Tag: ವಿಶ್ವ ಮಹಿಳಾ ದಿನಾಚರಣೆ

  • ವಿಶ್ವ ಮಹಿಳಾ ದಿನಾಚರಣೆ – ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕರಿಗೆ ಗೌರವ

    ವಿಶ್ವ ಮಹಿಳಾ ದಿನಾಚರಣೆ – ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕರಿಗೆ ಗೌರವ

    ಬೆಂಗಳೂರು: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಟಿ.ದಾಸರಹಳ್ಳಿಯ ಪೀಣ್ಯ ಕೈಗಾರಿಕಾ ಪ್ರದೇಶದ ಗೋಕಲ್ ದಾಸ್ ಎಕ್ಸ್ ಪ್ರೋರ್ಟ್ಸ್ ಲಿಮಿಟೆಡ್ ಕಂಪನಿಯಲ್ಲಿ ಹಿರಿಯ ಪರಿಸರವಾದಿ, ವಿಶ್ವದ ಪ್ರಭಾವಿ ಮಹಿಳೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಸಾಲುಮರದ ತಿಮ್ಮಕ್ಕ ಗಿಡ ನೆಡುವ ಮೂಲಕ ಚಾಲನೆ ನೀಡಿದರು.

     Saalumarada Thimmakka

    ಈ ವೇಳೆ ಮಾತನಾಡಿದ ಸಾಲುಮರದ ತಿಮ್ಮಕ್ಕನವರು ಮಹಿಳಾ ಸಾಧಕಿಯರನ್ನು ನೆನೆದು ಎಲ್ಲಾ ಮಹಿಳೆಯರು ಒಂದಲ್ಲಾ ಒಂದು ಕ್ಷೇತ್ರದಲ್ಲಿ ಸಾಧನೆಯನ್ನು ಮಾಡುವಂತವರಾಗಿ ಎಂದು ಶುಭಹಾರೈಸಿದರು. ತಮ್ಮ ಕುಟುಂಬ ಮತ್ತು ಮಕ್ಕಳ ಲಾಲನೆ, ಪಾಲನೆ ಮಾಡುತ್ತಾ ಬಂದಿರುವ ಮಹಿಳಾಯರನ್ನು ಕೊಂಡಾಡಿದರು. ಉತ್ತಮ ಪರಿಸರಕ್ಕಾಗಿ ಎಲ್ಲರು ಪರಿಸರ ಕಾಳಜಿಯಿಂದ ಒಂದೊಂದು ಗಿಡ ನೆಟ್ಟು ಪರಿಸರ ಬೆಳಸಿ ಉಳಿಸಿ ಎಂದರು. ಇದನ್ನೂ ಓದಿ: ಯುಪಿ ಚುನಾವಣಾ ಫಲಿತಾಂಶ ನಮಗೊಂದು ಪಾಠ: ಮಾಯಾವತಿ

    ಗೋಕಲ್ ದಾಸ್ ಎಕ್ಸ್ ಪ್ರೋರ್ಟ್ಸ್ ಲಿಮಿಟೆಡ್ ಇಸಿಸಿ ಘಟಕದ ಉಪಾಧ್ಯಕ್ಷ ಕೇಶವ ಹಾಗೂ ಸೀನಿಯರ್ ಜನರಲ್ ಮ್ಯಾನೇಜರ್ ಹೆಚ್.ಆರ್.ಮಲ್ಲಿಕಾರ್ಜುನ ಅವರು ಮಾತನಾಡಿ, ಈ ಇಳಿ ವಯಸ್ಸಿನಲ್ಲಿ ತಿಮ್ಮಕ್ಕನವರ ಪರಿಸರದ ಕಾಳಜಿ ಹುಮ್ಮಸ್ಸು. ಒಂದೆಲ್ಲಾ ಒಂದು ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರಣೆಯಾಗಿದೆ. ಅವರ ಅಪಾರ ಶ್ರಮ ಮತ್ತು ಸಾಧನೆಯನ್ನು ಹಂಚಿಕೊಂಡರು.

     Saalumarada Thimmakka

    ಈ ಕಾರ್ಯಕ್ರಮದಲ್ಲಿ ವಿಶ್ವದ ಪ್ರಭಾವಿ ಮಹಿಳೆ ಸಾಲುಮರದ ತಿಮ್ಮಕ್ಕ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಪ್ರೊಡಕ್ಷನ್ ಮ್ಯಾನೇಜರ್ ರಾಜು, ಹರೀಶ್, ಕಾರ್ಮಿಕ ಕಲ್ಯಾಣಾಧಿಕಾರಿ ರಜನಿ, ವರಲಕ್ಷ್ಮಿ, ಅಜಿತ್, ಸಿಬ್ಬಂದಿ ಉಪಸ್ಥಿತರಿದ್ದರು. ಇದನ್ನೂ ಓದಿ: Bulldozer is Back – ಟ್ರೆಂಡ್‌ ಆಯ್ತು ಬುಲ್ಡೋಜರ್‌, ಬುಲ್ಡೋಜರ್‌ ಏರಿ ಬಿಜೆಪಿಯಿಂದ ಸಂಭ್ರಮಾಚರಣೆ

  • ಚರ್ಚ್ ಸಭಾಪಾಲನಾ ಸದಸ್ಯನಿಂದ ಲೈಂಗಿಕ ದೌರ್ಜನ್ಯ- ಗರ್ಭಪಾತಕ್ಕೊಳಗಾದ ಯುವತಿ ಸಾವು

    ಚರ್ಚ್ ಸಭಾಪಾಲನಾ ಸದಸ್ಯನಿಂದ ಲೈಂಗಿಕ ದೌರ್ಜನ್ಯ- ಗರ್ಭಪಾತಕ್ಕೊಳಗಾದ ಯುವತಿ ಸಾವು

    ತುಮಕೂರು: ನಿನ್ನೆ ತಾನೇ ವಿಶ್ವ ಮಹಿಳಾ ದಿನಾಚರಣೆ ಆಚರಿಸಿದೆವು ‘ಯತ್ರ ನಾರಿಯಂತು ಪೂಜ್ಯಂತೆ ರಮಂತೆ ತತ್ರ ದೇವತಾ ಎಂದು ಹಾಡಿ ಹೊಗಳಿದೆವು. ಈ ಸಂಭ್ರಮದಲ್ಲಿರಬೇಕಾದರೆ ಜಿಲ್ಲೆಯಿಂದ ಒಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಚರ್ಚ್‍ನ ಸಭಾಪಾಲನಾ ಸದಸ್ಯನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಗರ್ಭಪಾತಕ್ಕೊಸಳಗಾದ ಯುವತಿಯೊಬ್ಬರು ಸಾವನಪ್ಪಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಶಿರಾ ಗೇಟ್‍ನ ಹೌಸಿಂಗ್ ಬೋರ್ಡ್ ನಿವಾಸಿ ಗ್ರೇಸ್ ಪ್ರೀರ್ತನಾ ಗರ್ಭಪಾತಕ್ಕೊಳಗಾಗಿ ಸಾವನಪ್ಪಿದ್ದ ಯುವತಿ. ಶಿರಾಗೇಟ್ ಬಳಿ ಇರುವ ಸಿ.ಎಸ್.ಐ ವೆಸ್ಲಿ ಚರ್ಚ್‍ನ ಸಭಾಪಾಲನಾ ಸದಸ್ಯ ರಾಜೇಂದ್ರಕುಮಾರ್ ಎಂಬಾತನಿಂದ ಯುವತಿಯು ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದರು. ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಅವರ ಕುಟುಂಬ ಲಾಕ್ ಡೌನ್ ಸಮಯದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಸಹಾಯ ಮಾಡುವ ನೆಪದಲ್ಲಿ ಅವನು, ಯುವತಿಯೊಂದಿಗೆ ಸಲಿಗೆ ಬೆಳೆಸಿದ್ದಾನೆ. ಅವರ ಜೊತೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಅವರಿಗೆ ಮಾತ್ರೆ ಕೊಟ್ಟು ಗರ್ಭಪಾತ ಮಾಡಿಸಿದ್ದಾನೆ. ಈ ವೇಳೆ ಅಧಿಕ ರಕ್ತಸ್ರಾವದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಮಾನತೆಯ ಸಂದೇಶದೊಂದಿಗೆ ವಿದ್ಯಾರ್ಥಿನಿಯರಿಂದ ಬೈಕ್ ರ‍್ಯಾಲಿ

    ನವೆಂಬರ್ 8 ರಂದು ಯುವತಿ ಗ್ರೇಸ್ ಪ್ರೀರ್ತನಾ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ವಿಚಾರ ಎಲ್ಲಿಯೂ ಬಹಿರಂಗಪಡಿಸದಂತೆ ಯುವತಿ ತಾಯಿ ಸಂತೋಷ್ ಸ್ಟೆಲ್ಲಾಗೆ ಪಾಸ್ಟರ್‌ನು ಹಣದ ಆಮಿಷದ ಜೊತೆಗೆ ಬೆದರಿಕೆಯನ್ನೂ ಒಡ್ಡಿದ್ದಾನೆ. ಆದರೆ ತಡವಾಗಿ ಮಂಗಳವಾರ ಯುವತಿ ತಾಯಿ ತುಮಕೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಎಫ್‍ಐಆರ್ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ: ಡೀಮ್ಡ್ ಅಧ್ಯಕ್ಷ

  • ವಿಶ್ವ ಮಹಿಳಾ ದಿನಾಚರಣೆ – ನೆಲಮಂಗಲದಲ್ಲಿ ಉದ್ಯೋಗ ರಥಕ್ಕೆ ಚಾಲನೆ

    ವಿಶ್ವ ಮಹಿಳಾ ದಿನಾಚರಣೆ – ನೆಲಮಂಗಲದಲ್ಲಿ ಉದ್ಯೋಗ ರಥಕ್ಕೆ ಚಾಲನೆ

    ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಿಳೆಯರು ಹೆಚ್ಚು ನರೇಗಾ ಕಾಮಗಾರಿಗಳಲ್ಲಿ ಭಾಗವಹಿಸಲು ಉದ್ಯೋಗ ರಥದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ನೆಲಮಂಗಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ್ ತಿಳಿಸಿದರು.

    ನಗರದ ತಾಲೂಕು ಪಂಚಾಯ್ತಿ ಆವರಣದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ರಥದ ಪ್ರಚಾರ ವಾಹಿನಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನರೇಗಾದಲ್ಲಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಹೆಚ್ಚು ಹೆಚ್ಚು ಮಾಡುವ ಮೂಲಕ ಸಾರ್ವಜನಿಕರು ಲಾಭ ಮಾಡಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಏಕಾಂಗಿಯಾಗಿ ಉಕ್ರೇನ್ ಗಡಿಗೆ ಪ್ರಯಾಣಿಸಿದ 11 ವರ್ಷದ ಬಾಲಕ

     

    ಮಹಿಳೆಯರು ನರೇಗಾ ಕಾಮಗಾರಿಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಪ್ರಚಾರ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ನರೇಗಾ ಕಾಮಗಾರಿಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದರು. ಇದನ್ನೂ ಓದಿ: ಬಿಹಾರ ವರನ ಕೈ ಹಿಡಿದ ಜರ್ಮನಿ ಮಹಿಳೆ

    ಈ ಸಂದರ್ಭದಲ್ಲಿ ತಾಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕಿ ಗೀತಾಮಣಿ, ವ್ಯವಸ್ಥಾಪಕ ರಾಮಾನಾಯಕ್, ನರೇಗಾ ಸಿಬ್ಬಂದಿ ಹಾಗೂ ತಾಲೂಕು ಪಂಚಾಯ್ತಿಯ ವಿವಿಧ ಇಲಾಖಾ ಸಿಬ್ಬಂದಿಗಳು ಭಾಗವಹಿಸಿದ್ದರು.

  • ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ – ಕೊರೊನಾ ನಿಯಮ ಉಲ್ಲಂಘಿಸಿದ ಶಿಕ್ಷಕರು, ಅಧಿಕಾರಿಗಳು

    ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ – ಕೊರೊನಾ ನಿಯಮ ಉಲ್ಲಂಘಿಸಿದ ಶಿಕ್ಷಕರು, ಅಧಿಕಾರಿಗಳು

    ನೆಲಮಂಗಲ: ಕರ್ನಾಟಕ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಆದರೆ ಜನ ಸಾಮಾನ್ಯರು ಹಾಗೂ ಮಕ್ಕಳಿಗೆ ಜಾಗೃತಿ ಮೂಡಿಸಬೇಕಿದ್ದ ಶಿಕ್ಷಕರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರಾಜ್ಯದಲ್ಲಿ ಮಹಾಮಾರಿಯಂತೆ ಹರಡುತ್ತಿರುವ ಎರಡನೇ ಅಲೆ ಕೊರೊನಾ ಸೋಂಕಿನ ನಿಯಮವನ್ನು ಗಾಳಿಗೆ ತೂರಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ವಿವಿಎಸ್ ಗಾರ್ಡನ್‍ನಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದಿಂದ ವಿಶ್ವ ಮಹಿಳಾ ದಿನಾಚರಣೆ ವೇಳೆ ಈ ಘಟನೆ ನಡೆದಿದೆ. ನೆಲಮಂಗಲ ತಾಲೂಕಿನ ಸುಮಾರು 200 ಶಿಕ್ಷಕರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮಕ್ಕೆ ನೆಲಮಂಗಲ ಶಾಸಕ ಡಾ.ಕೆ ಶ್ರೀನಿವಾಸ್ ಮೂರ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿಕ್ಷಣ ಇಲಾಖೆಯ ಡಿಡಿಪಿಐ ಗಂಗ ಮರೇಗೌಡ, ನೆಲಮಂಗಲ ಬಿಇಓ ರಮೇಶ್ ಚಾಲನೆ ನೀಡಿದರು.

    ರಾಜ್ಯದಲ್ಲಿ ಸೇರಿದಂತೆ ನೆಲಮಂಗಲ ತಾಲೂಕಿನಲ್ಲಿಯೂ ಮಹಾಮಾರಿ ಕೊರೊನಾ ದಿನೇದಿನೇ ಹೆಚ್ಚುತ್ತಿದೆ. ಹೀಗಾಗಲೇ ಸರ್ಕಾರ ಹಾಗೂ ಆರೋಗ್ಯ ಇಲಾಖೆಯಿಂದ ಸಾಕಷ್ಟು ನಿಯಮವನ್ನು ಜಾರಿಗೆ ತರಲಾಗಿದೆ. ಜನರು ಮಾಸ್ಕ್ ಧರಿಸಬೇಕು ಸಾಮಾಜಿಕ ಅಂತರ, ಸ್ಯಾನಿಟೈಜರ್ ಬಳಸುವಂತೆ ಹೀಗೆ ಇನ್ನಿತರ ಮಾರ್ಗಸೂಚಿಯನ್ನು ಜಾರಿಗೆ ತರಲಾಗಿದೆ. ಆದರೆ ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಮಾಸ್ಕ್ ಬಳಸದೇ ಕೊರೊನಾ ನಿಯಮವನ್ನ ಗಾಳಿಗೆ ತೂರಲಾಗಿತ್ತು.

    ಸಾಮಾಜಿಕ ಅಂತರವಿಲ್ಲದೆ ಹಲವು ಶಿಕ್ಷಕರುಗಳು ಮಾಸ್ಕ್ ಧರಿಸದೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕೊರೊನಾ 2ನೇ ಅಲೆ ಬೆಂಗಳೂರು ಗ್ರಾಮಾಂತರದಲ್ಲಿ ಹೆಚ್ಚುತ್ತಿದ್ದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಶಿಕ್ಷಕರುಗಳು ಕೊರೊನಾ ನಿಯಮವನ್ನು ಗಾಳಿಗೆ ತೂರಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

  • ವಿಶೇಷ ವಿಡಿಯೋ ಮೂಲಕ ಪತ್ನಿಗೆ ಮಹಿಳಾ ದಿನಾಚರಣೆ ವಿಶ್ ಮಾಡಿದ್ರು ಜನಾರ್ದನ ರೆಡ್ಡಿ

    ವಿಶೇಷ ವಿಡಿಯೋ ಮೂಲಕ ಪತ್ನಿಗೆ ಮಹಿಳಾ ದಿನಾಚರಣೆ ವಿಶ್ ಮಾಡಿದ್ರು ಜನಾರ್ದನ ರೆಡ್ಡಿ

    ಬಳ್ಳಾರಿ: ವಿಶೇಷ ವಿಡಿಯೊವೊಂದನ್ನು ತಮ್ಮ ಪ್ರೀತಿಯ ಪತ್ನಿಗೆ ಡೆಡಿಕೇಟ್ ಮಾಡುವ ಮೂಲಕ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ವಿಭಿನ್ನವಾಗಿ ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯವನ್ನು ಕೋರಿದ್ದಾರೆ.

    ತಮ್ಮ 25ನೇ ವರ್ಷದ ಮದುವೆ ವಾರ್ಷಿಕೋತ್ಸವದ ದಿನದಂದು ಪತ್ನಿ ಜೊತೆಗೆ ಡ್ಯಾನ್ಸ್ ಮಾಡಿರುವ ವಿಡಿಯೋವನ್ನು ತಮ್ಮ ಫೇಸ್‍ಬುಕ್‍ನಲ್ಲಿ ಹಾಕಿ ಮೈಯನ್ನು ಹಿಂಡಿ ನೊಂದರೂ ಕಬ್ಬು ಸಿಹಿಯ ಕೊಡುವುದು. ತೇಯುತಲಿದ್ದರೂ ಗಂಧದ ಪರಿಮಳ ತುಂಬಿ ಬರುವುದು. ಸಮಸ್ತ ಮಹಿಳಾ ಕುಲಕ್ಕೆ ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯಗಳು ಎಂದು ಒಂದು ವಿಶೇಷ ಸಂದೇಶವನ್ನು ಬರೆದು ಪತ್ನಿ ಲಕ್ಷ್ಮೀ ಅರುಣಾ ಅವರಿಗೆ ಹಾಗೂ ಎಲ್ಲಾ ಮಹಿಳೆಯರಿಗೂ ಜನಾರ್ದನ ರೆಡ್ಡಿ ಅವರು ಪ್ರೀತಿಯಿಂದ ವಿಶ್ ಮಾಡಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?
    ಕನ್ನಡದ ವರನಟ ಡಾ.ರಾಜ್ ಕುಮಾರ್ ಹಾಡಿರುವ ಈ ಸುಮಧುರ ಗೀತೆ ಮಹಿಳೆಯ ತ್ಯಾಗ, ಸಹನೆ ಮತ್ತು ವಾತ್ಸಲ್ಯ ಭರಿತ ಹೃದಯಕ್ಕೆ ಪೂರಕವಾಗಿದ್ದು, ವಿಶ್ವ ಮಹಿಳಾ ದಿನಾಚರಣೆ ಶುಭ ಸಂದರ್ಭದಲ್ಲಿ ಸ್ಮರಿಸಲು ಸಂತೋಷವೆನಿಸುತ್ತಿದೆ. ಈ ವಿಶ್ವ ಮಹಿಳಾ ದಿನಾಚರಣೆ ವೇಳೆ ಮಹಿಳೆಯರ ಕುರಿತು ಅಕ್ಷರದಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಮಹಿಳೆಯ ಹೃದಯ ಆಗಸದಷ್ಟು ವಿಶಾಲ, ಮನಸ್ಸು ಸಾಗರದಷ್ಟೇ ಸಮಾನ. ಮಹಿಳೆ ನಿಜಕ್ಕೂ ಅನಂತ ಸೃಷ್ಟಿಗೆ ಕಾರಣಳು. ಆದಿಶಕ್ತಿಯಾಗಿ ಎಲ್ಲೆಡೆ ವ್ಯಾಪಿಸಿರುವ ಮಹಿಳೆ ನಿಜಕ್ಕೂ ಈ ಜಗತ್ತಿನ ಅದ್ಭುತವಾದ ಕೊಡುಗೆ. ಪುರಾಣ, ಇತಿಹಾಸದಲ್ಲೂ ಮಹಿಳೆ ಎಂದಿಗೂ ಅಗ್ರ ಸ್ಥಾನದಲ್ಲಿದ್ದಾಳೆ. ಈಶ್ವರನಿಗೆ ಅರ್ಧಾಂಗಿಯಾಗಿ, ವಿಷ್ಣುವಿನಲ್ಲಿ ಅನುರಕ್ತಳಾಗಿ, ಬ್ರಹ್ಮನಿಗೆ ಸರಸ್ವತಿಯಾಗಿ ಸೃಷ್ಟಿ, ಸ್ಥಿತಿ ಮತ್ತು ಲಯಗಳಿಗೆ ಮೂಲ ಕಾರಣಳಾಗಿದ್ದಾಳೆ. ಶಕ್ತಿ ದೇವತೆಯಾದ ಮಹಿಳೆ ಸಂಗೀತ, ಸಾಹಿತ್ಯ, ಸಂಸ್ಕೃತಿ ಮತ್ತು ಸಂಸ್ಕಾರಗಳಿಗೆ ಸ್ಫೂರ್ತಿದಾಯಕಳು. ಇಂತಹ ಮಹಿಳೆಯ ಬಗ್ಗೆ ಇಡೀ ಜಗತ್ತೇ ಇಂದು ವಿಶ್ವ ಮಹಿಳಾ ದಿನಾಚರಣೆ ಆಚರಿಸುವ ಮೂಲಕ ಗೌರವ ಸಲ್ಲಿಸುತ್ತಿದೆ.

    ಕಳೆದ ವರ್ಷ ಸರ್ವೋಚ್ಛ ನ್ಯಾಯಾಲಯದ ಅನುಮತಿ ಪಡೆದು ನನ್ನ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ನಾನು ಬಳ್ಳಾರಿಗೆ ಆಗಮಿಸಿದಾಗ ಸರಳ ಕಾರ್ಯಕ್ರಮದಲ್ಲಿ ನನ್ನ ಪತ್ನಿಗಾಗಿ ನಾನು ಸಮರ್ಪಿಸಿ ಧ್ವನಿಗೂಡಿಸಿದ ಆ ಹಾಡನ್ನು ಈ ಶುಭ ಸಂದರ್ಭದಲ್ಲಿ ಸ್ಮರಿಸಿಕೊಳ್ಳುತ್ತಿದ್ದೇನೆ. ನನ್ನೆಲ್ಲ ನೋವು, ನಲಿವು, ಕಷ್ಟ, ನಷ್ಟಗಳು, ಸುಖ, ಸಂತೋಷ ಹೀಗೆ ನಾನಾ ರೀತಿಯ ಸಂದರ್ಭಗಳಲ್ಲಿ ಭಾಗಿಯಾಗಿ ಎಲ್ಲ ಸಮಯದಲ್ಲೂ ನನಗೆ ಪ್ರೋತ್ಸಾಹ ನೀಡುತ್ತಾ, ನನ್ನ ಶ್ರೇಯಸ್ಸನ್ನೇ ಬಯಸುತ್ತಾ, ಮಕ್ಕಳ ಪಾಲನೆ ಮಾತ್ರವಲ್ಲದೆ ನನ್ನನ್ನು ನಂಬಿದ ನೂರಾರು ಕುಟುಂಬಗಳ ಸದಸ್ಯರಿಗೆ ತಾಯಿಯ ಸ್ಥಾನದಲ್ಲಿ ನಿಂತು ಜವಾಬ್ದಾರಿ ನಿರ್ವಹಿಸಿದ ನನ್ನ ಪತ್ನಿ ಶ್ರೀಮತಿ ಲಕ್ಷ್ಮಿಅರುಣಾ ಗೆ ಈ ಶುಭ ಸಂದರ್ಭದಲ್ಲಿ ಹೃದಯಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತಿದ್ದೇನೆ. ಮತ್ತೊಮ್ಮೆ ವಿಶ್ವ ಮಹಿಳಾ ದಿನಾಚರಣೆ ಶುಭ ಸಂದರ್ಭದಲ್ಲಿ ಸಮಸ್ತ ಮಹಿಳೆಯರಿಗೆ ನನ್ನ ಹಾರ್ದಿಕ ಶುಭಾಶಯಗಳು ಎಂದು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಈ ವಿಡಿಯೋವನ್ನು ಈವರೆಗೆ ಸುಮಾರು 17 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದು, 400ಕ್ಕೂ ಹೆಚ್ಚು ಶೇರ್ ಆಗಿದೆ.

    https://www.facebook.com/galijanardhanreddy/videos/570411313445283/

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಹಿಳೆ, ಪುರುಷನಿಗಿಂತ ಕಡಿಮೆಯಿಲ್ಲ ಎಂದು ಸಾಬೀತು ಮಾಡಿದ ಮಡಿಕೇರಿ ನಾರಿಯರು

    ಮಹಿಳೆ, ಪುರುಷನಿಗಿಂತ ಕಡಿಮೆಯಿಲ್ಲ ಎಂದು ಸಾಬೀತು ಮಾಡಿದ ಮಡಿಕೇರಿ ನಾರಿಯರು

    ಮಡಿಕೇರಿ: ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ. ಸಮಾಜದಲ್ಲಿ ಮಹಿಳೆಯರ ಹಕ್ಕುಗಳನ್ನು ಎತ್ತಿ ಹಿಡಿಯಬೇಕು, ಮಹಿಳೆ ಕೂಡ ಪುರುಷನಿಗಿಂತ ಕಡಿಮೆಯಿಲ್ಲ ಎನ್ನುವ ಉದ್ದೇಶದಿಂದ ಈ ದಿನವನ್ನು ಅಂತರಾಷ್ಟ್ರೀಯ ಮಹಿಳೆಯರ ದಿನ ಎಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ.

    ಮಹಿಳೆಯರ ವಿಚಾರದಲ್ಲಿ ನೋಡುವಾಗ ಸದ್ಯ ಕೊಡಗು ಜಿಲ್ಲೆಯಲ್ಲಿ ಮಹಿಳಾ ಅಧಿಕಾರಿಗಳ ಪಾರುಪತ್ಯ ಹೆಚ್ಚಾಗಿದೆ. ಡಿಸಿಯಾಗಿ ಅನ್ನೀಸ್ ಕೆ.ಜಾಯ್ ಇಡೀ ಜಿಲ್ಲೆಯ ಚುಕ್ಕಾಣಿಯನ್ನು ಹಿಡಿದಿದ್ರೆ, ಎಸ್‍ಪಿಯಾಗಿ ಡಾ. ಸುಮನ್ ಡಿ ಪನ್ನೇಕರ್ ಅವರು ಕಾನೂನು ಸುವ್ಯವಸ್ಥೆಯನ್ನು ಸುಗಮ ರೀತಿಯಲ್ಲಿ ಸಾಗುವಂತೆ ನೋಡಿಕೊಂಡು ಬರುತ್ತಿದ್ದಾರೆ.

    ಅಲ್ಲದೇ ಜಿ.ಪಂ ಸಿಇಓ ಆಗಿ ಲಕ್ಷ್ಮಿಪ್ರಿಯಾ ಸಮರ್ಥವಾಗಿ ಕೆಲಸ ನಿರ್ವಹಿಸಿಕೊಂಡು ಬರುತ್ತಿದ್ದಾರೆ. ಜಿಲ್ಲೆಯಲ್ಲಿ ಕಳೆದ ಬಾರಿ ಜಲಪ್ರಳಯ ಉಂಟಾದ ಸಮಯದಲ್ಲೂ ಎದೆಗುಂದದೇ ಧೈರ್ಯದಿಂದ ಆಗಿನ ಡಿಸಿಯಾಗಿದ್ದ ಶ್ರೀವಿದ್ಯಾ ಕೂಡ ಕಠಿಣ ಪರಿಸ್ಥಿತಿಯನ್ನು ಎದುರಿಸಿದ್ದನ್ನು ಈ ಸಮಯದಲ್ಲಿ ನೆನಪಿಸಿಕೊಳ್ಳಲೇಬೇಕು.

    ಕೊಡಗು ಜಿಲ್ಲೆಯ ಅನೇಕ ಇಲಾಖೆಗಳಲ್ಲೂ ಕೂಡ ಉಪನಿರ್ದೇಶಕಿಯರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಇರೋದು ಗಮನಾರ್ಹ. ಇದಿಷ್ಟೇ ಅಲ್ಲದೇ ಮಡಿಕೇರಿ ನಗರಸಭೆ ಅಧ್ಯಕ್ಷೆಯಾಗಿ ಕಾವೇರಿ ಸೋಮಣ್ಣ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಇನ್ನೂ ಅಚ್ಚರಿ ವಿಚಾರ ಎಂದರೆ ಜಿಲ್ಲೆಯ ಮೂರು ತಾಲೂಕು ಪಂಚಾಯತ್‍ಗಳಲ್ಲೂ ಮಹಿಳಾಮಣಿಗಳೇ ದರ್ಬಾರ್ ನಡೆಸುತ್ತಿದ್ದಾರೆ.

    ಮಡಿಕೇರಿ ತಾಲೂಕು ಪಂಚಾಯತ್ ಅಧ್ಯಕ್ಷೆಯಾಗಿ ಶೋಭಾ ಮೋಹನ್, ವಿರಾಜಪೇಟೆ ತಾ.ಪಂ ಅಧ್ಯಕ್ಷೆಯಾಗಿ ಸ್ಮಿತಾ ಪ್ರಕಾಶ್, ಸೋಮವಾರಪೇಟೆ ತಾ.ಪಂ ಅಧ್ಯಕ್ಷೆಯಾಗಿ ಪುಷ್ಪಾ ರಾಜೇಶ್ ಅಧಿಕಾರವನ್ನು ಚಲಾಯಿಸುವ ಮೂಲಕ ಮಹಿಳೆಯರೂ ಕೂಡ ಪುರುಷರಿಗಿಂತ ಕಮ್ಮಿಯಿಲ್ಲ ಎನ್ನುವುದನ್ನು ಸಾಬೀತು ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

     

     

  • ವಿಶ್ವ ಮಹಿಳಾ ದಿನಾಚರಣೆ- ಆರ್.ಜೆ ಆದ ದೇಶದ ಮೊದಲ ತೃತೀಯ ಲಿಂಗಿ

    ವಿಶ್ವ ಮಹಿಳಾ ದಿನಾಚರಣೆ- ಆರ್.ಜೆ ಆದ ದೇಶದ ಮೊದಲ ತೃತೀಯ ಲಿಂಗಿ

    ಬೆಂಗಳೂರು: ಇಂದು ವಿಶ್ವ ಮಹಿಳಾ ದಿನಾಚರಣೆ. ಅಕ್ಕ, ತಂಗಿ, ತಾಯಿ ಹಾಗೂ ಮಡದಿ ಹೀಗೆ ಎಲ್ಲಾ ರೋಲ್ ಗಳನ್ನು ಪ್ಲೇ ಮಾಡುವ, ಮಲ್ಟಿ ಟಾಸ್ಕರ್ ಮಹಿಳೆ. ಎಲ್ಲಾ ಕ್ಷೇತ್ರದಲ್ಲಿಯೂ ತನ್ನದೆ ಆದ ಛಾಪು ಮೂಡಿಸಿ, ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಎಂದು ನಮ್ಮ ನಾರಿಯರು ಪ್ರೂವ್ ಮಾಡಿದ್ದಾರೆ.

    ಸ್ತ್ರೀ ಎಂಬ ಎರಡಕ್ಷರದಲ್ಲಿ ಅದೆನೋ ಅದ್ಭುತ ಶಕ್ತಿಯಿದೆ. ನಮ್ಮೆಲ್ಲರನ್ನು ಹೆತ್ತು, ಹೊತ್ತು ಸಾಕುವ ಕರುಣಾಮಯಿ, ಮಮತಾಮಯಿ ಹೆಣ್ಣು. ನಾರಿಯರ ಬಗ್ಗೆ ಎಷ್ಟು ಬಣ್ಣಿಸಿದ್ರೂ ಪದಗಳೇ ಸಾಲದು. ಮಹಿಳೆ ಎಲ್ಲಾ ಕ್ಷೇತ್ರದಲ್ಲಿಯೂ ತನ್ನ ಛಾಪು ಮೂಡಿಸಿದ್ದು, ಈ ಮೂಲಕ ಆಡು ಮುಟ್ಟದ ಸೊಪ್ಪಿಲ್ಲ, ಮಹಿಳೆ ಮಾಡದ ಸಾಧನೆಯಿಲ್ಲ ಎಂಬ ಹೊಸ ಗಾದೆ ಬರೆದಿದ್ದಾಳೆ.

    ಸಮಾಜದ ಕೊಂಕು ಮಾತುಗಳಿಗೆ ಎದೆಗುಂದದೆ ತೃತೀಯ ಲಿಂಗಿ ಪ್ರಿಯಾಂಕ ರೇಡಿಯೋ ಜಾಕಿಯಾಗಿದ್ದಾರೆ. ಇವರ ಧ್ವನಿಯನ್ನು ರೇಡಿಯೋ ಆಕ್ಟೀವ್ ಸಿಆರ್ 90.4ನಲ್ಲಿ ಪ್ರತಿನಿತ್ಯ ಕೇಳಬಹುದಾಗಿದೆ. ಭಾರತದ ಮೊಟ್ಟಮೊದಲ ತೃತೀಯ ಲಿಂಗ ಆರ್.ಜೆ ಎಂಬ ಖ್ಯಾತಿಗೆ ಪ್ರಿಯಾಂಕ ಪಾತ್ರಳಾಗಿದ್ದಾರೆ. ಇದರ ಜೊತೆಗೆ ಮಹಿಳಾ ಸಬಲೀಕರಣಕ್ಕಾಗಿ ಶ್ರಮಿಸುತ್ತಿದ್ದಾರೆ.

    ರಾಜ್ಯದ ಏಕೈಕ ಮಹಿಳಾ ಡ್ರೈವರ್ ಎಂಬ ಖ್ಯಾತಿಗೆ ಪ್ರೇಮ ನಡಪಟ್ಟಿ ಪಾತ್ರಳಾಗಿದ್ದಾರೆ. ನಗರದ ಬಿಎಂಟಿಸಿಯಲ್ಲಿ ಸುಮಾರು 10 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದು, ಪುರುಷರ ನಡುವೆ ತಮ್ಮದೆ ಆದ ಛಾಪು ಮೂಡಿಸಿ, ಅದೆಷ್ಟೋ ಮಹಿಳೆಯರಿಗೆ ಸ್ಪೂರ್ತಿಯಾಗಿದ್ದಾರೆ. ರಾಜಧಾನಿಯ ಎಲ್ಲೆಡೆಯೂ ಇವರ ಅಭಿಮಾನಿಗಳಿದ್ದಾರೆ. ಒಟ್ಟಿನಲ್ಲಿ ಇಂತಹ ಅದೆಷ್ಟೋ ಮಹಿಳೆಯರು ನಮ್ಮ ಮಧ್ಯೆ ಎಲೆ ಮರೆಯ ಕಾಯಿಯಂತೆ ಸೇವೆ ಸಲ್ಲಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಹಿಳಾ ದಿನಾಚರಣೆಯಂದು ಮಡದಿಯನ್ನು ಹೂವಿನ ಪಲಕ್ಕಿಯಲ್ಲಿ ಮೆರವಣಿಗೆ ಮಾಡಿದ ಮಾಜಿ ಸಚಿವ ಜನಾರ್ದನರೆಡ್ಡಿ!

    ಮಹಿಳಾ ದಿನಾಚರಣೆಯಂದು ಮಡದಿಯನ್ನು ಹೂವಿನ ಪಲಕ್ಕಿಯಲ್ಲಿ ಮೆರವಣಿಗೆ ಮಾಡಿದ ಮಾಜಿ ಸಚಿವ ಜನಾರ್ದನರೆಡ್ಡಿ!

    ಬಳ್ಳಾರಿ: ವಿಶ್ವ ಮಹಿಳಾ ದಿನಾಚರಣೆ ದೇಶದೆಲ್ಲೆಡೆ ವಿಭಿನ್ನವಾಗಿ ವಿಶಿಷ್ಟವಾಗಿ ಆಚರಣೆ ಮಾಡಿದರೆ, ಮಾಜಿ ಸಚಿವ ಜನಾರ್ದನರೆಡ್ಡಿ ತಮ್ಮ ಮೆಚ್ಚಿನ ಮಡದಿಯನ್ನು ಹೂವಿನಿಂದ ಅಲಂಕಾರ ಮಾಡಿದ ಸಾರೋಟದಲ್ಲಿ ಕೂರಿಸಿ ಸವಾರಿ ಮಾಡಿದ್ದಾರೆ.

    ಮಹಿಳಾ ದಿನಾಚರಣೆಯಂದು ಸಾಧನೆ ಮಾಡಿದ ಮಹಿಳೆಯರಿಗೆ, ತಾಯಂದಿರಿಗೆ ಸನ್ಮಾನ ಮಾಡಿ ಪ್ರೀತಿಯ ಕಾಣಿಕೆಯನ್ನ ನೀಡ್ತಾರೆ. ಆದ್ರೆ ಸಚಿವರು ತಮ್ಮ ಸಾಧನೆಗೆ ಬೆಂಬಲವಾಗಿದ್ದ ಪತ್ನಿ ಲಕ್ಷ್ಮಿ ಅರುಣಾರನ್ನು ಹೂ ಅಲಂಕಾರ ಮಾಡಿದ ಸೈಕಲ್ ಸಾರೋಟದಲ್ಲಿ ಕೂರಿಸಿ ಫೋಟೋಶೂಟ್ ಮಾಡಿಸಿಕೊಳ್ಳುವ ಮೂಲಕ ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಣೆ ಮಾಡಿದರು.

    ಪತ್ನಿಯನ್ನು ಹೂ ಅಲಂಕಾರದ ಸಾರೋಟದಲ್ಲಿ ಕೂರಿಸಿ ತಾವೂ ಸವಾರಿ ಮಾಡುತ್ತಿರುವ ಫೋಟೋಗಳನ್ನು ಜನಾರ್ದನ ರೆಡ್ಡಿ ತಮ್ಮ ಫೇಸ್‍ಬುಕ್ ಪೇಜ್ ನಲ್ಲಿ ಹಾಕಿ ಮಹಿಳೆಯರಿಗೆ ಮಹಿಳಾ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಮಡದಿಯೊಂದಿಗೆ ಮಹಿಳಾ ದಿನಾಚರಣೆ ಆಚರಿಸಿಕೊಂಡ ಸಚಿವರ ಫೇಸ್ ಬುಕ್ ಪೋಸ್ಟ್ ಹಲವರು ಶೇರ್ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ.