Tag: ವಿಸ್ಕಿ

  • 22 ಕೋಟಿ ರೂ.ಗೆ ಮಾರಾಟವಾಯ್ತು 60 ವರ್ಷ ಹಳೆಯ ಒಂದು ಬಾಟಲಿ ವಿಸ್ಕಿ

    22 ಕೋಟಿ ರೂ.ಗೆ ಮಾರಾಟವಾಯ್ತು 60 ವರ್ಷ ಹಳೆಯ ಒಂದು ಬಾಟಲಿ ವಿಸ್ಕಿ

    ಬ್ರಿಟನ್: ಲಂಡನ್‌ನಲ್ಲಿರುವ (London) ಪ್ರಸಿದ್ಧ ಅಂತಾರಾಷ್ಟ್ರೀಯ ಹರಾಜು ಸಂಸ್ಥೆ ಸೋಥೆಬೈಸ್ ನಡೆಸಿದ ಹರಾಜಿನಲ್ಲಿ ಮಕಲನ್ ಕಂಪನಿ ತಯಾರಿಸಿದ ಸಿಂಗಲ್ ಮಾಲ್ಟ್ ವಿಸ್ಕಿ 22 ಕೋಟಿ ರೂ.ಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ.

    2019ರಲ್ಲಿ ಇದೇ ಕಂಪನಿ ತಯಾರಿಸಿದ್ದ ವಿಸ್ಕಿಯು 15 ಕೋಟಿ ರೂ. ಮಾರಾಟವಾಗಿತ್ತು. ಆ ದಾಖಲೆಯನ್ನು ‘ದಿ ಮಕಲನ್‌ ಅದಾಮಿ 1926’ ಹೆಸರಿನ ವಿಸ್ಕಿ ಮುರಿದಿದೆ. ಮಕಲನ್ ಕಂಪನಿಯು 1926 ರಲ್ಲಿ ಈ ವಿಸ್ಕಿಯನ್ನು ತಯಾರಿಸಿತ್ತು. ಅದನ್ನು 60 ವರ್ಷಗಳ ವರೆಗೆ ಉಳಿಸಿಕೊಂಡಿತ್ತು. ಇದನ್ನೂ ಓದಿ: ಮಣಿಪುರ ಏರ್‌ಪೋರ್ಟ್ ಮೇಲೆ ಅಪರಿಚಿತ ಡ್ರೋನ್ ಹಾರಾಟ – ಹೆಚ್ಚಿದ ಆತಂಕ

    ಸೋಥೆಬೈಸ್‌ನಲ್ಲಿ ವಿಸ್ಕಿಯನ್ನು ಹರಾಜಿಗೆ ಇಡಲಾಗಿತ್ತು. ಇದು 22 ಲಕ್ಷ ಪೌಂಡ್‌ (22.48 ಕೋಟಿ ರೂ.)ಗೆ ಹರಾಜಾಗಿ ಹೊಸ ದಾಖಲೆ ಬರೆದಿದೆ.

    ಪ್ರತಿಯೊಬ್ಬ ಹರಾಜುದಾರರು ಈ ರೀತಿಯ ವಿಸ್ಕಿಯನ್ನು ಮಾರಾಟ ಮಾಡಲು ಬಯಸುತ್ತಾರೆ. ಹಾಗೆಯೇ ಖರೀದಿದಾರರು ಅದನ್ನು ಹೊಂದಲು ಬಯಸುತ್ತಾರೆ ಎಂದು ಹರಾಜನ್ನು ಆಯೋಜಿಸಿದ ಸೋಥೆಬಿ ಕಂಪನಿಯ ವ್ಯವಸ್ಥಾಪಕರು ಹೇಳಿದ್ದಾರೆ. ಇದನ್ನೂ ಓದಿ: ಸುರಂಗ ಕಾಮಗಾರಿ ವೇಳೆ ಭೂಕುಸಿತ – ಕಾರ್ಮಿಕರ ರಕ್ಷಣೆಗೆ ಇನ್ನೂ ನಾಲ್ಕೈದು ದಿನ ಬೇಕು

  • ಸೋದರಳಿಯನಿಗಾಗಿ whiskey ಆರ್ಡರ್ ಮಾಡಿ 3 ಲಕ್ಷ ಕಳೆದುಕೊಂಡ ನಟಿ

    ಸೋದರಳಿಯನಿಗಾಗಿ whiskey ಆರ್ಡರ್ ಮಾಡಿ 3 ಲಕ್ಷ ಕಳೆದುಕೊಂಡ ನಟಿ

    ಮುಂಬೈ: ಸೋದರಳಿಯನಿಗಾಗಿ ವಿಸ್ಕಿ ಬಾಟಲಿಯನ್ನು ಆನ್‍ಲೈನ್‍ನಲ್ಲಿ ಆರ್ಡರ್ ಮಾಡಿದ್ದ ಹಿರಿಯ ನಟಿಯೊಬ್ಬರ ಬ್ಯಾಂಕ್ ಖಾತೆಯಿಂದಲೇ ಸೈಬರ್ ಕಳ್ಳರು, 3 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಕಳ್ಳತನ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.

    BRIBE

    ಹಿಂದಿ ಧಾರಾವಾಹಿಯ ಹಿರಿಯ ನಟಿಯೊಬ್ಬರು ಮದುವೆಯಾಗುತ್ತಿರುವ ಸೋದರಳಿಯನಿಗೆ ಕೊಡಲೆಂದು, ಆನ್‍ಲೈನ್‍ನಲ್ಲಿ 4,800 ರೂಪಾಯಿ ಮೌಲ್ಯದ ವಿಸ್ಕಿ ಬಾಟಲಿ ಆರ್ಡರ್ ಮಾಡಿದ್ದರು. ಆದರೆ ಅದು ಡೆಲಿವರಿಯಾಗದ ಹಿನ್ನೆಲೆಯಲ್ಲಿ ಅಲ್ಲಿದ್ದ ಸಂಖ್ಯೆಗೆ ಕರೆ ಮಾಡಿ, ಹಣವನ್ನು ಮರುಪಾವತಿಸಲು ಕೋರಿದ್ದಾರೆ. ಮರುಪಾವತಿಗೆ ನೀವು ನಮ್ಮ ವೆಬ್‍ಸೈಟ್‍ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸೈಬರ್ ಕಳ್ಳರು ಹೇಳಿದ್ದಾರೆ. ಇದನ್ನೂ ಓದಿ: ಕೊಹ್ಲಿ ಭಾವನಾತ್ಮಕ ಪೋಸ್ಟ್- ನಗುವೇ ಪತ್ನಿಯ ಉತ್ತರ

    ನಟಿ, ಕ್ರೆಡಿಟ್ ಕಾರ್ಡ್ ಬಳಸಿ ನೋಂದಣಿ ಮಾಡಿಕೊಂಡಿದ್ದು, ಒಟಿಪಿಯನ್ನೂ ಹಂಚಿಕೊಂಡಿದ್ದಾರೆ. ಅವರ ಉಳಿತಾಯ ಖಾತೆಯಲ್ಲಿದ್ದ ಹಣವನ್ನೆಲ್ಲ ಡ್ರಾ ಮಾಡಿಕೊಂಡ ಕಳ್ಳರು, ಬಳಿಕ ಡೆಬಿಟ್ ಕಾರ್ಡ್‍ನಿಂದಲೂ ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 3.05 ಲಕ್ಷ ರೂಪಾಯಿ ದೋಚಿದ್ದಾರೆ. ಈ ವಿಚಾರವಾಗಿ ನಟಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ಅಪ್ಪು ಸರ್ ಎಂದರೆ ನನಗೆ ಹುಚ್ಚು ಅಭಿಮಾನ: ಅನುಶ್ರೀ

  • ಮಾರ್ಕೆಟ್‍ಗೆ ಎಂಟ್ರಿ ಕೊಟ್ಟ ಹೊಸ ಎಣ್ಣೆ ಬ್ರಾಂಡ್‍ಗೆ ಪೂಜೆ

    ಮಾರ್ಕೆಟ್‍ಗೆ ಎಂಟ್ರಿ ಕೊಟ್ಟ ಹೊಸ ಎಣ್ಣೆ ಬ್ರಾಂಡ್‍ಗೆ ಪೂಜೆ

    ಕೊಪ್ಪಳ: ಮಾರ್ಕೆಟ್‍ಗೆ ಎಂಟ್ರಿ ಕೊಟ್ಟಿರುವ ಹೊಸ ಎಣ್ಣೆ ಬ್ರಾಂಡ್‍ಗೆ ಪೂಜೆ ಮಾಡಿ ಬರಮಾಡಿಕೊಂಡಿರುವ ಘಟನೆ ಕೊಪ್ಪಳದಲ್ಲಿ ನೆಡದಿದೆ.

    ಕೊಪ್ಪಳದ ಸರ್ಕಾರಿ ಪಾನೀಯ ನಿಗಮದಲ್ಲಿ ಮ್ಯಾಕ್ಡೊನ್ ಒನ್ ಪ್ಲಾಟಿನಮ್ ನ್ಯೂ ವಿಸ್ಕಿ ಬ್ರಾಂಡ್‍ಗೆ ಈ ರೀತಿ ಪೂಜೆ ಮಾಡಲಾಗಿದೆ. ಮಾರುಕಟ್ಟೆಗೂ ಲಗ್ಗೆ ಇಡುವ ಮುನ್ನ ಕರ್ನಾಟಕ ರಾಜ್ಯ ಪಾನೀಯ ನಿಗಮ ಲಿಮಿಟೆಡ್ ಕೊಪ್ಪಳದಲ್ಲಿ ವಿಸ್ಕಿ ಬಾಕ್ಸ್ ಗಳಿಗೆ ಹೂವಿನ ಹಾರ ಹಾಕಿ ಮಂಗಳಾರತಿ ಎತ್ತಿ ಪೂಜೆ ಸಲ್ಲಿಸಿದೆ.

    ಸದ್ಯ ವಿಸ್ಕಿ ಬಾಕ್ಸ್ ಗೆ ಪೂಜೆ ಮಾಡಿದ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವೇಳೆ ಸಿಕ್ಕಾಪಟ್ಟೆ ವೈರಲ್ ಆಗಿರುವ ‘ಹೌದು ಹುಲಿಯಾ’ ಸೌಂಡ್ ಇಲ್ಲಿಯೂ ಕೇಳಿಸಿತು. ಒಟ್ಟಾರೆ ಸರ್ಕಾರಿ ನಿಗಮಗಳಲ್ಲಿಯೂ ಹೊಸ ಬ್ರಾಂಡ್ ಎಣ್ಣೆಗೆ ಪೂಜೆ ಮಾಡಿರುವುದು ಇದೀಗ ಜಿಲ್ಲೆಯಲ್ಲಿ ಸಖತ್ ಹವಾ ಮಾಡುತ್ತಿದೆ.

    ಮಾಜಿ ಸಿಎಂ ಸಿದ್ದರಾಮಯ್ಯ ಕಾಗವಾಡ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. ಅವರು ತಮ್ಮ ಭಾಷಣದ ವೇಳೆ ‘ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣ ಕೊಟ್ರು’ ಎಂದು ಹೇಳಿದ್ದರು. ಈ ಸಂದರ್ಭದಲ್ಲಿ ವೇದಿಕೆಯ ಮುಂಭಾಗದಲ್ಲೇ ಇದ್ದ ಕುಡುಕನೋರ್ವ ‘ಹೌದು ಹುಲಿಯಾ’ ಎಂದಿದ್ದರು. ಆಗಿನಿಂದ ಕುಡುಕನ ‘ಹೌದು ಹುಲಿಯಾ’ ಡೈಲಾಗ್ ಸಖತ್ ಟ್ರೆಂಡ್ ಆಗಿದೆ.

  • ನೀರು ಖಾಲಿಯಾಗಿದ್ದಕ್ಕೆ ವಿಸ್ಕಿ ಜೊತೆ ಮೂತ್ರ ಮಿಕ್ಸ್ ಮಾಡ್ಕೋ ಎಂದು ರೇಗಿಸಿದ ಸ್ನೇಹಿತನನ್ನ ಕೊಂದೇಬಿಟ್ಟ

    ನೀರು ಖಾಲಿಯಾಗಿದ್ದಕ್ಕೆ ವಿಸ್ಕಿ ಜೊತೆ ಮೂತ್ರ ಮಿಕ್ಸ್ ಮಾಡ್ಕೋ ಎಂದು ರೇಗಿಸಿದ ಸ್ನೇಹಿತನನ್ನ ಕೊಂದೇಬಿಟ್ಟ

    ಮುಂಬೈ: ನೀರು ಖಾಲಿಯಾಗಿದ್ದಕ್ಕೆ ವಿಸ್ಕಿ ಜೊತೆ ಮೂತ್ರ ಮಿಕ್ಸ್ ಮಾಡಿಕೋ ಎಂದು ಹೇಳಿದ 25 ವರ್ಷದ ವ್ಯಕ್ತಿಯನ್ನ ಆತನ ಸ್ನೇಹಿತ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಭಾಯಂದರ್ ನಲ್ಲಿ ನಡೆದಿದೆ.

    ಶನಿವಾರ ರಾತ್ರಿ ಸಂದೀಪ್ ಗವಾಸ್(27) ಹಾಗೂ ಅಚ್ಯುತ್ ಚೌಬೆ(25) ಇತರೆ ಮೂವರು ಸ್ನೇಹಿತರೊಂದಿಗೆ ಮದ್ಯಪಾನ ಮಾಡುತ್ತಿದ್ದರು. ಭಾನುವಾರ ನಸುಕಿನ ಜಾವದವರೆಗೂ ಇವರ ಮದ್ಯಪಾನ ಮುಂದುವರೆದಿತ್ತು. ಸುಮಾರು 2 ಗಂಟೆ ವೇಳೆಯಲ್ಲಿ ಗವಾಸ್ ಮತ್ತೊಂದು ಬಾರಿ ಮದ್ಯ ಕುಡಿಯಲು ಮುಂದಾಗಿದ್ದ. ಆದ್ರೆ ಮದ್ಯದ ಜೊತೆ ಮಿಕ್ಸ್ ಮಾಡಿಕೊಳ್ಳಲು ನೀರು ಖಾಲಿಯಾಗಿತ್ತು. ಗವಾಸ್ ನೀರಿಗಾಗಿ ಹುಡುಕುತ್ತಿದ್ದ ವೇಳೆ ಸ್ನೇಹಿತ ಚೌಬೆ, ಮದ್ಯದೊಂದಿಗೆ ಆತನ ಮೂತ್ರ ಮಿಕ್ಸ್ ಮಾಡಿಕೊಳ್ಳುವಂತೆ ಛೇಡಿಸಿದ್ದ. ಗುಂಪಿನಲ್ಲಿದ್ದ ಇತರರು ಕೂಡ ಚೌಬೆಯ ಜೊತೆಗೂಡಿ ಗವಾಸ್ ನನ್ನು ರೇಗಿಸಿದ್ದರು.

    ಇದರಿಂದ ಕೋಪಗೊಂಡ ಗವಾಸ್ ಮರದ ತುಂಡು ತೆಗೆದುಕೊಂಡು ಚೌಬೆ ತಲೆ ಮೇಲೆ ಹೊಡೆದಿದ್ದಾನೆ. ಪರಿಣಾಮ ಚೌಬೆಗೆ ರಕ್ತಸ್ರಾವವಾಗಲು ಶುರುವಾಗಿದೆ. ಈ ವೇಳೆ ಸ್ನೇಹಿತ ವಿವೇಕ್ ಮಧ್ಯಪ್ರವೇಶಿಸಲು ಯತ್ನಿಸಿದ್ದು, ಆತನ ಮೇಲೂ ಹಲ್ಲೆ ನಡೆದಿದೆ. ಚೌಬೆಗೆ ರಕ್ತಸ್ರಾವವಾಗೋದನ್ನ ನೋಡಿ ಗವಾಸ್ ಹಾಗೂ ಸ್ನೇಹಿತರು ಸ್ಥಳದಿಂದ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವವಾದ ಕಾರಣ ಚೌಬೆ ಸಾವನ್ನಪ್ಪಿದ್ದಾನೆ. ಮರುದಿನ ಬೆಳಗ್ಗೆ ಸ್ಥಳೀಯರು ಮೃತದೇಹವನ್ನ ನೋಡಿದ್ದಾರೆ.

    ನವ್‍ಘರ್ ಪೊಲೀಸರು ಸೋಮವಾರದಂದು ಆರೋಪಿ ಗವಾಸ್ ನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.