Tag: ವಿ.ಡಿ.ಸಾರ್ವಕರ್

  • ಗೋಲ್ವಾಳ್ಕರ್, ಸಾವರ್ಕರ್ ಇತ್ಯಾದಿ ಹುಸಿ ದೇಶ ಭಕ್ತರ ಪಾಠ ತೆಗೆಯಬೇಕು: ಸಾಹಿತಿ ಕುಂ.ವೀರಭದ್ರಪ್ಪ

    ಗೋಲ್ವಾಳ್ಕರ್, ಸಾವರ್ಕರ್ ಇತ್ಯಾದಿ ಹುಸಿ ದೇಶ ಭಕ್ತರ ಪಾಠ ತೆಗೆಯಬೇಕು: ಸಾಹಿತಿ ಕುಂ.ವೀರಭದ್ರಪ್ಪ

    ಚಾಮರಾಜನಗರ: ಗೋಲ್ವಾಳ್ಕರ್ (Golwalkar), ಸಾವರ್ಕರ್ (Savarkar) ಇತ್ಯಾದಿ ಹುಸಿ ದೇಶ ಭಕ್ತರ ಪಾಠ ತೆಗೆಯಬೇಕು. ಈ ಪಾಠಗಳನ್ನು ಮಕ್ಕಳಿಗೆ ಬೋಧಿಸಬಾರದು. ಸರ್ಕಾರ ಈ ಬಗ್ಗೆ ಸುತ್ತೋಲೆ ಹೊರಡಿಸಬೇಕು ಎಂದು ಸಾಹಿತಿ ಕುಂ.ವೀರಭದ್ರಪ್ಪ (Kum Veerabhadrappa) ಆಗ್ರಹಿಸಿದರು.

    ಚಾಮರಾಜನಗರದಲ್ಲಿ (Chamarajanagara) ಮಾತನಾಡಿದ ಅವರು, ಹಿಂದಿನ ಸರ್ಕಾರ ಮನುಷ್ಯ ವಿರೋಧಿ, ದೇಶ ವಿರೋಧಿ, ಸಮಾಜ ವಿರೋಧಿ ಪಠ್ಯ ಅಳವಡಿಸಿದ್ದು ತಪ್ಪು. ಇದು ನಮ್ಮ ಸಂವಿಧಾನಕ್ಕೆ ಮಾಡಿದ ಅಪಮಾನ. ಹೊಸ ಸರ್ಕಾರ ಇದನ್ನು ಬದಲಿಸಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕೋಲಾರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

    ಬರಗೂರು ರಾಮಚಂದ್ರಪ್ಪ ನೇತೃತ್ವ ಸಮಿತಿಯ ಪಠ್ಯಕ್ರಮ ಮುಂದುವರಿಸಲಿ. ಭಾರತ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಬಸವಣ್ಣನ ತತ್ವ ಪಾಲಿಸಬೇಕು. ಇದು ಸರ್ಕಾರದ ಕರ್ತವ್ಯ ಎಂದು ಅವರು ಹೇಳಿದರು.

    ನನಗೆ ಈಗ್ಲೂ ಬೆದರಿಕೆ ಪತ್ರ ಬರುತ್ತಿವೆ. ಇದೀಗ 16 ನೇ ಬೆದರಿಕೆ ಪತ್ರ ಬಂದಿದೆ. ಸನಾತನ ಮೌಲ್ಯ, ಹಿಂದುತ್ವ ವಿರೋಧಿಸಿದಾಗ ಈ ರೀತಿಯ ಪ್ರೇಮ ಪತ್ರಗಳು ಬರುತ್ತವೆ. ನಾನು ಇವುಗಳನ್ನು ಬೆದರಿಕೆ ಪತ್ರ ಅಂದುಕೊಂಡಿಲ್ಲ, ಪ್ರೇಮ ಪತ್ರ ಅಂದ್ಕೊಡಿದ್ದೀನಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಬಹುಕೋಟಿ ವೆಚ್ಚದ BRTS ಬಸ್‌ಗಳಲ್ಲಿ ಇಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ

    ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಜಾರಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೋದಿ ಸರ್ಕಾರ ಕಾರ್ಪೋರೇಟ್ ಕುಳಗಳಿಗೆ 10 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದೆ. ಬಡವರಿಗೆ 10 ಕೆಜಿ ಅಕ್ಕಿ ಕೊಟ್ರೆ ಪ್ರಳಯವಾಗುತ್ತಾ? ರಾಜ್ಯದಲ್ಲಿ ಬಡವರಿಗೆ 50 ಸಾವಿರ ಕೋಟಿ ಅಷ್ಟೇ ಖರ್ಚಾಗುತ್ತೆ. ಇದು ದೊಡ್ಡದಲ್ಲ. ಬಡವರು, ಮಹಿಳೆಯರಿಗೆ ಕೊಡ್ತಿದ್ದಾರೆ. ಎಲ್ಲಾ ಲೇಖಕರು ಕೂಡಾ ಇದನ್ನು ಬೆಂಬಲಿಸಬೇಕು ಎಂದರು.

  • ಅಧಿಕಾರದಲ್ಲಿ ಮುಂದುವರಿದಿದ್ರೆ ಕೊಲೆಗಡುಕರಿಗೆ ಪ್ರಶಸ್ತಿ ಕೊಡ್ತಿದ್ರು: ಸಿದ್ದುಗೆ ಸಿಟಿ ರವಿ ತಿರುಗೇಟು

    ಅಧಿಕಾರದಲ್ಲಿ ಮುಂದುವರಿದಿದ್ರೆ ಕೊಲೆಗಡುಕರಿಗೆ ಪ್ರಶಸ್ತಿ ಕೊಡ್ತಿದ್ರು: ಸಿದ್ದುಗೆ ಸಿಟಿ ರವಿ ತಿರುಗೇಟು

    – ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ ಸಚಿವರು

    ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿದಿದ್ದರೆ ಕೊಲೆಗಡುಕರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡುತ್ತಿದ್ದರು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.

    ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಿ.ಟಿ.ರವಿ ಅವರ ಮಧ್ಯೆ ಬೆಳಗ್ಗೆಯಿಂದಲೇ ಟ್ವೀಟ್ ವಾರ್ ಆರಂಭವಾಗಿದೆ. ಟ್ವೀಟ್ ಮೂಲಕವೇ ನಾಯಕರು ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. ಈ ಮಧ್ಯೆ ಸಚಿವರು ಸ್ವಾತಂತ್ರ್ಯ ಹೋರಾಟಗಾರ ವಿ.ಡಿ.ಸಾವರ್ಕರ್ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ.

    ಟ್ವೀಟ್ ಮಾಡಿರುವ ಸಚಿವರು, ಮದ್ಯ ಕುಡಿದು ಕೊಂದವರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಿ ಎನ್ನುವ ಮೂಲಕ ತಮಗೆ ಮಾನಸಿಕ ಅಸ್ವಸ್ಥತೆ ಇರುವುದನ್ನು ಸಿದ್ದರಾಮಯ್ಯ ಅವರು ಸಾಬೀತುಪಡಿಸಿದ್ದಾರೆ. ಈ ಮಹಾನುಭಾವರು ಅಧಿಕಾರದಲ್ಲಿ ಮುಂದುವರಿದಿದ್ದರೆ ಕುಡುಕರಿಗೆ, ಕೊಲೆಗಡುಕರಿಗೆ ಮತ್ತು ಸಮಾಜಘಾತುಕರಿಗೆ ತಮ್ಮ ಕಯ್ಯಾರೆ ರಾಜ್ಯೋತ್ಸವ ಪ್ರಶಸ್ತಿಯನ್ನು ದಯಪಾಲಿಸುತ್ತಿದ್ದರೋ ಏನೋ ಎಂದು ಕುಟುಕಿದ್ದಾರೆ.

    ಮಹಾತ್ಮ ಗಾಂಧೀಜಿ ಅವರು ವಿ.ಡಿ.ಸಾವರ್ಕರ್ ಅವರನ್ನು ಭಾರತದ ನಿಷ್ಠಾವಂತ ಮಗ ಎಂದು ಕರೆದಿದ್ದಾರೆ. ಜೊತೆಗೆ ತಮ್ಮ ಯಂಗ್ ಇಂಡಿಯಾ ಪತ್ರಿಕೆಯಲ್ಲಿ, ಪ್ರತಿಭೆಯನ್ನು ಸಾರ್ವಜನಿಕ ಕಲ್ಯಾಣಕ್ಕಾಗಿ ಬಳಸಿಕೊಳ್ಳಿ ಎಂದು ಗಾಂಧೀಜಿ ತಿಳಿಸಿದ್ದಾರೆ. ವೀರ್ ಸಾವರ್ಕರ್ ಬಗ್ಗೆ ಬಹಿರಂಗ ಚರ್ಚೆಗೆ ನಡೆಯಲಿ. ನಿಮಗೆ ತಾಕತ್ತು ಇದ್ರೆ ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ದಾರೆ.

    ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಸಚಿವ ಸಿ.ಟಿ.ರವಿ, ಮಹಾತ್ಮ ಗಾಂಧೀಜಿ ಅವರ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ಸಾವರ್ಕರ್ ಕೂಡ ಒಬ್ಬರು ಎಂದು ಹೇಳುತ್ತೀರಿ. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ನೀವು ಮಾನಸಿಕ ಅಸ್ವಸ್ಥರಾಗಿದ್ದೀರಿ. ಇತಿಹಾಸದ ಬಗ್ಗೆ ನಿಮಗೆ ಅರಿವಿದೆಯಾ? ನೀವ್ಯಾಕೆ ಸೆಲ್ಯೂಲರ್ ಜೈಲಿಗೆ ಹೋಗಬಾರದು. ನಾನೇ ಸ್ಪಾನ್ಸರ್ ಮಾಡುತ್ತೇನೆ ಎಂದು ಗುಡುಗಿದ್ದರು.

    ಸಚಿವರ ಹೇಳಿಕೆಯಿಂದ ಗರಂ ಆಗಿದ್ದ ಸಿದ್ದರಾಮಯ್ಯ ಅವರು, ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ. ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತಾಡುತ್ತೇವೆ ಎಂದು ಟ್ವೀಟ್ ಮಾಡಿದ್ದರು.

    ಮತ್ತೊಂದು ಟ್ವೀಟ್‍ನಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ ಎಂದು ಕುಟುಕಿದ್ದರು.

  • ಮದ್ಯ ಕುಡಿದು ಕೊಂದವರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಿ: ಸಿಟಿ ರವಿಗೆ ಸಿದ್ದರಾಮಯ್ಯ ತಿರುಗೇಟು

    ಮದ್ಯ ಕುಡಿದು ಕೊಂದವರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಿ: ಸಿಟಿ ರವಿಗೆ ಸಿದ್ದರಾಮಯ್ಯ ತಿರುಗೇಟು

    – ಮಾನಸಿಕ ಅಸ್ವಸ್ಥ ಟ್ವೀಟ್‍ಗೆ ವಿಪಕ್ಷ ನಾಯಕ ಗರಂ

    ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ.ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರವಾಗಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಧ್ಯೆ ಟ್ವೀಟ್ ವಾರ್ ನಡೆದಿದೆ.

    ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿ, ಮಹಾತ್ಮ ಗಾಂಧೀಜಿ ಅವರ ಹತ್ಯೆಗೆ ಸ್ಕೆಚ್ ಹಾಕಿದ್ದವರಲ್ಲಿ ಸಾವರ್ಕರ್ ಕೂಡ ಒಬ್ಬರು ಎಂದು ಹೇಳುತ್ತೀರಿ. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ನೀವು ಮಾನಸಿಕ ಅಸ್ವಸ್ಥರಾಗಿದ್ದೀರಿ. ಇತಿಹಾಸದ ಬಗ್ಗೆ ನಿಮಗೆ ಅರಿವಿದೆಯಾ? ನೀವ್ಯಾಕೆ ಸೆಲ್ಯೂಲರ್ ಜೈಲಿಗೆ ಹೋಗಬಾರದು. ನಾನೇ ಸ್ಪಾನ್ಸರ್ ಮಾಡುತ್ತೇನೆ ಎಂದು ಗುಡುಗಿದ್ದಾರೆ.

    ಸಚಿವರ ಹೇಳಿಕೆಯಿಂದ ಗರಂ ಆದ ಸಿದ್ದರಾಮಯ್ಯ ಅವರು, ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ. ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತಾಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

    ಮತ್ತೊಂದು ಟ್ವೀಟ್‍ನಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರ ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ ಎಂದು ಕುಟುಕಿದ್ದಾರೆ.

    ಮಂಗಳೂರಿನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಗಾಂಧೀಜಿ ಹತ್ಯೆಗೆ ಸ್ಕೆಚ್ ಹಾಕಿದ್ದ ಸಾವರ್ಕರ್ ಗೆ ಬಿಜೆಪಿ ಭಾರತ ರತ್ನ ನೀಡಲು ಮುಂದಾಗುತ್ತಿದೆ. ಗೋಡ್ಸೆಯ ಹಿಂದೆ ನಿಂತು ಹತ್ಯೆಗೆ ಸಂಚು ರೂಪಿಸಿದ್ದರು. ಸೂಕ್ತ ಸಾಕ್ಷ್ಯ ಇಲ್ಲದೆ ಆರೋಪಿಯಾಗಿ ಗುರುತಿಸಿರಲಿಲ್ಲ ಅಷ್ಟೇ. ಆದರೆ ಅಂಥ ವ್ಯಕ್ತಿಗೆ ಭಾರತ ರತ್ನ ಕೊಡಲು ಬಿಜೆಪಿ ಮುಂದಾಗಿದೆ. ಗೋಡ್ಸೆಗೂ ಭಾರತ ರತ್ನ ನೀಡಲಿ ಎಂದು ಟೀಕಿಸಿದ್ದರು.