ಮನಿಲಾ: ಫಿಲಿಪೈನ್ಸ್ನ ರಾಜಧಾನಿ ಮನಿಲಾದ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ಭಾನುವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಗೆ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಕ್ವಿಜಾನ್ ಸಿಟಿ ಪೊಲೀಸ್ ಜಿಲ್ಲಾ ನಿರ್ದೇಶಕ ರೆಮುಸ್ ಮದೀನಾ ಈ ಕುರಿತು ಮಾಹಿತಿ ನೀಡಿದ್ದು, ಕ್ವಿಜಾನ್ ನಗರದ ಅಟೆನಿಯೊ ಡಿ ಮನಿಲಾ ವಿಶ್ವವಿದ್ಯಾಲಯದ ಗೇಟ್ ಬಳಿ ಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಈ ವೇಳೆ ಹಂತಕ ಗೇಟ್ ಬಳಿಯಿದ್ದ ವಾಚ್ಮ್ಯಾನ್ನನ್ನು ಕೊಂದು ಒಳಗೆ ಬಂದಿದ್ದಾನೆ. ವಿಶ್ವವಿದ್ಯಾಲಯದಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾನೆ. ವಿಷಯ ತಿಳಿದ ತಕ್ಷಣ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿಯೇ ಇರುತ್ತೆ: ರಾಜನಾಥ್ ಸಿಂಗ್
ಪ್ರಸ್ತುತ ಶೂಟರ್ ಕಾರನ್ನು ವಶಪಡಿಸಿಕೊಂಡಿದ್ದು, ಆತ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ. ಆದರೆ ಪೊಲೀಸರು ಅವನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಸಂತ್ರಸ್ತರಿಗೆ ಸಹಾಯ ಮಾಡಲು ರಾಷ್ಟ್ರೀಯ ತನಿಖಾ ಏಜೆಂಟರನ್ನು ಸಹ ಕ್ಷೇತ್ರಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.
ವಿಶ್ವವಿದ್ಯಾಲಯದ ಮುಖ್ಯಸ್ಥರು ಘಟನೆ ಕುರಿತು ಪ್ರತಿಕ್ರಿಯೆ ಕೊಟ್ಟಿದ್ದು, ಸುಪ್ರಿಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಅಲೆಕ್ಸಾಂಡರ್ ಗೆಸ್ಮುಂಡೊ ಅವರು ಭಾನುವಾರ ಮಧ್ಯಾಹ್ನ ಕಾನೂನು ಶಾಲೆಯ ಪದವಿ ಸಮಾರಂಭಕ್ಕೆ ಹಾಜರಾಗಬೇಕಿತ್ತು. ಆದರೆ ಗುಂಡಿನ ದಾಳಿ ನಡೆದ ಪರಿಣಾಮ ಕಾರ್ಯಕ್ರಮ ರದ್ದಾಯಿತು. ಪ್ರಸ್ತುತ ನಮ್ಮ ಕ್ಯಾಂಪಸ್ ಲಾಕ್ಡೌನ್ನಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯಕ್ಷಗಾನದ ಭಾಗವತಿಕೆ ಮೂಲಕ ರಾಷ್ಟ್ರಪತಿಗೆ ಸ್ವಾಗತ ಕೋರಿದ ಬಾಲೆ
ಸುಪ್ರೀಂ ಕೋರ್ಟ್ ವಕ್ತಾರ ಬ್ರಿಯಾನ್ ಹೊಸಾಕಾ ಈ ಕುರಿತು ಮಾತನಾಡಿದ್ದು, ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ ನಡೆಯುವ ಸಂದರ್ಭದಲ್ಲಿ ಗೆಸ್ಮುಂಡೊ ಅವರು ವಿಶ್ವವಿದ್ಯಾಲಯಕ್ಕೆ ಹೋಗುತ್ತಿದ್ದರು. ಆದರೆ ವಿಷಯ ತಿಳಿದ ತಕ್ಷಣ ಹಿಂತಿರುಗಲು ಸಲಹೆ ನೀಡಲಾಯಿತು ಎಂದು ವಿವರಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಕನ್ನಡದ ಹೆಸರಾಂತ ನಟ ಅನಂತ್ ನಾಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂವರು ಸಾಧಕರಿಗೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಿಸಿದೆ. ಸಿನಿಮಾ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಅನಂತ್ ನಾಗ್, ಹೆಸರಾಂತ ಶಹನಾಯಿ ವಾದಕ, ಬಿಸ್ಮಿಲ್ಲಾ ಖಾನ್ ಶಿಷ್ಯರಾದ ಎಸ್. ಬಲ್ಲೇಶ್ ಭಜಂತ್ರಿ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿರುವ ಶರತ್ ಶರ್ಮಾ ಈ ಸಾಲಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ. ನಿರಂಜನ ವಾನಳ್ಳಿ ತಿಳಿಸಿದ್ದಾರೆ.
ಕೋಲಾರದ ನಂದಿನಿ ಪ್ಯಾಲೇಸ್ ನಲ್ಲಿ ಈ ಗೌರವ ಪ್ರದಾನ ಸಮಾರಂಭವು ಇದೇ ಶುಕ್ರವಾರ ನಡೆಯಲಿದ್ದು, ಘಟಿಕೋತ್ಸವದ ಸಮಾರಂಭದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪದವಿ ನೀಡಿ ಗೌರವಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ ನಾರಾಯಣ ಸೇರಿದಂತೆ ಹಲವರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ:ರಾಮ್ ಗೋಪಾಲ್ ವರ್ಮಾ ‘ಲಡಕಿ’ ನೋಡಿ ಬೆಚ್ಚಿ ಬಿದ್ದರಂತೆ ಸೆನ್ಸಾರ್ ಟೀಮ್
ಇದೇ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ಮೊದಲ ಘಟಿಕೋತ್ಸವ ನಡೆಯಲಿದ್ದು, ವಿವಿಧ ವಿಷಯಗಳಲ್ಲಿ ರಾಂಕ್ ಪಡೆದಿರುವ 41 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಕೂಡ ನಡೆಯಲಿದೆ. ಇದು ಈ ವಿವಿಯ ಮೊದಲ ಘಟಿಕೋತ್ಸವವಾಗಿದೆ.
Live Tv
[brid partner=56869869 player=32851 video=960834 autoplay=true]
ಚಂಡೀಗಢ: ಶ್ರೀರಾಮನನ್ನು ಅವಹೇಳನ ಮಾಡಿದ ಆರೋಪದ ಮೇಲೆ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಸಹಾಯಕ ಪ್ರಾಧ್ಯಾಪಕಿಯನ್ನು ವಜಾಗೊಳಿಸಲಾಗಿದೆ.
ಪಂಜಾಬ್ನ ಜಂದರ್ನಲ್ಲಿ ಈ ಘಟನೆ ನಡೆದಿದೆ. ಗುಸಾರ್ಂಗ್ ಪ್ರೀತ್ ಕೌರ್ ವಜಾಗೊಂಡ ಸಹಾಯಕ ಪ್ರಾಧ್ಯಾಪಕಿ. ಶ್ರೀರಾಮನಿಗೆ ಅವಹೇಳನ ಮಾಡುವ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಜೊತೆಗೆ ಆಕೆಯನ್ನು ವಜಾಗೊಳಿಸುವಂತೆ ಒತ್ತಾಯಿಸಲಾಗಿತ್ತು.
ವೀಡಿಯೋದಲ್ಲಿ ಏನಿದೆ?: ಶ್ರೀರಾಮ ಒಳ್ಳೆಯ ವ್ಯಕ್ತಿಯಲ್ಲ. ರಾವಣ ಒಳ್ಳೆಯ ವ್ಯಕ್ತಿ. ರಾಮ ಒಬ್ಬ ಕುತಂತ್ರದ ವ್ಯಕ್ತಿ ಎಂದು ನಾನು ಕಂಡುಕೊಂಡಿದ್ದೇನೆ. ಸೀತೆಯನ್ನು ಬಲೆಗೆ ಬೀಳಿಸಲು ಎಲ್ಲಾ ಉಪಾಯ ಮಾಡಿದನು. ಅವನು ಸೀತೆಯನ್ನು ತೊಂದರೆಗೆ ಸಿಲುಕಿಸಿದನು ಮತ್ತು ರಾವಣನ ಮೇಲೆ ಎಲ್ಲಾ ದೋಷಗಳನ್ನು ಹಾಕಿದನು. ಇಡೀ ಜಗತ್ತು ರಾಮನನ್ನು ಪೂಜಿಸುತ್ತಿದೆ ಮತ್ತು ರಾವಣ ಕೆಟ್ಟ ವ್ಯಕ್ತಿ ಎಂದು ಹೇಳುತ್ತಿದೆ ಎಂದು ಹೇಳಿದ್ದಳು. ಇದನ್ನೂ ಓದಿ: ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು: ಡಾ.ಕೆ.ಸುಧಾಕರ್
ಈ ಬಗ್ಗೆ ವಿಶ್ವವಿದ್ಯಾಲಯ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಗುರ್ಸಾಂಗ್ ಪ್ರೀತ್ ನೀಡುವ ಹೇಳಿಕೆಗಳೆಲ್ಲವೂ ವೈಯಕ್ತಿಕವಾಗಿವೆ. ಇವು ಯಾವುದು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿಲ್ಲ. ನಾವು ಯಾವಾಗಲೂ ಜಾತ್ಯಾತೀತ ವಿಶ್ವವಿದ್ಯಾನಿಲಯವಾಗಿದ್ದೇವೆ. ಎಲ್ಲಾ ಧರ್ಮಗಳು ಮತ್ತು ನಂಬಿಕೆಯ ಜನರನ್ನು ಸಮಾನವಾಗಿ ಪ್ರೀತಿ ಮತ್ತು ಗೌರವದಿಂದ ನೋಡಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸೂರ್ಯ- ಚಂದ್ರ ಇರೋವರೆಗೂ ಸಂವಿಧಾನ ಬದಲಾವಣೆ ಅಸಾಧ್ಯ: ಆನಂದ್ ಸಿಂಗ್
ಧಾರವಾಡ: ವಿಶ್ವವಿದ್ಯಾಲಯಗಳಲ್ಲಿ ಕುಲಪತಿಗಳು ಮಾಡಿದ್ದೇ ದರ್ಬಾರ್ ಆಗಿದೆ. ಇಂಥದ್ದೇ ಒಂದು ಕಾಂಡ ಧಾರವಾಡದ ಕರ್ನಾಟಕ ವಿವಿಯಲ್ಲಿ ನಡೆದಿದೆ. ಈ ವಿವಿಯ ಕುಲಪತಿಗಳು ಇಲ್ಲಿಗೆ ಬಂದ ನಂತರ ಬೇಕಾಬಿಟ್ಟಿ ಬಿಲ್ ಹಚ್ಚಿ ಹಣ ಹೊಡೆಯುತ್ತಿರುವುದು ಬೆಳಕಿಗೆ ಬಂದಿದೆ.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ವಿರುದ್ಧ ದುಂದುವೆಚ್ಚ ಆರೋಪ ಕೇಳಿಬಂದಿದೆ. ಆರ್ಟಿಐ ಮಾಹಿತಿ ಪ್ರಕಾರ ಕುಲಪತಿ ಕೆ.ಬಿ ಗುಡಸಿ ಅಧಿಕಾರಕ್ಕೆ ಬಂದು ವರ್ಷವಾಗ್ತಿದೆ. ಅಷ್ಟರಲ್ಲೇ ಕರ್ನಾಟಕ ವಿವಿಯ ಬಂಗಲೆಗೂ ಶಿಫ್ಟ್ ಆಗಿದ್ದಾರೆ. ಆದರೆ ಅಲ್ಲಿಗೆ ಬಂದ್ಮೇಲೆ ಅವರು ಆ ಮನೆಗೆ 11 ಲಕ್ಷ ಖರ್ಚು ಮಾಡಿದ್ದಾರೆ. ಇದನು ಟೆಂಡರ್ ಕರೆಯದೇ ತುಂಡು ಗುತ್ತಿಗೆ ನೀಡಿದ್ದಾರೆ. ಕಾಮಗಾರಿಯಲ್ಲಿ ಕಿಟಕಿಯ ಕರ್ಟನ್, ಹೊಸ ಕಾಟು, ತಲೆದಿಂಬು ಸೇರಿ ಬರೋಬ್ಬರಿ 33 ಲಕ್ಷ ಖರ್ಚು ಮಾಡಿರುವುದಾಗಿ ಮಾಹಿತಿ ಸಿಕ್ಕಿದೆ. ಅದು ಹೇಗೆ ಎಂದು ಗೊತ್ತಾಗಬೇಕು. ಈ ಹಣದಲ್ಲಿ ಹೊಸ ಬಂಗಲೆಯನ್ನೇ ಕಟ್ಟಬಹುದಿತ್ತು ಎಂದು ಆರೋಪಿಸಲಾಗ್ತಿದೆ. ಇದನ್ನೂ ಓದಿ: ಕಲಬುರ್ಗಿ ಹತ್ಯೆ ಪ್ರಕರಣ – ಸಾಕ್ಷಿ ನುಡಿದ ಮಗಳು, ಪತ್ನಿ
ಈ ವಿಚಾರ ರಾಜ್ಯಪಾಲರ ಗಮನಕ್ಕೂ ತರಲಾಗಿದೆ. ಇನ್ನು ಈ ಹಿಂದೆ ಇದ್ದ ಕುಲಪತಿ ವಾಲಿಕಾರ್ 7 ಲಕ್ಷ ರೂಪಾಯಿನಷ್ಟು ಖರ್ಚು ಮಾಡಿದ್ದಾರೆ. ತದನಂತರ ಪ್ರಮೋದ್ ಗಾಯ್ ಇದ್ದಾಗಲೂ 9 ಲಕ್ಷ ಖರ್ಚು ಮಾಡಿದ್ದಾರೆ. ಈ ಲೆಕ್ಕದಂತೆಯೇ ಹೋದರೆ ಈ ಬಂಗಲೆಗೆ 10 ವರ್ಷಗಳಲ್ಲಿ 60 ಲಕ್ಷಕ್ಕೂ ಹೆಚ್ಚು ಖರ್ಚು ಮಾಡಲಾಗಿದೆ. ಆದರೆ ಸರ್ಕಾರದ ಉನ್ನತ ಶಿಕ್ಷಣ ಸಚಿವರಿಗೆ ಈ ಬಗ್ಗೆ ಕೇಳಿದರೆ, ನನ್ನ ವ್ಯಾಪ್ತಿಗೆ ಬರಲ್ಲ ಅಂತಾರೆ. 10 ಕೋಟಿ ಟೆಂಡರ್ ಮಾತ್ರ ಇವರಿಗೆ ಸಂಬಂಧ ಅಂತೆ.
ಒಟ್ಟಿನಲ್ಲಿ ಇಲ್ಲಿ ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂತಾಗಿದೆ. ಸರ್ಕಾರಕ್ಕೆ ಜನರ ದುಡ್ಡಿನ ಮೇಲೆ ಅಷ್ಟೇ ಕಾಳಜಿ ಇದ್ದರೆ, ಇಂಥವರಿಗೆ ಮೂಗುದಾರ ಹಾಕಬೇಕು. ಇಲ್ಲದಿದ್ದರೆ ಜನರ ದುಡ್ಡು ನೀರಿನಲ್ಲಿ ಹೋಮದಂತೆ ಖರ್ಚಾಗುವುದರಲ್ಲಿ ಅನುಮಾನ ಇಲ್ಲ.
ಕಾಬೂಲ್: ಅಫ್ಘಾನಿಸ್ತಾನದ 34 ಪ್ರಾಂತ್ಯಗಳ ಪೈಕಿ 6 ಪ್ರಾಂತ್ಯಗಳಲ್ಲಿ ಮಹಿಳಾ ವಿದ್ಯಾರ್ಥಿಗಳಿಗೆ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ತೆರೆಯಲಾಗಿದೆ ಎಂದು ತಾಲಿಬಾನ್ ಬುಧವಾರ ತಿಳಿಸಿದೆ.
ಕಳೆದ ವರ್ಷ ಆಗಸ್ಟ್ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನನ್ನು ವಶಪಡಿಸಿಕೊಂಡ ಬಳಿಕ ತಮ್ಮ ಆಳ್ವಿಕೆಯಲ್ಲಿ ದೇಶಾದ್ಯಂತ ಕಠಿಣ ಕ್ರಮಗಳನ್ನು ವಿಧಿಸುತ್ತಿದೆ. ಮುಖ್ಯವಾಗಿ ಹುಡುಗಿಯರನ್ನು ಶಿಕ್ಷಣದಿಂದ ಹಾಗೂ ಮಹಿಳೆಯರನ್ನು ಸಾರ್ವಜನಿಕ ಜೀವನ ಮತ್ತು ಕೆಲಸದಿಂದ ವಂಚಿಸುತ್ತಲೇ ಇದೆ. 1990ರ ಕಾಲದಲ್ಲೂ ಇದೇ ರೀತಿಯ ಸಂದರ್ಭ ಏರ್ಪಟ್ಟಿತ್ತು.
ತಾಲಿಬಾನ್ ವಿಧಿಸಿರುವ ನಿರ್ಬಂಧಗಳಲ್ಲಿ ಹೆಚ್ಚಿನವು ಮಹಿಳೆಯರ ಮೇಲೆ ಪ್ರಭಾವ ಬೀರುತ್ತದೆ. ಮಹಿಳೆಯರನ್ನು ಆರೋಗ್ಯ ಹಾಗೂ ಬೋಧನಾ ವಲಯಗಳನ್ನು ಹೊರತು ಪಡಿಸಿ ಇತರ ಉದ್ಯೋಗಗಳಿಂದ ನಿರ್ಬಂಧಿಸಿದೆ. ಹುಡುಗಿಯರು 6ನೇ ತರಗತಿಯ ಬಳಿಕ ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಮಹಿಳೆಯರಿಗೆ ಹಿಜಬ್ ಧರಿಸಲು ಒತ್ತಾಯಿಸುತ್ತಿದೆ. ಆದರೆ ಬುರ್ಖಾ ಹೇರಿಕೆಯ ಬಗ್ಗೆ ಸ್ವಲ್ಪ ವಿರಾಮ ದೊರಕಿದೆ. ಇದನ್ನೂ ಓದಿ: ತೈಲ ಖರೀದಿಸಲು ಶ್ರೀಲಂಕಾಗೆ 3 ಸಾವಿರ ಕೋಟಿ ಸಾಲ ನೀಡಿದ ಭಾರತ
ತಾಲಿಬಾನ್ ಸಂಸ್ಕೃತಿ ಹಾಗೂ ಮಾಹಿತಿ ಸಚಿವಾಲಯ ಬುಧವಾರ ತಿಳಿಸಿರುವ ಮಾಹಿತಿಯ ಪ್ರಕಾರ ನಂಗರ್ಹಾರ್, ಕಂದಹಾರ್, ಹೆಲ್ಮಂಡ್, ಫರಾಹ್, ನಿಮ್ರೋಜ್ ಹಾಗೂ ಲಗ್ಮನ್ ಪ್ರಾಂತ್ಯಗಳಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ಮಹಿಳೆಯರಿಗೂ ತೆರೆಯಲಾಗಿದೆ ಎಂದು ತಿಳಿಸಿದೆ.
ಅಫ್ಘಾನಿಸ್ತಾನದ ಈ ಆರು ಪ್ರಾಂತ್ಯಗಳು ಇತರ ಪ್ರದೇಶಗಳಿಗಿಂತ ಬೆಚ್ಚನೆಯ ಹವಾಮಾನ ಹೊಂದಿದೆ ಹೀಗಾಗಿ ಈ ಪ್ರಾಂತ್ಯಗಳಲ್ಲಿ ವಿಶ್ವವಿದ್ಯಾಲಯಗಳನ್ನು ಮತ್ತೆ ತೆರೆಯಲಾಗಿದೆ. ಪುರುಷರು ಬೆಳಗ್ಗೆ ಹಾಗೂ ಮಹಿಳೆಯರು ಮಧ್ಯಾಹ್ನ ತರಗತಿಗಳಿಗೆ ಹಾಜರಾಗಬಹುದು ಎಂದು ತಿಳಿಸಿದೆ. ಇದನ್ನೂ ಓದಿ: ಅಜ್ಮೀರ್ ದರ್ಗಾಕ್ಕೆ ಚಾದರ ಕಳಿಸಿಕೊಟ್ಟ ಪ್ರಧಾನಿ ಮೋದಿ
ಹೆಣ್ಣುಮಕ್ಕಳ ಶಿಕ್ಷಣವನ್ನು ನಿರಾಕರಿಸಿದ್ದಕ್ಕೆ ಭಾರೀ ಟೀಕೆಗೆ ಒಳಗಾಗಿದ್ದೇವೆ. ಅಫ್ಘಾನಿಸ್ತಾನದಲ್ಲಿ ಮಾರ್ಚ್ ಅಂತ್ಯದ ವೇಳೆ ಎಲ್ಲಾ ಹೆಣ್ಣು ಮಕ್ಕಳು ಶಾಲೆಗೆ ಮರಳಲಿದ್ದಾರೆ ಎಂದು ತಾಲಿಬಾನ್ ಭರವಸೆ ನೀಡಿದೆ.
ನವದೆಹಲಿ: ಕಾಲೇಜುಗಳಿಗೆ ಹಣವನ್ನು ಬಿಡುಗಡೆ ಮಾಡದಿದ್ರೆ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ದೆಹಲಿ ವಿಶ್ವವಿದ್ಯಾನಿಲಯ ಶಿಕ್ಷಕರ ಸಂಘ(ಡಿಯುಟಿಎ) ಸರ್ಕಾರಕ್ಕೆ ಬೆದರಿಕೆ ಹಾಕಿದೆ.
12 ವಿಶ್ವವಿದ್ಯಾಲಯಗಳಿಗೆ ಹಣವನ್ನು ಬಿಡುಗಡೆ ಮಾಡದಿರುವ ಕಾರಣ ಡಿಯುಟಿಎ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಬೆದರಿಕೆ ಹಾಕಿದೆ. ಕಾಲೇಜುಗಳ ಹಣ ಬಳಕೆಯನ್ನು ವಿಶ್ಲೇಷಿಸಲು ಸರ್ಕಾರವು ಸಮಿತಿಯನ್ನು ರಚಿಸಿರುವುದನ್ನು ಡಿಯುಟಿಎ ಪ್ರಶ್ನಿಸಿದೆ. ಇದನ್ನೂ ಓದಿ: ಸರ್ಕಾರ ಕೂಡಲೇ ಶಾಲೆ, ಕಾಲೇಜುಗಳಿಗೆ 15-20 ದಿನ ರಜೆ ಘೋಷಿಸಬೇಕು: ಹೆಚ್ಡಿಕೆ
ಸಮಿತಿ ರಚನೆ ಕುರಿತು ಪ್ರಶ್ನಿಸಿದ ಡಿಯುಟಿಎ ಅಧ್ಯಕ್ಷ ಎಕೆ ಭಾಗಿ, ಸಮಿತಿ ರಚನೆಯ ಉದ್ದೇಶವೇನು? ಆಮ್ ಆದ್ಮಿ ಪಕ್ಷದಿಂದ ಚುನಾಯಿತ ಸದಸ್ಯರನ್ನು ಹೊಂದಿರುವ ಆಡಳಿತ ಮಂಡಳಿಗಳು ಈಗಾಗಲೇ ಬಜೆಟ್ ಅನ್ನು ಅನುಮೋದಿಸಿದೆ. ಆದರೆ ಈ ಸಮಿತಿ ಅನುಮೋದಿಸಿದ ಬಜೆಟ್ಗಳನ್ನು ಮತ್ತೆ ಪರಿಶೀಲನೆ ನಡೆಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ದೆಹಲಿ ಸರ್ಕಾರ 12 ಕಾಲೇಜುಗಳ ಹಣದ ಬಳಕೆ ಮತ್ತು ನಿರ್ವಹಣೆಯನ್ನು ಪರಿಶೀಲಿಸಲು ಸೋಮವಾರ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಹಿನ್ನೆಲೆ ನಾವು ಇದರ ವಿರುದ್ಧ 6,000 ಶಿಕ್ಷಕರಿಂದ ಸಹಿಗಳನ್ನು ಸ್ವೀಕರಿಸಿದ್ದೇವೆ. ಈ ಕುರಿತು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಆನ್ಲೈನ್ ಅರ್ಜಿಯನ್ನು ಸಲ್ಲಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಕಿಟ್ಕ್ಯಾಟ್ ರ್ಯಾಪರ್ನಲ್ಲಿ ಲಾರ್ಡ್ ಪುರಿ ಜಗನ್ನಾಥ ಫೋಟೋ – ಪ್ಯಾಕ್ಗಳನ್ನು ಹಿಂತೆಗೆದುಕೊಂಡ ನೆಸ್ಲೆ ಇಂಡಿಯಾ
ನಮ್ಮ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಮತ್ತು ನಮ್ಮ ಹೋರಾಟವನ್ನು ತೀವ್ರಗೊಳಿಸುವ ಮಾರ್ಗಗಳ ಕುರಿತು ಚರ್ಚಿಸಲು ಶನಿವಾರ ಸಭೆ ಸೇರಲಿದ್ದೇವೆ. ಈ ಸಭೆ ಡಿಯುಟಿಎ ಕಾರ್ಯನಿರ್ವಾಹಕರ ನೇತೃತ್ವದಲ್ಲಿ ನಡೆಸಲಾಗುವುದು ಎಂದು ವಿವರಿಸಿದರು.
12 ಕಾಲೇಜುಗಳು ಹಣ ಬಿಡುಗಡೆಗೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಜೊತೆ ದೀರ್ಘಕಾಲದಿಂದ ಜಗಳ ನಡೆಯುತ್ತಿದೆ.
ಕಾಬೂಲ್: ಬಾಲಕಿಯರು ಮತ್ತು ಬಾಲಕರಿಗೆ ಶಾಲೆಗಳು ಹಾಗೂ ವಿಶ್ವವಿದ್ಯಾಲಯಗಳನ್ನು 2022ರ ಮಾರ್ಚ್ನಿಂದ ಮತ್ತೆ ತೆರೆಯಲಾಗುತ್ತದೆ ಎಂದು ತಾಲಿಬಾನ್ ತಿಳಿಸಿದೆ.
ಮಾಹಿತಿ ಮತ್ತು ಸಂಸ್ಕೃತಿಯ ಉಪಮಂತ್ರಿ ಮತ್ತು ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ನ ವಕ್ತಾರ ಜಬೀವುಲ್ಲಾ ಮುಜಾಹಿದ್ ಈ ಕುರಿತಂತೆ ಮಾತನಾಡಿ, ತಾಲಿಬಾನ್ ಶಿಕ್ಷಣದ ವಿರುದ್ಧವಲ್ಲ. ಆದರೆ ಹುಡುಗರು ಮತ್ತು ಹುಡುಗಿಯರಿಗೆ ಶಾಲೆಗಳಲ್ಲಿ ಪ್ರತ್ಯೇಕವಾಗಿ ತರಗತಿ ನಡೆಸಬೇಕು ಎಂದಿದ್ದಾರೆ. ಇದನ್ನೂ ಓದಿ: ಸಿಗರೇಟ್ನಿಂದ ಸುಟ್ಟು ಸಾಮೂಹಿಕ ಅತ್ಯಾಚಾರ- ಪತಿ, ಆತನ ಸ್ನೇಹಿತರು ಅರೆಸ್ಟ್
ಎರಡು ತಿಂಗಳಲ್ಲಿ ಉನ್ನತ ಶಾಲೆಗಳು ಮತ್ತು ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ಪುನಃ ತೆರೆಯಲು ಶಿಕ್ಷಣ ಸಚಿವಾಲಯ ಮತ್ತು ಉನ್ನತ ಶಿಕ್ಷಣ ಸಚಿವಾಲಯವು ಶ್ರಮಿಸುತ್ತಿದೆ. ಅನೇಕ ಪ್ರದೇಶಗಳಲ್ಲಿ ಪ್ರೌಢ ಶಾಲೆಗಳನ್ನು ಪುನಃ ತೆರೆಯಲಾಗಿದೆ ಮತ್ತು ಕೆಲವು ಭಾಗಗಳಲ್ಲಿ ಆರ್ಥಿಕ ಸಮಸ್ಯೆಗಳಿಂದ ಇನ್ನೂ ಶಾಲೆಯನ್ನು ಮುಚ್ಚಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಲ್ಯ ಮುಖಕ್ಕೆ ಕಟ್ಕೊಂಡಿನ್ರೀ ಮತ್ ಮಾಸ್ಕ್ ಯಾಕ್ ಹಾಕಬೇಕು: ವ್ಯಕ್ತಿಯ ಕಿರಿಕ್
ಹುಡುಗರು ಮತ್ತು ಹುಡುಗಿಯರಿಗೆ ಪ್ರತ್ಯೇಕವಾಗಿ ತರಗತಿಗಳನ್ನು ನಡೆಸಲಾಗುತ್ತದೆ ಮತ್ತು ಅಫ್ಘಾನಿಸ್ತಾನದ ಸುತ್ತಲೂ ಹೆಣ್ಣುಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್ಗಳನ್ನು ನಿರ್ಮಿಸುವ ಕೆಲಸಗಳು ನಡೆಯುತ್ತಿದೆ. ಅಫ್ಘಾನಿಸ್ತಾನದಾದ್ಯಂತ 150 ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗಿದ್ದು, 40 ಖಾಸಗಿ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಸಾರ್ವಜನಿಕ ಶಾಲೆಗಳಲ್ಲಿ ಹುಡುಗಿಯರಿಗೆ ಆರನೇ ತರಗತಿಯವರೆಗೂ ತರಗತಿಗೆ ಹಾಜರಾಗಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದಿದ್ದಾರೆ.
ಕಳೆದ ವರ್ಷ ಆಗಸ್ಟ್ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಅಫ್ಘಾನಿಸ್ತಾನದ ಹಲವೆಡೆ ಹೆಣ್ಣು ಮಕ್ಕಳಿಗೆ 7ನೇ ತರಗತಿಯ ನಂತರ ಶಾಲೆಗೆ ಹೋಗಲು ಅನುಮತಿ ನೀಡಲಾಗಿಲ್ಲ. ಅಲ್ಲದೇ ದೇಶದಲ್ಲಿ ಬಾಲಕಿಯರ ಶಾಲೆಗಳನ್ನು ಮುಚ್ಚುತ್ತಿರುವುದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಸುರಕ್ಷತೆ, ಮುನ್ನೆಚ್ಚರಿಕೆ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ವಿವಿ ಭದ್ರತಾ ಸಿಬ್ಬಂದಿಯಿಂದ ಗಸ್ತು ಸಂಜೆ 6 ರಿಂದ 9ರವರೆಗೆ ಗಸ್ತು ತಿರುಗಲು ವ್ಯವಸ್ಥೆ ಮಾಡಲಾಗಿದೆ. ಪೊಲೀಸರ ಮೌಖಿಕ ನಿರ್ದೇಶನದ ಮೇರೆಗೆ ಆದೇಶ ಹೊರಡಿಸಿದ್ದೇವೆ ಅಂತ ವಿವಿ ಹೇಳಿದೆ.
ಚೆನ್ನೈ: ಭಾರತದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ 100ಕ್ಕೂ ಹೆಚ್ಚು ಅಮೆರಿಕದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜು ಪ್ರತಿನಿಧಿಗಳೊಂದಿಗೆ ಮಾತನಾಡಲು ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಯುಎಸ್ಎ ಯುನಿವರ್ಸಿಟಿ ವರ್ಚುಯಲ್ ಫೇರ್ಸ್ ಆಯೋಜಿಸಿದೆ.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಅಮೆರಿಕ ವಿಶ್ವವಿದ್ಯಾಲಯಗಳಲ್ಲಿ ಕ್ಯಾಂಪಸ್ ಲೈಫ್, ಹಣಕಾಸು ನೆರವಿನ ಆಯ್ಕೆಗಳು, ಅರ್ಜಿ ಸಲ್ಲಿಸುವ ಪ್ರಕ್ರಿಯೆಗಳು ಮತ್ತು ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸುರಕ್ಷತೆಯ ಮುನ್ನೆಚ್ಚರಿಕೆಗಳ ಕುರಿತು ಮಾಹಿತಿ ಪಡೆಯಬಹುದು.
3 days to go! Don’t miss out on meeting U.S. Universities and attending one of the biggest U.S. University Virtual Fair happening in India, from the safety and comfort of your home! On Friday, August 27, 2021 from 5:30 – 10:30 PM IST. https://t.co/eCaXMUnKtK#EdUSAVirtualFairspic.twitter.com/Zef8FsyWc2
ಅಮೆರಿಕದ ಮೂಲೆ ಮೂಲೆಯಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಸ್ನಾತಕ, ಸ್ನಾತಕೋತ್ತರ ಮತ್ತು ಡಾಕ್ಟೊರಲ್ ಮಟ್ಟಗಳ ವಿಸ್ತಾರ ಶ್ರೇಣಿಯ ಶೈಕ್ಷಣಿಕ ಕಾರ್ಯಕ್ರಮಗಳ ವಿವರಗಳನ್ನು ನೀಡುತ್ತವೆ. ಭಾಗವಹಿಸಲು ಯಾವುದೇ ಯಾವುದೇ ನೋಂದಣಿ ಶುಲ್ಕವಿಲ್ಲ. ಇದನ್ನೂ ಓದಿ: ಕೋಲಾರದಲ್ಲಿ ಭಾರೀ ಮಳೆ- ಬೆಳೆಗಳು ಜಲಾವೃತ, ಸಂಕಷ್ಟದಲ್ಲಿ ರೈತರು
ಅಮೆರಿಕದಲ್ಲಿ ಮಾಸ್ಟರ್ಸ್ ಅಥವಾ ಪಿಎಚ್.ಡಿ. ಕಾರ್ಯಕ್ರಮಗಳಿಗೆ ಸೇರಲು ಬಯಸುವವರಿಗೆ ಎಜುಕೇಷನ್ ಯು.ಎಸ್.ಎ. ಯು.ಎಸ್. ಯೂನಿವರ್ಸಿಟಿ ಗ್ರಾಜುಯೇಟ್ ವರ್ಚುಯಲ್ ಫೇರ್ ಆಗಸ್ಟ್ 27ರಂದು ಶುಕ್ರವಾರ ಸಂಜೆ ಭಾರತೀಯ ಕಾಲಮಾನ 5:30ರಿಂದ ರಾತ್ರಿ 10:30ರವರೆಗೆ ನಡೆಯಲಿದೆ. ಆಸಕ್ತರು ಈ ವೆಬ್ ಸೈಟ್ ಮೂಲಕ ನೋಂದಾಯಿಸಿಕೊಳ್ಳಬಹುದು: www.educationusa.events/undergraduatefair
— U.S. Consulate General Chennai (@USAndChennai) August 24, 2021
ಅಮೆರಿಕದಲ್ಲಿ ಅಸೋಸಿಯೇಟ್ ಅಥವಾ ಬ್ಯಾಚುಲರ್ ಪದವಿ ಕಾರ್ಯಕ್ರಮಗಳನ್ನು ಬಯಸುವ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಎಜುಕೇಷನ್ ಯು.ಎಸ್.ಎ., ಯು.ಎಸ್. ಯೂನಿವರ್ಸಿಟಿ ಅಂಡರ್ ಗ್ರಾಜುಯೇಟ್ ವರ್ಚುಯಲ್ ಫೇರ್ ಅನ್ನು ಸೆಪ್ಟೆಂಬರ್ 3ರಂದು ಶುಕ್ರವಾರ ಭಾರತೀಯ ಕಾಲಮಾನ ಸಂಜೆ 5.30ರಿಂದ ರಾತ್ರಿ 10.30ರವರೆಗೆ ಆಯೋಜಿಸಿದೆ. ಇದನ್ನೂ ಓದಿ: ಅಘ್ಘಾನ್ ಪ್ರಜೆಗಳಲ್ಲಿ ಇ-ವೀಸಾವಿದ್ದರೆ ಮಾತ್ರ ಭಾರತ ಪ್ರವೇಶ
ಚೆನ್ನೈನ ಯು.ಎಸ್. ಕಾನ್ಸುಲ್ ಜನರಲ್ ಜ್ಯುಡಿತ್ ರೇವಿನ್ ಪ್ರತಿಕ್ರಿಯಿಸಿ, ಯು.ಎಸ್. ವಿಶ್ವವಿದ್ಯಾಲಯಗಳು ಭಾರತದ ವಿದ್ಯಾರ್ಥಿಗಳನ್ನು ಅವರ ಕಠಿಣ ಪರಿಶ್ರಮ, ಪ್ರತಿಭೆ ಮತ್ತು ಯು.ಎಸ್. ತರಗತಿಗೆ ಅವರ ಸಾಂಸ್ಕೃತಿಕ ಮತ್ತು ಬೌದ್ಧಿಕ ಕೊಡುಗೆಗಾಗಿ ನಿಜಕ್ಕೂ ಗೌರವಿಸುತ್ತವೆ. ಯುನೈಟೆಡ್ ಸ್ಟೇಟ್ಸ್ ನಲ್ಲಿ 4,500ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಕಲ್ಪಿಸಿಕೊಳ್ಳಬಲ್ಲ ಅಧ್ಯಯನ ಕ್ಷೇತ್ರದಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿವೆ ಎಂದರು.
ನಾವು ಭಾರತೀಯ ವಿದ್ಯಾರ್ಥಿಗಳನ್ನು ಮತ್ತು ಅವರ ಪೋಷಕರನ್ನು ನಮ್ಮ ಮುಂಬರುವ ಉಚಿತ ಎಜುಕೇಷನ್ ಯು.ಎಸ್.ಎ. ಫೇರ್ಸ್ ನಲ್ಲಿ ಭಾಗವಹಿಸಲು ಆಹ್ವಾನಿಸುತ್ತೇವೆ. ನೀವು ನೇರವಾಗಿ 100 ಯು.ಎಸ್.ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗೆ ಸಂವಹನ ನಡೆಸಬಹುದು ಮತ್ತು ಭಾರತೀಯ ವಿದ್ಯಾರ್ಥಿಗಳಿಗೆ ಏಕೆ ಯುನೈಟೆಡ್ ಸ್ಟೇಟ್ಸ್ ಆದ್ಯತೆಯ ಆಯ್ಕೆಯಾಗಿ ಉಳಿದಿದೆ ಎಂದು ಅರಿಯಬಹುದು ಎಂದು ತಿಳಿಸಿದರು.
ಯುನೈಟೆಡ್ ಸ್ಟೇಟ್ಸ್-ಇಂಡಿಯಾ ಎಜುಕೇಷನಲ್ ಫೌಂಡೇಷನ್ ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಡಂ ಗ್ರೊಸ್ಕಿ ಮಾತನಾಡಿ, ವಿಶ್ವದಾದ್ಯಂತ ಈ ಅಸಾಧಾರಣ ಸಮಯದಲ್ಲಿ ಎಜುಕೇಷನ್ ಯು.ಎಸ್.ಎ. ಇಂಡಿಯಾ ವಿದ್ಯಾರ್ಥಿಗಳಿಗೆ ಯು.ಎಸ್.ನ ಉನ್ನತ ಶಿಕ್ಷಣದ ಕುರಿತಾದ ಮಾಹಿತಿಯನ್ನು ನಮ್ಮ ಹಲವು ಆನ್ಲೈನ್ ಸಂಪನ್ಮೂಲಗಳಾದ ಮುಂದಿನ ವರ್ಚುಯಲ್ ಮೇಳಗಳ ಮೂಲಕ ದೊರೆಯುವಂತೆ ಮಾಡುತ್ತಿದೆ. ನಾವು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಯುನೈಟೆಡ್ ಸ್ಟೇಟ್ಸ್ ನಲ್ಲಿ ಅಧ್ಯಯನ ನಡೆಸುವ ಅವರ ಕನಸುಗಳಿಗೆ ಹತ್ತಿರವಾಗಬೇಕೆಂದು ಆಹ್ವಾನಿಸುತ್ತೇವೆ ಎಂದರು.
ಎಜುಕೇಷನ್ ಯುಎಸ್ಎ ಕುರಿತು
ಎಜುಕೇಷನ್ ಯು.ಎಸ್.ಎ, ಯು.ಎಸ್. ಉನ್ನತ ಶಿಕ್ಷಣದ ಅಧಿಕೃತ ಮೂಲವಾಗಿದೆ ಮತ್ತು ಯು.ಎಸ್. ಡಿಪಾರ್ಟ್ ಮೆಂಟ್ ಆಫ್ ಸ್ಟೇಟ್ ನ ಜಾಲದ ಸದಸ್ಯನಾಗಿದ್ದು ವಿಶ್ವದಾದ್ಯಂತ 425 ಅಂತಾರಾಷ್ಟ್ರೀಯ ವಿದ್ಯಾರ್ಥಿ ಸಲಹಾ ಕೇಂದ್ರಗಳನ್ನು ಹೊಂದಿದೆ. ಎಜುಕೇಷನ್ ಯು.ಎಸ್.ಎ. ಕೇಂದ್ರಗಳು ಶಿಕ್ಷಣ ಮೇಳಗಳು ಮತ್ತು ಶಾಲೆಗಳು, ಯೂನಿವರ್ಸಿಟಿಗಳು ಮತ್ತಿತರೆ ಸಾರ್ವಜನಿಕ ಕಾರ್ಯಕ್ರಮಗಳ ಮೂಲಕ ಆನ್ಲೈನ್ ಕಾರ್ಯಕ್ರಮ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಸಂಭವನೀಯ ವಿದ್ಯಾರ್ಥಿಗಳನ್ನು ತಲುಪುವ ಮೂಲಕ ಯುನೈಟೆಡ್ ಸ್ಟೇಟ್ಸ್ ನಲ್ಲಿ ಕಲಿಯುವ ಕುರಿತು ನಿಖರ, ಸಮಗ್ರ ಮತ್ತು ಪ್ರಸ್ತುತ ಮಾಹಿತಿ ನೀಡುತ್ತದೆ.
ಎಂಟು ಎಜುಕೇಷನ್ ಯು.ಎಸ್.ಎ ಕೇಂದ್ರಗಳು ಅಹಮದಾಬಾದ್, ಬೆಂಗಳೂರು, ಚೆನ್ನೈ, ಹೈದರಾಬಾದ್, ಕೊಲ್ಕತಾ, ಮತ್ತು ದೆಹಲಿಗಳಲ್ಲಿದ್ದು ಭಾರತದ ವಿವಿಧ ಸಂಸ್ಥೆಗಳಾದ ಯುನೈಟೆಡ್ ಸ್ಟೇಟ್ಸ್-ಇಂಡಿಯಾ ಎಜುಕೇಷನಲ್ ಫೌಂಡೇಷನ್(ಯು.ಎಸ್.ಐ.ಇ.ಎಫ್); ಇಂಡೋ ಅಮೆರಿಕನ್ ಎಜುಕೇಷನ್ ಸೊಸೈಟಿ, ಅಹಮದಾಬಾದ್; ಯಷ್ನ ಟ್ರಸ್ಟ್, ಬೆಂಗಳೂರು; ಮತ್ತು ವೈ-ಆಕ್ಸಿಸ್ ಫೌಂಡೇಷನ್(ವೈಎಎಫ್), ಹೈದರಾಬಾದ್ ಆಯೋಜಿಸುತ್ತವೆ.
ಹೆಚ್ಚಿನ ಮಾಹಿತಿಗೆ ಇ ಮೇಲ್ edusa@yashnatrust.org ಅಥವಾ 98800 41115 ಸಂಖ್ಯೆಗೆ ಕರೆ ಮಾಡಿ.
– ಮೇ 1ರಿಂದ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಲು ಸೂಚನೆ – ಜಾಗೃತಿ ಅಭಿಯಾನಕ್ಕೆ ನೇತೃತ್ವ ವಹಿಸಲು ವಿಸಿಗಳಿಗೆ ನಿರ್ದೇಶನ
ಬೆಂಗಳೂರು: ಕೋವಿಡ್ ಎರಡನೇ ಅಲೆಯನ್ನು ಕಟ್ಟಿಹಾಕುವ ಉದ್ದೇಶದಿಂದ ರಾಜ್ಯದ ಸರ್ಕಾರಿ ಮತ್ತು ಖಾಸಗಿ ವಲಯದ ಎಲ್ಲ 33 ವಿಶ್ವವಿದ್ಯಾಲಯಗಳಲ್ಲೂ ಕಠಿಣ ಕೋವಿಡ್ ನಿರ್ವಹಣಾ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ರಾಜ್ಯಪಾಲ ವಜೂಭಾಯ್ ವಾಲ ಹಾಗೂ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಕುಲಪತಿಗಳ ಸಮಾವೇಶ ನಡೆಸಿದರು.
ರಾಜಭವನದಲ್ಲಿ ಬುಧವಾರ ಸಂಜೆ ರಾಜ್ಯಪಾಲರು ಕರೆದಿದ್ದ ಸಮಾವೇಶದಲ್ಲಿ ವಿಶ್ವವಿದ್ಯಾಲಯಗಳು, ಅವುಗಳ ವ್ಯಾಪ್ತಿಯಲ್ಲಿರುವ ಕಾಲೇಜುಗಳು, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಲ್ಲ ಕುಲಪತಿಗಳಿಗೆ ಸೂಚಿಸಲಾಯಿತು.
ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು. ಆಯಾ ವಿಶ್ವವಿದ್ಯಾಲಯ ಹಾಗೂ ಅದರ ವ್ಯಾಪ್ತಿಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಲಸಿಕೆ ಪಡೆಯಬೇಕು. ವಿದ್ಯಾರ್ಥಿಗಳ ಮನವೊಲಿಕೆ ಸೇರಿ ಅದಕ್ಕೆ ಅಗತ್ಯವಾದ ಎಲ್ಲ ಕ್ರಮಗಳನ್ನೂ ಕುಲಪತಿಗಳು ಕೈಗೊಳ್ಳಬೇಕು ಎಂದು ರಾಜ್ಯಪಾಲರು ಮತ್ತು ಡಿಸಿಎಂ ಸೂಚಿಸಿದರು.
ನಿರ್ವಹಣಾ ಸಮಿತಿ ರಚಿಸಿಕೊಳ್ಳಿ: ಗವರ್ನರ್
ಪ್ರತಿಯೊಂದು ವಿವಿ ವ್ಯಾಪ್ತಿಯಲ್ಲಿ ಕುಲಪತಿ ನೇತೃತ್ವದಲ್ಲಿ ನಿರ್ವಹಣಾ ಸಮಿತಿ ರಚನೆ ಮಾಡಿಕೊಳ್ಳಿ. ಎರಡನೇ ಅಲೆ ತಡೆಯುವ ಬಗ್ಗೆ ವಿದ್ಯಾರ್ಥಿಗಳು ಮತ್ತು ಅವರ ಮೂಲಕ ಪೋಷಕರಿಗೂ ತಿಳಿವಳಿಕೆ ನೀಡಿ. ಎಲ್ಲರಿಗೂ ಲಸಿಕೆ ಕೊಡಿಸಿ. ಶೈಕ್ಷಣಿಕ ಚಟುವಟಿಕೆಗಳ ಸಾಧನೆಯ ಜತೆಗೆ ಕೋವಿಡ್ ಸಾಧನೆಯೂ ಮುಖ್ಯ. ಕೋವಿಡ್ ತಡೆಗಟ್ಟುವಲ್ಲಿ ವಿವಿಗಳ ಪಾತ್ರ ಮಹತ್ವದ್ದು ಎಂದು ರಾಜ್ಯಪಾಲರು ಒತ್ತಿ ಹೇಳಿದರು.
ಆಯಾ ವಿವಿ ಕಾರ್ಯವ್ಯಾಪ್ತಿಯ ಪ್ರದೇಶದಲ್ಲಿ ಕೋವಿಡ್ ಕುರಿತಾಗಿ ಯಾವುದೇ ಸಹಕಾರ ಬೇಕಿದ್ದರೂ ತಪ್ಪದೇ ಮಾಡಬೇಕು ಎಂದು ಕುಲಪತಿಗಳಿಗೆ ರಾಜ್ಯಪಾಲರು ನಿರ್ದೇಶನ ನೀಡಿದರು.
ರೋಗ ಲಕ್ಷಣಗಳಿದ್ದರೆ ಪರೀಕ್ಷೆ ಮಾಡಿಸಿ
ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಈಗ ಚಟುವಟಿಕೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳಲ್ಲಿ ಅಥವಾ ಸಿಬ್ಬಂದಿಯಲ್ಲಿ ಕೆಮ್ಮು, ಶೀತ, ಜ್ವರ ಇತ್ಯಾದಿ ರೋಗ ಲಕ್ಷಣ ಕಂಡುಬಂದ ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಉಪೇಕ್ಷೆ ಮಾಡಬಾರದು. ಒಂದು ವೇಳೆ ಪಾಸಿಟೀವ್ ರಿಸಲ್ಟ್ ಬಂದರೆ ತಕ್ಷಣದಿಂದಲೇ ಚಿಕಿತ್ಸೆ ಪಡೆಯಬೇಕು. ಈ ನಿಟ್ಟಿನಲ್ಲಿ ಕುಲಪತಿಗಳು, ಕುಲ ಸಚಿವರು ಹಾಗೂ ಸಿಬ್ಬಂದಿ ಕೆಲಸ ಮಾಡಬೇಕು ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಸಲಹೆ ಮಾಡಿದರು.
ಲಸಿಕೆ ಪಡೆಯುವಂತೆ ವಿದ್ಯಾರ್ಥಿಗಳನ್ನು ಪ್ರೇರೆಪಿಸಿ. ಆ ಮೂಲಕ ಅವರ ಪೋಷಕರನ್ನೂ ಮನವೊಲಿಸಿ. ಎಲ್ಲರಲ್ಲೂ ಜಾಗೃತಿ ಮೂಡಿಸಿ. ಆಯಾ ವಿವಿಗಳ ಸಾಮಾಜಿಕ ಜಾಲತಾಣಗಳ ಮೂಲಕ ಅರಿವು ಮೂಡಿಸಿ. ಇಡೀ ರಾಜ್ಯದಲ್ಲಿ ಆರು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಇವರ ಜತೆಗೆ ಅವರವರ ಪೋಷಕರು ಲಸಿಕೆ ಪಡೆದರೆ ಅದೇ ಒಂದು ದೊಡ್ಡ ಮೈಲುಗಲ್ಲು ಆಗುತ್ತದೆ ಎಂದು ಡಿಸಿಎಂ ಕುಲಪತಿಗಳಿಗೆ ತಿಳಿಸಿದರು.
ಆಯಾ ವಿವಿಗಳಲ್ಲಿ ಇರುವ ಎಲ್ಲ ಸೌಲಭ್ಯಗಳನ್ನು ಕೋವಿಡ್ ನಿರ್ವಹಣೆಗಾಗಿ ಬಳಸಿಕೊಳ್ಳಿ. ನಿಮ್ಮ ಸುತ್ತಮುತ್ತಲಿನ ಪ್ರದೇಶಗಳ ಜನರ ಸಂಕಷ್ಟಕ್ಕೆ ಸ್ಪಂದಿಸಿ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಸೇರಿದಂತೆ 33 ವಿವಿಗಳ ಕುಲಪತಿಗಳು ಸೇರಿದಂತೆ ಇನ್ನಿತರೆ ಉನ್ನತ ಪ್ರತಿನಿಧಿಗಳು ಇದ್ದರು.