Tag: ವಿಶಾಖಪಟ್ಟಣ

  • ಪಾಕಿಸ್ತಾನದ ಹನಿಟ್ರ್ಯಾಪ್‍ಗೆ ಸಿಲುಕಿದ್ದ ಮೂವರು ನೌಕಾ ಅಧಿಕಾರಿಗಳ ಬಂಧನ

    ಪಾಕಿಸ್ತಾನದ ಹನಿಟ್ರ್ಯಾಪ್‍ಗೆ ಸಿಲುಕಿದ್ದ ಮೂವರು ನೌಕಾ ಅಧಿಕಾರಿಗಳ ಬಂಧನ

    ಕಾರವಾರ: ಮೋಹಕ ಜಾಲದಲ್ಲಿ ಬಿದ್ದು ಪಾಕಿಸ್ತಾನಕ್ಕೆ ಭಾರತೀಯ ಯುದ್ಧ ನೌಕೆಗಳ ಚಲನ ವಲನ ಮಾಹಿತಿ ನೀಡುತ್ತಿದ್ದ ಪ್ರಕರಣದ ಸಂಬಂಧ ಮೂವರು ನೌಕಾ ಅಧಿಕಾರಿಗಳನ್ನು ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

    ಪಾಕಿಸ್ತಾನದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಧಿಸಿದಂತೆ ಕೇಂದ್ರ ಗುಪ್ತಚರ ಸಂಸ್ಥೆಗಳೊಂದಿಗೆ ಆಂಧ್ರಪ್ರದೇಶದ ಪೊಲೀಸರು ತನಿಖೆ ನಡೆಸುತ್ತಿದೆ. ಹೀಗಾಗಿ ವಿಶಾಖಪಟ್ಟಣದಲ್ಲಿರುವ ಈಸ್ಟರ್ನ್ ಕಮಾಂಡ್‍ಗೆ ಸೇರಿದ ರಾಜೇಶ್, ಲೋಕಂಡ್ ಮತ್ತು ನಿರಂಜನ ಎಂಬವರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಐಎಸ್‍ಐ ಏಜೆಂಟ್‍ಗಳ ಹನಿಟ್ರ್ಯಾಪ್‍ಗೆ ಒಳಗಾಗಿ ದಾಖಲೆಗಳನ್ನು ನೀಡಿದ ಐಎಎಫ್ ಅಧಿಕಾರಿಯ ಬಂಧನ

    ಹನಿಟ್ರ್ಯಾಪ್ ಪ್ರಕರಣದಲ್ಲಿ ಈ ಹಿಂದೆ ನೌಕಾ ನೆಲೆಯ ಎಂಟು ಮಂದಿ ಸೇಲರ್‌ಗಳು ಸಿಕ್ಕಿಬಿದ್ದಿದ್ದರು. ಈ ಪೈಕಿ ಇಬ್ಬರು ಕಾರವಾರದಲ್ಲಿರುವ ನೌಕಾನೆಲೆಗೆ ಸೇರಿದ್ದರು. ಈಗ ಮತ್ತೆ ಇಬ್ಬರು ಅಧಿಕಾರಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್‍ಐ) ಸಾಮಾಜಿಕ ಜಾಲತಾಣದ ಮೂಲಕ ಭಾರತೀಯ ನೌಕಾಪಡೆಯ ಸಿಬ್ಬಂದಿಯನ್ನು ಮೋಹಕ ಜಾಲದಲ್ಲಿ ಸಿಲುಕಿಸಿತ್ತು. ಬಳಿಕ ಭಾರತದ ನೌಕಾನೆಲೆ ಹಾಗೂ ಯುದ್ಧ ನೌಕೆಗಳ ಮಾಹಿತಿಯನ್ನು ಪಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿರುವ ತನಿಖಾ ಸಂಸ್ಥೆ ಮೂವರನ್ನು ವಶಕ್ಕೆ ಪಡೆದಿದೆ.

    ನೌಕಾದಳದ ಮಾಹಿತಿ ಸೋರಿಕೆ ಹಿನ್ನೆಲೆ ಕಾರವಾರ ಕದಂಬ ನೌಕಾನೆಲೆಯಲ್ಲಿ ಆ್ಯಂಡ್ರಾಯ್ಡ್ ಫೋನ್‍ಗಳನ್ನು ನಿಷೇಧಿಸಲಾಗಿತ್ತು. ಅಷ್ಟೇ ಅಲ್ಲದೆ ಕಾರವಾರ ಕದಂಬ ನೌಕಾನೆಲೆಯಲ್ಲಿ ಗುಪ್ತ ಮಾಹಿತಿ ಹಂಚಿಕೆ ಸಂಬಂಧ ತನಿಖೆ ಸಹ ನಡೆಸಲಾಗುತ್ತಿದೆ.

  • ಇಂದು ಭಾರತ – ವಿಂಡೀಸ್ ಎರಡನೇ ಏಕದಿನ ಪಂದ್ಯ

    ಇಂದು ಭಾರತ – ವಿಂಡೀಸ್ ಎರಡನೇ ಏಕದಿನ ಪಂದ್ಯ

    ವಿಶಾಖಪಟ್ಟಣ: ಭಾರತಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಈಗಾಗಲೇ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಆತಿಥೇಯರ ವಿರುದ್ಧ ಭರ್ಜರಿ ಜಯಗಳಿಸಿ ಈ ಮ್ಯಾಚ್ ಅನ್ನು ಗೆಲ್ಲುವ ತಯಾರಿಯಲ್ಲಿದ್ದಾರೆ.

    ಇಂದು ವಿಶಾಖಪಟ್ಟಣದ ವೈ.ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ಎರಡನೇ ಪಂದ್ಯ ನಡೆಯಲಿದೆ. ಭಾರತ ಮೊದಲ ಪಂದ್ಯದ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ.


    ವಿಶಾಖಪಟ್ಟಣದ ಪಿಚ್ ಬ್ಯಾಟ್ಸ್ ಮನ್‍ಗಳಿಗೆ ಹೆಚ್ಚು ನೆರವು ನೀಡುವ ನಿರೀಕ್ಷೆ ಇದೆ. ಬ್ಯಾಟಿಂಗ್‍ನಲ್ಲೂ ಆತಿಥೇಯರು ಪರಿಣಾಮಕಾರಿ ಸಾಮರ್ಥ್ಯ ತೋರಬೇಕಿದೆ. ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಕೆ.ಎಲ್ ರಾಹುಲ್ ಮೊದಲ ಪಂದ್ಯದಲ್ಲಿ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಡಲು ವಿಫಲರಾಗಿದ್ದರು. ಕೊಹ್ಲಿ ಕೂಡ ಹೆಚ್ಚು ಸಮಯ ಕ್ರೀಸ್ ನಲ್ಲಿ ಇರಲಿಲ್ಲ. ಮೊದಲ ಪಂದ್ಯದಲ್ಲಾದ ತಪ್ಪುಗಳನ್ನು ತಿದ್ದಿಕೊಂಡು ವಿಂಡೀಸ್ ಗೆ ತಕ್ಕ ಉತ್ತರ ಕೊಡಲು ಭಾರತ ಸಜ್ಜಾಗಿದೆ.

    ಮೊದಲ ಪಂದ್ಯದಲ್ಲಿ ಭಾರತ ನೀಡಿದ್ದ 288 ರನ್‍ಗಳ ಗುರಿಯನ್ನು ಕೇವಲ ಎರಡು ವಿಕೆಟ್ ಕಳೆದುಕೊಂಡು ಮುಟ್ಟಿದ್ದ ಕೀರನ್ ಪೊಲಾರ್ಡ್ ನಾಯಕತ್ವದ ವಿಂಡೀಸ್ ತಂಡ ಈಗ ವಿಶ್ವಾಸದಲ್ಲಿದೆ.

    ಇಂದಿನ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ತನ್ನ ಸಾಮಥ್ರ್ಯವನ್ನು ಪ್ರದರ್ಶಿಸಿದರೆ ಮಾತ್ರ ಗೆಲ್ಲುವ ಅವಕಾಶಗಳು ಸಿಗಲಿದೆ. ಎರಡು ತಂಡದಲ್ಲಿ ಉತ್ತಮ ಬ್ಯಾಟ್ಸ್ ಮನ್‍ಗಳಿದ್ದು, ಹೊಡಿಬಡಿ ದಾಂಡಿಗರು ಇರುವುದರಿಂದ ಹೈ ಸ್ಕೋರಿಂಗ್ ಮ್ಯಾಚ್ ಇದಾಗಲಿದೆ.

  • ನಕಲಿ ಕತ್ತಿಯಿಂದ ಪೇದೆಯನ್ನ ಬೆನ್ನಟ್ಟಿದ್ದ ವ್ಯಕ್ತಿ ಎರಡು ದಿನಗಳ ಬಳಿಕ ಅರೆಸ್ಟ್

    ನಕಲಿ ಕತ್ತಿಯಿಂದ ಪೇದೆಯನ್ನ ಬೆನ್ನಟ್ಟಿದ್ದ ವ್ಯಕ್ತಿ ಎರಡು ದಿನಗಳ ಬಳಿಕ ಅರೆಸ್ಟ್

    ವಿಶಾಖಪಟ್ಟಣಂ: ನಕಲಿ ಕತ್ತಿಯಿಂದ ಪೇದೆಯನ್ನು ಬೆನ್ನಟ್ಟಿದ್ದ ವ್ಯಕ್ತಿಯನ್ನು ಎರಡು ದಿನಗಳ ಬಳಿಕ ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.

    ವಿಶಾಖಪಟ್ಟಣಂ ನಗರದ ಮಕ್ಕಳ ರಂಗಮಂದಿರದಲ್ಲಿ ನವೆಂಬರ್ 17ರಂದು ಘಟನೆ ನಡೆದಿತ್ತು. ಆದರೆ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯು ಇಂದು ಸಿಕ್ಕಿಬಿದ್ದಿದ್ದಾನೆ.

    ಮದ್ಯ ಸೇವಿಸಿ ಮಕ್ಕಳ ರಂಗಮಂದಿರಕ್ಕೆ ಬಂದು ಗಲಾಟೆ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದರು. ಆದರೆ ಆರೋಪಿಯು ಕೈಯಲ್ಲಿ ಹಿಡಿದಿದ್ದ ನಕಲಿ ಕತ್ತಿಯಿಂದ ಪೊಲೀಸರಿಗೆ ಭಯ ಮೂಡಿಸಿದ್ದ. ಅಷ್ಟೇ ಅಲ್ಲದೆ ಓರ್ವ ಪೊಲೀಸ್ ಪೇದೆಯ ಕಡೆಗೆ ಏಕಾಏಕಿ ನುಗ್ಗಿ ದಾಳಿ ಮಾಡುವಂತೆ ನಟಿಸಿದ್ದ. ಇದರಿಂದಾಗಿ ಸ್ಥಳದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ದೃಶ್ಯವು ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ವಿಶಾಖಪಟ್ಟಣಂ ಪೊಲೀಸರು ಆರೋಪಿಯ ಬಂಧನಕ್ಕಾಗಿ ಶೋಧ ಕಾರ್ಯ ನಡೆದಿದ್ದರು. ಇಂದು ಸಿಕ್ಕಿಬಿದ್ದ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ, ತಾನು ಹಿಡಿದಿದ್ದು ನಕಲಿ ಕತ್ತಿ ಎಂದು ಹೇಳಿದ್ದಾರೆ.

  • 4 ಕೆಜಿ ಚಿನ್ನ, 2 ಕೋಟಿ ಮೌಲ್ಯದ ನೋಟುಗಳಿಂದ ದುರ್ಗೆಗೆ ಅಲಂಕಾರ

    4 ಕೆಜಿ ಚಿನ್ನ, 2 ಕೋಟಿ ಮೌಲ್ಯದ ನೋಟುಗಳಿಂದ ದುರ್ಗೆಗೆ ಅಲಂಕಾರ

    ವಿಶಾಖಪಟ್ಟಣಂ: ನವರಾತ್ರಿ ಸಂಭ್ರಮದಲ್ಲಿ ನವ ದುರ್ಗೆಯರ ಆರಾಧನೆ ದೇಶದೆಲ್ಲೆಡೆ ಅದ್ಧೂರಿಯಾಗಿ ನಡೆಯುತ್ತದೆ. ಆದ್ದರಿಂದ ಈ ಬಾರಿ ನವರಾತ್ರಿ ಆಚರಣೆ ವಿಶಾಖಪಟ್ಟಣದಲ್ಲಿ ಜೋರಾಗಿಯೇ ನಡೆಯುತ್ತಿದ್ದು, ಶ್ರೀ ಕನ್ಯಕ ಪರಮೇಶ್ವರಿ ದೇವಿಗೆ ಬರೋಬ್ಬರಿ 4 ಕೆಜಿ ಚಿನ್ನ, 2 ಕೋಟಿ ಮೌಲ್ಯದ ನೋಟಿನಿಂದ ಸಿಂಗರಿಸಿ ಆರಾಧಿಸಲಾಯಿತು.

    ಭಾನುವಾರ ದುರ್ಗಾಷ್ಠಮಿ ದಿನದ ಆರಾಧನೆ ಹಿನ್ನೆಲೆಯಲ್ಲಿ ಶ್ರೀ ಕನ್ಯಕ ಪರಮೇಶ್ವರಿ ದೇವಸ್ಥಾನವನ್ನು ಅದ್ಧೂರಿಯಾಗಿ ಅಲಂಕರಿಸಲಾಗಿತ್ತು. ಜೊತೆಗೆ ಕನ್ಯಕ ಪರಮೇಶ್ವರಿ ದೇವಿಗೆ 4 ಕೆಜಿ ಚಿನ್ನ ಹಾಕಿ, ದೇವಿಯ ಸುತ್ತಲು ನೋಟುಗಳಿಂದ ಅಲಂಕರಿಸಲಾಗಿತ್ತು. ಈ ವಿಶೇಷ ಅಲಂಕಾರಕ್ಕೆ ಬರೋಬ್ಬರಿ ಎರಡು ಕೋಟಿ ರೂಪಾಯಿ ನೋಟುಗಳನ್ನು ಬಳಸಲಾಗಿತ್ತು. ಈ ವಿಶೇಷ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ದೇವಿಯನ್ನು ಭಕ್ತರು ಕಣ್ತುಂಬಿಕೊಂಡರು.

    ಈ ವಿಶೇಷ ಅಲಂಕಾರಕ್ಕೆ ವಿದೇಶಿ ನೋಟುಗಳನ್ನು ಕೂಡ ಬಳಸಲಾಗಿತ್ತು. ಅಲ್ಲದೆ ದೇವಿಗೆ ಸುಮಾರು 200 ಭಕ್ತಾದಿಗಳು ಹಣ ಹಾಗೂ ಚಿನ್ನವನ್ನು ದೇಣಿಗೆ ಕೊಟ್ಟಿದ್ದರು. ಅದರಿಂದಲೇ ದುರ್ಗಾಷ್ಠಮಿಗೆ ದೇವಿಯ ಅಲಂಕಾರ ಮಾಡಿದ್ದೇವೆ. ಹಾಗೆಯೇ ಈ ಅಲಂಕಾರಕ್ಕೆ 1 ರೂ. ಮುಖಬೆಲೆಯ ನೋಟುಗಳಿಂದ ಹಿಡಿದು 2,000 ರೂ. ಮುಖಬೆಲೆಯ ನೋಟುಗಳನ್ನು ಬಳಸಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ:ದೇಶದ ದುಬಾರಿ ಮೂರ್ತಿ – 50 ಕೆ.ಜಿ ಚಿನ್ನದಲ್ಲಿ ದುರ್ಗೆಗೆ ಅಲಂಕಾರ

    ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೆಂಡಾಲ್‍ನಲ್ಲಿ ದುರ್ಗೆಗೆ 50 ಕೆಜಿ ಚಿನ್ನದಿಂದ ಅಲಂಕರಿಸಿ, ಪೆಂಡಾಲ್ ನಿರ್ಮಿಸಲು 20 ಕೋಟಿ ರೂ. ಖರ್ಚು ಮಾಡಿದ್ದ ಸುದ್ದಿ ಎಲ್ಲೆಡೆ ಸದ್ದು ಮಾಡಿತ್ತು. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದುರ್ಗಾ ಪೂಜೆಯನ್ನು ಪಶ್ಚಿಮ ಬಂಗಾಳದಲ್ಲಿ ಅದ್ಧೂರಿಯಾಗಿ ಮಾಡಲಾಗುತ್ತಿದ್ದು, ಕೊಲ್ಕತ್ತಾದ ಸಂತೋಷ್ ಮಿತ್ರ ದುರ್ಗಾ ಉತ್ಸವ ಸಮಿತಿ ಸದಸ್ಯರು ಹಾಕಿರುವ ದುರ್ಗಾ ಪೆಂಡಲ್‍ನಲ್ಲಿ ಪ್ರತಿಷ್ಠಾಪಿರುವ ದುರ್ಗೆಗೆ ಬರೋಬ್ಬರಿ 50 ಕೆ.ಜಿ ಚಿನ್ನವನ್ನು ಹಾಕಿದ್ದಾರೆ. ದುರ್ಗಾ ದೇವಿಯ ಮೂರ್ತಿ ಹಾಗೂ ಪೆಂಡಾಲ್‍ಗೆ ಹಾಕಿರುವ ಬಂಗಾರವೆಲ್ಲಾ ಸೇರಿ ಒಟ್ಟು 20 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ.

    ಈ ಬಾರಿಯ ನವರಾತ್ರಿಯಲ್ಲಿ ಕೋಲ್ಕತ್ತಾದ ದುರ್ಗಾ ದೇವಿಯ ಪ್ರತಿಮೆ ದೇಶದ ಅತ್ಯಂತ ದುಬಾರಿ ಮೂರ್ತಿ ಎಂದು ಸಮಿತಿ ಹೇಳಿಕೊಂಡಿತ್ತು. ಸಂತೋಷ್ ಮಿತ್ರ ಚೌಕದಲ್ಲಿ ನಿರ್ಮಿಸಲಾದ ಪೆಂಡಾಲ್‍ನಲ್ಲಿರುವ ದುರ್ಗಾ ದೇವಿ ಪ್ರತಿಮೆ 13 ಅಡಿ ಎತ್ತರವಿದೆ. ದುರ್ಗಾ ಪ್ರತಿಮೆಗೆ ಚಿನ್ನವನ್ನು ಲೇಪಿಸಲಾಗಿದ್ದು, ದೇವಿಯ ಮೈಮೇಲೆ ಕೂಡ ಚಿನ್ನಾಭರಣವನ್ನು ಹಾಕಲಾಗಿದೆ. ಅಲ್ಲದೆ ದೇವಿಯ ವಾಹನವಾದ ಸಿಂಹದ ಪ್ರತಿಮೆಗೂ ಕೂಡ ಚಿನ್ನವನ್ನು ಲೇಪಿಸಲಾಗಿದೆ.

  • ಶಮಿ ಯಶಸ್ವಿ ಬೌಲಿಂಗ್ ಹಿಂದಿನ ಗುಟ್ಟು ರಿವೀಲ್ ಮಾಡಿದ ರೋಹಿತ್

    ಶಮಿ ಯಶಸ್ವಿ ಬೌಲಿಂಗ್ ಹಿಂದಿನ ಗುಟ್ಟು ರಿವೀಲ್ ಮಾಡಿದ ರೋಹಿತ್

    ವಿಶಾಖಪಟ್ಟಣಂ: ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಟ ಪ್ರಶಸ್ತಿಯನ್ನು ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಮೊಹಮ್ಮದ್ ಶಮಿ ಅವರ ಬೌಲಿಂಗ್ ಹಿಂದಿನ ಗುಟ್ಟನ್ನು ರಿವೀಲ್ ಮಾಡಿದ್ದಾರೆ.

    ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಯಾವುದೇ ವಿಕೆಟ್ ಪಡೆಯದ ಮೊಹಮ್ಮದ್ ಶಮಿ 2ನೇ ಇನ್ನಿಂಗ್ಸ್ ನಲ್ಲಿ ಅತ್ಯುತ್ತಮ ಬೌಲಿಂಗ್ ದಾಳಿ ನಡೆಸಿದ್ದರು. ಅಲ್ಲದೇ ಇವರ ಬೌಲಿಂಗ್ ವೇಗಕ್ಕೆ ಸ್ಟಂಪ್ ಮುರಿದಿದ್ದು ಸಾಕ್ಷಿಯಾಗಿತ್ತು. ಬಿಸಿಸಿಐ ಕೂಡ ಶಮಿರ ಬೌಲಿಂಗ್ ವೇಗದ ಫೋಟೋಗಳನ್ನು ಇನ್‍ಸ್ಟಾದಲ್ಲಿ ಪೋಸ್ಟ್ ಮಾಡಿದೆ.

    ಶಮಿ ಬೌಲಿಂಗ್ ದಾಳಿಯ ಕುರಿತು ಪಂದ್ಯದ ಬಳಿಕ ಮಾತನಾಡಿದ ರೋಹಿತ್ ಶರ್ಮಾ, ಶಮಿ ಬಿರಿಯಾನಿ ತಿಂದಿದ್ದೆ ಅವರ ಅದ್ಭುತ ಬೌಲಿಂಗ್‍ಗೆ ಕಾರಣ ಎಂದಿದ್ದಾರೆ. ಅಲ್ಲದೇ ಬಿರಿಯಾನಿ ತಿಂದ ಬಳಿಕ ಶಮಿ ಹೆಚ್ಚು ಉತ್ಸಾಹದಿಂದ ಬೌಲಿಂಗ್ ಮಾಡಿದ್ದರು ಎಂದು ಹೇಳಿದ್ದಾರೆ.

    ಅಂತಿಮ ದಿನದಾಟದ ಮಧ್ಯಾಹ್ನದ ವಿರಾಮದ ವೇಳೆಗೆ ಶಮಿ ದಕ್ಷಿಣ ಆಫ್ರಿಕಾದ ಫಾಫ್ ಡುಪ್ಲೆಸಿ, ಕ್ವಿಂಟನ್ ಡಿಕಾಕ್, ತೆಂಬಾ ಬಾವುಮಾ ವಿಕೆಟ್ ಪಡೆದಿದ್ದರು. ಅದರಲ್ಲೂ ತಮ್ಮ ವಿಕೆಟ್ ಪಡೆದ ಶಮಿರ ಬೌಲಿಂಗ್ ಕಂಡು ಡಿಕಾಕ್ ಕ್ಷಣ ಕಾಲ ಅಚ್ಚರಿಗೊಂಡು ಕ್ರಿಸ್‍ನಲ್ಲಿಯೇ ನಿಂತಿದ್ದರು. ಅಲ್ಲದೇ ಅಂತಿಮವಾಗಿ ತಂಡದ ಗೆಲುವಿಗೆ ಕಂಟಕವಾಗಿದ್ದ ರಬಾಡರ ವಿಕೆಟ್ ಉರುಳಿಸಿ ತಂಡಕ್ಕೆ ಶಮಿ ಗೆಲುವಿನ ಸಿಹಿ ನೀಡಿದ್ದರು. ಪಂದ್ಯದಲ್ಲಿ ಶಮಿ 5 ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದರು.

    https://www.instagram.com/p/B3Rbg47AQvR/

  • ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಆಫ್ರಿಕಾ – ತವರಿನಲ್ಲಿ ಸತತ 10ನೇ ಟೆಸ್ಟ್ ಗೆಲುವು

    ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಆಫ್ರಿಕಾ – ತವರಿನಲ್ಲಿ ಸತತ 10ನೇ ಟೆಸ್ಟ್ ಗೆಲುವು

    ವಿಶಾಖಪಟ್ಟಣಂ: ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್ ಗಳು ತತ್ತರಿಸಿದ್ದು, ಟೀ ಇಂಡಿಯಾ 203 ರನ್ ಅಂತರದ ಗೆಲುವು ಪಡೆದುಕೊಂಡಿದೆ. ಆ ಮೂಲಕ ತವರಿನಲ್ಲಿ ಸತತ 10ನೇ ಟೆಸ್ಟ್ ಪಂದ್ಯ ಗೆದ್ದ ಸಾಧನೆ ಮಾಡಿದೆ.

    395 ರನ್ ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಪಡೆಯನ್ನು ಟೀಂ ಇಂಡಿಯಾ ಬೌಲರ್ ಗಳು 191 ರನ್ ಗಳಿಗೆ ಅಲೌಟ್ ಮಾಡಿದರು. ಭಾನುವಾರ ಅಂತಿಮ ದಿನದ ಆಟದಲ್ಲಿ ಬೌಲರ್ ಗಳ ಒಗ್ಗಟ್ಟಿನ ಪ್ರದರ್ಶನದಿಂದ ಟೀಂ ಇಂಡಿಯಾ ಗೆಲುವು ಪಡೆಯಿತು. 2017ರ ಬಳಿಕ ತವರಿನಲ್ಲಿ ಟೀಂ ಇಂಡಿಯಾ ಪಡೆದ 10ನೇ ಗೆಲುವು ಇದಾಗಿದೆ. ಅಲ್ಲದೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‍ನಲ್ಲಿ ಟೀಂ ಇಂಡಿಯಾ 160 ಅಂಕಗಳೊಂದಿಗೆ ನಂ.1 ಸ್ಥಾನದಲ್ಲಿದೆ.

    ಪಂದ್ಯದಲ್ಲಿ ವೇಗಿ ಮೊಹಮ್ಮದ್ ಶಮಿ, ಸ್ಪಿನ್ನರ್ ರವೀಂದ್ರ ಜಡೇಜಾ ನಡೆಸಿದ ಮ್ಯಾಜಿಕಲ್ ಬೌಲಿಂಗ್ ದಾಳಿಯನ್ನು ಎದುರಿಸಲು ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್‍ಗಳು ವಿಫಲರಾದರು. ಅಂತಿಮ ದಿನದಾಟವನ್ನು 1 ವಿಕೆಟ್ ಕಳೆದುಕೊಂಡು 11 ರನ್ ಗಳಿಂದ ಆರಂಭಿಸಿದ ದಕ್ಷಿಣ ಅಫ್ರಿಕಾ ತಂಡ ಟೀಂ ಇಂಡಿಯಾ ಬೌಲರ್ ಜಡೇಜಾರ ದಾಳಿಗೆ ಸಿಲುಕಿ ತತ್ತರಿಸಿತು. ಆದರೆ ಮಧ್ಯಾಹ್ನದ ಭೋಜನ ವಿರಾಮ ವೇಳೆಗೆ ಟೀಂ ಇಂಡಿಯಾ ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದರು. ಆದರೆ ದಕ್ಷಿಣ ಆಫ್ರಿಕಾ ಪರ ಪೈಡಿಟ್- ಮುತ್ತುಸಾಮಿ ಅಂತಿಮ ಹಂತದಲ್ಲಿ ನಡೆಸಿದ ಹೋರಾಟ ವಿಫಲವಾಯಿತು. ಪೈಡಿಟ್ 56 ರನ್ ಗಳಿಸಿ ಔಟಾದರೆ, ಮುತ್ತುಸಾಮಿ 49 ರನ್ ಗಳಿಸಿ ಅಜೇಯರಾಗಿ ಉಳಿದರು. ಇಬ್ಬರು 9ನೇ ವಿಕೆಟ್‍ಗೆ 91 ರನ್ ಜೊತೆಯಾಟ ನೀಡಿದರು. ಅಂತಿಮವಾಗಿ ರಬಡಾ (18 ರನ್) ವಿಕೆಟ್ ಕಬಳಿಸಿದ ಶಮಿ ತಂಡಕ್ಕೆ ಗೆಲುವಿನ ಸಿಹಿ ನೀಡಿದರು. ಟೀಂ ಇಂಡಿಯಾ ಪರ ಜಡೇಜಾ 2ನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆದರೆ ಶಮಿ 5 ವಿಕೆಟ್ ಪಡೆದು ಮಿಂಚಿದರು.

    ಸಂಕ್ಷಿಪ್ತ ಸ್ಕೋರ್:
    ಟೀಂ ಇಂಡಿಯಾ: ಮೊದಲ ಇನ್ನಿಂಗ್ಸ್ – 502/7 ಡಿಕ್ಲೇರ್
    2ನೇ ಇನ್ನಿಂಗ್ಸ್ – 323/4 ಡಿಕ್ಲೇರ್

    ದಕ್ಷಿಣ ಆಫ್ರಿಕಾ: ಮೊದಲ ಇನ್ನಿಂಗ್ಸ್ – 431 ಅಲೌಟ್
    2ನೇ ಇನ್ನಿಂಗ್ಸ್ – 191 ಅಲೌಟ್

  • ಮುತ್ತಯ್ಯ ಮುರಳೀಧರನ್ ವಿಶ್ವದಾಖಲೆ ಸರಿಗಟ್ಟಿದ ಆರ್.ಅಶ್ವಿನ್

    ಮುತ್ತಯ್ಯ ಮುರಳೀಧರನ್ ವಿಶ್ವದಾಖಲೆ ಸರಿಗಟ್ಟಿದ ಆರ್.ಅಶ್ವಿನ್

    ವಿಶಾಖಪಟ್ಟಣಂ: ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ಆರ್.ಅಶ್ವಿನ್ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಪರೂಪದ ಸಾಧನೆ ಮಾಡಿದ್ದು, ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಅವರ ವಿಶ್ವದಾಖಲೆಯನ್ನು ಸರಿಗಟ್ಟಿದ್ದಾರೆ.

    ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾದ 7 ವಿಕೆಟ್ ಪಡೆದಿದ್ದ ಅಶ್ವಿನ್ 2ನೇ ಇನ್ನಿಂಗ್ಸ್ ನಲ್ಲಿ 1 ವಿಕೆಟ್ ಪಡೆದಿದ್ದು, ಆ ಮೂಲಕ ವೇಗವಾಗಿ ಟೆಸ್ಟ್ ಕ್ರಿಕೆಟ್‍ನಲ್ಲಿ 350 ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದಾರೆ. ಅಶ್ವಿನ್ ಈ ಸಾಧನೆಯನ್ನು 66 ಪಂದ್ಯಗಳಲ್ಲಿ ಮಾಡಿದ್ದು, ಮುರಳೀಧರನ್ ದಾಖಲೆ ಮುರಿಯಲು 1 ವಿಕೆಟ್ ಮಾತ್ರ ಇದೆ. 2001ರಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಮುರಳೀಧರನ್ ಈ ದಾಖಲೆ ಮಾಡಿದ್ದರು. ಅಂದಹಾಗೇ ಮುರಳೀಧರನ್ ವೃತ್ತಿ ಜೀವನದಲ್ಲಿ 800 ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದಾರೆ. ಭಾರತದ ಪರ ಅನಿಲ್ ಕುಂಬ್ಳೆ 619 ವಿಕೆಟ್ ಪಡೆದು ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದಾರೆ.

    ಉಳಿದಂತೆ ಅಶ್ವಿನ್ 5 ವಿಕೆಟ್ ಗೊಂಚಲು ಪಡೆದ ಸಾಧನೆಯನ್ನು 21 ಬಾರಿ ಮಾಡಿದ್ದು, 45 ಬಾರಿ 5 ವಿಕೆಟ್ ಗೊಂಚಲು ಪಡೆದಿರುವ ಮುರಳೀಧರನ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಉಳಿದಂತೆ ರಂಗನಾ ಹೆರಾತ್ 26, ಅನಿಲ್ ಕುಂಬ್ಳೆ 25 ಬಾರಿ 5 ವಿಕೆಟ್ ಗೊಂಚಲು ಪಡೆದಿದ್ದಾರೆ.

    ಮೊದಲ ಟೆಸ್ಟ್ ಪಂದ್ಯದ ಅಂತಿಮ ದಿನದಾಟವನ್ನು 1 ವಿಕೆಟ್ ಕಳೆದುಕೊಂಡು 11 ರನ್ ಗಳಿಂದ ಆರಂಭಿಸಿದ ದಕ್ಷಿಣ ಅಫ್ರಿಕಾ ತಂಡ ಟೀಂ ಇಂಡಿಯಾ ಬೌಲರ್ ಜಡೇಜಾರ ದಾಳಿಗೆ ಸಿಲುಕಿ ತತ್ತರಿಸಿದೆ. ಇತ್ತೀಚಿನ ವರದಿ ಬಂದಾಗ ದಕ್ಷಿಣ ಆಫ್ರಿಕಾ 110 ರನ್ ಗಳಿಗೆ 8 ವಿಕೆಟ್ ಕಳೆದು ಕೊಂಡು ಸೋಲಿನ ಸುಳಿಗೆ ಸಿಲುಕಿದ್ದು, ಟೀಂ ಇಂಡಿಯಾ ಮೊದಲ ಟೆಸ್ಟ್ ಗೆಲುವಿನ ಸನಿಹದಲ್ಲಿದೆ. 2ನೇ ಇನ್ನಿಂಗ್ಸ್ ನಲ್ಲಿ ಇದುವರೆಗೆ ಜಡೇಜಾ 4 ವಿಕೆಟ್ ಪಡೆದರೆ, ಶಮಿ 3 ಉರುಳಿಸಿದ್ದಾರೆ.

  • ಪೂಜಾರಾ ವಿರುದ್ಧ ಅವಾಚ್ಯ ಪದ ಪ್ರಯೋಗಿಸಿದ ರೋಹಿತ್ ಶರ್ಮಾ: ವಿಡಿಯೋ ವೈರಲ್

    ಪೂಜಾರಾ ವಿರುದ್ಧ ಅವಾಚ್ಯ ಪದ ಪ್ರಯೋಗಿಸಿದ ರೋಹಿತ್ ಶರ್ಮಾ: ವಿಡಿಯೋ ವೈರಲ್

    ವಿಶಾಖಪಟ್ಟಣಂ: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ, ಸಹ ಆಟಗಾರ ಚೇತೇಶ್ವರ ಪೂಜಾರ ವಿರುದ್ಧ ಅವಾಚ್ಯ ಪದ ಪ್ರಯೋಗ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪಂದ್ಯದಲ್ಲಿ ಟೀಂ ಇಂಡಿಯಾ 2ನೇ ಇನ್ನಿಂಗ್ಸ್ ನ 4ನೇ ದಿನದಾಟದ 26ನೇ ಓವರಿನಲ್ಲಿ ಈ ಘಟನೆ ನಡೆದಿದೆ. ಬೌಲರ್ ಪೀಡ್ ಎಸೆದ ಬಾಲನ್ನು ರೋಹಿತ್ ಶರ್ಮಾ ಕವರ್ ಪಾಯಿಂಟ್ ನತ್ತ ತಳ್ಳಿ ಒಂದು ರನ್ ಓಡಲು ಮುಂದಾದರು. ಈ ವೇಳೆ ನಾನ್ ಸ್ಟ್ರೈಕ್ ನಲ್ಲಿದ್ದ ಪೂಜಾರ ರನ್ ಓಡಲು ಮುಂದಾಗಿ ನಂತರ ತಮ್ಮ ನಿರ್ಧಾರದಿಂದ ಹಿಂದಕ್ಕೆ ಸರಿದರು. ಅಸಮಾಧಾನಗೊಂಡ ರೋಹಿತ್ ಶರ್ಮಾ ಮರಳಿ ಕ್ರೀಸ್ ನತ್ತ ಓಡಿದರು. ಒಂದು ರನ್ ಪಡೆಯಲು ಸಾಧ್ಯವಿದ್ದರೂ ಓಡದ್ದಕ್ಕೆ ರೋಹಿತ್ ಶರ್ಮಾ ಪೂಜಾರ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದರು.

    ಅವಾಚ್ಯ ಪದ ಬಳಕೆ ಮಾಡಿರುವುದು ಸ್ಟಂಪ್ ಮೈಕ್‍ನಲ್ಲಿ ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಟ್ವಿಟ್ಟಗರು ರೋಹಿತ್‍ರನ್ನು ಟ್ರೋಲ್ ಮಾಡುತ್ತಿದ್ದಾರೆ.

    ಗೆಲುವಿಗೆ 9 ವಿಕೆಟ್ ಬಾಕಿ: ಇತ್ತ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ 147 ಎಸೆತಗಳಲ್ಲಿ 6 ಸಿಕ್ಸರ್, 10 ಬೌಂಡರಿಗಳ ನೆರವಿನಿಂದ 127 ರನ್ ಗಳಿಸಿ ನಿರ್ಗಮಿಸಿದರು. ಪೂಜಾರ 81 ರನ್, ಬಿರುಸಿನ ಬ್ಯಾಟಿಂಗ್ ಪ್ರದರ್ಶನ ನೀಡಿದ ಜಡೇಜಾ 40 ರನ್, ಕೊಹ್ಲಿ 31 ರನ್, ರಹಾನೆ 27 ರನ್ ಗಳ ನೆರವಿನಿಂದ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 323 ರನ್ ಗಳಿಸಿದ್ದ ಸಂದರ್ಭದಲ್ಲಿ 2ನೇ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.

    ಗೆಲ್ಲಲು 395 ರನ್ ಗುರಿ ಪಡೆದ 2ನೇ ಇನ್ನಿಂಗ್ಸ್ ಆರಂಭಿಸಿದ ದಕ್ಷಿಣ ಅಫ್ರಿಕಾ 4ನೇ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 11 ರನ್ ಗಳಿಸಿತು. ತಂಡದ ಪರ ಜಡೇಜಾ 2ನೇ ಇನ್ನಿಂಗ್ಸ್ ನಲ್ಲಿ ಎದುರಾಳಿಯ ಮೊದಲ ವಿಕೆಟ್ ಪಡೆದು ಅಘಾತ ನೀಡಿದರು.

    ಸಂಕ್ಷೀಪ್ತ ಸ್ಕೋರ್:
    ಟೀಂ ಇಂಡಿಯಾ: ಮೊದಲ ಇನ್ನಿಂಗ್ಸ್ 502/7 ಡಿಕ್ಲೇರ್
    2ನೇ ಇನ್ನಿಂಗ್ಸ್ 323/4 ಡಿಕ್ಲೇರ್

    ದಕ್ಷಿಣ ಆಫ್ರಿಕಾ: 431 ಅಲೌಟ್
    2ನೇ ಇನ್ನಿಂಗ್ಸ್ 11/1

  • ಸಿಕ್ಸರ್ ಸಿಡಿಸಿ ದಾಖಲೆ – ಶತಕ ಹೊಡೆದು ವಿಶ್ವದಾಖಲೆಗೈದ ಹಿಟ್‍ಮ್ಯಾನ್

    ಸಿಕ್ಸರ್ ಸಿಡಿಸಿ ದಾಖಲೆ – ಶತಕ ಹೊಡೆದು ವಿಶ್ವದಾಖಲೆಗೈದ ಹಿಟ್‍ಮ್ಯಾನ್

    – ನವಜೋತ್ ಸಿಂಗ್ ಸಿಧು ಸಿಕ್ಸರ್ ದಾಖಲೆ ಉಡೀಸ್
    – 41 ವರ್ಷದ ನಂತರ ದಾಖಲಾಯ್ತು ಶತಕ

    ವಿಶಾಖಪಟ್ಟಣಂ: ಟೆಸ್ಟ್ ಕ್ರಿಕೆಟ್‍ನಲ್ಲಿ ಮೊದಲ ಬಾರಿಗೆ ತಂಡದ ಆರಂಭಿಕಾಗಿ ಕಣಕ್ಕೆ ಇಳಿದಿದ್ದ ರೋಹಿತ್ ಶರ್ಮಾ ಮೊದಲ ಇನ್ನಿಂಗ್ಸ್‍ನ ಶತಕ ಸಿಡಿಸುವ ಮೂಲಕ ತಂಡಕ್ಕೆ ಉತ್ತಮ ಆರಂಭ ನೀಡಿದ್ದರು. ಸದ್ಯ 2ನೇ ಇನ್ನಿಂಗ್ಸ್‍ನಲ್ಲೂ ಅಮೋಘ ಬ್ಯಾಟಿಂಗ್ ಮುಂದುವರಿಸಿರುವ ರೋಹಿತ್ ಮತ್ತೊಂದು ಶತಕ ಸಿಡಿಸಿದ್ದಾರೆ. ಅಲ್ಲದೇ ಟೀಂ ಇಂಡಿಯಾ ಪರ ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯದಲ್ಲಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದಾರೆ.

    ಟೀಂ ಇಂಡಿಯಾ ಪರ 41 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್ ನಲ್ಲಿ ಆರಂಭಿಕ ಆಟಗಾರ ಪಂದ್ಯವೊಂದರ 2 ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸಿದ್ದಾರೆ. 1978-79 ರಲ್ಲಿ ಟೀಂ ಇಂಡಿಯಾ ಪರ ಸುನೀಲ್ ಗವಾಸ್ಕರ್ ಈ ಸಾಧನೆಯನ್ನು ಮಾಡಿದ್ದರು. ಅಲ್ಲದೇ ರೋಹಿತ್ ಆರಂಭಿಕರಾಗಿ ಕಣಕ್ಕೆ ಇಳಿದ ಮೊದಲ ಪಂದ್ಯದ 2 ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

    ಪಂದ್ಯದ ಮೊದಲ ಇನ್ನಿಂಗ್ಸ್‍ನಲ್ಲಿ 32 ವರ್ಷದ ರೋಹಿತ್ 224 ಎಸೆತಗಳಲ್ಲಿ 176 ರನ್ ಗಳಿಸಿ ಔಟಾಗಿದ್ದರು. ಸದ್ಯ 2ನೇ ಇನ್ನಿಂಗ್ಸ್ ನಲ್ಲಿ 133 ಎಸೆತಗಳಲ್ಲಿ ಶತಕ ಸಿಡಿಸಿದರು. ಈ ಮೂಲಕ ಟೆಸ್ಟ್ ಪಂದ್ಯವೊಂದರ 2 ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸಿದ 6ನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದರು.

    ಸಿಕ್ಸರ್ ದಾಖಲೆ: ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 6 ಸಿಕ್ಸರ್ ಸಿಡಿಸಿದ್ದ ರೋಹಿತ್, 2ನೇ ಇನ್ನಿಂಗ್ಸ್ ನಲ್ಲಿ 7 ಸಿಕ್ಸರ್ ಸಿಡಿಸಿದರು. ಆ ಮೂಲಕ 149 ಎಸೆತಗಳಲ್ಲಿ 85.23 ಸರಾಸರಿಯಲ್ಲಿ 127 ರನ್ ಗಳಿಸಿ ಔಟಾದರು. ಟೀಂ ಇಂಡಿಯಾ ಪರ ಟೆಸ್ಟ್ ಪಂದ್ಯವೊಂದರಲ್ಲಿ ಹೆಚ್ಚು ಸಿಕ್ಸರ್ ಸಿಡಿಸಿದ್ದ ನವಜೋತ್ ಸಿಂಗ್ ಸಿಧು ಅವರ ದಾಖಲೆಯನ್ನು ರೋಹಿತ್ ಮುರಿದರು. 1994ರಲ್ಲಿ ಶ್ರೀಲಂಕಾ ವಿರುದ್ಧ ನಡೆದಿದ್ದ ಲಕ್ನೋ ಟೆಸ್ಟ್ ಪಂದ್ಯದಲ್ಲಿ ಸಿಧು 8 ಸಿಕ್ಸರ್ ಸಿಡಿಸಿದ್ದರು. ರೋಹಿತ್ ಈ ಪಂದ್ಯದಲ್ಲಿ 13 ಸಿಕ್ಸರ್ ಸಿಡಿಸಿದ್ದಾರೆ.

    ಟೀಂ ಇಂಡಿಯಾ ಎಲ್ಲಾ ಮಾದರಿಗಳ ಕ್ರಿಕೆಟ್ ಪಂದ್ಯಗಳಲ್ಲಿ ರೋಹಿತ್ ಹೆಚ್ಚು ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದ್ದು, 2013ರಲ್ಲಿ ಆಸೀಸ್ ವಿರುದ್ಧ ಬೆಂಗಳೂರಿನಲ್ಲಿ ನಡೆದಿದ್ದ ಏಕದಿನ ಪಂದ್ಯದಲ್ಲಿ 16 ಸಿಕ್ಸರ್ ಸಿಡಿಸಿದ್ದರು. ಅಲ್ಲದೇ 2017 ರಲ್ಲಿ ಶ್ರೀಲಂಕಾ ವಿರುದ್ಧ ಇಂದೋರ್‍ನಲ್ಲಿ ನಡೆದಿದ್ದ ಟಿ20 ಪಂದ್ಯದಲ್ಲಿ 10 ಸಿಕ್ಸರ್ ಸಿಡಿಸಿದ್ದರು.

  • ದಿಗ್ಗಜ ಆಟಗಾರರ ದಾಖಲೆ ಬ್ರೇಕ್ ಮಾಡಿದ ಜಡೇಜಾ

    ದಿಗ್ಗಜ ಆಟಗಾರರ ದಾಖಲೆ ಬ್ರೇಕ್ ಮಾಡಿದ ಜಡೇಜಾ

    ವಿಶಾಖಪಟ್ಟಣಂ: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಅನುಭವಿ ಸ್ಪಿನ್ ಬೌಲರ್ ರವೀಂದ್ರ ಜಡೇಜಾ 200ನೇ ವಿಕೆಟ್ ಪಡೆದಿದ್ದು, ಆ ಮೂಲಕ ವೇಗವಾಗಿ ಈ ಸಾಧನೆ ಮಾಡಿದ ಎಡಗೈ ಬೌಲರ್ ಎಂಬ ದಾಖಲೆಯನ್ನು ಬರೆದರು.

    ರವೀಂದ್ರ ಜಡೇಜಾ 44ನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದು, ಈ ಮುನ್ನ ಶ್ರೀಲಂಕಾ ಆಟಗಾರ ರಂಗನಾ ಹೆರಾತ್ 47 ಪಂದ್ಯಗಳಿಂದ 200 ವಿಕೆಟ್ ಪಡೆದಿದ್ದರು. ಈ ಪಟ್ಟಿಯಲ್ಲಿ ನಂತರದ ಸ್ಥಾನವನ್ನು ಆಸೀಸ್‍ನ ಮಿಚೇಲ್ ಜಾನ್ಸನ್ ಪಡೆದಿದ್ದು, 49 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಆ ಬಳಿಕ 49 ಪಂದ್ಯಗಳಲ್ಲಿ ಮಿಚೇಲ್ ಸ್ಟಾರ್ಕ್, 51 ಪಂದ್ಯಗಳಿಂದ ಭಾರತ ಬಿಷನ್ ಬೇಡಿ ಹಾಗೂ ಪಾಕ್‍ನ ವಾಸೀಂ ಅಕ್ರಂ 200 ವಿಕೆಟ್ ಪಡೆದ ಸಾಧನೆ ಮಾಡಿದ್ದರು.

    ಪಂದ್ಯದ ಮೂರನೇ ದಿನದಾಟದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾ ತಂಡ 8 ವಿಕೆಟ್ ಕಳೆದುಕೊಂಡು 385 ರನ್ ಗಳಿಸಿದ್ದು, ಭಾರತ ಪರ ಆರ್.ಅಶ್ವಿನ್ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಉಳಿದಂತೆ ರವೀಂದ್ರ ಜಡೇಜಾ 2 ವಿಕೆಟ್ ಹಾಗೂ ಇಶಾಂತ್ ಶರ್ಮಾ 1 ವಿಕೆಟ್ ಕಬಳಿಸಿದ್ದಾರೆ.

    ರೋಹಿತ್ ಬೌಲಿಂಗ್: ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕೆ ಇಳಿದು ಶತಕ ಸಿಡಿಸಿದ್ದ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ತಂಡದ ಬ್ಯಾಟಿಂಗ್ ವೇಳೆ ಬೌಲಿಂಗ್ ಮಾಡುವ ಅವಕಾಶವನ್ನು ಪಡೆದರು. 2 ಓವರ್ ಬೌಲಿಂಗ್ ಮಾಡಿದ ರೋಹಿತ್, 1 ಓವರ್ ಮೇಡನ್ ಮಾಡಿ 3.50 ಎಕಾನಮಿಯಲ್ಲಿ 7 ರನ್ ಬಿಟ್ಟುಕೊಟ್ಟರು. 12 ವರ್ಷಗಳ ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕೆ ಇಳಿದಿದ್ದು ವಿಶೇಷವಾಗಿತ್ತು.

    https://twitter.com/InswingingY/status/1180081028825616385

    ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಟೂರ್ನಿಗೆ ರೋಹಿತ್ ಆಯ್ಕೆಯಾಗಿದ್ದರೂ ಕೂಡ ಆಡುವ ಅವಕಾಶ ಪಡೆದಿರಲಿಲ್ಲ. ಈ ವೇಳೆ ಬೌಲಿಂಗ್ ಹಾಗೂ ಬ್ಯಾಟಿಂಗ್ ಮಾಡುವ ಆಟಗಾರ ಹನುಮ ವಿಹಾರಿಗೆ ಅವಕಾಶ ನೀಡಿದ್ದ ಕೊಹ್ಲಿ, ರೋಹಿತ್‍ರನ್ನು ಆಡುವ 11ರ ಬಳಗದಿಂದ ದೂರವಿಟ್ಟಿದ್ದರು. ಸದ್ಯ ರೋಹಿತ್ ಶರ್ಮಾಗೂ ಬೌಲ್ ಮಾಡುವ ಅವಕಾಶ ನೀಡುವ ಮೂಲಕ ಕೊಹ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.