Tag: ವಿಶ್ರಾಂತಿ

  • ಒಂದು ತಿಂಗಳು ವಿಶ್ರಾಂತಿ ಪಡೆಯಲಿದ್ದಾರೆ ನಟ ದರ್ಶನ್

    ಒಂದು ತಿಂಗಳು ವಿಶ್ರಾಂತಿ ಪಡೆಯಲಿದ್ದಾರೆ ನಟ ದರ್ಶನ್

    ಟ ದರ್ಶನ್ (Darshan) ಅವರಿಗೆ ಡೆವಿಲ್ (Devil Film) ಸಿನಿಮಾದ ಚಿತ್ರೀಕರಣ ವೇಳೆ ಕೈಗೆ ಪೆಟ್ಟಾಗಿತ್ತು. ಮೊನ್ನೆಯಷ್ಟೇ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅವರ ಕೈಗೆ ಸರ್ಜರಿ (Hand Surgery) ಮಾಡಲಾಗಿತ್ತು. ಚಿಕಿತ್ಸೆಯ ನಂತರ ವೈದ್ಯರು ಅವರಿಗೆ ಒಂದು ತಿಂಗಳ ವಿಶ್ರಾಂತಿಗೆ (Rest) ಸೂಚಿಸಿದ್ದಾರಂತೆ.

    ಶಸ್ತ್ರ ಚಿಕಿತ್ಸೆಯ ನಂತರ ಮತ್ತೆ ಡೆವಿಲ್ ಸಿನಿಮಾದ ಶೂಟಿಂಗ್ ನಲ್ಲಿ ದರ್ಶನ್ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕಡ್ಡಾಯವಾಗಿ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದರಿಂದ ಅದನ್ನು ಅವರು ಪಾಲಿಸಲೇಬೇಕಿದೆ ಎಂದು ಅವರು ಆಪ್ತರು ತಿಳಿಸಿದ್ದಾರೆ. ಹಾಗಾಗಿ ಡೆವಿಲ್ ಸಿನಿಮಾದ ಶೂಟಿಂಗ್ ಮುಂದಕ್ಕೆ ಹೋಗುವುದು ಅನಿವಾರ್ಯವಾಗಿದೆ.

    ಏ.4ರಂದು ಮಂಡ್ಯದಲ್ಲಿ ನಡೆದ ಸುಮಲತಾ ಅವರ ಬಹಿರಂಗ ಸಭೆಯಲ್ಲಿ ದರ್ಶನ್ ಕೂಡ ಭಾಗಿಯಾಗಿದ್ದರು. ಈ ವೇಳೆ, ದರ್ಶನ್ ಅವರೇ ತಾವು ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕಿದೆ ಎಂದು ಹೇಳಿಕೊಂಡಿದ್ದರು. ಸಹಜವಾಗಿಯೇ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಈಗ ಯಶಸ್ವಿಯಾಗಿ ಆಪರೇಷನ್ ಮುಗಿದಿದೆ.

     

    ‘ಡೆವಿಲ್’ ಸಿನಿಮಾದ ಸಾಹಸ ಸನ್ನಿವೇಶ ಶೂಟಿಂಗ್ ಸಮಯದಲ್ಲಿ ಅವರ ಕೈಗೆ ಏಟು ಬಿದ್ದಿತ್ತು. ಕೈಗೆ ಬೆಲ್ಟ್ ಕಟ್ಟಿಕೊಂಡು ಈವರೆಗೂ ಓಡಾಡುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ದರ್ಶನ್ ಆಪರೇಷನ್‌  ಮಾಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ನಟ ವಿಶ್ರಾಂತಿ ಪಡೆಯುತ್ತಿರುವ ವಿಚಾರ ಕೇಳಿ ಅಭಿಮಾನಿಗಳಿಗೂ ಖುಷಿಯಾಗಿದೆ.

  • ಬಾಲಿವುಡ್ ಸಿನಿಮಾಗಳಿಂದಲೂ ಸಮಂತಾ ಔಟ್: ಹೆಚ್ಚುತ್ತಾ ಹೋಗುತ್ತಿದೆ ಆತಂಕ

    ಬಾಲಿವುಡ್ ಸಿನಿಮಾಗಳಿಂದಲೂ ಸಮಂತಾ ಔಟ್: ಹೆಚ್ಚುತ್ತಾ ಹೋಗುತ್ತಿದೆ ಆತಂಕ

    ತೆಲುಗು ಸಿನಿಮಾ ರಂಗದ ಖ್ಯಾತ ತಾರಾ ಸಮಂತಾ ಅವರ ಬಗ್ಗೆ ದಿನಕ್ಕೊಂದು ಸುದ್ದಿ ಹೊರ ಬೀಳುತ್ತಿದೆ. ಮೊನ್ನೆಯಷ್ಟೇ ಅವರು ದಕ್ಷಿಣದ ಹಲವು ಸಿನಿಮಾಗಳನ್ನು ಕೈ ಬಿಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಮತ್ತೊಂದು ನ್ಯೂಸ್ ಹೊರ ಬಂದಿದ್ದು, ಬಾಲಿವುಡ್ (Bollywood) ಸಿನಿಮಾಗಳಿಂದಲೂ ಅವರನ್ನು ಕೈ ಬಿಡಲಾಗಿದೆಯಂತೆ. ಅವರ ಆರೋಗ್ಯ ಸುಧಾರಿಸಲು ಸಾಕಷ್ಟು ಸಮಯ ಬೇಕಾಗಿರುವುದರಿಂದ ಇಂಥದ್ದೊಂದು ನಿರ್ಧಾರ ತಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಆದರೆ, ಹಲವು ಪ್ರಾಜೆಕ್ಟ್ ಗಳಿಂದ ಅವರನ್ನು ಕೈ ಬಿಡಲಾಗಿದೆ ಎನ್ನುವುದು ಸುಳ್ಳು ಎನ್ನುವ ಮಾಹಿತಿ ಹೊರ ಬಿದ್ದಿದೆ. ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಖುಷಿ’ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸುತ್ತಿದ್ದರು. ಈಗಾಗಲೇ ಎರಡು ಹಂತದ ಚಿತ್ರೀಕರಣ ಕೂಡ ಮುಗಿದಿದೆ. ಈ ಸಿನಿಮಾದಿಂದ ಅವರನ್ನು ಕೈ ಬಿಡಲಾಗಿದೆ ಎಂದು ಹೇಳಲಾಗಿತ್ತು. ಈ ಕುರಿತು ಚಿತ್ರತಂಡವೇ ಸ್ಪಷ್ಟನೆ ಕೊಟ್ಟಿದೆ.

    ಸದ್ಯ ಸಮಂತಾ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಹಾಗಾಗಿಯೇ ಶೂಟಿಂಗ್ ಪ್ರಾರಂಭಿಸಿಲ್ಲ. ಅವರು ಈಗಾಗಲೇ ಎರಡು ಹಂತದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಅವರಿಗೆ ವಿಶ್ರಾಂತಿಯ ಅಗತ್ಯ ಇರುವುದರಿಂದ ಸಂಕ್ರಾತಿಯ ನಂತರ ಮತ್ತೆ ಶೂಟಿಂಗ್ ಪ್ರಾರಂಭ ಮಾಡುತ್ತೇವೆ ಎಂದು ಖುಷಿ ತಂಡವೇ ಸ್ಪಷ್ಟನೆ ನೀಡಿದೆ. ಅವರು ಈ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವುದು ಕೇವಲ ಗಾಸಿಪ್ ಎಂದೂ ಅವರು ಹೇಳಿಕೆ ಕೊಟ್ಟಿದ್ದಾರೆ. ಈ ಮೂಲಕ ಸಮಂತಾ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವುದನ್ನೂ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: `ತೂತು ಮಡಿಕೆ’ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳೋಕೆ ಚಂದ್ರ ಕೀರ್ತಿ ರೆಡಿ

    ಸಮಂತಾ (Samantha) ಅಪರೂಪದ ಕಾಯಿಲೆಗೆ ತುತ್ತಾಗಿದ್ದು ಗುಟ್ಟಿನ ವಿಚಾರವೇನೂ ಅಲ್ಲ. ಈ ಕಾಯಿಲೆ ಪ್ರಾರಂಭಿಕ ಹಂತದಲ್ಲಿ ಇರುವಾಗಲೇ ಗೊತ್ತಾಗಿದ್ದರಿಂದ ಅದಕ್ಕೆ ಸೂಕ್ತ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದಾರೆ. ಈ ಚಿಕಿತ್ಸೆ ಪಡೆಯಲೆಂದೇ ಅವರು ವಿದೇಶಕ್ಕೂ ಹಾರಿದ್ದರು. ಇದೊಂದು ಅಪಾಯಕಾರಿ ಸಮಸ್ಯೆಯಾದರೂ, ಅದಕ್ಕೆ ಸೂಕ್ತ ಚಿಕಿತ್ಸೆ ಇದೆ ಎಂದು ಸ್ವತಃ ಅವರೇ ಬರೆದುಕೊಂಡಿದ್ದರು. ಇದು ಅಭಿಮಾನಿಗಳ ಆತಂಕಕ್ಕೂ ಕಾರಣವಾಗಿತ್ತು.

    ಈ ನಡುವೆ ಸಮಂತಾ ನಟನೆಯ ಎರಡು ಚಿತ್ರಗಳು ರಿಲೀಸ್ ಆದವು. ಎರಡೂ ಚಿತ್ರದ ಪ್ರಚಾರಕ್ಕೆ ಅವರು ಬರಲಿಲ್ಲ. ಹೀಗಾಗಿ ಸಮಂತಾ ಗಂಭೀರ ಸಮಸ್ಯೆಯಿಂದಲೇ ಬಳಲುತ್ತಿದ್ದಾರೆ ಎಂದು ಹೇಳಲಾಗಿತ್ತು. ಈ ಕಾರಣದಿಂದಾಗಿಯೇ ಅವರನ್ನು ಪ್ರಾಜೆಕ್ಟ್ ಗಳಿಂದ ಕೈ ಬಿಡಲಾಗುತ್ತಿದೆ ಎಂದು ಸುದ್ದಿ ಆಗಿತ್ತು. ಈ ಸುದ್ದಿಗೆ ಕೆಲವ ತಂಡಗಳು ಈಗೀಗ ಸ್ಪಷ್ಟನೆಯನ್ನು ಕೊಡುತ್ತಿವೆ. ಈ ಮೂಲಕ ಸಮಂತಾ ಮತ್ತೆ ಚಿತ್ರೀಕರಣಕ್ಕೆ ಬರಲಿದ್ದಾರೆ ಎನ್ನುವ ವಿಶ್ವಾಸವನ್ನೂ ವ್ಯಕ್ತಪಡಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಸಮಂತಾ ವಿಶ್ರಾಂತಿಯಲ್ಲಿದ್ದಾರೆ, ಖುಷಿ ಸಿನಿಮಾ ಬಿಟ್ಟಿಲ್ಲ ಎಂದು ಸ್ಪಷ್ಟನೆ ಕೊಟ್ಟ ತಂಡ

    ಸಮಂತಾ ವಿಶ್ರಾಂತಿಯಲ್ಲಿದ್ದಾರೆ, ಖುಷಿ ಸಿನಿಮಾ ಬಿಟ್ಟಿಲ್ಲ ಎಂದು ಸ್ಪಷ್ಟನೆ ಕೊಟ್ಟ ತಂಡ

    ಕ್ಷಿಣದ ಖ್ಯಾತ ತಾರೆ ಸಮಂತಾ (Samantha) ಆರೋಗ್ಯದ ಕಾರಣದಿಂದಾಗಿ ಸಿನಿಮಾ ರಂಗದಿಂದ ದೂರ ಉಳಿದಿದ್ದಾರೆ ಎನ್ನುವುದು ನಿಜವಾಗಿದೆ. ಆದರೆ, ಹಲವು ಪ್ರಾಜೆಕ್ಟ್ ಗಳಿಂದ ಅವರನ್ನು ಕೈ ಬಿಡಲಾಗಿದೆ ಎನ್ನುವುದು ಸುಳ್ಳು ಎನ್ನುವ ಮಾಹಿತಿ ಹೊರ ಬಿದ್ದಿದೆ. ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಖುಷಿ’ (Khushi) ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸುತ್ತಿದ್ದರು. ಈಗಾಗಲೇ ಎರಡು ಹಂತದ ಚಿತ್ರೀಕರಣ ಕೂಡ ಮುಗಿದಿದೆ. ಈ ಸಿನಿಮಾದಿಂದ ಅವರನ್ನು ಕೈ ಬಿಡಲಾಗಿದೆ ಎಂದು ಹೇಳಲಾಗಿತ್ತು. ಈ ಕುರಿತು ಚಿತ್ರತಂಡವೇ ಸ್ಪಷ್ಟನೆ ಕೊಟ್ಟಿದೆ.

    ಸದ್ಯ ಸಮಂತಾ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಹಾಗಾಗಿಯೇ ಶೂಟಿಂಗ್ ಪ್ರಾರಂಭಿಸಿಲ್ಲ. ಅವರು ಈಗಾಗಲೇ ಎರಡು ಹಂತದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಅವರಿಗೆ ವಿಶ್ರಾಂತಿಯ ಅಗತ್ಯ ಇರುವುದರಿಂದ ಸಂಕ್ರಾತಿಯ ನಂತರ ಮತ್ತೆ ಶೂಟಿಂಗ್ ಪ್ರಾರಂಭ ಮಾಡುತ್ತೇವೆ ಎಂದು ಖುಷಿ ತಂಡವೇ ಸ್ಪಷ್ಟನೆ ನೀಡಿದೆ. ಅವರು ಈ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವುದು ಕೇವಲ ಗಾಸಿಪ್ ಎಂದೂ ಅವರು ಹೇಳಿಕೆ ಕೊಟ್ಟಿದ್ದಾರೆ. ಈ ಮೂಲಕ ಸಮಂತಾ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವುದನ್ನೂ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ಡೇಂಜರ್ ಝೋನ್‌ನಲ್ಲಿ 8 ಸ್ಪರ್ಧಿಗಳು, ಯಾರ ಆಟಕ್ಕೆ ಬ್ರೇಕ್ ಹಾಕಲಿದ್ದಾರೆ ಬಿಗ್ ಬಾಸ್

    ಸಮಂತಾ ಅಪರೂಪದ ಕಾಯಿಲೆಗೆ ತುತ್ತಾಗಿದ್ದು ಗುಟ್ಟಿನ ವಿಚಾರವೇನೂ ಅಲ್ಲ. ಈ ಕಾಯಿಲೆ ಪ್ರಾರಂಭಿಕ ಹಂತದಲ್ಲಿ ಇರುವಾಗಲೇ ಗೊತ್ತಾಗಿದ್ದರಿಂದ ಅದಕ್ಕೆ ಸೂಕ್ತ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದಾರೆ. ಈ ಚಿಕಿತ್ಸೆ ಪಡೆಯಲೆಂದೇ ಅವರು ವಿದೇಶಕ್ಕೂ ಹಾರಿದ್ದರು. ಇದೊಂದು ಅಪಾಯಕಾರಿ ಸಮಸ್ಯೆಯಾದರೂ, ಅದಕ್ಕೆ ಸೂಕ್ತ ಚಿಕಿತ್ಸೆ ಇದೆ ಎಂದು ಸ್ವತಃ ಅವರೇ ಬರೆದುಕೊಂಡಿದ್ದರು. ಇದು ಅಭಿಮಾನಿಗಳ ಆತಂಕಕ್ಕೂ ಕಾರಣವಾಗಿತ್ತು.

    ಈ ನಡುವೆ ಸಮಂತಾ ನಟನೆಯ ಎರಡು ಚಿತ್ರಗಳು ರಿಲೀಸ್ ಆದವು. ಎರಡೂ ಚಿತ್ರದ ಪ್ರಚಾರಕ್ಕೆ ಅವರು ಬರಲಿಲ್ಲ. ಹೀಗಾಗಿ ಸಮಂತಾ ಗಂಭೀರ ಸಮಸ್ಯೆಯಿಂದಲೇ ಬಳಲುತ್ತಿದ್ದಾರೆ ಎಂದು ಹೇಳಲಾಗಿತ್ತು. ಈ ಕಾರಣದಿಂದಾಗಿಯೇ ಅವರನ್ನು ಪ್ರಾಜೆಕ್ಟ್ ಗಳಿಂದ ಕೈ ಬಿಡಲಾಗುತ್ತಿದೆ ಎಂದು ಸುದ್ದಿ ಆಗಿತ್ತು. ಈ ಸುದ್ದಿಗೆ ಕೆಲವ ತಂಡಗಳು ಈಗೀಗ ಸ್ಪಷ್ಟನೆಯನ್ನು ಕೊಡುತ್ತಿವೆ. ಈ ಮೂಲಕ ಸಮಂತಾ ಮತ್ತೆ ಚಿತ್ರೀಕರಣಕ್ಕೆ ಬರಲಿದ್ದಾರೆ ಎನ್ನುವ ವಿಶ್ವಾಸವನ್ನೂ ವ್ಯಕ್ತಪಡಿಸಿವೆ.

    Live Tv
    [brid partner=56869869 player=32851 video=960834 autoplay=true]

  • ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದ ಆತಂಕ

    ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದ ಆತಂಕ

    ಭಾರತೀಯ ಸಿನಿಮಾ ರಂಗದ ಹೆಸರಾಂತ ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ದಿನಗಳಿಂದ ಅವರು ತೀರ್ವ ಜ್ವರದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಜ್ವರ ಕಡಿಮೆ ಆಗದ ಕಾರಣಕ್ಕಾಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

    ನೆಚ್ಚಿನ ನಟ ಕಮಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಅಭಿಮಾನಿಗಳಲ್ಲಿ ಆತಂಕ ಮನೆಮಾಡಿತ್ತು. ಕಮಲ್ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಸದ್ಯ ಕಮಲ್ ಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನೆರಡು ದಿನಗಳಲ್ಲಿ ಡಿಸ್ಚಾರ್ಜ್ ಆಗಬಹುದು ಎನ್ನಲಾಗುತ್ತಿದೆ. ಇದೀಗ ಜ್ವರ ಕೂಡ ಕಡಿಮೆ ಆಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂಬ ಓದಿ:51ನೇ ವಯಸ್ಸಿನಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿರುವ ಮನೋಜ್ ತಿವಾರಿ

    ದಣಿವರಿಯದ ಕೆಲಸವೇ ಜ್ವರಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದ ಸಿನಿಮಾ, ರಿಯಾಲಿಟಿ ಶೋ ಸೇರಿದಂತೆ ಸಾಕಷ್ಟು ಕೆಲಸಗಳಲ್ಲಿ ಕಮಲ್ ಬ್ಯುಸಿಯಾಗಿದ್ದಾರೆ. ಇಂಡಿಯನ್ 2 ಸಿನಿಮಾದ ಶೂಟಿಂಗ್ ನಲ್ಲಿ ನಿರಂತರವಾಗಿ ಕಮಲ್ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಈಗ ಕಮಲ್ ಅನಿವಾರ್ಯವಾಗಿ ರೆಸ್ಟ್ ತಗೆದುಕೊಳ್ಳಬೇಕಾಗಿದ್ದು, ಸದ್ಯ ವಿಶ್ರಾಂತಿಯಲ್ಲಿದ್ದಾರೆ ಕಮಲ್.

    Live Tv
    [brid partner=56869869 player=32851 video=960834 autoplay=true]

  • ಭಾರತ್ ಜೋಡೋ ಯಾತ್ರೆ – ರಾಹುಲ್ ಗಾಂಧಿ ವಿಶ್ರಾಂತಿಗೆ ವಾಹನದಲ್ಲಿ ಬೆಡ್, ಎಸಿ ವ್ಯವಸ್ಥೆ

    ಭಾರತ್ ಜೋಡೋ ಯಾತ್ರೆ – ರಾಹುಲ್ ಗಾಂಧಿ ವಿಶ್ರಾಂತಿಗೆ ವಾಹನದಲ್ಲಿ ಬೆಡ್, ಎಸಿ ವ್ಯವಸ್ಥೆ

    ನವದೆಹಲಿ: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು ಈಗಾಗಲೇ ಪ್ರಾರಂಭಿಸಿದೆ. ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿರುವ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯೊಂದಿಗೆ ಸುಮಾರು 230 ಜನರು ಪಾಲ್ಗೊಂಡಿದ್ದಾರೆ. ಯಾತ್ರೆಯಲ್ಲಿ ರಾಹುಲ್ ಗಾಂಧಿ ವಿಶ್ರಾಂತಿಯನ್ನು ಎಲ್ಲಿ ತೆಗೆದುಕೊಳ್ಳುತ್ತಾರೆ ಎಂಬ ಮಾಹಿತಿ ಇಲ್ಲಿದೆ.

    ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಗೆ ಸುಮಾರು 60 ಟ್ರಕ್‌ಗಳನ್ನು ಗಣ್ಯರ ವಿಶ್ರಾಂತಿಗಾಗಿಯೇ ಸಜ್ಜುಗೊಳಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯೂ ಕೂಡಾ ಇವುಗಳಲ್ಲೇ ಒಂದು ಟ್ರಕ್‌ನಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಾರೆ ಎನ್ನಲಾಗಿದ್ದು, ಅದರಲ್ಲಿ ಎಲ್ಲಾ ರೀತಿಯ ಅನುಕೂಲಕರ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ತಿಳಿದುಬಂದಿದೆ.

    ಈ ಬಗ್ಗೆ ಮಾಹಿತಿ ನೀಡಿದ ಪಕ್ಷದ ನಾಯಕ ಜೈರಾಮ್ ರಮೇಶ್, ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗಿನ 3,570 ಕಿ.ಮೀ ಸಂಪೂರ್ಣ ದೂರವನ್ನು ರಾಹುಲ್ ಗಾಂಧಿ ಸೇರಿದಂತೆ 119 ಯಾತ್ರಿಗಳು ಕ್ರಮಿಸಲಿದ್ದಾರೆ. ಈ ವೇಳೆ ವಿಶ್ರಾಂತಿಗಾಗಿ ಅತಿಥಿ ಯಾತ್ರಿಗಳು ಸುಸಜ್ಜಿತ ಕಂಟೈನರ್‌ಗಳಲ್ಲಿ ಉಳಿಯಲಿದ್ದಾರೆ ಎಂದಿದ್ದಾರೆ.

    ನಾವು ನಿನ್ನೆಯಿಂದ ಕಂಟೈನರ್‌ಗಳಲ್ಲಿ ಉಳಿದುಕೊಂಡಿದ್ದೇವೆ. ಒಟ್ಟು 60 ಕಂಟೈನರ್‌ಗಳಿದ್ದು, ಇದರಲ್ಲಿ ಸುಮಾರು 230 ಜನರು ತಂಗುತ್ತಿದ್ದಾರೆ. ಕೆಲವು 1 ಹಾಸಿಗೆ, ಕೆಲವು 2 ಹಾಸಿಗೆಗಳು, ಕೆಲವು 4 ಹಾಸಿಗೆಗಳು ಮತ್ತು ಕೆಲವು 12 ಹಾಸಿಗೆಯ ಕಂಟೈನರ್‌ಗಳು ಇವೆ ಎಂದು ತಿಳಿಸಿದ್ದಾರೆ. ಇದ್ನನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಧರಿಸಿದ್ದ 41 ಸಾವಿರ ರೂ.ನ ಟೀಶರ್ಟ್ ಕುರಿತು ಬಿಜೆಪಿ ವ್ಯಂಗ್ಯ

    ವರದಿಗಳ ಪ್ರಕಾರ ರಾಹುಲ್ ಗಾಂಧಿ ತಮ್ಮ ಯಾತ್ರೆಯಲ್ಲಿ ಖಾಸಗಿ ಬಳಕೆಗೆ ಒಂದು ಟ್ರಕ್ ಅನ್ನು ಹೊಂದಿದ್ದಾರೆ. ಅದರಲ್ಲಿ 2 ಹಾಸಿಗೆಯನ್ನು ಇರಿಸಲಾಗಿದ್ದು, ಹವಾನಿಯಂತ್ರಿತ ವ್ಯವಸ್ಥೆಯೂ ಇದೆ ಎನ್ನಲಾಗಿದೆ.

    ರಾಹುಲ್ ಗಾಂಧಿಯನ್ನು ಹೊರತುಪಡಿಸಿ ಇತರ ನಾಯಕರುಗಳಿಗೆ 6 ಅಥವಾ 12 ಹಾಸಿಗೆಗಳಿರುವ ಟ್ರಕ್‌ಗಳನ್ನು ನೀಡಲಾಗಿದೆ. ಎಲ್ಲಾ ಟ್ರಕ್‌ಗಳಲ್ಲೂ ಹವಾನಿಯಂತ್ರಿತ ವ್ಯವಸ್ಥೆ ಇಲ್ಲ ಎನ್ನಲಾಗಿದ್ದರೂ ಹೆಚ್ಚಿನವುಗಳಲ್ಲಿ ಶೌಚಾಲಯಗಳನ್ನು ಜೋಡಿಸಲಾಗಿದೆ ಎನ್ನಲಾಗಿದೆ.

    ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದ ಕಡೆಗೆ ಸಾಗಲಿದ್ದು, 3,500 ಕಿ.ಮೀ ದೂರವನ್ನು ಕ್ರಮಿಸಲಿದೆ. 150 ದಿನಗಳಲ್ಲಿ ಇದು 12 ರಾಜ್ಯಗಳು ಹಾಗೂ 2 ಕೇಂದ್ರಾಡಳಿತ ಪ್ರದೇಶಗಳನ್ನು ಹಾದುಹೋಗಲಿದೆ. ಇದ್ನನೂ ಓದಿ: ನಾನೇನು ಮಾಡ್ಬೇಕು ಎಂಬುದನ್ನು ಕ್ಲಿಯರ್ ಆಗಿ ನಿರ್ಧರಿಸಿದ್ದೇನೆ: ರಾಹುಲ್ ಗಾಂಧಿ

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮಯ್ಯ ಟೆನ್ಷನ್ ಫ್ರೀ – ಮೂರು ದಿನ ರೆಸಾರ್ಟ್‌ನಲ್ಲಿ ವಿಶ್ರಾಂತಿ

    ಸಿದ್ದರಾಮಯ್ಯ ಟೆನ್ಷನ್ ಫ್ರೀ – ಮೂರು ದಿನ ರೆಸಾರ್ಟ್‌ನಲ್ಲಿ ವಿಶ್ರಾಂತಿ

    ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪರಮಾಪ್ತ ಸಿಎಂ ಇಬ್ರಾಹಿಂ ಕಾಂಗ್ರೆಸ್ ತೊರೆಯುವ ಹಂತದಲ್ಲಿದ್ದಾರೆ. ಇಂತಹ ಸಂದರ್ಭದಲ್ಲೂ ಕರ್ನಾಟಕ ಕಾಂಗ್ರೆಸ್ ಮುಖಂಡ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲು ಮೈಸೂರಿಗೆ ತೆರಳಿದ್ದಾರೆ.

    ೩ ದಿನಗಳ ವಿಶ್ರಾಂತಿ ತೆಗೆದುಕೊಳ್ಳುವುದಾಗಿ ಸಿದ್ದರಾಮಯ್ಯ ಭಾನುವಾರ ಸಂಜೆ ಕಾರಾಪುರ ಲಾಡ್ಜ್ ರೆಸಾರ್ಟ್‌ಗೆ ತೆರಳಿದ್ದಾರೆ. ಅಲ್ಲಿಂದ ಅವರು ಸ್ವಲ್ಪ ಸಮಯಗಳ ಕಾಲ ವಿಶ್ರಾಂತಿ ಪಡೆದು ಕಬಿನಿ ಜಲಾಶಯ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೋಟ್ ಮೂಲಕ ಕಬಿನಿ ಹಿನ್ನೀರಿನಲ್ಲಿರುವ ಆರೆಂಜ್ ಕೌಂಟಿ ರೆಸಾರ್ಟ್‌ಗೆ ತೆರಳಿದ್ದಾರೆ. ಇದನ್ನೂ ಓದಿ: ಇಂದು ಜನ ಕೆಟ್ಟಿಲ್ಲ, ಲೀಡರ್‌ಗಳು ಕೆಟ್ಟಿದ್ದಾರೆ: ಬಸವರಾಜ ರಾಯರೆಡ್ಡಿ ಕಿಡಿ

    siddaramaiah

    ೩ ದಿನಗಳ ವಿಶ್ರಾಂತಿಯ ಸಮಯದಲ್ಲಿ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಭಾಗಿಯಾಗಿ ನಂತರ ಸಿದ್ದರಾಮಯ್ಯ ಫೆಬ್ರವರಿ ೨ ರಂದು ಬೆಂಗಳೂರಿಗೆ ಮರಳಲಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿ ಖರೀದಿಸಿಲ್ಲ – 3 ಕೋಟಿ ಮಾನನಷ್ಟ ಕೇಸ್‌ ಹಾಕ್ತೀನಿ ಎಂದ ಚನ್ನಣ್ಣನವರ್‌

  • ಯಶಸ್ವಿ ಜಂಬೂ ಸವಾರಿ ಮುಗಿಸಿ ರಿಲ್ಯಾಕ್ಸ್ ಮೂಡಿನಲ್ಲಿ ಗಜಪಡೆ

    ಯಶಸ್ವಿ ಜಂಬೂ ಸವಾರಿ ಮುಗಿಸಿ ರಿಲ್ಯಾಕ್ಸ್ ಮೂಡಿನಲ್ಲಿ ಗಜಪಡೆ

    ಮೈಸೂರು: ದಸರಾ ವೇಳೆ ಯಶಸ್ವಿಯಾಗಿ ಜಂಬೂ ಸವಾರಿ ಮುಗಿಸಿದ ಗಜ ಪಡೆಗಳು ಫುಲ್ ರೆಸ್ಟ್ ನಲ್ಲಿ ಇವೆ. ಮಾವುತರು, ಕಾವಾಡಿಗಳು ವಿಶ್ರಾಂತಿಯ ಮೊರೆ ಹೋಗಿದ್ದಾರೆ.

    ಗಜಪಡೆ ನಾಯಕ ಅರ್ಜುನ, ಬಲರಾಮ ಸಹಿತ ಎಲ್ಲಾ ಆನೆಗಳು ವಿಶ್ರಾಂತಿ ಪಡೆಯುತ್ತಿದ್ದು, ಆನೆಗಳಿಗೆ ಮಾವುತರು ಸ್ನಾನ ಮಾಡಿಸಿ, ಗಜಪಡೆಗಳ ಜೊತೆ ಮಾವುತರು, ಕಾವಾಡಿಗಳು ವಿಶ್ರಾಂತಿ ಪಡೆಯುತ್ತಿದ್ದಾರೆ. ಸದ್ಯ ವಿಶ್ರಾಂತಿಯಲ್ಲಿರುವ ಆನೆಗಳು ಗುರುವಾರ ಅಥವಾ ಶುಕ್ರವಾರ ಮತ್ತೆ ಅರಮನೆಯಿಂದ ಕಾಡಿಗೆ ತೆರಳಲಿದೆ. ಇದನ್ನೂ ಓದಿ:ಜಂಬೂಸವಾರಿ ವೇಳೆ ವಾಲಿದ ಅಂಬಾರಿ- ಕೈಸನ್ನೆ ಮಾಡಿದ ಪ್ರಮೋದಾದೇವಿ

    ಮಂಗಳವಾರ ನಡೆದ ಅದ್ಧೂರಿ ಜಂಬೂ ಸವಾರಿಯಲ್ಲಿ 750 ಕೆಜಿ ತೂಕದ ಅಂಬಾರಿಯಲ್ಲಿ ಚಾಮುಂಡಿದೇವಿಯನ್ನು ಹೊತ್ತುಕೊಂಡು ನಾಯಕ ಅರ್ಜುನ ಗಜಪಡೆ ಜೊತೆ ಹೆಜ್ಜೆ ಹಾಕಿ ದಸರಾವನ್ನು ಯಶಸ್ವಿಯಾಗಿದ್ದಾನೆ. ಅರಮನೆ ಉತ್ತರ ದ್ವಾರವಾದ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 2.09ಕ್ಕೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ಸಂಜೆ 4.17ರ ಶುಭ ಕುಂಬ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದರು. ಇದನ್ನೂ ಓದಿ:ಅರ್ಜುನನಿಗೆ ಇನ್ನೂ 10 ವರ್ಷ ಅಂಬಾರಿ ಹೊರುವ ತಾಕತ್ತಿದೆ- ಮಾವುತ ವಿನು

    ಜಂಬೂ ಸವಾರಿಯಲ್ಲಿ 8ನೇ ಬಾರಿಗೆ ಅರ್ಜುನ 750 ಕೆಜಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ಸಾಗಿದ್ದನು. ಈ ಜಂಬೂಸವಾರಿಯಲ್ಲಿ 39 ಸ್ತಬ್ಧ ಚಿತ್ರಗಳು, ವಿವಿಧ ಜಾನಪದ ಕಲಾತಂಡಗಳು, 100ಕ್ಕೂ ಹೆಚ್ಚು ಕಲಾ ತಂಡಗಳು, ಉತ್ತರ ಭಾರತದ ವಿವಿಧ ರಾಜ್ಯಗಳ 5 ಕಲಾ ತಂಡ, 1,675 ಕಲಾವಿದರು ಸೇರಿದಂತೆ ಒಟ್ಟು 2 ಸಾವಿರ ಮಂದಿ ಭಾಗಿಯಾಗಿದ್ದವು.

    ಸಂಜೆ 4.30ಕ್ಕೆ ಹೊರಟ ಅಂಬಾರಿ ಸಂಜೆ 7 ಗಂಟೆಗೆ ಬನ್ನಿ ಮಂಟಪ ತಲುಪಿ, ಇತ್ತ ರಾತ್ರಿ 7.30ಕ್ಕೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತಿನ ಕಾರ್ಯಕ್ರಮದಲ್ಲಿ ನೂರಾರು ಮಂದಿ ಪಂಜನ್ನು ಹಿಡಿದು ಸಾಹಸ ಪ್ರದರ್ಶಿಸಿದರು. ಈ ಪಂಜಿನ ಕವಾಯತಿನ ಬಳಿಕ ರಾತ್ರಿ 10 ಗಂಟೆಗೆ ಪಟಾಕಿ ಸಿಡಿಸೋ ಮೂಲಕ ದಸರಾ ಯಶಸ್ವಿ ತೆರೆಕಂಡಿದೆ.

    https://www.youtube.com/watch?v=xz6CgKrcUOs

  • ವಿಶ್ರಾಂತಿಗಾಗಿ ವಿದೇಶಕ್ಕೆ ಹಾರಿದ ಕುಮಾರಸ್ವಾಮಿ

    ವಿಶ್ರಾಂತಿಗಾಗಿ ವಿದೇಶಕ್ಕೆ ಹಾರಿದ ಕುಮಾರಸ್ವಾಮಿ

    ಬೆಂಗಳೂರು: ಮೈತ್ರಿ ಸರ್ಕಾರ ಪತನವಾದ ಬಳಿಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಬೇಸರಗೊಂಡಿದ್ದು, ಹೆಚ್ಚು ಸಮಯವನ್ನು ವಿಶ್ರಾಂತಿಯಲ್ಲೇ ಕಳೆಯುತ್ತಿದ್ದಾರೆ. ಇದೀಗ ವಿಶ್ರಾಂತಿಗಾಗಿಯೇ ಮಲೇಷ್ಯಾಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಎಲ್ಲ ಜಂಜಾಟಗಳನ್ನು ಬದಿಗೊತ್ತಿ ವಿದೇಶ ಪ್ರವಾಸಕ್ಕೆ ಎಚ್.ಡಿ.ಕುಮಾರಸ್ವಾಮಿ ತೆರಳಿದ್ದು, ನಿನ್ನೆ ತಡ ರಾತ್ರಿ ಇಬ್ಬರು ಆಪ್ತರೊಂದಿಗೆ ವಿಮಾನ ಹತ್ತಿದ್ದಾರೆ. ನಾಲ್ಕು ದಿನಗಳ ಕಾಲ ಮಲೇಷ್ಯಾದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.

    ಇತ್ತೀಚೆಗೆ ನೆರೆ ಪೀಡಿತ ಪ್ರದೇಶಗಳಲ್ಲಿ ಎಚ್‍ಡಿಕೆ ಪ್ರವಾಸ ಮಾಡಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದ್ದರು. ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಮಾತಿನ ಯುದ್ಧವೇ ನಡೆದಿತ್ತು, ಇಬ್ಬರು ನಾಯಕರು ಆರೋಪ, ಪ್ರತ್ಯಾರೋಪಗಳನ್ನು ಮಾಡಿದ್ದರು. ಇದೀಗ ಎಲ್ಲದರಿಂದ ವಿಶ್ರಾಂತಿ ಪಡೆಯಲು ಮಲೇಷ್ಯಾಗೆ ತೆರಳಿದ್ದಾರೆ.

    ಇತ್ತೀಚೆಗೆ ಎಚ್.ಡಿ.ದೇವೇಗೌಡ ಹಾಗೂ ಸಿದ್ದರಾಮಯ್ಯನವರ ನಡುವೆ ಮಹಾ ಯುದ್ಧವೇ ನಡೆದಿತ್ತು. ಇದಾದ ಬಳಿಕ ಇದು ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿಯವರ ಮಧ್ಯೆ ಪ್ರಾರಂಭವಾಯಿತು. ಇಬ್ಬರು ನಾಯಕರೂ ಸಹ ಆರೋಪ ಪ್ರತ್ಯಾರೋಪಗಳನ್ನು ಮಾಡುವ ಮೂಲಕ ನೇರ ಕದನಕ್ಕೆ ಇಳಿದಿದ್ದರು.

    ಆಂಗ್ಲ ಪತ್ರಿಕೆಗೆ ನೀಡಿದ ಸಂದರ್ಶನವೊಂದರಲ್ಲಿ ಎಚ್‍ಡಿಕೆ ಸಿದ್ದರಾಮಯ್ಯನವರ ಮೇಲೆ ವಾಗ್ದಾಳಿ ನಡೆಸಿ, ಮೈತ್ರಿ ಸರ್ಕಾರದಲ್ಲಿ ಸಿಎಂ ಅಲ್ಲ, `ಎಫ್‍ಡಿಎ (ಫಸ್ಟ್ ಡಿವಿಷನ್) ಕ್ಲರ್ಕ್’ ಆಗಿದ್ದೆ ಎಂದು ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ ವಿರುದ್ಧ ಹರಿಹಾಯ್ದಿದ್ದರು.

    ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯಗೆ ಜೆಡಿಎಸ್ಸೇ ಮೊದಲ ವೈರಿಯಾಗಿತ್ತು. ಮೈತ್ರಿ ಸರ್ಕಾರ ಇದ್ದಾಗ ಸಿದ್ದರಾಮಯ್ಯ ಅವರು ಖುಷಿ ಆಗಿರಲಿಲ್ಲ ಎಂದು ಎಚ್‍ಡಿಕೆ ಆರೋಪಿಸಿದ್ದರು.

    ಕುಮಾರಸ್ವಾಮಿಯಿಂದ ಕಾಂಗ್ರೆಸ್‍ಗೆ ತೊಂದರೆ ಅನ್ನೋದು ಸಿದ್ದರಾಮಯ್ಯ ವಾದವಾಗಿತ್ತು. ಆದರೆ ಪ್ರತಿನಿತ್ಯ ಸಿದ್ದರಾಮಯ್ಯರಿಂದ ಸರ್ಕಾರ ಅಸ್ಥಿರಗೊಳಿಸಲು ಯತ್ನ ನಡೆಯುತ್ತಿತ್ತು. ಸಿಎಂ ಆಗಿದ್ದಾಗ ನನ್ನ ನೈತಿಕತೆಯನ್ನು ಕುಗ್ಗಿಸಲು ಸಿದ್ದರಾಮಯ್ಯ ಯತ್ನಿಸುತ್ತಿದ್ದರು. ಸಿದ್ದರಾಮಯ್ಯ ಬೆಂಬಲಿಗರು ಸಿದ್ದರಾಮಯ್ಯರೇ ಮತ್ತೆ ಸಿಎಂ ಆಗಬೇಕು ಎಂದು ಹೇಳುತ್ತಲೇ ಇದ್ದರು. ಒಂದು ವೇಳೆ ಸಿದ್ದರಾಮಯ್ಯ ಸಿಎಂ ಆಗಿ ವಾಪಸ್ ಆದರೆ ಮಾತ್ರ ನಮ್ಮ ಬೆಂಬಲ ಎಂದು ಅತೃಪ್ತ ಶಾಸಕರು ಹೇಳಿದ್ದರು. ಅವರ ಮಾತಿನ ಅರ್ಥ ಏನು? ಅತೃಪ್ತರ ಶಾಸಕರನ್ನು ಸಿದ್ದರಾಮಯ್ಯ ನಿಯಂತ್ರಣದಲ್ಲಿಟ್ಟುಕೊಳ್ಳಬೇಕಿತ್ತು ತಾನೇ? ಆದರೆ ಸಿದ್ದರಾಮಯ್ಯ ಹಾಗೇ ಮಾಡಲಿಲ್ಲ ಎಂದು ಕಿಡಿಕಾರಿದ್ದರು.

    ಒಂದು ವೇಳೆ ಯಡಿಯೂರಪ್ಪ ಸರ್ಕಾರ ನಡೆಸಲು ವಿಫಲರಾಗಿ ಸರ್ಕಾರ ಪತನವಾದರೆ ಈಗ ವಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯ ತಾವು ಮತ್ತೆ ಸಿಎಂ ಆಗಬಹುದು ಎಂಬ ಲೆಕ್ಕಾಚಾರದಲ್ಲಿದ್ದಾರೆ. ಸಿದ್ದರಾಮಯ್ಯ ನಮ್ಮವರೇ ಆಗಿದ್ದು, ಅವರ ಬೆನ್ನಿಗೆ ನಾವು ಚೂರಿ ಇರಿದಿಲ್ಲ. ಜೆಡಿಎಸ್‍ನಲ್ಲಿದ್ದಾಗ ಡಿಸಿಎಂ ಆಗಿದ್ದ ಸಿದ್ದರಾಮಯ್ಯ ಪಕ್ಷಕ್ಕೆ ಪರ್ಯಾಯವಾಗಿ ಅಹಿಂದ ಸಂಘಟನೆ ನಡೆಸಿ ಜೆಡಿಎಸ್ ಬೆಳವಣಿಗೆಗೆ ಅಡ್ಡಿ ಆದರು. ಈ ಮೂಲಕ ಜೆಡಿಎಸ್‍ಗೆ ಮೋಸ ಮಾಡಿದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್‍ನಿಂದ ಅವರನ್ನು ಉಚ್ಛಾಟನೆ ಮಾಡಿದೆವು ಎಂದಿದ್ದಾರೆ.

    ನಾನು ಸಿಎಂ ಆಗಿದ್ದಾಗ ಕಾಂಗ್ರೆಸ್‍ನವರ ಒತ್ತಡದಲ್ಲಿ ಕೆಲಸ ಮಾಡಬೇಕಿತ್ತು. ಕಾಂಗ್ರೆಸ್ ನನ್ನ ಮೇಲೆ ಸವಾರಿ ಮಾಡಿತು. ವರ್ಗಾವಣೆಯಲ್ಲೂ ಅವರು ಹೇಳಿದ್ದನ್ನೇ ಮಾಡಬೇಕಿತ್ತು. ಡಿಸಿ ವರ್ಗಾವಣೆಯಲ್ಲೂ ನನಗೆ ಸ್ವಾತಂತ್ರ್ಯ ಇರಲಿಲ್ಲ. ವರ್ಗಾವಣೆ ನನ್ನ ವ್ಯಾಪ್ತಿಗೆ ಬಂದರೂ ನಾನು ಕಾಂಗ್ರೆಸ್‍ನವರು ಏನು ಹೇಳುತ್ತಾರೋ ಅದನ್ನೇ ಮಾಡಬೇಕಿತ್ತು, ಇವತ್ತು ಒಳ್ಳೆಯ ವ್ಯಕ್ತಿಗಳಿಗೆ ರಾಜಕೀಯ ಅಲ್ಲ. ನನ್ನ ರಾಜಕೀಯ ಭವಿಷ್ಯದ ಬಗ್ಗೆಯೇ ನನಗೆ ಗ್ಯಾರಂಟಿ ಇಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು.

  • ಮಾಜಿ ಸಿಎಂಗೆ ಮತ್ತೆ ಕಣ್ಣಿನ ಸೋಂಕು – ಪ್ರವಾಸ ಮೊಟಕುಗೊಳಿಸಿ ಬೆಂಗ್ಳೂರಿಗೆ ವಾಪಸ್

    ಮಾಜಿ ಸಿಎಂಗೆ ಮತ್ತೆ ಕಣ್ಣಿನ ಸೋಂಕು – ಪ್ರವಾಸ ಮೊಟಕುಗೊಳಿಸಿ ಬೆಂಗ್ಳೂರಿಗೆ ವಾಪಸ್

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಮೂರು ದಿನಗಳಿಂದ ಸ್ವಕ್ಷೇತ್ರ ಬದಾಮಿಯಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಆದರೆ ಅವರ ಕಣ್ಣಿಗೆ ಮತ್ತೆ ಸೋಂಕು ತಗುಲಿ ಪ್ರವಾಸವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

    ಸಿದ್ದರಾಮಯ್ಯ ಅವರಿಗೆ ಪ್ರವಾಸದ ಹಿನ್ನೆಲೆಯಲ್ಲಿ ಕಣ್ಣಿಗೆ ಸೋಂಕು ತಗುಲಿ ಬದಾಮಿಯಿಂದ ವಾಪಸ್ ಬಂದಿದ್ದಾರೆ. ಬುಧವಾರ ಮಧ್ಯರಾತ್ರಿ 12 ಗಂಟೆಗೆ ವೈದ್ಯರು ಕಣ್ಣು ಪರೀಕ್ಷೆ ಮಾಡಿದ್ದಾರೆ. ಆಗ ಎರಡು ದಿನಗಳ ಕಾಲ ಓಡಾಡದಂತೆ ವೈದ್ಯರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸವನ್ನು ಸಿದ್ದರಾಮಯ್ಯ ಅವರು ರದ್ದು ಮಾಡಿದ್ದಾರೆ.

    ಬುಧವಾರ ಬದಾಮಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಸಿದ್ದರಾಮಯ್ಯ ಅವರು, ಪ್ರವಾಹದಿಂದ ಅಂದಾಜು 1 ಲಕ್ಷ ಕೋಟಿ ರೂ. ನಷ್ಟವಾಗಿದೆ. ಆದರೆ ಸದ್ಯಕ್ಕೆ ನಾವು ಪ್ರವಾಹ ಪರಿಹಾರಕ್ಕೆ ಐದು ಸಾವಿರ ಕೋಟಿ ಕೊಡಿ ಎಂದು ಕೇಳಿದ್ದೇವೆ. ಆ ಮೇಲೆ ವರದಿ ಆಧಾರದ ಮೇಲೆ ಹೆಚ್ಚಿನ ಪರಿಹಾರ ಕೊಡಲಿ. ಕೇಂದ್ರ ಸರ್ಕಾರ ಕೊಡದಿದ್ದರೆ ರಾಜ್ಯ ಸರ್ಕಾರವಾದರೂ ಕೊಡಲಿ. ಪ್ರಧಾನಿ ಜೊತೆ ಸಿಎಂ ಯಡಿಯೂರಪ್ಪ ಅವರಿಗೆ ಮಾತನಾಡಲು ಧೈರ್ಯವಿಲ್ಲದಿದ್ದರೆ ನಮ್ಮನಾದರೂ ಕರೆದುಕೊಂಡು ಹೋಗಲಿ, ನಾವಾದರೂ ಮಾತನಾಡುತ್ತೇವೆ. ಜನರು ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಸ್ಪಂದಿಸದೇ ನಿರ್ಲಕ್ಷ್ಯ ಮಾಡಿದೆ, ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ. ಬಿಜೆಪಿ ಸರ್ಕಾರ ಪ್ರವಾಹ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ದೂರಿದ್ದರು.

  • ವಿಶ್ವಕಪ್‍ಗಾಗಿ ‘ನೋ ರೆಸ್ಟ್’ ಎಂದ ಹಾರ್ದಿಕ್ ಪಾಂಡ್ಯ

    ವಿಶ್ವಕಪ್‍ಗಾಗಿ ‘ನೋ ರೆಸ್ಟ್’ ಎಂದ ಹಾರ್ದಿಕ್ ಪಾಂಡ್ಯ

    ಮುಂಬೈ: ದೇಶದ ಪರ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಡಬೇಕೆಂಬುದು ಪ್ರತಿಯೊಬ್ಬ ಕ್ರಿಕೆಟ್ ಆಟಗಾರರನ ಜೀವನದ ಗುರಿಯಾಗಿರುತ್ತದೆ. ಸದ್ಯ ವಿಶ್ವಕಪ್ ಆಡುವ ಅವಕಾಶವನ್ನು ಪಡೆದಿರುವ ಟೀಂ ಇಂಡಿಯಾ ಆಲೌಂಡರ್ ಹಾರ್ದಿಕ್ ಪಾಂಡ್ಯ ಟೂರ್ನಿ ಇರುವುದರಿಂದ ವಿಶ್ರಾಂತಿ ಪಡೆಯುವುದಿಲ್ಲ ಎಂದಿದ್ದಾರೆ.

    ವಿಶ್ವಕಪ್ ಹಿನ್ನೆಲೆಯಲ್ಲಿ ಐಪಿಎಲ್ ಟೂರ್ನಿಯ ಬಳಿಕ ಆಟಗಾರರಿಗೆ ಯಾವುದೇ ತರಬೇತಿಯನ್ನ ಆರಂಭಿಸದ ಬಿಸಿಸಿಐ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿತ್ತು. ಈ ಹಿನ್ನೆಲೆ ನಾಯಕ ವಿರಾಟ್ ಕೊಹ್ಲಿ, ಉಪ ನಾಯಕ ರೋಹಿತ್ ಶರ್ಮಾ ಕುಟುಂಬದೊಂದಿಗೆ ಸಮಯ ಪ್ರವಾಸವನ್ನ ಕೈಗೊಂಡಿದ್ದರು. ಆದರೆ ಹಾರ್ದಿಕ್ ಪಾಂಡ್ಯ ಮಾತ್ರ ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಾ ನೋ ರೆಸ್ಟ್ ಎಂದಿದ್ದಾರೆ.

    ತಾವು ವರ್ಕೌಟ್ ಮಾಡುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಹಾರ್ದಿಕ್ ವಿಶ್ರಾಂತಿ ಪಡೆಯುವುದಕ್ಕಿಂತ ಫಿಟ್ನೆಸ್ ಮುಖ್ಯ ಎಂದಿದ್ದಾರೆ. ಹಾರ್ದಿಕ್ ಪೋಸ್ಟ್‍ಗೆ ನೆಟ್ಟಿಗರು ಫಿದಾ ಆಗಿದ್ದು, ವಿಶ್ವಕಪ್‍ಗೆ ಶುಭಕೋರಿ ಪ್ರತಿಕ್ರಿಯೆ ನೀಡಿದ್ದಾರೆ.

    ಕಾಫಿ ವಿಥ್ ಕರಣ್ ಶೋ ವಿವಾದ ಬಳಿಕ ಹಾರ್ದಿಕ್ ವರ್ತನೆಯಲ್ಲಿ ಸಾಕಷ್ಟು ಬದಲಾವಣೆ ಬಂದಿದೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಹಾರ್ದಿಕ್ ಮತ್ತಷ್ಟು ಫಿಟ್ ಆಗಲು ಪ್ರಯತ್ನಿಸುತ್ತಿದ್ದಾರೆ. ಈ ಬಾರಿಯ ವಿಶ್ವಕಪ್ ಗೆಲ್ಲುವ ಫೆವರಿಟ್ ತಂಡವಾಗಿ ಕಣಕ್ಕೆ ಇಳಿಯುತ್ತಿರುವ ಟೀಂ ಇಂಡಿಯಾ ಮೇ 22 ರಂದು ಇಂಗ್ಲೆಂಡ್‍ಗೆ ಪ್ರಯಾಣಿಸುವ ಸಾಧ್ಯತೆ ಇದೆ.