Tag: ವಿಸಿಟಿಂಗ್ ಕಾರ್ಡ್

  • ರೈಲ್ವೇ ಪೊಲೀಸರಿಗೆ ವಿಸಿಟಿಂಗ್ ಕಾರ್ಡ್ – ಅಪರಾಧ ನಿಯಂತ್ರಿಸಲು ಹೊಸ ಪ್ಲಾನ್

    ರೈಲ್ವೇ ಪೊಲೀಸರಿಗೆ ವಿಸಿಟಿಂಗ್ ಕಾರ್ಡ್ – ಅಪರಾಧ ನಿಯಂತ್ರಿಸಲು ಹೊಸ ಪ್ಲಾನ್

    ಬೆಂಗಳೂರು: ರಾಜ್ಯದ ರೈಲು ನಿಲ್ದಾಣಗಳಲ್ಲಿ ನಡೆಯುವ ಅಪರಾಧ ಗಳನ್ನು ತಗ್ಗಿಸಲು ಹಾಗೂ ಪ್ರಯಾಣಿಕರ ಜೊತೆ ನಿರಂತರ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ರೈಲ್ವೇ ಪೊಲೀಸ್ ಇಲಾಖೆಯು ತಮ್ಮ ಸಿಬ್ಬಂದಿಗೆ ವಿಸಿಟಿಂಗ್ ಕಾರ್ಡ್ ಮಾಡಿಸಿದೆ. ವಿಸಿಟಿಂಗ್ ಕಾರ್ಡ್‍ಗಳನ್ನು ಪ್ರಯಾಣಿಕರಿಗೆ ವಿತರಿಸುವ ಮೂಲಕ ಕಳ್ಳತನ ಸೇರಿದಂತೆ ಅಹಿತಕರ ಘಟನೆಗಳ ಬಗ್ಗೆ ಮಾಹಿತಿ ನೀಡುವಂತೆ ಕೇಳಿಕೊಂಡಿದೆ.

    ರೈಲ್ವೇ ಇಲಾಖೆಯ ಎಡಿಜಿಪಿ ಭಾಸ್ಕರ್ ರಾವ್ ನೇತೃತ್ವದಲ್ಲಿ ಎಸ್.ಪಿ ಸಿರಿಗೌರಿ ಅವರು ಪ್ರಾಯೋಗಿಕ ಹಂತವಾಗಿ ಬೆಂಗಳೂರು, ಯಶವಂತಪುರ ಹಾಗೂ ಕಂಟ್ಮೊನೆಂಟ್ ರೈಲ್ವೇ ಕೆಲ ಪೊಲೀಸರಿಗೆ ತಮ್ಮ ಹೆಸರು, ಪೋನ್ ನಂಬರ್ ಸಮೇತ ವಿಸಿಟಿಂಗ್ ಕಾರ್ಡ್ ಮಾಡಿಸಲು ಅನುಮತಿ ನೀಡಿದ್ದಾರೆ. ಈಗಾಗಲೇ ಕಾನ್ ಸ್ಟೇಬಲ್‍ಗಳು ‘ಸದಾ ನಿಮ್ಮ ಸೇವೆಯಲ್ಲಿ’ ಇಂಗ್ಲೀಷ್ ನಲ್ಲಿ ‘ಹ್ಯಾಪಿ ಟೂ ಹೆಲ್ಪ್’ ಶೀರ್ಷಿಕೆ ಜೊತೆಗೆ ವಿಸಿಟಿಂಗ್ ಕಾರ್ಡ್ ಗಳನ್ನು ಪ್ರಯಾಣಿಕರಿಗೆ ವಿತರಣೆ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಇದನ್ನೂ ಓದಿ: CITYನನ್ನ ಪರವಾಗಿ ಯಾರೂ ಪ್ರತಿಭಟನೆಗೆ ಮುಂದಾಗಬಾರದು – ಬಿಎಸ್‍ವೈ ಮನವಿ

    ರೈಲ್ವೇ ಹಳಿ ಹಾಗೂ ನಿಲ್ದಾಣಗಳಲ್ಲಿ ಕಳ್ಳತನ, ವಂಚನೆ, ಕೊಲೆ ಹಾಗೂ ದರೋಡೆ ಸೇರಿದಂತೆ ಇನ್ನಿತರ ಕ್ರೈಂ ಚಟುವಟಿಕೆಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ರೈಲ್ವೇ ಇಲಾಖೆ ಹೊಸ ಹೆಜ್ಜೆ ಇಟ್ಟಿದೆ. ಬೆಂಗಳೂರಿನ ಯಶವಂತಪುರ, ಕಂಟೊನ್ಮೆಂಟ್, ಬಂಗಾರಪೇಟೆ, ಮಂಡ್ಯ, ಮೈಸೂರು, ಹಾಸನ ಹಾಗೂ ಅರಸಿಕೇರೆ ರೈಲ್ವೇ ಪೊಲೀಸರ ಹೆಸರಿನಲ್ಲಿ ವಿಸಿಟಿಂಗ್ ಕಾರ್ಡ್ ಮಾಡಿಸಲಾಗಿದೆ. ರಾಜ್ಯದಲ್ಲಿ ಬರುವ 18 ಪ್ರಮುಖ ರೈಲ್ವೇ ನಿಲ್ದಾಣಗಳಲ್ಲಿ ಕಾರ್ಯ ನಿರ್ವಹಿಸುವ ಪೊಲೀಸರಿಗೂ ಅನುಮತಿ ನೀಡಲಾಗಿದ್ದು, ವಾಟ್ಸಾಪ್ ಮೂಲಕ ಹೆಚ್ಚೆಚ್ಚು ಪ್ರಯಾಣಿಕರಿಗೆ ಕಳುಹಿಸಲು ಸಿದ್ಧತೆ ನಡೆದಿದೆ.

    ಅಪರಾಧ ಮಾಹಿತಿ ಜೊತೆಗೆ ಪ್ರಯಾಣದ ಸಂದರ್ಭಗಳಲ್ಲಿ ಏನಾದರೂ ತೊಂದರೆ ಉಂಟಾದರೆ ವಿಸಿಟಿಂಗ್ ಕಾರ್ಡ್ ನಂಬರ್‍ಗೆ ಕರೆ ಮಾಡಿದರೆ ಕೂಡಲೇ ಸ್ಪಂದಿಸಲಿದ್ದಾರೆ. ಏನಾದರೂ ವಸ್ತುಗಳು ಕಳವು ಆದರೆ ಆಥವಾ ಗೊಂದಲವಿದ್ದರೂ ಪ್ರಯಾಣಿಕರು ಕರೆ ಮಾಡಬಹುದಾಗಿದೆ. ಈ ಮೂಲಕ ಪ್ರಯಾಣಿರಲ್ಲಿ ಮಾನಸಿಕ ಧೈರ್ಯ ತುಂಬುವ ಜೊತೆಗೆ ಹೆಚ್ಚಿನ ಬಾಂಧವ್ಯ ಮೂಡಿಸಲು ಸಹಕಾರಿಯಾಗಲಿದೆ. ಪೊಲೀಸರ ವಿನೂತನ ಯೋಜನೆಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

  • ಪ್ರಧಾನಿ ಕಚೇರಿ ವಿಸಿಟಿಂಗ್ ಕಾರ್ಡ್ ಬಳಸಿ ವಂಚನೆ

    ಪ್ರಧಾನಿ ಕಚೇರಿ ವಿಸಿಟಿಂಗ್ ಕಾರ್ಡ್ ಬಳಸಿ ವಂಚನೆ

    ಬೆಂಗಳೂರು: ಪ್ರಧಾನ ಮಂತ್ರಿ ಕಚೇರಿ ವಿಸಿಟಿಂಗ್ ಕಾರ್ಡ್ ಬಳಸಿ ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿ ಆರೋಪಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

    ಉತ್ತರ ಪ್ರದೇಶ ಮೂಲದ ಅನಿಕೇತ್ ಬಂಧಿತ ಆರೋಪಿ, ನಗರದ ಐಟಿಸಿ ಗಾರ್ಡೇನಿಯಾ ಹೋಟೆಲ್‍ನಲ್ಲಿ ಆರೋಪಿ ರೂಮ್ ಬುಕ್ ಮಾಡಿದ್ದ. ನ್ಯಾಷನಲ್ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾದ ಯೂತ್ ಅಡ್ವೈಸರ್ ಎಂದು ವಿಸಿಟಿಂಗ್ ಕಾರ್ಡ್ ತೋರಿಸಿ ಆರೋಪಿ ಹೋಟೆಲ್‍ನಲ್ಲಿ ಉಳಿದುಕೊಂಡಿದ್ದ. ಜೂನ್ 16 ರಿಂದ 20ರ ವರೆಗೆ ಐಷಾರಾಮಿ ಹೋಟೆಲ್ ನಲ್ಲಿ ಈತ ವಾಸ್ತವ್ಯ ಹೂಡಿದ್ದ.

    ಅನುಮಾನಗೊಂಡ ಹೋಟೆಲ್‍ನವರು, ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಕಬ್ಬನ್ ಪಾರ್ಕ್ ಪೊಲೀಸರು ಪ್ರಧಾನಿ ಕಚೇರಿಗೆ ಪತ್ರ ಬರೆದು ಪರಿಶೀಲನೆ ನಡೆಸಿದಾಗ ಈತ ನಕಲಿ ಎಂಬುದು ಬೆಳಕಿಗೆ ಬಂದಿದೆ. ಸತತ ಒಂದು ತಿಂಗಳ ಕಾಲ ತನಿಖೆ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಆರೋಪಿ ಬಂಧನದ ವಿಚಾರ ತಿಳಿದು ಕೇಂದ್ರದ ಐಬಿ(ಇಂಟಲಿಜೆನ್ಸ್ ಬ್ಯೂರೋ) ಮತ್ತು ಎಫ್‍ಆರ್‍ಆರ್‍ಒ ತಂಡಗಳು ಭೇಟಿ ನೀಡಿದ್ದು, ಎರಡೂ ತಂಡಗಳು ಆರೋಪಿಯನ್ನು ತೀವ್ರ ವಿಚಾರಣೆಗೊಳಪಡಿಸಿವೆ.

  • ವಿಸಿಟಿಂಗ್ ಕಾರ್ಡ್ ಕೊಟ್ಟು ಕಾಲ್ ಮಾಡದ್ದಕ್ಕೆ ಹಾಜರಾತಿ ಕಡಿಮೆ- ಸರ್ಜನ್ ವಿರುದ್ಧ ವಿದ್ಯಾರ್ಥಿನಿ ಗಂಭೀರ ಆರೋಪ

    ವಿಸಿಟಿಂಗ್ ಕಾರ್ಡ್ ಕೊಟ್ಟು ಕಾಲ್ ಮಾಡದ್ದಕ್ಕೆ ಹಾಜರಾತಿ ಕಡಿಮೆ- ಸರ್ಜನ್ ವಿರುದ್ಧ ವಿದ್ಯಾರ್ಥಿನಿ ಗಂಭೀರ ಆರೋಪ

    ಚಿತ್ರದುರ್ಗ: ಇದೊಂಥರ ವಿಚಿತ್ರ ಪ್ರಕರಣ. ಜಿಲ್ಲಾ ಸರ್ಜನ್ ನನಗೆ ವಿಸಿಟಿಂಗ್ ಕಾರ್ಡ್ ಕೊಟ್ಟು ಕಾಲ್ ಮಾಡು ಎಂದು ಹೇಳುತ್ತಾರೆ. ಅಲ್ಲಿ ಇಲ್ಲಿ ಬಾ ಎಂದು ಕರೀತಾರೆ ಎಂದು ವಿದ್ಯಾರ್ಥಿನಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ.

    ಆದರೆ ಜಿಲ್ಲಾ ಸರ್ಜನ್ ನನ್ನ ಮಗಳಿಗಿಂತ ಚಿಕ್ಕ ವಯಸ್ಸಿನವಳು ಯಾರೋ ಆ ಯುವತಿಯನ್ನ ನನ್ನ ವಿರುದ್ಧ ಎತ್ತಿಕಟ್ಟಿ ಆಕೆಯ ಹಿತ್ತಾಳೆ ಕಿವಿ ಚುಚ್ಚಿದ್ದಾರೆ ಎಂದು ಜಿಲ್ಲಾ ಸರ್ಜನ್ ಹೇಳುತ್ತಿದ್ದಾರೆ.

    ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಕಳೆದ 2 ವರ್ಷಗಳಿಂದ ಎಎನ್‍ಎಂ ವ್ಯಾಸಂಗ ಮಾಡುತ್ತಿರೋ ವಿದ್ಯಾರ್ಥಿನಿಗೆ ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ. ಜಗದೀಶ್ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಆರೋಪ ಎದುರಾಗಿದೆ.

    ವಿಸಿಟಿಂಗ್ ಕಾರ್ಡ್ ಕೊಟ್ಟು ಕಾಲ್ ಮಾಡು ಎಂದು ಹೇಳುವುದು, ಹಾಸ್ಟೆಲ್‍ನಿಂದ ಡೈಲಿ ತಿಂಡಿ ತಂದು ಕೊಡು ಎಂದು ಹೇಳುವುದು. ಅಲ್ಲಿ ಬಾ, ಇಲ್ಲಿ ಬಾ ಎಂದು ಕರಿಯುತ್ತಾರಂತೆ. ಅವರ ತಾಳಕ್ಕೆ ತಕ್ಕಂತೆ ಕುಣಿಲಿಲ್ಲ ಎನ್ನುವ ಕಾರಣಕ್ಕೆ ಹಾಜರಾತಿ ಕಡಿಮೆ ನೀಡಿ, ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡದೇ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ನನಗೆ ನ್ಯಾಯ ಕೊಡಿಸಿ ಎಂದು ಧರಣಿ ಕುಳಿತ್ತಿದ್ದಾಳೆ.

    ವಿದ್ಯಾರ್ಥಿ ಆರೋಪಗಳ ಬಗ್ಗೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಜಗದೀಶ್ ಅವರನ್ನು ಕೇಳಿದರೆ, ಆ ವಿದ್ಯಾರ್ಥಿನಿ ಕಳೆದ ಬಾರಿ ಹೊಸದುರ್ಗ ತಾಲೂಕಿನ ಬೆಲಗೂರಿನಲ್ಲಿ ಕ್ಯಾಂಪ್ ಹಾಕಿದ್ದ ವೇಳೆ ಊರಿನಿಂದ ಓಡಾಡುತ್ತಿದಳು. ಹಾಗಾಗಿ ನಾನು ವಾರ್ನಿಂಗ್ ಮಾಡಿದ್ದೆ. ಆ ಯುವತಿ ಮಾಡುತ್ತಿರೋ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ.

    ಒಟ್ಟಾರೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಜಿಲ್ಲಾ ಸರ್ಜನ್ ವಿರುದ್ಧ ವಿಧ್ಯಾರ್ಥಿನಿ ಮಾಡಿರೋ ಗಂಭೀರ ಆರೋಪ ಸುಳ್ಳು ಎನ್ನುವುದು ಸಹಪಾಠಿಗಳ ಮಾತಾಗಿದೆ. ತನ್ನ ಆರೋಪದ ಬಗ್ಗೆ ಪ್ರಿನ್ಸಿಪಾಲ್ ಬಳಿ ಕಂಪ್ಲೆಂಟ್ ಮಾಡಿದ್ದು, ಪೊಲೀಸರಿಗೆ ದೂರು ನೀಡದೇ ಇರೋದು ಅನುಮಾನ ಹುಟ್ಟುಹಾಕಿದೆ.