Tag: ವಿಶ್ವ ಹಿಂದೂ ಪರಿಷತ್

  • ಅಖಂಡ ಭಾರತ ಕೇಸರಿಮಯ ಆಗಲಿದೆ – ವಿಶ್ವ ಹಿಂದೂ ಪರಿಷತ್‌ ಮುಖಂಡ ಗುಡುಗು

    ಅಖಂಡ ಭಾರತ ಕೇಸರಿಮಯ ಆಗಲಿದೆ – ವಿಶ್ವ ಹಿಂದೂ ಪರಿಷತ್‌ ಮುಖಂಡ ಗುಡುಗು

    – ಭಗವಾಧ್ವಜ ಅಳವಡಿಸಲು 20 ಲಕ್ಷದ ಬಾಂಡ್ ಬರೆಸಿಕೊಂಡರೆಂದು ದಿನೇಶ್ ಮೆಂಡನ್ ಅಸಮಾಧಾನ

    ಉಡುಪಿ: ಇಲ್ಲಿನ ಹಿಂದೂ ಸಮಾಜೋತ್ಸವಕ್ಕೆ ನಗರದಲ್ಲಿ ಕೇಸರಿ ಪತಾಕೆ ಮತ್ತು ಭಗವಾಧ್ವಜ (Bhagwa Flag) ಅಳವಡಿಸಲು ಪೊಲೀಸ್ ಇಲಾಖೆ (Udupi Police Department) 10 ಮತ್ತು 20 ಲಕ್ಷದ ಬಾಂಡ್ ಬರೆಸಿಕೊಂಡಿದ್ದಾರೆ ವಿಶ್ವ ಹಿಂದೂ ಪರಿಷತ್‌ ಪ್ರಧಾನ ಕಾರ್ಯದರ್ಶಿ ದಿನೇಶ್ ಮೆಂಡನ್ ಅಸಮಾಧಾನ ಹೊರಹಾಕಿದ್ದಾರೆ.

    ಉಡುಪಿ (Udupi) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2024ರಲ್ಲಿ ಪ್ರತಿಯೊಬ್ಬರ ಮನೆಯಲ್ಲಿಯೂ ಭಗವಾಧ್ವಜ ಹಾಕುತ್ತೇವೆ. ಆಗ ಎಷ್ಟು ಲಕ್ಷ ಬಾಂಡ್‌ ಬರೆಸಿಕೊಳ್ಳುತ್ತೀರಿ..? ಎಂದು ಪ್ರಶ್ನಿಸಿದರಲ್ಲದೇ, ನಾಉ ಒಂದು ಕೋಟಿ ರೂಪಾಯಿ ಬಾಂಡ್‌ ಕೊಡಲು ಸಿದ್ಧರಿದ್ದೇವೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಪ್ರತಿಭಟನಾ ನಿರತ ಕಾರ್ಯಕರ್ತರು ಪೊಲೀಸ್ ವಶಕ್ಕೆ – ಮುನಿರತ್ನ ಏಕಾಂಗಿಯಾಗಿ ಪ್ರತಿಭಟನೆ

    2024ಕ್ಕೆ ಶ್ರೀರಾಮಂದಿರ (Sri Rama Mandira) ಉದ್ಘಾಟನೆಗೊಳ್ಳಲಿದೆ. ಆಗ ನಗರ ಮಾತ್ರವಲ್ಲ, ಪ್ರತಿಯೊಬ್ಬರ ಮನೆಯಲ್ಲೂ ಭಗವಾಧ್ವಜ ಹಾರಾಡುತ್ತದೆ. ಆಗ ಪೊಲೀಸ್ ಇಲಾಖೆ ಹಿಂದೂಗಳ ಮನೆ-ಮನೆಗೆ ಭೇಟಿ ನೀಡಿ 10 ಲಕ್ಷ ಅಲ್ಲ, 10 ಕೋಟಿ ರೂ. ಬಾಂಡ್ ಬರೆಸಿಕೊಂಡರೂ ನಾವು ಸಹಿ ಹಾಕಲು ಸಿದ್ಧರಿದ್ದೇವೆ. ಮುಂದೊಂದು ದಿನ ಅಖಂಡ ಭಾರತ ಕೇಸರಿಮಯ ಆಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಲಂಕಾ ವಿರುದ್ಧ ಮೋಸದಾಟವಾಡಿತಾ ಪಾಕ್‌? – ಮತ್ತೆ ಮತ್ತೆ ಟೀಕೆಗೆ ಗುರಿಯಾಗ್ತಿರೋದೇಕೆ?

    ಹಿಂದೂ ಸಮಾಜೋತ್ಸವ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಪೊಲೀಸರ ಮೂಲಕ ಕಿರುಕುಳ ನೀಡುತ್ತಿದೆ. ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದೆ. ವಿಹೆಚ್‌ಪಿ ಮುಖಂಡ ಶರಣ್ ಪಂಪ್ ವೆಲ್‌ಗೂ ನಿರ್ಬಂಧ ಹಾಕಿದೆ. ಹಿಂದೂಗಳನ್ನು ಕೆಣಕಿದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಹೈಪರ್ ಟೆನ್ಷನ್, ಮೂಡ್ ಸ್ವಿಂಗ್ ಖಾಯಿಲೆಯಿಂದ ಬಳಲುತ್ತಿರೋ ಪತ್ನಿಯಿಂದ ಪತಿಗೆ ಕಿರುಕುಳ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವ ಹಿಂದೂ ಪರಿಷತ್‍ಗೆ ತುಂಬಿತು 60 ವರ್ಷ- ಉಡುಪಿ ಶ್ರೀಕೃಷ್ಣನ ನಗರ ಕೇಸರಿಮಯ

    ವಿಶ್ವ ಹಿಂದೂ ಪರಿಷತ್‍ಗೆ ತುಂಬಿತು 60 ವರ್ಷ- ಉಡುಪಿ ಶ್ರೀಕೃಷ್ಣನ ನಗರ ಕೇಸರಿಮಯ

    ಉಡುಪಿ: ಕರಾವಳಿ ಜಿಲ್ಲೆ ಉಡುಪಿ (Udupi) ಕೇಸರಿಮಯವಾಗಿದೆ. ಪ್ರಮುಖ ರಸ್ತೆಗಳು ಬ್ಯಾನರ್ ಬಂಟಿಂಗ್ಸ್ ಪತಾಕೆಗಳಿಂದ ರಾರಾಜಿಸುತ್ತಿದೆ. ವಿಶ್ವ ಹಿಂದೂ ಪರಿಷತ್ (Vishwa Hindu Parishad) ಸಂಘಟನೆಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೃಹತ್ ಪಾದಯಾತ್ರೆ ಮತ್ತು ಸಮಾವೇಶಕ್ಕೆ ಕೃಷ್ಣನ ನಗರಿ ಸಜ್ಜಾಗಿದೆ.

    ದೇಶದ ಅತಿ ದೊಡ್ಡ ಸಂಘಟನೆ ವಿಶ್ವ ಹಿಂದೂ ಪರಿಷತ್‍ಗೆ 60 ವರ್ಷ ತುಂಬಿದೆ. ಹೀಗಾಗಿ ದೇಶಾದ್ಯಂತ ಹಿಂದೂ ಸಮಾಜೋತ್ಸವ, ಮೆರವಣಿಗೆ ಜಾಥಾಗಳು ನಡೆಯುತ್ತಿದೆ. ಕರ್ನಾಟಕದಲ್ಲಿ 10 ಬೃಹತ್ ಸಮಾವೇಶಗಳನ್ನ ಮಾಡಲು ವಿಶ್ವ ಹಿಂದೂ ಪರಿಷತ್ ನಿರ್ಧರಿಸಿದೆ. ಈ ಪೈಕಿ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದೆ. ವಿಶ್ವ ಹಿಂದೂ ಪರಿಷತ್ ಭಜರಂಗದಳ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಶೌರ್ಯ ಜಾಗರಣಾ ಹೆಸರಿನಲ್ಲಿ ಜಿಲ್ಲೆಯ ಸುಮಾರು 50,000 ಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: Bigg Boss: ಟೀಕೆ, ಟ್ರೋಲ್‌ಗಳ ಬಗ್ಗೆ ಮೌನ ಮುರಿದ ಡ್ರೋನ್ ಪ್ರತಾಪ್

    ಉಡುಪಿಯ ಜೋಡುಕಟ್ಟೆಯಿಂದ ಆರಂಭವಾಗಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ಎಂಜಿಎಂ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಕಾನೂನು ವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿದ್ದಾರೆ. ಶಿವಮೊಗ್ಗ ಘಟನೆ ನಂತರ ಹಲವಾರು ಮುನ್ನೆಚ್ಚರಿಕೆ ಕ್ರಮವನ್ನು ವಹಿಸಲಾಗಿದೆ. ಅಧಿಕಾರಿ ಸಿಬ್ಬಂದಿ ಸೇರಿ 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆಯಾಗಲಿದೆ. 2 ಕೆಎಸ್‍ಆರ್‍ಪಿ, 5 ಡಿಎಆರ್ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ, ಸುಪ್ರೀಂಕೋರ್ಟ್ ಆದೇಶಗಳನ್ನು ಜಾರಿ ಮಾಡಿದ್ದೇವೆ. ಆಯೋಜಕರು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎಂದು ಎಸ್.ಪಿ ಅರುಣ್ ಹೇಳಿದ್ದಾರೆ. ಇದನ್ನೂ ಓದಿ: ಹಮಾಸ್ ಉಗ್ರರ ನಡೆಗೆ ಮೋದಿ ಖಂಡನೆ- ಇಸ್ರೇಲ್ ಪರ ನಿಂತ ಭಾರತ

    ಅನಿವಾರ್ಯ ಕಾರಣದಿಂದ ಬಾಗೇಶ್ವರ ಮಹಾರಾಜ್ ಗೈರಾಗಲಿದ್ದು, ಮಹಾಮಂಡಲೇಶ್ವರದ ಅಖಿಲೇಶ ದಾಸ್ ಜೀ ಮಹಾರಾಜ್ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಪೇಜಾವರ ಮತ್ತು ಅದಮಾರು ಸ್ವಾಮೀಜಿಗಳು, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಸಂಘಟನೆಯ ಮುಖಂಡರುಗಳು ಉಪಸ್ಥಿತರಿರುತ್ತಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹರಿಯಾಣದಲ್ಲಿ ಬುಲ್ಡೋಜರ್ ಸೌಂಡ್ ಜೋರು – 3ನೇ ದಿನ 50-60 ಮಳಿಗೆಗಳು ಧ್ವಂಸ, 202 ಕೇಸ್ ದಾಖಲು

    ಹರಿಯಾಣದಲ್ಲಿ ಬುಲ್ಡೋಜರ್ ಸೌಂಡ್ ಜೋರು – 3ನೇ ದಿನ 50-60 ಮಳಿಗೆಗಳು ಧ್ವಂಸ, 202 ಕೇಸ್ ದಾಖಲು

    ಚಂಡೀಗಢ: ಕೋಮು ಸಂಘರ್ಷಕ್ಕೆ ಹರಿಯಾಣದಲ್ಲಿ (Haryan) ತತ್ತರಿಸಿದೆ. ನೂಹ್ ಮತ್ತು ಗುರುಗ್ರಾಮ್ ಜಿಲ್ಲೆಗಳು ಹೊತ್ತಿ ಉರಿಯುತ್ತಿದ್ದು, ಕರ್ಫ್ಯೂ ಲೆಕ್ಕಿಸದೇ ಉಭಯ ಕೋಮುಗಳು ಜನ ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದ್ದಾರೆ. ಶನಿವಾರವೂ ಅಲ್ಲಲ್ಲಿ ಮಳಿಗೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ನಡುವೆ ಸತತ 3ನೇ ದಿನ ಹರಿಯಾಣದಲ್ಲಿ ಬುಲ್ಡೋಜರ್‌ (Bulldozer) ಕಾರ್ಯಾಚರಣೆ ನಡೆದಿದೆ.

    ಇನ್ನೂ ಹರಿಯಾಣದಲ್ಲಿ ನಡೆದ ಕೋಮು ಗಲಭೆ ಪ್ರಕರಣದ ಆರೋಪಿಗಳಿಗೆ ಅಲ್ಲಿನ ಸರ್ಕಾರ ಕೂಡ ಬುಲ್ಡೋಜರ್ ಶಾಕ್ ನೀಡಿದೆ. ಸತತ 3ನೇ ದಿನವೂ ಭರ್ಜರಿ ಕಾರ್ಯಾಚರಣೆ ಮುಂದುವರಿಸಿದೆ. ಹಿಂಸಾಚಾರಪೀಡಿತ ನೂಹ್‌ನಿಂದ ಸುಮಾರು 20 ಕಿಮೀ ದೂರದಲ್ಲಿರುವ ತೌರುದಲ್ಲಿ ವಾಸಿಸುತ್ತಿರುವ ವಲಸಿಗರ ಗುಡಿಸಲುಗಳನ್ನ ಬುಲ್ಡೋಜರ್ ಬಳಸಿ ಹರಿಯಾಣ ಸರ್ಕಾರ ಗುರುವಾರ ನೆಲಸಮಗೊಳಿಸಿದೆ. ಇದನ್ನೂ ಓದಿ: Chandrayaan-3: ಭೂಮಿಯಿಂದ ಹಾರಿದ 22 ದಿನಗಳ ಬಳಿಕ ಚಂದ್ರನ ಕಕ್ಷೆ ಸೇರಿದ ಚಂದ್ರಯಾನ-3 ನೌಕೆ

    ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಶನಿವಾರ 24 ಮೆಡಿಕಲ್ ಸ್ಟೋರ್‌ಗಳು ಸೇರಿದಂತೆ 50-60 ಮಳಿಗೆಗಳನ್ನ ಧ್ವಂಸಗೊಳಿಸಲಾಗಿದೆ. ಶುಕ್ರವಾರ ಸುಮಾರು ಒಂದು ಎಕರೆ ಜಮೀನಿನಲ್ಲಿ ಅಕ್ರಮ ವಲಸಿಗರು ನಿರ್ಮಿಸಿಕೊಂಡಿದ್ದ 250ಕ್ಕೂ ಅಧಿಕ ಗುಡಿಸಲುಗಳನ್ನ ಕೆಡವಲಾಗಿತ್ತು. ಇದನ್ನೂ ಓದಿ: ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ

    ಇನ್ನೂ ಹರಿಯಾಣದಲ್ಲಿ ಈವರೆಗೆ ಒಟ್ಟು 102 ಕೇಸ್‌ಗಳು ದಾಖಲಾಗಿದ್ದು, 202 ಮಂದಿಯನ್ನ ಬಂಧಿಸಲಾಗಿದೆ. 80 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ. ಘಟನೆ ಹಿಂದೆ ಯಾವುದೇ ಮಾಸ್ಟರ್ ಮೈಂಡಗ್ ಪತ್ತೆಯಾಗಿಲ್ಲ ಎಂದು ನುಹ್ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರ ಸಂಬಂಧ ಪರಸ್ಪರ ಕೆಸರೆರಚಾಟಗಳು ನಡೆಯುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ

    ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ

    ಚಂಡೀಗಢ: ಕೋಮು ಸಂಘರ್ಷಕ್ಕೆ ಹರಿಯಾಣದಲ್ಲಿ (Haryana) ತತ್ತರಿಸಿದೆ. ನಿನ್ನೆಯಿಂದ ನೂಹ್ ಮತ್ತು ಗುರುಗ್ರಾಮ್ ಜಿಲ್ಲೆಗಳು ಹೊತ್ತಿ ಉರಿಯುತ್ತಿವೆ. ಕರ್ಫ್ಯೂ ಲೆಕ್ಕಿಸದೇ ಉಭಯ ಕೋಮುಗಳು ಜನ ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದ್ದಾರೆ. ಆಸ್ತಿ-ಪಾಸ್ತಿಗಳನ್ನೂ ಹಾನಿ ಮಾಡಿದ್ದಾರೆ.

    ಇನ್ನೂ ಹರಿಯಾಣದಲ್ಲಿ ನಡೆದ ಕೋಮುಗಲಭೆ ಪ್ರಕರಣದ ಆರೋಪಿಗಳಿಗೆ ಅಲ್ಲಿನ ಸರ್ಕಾರ ಕೂಡ ಬುಲ್ಡೋಜರ್ (Bulldozer) ಶಾಕ್ ನೀಡಿದೆ. ಹಿಂಸಾಚಾರಪೀಡಿತ ನೂಹ್‌ನಿಂದ ಸುಮಾರು 20 ಕಿಮೀ ದೂರದಲ್ಲಿರುವ ತೌರುದಲ್ಲಿ ವಾಸಿಸುತ್ತಿರುವ ವಲಸಿಗರ ಗುಡಿಸಲುಗಳನ್ನ ಬುಲ್ಡೋಜರ್ ಬಳಸಿ ಹರಿಯಾಣ ಸರ್ಕಾರ (Haryana Government) ಗುರುವಾರ ನೆಲಸಮಗೊಳಿಸಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಬಿಜೆಪಿ ಭರ್ಜರಿ ತಯಾರಿ – ಶನಿವಾರ `ಕೈ’ನಾಯಕರ ಹೈವೋಲ್ಟೇಜ್ ಮೀಟಿಂಗ್

    ಸರ್ಕಾರಿ ಜಮೀನನ್ನು ಅತಿಕ್ರಮಿಸಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರ ಆದೇಶದಂತೆ ಗಲಭೆಕೋರರು ವಾಸವಿರುವ ಮನೆಗಳನ್ನ ತೆರವುಗೊಳಿಸಲಾಗಿದೆ. ಬಾಂಗ್ಲಾದೇಶದಿಂದ ಬಂದ ಅಕ್ರಮವಾಗಿ ಮೊದಲು ಅಸ್ಸಾಂನಲ್ಲಿ ವಾಸವಿದ್ದರು. ಅವರೀಗ ನೂಹ್ ಜಿಲ್ಲೆಯ ತೌರು ಪಟ್ಟಣದ ಮಹಮ್ಮದಪುರ ರಸ್ತೆಯ ವಾರ್ಡ್ ನಂ.1 ಹರಿಯಾಣ ನಗರ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದಾರೆ. ಇದನ್ನೂ ಓದಿ: ಫಾರಿನ್‍ನಿಂದ ಬಂದ ಹೆಚ್‍ಡಿಕೆಯಿಂದ ಮಿಡ್‍ನೈಟ್ ಬಾಂಬ್?: ಮೆಸ್‍ನಲ್ಲಿ ನಡೆದ ಸಭೆಯಲ್ಲಿ YST!

    ಸುಮಾರು ಒಂದು ಎಕರೆ ಜಮೀನಿನಲ್ಲಿ 250ಕ್ಕೂ ಅಧಿಕ ಗುಡಿಸಲುಗಳನ್ನ ನಿರ್ಮಿಸಿಕೊಂಡಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಅವರು ಇದೇ ಜಾಗದಲ್ಲಿ ವಾಸವಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಗುಡಿಸಲುಗಳನ್ನ ನೆಲಸಮಗೊಳಿಸಲಾಗಿದೆ.

    ಇನ್ನೂ ಗುರುಗ್ರಾಮದಲ್ಲಿ ಇವತ್ತೂ ಕೂಡ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಾ ರೆಸ್ಟೋರೆಂಟ್, ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ನಿನ್ನೆ ರಾತ್ರಿ ನಡೆದ ಘರ್ಷಣೆಯಲ್ಲಿ ಐವರು ಬಲಿ ಆಗಿದ್ದಾರೆ. ನಿನ್ನೆ ಮೆವಾತ್‌ನಲ್ಲಿ ವಿಹೆಚ್‌ಪಿ- ಬಜರಂಗದಳದ ಶೋಭಾಯಾತ್ರೆ ವೇಳೆ ನಡೆದ ಮತ ಘರ್ಷಣೆಯಲ್ಲಿ ಇಬ್ಬರು ಹೋಂಗಾರ್ಡ್ಗಳು ಸಾವನ್ನಪ್ಪಿದ್ರು. ರಾತ್ರಿ ಮತ್ತೆ ನಡೆದ ಘರ್ಷಣೆಯಲ್ಲಿ ಇನ್ನಿಬ್ಬರು ಬಲಿಯಾಗಿದ್ದಾರೆ.

    ಇನ್ನೂ ಹರಿಯಾಣದಲ್ಲಿ ಈವರೆಗೆ ಒಟ್ಟು 41 ಕೇಸ್‌ಗಳು ದಾಖಲಾಗಿದ್ದು, 176 ಮಂದಿಯನ್ನ ಬಂಧಿಸಲಾಗಿದೆ. 90 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ. ಹಿಂಸಾಚಾರ ಸಂಬಂಧ ಪರಸ್ಪರ ಕೆಸರೆರಚಾಟಗಳು ನಡೆಯುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶ್ವ ಹಿಂದೂ ಪರಿಷತ್‌ ಮೆರವಣಿಗೆ ಮೇಲೆ ಕಲ್ಲು ತೂರಾಟ – ಹರಿಯಾಣದಲ್ಲಿ ಹಿಂಸಾಚಾರ, ಇಬ್ಬರು ಸಾವು

    ವಿಶ್ವ ಹಿಂದೂ ಪರಿಷತ್‌ ಮೆರವಣಿಗೆ ಮೇಲೆ ಕಲ್ಲು ತೂರಾಟ – ಹರಿಯಾಣದಲ್ಲಿ ಹಿಂಸಾಚಾರ, ಇಬ್ಬರು ಸಾವು

    ಚಂಡೀಗಢ: ಹರಿಯಾಣದ (Haryana) ಮೇವತ್‌ ಪ್ರದೇಶದ ನಂದ್‌ಗ್ರಾಮ್‌ನಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆಯೋಜಿಸಲಾಗಿದ್ದ ಮೆರವಣಿಗೆ (Religious Procession) ಮೇಲೆ ಕಲ್ಲು ತೂರಾಟ ನಡೆದಿದ್ದು, ಗಲಭೆ ತೀವ್ರ ಸ್ವರೂಪ ಪಡೆದು ಹಿಂಸಾಚಾರಕ್ಕೆ ತಿರುಗಿದೆ.

    ಈ ವೇಳೆ ಕಲ್ಲು ಎಸೆದು ಕಾರುಗಳಿಗೆ ಬೆಂಕಿ ಹಚ್ಚಿದ ಗುಂಪೊಂದು ಗುಂಡು ಹಾರಿಸಿ ಇಬ್ಬರು ಹೋಮ್‌ ಗಾರ್ಡ್‌ಗಳನ್ನ ಹತ್ಯೆ ಮಾಡಿದ್ದಾರೆ. ಅಲ್ಲದೇ 7 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಕಿಡಿಗೇಡಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು (Police) ಅಶ್ರುವಾಯು ಪ್ರಯೋಗಿಸಿದ್ದಾರೆ. ಇದನ್ನೂ ಓದಿ: ಲೇಡಿ ಬೌನ್ಸರ್ ಆಗಿದ್ದ ಮುಸ್ಲಿಂ ಮಹಿಳೆ ಈಗ ಶ್ರೀಕೃಷ್ಣನ ಭಕ್ತಿಯಲ್ಲಿ ಲೀನ!

    ವಿಶ್ವ ಹಿಂದೂ ಪರಿಷತ್‌ (Vishwa Hindu Parishad) ಮತ್ತು ಭಜರಂಗದಳದ ಕಾರ್ಯಕರ್ತರು ಗುರುಗ್ರಾಮದಿಂದ ಶೋಭಾಯಾತ್ರೆಯನ್ನ ಆರಂಭಿಸಿದ್ದರು. ಮೆರವಣಿಗೆ ನಂದ್‌ಗ್ರಾಮ ಸಮೀಪಿಸುತ್ತಿದ್ದಂತೆ ಅನ್ಯಕೋಮಿನ ಕೆಲವರು ಯಾತ್ರೆಯನ್ನ ತಡೆದು ಕಲ್ಲು ತೂರಾಟ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸಂಘರ್ಷ ಏರ್ಪಟ್ಟಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಭಾರೀ ಹಿಂಸಾಚಾರ ಏರ್ಪಟ್ಟಿರುವುದರಿಂದ ಸುಮಾರು 2,500 ಪುರುಷರು, ಮಹಿಳೆಯರು ಮತ್ತು ಮಕ್ಕಳು ಗುರುಗ್ರಾಮ್ ಬಳಿಯ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಇದನ್ನೂ ಓದಿ: ಉಡುಪಿ ಕೇಸಲ್ಲಿ ಸಂತ್ರಸ್ತೆ, ಆರೋಪಿಗಳ ವಿಚಾರಣೆ- ಪ್ರಕರಣಕ್ಕೆ ಕೇರಳ ಲಿಂಕ್ ಕೊಟ್ಟು ಬಿಜೆಪಿ ಪ್ರತಿಭಟನೆ

    ಭಿವಾನಿ ಹತ್ಯೆ ಪ್ರಕರಣದ ಆರೋಪಿ ಮೋನು ಮನೇಸರ್‌ ಎಂಬಾತ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿಯೇ ಸಮುದಾಯ ಆಕ್ರೋಶ ವ್ಯಕ್ತಪಡಿಸಿ, ಕಲ್ಲುತೂರಾಟಕ್ಕೆ ಮುಂದಾಗಿದೆ ಎನ್ನಲಾಗಿದೆ. ಮತ್ತೊಂದೆಡೆ ಬಜರಂಗದಳದ ಕಾರ್ಯಕರ್ತರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವೀಡಿಯೋ ಪೋಸ್ಟ್‌ ಮಾಡಿದ್ದಕ್ಕೆ ಸಂಬಂಧಿಸಿದಂತೆ ಗಲಭೆ ನಡೆದಿದೆ ಎಂದೂ ಹೇಳಲಾಗುತ್ತಿದೆ.

    ಇಂಟರ್ನೆಟ್‌ ಬಂದ್‌, 144 ನಿಷೇಧಾಜ್ಞೆ ಜಾರಿ:
    ಗಲಭೆಯ ವಿಡಿಯೊ ಜಾಲತಾಣಗಳಲ್ಲೂ ಹರಿದಾಡುತ್ತಿದ್ದು ಸಂಘರ್ಷ ಮತ್ತಷ್ಟು ವಿಕೋಪಕ್ಕೆ ಹೋಗುವುದನ್ನು ತಡೆಯಲು ಆಗಸ್ಟ್‌ 2ರವರೆಗೆ ಹರ್ಯಾಣದ ನಹ್‌ ಜಿಲ್ಲೆಯಲ್ಲಿ ಅಂಜರ್ತಾಲ ಸೇವೆ ಸ್ಥಗಿತಗೊಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸೆಕ್ಷನ್‌ 144 ನಿಷೇಧಾಜ್ಞೆ ಜಾರಿಗೊಳಿಸಿದ್ದು, ಸಾರ್ವಜನಿಕರು ಪೊಲೀಸರು ಘಟನೆ ಹತ್ತಿಕ್ಕಲು ಶತಪ್ರಯತ್ನ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊಡಗು ವಿಹೆಚ್‍ಪಿ ಅಧ್ಯಕ್ಷನ ಮೇಲೆ ಗುಂಡಿನ ದಾಳಿ

    ಕೊಡಗು ವಿಹೆಚ್‍ಪಿ ಅಧ್ಯಕ್ಷನ ಮೇಲೆ ಗುಂಡಿನ ದಾಳಿ

    ಮಡಿಕೇರಿ: ಕೊಡಗಿನ (Kodagu) ವಿಶ್ವ ಹಿಂದೂ ಪರಿಷತ್ (Vishva Hindu Parishad) ಅಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿಯವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಲು (Firing) ಯತ್ನಿಸಿದ ಘಟನೆ ಬುಧವಾರ ರಾತ್ರಿ ಅಬ್ಯಾಲದಲ್ಲಿ ನಡೆದಿದೆ.

    ಕೃಷ್ಣಮೂರ್ತಿಯವರು ಚೆಟ್ಟಳ್ಳಿಯಿಂದ (Chettalli) ಮಡಿಕೇರಿಗೆ ಬರುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಗುಂಡು ಕಾರಿಗೆ ತಗುಲಿದೆ. ಇದರಿಂದ ವಿಹೆಚ್‍ಪಿ (VHP) ಅಧ್ಯಕ್ಷ ಬಚಾವ್ ಆಗಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ನಂತರ ಯಾದಗಿರಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಗೆ ಟಿಕೆಟ್‌

    ಈ ಸಂಬಂಧ ಮಡಿಕೇರಿ (Madikeri) ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಎಂತಹ ನಾಯಕರಾದರೂ ಸಿದ್ದರಾಮಯ್ಯ ನನ್ನಂತೆ ಒಬ್ಬ ಅಭ್ಯರ್ಥಿ: ಸೋಮಣ್ಣ

  • ಸರಳತೆ ಮೆರೆದ ಪ್ರಧಾನಿ ಮೋದಿ- VHP ಮುಖಂಡರ ಕಾಲಿಗೆ ನಮಸ್ಕರಿಸಿದ ನಮೋ

    ಸರಳತೆ ಮೆರೆದ ಪ್ರಧಾನಿ ಮೋದಿ- VHP ಮುಖಂಡರ ಕಾಲಿಗೆ ನಮಸ್ಕರಿಸಿದ ನಮೋ

    -ಧಾರವಾಡ ಐಐಟಿ ಕಾರ್ಯಕ್ರಮದಲ್ಲಿ ಅಪರೂಪದ ಘಟನೆ

    ಹುಬ್ಬಳಿ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತನ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ ಅಪರೂಪದ ಘಟನೆ ಧಾರವಾಡದ (Dharwad) ಐಐಟಿ (IIT) ಉದ್ಘಾಟನಾ ಕಾರ್ಯಕ್ರಮದಲ್ಲಿ ನಡೆದಿದೆ.

    ನರೇಂದ್ರ ಮೋದಿಯವರನ್ನು ಕಂಡು ಭಾವೋದ್ರೇಕಗೊಂಡ ಹಿಂದೂಪರ ಸಂಘಟನೆ ಕಾರ್ಯಕರ್ತರು ಅವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಧಾನಿ ಮೋದಿ ಸಹ ನಮಸ್ಕರಿಸಿದ ಕಾರ್ಯಕರ್ತನ ಕಾಲಿಗೆ ವಾಪಸ್ ನಮಸ್ಕರಿಸಿದ್ದಾರೆ. ಇದನ್ನೂ ಓದಿ: ನೂರು ಸಿಡಿ ಬರಲಿ, ನಾನು ಗಟ್ಟಿ ಇದ್ದೇನೆ: ಡಿಕೆಶಿಗೆ ಜಾರಕಿಹೊಳಿ ಟಾಂಗ್

    ಹುಬ್ಬಳಿ (Hubballi) ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ (Bajarangadala) ಮುಖಂಡ ಚೇತನ್ ರಾವ್ ಮೋದಿಗೆ ಕಾಲಿಗೆ ಬಿದ್ದವರು. ಹಲವಾರು ವರ್ಷಗಳಿಂದ ಹಿಂದೂ ಪರ ಸಂಘಟನೆಯಲ್ಲಿ ತೊಡಗಿಕೊಂಡಿರುವ ಚೇತನ್ ರಾವ್, ವೃತ್ತಿಯಲ್ಲಿ ಆರ್ಕಿಟೆಕ್ಚರ್ ಆಗಿದ್ದಾರೆ. ಜೊತೆಗೆ ಪ್ರಧಾನಿ ಮೋದಿ ಅವರ ಅಪ್ಪಟ ಅಭಿಮಾನಿಯಾಗಿದ್ದಾರೆ. ಹೀಗಾಗಿ ಪ್ರಧಾನಿ ಮೋದಿಯವರ ಭೇಟಿಗೆ ಈ ಬಾರಿ ವಿಶೇಷ ಅವಕಾಶವನ್ನು ಚೇತನ್ ರಾವ್ ಮತ್ತು ರಘು ಎಂಬವರಿಗೆ ನೀಡಲಾಗಿತ್ತು.

    ಪ್ರತಿಯಾಗಿ ಮೋದಿಯವರು ನಮಸ್ಕರಿಸುವಾಗ ಪಕ್ಕದಲ್ಲೇ ಇದ್ದ ರಘು, ಮೋದಿ ಅವರನ್ನು ತಡೆಯಲು ಮುಂದಾಗಿದ್ದರು. ಭದ್ರತಾ ಸಿಬ್ಬಂದಿ ರಘು ಅವರನ್ನು ತಡೆದಿದ್ದಾರೆ. ಮೋದಿ ಕಾಲಿಗೆ ಬಿದ್ದಿರುವ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಇದನ್ನೂ ಓದಿ: Oscars- ‘ಆಸ್ಕರ್’ ವಿಜೇತರಿಗೆ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ

  • ಹನುಮಜಯಂತಿ, ಶೋಭಾಯಾತ್ರೆ ಹಿನ್ನೆಲೆ ಹಾಸನದಲ್ಲಿ ಮದ್ಯ ನಿಷೇಧ, ಬಿಗಿ ಪೊಲೀಸ್ ಭದ್ರತೆ

    ಹನುಮಜಯಂತಿ, ಶೋಭಾಯಾತ್ರೆ ಹಿನ್ನೆಲೆ ಹಾಸನದಲ್ಲಿ ಮದ್ಯ ನಿಷೇಧ, ಬಿಗಿ ಪೊಲೀಸ್ ಭದ್ರತೆ

    ಹಾಸನ: ವಿಶ್ವ ಹಿಂದೂ ಪರಿಷತ್ (Vishva Hindu Parishad) ಹಾಗೂ ಬಜರಂಗದಳ (Bajrang Dal) ವತಿಯಿಂದ ಮಂಗಳವಾರ ಹಾಸನ (Hassan) ನಗರದಲ್ಲಿ ಹಮ್ಮಿಕೊಂಡಿರುವ ಹನುಮಜಯಂತಿ (Hanumajayanti) ಹಾಗೂ ಬೃಹತ್ ಶೋಭಾಯಾತ್ರೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಸನ ನಗರ ವ್ಯಾಪ್ತಿಯಲ್ಲಿ ಮದ್ಯ (Alcohol) ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂಎಸ್ ಅರ್ಚನಾ ಆದೇಶ ಹೊರಡಿಸಿದ್ದಾರೆ.

    ಹಾಸನ ನಗರ ವ್ಯಾಪ್ತಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ನೀರುಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ಧಾರ್ಮಿಕ ಕೈಂಕರ್ಯಗಳು ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಸಂತೇಪೇಟೆ ವೃತ್ತದಿಂದ ಬೃಹತ್ ಶೋಭಾಯಾತ್ರೆ ಆರಂಭಗೊಳ್ಳಲಿದ್ದು ಎನ್‌ಆರ್ ವೃತ್ತ, ಮಹಾವೀರ ವೃತ್ತ, ಸಹ್ಯಾದ್ರಿ ವೃತ್ತ, ಸೀತಾರಾಮಾಂಜನೇಯ ದೇವಸ್ಥಾನದ ರಸ್ತೆ ಮೂಲಕ ಯಾತ್ರೆ ಸಾಗಲಿದೆ. ಬಸಟ್ಟಿ ಕೊಪ್ಪಲು, ಎಂಜಿ ರಸ್ತೆ, ಶಂಕರಮಠ ರಸ್ತೆ, ಶಕ್ತಿಗಣಪತಿ ದೇವಸ್ಥಾನ ವೃತ್ತ, ಕುವೆಂಪುನಗರ, ಬಿಎಂ ರಸ್ತೆ ಮೂಲಕ ರೈಲ್ವೆ ನಿಲ್ದಾಣದವರೆಗೆ ಶೋಭಾಯಾತ್ರೆ ನಡೆಯಲಿದೆ. ಇದನ್ನೂ ಓದಿ: ಮಾಜಿ ಶಿಷ್ಯನ ವಿರುದ್ಧ ತೊಡೆ ತಟ್ಟಲಿದ್ದಾರೆ ಸಿದ್ದರಾಮಯ್ಯ – ಕೋಲಾರದಲ್ಲೇ ಸ್ಪರ್ಧೆ ಯಾಕೆ?

    ಶೋಭಾಯಾತ್ರೆಯಲ್ಲಿ 15-20 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಸಂಜೆ 5:30 ಕ್ಕೆ ರೈಲ್ವೇ ನಿಲ್ದಾಣ ಮುಂಭಾಗ ಸಾರ್ವಜನಿಕ ಸಮಾರಂಭ ಕಾರ್ಯಕ್ರಮ ಆಯೋಜಿಸಿದ್ದು ಆದಿಚುಂಚನಗಿರಿ ಹಾಸನ ಶಾಖಾಮಠದ ಶ್ರೀ ಶಂಭುನಾಥ ಸ್ವಾಮೀಜಿ, ತಣ್ಣೀರುಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ, ಬೆಲಗೂರು ಮಾರುತಿ ಪೀಠದ ವಿಜಯಮಾರುತಿ ಶರ್ಮ ಗುರುಗಳು ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ್ಯ ಕಾರ್ಯಕಾರಿಣಿ ಆಮಂತ್ರಿತ ಸದಸ್ಯ ಕಲ್ಲಡ್ಕ ಪ್ರಭಾಕರ್ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹಾಸನ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ಅತ್ತೆ ಹೆಬ್ಬಾಳ್ಕರ್ ಮಾದರಿಯಲ್ಲಿ ರಾಜಕೀಯ ಶುರು ಮಾಡಿದ ಅಳಿಯ ರಜತ್ ಉಳ್ಳಾಗಡ್ಡಿಮಠ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಹಿಳೆಯೊಬ್ಬರ ಮಗುವನ್ನು ಮುಸ್ಲಿಂ ದಂಪತಿಗೆ ನೀಡಿದ್ದಕ್ಕೆ ಹಿಂದೂ ಸಂಘಟನೆಯಿಂದ ಪ್ರತಿಭಟನೆ – ಆಸ್ಪತ್ರೆ ಸೀಲ್

    ಮಹಿಳೆಯೊಬ್ಬರ ಮಗುವನ್ನು ಮುಸ್ಲಿಂ ದಂಪತಿಗೆ ನೀಡಿದ್ದಕ್ಕೆ ಹಿಂದೂ ಸಂಘಟನೆಯಿಂದ ಪ್ರತಿಭಟನೆ – ಆಸ್ಪತ್ರೆ ಸೀಲ್

    ಲಕ್ನೋ: ಮಹಿಳೆಯೊಬ್ಬರು ಜನ್ಮ ನೀಡಿದ ನವಜಾತ ಶಿಶುವನ್ನು ಮತ್ತೊಂದು ದಂಪತಿಗೆ ಹಸ್ತಾಂತರಿಸಿದ ಆರೋಪದ ಮೇಲೆ ಶಹಜಹಾನ್‌ಪುರದ ಖಾಸಗಿ ಆಸ್ಪತ್ರೆಯನ್ನು ಸ್ಥಳೀಯ ಅಧಿಕಾರಿಗಳು ಸೀಲ್ ಮಾಡಿದ್ದಾರೆ.

    ಮಹಿಳೆಯೊಬ್ಬರ ಶಿಶುವನ್ನು ಮುಸ್ಲಿಂ ದಂಪತಿಗೆ ನೀಡಲಾಗಿತ್ತು. ಇದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್‌ (Vishwa Hindu Parishad) ಪ್ರತಿಭಟನೆ ನಡೆಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ನೋಂದಣಿಯಾಗದ ಕಾರಣ ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ ಎಂದು ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ಡಾ.ಆರ್.ಕೆ.ಗೌತಮ್ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹಿಮಾಂತ ಬಿಸ್ವಾ ಶರ್ಮಾ ರ‍್ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ಅಪರಿಚಿತ ವ್ಯಕ್ತಿ – ವೀಡಿಯೋ ವೈರಲ್

    ನಿಗೋಹಿ ಪೊಲೀಸ್ ಠಾಣೆ ವ್ಯಾಪ್ತಿಯ ಟ್ರಾಲೋಕ್‌ಪುರ ಗ್ರಾಮದ ನಿವಾಸಿ ಸಂಗೀತಾ ಬುಧವಾರ ರಾತ್ರಿ ಹೆರಿಗೆ ನೋವಿನಿಂದ ಶಹಜಹಾನ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಸಂಜಯ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.

    ಇಲ್ಲಿ ಸಂಗೀತಾ ಎಂಬ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸಂಗೀತಾ ಅವರಿಗೆ ಈಗಾಗಲೇ ಐದು ಹೆಣ್ಣು ಮಕ್ಕಳಿರುವುದರಿಂದ ಆರನೆಯ ಮಗುವನ್ನು ನೋಡಿಕೊಳ್ಳಲು ಅಥವಾ ಆಸ್ಪತ್ರೆಯ ಶುಲ್ಕವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಆ ಮಗುವನ್ನು ಮುಸ್ಲಿಂ ದಂಪತಿಗೆ ಹಸ್ತಾಂತರಿಸಲಾಗಿತ್ತು ಎಂದು ಆಸ್ಪತ್ರೆಯ ಮಾಲೀಕ ಡಾ. ಅಶೋಕ್ ರಾಥೋಡ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಧರಿಸಿದ್ದ 41 ಸಾವಿರ ರೂ.ನ ಟೀಶರ್ಟ್ ಕುರಿತು ಬಿಜೆಪಿ ವ್ಯಂಗ್ಯ

    ವಿಷಯ ತಿಳಿದ ನಂತರ ಹಿಂದೂ ಸಂಘಟನೆಯ ಮುಖಂಡ ರಾಜೇಶ್ ಅವಸ್ತಿ ಗುರುವಾರ ಸಂಜೆ ನಿಗೋಹಿ ಪೊಲೀಸ್ ಠಾಣೆಗೆ ಆಗಮಿಸಿ ಆಸ್ಪತ್ರೆ ಮಾಲೀಕನ ಪ್ರತಿಕೃತಿಯನ್ನು ಸುಟ್ಟುಹಾಕಿದ್ದರು. ಘಟನೆಯ ಬಗ್ಗೆ ತಿಳಿದ ತಕ್ಷಣ ನಿಗೋಹಿಯ ಖಾಸಗಿ ಆಸ್ಪತ್ರೆಗೆ ಹೆಚ್ಚುವರಿ ಸಿಎಂಒ ಡಾ.ರೋಹ್ತಾಸ್ ನೇತೃತ್ವದ ತಂಡವನ್ನು ಕಳುಹಿಸಿದ್ದೇವೆ ಎಂದು ಸಿಎಂಒ ಗೌತಮ್ ಹೇಳಿದ್ದಾರೆ. ಆದರೆ ಅಷ್ಟರಲ್ಲಿ ಆಸ್ಪತ್ರೆಯ ಮಾಲೀಕ ಪರಾರಿಯಾಗಿದ್ದ.

    ದಾಖಲಾತಿ ಇಲ್ಲದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ. ಹೆಚ್ಚುವರಿಯಾಗಿ ಪ್ರಕರಣದ ತನಿಖೆಗೆ ತಂಡವನ್ನು ರಚಿಸಲಾಗಿದೆ. ಗುರುವಾರ ಆಸ್ಪತ್ರೆ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀರಂಗಪಟ್ಟಣ ಮಸೀದಿ ವಿವಾದ – ಹಿಂದೂ, ಮುಸ್ಲಿಮರ ವಾದ ಏನು?

    ಶ್ರೀರಂಗಪಟ್ಟಣ ಮಸೀದಿ ವಿವಾದ – ಹಿಂದೂ, ಮುಸ್ಲಿಮರ ವಾದ ಏನು?

    ಮಂಡ್ಯ: ಕಾಶಿಯ ಜ್ಞಾನವಾಪಿ ಮಸೀದಿ ವಿವಾದ ಆರಂಭವಾದ ಬೆನ್ನಲ್ಲೇ ಈಗ ಶ್ರೀರಂಗಪಟ್ಟಣ ಮಸೀದಿ ವಿವಾದ ಎದ್ದಿದೆ. ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಅಲ್ಲ, ಹನುಮಾನ್ ಮಂದಿರ ಅಂತ ಪಟ್ಟು ಹಿಡಿದಿರುವ ಹಿಂದೂ ಸಂಘಟನೆಗಳು ಇಂದು `ಶ್ರೀರಂಗಪಟ್ಟಣ ಚಲೋ’ ಹಮ್ಮಿಕೊಂಡಿವೆ.

    ಇತ್ತ ಮುಸ್ಲಿಂ ಸಂಘಟನೆಗಳು ಈ ಮಸೀದಿಯನ್ನು ಟಿಪ್ಪು ಸುಲ್ತಾನ್ ನಿರ್ಮಿಸಿದ್ದಾನೆ. ದೇವಸ್ಥಾನವನ್ನು ನಾಶ ಮಾಡಿ ಮಸೀದಿ ನಿರ್ಮಾಣ ಮಾಡಿಲ್ಲ ಎಂದು ವಾದಿಸುತ್ತಿವೆ.

    ಹಿಂದೂ ಪರರ ವಾದವೇನು?
    1659ರಲ್ಲಿ ವಿಜಯನಗರದ ಸಾಮ್ರಾಜ್ಯವಿತ್ತು. ದೊಡ್ಡ ದೇವರಾಜ ಒಡೆಯರ್ ಅವಧಿಯಲ್ಲಿ ದೇವಸ್ಥಾನವೊಂದನ್ನು ಕಟ್ಟಲಾಗಿದೆ. ಬಾಗಿಲು ವೆಂಕಟರಮಣ ದೇವಸ್ಥಾನ ಎಂದು ದೇಗುಲದ ಹೆಸರು ಇತ್ತು. ವೆಂಕಟೇಶ್ವರಸ್ವಾಮಿ, ಆಂಜನೇಯಸ್ವಾಮಿ ಅಲ್ಲಿನ ಪ್ರಧಾನ ದೇವರುಗಳು. ಮಾಧ್ವ ಯತಿಗಳು ಬಂದಾಗ ಉಳಿದುಕೊಳ್ಳಲು ಈ ದೇವಸ್ಥಾನ ಇತ್ತು. 1784ರಲ್ಲಿ ಟಿಪ್ಪು ಈ ದೇವಸ್ಥಾನ ಕೆಡವಿ ಅಲ್ಲಿ ಮಸೀದಿ ಕಟ್ಟಿದ್ದಾನೆ. ಸಾಫ್ಟ್ ಟಾರ್ಗೆಟ್ ರೂಪದಲ್ಲಿ ಈ ದೇವಸ್ಥಾನವನ್ನು ಕೆಡವಿ ಮಸೀದಿ ಕಟ್ಟಲಾಯ್ತು ಎಂದು ಆರೋಪಿಸಲಾಗುತ್ತಿದೆ. ಇದನ್ನೂ ಓದಿ: ಇಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ – 144 ಸೆಕ್ಷನ್ ಜಾರಿ 

    ಜಾಮಿಯಾ ಮಸೀದಿ.. ಟಿಪ್ಪು ಪರರ ವಾದವೇನು..?
    ದೇವಸ್ಥಾನ ಇದ್ದಿದ್ದು ಸತ್ಯ, ರಾಜ್ಯ ರಕ್ಷಣೆಗಾಗಿ ವಾಚ್ ಟವರ್ ಕಟ್ಟಬೇಕಾಗಿತ್ತು. ಶತ್ರುಗಳಿಗೆ ಗೊತ್ತಾಗದಿರಲಿ ಎಂದು ಮಸೀದಿ ರೂಪದಲ್ಲಿ ವಾಚ್ ಟವರ್ ನಿರ್ಮಾಣ ಮಾಡಲಾಗಿತ್ತು. ಗೋಪುರದ ತುದಿಯಲ್ಲಿ ನಿಂತರೆ 40 ಕಿ.ಮೀ. ದೂರದ ಮಳವಳ್ಳಿಯೂ ಕಾಣುತ್ತೆ. ಟಿಪ್ಪು ದೇವಸ್ಥಾನ ನಾಶ ಮಾಡಲಿಲ್ಲ. ಅಲ್ಲಿದ್ದ ದೇವಸ್ಥಾನವನ್ನು ಸ್ಥಳಾಂತರ ಮಾಡಿದ್ದ. ಶ್ರೀರಂಗಪಟ್ಟಣದ ಕ್ಷಣಾಂಬಿಕಾ ದೇವಿ ದೇಗುಲದ ಆವರಣದೊಳಗೆ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಪ್ರತಿಷ್ಠಾಪನೆ ಆಗಿದೆ. ದೇವಾಲಯ ನಾಶ ಮಾಡುವ ಉದ್ದೇಶ ಇದ್ದಿದ್ದರೆ ಮೂರ್ತಿಯನ್ನು ಯಾಕೆ ಸ್ಥಳಾಂತರ ಮಾಡಬೇಕಿತ್ತು ದೇವಾಲಯದ ಕಂಬಗಳನ್ನು ಎಲ್ಲರಿಗೂ ತಿಳಿಯುವಂತೆ ಹೊರಗಡೆ ಯಾಕೆ ಬಿಡುತ್ತಿದ್ದ ಎಂದು ಪ್ರಶ್ನೆ ಕೇಳಿದ್ದಾರೆ.