ಒಂದ್ಕಡೆ ಕಿಚ್ಚ ಸುದೀಪ್ ಅಭಿಮಾನಿಗಳ ಜೊತೆ ಸೇರಿ ಪರ್ಯಾಯ ವಿಷ್ಣು ಸ್ಮಾರಕ (Vishnuvardhan Memorial) ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇನ್ನೊಂದ್ಕಡೆ ವಿಷ್ಣು ಅಭಿಮಾನಿಗಳ ಸಂಘಟನೆಗಳು ಹೈಕೋರ್ಟ್ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿ ನೆಲಸಮವಾದ ಜಾಗದಲ್ಲೇ ಮರು ನಿರ್ಮಾಣ ಮಾಡಲು ಮುಂದಾಗಿದೆ.
ಸೋಮವಾರವಷ್ಟೇ ಹೈಕೋರ್ಟ್ಗೆ ವಿಷ್ಣುಸೇನೆಯು ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದು, ಅಭಿಮಾನ್ ಸ್ಟುಡಿಯೋದಲ್ಲಿ ಬೇರೆ ಕೆಲಸಗಳಿಗೂ ತಡೆಯಾಜ್ಞೆ ಹೇರಲಾಗಿದೆ. ಯಾವ ಉದ್ದೇಶಕ್ಕೆ ಸರ್ಕಾರ ಜಾಗ ನೀಡಿತ್ತೋ ಆ ಕೆಲಸಕ್ಕೆ ಉಪಯೋಗವಾಗದೆ ವ್ಯವಹಾರಿಕವಾಗಿ ಲಾಭದಾಸೆಗೆ ಬಾಲಣ್ಣ ಕುಟುಂಬ ಪ್ಲ್ಯಾನ್ ಮಾಡಿರೋದ್ರ ಕುರಿತಾಗಿಯೂ ಬೇಸರ ವ್ಯಕ್ತಪಡಿಸಲಾಗಿದೆ. ಜೊತೆಗೆ 10 ಗುಂಟೆ ಜಾಗವನ್ನ ವಾಪಸ್ ಪಡೆಯುವುದು, ಜೊತೆಗೆ ಸಮಾಧಿ ಮರುಸ್ಥಾಪನೆಗೆ ಅವಕಾಶ ಕೋರಿ ಅರ್ಜಿ ಸಲ್ಲಿಸಲಾಗಿದೆ. ಇದನ್ನೂ ಓದಿ: ದಾದಾ ಫ್ಯಾನ್ಸ್ಗೆ ಶುಭ ಸುದ್ದಿ – ಬರುತ್ತಿದೆ ಹೊಸ ಸ್ಮಾರಕ
ಇದೀಗ ಸ್ಮಾರಕ ತೆರವುಗೊಳಿಸಿ ಹತ್ತು ದಿನಗಳೇ ಉರುಳಿದೆ. ಹೀಗಾಗಿ, ಸೆಪ್ಟೆಂಬರ್ 18ರಂದು ನಡೆಯಬೇಕಿದ್ದ ವಿಷ್ಣುವರ್ಧನ್ 75ನೇ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ನಿರಾಸೆಯೇ ಗತಿ. ಆದರೆ ಅಭಿಮಾನಿಗಳಿಗೆ ಕೊಂಚ ನಿರಾಳ ಅನ್ನೋ ಥರ ಕೆಂಗೇರಿ ಬಳಿಯೇ ನಯಾ ಸ್ಮಾರಕಕ್ಕೆ ವಿಷ್ಣುಸೇನೆ ತಯಾರಿ ನಡೆಸಿದೆ. ಅಭಿಮಾನಿಗಳ ಎಲ್ಲಾ ನಿರ್ಧಾರಕ್ಕೂ ಕುಟುಂಬ ಜೊತೆಯಾಗಿರೋದಾಗಿ ಹಿಂದೆಯೇ ಹೇಳಿತ್ತು. ಇದೀಗ ನಿರ್ಮಾಪಕ ಕೆ.ಮಂಜು ಮುಂದಾಳತ್ವದ ಇನ್ನೊಂದು ಬಣವೂ ಸಂಪೂರ್ಣ ಬೆಂಬಲ ಕೊಡೋದಾಗಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದೆ. ಒಟ್ಟಿನಲ್ಲಿ ಸಮಾಧಿ ತೆರವು ಮಾಡಿರುವ ಜಾಗದಲ್ಲಿ ಸಮಾಧಿ ಮರುಸ್ಥಾಪನೆ ಹಾಗೂ ಪರ್ಯಾಯ ಸ್ಮಾರಕ ಸ್ಥಾಪನೆಯೂ ಜಂಟಿಯಾಗಿ ನಡೆಯುತ್ತಿದೆ.
ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ (Actor Vishnuvardhan) ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮಗೊಳಿಸಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಈ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಧರ್ಮಸ್ಥಳ ಕೇಸ್ನಲ್ಲಿ ಅನಾಮಿಕನ ಮಂಪರು ಪರೀಕ್ಷೆ ಮಾಡಿ: ಕಿಶೋರ್ ಕುಮಾರ್ ಪುತ್ತೂರು
ಇನ್ಸ್ಸ್ಟಾಗ್ರಾಂನಲ್ಲಿ ನಟಿ ಹಾಕಿಕೊಂಡಿರುವ ಸ್ಟೋರಿಯಲ್ಲಿ, ನಟ ವಿಷ್ಣುವರ್ಧನ್ ಅವರ ಫೋಟೋ ಹಂಚಿಕೊಂಡು ಅದರಲ್ಲಿ ಸಾಧಕನಿಗೆ ಸಾವಿಲ್ಲ, ಅಭಿಮಾನಿಗಳ ಹೃದಯವೇ ನಿಮಗೆ ಗುಡಿ ಎಂದು ಬರೆದುಕೊಂಡಿದ್ದಾರೆ.
ಅಭಿಮಾನ್ ಸ್ಟುಡಿಯೋದಲ್ಲಿದ್ದ ದಾದಾ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಷ್ಣುವರ್ಧನ್ ಸ್ಮಾರಕ (Vishnuvardhan Memorial) ನಿರ್ಮಿಸೋಕೆ ನಿಮ್ಮ ಜೊತೆ ನಾವಿದ್ದೇವೆ ಎಂದು ನಟ ಅನಿರುದ್ಧ (Actor Anirudh) ವಿಷ್ಣು ಅಭಿಮಾನಿಗಳ ಪರವಾಗಿ ನಿಂತಿದ್ದಾರೆ.
ವಿಷ್ಣುವರ್ಧನ್ ಪುಣ್ಯ ಭೂಮಿ ಉಳಿವಿಗೆ ಹೋರಾಟ ಹಾಗೂ ಸಮಾಧಿ ನೆಲಸಮ ವಿಚಾರವಾಗಿ ಅನಿರುದ್ಧ ಅವರು ಇಂದು ಬೆಂಗಳೂರಿನ ಜಯನಗರದಲ್ಲಿರುವ ವಿಷ್ಣುವರ್ಧನ್ ನಿವಾಸದಲ್ಲಿ ಸಭೆ ನಡೆಸಿದರು. ಈ ವೇಳೆ ವಿಷ್ಣು ಅಭಿಮಾನಿಗಳು ಹಾಗೂ ಮಾಧ್ಯಮಗಳೊಂದಿಗೆ ಹಲವು ವಿಚಾರಗಳನ್ನ ಪ್ರಸ್ತಾಪಿಸಿದ್ರು.
ಅಭಿಮಾನ್ ಸ್ಟುಡಿಯೋದಲ್ಲಿ (Abhiman Studio) ನಡೆದ ಘಟನೆ ಖಂಡನೀಯ. ನಮಗೆಲ್ಲರಿಗೂ ದುಃಖ ಆಗಿದೆ. ನಮ್ಮ ಕುಟುಂಬದ ಮೇಲೆ ಒಂದಷ್ಟು ಜನ ಆರೋಪ ಮಾಡ್ತಿದ್ದಾರೆ. ಹೀಗಾಗಿ ಈ ಬಗ್ಗೆ ಮೊದಲು ನಾನು ಮಾತನಾಡುತ್ತೇನೆ. ಇದೇ ಮೊದಲ ಬಾರಿ ಅಲ್ಲ, ಇದಕ್ಕೂ ಮುನ್ನ ಸಾಕಷ್ಟು ಬಾರಿ ಸಭೆ ಮಾಡಿದ್ದೀನಿ. ಎರಡು ವಿಡಿಯೋ ಇದೆ, ಒಂದು ಮೈಸೂರಲ್ಲಿ ಸ್ಮಾರಕ ಉದ್ಘಾಟನೆಗೂ ಮುಂಚೆ ಹಾಗೂ ಹಳೆ ಮನೆಯಲ್ಲಿ ಸಭೆ ಮಾಡಿದ್ದೇವೆ ಎಂದು ವಿಡಿಯೋ ತೋರಿಸಿದರು.ಇದನ್ನೂ ಓದಿ: ಪ್ರೇಯಸಿಯ ಒತ್ತಡಕ್ಕೆ ಮಣಿದು ಪತ್ನಿಯನ್ನೇ ಹತ್ಯೆಗೈದ ಬಿಜೆಪಿ ನಾಯಕ
ಇದೆಂಥಾ ವಿಕೃತ ಮನಸ್ಸು?
ಸಮಾಧಿ ತೆರವು ವಿಚಾರ ನಮಗೆ ಗೊತ್ತಿತ್ತು, ಆ ವಿಚಾರದಲ್ಲಿ ದುಡ್ಡು ಬಂದಿದೆ ಅಂತೆಲ್ಲ ಕೆಲವರು ಹೇಳುತ್ತಿದ್ದಾರೆ. ಆದರೆ ದಾದಾ ಸಮಾಧಿ ತೆರವು ವಿಚಾರದಲ್ಲಿ ನಾವು ಸಂತೋಷಪಡೋಕೆ ಆಗುತ್ತಾ? ಇದೆಂಥಾ ವಿಕೃತ ಮನಸ್ಸು, ತಂದೆ ಸ್ಮಾರಕ ತೆರವುಗೊಳಿಸೋಕೆ ನಾವು ದುಡ್ಡು ತೆಗೆದುಕೊಳ್ತೀವಾ? ಈ ರೀತಿ ಒಂದಷ್ಟು ಜನ ಆರೋಪ ಮಾಡಿದ್ದಾರೆ. ಚಾಮರಾಜಪೇಟೆಯಲ್ಲಿ ಸಂಸ್ಕಾರ ಮಾಡೋಕೆ ಪ್ಲ್ಯಾನ್ ಮಾಡಿದ್ದೆವು. ಆದರೆ ಸರ್ಕಾರ ಹಾಗೂ ಅಂಬರೀಶ್ ಅವರ ಒತ್ತಾಯದಂತೆ ಅಭಿಮಾನ್ ಸ್ಟುಡಿಯೋದಲ್ಲಿ ಸಂಸ್ಕಾರ ಮಾಡಿದ್ವಿ. ಆದರೆ ಆ ಅವಸರದಲ್ಲಿ ಅದು ವಿವಾದಿತ ಜಾಗ ಅನ್ನೋದು ಅವ್ರಿಗೆ ಗೊತ್ತಾಗಿಲ್ಲ ಅನ್ನಿಸುತ್ತದೆ. 20 ಎಕರೆ ಜಾಗವನ್ನು ಸರ್ಕಾರ ಬಾಲಣ್ಣ ಅವರಿಗೆ ಕೊಟ್ಟಿತ್ತು. ಅದರಲ್ಲಿ 10 ಎಕರೆ ಜಾಗ ಮಾರಿಕೊಂಡಿದ್ದರು. ಉಳಿದ 10 ಎಕರೆ ಜಾಗದಲ್ಲಿ ಸ್ಟುಡಿಯೋ ಮಾಡ್ತೀವಿ ಎಂದು ಒಪ್ಪಿಕೊಂಡಿದ್ದರು. ಆದರೆ ಇದೆಲ್ಲವೂ ಅಕಸ್ಮಾತ್ ಆಗಲಿಲ್ಲ, ಸರ್ಕಾರ ಜಾಗವನ್ನು ಮುಟ್ಟುಗೋಲು ಹಾಕಿಕೊಳ್ತೀವಿ ಎಂದು ಉಲ್ಲೇಖ ಮಾಡಿದೆ. ನಾವು ಸ್ಮಾರಕ ಮಾಡ್ಬೇಕು ಅಂದರೆ, 2 ಎಕರೆ ಜಾಗ ಬೇಕು. ಆದರೆ ಜಾಗದ ಗಲಾಟೆ ಇತ್ಯರ್ಥ ಆಗಲಿಲ್ಲ. ಗೀತಾ ಬಾಲಿ ಅವರನ್ನು ಸಾಕಷ್ಟು ಬಾರಿ ಕೇಳಿಕೊಂಡ್ವಿ. ಅವರು ಇತ್ಯರ್ಥ ಮಾಡಬೇಕಂದ್ರೆ ಕೇಸ್ ವಿಥ್ ಡ್ರಾ ಮಾಡ್ಬೇಕು. ಒಂದು ವೇಳೆ ವಿಥ್ ಡ್ರಾ ಮಾಡಿಕೊಂಡರೆ ಅವರ ಸಹೋದರರು ಜಾಗ ಕಿತ್ತುಕೊಳ್ಳುತ್ತಾರೆ ಎನ್ನುವ ಭಯ ಅವರಿಗಿತ್ತು ಅನಿಸುತ್ತದೆ ಎಂದು ಸ್ಪಷ್ಟನೆ ನೀಡಿದರು.
ನಮ್ಮ ಜೇಬಿಗೆ ದುಡ್ಡು ಬರಲ್ಲ
ಇನ್ನೂ ದಾದಾರನ್ನು ಹೂತುಹಾಕಿರಲಿಲ್ಲ, ದಹನ ಮಾಡಿದ್ದು. ಭಾರತಿಯಮ್ಮ ಅವರ ಅಸ್ಥಿಯನ್ನ ಎರಡು ವರ್ಷ ಆಪ್ತರ ಮನೆಯಲ್ಲಿ ಇಟ್ಟಿದ್ದರು. ಮೈಸೂರಿನಲ್ಲಿ ಅಪ್ಪಾಜಿಯವರ ಸ್ಮಾರಕದಲ್ಲಿ ಅವರ ಅಸ್ತಿ ಇದೆ. ಎರಡು ವರ್ಷ ಅಭಿಮಾನ್ ಸ್ಟುಡಿಯೋದಲ್ಲಿ ಯಾವುದೇ ರೀತಿ ಅಭಿವೃದ್ಧಿ ಆಗಿರಲಿಲ್ಲ. ಅಮ್ಮ ಅಭಿವೃದ್ಧಿ ಮಾಡಿದ್ದು, ಅನಂತ್ ಕುಮಾರ್ ನೇತೃತ್ವದಲ್ಲಿ ಅಭಿವೃದ್ಧಿ ಆಯಿತು. ಈ ವಿಚಾರದಲ್ಲಿ ಅದೆಷ್ಟು ದಿನ ಕಚೇರಿಗೆ ಅಲೆದಿದ್ದೇವೆ ಅನ್ನೋದು ನಮಗೆ ಮಾತ್ರ ಗೊತ್ತು. ಮೈಸೂರಿನಲ್ಲಿ ವ್ಯಾಪಾರೀಕರಣ ಆಗ್ತಿದೆ, ನನಗೆ 10ಲಕ್ಷ ರೂ. ಬರುತ್ತೆ ಅಂತ ಆರೋಪಿಸಿದ್ದರು. ಆದ್ರೆ ಹೇಗೆ ಬರುತ್ತೆ? ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ಕುಮಾರ್, ಅಂಬರೀಶ್, ಪುನೀತ್ ರಾಜ್ಕುಮಾರ್ ಸ್ಮಾರಕ ಇದೆ. ಅದರ ಆಡಳಿತ ವಿಜಯಾನಂದ ಅವರ ನೇತೃತ್ವದಲ್ಲಿ ಆಗುತ್ತದೆ. ಸರ್ಕಾರದಿಂದ ಇದಕ್ಕೆ ಎಷ್ಟು ದುಡ್ಡು ಮಂಜೂರಾಗುತ್ತದೆ ಎಂದು ಅವರನ್ನು ಕೇಳಬೇಕು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಟ್ರಸ್ಟ್ ನಡೆಯುತ್ತದೆ. ಸ್ಮಾರಕ ನಿರ್ವಹಣೆಗೆ ಸರ್ಕಾರ ದುಡ್ಡು ನೀಡುತ್ತದೆ. ನಮ್ಮ ಜೇಬಿಗೆ ದುಡ್ಡು ಬರುವುದಿಲ್ಲ ಎಂದು ತಿಳಿಸಿದರು.
ಭಾರತಿ ಅಮ್ಮ ಕಣ್ಣೀರಿಟ್ಟು ಕೇಳಿಕೊಂಡಿದ್ದಾರೆ
2016ರಿಂದ ಈ ಜಾಗದ ಬಗ್ಗೆ ಯೋಚನೆ ಬಿಟ್ಟಿದ್ದೆವು. ಇದೇ ವೇಳೆ ಒಂದು ವಾಹಿನಿಯಲ್ಲಿ ಕುಳಿತು ಬಾಲಣ್ಣ ಅವರ ಮಗ ಕೆಟ್ಟದಾಗಿ ಮಾತಾಡಿದ್ದರು. ಸಮಾಧಿ ವಿವಾದ ಬಗೆಹರಿಸೋಕೆ ಭಾರತಿ ಅಮ್ಮ ಕಣ್ಣೀರಿಟ್ಟು ಕೇಳಿಕೊಂಡಿದ್ದಾರೆ. ಭಾರತಿಯವರು ವಿಷ್ಣುವರ್ಧನ್ ಪತ್ನಿ ಅನ್ನೋದಕ್ಕಿಂತ ಮೊದಲು ಹಿರಿಯ ಕಲಾವಿದೆ, ಪಂಚಭಾಷಾ ತಾರೆ. ಅಂತವರ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಅದಾದ ಬಳಿಕ ಅಲ್ಲಿಗೆ ಹೋಗೋದನ್ನು ನಿಲ್ಲಿಸಿದ್ವಿ. ಅಭಿಮಾನಿಗಳಿಗಾಗಿ ಆ ಜಾಗ ಬಿಟ್ಟುಕೊಡಿ ಅಂತಾ ಕೇಳಿದಿವಿ. ಇನ್ನೂ ಸರ್ಕಾರ ನಮಗೆ ಮೈಸೂರಿನಲ್ಲಿ ಜಾಗ ಕೊಡುವಾಗ ಒಂದು ಕಡೆ ಕೊಟ್ಟಮೇಲೆ ಮತ್ತೊಂದು ಕಡೆ ಜಾಗ ಕೇಳುವಂತಿಲ್ಲ ಎಂದು ಸೂಚಿಸಿತ್ತು. ಹೀಗಾಗಿ ನಾವು ಈಗ ಸರ್ಕಾರಕ್ಕೆ ಕೇಳುವ ಹಾಗೆ ಇಲ್ಲ. ಸಂಸ್ಕಾರ ಆದ ಜಾಗದಲ್ಲಿ ಸ್ಮಾರಕ ನಿರ್ಮಾಣಕ್ಕೆ ನಿಮ್ಮ ಜೊತೆ ನಾವಿದ್ದೀವಿ ಎಂದರು.
ದಾದಾ ಹೆಸರಿನಲ್ಲಿ ವ್ಯಾಪಾರೀಕರಣ ಬೇಡ
ಜಾಗ ಸಿಕ್ಕು ಅದನ್ನು ಕೊಂಡುಕೊಂಡು ಸ್ಮಾರಕ ನಿರ್ಮಾಣ ಮಾಡೋಕೆ ಮುಂದಾದರೆ ಒಳ್ಳೆಯದು. ಅಭಿಮಾನಿಗಳು ಅಂತಾ ಹೆಸರು ಹೇಳಿಕೊಂಡು, ಮುಖವಾಡ ಹಾಕಿಕೊಂಡು ಅಪ್ಪಾಜಿಯವರ ಹೆಸರು ಹೇಳಿಕೊಂಡು ವ್ಯಾಪಾರೀಕರಣ ಮಾಡಬಾರದು. ದುಡ್ಡು ಯಾರು ಕೊಡುತ್ತಾರೆ? ಯಾರೆಲ್ಲ ಇರುತ್ತಾರೆ? ಅಂದರೆ ದುಡ್ಡಿನ ವ್ಯವಹಾರದಲ್ಲಿ ನಾವಿರುವುದಿಲ್ಲ. ಸರ್ಕಾರ ನಿರ್ಮಾಣ ಮಾಡಿದ ಸ್ಮಾರಕಕ್ಕೂ ಇದಕ್ಕೂ ಹೋಲಿಸಬೇಡಿ. ಸುಮಾರು ವರ್ಷಗಳಿಂದ ನಮ್ಮ ತಪ್ಪಿಲ್ಲದೇ ಇಲ್ಲಸಲ್ಲದ ಆರೋಪ ಹೊರಿಸುತ್ತಾ ಬರುತ್ತಿದ್ದಾರೆ. ಆರೋಪ ಹೊರಿಸೋದು ಬೇಡ. ಸುಮಾರು ಆರೋಪ, ಕೆಟ್ಟ ಮಾತು ಕೇಳಿ ಆಗಿದೆ. ಹೀಗಾಗಿ ನಮ್ಮ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಕ್ರಮ ಜರುಗಿಸುತ್ತೇವೆ. ಸಾಮಾಜಿಕ ಮಾಧ್ಯಮ, ವೇದಿಕೆಯಲ್ಲಿ ಕೆಟ್ಟದಾಗಿ ಮಾತಾಡಿದ್ರೆ ಕಂಪ್ಲೆಂಟ್ ಕೊಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.
ನಾವು ಮೈಸೂರಿಗೆ ಹೋಗೋದಕ್ಕೆ ಕಾರಣ ಇದೆ. ನಮಗೆ ಅಭಿಮಾನ್ ಸ್ಟುಡಿಯೋ ಬಳಿ ಜಾಗ ತೋರಿಸಿದರು. ಅದು ಅರಣ್ಯ ಪ್ರದೇಶ ಅಂತಾ ಆಯ್ತು, ಎರಡ್ಮೂರು ಕಡೆ ಜಾಗ ನೋಡಿದ್ರು ಹೊಂದಾಣಿಕೆ ಆಗಲಿಲ್ಲ. ಬೆಂಗಳೂರಿನಲ್ಲಿ ಅವರಿಗೆ ಜಾಗನೇ ಇಲ್ವಾ ಅಂತಾ ನಾವು ಮೈಸೂರಿನಲ್ಲಿ ಸ್ಮಾರಕ ಮಾಡೋಕೆ ಜಾಗ ಕೇಳಿದ್ವಿ. ಸ್ಮಾರಕ ಮತ್ತೆ ನಿರ್ಮಾಣ ಮಾಡೋಕೆ ನಾವು, ನಮ್ಮ ಕುಟುಂಬ ಸದಾ ನಿಮ್ಮ ಜೊತೆ ಇರುತ್ತೇವೆ. ವಿಷ್ಣುವರ್ಧನ್ ಕುಟುಂಬದ ಪರವಾಗಿ ಸಭೆಗೆ ಕರೆದಿದ್ದೆ. ಇಷ್ಟು ಅಭಿಮಾನಿಗಳು ಸಭೆಗೆ ಬಂದು ಗೌರವ ಸಲ್ಲಿಸಿದ್ದೀರಿ ಎಂದು ಹೇಳಿದರು.ಇದನ್ನೂ ಓದಿ: 71 ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭಿನ್ನಮತ ಸ್ಫೋಟ – ʻಕೈʼಗೆ ತಟ್ಟಿದ ಸಾಮೂಹಿಕ ರಾಜೀನಾಮೆ ಬಿಸಿ
ಕನ್ನಡ ಚಿತ್ರರಂಗದ ಧೀಮಂತ ನಾಯಕ ಡಾ.ವಿಷ್ಣುವರ್ಧನ್ ಸಮಾಧಿ (Vishnuvardhan Memorial) ನೆಲಸಮ ಮಾಡಿದ ಹಿನ್ನೆಲೆ ಕರ್ನಾಟಕದಾದ್ಯಂತ ಅಭಿಮಾನಿಗಳ ಆಕ್ರೋಶ ಭುಗಿಲೆದ್ದಿದೆ. ಇತ್ತ ಕನ್ನಡ ಚಿತ್ರರಂಗದ ಗಣ್ಯರು ಒಬ್ಬೊಬ್ಬರಾಗಿ ದನಿ ಎತ್ತುತ್ತಿದ್ದಾರೆ. ಇಂದು ಫಿಲ್ಮ್ ಚೇಂಬರ್ಗೆ ಡಾ.ವಿಷ್ಣುವರ್ಧನ್ ಅಭಿಮಾನಿಗಳು (Vishnuvardhan Fans) ಮನವಿ ಸಲ್ಲಿಸಿದ್ದಾರೆ.
ರಾತ್ರೋ ರಾತ್ರಿ ವಿಷ್ಣು ಸಮಾಧಿ ತೆರವುಗೊಳಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ದಾದಾ ಅಂತ್ಯಕ್ರಿಯೆ ನಡೆದ ಜಾಗದಲ್ಲಿ ಅವರ ಸ್ಮಾರಕ ಪುನರ್ ನಿರ್ಮಾಣ ಆಗಬೇಕು ಅಂತ ಒತ್ತಾಯಿಸಿ ವಿಷ್ಣು ಅಭಿಮಾನಿಗಳ ಸಂಘ ಫಿಲ್ಮ್ ಚೇಂಬರ್ಗೆ ಮನವಿ ಸಲ್ಲಿಸಿದೆ. ಇದನ್ನೂ ಓದಿ: ಆನ್ಲೈನ್ ಬೆಟ್ಟಿಂಗ್ – ಇ.ಡಿ ವಿಚಾರಣೆಗೆ ಹಾಜರಾದ ನಟ ರಾಣಾ ದಗ್ಗುಬಾಟಿ
ವಿಷ್ಣುವರ್ಧನ್ ಅಭಿಮಾನಿಗಳ ಮನವಿ ಸ್ವೀಕರಿಸಿದ ಫಿಲ್ಮ್ ಚೇಂಬರ್. ನಾವು ಕೂಡ ಸರ್ಕಾರದ (Government) ಗಮನಕ್ಕೆ ತರುತ್ತೇವೆ. ಈಗಾಗಲೇ ಸರ್ಕಾರ ಪರ್ಯಾಯವಾಗಿ ಮೈಸೂರಿನಲ್ಲಿ ಸ್ಮಾರಕ ಮಾಡಿದೆ. ಆದರೂ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ (Abhiman Studio) ಜಾಗ ಉಳಿಸಿಕೊಳ್ಳುವ ನಿಮ್ಮ ಪ್ರಯತ್ನಕ್ಕೆ ನಾವು ಕೂಡ ಸಾಥ್ ನೀಡುತ್ತೇವೆ. ನಾವು ನಿಮ್ಮ ಜೊತೆ ಇದ್ದೇವೆ. ಎಲ್ಲಾ ಕಲಾವಿದರು ಒಂದೇ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್
ಧೀಮಂತ ನಾಯಕನ ವಿಚಾರದಲ್ಲಿ ಪದೇ ಪದೇ ಇದೆ ರೀತಿ ತಾರತಮ್ಯ ನಡೆಯುತ್ತಿದ್ದು, ಇದಕ್ಕೆ ಸೂಕ್ತ ನ್ಯಾಯ ಸಿಗದೇ ಇದ್ದರೆ ಕರ್ನಾಟಕದಾದ್ಯಂತ ತೀವ್ರ ಹೋರಾಟ ಮಾಡುತ್ತೇವೆ. ಇದಕ್ಕೆ ಸರ್ಕಾರ ಶೀಘ್ರವೇ ನ್ಯಾಯ ಒದಗಿಸಬೇಕು ಎಂದು ಫಿಲ್ಮ್ ಚೇಂಬರ್ ಮೂಲಕ ಮನವಿ ಮಾಡಿದ್ದಾರೆ. ರಾತ್ರೋ ರಾತ್ರಿ ಸಮಾಧಿ ನೆಲಸಮ ಮಾಡಿದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅಭಿಮಾನಿಗಳು ಮನವಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ತಾರ್ಕಿಕ ಅಂತ್ಯ ಸಿಗುತ್ತಾ ಅಂತಾ ಕಾದು ನೋಡ್ಬೇಕು. ಇದನ್ನೂ ಓದಿ: ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್ಗೆ ಅನಿರುದ್ಧ್ ಮನವಿ
ಮೇರು ನಟ ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನ (Vishnuvardhan Memorial) ನೆಲಸಮ ಮಾಡಿದ ಹಿನ್ನೆಲೆ ಕರ್ನಾಟಕದಾದ್ಯಂತ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಕನ್ನಡ ಚಿತ್ರರಂಗದ ನಟ, ನಟಿಯರು, ನಿರ್ದೇಶಕ ಹಾಗೂ ನಿರ್ಮಾಪಕರುಗಳು ಈ ಘಟನೆಯನ್ನ ಖಂಡಿಸಿದ್ದಾರೆ. ಧೀಮಂತ ನಾಯಕನ ವಿಚಾರದಲ್ಲಿ ಈ ವಿವಾದವನ್ನ ಅವರನ್ನ ಪ್ರೀತಿ ಮಾಡುವ ಅಭಿಮಾನಿಗಳು ತೀವ್ರವಾಗಿ ಖಂಡಿಸಿದ್ದಾರೆ. ಇದೀಗ ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ (Upendra) ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನಟ ಉಪೇಂದ್ರ ವಿಷ್ಣುವರ್ಧನ್ ಅವರ ಮೇಲಿನ ಅಪಾರ ಪ್ರೀತಿಯನ್ನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಸವಣ್ಣನವರ ವಚನದ ಮೂಲಕ ಈ ಕೃತ್ಯವೆಸಗಿದವರಿಗೆ ತಿರುಗೇಟು ನೀಡಿದ್ದಾರೆ. ಜೊತೆಗೆ ಕೋಟ್ಯಂತರ ಅಭಿಮಾನಿಗಳಿಗೆ ವಿಷ್ಣುವರ್ಧನ್ ಅವರ ಸ್ಥಾನ ಎಂತದ್ದು ಎಂದು ಒಂದೇ ವಾಕ್ಯದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಕೋರ್ಟ್ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
ಜಾಲತಾಣದಲ್ಲಿ ಬಸವಣ್ಣವರ ವಚನದ ಸಾಲಿನ ಮೂಲಕ ವಿಷ್ಣು ಅಮರರೆಂದು ಉಪ್ಪಿ ಬರೆದುಕೊಂಡಿದ್ದಾರೆ. ʻಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲʼ ಕೋಟಿಗೊಬ್ಬ ಸಾಹಸಸಿಂಹ ಡಾ.ವಿಷ್ಣು ಸರ್ ನನ್ನಂತಹ ಕೋಟಿ ಕೋಟಿ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತʼ ಅಂತ ಬರೆದುಕೊಂಡಿದ್ದಾರೆ ನಟ ಉಪೇಂದ್ರ. ಇದನ್ನೂ ಓದಿ: ‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
ಮೈಸೂರು: ನಾವು ಹಿರಿಯರನ್ನ ಸ್ಫೂರ್ತಿಯಾಗಿಟ್ಟುಕೊಂಡು ಬೆಳೆಯಬೇಕು. ನಮ್ಮನ್ನ ನೋಡಿ ಸಮಾಜ ಮತ್ತು ಮಕ್ಕಳು ಕಲಿಯುತ್ತಾರೆ. ಮುಂದಿನ ಪೀಳಿಗೆಗೆ ನಾವು ಒಳ್ಳೆಯದನ್ನ ಬಿಟ್ಟು ಹೋಗಬೇಕು ಎಂದು ಸ್ಯಾಂಡಲ್ವುಡ್ನಲ್ಲಿ ನಟ-ನಟಿಯರ ಮೇಲೆ ಡ್ರಗ್ಸ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅನಿರುದ್ಧ್ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಯುವ ಪೀಳಿಗೆಯನ್ನು ಡ್ರಗ್ಸ್ನಿಂದ ರಕ್ಷಿಸಬೇಕು: ಅನಿರುದ್ಧ
ನಗರದಲ್ಲಿ ಮಾತನಾಡಿದ ನಟ ಅನಿರುದ್ಧ್, ಡ್ರಗ್ಸ್ ಅನ್ನೋ ಪಿಡುಗು ಪ್ರಪಂಚದಾದ್ಯಂತ ಇದೆ. ಇದು ಕೇವಲ ಸ್ಯಾಂಡಲ್ವುಡ್ನಲ್ಲಿ ಮಾತ್ರ ಅಲ್ಲ, ಎಲ್ಲ ರಂಗದಲ್ಲಿದೆ. ಕೆಲವು ವರ್ಷಗಳಿಂದ ಈ ಸಮಸ್ಯೆ ಇಲ್ಲ. ದಶಕಗಳಿಂದ ಈ ಸಮಸ್ಯೆ ಇದೆ. ಸ್ಯಾಂಡಲ್ವುಡ್ನ ಜವಾಬ್ದಾರಿ ಕೇವಲ ಒಬ್ಬರದ್ದಲ್ಲ, ಎಲ್ಲರದ್ದಾಗಿದೆ. ಈ ಸಂದರ್ಭದಲ್ಲಿ ಎಲ್ಲರೂ ಕೂಡ ಸ್ಯಾಂಡಲ್ವುಡ್ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು. ಇದನ್ನೂ ಓದಿ: ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಶಂಕು ಸ್ಥಾಪನೆ
ನಟಿ ರಾಗಿಣಿ ಜೈಲಿಗೆ ಹೋಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅನಿರುದ್ಧ್, ಕನ್ನಡ ಚಿತ್ರರಂಗದಲ್ಲಿ ಈ ರೀತಿ ನಡೆಯುತ್ತಿರುವುದು ನೋವಿನ ಸಂಗತಿ. ನಾವು ಹಿರಿಯರನ್ನ ಸ್ಫೂರ್ತಿಯಾಗಿಟ್ಟುಕೊಂಡು ಬೆಳೆಯಬೇಕು. ನಮ್ಮನ್ನ ನೋಡಿ ಸಮಾಜ ಮತ್ತು ಮಕ್ಕಳು ಕಲಿಯುತ್ತಾರೆ. ಮುಂದಿನ ಪೀಳಿಗೆಗೆ ನಾವು ಒಳ್ಳೆಯದನ್ನ ಬಿಟ್ಟು ಹೋಗಬೇಕು. ಹಿರಿಯರು ಹಾಕಿದ ಬುನಾದಿಯನ್ನು ನಾವು ಹಾಳು ಮಾಡಬಾರದು. ಹಾಗಾಗಿ ಆ ಹಾದಿಯಲ್ಲಿ ನಾವು ಜವಾಬ್ದಾರಿಯುವತವಾಗಿ ಸಾಗಬೇಕಿದೆ ಎಂದರು.
ಪ್ರತಿಯೊಬ್ಬರು ಅವರವರ ಜೀವನಕ್ಕೆ ಅವರೇ ಲೀಡರ್. ರಾಜಕುಮಾರ್ ಅವರು, ಅಪ್ಪಾಜಿ, ಅಂಬರೀಶ್ ಸೇರಿದಂತೆ ಅನೇಕರು ನಮಗೆ ಬುನಾದಿ ಹಾಕಿಕೊಟ್ಟು ಹೀಗಿದ್ದಾರೆ. ಅವರ ಪರಿಶ್ರಮವನ್ನು ಅರ್ಥ ಮಾಡಿಕೊಂಡು ನಾವು ಜವಾಬ್ದಾರಿಯಿಂದ ಇರುವುದು ನಮ್ಮ ಧರ್ಮ, ಕರ್ತವ್ಯವಾಗಿದೆ. ನಮ್ಮ ಮುಂದಿನ ಪೀಳಿಗೆ ನಮ್ಮ ನೋಡುತ್ತಿದೆ ಎಂದು ನಮಗೆ ಗೊತ್ತಿರಬೇಕು ಎಂದರು.
ಇಂದು ದಿವಂಗತ ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆನ್ಲೈನ್ ಮೂಲಕ ಚಾಲನೆ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣು ಸ್ಮಾರಕಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಸಚಿವರೊಟ್ಟಿಗೆ ಆನ್ಲೈನ್ ಮೂಲಕ ಭೂಮಿ ಪೂಜೆಗೆ ಚಾಲನೆ ಕೊಟ್ಟಿದ್ದಾರೆ. ಮೈಸೂರಿನ ಹಾಲಾಳು ಗ್ರಾಮದಲ್ಲಿ ಶಂಕು ಸ್ಥಾಪನೆಯ ಸಮಾರಂಭ ನಡೆದಿದ್ದು, ಹಿರಿಯ ನಟಿ ಭಾರತಿ ಅವರು ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.
ಡಾ.ವಿಷ್ಣುವರ್ಧನ್ ಸ್ಮಾರಕ ಭವನ 11 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಸ್ಮಾರಕ ನಿರ್ಮಾಣದ ಗುತ್ತಿಗೆಯನ್ನು ಪೊಲೀಸ್ ವಸತಿ ನಿಗಮಕ್ಕೆ ನೀಡಲಾಗುತ್ತಿದೆ. ಎಂ-9 ಡಿಸೈನ್ ಸ್ಟುಡಿಯೋದಿಂದ ಆರ್ಕಿಟೆಕ್ ಡಿಸೈನ್ ಮಾಡಿಸಲಾಗಿದೆ. ಸ್ಮಾರಕದಲ್ಲಿ ವಿಷ್ಣು ಪುತ್ಥಳಿ, ಆಡಿಟೋರಿಯಂ, ಫೋಟೋ ಗ್ಯಾಲರಿ, ಉದ್ಯಾನವನ ಇರುತ್ತದೆ.
ಮೈಸೂರು: ಇಂದು ದಿವಂಗತ ಡಾ.ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆನ್ಲೈನ್ ಮೂಲಕ ಚಾಲನೆ ನೀಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರು ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣು ಸ್ಮಾರಕಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಸಚಿವರೊಟ್ಟಿಗೆ ಆನ್ಲೈನ್ ಮೂಲಕ ಭೂಮಿ ಪೂಜೆಗೆ ಚಾಲನೆ ಕೊಟ್ಟಿದ್ದಾರೆ. ಮೈಸೂರಿನ ಹಾಲಾಳು ಗ್ರಾಮದಲ್ಲಿ ಶಂಕು ಸ್ಥಾಪನೆಯ ಸಮಾರಂಭ ನಡೆದಿದ್ದು, ಹಿರಿಯ ನಟಿ ಭಾರತಿ ಅವರು ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ, ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಈಗಾಗಲೇ ತಡವಾಗಿದೆ. ಆದ್ದರಿಂದ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಡಾ.ವಿಷ್ಣುವರ್ಧನ್ ತವರು ಜಿಲ್ಲೆ ಮೈಸೂರಿನಲ್ಲಿ ಅವರ ಸ್ಮಾರಕ ನಿರ್ಮಾಣವಾಗುತ್ತಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ ಎಂದರು.
ಮೈಸೂರು ತಾಲೂಕಿನ ಹೆಚ್.ಡಿ.ಕೋಟೆ ರಸ್ತೆಯ ಮಾರ್ಗದಲ್ಲಿ ಬರುವ ಹಾಲಾಳು ಗ್ರಾಮದ 5 ಎಕರೆ ಪ್ರದೇಶದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ. ಪೊಲೀಸ್ ವಸತಿಗೃಹ ನಿರ್ಮಾಣ ಸಂಸ್ಥೆಯ ವತಿಯಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸ್ಮಾರಕ ನಿರ್ಮಾಣಕ್ಕೆ ಈಗಾಗಲೇ 11 ಕೋಟಿ ರೂ. ಅನುದಾನ ಮಂಜೂರಾಗಿದೆ. ಕಾಮಗಾರಿ ಪ್ರಾರಂಭಿಸಲು ಸುಮಾರು 5 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಡಾ. ವಿಷ್ಣುವರ್ಧನ್ ಸ್ಮಾರಕವು ಸುಸಜ್ಜಿತವಾಗಿ ನಿರ್ಮಾಣಗೊಳ್ಳಲು ಎಲ್ಲ ರೀತಿಯ ಕ್ರಮಕೈಗೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಮುಖ್ಯಮಂತ್ರಿ @BSYBJP ರವರು ಇಂದು ದಿವಂಗತ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಭವನ ನಿರ್ಮಾಣಕ್ಕೆ ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿದರು. (1/2) pic.twitter.com/tUY4yOpg4x
ಡಾ.ವಿಷ್ಣುವರ್ಧನ್ ಸ್ಮಾರಕ ಭವನ 11 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಸ್ಮಾರಕ ನಿರ್ಮಾಣದ ಗುತ್ತಿಗೆಯನ್ನು ಪೊಲೀಸ್ ವಸತಿ ನಿಗಮಕ್ಕೆ ನೀಡಲಾಗುತ್ತಿದೆ. ಎಂ-9 ಡಿಸೈನ್ ಸ್ಟುಡಿಯೋದಿಂದ ಆರ್ಕಿಟೆಕ್ ಡಿಸೈನ್ ಮಾಡಿಸಲಾಗಿದೆ. ಸ್ಮಾರಕದಲ್ಲಿ ವಿಷ್ಣು ಪುತ್ಥಳಿ, ಆಡಿಟೋರಿಯಂ, ಫೋಟೋ ಗ್ಯಾಲರಿ, ಉದ್ಯಾನವನ, ವಾಟರ್ ಪೌಂಡ್ ಇರುತ್ತದೆ.
ಚಿಕ್ಕಬಳ್ಳಾಪುರ: ಉಳ್ಳವರು ಶಿವಾಲಯವ ಮಾಡುವರಯ್ಯ, ನಾನೇನು ಮಾಡಲಿ ಬಡವನಯ್ಯಾ ಅಂತ ಬಸವಣ್ಣನವರ ವಚನ ಸ್ಮರಿಸಿದ ಭಾರತಿ ವಿಷ್ಣುವರ್ಧನ್ ಅವರು ವಿಷ್ಣುವರ್ದನ್ ಸ್ಮಾರಕ ನಿರ್ಮಾಣ ವಿಚಾರದಲ್ಲಿ ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕು ಅಗಲಗುರ್ಕಿಯ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಮಾತೃ ಭೋಜನ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳ ಜೊತೆ ಮುಖ್ಯ ಅತಿಥಿಗಳಾಗಿ ಭಾರತಿ ವಿಷ್ಣುವರ್ಧನ್ ಆಗಮಿಸಿದ್ದರು.
ಇದಕ್ಕೂ ಮುನ್ನ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ಅನಿರುದ್ದ್ ಸೇರಿ ಮಕ್ಕಳಿಗೆ ತಮ್ಮ ಕೈ ತುತ್ತು ತಿನ್ನಿಸಿದರು. ಕೆಲಹೊತ್ತು ಮಕ್ಕಳ ಜೊತೆಗೆ ಕಾಲ ಕಳೆದರು. ಬಳಿಕ ಡಾ.ನಿರ್ಮಲಾನಂದನಾಥ ಶ್ರೀಗಳ ಜೊತೆಗೆ ಪಂಕ್ತಿ ಭೋಜನ ಸವಿದರು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಚನವನ್ನು ಹೇಳುವ ಮೂಲಕ ಭಾರತಿ ಅವರು ವಿಷ್ಣುವರ್ಧನ್ ಸ್ಮಾರಕ ಸಾಕಾರವಾಗದಿದ್ದಕ್ಕೆ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದಂತೆ ಭಾಸವಾಯಿತು.
-ಮೈಸೂರಿನಲ್ಲಿಯೇ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ
-ಸಚಿವ ಸ್ಥಾನ ಆಕಾಂಕ್ಷಿ ಎಂ.ಬಿ.ಪಾಟೀಲ್ ಶಾಕ್ ಕೊಟ್ಟ ಮಾಜಿ ಸಿಎಂ
ಬಾಗಲಕೋಟೆ: ಚುನಾವಣೆಯ ವೇಳೆ ಮಾತ್ರ ಬಿಜೆಪಿಯವರಿಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದು ನೆನಪಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಬಾದಾಮಿ ತಾಲೂಕಿನ ನೀಲಗುಂದ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ರೈತ ಶಿವನಗೌಡ ಉದಗೌಡ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಿದ್ದರಾಮಯ್ಯ ಸಾಂತ್ವಾನ ಹೇಳಿದರು. ಇದೇ ವೇಳೆ ಶಿವನಗೌಡ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರದ ಚೆಕ್ ನೀಡಿದರು.
ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ, ರಾಮ ಮಂದಿರ ಸಮಸ್ಯೆ ಬಗೆಹರೆಯಬಾರದು. ಇದು ಜೀವಂತವಾಗಿರಬೇಕು ಎನ್ನುವುದು ಬಿಜೆಪಿಯವರ ಉದ್ದೇಶ. ಇದೊಂದು ರಾಜಕೀಯ ಹೈ ಡ್ರಾಮಾ. ಚುನಾವಣೆ ಆರಂಭಕ್ಕೂ ಮುನ್ನ ಬಿಜೆಪಿಯವರಿಗೆ ರಾಮ ನೆನಪಾಗುತ್ತಾನೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಅಧಿಕಾರದ ಕೊನೆಯ ದಿನಗಳಲ್ಲಿ ರಾಮ ಮಂದಿರ ನಿರ್ಮಾಣದ ನೆಪ ಹೇಳುತ್ತಿದೆ ಎಂದು ಕಿಡಿಕಾರಿದರು.
ವಿಷ್ಣುವರ್ಧನ್ ಸ್ಮಾರಕ:
ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ, ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಈ ಕುರಿತು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆಗೆ ಚರ್ಚಿಸುತ್ತೇನೆ. ಇತ್ತ ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲೇ ಸ್ಮಾರಕ ನಿರ್ಮಾಣವಾಗಲಿ ಎನ್ನುವ ನಿರ್ಧಾರ ಹೇಳಿಕೊಂಡಿದ್ದಾರೆ. ಈಗಾಗಲೇ ಮೈಸೂರು ಸಮೀಪ ಜಾಗ ಗುರುತಿಸಲಾಗಿತ್ತು, ಸದ್ಯ ಆ ವಿಚಾರ ಸದ್ಯ ಕೋರ್ಟ್ನಲ್ಲಿದೆ ಎಂದರು.
ಚಳಿಗಾಲದ ಅಧಿವೇಶನದ ವೇಳೆ ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ ಪ್ರತಿಭಟನೆ ಮಾಡಲಿದೆ ಎನ್ನುವ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಗೊಡ್ಡು ಬೆದರಿಕೆಗೆ ಹೆದರವುದಿಲ್ಲ. ಅವರು ಒಂದು ಲಕ್ಷ ಜನ ಸೇರಿಸಿದರೆ ನಾವು ಎರಡು ಲಕ್ಷ ಮಂದಿ ಸೇರಿಸುತ್ತೇವೆ. ರೈತರು ಕೇವಲ ಬಿಜೆಪಿಯವರ ಪರವಾಗಿ ಅಷ್ಟೇ ಅಲ್ಲದೆ ನಮ್ಮ ಬೆಂಬಲಕ್ಕೂ ಇದ್ದಾರೆ. ರಾಜಕೀಯವಾಗಿ ಮಾತನಾಡುವ ಮಾತುಗಳಿಗೆ ಕಿಮ್ಮತ್ತಿಲ್ಲ ಎಂದು ಟಾಂಗ್ ಕೊಟ್ಟರು.
ಮಂತ್ರಿಗಿರಿ ಕೈ ತಪ್ಪಿದ್ದಕ್ಕೆ ಯಾವುದೇ ಶಾಸಕರು ಅಸಮಾಧಾನಗೊಂಡಿಲ್ಲ. ಅಲ್ಲದೇ ಸಂಪುಟ ಪುನಾರಚನೆಯಲ್ಲಿ ಬಾಗಲಕೋಟೆ ನಾಯಕರಿಗೆ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದ ಮಾಜಿ ಸಿಎಂ, ಮೈತ್ರಿ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ, ನಿಲ್ಲುವುದಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ನೂರಕ್ಕೂ ಹೆಚ್ಚು ತಾಲೂಕುಗಳು ಬರಗಾಲ ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಕೈಬಿಡುವ ತೀರ್ಮಾನವನ್ನು ತೆಗೆದುಕೊಂಡಿರಬಹುದು. ನಾನು ಮುಖ್ಯಮಂತ್ರಿ ಆಗಿದ್ದಾಗ ಒಂದು ವರ್ಷ ಬರವಿದ್ದ ಕಾರಣ ಹಂಪಿ ಉತ್ಸವ ಮಾಡಿರಲಿಲ್ಲ. ಚಾಲುಕ್ಯ ಉತ್ಸವದ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನೇನು ಸರ್ಕಾರದಲ್ಲಿ ಇದ್ದೀನಾ ಎಂದು ಪ್ರಶ್ನಿಸಿದರು.
ಮಾಜಿ ಸಿಎಂ ಸೆಲ್ಫಿ ಕ್ರೆಜ್:
ಬಾಗಲಕೋಟೆಯ ಗೌರಿಶಂಕರ ಕಲ್ಯಾಣಮಂಟಪದಲ್ಲಿ ನಡೆದಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯ ಕುಲಪತಿ ಮಲ್ಲಿಕಾ ಘಂಟಿ ಅವರ ಮಗನ ಮದುವೆಗೆ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಸಿದ್ದರಾಮಯ್ಯ ಅವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅನೇಕ ಯುವಕ, ಯುವತಿಯರು ಮುಗಿಬಿದ್ದರು. ನಗುಮೊಗದಿಂದಲೇ ಸಿದ್ದರಾಮಯ್ಯ ಅವರು ಸೆಲ್ಫಿಗೆ ಪೋಸ್ ನೀಡಿದರು.
ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರ ಭೇಟಿಗೆ ಅವಕಾಶ ಲಭಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ನಟ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಅವರ ಮಾತಿಗೆ ಭಾರತಿ ವಿಷ್ಣುವರ್ಧನ್ ಕ್ಷಮೆ ಕೋರಿದ್ದಾರೆ.
ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಭಾರತಿ ವಿಷ್ಣುವರ್ಧನ್, ನಾವು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ತೆರಳಿದ್ದೇವು. ಆದರೆ ಅಂದು ಕಾದು ಕಾದು ವಾಪಸ್ ಆಗಿದ್ದೇವು. ಆ ಬಳಿಕ 3 ದಿನಗಳಲ್ಲಿ ಭೇಟಿಗೆ ಅವಕಾಶ ಮಾಡಿಕೊಡುವುದಾಗಿ ಹೇಳಿದ್ದರು. ಆದರೆ ಆ ಬಗ್ಗೆ ಮಾಹಿತಿ ನೀಡಲಿಲ್ಲ. ಅದ್ದರಿಂದ ಅನಿರುದ್ಧ್ ಅವರಿಗೆ ನೋವುಂಟಾಗಿ ಈ ರೀತಿ ಹೇಳಿಕೆ ನೀಡಿರಬಹುದು ಎಂದು ಸ್ಪಷ್ಟನೆ ನೀಡಿದರು.
ಸಾಂದರ್ಭಿಕ ಚಿತ್ರ
ಅನಿರುದ್ಧ್ ಅವರು ಎಂದು ಈ ರೀತಿ ಮಾತನಾಡಿದವರಲ್ಲ. ಆದರೆ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದಲ್ಲಿ 5 ಸಿಎಂ ಬದಲಾದರು ನಿರೀಕ್ಷಿತ ರೀತಿಯಲ್ಲಿ ಕಾರ್ಯ ನಡೆದಿಲ್ಲ. ಈ ಬಗ್ಗೆ ಅವರಿಗೆ ಸಾಕಷ್ಟು ನೋವಿದೆ. ಅದ್ದರಿಂದ ಇಂತಹ ಪದ ಉಪಯೋಗ ಮಾಡಿರಬಹುದು ಅಷ್ಟೇ. ಉದ್ದೇಶ ಪೂರ್ವಕವಾಗಿ ಈ ಬಗ್ಗೆ ಅನಿರುದ್ಧ ಮಾತನಾಡಿಲ್ಲ. ಆದ್ದರಿಂದ ಸಿಎಂ ವರಿಗೆ ನೋವುಂಟಾಗಿದ್ದೆ ಅನಿರುದ್ಧ್ ಪರವಾಗಿ ನಾನು ಸಿಎಂ ಬಳಿ ಈ ಮೂಲಕ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದರು.
ಮೈಸೂರಲ್ಲೇ ಸ್ಮಾರಕ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲೇ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವ ಕಾರ್ಯ ಆರಂಭವಾಗಿದೆ. ಆದ್ದರಿಂದ ಅಲ್ಲೇ ಅದನ್ನು ಪೂರ್ಣಗೊಳಿಸಬೇಕು. ಸಿಎಂ ಅವರಿಗೆ ನಾನು ಕೂಡ ಈ ಬಗ್ಗೆ ಮನವಿ ಮಾಡುತ್ತೇನೆ. ಈ ಕುರಿತು ಉಂಟಾಗಿರುವ ತೊಂದರೆಯನ್ನು ನಿವಾರಣೆ ಮಾಡಿ ಸ್ಮಾರಕ ನಿರ್ಮಾಣ ಕಾರ್ಯ ಪುನರ್ ಆರಂಭವಾಗುವಂತೆ ಮಾಡಲು ಅವಕಾಶ ಮಾಡಿಕೊಡ ಬೇಕೆಂದು ಮನವಿ ಮಾಡಿದರು.
ಇದೇ ವೇಳೆ ಕೆಲ ಅಭಿಮಾನಿಗಳು ವಿಷ್ಣುವರ್ಧನ್, ಅಂಬರೀಶ್ ಹಾಗೂ ರಾಜ್ಕುಮಾರ್ ಅವರ ಸ್ಮಾರಕ ಒಂದೇ ಸ್ಥಳದಲ್ಲಿ ನಿರ್ಮಾಣ ಆಗಲಿ ಎಂಬ ಇಟ್ಟಿದ್ದ ಬೇಡಿಕೆ ಬಗ್ಗೆ ಭಾರತಿ ವಿಷ್ಣುವರ್ಧನ್ ಅವರು ಸ್ಪಷ್ಟನೆಯನ್ನು ನೀಡಿದ್ದು, ಈಗಾಗಲೇ ಮೈಸೂರಿನಲ್ಲಿ ಅವರ ಸ್ಮಾರಕ ನಿರ್ಮಾಣ ಕಾರ್ಯ ಒಂದು ಹಂತಕ್ಕೆ ಆಗಿರುವುದರಿಂದ ಮತ್ತೆ ಅದರ ಸ್ಥಳಾಂತರದ ಚರ್ಚೆ ಬೇಡ. ಈ ಬಗ್ಗೆ ಚರ್ಚೆ ಮಾಡಲು ನಮಗೆ ಇಷ್ಟವಿಲ್ಲ. ಏಕೆಂದರೆ ಅದಕ್ಕೆ ಕಾಲಾವಕಾಶ ಅಂತ್ಯವಾಗಿದೆ. ಕೆಲವರು ಸ್ಮಾರಕದ ಬಗ್ಗೆ ಕೋರ್ಟ್ ಮೆಟ್ಟಿಲು ಹತ್ತಿದ್ದು, ಸಿಎಂ ಅವರು ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಂಡರೆ ಒಳಿತು. ನಾನು ಈ ಬಗ್ಗೆ ಸಿಎಂ ಅವರೊಂದಿಗೆ ಚರ್ಚೆ ನಡೆಸಲು ಸಿದ್ಧಳಾಗಿದ್ದೇನೆ ಎಂದು ತಿಳಿಸಿದರು.