Tag: ವಿಶ್ವೇಶ ತೀರ್ಥ ಸ್ವಾಮೀಜಿ

  • ಹೆಲಿಕಾಪ್ಟರ್‌‌ನಲ್ಲಿ ಬೆಂಗಳೂರಿನತ್ತ ಪೇಜಾವರ ಶ್ರೀ ಪಾರ್ಥಿವ ಶರೀರ

    ಹೆಲಿಕಾಪ್ಟರ್‌‌ನಲ್ಲಿ ಬೆಂಗಳೂರಿನತ್ತ ಪೇಜಾವರ ಶ್ರೀ ಪಾರ್ಥಿವ ಶರೀರ

    ಬೆಂಗಳೂರು: ಇಂದು ಕೃಷ್ಣೈಕ್ಯರಾದ ಪೇಜಾವರ ಶ್ರೀಗಳ ಪಾರ್ಥಿವ ಶರೀರವನ್ನು ಉಡುಪಿಯಿಂದ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತರಲಾಗುತ್ತಿದೆ.

    ಹರ್ನಿಯಾ ಆಪರೇಷನ್ ನಡೆದಾಗಲೇ ವಿದ್ಯಾಪೀಠದಲ್ಲಿ ನನ್ನ ಅಂತಿಮ ಕ್ರಿಯಾ ವಿಧಿವಿಧಾನ ನಡೆಯಬೇಕು ಎಂಬ ಕೊನೆಯ ಆಸೆಯನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉಡುಪಿಯ ಅಜ್ಜರಕಾಡು ಮೈದಾನದಿಂದ ಬೆಂಗಳೂರಿಗೆ ಪಾರ್ಥಿವ ಶರೀರವನ್ನು ತರಲಾಗುತ್ತಿದೆ.

    ಬಸವನಗುಡಿಯಲ್ಲಿರುವ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಈಗಾಗಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಸಂಬಂಧ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿಸಿ ಮೋಹನ್ ಪ್ರತಿಕ್ರಿಯಿಸಿ, ಸಂಜೆ 5 ಗಂಟೆಯವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ವಿದ್ಯಾಪೀಠಕ್ಕೆ ಪಾರ್ಥಿವ ಶರೀರ ತೆಗದುಕೊಂಡು ಹೋಗಲಾಗುತ್ತದೆ. ಸಂಜೆಯ ಬಳಿಕ ಅಂತಿಮ ವಿಧಿವಿಧಾನಗಳನ್ನು ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಹರ್ನಿಯಾ ಆಪರೇಷನ್ ನಡೆದಾಗಲೇ ಕೊನೆಯಾಸೆ ಬಿಚ್ಚಿಟ್ಟಿದ್ದ ಪೇಜಾವರ ಶ್ರೀ

    ವಿದ್ಯಾಪೀಠದಲ್ಲಿ ಅಂತಿಮ ಕ್ರಿಯಾ ವಿಧಿವಿಧಾನ ನಡೆಯಬೇಕು ಎಂದು ಪೇಜಾವರ ಶ್ರೀಗಳು ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದರು. ಲಿಖಿತ ರೂಪದಲ್ಲಿ ಬರೆದು ಆಗಾಗ ಕಿರಿಯ ಶ್ರೀಗಳಿಗೆ ಅದನ್ನು ತೋರಿಸುತ್ತಿದ್ದರು. ಜಾಗವನ್ನು ಕೂಡ ಸೂಚಿಸಿ, ಇಲ್ಲೇ ನನ್ನ ಬೃಂದಾವನ ಆಗಬೇಕು ಎಂದು ಶ್ರೀಗಳು ಬರೆದು ಕೊಟ್ಟಿದ್ದರು. ಕಳೆದ ಬಾರಿ ಹರ್ನಿಯಾ ಅಪರೇಷನ್‍ಗೆ ಒಳಗಾಗಿದ್ದ ಶ್ರೀಗಳು ತಮ್ಮ ಕೊನೆಯಾಸೆಯ ಬಗ್ಗೆ ತಿಳಿಸಿದ್ದರು ಎಂದು ಪಬ್ಲಿಕ್ ಟಿವಿಗೆ ರಘುಪತಿ ಭಟ್ ತಿಳಿಸಿದ್ದಾರೆ. ಇದನ್ನೂ ಓದಿ: 8ನೇ ವಯಸ್ಸಿನಲ್ಲಿ ದೀಕ್ಷೆ, ದಲಿತ ಪರ ಹೋರಾಟ, 5ನೇ ಬಾರಿ ಪರ್ಯಾಯ ಪೀಠ ಏರಿ ಸಾಧನೆ

    ಶ್ರೀಗಳ ಕೊನೆಯ ಆಸೆಯಂತೆ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಇಂದು ವೆಂಟಿಲೇಟರ್ ಸಹಿತ ಅಂಬುಲೆನ್ಸ್ ಮೂಲಕ ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠಕ್ಕೆ ಆಸ್ಪತ್ರೆಯಿಂದ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಅವರಿಗೆ 6 ಮಂದಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಠದಲ್ಲಿಯೇ ಶ್ರೀಗಳು ಕೃಷ್ಣನ ಪಾದ ಸೇರಿದ್ದಾರೆ. ಇದನ್ನೂ ಓದಿ; ಪೇಜಾವರ ಶ್ರೀಗಳು ಡಿ.23ರ ನಂತ್ರ ವಿದೇಶಕ್ಕೆ ಹೋಗ್ಬೇಡಿ ಅಂದಿದ್ರು: ಪುತ್ತಿಗೆ ಶ್ರೀಗಳು

  • ಹರ್ನಿಯಾ ಆಪರೇಷನ್ ನಡೆದಾಗಲೇ ಕೊನೆಯಾಸೆ ಬಿಚ್ಚಿಟ್ಟಿದ್ದ ಪೇಜಾವರ ಶ್ರೀ

    ಹರ್ನಿಯಾ ಆಪರೇಷನ್ ನಡೆದಾಗಲೇ ಕೊನೆಯಾಸೆ ಬಿಚ್ಚಿಟ್ಟಿದ್ದ ಪೇಜಾವರ ಶ್ರೀ

    ಬೆಂಗಳೂರು: ಹರ್ನಿಯಾ ಆಪರೇಷನ್ ನಡೆದಾಗಲೇ ಪೇಜಾವರ ಶ್ರೀಗಳು ತಮ್ಮ ಕೊನೆಯಾಸೆ ಬಿಚ್ಚಿಟ್ಟಿದ್ದರು. ಲಿಖಿತ ರೂಪದಲ್ಲಿ ಕೊನೆಯಾಸೆಯನ್ನು ಶ್ರೀಗಳು ಬರೆದುಕೊಟ್ಟಿದ್ದರು.

    ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತಿಮ ಕ್ರಿಯಾ ವಿಧಿವಿಧಾನ ನಡೆಯಬೇಕು ಎಂದು ಪೇಜಾವರ ಶ್ರೀಗಳು ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದರು. ಲಿಖಿತ ರೂಪದಲ್ಲಿ ಬರೆದು ಆಗಾಗ ಕಿರಿಯ ಶ್ರೀಗಳಿಗೆ ಅದನ್ನು ತೋರಿಸುತ್ತಿದ್ದರು. ಜಾಗವನ್ನು ಕೂಡ ಸೂಚಿಸಿ, ಇಲ್ಲೇ ನನ್ನ ಬೃಂದಾವನ ಆಗಬೇಕು ಎಂದು ಶ್ರೀಗಳು ಬರೆದು ಕೊಟ್ಟಿದ್ದರು. ಕಳೆದ ಬಾರಿ ಹರ್ನಿಯಾ ಅಪರೇಷನ್‍ಗೆ ಒಳಗಾಗಿದ್ದ ಶ್ರೀಗಳು ತಮ್ಮ ಕೊನೆಯಾಸೆಯ ಬಗ್ಗೆ ತಿಳಿಸಿದ್ದರು ಎಂದು ಪಬ್ಲಿಕ್ ಟಿವಿಗೆ ರಘುಪತಿ ಭಟ್ ತಿಳಿಸಿದ್ದಾರೆ. ಇದನ್ನೂ ಓದಿ: 8ನೇ ವಯಸ್ಸಿನಲ್ಲಿ ದೀಕ್ಷೆ, ದಲಿತ ಪರ ಹೋರಾಟ, 5ನೇ ಬಾರಿ ಪರ್ಯಾಯ ಪೀಠ ಏರಿ ಸಾಧನೆ

    ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ಕೃಷ್ಣೈಕ್ಯರಾಗಿದ್ದಾರೆ. ಶ್ರೀಗಳ ಕೊನೆಯ ಆಸೆಯಂತೆ ಅವರನ್ನು ಇಂದು ವೆಂಟಿಲೇಟರ್ ಸಹಿತ ಅಂಬುಲೆನ್ಸ್ ಮೂಲಕ ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠಕ್ಕೆ ಆಸ್ಪತ್ರೆಯಿಂದ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಅವರಿಗೆ 6 ಮಂದಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಠದಲ್ಲಿಯೇ ಶ್ರೀಗಳು ಕೃಷ್ಣನ ಪಾದ ಸೇರಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಸಂಸ್ಕಾರ

    ಶ್ರೀಗಳ ಕೊನೆ ಆಸೆಯಂತೆ ಅವರ ಅಂತ್ಯಸಂಸ್ಕಾರ ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯಲಿದೆ. ಮದ್ವ ಸರೋವರದಲ್ಲಿ ಶ್ರೀಗಳಿಗೆ ಸ್ನಾನ ಮಾಡಿಸಿ ಕೃಷ್ಣನ ದರ್ಶನ ಮಾಡಿಸಲಾಗುತ್ತದೆ. ಅಲ್ಲಿಂದ ನೇರವಾಗಿ ಅಜ್ಜರ ಕಾಡು ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ.

    ಅಲ್ಲಿ ಮಧ್ಯಾಹ್ನ 12 ಗಂಟೆಯವರೆಗೂ ಸಾರ್ವಜನಿಕರಿಗೆ ಪೇಜಾವರ ಶ್ರೀಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಶ್ರೀಗಳ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತದೆ. ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಆವರಣದಲ್ಲಿ ಮತ್ತೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಕೊನೆಗೆ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತಿಮ ಕ್ರಿಯಾ ವಿಧಿ ವಿಧಾನಗಳು ನಡೆಯಲಿದೆ.

  • 8ನೇ ವಯಸ್ಸಿನಲ್ಲಿ ದೀಕ್ಷೆ, ದಲಿತ ಪರ ಹೋರಾಟ, 5ನೇ ಬಾರಿ ಪರ್ಯಾಯ ಪೀಠ ಏರಿ ಸಾಧನೆ

    8ನೇ ವಯಸ್ಸಿನಲ್ಲಿ ದೀಕ್ಷೆ, ದಲಿತ ಪರ ಹೋರಾಟ, 5ನೇ ಬಾರಿ ಪರ್ಯಾಯ ಪೀಠ ಏರಿ ಸಾಧನೆ

    ಉಡುಪಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ಕೃಷ್ಣೈಕ್ಯರಾಗಿದ್ದಾರೆ.

    ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.

    ಜನನ ಮತ್ತು ಬಾಲ್ಯ:
    ಅಷ್ಟಮಠಗಳಲ್ಲೇ ಹಿರಿಯ ಯತಿಯಾಗಿದ್ದ ಪೇಜಾವರ ಶ್ರೀ 1931 ಏಪ್ರಿಲ್ 27 ರಂದು ಉಡುಪಿಯಿಂದ 120 ಕಿ.ಮೀ ದೂರದಲ್ಲಿರುವ ಪುತ್ತೂರು ತಾಲೂಕಿನ ರಾಮಕುಂಜ ಹಳ್ಳಿಯಲ್ಲಿ ಜನಿಸಿದ್ದರು. ಪೇಜಾವರ ಶ್ರೀ ವಿಶ್ವೇಶತೀರ್ಥರು ನಾರಾಯಣಾಚಾರ್ಯ ಮತ್ತು ಕಮಲಮ್ಮ ದಂಪತಿಯ ಎರಡನೇ ಮಗನಾಗಿ ಜನಿಸಿದ ಇವರ ಮೂಲ ಹೆಸರು ವೆಂಕಟರಮಣ ಆಗಿತ್ತು.

    ವೆಂಕಟರಮಣ ರಾಮಕುಂಜದ ಹಳ್ಳಿಯ ಸಂಸ್ಕೃತ ಎಲಿಮೆಂಟರಿ ಶಾಲೆಯಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದಾರೆ. ಇವರು 7ನೇ ವರ್ಷದಲ್ಲೇ ಗಾಯತ್ರಿಯ ಉಪದೇಶ ಮಾಡಿದ್ದರು. ನಂತರ 8ನೇ ವಯಸ್ಸಲ್ಲೇ ಮುಖ್ಯಪ್ರಾಣ ಸನ್ನಿಧಿಯಲ್ಲಿ ದೀಕ್ಷೆ ಪಡೆದಿದ್ದರು. ಬಳಿಕ ಪೇಜಾವರ ಮಠದ ಪರಂಪರೆಯ 32ನೇಯ ಯತಿಯಾಗಿ ನೇಮಕಗೊಂಡಿದ್ದರು.

    ಪೇಜಾವರ ಶ್ರೀ ಅಸ್ಪೃಶ್ಯತೆ ವಿರುದ್ಧ ಧ್ವನಿ ಎತ್ತುತ್ತಿದ್ದರು. ಜೊತೆಗೆ ಇವರು ಗಾಂಧೀಜಿ ವಿಚಾರಧಾರೆಯನ್ನು ಪಾಲಿಸುತ್ತಿದ್ದರು. ದಿನ ಕಳೆದಂತೆ ಪೇಜಾವರ ಶ್ರೀ ಮಠದ ಯತಿಗಳು ಉತ್ಸವಗಳಲ್ಲಿ ಧರಿಸುತ್ತಿದ್ದ ಪಟ್ಟೆ, ಪೀತಾಂಬರಗಳ ವೈಭವದ ಪೋಷಾಕನ್ನು ತೊರೆದು ಶುದ್ಧ ಖಾದಿಧಾರಿಯಾಗುವ ದೀಕ್ಷೆ ತೊಟ್ಟರು. ನಂತರ ಮಠದಲ್ಲಿ ಸ್ವಾಮಿಗಳಿಗೆ ಪ್ರತ್ಯೇಕ ಅಡುಗೆ ಮಾಡುವ ಪದ್ಧತಿಯನ್ನು ರದ್ದುಗೊಳಿಸಿದರು.

    1951 ಜನವರಿ 18ರಂದು 21ರ ಹರೆಯದಲ್ಲೇ ಮೊದಲ ಪರ್ಯಾಯ ಪೀಠವೇರಿದ್ದ ಪೇಜಾವರ ಶ್ರೀ ಒಟ್ಟು 5 ಬಾರಿ ಪರ್ಯಾಯ ಪೀಠವೇರಿ ಕೃಷ್ಣ ಪೂಜೆ ನಡೆಸಿದ ಎರಡನೇ ಹಿರಿಯ ಯತಿ ಎಂದು ಖ್ಯಾತಿ ಪಡೆದಿದ್ದಾರೆ. ಕೃಷ್ಣನನ್ನ ಉಡುಪಿಯಲ್ಲಿ ಪ್ರತಿಷ್ಠಾಪಿಸಿದ ಮಧ್ವಾಚಾರ್ಯರು ಬಿಟ್ಟರೆ ಪೇಜಾವರ ಶ್ರೀ ವಿಶ್ವೇಶತೀರ್ಥರೇ ಐದು ಬಾರಿ ಪರ್ಯಾಯ ಪೀಠ ಏರಿದ ವಿಶೇಷ ಸಾಧನೆ ಮಾಡಿದ್ದರು.

    ದಲಿತರ ಪರ ಹೋರಾಟ
    ದಲಿತರ ಪರ ಧ್ವನಿ ಎತ್ತಿ ದಲಿತರ ಅಭಿವೃದ್ಧಿ ಪರ, ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಸಿದ್ದರು. ಇದಲ್ಲದೇ ದಲಿತ ಖೇರಿಗೆ ಭೇಟಿ ನೀಡಿ ವಾಸ್ತವ್ಯ ಮಾಡುತ್ತಿದ್ದರು. ಕೃಷ್ಣ ಮಠದಲ್ಲಿ ಎಡೆ ಹಾಗೂ ಮಡೆ ಸ್ನಾನವನ್ನು ಪೇಜಾವರ ಶ್ರೀ ಅವರೇ ನಿಲ್ಲಿಸಿದ್ದಾರೆ. ಜೊತೆಗೆ ನಕ್ಸಲ್ ಪ್ರದೇಶದಲ್ಲಿ ಹೆಲ್ತ್ ಕ್ಯಾಂಪ್ ಕೂಡ ನಡೆಸಿ ಜನರ ಸಮಸ್ಯೆಗೆ ಸ್ಪಂದಿಸುತ್ತಿದ್ದರು.

    ಲಿಂಗಾಯುತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಪೇಜಾವರ ಶ್ರೀ ಆಹ್ವಾನಿಸಿದ್ದರು. ಧರ್ಮ ಸಂಸತ್ ಮೂಲಕ ರಾಮಮಂದಿರ ನಿರ್ಮಾಣಕ್ಕೆ ಕರೆಕೊಟ್ಟಿದ್ದರು. ಹೀಗಾಗಿ ರಾಮಮಂದಿರ ನಿರ್ಮಾಣದಲ್ಲಿ ಪೇಜಾವರ ಶ್ರೀ ಮುಂಚೂಣಿಯಲ್ಲಿದ್ದರು. ಇವರು ಪ್ರಧಾನಿ ಮೋದಿಯವರೊಂದಿಗೆ ಆತ್ಮೀಯತೆ ಹೊಂದಿದ್ದರು. ಪ್ರಧಾನಿ ಮೋದಿ ಮಾತ್ರವಲ್ಲದೇ ಅಡ್ವಾಣಿ, ನಿರ್ಮಲಾ ಸೀತಾರಾಮನ್, ರಾಜನಾಥ್ ಸಿಂಗ್ ಅವರಿಗೂ ಆಪ್ತರಾಗಿದ್ದರು. ವಿಶ್ವಹಿಂದೂ ಪರಿಷತ್ ಪ್ರಮುಖರಾಗಿದ್ದ ಪೇಜಾವರ ಶ್ರೀ ರಾಷ್ಟ್ರದ ಸಂತರಲ್ಲಿ ಪ್ರಭಾವಿ ಹಿರಿಯ ಯತಿಯಾಗಿದ್ದರು.

    ಉಡುಪಿಯ ಅಷ್ಟಮಠದಲ್ಲೇ ಹಿರಿಯ ಯತಿಯಾಗಿದ್ದರಿಂದ ಶೀರೂರು ಲಕ್ಷ್ಮೀವರ ತೀರ್ಥ ಸ್ಚಾಮೀಜಿ ಸಾವಿನ ಸಮಯದಲ್ಲಿ ಅಷ್ಟಮಠಕ್ಕೆ ಮಾರ್ಗದರ್ಶಕರಾಗಿದ್ದರು. ದಲಿತರಿಗೆ ಧೀಕ್ಷೆ ನೀಡುತ್ತಿದ್ದರು. ಸದಾ ಯೋಗ ಪೂಜೆಯಲ್ಲಿ ತಲ್ಲಿನರಾಗಿರುತ್ತಿದ್ದರು. ಅಲ್ಲದೇ ವಿರೋಧದ ನಡುವೆಯೂ ಕೃಷ್ಣ ಮಠದಲ್ಲಿ ಇಫ್ತಾರ್ ಕೂಟ ನಡೆಸಿದ್ದರು. ಇತ್ತೀಚೆಗೆ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ನಂತರ ಖುಷಿಪಟ್ಟಿದ್ದರು.

  • ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ ಪೇಜಾವರ ಶ್ರೀ ಕೃಷ್ಣೈಕ್ಯ

    ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ ಪೇಜಾವರ ಶ್ರೀ ಕೃಷ್ಣೈಕ್ಯ

    ಉಡುಪಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ವಿಧಿವಶರಾಗಿದ್ದಾರೆ.

    ಶ್ರೀಗಳ ಕೊನೆಯ ಆಸೆಯಂತೆ ಅವರನ್ನು ಇಂದು ವೆಂಟಿಲೇಟರ್ ಸಹಿತ ಅಂಬುಲೆನ್ಸ್ ಮೂಲಕ ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠಕ್ಕೆ ಆಸ್ಪತ್ರೆಯಿಂದ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಅವರಿಗೆ 6 ಮಂದಿ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಠದಲ್ಲಿಯೇ ಶ್ರೀಗಳು ಕೃಷ್ಣೈಕ್ಯರಾದರು.

    ರಕ್ತದೊತ್ತಡ, ಮಧುಮೇಹ, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳು ಕಳೆದ ಶುಕ್ರವಾರ ಬೆಳಗಿನ ಜಾವ 5 ಗಂಟೆಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 9 ದಿನಗಳಿಂದ ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತಿತ್ತು.

    ವಿಶ್ವೇಶತೀರ್ಥ ಸ್ವಾಮೀಜಿಯ ಆರೋಗ್ಯ ಗುರುವಾರದಿಂದಂದ ಹೆಚ್ಚೇನೂ ಸುಧಾರಣೆಯಾಗಿರಲಿಲ್ಲ. ಆರೋಗ್ಯ ಸ್ಥಿತಿ ಗಂಭೀರ ಸ್ಥಿತಿಯಲ್ಲಿದೆ ಎಂದು ಕೆಎಂಸಿ ವೈದ್ಯರು ತಿಳಿಸಿದ್ದರು.

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳನ್ನು ಭೇಟಿ ಮಾಡಲು ಬರುವುದು ಬೇಡ ಎಂದು ಗಣ್ಯರಲ್ಲಿ ವೈದ್ಯರು ಮನವಿ ಮಾಡಿದ್ದರು. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತಜ್ಞ ವೈದ್ಯರಿಬ್ಬರು ಮಣಿಪಾಲಕ್ಕೆ ಆಗಮಿಸಿ ಸಲಹೆ ನೀಡುತ್ತಿದ್ದರು. ಮಣಿಪಾಲದ ತಜ್ಞ ವೈದ್ಯರ ತಂಡವು ದಿಲ್ಲಿಯ ಏಮ್ಸ್ ತಜ್ಞರ ಸಂಪರ್ಕದಲ್ಲಿದ್ದರೂ ಶುಕ್ರವಾರದಿಂದ ದೇಹ ಚೇತರಿಕೆ ಹಾಗೂ ಚಿಕಿತ್ಸೆಗೆ ಸ್ಪಂದನೆ ನೀಡುತ್ತಿರಲಿಲ್ಲ.

    ಪೇಜಾವರ ಶ್ರೀಗಳು ಜ್ವರವಿದ್ದರೂ ಡಿ.19ರ ಗುರುವಾರ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಪುತ್ತೂರಿನ ರಾಮಕುಂಜ, ಉಡುಪಿ ಸಮೀಪದ ಪಾಜಕದಲ್ಲಿರುವ ಆನಂದತೀರ್ಥ ವಿದ್ಯಾಲಯದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ್ದರು. ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಡಿ.22ರ ತನಕ ಪ್ರತಿದಿನ ಸಂಜೆ 5.30ಕ್ಕೆ ಪೇಜಾವರ ಶ್ರೀಗಳಿಂದ ಮಹಾಭಾರತದ ಉಪಾಖ್ಯಾನಗಳು ವಿಷಯವಾಗಿ ಉಪನ್ಯಾಸ ಕಾರ್ಯಕ್ರಮ ನಿಗದಿಯಾಗಿತ್ತು. ಹೀಗಾಗಿ ಗುರುವಾರ ಉಪನ್ಯಾಸ ನೀಡಿದ್ದರು.

    ಆದರೆ ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಶುಕ್ರವಾರ ಬೆಳಗ್ಗೆ ಮಣಿಪಾಲ ಕೆಎಂಸಿಯ ತೀವ್ರ ನಿಗಾ ಘಟಕಕ್ಕೆ(ಐಸಿಯು) ದಾಖಲಾಗಿದ್ದರು. 15, 16ನೇ ಶತಮಾನದಲ್ಲಿಸೋದೆ ಶ್ರೀವಾದಿರಾಜತೀರ್ಥ ಶ್ರೀಪಾದರು ನಾಲ್ಕು ಪರ್ಯಾಯ ಪೂರೈಸಿ, ಐದನೇ ಪರ್ಯಾಯವನ್ನು ಶಿರಸಿಯ ಸೋಂದಾದಲ್ಲಿ ನಡೆಸಿದ್ದರೆ, 89ರ ಹರೆಯದ ಪೇಜಾವರ ಶ್ರೀಪಾದರು ಶ್ರೀಕೃಷ್ಣನ ಪೂಜೆಯ ದ್ವೈವಾರ್ಷಿಕ ಪರ್ಯಾಯವನ್ನು ಐದು ಬಾರಿ ಪೂರೈಸಿದ ಏಕೈಕ ಯತಿಯಾಗಿದ್ದಾರೆ.

    ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಆರೋಗ್ಯವನ್ನು ಪ್ರಧಾನಿ ಮೋದಿ ವಿಚಾರಿಸಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದರು. ಪೇಜಾವರ ಶ್ರೀಗಳ ಆಪ್ತ ಕಾರ್ಯದರ್ಶಿ ಟಿ.ಪಿ. ಅನಂತ್ ಅವರಿಗೆ ದೂರವಾಣಿ ಕರೆ ಮಾಡಿ ಪೇಜಾವರ ಶ್ರೀಗಳ ಆರೋಗ್ಯದ ಸ್ಥಿತಿಗತಿಯ ವಿವರ ಕೇಳಿದ್ದರು.