Tag: ವಿಷ್ಣುವರ್ಧನ್

  • Exclusive- ರೈತಪರ ಚಿಂತಕ ಪ್ರೊ.ನಂಜುಂಡಸ್ವಾಮಿ ಬಯೋಪಿಕ್ : ಸುದೀಪ್, ಧನಂಜಯ್, ನಾನಾ ಪಾಟೇಕರ್ ಯಾರಾಗ್ತಾರೆ ಹೀರೋ?

    Exclusive- ರೈತಪರ ಚಿಂತಕ ಪ್ರೊ.ನಂಜುಂಡಸ್ವಾಮಿ ಬಯೋಪಿಕ್ : ಸುದೀಪ್, ಧನಂಜಯ್, ನಾನಾ ಪಾಟೇಕರ್ ಯಾರಾಗ್ತಾರೆ ಹೀರೋ?

    ರ್ನಾಟಕದ ಸಮಾಜವಾದಿ ಚಳವಳಿಯ ರೂವಾರಿ ಪ್ರೊಫೆಸರ್ ಎಂ.ಡಿ.ನಂಜುಂಡಸ್ವಾಮಿ ಅವರ ಬಯೋಪಿಕ್ ರೆಡಿಯಾಗುತ್ತಿದೆ. ಐದಾರು ವರ್ಷಗಳಿಂದ ಹಲವು ಹಂತಗಳಲ್ಲಿ ಸಿನಿಮಾ ಮಾಡಲು ತಯಾರಿ ನಡೆಸಿದ್ದು, ಸದ್ಯ ಸ್ಕ್ರಿಪ್ಟ್ ರೆಡಿಯಾಗಿದೆ. ಮುಂದಿನ ಹಂತಕ್ಕಾಗಿ ಹಲವು ಕಸರತ್ತುಗಳನ್ನು ಮಾಡುತ್ತಿದ್ದಾರೆ ನಂಜುಂಡಸ್ವಾಮಿ ಅವರ ಪುತ್ರ ಪಚ್ಚೆ ನಂಜುಂಡಸ್ವಾಮಿ.

    ಜೀವನವಿಡೀ ಸ್ವದೇಶಿ ಪ್ರಚಾರ ಮಾಡಿದ ಅಪರೂಪದ ಹೋರಾಟಗಾರ ನಂಜುಂಡಸ್ವಾಮಿ. ಜರ್ಮನಿಯಲ್ಲಿ ಕಾನೂನು ವಿಷಯದಲ್ಲಿ ಉನ್ನತ ಶಿಕ್ಷಣ ಪಡೆದು, ಸಮಾಜವಾದಿ ಯುವಜನ ಸಭಾ ಹುಟ್ಟು ಹಾಕಿ ನಿರಂತರ ಹೋರಾಟ ಮಾಡುತ್ತಾ ಬಂದವರು. ಪ್ರಖರ ವಿಚಾರ ಲಹರಿ, ಅದ್ಭುತ ಕನ್ನಡ ಭಾಷಾ ಬಳಕೆ, ಖಚಿತ ಅಂಕಿ ಅಂಶಗಳಿಂದ ಕೂಡಿದ ಭಾಷಣ, ನ್ಯಾಯಾಂಗದ ಬಗ್ಗೆ ಇದ್ದ ತಿಳುವಳಿಕೆ, ಜ್ಯಾತಿ ವ್ಯವಸ್ಥೆಯ ಬಗೆಗಿನ ಆಕ್ರೋಶದ ಒಟ್ಟು ಮೊತ್ತ ಆಗಿದ್ದವರು ನಂಜುಂಡಸ್ವಾಮಿ. ಜ್ಯಾತ್ಯಾತೀಯ ರಾಷ್ಟ್ರದಲ್ಲಿ ಜಾತಿ ಸಮ್ಮೇಳನ ಆಗಬಾರದೆಂದು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಕಪ್ಪು ಬಾವುಟ ಪ್ರದರ್ಶನ, ವಂಶಪಾರಂಪರ್ಯವಾಗಿ ಆಡಳಿತ ನಡೆಸುವುದರ ವಿರುದ್ಧ ಪ್ರತಿಭಟನೆ, ಕಾರ್ಮಿಕರಿಗೆ ಕಾನೂನುಬದ್ಧ ವೇತನ ಕೊಡದಿದ್ದರೆ ಪ್ರತಿಭಟನೆ, ರೈತರಿಗೆ ಅನ್ಯಾಯವಾದಾಗೆಲ್ಲ ನಂಜುಂಡಸ್ವಾಮಿ ಅವರು ಇದ್ದೇ ಇರುತ್ತಿದ್ದರು. ಇದನ್ನೂ ಓದಿ : ಬೆಳ್ಳಿತೆರೆಯಲ್ಲಿ ಕಾಯಕಯೋಗಿ ಬಸವಣ್ಣ: ಯಾರೆಲ್ಲ ಪಾತ್ರ ಮಾಡಿದ್ದಾರೆ ಗೊತ್ತಾ?

    ರೈತರಿಗೆ ದೋಖಾ ಮಾಡುತ್ತಿದ್ದ ಹಲವು ಖಾಸಗಿ ಕಂಪೆನಿಗಳ ವಿರುದ್ಧ ಹೋರಾಟ, ಸರಕಾರಗಳ ಕ್ರಮದ ವಿರುದ್ಧ ಹೋರಾಟ ಹೀಗೆ ಹಠಾತ್ ದಾಳಿಗಳನ್ನು ಮಾಡುತ್ತಲೇ ಬೆಚ್ಚಿ ಬೀಳಿಸುತ್ತಿದ್ದರು ನಂಜುಂಡಸ್ವಾಮಿ. ಅದರಲ್ಲೂ ರೈತರಿಗೆ ಬ್ಯಾಂಕ್ ಗಳು ನೀಡುವ ಕಿರುಕುಳಕ್ಕೆ ನಿರಂತರವಾಗಿ ಪ್ರತಿಭಟನೆ ಇದ್ದೇ ಇರುತ್ತಿತ್ತು. ರೈತ ಸಂಘವೆಂದರೆ ನಂಜುಂಡಸ್ವಾಮಿ, ನಂಜುಂಡ ಸ್ವಾಮಿ ಅಂದರೆ ರೈತ ಸಂಘ ಎನ್ನುವಷ್ಟರ ಮಟ್ಟಿಗೆ ಅವರು ರೈತರೊಂದಿಗೆ ಬೆರೆತು ಹೋಗಿದ್ದರು.

    ಇಂತಹ ಹೋರಾಟಗಾರರ ಬಯೋಪಿಕ್ ಸಿನಿಮಾವಾಗಬೇಕು ಎನ್ನುವುದು ಹಲವರ ಆಶಯವಾಗಿತ್ತು. ಅದಕ್ಕೆ ಮೊದಲು ನೀರೆರೆದದ್ದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ. ಹಲವು ವರ್ಷಗಳ ಹಿಂದಿಯೇ ಪ್ರೊಫೆಸರ್ ಕುಟುಂಬವನ್ನು ಮಂಸೋರೆ ಸಂಪರ್ಕಿಸಿದರು. ಆದರೆ, ನಾನಾ ಕಾರಣಗಳಿಂದಾಗಿ ಅದು ಆಗಲಿಲ್ಲ. ಈ ಹಿಂದೆ ಖ್ಯಾತ ಬರಹಗಾರ ನಟರಾಜ್ ಹುಳಿಯಾರ್  ಅವರು ನಂಜುಂಡ ಸ್ವಾಮಿ ಅವರು ಕುರಿತಾದ ನಾಟಕ ಮತ್ತು ಚಿತ್ರಕಥೆ ರೆಡಿ ಮಾಡಿದರು. ಸಿನಿಮಾಗೆ ಮತ್ತೊಂದು ವೇಗ ಸಿಕ್ಕಿತು. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ

    ನಂಜುಂಡಸ್ವಾಮಿ ಅವರ ಪಾತ್ರವನ್ನು ಡಾ.ವಿಷ್ಣುವರ್ಧನ್ ಮಾಡಬೇಕು ಎನ್ನುವುದು ಹಲವರ ಆಸೆಯಾಗಿತ್ತು. ಯಾಕೆಂದರೆ ನಾಗತಿಹಳ್ಳಿ ಚಂದ್ರಶೇಖರ್ ಅವರು ತಮ್ಮ ಮಾತಾಡ್ ಮಾತಾಡ್ ಮಲ್ಲಿಗೆ ಸಿನಿಮಾದಲ್ಲಿ ಹೂವಯ್ಯನ ಪಾತ್ರ ಹೆಣೆದಿದ್ದರಲ್ಲ, ಅದು ಪ್ರೊಫೆಸರ್ ನಂಜುಂಡಸ್ವಾಮಿ ಅವರ ಬದುಕನ್ನೇ ಆಧರಿಸಿತ್ತು. ಆದರೆ, ಡಾ.ವಿಷ್ಣುವರ್ಧನ್ ಕಾಲವಾದರು.

    ಕೆಲ ವರ್ಷಗಳ ಹಿಂದೆ ನಿರ್ದೇಶಕ ಕೇಸರಿ ಹರವು ಕೂಡ ಈ ಸಿನಿಮಾದ ಬಗ್ಗೆ ಆಸಕ್ತಿ ತಗೆದುಕೊಂಡು ನಂಜುಂಡಸ್ವಾಮಿ ಅವರ ಪಾತ್ರವನ್ನು ನಾನಾ ಪಾಟೇಕರ್ ಮಾಡಿದರೆ ಸರಿಯಾಗಿರುತ್ತದೆ ಎಂದು ಅವರನ್ನು ಅಪ್ರೋಚ್ ಮಾಡಿದ್ದರು. ನಾನಾ ಕೂಡ ಪ್ರೊಫೆಸರ್ ಅವರ ಹೋರಾಟದ ವಿಡಿಯೋಗಳನ್ನು ಗಮನಿಸಿದ್ದರು. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ಅಲ್ಲದೇ, ಡಾಲಿ ಧನಂಜಯ್ ಅವರಿಗೂ ಈ ಸ್ಕ್ರಿಪ್ಟ್ ಕಳುಹಿಸಲಾಗಿತ್ತು. ಈ ಇಬ್ಬರೂ ಕಲಾವಿದರ ಮಧ್ಯೆ ಇದೀಗ ಮತ್ತೊಂದು ಯೋಜನೆ ಸಿದ್ಧವಾಗುತ್ತಿದೆ. ನಂಜುಂಡಸ್ವಾಮಿ ಅವರ ಪಾತ್ರವನ್ನು ಸುದೀಪ್ ಅವರು ಮಾಡಲಿ ಎನ್ನುವುದು ಪ್ರೊಫೆಸರ್ ಕೆಲ ಅಭಿಮಾನಿಗಳ ಬೇಡಿಕೆ. ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕೇಜ್

    ನಂಜುಂಡಸ್ವಾಮಿ ಅವರ ಪತ್ನಿಯ ಪಾತ್ರದಲ್ಲಿ ರಮ್ಯಾ ಇರಲಿ ಎಂದೂ ಯೋಚಿಸಲಾಗಿದೆಯಂತೆ. ಈ ಇಬ್ಬರೂ ಕಲಾವಿದರನ್ನು ಭೇಟಿ ಮಾಡುವ ಆಲೋಚನೆ ಕೂಡ ಇದೆ. ಆದರೆ, ಇನ್ನೂ ಅವರಿಗೆ ಈ ವಿಷಯವನ್ನು ತಲುಪಿಸಿಲ್ಲ ಎನ್ನುತ್ತಾರೆ ಪಚ್ಚೆ ನಂಜುಂಡಸ್ವಾಮಿ. ಇದನ್ನೂ ಓದಿ: ಜಾನ್ವಿ ಕಪೂರ್ ಡ್ಯಾನ್ಸ್‌ಗೆ ಫ್ಯಾನ್ಸ್ ಫಿದಾ: ಶ್ರೀದೇವಿಗೆ ಹೋಲಿಸಿದ ಅಭಿಮಾನಿಗಳು

    ‘ರೈತರು, ಕಾರ್ಮಿಕರು ಮತ್ತು ನಿರ್ಗತಿಕರ ಬದುಕಿಗೆ ನಂಜುಂಡ ಸ್ವಾಮಿ ಅವರು ದೊಡ್ಡ ಶಕ್ತಿಯಾಗಿದ್ದರು. ಅವರ ಸಿನಿಮಾ ಬರಬೇಕು ಎನ್ನುವುದು ನಮ್ಮ ಕುಟುಂಬದ ಆಸೆ. ಹಾಗಾಗಿ ಹಲವರು ಹಲವು ಕಲಾವಿದರನ್ನು ಭೇಟಿ ಮಾಡಿ ಮಾತನಾಡುತ್ತಿದ್ದಾರೆ. ಅಂತಿಮವಾಗಿ ಯಾರು ಆಯ್ಕೆ ಆಗುತ್ತಾರೋ? ಯಾವಾ ಸಿನಿಮಾ ಆಗುತ್ತದೆಯೋ ಕಾದು ನೋಡಬೇಕು’ ಎನ್ನುತ್ತಾರೆ ಪಚ್ಚೆ ನಂಜುಂಡಸ್ವಾಮಿ.

  • ಸಿದ್ಧಗಂಗಾ ಶ್ರೀಗಳು ಮತ್ತು ಸ್ಯಾಂಡಲ್ ವುಡ್ ನಂಟು

    ಸಿದ್ಧಗಂಗಾ ಶ್ರೀಗಳು ಮತ್ತು ಸ್ಯಾಂಡಲ್ ವುಡ್ ನಂಟು

    ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳಿಗೂ ಸ್ಯಾಂಡಲ್ ವುಡ್ ಗೂ ಗುರು ಶಿಷ್ಯರ ನಂಟಿದೆ. ಹಾಗಾಗಿ ಕನ್ನಡ ಸಿನಿಮಾ ರಂಗದಲ್ಲಿ ಅವರ ಕುರಿತಾಗಿ ಡಾಕ್ಯುಮೆಂಟರಿ, ವೆಬ್ ಸೀರಿಸ್ ಮತ್ತು ಸಿನಿಮಾಗಳ ರೂಪದಲ್ಲಿಯೂ ಶಿವಕುಮಾರ ಸ್ವಾಮೀಜಿ ದರ್ಶನ ಭಾಗ್ಯ ನೀಡಿದ್ದಾರೆ.

    ಅಲ್ಲದೇ, ಸಿನಿಮಾ ಸಂಬಂಧಿ ಅನೇಕ ಕಾರ್ಯಕ್ರಮಗಳಿಗೆ ಶ್ರೀಗಳು ಆಗಮಿಸಿದ ಆಶೀರ್ವಾದ ಮಾಡಿದ್ದಾರೆ. ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಡಾ. ಅಂಬರೀಶ್, ಶಿವರಾಜ್ ಕುಮಾರ್, ಜಗ್ಗೇಶ್, ಯಶ್, ಸುದೀಪ್, ರಶ್ಮಿಕಾ ಮಂದಣ್ಣ, ಅರ್ಜುನ್ ಸರ್ಜಾ, ಉಪೇಂದ್ರ ಸೇರಿದಂತೆ  ಸಾಕಷ್ಟು ಕಲಾವಿದರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಕೂಡ ಪಡೆದಿದ್ದಾರೆ. ಇದನ್ನೂ ಓದಿ:  ಕಷ್ಟಪಟ್ಟು ಮಾಡುವ ಸಿನಿಮಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಆಲಿಯಾ ಗರಂ

    ಶ್ರೀಗಳೇ ನಟಿಸಿರುವ ಸಿನಿಮಾ

    ಓಂಕಾರ್ ನಿರ್ದೇಶನದಲ್ಲಿ ಮೂಡಿ ಬಂದ ಜ್ಞಾನ ಜ್ಯೋತಿ ಸಿದ್ಧಗಂಗಾ ಸಿನಿಮಾದಲ್ಲಿ ಸ್ವತಃ ಶಿವಕುಮಾರ ಸ್ವಾಮೀಜಿ ಕೂಡ ನಟಿಸಿದ್ದಾರೆ. ಇದು ಶಿವಕುಮಾರ ಸ್ವಾಮಿಗಳ ಜೀವನ ಚರಿತ್ರೆಯನ್ನು ಆಧರಿಸಿದ ಸಿನಿಮಾವಾಗಿದ್ದು, ಸಿದ್ಧಗಂಗಾ ಮಠದ ಇತಿಹಾಸವನ್ನೇ ಹೇಳುವಂತಹ ಚಿತ್ರ ಇದಾಗಿದೆ. ವಿಷ್ಣುವರ್ಧನ್, ಭಾರತಿ ವಿಷ್ಣುವರ್ಧನ್, ರಾಷ್ಟ್ರ ಕವಿ ಜಿ.ಎಸ್. ಶಿವರುದ್ರಪ್ಪ, ಶ್ರೀಧರ್ ಸೇರಿದಂತೆ ಅನೇಕ ಹಿರಿಯ ಕಲಾವಿದರು ನಟಿಸಿದ ಸಿನಿಮಾ ಇದಾಗಿದೆ. ಸಿನಿಮಾದ ಮತ್ತೊಂದು ವಿಶೇಷ  ಅಂದರೆ, ಮಠದಲ್ಲಿ ಓದುತ್ತಿದ್ದ ಇಪ್ಪತ್ತು ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಹಾಡೊಂದರಲ್ಲಿ ತೋರಿಸಿದ್ದಾರೆ ನಿರ್ದೇಶಕರು.

    ಶ್ರೀಗಳ ಕುರಿತು ವೆಬ್ ಸಿರೀಸ್

    ಸಿದ್ಧಗಂಗಾ ಶ್ರೀಗಳ ಕುರಿತಾಗಿ ಹಂಸಲೇಖ ವೆಬ್ ಸೀರಿಸ್ ವೊಂದನ್ನು ತಯಾರಿಸಲು ರೆಡಿ ಮಾಡಿಕೊಂಡಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಸಂಸ್ಕೃತ ಸೇರಿದಂತೆ ಹತ್ತು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಈ ವೆಬ್ ಸೀರಿಸ್ ನಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರು ಶ್ರೀಗಳ ಪಾತ್ರ ಮಾಡಬೇಕು ಎನ್ನುವುದು ಹಂಸಲೇಖಾ ಆಸೆ. ಹಾಗಾಗಿ ಅಮಿತಾಭ್ ಅವರಿಗೆ ಈ ವಿಷಯವನ್ನು ಮುಟ್ಟಿಸಿದ್ದಾರೆ. ಇನ್ನಷ್ಟೇ ಇದರ ಶೂಟಿಂಗ್ ಆರಂಭವಾಗಬೇಕಿದೆ. ಇದನ್ನೂ ಓದಿ: ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿದ್ರು

    ನಿಡಸಾಲೆ ಪುಟ್ಟಸ್ವಾಮಯ್ಯ ತಯಾರಿಸಿದ ಸಿದ್ದಗಂಗಾ

    ಕನ್ನಡದ ಹೆಸರಾಂತ ಪ್ರಕಾಶಕ, ಲೇಖಕ ಹಾಗೂ ನಟ ನಿಡಸಾಲೆ ಪುಟ್ಟಸ್ವಾಮಯ್ಯ ನಿರ್ಮಾಣದಲ್ಲಿ ‘ಸಿದ್ದಗಂಗಾ’ ಹೆಸರಿನಲ್ಲಿ ಸಿನಿಮಾ ಮೂಡಿ ಬಂದಿದೆ. ಸಿದ್ಧಗಂಗಾ ಚಿತ್ರವು ಸಿದ್ದ ಮತ್ತು ಗಂಗಾರ ಬದುಕಿನ ಕಥೆಯಾಗಿದ್ದರೂ, ಸಿದ್ದಗಂಗಾ ಮಠದ ಇತಿಹಾಸವನ್ನೂ ಈ ಚಿತ್ರ ಹೇಳುತ್ತದೆ. ಈ ಸಿನಿಮಾದ ಆಡಿಯೋವನ್ನು ಸ್ವತಃ ಸಿದ್ಧಗಂಗಾ ಶ್ರೀಗಳೇ ಮಾಡಿದ್ದು ವಿಶೆಷ. ಜಿ ಮೂರ್ತಿ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ನೈಜ ಬದುಕಿನ ಕಥಾಹಂದರ ಹೊಂದಿತ್ತು.

    ಕಾಯಕ ಯೋಗಿ ಸಿನಿಮಾ

    ನಿರ್ದೇಶಕ ಪುರುಷೋತ್ತಮ್ ಅವರು ‘ಕಾಯಕಯೋಗಿ’ ಶೀರ್ಷಿಕೆಯೊಂದಿಗೆ ಶ್ರೀಗಳ ಕುರಿತಾಗಿ ಸಿನಿಮಾ ಮಾಡಿದ್ದರು. ಈ ಚಿತ್ರಕ್ಕೆ ಸ್ವತಃ ಶ್ರೀಗಳೇ ಚಾಲನೆ ನೀಡಿದ್ದರು. ಭಕ್ತಿ ಪ್ರದಾನ ಸಿನಿಮಾಗಳಿಗೆ ಹೆಸರಾಗಿದ್ದ ಪುರುಷೋತ್ತಮ್, ಸಿದ್ಧಗಂಗಾ ಮಠದ ಚರಿತ್ರೆಯನ್ನು ಈ ಸಿನಿಮಾದ ಮೂಲಕ ಕಟ್ಟಿಕೊಟ್ಟಿದ್ದರು. ಇದನ್ನೂ ಓದಿ : ಸೆನ್ಸಾರ್ ಪಾಸ್ ಆದ ರಾಕಿಭಾಯ್ : ಕೆಜಿಎಫ್ 1 ಗಿಂತ ಕೆಜಿಎಫ್ 2 ಸಿನಿಮಾ 13 ನಿಮಿಷ ಉದ್ದ

    ಟಗರು ಸಿನಿಮಾದಲ್ಲಿ ಶ್ರೀಗಳು

    ಶಿವರಾಜ್ ಕುಮಾರ್ ನಟನೆಯ ಟಗರು ಸಿನಿಮಾದಲ್ಲಿಯೂ ಒಂದು ಸಣ್ಣ ಪಾತ್ರದಲ್ಲಿ ಶಿವಕುಮಾರ ಸ್ವಾಮಿಗಳು ಕಾಣಿಸಿಕೊಂಡಿದ್ದರು. ಈ ಮಠದಲ್ಲಿ ಬೆಳೆದ ಹುಡುಗನೊಬ್ಬ ದೊಡ್ಡ ಅಧಿಕಾರಿಯಾಗಿ ಬೆಳೆಯುತ್ತಾನೆ ಎನ್ನುವ ಕಥೆಯನ್ನು ಈ ಸಿನಿಮಾ ಹೊಂದಿತ್ತು. ಹಾಗಾಗಿ ಶ್ರೀಗಳು ನಾಯಕನಿಗೆ ಆಶೀರ್ವಾದ ಮಾಡುವಂತಹ ದೃಶ್ಯವನ್ನು ಈ ಸಿನಿಮಾದಲ್ಲಿ ತೋರಿಸಲಾಗಿತ್ತು.

  • ಶಿವರಾತ್ರಿ ವಿಶೇಷ: ತೆರೆಗೆ ಶಿವನಾಗಿ ದರ್ಶನ ಕೊಟ್ಟ ನಟ ಶಿವರು

    ಶಿವರಾತ್ರಿ ವಿಶೇಷ: ತೆರೆಗೆ ಶಿವನಾಗಿ ದರ್ಶನ ಕೊಟ್ಟ ನಟ ಶಿವರು

    ಇಂದು ಮಹಾ ಶಿವರಾತ್ರಿ. ಮಹಾದೇವನ ಆರಾಧಿಸುವ ಪುಣ್ಯದಿನ. ಶಿವನೊಲಿದರೆ ಭಯವಿಲ್ಲ ಎನ್ನುವಂತೆ ಅವನನ್ನು ಒಲಿಸಿಕೊಳ್ಳಲು ಸ್ಯಾಂಡಲ್ ವುಡ್ ಕೂಡ ಹಿಂದೆ ಬಿದ್ದಿಲ್ಲ. ಪರಶಿವನ ಮಹಿಮೆಯನ್ನು ಸಾರುವಂತಹ ಅನೇಕ ಚಿತ್ರಗಳನ್ನು ಮಾಡುವ ಮೂಲಕ ತೆರೆಯ ಮೇಲೂ ಶಿವನ ಅವತಾರಗಳನ್ನು ತೋರಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ : ಹರಿಪ್ರಿಯಾ ಟೆಂಪಲ್ ರನ್: ಉಡುಪಿ ಮಠದ ಆನೆಯೊಂದಿಗೆ ಸಮಯ ಕಳೆದ ನಟಿ

    ಪೌರಾಣಿಕ ಚಿತ್ರಗಳಲ್ಲಿ ಶಿವನಿಲ್ಲದೇ ಚಿತ್ರಗಳೇ ಇಲ್ಲ ಎನ್ನುವಷ್ಟು ಶಿವ ದರ್ಶನ ಮಾಡಿದ್ದಾನೆ. ಕೆಲ ನಟರಂತೂ ಈಗಲೂ ಶಿವನಾಗಿಯೇ ಅಭಿಮಾನಿಗಳು ಹೃದಯದಲ್ಲಿ ಉಳಿದಿದ್ದಾರೆ.  ಕೇವಲ ಕನ್ನಡದಲ್ಲಿ ಮಾತ್ರವಲ್ಲ, ಭಾರತೀಯ ಹಲವು ಭಾಷೆಗಳಲ್ಲಿ ಮತ್ತು ಕಿರುತೆರೆಗಳಲ್ಲೂ ಶಿವನಾಮ ಸ್ಮರಣೆ ಮಾಡುವಂತಹ ಅನೇಕ ಚಿತ್ರಗಳು ಮತ್ತು ಧಾರಾವಾಹಿಗಳು ತೆರೆ ಕಂಡಿವೆ. ಮಹಾ ಶಿವರಾತ್ರಿ ದಿನದಂದು ಆ ಚಿತ್ರಗಳ, ಪಾತ್ರಗಳ ಒಂದು ನೋಟ. ಇದನ್ನೂ ಓದಿ : ಇಂದು ಮಹಾಶಿವರಾತ್ರಿ – ಆದಿ ಅಂತ್ಯವಿಲ್ಲದ ಶಿವನ ಆರಾಧಕರಿಗೆ ಇಂದು ಹಬ್ಬ

    ಪೌರಾಣಿಕ ಸಿನಿಮಾಗಳನ್ನು ಮಾಡುವಾಗ, ಅದರಲ್ಲೂ ವಿಶೇಷವಾಗಿ ಪುರಾಣ ಪ್ರಸಂಗಗಳನ್ನು ಆಧರಿಸಿ ಚಿತ್ರಗಳನ್ನು ಮಾಡುವಾಗ ಅಲ್ಲಿ ಶಿವನಿರಲೇಬೇಕು. ಹಾಗಾಗಿ ಕೈಲಾಸ ವಾಸ ಶಿವನಿಗೆ ಹೆಚ್ಚಿನ ಮನ್ನಣೆ ಸಿಕ್ಕಿದೆ. ಬೇಡರ ಕಣ್ಣಪ್ಪ ಸಿನಿಮಾದಿಂದ ಶಿವನಿಗೆ ಮತ್ತಷ್ಟು ಬೇಡಿಕೆಯೂ ಹೆಚ್ಚಾಗಿದೆ.

    ಭೂ ಕೈಲಾಸ, ಭಕ್ತ ಸಿರಿಯಾಳ, ಗಿರಿಜಾ ಕಲ್ಯಾಣ, ಗಂಗೆ ಗೌರಿ, ಭಕ್ತ ಮಾರ್ಕಂಡೇಯ, ಸ್ವರ್ಣಗೌರಿ, ಶಿವ ಕೊಟ್ಟ ಸೌಭಾಗ್ಯ, ಭಕ್ತ ಮಲ್ಲಿಕಾರ್ಜುನ, ಶ್ರೀ ಮಂಜುನಾಥ, ಶಿವ ಮೆಚ್ಚಿದ ಕಣ್ಣಪ್ಪ, ಪಾರ್ವತಿ ಕಲ್ಯಾಣ ಹೀಗೆ ಶಿವನ ಕುರಿತಾಗಿ ಸಾಮಾಜಿಕ, ಭಕ್ತಿ ಪ್ರಧಾನ ಮತ್ತು ಪೌರಾಣಿಕ ಚಿತ್ರಗಳು ತೆರೆ ಕಂಡಿವೆ. ಪಿ.ಆರ್. ಕೌಂಡಿನ್ಯ ನಿರ್ದೇಶನದಲ್ಲಿ ಮೂಡಿ ಬಂದ ಶಿವರಾತ್ರಿ ಮಹಾತ್ಮೆಯಂತೂ ಶಿವನ ನಾನಾ ಅವತಾರಗಳನ್ನು ತೋರಿಸುವ ಮೂಲಕ ಜನಪ್ರಿಯತೆ ಪಡೆಯಿತು.

    ಇವರು ಶಿವನ ಪಾತ್ರಧಾರಿಗಳು :

    1954ರಲ್ಲಿ ತೆರೆಕಂಡ ‘ಬೇಡರ ಕಣ್ಣಪ್ಪ’ ಚಿತ್ರದಲ್ಲಿ ರಾಮಚಂದ್ರ ಶಾಸ್ತ್ರಿಗಳು ಶಿವನ ಪಾತ್ರ ಮಾಡಿದ್ದರು. ನಂತರ 1967ರಲ್ಲಿ ತೆರೆಕಂಡ ಪಾರ್ವತಿ ಕಲ್ಯಾಣ ಚಿತ್ರದಲ್ಲಿ ರಾಜ್ ಕುಮಾರ್ ಶಿವನಾಗಿ ಭಕ್ತರನ್ನು ಆವರಿಸಿಕೊಂಡ ರೀತಿ ಬಣ್ಣಿಸಲೆಸದಳ.

    1973ರಲ್ಲಿ ಬಿಡುಗಡೆಯಾದ ದೂರದ ಬೆಟ್ಟ ಚಿತ್ರದಲ್ಲಿ ಉದಯ ಶಂಕರ್, 1981ರಲ್ಲಿ ರಿಲೀಸ್ ಆದ ಗುರು ಶಿಷ್ಯರು ಚಿತ್ರದಲ್ಲಿ ಶ್ರೀನಿವಾಸ್ ಮೂರ್ತಿ, 1983ರಲ್ಲಿ ತೆರೆಗೆ ಬಂದ ಕ್ರಾಂತಿಯೋಗಿ ಬಸವಣ್ಣ ಚಿತ್ರದಲ್ಲಿ ಅಶೋಕ್, 1988ರಲ್ಲಿ ಬಿಡುಗಡೆಯಾದ ಶಿವ ಮೆಚ್ಚಿದ ಕಣ್ಣಪ್ಪ ಚಿತ್ರದಲ್ಲಿ ರಾಜಕುಮಾರ್, ಶಬರಿ ಮಲೆ ಸ್ವಾಮಿ ಅಯ್ಯಪ್ಪ, ಕೊಲ್ಲೂರು ಮೂಕಾಂಬಿಕಾ, ಮಹಾಸಾಧ್ವಿ ಮಲ್ಲಮ್ಮ ಹಾಗೂ ಬಾಲ ಶಿವ ಚಿತ್ರದಲ್ಲಿ ಶ್ರೀಧರ್, ಪ್ರಚಂಡ ಕುಳ್ಳ ಚಿತ್ರದಲ್ಲಿ ವಿಷ್ಣುವರ್ಧನ್, ಶ್ರೀಮಂಜುನಾಥ ಸಿನಿಮಾದಲ್ಲಿ ತೆಲುಗು ನಟ ಚಿರಂಜೀವಿ ಶಿವನ ಪಾತ್ರದಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಪಾಲಿಗೆ ಸಾಕ್ಷಾತ್ ಶಿವನೇ ಆಗಿದ್ದಾರೆ.

    ‘ನಾದಪ್ರಿಯ ಶಿವನೆಂಬರು, ನಾದಪ್ರಿಯ ಶಿವನಲ್ಲವಯ್ಯ..’ ಎಂದು ವಚನಗಳು ಸಾರಿದ್ದರೂ, ನಾದದಲ್ಲಿಯೂ ಶಿವನನ್ನು ಕಂಡಿದ್ದಾರೆ ಚಿತ್ರಪ್ರೇಮಿಗಳು.

    ಬೇಡರ ಕಣ್ಣಪ್ಪ  ಸಿನಿಮಾದ ‘ಶಿವಪ್ಪ ಕಾಯೋ ತಂದೆ’ ಹಾಡಂತೂ ನಿತ್ಯಮಂತ್ರದಂತೆ ಕೇಳುತ್ತಲೇ ಇರುತ್ತದೆ. ಭೂಮಿಗೆ ಬಂದ ಭಗವಂತ ಸಿನಿಮಾದ ‘ಶಿವ ಶಿವ ಎಂದರೆ ಭಯವಿಲ್ಲ’, ಹಾಲುಂಡ ತವರು ಸಿನಿಮಾದ ‘ಏಳು ಶಿವ, ಏಳು ಶಿವ’, ಭಕ್ತ ಸಿರಿಯಾಳ ಸಿನಿಮಾದ ‘ಏಕೋ ಈ ಕೋಪ ಶಂಕರಾ’, ಚೆಲ್ಲಿದ ರಕ್ತ ಸಿನಿಮಾದ ಶಿವನೊಲಿದರೆ, ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಪೆಂಟಗನ್ ಚಿತ್ರದ ‘ಕಾಯೋ ಶಿವ ಕಾಪಾಡೋ ಶಿವ’ ಹೀಗೆ ನೂರಾರು ಹಾಡುಗಳು ಶಿವನ ಕುರಿತಾಗಿಯೇ ಸಿನಿಮಾದಲ್ಲಿ ಬಂದಿವೆ.

    ಧಾರಾವಾಹಿಗಳಲ್ಲೂ ನಾನಾ ನಟರು ಶಿವನ ಪಾತ್ರ ಮಾಡಿದ್ದಾರೆ. ಅದರಲ್ಲೂ ಹರಹರ ಮಹಾದೇವ ಧಾರಾವಾಹಿಯ ನಟ ವಿನಯ್ ಗೌಡ, ಕಿರುತೆರೆಯಲ್ಲೇ ನಾಲ್ಕನೇ ಬಾರಿಗೆ ನಾನಾ ಧಾರಾವಾಹಿಗಳಲ್ಲಿ ಶಿವನ ಪಾತ್ರ ಮಾಡಿ ಫೇಮಸ್ ಆಗಿದ್ದಾರೆ. ಒಂದು ರೀತಿಯಲ್ಲಿ ಶಿವನ ಪಾತ್ರ ಅಂದಾಕ್ಷಣ ಅವರೇ ನೆನಪಾಗುವಷ್ಟು ಶಿವನಾಗಿ ಅವರು ಜನರ ಮನಸ್ಸನ್ನು ಆವರಿಸಿಕೊಂಡಿದ್ದಾರೆ.

    ಫೋಟೋ ಕೃಪೆ : ಪ್ರಗತಿ ಅಶ್ವತ್ಥನಾರಾಯಣ್

  • ವಿಷ್ಣುವರ್ಧನ್ ಅವರ ಸಿನಿಮಾಗೆ ಬಪ್ಪಿ ಲಹರಿ ಹಾಡು

    ವಿಷ್ಣುವರ್ಧನ್ ಅವರ ಸಿನಿಮಾಗೆ ಬಪ್ಪಿ ಲಹರಿ ಹಾಡು

    ಬೆಂಗಳೂರು: ಇಂದು ನಿಧನರಾಗಿರುವ ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ಬಪ್ಪಿ ಲಹರಿ ಅವರಿಗೂ ಕನ್ನಡ ಸಿನಿಮಾ ರಂಗಕ್ಕೂ ನಂಟಿದೆ. ಹಿಂದಿ, ತೆಲುಗು ಸೇರಿದಂತೆ ಹಲವು ಭಾಷೆಗಳ ಹಾಡುಗಳಿಗೆ ದನಿ ಆಗಿರುವ ಬಪ್ಪಿ, ನೇರವಾಗಿ ಕನ್ನಡ ಸಿನಿಮಾದಲ್ಲಿ ಹಾಡದಿದ್ದರೂ, ಅವರು ಸಂಗೀತ ಸಂಯೋಜನೆ ಮಾಡಿರುವ ಹಾಡೊಂದನ್ನು ಕನ್ನಡ ಸಿನಿಮಾದಲ್ಲಿ ಬಳಸಿಕೊಳ್ಳಲಾಗಿದೆ. ಅದು ಕನ್ನಡದ ಹೆಸರಾಂತ ನಟ ವಿಷ್ಣುವರ್ಧನ್ ನಟನೆಯ ಕರ್ಣ ಸಿನಿಮಾದಲ್ಲಿ ಎನ್ನುವುದು ವಿಶೇಷ.

    Bappi Lahari

    ವಿಷ್ಣುವರ್ಧನ್ ಮತ್ತು ಸುಮಲತಾ ಅಂಬರೀಶ್ ಕಾಂಬಿನೇಷನ್ ನ ಈ ಸಿನಿಮಾದಲ್ಲಿ ‘ಆ ಕರ್ಣನಂತೆ’, ‘ಪ್ರೀತಿಯೇ ನನ್ನುಸಿರು’ ಸೇರಿದಂತೆ ಐದು ಹಾಡುಗಳಿವೆ. ಎಂ.ರಂಗರಾವ್ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಈ ಐದು ಹಾಡುಗಳಲ್ಲಿ ಅತೀ ಹೆಚ್ಚು ಜನಪ್ರಿಯವಾಗಿದ್ದು ‘ಪ್ರೀತಿಯೇ ನನ್ನುಸಿರು’ ಗೀತೆ. ಇದು ಮೂಲ ಹಿಂದಿಯ ಸಿನಿಮಾದಿಂದ ಎರವಲು ಪಡೆದದ್ದು. ಇದನ್ನೂ ಓದಿ: ಬಪ್ಪಿ ಲಹರಿ ಧರಿಸುತ್ತಿದ್ದ ಚಿನ್ನಾಭರಣ ಎಷ್ಟು?

    1985ರಲ್ಲಿ ತೆರೆಕಂಡ ಹಿಂದಿಯ ಚಿತ್ರ ‘ಸಾಹೇಬ್’ ಸಿನಿಮಾದ ‘ಯಾರ ಬಿನಾ ಚೈನ್ ಕಹನ್ ರೇ’ ಹಾಡನ್ನು ಕಂಪೋಸ್ ಮಾಡಿದ್ದು ಬಪ್ಪಿ ಲಹರಿ. ಇದೊಂದು ರೆಟ್ರೋ ಶೈಲಿಯ ಗೀತೆಯಾಗಿತ್ತು. ಅನಿಲ್ ಕಪೂರ್ ಮತ್ತು ಅರ್ಮಿತ್ ಸಿಂಗ್ ಅವರ ಕಾಂಬಿನೇಷನ್ ನಲ್ಲಿ ಈ ಸಿನಿಮಾ ಮೂಡಿ ಬಂದಿತ್ತು. ಈ ಮೂಲ ಹಾಡನ್ನೇ ಕನ್ನಡದಲ್ಲಿ ‘ಕರ್ಣ’ ಚಿತ್ರಕ್ಕಾಗಿ ಎಂ.ರಂಗರಾವ್ ಅವರು ಬಳಸಿಕೊಂಡು ‘ಪ್ರೀತಿಯೇ ನನ್ನುಸಿರು’ ಹಾಡು ಮಾಡಿದರು. ಎಸ್.ಪಿ.ಬಾಲಸುಬ್ರಮಣ್ಯಂ ಮತ್ತು ಎಸ್.ಜಾನಕಿ ಅವರು ಈ ಗೀತೆಗೆ ದನಿಯಾದರು. ಇದನ್ನೂ ಓದಿ: ಹಿರಿಯ ಗಾಯಕ ಬಪ್ಪಿ ಲಹರಿ ಇನ್ನಿಲ್ಲ

  • ಅನುಮತಿ ಇಲ್ಲದೇ ವಿಷ್ಣು ಪ್ರತಿಮೆ ನಿರ್ಮಾಣ – ಪ್ರತಿಮೆ ತೆರವುಗೊಳಿಸಿದ ಪೊಲೀಸರು

    ಅನುಮತಿ ಇಲ್ಲದೇ ವಿಷ್ಣು ಪ್ರತಿಮೆ ನಿರ್ಮಾಣ – ಪ್ರತಿಮೆ ತೆರವುಗೊಳಿಸಿದ ಪೊಲೀಸರು

    ಮೈಸೂರು: ಸ್ಯಾಂಡಲ್‍ವುಡ್ ದಿವಗಂತ ನಟ ಸಾಹಸಸಿಂಹ ವಿಷ್ಣುವರ್ಧನ್‍ರವರಿಗೆ ಇಂದು 71ನೇ ಜನುಮ ದಿನ. ಈ ವಿಶೇಷ ದಿನದಂದು ವಿಷ್ಣುವರ್ಧನ್‍ರವರು ನಮ್ಮ ಜೊತೆ ಇಲ್ಲದಿದ್ದರೂ, ಅವರ ಅಭಿಮಾನಿಗಳು ಬಹಳ ಸಂಭ್ರಮದಿಂದ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.

    vishnuvardhan statue

    ಈ ಮಧ್ಯೆ ಮೈಸೂರಿನ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದ ಸಾಹಸ ಸಿಂಹ ವಿಷ್ಣುವರ್ಧನ್ ಉದ್ಯಾನವನದಲ್ಲಿ ಅನಧಿಕೃತವಾಗಿ ಇಟ್ಟಿದ್ದ ವಿಷ್ಣು ಪ್ರತಿಮೆಯನ್ನು ಪೊಲೀಸರು ತೆರವು ಮಾಡಿದ್ದಾರೆ. ಇದನ್ನೂ ಓದಿ: ತಾತನ ಕಷ್ಟಕ್ಕೆ ಮರುಗಿ ಎತ್ತುಗಳಾದ ಮೊಮ್ಮಕಳು – ತಾತನಿಗೆ ನೆರವಾದ ಜ್ಯೋತಿಷಿ ಕಮಲಾಕರ್ ಭಟ್

    vishnuvardhan statue

    ಪಾರ್ಕ್‍ನಲ್ಲಿ ರಾತ್ರೋ ರಾತ್ರಿ ಡಾ. ವಿಷ್ಣುವರ್ಧನ್ ಪ್ರತಿಮೆ ಇಡಲಾಗಿತ್ತು. ಪಾಲಿಕೆ ಉದ್ಯಾನವನದಲ್ಲಿ ಅನುಮತಿ ಪಡೆಯದೇ ಡಾ. ವಿಷ್ಣುವರ್ಧನ್ ಪ್ರತಿಮೆ ಇಟ್ಟ ಕಾರಣ ಅದನ್ನು ಪೊಲೀಸರು ತೆರವು ಮಾಡಿದ್ದು, ಇದಕ್ಕೆ ವಿಷ್ಣು ಅಭಿಮಾನಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ರಾತ್ರಿ 10ರವರೆಗೆ ಕಾರ್ಯನಿರ್ವಹಿಸಲಿರುವ ಬೆಂಗಳೂರು ಮೆಟ್ರೋ

  • ಚಿತ್ರರಂಗವಷ್ಟೇ ಅಲ್ಲ ಕನ್ನಡ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿರುವುದಕ್ಕೆ ಹೆಮ್ಮೆಯಾಗ್ತಿದೆ: ಬೊಮ್ಮಾಯಿ

    ಚಿತ್ರರಂಗವಷ್ಟೇ ಅಲ್ಲ ಕನ್ನಡ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿರುವುದಕ್ಕೆ ಹೆಮ್ಮೆಯಾಗ್ತಿದೆ: ಬೊಮ್ಮಾಯಿ

    – ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಷ್ಠಾನವನ್ನು ಮುಂದುವರಿಸುತ್ತೇನೆ
    – ನಿಮ್ಮ ಫೇವರೆಟ್ ನಟಿಯಾಗಿರುವುದು ನಮ್ಮ ಭಾಗ್ಯ ಅಂದ್ರು ಭಾರತಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಪ್ರತಿಷ್ಠಾನದ ಕೆಲಸವನ್ನು ನಾನು ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ನಟಿ ಭಾರತಿ ವಿಷ್ಣುವರ್ಧನ್‍ರವರಿಗೆ ತಿಳಿಸಿದ್ದಾರೆ.

    ಖಾಸಗಿ ಕಾರ್ಯಕ್ರಮವೊಂದರಲ್ಲಿ ಬಸವರಾಜ ಬೊಮ್ಮಾಯಿಯವರು ನನಗೆ ಕನ್ನಡದಲ್ಲಿ ಆಲ್ ಫೇವರೆಂಟ್ ನಟ ಎಂದರೆ ಡಾ. ರಾಜ್ ಕುಮಾರ್ ಮತ್ತು ಮೂವರು ನಟಿಯರೆಂದರೆ ಬಹಳ ಇಷ್ಟ. ಅದರಲ್ಲಿ ಭಾರತಿಯವರು ಕೂಡ ಒಬ್ಬರು ಎಂಬ ವಿಚಾರ ಬಹಿರಂಗಪಡಿಸಿದ್ದರು. ಅಲ್ಲದೇ ಡಾ. ರಾಜ್ ಕುಮಾರ್ ಹಾಗೂ ಭಾರತಿಯವರ ಕಾಂಬಿನೇಷನ್‍ನಲ್ಲಿ ಬಂದ ಬಂಗಾರದ ಮನುಷ್ಯ ಸಿನಿಮಾವನ್ನು ಹಲವಾರು ಬಾರಿ ವೀಕ್ಷಿಸಿರುವುದಾಗಿ ಹೇಳಿಕೊಂಡಿದ್ದರು. ಇದನ್ನೂ ಓದಿ: ಮಂತ್ರಾಲಯದಿಂದ ವಾಪಸ್ಸಾಗ್ತಿದ್ದಾಗ ಕಾರು ಅಪಘಾತ- ಮದ್ವೆಯಾಗ್ಬೇಕಿದ್ದ ಜೋಡಿ ಸಾವು

    ಹೀಗಾಗಿ ಪಬ್ಲಿಕ್ ಟಿವಿ ನಡೆಸಿದ ವಿಶೇಷ ಸಂದರ್ಶನದಲ್ಲಿ ಬೊಮ್ಮಾಯಿಯವರಿಗೆ ಸಪ್ರ್ರೈಸ್ ಆಗಿ ಹಿರಿಯ ನಟಿ ಭಾರತೀಯವರು ಕರೆ ಮಾಡಿ ಮಾತನಾಡಿದರು. ನೀವು ಮುಖ್ಯಮಂತ್ರಿಯಾಗಿರುವ ಬಗ್ಗೆ ನಮಗೆ ಬಹಳ ಸಂತೋಷವಿದೆ. ನಿಮ್ಮನ್ನು ಭೇಟಿಯಾಗಬೇಕೆಂದು ಬಹಳಷ್ಟು ಬಾರಿ ಪ್ರಯತ್ನಿಸಿದೆ. ಆದರೆ ಈವರೆಗೂ ಭೇಟಿಯಾಗಲು ಅವಕಾಶ ಸಿಗಲಿಲ್ಲ. ನೀವು ನಿಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿರುತ್ತೀರಾ ಎಂದು ನಾನು ಕೂಡ ತೊಂದರೆ ನೀಡಲಿಲ್ಲ ಎಂದಿದ್ದಾರೆ. ಆಗ ಬೊಮ್ಮಾಯಿಯವರು ನಾನು ಕೂಡ ನಿಮ್ಮನ್ನು ಭೇಟಿಯಾಗಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಶಿಷ್ಯ ಸಂತೋಷ್ ಲಾಡ್ ಅಸಮಾಧಾನ

    ಇದೇ ಸಂದರ್ಭದಲ್ಲಿ ಸಾಹಸ ಸಿಂಹ ಡಾ. ವಿಷ್ಟುವರ್ಧನ್ ಪ್ರತಿಷ್ಠಾನಕ್ಕೆ ನೀವು ಅಧ್ಯಕ್ಷರಾಗಿದ್ದೀರಾ, ಇದರಿಂದ ನಿಮ್ಮ ಜೊತೆ ಕೆಲಸ ಮಾಡುವಂತಹ ಸೌಭಾಗ್ಯ ನಮಗೆ ಸಿಕ್ಕಿದೆ. ಇದೇ ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್‍ರವರ ಹುಟ್ಟುಹಬ್ಬವಿರುವುದಾಗಿ ತಿಳಿಸಿದ ಅವರು, ವಿಷ್ಣುವರ್ಧನ್ ಅವರ ಪ್ರತಿಷ್ಠಾನದ ಬಗ್ಗೆ ಗಮನ ಹರಿಸುವಂತೆ ಮನವಿ ಮಾಡಿದ್ದಾರೆ. ಆಗ ನಾನು ಪ್ರತಿಷ್ಠಾನದ ಕೆಲಸವನ್ನು ನಾನು ಮುಂದುವರಿಸಿ ಮಾಡಿಕೊಡುತ್ತೇನೆ ಎಂದು ಸಿಎಂ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸುದೀಪ್ ಒಬ್ಬ ನಟರಾಗುತ್ತಾರೆ ಅಂತ ಅಂದುಕೊಂಡಿರಲಿಲ್ಲ: ಬೊಮ್ಮಾಯಿ

    ನಿಮ್ಮ ಅಂದಿನ ಹಳೆಯ ಸಿನಿಮಾಗಳು ಇಂದಿಗೂ ಸಹ ಹಿಟ್ ಸಿನಿಮಾವಾಗಿದೆ. ನೀವೆಲ್ಲರೂ ಕನ್ನಡ ಚಿತ್ರರಂಗವಷ್ಟೇ ಅಲ್ಲದೇ ಕನ್ನಡವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೀರಾ. ಹೀಗಾಗಿ ನಿಮ್ಮೆಲ್ಲರ ಬಗ್ಗೆ ನನಗೆ ಬಹಳ ಹೆಮ್ಮೆ ಇದೆ ಬೊಮ್ಮಾಯಿಯವರು ನುಡಿದಿದ್ದಾರೆ. ಕೊನೆಗೆ ನಿಮ್ಮ ಫೇವರೆಟ್ ನಟಿಯಾಗಿರುವುದು ನಮ್ಮ ಭಾಗ್ಯ. ಭಗವಂತ ನಿಮಗೆ ಉತ್ತಮ ಕೆಲಸಗಳನ್ನು ಮಾಡುವಂತ ಶಕ್ತಿ ಕೊಡಲಿ ಎಂದು ಭಾರತಿಯವರು ಶುಭ ಹಾರೈಸಿದ್ದಾರೆ.

  • ಹಿರಿಯ ನಿರ್ಮಾಪಕ ವಿಜಯ್ ಕುಮಾರ್ ನಿಧನ

    ಹಿರಿಯ ನಿರ್ಮಾಪಕ ವಿಜಯ್ ಕುಮಾರ್ ನಿಧನ

    ಬೆಂಗಳೂರು: ಹಿರಿಯ ನಿರ್ಮಾಪಕ, ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಬಿ. ವಿಜಯ್ ಕುಮಾರ್ ನಿಧನರಾಗಿದ್ದಾರೆ.

    ಹೃದಯಾಘಾತ ಸಂಭವಿಸಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾಗರ್ ಆಸ್ಪತ್ರೆಯಲ್ಲಿ ರಾತ್ರಿ 9:20ಕ್ಕೆ ಕೊನೆಯುಸಿರೆಳೆದಿದ್ದಾರೆ. ಇಂದು ಜಯನಗರದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

    ವಿಷ್ಣುವರ್ಧನ್ ಅವರಿಗೆ ಬಹಳ ಆಪ್ತರಾಗಿದ್ದ ವಿಜಯ್ ಕುಮಾರ್, ವಿಷ್ಣು ಅಭಿನಯಿಸಿದ ಸಾಕಷ್ಟು ಸಿನಿಮಾಗಳ ನಿರ್ಮಾಪಕರಾಗಿದ್ದರು. ಸಿಂಹಾದ್ರಿಯ ಸಿಂಹ, ಲಯನ್ ಜಗಪತಿ ರಾವ್. ಮೌನಗೀತೆ, ಜಗದೇಕ ವೀರ ಸೇರಿ ಹಲವು ಚಿತ್ರಗಳನ್ನ ನಿರ್ಮಿಸಿದ್ದರು. ಇದನ್ನೂ ಓದಿ: ತಪ್ಪು ಸರಿಗಳ ಲೆಕ್ಕ ಆ ಭಗವಂತನ ಬಳಿ ಇರುತ್ತೆ: ರಚಿತಾ ರಾಮ್

    ಸ್ವಚ್ಛ ಭಾರತ ಇವರ ನಿರ್ಮಾಣದ ಕೊನೆಯ ಚಿತ್ರವಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ, ಹಾಗೂ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯ ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

  • ಸಿಂಹ ಯಾವತ್ತಿದ್ರೂ ಸಿಂಹವೇ- ವಿಷ್ಣು ಪುತ್ಥಳಿ ಧ್ವಂಸಗೊಳಿಸಿದವ್ರ ವಿರುದ್ಧ ಪುತ್ರಿ ಕಿಡಿ

    ಸಿಂಹ ಯಾವತ್ತಿದ್ರೂ ಸಿಂಹವೇ- ವಿಷ್ಣು ಪುತ್ಥಳಿ ಧ್ವಂಸಗೊಳಿಸಿದವ್ರ ವಿರುದ್ಧ ಪುತ್ರಿ ಕಿಡಿ

    ಮೈಸೂರು: ಸಾಹಸ ಸಿಂಹ ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆಯ ದಿನವಾದ ಇಂದು ವಿಷ್ಣು ಪ್ರತಿಮೆ ಧ್ವಂಸಗೊಳಿಸಿದವರ ವಿರುದ್ಧ ಅವರ ದಾದಾ ಪುತ್ರಿ ಕೀರ್ತಿ ಮಾತಿನ ಚಾಟಿ ಬೀಸಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತಾನಾಡಿದ ಕೀರ್ತಿ, ಸಿಂಹ ಯಾವತ್ತಿದ್ದರೂ ಸಿಂಹವೇ. ತಂದೆ ಸಿಂಹದಂತೆ ಇದ್ದರು, ಯಾವಾಗಲೂ ಸಿಂಹದಂತೆ ಇರ್ತಾರೆ. ನಾಯಿಗಳು ಬೊಗಳಿದ ತಕ್ಷಣ ದೇವಲೋಕ ಹಾಳಾಗುವುದಿಲ್ಲ ಎಂದು ತಂದೆಯ ಪುತ್ಥಳಿ ಧ್ವಂಸಗೊಳಿಸಿದವರಿಗೆ ಖಡಕ್ ತಿರುಗೇಟು ಕೊಟ್ಟರು.

    ತಂದೆಯ ಪುತ್ಥಳಿ ಧ್ವಂಸ ಮಾಡಿದವರಿಂದ ಅವರ ಹೆಸರು ಅಳಿಸಲು ಸಾಧ್ಯವಿಲ್ಲ. ಅವರ ಅಸ್ತಿತ್ವಕ್ಕೆ ಮತ್ತು ಅವರ ಹೆಸರಿಗೆ ಯಾವತ್ತೂ ಧಕ್ಕೆ ಬರದಂತೆ ನಾವು ನೋಡಿಕೊಳ್ಳುತ್ತೇವೆ. ತಂದೆಯ ಹೆಸರು ಅವರ ಮೇಲಿನ ಪ್ರೀತಿ ಅಭಿಮಾನಿಗಳ ಮನಸ್ಸಿನಲ್ಲಿದೆ. ಇನ್ನೊಂದು ವರ್ಷದಲ್ಲಿ ತಂದೆಯ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣ ಆಗಲಿದೆ. ಒಳ್ಳೆಯ ಕೆಲಸಗಳು ಸ್ವಲ್ಪ ತಡವಾಗಿಯೇ ಆಗೋದು. ತಂದೆ ಎಂದಾಕ್ಷಣ ಅವರ ಪ್ರೀತಿಯೇ ನೆನಪಾಗುತ್ತಿದೆ ಎಂದರು.

    ಇಂದು ಅವರ 11ನೇ ಪುಣ್ಯ ಸ್ಮರಣೆ ಮಾಡುವ ಎಲ್ಲಾ ಅಭಿಮಾನಿಗಳಿಗೆ ನಮ್ಮ ಮನದಾಳದ ಧನ್ಯವಾದ ಎಂದು ವಿಷ್ಣು ಪುತ್ರಿ ಹೇಳಿದರು.

  • 45 ವರ್ಷ ಕನ್ನಡಿಗರನ್ನು ರಂಜಿಸಿದ ತಪ್ಪಿಗೆ ಈ ಶಿಕ್ಷೆನಾ?- ಜಗ್ಗೇಶ್

    45 ವರ್ಷ ಕನ್ನಡಿಗರನ್ನು ರಂಜಿಸಿದ ತಪ್ಪಿಗೆ ಈ ಶಿಕ್ಷೆನಾ?- ಜಗ್ಗೇಶ್

    ಬೆಂಗಳೂರು: ಪ್ರತಿಯೊಂದು ವಿಷಯಗಳಿಗೂ ತನ್ನದೇ ಆಗಿರುವ ವಿಭಿನ್ನ ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಜಗ್ಗೇಶ್, ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಮಾಡಿರುವ ಕುರಿತಾಗಿ ಕಿಡಿಗೇಡಿಗಳ ಮನಸ್ಥಿತಿ ಕುರಿತಾಗಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ

    ಕನ್ನಡದ ಮೆಚ್ಚುಗೆಯ ಮಗನನ್ನು ನೀವು ಅಪಮಾನಿಸಿದ್ದೀರಾ. ಎಂದು ಟ್ವಿಟ್ಟರ್ ಮೂಲಕವಾಗಿ ವಿಷ್ಣುವರ್ಧನ್ ಪತ್ರಿಮೆಯನ್ನು ಧ್ವಂಸಗೊಳಿಸಿದ ಕೀಡಿಗೇಡೆಗಳ ವಿರುದ್ಧ ನವರಸ ನಾಕ ಜಗ್ಗೇಶ್ ಟ್ವೀಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇಷ್ಟೇನಾ ಕನ್ನಡಕ್ಕೆ ದುಡಿದು ಕಣ್ಮರೆಯಾದ ಕಲಾವಿದರ ಹಣೆಬರಹ ತುಂಬ ದುಃಖವಾಯಿತು. ಎಲ್ಲಿ ಹೋಯಿತು ಚಪ್ಪಾಳೆ ಸದ್ದು? ಎಲ್ಲಿ ಹೋಯಿತು ಬದುಕಿದ್ದಾಗ ನೋಡಲು ನಿಂತ ಅಭಿಮಾನ? ಎಲ್ಲಿ ಹೋಯಿತು ಇವನಮ್ಮವ ಇವನಮ್ಮವ ಎಂದ ಮನಗಳು ಇದು ಕನ್ನಡಕ್ಕೆ ಮಾಡಿದ ಅವಮಾನ, ಒಳ್ಳೆಯ ಲಕ್ಷಣ ಅಲ್ಲ, ಬದಲಾಗಿ ಎಂದು ದುಃಖದಿಂದ ಜಗ್ಗೇಶ್ ಹೇಳಿದ್ದಾರೆ.

    ಕನ್ನಡಿಗರನ್ನು 45 ವರ್ಷ ರಂಜಿಸಿದ ತಪ್ಪಿಗೆ ಈ ಶಿಕ್ಷೆನಾ? ಆತನ ಆತ್ಮ ಈ ರಾಕ್ಷಸಿ ಕೃತ್ಯ ಗಮನಿಸದೆ ಇರಬಹುದು, ಆದರೆ ನೆನಪಿಡಿ ರಕ್ಕಸರೇ ನೀವು ಅಪಮಾನಿಸಿದ್ದು, ನಿಮ್ಮ ರಂಜಿಸಿ ನಿರ್ಗಮಿಸಿದ ನಟನಲ್ಲ, ಬದಲಾಗಿ ನಿಮ್ಮ ಕನ್ನಡ ನೆಲದ ಮೆಚ್ಚಿನ ಮಗನನ್ನು. ನಿಮ್ಮ ತಂದೆ-ತಾಯಿವಂಶ ಮೆಚ್ಚಿದ ಆತ್ಮ ಅದು. ನಿಮ್ಮ ಕೃತ್ಯ ಯಾವ ದೇವರು ಕ್ಷಮಿಸನು ನತದೃಷ್ಟರೆ.! ಎಂದು ಟ್ವೀಟ್ ಮೂಲಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಯಾವುದೋ ಭಾಷೆ ನಟನ ವೈಭವಿಕರಿಸಿ ವಿಶಾಲಹೃದಯ ಎನ್ನುವವರೆ. ನಿಮ್ಮ ರಂಜಿಸಿ ಖುಷಿಪಡಿಸಿ ಸಂತನಂತೆ ಬಾಳಿ ನಿರ್ಗಮಿಸಿದ ಕಲಾಬಂಧು ಸತ್ತಮೇಲು ಕೊಂದು ಅಪಮಾನಿಸಿದ ಪಾಪಿಗಳಿಗೆ ತಕ್ಕ ಪಾಠಕಲಿಸಿ, ಕಲಾ ಬಂಧು ಶಿಲೆಯನ್ನ ಮರುಸ್ಥಾಪಿಸಿ ಗೌರವಿಸಿ ಕನ್ನಡತನದ ವಿಶಾಲಹೃದಯ ಪ್ರದರ್ಶಿಸಿ. ರಂಜಿಸಿ ಕಣ್ಮರೆಯಾದ ಕಲಾವಿದರಿಗೆ ಹೃದಯದಲ್ಲಿ ಜಾಗನೀಡಿ, ಅದು ಕನ್ನಡದ ಧರ್ಮ ಎಂದು ಜಗ್ಗೇಶ್ ವಿಷ್ಣುವರ್ಧನ್ ಸ್ಮಾರಕ ಧ್ವಂಸ ಕುರಿತಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

    ನಟ ವಿಷ್ಣುವರ್ಧನ್ ಅವರ ಬೆಂಗಳೂರಿನ ಮಾಗಡಿ ರಸ್ತೆ ಬಳಿ ಇರುವ ಪ್ರತಿಮೆಯನ್ನು ಡಿ.25ರಂದು ಕಿಡಿಗೇಡಿಗಳು ಒಡೆದುಹಾಕಿದ್ದಾರೆ. ನಟ ದರ್ಶನ್, ಕಿಚ್ಚ ಸುದೀಪ್, ಅನಿರುದ್ಧ ಸೇರಿದಂತೆ ಅನೇಕರು ಈ ಬಗ್ಗೆ ಈಗಾಗಲೇ ಬೇಸರ ವ್ಯಕ್ತಪಡಿಸಿದ್ದಾರೆ. ನಟ ಜಗ್ಗೇಶ್ ಕೂಡ ವಿಷ್ಣುವರ್ಧನ್ ಅವರ ವ್ಯಕ್ತಿತ್ವವವನ್ನು ನೆನದಿದ್ದಾರೆ. ಕಿಡಿಗೇಡಿಗಳ ಮನಸ್ಥಿತಿಗಳ ಕುರಿತಾಗಿ ಬೇಸರವನ್ನು ಹೊರಹಾಕಿದ್ದಾರೆ.

  • ಸಾಹಸಸಿಂಹ ವಿಷ್ಣುವರ್ಧನ್ ಪ್ರತಿಮೆ ಧ್ವಂಸಕರಿಗೆ ಸುದೀಪ್ ಎಚ್ಚರಿಕೆ

    ಸಾಹಸಸಿಂಹ ವಿಷ್ಣುವರ್ಧನ್ ಪ್ರತಿಮೆ ಧ್ವಂಸಕರಿಗೆ ಸುದೀಪ್ ಎಚ್ಚರಿಕೆ

    – ನಿಮ್ಮ ಹೆಸ್ರು ಗೊತ್ತಾದ ದಿನ ದೇಶ ಬಿಟ್ಟು ಹೋಗಿ

    ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ ಪ್ರತಿಮೆ ಧ್ವಂಸಕರಿಗೆ ಅಭಿನಯ ಚಕ್ರವರ್ತಿ ರನ್ನ ಸುದೀಪ್ ಖಡಕ್ ಎಚ್ಚರಿಕೆ ನೀಡಿದ್ದು, ನಿಮ್ಮ ಹೆಸರು ತಿಳಿಯುವ ಮೊದಲು ದೇಶ ಬಿಟ್ಟು ಹೋಗಿ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಎಚ್ಚರಿಕೆ ನೀಡಿರುವ ವೀಡಿಯೋ ಶೇರ್ ಮಾಡಿಕೊಂಡಿದ್ದಾರೆ.

    ವಿಷ್ಣು ಸರ್ ಪ್ರತಿಮೆ ಧ್ವಂಸಗೊಳಿಸಿರುವ ವಿಷಯ ನನಗೆ ತಡವಾಗಿ ತಿಳಿಯಿತು. ವಿಷ್ಣು ಸರ್ ಅಭಿಮಾನಿಯಾಗಿ ಮೂರ್ತಿಯನ್ನ ಒಡೆದು ಹಾಕಿರೋರಿಗೆ ಕೆಲ ವಿಷಯಗಳನ್ನ ಹೇಳಲು ಇಷ್ಟಪಡುತ್ತೇನೆ. ಮೂರ್ತಿ ಒಡೆದು ಹಾಕಿರುವ ಧ್ವಂಸಕರು ಸಿಕ್ಕರೆ ವಿಷ್ಣು ಸರ್ ಅಭಿಮಾನಿಗಳು ನಿಮ್ಮನ್ನ ಅದಕ್ಕಿಂತ ಹೀನಾಯವಾಗಿ ಒಡೆದು ಹಾಕುತ್ತಾರೆ. ಮೂರ್ತಿ ಒಡೆದು ಹಾಕಿರುವವರು ಮನುಷ್ಯರೇ ಅಲ್ಲ. ಎಲ್ಲಿಯೂ ಸಿಕ್ಕಿ ಹಾಕಿಕೊಳ್ಳದಂತೆ ನೋಡಿಕೊಳ್ಳಿ. ನಿಮ್ಮ ಹೆಸರು ಗೊತ್ತಾದ ದಿನ ಏನು ನಡೆಯುತ್ತೆ ಅದನ್ನ ಯಾರಿಂದಲೂ ತಡೆಯಲು ಆಗಲ್ಲ.

    ಆ ಮೂರ್ತಿಯನ್ನ ಒಡೆಯುವ ಮುನ್ನ ಒಂದು ಸಲ ನೀವೂ ಯೋಚನೆ ಮಾಡಿದ್ದರೆ ಒಬ್ಬ ಮನುಷ್ಯನಾಗಿ ಮಾಡೋ ಕೆಲಸವೇ ಅಲ್ಲ. ಎಂತಹವರು ಅಂತ ಹೇಳೋಕೆ ಹೋದ್ರೆ ಸೆನ್ಸಾರ್ ಸ್ಟಾರ್ಟ್ ಆಗುತ್ತೆ. ನಿಮ್ಮ ಹೆಸರು ಗೊತ್ತಾದ ದಿನ ದಯವಿಟ್ಟು ದೇಶ ಬಿಟ್ಟು ಓಡಿ ಹೋಗಿಬಿಡಿ ಎಂದು ಎಚ್ಚರಿಕೆ ನೀಡಿದ್ದಾರೆ.

    ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್‍ಗೇಟ್ ಅಂಡರ್ ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ. ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ.

    ಟೋಲ್‍ಗೇಟ್ ಸರ್ಕಲ್ ಗೆ ಶ್ರೀ ಬಾಲ ಗಂಗಾಧರ ಸ್ವಾಮೀಜಿ ವೃತ್ತ ಅಂತ ಹೆಸರಿಡಲಾಗಿದೆ. ಹಾಗಾಗಿ ವಿಷ್ಣುವರ್ಧನ್ ಪ್ರತಿಮೆ ಸ್ಥಳದಲ್ಲಿ ಬಾಲಗಂಗಾಧರ ಸ್ವಾಮೀಜಿ ಸ್ಟ್ಯಾಚು ಇಡಲು ನಿರ್ಧರಿಸಲಾಗಿದೆ. ಹೀಗಾಗಿ ರಾತ್ರಿ ವಿಷ್ಣು ಪ್ರತಿಮೆ ತೆರವುಗೊಳಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಪ್ರತಿಮೆ ತೆಗೆಯುವ ಮೂಲಕ ಕನ್ನಡಿಗರಿಗೆ ಅವಮಾನಿಸಲಾಗಿದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅನಿರುದ್ಧ, ಪ್ರತಿಷ್ಠಾಪನೆಯಾಗಿರುವ ಮೂರ್ತಿಯನ್ನ ರಾತ್ರೋ ರಾತ್ರಿ ಯಾರಿಗೂ ಹೇಳದೇ ತೆಗೆಯುವುದು ಎಷ್ಟು ಸೂಕ್ತ. ಈ ರೀತಿಯ ಕೆಲಸಗಳಿಂದ ಹಿರಿಯ ವ್ಯಕ್ತಿಗೆ ಅವಮಾನ ಮಾಡಿದಂತೆ ಆಗಲ್ವಾ? ಇದರಿಂದ ಅಭಿಮಾನಿಗಳಿಗೆ ದುಃಖ ಆಗುತ್ತೆ. ವಿಷ್ಣುವರ್ಧನ್ ಅಪ್ಪಾಜಿ ಪ್ರತಿಮೆಯನ್ನ ಯಾರು ತೆಗೆದ್ರು ಮತ್ತು ಯಾಕೆ ತೆಗೆದರು ಎಂದು ಬೇಸರ ವ್ಯಕ್ತಪಡಿಸಿದರು.

    ನಮ್ಮ ಕುಟುಂಬ ಎಲ್ಲರನ್ನ ಗೌರವಿಸುತ್ತೆ. ನಾವು ಯಾರ ಮಾತಿಗೆ ತಿರುಗೇಟು ನೀಡುವುದು ನಮಗೆ ಗೊತ್ತಿಲ್ಲ. ಸಚಿವರಾಗಿರುವ ಸೋಮಣ್ಣ ಅವರ ಮಾತುಗಳಿಗೆ ನಾವು ಗೌರವ ನೀಡುತ್ತೇವೆ. ಒಂದು ಪುತ್ಥಳಿಯನ್ನ ಪ್ರತಿಷ್ಠಾಪನೆ ಮಾಡುವಾಗಲೇ ಎಲ್ಲ ಮಾಹಿತಿ ಸಂಗ್ರಹಿಸಿಕೊಳ್ಳಬೇಕು. ಪ್ರತಿಷ್ಠಾಪನೆ ವಿಚಾರದಲ್ಲಿ ಯಾವ ತೊಂದರೆಯೂ ಇಲ್ಲ ಅಂದ್ಮೇಲೆ ಪ್ರತಿಮೆ ಸ್ಥಾಪನೆ ಮಾಡಲಾಗುತ್ತದೆ. ಪ್ರತಿ ಬಾರಿಯೂ ಅಪ್ಪಾಜಿ ಅವರ ಬಗ್ಗೆಯೇ ಈ ರೀತಿ ಯಾಕೆ ಆಗ್ತಿದೆ. ಒಂದು ವೇಳೆ ಪ್ರತಿಮೆ ಸ್ಥಳಾಂತರಿಸುವದಿದ್ದರೆ ಎಲ್ಲರ ಜೊತೆ ಮಾತುಕತೆ ನಡೆಸಿ ಗೌರವಯುತವಾಗಿ ತೆಗೆಯಬಹದಿತ್ತು ಎಂದರು.

    ವಿ.ಸೋಮಣ್ಣ ಹೇಳಿದ್ದೇನು?: 40 ವರ್ಷಗಳ ಹಿಂದೆಯೇ ಬಾಲಗಂಗಾಧರೇಶ್ವರ ವೃತ್ತ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾನು ಮತ್ತು ವಿಷ್ಣುವರ್ಧನ್ ಆತ್ಮೀಯರು. ಆದ್ರೆ ಈ ಪ್ರತಿಮೆ ಏಕೆ ತೆರವು ಆಯ್ತು ಅಂತ ಮಾಹಿತಿ ಇಲ್ಲ. ಆದ್ರೆ ಈ ಪ್ರದೇಶದಲ್ಲಿ ತಿಳಿದೋ ಅಥವಾ ತಿಳಿಯದೋ ಅಲ್ಲಿ ಪ್ರತಿಮೆ ಇರಿಸಲಾಗಿತ್ತು. ಮುಂದಿನ ನಾಲ್ಕೈದು ದಿನಗಳಲ್ಲಿ ಒಳ್ಳೆ ಕಡೆ ಪ್ರತಿಮೆ ಸ್ಥಾಪನೆ ಮಾಡಲಾಗುವುದು. ವಿಷ್ಣುವರ್ಧನ್ ನನಗೆ ಆತ್ಮೀಯರಲ್ಲಿ ಆತ್ಮೀಯರು. ನನ್ನ ಜೊತೆಗಿನ ಅವರ ಒಡನಾಟ ಹೇಗಿತ್ತು ಅನ್ನೋದು ಈಗ ಹೇಳಲು ಸಮಯ ಇಲ್ಲ. ಇದೊಂದು ಸೂಕ್ಷ್ಮ ಘಟನೆಯಾಗಿದ್ದು, ನಡೆದ ಅತಾಚುರ್ಯಕ್ಕೆ ನಾನು ಕ್ಷಮೆ ಕೇಳುತ್ತೇನೆ. ನನ್ನ ಕ್ಷೇತ್ರದಲ್ಲಿ ಎಲ್ಲಿ ಬೇಕಾದ್ರೂ ಸ್ಥಾಪಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು.