಲಿಲ್ಲ ಎಂದು ಕಾಲೆಳೆದಿದ್ದರು. ಪ್ರಕಾಶ್ ರೈ ಅವರ ಈ ಬರಹ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿತ್ತು. ಇದೀಗ ವಿವೇಕ್ ಅಗ್ನಿಹೋತ್ರಿ ತಿರುಗೇಟು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಧಾನಿ ಮೋದಿಗೆ ನಿರ್ದೇಶಕ ಅನುರಾಗ್ ಕಶ್ಯಪ್ ಟಾಂಗ್ : ವಿವೇಕ್ ಅಗ್ನಿಹೋತ್ರಿ ತಿರುಗೇಟು

    ಪ್ರಧಾನಿ ಮೋದಿಗೆ ನಿರ್ದೇಶಕ ಅನುರಾಗ್ ಕಶ್ಯಪ್ ಟಾಂಗ್ : ವಿವೇಕ್ ಅಗ್ನಿಹೋತ್ರಿ ತಿರುಗೇಟು

    ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್, ಪ್ರಧಾನಿ ನರೇಂದ್ರ ಮೋದಿ ಆಡಿದ್ದ ಮಾತುಗಳಿಗೆ ತಮ್ಮದೇ ಆದ ರೀತಿಯಲ್ಲಿ ಟಾಂಗ್ ನೀಡಿದ್ದರು. ಸಿನಿಮಾದವರನ್ನು ಟೀಕಿಸಬೇಡಿ ಎಂದು ಮೋದಿ ತಮ್ಮ ಕಾರ್ಯಕರ್ತರಿಗೆ ತಿಳಿಸಿದ್ದರು. ಈ ಮಾತುಗಳನ್ನು ಪ್ರಧಾನಿ ಅವರು ನಾಲ್ಕು ವರ್ಷಗಳ ಹಿಂದೆಯೇ ಹೇಳಬೇಕಿತ್ತು ಎಂದು ಟಾಂಗ್ ಕೊಟ್ಟಿದ್ದರು. ಅನುರಾಗ್ ಮಾತಿಗೆ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಿರುಗೇಟು ನೀಡಿದ್ದಾರೆ. ‘ಆಡಿಯನ್ಸ್ ಈಗ ಮಾಬ್ ಕ್ರಿಯೇಟ್ ಆಗಿದೆ’ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

    ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ ಎನ್ನಲಾದ ಮಾತಿಗೆ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ತಿರುಗೇಟು ನೀಡಿದ್ದಾರೆ. ಚುನಾವಣೆ ವೇಳೆಗಾದರೂ ಅವರು ಮಾತನಾಡಿದ್ದಾರಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿಗಳು ಪದೇ ಪದೇ ಈ ಮಾತುಗಳನ್ನು ಹೇಳುವ ಮೂಲಕ ಕಾರ್ಯಕರ್ತರನ್ನು ಸದಾ ಜಾಗೃತರಾಗಿ ಇಡಬೇಕು ಎಂದೂ ಅವರು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಬಾಲಯ್ಯ ಮುಂದೆ ಅಬ್ಬರಿಸಲು ದುನಿಯಾ ವಿಜಯ್ ಪಡೆದ ಸಂಭಾವನೆ ಎಷ್ಟು ಗೊತ್ತಾ?

    ಇತ್ತೀಚಿನ ದಿನಗಳಲ್ಲಿ ಸಿನಿಮಾಗಳ ಬಗ್ಗೆ ರಾಜಕೀಯ ಮುಖಂಡರು ಮತ್ತು ಕಾರ್ಯಕರ್ತರು ವಿಪರೀತ ಎನ್ನುವಂತೆ ಟೀಕೆ ಮಾಡುತ್ತಿದ್ದಾರೆ. ಅದರಲ್ಲೂ ಪಠಾಣ್, ಬ್ರಹ್ಮಾಸ್ತ್ರ ಸಿನಿಮಾಗಳಿಗೆ ಬಾಯ್ಕಾಟ್ ಅಭಿಯಾನ ಮಾಡುವ ಮೂಲಕ ಸಾಕಷ್ಟು ತೊಂದರೆ ಕೊಟ್ಟಿದ್ದಾರೆ. ಹಲವು ದಿನಗಳಿಂದ ಈ ರೀತಿಯ ಪ್ರತಿಭಟನೆಗಳು ಸಿನಿಮಾ ರಂಗದಲ್ಲಿ ಕಾಮನ್ ಎನ್ನುವಂತಾಗಿದೆ. ಹಾಗಾಗಿ ನರೇಂದ್ರ ಮೋದಿ ಅವರು, ಯಾವುದೇ ಸಿನಿಮಾದ ಸಹವಾಸಕ್ಕೆ ಹೋಗದೇ, ಅದರ ಬಗ್ಗೆ ಮಾತನಾಡದೇ ದೂರ ಉಳಿದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

    ಈ ಸಲಹೆಗೆ ತಮ್ಮದೇ ಆದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅನುರಾಗ್ ಕಶ್ಯಪ್, ‘ಮೋದಿ ಅವರು ಈ ಮಾತುಗಳನ್ನು ನಾಲ್ಕು ವರ್ಷಗಳ ಹಿಂದೆಯೇ ಹೇಳಬೇಕಿತ್ತು. ಈಗ ಎಲ್ಲವೂ ಕೈ ಮೀರಿ ಹೋಗಿದೆ. ಅವರ ಮಾತುಗಳನ್ನು ಯಾರೂ ಕೇಳುವುದಿಲ್ಲ ಎನ್ನುವಂತಹ ವಾತಾವರಣ ಉಂಟಾಗಿದೆ. ಅವರ ಹೇಳಿಕೆ ಯಾವುದೇ ಪರಿಣಾಮವನ್ನು ಉಂಟು ಮಾಡದು’ ಎಂದು ಅನುರಾಗ್ ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ರಿರಿಲೀಸ್: ಕಾರಣ ತಿಳಿಸಿದ ವಿವೇಕ್ ಅಗ್ನಿಹೋತ್ರಿ

    ಇಂದು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ರಿರಿಲೀಸ್: ಕಾರಣ ತಿಳಿಸಿದ ವಿವೇಕ್ ಅಗ್ನಿಹೋತ್ರಿ

    ಳೆದ ವರ್ಷ ಭಾರತೀಯ ಸಿನಿಮಾ ರಂಗದಲ್ಲಿ ಭಾರೀ ಸಂಚಲನ ಮೂಡಿಸಿದ್ದ ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಇದೀಗ ಮತ್ತೆ ರಿರಿಲೀಸ್ (Rerelease) ಆಗುತ್ತಿದೆ. ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದಲ್ಲಿ ಮೂಡಿ ಬಂದಿದ್ದ ಈ ಸಿನಿಮಾ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಗಳಿಸಿತ್ತು. ದೇಶದ ನಾನಾ ಭಾಷೆಗಳಿಗೆ ಡಬ್ ಆಗಿಯೂ ಬಿಡುಗಡೆ ಆಗುತ್ತಿದೆ. ಸಿನಿಮಾ ಬಿಡುಗಡೆಯ ದಿನದಿಂದ ಈವರೆಗೂ ಒಂದಿಲ್ಲೊಂದು ವಿವಾದಕ್ಕೂ ಈ ಸಿನಿಮಾ ಕಾರಣವಾಗಿತ್ತು.

    kashmir

    ಸಿನಿಮಾ ಥಿಯೇಟರ್ ನಲ್ಲಿ ರಿಲೀಸ್ ಆಗಿ, ಟಿವಿಯಲ್ಲೂ ಪ್ರಸಾರವಾಗಿ, ಓಟಿಟಿಯಲ್ಲೂ ಇರುವ ಈ ಸಿನಿಮಾವನ್ನು ಇಂದು ಮತ್ತೆ ಬಿಡುಗಡೆ ಮಾಡುತ್ತಿರುವುದಕ್ಕೆ ಕಾರಣವನ್ನು ತಿಳಿಸಿದ್ದಾರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದು ಕಾಶ್ಮೀರ ಪಂಡಿತರ ಹತ್ಯೆಯ ಹಿನ್ನೆಲೆಯಾಗಿಟ್ಟುಕೊಂಡು ತಯಾರಾದ ಸಿನಿಮಾ. ಆ ಹತ್ಯೆ ನಡೆದು ಇಂದಿಗೆ 33 ವರ್ಷಗಳು. ಆ ಗೌರವಾರ್ಥವಾಗಿ ಸಿನಿಮಾ ರಿಲೀಸ್ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿನಿಮಾರಂಗಕ್ಕೆ ದಾರಿ ತೋರಿಸಿದ್ದೇ ರಕ್ಷಿತ್, ರಿಷಬ್: ನಟಿ ರಶ್ಮಿಕಾ ಮಂದಣ್ಣ

    ಕಾಶ್ಮೀರ ಪಂಡಿತರ ನರಮೇಧ ನಡೆದು ಜನವರಿ 19ಕ್ಕೆ 33 ವರ್ಷಗಳು ಆಗುತ್ತಿವೆ. ಇಂತಹ ಕರಾಳ ಅಧ್ಯಾಯವನ್ನು ಮತ್ತೊಮ್ಮೆ ಜನರಿಗೆ ನೆನಪಿಸಬೇಕು. ನರಹತ್ಯೆಯಲ್ಲಿ ಹತರಾದ ಕಾಶ್ಮೀರ ಪಂಡಿತರಿಗೆ ಗೌರವವನ್ನು ಸೂಚಿಸುವುದಕ್ಕಾಗಿ ಇಂದು ಮತ್ತೆ ದಿ ಕಾಶ್ಮೀರ್ ಫೈಲ್ಸ್ ತೆರೆಯ ಮೇಲೆ ಇರಲಿದೆ. ಪ್ರಕಾಶ್ ಬೆಳವಾಡಿ, ಅನುಪಮ್ ಖೇರ್ (Anupam Kher) ಸೇರಿದಂತೆ ಹಲವು ನುರಿತ ಕಲಾವಿದರು ಈ ಸಿನಿಮಾದಲ್ಲಿ ಇದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶೂಟಿಂಗ್ ಸೆಟ್ ನಲ್ಲಿ ಅವಘಡ: ‘ದಿ ವ್ಯಾಕ್ಸಿನ್ ವಾರ್’ ನಟಿಗೆ ಗಾಯ

    ಶೂಟಿಂಗ್ ಸೆಟ್ ನಲ್ಲಿ ಅವಘಡ: ‘ದಿ ವ್ಯಾಕ್ಸಿನ್ ವಾರ್’ ನಟಿಗೆ ಗಾಯ

    ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಪತ್ನಿ ಹಾಗೂ ನಟಿ ಪಲ್ಲವಿ ಜೋಶಿ (Pallavi Joshi) ಗಾಯಗೊಂಡಿದ್ದಾರೆ. ದಿ ವ್ಯಾಕ್ಸಿನ್ ವಾರ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅವರು, ಶೂಟಿಂಗ್ ವೇಳೆಯಲ್ಲಿ ನಡೆದ ಅವಘಡದಿಂದ (Accident) ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿತ್ರೀಕರಣವನ್ನು ಸ್ಥಗಿತಗೊಳಿಸಿದ್ದಾರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ.

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಂತರ ದಿ ವ್ಯಾಕ್ಸಿನ್ ವಾರ ಸಿನಿಮಾವನ್ನು ಕೈಗೆತ್ತಿಕೊಂಡಿದ್ದರು ನಿರ್ದೇಶಕ ವಿವೇಕ್, ಒಂದು ಹಂತದ ಶೂಟಿಂಗ್ ಮುಗಿಸಿಕೊಂಡು, ಎರಡನೇ ಹಂತದ ಚಿತ್ರೀಕರಣಕ್ಕಾಗಿ ಅವರು ಹೈದರಾಬಾದ್ ನಲ್ಲಿ ಬೀಡು ಬಿಟ್ಟಿದ್ದಾರೆ. ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿರುವ ಪಲ್ಲವಿ ಜೋಶಿ ಅವರು ಚಿತ್ರೀಕರಣಕ್ಕೆ ಬಂದಾಗ, ಕಾರು ಅಪಘಾತವಾಗಿ ಗಾಯಗೊಂಡಿದ್ದಾರೆ. ಆತಂಕ ಪಡುವಂತಹದ್ದು ಏನೂ ಆಗಿಲ್ಲವಾದರೂ, ಚಿತ್ರೀಕರಣವನ್ನು ನಿಲ್ಲಿಸಿದ್ದಾರಂತೆ ವಿವೇಕ್.

    ಅಂದುಕೊಂಡಂತೆ ಆಗಿದ್ದರೆ, ಈ ಹಂತದ ಚಿತ್ರೀಕರಣದಲ್ಲೇ ಕಾಂತರ ನಟಿ ಸಪ್ತಮಿ ಗೌಡ (Saptami Gowda) ಭಾಗಿಯಾಗಬೇಕಿತ್ತು. ಇಂದಿನಿಂದ ಅವರ ಭಾಗದ ಚಿತ್ರೀಕರಣ ನಡೆಯಬೇಕಿತ್ತು. ಆದರೆ, ಶೂಟಿಂಗ್ ನಿಲ್ಲಿಸಿದ ಕಾರಣದಿಂದಾಗಿ ಸಪ್ತಮಿ ಗೌಡ ಭಾಗಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಪಲ್ಲವಿ ಜೋಶಿ ಅವರ ಜೊತೆ ಸಪ್ತಮಿ ಗೌಡ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ಮಾಡುತ್ತಿದ್ದಾರೆ. ಇದೊಂದು ಹೊಸ ರೀತಿಯ ಪಾತ್ರವಂತೆ. ಇದನ್ನೂ ಓದಿ: ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?

    ಕೊರೋನಾ ವೇಳೆಯಲ್ಲಿ ವ್ಯಾಕ್ಸಿನ್ ಎಷ್ಟು ಮಹತ್ವವಾಗಿತ್ತು, ವ್ಯಾಕ್ಸಿನ್ ಗಾಗಿ ಎಷ್ಟೆಲ್ಲ ತಲ್ಲಣಗಳನ್ನು ಸೃಷ್ಟಿ ಮಾಡಲಾಯಿತು. ವ್ಯಾಕ್ಸಿನ್ ಹಿಂದಿನ ನಿಜವಾದ ಕಹಾನಿಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದಾರಂತೆ ನಿರ್ದೇಶಕರು. ವ್ಯಾಕ್ಸಿನ್ ವಿಷಯದಲ್ಲಿ ಭಾರತವೇ ಹೆಮ್ಮೆ ಪಡುವಂತಹ ವಿಷಯವನ್ನೂ ಅವರು ಈ ಸಿನಿಮಾದಲ್ಲಿ ಹೇಳಲಿದ್ದಾರಂತೆ. ಆರೇಳು ತಿಂಗಳಲ್ಲಿ ಈ ಸಿನಿಮಾ ರಿಲೀಸ್ ಕೂಡ ಆಗಲಿದೆ ಎನ್ನುವ ಮಾಹಿತಿ ಇದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಕಾಂತಾರ’ ನಟಿಗೆ ವೆಲ್ ಕಮ್ ಹೇಳಿದ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ

    ‘ಕಾಂತಾರ’ ನಟಿಗೆ ವೆಲ್ ಕಮ್ ಹೇಳಿದ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ

    ಭಾರತೀಯ ಸಿನಿಮಾ ರಂಗದಲ್ಲಿ ಹೊಸ ಸಂಚಲನ ಮೂಡಿಸಿರುವ ‘ಕಾಂತಾರ’ ಸಿನಿಮಾದ ನಾಯಕಿ ಸಪ್ತಮಿ ಗೌಡ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕರ ಹೊಸ ಸಿನಿಮಾ ‘ದಿ ವ್ಯಾಕ್ಸಿನ್ ವಾರ್’ದಲ್ಲಿ ನಟಿಸಲು ಆಯ್ಕೆಯಾಗಿರುವ ವಿಷಯವನ್ನು ನಿನ್ನೆಯಷ್ಟೇ ‘ಪಬ್ಲಿಕ್ ಟಿವಿ ಡಿಜಿಟಲ್’ ಬ್ರೇಕ್ ಮಾಡಿತ್ತು. ಆನಂತರ ಈ ವಿಷಯವನ್ನು ಸ್ವತಃ ಸಪ್ತಮಿ ಗೌಡ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ತಮ್ಮ ತಂಡಕ್ಕೆ ಸಪ್ತಮಿ ಅವರನ್ನು ಸ್ವಾಗತಿಸಿದ್ದಾರೆ. ನೀವು ಅತ್ಯುತ್ತಮ ನಟಿ ಎಂದು ಹೊಗಳಿದ್ದಾರೆ.

    ಈಗಾಗಲೇ ಸಿನಿಮಾದ ಒಂದು ಹಂತದ ಚಿತ್ರೀಕರಣ ಕೂಡ ಮುಗಿದಿದ್ದು, ಎರಡನೇ ಹಂತದ ಶೂಟಿಂಗ್ ನಲ್ಲಿ ಸಪ್ತಮಿ ಪಾಲ್ಗೊಂಡಿದ್ದಾರೆ. ಈ ಬಾರಿಯ ಸಂಕ್ರಾಂತಿಯನ್ನು ದಿ ವ್ಯಾಕ್ಸಿನ್ ವಾರ್ ಶೂಟಿಂಗ್ ಸೆಟ್ ನಲ್ಲೇ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಇದು ಬಯಸದೇ ಬಂದಿರುವ ಭಾಗ್ಯ ಎಂದೂ ಅವರು ಹೇಳಿಕೊಂಡಿದ್ದಾರೆ. ಸ್ವತಃ ವಿವೇಕ್ ಅಗ್ನಿಹೋತ್ರಿ ಅವರೇ ಸಪ್ತಮಿ ಗೌಡ ಅವರಿಗೆ ಕಾಲ್ ಮಾಡಿ, ನಟಿಸಲು ಅವಕಾಶ ನೀಡಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:‘ಮಠ’ ಚಿತ್ರ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಬಂಧನ

    ಪಾತ್ರದ ಬಗ್ಗೆ ಹೆಚ್ಚೇನೂ ಹೇಳದ ಸಪ್ತಮಿ, ಈ ಸಿನಿಮಾದಲ್ಲಿ ನಾಯಕ, ನಾಯಕಿ ಅಂತೇನೂ ಇಲ್ಲ. ಕಂಟೆಂಟ್ ಮೇಲೆ ನಿಂತಿರುವಂತಹ ಸಿನಿಮಾ. ಈ ಸಿನಿಮಾದಲ್ಲಿ ನನ್ನದೂ ಪ್ರಮುಖ ಪಾತ್ರ ಅಂದಷ್ಟೇ ಹೇಳಿಕೊಂಡಿದ್ದಾರೆ. ಹೈದರಾಬಾದ್ ನಲ್ಲಿ ಸದ್ಯ ದಿ ವ್ಯಾಕ್ಸಿನ್ ವಾರ್ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಸಂಕ್ರಾಂತಿ ದಿನದಂದು ಅವರು ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ.

    ಕಾಂತಾರ ಸಿನಿಮಾ ಹಾಗೂ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಈಗಾಗಲೇ ಆಸ್ಕರ್ ಅಂಗಳದಲ್ಲಿವೆ. ಎರಡೂ ಚಿತ್ರಗಳ ನಡುವೆ ಪೈಪೋಟಿಯೂ ಏರ್ಪಡಬಹುದು. ಇಂತಹ ಹೊತ್ತಿನಲ್ಲಿ ಸಪ್ತಮಿ ಗೌಡ ಅವರಿಗೆ ಬಾಲಿವುಡ್ ಗೆ ಹೋಗುವಂತಹ ಅವಕಾಶ ಸಿಕ್ಕಿದೆ. ಅದರಲ್ಲೂ ಕಳೆದ ವರ್ಷ ಬಾಕ್ಸ್ ಆಫೀಸ್ ದೋಚಿದ್ದ ವಿವೇಕ್ ಅಗ್ನಿಹೋತ್ರಿ ಜೊತೆ ಕೆಲಸ ಮಾಡಲು ಅವರು ತುದಿಗಾಲಲ್ಲಿ ನಿಂತಿದ್ದಾರೆ. ಈ ನಡುವೆ ಕನ್ನಡದ ಕಾಳಿ ಚಿತ್ರಕ್ಕೂ ಸಪ್ತಮಿ ಗೌಡ ಸಹಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Breaking- ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕನ ಚಿತ್ರಕ್ಕೆ ‘ಕಾಂತಾರ’ ಹುಡುಗಿ ಹೀರೋಯಿನ್

    Breaking- ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕನ ಚಿತ್ರಕ್ಕೆ ‘ಕಾಂತಾರ’ ಹುಡುಗಿ ಹೀರೋಯಿನ್

    ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಪ್ರೇಕ್ಷಕರಿಗೆ ಚಿರಪರಿಚಿತರಾದ ಸಪ್ತಮಿ ಗೌಡ (Saptami Gowda), ಇದೀಗ ಸದ್ದಿಲ್ಲದೇ ಬಾಲಿವುಡ್ (Bollywood)ಗೆ ಎಂಟ್ರಿ ಪಡೆದಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದ ಹೊಸ ಸಿನಿಮಾ ‘ದಿ ವ್ಯಾಕ್ಸಿನ್ ವಾರ್’ (The Vaccine War) ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಒಂದು ಹಂತದ ಚಿತ್ರೀಕರಣ ಕೂಡ ಮುಗಿದಿದ್ದು, ಎರಡನೇ ಹಂತದ ಶೂಟಿಂಗ್ ನಲ್ಲಿ ಸಪ್ತಮಿ ಪಾಲ್ಗೊಂಡಿದ್ದಾರೆ.

    ತಾವು ದಿ ವ್ಯಾಕ್ಸಿನ್ ವಾರ್ ಸಿನಿಮಾಗೆ ಆಯ್ಕೆಯಾಗಿದ್ದನ್ನು ಖಚಿತ ಪಡಿಸಿರುವ ಸಪ್ತಮಿ ಗೌಡ, ಈ ಬಾರಿಯ ಸಂಕ್ರಾಂತಿಯನ್ನು ದಿ ವ್ಯಾಕ್ಸಿನ್ ವಾರ್ ಶೂಟಿಂಗ್ ಸೆಟ್ ನಲ್ಲೇ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಇದು ಬಯಸದೇ ಬಂದಿರುವ ಭಾಗ್ಯ ಎಂದೂ ಅವರು ಹೇಳಿಕೊಂಡಿದ್ದಾರೆ. ಸ್ವತಃ ವಿವೇಕ್ ಅಗ್ನಿಹೋತ್ರಿ ಅವರೇ ಸಪ್ತಮಿ ಗೌಡ ಅವರಿಗೆ ಕಾಲ್ ಮಾಡಿ, ನಟಿಸಲು ಅವಕಾಶ ನೀಡಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿಗಳ ಸಮಾಗಮ: ವೈಷ್ಣವಿ ಜೊತೆ ದಿವ್ಯಾ- ಅರವಿಂದ್ ಕೆ.ಪಿ ಜೋಡಿ

    ಪಾತ್ರದ ಬಗ್ಗೆ ಹೆಚ್ಚೇನೂ ಹೇಳದ ಸಪ್ತಮಿ, ಈ ಸಿನಿಮಾದಲ್ಲಿ ನಾಯಕ, ನಾಯಕಿ ಅಂತೇನೂ ಇಲ್ಲ. ಕಂಟೆಂಟ್ ಮೇಲೆ ನಿಂತಿರುವಂತಹ ಸಿನಿಮಾ. ಈ ಸಿನಿಮಾದಲ್ಲಿ ನನ್ನದೂ ಪ್ರಮುಖ ಪಾತ್ರ ಅಂದಷ್ಟೇ ಹೇಳಿಕೊಂಡಿದ್ದಾರೆ. ಹೈದರಾಬಾದ್ ನಲ್ಲಿ ಸದ್ಯ ದಿ ವ್ಯಾಕ್ಸಿನ್ ವಾರ್ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಸಂಕ್ರಾಂತಿ ದಿನದಂದು ಅವರು ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ.

    ಕಾಂತಾರ ಸಿನಿಮಾ ಹಾಗೂ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಈಗಾಗಲೇ ಆಸ್ಕರ್ ಅಂಗಳದಲ್ಲಿವೆ. ಎರಡೂ ಚಿತ್ರಗಳ ನಡುವೆ ಪೈಪೋಟಿಯೂ ಏರ್ಪಡಬಹುದು. ಇಂತಹ ಹೊತ್ತಿನಲ್ಲಿ ಸಪ್ತಮಿ ಗೌಡ ಅವರಿಗೆ ಬಾಲಿವುಡ್ ಗೆ ಹೋಗುವಂತಹ ಅವಕಾಶ ಸಿಕ್ಕಿದೆ. ಅದರಲ್ಲೂ ಕಳೆದ ವರ್ಷ ಬಾಕ್ಸ್ ಆಫೀಸ್ ದೋಚಿದ್ದ ವಿವೇಕ್ ಅಗ್ನಿಹೋತ್ರಿ ಜೊತೆ ಕೆಲಸ ಮಾಡಲು ಅವರು ತುದಿಗಾಲಲ್ಲಿ ನಿಂತಿದ್ದಾರೆ. ಈ ನಡುವೆ ಕನ್ನಡದ ಕಾಳಿ ಚಿತ್ರಕ್ಕೂ ಸಪ್ತಮಿ ಗೌಡ ಸಹಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ಅನುಪಮ್ ಖೇರ್: ಇದು ಅವರ 534ನೇ ಚಿತ್ರ

    ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ಅನುಪಮ್ ಖೇರ್: ಇದು ಅವರ 534ನೇ ಚಿತ್ರ

    ದಿ ಕಾಶ್ಮೀರ್ ಫೈಲ್ಸ್ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಜೊತೆ ಮತ್ತೊಂದು ಸಿನಿಮಾ ಮಾಡುತ್ತಿರುವುದಾಗಿ ಬಾಲಿವುಡ್ ಖ್ಯಾತ ನಟ ಅನುಪಮ್ ಖೇರ್ ಘೋಷಿಸಿದ್ದಾರೆ. ಇಂಥದ್ದೊಂದು ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ಹೆಮ್ಮೆ ಆಗುತ್ತಿದೆ ಎಂದಿರುವ ಅವರು, ಇದು ಅವರ 534ನೇ ಸಿನಿಮಾ ಎಂದು ಬರೆದುಕೊಂಡಿದ್ದಾರೆ. ಈ ಸಿನಿಮಾ ಆಕರ್ಷಕ ಮತ್ತು ಸ್ಫೂರ್ತಿದಾಯಕ ಎಂದು ಹೆಮ್ಮೆಪಟ್ಟಿದ್ದಾರೆ. ಶೂಟಿಂಗ್ ಸೆಟ್ ನಿಂದಲೇ ಕ್ಲ್ಯಾಪ್ ಬೋರ್ಡ್ ಹಿಡಿದುಕೊಂಡಿರುವ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ.

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ಅನುಪಮ್ ಖೇರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಅಲ್ಲದೇ, ಈ ಸಿನಿಮಾ ವಿವಾದವಾದಾಗ ನಿರ್ದೇಶಕರ ಪರವಾಗಿ ನಿಂತಿದ್ದರು. ಈಗ ಮತ್ತೆ ವಿವೇಕ್ ಜೊತೆ ಮತ್ತೊಂದು ಸಿನಿಮಾಗೆ ಬಣ್ಣ ಹಚ್ಚಿದ್ದಾರೆ. ಈ ನಿರ್ದೇಶಕರ ಜೊತೆ ಮತ್ತೆ ಮತ್ತೆ ಸಿನಿಮಾ ಮಾಡುವ ಇಂಗಿತವನ್ನೂ ಅವರು ವ್ಯಕ್ತ ಪಡಿಸಿದ್ದಾರೆ. ಮತ್ತೆ ಮತ್ತೆ ಈ ರೀತಿಯ ಚಿತ್ರಗಳಲ್ಲಿ ಕಾಣಿಸಿಕೊಳ್ಳಲು ಹೆಮ್ಮೆ ಪಡುತ್ತೇನೆ ಎಂದೂ ಅವರು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ವಂದೇ ಭಾರತ್ ಎಕ್ಸ್‌ಪ್ರೆಸ್‌ ಉದ್ಘಾಟನೆಗೊಂಡ 4ನೇ ದಿನಕ್ಕೆ ಕಲ್ಲು ತೂರಾಟ- ಕಿಟಕಿ ಗಾಜು ಪುಡಿ ಪುಡಿ

    ಸದ್ಯ ದಿ ವಾಕ್ಸಿನ್ ವಾರ್ ಸಿನಿಮಾದ ಶೂಟಿಂಗ್ ಲಖನೌದಲ್ಲಿ ನಡೆದಿದೆ. ಈ ಸಿನಿಮಾದಲ್ಲಿ ನಾಯಕನಾಗಿ ನಾನಾ ಪಾಟೇಕರ್ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಗೋಪಾಲ್ ಸಿಂಗ್, ದಿವ್ಯಾ ಸೇಠ್ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ ವಿವೇಕ್ ಅಗ್ನಿಹೋತ್ರಿ.

    Live Tv
    [brid partner=56869869 player=32851 video=960834 autoplay=true]