ಮುಂಬೈ: ವಿಷ್ಣುಮಂಚು (Vishnu Manchu) ಅಭಿನಯದ ಕಣ್ಣಪ್ಪ (Kannappa) ಸಿನಿಮಾ ಬಹುಭಾಷೆಯಲ್ಲಿ ರಿಲೀಸ್ ಆಗಿದೆ ಈ ಚಿತ್ರದಲ್ಲಿ ಹಲವು ಭಾಷೆಯ ವಿವಿಧ ಖ್ಯಾತ ಕಲಾವಿದರು ನಟಿಸಿದ್ದು ಚಿತ್ರದ ಹೈಲೈಟ್ನಲ್ಲೊಂದು.
ವಿಷ್ಣು ಮಂಚು ಕಣ್ಣಪ್ಪನಾಗಿ ಅಭಿನಯಿಸಿದರೆ ಅತಿಥಿ ಪಾತ್ರಗಳಲ್ಲಿ ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ಲಾಲ್ ಅಭಿನಯಿಸಿದ್ದಾರೆ. ಗೆಸ್ಟ್ ಅಪೀಯರೆನ್ಸ್ ಮಾಡಿದ್ದ ಬೇರೆ ಭಾಷೆ ಕಲಾವಿದರು ಉಚಿತವಾಗಿಯೇ ಅಭಿನಯಿಸಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೀಗ ಅಕ್ಷಯ್ ಕುಮಾರ್ (Akshay Kumar) ಶಿವನ ಪಾತ್ರಕ್ಕಾಗಿ 10 ಕೋಟಿ ರೂ. ಸಂಭಾವನೆ ಪಡೆದು ಅಭಿನಯಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ: ರಾಮ್ಚರಣ್ಗೆ ಕ್ಷಮೆ ಕೇಳಿದ `ಗೇಮ್ ಚೇಂಜರ್’ ಪ್ರೊಡ್ಯೂಸರ್

ಶಿವನ ಪಾತ್ರ ಮಾಡಿದ್ದ ಅಕ್ಷಯ್ ಕುಮಾರ್ 5 ದಿನದ ಕಾಲ್ಶೀಟ್ಗಾಗಿ 10 ಕೋಟಿ ರೂ. ಸಂಭಾವನೆ ಪಡೆದಿದ್ದರು ಎನ್ನಲಾಗುತ್ತಿದೆ. ಆದರೆ ಪ್ರಭಾಸ್ ಹಾಗೂ ಮೋಹನ್ಲಾಲ್ ಮೋಹನ್ಬಾಬು ಮೇಲಿನ ಸ್ನೇಹ, ವಿಶ್ವಾಸದಿಂದ ರೆಮನ್ಯುರೇಶನ್ ಪಡೆಯದೇ ಅಭಿನಯಿಸಿದ್ದಾರೆ. ಆದರೆ ಐದೇ ದಿನದ ಕಾಲ್ಶೀಟ್ಗೆ ಅಕ್ಷಯ್ 10 ಕೋಟಿ ಪಡೆದುಕೊಂಡು ಹೋಗಿರುವುದು ಟಾಲಿವುಡ್ ವಲಯದಲ್ಲಿ ಬಹಳ ಚರ್ಚೆಯಾಗುತ್ತಿದೆ. ಇದನ್ನೂ ಓದಿ: ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರಕ್ಕೆ ಹಂಸಲೇಖ ಸಂಗೀತ
ಅಕ್ಷಯ್ ದುರಾಸೆಯಿಂದ ಹಣ ಪಡೆದುಕೊಂಡು ಹೋಗಿದ್ದಾರೆ ಎಂದು ಚರ್ಚೆಯಾಗುತ್ತಿದೆ. ಆದರೆ ಅಕ್ಷಯ್ ಕೇಳಿದಷ್ಟು ಹಣಕ್ಕೆ ಒಪ್ಪಿಗೆಯಿಂದಲೇ ನಿರ್ಮಾಪಕರು ರೆಮನ್ಯುರೇಷನ್ ಕೊಟ್ಟಿರುತ್ತಾರೆ. ಹೀಗಾಗಿ ಅಕ್ಷಯ್ ಕುಮಾರ್ ಕೂಡ ಕಣ್ಣಪ್ಪ ಚಿತ್ರದ ಪ್ರಚಾರದಲ್ಲಿ ಭಾಗಿಯಾಗಿದ್ದು. ಆದರೆ ಮೋಹನ್ಲಾಲ್ ಆಗಲಿ ಪ್ರಭಾಸ್ ಆಗಲಿ ಭಾಗಿಯಾಗಿರಲಿಲ್ಲ. ಪ್ರಭಾಸ್ ಹಾಗೂ ಮೋಹನ್ಲಾಲ್ ಮುಂದೆ ಅಕ್ಷಯ್ ಸಣ್ಣವರಾದ್ರು ಅಷ್ಟೇ ಎನ್ನುತ್ತಿದ್ದಾರೆ ಪ್ರಭಾಸ್ ಫ್ಯಾನ್ಸ್.



ಸುದ್ದಿಗೋಷ್ಠಿಯಲ್ಲಿ ಶಿವಣ್ಣ (Shivanna) ಮಾತನಾಡಿ, ‘ಕಣ್ಣಪ್ಪ’ ಚಿತ್ರ ಮಾಡಲು ಧೈರ್ಯ ಬೇಕು. ವಿಷ್ಣು ಮಂಚು ಅವರು ಭಕ್ತಿಯಿಂದ ಚಿತ್ರ ಮಾಡಿದ್ದಾರೆ. ಚಿತ್ರದ ಲುಕ್ ಅದ್ಭುತವಾಗಿ ಮೂಡಿ ಬಂದಿದೆ. ವಿಷ್ಣು ಈ ರೀತಿಯ ಸಿನಿಮಾ ಮಾಡಿದ್ದಕ್ಕೆ ಅವರ ಮೇಲಿನ ಗೌರವ ಹೆಚ್ಚಾಯ್ತು ಎಂದರು.
ಮೋಹನ್ ಬಾಬು ಈ ತರ ಸಿನಿಮಾ ಒಪ್ಪಿ ಮಾಡಿದ್ದು ಗ್ರೇಟ್. ಜನ ಈ ತರ ಸಿನಿಮಾ ನೋಡಬೇಕು. ಕಾಳಹಸ್ತಿ ಅಂದರೆ ಏನು ತಿಳಿದುಕೊಳ್ಳಬೇಕು. ನ್ಯೂಜಿಲ್ಯಾಂಡ್ಗೆ ತೆರಳಿ ಶೂಟಿಂಗ್ ಮಾಡಿದ್ದಾರೆ. ನಿರ್ದೇಶಕರು ಆಸಕ್ತಿಯಿಂದ ಸಿನಿಮಾ ಮಾಡಿದ್ದಾರೆ. 100% ಈ ಚಿತ್ರ ಸೂಪರ್ ಡೂಪರ್ ಹಿಟ್ ಆಗುತ್ತದೆ ಎಂದಿದ್ದಾರೆ. ಶಿವನ ಲೀಲೆ ಯಾವಾಗಲೂ ಕಾಪಾಡುತ್ತದೆ ಎಂದು ಚಿತ್ರತಂಡಕ್ಕೆ ನಟ ಭರವಸೆ ತುಂಬಿದರು.



















