Tag: ವಿಶ್

  • ಎಂದಿಗೂ ಕಸಿದುಕೊಳ್ಳಲಾಗದ ಎನರ್ಜಿ: ಅಪ್ಪುಗೆ ಯಶ್ ವಿಶ್

    ಎಂದಿಗೂ ಕಸಿದುಕೊಳ್ಳಲಾಗದ ಎನರ್ಜಿ: ಅಪ್ಪುಗೆ ಯಶ್ ವಿಶ್

    ಬೆಂಗಳೂರು: ಡಾ. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬದ ವಿಶೇಷ ಇಂದು ಸ್ಯಾಂಡಲ್‍ವುಡ್ ನಟ ರಾಕಿಂಗ್‍ಸ್ಟಾರ್ ಯಶ್, ರಿಯಲ್ ಸ್ಟಾರ್ ಉಪೇಂದ್ರ, ನಟಿ ರಚಿತಾ ರಾಮ್ ಸೇರಿದಂತೆ ಹಲವಾರು ತಾರೆಯರು ಸಾಮಾಜಿಕ ಜಾಲತಾಣಗಳಲ್ಲಿ ಪುನೀತ್‍ಗೆ ವಿಶ್ ಮಾಡಿದ್ದಾರೆ.

     

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಇನ್ಮುಂದೆ ಪುನೀತ್ ಹುಟ್ಟುಹಬ್ಬವನ್ನು ಸ್ಯಾಂಡಲ್‍ವುಡ್ ಡೇ ಎಂದು ಆಚರಿಸುವುದಾಗಿ ತಿಳಿಸಿದೆ. ಸದ್ಯ ಇಂದು ಪುನೀತ್ ಹುಟ್ಟುಹಬ್ಬವನ್ನು ರಾಜ್ಯಾದ್ಯಂತ ಜನ ಜಾತ್ರೆಯಂತೆ ಆಚರಿಸುತ್ತಿದ್ದಾರೆ. ಈ ನಡುವೆ ಚಂದನವನದ ತಾರೆಯರು ಅಪ್ಪು ಬರ್ತ್‍ಡೇಗೆ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ:  ಅಪ್ಪು ನೆನೆದು ನಟಿ ಪ್ರಿಯಾ ಆನಂದ್ ಕಣ್ಣೀರು

    ಯಶ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಅಪ್ಪು ಜೊತೆಗಿರುವ ಫೋಟೋವನ್ನು ಹಂಚಿಕೊಂಡಿದ್ದು, ಕ್ಯಾಪ್ಷನ್‍ನಲ್ಲಿ ಎಂದೂ ಮರೆಯಾಗದ ನಗು, ಎಂದಿಗೂ ಹೊಂದಿಸಲಾಗದ ಶಾಖ, ಎಂದಿಗೂ ನಿಲ್ಲಿಸಲಾಗದಂತಹ ಶಕ್ತಿ, ಎಂದಿಗೂ ಕಸಿದುಕೊಳ್ಳಲಾಗದ ಎನರ್ಜಿ. ಅವರು ಎಂದಿಗೂ ಬದುಕಿರುತ್ತಾರೆ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪು ಸರ್ ಎಂದು ವಿಶ್ ಮಾಡಿದ್ದಾರೆ.

     

    View this post on Instagram

     

    A post shared by Yash (@thenameisyash)

    ಮತ್ತೊಂದೆಡೆ ಉಪೇಂದ್ರ ಅವರು ಪುನೀತ್ ಅವರನ್ನು ಆತ್ಮೀಯವಾಗಿ ತಬ್ಬಿಕೊಂಡಿರುವ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದು, ಈ ಅಪ್ಪುಗೆಯ ಸವಿ ನೆನಪು ನೂರು ಜನ್ಮ ಕಳೆದರೂ ಜೀವಂತವಾಗೇ ಇರುತ್ತದೆ. ಜನುಮ ದಿನದ ಹಾರ್ದಿಕ ಶುಭಾಶಯಗಳು ದೇವರ ಮಗ ಅಪ್ಪು ಎಂದು ಕ್ಯಾಪ್ಷನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್

     

    View this post on Instagram

     

    A post shared by Upendra (@nimmaupendra)

    ನಟ ಸೃಜನ್ ಲೋಕೇಶ್ ಅವರು ಕೂಡ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುವುದರ ಜೊತೆಗೆ ಕನ್ನಡದ ಕಲಾ ಜಗತ್ತಿನ ಅಜರಾಮರ, ಸ್ಪೂರ್ತಿದಾಯಕ ಯುವರತ್ನ, ನಮ್ಮ ಪ್ರೀತಿಯ ಅಪ್ಪುವಿಗೆ ಹುಟ್ಟು ಹಬ್ಬದ ಶುಭಾಶಯಗಳು ಲವ್ ಯು ಅಪ್ಪು ಎಂದು ಶುಭ ಕೋರಿದ್ದಾರೆ. ಹೀಗೆ ನಟ ಪ್ರಜ್ವಲ್ ದೇವರಾಜ್, ನಿರ್ದೇಶಕ ಸಂತೋಷ್ ಆನಂದ್ ರಾಮ್, ನಟಿ ನಿಧಿ ಸುಬ್ಬಯ್ಯ, ನಟಿ ಪ್ರಿಯಾಂಕ ಉಪೇಂದ್ರ ಹೀಗೆ ಹಲವಾರು ಕಲಾವಿದರೂ ಶುಭಾಶಯ ತಿಳಿಸಿದ್ದಾರೆ.

     

    View this post on Instagram

     

    A post shared by Srujan Lokesh (@srujanlokesh)

  • ಆಪ್‍ಗೆ ಅಭಿನಂದನೆ ಕೋರಿದ ನವಜೋತ್ ಸಿಂಗ್ ಸಿಧು

    ಆಪ್‍ಗೆ ಅಭಿನಂದನೆ ಕೋರಿದ ನವಜೋತ್ ಸಿಂಗ್ ಸಿಧು

    ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಶುಭಕೋರಿದ್ದಾರೆ.

    ಈ ಕುರಿತಂತೆ ನವಜೋತ್ ಸಿಂಗ್ ಸಿಧು ಅವರು, ಜನರ ಧ್ವನಿ ದೇವರ ಧ್ವನಿ. ಪಂಜಾಬ್ ಜನತೆಯ ಆದೇಶವನ್ನು ವಿನಮ್ರವಾಗಿ ಸ್ವೀಕರಿಸಿ. ಆಪ್‍ಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:  ಪಂಜಾಬ್‍ನಲ್ಲಿ ಎಎಪಿ ಮುನ್ನಡೆ – ಭಗವಂತ್ ಮಾನ್ ಮನೆಯಲ್ಲಿ ಸಂಭ್ರಮಾಚರಣೆ ಶುರು

    ಪಂಜಾಬ್‍ನಲ್ಲಿ ಕಾಂಗ್ರೆಸ್ ಸೋತಿದ್ದು, ಈ ಮಧ್ಯೆ ಅಮೃತಸರ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಪ್‍ನಿಂದ ಸರ್ಧಿಸಿದ್ದ ಜೀವನ್ ಜ್ಯೋತ್ ಕೌರ್ ಮುನ್ನಡೆಯಲ್ಲಿದ್ದರೆ, ಶಿರೋಮಣಿ ಅಕಾಲಿ ದಳದ ಬಿಕ್ರಾಂ ಸಿಂಗ್ ಎರಡನೇ ಸ್ಥಾನ ಪಡೆದಿದ್ದಾರೆ ಮತ್ತು ಮೂರನೇ ಸ್ಥಾನದಲ್ಲಿ ನವಜೋತ್ ಸಿಂಗ್ ಸಿಧು ಇದ್ದಾರೆ. ಇದನ್ನೂ ಓದಿ:  ಪಂಜಾಬ್‌ನಲ್ಲಿ AAP ಗೆದ್ದಿದ್ದು ಹೇಗೆ?

    ಮಧ್ಯಾಹ್ನ 1 ಗಂಟೆಯ ಟ್ರೆಂಡ್ ಪ್ರಕಾರ ಆಪ್ 91, ಕಾಂಗ್ರೆಸ್ 17, ಶಿರೋಮಣಿ ಅಖಾಲಿ ದಳ 06, ಬಿಜೆಪಿ 2, ಇತರರು 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈಗಾಗಲೇ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರ ಮನೆಯಲ್ಲಿ ಸಂಭ್ರಮಾಚರಣೆ ಪ್ರಾರಂಭವಾಗಿದೆ. ಇದನ್ನೂ ಓದಿ: ಪಂಜಾಬ್ ಫಲಿತಾಂಶ: 3ನೇ ಸ್ಥಾನಕ್ಕೆ ಕುಸಿದ ಸಿಧು

  • ವಾಹನ ನಿಲ್ಲಿಸಿ ಪಂಜಾಬ್ ನೂತನ ಸಿಎಂನಿಂದ ನವ ಜೋಡಿಗೆ ವಿಶ್ – ವೀಡಿಯೋ ವೈರಲ್

    ವಾಹನ ನಿಲ್ಲಿಸಿ ಪಂಜಾಬ್ ನೂತನ ಸಿಎಂನಿಂದ ನವ ಜೋಡಿಗೆ ವಿಶ್ – ವೀಡಿಯೋ ವೈರಲ್

    ಚಂಡೀಗಢ: ಪಂಜಾಬ್ 16ನೇ ಮುಖ್ಯಮಂತ್ರಿಯಾಗಿ ನೇಮಕಗೊಂಡ ಚರಣಜಿತ್ ಸಿಂಗ್ ಚನ್ನಿ ಈಗಾಗಲೇ ಜನರ ಹೃದಯ ಗೆಲ್ಲಲು ಆರಂಭಿಸಿದ್ದಾರೆ. ಸದ್ಯ ಭಾನುವಾರ ಹೊಸದಾಗಿ ಮದುವೆಯಾಗಿ ತೆರಳುತ್ತಿದ್ದ ಜೋಡಿಗೆ ಸಿಎಂ ತಮ್ಮ ವಾಹನವನ್ನು ನಿಲ್ಲಿಸಿ ವಿಶ್ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    Charanjit Singh Channi

    ಪಂಜಾಬ್ ಸರ್ಕಾರ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದ್ದು, ಚರಣಜಿತ್ ಸಿಂಗ್ ಚನ್ನಿಯವರು ಭಟಿಂಡಾಗೆ ಭೇಟಿ ನೀಡಿದಾಗ ಹೊಸದಾಗಿ ಮದುವೆಯಾಗಿ ತೆರಳುತ್ತಿದ್ದ ನವ ದಂಪತಿಯನ್ನು ಮಂಡಿ ಕಲಾನ್ ಹಳ್ಳಿಯಲ್ಲಿ ಕಂಡು ಇದ್ದಕ್ಕಿಂತೆ ತಮ್ಮ ವಾಹನವನ್ನು ನಿಲ್ಲಿಸಿ ಶುಭಾಶಯ ತಿಳಿಸಿದ್ದಾರೆ.  ಇದನ್ನೂ ಓದಿ: ಗುಲಾಬ್ ಚಂಡಮಾರುತ ಎಫೆಕ್ಟ್- ಬೀದರ್‌ನಲ್ಲಿ ಮುಂದುವರಿದ ಮಳೆಯ ಅಬ್ಬರ

    ವೀಡಿಯೋದಲ್ಲಿ ಚರಣಜಿತ್ ಸಿಂಗ್ ಚನ್ನಿ ವರನನ್ನು ತಬ್ಬಿ, ವಧುವಿಗೆ ಕಾಣಿಕೆ ಅರ್ಪಿಸಿ ವಿಶ್ ಮಾಡುವುದನ್ನು ಕಾಣಬಹುದಾಗಿದೆ. ಈ ವೇಳೆ ಸಿಎಂ ಸುತ್ತ ಪೊಲೀಸರು ಸುತ್ತುವರೆದಿರುತ್ತಾರೆ ಮತ್ತು ಇದೇ ವೇಳೆ ಚರಣಜಿತ್ ಸಿಂಗ್ ಚನ್ನಿ ಜೋಡಿಯ ಕುಟುಂಬದವರು ತಟ್ಟೆಯಲ್ಲಿಟ್ಟುಕೊಂಡಿದ್ದ ಸಿಹಿ ಖಾದ್ಯವನ್ನು ಸವಿದಿದ್ದಾರೆ.

    ಕೆಲವು ದಿನಗಳ ಹಿಂದೆ ಚರಣಜಿತ್ ಸಿಂಗ್ ಚನ್ನಿಯವರು ಪಂಜಾಬ್‍ನ ಜಾನಪದ ನೃತ್ಯ ಭಾಂಗ್ರಾವನ್ನು ಕಪುರ್ತಲಾದಲ್ಲಿ ನಡೆದ ಕಾರ್ಯಕ್ರದಲ್ಲಿ ಪ್ರದರ್ಶಿಸಿದ್ದರು.  ಇದನ್ನೂ ಓದಿ: ಕಿರುತೆರೆ ಖಡಕ್ ಖಳನಟ ಈಗ ಬೆಳ್ಳಿತೆರೆಯ ನಾಯಕನಟ – ‘ಬಹುಕೃತಂ ವೇಷಂ’ನಲ್ಲಿ ಶಶಿಕಾಂತ್ ಹೊಸ ಅವತಾರ

  • ದೊಡ್ಮನೆಗೆ ಎಂಟ್ರಿ ಕೊಡುವ ಮುನ್ನ ಅಪ್ಪನಿಗೆ ಸ್ಪರ್ಧಿಗಳ ವಿಶ್

    ದೊಡ್ಮನೆಗೆ ಎಂಟ್ರಿ ಕೊಡುವ ಮುನ್ನ ಅಪ್ಪನಿಗೆ ಸ್ಪರ್ಧಿಗಳ ವಿಶ್

    ಬೆಂಗಳೂರು: ಬಿಗ್‍ಬಾಸ್ ಮನೆಗೆ ಎಂಟ್ರಿ ಕೊಡುವುದಕ್ಕೂ ಮುನ್ನವೇ ದೊಡ್ಮನೆ ಸದಸ್ಯರು ಫಾದರ್ಸ್ ಡೇ ಪ್ರಯುಕ್ತ ತಮ್ಮ ಪ್ರೀತಿಯ ಅಪ್ತಂದಿರಿಗೆ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡಿದ್ದಾರೆ.

    ಹೌದು, ಪ್ರತಿಯೊಬ್ಬ ಮಕ್ಕಳ ಮೊದಲ ಹೀರೋ ಅಂದರೆ ಅದು ಅವರ ತಂದೆ. ಮಕ್ಕಳು ಎಷ್ಟೇ ದೊಡ್ಡವರಾದರೂ ಇನ್ನೂ ಅವರನ್ನು ಮಕ್ಕಳಂತೆಯೇ ನೋಡುವುದು ಪೋಷಕರು ಮಾತ್ರ. ಮಕ್ಕಳನ್ನು ಪಾಲಿಸಿ, ಪೋಷಿಸಿ, ಬೆಳೆಸುವುದರಲ್ಲಿ ತಾಯಿಯ ಪಾತ್ರ ಎಷ್ಟು ದೊಡ್ಡದಿರುತ್ತದೇಯೋ ಹಾಗೆಯೇ ತಂದೆ ಪಾತ್ರ ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಪ್ರತಿಯೊಬ್ಬ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಎಲ್ಲಾ ಸಂದರ್ಭದಲ್ಲಿ ಸದಾ ಮಕ್ಕಳ ಬೆನ್ನ ಹಿಂದೆ ಬೆಂಬಲವಾಗಿ ಮೊದಲು ನಿಲ್ಲುವುದು ತಂದೆ ಮಾತ್ರ. ಅಂತಹ ವಿಶ್ವ ತಂದೆಯಂದಿರ ದಿನಾಚರಣೆಯಂದು ಬಿಗ್ ಮನೆ ಸ್ಪರ್ಧಿಗಳು ತಮ್ಮ ತಂದೆಯ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Aravind K P (@aravind_kp)

    ಪಂಚರಂಗಿ ಬೆಡಗಿ ನಟಿ ನಿಧಿ ಸುಬ್ಬಯ್ಯರವರು, ತಮ್ಮ ತಂದೆ ಜೊತೆಗಿರುವ ಬಾಲ್ಯದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ನಿಮ್ಮ ಬಗ್ಗೆ ಯೋಚಿಸದೇ ಒಂದು ದಿನವೂ ಕಳೆಯುವುದಿಲ್ಲ. ನೀವು ಇರಬೇಕಿತ್ತು. ನಾನು ನಿಮ್ಮನ್ನು ಬಹಳಷ್ಟು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಹ್ಯಾಪಿ ಫಾದರ್ಸ್ ಡೇ ಪಪ್ಪಾ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Nidhi Subbaiah (@nidhisubbaiah)

    ವೈಷ್ಣವಿ ಗೌಡ ಕೂಡ ತಮ್ಮ ತಂದೆಯೊಟ್ಟಿಗಿರುವ ಫೋಟೋ ಜೊತೆಗೆ ಹ್ಯಾಪಿ ಫಾದರ್ಸ್ ಡೇ ಅಪ್ಪ, ಎಂದಿಗೂ ನೀವು ನನ್ನ ಸೂಪರ್ ಹೀರೋ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಅರವಿಂದ್ ಕೆಪಿ ಕೂಡ ಬೈಕ್ ಮೇಲೆ ಅವರ ತಂದೆ ಕುಳಿತುಕೊಂಡಿರುವ ಫೋಟೋ ಹಾಕಿ ವಿಶ್ ಮಾಡಿದರೆ, ದಿವ್ಯಾ ಉರುಡುಗ ಕೂಡ ಅವರ ತಂದೆ ಜೊತೆಗಿರುವ ಫೋಟೋ ಜೊತೆಗೆ ಪುಟ್ಟಿಮಗ ನಿಮ್ಮನ್ನು ಬಹಳ ಪ್ರೀತಿಸುತ್ತೇನೆ ಅಪ್ಪಾಜಿ, ಹ್ಯಾಪಿ ಫಾದರ್ಸ್ ಡೇ ಎಂದು ವಿಶ್ ಮಾಡಿದ್ದಾರೆ. ಇದನ್ನೂ ಓದಿ: ಲವ್ ಯೂ ಅಪ್ಪಾ – ಯಶ್‍ಗೆ ಐರಾ, ಯಥರ್ವ್ ವಿಶ್

     

    View this post on Instagram

     

    A post shared by Vaishnavi (@iamvaishnavioffl)

     

     

    View this post on Instagram

     

    A post shared by Divya Uruduga (@divya_uruduga)

  • ಹ್ಯಾಪಿ ಬರ್ತಡೇ ಮ್ಯಾಡ್ ಚೈಲ್ಡ್ – ಗಾಸಿಪ್ ಗರ್ಲ್‍ಫ್ರೆಂಡ್‍ಗೆ ರಾಹುಲ್ ವಿಶ್

    ಹ್ಯಾಪಿ ಬರ್ತಡೇ ಮ್ಯಾಡ್ ಚೈಲ್ಡ್ – ಗಾಸಿಪ್ ಗರ್ಲ್‍ಫ್ರೆಂಡ್‍ಗೆ ರಾಹುಲ್ ವಿಶ್

    ನವದೆಹಲಿ: ತನ್ನ ಗಾಸಿಪ್ ಗೆಳತಿ ನಟಿ ಅತಿಯಾ ಶೆಟ್ಟಿಗೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಅವರು ಹುಟ್ಟುಹಬ್ಬದ ಶುಭಕೋರಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಬಾಲಿವುಡ್‍ನ ಹಿರಿಯ ನಟ ಸುನಿಲ್ ಶೆಟ್ಟಿಯವರ ಪುತ್ರಿ ಮತ್ತು ಭಾರತದ ಉಪನಾಯಕ ಕೆಎಲ್ ರಾಹುಲ್ ಗಾಸಿಪ್ ಗರ್ಲ್‍ಫ್ರೆಂಡ್ ಅತಿಯಾ ಶೆಟ್ಟಿ ಇಂದು ತಮ್ಮ 28ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಗೆಳತಿಯ ಹುಟ್ಟುಹಬ್ಬಕ್ಕೆ ಕೆಎಲ್ ರಾಹುಲ್ ಅವರು ಪ್ರೀತಿಯಿಂದ ವಿಶ್ ಮಾಡಿದ್ದು, ಇದನ್ನು ಅತಿಯಾ ಶೆಟ್ಟಿ ಇನ್‍ಸ್ಟಾ ಸ್ಟೋರಿಯಲ್ಲಿ ಶೇರ್ ಮಾಡಿದ್ದಾರೆ.

     

    View this post on Instagram

     

    Happy birthday mad child ????

    A post shared by KL Rahul???? (@rahulkl) on

    ಅತಿಯಾ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ರಾಹುಲ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ತನ್ನ ಹೆಗಲ ಮೇಲೆ ಅತಿಯಾ ತಲೆ ಇಟ್ಟಿರುವ ಫೋಟೋ ಹಂಚಿಕೊಂಡಿದ್ದಾರೆ. ಜೊತೆಗೆ ಹುಟ್ಟುಹಬ್ಬದ ಶುಭಾಶಯಗಳು ಮ್ಯಾಡ್ ಚೈಲ್ಡ್ ಎಂದು ಪ್ರೀತಿಯಿಂದ ಬರೆದುಕೊಂಡಿದ್ದಾರೆ. ಕಳೆದ ಜೂನ್‍ನಲ್ಲಿ ನಡೆದ ರಾಹುಲ್ ಅವರ ಹುಟ್ಟುಹಬ್ಬಕ್ಕೂ ಕೂಡ ಅತಿಯಾ ಶೆಟ್ಟಿಯವರು ನನ್ನವನಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದರು.

    ಈ ಹಿಂದೆ ಅಥಿಯಾ ಶೆಟ್ಟಿ ಬಿಳಿ ಶರ್ಟ್ ಧರಿಸಿ ಸ್ಟೈಲಿಶ್ ಆಗಿ ಪೋಸ್ ನೀಡಿದ ಫೋಟೋವನ್ನು ತಮ್ಮ ಇನ್‍ಸ್ಟಾದಲ್ಲಿ ಹಂಚಿಕೊಂಡಿದ್ದರು. ಫೋಟೋಗೆ ಗೆಳೆಯ ಕೆ.ಎಲ್ ರಾಹುಲ್ `ಒಳ್ಳೆಯ ಶರ್ಟ್’ ಎಂದು ಕಾಮೆಂಟ್ ಮಾಡಿದ್ದರು. ಅಭಿಮಾನಿಗಳಿಗೆ ಇಷ್ಟೇ ಸಾಕಿತ್ತು ಅಥಿಯಾ, ರಾಹುಲ್‍ರ ಕಾಲೆಳೆಯಲು ಆರಂಭಿಸಿದ್ದರು. ಹೀಗಾಗಿ ರಾಹುಲ್ ಕಾಮೆಂಟ್ ಕಾರಣಕ್ಕೆ ಅಥಿಯಾ ಪೋಸ್ಟ್ ಸಾಕಷ್ಟು ವೈರಲ್ ಆಗಿತ್ತು.

    ಕೆಲವರು ಈ ಶರ್ಟ್ ಬಹುಶಃ ನಿಮ್ಮದಾಗಿರಬೇಕು ಎಂದು ರಾಹುಲ್ ಕಾಲೆಳೆದರೆ, ಶರ್ಟ್ ನಿಮಗೆ ಇಷ್ಟವಾಗಿದೆಯಾ ಎಂದು ಕೆಲವರು ಪ್ರಶ್ನಿಸಿದ್ದರು. ಇನ್ನು ಕೆಲವರಂತೂ ನಿಮ್ಮಿಬ್ಬರ ಜೋಡಿ ಫೋಟೊವನ್ನು ಹಂಚಿಕೊಳ್ಳಿ ಎಂದು ಬೇಡಿಕೆಯಿಟ್ಟಿದ್ದರು. ಅಷ್ಟಕ್ಕೂ ರಾಹುಲ್ ಕಾಮೆಂಟ್ ಜೊತೆಗೆ ಈ ಫೋಟೋ ವೈರಲ್ ಆಗೋದಕ್ಕೆ ಮತ್ತೊಂದು ಕಾರಣವೂ ಇದೆ. ಇಲ್ಲಿ ಅಥಿಯಾ ತನ್ನದಲ್ಲದ ಸೈಜ್‍ನ ಶರ್ಟ್ ಧರಿಸಿದ್ದರು. ಇದೇ ಕಾರಣಕ್ಕೆ ಕೆಎಲ್ ರಾಹುಲ್ ಕಾಮೆಂಟ್ ಜೊತೆಗೆ ಅಭಿಮಾನಿಗಳು ತಮಾಷೆ ಮಾಡಿ ಟ್ರೋಲ್ ಮಾಡಿದ್ದರು.

    ಸದ್ಯ ಕೆಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಐಪಿಎಲ್-2020ಯಿಂದ ಹೊರಗೆ ಬಿದ್ದಿದೆ. ನಾಯಕನಾಗಿ ರಾಹುಲ್ ವಿಫಲರಾದರೂ ಬ್ಯಾಟ್ಸ್ ಮ್ಯಾನ್ ಆಗಿ ಮಿಂಚಿದ್ದಾರೆ. ಐಪಿಎಲ್-2020ಯಲ್ಲಿ ತಾವು ಆಡಿದ 14 ಪಂದ್ಯಗಳಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕದ ಸಹಾಯದಿಂದ 670 ರನ್ ಗಳಿಸಿ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ. ಇದರ ಜೊತೆಗೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾ ತಂಡದ ಉಪನಾಯಕನಾಗಿಯೂ ಆಯ್ಕೆ ಆಗಿದ್ದಾರೆ.

  • ನೀವು ಎಂದಿಗೂ ನಮ್ಮ ಹೆಮ್ಮೆ – ಅನಿಲ್ ಕುಂಬ್ಳೆಗೆ ಕಿಚ್ಚ ವಿಶ್

    ನೀವು ಎಂದಿಗೂ ನಮ್ಮ ಹೆಮ್ಮೆ – ಅನಿಲ್ ಕುಂಬ್ಳೆಗೆ ಕಿಚ್ಚ ವಿಶ್

    ಬೆಂಗಳೂರು: ಭಾರತ ಕ್ರಿಕೆಟ್ ಕಂಡ ಅದ್ಭುತ ನಾಯಕ ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆಯವರ ಹುಟ್ಟುಹಬ್ಬಕ್ಕೆ ನಟ ಕಿಚ್ಚ ಸುದೀಪ್ ಅವರು ಶುಭಕೋರಿದ್ದಾರೆ.

    ಟೆಸ್ಟ್ ಪಂದ್ಯವೊಂದರಲ್ಲಿ ಪಾಕಿಸ್ತಾನದ ವಿರುದ್ಧ 10 ವಿಕೆಟ್ ಪಡೆದು ಮಿಂಚಿದ್ದ ಹೆಮ್ಮೆಯ ಕನ್ನಡಿಗ ಅನಿಲ್ ಕುಂಬ್ಳೆಯವರು ಇಂದು 50ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಸದ್ಯ ಐಪಿಎಲ್ ನಿಮಿತ್ತ ಯುಎಇಯಲ್ಲಿರುವ ಕುಂಬ್ಳೆಯವರಿಗೆ ಸಾವಿರಾರು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡುತ್ತಿದ್ದಾರೆ.

    ಅಂತೆಯೇ ಟ್ವಿಟ್ಟರ್ ಮೂಲಕ ಶುಭಕೋರಿರುವ ಸುದೀಪ್, ನೀವು ಮೈದಾನದಲ್ಲಿ ಹೀರೋ ಆಗಿದಕ್ಕೆ, ಅದು ನಿಮ್ಮನಿಂದು ಲೆಜೆಂಡ್ ಆಗಿ ಮಾಡಿದೆ ಅನಿಲ್ ಕುಂಬ್ಳೆ ಸರ್. ಆದರೆ ಎಲ್ಲ ಪರಿಸ್ಥಿತಿಯನ್ನು ನೀವು ನಿಭಾಯಿಸಿದ ರೀತಿ ನಿಮ್ಮನ್ನು ಗುರುತಿಸುವಂತೆ ಮಾಡಿದೆ. ಕೆಲ ಪರಿಸ್ಥಿತಿಯಲ್ಲಿ ನಿಮ್ಮ ಮಾತುಗಳು ನೀವು ಓರ್ವ ಜೆಂಟಲ್‍ಮ್ಯಾನ್ ಎಂಬುದನ್ನು ತೋರಿಸಿಕೊಟಿವೆ. ಅದೇ ನಮಗೆ ಸ್ಫೂರ್ತಿ. ನೀವು ಎಂದಿಗೂ ನಮ್ಮ ಹೆಮ್ಮೆ ಹುಟ್ಟುಹಬ್ಬದ ಶುಭಾಶಯಗಳು ಸರ್ ಎಂದು ಬರೆದುಕೊಂಡಿದ್ದಾರೆ.

    1990 ರಲ್ಲಿ ಭಾರತೀಯ ಕ್ರಿಕೆಟಿಗೆ ಪಾದಾರ್ಪಣೆ ಮಾಡಿದ ಅನಿಲ್ ಕುಂಬ್ಳೆಯವರು ಸುಮಾರು 18 ವರ್ಷಗಳ ಕಾಲ ಭಾರತಕ್ಕಾಗಿ ಕ್ರಿಕೆಟ್ ಆಡಿದರು. ಭಾರತದ ಪರ 132 ಟೆಸ್ಟ್ ಮ್ಯಾಚ್ ಆಡಿರುವ ಕುಂಬ್ಳೆ ಬರೋಬ್ಬರಿ 619 ವಿಕೆಟ್ ಪಡೆದುಕೊಂಡಿದ್ದಾರೆ. ಜೊತೆಗೆ 1999 ರಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯವೊಂದರಲ್ಲಿ 10 ವಿಕೆಟ್ ಕಿತ್ತು ದಾಖಲೆ ಬರೆದಿದ್ದಾರೆ. ಭಾರತಕ್ಕಾಗಿ 271 ಏಕದಿನ ಪಂದ್ಯಗಳನ್ನು ಆಡಿರುವ ಕುಂಬ್ಳೆಯವರು 337 ವಿಕೆಟ್ ಕಿತ್ತು ಮಿಂಚಿದ್ದಾರೆ.

    ಭಾರತ ಕ್ರಿಕೆಟಿನಲ್ಲಿ ಜಂಬೋ ಎಂದೆ ಹೆಸರು ಮಾಡಿದ್ದ, ತನ್ನ ಲೆಗ್ ಸ್ಪಿನ್ ಮೂಲಕ ಎದುರಾಳಿಗಳನ್ನು ಕಾಡಿದ್ದ ಕುಂಬ್ಳೆ, 2008ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದರು. ಸದ್ಯ ಐಪಿಎಲ್‍ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ನಡುವೆ ಭಾರತ ತಂಡಕ್ಕೂ ಕೂಡ ಮುಖ್ಯ ಕೋಚ್ ಆಗಿ ಕೆಲಸ ಮಾಡಿದ್ದಾರೆ. ಕಮೆಂಟೆಟರ್ ಆಗಿ ಕೆಲಸ ನಿರ್ವಹಿಸಿದ್ದಾರೆ. ಕ್ರಿಕೆಟಿಗೆ ನಿವೃತ್ತಿ ಘೋಷಿಸದ ನಂತರ ಕ್ರಿಕೆಟಿನಲ್ಲೇ ಸಕ್ರಿಯವಾಗಿದ್ದಾರೆ.

  • ಮೂರು ಅವತಾರವೆತ್ತಿದ ದಾಸ – ತರುಣ್‍ಗೆ ವಿಶ್ ಮಾಡಿ ಪೋಸ್ಟರ್ ರಿಲೀಸ್

    ಮೂರು ಅವತಾರವೆತ್ತಿದ ದಾಸ – ತರುಣ್‍ಗೆ ವಿಶ್ ಮಾಡಿ ಪೋಸ್ಟರ್ ರಿಲೀಸ್

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿರ್ದೇಶಕ ತರುಣ್ ಸುಧೀರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳಿಗೆ ತುಂಬು ಹೃದಯದ ಧನ್ಯವಾದ ತಿಳಿಸಿದ ‘ಯಜಮಾನ’

    ಇಂದು ನಿರ್ದೇಶಕ ತರುಣ್ ಸುಧೀರ್ ಅವರ ಹುಟ್ಟುಹಬ್ಬ. ಹೀಗಾಗಿ ಅನೇಕ ನಟ, ನಟಿಯರು, ನಿರ್ದೇಶಕರು ಸೋಶಿಯಲ್ ಮೀಡಿಯಾದ ಮೂಲಕ ಶುಭಾಶಯ ಕೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಟ್ವೀಟ್ ಮಾಡುವ ಮೂಲಕ ತರುಣ್ ಸುಧೀರ್ ಅವರಿಗೆ ಬರ್ತ್ ಡೇ ವಿಶ್ ಮಾಡಿದ್ದಾರೆ. ಜೊತೆಗೆ ‘ರಾಬರ್ಟ್’ ಸಿನಿಮಾದ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದಾರೆ.

    “A Brother from another Mother. ತರುಣನಿಗೆ ನಮ್ಮ ರಾಬರ್ಟ್ ತಂಡದಿಂದ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ನಿನ್ನ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಆಶಿಸುತ್ತೇನೆ. ನಿಮ್ಮ ದಾಶ ದರ್ಶನ್ ” ಎಂದು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ ರಾಬರ್ಟ್ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ನಿರ್ದೇಶಕ ತರುಣ್ ಸುಧೀರ್ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ.

    ಬಿಡುಗಡೆಯಾಗಿರುವ ಪೋಸ್ಟರ್ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದು, ದರ್ಶನ್ ಮೂರು ಶೇಡ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಮೂರು ಅವತಾರವೆತ್ತಿರುವ ಈ ಪೋಸ್ಟರ್ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಪೋಸ್ಟರ್‌ನಲ್ಲಿ ಸದ್ಯದಲ್ಲೇ ಸಿನಿಮಾ ಚಿತ್ರಮಂದಿರಕ್ಕೆ ಎಂಟ್ರಿ ಕೊಡುವುದಾಗಿ ಹೇಳಿದ್ದಾರೆ. ಆದರೆ ಯಾವಾಗ ಎಂಬುದನ್ನು ಅಧಿಕೃತವಾಗಿ ತಿಳಿಸಿಲ್ಲ.

    ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಪೋಸ್ಟರ್ ಮೂಲಕವೇ ಭಾರೀ ಸದ್ದು ಮಾಡುತ್ತಿದೆ. ಸಿನಿಮಾದ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ‘ರಾಬರ್ಟ್’ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಲಾಕ್‍ಡೌಡ್‍ನಿಂದ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ. ಈ ಚಿತ್ರದಲ್ಲಿ ದರ್ಶನ್‍ಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ಜೊತೆಗೆ ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತೆಲುಗು ನಟ ಜಗಪತಿ ಬಾಬು ವಿಲನ್ ಆಗಿ ಅಭಿನಯಿಸಿದ್ದಾರೆ.

  • ಕಷ್ಟದಲ್ಲಿ ನನ್ನ ಜೊತೆ ನಿಂತಂತೆ ನಾನು ಎಂದಿಗೂ ನಿನ್ನ ಪಕ್ಕದಲ್ಲೇ ನಿಲ್ಲುವೆ – ಮೇಘನಾ

    ಕಷ್ಟದಲ್ಲಿ ನನ್ನ ಜೊತೆ ನಿಂತಂತೆ ನಾನು ಎಂದಿಗೂ ನಿನ್ನ ಪಕ್ಕದಲ್ಲೇ ನಿಲ್ಲುವೆ – ಮೇಘನಾ

    – ನಮ್ಮ ಚಿರು ನಕ್ಕಂತೆ ನುಗುತ್ತಿರು ಬಿಲ್

    ಬೆಂಗಳೂರು: ಕಷ್ಟದಲ್ಲಿ ನೀನು ನನ್ನ ಜೊತೆ ನಿಂತಂತೆ ನಾನು ಎಂದಿಗೂ ನಿನ್ನ ಜೊತೆಯಲ್ಲೇ ನಿಲ್ಲುವೆ ಎಂದು ಹೇಳುವ ಮೂಲಕ ನಟಿ ಮೇಘನಾ ರಾಜ್ ಅವರು ಮೈದುನ ಧ್ರುವ ಸರ್ಜಾ ಅವರಿಗೆ ಹುಟ್ಟುಹಬ್ಬದ ವಿಶ್ ತಿಳಿಸಿದ್ದಾರೆ.

    ಇಂದು ಸ್ಯಾಂಡಲ್‍ವುಡ್‍ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಹುಟ್ಟುಹಬ್ಬ. ಇಂದು ಧ್ರುವ ಅಣ್ಣ ಇಲ್ಲದ 32ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಧ್ರುವ ಹುಟ್ಟುಹಬ್ಬಕ್ಕೆ ವಿಶ್ ಮಾಡಿರುವ ಅತ್ತಿಗೆ ಮೇಘನಾ ಅವರು, ನಿನ್ನ ಅಣ್ಣ ಚಿರುವಿನ ಹಾಗೇ ಸದಾ ನಗುತ್ತಿರು ಎಂದು ಆಶೀರ್ವಾದ ಮಾಡಿದ್ದಾರೆ.

    https://www.instagram.com/p/CGAJEahHR59/?igshid=5m0foogura94

    ಧ್ರುವ ಹುಟ್ಟುಹಬ್ಬದ ವಿಚಾರವಾಗಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಂಚಿಕೊಂಡಿರುವ ಮೇಘನಾ, ನನ್ನ ಕಷ್ಟದ ಸಮಯದಲ್ಲಿ ನೀನು ಹೇಗೆ ನನ್ನ ಜೊತೆಯಲ್ಲಿ ಗಟ್ಟಿಯಾಗಿ ನಿಂತಿದ್ದೆ ಹಾಗೆಯೇ ನಾನು ಕೂಡ ಶಾಶ್ವತವಾಗಿ ನಿನ್ನ ಪಕ್ಕ ನಿಲ್ಲುತ್ತೇನೆ. ಪ್ರಾಮಿಸ್ ಬರ್ತ್‍ಡೇ ಬಾಯ್. ಸದಾ ನೀನು ಖುಷಿಯಾಗಿರು ಎಂದು ಆಶೀಸುತ್ತೇನೆ. ನಮ್ಮ ಚಿರು ನಕ್ಕಂತೆ ನೀನು ನಗುತ್ತಿರು. ಹ್ಯಾಪಿಸ್ಟ್ ಬರ್ತ್‍ಡೇ ಬಿಲ್ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

    ಕೇವಲ ಮೂರು ಸಿನಿಮಾ ಮಾಡಿ ಚಂದನವನದಲ್ಲಿ ಬಿಗ್ ಸ್ಟಾರ್ ಆಗಿ ಬೆಳೆದು ನಿಂತ ಧ್ರುವ, ಅಣ್ಣನನ್ನು ಕಳೆದುಕೊಂಡು ದುಃಖದಲ್ಲಿ ಇದ್ದಾರೆ. ಈ ಕಾರಣದಿಂದಲೇ ಈ ವರ್ಷ ಧ್ರುವ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡಿಲ್ಲ. ಜೊತೆಗೆ ಕೊರೊನಾ ಕೂಡ ರಾಜ್ಯದಲ್ಲಿ ಅಬ್ಬರಿಸುತ್ತಿದೆ. ಈ ಕಾಣದಿಂದ ಹೆಚ್ಚು ಜನ ಸೇರುವುದು ಬೇಡ ಎಂಬ ನಿಟ್ಟಿನಲ್ಲಿ ಧ್ರುವ ಸರ್ಜಾ ಅವರು ಈ ಬಾರಿಯ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ. ಇದನ್ನು ಓದಿ: ಮೇಘನಾ ಕೈ ಹಿಡಿದು ಹೆಜ್ಜೆ ಹಾಕಿದ ಚಿರು – ಕಲಾವಿದನ ಕಲೆಗೆ ನೆಟ್ಟಿಗರು ಫಿದಾ

    ಈಗಾಗಲೇ ಧ್ರುವ ಅವರ ಬಹು ನೀರಿಕ್ಷಿತ ಚಿತ್ರ ಪೊಗರು ಬಿಡುಗಡೆಗೆ ತಯಾರಿಯಾಗುತ್ತಿದೆ. ಚಿತ್ರದ ಬಹುತೇಕ ಸಿನಿಮಾದ ಶೂಟಿಂಗ್ ಮುಗಿದ್ದಿದ್ದು, ಕೊರೊನಾ ಕಾರಣದಿಂದ ನಿಂತಿದ್ದ ಚಿತ್ರೀಕರಣ ಮತ್ತೆ ಆರಂಭವಾಗಿದೆ. ಈ ನಡುವೆ ಧ್ರುವ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಹೊಸ ಚಿತ್ರ ಘೋಷಣೆಯಾಗಿದ್ದು, 2012ರಲ್ಲಿ ಅದ್ಧೂರಿ ಎಂಬ ಸೂಪರ್ ಹಿಟ್ ಲವ್ ಸಿನಿಮಾ ನೀಡಿದ್ದ ಧ್ರುವ ಹಾಗೂ ಎಪಿ ಅರ್ಜುನ್ ಜೋಡಿ ಮತ್ತೆ ಒಂದಾಗಿದೆ.

    ಭಾನುವಾರವಷ್ಟೇ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಮನೆಯಲ್ಲಿಯೇ ಸರಳವಾಗಿ ಸೀಮಂತ ಕಾರ್ಯಕ್ರಮವನ್ನು ಮಾಡಲಾಗಿದೆ. ಕುಟುಂಬದವರು ಮತ್ತು ಕೆಲ ಆಪ್ತರು ಮಾತ್ರ ಸೀಮಂತ ಶಾಸ್ತ್ರಕ್ಕೆ ಆಗಮಿಸಿದ್ದರು. ಜೊತೆಗೆ ಚಿರು ಇಲ್ಲ ಎಂಬ ನೋವು ಮೇಘನಾಗೆ ಕಾಡದಿರಲಿ ಎಂದು ಚಿರು ಅವರ ದೊಡ್ಡ ಫೋಟೋವನ್ನು ಪಕ್ಕದಲ್ಲೇ ಇಟ್ಟು ಸೀಮಂತ ಮಾಡಿದ್ದು ವಿಶೇಷವಾಗಿತ್ತು.

  • ಹೆಣ್ಮಕ್ಕಳು ನಮಗೆ ಉತ್ತಮ ಸ್ನೇಹಿತರು – ಐರಾಗೆ ರಾಧಿಕಾ ವಿಶ್

    ಹೆಣ್ಮಕ್ಕಳು ನಮಗೆ ಉತ್ತಮ ಸ್ನೇಹಿತರು – ಐರಾಗೆ ರಾಧಿಕಾ ವಿಶ್

    ಬೆಂಗಳೂರು: ನಟಿ ರಾಧಿಕಾ ಪಂಡಿತ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ತಮ್ಮ ಮಕ್ಕಳ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ನಟಿ ರಾಧಿಕಾ ತಮ್ಮ ಮಗಳೊಂದಿಗಿನ ಮುದ್ದಾದ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಐರಾ ಮತ್ತು ತಮ್ಮ ಸಹೋದರನ ಮಗಳಿಗೆ ಶುಭಾಶಯ ಕೋರಿದ್ದಾರೆ.

    ಭಾನುವಾರ ಮಗಳ ದಿನಾಚರಣೆ ಇತ್ತು. ಹೀಗಾಗಿ ಅನೇಕ ನಟ-ನಟಿಯರು ತಮ್ಮ ಮಗಳಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಅದೇ ರೀತಿ ನಟಿ ರಾಧಿಕಾ ಪಂಡಿತ್ ಕೂಡ ತಮ್ಮ ಮಗಳು ಐರಾ ಮತ್ತು ಸಹೋದರನ ಮಗಳಿಗೆ ಸೋಶಿಯಲ್ ಮೀಡಿಯಾದ ಮೂಲಕ ವಿಶ್ ಮಾಡಿದ್ದಾರೆ.

    “ಹೆಣ್ಣು ಮಕ್ಕಳು ನಮಗೆ ಯಾವಾಗಲೂ ಅತ್ಯುತ್ತಮ ಸ್ನೇಹಿತರು. ನಿನ್ನೆ ಮಗಳ ದಿನ ಎಂದು ನಾನು ನಂಬಿದ್ದೇನೆ. ಹೀಗಾಗಿ ಎಲ್ಲಾ  ಹೆಣ್ಣು ಮಕ್ಕಳಿಗೆ ಮಗಳ ದಿನಾಚರಣೆಯ ಶುಭಾಶಯಗಳು” ಎಂದು ಬರೆದುಕೊಂಡಿದ್ದಾರೆ. ಮಗಳು ಐರಾ ಜೊತೆ ಬೀಚ್ ಚೇರ್ ಮೇಲೆ ಮಲಗಿರುವ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ರಾಧಿಕಾ ಫೋಟೋ ಅಪ್ಲೋಡ್ ಮಾಡಿದ ತಕ್ಷಣ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ಜೊತೆಗೆ ಸಹೋದರನ ಮಗಳ ಫೋಟೋ ಅಪ್ಲೋಡ್ ಮಾಡಿದ್ದಾರೆ. ಅಲ್ಲದೇ ಎರಡನೇ ಫೋಟೋದಲ್ಲಿರುವ ಮಗು ಯಾರು ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಆ ಫೋಟೋದಲ್ಲಿರುವುದು ರಿಯಾ. ಈಕೆ ನನ್ನ ಸಹೋದರ ಗೌರಂಗ್‍ನ ಪ್ರೀತಿಯ ಮಗಳು ಎಂದು ತಿಳಿಸಿದ್ದಾರೆ. ಸಹೋದರನ ಮಗಳು ರಾಧಿಕಾಗೂ ಮಗಳಾಗುತ್ತಾಳೆ. ಹೀಗಾಗಿ ಸೋದರನ ಮಗಳು ರಿಯಾಗೂ ಶುಭಾಶಯವನ್ನು ತಿಳಿಸಿದ್ದಾರೆ.

    ಇತ್ತೀಚೆಗೆ ರಾಧಿಕಾ ತಮ್ಮ ಮಕ್ಕಳ ವಿಡಿಯೋವೊಂದನ್ನು ಶೇರ್ ಮಾಡಿದ್ದರು. ಮೊದಲಿಗೆ ಯಥರ್ವ್ ಅಪ್ಪ ಯಶ್ ಮತ್ತು ಅಮ್ಮ ರಾಧಿಕಾ ಫೋಟೋ ಮುಂದೆ ಕುಳಿತಿದ್ದು, ಇಬ್ಬರನ್ನು ಗುರುತಿಸುವ ಪ್ರಯತ್ನ ಮಾಡುತ್ತಿದ್ದನು. ಈ ಮಧ್ಯೆ ಸಹೋದರಿ ಐರಾ ಬಂದು ತನ್ನ ಮುದ್ದು ತಮ್ಮನಿಗೆ ರಾಧಿಕಾ ಫೋಟೋ ತೋರಿಸಿ ಇದು ಅಮ್ಮ ಎಂದು ಹೇಳಿಕೊಟ್ಟಿದ್ದಳು. ಈ ವಿಡಿಯೋವನ್ನು ರಾಧಿಕಾ ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದರು.

    https://www.instagram.com/p/CFq6idSACzM/?igshid=1ddhpjglzitso

    ಅಲ್ಲದೇ “ವಿದ್ಯಾರ್ಥಿ ಟೀಚರ್ ಆದಾಗ, ನನ್ನ ಕೆಲಸ ಮುಗಿದಿದೆ” ಎಂದು ಬರೆದುಕೊಂಡಿದ್ದರು. ಅಂದರೆ ಈ ಹಿಂದೆ ರಾಧಿಕಾ ತಮ್ಮ ಮಗಳು ಐರಾಗೆ ಯಶ್ ಮತ್ತು ತಮ್ಮ ಜೋಡಿ ಫೋಟೋವನ್ನು ತೋರಿಸಿ ಅಪ್ಪ, ಅಮ್ಮನ ಗುರುತಿಸುವಂತೆ ಹೇಳಿಕೊಟ್ಟಿದ್ದರು. ಆಗ ಐರಾ ವಿದ್ಯಾರ್ಥಿನಿಯಾಗಿದ್ದಳು. ಈಗ ತನ್ನ ಸಹೋದರ ಯಥರ್ವ್ ನಿಗೆ ಟೀಚರ್ ಆಗಿ ಅಪ್ಪ-ಅಮ್ಮ ಫೋಟೋ ತೋರಿಸಿ ಅಮ್ಮ ಹೇಳಿದ ರೀತಿಯೇ ಹೇಳಿಕೊಟ್ಟಿದ್ದರು.

  • ಕನ್ನಡದಲ್ಲಿ ಧನ್ಯವಾದ ತಿಳಿಸಿದ ಸ್ಪಿನ್ನರ್ ಅಶ್ವಿನ್

    ಕನ್ನಡದಲ್ಲಿ ಧನ್ಯವಾದ ತಿಳಿಸಿದ ಸ್ಪಿನ್ನರ್ ಅಶ್ವಿನ್

    ಬೆಂಗಳೂರು: ತನ್ನ ಹುಟ್ಟುಹಬ್ಬಕ್ಕೆ ಶುಭಕೋರಿದ ಸ್ಟಾರ್ ಸ್ಫೋರ್ಟ್ಸ್ ಕನ್ನಡ ವಾಹಿನಿಗೆ ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಕನ್ನಡದಲ್ಲೇ ಪ್ರತಿಕ್ರಿಯೆ ನೀಡುವ ಮೂಲಕ ಕರುನಾಡ ಜನರ ಮನಗೆದ್ದಿದ್ದಾರೆ.

    ಭಾರತ ಕ್ರಿಕೆಟ್ ತಂಡದ ಅನುಭವಿ ಅಫ್ ಸಿನ್ನರ್ ರವಿಚಂದ್ರನ್ ಅಶ್ವಿನ್ ಅವರು, ನಿನ್ನೆ ತನ್ನ 34ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಸದ್ಯ ಐಪಿಎಲ್ ಆಡಲು ಯುಎಇಗೆ ತೆರಳಿರುವ ಅವರು, ಈ ಬಾರಿ ಡೆಲ್ಲಿ ಕ್ಯಾಪಿಟಲ್ ತಂಡದ ಪರವಾಗಿ ಆಡಲಿದ್ದಾರೆ. ಸದ್ಯ ಅವರ ಹುಟ್ಟುಹಬ್ಬದ ಅಂಗವಾಗಿ ಕನ್ನಡದಲ್ಲಿ ಟ್ವೀಟ್ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಅಶ್ವಿನ್ ಅವರ ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಟ್ವೀಟ್ ಮಾಡಿದ್ದ ಸ್ಟಾರ್ ಸ್ಫೋರ್ಟ್ಸ್ ಕನ್ನಡ, ಮೈಂಡ್ ಗೇಮ್ಸ್ ನಲ್ಲಿ ಚಾಣಾಕ್ಷ, ಟೆಸ್ಟ್ ನಲ್ಲಿ ವೇಗವಾಗಿ 100 ವಿಕೆಟ್‍ಗಳ ಗಡಿ ದಾಟಿದ ಭಾರತದ ಬೌಲರ್. ಟೆಸ್ಟ್, ಏಕದಿನ ಮತ್ತು ಟಿ-20 ಎಲ್ಲ ಮಾದರಿಗೂ ಒಗ್ಗಿಕೊಳ್ಳುವ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ಜನ್ಮದಿನದ ಶುಭಾಶಯಗಳು. ವೀಕ್ಷಕರೇ, ಅಶ್ವಿನ್ ಅವರ ಯಾವ ಪ್ರದರ್ಶನ ನಿಮಗಿಷ್ಟ, ಕಾಮೆಂಟ್ ಮಾಡಿ ಎಂದು ಟ್ವೀಟ್ ಮಾಡಿತ್ತು.

    ಇದಕ್ಕೆ ಉತ್ತರಿಸಿದ ಅಶ್ವಿನ್ ಅವರು, ನನ್ನ ಜನ್ಮದಿನದೊಂದು ನೀವು ಪ್ರೀತಿ ಪೂರ್ವಕವಾಗಿ ಕಳುಹಿಸಿದ ಶುಭಾಶಯಕ್ಕೆ ಧನ್ಯವಾದಗಳು ಎಂದು ಕನ್ನಡದಲ್ಲಿ ರಿಪ್ಲೈ ಮಾಡಿದ್ದಾರೆ. ಇದನ್ನು ಕಂಡ ಕನ್ನಡದ ಕ್ರಿಕೆಟ್ ಅಭಿಮಾನಿಗಳು ಫುಲ್ ಕುಶ್ ಆಗಿದ್ದಾರೆ. ಅಶ್ವಿನ್ ಅವರು ಕನ್ನಡದಲ್ಲಿ ಟ್ವೀಟ್ ಮಾಡುತ್ತಿದ್ದಂತೆ ಕಮೆಂಟ್ ಮಾಡಿರುವ ಕನ್ನಡಿಗರು, ನಿಮ್ಮ ಬಾಯಲ್ಲಿ ಕನ್ನಡ ಕೇಳಿ ಬಹಳ ಸಂತೋಷವಾಯಿತು, ಧನ್ಯವಾದಗಳು ಮತ್ತು ಹುಟ್ಟುಹಬ್ಬದ ಶುಭಾಶಯಗಳು ಎಂದಿದ್ದಾರೆ.

    ಅಶ್ವಿನ್ ಅವರು ಭಾರತದ ಪರವಾಗಿ 71 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 365 ವಿಕೆಟ್‍ಗಳನ್ನು ಗಳಿಸಿದ್ದಾರೆ. ಜೊತೆಗೆ 111 ಏಕದಿನ ಪಂದ್ಯಗಳನ್ನು ಆಡಿದ್ದು, 150 ವಿಕೆಟ್ ಕಿತ್ತಿದ್ದಾರೆ. ಐಪಿಎಲ್‍ನಲ್ಲಿ ಸ್ಟಾರ್ ಬೌಲರ್ ಆಗಿರುವ ಅಶ್ವಿನ್ ಒಟ್ಟು 139 ಪಂದ್ಯಗಳನ್ನಾಡಿ 125 ವಿಕೆಟ್ ಪಡೆದಿದ್ದಾರೆ. 46 ಅಂತಾರಾಷ್ಟ್ರೀಯ ಟಿ-20 ಪಂದ್ಯಗಳನ್ನಾಡಿರುವ ಅವರು, 52 ವಿಕೆಟ್ ಗಳಿಸಿದ್ದಾರೆ.

    2020ರ ಜನವರಿಲ್ಲಿ ಸ್ಟಾರ್ ಸ್ಫೋರ್ಟ್ಸ್ ವಾಹಿನಿ ಕನ್ನಡದಲ್ಲಿ ಟ್ವಿಟ್ಟರ್ ಅಕೌಂಟ್ ಆರಂಭ ಮಾಡಿದೆ. ಸದ್ಯ ಸ್ಟಾರ್ ಸ್ಫೋರ್ಟ್ಸ್ ಕನ್ನಡ ಟ್ವಿಟ್ಟರ್ ಅಕೌಂಟ್ ಅನ್ನು 12 ಸಾವಿರ ಜನ ಫಾಲೋ ಮಾಡುತ್ತಿದ್ದಾರೆ. ಸ್ಟಾರ್ ಸ್ಫೋರ್ಟ್ಸ್ ತಮಿಳು ಖಾತೆಯನ್ನು 80 ಸಾವಿರ ಮಂದಿ ಫಾಲೋ ಮಾಡುತ್ತಿದ್ದಾರೆ.