Tag: ವಿಶ್ವವಿದ್ಯಾಲಯ

  • ಐಸಿಸ್‌ ಪರ ಕೆಲಸ – ಅಲಿಗಢ ಮುಸ್ಲಿಂ ವಿವಿಯ 6 ವಿದ್ಯಾರ್ಥಿಗಳು ಅರೆಸ್ಟ್‌

    ಐಸಿಸ್‌ ಪರ ಕೆಲಸ – ಅಲಿಗಢ ಮುಸ್ಲಿಂ ವಿವಿಯ 6 ವಿದ್ಯಾರ್ಥಿಗಳು ಅರೆಸ್ಟ್‌

    ಲಕ್ನೋ: ಐಸಿಸ್‌ (ISIS) ಪರವಾಗಿ ಕೆಲಸ ಮಾಡುತ್ತಿದ್ದ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ (Aligarh Muslim University) ಆರು ವಿದ್ಯಾರ್ಥಿಗಳನ್ನು ಉತ್ತರ ಪ್ರದೇಶದ (Uttar Pradesh) ಭಯೋತ್ಪಾದನಾ ನಿಗ್ರಹ ದಳದ (ATS) ಪೊಲೀಸರು ಬಂಧಿಸಿದ್ದಾರೆ.

    ಆರು ವ್ಯಕ್ತಿಗಳನ್ನು ಬಂಧಿಸುವುದರೊಂದಿಗೆ ಅಲಿಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಭಯೋತ್ಪಾದಕ ಜಾಲವು ಬೆಳಕಿಗೆ ಬಂದಿದೆ. ಆರು ಮಂದಿಯಲ್ಲಿ ನಾಲ್ವರನ್ನು ರಕೀಬ್ ಇನಾಮ್, ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್ ಮತ್ತು ಮೊಹಮ್ಮದ್ ನಾಜಿಮ್ ಎಂದು ಗುರುತಿಸಲಾಗಿದೆ.  ಇದನ್ನೂ ಓದಿ: ಗಣಪತಿ, ಹಿಂದೂ ಧರ್ಮದ ಬಗ್ಗೆ ಅವಹೇಳನ: ಸಾಣೇಹಳ್ಳಿ ಶ್ರೀ ವಿರುದ್ಧ ಸಂಬರಗಿ ದೂರು

     

    ಎಲ್ಲಾ ಬಂಧಿತ ಆರೋಪಿಗಳು ಅಲಿಗಢ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಯೊಂದಿಗೆ (Student Union) ಸಂಬಂಧ ಹೊಂದಿದ್ದರು. ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳದ ಪ್ರಕಾರ ಬಂಧಿತ ಆರೋಪಿಗಳು ದೇಶದಲ್ಲಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದರು. ವಿದ್ಯಾರ್ಥಿ ಸಂಘದ ಸಭೆಗಳು ಐಸಿಸ್‌ನ ಹೊಸ ನೇಮಕಾತಿ ಸೆಲ್ ಆಗಿ ಮಾರ್ಪಟ್ಟಿವೆ ಎಂದು ಹೇಳಿಕೊಂಡಿದೆ.

    ಮೂಲಗಳ ಪ್ರಕಾರ, ಅಲಿಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಈಗ ಕೇಂದ್ರೀಯ ತನಿಖಾ ಸಂಸ್ಥೆಗಳ ನಿಗಾದಲ್ಲಿದ್ದಾರೆ. ಇದನ್ನೂ ಓದಿ: ಅಲಿಗಢ ನಗರದ ಹೆಸರು ಹರಿಗಢವಾಗಿ ಬದಲಾಗುತ್ತಾ?

     

    ಪುಣೆ ಇಸ್ಲಾಮಿಕ್ ಸ್ಟೇಟ್ ಮಾಡ್ಯೂಲ್ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿರುವ ರಿಜ್ವಾನ್ ಮತ್ತು ಶಹನವಾಜ್ ಅವರ ವಿಚಾರಣೆಯ ವೇಳೆ, ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿಗಳು ದೇಶವಿರೋಧಿ ಅಜೆಂಡಾವನ್ನು ಹರಡಲು ತೊಡಗಿರುವ ವಿಚಾರ ತಿಳಿದುಬಂದಿತ್ತು. ಇಬ್ಬರ ವಿಚಾರಣೆಯ ನಂತರ ಉತ್ತರ ಪ್ರದೇಶ ಎಟಿಎಸ್‌ ಆರು ವಿದ್ಯಾರ್ಥಿಗಳನ್ನು ಬಂಧಿಸಿದೆ.

  • 90 ಲಕ್ಷ ಕರೆಂಟ್ ಬಿಲ್, 50 ಲಕ್ಷ ಆಸ್ತಿ ತೆರಿಗೆ ಬಾಕಿ- ಆರ್ಥಿಕ ಸಂಕಷ್ಟದಲ್ಲಿದ್ಯಾ ಹಂಪಿ ಕನ್ನಡ ವಿವಿ?

    90 ಲಕ್ಷ ಕರೆಂಟ್ ಬಿಲ್, 50 ಲಕ್ಷ ಆಸ್ತಿ ತೆರಿಗೆ ಬಾಕಿ- ಆರ್ಥಿಕ ಸಂಕಷ್ಟದಲ್ಲಿದ್ಯಾ ಹಂಪಿ ಕನ್ನಡ ವಿವಿ?

    ಬಳ್ಳಾರಿ: ರಾಜ್ಯ ಸರ್ಕಾರ ಜನರಿಗೆ ಒಂದರ ಹಿಂದೆ ಒಂದು ಗ್ಯಾರಂಟಿ ನೀಡುವ ಮೂಲಕ ಜನರಿಗೆ ಸಹಾಯ ಸಹಕಾರ ಮಾಡುತ್ತಿದೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಈ ಗ್ಯಾರಂಟಿ ಹೊಡೆತದಿಂದಾಗಿ ಅದೆಷ್ಟೋ ಕಡೆ ಅಭಿವೃದ್ಧಿ ಕುಂಠಿತವಾಗುವುದರ ಜೊತೆ ವಿವಿಧ ಇಲಾಖೆಯ ಕಾರ್ಯಗಳು ಮತ್ತು ವಿಶ್ವವಿದ್ಯಾಲಯಗಳು ನಡೆಸುವುದೇ ಕಷ್ಟವಾಗಿದೆ. ಇದಕ್ಕೆ ಉದಾಹರಣೆ ಎನ್ನುವಂತೆ ಸಮರ್ಪಕ ಅನುದಾನ ಬಾರದ ಹಿನ್ನೆಲೆ ಕರೆಂಟ್ ಬಿಲ್, ಆಸ್ತಿ ತರಿಗೆ ಮತ್ತು ನೀರಿನ ಕರ ಕಟ್ಟಲಾಗದೇ ಹಂಪಿ ಕನ್ನಡ ವಿಶ್ವವಿದ್ಯಾಲಯ (Kannada  University Hampi) ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ.

    ಹೌದು, ಕನ್ನಡ ನಾಡು ನುಡಿ ಸಾಹಿತ್ಯವನ್ನು ಮತ್ತಷ್ಟು ಉನ್ನತ ಸ್ಥಾನಕ್ಕೇರಿಸಬೇಕೆಂದು ಹಂಪಿ ಕನ್ನಡ ವಿವಿಯನ್ನು ಕಳೆದ ಮೂವತ್ತು ವರ್ಷಗಳ ಹಿಂದೆ ಸ್ಥಾಪನೆ ಮಾಡಲಾಯಿತು. ನೂರಾರು ಎಕರೆ ವಿಸ್ತೀರ್ಣದಲ್ಲಿರೋ ಈ ವಿವಿ ಸಂಶೋಧನಾ ವಿದ್ಯಾರ್ಥಿಗಳಿಗೆ, ಬರಹಗಾರರಿಗೆ ಮತ್ತು ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವುದಕ್ಕೆ ಹೇಳಿ ಮಾಡಿಸಿದ ಸ್ಥಳವಾಗಿದೆ. ಆದರೆ ಇದೀಗ ಹಂಪಿ ವಿವಿ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ.  ಇದನ್ನೂ ಓದಿ: ರಾಜ್ಯದಲ್ಲಿಲ್ಲ ಕನ್ನಡ ಶಾಲೆಗಳಿಗೆ ಬೇಡಿಕೆ- ಕಾಫಿನಾಡಲ್ಲಿ ಒಂದೇ ವರ್ಷಕ್ಕೆ 21 ಶಾಲೆಗಳು ಬಂದ್

    ಪ್ರಸಕ್ತ ಸಾಲಿನಲ್ಲಿ 5 ಕೋಟಿ ಅನುದಾನದಲ್ಲಿ ಕೇವಲ 1.5 ಕೊಟಿ ಅನುದಾನ ಬಂದಿದೆ. ಇದರಿಂದಾಗಿ ಹಣಕಾಸಿನ ಮುಗ್ಗಟ್ಟು ತೀವ್ರವಾಗಿದೆ. ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಕರೆಂಟ್ ಬಿಲ್, ಆಸ್ತಿ ತೆರಿಗೆ ಹಾಗೂ ನೀರಿನ ಕರ ಪಾವತಿಸಲು ಹಣವಿಲ್ಲ. ಕರ ಬಾಕಿ ತುಂಬುವಂತೆ ಕಮಲಾಪುರದ ಪುರಸಭೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. 90 ಲಕ್ಷ ಕರೆಂಟ್ ಬಿಲ್, 50 ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ವಿವಿ ಬಿಲ್ ಕಟ್ಟಲಾಗದೇ ಪರದಾಡುತ್ತಿದೆ.

    ಕರ್ನಾಟಕದ 50ನೇ ವರ್ಷಾಚರಣೆ ಸಂಭ್ರಮಾಚರಣೆಯಲ್ಲಿ ಕನ್ನಡದ ಅಭಿವೃದ್ಧಿಗಾಗಿರುವ ಏಕೈಕ ವಿವಿ ಸಂಕಷ್ಟದಲ್ಲಿರೋದು ಕನ್ನಡಾಭಿಮಾನಿಗಳಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ಕರೆಂಟ್ ಬಿಲ್ ಪಾವತಿ ಮಾಡಲೇಬೇಕೆಂದು ಜೆಸ್ಕಾಂ ಇಲಾಖೆ ದುಂಬಾಲು ಬಿದ್ದ ಹಿನ್ನಲೆ 90 ಲಕ್ಷ ಬಾಕಿ ಹಣವನ್ನು ಪ್ರತಿ ತಿಂಗಳು 10 ಲಕ್ಷದಂತೆ ಕಟ್ಟಲು ವಿವಿ ಪ್ಲ್ಯಾನ್ ಮಾಡಿಕೊಂಡಿದೆ. ಈ ಮಧ್ಯೆ ಕನ್ನಡ ವಿವಿಗೆ 9.21 ಕೋಟಿ ಹೆಚ್ಚುವರಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಜಯನಗರ ಉಸ್ತುವಾರಿ ಸಚಿವ ಜಮೀರ್ ಪತ್ರ ಬರೆದಿದ್ದಾರೆ. ಈ ಮಧ್ಯೆ ನಾಡಿದ್ದು ಸಿಎಂ ಸಿದ್ದರಾಮಯ್ಯನವರು ಹಂಪಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮುಖ್ಯಮಂತ್ರಿಗಳಿಗೆ ಕನ್ನಡ ವಿಶ್ವವಿದ್ಯಾಲಯ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ವಿವರಿಸಲು ಆಡಳಿತ ಮಂಡಳಿ ಚಿಂತನೆ ನಡೆಸಿದೆ.

    ಕನ್ನಡನಾಡು ನುಡಿ ಜಲದ ವಿಚಾರದಲ್ಲಿ ರಾಜಿ ಆಗೋ ಪ್ರಶ್ನೆಯೇ ಇಲ್ಲ. ಕನ್ನಡವನ್ನು ಉಳಿಸಿ ಬೆಳೆದೋದು ನಮ್ಮೆಲ್ಲರ ಕತ್ರ್ಯವ್ಯ ಎನ್ನುತ್ತಿರೋ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಇದೀಗ ಕನ್ನಡಕ್ಕಾಗಿಯೇ ಇರುವ ಏಕೈಕ ವಿವಿಯನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕಿದೆ ಎನ್ನುವುದು ನಾಡಿನ ಎಲ್ಲ ಕನ್ನಡಾಭಿಮಾನಿಗಳ ಆಗ್ರಹವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KSOU ಕರ್ಮಕಾಂಡ: 500 ಸಿಬ್ಬಂದಿ ಜಾಗಕ್ಕೆ 1,300 ಸಿಬ್ಬಂದಿ ನೇಮಕ; ಆದಾಯ 86 ಕೋಟಿ, ಖರ್ಚು 263 ಕೋಟಿ

    KSOU ಕರ್ಮಕಾಂಡ: 500 ಸಿಬ್ಬಂದಿ ಜಾಗಕ್ಕೆ 1,300 ಸಿಬ್ಬಂದಿ ನೇಮಕ; ಆದಾಯ 86 ಕೋಟಿ, ಖರ್ಚು 263 ಕೋಟಿ

    ಮೈಸೂರು: ಇನ್ನೆರೆಡು ವರ್ಷಗಳಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮುಚ್ಚಿ ಹೋಗಲಿದೆಯೇ? ಎನ್ನುವ ಪ್ರಶ್ನೆ ಹುಟ್ಟುವಂತೆ ಮಾಡಿದೆ ವಿಶ್ವವಿದ್ಯಾಲಯದ 2023-24ರ ಆಯವ್ಯಯ.

    ಹೌದು. ವಿಶ್ವವಿದ್ಯಾಲಯಕ್ಕೆ ಇರುವುದು 86 ಕೋಟಿ ಆದಾಯ. ಆದ್ರೆ ವಿವಿ ಖರ್ಚು ಮಾಡುತ್ತಿರುವುದು 263 ಕೋಟಿ ರೂ. ಹೆಚ್ಚುವರಿಯಾಗಿ 177 ಕೋಟಿ ಖರ್ಚು ಮಾಡಿದೆ. ಸರ್ಕಾರದಿಂದ ವಿವಿಗೆ ಒಂದು ಪೈಸೆ ಅನುದಾನವೂ ಬರುವುದಿಲ್ಲ. ಆದ್ರೂ ಖರ್ಚು ಮಾತ್ರ ಆದಾಯಕ್ಕಿಂತ ಮೂರು ಪಟ್ಟು ಹೆಚ್ಚಿದೆ. ಇದನ್ನೂ  ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಸುದ್ದಿ ಪ್ರಸಾರವಾಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು

    ವಿವಿಯ ಖಾತೆಯಲ್ಲಿನ ಡೆಪಾಸಿಟ್ ಹಣವನ್ನೇ ತೆಗೆದು ಖರ್ಚು ಮಾಡಲು ವಿವಿಯ ಕುಲಪತಿ ಮುಂದಾಗಿದ್ದಾರೆ. ಇದೇ ರೀತಿ 2-3 ವರ್ಷ ಹಣ ವ್ಯಯ ಮಾಡಿದ್ರೆ ಸಂಪೂರ್ಣ ಹಣ ಬರಿದಾಗಲಿದೆ. ಈ ರೀತಿ ಹಣ ಬರಿದಾದ್ರೆ ವಿವಿಯ ನೌಕರರಿಗೂ ವೇತನ ನೀಡುವುದಕ್ಕೂ ಸಮಸ್ಯೆಯಾಗುವ ಸ್ಥಿತಿ ಎದುರಾಗಲಿದೆ. ಇದನ್ನೂ  ಓದಿ: ತಮಿಳುನಾಡಿಗೆ ಕಾವೇರಿ ನೀರು; ಇಂದು ಕೆಆರ್‌ಎಸ್ ಡ್ಯಾಂ ಮುತ್ತಿಗೆಗೆ ಅನ್ನದಾತರ ಕರೆ

    ರಾಜ್ಯ ಮುಕ್ತ ವಿವಿಯಲ್ಲಿ ಯುಜಿಸಿ ಹಾಗೂ ಸರ್ಕಾರದ ನಿಯಮಗಳಿಗೆ ಎಳ್ಳಷ್ಟು ಬೆಲೆಯೇ ಇಲ್ಲ. ಎಲ್ಲಾ ನಿಯಮಗಳನ್ನ ಗಾಳಿಗೆ ತೂರಿ ಅಕ್ರಮ ನೇಮಕಾತಿಯೂ ನಡೆದಿದೆ. ನಿಯಮಗಳ ಪ್ರಕಾರ 500 ಬೋಧಕೇತರ ಸಿಬ್ಬಂದಿಗೆ ಮಾತ್ರ ಅವಕಾಶವಿದೆ. ಆದರೆ ಮುಕ್ತ ವಿವಿಯಲ್ಲಿ 1,300ಕ್ಕೂ ಹೆಚ್ಚು ಮಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂಬ ಆರೋಪವಿದೆ. ವಿವಿಯ ಅಕ್ರಮದ ವಿರುದ್ಧ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪನ್ಯಾಸಕ ಡಾ.ಹೆಚ್.ಕೆ ಜಗದೀಶ್ ಬಾಬು ಈ ಮಾಹಿತಿ ನೀಡಿದ್ದಾರೆ.

    ಅಲ್ಲದೇ ಕಳೆದ ಮಾರ್ಚ್ ತಿಂಗಳಿನಲ್ಲಿ ಬಳ್ಳಾರಿಯ ಪ್ರಾದೇಶಿಕ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಪುಸ್ತಕ ಇಟ್ಟುಕೊಂಡೇ ಪರೀಕ್ಷೆ ಬರೆದಿದ್ದಾರೆ. ಇದರಿಂದ ಭ್ರಷ್ಟಾಚಾರ ನಡೆದಿದೆ ಎಂಬ ಅನುಮಾನವಿದೆ. ಇದನ್ನ ನಮ್ಮಲ್ಲೇ ತನಿಖೆ ಮಾಡಿ ಮುಚ್ಚಿಹಾಕುವುದು ಬೇಡ. ಈ ಹಿಂದೆಯೂ ಒಂದು ಕೆಎಸ್‌ಒಯು ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಲಾಗಿದೆ. ಅದೇ ರೀತಿ ಈ ಪ್ರಕರಣವನ್ನೂ ಉನ್ನತಮಟ್ಟದ ತನಿಖೆಗೆ ನೀಡಬೇಕು ಎಂದು ಜಗದೀಶ್ ಬಾಬು ಒತ್ತಾಯಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾನೂನು ವಿವಿಗೆ ಅಹಿಂಸಾ ಚೇತನ್ ಅತಿಥಿ : ಗೋ ಬ್ಯಾಕ್ ಎಚ್ಚರಿಕೆ ಕೊಟ್ಟ ಎಬಿವಿಪಿ

    ಕಾನೂನು ವಿವಿಗೆ ಅಹಿಂಸಾ ಚೇತನ್ ಅತಿಥಿ : ಗೋ ಬ್ಯಾಕ್ ಎಚ್ಚರಿಕೆ ಕೊಟ್ಟ ಎಬಿವಿಪಿ

    ಹುಬ್ಬಳ್ಳಿಯ (Hubli) ಕಾನೂನು ವಿಶ್ವವಿದ್ಯಾಲಯವು ಜೂನ್ 17 ರಂದು ಯುವಜನೋತ್ಸವವನ್ನು ಆಯೋಜನೆ ಮಾಡಿದೆ. ಈ ಕಾರ್ಯಕ್ರಮಕ್ಕೆ ನಟ, ಹೋರಾಟಗಾರ ಅಹಿಂಸಾ ಚೇತನ್ (Chetan Ahimsa) ಅವರನ್ನು ಅತಿಥಿಯನ್ನಾಗಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯ ಕಾನೂನು (Law) ವಿಶ್ವವಿದ್ಯಾಲಯದ ಕುಲಪತಿ ಸಿ. ಬಸವರಾಜ ಅವರು ಇದರ ಅಧ್ಯಕ್ಷತೆಯನ್ನು ವಹಿಸಿದ್ದರೆ, ಚೇತನ್ ಮುಖ್ಯ ಅತಿಥಿ. ಇದನ್ನು ಪ್ರಶ್ನಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ‘ಗೋ ಬ್ಯಾಕ್ ಚೇತನ್’ ಚಳವಳಿ (Protest) ಆರಂಭಿಸುವುದಾಗಿ ಎಚ್ಚರಿಸಿದ್ದಾರೆ.

    ಕಾನೂನು ಗೌರವ ಕೊಡದೇ ಇರುವಂತಹ ವ್ಯಕ್ತಿಯನ್ನು ಕಾನೂನು ವಿಶ್ವ ವಿದ್ಯಾಲಯಕ್ಕೆ (University) ಅತಿಥಿಯಾಗಿ ಕರೆಸುವುದು ಸೂಕ್ತವಲ್ಲ. ಕೂಡಲೇ ಅವರನ್ನು ಅತಿಥಿ ಯಾದಿಯಿಂದ ಕೈಬಿಡಬೇಕು. ಬಿಡದೇ ಇದ್ದರೆ ಹೋರಾಟ ಮಾಡುತ್ತೇವೆ ಎಂದು ಕುಲಪತಿಗೆ ಎಬಿವಿಪಿ ಮನವಿ ಸಲ್ಲಿಸಿದೆ. ಒಂದು ವೇಳೆ ಚೇತನ್ ಬಂದರೆ ‘ಗೋ ಬ್ಯಾಕ್’ ಚಳವಳಿಯನ್ನು ಮಾಡುತ್ತೇವೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:ಕನಕದಾಸನಾಗಿ ಕಂಗೊಳಿಸಲಿದ್ದಾರೆ ರಿಯಲ್‌ ಸ್ಟಾರ್‌ ಉಪೇಂದ್ರ

    ಈ ಕುರಿತಂತೆ ನಟ ಚೇತನ್ ತಮ್ಮ ಪ್ರತಿಕ್ರಿಯೆಯನ್ನು ಫೇಸ್ ಬುಕ್ ನಲ್ಲಿ ಬರೆದದ್ದು, ಸಮಾನತವಾದಿಗಳಾದ ನಮ್ಮನ್ನು ವಿಚಾರಗಳ ಯುದ್ಧ ಭೂಮಿಯಲ್ಲಿ  ಸಂಘ ಪರಿವಾರದವರಿಗೆ ಸೋಲಿಸಲು ಎಂದಿಗೂ ಸಾಧ್ಯವಿಲ್ಲದ ಕಾರಣ, ಅವರು ನಮ್ಮ ಧ್ವನಿಯನ್ನು ಮೌನಗೊಳಿಸಲು ಪ್ರಯತ್ನಿಸುತ್ತಾರೆ’ ಎಂದು ಬರೆದುಕೊಂಡಿದ್ದಾರೆ.

    ಎಬಿವಿಪಿ ಮನವಿಯನ್ನು ವಿಶ್ವವಿದ್ಯಾಲಯ ಸ್ವೀಕರಿಸಿದ್ದು, ಚೇತನ್ ಅವರನ್ನು ಕಾರ್ಯಕ್ರಮದಿಂದ ಕೈ ಬಿಡುತ್ತಾರಾ ಅಥವಾ ಚೇತನ್ ಅವರಿಗೆ ಮಣೆ ಹಾಕುತ್ತಾರಾ ಎಂದು ಕಾದ ನೋಡಬೇಕು. ಆದರೆ, ಈವರೆಗೂ ಈ ಕುರಿತಂತೆ ಕುಲಪತಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ವಿವಿ ಕ್ಯಾಂಪಸ್‌ನಲ್ಲೇ ಸ್ನೇಹಿತೆಯನ್ನು ಶೂಟ್ ಮಾಡಿ ಕೊಂದ ವಿದ್ಯಾರ್ಥಿ – ಬಳಿಕ ತಾನೂ ಆತ್ಮಹತ್ಯೆ

    ವಿವಿ ಕ್ಯಾಂಪಸ್‌ನಲ್ಲೇ ಸ್ನೇಹಿತೆಯನ್ನು ಶೂಟ್ ಮಾಡಿ ಕೊಂದ ವಿದ್ಯಾರ್ಥಿ – ಬಳಿಕ ತಾನೂ ಆತ್ಮಹತ್ಯೆ

    ಲಕ್ನೋ: ವಿಶ್ವವಿದ್ಯಾಲಯದಲ್ಲಿ (University) ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ (Student) ಕಾಲೇಜ್ ಕ್ಯಾಂಪಸ್‌ನಲ್ಲಿಯೇ (Campus) ತನ್ನ ಸ್ನೇಹಿತೆಯನ್ನು (Friend) ಗುಂಡಿಕ್ಕಿ ಕೊಂದಿದ್ದು ಮಾತ್ರವಲ್ಲದೇ ತನಗೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ನೋಯ್ಡಾದಲ್ಲಿ (Noida) ನಡೆದಿದೆ.

    ನೋಯ್ಡಾದ ಶಿವ ನಾಡರ್ ವಿಶ್ವವಿದ್ಯಾನಿಲಯದ (Shiv Nadar University) ಕ್ಯಾಂಪಸ್‌ನಲ್ಲಿ 3ನೇ ವರ್ಷದ ಸಮಾಜಶಾಸ್ತ್ರ ವಿದ್ಯಾರ್ಥಿ ಅನುಜ್ ತನ್ನ ಸ್ನೇಹಿತೆಯೊಂದಿಗೆ ಕ್ಯಾಂಪಸ್‌ನಲ್ಲಿರುವ ಡೈನಿಂಗ್ ಹಾಲ್‌ನ ಹೊರಗಡೆ ಜಗಳವಾಡಿದ್ದಾನೆ. ಬಳಿಕ ಆಕೆಯನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆಯ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅನುಜ್ ತನ್ನ ಸ್ನೇಹಿತೆಯೊಂದಿಗೆ ಮೊದಲಿಗೆ ಜಗಳವಾಡಿದ್ದಾನೆ. ಬಳಿಕ ತನ್ನ ಬಂದೂಕನ್ನು ಹೊರಗೆ ತೆಗೆದು ಆಕೆಯನ್ನು ಶೂಟ್ ಮಾಡಿದ್ದಾನೆ. ವಿದ್ಯಾರ್ಥಿನಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆಕೆ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಗನನ್ನು ಕೊಲೆಗೈದು ಅಪಘಾತವೆಂದು ಬಿಂಬಿಸಿದ ಪೋಷಕರು ಅರೆಸ್ಟ್

    ಈ ನಡುವೆ ಅನುಜ್ ತನ್ನ ಹಾಸ್ಟೆಲ್‌ನ ಕೋಣೆಗೆ ಹೋಗಿ ತನಗೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅನುಜ್ ಹಾಗೂ ವಿದ್ಯಾರ್ಥಿನಿ ಉತ್ತಮ ಸ್ನೇಹಿತರಾಗಿದ್ದು, ಕಳೆದ ಕೆಲವು ದಿನಗಳಿಂದ ಜಗಳವಾಡುತ್ತಿದ್ದರು ಎನ್ನಲಾಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲಾ ಆವರಣದಲ್ಲಿ ಯುವಕನ ಶವ ಪತ್ತೆ

  • ವಿದ್ಯುತ್ ಕಡಿತ : ಮಂದ ಬೆಳಕಿನಲ್ಲೇ ಭಾಷಣ ಮಾಡಿದ ರಾಷ್ಟ್ರಪತಿ ಮುರ್ಮು

    ವಿದ್ಯುತ್ ಕಡಿತ : ಮಂದ ಬೆಳಕಿನಲ್ಲೇ ಭಾಷಣ ಮಾಡಿದ ರಾಷ್ಟ್ರಪತಿ ಮುರ್ಮು

    ಭುವನೇಶ್ವರ್: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಭಾಷಣ ಮಾಡುತ್ತಿದ್ದಾಗ ವಿದ್ಯುತ್ ಕಡಿತಗೊಂಡ (Power Outage) ಘಟನೆ ಓಡಿಶಾದ (Odisha) ಬರಿಪಾದದ ಮಹಾರಾಜ ಶ್ರೀರಾಮಚಂದ್ರ ಭಂಜಾ ದೇವು ವಿಶ್ವವಿದ್ಯಾಲಯದಲ್ಲಿ ನಡೆದಿದೆ.

    ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಈ ಘಟನೆ ನಡೆದಿದೆ. ರಾಜ್ಯಪಾಲ ಗಣೇಶಿ ಲಾಲ್ ಸಭಿಕರನ್ನು ಉದ್ದೇಶಿಸಿ ಮಾತನಾಡಿದ್ದರು. ಇದಾದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡುತ್ತಿದ್ದರು. ಈ ವೇಳೆ ವಿದ್ಯುತ್ ಕಡಿತಗೊಂಡಿದೆ.

    ಇದರಿಂದಾಗಿ ವಿದ್ಯುತ್ ಕಡಿತದಿಂದಾಗಿ ರಾಷ್ಟ್ರಪತಿ ಮುರ್ಮು ಮಂದ ಬೆಳಕಿನಲ್ಲೇ ಭಾಷಣವನ್ನು ಮಾಡಬೇಕಾದ ಪರಿಸ್ಥಿತಿ ಉಂಟಾಯಿತು. ಘಟನೆಯಿಂದಾಗಿ ರಾಷ್ಟ್ರಪತಿಯ ಭದ್ರತಾ ಸಿಬ್ಬಂದಿಗೆ ವಿದ್ಯುತ್ ವೈಫಲ್ಯದಿಂದಾಗಿ 9 ನಿಮಿಷಗಳ ಕಾಲ ಭದ್ರತೆ ಒದಗಿಸಲು ಸಮಸ್ಯೆ ಎದುರಾಯಿತು. ಇದರಿಂದಾಗಿ ಓಡಿಶಾ ಸರ್ಕಾರ ಮುಜುಗರಕ್ಕೆ ಒಳಗಾಗಿದೆ. ಇದನ್ನೂ ಓದಿ: ಕರ್ನಾಟಕ ಚುನಾವಣೆ – ಡಿಜಿಟಲ್‌ ಮೀಡಿಯಾ ಹವಾ ಹೇಗಿದೆ?

    ಪ್ರಾಥಮಿಕ ತನಿಖೆಯ ಪ್ರಕಾರ ಕಾರ್ಯಕ್ರಮಕ್ಕೆ ಬ್ಯಾಕಪ್ ಜನರೆಟರ್‍ಗಳನ್ನು ಬಳಸಲಾಗಿತ್ತು. ಆದರೆ ಭಾಷಣ ಸಂದರ್ಭದಲ್ಲಿ ಕೆಲವು ತಾಂತ್ರಿಕ ತೊಂದರೆ ಉಂಟಾಗಿ ಈ ರೀತಿಯಾಗಿದೆ. ಸಂಪೂರ್ಣ ವೈಫಲ್ಯಕ್ಕಾಗಿ ವಿಶ್ವವಿದ್ಯಾನಿಲಯದ ಸಿಬ್ಬಂದಿಗೆ ಸಮನ್ಸ್ ನೀಡಲಾಗಿದೆ ಎಂದು ಮಯೂಭರ್ಂಜ್ ಕಲೆಕ್ಟರ್ ವಿನೀತ್ ಭಾರದ್ವಾಜ್ ಹೇಳಿದ್ದಾರೆ. ಇದನ್ನೂ ಓದಿ: Manipur Violence: ಧಗ ಧಗನೆ ಹೊತ್ತಿ ಉರಿಯುತ್ತಿದ್ದ ಮಣಿಪುರ ಸಹಜ ಸ್ಥಿತಿಗೆ – ಮೂರೇ ದಿನದಲ್ಲಿ 54 ಮಂದಿ ಸಾವು

  • ಡಾರ್ಕ್‌ನೆಟ್‌ ಬಳಸಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ- ರಣಾಂಗಣವಾದ ವಿವಿ ಕ್ಯಾಂಪಸ್

    ಡಾರ್ಕ್‌ನೆಟ್‌ ಬಳಸಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ- ರಣಾಂಗಣವಾದ ವಿವಿ ಕ್ಯಾಂಪಸ್

    ನವದೆಹಲಿ/ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತ ಬಿಬಿಸಿಯ ಸಾಕ್ಷ್ಯಚಿತ್ರ (BBC Documentary) ದೇಶದಲ್ಲೇ ಹೊಸ ವಿವಾದ ಹುಟ್ಟುಹಾಕಿದೆ. ಇಷ್ಟು ದಿನ ರಾಜಕೀಯ ಕೇಸರೆರಚಾಟಕ್ಕೆ ಸೀಮಿತವಾಗಿದ್ದ ಸಾಕ್ಷ್ಯಚಿತ್ರ ಈಗ ದೇಶದ ವಿಶ್ವವಿದ್ಯಾಲಯಗಳಲ್ಲಿ ಹೊಸ ಸಂಘರ್ಷ ಸೃಷ್ಟಿಸಿದೆ. ಸಿಎಎ (CAA), ಎನ್‌ಆರ್‌ಸಿ (NRC) ಬಳಿಕ ಕ್ಯಾಂಪಸ್ ಗಳಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನ ಮುಂದಿಟ್ಟುಕೊಂಡು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ಮಾಡಲಾರಂಭಿಸಿದ್ದಾರೆ.

    ಹೌದು. ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ಸಿದ್ಧಪಡಿಸಿರುವ ಸಾಕ್ಷ್ಯಚಿತ್ರ ದೇಶದಲ್ಲಿ ವಿಶ್ವವಿದ್ಯಾಲಯಗಳಲ್ಲಿ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಪ್ರಸಾರ ಮಾಡಲು ಕೇಂದ್ರ ಸರ್ಕಾರ ನಿರ್ಬಂಧ ಹೇರಿದ ಬೆನ್ನಲ್ಲೇ ವಿಶ್ವವಿದ್ಯಾಲಯಗಳಲ್ಲಿ ಅದನ್ನು ಪ್ರಸಾರ ಮಾಡಲು ವಿದ್ಯಾರ್ಥಿಗಳೇ ಪಟ್ಟು ಹಿಡಿದಿದ್ದಾರೆ. ತಾವೇ ಗುಂಪು ಕಟ್ಟಿಕೊಂಡು ಡಾರ್ಕ್ ನೆಟ್ (DarkNet) ಮೂಲಕ ಚಿತ್ರವನ್ನು ಕ್ಯಾಂಪಸ್ ನಲ್ಲಿ ಪ್ರಸಾರ ಮಾಡುವ ಪ್ರಯತ್ನ ಆರಂಭಿಸಿದ್ದಾರೆ.

    ಇತ್ತೀಚೆಗಷ್ಟೇ ದೆಹಲಿಯ ಜೆಎನ್‌ಯು (JNU) ಹಾಗೂ ಹೈದರಾಬಾದ್‌ನ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಚಿತ್ರ ಪ್ರದರ್ಶನ ಮಾಡುವ ಪ್ರಯತ್ನ ನಡೆದಿತ್ತು. ಈ ವೇಳೆ ಇದು ಸಂಘರ್ಷಕ್ಕೆ ಕಾರಣವಾಗಿತ್ತು. ಸೆಂಟ್ರಲ್ ವಿವಿಗಳಲ್ಲಿ ಗಲಭೆ ಸೃಷ್ಟಿಯಾದ್ರೆ, ಜೆಎನ್‌ಯು ಕ್ಯಾಂಪಸ್ ನಲ್ಲಿ ಕಲ್ಲು ತೂರಾಟಕ್ಕೆ ಕಾರಣವಾಗಿತ್ತು. ಈ ಎರಡು ವಿವಿಗಳಿಗೆ ಸಂಘರ್ಷ ಸೀಮಿತವಾಗಿದೆ ಎಂದು ಕೊಳ್ಳುತ್ತಿರುವಾಗಲೇ ದೇಶದ ಹಲವು ವಿವಿಗಳಲ್ಲಿ ಇಂತಹದೇ ಘಟನೆಗಳು ವರದಿಯಾಗುತ್ತಿವೆ.

    ಮೋದಿ ಸಾಕ್ಷ್ಯಚಿತ್ರ ಸಂಘರ್ಷ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಕ್ಯಾಂಪಸ್ ನಲ್ಲಿ ತಾರಕಕ್ಕೇರಿತ್ತು. ಚಿತ್ರವನ್ನು ಸಂಜೆ 6 ಗಂಟೆಗೆ ಕ್ಯಾಂಪಸ್ ನಲ್ಲಿ ಪ್ರದರ್ಶನ ಮಾಡುವುದಾಗಿ ವಿದ್ಯಾರ್ಥಿಗಳು ಘೋಷಣೆ ಮಾಡಿದರು. ಇದಕ್ಕೆ ವಿವಿ ಕುಲಪತಿಗಳು ವಿರೋಧ ವ್ಯಕ್ತಪಡಿಸಿದರು. ಅದಕ್ಕೆ ಜಗ್ಗದ ವಿದ್ಯಾರ್ಥಿಗಳು ಪ್ರದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ವಿದ್ಯಾರ್ಥಿಗಳ ವರ್ತನೆ ಕಂಡು ಕುಲಪತಿಗಳು ಪೊಲೀಸರಿಗೆ ದೂರು ನೀಡಿದರು. ಈ ಹಿನ್ನಲೆ ಕ್ಯಾಂಪಸ್ ಗೆ ಬಂದ ಪೊಲೀಸರು ಚಿತ್ರ ಪ್ರದರ್ಶನಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ 14 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಪೊಲೀಸರು ವಿದ್ಯಾರ್ಥಿಗಳನ್ನು ಬಂಧಿಸುತ್ತಿದ್ದಂತೆ ಪ್ರತಿಭಟನೆ ಭುಗಿಲೆದ್ದಿತು.

    ಇತ್ತ ಪಂಜಾಬ್ ವಿಶ್ವವಿದ್ಯಾಲಯಕ್ಕೂ ಸಾಕ್ಷ್ಯಚಿತ್ರದ ಬಿಸಿ ತಟ್ಟಿದೆ. ಕ್ಯಾಂಪಸ್ ನಲ್ಲಿ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುತ್ತಿತ್ತು. ಮಧ್ಯಪ್ರವೇಶ ಮಾಡಿದ ಪೊಲೀಸರೂ ಪ್ರದರ್ಶನವನ್ನು ತಡೆದು ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಕೇರಳದ ತಿರುವನಂತಪುರಂ ವಿವಿ, ಪಾಂಡಿಚೇರಿ ವಿವಿಯಲ್ಲೂ ಸಾಕ್ಷ್ಯಚಿತ್ರ ಪ್ರದರ್ಶನದ ವಿಫಲ ಪ್ರಯತ್ನಗಳು ನಡೆದಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇನ್ಮುಂದೆ ಕೇರಳ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗೆ 60 ದಿನ ಹೆರಿಗೆ ರಜೆ

    ಇನ್ಮುಂದೆ ಕೇರಳ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗೆ 60 ದಿನ ಹೆರಿಗೆ ರಜೆ

    ತಿರುವನಂತಪುರಂ: ಕೇರಳದಲ್ಲಿ (Kerala) ಮೊದಲ ಬಾರಿಗೆ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯವು 18 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಪದವಿ ವಿದ್ಯಾರ್ಥಿನಿಯರಿಗೆ 60 ದಿನಗಳ ಹೆರಿಗೆ ರಜೆ (Maternity Leave) ನೀಡಲು ನಿರ್ಧರಿಸಿದೆ.

    ಉಪ ಕುಲಪತಿ ಸಿ.ಟಿ. ಅರವಿಂದ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯ (University) ಪ್ರಕಟಿಸಿದ್ದು, ವಿದ್ಯಾರ್ಥಿನಿಯರು 60 ದಿನಗಳ ನಂತರ ಅವರು ಯಾವುದೇ ಅಡೆತಡೆಯಿಲ್ಲದೇ ಅಧ್ಯಯನವನ್ನು ಮುಂದುವರಿಸಬಹುದು ಎಂದು ತಿಳಿಸಿದೆ.

    ವಿಶ್ವವಿದ್ಯಾನಿಲಯದ ಪ್ರಕಾರ, ಮಾತೃತ್ವ ರಜೆಯನ್ನು ಹೆರಿಗೆಯ ಮೊದಲು ಅಥವಾ ನಂತರ ತೆಗೆದುಕೊಳ್ಳಬಹುದು. ಆದರೆ ಮೊದಲ ಅಥವಾ ಎರಡನೆಯ ಗರ್ಭಧಾರಣೆಗೆ ಮಾತ್ರ ಈ ರಜೆ ಅನ್ವಯಿಸಲಿದ್ದು, ಕೋರ್ಸ್ ಅವಧಿಯಲ್ಲಿ ಒಮ್ಮೆ ಮಾತ್ರ ಈ ರಜೆ ತೆಗೆದುಕೊಳ್ಳಬಹುದಾಗಿದೆ.

    ರಜೆಯ ಅವಧಿಯು ಸಾರ್ವಜನಿಕ ಮತ್ತು ಸಾಮಾನ್ಯ ರಜಾದಿನಗಳನ್ನು ಒಳಗೊಂಡಿದ್ದು, ಅದನ್ನು ಬೇರೆ ಯಾವುದೇ ರಜೆಯೊಂದಿಗೂ ಸೇರಿಸಲಾಗುವುದಿಲ್ಲ. ಇದರ ಜೊತೆಗೆ ಗರ್ಭಪಾತ, ಟ್ಯೂಬೆಕ್ಟಮಿ ಇತ್ಯಾದಿ ಪ್ರಕರಣಗಳಲ್ಲಿ 14 ದಿನಗಳ ರಜೆ ನೀಡಲಾಗುವುದು ಎಂದು ಮಾಹಿತಿ ನೀಡಿದೆ.

    ಮಾತೃತ್ವ ರಜೆಯಲ್ಲಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ, ಲ್ಯಾಬ್ ಮತ್ತು ವೈವಾ ಪರೀಕ್ಷೆಗಳಿದ್ದರೆ, ಸಂಸ್ಥೆ ಅಥವಾ ವಿಭಾಗದ ಮುಖ್ಯಸ್ಥರು ಇದಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು ಎಂದು ಹೇಳಿದೆ. ಇದನ್ನೂ ಓದಿ: ಫೆಬ್ರವರಿಯಲ್ಲಿ ಬಜೆಟ್ ಮಂಡನೆ: ಬೊಮ್ಮಾಯಿ

    ಮಾತೃತ್ವ ರಜೆ ಪಡೆಯುವ ವಿದ್ಯಾರ್ಥಿನಿಯರು ರಜೆ ಪ್ರಾರಂಭವಾಗುವ 3 ದಿನಗಳ ಮೊದಲು ಅರ್ಜಿಯನ್ನು ಸಲ್ಲಿಸಬೇಕು. ಇದರ ಜೊತೆಗೆ ನೋಂದಾಯಿತ ವೈದ್ಯರ ವೈದ್ಯಕೀಯ ಪ್ರಮಾಣಪತ್ರವನ್ನು ಒದಗಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಮೆಸ್ಕಾಂ ಕಚೇರಿಯಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಏಟು – ದಲಿತ ಸಂಘಟನೆಗಳ ಆಕ್ರೋಶ

    Live Tv
    [brid partner=56869869 player=32851 video=960834 autoplay=true]

  • ಹಿಜಬ್ ಸೂಚನೆ ಕಡೆಗಣನೆ, ಮಹಿಳೆಯರು ಮದುವೆಗೆ ಹೋಗುವ ಉಡುಪು ಧರಿಸುತ್ತಾರೆ: ತಾಲಿಬಾನ್ ಸಮರ್ಥನೆ

    ಹಿಜಬ್ ಸೂಚನೆ ಕಡೆಗಣನೆ, ಮಹಿಳೆಯರು ಮದುವೆಗೆ ಹೋಗುವ ಉಡುಪು ಧರಿಸುತ್ತಾರೆ: ತಾಲಿಬಾನ್ ಸಮರ್ಥನೆ

    ಕಾಬೂಲ್: ತಾಲಿಬಾನ್ (Taliban) ಸರ್ಕಾರ ಅಫ್ಘಾನಿಸ್ತಾನದಲ್ಲಿ (Afghanistan) ಮಹಿಳೆಯರ (Women) ವಿಶ್ವವಿದ್ಯಾಲಯ (University) ಶಿಕ್ಷಣವನ್ನು ನಿಷೇಧಿಸಿದ್ದು, ಜಾಗತಿಕವಾಗಿ ಟೀಕೆಗಳಿಗೆ ಗುರಿಯಾಗಿದೆ. ಇದೀಗ ತಾಲಿಬಾನ್ ಸರ್ಕಾರದ ಉನ್ನತ ಶಿಕ್ಷಣ ಸಚಿವರು ಮಹಿಳೆಯರನ್ನು ಶಿಕ್ಷಣದಿಂದ ದೂರವಿಡುವ ನಿರ್ಧಾರಕ್ಕೆ ಸಮರ್ಥನೆ ನೀಡಿದ್ದಾರೆ.

    ಮಹಿಳೆಯರ ಶಿಕ್ಷಣವನ್ನು ನಿಷೇಧಿಸುವ ವಿಚಾರದ ಬಗ್ಗೆ ಮೊದಲ ಬಾರಿ ಸಾರ್ವಜನಿಕವಾಗಿ ಮಾತನಾಡಿರುವ ತಾಲಿಬಾನ್ ಸಚಿವ ಮೊದಮ್ಮದ್ ನದೀಮ್, ವಿಶ್ವವಿದ್ಯಾಲಯಗಳಲ್ಲಿ ಹುಡುಗರು ಹಾಗೂ ಹುಡುಗಿಯರು ಜೊತೆಯಾಗಿ ಓದುವುದನ್ನು ತಪ್ಪಿಸುವ ಸಲುವಾಗಿ ಮಹಿಳೆಯರಿಗೆ ವಿಶ್ವವಿದ್ಯಾಲಯಗಳ ಶಿಕ್ಷಣವನ್ನು ನಿಷೇಧಿಸಲಾಗಿದೆ. ವಿಶ್ವವಿದ್ಯಾಲಯಗಳ ಕೆಲವು ವಿಚಾರಗಳು ಇಸ್ಲಾಂನ ತತ್ವಗಳನ್ನು ಉಲ್ಲಂಘಿಸುತ್ತವೆ. ಮುಂದಿನ ಸೂಚನೆ ಬರುವವರೆಗೂ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.

    ಹುಡುಗಿಯರು ವಿಶ್ವವಿದ್ಯಾಲಯಕ್ಕೆ ಹೋಗುವ ಸಂದರ್ಭ ಮದುವೆಗೆ ಹೋಗುವವರಂತೆ ಉಡುಪುಗಳನ್ನು ಧರಿಸಿಕೊಂಡು ಹೋಗುತ್ತಿದ್ದಾರೆ. ಅವರು ಕಟ್ಟುನಿಟ್ಟಾಗಿ ಹಿಜಬ್ ಧರಿಸುವ ಸೂಚನೆಯನ್ನೂ ಕಡೆಗಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ

    ವಿಶ್ವವಿದ್ಯಾಲಯಗಳ ಕೆಲವು ವಿಜ್ಞಾನ ವಿಷಯಗಳು ಮಹಿಳೆಯರ ಓದಿಗೆ ಸೂಕ್ತವಾಗಿಲ್ಲ. ಎಂಜಿನಿಯರಿಂಗ್, ಕೃಷಿ ಹಾಗೂ ಇತರ ಕೆಲವು ಕೋರ್ಸ್‌ಗಳು ವಿದ್ಯಾರ್ಥಿನಿಯರ ಘನತೆ, ಗೌರವ ಹಾಗೂ ಅಫ್ಘಾನ್ ಸಂಸ್ಕೃತಿಗೆ ಹೊಂದಿಕೆಯಾಗುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

    ತಾಲಿಬಾನ್‌ನ ನಿರ್ಧಾರವನ್ನು ಮುಸ್ಲಿಂ ಬಹುಸಂಖ್ಯಾತ ಸೌದಿ ಅರೇಬಿಯಾ, ಟರ್ಕಿ, ಕತಾರ್ ಸೇರಿದಂತೆ ಹಲವು ದೇಶಗಳಲ್ಲಿನ ಜನರು ವ್ಯಾಪಕವಾಗಿ ಖಂಡಿಸಿದ್ದಾರೆ. ಆದರೆ ಅಫ್ಘಾನಿಸ್ತಾನದ ಆಂತರಿಕ ವ್ಯವಹಾರಗಳಲ್ಲಿ ವಿದೇಶಿಗರು ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು ಎಂದು ನದೀಮ್ ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್ ಜೊತೆಗಿನ ಯುದ್ಧವನ್ನು ಶೀಘ್ರವೇ ನಿಲ್ಲಿಸುತ್ತೇವೆ: ಪುಟಿನ್

    ಸದ್ಯ ಮಹಿಳೆಯರಿಗೆ ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಈ ನಿರ್ಧಾರವನ್ನು ಪರಿಶೀಲಿಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಹಿಳೆಯರ ಶಿಕ್ಷಣಕ್ಕೆ ತಾಲಿಬಾನ್ ನಿಷೇಧ – ಪ್ರತಿಭಟನೆಗೆ ಪರೀಕ್ಷೆಯಿಂದಲೇ ಹೊರನಡೆದ ಅಫ್ಘನ್ ಯುವಕರು

    ಮಹಿಳೆಯರ ಶಿಕ್ಷಣಕ್ಕೆ ತಾಲಿಬಾನ್ ನಿಷೇಧ – ಪ್ರತಿಭಟನೆಗೆ ಪರೀಕ್ಷೆಯಿಂದಲೇ ಹೊರನಡೆದ ಅಫ್ಘನ್ ಯುವಕರು

    ಕಾಬೂಲ್: ವಿಶ್ವವಿದ್ಯಾಲಯಗಳಲ್ಲಿ (University) ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುವುದನ್ನು ನಿಷೇಧಿಸಿರುವ ತಾಲಿಬಾನ್ (Taliban) ನಡೆಯನ್ನು ಪ್ರತಿಭಟಿಸಲು ಅಫ್ಘಾನಿಸ್ತಾನದ (Afghanistan) ಯುವಕರು ಒಗ್ಗಟ್ಟಾಗಿ ಪರೀಕ್ಷೆಯಿಂದಲೇ (Exam) ಹೊರನಡೆದಿದ್ದಾರೆ.

    ನಂಗರ್‌ಹಾರ್ ಹಾಗೂ ಕಂದಹಾರ್‌ನಲ್ಲಿನ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು (Students) ಪರೀಕ್ಷೆಯಿಂದ ಹೊರನಡೆದಿದ್ದಾರೆ. ವಿದ್ಯಾರ್ಥಿಗಳು ತಾಲಿಬಾನ್ ಆದೇಶದ ವಿರುದ್ಧವಾಗಿ ಫಲಕಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ.

    ತಾಲಿಬಾನ್‌ನ ಉನ್ನತ ಶಿಕ್ಷಣ ಸಚಿವಾಲಯ ಮಹಿಳಾ ಹಕ್ಕುಗಳು ಮತ್ತು ಸ್ವಾತಂತ್ರ‍್ಯಗಳ ಮೇಲೆ ಇತ್ತೀಚೆಗೆ ದಬ್ಬಾಳಿಕೆಯನ್ನು ಹೆಚ್ಚಿಸುತ್ತಿದ್ದು, ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣದ ಮೇಲೆ ನಿಷೇಧವನ್ನು ಹೇರಿದೆ. ಇದು ಅಂತಾರಾಷ್ಟ್ರೀಯವಾಗಿ ಭಾರೀ ಟೀಕೆಗೆ ಕಾರಣವಾಗಿದೆ. ಇದನ್ನೂ ಓದಿ: ಸೌದಿ ಪರೀಕ್ಷಾ ಕೇಂದ್ರಗಳಲ್ಲಿ ಅಬಯಾ ಬ್ಯಾನ್

    ಕಳೆದ ವರ್ಷ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಇಸ್ಲಾಮಿಕ್ ಕಾನೂನಿನ ಕಟ್ಟುನಿಟ್ಟಿನ ಕ್ರಮಗಳನ್ನು ವ್ಯಾಪಕವಾಗಿ ಜಾರಿಗೆ ತಂದಿದೆ. ಪ್ರಾರಂಭದಲ್ಲಿ ಮಧ್ಯಮ ಹಾಗೂ ಪ್ರೌಢಶಾಲೆಯಿಂದ ಹುಡುಗಿಯರನ್ನು ನಿಷೇಧಿಸಲಾಗಿತ್ತು. ಬಳಿಕ ಉದ್ಯೋಗದಿಂದ ಮಹಿಳೆಯರನ್ನು ನಿರ್ಬಂಧಿಸಿಸಲಾಗಿತ್ತು

    ಸಾರ್ವಜನಿಕವಾಗಿ ಮಹಿಳೆಯರು ಅಡಿಯಿಂದ ಮುಡಿ ವರೆಗೆ ದೇಹವನ್ನು ಸಂಪೂರ್ಣವಾಗಿ ಮುಚ್ಚುವಂತೆ ಬಟ್ಟೆ ಧರಿಸಲು ಆದೇಶಿಸಿತ್ತು. ಬಳಿಕ ಮಹಿಳೆಯರನ್ನು ಪಾರ್ಕ್ ಹಾಗೂ ಜಿಮ್‌ಗಳಿಂದ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲದೇ ಮಹಿಳೆಯರು ತಮ್ಮೊಂದಿಗೆ ಪುರುಷ ಸಂಬಂಧಿ ಇಲ್ಲದೇ ಪ್ರಯಾಣಿಸುವಂತಿಲ್ಲ ಎಂದು ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಲೈಂಗಿಕತೆಯ ಒಪ್ಪಿಗೆ ವಯಸ್ಸನ್ನು ಕಡಿಮೆ ಮಾಡಲ್ಲ: ಕೇಂದ್ರ ಸರ್ಕಾರ

    Live Tv
    [brid partner=56869869 player=32851 video=960834 autoplay=true]