Tag: ವಿಶ್ವನಾಥ ದೇವಸ್ಥಾನ

  • ಕಾಶಿ ದೇವಸ್ಥಾನದಲ್ಲಿ ಅರ್ಚಕರ ಧಿರಿಸಿನಲ್ಲಿ ಪೊಲೀಸರು – ಅಖಿಲೇಶ್‌ ಕಿಡಿ

    ಕಾಶಿ ದೇವಸ್ಥಾನದಲ್ಲಿ ಅರ್ಚಕರ ಧಿರಿಸಿನಲ್ಲಿ ಪೊಲೀಸರು – ಅಖಿಲೇಶ್‌ ಕಿಡಿ

    ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) ಕಾಶಿ ವಿಶ್ವನಾಥ ದೇವಸ್ಥಾನದ (Kashi Vishwanth Temple) ಒಳಗಡೆ ಭಕ್ತರನ್ನು ನಿಯಂತ್ರಿಸಲು ಪೊಲೀಸರನ್ನು (Police) ಅರ್ಚಕರು ಧರಿಸುವ ಧೋತಿ, ಕುರ್ತಾ ಧಿರಿಸಿನಲ್ಲಿ ನಿಯೋಜಿಸಲಾಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ವಾರಣಾಸಿ ಪೊಲೀಸ್ ಕಮಿಷನರ್ ಮೋಹಿತ್ ಅಗರ್‌ವಾಲ್, ಭಕ್ತಾದಿಗಳು ಭಾರೀ ಸಂಖ್ಯೆಯಲ್ಲಿ ವಿಶ್ವನಾಥನ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ದೇವಾಲಯಕ್ಕೆ ಭೇಟಿ ನೀಡುವ ಸಮಯದಲ್ಲಿ ದೇವರನ್ನು ಚೆನ್ನಾಗಿ ವೀಕ್ಷಿಸಲು ಸಹಾಯ ಮಾಡಲು ಉಪಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.  ಇದನ್ನೂ ಓದಿ: ಕೋಡ್‌ವರ್ಡ್‌ ಸಹಾಯದಿಂದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಆರೋಪಿಗಳು ಅರೆಸ್ಟ್‌!

     

    ಭಕ್ತರು ತಮ್ಮ ದೇವಾಲಯದ ಭೇಟಿಯ ಸಮಯದಲ್ಲಿ ತಮ್ಮನ್ನು ತಳ್ಳುವ ಪೊಲೀಸ್ ಅಧಿಕಾರಿಗಳ ಬಗ್ಗೆ ಆಗಾಗ ದೂರು ನೀಡುತ್ತಾರೆ. ಆದರೆ ಭಕ್ತರು ಅರ್ಚಕರ ಮಾತನ್ನು ಕೇಳುತ್ತಾರೆ. ಅರ್ಚಕರ ಬಗ್ಗೆ ಗೌರವ ಇರುವ ಕಾರಣ ಪೊಲೀಸರಿಗೆ ಅರ್ಚಕರ ಧಿರಿಸನ್ನು ಧರಿಸುವಂತೆ ಹೇಳಿದ್ದೇವೆ ಎಂದು ಇಲಾಖೆಯ ನಿರ್ಧಾರವನ್ನು ಸಮರ್ಥಿಸಿಕೊಂಡರು. ಇದನ್ನೂ ಓದಿ: ದೀದಿ ಆಡಳಿತದ ಬಂಗಾಳ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗ: ರಾಮೇಶ್ವರಂ ಕೆಫೆ ಬಾಂಬರ್‌ ಅರೆಸ್ಟ್‌ ಬಗ್ಗೆ ಅಮಿತ್‌ ಮಾಳವಿಯ ಮಾತು

    ಪೋಲಿಸರನ್ನು ಅರ್ಚಕರಂತೆ ನಿಯೋಜಿಸಿದ್ದಕ್ಕೆ ಎಸ್‌ಪಿ ಅಧ್ಯಕ್ಷ, ಮಾಜಿ ಸಿಎಂ ಅಖಿಲೇಶ್ ಯಾದವ್ (Akhilesh Yadav) ಖಂಡಿಸಿದ್ದಾರೆ. ಅರ್ಚಕರಂತೆ ಪೊಲೀಸರು ಧಿರಿಸು ಧರಿಸುವಂತೆ ನಿಯಮ ಯಾವ ಪೊಲೀಸ್‌ ಕೈಪಿಡಿಯಲ್ಲಿದೆ? ಪುರೋಹಿತರ ವೇಷ ಧರಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು. ನಾಳೆ ಯಾವುದೇ ಪುಂಡರು ಇದರ ಲಾಭ ಪಡೆದು ಅಮಾಯಕ ಸಾರ್ವಜನಿಕರನ್ನು ಲೂಟಿ ಮಾಡಿದರೆ ಉತ್ತರ ಪ್ರದೇಶ ಸರ್ಕಾರ ಮತ್ತು ಆಡಳಿತ ಏನು ಉತ್ತರಿಸುತ್ತದೆ? ಇದು ಖಂಡನೀಯ ಎಂದು ಕಿಡಿಕಾರಿದ್ದಾರೆ.

     

  • ಕಾಶಿ ವಿಶ್ವನಾಥ ದೇವಾಲಯದ ಗರ್ಭಗುಡಿಯೊಳಗೆ ಮಾರಾಮಾರಿ

    ಕಾಶಿ ವಿಶ್ವನಾಥ ದೇವಾಲಯದ ಗರ್ಭಗುಡಿಯೊಳಗೆ ಮಾರಾಮಾರಿ

    ಲಕ್ನೋ: ಕಾಶಿ ವಿಶ್ವನಾಥ ದೇವಸ್ಥಾನದ ಗರ್ಭಗುಡಿಯೊಳಗೆ ಇಬ್ಬರು ಭಕ್ತರು ಹಾಗೂ ನಾಲ್ವರು ದೇಗುಲದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ನಡೆದಿದೆ.

    ಉತ್ತರಪ್ರದೇಶದ ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯದಲ್ಲಿ ಈ ಘಟನೆ ನಡೆದಿದೆ. ದೇವಾಲಯದ ಗರ್ಭಗುಡಿಯಲ್ಲಿ ಆರತಿ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಗಿತ್ತು. ಆ ಸಂದರ್ಭದಲ್ಲಿ ಬಂದ ಇಬ್ಬರು ಭಕ್ತರು ಕಾಶಿ ವಿಶ್ವನಾಥನ ದರ್ಶನಕ್ಕೆ ಅಲ್ಲಿದ್ದವರ ಬಳಿ ಒತ್ತಾಯಿಸಿದ್ದಾರೆ.

    ಅದಕ್ಕೆ ಅಲ್ಲಿದ್ದ ದೇವಾಲಯದ ಕಾರ್ಯಕರ್ತರು ಆರತಿ ನಡೆಯುತ್ತಿರುವಾಗ ಯಾರಿಗೂ ಪ್ರವೇಶವಿಲ್ಲ ಎಂದು ತಿಳಿಸಿದ್ದಾರೆ. ಇದೇ 2 ಗುಂಪುಗಳ ನಡುವೆ ನಡೆದ ವಾಗ್ವಾದವು ಮೀತಿ ಮೀರಿದ್ದು, ದೇವಾಲಯದ ಸೇವಕರು ಹಾಗೂ ಇಬ್ಬರು ಭಕ್ತರು ಕಾಶಿ ವಿಶ್ವನಾಥ ದೇವಾಲಯದ ಒಳಭಾಗದಲ್ಲಿ ಪರಸ್ಪರ ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದೆ.

    ಇದಾದ ಬಳಿಕ ಆ ಇಬ್ಬರು ಭಕ್ತರನ್ನು ದೇಗುಲ ಗರ್ಭಗುಡಿಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈ ಎಲ್ಲಾ ಘಟನೆಯೀ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ದೇವಾಲಯದ ಆಡಳಿತ ಮಂಡಳಿ ಘಟನೆ ಬಗ್ಗೆ ಮೌಲ್ಯಮಾಪನ ಮಾಡುವುದಾಗಿ ತಿಳಿಸಿದೆ.

    ಘಟನೆ ಕುರಿತು ಇಬ್ಬರು ಭಕ್ತರು ನಾಲ್ವರು ದೇವಾಲಯದ ಕಾರ್ಯಕರ್ತರು ಸೇರಿದಂತೆ 5 ಜನರ ಮೇಲೆ ಹಲ್ಲೆ ಮಾಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ದೆಹಲಿಗೂ ತಲುಪಿದ ಮಂಕಿಪಾಕ್ಸ್ – ವಿದೇಶ ಪ್ರಯಾಣದ ದಾಖಲೆಯೇ ಇಲ್ಲದ ವ್ಯಕ್ತಿಗೆ ಸೋಂಕು

    ಕೆಲ ದಿನಗಳ ಹಿಂದೆ ರಾಜ್ಯ ಪೊಲೀಸರು ಹಾಗೂ ದೇವಸ್ಥಾನದ ಸಿಬ್ಬಂದಿ ನಡುವೆ ದರ್ಶನಕ್ಕೆ ಸಂಬಂಧಿಸಿದಂತೆ ಇದೇ ರೀತಿ ವಾಗ್ವಾದ ನಡೆದಿತ್ತು. ಸಿಬ್ಬಂದಿ ಧರಣಿ ಕುಳಿತಿದ್ದು, ನಂತರ ಸಮಸ್ಯೆ ಬಗೆಹರಿದಿದೆ ಎನ್ನಲಾಗಿದೆ. ಇದನ್ನೂ ಓದಿ: ಪಾರ್ಕಿಂಗ್ ಕಿರಿಕಿರಿ ತಪ್ಪಿಸಲು ಕೋಟಿ ವೆಚ್ಚ- ಫ್ರೀಡಂಪಾರ್ಕ್ ಬಳಿ ಉದ್ಘಾಟನೆಗೂ ಮುನ್ನವೇ ಕಟ್ಟಡ ಸೋರಿಕೆ

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ಎಫೆಕ್ಟ್- ವಿಶ್ವನಾಥನಿಗೆ ಮಾಸ್ಕ್ ಹಾಕಿದ ಅರ್ಚಕರು

    ಕೊರೊನಾ ಎಫೆಕ್ಟ್- ವಿಶ್ವನಾಥನಿಗೆ ಮಾಸ್ಕ್ ಹಾಕಿದ ಅರ್ಚಕರು

    – ಭಕ್ತರಲ್ಲಿ ಜಾಗೃತಿ ಮೂಡಿಸಲು ಕ್ರಮ
    – ಮೂರ್ತಿ ಸ್ಪರ್ಶಿಸದಂತೆ ಭಕ್ತರಿಗೆ ಸೂಚನೆ

    ವಾರಾಣಸಿ: ಭಾರತಕ್ಕೆ ಕೊರೊನಾ ವೈರಸ್ ಒಕ್ಕರಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸರ್ಕಾರ ಸಲಹೆ ನೀಡುತ್ತಿದೆ. ಇದರ ಬೆನ್ನಲ್ಲೇ ವಾರಾಣಸಿಯಲ್ಲಿ ದೇವಸ್ಥಾನದ ಅರ್ಚಕರು ಶಿವಲಿಂಗಕ್ಕೆ ಮಾಸ್ಕ್ ಹಾಕಿ ಅಚ್ಚರಿ ಮೂಡಿಸಿದ್ದಾರೆ.

    ವಾರಾಣಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶ್ವನಾಥನಿಗೆ ಅಲ್ಲಿನ ಅರ್ಚಕರು ಮಾಸ್ಕ್ ಹಾಕಿದ್ದಾರೆ. ಅಲ್ಲದೆ ಯಾವುದೇ ಕಾರಣಕ್ಕೂ ಮೂರ್ತಿಯನ್ನು ಸ್ಪರ್ಶಿಸದಂತೆ ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಜ್ವರ, ಕೆಮ್ಮು ಇದ್ರೆ ತಿರುಪತಿಗೆ ಬರಲೇ ಬೇಡಿ- ಟಿಟಿಡಿ

    ದೇಶಾದ್ಯಂತ ಕೊರೊನಾ ವೈರಸ್ ಹರಡಿದ್ದು, ಈ ಬಗ್ಗೆ ಜಾಗೃತಿ ಮೂಡಿಸಲು ವಿಶ್ವನಾಥನಿಗೆ ಮಾಸ್ಕ್ ಹಾಕಿದ್ದೇವೆ. ಇದರಲ್ಲಿ ವಿಶೇಷವೇನಿಲ್ಲ ಚಳಿಗಾಲವಿದ್ದಾಗ ಹೇಗೆ ಬಟ್ಟೆ ಹಾಕುತ್ತೇವೆ, ಬಿಸಿಲಿನ ಸಂದರ್ಭದಲ್ಲಿ ಹೇಗೆ ಫ್ಯಾನ್, ಎಸಿ ಹಾಕುತ್ತೇವೋ ಹಾಗೇ ಇದೀಗ ವಿಶ್ವನಾಥನ ಮೂರ್ತಿಗೆ ಮಾಸ್ಕ್ ಹಾಕಿದ್ದೇವೆ ಅಷ್ಟೆ ಎಂದು ದೇವಸ್ಥಾನದ ಅರ್ಚಕ ಕೃಷ್ಣ ಆನಂದ್ ಪಾಂಡೆ ತಿಳಿಸಿದ್ದಾರೆ.

    ಕೊರೊನಾ ವೈರಸ್ ಹರಡುವುದನ್ನು ತಡೆಯುವ ಸಲುವಾಗಿ ಯಾವುದೇ ಕಾರಣಕ್ಕೂ ಮೂರ್ತಿಯನ್ನು ಸ್ಪರ್ಶಿಸಿ ನಮಸ್ಕರಿಸದಂತೆ ಭಕ್ತರಲ್ಲಿ ತಿಳಿಸಿದ್ದೇವೆ. ಯಾರೋ ಒಬ್ಬರು ಕೊರೊನಾ ಇರುವ ಭಕ್ತರು ಮೂರ್ತಿಯನ್ನು ಸ್ಪರ್ಶಿಸಿ, ಅದನ್ನು ಮತ್ತೊಬ್ಬರು ಮುಟ್ಟಿದರೆ ಅವರಿಗೂ ಹರಡುತ್ತದೆ. ಹೀಗಾಗಿ ಮೂರ್ತಿಯನ್ನು ಸ್ಪರ್ಶಿಸದಂತೆ ಮನವಿ ಮಾಡಿದ್ದೇವೆ ಎಂದು ಪಾಂಡೆ ವಿವರಿಸಿದ್ದಾರೆ.

    ಅಲ್ಲದೆ ಈ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಇಲ್ಲಿನ ಅರ್ಚಕರು ಮಾಸ್ಕ್ ಧರಿಸಿಯೇ ಪೂಜೆಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ದೇವಸ್ಥಾನಕ್ಕೆ ಬರುತ್ತಿದ್ದಾರೆ.