Tag: ವಿಸ್ಮಯ

  • ಶ್ರುತಿ ಹರಿಹರನ್- ಸರ್ಜಾ ಮೀಟೂ ಕೇಸ್ : ನಟಿಗೆ ಪೊಲೀಸ್ ನೋಟಿಸ್

    ಶ್ರುತಿ ಹರಿಹರನ್- ಸರ್ಜಾ ಮೀಟೂ ಕೇಸ್ : ನಟಿಗೆ ಪೊಲೀಸ್ ನೋಟಿಸ್

    ನ್ನಡ ಚಿತ್ರರಂಗದ ಹೆಸರಾಂತ ನಟಿ ಶ್ರುತಿ ಹರಿಹರನ್ (Shruti Hariharan) ಮೀಟೂ ಕೇಸ್ ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ದಕ್ಷಿಣದ ಖ್ಯಾತ ನಟ ಅರ್ಜುನ್ ಸರ್ಜಾ ಮೇಲೆ ಶ್ರುತಿ ಹರಿಹರನ್ ಮೀಟೂ (Metoo) ಆರೋಪ ಮಾಡಿದ್ದರು. ಅದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಸೂಕ್ತ ಸಾಕ್ಷಿಗಳು ಇಲ್ಲ ಎನ್ನುವ ಕಾರಣಕ್ಕಾಗಿ ಜನವರಿ 2022ರಂದು ಬಿ ರಿಪೋರ್ಟ್ (B Report) ಸಲ್ಲಿಸಿದ್ದರು. ಈ ರಿಪೋರ್ಟ್ ವಿರುದ್ಧ ಶ್ರುತಿ ಮತ್ತೆ ಕೋರ್ಟ್ ಮೆಟ್ಟಿಲು ಏರಿದ್ದರು.

    ಕಬ್ಬನ್ ಪಾರ್ಕ್ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಚಾಲೇಂಜ್ ಮಾಡಿದ್ದ ಶ್ರುತಿ ಹರಿಹರನ್ ಗೆ ಈಗ ಮತ್ತೆ ಪೊಲೀಸರು ನೋಟಿಸ್ (Notice) ನೀಡಿದ್ದಾರೆ. ಪೊಲೀಸರಿಗೆ ಸಾಕ್ಷ್ಯಾಧಾರಗಳನ್ನು ನೀಡುವಂತೆ ನೋಟಿಸ್ ನಲ್ಲಿ ತಿಳಿಸಿದ್ದಾರೆ. ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಬಳಿಕ ಈ ನೋಟಿಸ್  ನೀಡಲಾಗಿದೆ.

    ಏನಿದು ಪ್ರಕರಣ ?

    ಶ್ರುತಿ ಹರಿಹರನ್ ವಿಸ್ಮಯ (Vismaya) ಚಿತ್ರದ ಚಿತ್ರೀಕರಣದ ವೇಳೆ ನಟ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಮೀಟೂ ವೇದಿಕೆಯಲ್ಲಿ ಹೇಳಿಕೊಂಡಿದ್ದರು. ಶ್ರುತಿ ಆರೋಪ ಮಾಡುತ್ತಿದ್ದಂತೆ ಕೆಲ ಸಂಘಟನೆಗಳು, ನಟರು, ಕಲಾವಿದರು ನಟಿಯ ಪರ ನಿಂತರೆ, ಬಹುತೇಕ ಹಿರಿಯ ಕಲಾವಿದರು ಅರ್ಜುನ್ ಸರ್ಜಾ ಪರ ಬ್ಯಾಟ್ ಬೀಸಿದ್ದರು. ಇತ್ತ ಅರ್ಜುನ್ ಸರ್ಜಾ (Arjun Sarja) ವಿರುದ್ಧ ದೂರು ಕೇಳಿ ಬರುತ್ತಿದ್ದಂತೆ ಮಾವ, ಹಿರಿಯ ನಟ ಕಲಾ ತಪಸ್ವಿ ರಾಜೇಶ್ ಮೊದಲು ಫಿಲ್ಮ್ ಚೇಂಬರ್ ನಲ್ಲಿ ದೂರು ದಾಖಲಿಸಿದ್ದರು.

    ದೂರು ದಾಖಲಾದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಚಲನಚಿತ್ರ ಮಂಡಳಿ ಸಹ ಶ್ರುತಿ ಹರಿಹರನ್ ನೇರವಾಗಿ ಮಾಧ್ಯಮಗಳ ಮುಂದೆ ಹೋಗಬಾರದಿತ್ತು ಎಂದು ಅಸಮಾಧಾನ ಹೊರಹಾಕಿತ್ತು. ನಂತರ ರೆಬೆಲ್ ಸ್ಟಾರ್ ಅಂಬರೀಶ್ ಅವರ ಮಧ್ಯಸ್ಥಿತಿಕೆಯಲ್ಲಿ ಫಿಲ್ಮ್ ಚೇಂಬರ್ ನಲ್ಲಿ ಶೃತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ಮಧ್ಯೆ ಸಂಧಾನ ಸಭೆ ನಡೆಯಿತು. ಇದನ್ನೂ ಓದಿ:ನಟ ಚಿರಂಜೀವಿ ಸರ್ಜಾ 3 ನೇ ವರ್ಷದ ಪುಣ್ಯತಿಥಿ

    `ವಿಸ್ಮಯ’ ಕುರಿತು ಹೇಳಿಕೆ ನೀಡುವ ವೇಳೆ ಮಧ್ಯ ಪ್ರವೇಶ ಮಾಡಿದ ನಟ ಅರ್ಜುನ ಸರ್ಜಾ ಅವರು, ಸಿನಿಮಾ ವೇಳೆ ನಾನು ಯಾವುದೇ ರೀತಿ ಕೆಟ್ಟದಾಗಿ ವರ್ತನೆ ಮಾಡಿಲ್ಲ. ಅಲ್ಲದೇ ಯಾವುದೇ ಡಿನ್ನರ್, ಹೋಟೆಲ್, ರೆಸಾರ್ಟ್, ರೂಮ್‍ಗೆ ಕರೆದಿಲ್ಲ. 35 ವರ್ಷದಿಂದ ಚಿತ್ರರಂಗದಲ್ಲಿ ಇದ್ದು, ಒಂದು ಕಪ್ಪು ಚುಕ್ಕೆ ನನ್ನ ಮೇಲಿಲ್ಲ. ಆದರೆ ಶ್ರುತಿ ಮಾಡಿರುವ ಆರೋಪದಿಂದ ನನಗೂ, ನನ್ನ ಕುಟುಂಬಸ್ಥರಿಗೂ ಸಾಕಷ್ಟು ನೋವಾಗಿದೆ ಎಂದು ಅಂಬರೀಶ್ ಮುಂದೆ ಹೇಳಿಕೊಂಡಿದ್ದರು. ಅಂಬರೀಶ್ ನಡೆಸಿದ ಸಂಧಾನ ವಿಫಲವಾಗುತ್ತಿದ್ದಂತೆಯೇ ಶ್ರುತಿ  ಕೋರ್ಟ್ ಮೆಟ್ಟಿಲು ಹತ್ತಿದ್ದರು. ಇದೆಲ್ಲವೂ ನಡೆದದ್ದು 2018ರಂದು.

    ಶ್ರುತಿ ನೀಡಿದ ದೂರಿನ ಅನ್ವಯ ಪೊಲೀಸರು ತನಿಖೆ ನಡೆಸಿದ್ದರು. ಲೈಂಗಿಕ ಕಿರುಕುಳ ಆಗಿದೆ ಎನ್ನಲಾದ ಸ್ಥಳಗಳಿಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದರು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಜನವರಿ 2022ರಂದು ಕಬ್ಬನ್ ಪಾರ್ಕ್ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟನ್ನು ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ಅಂಗೀಕರಿಸಿತ್ತು. ಅರ್ಜುನ್ ಸರ್ಜಾ ವಿರುದ್ಧ ಅಷ್ಟೆಲ್ಲಾ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ಕೂಡ ಪೊಲೀಸರ ಬಿ ರಿಪೋರ್ಟ್‍ಗೆ ಆಕ್ಷೇಪಣೆ ಸಲ್ಲಿಸಿಲ್ಲ. ಹೀಗಾಗಿ ಕೋರ್ಟ್ ಬಿ-ರಿಪೋರ್ಟ್ ಅಂಗೀಕರಿಸಿತ್ತು.

    ತನಿಖೆ ಏನೆಲ್ಲ ಆಗಿತ್ತು?

    ನಟಿ ಶ್ರುತಿ ಹರಿಹರನ್ ಮೀಟೂ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಿಳಿದಿದ್ದ ಪೊಲೀಸರಿಗೆ ಯುಬಿ ಸಿಟಿಯ ಸೆಕ್ಯೂರಿಟಿ ಗಾರ್ಡ್‍ಗಳು ತಲೆನೋವಾಗಿ ಪರಿಣಮಿಸಿದ್ದರು. ಹೌದು. ನಟಿ ಶ್ರುತಿ ಹರಿಹರನ್ ಅವರು ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಕಬ್ಬನ್ ಪಾರ್ಕ್ ಪೊಲೀಸರು, ಮೊದಲಿಗೆ ನಟ ಅರ್ಜುನ್ ಸರ್ಜಾ, ವಿಸ್ಮಯ ಚಿತ್ರದ ನಿರ್ದೇಶಕ, ನಿರ್ಮಾಪಕ ಸೇರಿದಂತೆ ಸಾಕಷ್ಟು ಜನರನ್ನು ಮೀಟೂ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಹೇಳಿಕೆಗಳನ್ನು ಪಡೆದುಕೊಂಡಿದ್ದರು.

     

    ವಿಸ್ಮಯ ಚಿತ್ರದ ಚಿತ್ರೀಕರಣದ ವೇಳೆ ನನಗೆ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ರು. ಯುಬಿ ಸಿಟಿಯಲ್ಲಿ ರೂಮ್ ನಲ್ಲಿ ಒಬ್ಬನೇ ಇದೇನಿ, ಬಾ ಸ್ವಲ್ಪ ಹೊತ್ತು ಕಾಲ ಕಳೆಯೋಣ ಅಂತಾ ನನ್ನನ್ನು ಕರೆದ್ರು ಎಂದು ನಟಿ ಶ್ರುತಿ ಹರಿಹರನ್ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಆ ವೇಳೆ ಯುಬಿ ಸಿಟಿಯಲ್ಲಿ ಕೆಲಸ ಮಾಡ್ತಿದ್ದ ಸೆಕ್ಯೂರಿಟಿ ಗಾರ್ಡ್ ಗಳನ್ನು ವಿಚಾರಣೆ ನಡೆಸೋಕೆ ಹೋದ ಪೊಲೀಸರಿಗೆ ಶಾಕ್ ಆಗಿತ್ತು. ಆ ಘಟನೆ ನಡೆದ ನಂತರ ಹತ್ತಾರು ಸೆಕ್ಯೂರಿಟಿ ಗಾರ್ಡ್‍ಗಳು ಕೆಲಸಬಿಟ್ಟಿರೋದಲ್ಲದೇ, ಸೆಕ್ಯೂರಿಟಿ ಏಜೆನ್ಸಿಯನ್ನೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಅಲ್ಲಿದ್ದ ಕೆಲ ಸಿಬ್ಬಂದಿ ಕೂಡ ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಬಾಯಿ ಬಿಟ್ಟಿರಲಿಲ್ಲ.

  • ಜೋಗ ಜಲಪಾತ ಮುಂಗಾರಿನ ವಿಸ್ಮಯ – ಬೀಸುವ ಗಾಳಿಗೆ ಮೇಲಕ್ಕೆ ಹಾರುತ್ತಿದೆ ಶರಾವತಿ!

    ಜೋಗ ಜಲಪಾತ ಮುಂಗಾರಿನ ವಿಸ್ಮಯ – ಬೀಸುವ ಗಾಳಿಗೆ ಮೇಲಕ್ಕೆ ಹಾರುತ್ತಿದೆ ಶರಾವತಿ!

    ಶಿವಮೊಗ್ಗ: ವಿಶೇಷವಾಗಿ ಪ್ರವಾಸಿಗರ ಕಣ್ಮನ ಸೆಳೆಯುವ ವಿಶ್ವ ವಿಖ್ಯಾತ ಜೋಗ ಜಲಪಾತದಲ್ಲಿ ಮತ್ತೊಂದು ಕೌತುಕ ಸೃಷ್ಟಿಯಾಗಿದೆ.

    ಜಲಪಾತದಲ್ಲಿ ಮೇಲಿನಿಂದ ಕೆಳಗೆ ಬೀಳುತ್ತಿದ್ದ ನೀರು, ಗಾಳಿಯ ರಭಸಕ್ಕೆ ಮತ್ತೆ ಮೇಲಕ್ಕೆ ವಾಪಸ್ಸಾಗುತ್ತಿರುವಂತೆ ಭಾಸವಾಗುತ್ತಿದೆ. ಈ ದೃಶ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ಈ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 400 ಕೇಸ್ – ಸಕ್ರಿಯ ಪ್ರಕರಣಗಳ ಸಂಖ್ಯೆ 3,545ಕ್ಕೆ ಏರಿಕೆ

    ಈ ಹಿಂದೆ ಜೋಗ ಜಲಪಾತದಲ್ಲಿ ಕೇವಲ ರಾಜ ಜಲಪಾತದ ನೀರು ಈ ರೀತಿ ಮೇಲಕ್ಕೆ ಹೋಗುತ್ತಿತ್ತು. ಆದರೆ ಈ ಬಾರಿ ರಾಜ, ರಾಣಿ, ರೋರರ್, ರಾಕೆಟ್ ಜಲಪಾತದ ನೀರು ಗಾಳಿಯ ರಭಸಕ್ಕೆ ಮೇಲಕ್ಕೆ ಚಿಮ್ಮುತ್ತಿದೆ. ಈ ದೃಶ್ಯ ನೆರೆದಿದ್ದ ಪ್ರವಾಸಿಗರಿಗೆ ಆಶ್ಚರ್ಯ ಚಕಿತರಾಗುವಂತೆ ಮಾಡಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ – 11 ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

  • ಮುಖವೇ ಇಲ್ಲದೆ ಹುಟ್ಟಿದ ಕುರಿಮರಿ!

    ಮುಖವೇ ಇಲ್ಲದೆ ಹುಟ್ಟಿದ ಕುರಿಮರಿ!

    ಆನೇಕಲ್: ಪ್ರಪಂಚದ ಜೀವ ಸಂಕುಲದಲ್ಲಿ ಆಗಾಗ ಅನೇಕ ಕೌತುಕಗಳು ಘಟಿಸುತ್ತಲೇ ಇರುತ್ತವೆ. ಅಂಥಾದ್ದೇ ಒಂದು ಪ್ರಸಂಗ ತಮಿಳುನಾಡಿನ ಶೂಲಗಿರಿಯಲ್ಲಿ ನಡೆದಿದ್ದು, ಕುರಿಯೊಂದು ಮುಖವೇ ಇಲ್ಲದ ಕುರಿಮರಿಗೆ ಜನ್ಮ ನೀಡಿದೆ.

    ತಮಿಳುನಾಡಿನ ಶೂಲಗಿರಿ ರೈತನ ಮನೆಯಲ್ಲಿ ಈ ವಿಚಿತ್ರ ಕುರಿಮರಿ ಹುಟ್ಟಿದೆ. ಎಲ್ಲಾ ಕುರಿಗಳಂತೆ ಈ ಕುರಿಗೂ ನಾಲ್ಕು ಕಾಲು ಬಾಲ ಇದೆ. ಆಕಾರವೂ ಕುರಿಮರಿಯಂತೆ ಸಾಮಾನ್ಯವಾಗಿದೆ. ಆದರೆ ಈ ಮರಿಗೆ ತಲೆ ಮುಖ ಬಾಯಿಯೇ ಇಲ್ಲ. ಆಶ್ಚರ್ಯ ಅಂದ್ರೆ ಈ ಮರಿಗೆ ಎರಡೂ ಕಿವಿಗಳಿವೆ ಆದರೆ ಮುಖ ಮಾತ್ರ ಇಲ್ಲ. ತಾಯಿ ಕುರಿ ಹೊಟ್ಟೆಯಲ್ಲಿ ಇಷ್ಟು ದೊಡ್ಡಾದಾಗಿ ಬೆಳೆದ ಈ ಕುರಿ ಭೂಮಿಗೆ ಬರ್ತಿದ್ದ ಹಾಗೆ ಉಸಿರು ತೆಗೆದುಕೊಳ್ಳಲು ಮೂಗು ಮತ್ತು ಬಾಯಿ ಇಲ್ಲದ ಕಾರಣ ಸಾವನ್ನಪ್ಪಿದೆ. ಇದನ್ನೂ ಓದಿ: ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಟಾಂಗಾದಲ್ಲಿ ಆಗಮಿಸಿದ ಸೋಮಶೇಖರ್

    ಹೊಟ್ಟೆಯಲ್ಲಿ ಇದ್ದಷ್ಟು ದಿನ ತಾಯಿ ಕುರಿಯ ಶ್ವಾಸದೊಂದಿಗೆ ಬದುಕಿದ ಈ ಕುರಿ ಹೊಟ್ಟೆಯಿಂದ ಹೊರ ಬರುತ್ತಿದ್ದಂತೆ ಸಾವನ್ನಪ್ಪಿದೆ.

  • ಅರ್ಜುನ್ ಸರ್ಜಾ, ಶೃತಿ ಹರಿಹರನ್ ಅಭಿನಯದ ವಿಸ್ಮಯ ಚಿತ್ರ ರೀ ರಿಲೀಸ್!

    ಅರ್ಜುನ್ ಸರ್ಜಾ, ಶೃತಿ ಹರಿಹರನ್ ಅಭಿನಯದ ವಿಸ್ಮಯ ಚಿತ್ರ ರೀ ರಿಲೀಸ್!

    ಬೆಂಗಳೂರು: ಮೀಟೂ ಆರೋಪದ ಮೂಲಕವೇ ಸುದ್ದಿಯಾಗಿದ್ದ ಬಹುಭಾಷಾ ನಟ ಅರ್ಜುನ್ ಸರ್ಜಾ ಹಾಗೂ ಶೃತಿ ಹರಿಹರನ್ ಅಭಿನಯದ ವಿಸ್ಮಯ ಚಿತ್ರ ಮತ್ತೊಮ್ಮೆ ಬಿಡುಗಡೆಯಾಗಲಿದೆ.

    ಹೌದು, ನಟಿ ಶೃತಿ ಹರಿಹರನ್ ಅವರು ಚಿತ್ರೀಕರಣದ ವೇಳೆ ನಟ ಅರ್ಜುನ್ ಸರ್ಜಾ ನನ್ನೊಂದಿಗೆ ಕೆಟ್ಟದಾಗಿ ನಡೆದುಕೊಂಡಿದ್ದರು ಎನ್ನುವ ಮೀಟೂ ಆರೋಪದಿಂದಾಗಿ ವಿಸ್ಮಯ ಚಿತ್ರ ಮತ್ತೆ ಗಾಂಧಿ ನಗರದಲ್ಲಿ ಸದ್ದು ಮಾಡಿತ್ತು.

    2017ರ ಜುಲೈ 27ರಂದು ತೆರೆಕಂಡ ವಿಸ್ಮಯ ಸಿನೆಮಾ, ಪ್ರೇಕ್ಷರನ್ನು ಸೆಳೆಯುವಲ್ಲಿ ವಿಫಲವಾಗಿತ್ತು. ಸಿನೆಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಅರ್ಜುನ್ ಸರ್ಜಾ ಸಖತ್ ಖದರ್ ತೋರಿದ್ದರೆ, ಅವರ ಪತ್ನಿಯಾಗಿ ನಟಿ ಶೃತಿ ಹರಿಹರನ್ ಅಭಿನಯಿಸಿದ್ದರು.

    ಮೀಟೂ ಆರೋಪದಿಂದಾಗಿ ವಿಸ್ಮಯ ಚಿತ್ರ ಮತ್ತೆ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ನಿರ್ಮಾಪಕರು ಹಾಗೂ ವಿತರಕರು ಸಿನಿಮಾವನ್ನು ಮತ್ತೆ ರೀ ರೀಲಿಸ್ ಮಾಡಲು ಮುಂದಾಗಿದ್ದಾರೆ.

    ಈ ಕುರಿತು ಚಿತ್ರ ನಿರ್ಮಾಪಕ ಉಮೇಶ್ ಮಾತನಾಡಿ, ರಾಜ್ಯೋತ್ಸವದ ನಂತರ ವಿಸ್ಮಯ ಚಿತ್ರವನ್ನು ರೀ ರಿಲೀಸ್ ಮಾಡುತ್ತೇನೆ. ಹೀಗಾಗಲೇ ಎಲ್ಲಾ ವಿತರಕರು ನಮ್ಮನ್ನು ಬಲವಂತ ಮಾಡುತ್ತಿದ್ದು ಅವರ ಆಸಕ್ತಿ ಮೇರೆಗೆ ಮತ್ತೊಮ್ಮೆ ತೆರೆಮೇಲೆ ವಿಸ್ಮಯ ಚಿತ್ರ ಮೂಡಿಬರಲಿದೆ. ಈ ಬಗ್ಗೆ ಎಲ್ಲಾ ಚಿತ್ರಮಂದಿರಗಳ ಜೊತೆ ವಿತರಕರು ಸಂಪರ್ಕ ಮಾಡುತ್ತಿದ್ದಾರೆ. ಚಿತ್ರ ರಿಲೀಸ್‍ಗೆ ನಟ ಅರ್ಜುನ್ ಸರ್ಜಾ ಹಾಗೂ ನಟಿ ಶೃತಿ ಹರಿಹರನ್ ಆಗಲಿ ಯಾವುದೇ ಸಂಬಂಧವಿಲ್ಲ. ಚಿತ್ರ ರೀ ರಿಲೀಸ್‍ಗೆ ಯಾವುದೇ ಅಡ್ಡಿ ಇಲ್ಲವೆಂದು ಸ್ಪಷ್ಟ ಪಡಿಸಿದ್ದಾರೆ.

    ಇದೇ ವೇಳೆ ನಟ ಚೇತನ್ ಬಗ್ಗೆ ಮಾತನಾಡಿ, ಕನ್ನಡ ಇಂಡಸ್ಟ್ರೀಸ್‍ನಲ್ಲಿ ವಿಸ್ಮಯ ನನ್ನ ಮೊದಲನೇ ಸಿನೆಮಾ ಆಗಿದ್ದು, ಅರುಣ್ ವೈದ್ಯನಾಥನ್ ಅವರು ಅಮೆರಿಕದಿಂದ ಬಂದು ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದರು. ಚಿತ್ರೀಕರಣದ ವೇಳೆ ಖಳನಾಯಕರ ಪಾತ್ರಕ್ಕೆ ಸ್ಥಳೀಯ ಸಹ ನಿರ್ದೇಶಕರ ಸೂಚನೆ ಮೇರೆಗೆ ನಟ ಚೇತನ್ ಹಾಗೂ ಜೆಕೆ ಅವರನ್ನು ಆಯ್ಕೆಮಾಡಿಕೊಂಡು, ಚೇತನ್ ಅವರನ್ನು ಅಶೋಕ ಹೋಟೆಲ್‍ನಲ್ಲಿ ಭೇಟಿಯಾಗಿ ಮಾತನಾಡಿದ್ದೇವು. ಆದರೆ ಚೇತನ್ ರ ಸಮಯದ ಅಭಾವದಿಂದ ನಿರ್ದೇಶಕರು ಜೆಕೆಯವರನ್ನು ಅಂತಿಮವಾಗಿ ಆಯ್ಕೆ ಮಾಡಿದ್ದರು ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv