Tag: ವಿಶ್ವ ಸುಂದರಿ

  • ಶಿರಸಿ ಮೂಲದ ಯುವತಿ ಡಾ.ಶೃತಿ ಹೆಗಡೆಗೆ ವಿಶ್ವ ಸುಂದರಿ-2024 ಕಿರೀಟ!

    ಶಿರಸಿ ಮೂಲದ ಯುವತಿ ಡಾ.ಶೃತಿ ಹೆಗಡೆಗೆ ವಿಶ್ವ ಸುಂದರಿ-2024 ಕಿರೀಟ!

    ಕಾರವಾರ: ಉತ್ತರ ಕನ್ನಡ (UttaraKannada) ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.

    ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ (Shruti Hegde) ಅಮೆರಿಕದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ. ಈಕೆ ಈ ಮೊದಲು 2018 ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ (Miss South India) ವಿಜೇತೆಯಾಗಿದ್ದರು. 2023 ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಈಕೆ, ಈಗ ಅಮೆರಿಕದಲ್ಲಿ ನಡೆದ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಇದನ್ನೂ ಓದಿ: 2,000 ರೂ. ಮುಖಬೆಲೆಯ 7,581 ಕೋಟಿ ಮೌಲ್ಯದ ನೋಟುಗಳು ಜನರ ಬಳಿಯಿದೆ: RBI

    ಅಮೆರಿಕದ (USA) ಫ್ಲೋರಿಡಾದಲ್ಲಿ ಕಳೆದ ಜೂ.6 ರಿಂದ 10ರ ವರೆಗೆ ಆಯೋಜಿತವಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟು 40 ದೇಶಗಳ ಸುಂದರಿಯವರು ಪೈಪೋಟಿಯಲ್ಲಿದ್ದರು. ರಾಷ್ಟ್ರೀಯ ಉಡುಗೆ, ಈಜು ಉಡುಗೆ, ಪ್ರಶ್ನೋತ್ತರ, ವಯಕ್ತಿಕ ಸಂದರ್ಶನ ಸೇರಿ ಹಲವು ಸುತ್ತುಗಳಲ್ಲಿ ಸ್ಪರ್ಧೆ ಸಾಗಿತ್ತು. ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿದ ಶೃತಿ ಹೆಗಡೆ ಗೆಲುವು ಸಾಧಿಸಿದ್ದಾರೆ.‌ ಇದನ್ನೂ ಓದಿ: ಮೋದಿಗೆ ತಲೆಬಾಗಿ ನಮಿಸಿದ್ದು ಸರಿಯಲ್ಲ- ಸ್ಪೀಕರ್‌ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

    ಹುಬ್ಬಳ್ಳಿಯಲ್ಲಿಯೇ ಎಂಬಿಬಿಎಸ್ ಪೂರೈಸಿರುವ ಡಾ.ಶೃತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ ಹಂಬಲದಿಂದ‌ ತುಮಕೂರಿನಲ್ಲಿ ಎಮ್.ಡಿ. ಅಧ್ಯಯನ ನಡೆಸುತ್ತಿದ್ದಾರೆ. ಈಕೆ ಭರತನಾಟ್ಯ ಕಲಾವಿದೆಯೂ ಆಗಿದ್ದು, ದುಬೈ, ಮಾಲ್ಡೀವ್ಸ್‌, ಭೂತಾನ್ ಮುಂತಾದ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾಳೆ. ಕೆಲವು ಧಾರವಾಹಿ, ಕನ್ನಡ ಚಲನಚಿತ್ರ, ವೆಬ್ ಸಿರೀಸ್ ನಲ್ಲಿ ನಟಿಸಿದ್ದಾಳೆ. ಇದನ್ನೂ ಓದಿ: ಆಫ್ರಿಕಾ ವಿರುದ್ಧ 10 ವಿಕೆಟ್‌ಗಳ ಜಯ – ಭಾರತದ ವನಿತೆಯರಿಗೆ ಮತ್ತೊಂದು ಕಿರೀಟ! 

  • ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022’ ಸುಂದರಿ ಸಿನಿ ಶೆಟ್ಟಿಯ ಸಂಪೂರ್ಣ ಪರಿಚಯ : ನಮ್ಮೂರು, ನಮ್ಮೂರು ಹುಡುಗಿ

    ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022’ ಸುಂದರಿ ಸಿನಿ ಶೆಟ್ಟಿಯ ಸಂಪೂರ್ಣ ಪರಿಚಯ : ನಮ್ಮೂರು, ನಮ್ಮೂರು ಹುಡುಗಿ

    ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2022 ಟೈಟಲ್ ಗೆದ್ದು ಕಿರೀಟವನ್ನು ಮುಡಿಗೇರಿಸಿಕೊಂಡಿರುವ ಉಡುಪಿ ಮೂಲದ ಸಿನಿ ಶೆಟ್ಟಿ ರಾತ್ರೋರಾತ್ರಿ ಫೇಮಸ್ ಆಗಿದ್ದಾರೆ. ಈ ಸುಂದರಿ ಕರ್ನಾಟಕ ಮೂಲದವರು ಎಂದು ಗೊತ್ತಾಗುತ್ತಿದ್ದಂತೆಯೇ ಗೂಗಲ್ ನಲ್ಲಿ ಅತೀ ಹೆಚ್ಚು ಸರ್ಚ್ ಆಗಿದ್ದಾರೆ. ಅವರು ಹುಟ್ಟಿದ್ದು, ಬೆಳೆದದ್ದು, ಎಜ್ಯುಕೇಷನ್, ಉದ್ಯೋಗಿ, ಅಪ್ಪ ಅಮ್ಮ ಹೀಗೆ ಅವರ ವಿವರವನ್ನು ಅಭಿಮಾನಿಗಳು ಕೆದುಕುತ್ತಿದ್ದಾರೆ. ಆ ಎಲ್ಲ ವಿವರ ಇಲ್ಲಿವೆ.

    ಹೌದು, ಸಿನಿ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಇನ್ನಂಜೆಯವರು. ಹುಟ್ಟಿದ್ದು ಮುಂಬೈನಲ್ಲಿ. ಮುಂಬೈನ ಸೇಂಟ್ ಡೊಮಿನಿಕ್ ಸವಿಯೋ ವಿದ್ಯಾಲಯದಲ್ಲಿ ಶಾಲಾ ಶಿಕ್ಷಣ ಮುಗಿಸಿ, ನಂತರ ಅಕೌಂಟಿಂಗ್ ಅಂಡ್ ಫೈನಾನ್ಸ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ. ಸದ್ಯ ಚಾರ್ಟರ್ಡ್ ಫೈನಾನ್ಸಿಯಲ್ ಅನಾಲಿಸ್ಟ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಾರೆ. ಸಿನಿ ಕೇವಲ ಸೌಂದರ್ಯದ ಕಣಿ ಮಾತ್ರವಲ್ಲ, ಅತ್ಯುತ್ತಮ ನೃತ್ಯಪಟು ಕೂಡ. ತಮ್ಮ 4ನೇ ವಯಸ್ಸಿನಲ್ಲೇ ನೃತ್ಯ ಕಲಿಯಲು ಆರಂಭಿಸಿರುವ ಅವರು 14ನೇ ವಯಸ್ಸಿನಲ್ಲಿ ಅರಂಗ್ರೇಟಂ ಮಾಡಿದ್ದರು. ಇದನ್ನೂ ಓದಿ:ಥೇಟ್ ನಯನತಾರಾ ರೀತಿಯೇ ಕಂಗೊಳಿಸಿದ ‘ಸತ್ಯ’ ಧಾರಾವಾಹಿಯ ಗೌತಮಿ

    ಉಡುಪಿಯ ಇನ್ನಂಜೆಯಲ್ಲಿ ಸುದೀಪ್ ಶೆಟ್ಟಿ ತಂದೆಯ ಸಂಬಂಧಿಕರು ಉಡುಪಿ ಶಂಕರಪುರ ಕಾಪು ಭಾಗದಲ್ಲಿ ನೆಲೆಸಿದ್ದಾರೆ. ಸಿನಿ ಶೆಟ್ಟಿ ಮಹಾರಾಷ್ಟ್ರದಲ್ಲಿ ಹುಟ್ಟಿ ಬೆಳೆದಿದ್ದು ಕುಟುಂಬದ ಕಾರ್ಯಕ್ರಮಗಳು ಇದ್ದಾಗ ಉಡುಪಿಗೆ ಬರುತ್ತಾರೆ. ಸಿನಿ ಮುಂಬೈನಲ್ಲಿ ಹುಟ್ಟಿ ಬೆಳೆದರೂ ಕೂಡಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.  ಭಾನುವಾರ ಜುಲೈ 04 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಫಿನಾಲೆಯಲ್ಲಿ ಸಿನಿ ಶೆಟ್ಟಿ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಕೊಂಡಿದ್ದಾರೆ.

    ರಾಜಸ್ಥಾನದ ರೂಬಲ್ ಶೇಕಾವತ್ ಫಸ್ಟ್ ರನ್ನರಪ್, ಉತ್ತರ ಪ್ರದೇಶದ ಶಿಂತಾನಾ ಚೌಹಾಣ್ ಎರಡನೇ ರನ್ನರ್ ಅಪ್ ಆಗಿದ್ದಾರೆ. ಈ ಪ್ರಶಸ್ತಿ ಗೆಲ್ಲುವ ಮೂಲಕ 71ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಸಿನಿ ಶೆಟ್ಟಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಉಡುಪಿಯ ಕುಟುಂಬಿಕರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮಹಾರಾಷ್ಟ್ರದಲ್ಲಿ ಹುಟ್ಟಿ ಬೆಳೆದಿದ್ದರೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರತೀಯ ನಾರಿ ಡಯಾನಾ ಹೆಡನ್ ಅಲ್ಲ, ಐಶ್ವರ್ಯಾ ರೈ: ಮೋದಿ ಎಚ್ಚರಿಕೆಯ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ಕೊಟ್ಟ ತ್ರಿಪುರಾ ಸಿಎಂ

    ಭಾರತೀಯ ನಾರಿ ಡಯಾನಾ ಹೆಡನ್ ಅಲ್ಲ, ಐಶ್ವರ್ಯಾ ರೈ: ಮೋದಿ ಎಚ್ಚರಿಕೆಯ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ಕೊಟ್ಟ ತ್ರಿಪುರಾ ಸಿಎಂ

    ಅಗರ್ತಲಾ: ಇತ್ತೀಚೆಗಷ್ಟೇ ಇಂಟರ್ ನೆಟ್ ಬಗ್ಗೆ ಹೇಳಿಕೆ ನೀಡಿದ್ದ ತ್ರಿಪುರಾ ಸಿಎಂ ವಿಪ್ಲವ್ ದೇವ್ ಇದೀಗ ಮತ್ತೊಂದು ಹೇಳಿಕೆ ನೀಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

    ಅಗರ್ತಲಾದ ಪ್ರಜ್ಞಾ ಭವನ್ ನಲ್ಲಿ ನಡೆದ ಕೈ ಮಗ್ಗಗಳು ಮತ್ತು ಕರಕುಶಲ ವಸ್ತುಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಐಶ್ವರ್ಯಾ ರೈ ನಿಜವಾದ ಭಾರತೀಯ ನಾರಿ. ಆದ್ರೆ ಮಾಜಿ ವಿಶ್ವಸುಂದರಿ ಡಯಾನಾ ಹೆಡನ್ ಅಲ್ಲ. ಭಾರತೀಯ ನಾರಿ ಲಕ್ಷ್ಮಿ, ಸರಸ್ವತಿಯರನ್ನು ಪ್ರತಿನಿಧಿಸುತ್ತಾರೆ. ಐಶ್ವರ್ಯ ರೈ ಸಹ ಭಾರತೀಯ ಮಹಿಳೆಯರನ್ನು ಪ್ರತಿನಿಧಿಸುತ್ತಾರೆ ಅಂತ ಹೇಳಿದ್ದಾರೆ.

    `ಐಶ್ವರ್ಯ ರೈ ಅವರಿಗೆ ಈ ಕಿರೀಟ ತೊಡಿಸಿದ್ದರಲ್ಲಿ ಅರ್ಥವಿದೆ. ಆದರೆ ಡಯಾನಾ ಹೆಡನ್ ಗೆ ಈ ಪ್ರಶಸ್ತಿ ಸಿಕ್ಕಿದ್ದು ಹೇಗೆ?’ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ:  ಮಹಾಭಾರತದ ಕಾಲದಲ್ಲೇ ಇಂಟರ್ ನೆಟ್ ಇತ್ತು : ತ್ರಿಪುರಾ ಸಿಎಂ

    `ಹಿಂದೆ ಭಾರತೀಯ ಮಹಿಳೆಯರು ಸೌಂದರ್ಯವರ್ಧಕ, ಶಾಂಪೂ ಮೊದಲಾದವುಗಳನ್ನು ಬಳಸುತ್ತಿರಲಿಲ್ಲ. ಆ ಸಂದರ್ಭದಲ್ಲಿ ಇವುಗಳೆಲ್ಲ ಅಂತಾರಾಷ್ಟ್ರೀಯ ಮಾಫಿಯಾಗಳಾಗಿದ್ದವು. ನಮ್ಮ ದೇಶದಲ್ಲಿ ಸಾಕಷ್ಟು ಮಾರುಕಟ್ಟೆ ಇದೆ. ಇಂದು ದೇಶದ ಮೂಲೆ ಮೂಲೆಯಲ್ಲಿಯೂ ಬ್ಯೂಟಿ ಪಾರ್ಲರ್ ಗಳು ತಲೆಯೆತ್ತಿವೆ. ಆದರೆ ಇವುಗಳಿಂದ ಸಿಗುವ ಸೌಂದರ್ಯ ನಿಜವಾದ ಸೌಂದರ್ಯವಲ್ಲ’ ಎಂದು ಅವರು ತಿಳಿಸಿದ್ದಾರೆ.

    ಒಟ್ಟಿನಲ್ಲಿ  ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ಎಲ್ಲಾ ನಾಯಕರಿಗೂ ಸೂಚನೆ ನೀಡಿದ್ದರು. ವಿನಾಕಾರಣ ಯಾರೊಬ್ಬರೂ ಮಾಧ್ಯಮದ ಮುಂದೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದೆಂದು ಎಚ್ಚರಿಕೆ ನೀಡಿದ್ದರು. 1994ರಲ್ಲಿ ಐಶ್ವರ್ಯಾ ರೈ ವಿಶ್ವ ಸುಂದರಿಯಾದ್ರೆ, 1997 ರಲ್ಲಿ ಡಯಾನಾ ಹೆಡನ್ ವಿಶ್ವ ಸುಂದರಿ ಪಟ್ಟವನ್ನು ತನ್ನ ಮುಡಿಗೇರಿಸಿಕೊಂಡಿದ್ದರು.

  • ಭಾರತಕ್ಕೆ ಮರಳಿದ ವಿಶ್ವ ಸುಂದರಿಗೆ ಸಿಕ್ತು ಅದ್ಧೂರಿ ಸ್ವಾಗತ: ಫೋಟೋಗಳಲ್ಲಿ ನೋಡಿ

    ಭಾರತಕ್ಕೆ ಮರಳಿದ ವಿಶ್ವ ಸುಂದರಿಗೆ ಸಿಕ್ತು ಅದ್ಧೂರಿ ಸ್ವಾಗತ: ಫೋಟೋಗಳಲ್ಲಿ ನೋಡಿ

    ಮುಂಬೈ: 108 ರಾಷ್ಟ್ರಗಳ ಸುಂದರಿಯರನ್ನು ಹಿಂದಿಕ್ಕಿ 2017ರ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡ ಮಾನುಷಿ ಛಿಲ್ಲರ್ ತಮ್ಮ ತವರಿಗೆ ಇಂದು ಮರಳಿದ್ದಾರೆ.

    ವಿದೇಶದಲ್ಲಿ ಭಾರತ ಬೀಗುವಂತೆ ಮಾಡಿದ್ದ ಮಾನುಷಿ ಛಿಲ್ಲರ್ ಮೂಲತಃ ಹರ್ಯಾಣದವರಾಗಿದ್ದು, ಶನಿವಾರ ರಾತ್ರಿ ಸುಮಾರು 1 ಗಂಟೆಗೆ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರಿಗೆ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತ ಸಿಕ್ಕಿದೆ.

    ಮಾನುಷಿ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಅವರಿಗೆ ಕಾಯುತ್ತಿದ್ದರು. ಬಂದ ತಕ್ಷಣ ಅಭಿಮಾನಿಗಳು `ಇಂಡಿಯಾ, ಇಂಡಿಯಾ’ ಎಂದು ಹೆಮ್ಮೆಯಿಂದ ಕೂಗಿದ್ದಾರೆ. ಇನ್ನೂ ಕೆಲವರು ತ್ರಿವರ್ಣ ಧ್ವಜವನ್ನು ಹಿಡಿದ್ದರು. ಜೊತೆಗೆ ಮಾನುಷಿಯವರ ಪೋಸ್ಟರ್ ಹಿಡಿದು ಸಂತಸದಿಂದ ವಿಶ್ವ ಸುಂದರಿಯನ್ನು ಸ್ವಾಗತಿಸಿದ್ದಾರೆ. ಒಟ್ಟಿನಲ್ಲಿ ನಿಲ್ದಾಣದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದಂತಿತ್ತು.

    “ನಮ್ಮ ದೇಶಕ್ಕೆ ಹಿಂದಿರುಗಿರುವುದು ನನಗೆ ತುಂಬಾ ಖುಷಿಯಾಗಿದೆ. ಅದ್ಧೂರಿಯಾಗಿ ಸ್ವಾಗತ ಕೋರಿದಕ್ಕೆ ತುಂಬಾ ಧನ್ಯವಾದಗಳು” ಎಂದು ಮಾನುಷಿ ಟ್ವೀಟ್ ಮಾಡಿ ತಮ್ಮ ಆನಂದವನ್ನು ವ್ಯಕ್ತಪಡಿಸಿದ್ದಾರೆ.

    ವಿಮಾನ ನಿಲ್ದಾಣದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿತ್ತು. ಚೀನಾದ ಸಾನ್ಯಾ ಸಿಟಿಯಲ್ಲಿ ಇದೇ ನವೆಂಬರ್ 18 ರಂದು ನಡೆದ ಮಿಸ್ ವಲ್ರ್ಡ್-2017 ಸ್ಪರ್ಧೆಯಲ್ಲಿ 21 ವರ್ಷದ ಮನುಷಿ ಛಿಲ್ಲರ್ ವಿಶ್ವಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದರು.

    ಭಾರತದ ಮೆಡಿಕಲ್ ವಿದ್ಯಾರ್ಥಿನಿಯಾಗಿರುವ ಮನುಷಿ, 1994 ರಲ್ಲಿ ಐಶ್ವರ್ಯ ರೈ ಮಿಸ್ ವಲ್ರ್ಡ್ ಆಗಿ ಹೊರಹೊಮ್ಮಿದ್ದರು. ನಂತರ 1997ರಲ್ಲಿ ಡಯಾನಾ ಹೇಡನ್, 1999ರಲ್ಲಿ ಯುಕ್ತ ಮುಖಿ ಹಾಗೂ 2000 ರಲ್ಲಿ ಪ್ರಿಯಾಂಕಾ ಚೋಪ್ರಾ ಮಿಸ್ ವಲ್ರ್ಡ್ ಪಟ್ಟ ಅಲಂಕರಿಸಿದ್ದರು. ಇದೀಗ 17 ವರ್ಷಗಳ ಬಳಿಕ ಮಾನುಷಿ ಭಾರತಕ್ಕೆ ವಿಶ್ವಸುಂದರಿ ಪಟ್ಟ ತಂದಿದ್ದಾರೆ. ಭಾರತದಲ್ಲಿ 17 ವರ್ಷಗಳ ನಂತರ ಮಿಸ್ ವಲ್ರ್ಡ್ ಪಟ್ಟ ದಕ್ಕಿಸಿಕೊಟ್ಟಿದ್ದಾರೆ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

    ಇದನ್ನು ಓದಿ: ವಿಶ್ವಸುಂದರಿ ಮಾನುಷಿ ಚಿಲ್ಲರ್ ಮುಡಿಗೇರಿದ ಕಿರೀಟದ ಬೆಲೆ ಎಷ್ಟು ಗೊತ್ತಾ?

    https://twitter.com/stregismumbai/status/934534893115138048

    https://www.instagram.com/p/Bb7Zf-gAzDA/?hl=en&tagged=indiawelcomesmissworld

     

     

  • ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಮೊದಲು ಡ್ಯಾನ್ಸ್ ಸ್ಟೆಪ್ ಕಲಿತಿದ್ದು ಬೆಂಗ್ಳೂರಿನಲ್ಲಿ!

    ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಮೊದಲು ಡ್ಯಾನ್ಸ್ ಸ್ಟೆಪ್ ಕಲಿತಿದ್ದು ಬೆಂಗ್ಳೂರಿನಲ್ಲಿ!

    ಬೆಂಗಳೂರು: ವಿಶ್ವ ಸುಂದರಿ ಕಿರೀಟವನ್ನು ಪಡೆದ 21 ವರ್ಷದ ಮಾನುಷಿ ಚಿಲ್ಲರ್‍ ಗೂ ಬೆಂಗಳೂರಿಗೂ ಸಂಬಂಧವಿದೆ. ಮಾನುಷಿ ಅವರು ತಮ್ಮ ಬಾಲ್ಯದ 5 ವರ್ಷಗಳನ್ನು ಬೆಂಗಳೂರಿನಲ್ಲಿ ಕಳೆದಿರುವುದು ವಿಶೇಷ.

    ಹೌದು. ಬಾಲ್ಯವನ್ನು ಕಳೆಯುವುದರ ಜೊತೆಗೆ ಅವರು ನೃತ್ಯ ಅಭ್ಯಾಸವನ್ನು ಆರಂಭಿಸಿದ್ದು ಬೆಂಗಳೂರಿನಲ್ಲೇ. ಎಳವೆಯಲ್ಲೇ ಪ್ರತಿಭಾವಂತರಾಗಿದ್ದ ಚಿಲ್ಲರ್ ಓದುವುದರಲ್ಲಿ ಟಾಪರ್ ಆಗಿದ್ದರು. 1997ರ ಮೇ 14 ರಂದು ಹರ್ಯಾಣದ ರೊಹ್ಟಕ್ ನಲ್ಲಿ ಜನಿಸಿದ್ದ ಮಾನುಷಿ 2 ವರ್ಷವಿದ್ದಾಗ ತಂದೆ ಮಿತ್ರ ಬಸು ಚಿಲ್ಲರ್ ಮತ್ತು ತಾಯಿ ನೀಲಮ್ ಚಿಲ್ಲರ್ ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿನಲ್ಲಿದ್ದಾಗ ಮಾನುಷಿ ಕುಚುಪುಡಿ ಕಲಿಯೋಕೆ ಆರಂಭಿಸಿದ್ದರು.

    ಮಾನುಷಿ ಈಗ ಸೋನೆಪತ್ ನಲ್ಲಿ ಬಿಪಿಎಸ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮೂರನೇ ವರ್ಷದ ಎಂಬಿಬಿಎಸ್ ಓದುತ್ತಿದ್ದು, ಅಲ್ಲಿನ ಪ್ರಾಧ್ಯಾಪಕಿ ಮತ್ತು ಸಂಬಂಧಿ ಆಗಿರುವ ಡಾ. ಉಷಾ ಚಿಲ್ಲರ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಮಾನುಷಿ ಹರ್ಯಾಣದಲ್ಲಿ ಜನಿಸುವ ವೇಳೆ ತಂದೆ ಮಿತ್ರ ಚಿಲ್ಲರ್ ಅವರು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ದಿ ಸಂಸ್ಥೆ(ಡಿಆರ್‍ಡಿಓ)ದಲ್ಲಿ ಹಿರಿಯ ವಿಜ್ಞಾನಿಯಾಗಿ ನೇಮಕಗೊಂಡಿದ್ದರು. ಮಾನುಷಿಗೆ 2 ವರ್ಷವಿದ್ದಾಗ ಆಕೆಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದರು. ಮಾನುಷಿ ಹಾಗೂ ಅವರ ಪೋಷಕರು 1999-2004 ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ತಿಳಿಸಿದ್ದಾರೆ.

    ಮಾನುಷಿ ಎಲ್‍.ಕೆ.ಜಿಯಿಂದ ಮೊದಲನೇ ತರಗತಿವರೆಗೂ ಬೆಂಗಳೂರಿನಲ್ಲಿಯೇ ಓದಿದ್ದರು. ನಂತರ ಹರ್ಯಾಣದಲ್ಲಿ ಓದನ್ನು ಮುಂದುವರಿಸುತ್ತಿದ್ದಾಳೆ. ಆಕೆ ಎಲ್ಲರ ಜೊತೆ ತುಂಬ ಸಲುಗೆಯಿಂದ ಹಾಗೂ ಹತ್ತಿರವಾಗಿದ್ದರು ಹಾಗೂ ತುಂಬಾ ಚೆನ್ನಾಗಿ ಓದುತ್ತಿದ್ದಳು. ಬೆಂಗಳೂರಿನಿಂದ ಬಂದ ಮೇಲೆ ಸೆಂಟ್. ಥಾಮಸ್ಸ್ ಶಾಲೆಗೆ ಸೇರಿದ್ದ ಆಕೆ ಅಲ್ಲೂ ಕೂಡ ಟಾಪರ್ ಆಗಿದ್ದಳು ಎಂದು ಹೊಗಳಿದರು.

    ಶನಿವಾರ ವಿಶ್ವ ಸುಂದರಿ ಕಿರೀಟವನ್ನು ಪಡೆಯುತ್ತಿದ್ದಾಗ ಮಾನುಷಿ ಓದಿದ್ದ ಶಾಲೆಯಲ್ಲಿ ಶಾಲಾ ವಾಷಿಕೋತ್ಸವವನ್ನು ಆಚರಿಸುತ್ತಿದ್ದರು. ಶಾಲೆಯ ಮುಖ್ಯ ಶಿಕ್ಷಕಿಯಾದ ಅನುರಾಧ ಅಮ್ಸ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾನುಷಿ ಮೂರನೇ ತರಗತಿಗೆ ನಮ್ಮ ಶಾಲೆ ಸೇರಿದ್ದಳು. ಆಕೆ ಶಾಲೆಯಲ್ಲಿದ್ದಾಗ ಎಲ್ಲರಿಗೂ ಹತ್ತಿರವಾಗಿದ್ದರು. ಅವರಿಗೆ ಸಾಂಸ್ಕೃತಿಕ ನೃತ್ಯಗಳಲ್ಲಿ ಸಾಕಷ್ಟು ಆಸಕ್ತಿಯಿತ್ತು. ಈ ಶಾಲೆಗೆ ಸೇರುವ ಮುಂಚೆ ಬೆಂಗಳೂರಿನಲ್ಲಿ ಸಾಂಸ್ಕೃತಿಕ ನೃತ್ಯವನ್ನು ಅಭ್ಯಾಸ ಮಾಡಿದ್ದರು ಎಂದು ಅನುರಾಧ ಅವರು ತಮ್ಮ ಸಂತೋಷವನ್ನು ವ್ಯಕ್ತ ಪಡಿಸಿದ್ದಾರೆ.

    ಚೀನಾದ ಸನ್ಯಾದಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ 108 ದೇಶಗಳ ಸುಂದರಿಯರನ್ನು ಹಿಂದಿಕ್ಕುವ ಮೂಲಕ ಮಾನುಷಿ 2017ರ ಮಿಸ್ ವಲ್ಡ್ ಆಗಿದ್ದಾರೆ. ಮಿಸ್ ಇಂಗ್ಲೆಂಡ್ ಸ್ಟೆಫನಿ ಹಿಲ್ ಮೊದಲ ರನ್ನರ್ ಅಪ್ ಆದರೆ, ಮೆಕ್ಸಿಕೋ ಸುಂದರಿ ಆಂಡ್ರೆಜಾ ಮೆಜಾ ಎರಡನೇ ರನ್ನರ್ ಅಪ್ ಸ್ಥಾನವನ್ನು ತಮ್ಮದಾಗಿಸಿಕೊಂಡರು.

    ಟಾಪ್ 5 ಸ್ಥಾನಕ್ಕೆ ತಲುಪಿದಾಗ ಪ್ರಶ್ನೋತ್ತರ ಸುತ್ತಿನಲ್ಲಿ ಮಾನುಷಿ ಅವರಿಗೆ, ಅತಿ ಹೆಚ್ಚು ಸಂಬಳ ನೀಡುವ ಯಾವ ವೃತ್ತಿಗೆ ನೀವು ಅರ್ಹರು ಮತ್ತು ಯಾಕೆ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಈ ವೇಳೆ ಸಂಬಳ ಯಾವುದೇ ವೃತ್ತಿಯ ಗೌರವವನ್ನು ನಿರ್ಧರಿಸುವುದಿಲ್ಲ. ತಾಯಿಯಾಗುವ ವೃತ್ತಿ ಮಹಿಳೆಯ ಜೀವನದಲ್ಲಿ ದೊರೆಯುವ ಅತ್ಯಂತ ಗೌರವಯುತವಾದ ಹುದ್ದೆಯಾಗಿದೆ. ಕೇವಲ ಹಣದಿಂದ ಮಾತ್ರ ಪ್ರೀತಿ ಮತ್ತು ಗೌರವ ಸಿಗುತ್ತದೆ ಎಂಬ ವಿಚಾರದಲ್ಲಿ ನನಗೆ ನಂಬಿಕೆಯಿಲ್ಲ. ನನ್ನ ತಾಯಿ ನನಗೆ ಜೀವನದ ಅತಿ ದೊಡ್ಡ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ. ಹಾಗಾಗಿ ತಾಯಿಯಾಗುವ ವೃತ್ತಿ ಜಗತ್ತಿನಲ್ಲಿ ಅತ್ಯಂತ ಗೌರವಯುಕ್ತವಾದದ್ದು ಎಂದು ಮಾನುಷಿ ಭಾವನಾತ್ಮಕವಾಗಿ ಉತ್ತರಿಸಿದ್ದರು.

    https://www.youtube.com/watch?v=g9mR4KsHd6Q