Tag: ವಿವೇಕ್ ಅಗ್ನಿಹೋತ್ರಿ

  • ‘ದಿ ಡೆಲ್ಲಿ ಫೈಲ್ಸ್’ : 1984ರ ಗಲಭೆಯೇ ಕಥಾವಸ್ತು ಎಂದ ವಿವೇಕ್ ಅಗ್ನಿಹೋತ್ರಿ

    ‘ದಿ ಡೆಲ್ಲಿ ಫೈಲ್ಸ್’ : 1984ರ ಗಲಭೆಯೇ ಕಥಾವಸ್ತು ಎಂದ ವಿವೇಕ್ ಅಗ್ನಿಹೋತ್ರಿ

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿರುವ ಸುದ್ದಿಯನ್ನು ಪಬ್ಲಿಕ್ ಟಿವಿ ಡಿಜಿಟಲ್ ಈ ಹಿಂದೆಯೇ ಪ್ರಕಟಿಸಿದೆ. ಈ ಬಾರಿ ನಿರ್ದೇಶಕರು ಯಾವ ರೀತಿಯ ಕಥೆಯನ್ನು ಹೇಳಿದ್ದಾರೆ ಎನ್ನುವ ಸಣ್ಣ ಸುಳಿವನ್ನೂ ವರದಿ ಮಾಡಿತ್ತು. ಅದೀಗ ನಿಜವಾಗಿದೆ. ಸ್ವತಃ ವಿವೇಕ್ ಅಗ್ನಿಹೋತ್ರಿ ಅವರೇ ತಾವು ಆಯ್ಕೆ ಮಾಡಿಕೊಂಡಿರುವ ಕಥೆಯ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ : ಅಜ್ಞಾತವಾಸಿಯಾದ ರಂಗಾಯಣ ರಘು ಮತ್ತು ಪಾವನಾ

    ಈ ಬಾರಿ ಆಯ್ಕೆ ಮಾಡಿಕೊಂಡ ವಿಷಯವು 1984ರಲ್ಲಿ ನಡೆದ ನೈಜ ಘಟನೆಯನ್ನೇ ಆಧರಿಸಿದೆಯಂತೆ. ಆ ಸಮಯದ ಸತ್ಯವೇ ಬೇರೆಯಿದೆ. ಅದನ್ನು ಈ ಸಿನಿಮಾದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ. ದೆಹಲಿಯಷ್ಟೇ ಅಲ್ಲ, ತಮಿಳು ನಾಡಿಗೆ ಸಂಬಂಧಿಸಿದ ಒಂದಷ್ಟು ಸತ್ಯಗಳನ್ನೂ ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ. ಇದನ್ನೂ ಓದಿ : ಲಾಕಪ್ ನಲ್ಲಿ ಗಳಗಳನೆ ಅತ್ತ ಪೂನಂ: ಈ ನಟಿಗೆ ಅದೆಂಥ ಅವಮಾನ?

    kashmir

    ನಾವು ಸತ್ಯವನ್ನು ಮಾತನಾಡಿದಾಗ ಎಲ್ಲರೂ ಅದನ್ನು ಒಪ್ಪಿಕೊಳ್ಳುತ್ತಾರೆ. ಸರಕಾರಗಳು ಕೂಡ ತಲೆಬಾಗುತ್ತವೆ. ಈಗ ಮತ್ತೊಂದು ಸತ್ಯ ದರ್ಶನಕ್ಕಾಗಿ ಸಿನಿಮಾ ಮಾಡುತ್ತಿರುವೆ. ಇಷ್ಟು ವರ್ಷಗಳಿಂದ ದೆಹಲಿ ಭಾರತವನ್ನು ಹೇಗೆ ನಾಶ ಮಾಡುತ್ತಿದೆ ಎನ್ನುವ ಕುತೂಹಲದ ಅಂಶಗಳು ಕೂಡ ಇವೆ ಎಂದು ಮಾಧ್ಯಮಗಳ ಜತೆ ಮಾತನಾಡಿದ್ದಾರೆ ವಿವೇಕ್ ಅಗ್ನಿಹೋತ್ರಿ. ಇದನ್ನೂ ಓದಿ : ಪುನೀತ್ ಬ್ಯಾನರ್ ಗಾಗಿ ನಡೆಯಿತು ಮಾರಾಮಾರಿ : ರಾಡ್ ಹಿಡಿದುಕೊಂಡು ಗಲಾಟೆ

    ದೆಹಲಿಯನ್ನು ಯಾರೆಲ್ಲ ಆಳಿದರು, ಏನೆಲ್ಲ ಮಾಡಿದರು. ದೆಹಲಿ ಚರಿತ್ರೆಯಲ್ಲಿ ಉಳಿದುಕೊಂಡಿರುವ ಕಪ್ಪು ಚುಕ್ಕೆಯನ್ನೇ ಈ ಬಾರಿ ಬೆಳ್ಳಿ ಪರದೆಯ ಮೇಲೆ ತೋರಿಸುವ ಪ್ರಯತ್ನ ನಡೆಯಲಿದೆಯಂತೆ. ಈಗಾಗಲೇ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು ಅತೀ ಶೀಘ್ರದಲ್ಲೇ ತಾರಾಗಣವನ್ನೂ ಆಯ್ಕೆ ಮಾಡಿಕೊಳ್ಳಲಿದ್ದಾರಂತೆ ನಿರ್ದೇಶಕರು. ಇದನ್ನೂ ಓದಿ : ಕೆಜಿಎಫ್ 2 : ನಾಲ್ಕೇ ದಿನಕ್ಕೆ 550 ಕೋಟಿ ಬಾಚಿದ ರಾಕಿಭಾಯ್

    ಸತ್ಯ ಘಟನೆಗಳನ್ನು ಆಧರಿಸಿದ ಸಿನಿಮಾಗಳನ್ನೇ ಮಾಡುತ್ತಿರುವ ವಿವೇಕ್ ಅಗ್ನಿಹೋತ್ರಿಗೆ ಜೀವ ಬೆದರಿಕೆಯಿದೆ ಅಂತೆ. ಹಾಗಾಗಿ ಹೆಚ್ಚಿನ ಭದ್ರತೆಯನ್ನು ಅವರಿಗೆ ನೀಡಲಾಗಿದೆ. ಅವರ ಚಲನವಲನಗಳ ಮೇಲೆ ಖಾಕಿ ಪಡೆ ಕಣ್ಣಿಟ್ಟು ಕಾಪಾಡುತ್ತಿದೆ.

  • ‘ದಿ ಕಾಶ್ಮೀರ್ ಫೈಲ್ಸ್’ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೈಯಲ್ಲಿ ‘ಡೆಲ್ಲಿ ಫೈಲ್ಸ್’

    ‘ದಿ ಕಾಶ್ಮೀರ್ ಫೈಲ್ಸ್’ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೈಯಲ್ಲಿ ‘ಡೆಲ್ಲಿ ಫೈಲ್ಸ್’

    ಗಾಗಲೇ ತಾಷ್ಕೆಂಟ್ ಫೈಲ್ಸ್ ಮತ್ತು ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗಳ ಮೂಲಕ ಜಗತ್ತಿಗೆ ಸತ್ಯದ ಮತ್ತೊಂದು ಮುಖವನ್ನು ಅನಾವರಣ ಮಾಡಿರುವ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಇದೀಗ ಮತ್ತೊಂದು ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಘೋಷಣೆ ಮಾಡಿದಂತೆ ಅವರು ‘ಡೆಲ್ಲಿ ಫೈಲ್ಸ್ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಇದನ್ನೂ ಓದಿ : ಟರ್ಕಿಯಲ್ಲಿ ರಜಾಮಜಾ ಮಾಡುತ್ತಿರೋ ಬ್ಯೂಟಿಫುಲ್‌ ಗರ್ಲ್ ಕಾರುಣ್ಯ ರಾಮ್

    ‘ತಾಷ್ಕೆಂಟ್ ಫೈಲ್ಸ್’ ಮೂಲಕ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಸಾವಿನ ರಹಸ್ಯವನ್ನು ಬೇಧಿಸಿದ್ದ ವಿವೇಕ್ ಅಗ್ನಿಹೋತ್ರಿ ‘ದಿ ಕಾಶ್ಮೀರ್ ಫೈಲ್ಸ್’ ನಲ್ಲಿ ಕಾಶ್ಮೀರ ಪಂಡಿತರ ನರಮೇಧದ ಹಿಂದಿನ ಸತ್ಯವನ್ನು ಬಯಲಿಗೆಳೆದಿದ್ದರು. ಇದೀಗ ‘ಡೆಲ್ಲಿ ಫೈಲ್ಸ್’ ಮೂಲಕ ಬದುಕುವ ಹಕ್ಕಿನ ಕುರಿತಾಗಿ ಸಿನಿಮಾ ಮಾಡುತ್ತಿದ್ದಾರೆ. ಆದರೆ, ಇದು ಯಾವ ಘಟನೆಯನ್ನು ಆಧರಿಸಿದ ಸಿನಿಮಾ ಎಂದು ಈವರೆಗೂ ಅವರು ಹೇಳಿಕೊಂಡಿಲ್ಲ. ಇದನ್ನೂ ಓದಿ : ತಾಳಿಕಟ್ಟಿ ಹೆಂಡತಿಯನ್ನು ಎತ್ತಿಕೊಂಡ ರಣಬೀರ್ ಕಪೂರ್

    ತಮ್ಮ ಡೆಲ್ಲಿ ಫೈಲ್ಸ್ ಸಿನಿಮಾಗೆ ‘ರೈಟ್ ಟು ಲೈಫ್‍’ ಎಂದು ಟ್ಯಾಗ್ ಲೈನ್ ನೀಡಿದ್ದು, ಜೀವಿಸುವ ಹಕ್ಕಿನ ಕಥೆಯನ್ನು ಇದು ಹೇಳಲಿದೆ ಎಂದು ಊಹಿಸಿಕೊಳ್ಳಬಹುದು. ಈಗಾಗಲೇ ಸ್ಕ್ರಿಪ್ಟ್ ಕೆಲಸ ಮುಗಿದಿದ್ದು, ಅತೀ ಶೀಘ್ರದಲ್ಲೇ ಸಿನಿಮಾದ ಶೂಟಿಂಗ್ ಕೂಡ ಶುರು ಮಾಡಲಿದ್ದಾರೆ. ಇದು ಹಿಂದಿ ಮತ್ತು ಪಂಜಾಬಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗಲಿದೆ. ಇದನ್ನೂ ಓದಿ: ‘BOSS’ ಪಟ್ಟ ಅಲಂಕರಿಸಿದ ಯಶ್ : ಟ್ವಿಟರ್ ಟ್ರೆಂಡಿಂಗ್ ನಲ್ಲಿ #YASHBOSS

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿತ್ತು. ಭಾರತ ಸರಕಾರವೇ ಈ ಸಿನಿಮಾದ ಪರ ನಿಂತುಕೊಂಡಿತು. ಅನೇಕ ರಾಜ್ಯಗಳು ಮನರಂಜನಾ ತೆರೆಗೆ ಮನ್ನಾ ಮಾಡಿದವು. ಅಲ್ಲದೇ, ಅನೇಕ ಕಡೆ ಸ್ವಯಂ ಪ್ರೇರಿತರಾಗಿ ಹಲವರು ಸಿನಿಮಾ ತೋರಿಸಿದರು. ಹೀಗಾಗಿ ಡೆಲ್ಲಿ ಫೈಲ್ಸ್ ಮೇಲೆಯೂ ಈಗಿನಿಂದಲೇ ನಿರೀಕ್ಷೆ ಹೆಚ್ಚಾಗಿದೆ.

  • ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನ ಮತ್ತೊಂದು ನೌಟಂಕಿ: ಸದ್ದಿಲ್ಲದೇ ಶೂಟಿಂಗ್ ಕೂಡ ಮುಗಿದಿದೆ

    ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನ ಮತ್ತೊಂದು ನೌಟಂಕಿ: ಸದ್ದಿಲ್ಲದೇ ಶೂಟಿಂಗ್ ಕೂಡ ಮುಗಿದಿದೆ

    ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಮೂಲಕವಾಗಿ ನ್ಯಾಷನಲ್, ಇಂಟ್ರನ್ಯಾಷನಲ್ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಇವರ ನಿರ್ದೇಶನದಲ್ಲಿ ಮೂಡಿ ಬರುವ ಮುಂದಿನ ಸಿನಿಮಾ ಯಾವುದು ಎಂದು ಅಭಿಮಾನಿಗಳಿಗೆ ಕುತೂಹಲವಿತ್ತು. ಸದ್ದಿಲ್ಲದೇ ವಿವೇಕ್ ಮತ್ತೊಂದು ಸಿನಿಮಾ ರೆಡಿ ಮಾಡಿದ್ದಾರೆ. ಅದು ಈಗ ತೆರೆಗೆ ಬರಲು ಸಿದ್ಧವಾಗಿದೆ.


    ಈ ಚಿತ್ರಕ್ಕೆ ಅವರು ನೌಟಂಕಿ ಎಂದು ಹೆಸರಿಟ್ಟಿದ್ದು, ಅನುಪಮ್ ಖೇರ್ ಲೀಡ್ರೋಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಗೆಳೆಯ ಸತೀಶ್ ಕೌಶಿಕ್ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರೂಮಿ ಜಫ್ರಿ ಅವರು ಈ ಚಿತ್ರಕ್ಕೆ ಸ್ಕ್ರಿಪ್ಟ್ ಬರೆದಿದ್ದರೆ, ವಿವೇಕ್ ಕೇವಲ  ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಇದನ್ನು ಓದಿ:ಕುವೈತ್‌ನಲ್ಲಿ ದಳಪತಿ ವಿಜಯ್ ನಟನೆಯ `ಬೀಸ್ಟ್’ ಸಿನಿಮಾ ಬ್ಯಾನ್

    “2021ರ ಮಾರ್ಚ್ ತಿಂಗಳಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಶೂಟಿಂಗ್ನಲ್ಲಿ ತೊಡಗಿದ್ದೆವು. ಆ ಸಂದರ್ಭದಲ್ಲಿ ಕೊರೊನಾದಿಂದ ಲಾಕ್ಡೌನ್ ಘೋಷಣೆ ಆಯಿತು. ಅನುಪಮ್ ಖೇರ್ ಅವರು ಅಮೆರಿಕದಿಂದ ಶೂಟಿಂಗ್‌ಗಾಗಿ ಭಾರತಕ್ಕೆ ಬಂದಿದ್ದರು. ಲಾಕ್‌ಡೌನ್‌ನಿಂದ ಅವರು ಕೂಡ ಇಲ್ಲೇ ಉಳಿಯಬೇಕಾಯಿತು. ಈ ಸಮಯವನ್ನು ಬಳಕೆ ಮಾಡಿಕೊಳ್ಳಲು ಮತ್ತೊಂದು ಸಿನಿಮಾದ ಶೂಟಿಂಗ್ ಭೋಪಾಲ್‌ನಲ್ಲಿ ಪೂರ್ಣಗೊಳಿಸಿದೆವು” ಎಂದಿದ್ದಾರೆ ವಿವೇಕ್ ಹೇಳಿದ್ದಾರೆ.

    kashmir
    ಇದು ತುಂಬಾ ಕಡಿಮೆ ಬಜೆಟ್‌ನಲ್ಲಿ ಸಿದ್ಧಗೊಂಡ ಸಿನಿಮಾ ಎನ್ನಲಾಗುತ್ತಿದೆ. ಕಲೆ, ಸೃಜನಶೀಲತೆ, ರಂಗಭೂಮಿ ಹಾಗೂ ಸಿನಿಮಾಗೆ ನಾವು ನೀಡುತ್ತಿರುವ ಟ್ರಿಬ್ಯೂಟ್ ಎಂದು ವಿವೇಕ್ ಹೇಳಿಕೊಂಡಿದ್ದಾರೆ. “ನೌಟಂಕಿ ನನಗೆ ವಿಶೇಷ ಸಿನಿಮಾವಾಗಿದೆ. ನನ್ನ ಹಳೆಯ ಮತ್ತು ಆತ್ಮೀಯ ಸ್ನೇಹಿತ ಸತೀಶ್ ಕೌಶಿಕ್ ಈ ಬಾರಿ ನನ್ನ ಸಹನಟನಾಗಿ ನಟಿಸಿದ್ದಾರೆ. ನಾವು ಹಲವು ವರ್ಷಗಳ ನಂತರ ಒಟ್ಟಿಗೆ ಕೆಲಸ ಮಾಡಿದ್ದೇವೆ’ ಎಂದು ಅನುಪಮ್ ಖೇರ್ ಹೇಳಿದ್ದಾರೆ.

    ವಿವೇಕ್ ಅಗ್ನಿಹೋತ್ರಿ ಮಾಡುವ ಸಿನಿಮಾಗಳ ಬಜೆಟ್ ತುಂಬಾನೇ ಕಡಿಮೆ ಇರುತ್ತದೆ. ದಿ ಕಾಶ್ಮೀರ್ ಫೈಲ್ಸ್ ಅಂದಾಜು 20 ಕೋಟಿಯಲ್ಲಿ ಸಿದ್ಧಗೊಂಡ ಚಿತ್ರ. ಈ ಸಿನಿಮಾ ಶೂಟಿಂಗ್ ಲಾಕ್‌ಡೌನ್‌ನಿಂದ ಅರ್ಧಕ್ಕೆ ನಿಂತಾಗ ಸೈಡ್‌ಲೈನ್‌ನಲ್ಲಿ ಮತ್ತೊಂದು ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದ್ದಾರೆ ನಿರ್ದೇಶಕರು.

  • ‘ದಿ ಕಾಶ್ಮೀರ್ ಫೈಲ್ಸ್’ ಅಧಿಕೃತ ಬಾಕ್ಸ್ ಆಫೀಸ್ ರಿಪೋರ್ಟ್ : 331 ಕೋಟಿ ಬಾಚಿದ ಸಿನಿಮಾ

    ‘ದಿ ಕಾಶ್ಮೀರ್ ಫೈಲ್ಸ್’ ಅಧಿಕೃತ ಬಾಕ್ಸ್ ಆಫೀಸ್ ರಿಪೋರ್ಟ್ : 331 ಕೋಟಿ ಬಾಚಿದ ಸಿನಿಮಾ

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಂಚಲನ ಮೂಡಿಸಿದಷ್ಟೇ ಬಾಕ್ಸ್ ಆಫೀಸಿನಲ್ಲೂ ಅದು ಸದ್ದು ಮಾಡಿತ್ತು. ಈ ಸಿನಿಮಾದ ಬಜೆಟ್ ಹೇಳಿದರೆ ನೀವು ನಂಬುವುದು ಅಸಾಧ್ಯ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರೇ ತಮ್ಮ ವಿಕಿಪಿಡಿಯಾ ಪೇಜ್ ನಲ್ಲಿ ಬರೆದುಕೊಂಡಂತೆ, ಕೇವಲ 15 ಕೋಟಿ ವೆಚ್ಚದಲ್ಲಿ ಈ ಸಿನಿಮಾವನ್ನು ತಯಾರಿಸಿದ್ದಾರೆ. ಆದರೆ, ಅದು ಮಾಡಿದ ಗಳಿಕೆ ಮಾತ್ರ ಅಚ್ಚರಿ ಮೂಡಿಸುತ್ತಿದೆ. ಇದನ್ನೂ ಓದಿ : ಪಾವನಾ ನಾಯಕಿಯಾಗಿ ನಟಿಸಿದ ‘ಇನ್’ ಚಿತ್ರದ ಟೀಸರ್ ರಿಲೀಸ್ ಮಾಡಿದ ಕಿಚ್ಚ

    ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಅವರ ಮೇಲೆ ಆದ ಹಿಂಸಾಚಾರದ ಕುರಿತಾಗಿ ಮಾಡಿರುವ ಸಿನಿಮಾವಿದು. ಹಾಗಾಗಿ ಹಿಂದೂಪರ ಸಂಘಟನೆಗಳು ಸೇರಿದಂತೆ ಹಲವರು ಈ ಸಿನಿಮಾದ ಬಗ್ಗೆ ಸಾಕಷ್ಟು ಪ್ರಚಾರ ಮಾಡಿದರೆ, ಹಲವು ರಾಜ್ಯಗಳು ಈ ಚಿತ್ರಕ್ಕೆ ತೆರಿಗೆ ವಿನಾಯತಿ ಘೋಷಿಸಿದವು. ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ರಾಜ್ಯದ ನಾನಾ ಮುಖ್ಯಮಂತ್ರಿಗಳು, ಸಚಿವ ಸಂಪುಟದ ಸಹೋದ್ಯೋಗಿಗಳು ಮತ್ತು ಶಾಸಕರು ಖುದ್ದಾಗಿ ಈ ಸಿನಿಮಾದ ಪ್ರಚಾರದಲ್ಲಿ ಭಾಗಿಯಾದರು. ಪರಿಣಾಮ ಈವರೆಗೂ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ಹರಿದು ಬಂದ ಮೊತ್ತ 331 ಕೋಟಿ. ಸ್ವತಃ ಈ ಮಾಹಿತಿಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ. ಇದನ್ನೂ ಓದಿ : ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದ ‘ಡೊಳ್ಳು’ ಚಿತ್ರಕ್ಕೆ ಮತ್ತೆರಡು ಪುರಸ್ಕಾರ

    ಅಂಥದ್ದೇನಿದೆ ಈ ಸಿನಿಮಾದಲ್ಲಿ ?

    ನಿರ್ದೇಶಕ ವಿವೇಕ್ ಅಗ್ನಿಹೋತ್ರಿ 1990ರಲ್ಲಿ ನಡೆದ ಕಾಶ್ಮೀರಿ ಪಂಡಿತರ ನರಮೇಧದ ಕುರಿತು ಸಿನಿಮಾ ಮಾಡಿದ್ದಾರೆ. ಅದನ್ನು ‘ದಿ ಕಾಶ್ಮೀರ್ ಫೈಲ್ಸ್’ ಹೆಸರಿನಲ್ಲಿ ಬಿಡುಗಡೆ ಮಾಡಿದ್ದಾರೆ. ಸಿನಿಮಾದ ಶೀರ್ಷಿಕೆಯೇ ಪ್ರಚುರಪಡಿಸುವಂತೆ ನರಮೇಧದ ಹಿಂದಿರುವ ಇತಿಹಾಸವನ್ನು ಬಿಚ್ಚಿಡುವಂತಹ ‘ಫೈಲ್‍’ ಇದಾಗಿದೆ. ಈ ‘ಫೈಲ್’ ನ ಪುಟಪುಟದಲ್ಲೂ ರಕ್ತಸಿಕ್ತ ಅಧ್ಯಾಯಗಳಿವೆ. ಬರೆದ ಶಾಹಿ ಕೂಡ ಕೆಂಪಾಗಿದೆ. ಇಂತಹ ಹತ್ಯಾಕಾಂಡವನ್ನು ಸಿನಿಮಿಯ ರೂಪದಲ್ಲಿ ತರದೇ, ನಡೆದ ಘಟನೆಯನ್ನು ಹಸಿಹಸಿಯಾಗಿಯೇ ತರುವ ಪ್ರಯತ್ನ ಈ ಸಿನಿಮಾದಲ್ಲಿ ಆಗಿದೆ.

    ಸಾಮಾನ್ಯವಾಗಿ ಸಿನಿಮಾಗಳೆಂದರೆ ನಾಟಕೀಯ ನಿರೂಪಣೆಗೆ ಹೆಚ್ಚು ಒತ್ತು ಕೊಡಲಾಗುತ್ತದೆ. ಕಥೆಯ ಕುತೂಹಲವನ್ನು ಕಾಪಿಡಲು ಅಲ್ಲಲ್ಲಿ, ನಾಟಕೀಯ ತಿರುವುಗಳನ್ನೂ ನೀಡಲಾಗುತ್ತದೆ. ಪ್ರೇಕ್ಷಕನ ಆಸಕ್ತಿಯ ಅನುಗುಣವಾಗಿ ಪಾತ್ರಕ್ಕೆ ಹಿನ್ನೆಲೆ ಒದಗಿಸಲಾಗುತ್ತದೆ. ‘ದಿ ಕಾಶ್ಮೀರ್ ಫೈಲ್ಸ್’ ನಲ್ಲಿ ಅದ್ಯಾವ ಗೋಜಿಗೂ ನಿರ್ದೇಶಕರು ಹೋಗಿಲ್ಲ. ತಮ್ಮ ಸಂಶೋಧನೆಯಲ್ಲಿ ಕಂಡುಂಡ ಕಥನವನ್ನು ಹಾಗೆಯೇ ಬಿಚ್ಚಿಡುತ್ತಾ ಹೋಗಿದ್ದಾರೆ. ಹಾಗಾಗಿ ಚಿತ್ರದ ತುಂಬಾ ಮನಸ್ಸಿಗೆ ಘಾಸಿಯಾಗುವಷ್ಟು ಕ್ರೌರ್ಯವೇ ತುಂಬಿದೆ.  ಅದೊಂದು ಹತ್ಯಾಕಾಂಡದ ಕಥೆಯೇ ಆಗಿದ್ದರಿಂದ ತೆರೆಯ ಮೇಲೂ ಅದನ್ನೇ ಮೂಡಿಸಿದ್ದಾರೆ.

  • ಮಾನವೀಯತೆ ಇರುವುದು ನಿಜವೇ? – ಸಿಎಂ ಕೇಜ್ರಿವಾಲ್‌ಗೆ ಅಗ್ನಿಹೋತ್ರಿ ಪ್ರಶ್ನೆ

    ಮಾನವೀಯತೆ ಇರುವುದು ನಿಜವೇ? – ಸಿಎಂ ಕೇಜ್ರಿವಾಲ್‌ಗೆ ಅಗ್ನಿಹೋತ್ರಿ ಪ್ರಶ್ನೆ

    ನವದೆಹಲಿ: `ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕೆಂದು ಕೇಳುತ್ತಿದ್ದಾರೆ. ನಿರ್ದೇಶಕರು ಸಿನಿಮಾವನ್ನು ಯೂಟ್ಯೂಬ್‌ಗೆ ನೀಡಲಿ. ಉಚಿತವಾಗಿ ಸಿನಿಮಾ ನೋಡಬಹುದು ಎಂದು ಚಾಟಿ ಬೀಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹೇಳಿಕೆಗೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

    ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಾಡಿರುವ ಟ್ವೀಟ್ ಒಂದನ್ನು ತಮ್ಮ ಖಾತೆಯಲ್ಲಿ ರಿಟ್ವೀಟ್ ಮಾಡುವ ಮೂಲಕ ಆಮ್ ಆದ್ಮಿ ಪಕ್ಷದ ತತ್ವ ಸಿದ್ಧಾಂತಗಳನ್ನೂ ಪ್ರಶ್ನಿಸಿದ್ದಾರೆ. ಅರವಿಂದ ಕೇಜ್ರಿವಾಲ್ ಅವರು ಕಠಿಣ ದೇಶಭಕ್ತಿ, ಪ್ರಾಮಾಣಿಕತೆ, ಮಾನವೀಯತೆ ಆಮ್ ಆದ್ಮಿ ಪಕ್ಷದ ಸಿದ್ಧಾಂತದ ಆಧಾರ ಸ್ತಂಭಗಳು ಎಂದು ಕೆಲದಿನಗಳ ಹಿಂದೆಯಷ್ಟೇ ಟ್ವೀಟ್ ಮಾಡಿದ್ದರು. ಇದಕ್ಕೆ ಟಾಂಗ್ ನೀಡಿರುವ ಅಗ್ನಿಹೋತ್ರಿ ಅವರು ಮಾನವೀಯತೆ ಇರುವುದು ನಿಜವೇ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬೇಕಿದ್ರೆ ʻದಿ ಕಾಶ್ಮೀರ್‌ ಫೈಲ್ಸ್‌ʼನ್ನು ಯೂಟ್ಯೂಬ್‌ಗೆ ಹಾಕಲಿ: ತೆರಿಗೆ ವಿನಾಯಿತಿ ಕೇಳಿದ ಬಿಜೆಪಿಗೆ ಕೇಜ್ರಿವಾಲ್‌ ಟಾಂಗ್

    kashmir

    ನಟ ಅನುಪಮ್ ಖೇರ್ ಕೂಡ ಕೇಜ್ರಿವಾಲ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಜ್ರಿವಾಲ್ ಹೇಳಿಕೆಯ ನಂತರ, ಪ್ರತಿಯೊಬ್ಬ ನಿಜವಾದ ಭಾರತೀಯರು ಈ ಚಿತ್ರವನ್ನು ಥಿಯೇಟರ್‌ಗೇ ಹೋಗಿ ನೋಡಬೇಕು ಎಂದು ನಾನು ಭಾವಿಸುತ್ತೇನೆ. ಈಗಾಗಲೇ ಸಿನಿಮಾ ಕಾಶ್ಮೀರದಿಂದ ಹೆಚ್ಚಿನ ಜನರೊಂದಿಗೆ ಸಂಪರ್ಕ ಸಾಧಿಸುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ʼದಿ ಕಾಶ್ಮೀರ್‌ ಫೈಲ್ಸ್‌ʼ ನೋಡಿ, ಆದ್ರೆ ಮುಸ್ಲಿಮರನ್ನು ದ್ವೇಷಿಸಬೇಡಿ: ಮೆಹಬೂಬಾ ಮುಫ್ತಿ

    ಈಚೆಗಷ್ಟೇ ವಿಧಾನ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು, ನಿರ್ದೇಶಕರು ಸಿನಿಮಾವನ್ನು ಯೂಟ್ಯೂಬ್‌ಗೆ ನೀಡಲಿ. ಉಚಿತವಾಗಿ ಸಿನಿಮಾ ನೋಡಬಹುದು. ನಮ್ಮನ್ನು ತೆರಿಗೆ ಮುಕ್ತ ಮಾಡಿ ಎಂದು ಏಕೆ ಕೇಳುತ್ತಿದ್ದೀರಿ? ಅಷ್ಟು ಉತ್ಸುಕರಾಗಿದ್ದರೆ ವಿವೇಕ್ ಅಗ್ನಿಹೋತ್ರಿಯವರಿಗೆ ಯೂಟ್ಯೂಬ್‌ನಲ್ಲಿ ಹಾಕಲು ಹೇಳಿ, ಎಲ್ಲಾ ಉಚಿತವಾಗಿರುತ್ತದೆ. ಎಲ್ಲರೂ ಅದನ್ನು ಒಂದು ದಿನದಲ್ಲಿ ನೋಡಬಹುದು. ಆಗ ತೆರಿಗೆ ಮುಕ್ತ ಮಾಡುವ ಅಗತ್ಯವಾದರೂ ಏಕೆ ಬರುತ್ತದೆ? ಎಂದು ಪ್ರಶ್ನಿಸಿದ್ದರು.

    ಕೇಜ್ರಿವಾಲ್ ಅವರು ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ಮಾತನಾಡುವಾಗ ನಗುತ್ತಿದ್ದರು ಮತ್ತು ಆ ಮೂಲಕ ಕಾಶ್ಮೀರಿ ಪಂಡಿತರ ನೋವನ್ನು ಅವಮಾನಿಸಿದ್ದಾರೆ ಎಂಬ ಕಾರಣಕ್ಕೆ ಸಭೆಯಲ್ಲಿದ್ದ ರಾಜ್ಯದ ಮಂತ್ರಿಗಳೇ ತೀವ್ರವಾಗಿ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಕೇಜ್ರಿವಾಲ್, ನಮಗೆ ಕಾಶ್ಮೀರಿ ಪಂಡಿತರು ಮುಖ್ಯವೇ ಹೊರತು ಚಲನಚಿತ್ರವಲ್ಲ. ಬಿಜೆಪಿಯವರಿಗೆ ಕಾಶ್ಮೀರಿ ಫೈಲ್ಸ್‌ ಮುಖ್ಯವಾಗಬಹುದು, ಆದರೆ ನಮಗೆ ಕಶ್ಮೀರಿ ಪಂಡಿತರು ಮುಖ್ಯ. ನಾನು ಕೇಂದ್ರದಲ್ಲಿ ಇದ್ದಿದ್ದರೆ ಅವರ ಕುರಿತು ಸಿನಿಮಾ ಮಾಡುತ್ತಿರಲಿಲ್ಲ. ಅವರ ಕೈ ಹಿಡಿದು ಕಾಶ್ಮೀರಕ್ಕೆ ಕರೆದೊಯ್ದುತ್ತಿದ್ದೆ ಎಂದು ಕೇಜ್ರಿವಾಲ್ ಹೇಳಿದ್ದರು.

  • ಕಾಶ್ಮೀರ್ ಫೈಲ್ಸ್ ಬಗ್ಗೆ ಮಾತನಾಡಿ – ಅಗ್ನಿಹೋತ್ರಿಗೆ ಬ್ರಿಟನ್ ಸಂಸತ್ ಆಹ್ವಾನ

    ಕಾಶ್ಮೀರ್ ಫೈಲ್ಸ್ ಬಗ್ಗೆ ಮಾತನಾಡಿ – ಅಗ್ನಿಹೋತ್ರಿಗೆ ಬ್ರಿಟನ್ ಸಂಸತ್ ಆಹ್ವಾನ

    ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ಕೇವಲ ಜನ ಮೆಚ್ಚುಗೆ ಮತ್ತು ಬಾಕ್ಸ್ ಆಫೀಸ್ಸಿನ ಕಲೆಕ್ಷನ್ ಮಾತ್ರ ಕೈ ಹಿಡಿದಿಲ್ಲ. ದೇಶದಾಚೆಯೂ ಈ ಸಿನಿಮಾ ನಿರ್ದೇಶಕನಿಗೆ ಗೌರವ ಸಿಗುತ್ತಿದೆ. ಭಾರತೀಯರಿಂದ ಮೆಚ್ಚುಗೆ ಪಡೆದಿದ್ದ ಈ ಸಿನಿಮಾವನ್ನು ಬೇರೆ ದೇಶಗಳಲ್ಲಿಯೂ ತೋರಿಸುವುದಾಗಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಿಳಿಸಿದ್ದಾರೆ. ಇದಕ್ಕೆ ಕಾರಣ ಬ್ರಿಟನ್ ಸಂಸತ್ ಅವರಿಗೆ ನೀಡಿರುವ ಗೌರವ. ಪತ್ನಿ ಸಮೇತ ಬ್ರಿಟನ್ ಸಂಸತ್ ಗೆ ಬರಲು ಅದು ಆಹ್ವಾನ ನೀಡಿದೆ. ಈ ವಿಷಯವನ್ನು ಸ್ವತಃ ವಿವೇಕ್ ಅವರೇ ಹಂಚಿಕೊಂಡಿದ್ದಾರೆ.

    ‘ಪತ್ನಿ ಪಲ್ಲವಿ ಮತ್ತು ನನಗೆ ಬ್ರಿಟನ್ ಸಂಸತ್‌ನಿಂದ ಆಹ್ವಾನ ಬಂದಿದೆ. ಮುಂದಿನ ತಿಂಗಳು ನಾವು ಬ್ರಿಟನ್‌ಗೆ ಹೋಗುತ್ತೇವೆ. ಕಾಶ್ಮೀರ ಪಂಡಿತರ ನರಮೇಧದ ಸಂದೇಶವನ್ನು ಪ್ರಪಂಚದ ಮೂಲೆ, ಮೂಲೆಗೆ ತಲುಪಿಸಬೇಕಾಗಿದೆ. ಬ್ರಿಟನ್ ಸಂಸತ್ತಿಗೆ ಹೋಗುತ್ತಿರುವುದು ನನಗೆ ತುಂಬಾ ಸಂತೋಷವಾಗಿದೆ’ ಎಂದು ನಿರ್ದೇಶಕ ಅಗ್ನಿಹೋತ್ರಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕಾಶ್ಮೀರ್ ಫೈಲ್ಸ್ ಸಿನಿಮಾ ವಿಶ್ವದಾದ್ಯಂತ ಮೆಚ್ಚುಗೆ ಪಡೆದುಕೊಳ್ಳುತ್ತಿರುವುದಕ್ಕೆ ನೆಟ್ಟಿಗರು ಕಾಮೆಂಟ್ ಮಾಡಿ ಮೆಚ್ಚುಗೆ ಸೂಚಿಸುತ್ತಿದ್ದಾರೆ.

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಸಂಪೂರ್ಣವಾಗಿ ಹಿಂದಿಯಲ್ಲೇ ಇದೆ. ದಕ್ಷಿಣ ಭಾರತದಲ್ಲಿ ಹಿಂದಿ ಮಾತನಾಡುವವರ ಹಾಗೂ ಹಿಂದಿ ಭಾಷೆಯನ್ನು ಅರ್ಥೈಸಿಕೊಳ್ಳುವವರ ಸಂಖ್ಯೆ ತುಂಬಾನೇ ಕಡಿಮೆ ಇದೆ ಹೀಗಾಗಿ, ಎಲ್ಲಾ ವಿಚಾರಗಳು ಇಲ್ಲಿಯವರಿಗೆ ತಲುಪದೇ ಇರಬಹುದು. ಈ ಕಾರಣಕ್ಕೆ ಸಿನಿಮಾವನ್ನು ಕನ್ನಡ ಸೇರಿದಂತೆ ಹಲವು ಭಾಷೆಗಳಿಗೆ ಡಬ್ ಮಾಡಲು ಚಿಂತನೆ ನಡೆದಿದೆ.

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ 1990ರ ಸಮಯದಲ್ಲಿ ಕಾಶ್ಮೀರದ ಪಂಡಿತರು ಅನುಭವಿಸಿದ ಕಷ್ಟಗಳೇನು ಎನ್ನುವುದನ್ನು ಸಿನಿಮಾದಲ್ಲಿ ನಿಖರವಾಗಿ ತೋರಿಸಲಾಗಿದೆ. ಸಿನಿಮಾ ಮೂಲಕ ಕಾಶ್ಮೀರದ ಚಿತ್ರಣವನ್ನು ಕಟ್ಟಿಕೊಡುವ ಪ್ರಯತ್ನದಲ್ಲಿ ವಿವೇಕ್ ಅಗ್ನಿಹೋತ್ರಿ ಯಶಸ್ಸು ಸಾಧಿಸಿದ್ದಾರೆ.

  • ದಿ ಕಾಶ್ಮೀರ್ ಫೈಲ್ ನಿರ್ದೇಶಕನ ವಿರುದ್ಧ ದೂರು ದಾಖಲು

    ದಿ ಕಾಶ್ಮೀರ್ ಫೈಲ್ ನಿರ್ದೇಶಕನ ವಿರುದ್ಧ ದೂರು ದಾಖಲು

    ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರುವ ‘ದಿ ಕಾಶ್ಮೀರ್ ಫೈಲ್’ ಸಿನಿಮಾ ಒಂದಿಲ್ಲೊಂದು ಕಾರಣಕ್ಕಾಗಿ ಸದ್ದು ಮಾಡುತ್ತಲೇ ಇದೆ. ಟ್ಯಾಕ್ಸ್ ಫ್ರಿ ಸೇರಿದಂತೆ ಹಲವು ಕಾರಣಗಳಿಂದಾಗಿ ರಾಜಕೀಯ ವಲಯದಲ್ಲಿ ಈ ಸಿನಿಮಾದ ಬಗ್ಗೆ ಪರ ವಿರೋಧದ ಮಾತು ಕೇಳಿ ಬರುತ್ತಿದ್ದರೆ, ಮತ್ತೊಂದು ಕಡೆ ಧಾರ್ಮಿಕ ಮನಸುಗಳು ಬಡಿದಾಡುತ್ತಿವೆ.

    ಈ ನಡುವೆ ಸಿನಿಮಾವನ್ನು ಸ್ವಯಂ ಪ್ರೇರಿತರಾಗಿ ಅಲ್ಲಲ್ಲಿ ಉಚಿತ ಪ್ರದರ್ಶನ, ಸೆಲೆಬ್ರಿಟಿ ಪ್ರದರ್ಶನಗಳು ಕೂಡ ಏರ್ಪಟ್ಟಿವೆ. ಕರ್ನಾಟಕದ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲೂ ಈ ಸಿನಿಮಾದ ಕುರಿತು ಗಲಾಟೆ ನಡೆಯಿತು. ದೆಹಲಿ ಮುಖ್ಯಮಂತ್ರಿ ಕೆಜ್ರಿವಾಲಾ ಅವರು ಯೂಟ್ಯೂಬ್ ನಲ್ಲಿ ಸಿನಿಮಾ ಹಾಕಿ, ಎಲ್ಲರಿಗೂ ಉಚಿತವಾಗಿ ಸಿನಿಮಾ ತೋರಿಸಿ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ

    ಕಂಗನಾ ರಣಾವತ್ ಸೇರಿದಂತೆ ಹಲವು ಬಾಲಿವುಡ್ ತಾರೆಯರು ಈ ಸಿನಿಮಾದ ಬೆನ್ನಿಗೆ ನಿಂತುಕೊಂಡರು. ನೋಡು ನೋಡುತ್ತಿದ್ದಂತೆಯೇ ಸಿನಿಮಾ ಬಾಕ್ಸ್ ಆಫೀಸಿನಲ್ಲಿ 200 ಕೋಟಿಗೂ ಅಧಿಕ ಗಳಿಕೆ ಮಾಡಿತು. ಈಗಲೂ ಹಲವು ಕಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಸಿನಿಮಾ ನಿರ್ದೇಶಕರ ಮೇಲೆ ದೂರೊಂದು ದಾಖಲಾಗಿದೆ. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ

     

    ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಭೋಪಾಲ್ ಜನರ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಮುಂಬೈನ ವರ್ಸೋವಾದಲ್ಲಿನ ಪಿ.ಆರ್ ಮ್ಯಾನೇಜರ್ ರೋಹಿತ್ ಪಾಂಡೆ ಎನ್ನುವವರು ನಿರ್ದೇಶಕರ ವಿರುದ್ಧ ದೂರು ದಾಖಲಿಸಿದ್ದಾರೆ. ತಮ್ಮ ಊರಿನ ಜನರ ಬಗ್ಗೆ ವಿವೇಕ್ ಕೆಟ್ಟದ್ದಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ. ಇದನ್ನೂ ಓದಿ: ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ

    ವಿವೇಕ್ ಅಗ್ನಿಹೋತ್ರಿ ಸಂದರ್ಶನವೊಂದರಲ್ಲಿ ‘ಭೋಪಾಲ್ ಜನರನ್ನು ಸಾಮಾನ್ಯವಾಗಿ ಸಲಿಂಗಿ ಕಾಮಿಗಳು ಅಂದುಕೊಳ್ಳುತ್ತಾರೆ. ಕಾರಣ ನವಾಬಿ ಆಸೆಗಳು. ನಾನೂ ಕೂಡ ಭೂಪಾಲದವನು. ಭೂಪಾಲಿ ಜನ ಎಂದರೆ ಅವರನ್ನು ಬೇರೆ ರೀತಿಯಲ್ಲೇ ಕಲ್ಪಿಸಿಕೊಳ್ಳುತ್ತಾರೆ. ಹಾಗಾಗಿ ನಾನು ಆ ಭಾಗದವನು ಎಂದು ಹೇಳಿಕೊಳ್ಳುವುದಿಲ್ಲ’ ಎಂದು ಹೇಳಿದ್ದಾರೆ ಎನ್ನುವ ಕಾರಣಕ್ಕಾಗಿ ದೂರು ದಾಖಲಾಗಿದೆ.

  • ಮೂರ್ಖರು, ಹುಚ್ಚರು, ಬುದ್ಧಿಇಲ್ಲದವರಿಗೆ ಉತ್ತರಿಸಬಾರದು – ಕೇಜ್ರಿವಾಲ್‍ಗೆ ಅಗ್ನಿಹೋತ್ರಿ ಪರೋಕ್ಷ ಟಾಂಗ್

    ಮೂರ್ಖರು, ಹುಚ್ಚರು, ಬುದ್ಧಿಇಲ್ಲದವರಿಗೆ ಉತ್ತರಿಸಬಾರದು – ಕೇಜ್ರಿವಾಲ್‍ಗೆ ಅಗ್ನಿಹೋತ್ರಿ ಪರೋಕ್ಷ ಟಾಂಗ್

    ನವದೆಹಲಿ: ಕೆಲವು ಮೂರ್ಖರು, ಹುಚ್ಚರು, ಬುದ್ಧಿಇಲ್ಲದವರಿಂದ ತಪ್ಪಿಸಿಕೊಳ್ಳಬೇಕು, ಅವರಿಗೆ ಉತ್ತರಿಸಬಾರದು ಎಂದು ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತಿರುಗೇಟು ನೀಡಿದ್ದಾರೆ.

    ಇತ್ತೀಚೆಗಷ್ಟೇ ಅರವಿಂದ್ ಕೇಜ್ರಿವಾಲ್ ಅವರು ರಾಜ್ಯದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ತೆರಿಗೆ ಮುಕ್ತಗೊಳಿಸುವ ಬಗ್ಗೆ ನೀಡಿದ್ದ ಹೇಳಿಕೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಟ್ರೋಲ್ ಆಗುತ್ತಿದ್ದಾರೆ. ಇದೀಗ ಇದೇ ವಿಚಾರವಾಗಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೂಡ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ : ಬೇಕಿದ್ರೆ ʻದಿ ಕಾಶ್ಮೀರ್‌ ಫೈಲ್ಸ್‌ʼನ್ನು ಯೂಟ್ಯೂಬ್‌ಗೆ ಹಾಕಲಿ: ತೆರಿಗೆ ವಿನಾಯಿತಿ ಕೇಳಿದ ಬಿಜೆಪಿಗೆ ಕೇಜ್ರಿವಾಲ್‌ ಟಾಂಗ್

    ವಿವೇಕ್ ಅಗ್ನಿಹೋತ್ರಿ ಅವರು ಶುಕ್ರವಾರ ಭೋಪಾಲ್‍ನ ಮಖನ್‍ಲಾಲ್ ಚತುರ್ವೇದಿ ರಾಷ್ಟ್ರೀಯ ಪತ್ರಿಕೋದ್ಯಮ ಮತ್ತು ಸಂವಹನ ವಿಶ್ವವಿದ್ಯಾಲಯದಲ್ಲಿ ಚಿತ್ರ ಭಾರತಿ ಚಲನಚಿತ್ರೋತ್ಸವಕ್ಕೆ ಆಗಮಿಸಿದ್ದರು. ಈ ವೇಳೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನೇಕ ಜನ ದೇವರು ಭೂಮಿಗೆ ಬರಬೇಕೆಂದು ಬಯಸುತ್ತಾರೆ. ಕೆಲವು ಮೂರ್ಖರು, ಹುಚ್ಚರು, ಬುದ್ಧಿಇಲ್ಲದವರು ಇರುತ್ತಾರೆ. ಈ ಮೂರು ವರ್ಗದ ಜನರಿಂದ ತಪ್ಪಿಸಿಕೊಳ್ಳಬೇಕು. ಅಂತವರಿಗೆ ಉತ್ತರಿಸಬಾರದು ಎಂದು ಟಾಂಗ್ ನೀಡಿದ್ದಾರೆ.

    ಇತ್ತೀಚೆಗಷ್ಟೇ ದೆಹಲಿ ವಿಧಾನಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿಯವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಕೇಳುತ್ತಿದ್ದಾರೆ. ನಿರ್ದೇಶಕರು ಸಿನಿಮಾವನ್ನು ಯೂಟ್ಯೂಬ್‍ಗೆ ನೀಡಲಿ. ಉಚಿತವಾಗಿ ಸಿನಿಮಾ ನೋಡಬಹುದು ಎಂದಿದ್ದರು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?

    ನಮ್ಮನ್ನು ತೆರಿಗೆ ಮುಕ್ತ ಮಾಡಿ ಎಂದು ಏಕೆ ಕೇಳುತ್ತಿದ್ದೀರಿ? ಅಷ್ಟು ಉತ್ಸುಕರಾಗಿದ್ದರೆ ವಿವೇಕ್ ಅಗ್ನಿಹೋತ್ರಿಯವರಿಗೆ ಯೂಟ್ಯೂಬ್‍ನಲ್ಲಿ ಹಾಕಲು ಹೇಳಿ, ಎಲ್ಲಾ ಉಚಿತವಾಗಿರುತ್ತದೆ. ಎಲ್ಲರೂ ಅದನ್ನು ಒಂದು ದಿನದಲ್ಲಿ ನೋಡಬಹುದು. ಆಗ ತೆರಿಗೆ ಮುಕ್ತ ಮಾಡುವ ಅಗತ್ಯವಾದರೂ ಏಕೆ ಬರುತ್ತದೆ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದರು.

  • ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?

    ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ತಯಾರಾದ ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಗಳಿಗೆ ಇದೀಗ 200 ಕೋಟಿ ದಾಟಿದೆ ಎಂದು ಅಂದಾಜಿಸಲಾಗಿದೆ. ಮೂವತ್ತು ಕೋಟಿ ಅಂದಾಜು ಬಜೆಟ್ ನಲ್ಲಿ ನಿರ್ಮಾಣವಾದ ಈ ಸಿನಿಮಾ ನಿರ್ಮಾಪಕರಿಗೆ ಭಾರೀ ಲಾಭ ತಂದುಕೊಟ್ಟಿದೆ. ಹೀಗಾಗಿ ಸಿನಿಮಾದ ಲಾಭಾಂಶದ ಮೇಲೆ ಎಲ್ಲರ ಕಣ್ಣು ಬಿದ್ದಿದೆ. ಇದನ್ನೂ ಓದಿ : ಬಸವರಾಜ ಬೊಮ್ಮಾಯಿಯನ್ನು ಶಿವರಾಜ್ ಕುಮಾರ್ ಭೇಟಿ ಮಾಡಿದ್ದೇಕೆ?

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ 200 ಕೋಟಿ ಕ್ಲಬ್ ಗೆ ಸೇರುತ್ತಿದ್ದಂತೆಯೇ ಮಧ್ಯಪ್ರದೇಶದ ಐಎಎಸ್ ಅಧಿಕಾರಿ ನಿಯಾಜಾ ಖಾನ್ ತಮ್ಮ ಟ್ವಿಟರ್ ಖಾತೆಯ ಮೂಲಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಪ್ರಶ್ನೆಯೊಂದನ್ನು ಕೇಳಿದ್ದಾರೆ. ಈಗ ಆ ಪ್ರಶ್ನೆ ವೈರಲ್ ಆಗಿದೆ ಮತ್ತು ಅಧಿಕಾರಿಗೆ ಅಲ್ಲಿನ ಸರಕಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಎದೆಹಾಲು ದಾನ ಮಾಡಿ – ಅಭಿಮಾನಿಗಳಿಗೆ ಸಿಂಡ್ರೆಲಾ ಸಂದೇಶ

    ತಮ್ಮ ಟ್ವಿಟರ್ ಖಾತೆಯಲ್ಲಿ ನಿಯಾಜ್ ಖಾನ್, ‘ನಿರ್ದೇಶಕರೆ, ನಿಮ್ಮ ಸಿನಿಮಾ ಯಶಸ್ಸು ಕಂಡಿರುವುದಕ್ಕೆ ಶುಭಾಶಯಗಳು. ಈ ನಿಮ್ಮ ಸಿನಿಮಾದಿಂದ ಬಂದ ಹಣವನ್ನು ಕಾಶ್ಮೀರಿ ಪಂಡಿತರ ಮಕ್ಕಳ ಶಿಕ್ಷಣಕ್ಕೆ ಮತ್ತು ನೆಲೆ ಕಳೆದುಕೊಂಡಿರುವ ಅವರ ಕುಟುಂಬಕ್ಕೆ ಮನೆ ಕಟ್ಟಿಸಿ ಕೊಡುತ್ತೀರಾ. ಹಾಗೆ ಮಾಡಿದರೆ ಅವರ ಕುಟುಂಬಕ್ಕೆ ಒಳ್ಳೆಯದಾಗುತ್ತದೆ?’ ಎಂದು ಕೇಳಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿದ ಉಪ್ಪಿ – ಫೋಟೋ ವೈರಲ್

    ಐಎಎಸ್ ಅಧಿಕಾರಿಯ ಈ ಪ್ರಶ್ನೆಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಉತ್ತರವನ್ನೂ ಕೊಟ್ಟಿದ್ದಾರೆ. ವಿವೇಕ್ ಕೂಡ ಟ್ವಿಟ್ ಮಾಡಿದ್ದು, ‘ಇದೇ 25ನೇ ತಾರೀಖು ನಾನು ಭೋಪಾಲ್ ಗೆ ಬರುತ್ತಿದ್ದೇನೆ. ತಾವು ಅಂದು ನನಗೆ ಭೇಟಿಗೆ ಅವಕಾಶ ನೀಡಿ. ನಮ್ಮ ನಮ್ಮ ಚಿಂತನೆಗಳನ್ನು ಶೇರ್ ಮಾಡೋಣ ಮತ್ತು ನಿಮ್ಮಿಂದ ನಮಗೂ ಸಹಾಯ ಬೇಕಿದೆ. ತಾವು ಪುಸ್ತಕ ಬರೆಯುತ್ತೀರಿ. ಆ ಹಣದಿಂದ ತಾವು ಎಂದಾದರೂ ಸಮಾಜಮುಖಿ ಕೆಲಸದ ಪ್ರಯತ್ನ ಮಾಡಿದ್ದೀರಾ?’ ಎಂದು ಅವರೂ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:  ಹುಡುಗಿ ಎಂದು ಅಪ್ಪನ ಜೊತೆಗೆ ಚಾಟ್ ಮಾಡಿ ಸಿಕ್ಕಿಬಿದ್ದ ಖ್ಯಾತ ನಿರ್ಮಾಪಕ!

    ಈ ಇಬ್ಬರ ಪ್ರಶ್ನೋತ್ತರಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ಸಿನಿಮಾ ಮಾತ್ರ ತನ್ನ ಪಾಡಿಗೆ ತಾನು ಬಾಕ್ಸ್ ಆಫೀಸಿನಲ್ಲಿ ತನ್ನ ಯಶಸ್ಸನ್ನು ಮುಂದುವರೆಸುತ್ತಲೇ ಸಾಗಿದೆ.

  • ಜಸ್ಟ್‌ ಮಿಸ್‌ – ಬಿಟ್ಟಾ ಕರಾಟೆಯಿಂದ ಪಾರಾಗಿ ಇಂದಿಗೂ ಜೀವಂತವಿದ್ದಾರೆ ವ್ಯಕ್ತಿ

    ಜಸ್ಟ್‌ ಮಿಸ್‌ – ಬಿಟ್ಟಾ ಕರಾಟೆಯಿಂದ ಪಾರಾಗಿ ಇಂದಿಗೂ ಜೀವಂತವಿದ್ದಾರೆ ವ್ಯಕ್ತಿ

    – ಬಿಟ್ಟಾನ ಮತ್ತೊಂದು ಕರಾಳ ಮುಖ ಬಹಿರಂಗ
    – ಮಾವ ಪಾರಾದ ರೋಚಕ ಕಥೆ ತಿಳಿಸಿದ ಎನ್‌ಆರ್‌ಐ ವೈದ್ಯ

    ಬೆಂಗಳೂರು: ಕಾಶ್ಮೀರ ಪಂಡಿತರ ಮಾರಣಹೋಮವನ್ನು ಬಿಚ್ಚಿಡುವ ʼ ದಿ ಕಾಶ್ಮೀರ ಫೈಲ್ಸ್‌ʼ ಸಿನಿಮಾ ಬಿಡುಗಡೆಯಾದ ಬಳಿಕ ಬಹಳಷ್ಟು ಪಂಡಿತ ಕುಟುಂಬದ ಸದಸ್ಯರು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. ಈಗ ಅಮೆರಿಕದಲ್ಲಿರುವ ವೈದ್ಯರೊಬ್ಬರು ತಮ್ಮ ನೋವನ್ನು ಮೊದಲ ಬಾರಿಗೆ ಹಂಚಿಕೊಂಡಿದ್ದಾರೆ.

    ರಾಜೀವ್‌ ಪಂಡಿತ್‌ ತನ್ನ ಮಾವ ಫಾರೂಕ್ ಅಹ್ಮದ್ ದಾರ್ ಅಲಿಯಾಸ್‌ ಬಿಟ್ಟಾ ಕರಾಟೆ ಕೈಯಿಂದ ಪಾರಾದ ಕಥೆಯನ್ನು ಮೊದಲ ಬಾರಿಗೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಟ್ವೀಟ್‌ ಗಳನ್ನು ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ರೀಟ್ವೀಟ್‌ ಮಾಡಿದ್ದಾರೆ.

    ರಾಜೀವ್‌ ಪಂಡಿತ್‌ ಹೇಳಿದ್ದು ಏನು?
    ನನ್ನ ಮಾವ ಬಿಟ್ಟಾ ಕರಾಟೆಯ ಗುಂಡೇಟಿನಿಂದ ಪಾರಾಗಿ ಇಂದಿಗೂ ಜೀವಂತವಾಗಿದ್ದಾರೆ. ಈ ಕಥೆಯನ್ನು ನಾನು ಇಲ್ಲಿಯವರೆಗೆ ಹೇಳಿರಲಿಲ್ಲ. ಈಗ ಮೊದಲ ಬಾರಿಗೆ ಬಹಿರಂಗ ಪಡಿಸುತ್ತಿದ್ದೇನೆ.

    ಫಾರೂಕ್ ಅಹ್ಮದ್ ದಾರ್ ಸೈಕೋಪಾತ್ ಭಯೋತ್ಪಾದಕನಾಗುವ ಮೊದಲು ಅವನು ನಮ್ಮ ಕುಟುಂಬದ ಸದಸ್ಯರ ಜೊತೆ ಶ್ರೀನಗರದಲ್ಲಿ ಕ್ರಿಕೆಟ್ ಆಡುತ್ತಿದ್ದ. ಬಾಲ್ಯದಲ್ಲಿ ಆತನನ್ನು ಮುದ್ದಿನಿಂದ ಬಿಟ್ಟಾ ಎಂದು ಕರೆಯಲಾಗುತ್ತಿತ್ತು. ಶಾಲೆಗೆ ಹೋಗುವ ಸಮಯದಲ್ಲಿ ಬಿಟ್ಟಾನಿಗೆ ಮಾವ ಹಣವನ್ನು ಕೊಟ್ಟಿದ್ದರು.

    ಬಿಟ್ಟಾ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ತರಬೇತಿ ಪಡೆದು ಮರಳಿದ ಬಳಿಕ ನನ್ನ ಮಾವನನ್ನು ಹತ್ಯೆ ಮಾಡಲು ಆದೇಶ ಸಿಕ್ಕಿತು. ಬಿಟ್ಟಾ ಮತ್ತು ಮತ್ತೊಬ್ಬ ಜೆಕೆಎಲ್‌ಎಫ್‌(ಜಮ್ಮು ಕಾಶ್ಮೀರ ಲಿಬರೇಷನ್‌ ಫ್ರಂಟ್‌) ಉಗ್ರ ಮನೆಯಿಂದ ಮಾವ ಹೊರ ಹೋಗುವುದನ್ನೇ ಕಾಯುತ್ತಿದ್ದರು. ಶ್ರೀನಗರದ ಬಳಿಯ ಹಬ ಕಡಲ ಬಳಿ ಬಂದಾಗ ಹಿಂದಿನಿಂದ ಬಂದು ಮಾವನನ್ನು ಶೂಟ್‌ ಮಾಡಿ ಹತ್ಯೆ ಮಾಡಲು ಅವರು ಪ್ಲ್ಯಾನ್‌ ಮಾಡಿದ್ದರು. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    1990ರ ಫೆ.16 ರಂದು ಬೆಳಿಗ್ಗೆ 9:30 ಕ್ಕೆ ನನ್ನ ಚಿಕ್ಕಪ್ಪ ಚರ್ಮದ ಜಾಕೆಟ್ ಧರಿಸಿ ಮನೆಯಿಂದ ಹೊರಹೋಗುವುದನ್ನು ಗಮನಿಸಿದ ಉಗ್ರ ಬಿಟ್ಟಾನಿಗೆ ಮಾಹಿತಿ ನೀಡಿದ್ದಾನೆ. ಈ ಮಾಹಿತಿ ಸಿಕ್ಕಿದ ಕೂಡಲೇ ಬಿಟ್ಟ ಪಿಸ್ತೂಲ್‌ ಸಿದ್ಧ ಪಡಿಸಿಕೊಂಡಿದ್ದಾನೆ. ಈ ಸಂದರ್ಭದಲ್ಲಿ ಮಾವನಿಗೆ ಇವತ್ತು ಅಣ್ಣ ಹುಟ್ಟಿದ ದಿನ ಎಂದು ಥಟ್ಟನೆ ನೆನಪಾಗಿ ಮತ್ತೆ ಪೂಜೆ ಮಾಡಲೆಂದು ಮನೆಗೆ ತೆರಳುತ್ತಾರೆ.

    ಮಾವ ಮನೆಗೆ ಮರಳಿದ ವಿಚಾರವನ್ನು ಮತ್ತೊಬ್ಬ ಉಗ್ರ ಗಮನಿಸಿರಲಿಲ್ಲ. ಈ ಸಮಯದಲ್ಲೇ ಬೆಳಗ್ಗೆ 9:30 ಕ್ಕೆ ನನ್ನ ಮಾವನ ಮನೆಯಿಂದ ಕೆಲ ದೂರದಲ್ಲಿ ಶೀಘ್ರವೇ ಮದುವೆಯಾಗಲಿದ್ದ ಅನಿಲ್‌ ಭಾನ್‌(26) ಹಬಾ ಕಡಲ ಕಡೆಗೆ ನಡೆಯಲು ಆರಂಭಿಸಿದ್ದರು. ಅವರು ಚರ್ಮದ ಜಾಕೆಟ್‌ ಧರಿಸಿದ್ದರು.

    ಈ ವಿಚಾರ ತಿಳಿಯದ ಬಿಟ್ಟಾ ಕರಾಟೆ ಅನಿಲ್‌ ಅವರನ್ನು ನಡೆಯುತ್ತಿರುವುದನ್ನು ನೋಡಿ ಪಿಸ್ತೂಲ್‌ನಿಂದ ಶೂಟ್‌ ಮಾಡಿ ಹತ್ಯೆ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದ ಅನಿಲ್‌ ಮೃತ ದೇಹದ ಮುಂದೆ ತಾಯಿಯ ಕಣ್ಣೀರನ್ನು ಎಂದೂ ಮರೆಯಲು ಸಾಧ್ಯವಿಲ್ಲ.

    ಬಿಟ್ಟಾ ಕರಾಟೆ ನಾನು ತಪ್ಪಾಗಿ ಗುರುತಿಸಿ ವ್ಯಕ್ತಿಯನ್ನು ಕೊಲೆ ಮಾಡಿದ್ದೇನೆ ಎಂದು ನಂತರ ಒಪ್ಪಿಕೊಂಡಿದ್ದ. ಅನಿಲ್ ಅವರ ತ್ಯಾಗದ ಕಾರಣದಿಂದ ನನ್ನ ಮಾವ ಇಂದಿಗೂ ಜೀವಂತವಾಗಿದ್ದಾರೆ. ಇದನ್ನೂ ಓದಿ: 20 ಪಂಡಿತರ ಹತ್ಯೆ, ಕೆಎಎಸ್ ಅಧಿಕಾರಿ ಜೊತೆ ಮದುವೆ – ಕಾಶ್ಮೀರದ ರಕ್ತಪಾತದ ವಿಲನ್ ಬಿಟ್ಟಾ ಕರಾಟೆಯ ಕಥೆಯಿದು

    ನಾನು ಈ ಕಥೆಯನ್ನು ಮೊದಲು ಹೇಳಿಲ್ಲ ಯಾಕೆಂದರೆ ಕಾಶ್ಮೀರಿ ಹಿಂದೂಗಳ ಪರವಾಗಿ 30 ವರ್ಷಗಳ ಕಾಲ ಅಮೆರಿಕದಲ್ಲಿ ಕಾಂಗ್ರೆಸ್ ಮತ್ತು ಮಾಧ್ಯಮಗಳಲ್ಲಿ ಮಾತನಾಡುತ್ತಿದ್ದರೂ ಯಾರೂ ಕೇಳುತ್ತಿರಲಿಲ್ಲ. ಈಗ ನೊಂದ ಜನರಿಗೆ ನ್ಯಾಯ ಒದಗಿಸಿದ್ದಕ್ಕೆ ವಿವೇಕ್‌ ಅಗ್ನಿಹೋತ್ರಿ ಅವರಿಗೆ ಧನ್ಯವಾದ ಹೇಳುತ್ತೇನೆ.