Tag: ವಿ.ಶ್ರೀನಿವಾಸ ಪ್ರಸಾದ್

  • ಸಾಮಾಜಿಕ ನ್ಯಾಯದ ಹರಿಕಾರ ಪ್ರಸಾದ್‌ – ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್‌ಡಿಡಿ ಸಂತಾಪ

    ಸಾಮಾಜಿಕ ನ್ಯಾಯದ ಹರಿಕಾರ ಪ್ರಸಾದ್‌ – ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಹೆಚ್‌ಡಿಡಿ ಸಂತಾಪ

    ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು-ಚಾಮರಾಜನಗರ ಭಾಗದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್ ಅವರು ನಿಧರಾಗಿದ್ದು, ಪ್ರಧಾನಿ ಮೋದಿ (PM  Modi) ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ (HD Devegowda) ಅವರು ಸಂತಾಪ ಸೂಚಿಸಿದ್ದಾರೆ.

    ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಸಾದ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ (Bengaluru Private Hospital) ನಸುಕಿನ ಜಾವ 1.27ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಹಾಗೂ ಮಾಜಿ ಪ್ರಧಾನಿಗಳಿಬ್ಬರೂ ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಗಳಲ್ಲಿ ಸಂತಾಪ ಸೂಚಿಸಿದ್ದಾರೆ.

    ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ (Srinivasa Prasad) ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಹಿಂದುಳಿದವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ತಮ್ಮ ಸಮಾಜ ಸೇವೆಗಳಿಂದಲೇ ಬಹಳ ಜನಪ್ರಿಯರಾಗಿದ್ದರು. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು, ಮಾಜಿ ಕೇಂದ್ರ ಸಚಿವರು ಹಾಗೂ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ‌ ತುಂಬಲಾರದ ನಷ್ಟ. ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

  • ಪ್ರಸಾದ್‌ ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದರು – ಸಿಎಂ ಸಂತಾಪ

    ಪ್ರಸಾದ್‌ ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದರು – ಸಿಎಂ ಸಂತಾಪ

    – ಶ್ರೀನಿವಾಸ ಪ್ರಸಾದ್‌ ನಿಧನಕ್ಕೆ ಕಂಬನಿ ಮಿಡಿದ ಬಿಜೆಪಿ ನಾಯಕರು

    ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು-ಚಾಮರಾಜನಗರ ಭಾಗದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್ ಅವರು ನಿಧರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddramaiah) ಸೇರಿದಂತೆ ಅನೇಕ ಬಿಜೆಪಿ ನಾಯಕರು (BJP Leaders) ಕಂಬನಿ ಮಿಡಿದಿದ್ದಾರೆ.

    ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಸಾದ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ (Bengaluru Private Hospital) ನಸುಕಿನ ಜಾವ 1.27ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರು ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಗಳಲ್ಲಿ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಶ್ರೀನಿವಾಸ್‌ ಪ್ರಸಾದ್‌ ವಿಧಿವಶ – ಪ್ರಭಾವಿ ದಲಿತ ನಾಯಕನ ರಾಜಕೀಯ ಏಳು-ಬೀಳಿನ ಹಾದಿ ಹೇಗಿತ್ತು?

    ಸಿದ್ದರಾಮಯ್ಯ:
    ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ.

    ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಇದನ್ನೂ ಓದಿ: ಸಾವಾದ್ರೂ ನಗುನಗುತ್ತಾ ಬೀಳ್ಕೊಡಿ ಅಂತಾ ತಂದೆ ಯಾವಾಗ್ಲೂ ಹೇಳ್ತಾ ಇದ್ರು: ಶ್ರೀನಿವಾಸ್ ಪ್ರಸಾದ್ ಮಗಳು

    ವಿಜಯೇಂದ್ರ:
    ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿಗಳಾದ ಶ್ರೀ ವಿ ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ ತತ್ವ, ಸಿದ್ದಾಂತ ಹಾಗೂ ರಾಷ್ಟ್ರೀಯವಾದದ ಸತ್ವವನ್ನು ಜನರಿಗೆ ತಿಳಿಸುವಲ್ಲಿ ನಾಯಕತ್ವ ವಹಿಸಿದ್ದು ಬಿಜೆಪಿಯ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನ ಮೌಲ್ಯವನ್ನು ಎತ್ತಿ ಹಿಡಿಯುವ ಬದ್ಧತೆಯನ್ನು ಸಾಕ್ಷೀಕರಿಸಿತ್ತು. ಪ್ರಸ್ತುತ ಕಾಲಮಾನದಲ್ಲಿ ಮಾನ್ಯ ಪ್ರಸಾದರ ಅನುಪಸ್ಥಿತಿ ರಾಷ್ಟ್ರರಾಜಕಾರಣದಲ್ಲೂ ಕೊರತೆ ಸೃಷ್ಟಿಸಿದಂತಾಗಿದೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.

    ಸಿ.ಟಿ ರವಿ:
    ದಕ್ಷಿಣ ಕರ್ನಾಟಕದ ದಲಿತಸೂರ್ಯ ಅಸ್ತಂಗತ. ಹಿರಿಯ ನಾಯಕರು, ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾದ ಶ್ರೀ ವಿ.ಶ್ರೀನಿವಾಸ್ ಪ್ರಸಾದ್ ವಿಧಿವಶರಾದ ಸುದ್ದಿ ನೋವನ್ನುಂಟು ಮಾಡಿದೆ. ಪ್ರಭಾವಿ ದಲಿತ ಮುಖಂಡರಾಗಿ , ಸಂಸದೀಯ ಪಟುವಾಗಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಇವರ ನಿಧನ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಸದ್ಗತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ,ಬಂಧು ಮಿತ್ರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

    ಡಾ.ಕೆ ಸುಧಾಕರ್‌:
    ನಾಡಿನ ಮುತ್ಸದ್ಧಿ ನಾಯಕರಾದ ಶ್ರೀ ಶ್ರೀನಿವಾಸ ಪ್ರಸಾದ್ ಅವರ ನಿಧನದ ಸುದ್ದಿ ಆಘಾತ ಮೂಡಿಸಿದೆ. ಕೇಂದ್ರ ಹಾಗು ರಾಜ್ಯ ಸಚಿವರಾಗಿ, ಆರು ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ ಸುಮಾರು ಐದು ದಶಕಗಳ ಸುದೀರ್ಘ ಸಾರ್ವಜನಿಕ ಜೀವನ ನಡೆಸಿದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆಯಿಂದ ನಮ್ಮ ನಾಡು ಒಬ್ಬ ಶ್ರೇಷ್ಠ ಜನನಾಯಕನನ್ನು ಕಳೆದುಕೊಂಡಿದೆ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು, ಬಂಧು-ಮಿತ್ರರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.

    ವಿ. ಸೋಮಣ್ಣ:
    ಹಿರಿಯ ರಾಜಕೀಯ ನಾಯಕರು ಹಾಗೂ ಸಂಸದರಾದ ಶ್ರೀ ವಿ. ಶ್ರೀನಿವಾಸ್ ಪ್ರಸಾದ್ ರವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

  • ಶ್ರೀನಿವಾಸ್‌ ಪ್ರಸಾದ್‌ ವಿಧಿವಶ – ಪ್ರಭಾವಿ ದಲಿತ ನಾಯಕನ ರಾಜಕೀಯ ಏಳು-ಬೀಳಿನ ಹಾದಿ ಹೇಗಿತ್ತು?

    ಶ್ರೀನಿವಾಸ್‌ ಪ್ರಸಾದ್‌ ವಿಧಿವಶ – ಪ್ರಭಾವಿ ದಲಿತ ನಾಯಕನ ರಾಜಕೀಯ ಏಳು-ಬೀಳಿನ ಹಾದಿ ಹೇಗಿತ್ತು?

    ಮೈಸೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು–ಚಾಮರಾಜನಗರ ಭಾಗದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್ (V Srinivasa Prasad) ಅವರಿಂದು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಸಾದ್‌ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ (Private Hospital) ನಸುಕಿನ ಜಾವ 1.27ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಪ್ರಸಾದ್‌ ಅವರಿಗೆ ಪತ್ನಿ, ಮೂವರು ಪುತ್ರಿಯರು (ಪ್ರತಿಮಾ ಪ್ರಸಾದ್, ಪೂರ್ಣಿಮಾ ಪ್ರಸಾದ್ ಮತ್ತು ಪೂನಂ ಪ್ರಸಾದ್) ಇದ್ದಾರೆ.

    ಕೆಲ ವರ್ಷಗಳಿಂದ ಬಿಗಡಾಯಿಸಿದ್ದ ಆರೋಗ್ಯ ಸ್ಥಿತಿ:
    75 ವರ್ಷ ವಯಸ್ಸಿನ ಪ್ರಸಾದ್‌ ಅವರು ಪ್ರಸಾದ್‌ ಅವರ ಕಳೆದ ಕೆಲ ವರ್ಷಗಳಿಂದ ಚೆನ್ನಾಗಿರಲಿಲ್ಲ. ಅದರಲ್ಲೂ ಕೊನೇ ಬಾರಿ ಸಂಸದರಾಗಿ ಆಯ್ಕೆಯಾದ ಮೇಲೆ ಸಾರ್ವಜನಿಕವಾಗಿ ಹೆಚ್ಚು ಗುರುತಿಸಿಕೊಂಡಿರಲಿಲ್ಲ. ಆದರೂ ಚಿಕಿತ್ಸೆ ನಡುವೆಯೂ ಅವರು ರಾಜಕೀಯ ಜೀವನ ಮುಂದುವರಿಸಿದ್ದರು. ಕಳೆದ ಏಳೆಂಟು ವರ್ಷಗಳ ಹಿಂದೆಯೇ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದಾಗ ಹೊರ ದೇಶದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆನಂತರ ಅವರು ಚೇತರಿಸಿಕೊಂಡಿದ್ದರು. ಇದಾದ ಬಳಿಕ ಆಗಾಗ ಅವರ ಆರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರುಗಳು ಕಾಣಿಸಿಕೊಳ್ಳುತ್ತಿದ್ದವು. ಇದರ ನಡುವೆಯೇ ಬಿಜೆಪಿ ಸೇರಿ 2019ರ ಚುನಾವಣೆಯಲ್ಲಿ ಗೆದ್ದು ಸಂಸದರೂ ಆಗಿದ್ದರು.

    ಕಳೆದ ತಿಂಗಳಷ್ಟೇ ನಿವೃತ್ತಿ ಘೋಷಣೆ:
    ಅನಾರೋಗ್ಯ ತೀವ್ರವಾಗಿ ಬಿಗಡಾಯಿಸಿದ್ದರಿಂದ ಕಳೆದ ತಿಂಗಳು ಸಕ್ರೀಯ ರಾಜಕೀಯದಿಂದ ನಿವೃತ್ತಿ ಹೊಂದುತ್ತಿರುವುದಾಗಿ ಮೈಸೂರಿನಲ್ಲಿ ಘೋಷಿಸಿದ್ದರು. ಈ ಬಾರಿ ಅವರ ಅಳಿಯ ಡಾ.ಮೋಹನ್‌ ಅವರಿಗೆ ಚಾಮರಾಜನಗರದಿಂದ ಟಿಕೆಟ್‌ ಕೊಡಿಸುವ ಇರಾದೆಯನ್ನೂ ಪ್ರಸಾದ್‌ ಅವರು ಹೊಂದಿದ್ದರು. ಆದರೆ ಪಕ್ಷ ಡಾ.ಪ್ರಸಾದ್‌ ಅವರ ಬದಲು ಬಾಲರಾಜು ಅವರಿಗೆ ಚಾಮರಾಜನಗರದಲ್ಲಿ ಟಿಕೆಟ್‌ ನೀಡಿತ್ತು. ಕಳೆದ ಎರಡು ದಿನಗಳ ಹಿಂದೆಯಷ್ಟೇ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು, ಆದ್ರೆ ಭಾನುವಾರ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬರುತ್ತಿರುವುದಾಗಿ ವೈದ್ಯರ ಮೂಲಗಳು ತಿಳಿಸಿದ್ದವು. ದುರದೃಷ್ಟವಶಾತ್‌ ಇಂದು ಬೆಳಗ್ಗಿನ ಜಾವ ಕೊನೆಯುಸಿರೆಳೆದಿದ್ದಾರೆ.

    ಪ್ರಸಾದ್‌ ಬೆಳೆದು ಬಂದ ಹಾದಿ ಹೇಗಿದೆ?
    1947 ಆಗಸ್ಟ್ 6 ರಂದು ಮೈಸೂರಿನ ಅಶೋಕಪುರಂನ ಮಣೇಗಾರ್ ವೆಂಕಟಯ್ಯ ಅವರ ಪುತ್ರನಾಗಿ ಜನಿಸಿದ್ದ ವಿ. ಶ್ರೀನಿವಾಸಪ್ರಸಾದ್ ಮೈಸೂರು-ಚಾಮರಾಜನಗರ ಭಾಗದಲ್ಲಿ ಪ್ರಭಾವಿ ದಲಿತ ನಾಯಕನಾಗಿ ಗುರುತಿಸಿಕೊಂಡಿದ್ದರು. ಅಲ್ಲದೇ ಅಂಬೇಡ್ಕರ್‌ ವಿಚಾರಧಾರೆಗಳನ್ನೇ ಉಸಿರಾಗಿಸಿಕೊಂಡಿದ್ದರು. ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ ಹೆಸರಾಗಿದ್ದ ವಿ.ಶ್ರೀನಿವಾಸ ಪ್ರಸಾದ್‌ ತತ್ವ ಸಿದ್ಧಾಂತಗಳನ್ನು ಎಂದಿಗೂ ಬಿಟ್ಟುಕೊಟ್ಟವರಲ್ಲ.

    ದಲಿತ ನಾಯಕನ ರಾಜಕೀಯ ಏಳು-ಬೀಳಿನ ಹಾದಿ:
    1974 ರಲ್ಲಿ ಕೃಷ್ಣರಾಜ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಣ್ಣಾ ಡಿಎಂಕೆ ಬೆಂಬಲಿತ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿದ್ದರು. 1977ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಲೋಕದಳ ಅಭ್ಯರ್ಥಿಯಾಗಿ ಸೋಲು ಕಂಡಿದ್ದರು. ಬಳಿಕ 1978ರಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಿಂದ ಜನತಾ ಪಕ್ಷದ ಅಭ್ಯರ್ಥಿಯಾಗಿಯೂ ಸೋಲು ಕಂಡಿದ್ದರು. ಬಳಿಕ ರಾಜಕೀಯ ಅನುಭವ ಹೊಂದಿದ್ದ ಅವರು 1980, 1984, 1989, 1991 4 ಬಾರಿ ಚಾಮರಾಜನಗರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು.

    1998 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಸೋಲು ಎದುರಿಸಬೇಕಾಯಿತು. 1999 ರಲ್ಲಿ ಲೋಕಶಕ್ತಿ ಬಿಜೆಪಿ ಸಂಯುಕ್ತ ಅಭ್ಯರ್ಥಿಯಾಗಿ ಲೋಕಸಭೆಗೆ ಆಯ್ಕೆಯಾದರು. 1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಆಹಾರ ಮತ್ತು ನಾಗರಿಕರ ಪೊರೈಕೆ ರಾಜ್ಯ ಖಾತೆ ಸಚಿವನಾಗಿ ಕಾರ್ಯ ನಿರ್ವಹಿಸಿದ್ದರು. 2008 ಹಾಗೂ 2013 ರಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಪ್ರಸಾದ್‌ 2013 ರಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.

    ಸಿದ್ದರಾಮಯ್ಯ ತಮ್ಮ ಸಂಪುಟದಿಂದ ಶ್ರೀನಿವಾಸ್‌ ಪ್ರಸಾದ್ ಅವರನ್ನು ಕೈಬಿಟ್ಟ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರಸಾದ್‌ ಅವರು ಕೆಲ ದಿನಗಳಲ್ಲೇ ಬಿಜೆಪಿ ಸೇರ್ಪಡೆಯಾದರು. ನಂತರ 2017ರಲ್ಲಿ ನಂಜನಗೂಡು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸೋಲು ಎದುರಿಸಿದ ಅವರು, 2019ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ದಿವಂಗತ ಆರ್.‌ ಧ್ರುವನಾರಾಯಣ ಅವರ ವಿರುದ್ಧ ಗೆಲುವು ಸಾಧಿಸಿದ್ದರು. ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಸಚಿವರಾಗಿ ಸೇವೆ ಸಲ್ಲಿಸಿದ್ದ ಪ್ರಸಾದ್‌ 6 ಬಾರಿ ಸಂಸದರಾಗು ಹಾಗೂ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

  • ರಾಜಕೀಯಕ್ಕೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಗುಡ್‌ ಬೈ

    ರಾಜಕೀಯಕ್ಕೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಗುಡ್‌ ಬೈ

    ಚಾಮರಾಜನಗರ: ಬಿಜೆಪಿ (BJP) ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ (V Srinivas Prasad) ರಾಜಕೀಯಕ್ಕೆ ಗುಡ್‌ ಬೈ ಹೇಳಿದರು.

    ಗುಂಡ್ಲುಪೇಟೆಯಲ್ಲಿ ನಡೆದ ಚುನಾವಣಾ (Election) ಪ್ರಚಾರದಲ್ಲಿ ಮಾತನಾಡಿದ ಅವರು, ಇದು ನನ್ನ ರಾಜಕೀಯ ಜೀವನದ ಕೊನೆ ಚುನಾವಣೆಯಾಗಿದೆ. ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡಲ್ಲ. ನನಗೆ ರಾಜಕೀಯ ಸಾಕಾಗಿದೆ ಎಂದರು. ಇದನ್ನೂ ಓದಿ: ಬಿಜೆಪಿ 2 ನೇ ಪಟ್ಟಿ ರಿಲೀಸ್-‌ 23 ಅಭ್ಯರ್ಥಿಗಳ ಹೆಸರು ಬಿಡುಗಡೆ

    ನನಗೆ ನಿಂತುಕೊಂಡು‌ ಭಾಷಣ ಮಾಡಲು ಆಗುತ್ತಿಲ್ಲ. ಎಳ್ಳಷ್ಟು ಅಪಾದನೆಯಿಲ್ಲದೇ ರಾಜಕೀಯ ಜೀವನ ಸಾಗಿಸಿದ್ದೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಅಷ್ಟೇ ಅಲ್ಲದೇ ಏಳು ಜನ ಪ್ರಧಾನಮಂತ್ರಿ ನೋಡಿದ್ದೇನೆ. ನನಗೆ ಇನ್ನು ರಾಜಕೀಯ ಸಾಕು‌ ಎಂದು ಹೇಳಿದರು. ಇದನ್ನೂ ಓದಿ: ಹಾವೇರಿಯಲ್ಲಿ ಎಷ್ಟು ಸೀಟು ಗೆಲ್ಲಿಸ್ತಾನೋ ನೋಡೋಣ: ಸೇಡಿನ ರಾಜಕಾರಣಿ – ಸಿಎಂ ವಿರುದ್ಧ ನೆಹರೂ ಓಲೇಕಾರ್ ಕಿಡಿ

  • ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ

    ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ

    ಬೆಂಗಳೂರು: ಸಿದ್ದರಾಮಯ್ಯರ ಅಹಿಂದ ಹೋರಾಟ ಈಗ ಅಕ್ಷರಶಃ ಬೆತ್ತಲಾಗಿದ್ದು, ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.

    ಮಾಜಿ ಸಚಿವೆ ಮೋಟಮ್ಮ ಆತ್ಮಕತೆಯಲ್ಲಿ ಸಿದ್ದರಾಮಯ್ಯ ಅವರ ಬಗ್ಗೆ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮೂಲಕ ಟೀಕಿಸಿರುವ ಬಿಜೆಪಿ, ಸಿದ್ದರಾಮಯ್ಯನವರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ ಎಂದು ಟೀಕಿಸಿದೆ. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು

    ಟ್ವೀಟ್‌ನಲ್ಲಿ ಏನಿದೆ?
    ದಲಿತ ನಾಯಕಿ ಮೋಟಮ್ಮ ಅವರ ಬೆಳವಣಿಗೆ ಸಹಿಸದೇ ಅವರನ್ನು ಮೂಲೆಗುಂಪು ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಈಗ ಅವರ ಆತ್ಮಕಥನದಲ್ಲಿ ಖಳನಾಯಕನಾಗಿ ಉಳಿದಿದ್ದಾರೆ. ಅವರ ಅಹಿಂದ ಹೋರಾಟ ಈಗ ಅಕ್ಷರಶಃ ಬೆತ್ತಲಾಗಿದೆ. ಹಾಗಾಗಿ ಅಹಿಂದದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಸಿದ್ದರಾಮಯ್ಯ ಅವರಿಂದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಮೋಟಮ್ಮ ಹಾಗೂ ವಿ.ಶ್ರೀನಿವಾಸ ಪ್ರಸಾದ್ ದಲಿತ ನಾಯಕರು ತುಳಿತಕ್ಕೆ ಒಳಗಾಗಿದ್ದಾರೆ. ಇನ್ನೆಷ್ಟು ದಲಿತ ನಾಯಕರನ್ನು ಬಲಿ ಪಡೆಯುತ್ತೀರಿ?

    ಅಂದು ದಲಿತ ನಾಯಕ ಪರಮೇಶ್ವರ್ ಅವರನ್ನು ಕುತಂತ್ರದಿಂದ ಸೋಲಿಸಿದಿರಿ, ದಲಿತ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ದಾಳಿಯಾದಾಗ, ದಾಳಿ ಮಾಡಿದ ಮತಾಂಧರ ಪರವಾಗಿ ನಿಂತಿರಿ. ಈಗ ದಲಿತ ನಾಯಕಿ ಮೋಟಮ್ಮ ಅವರ ಆತ್ಮಕಥನದಲ್ಲಿ ಖಳ ನಾಯಕನಾಗಿದ್ದೀರಿ. ಇದನ್ನೂ ಓದಿ: ಕೈಲಾಸದಲ್ಲಿ ನಿತ್ಯಾನಂದನ ಮೂರ್ತಿಗೆ ಮಂಗಳಾರತಿ – ಎಲ್ಲಿದ್ದಾರೆ ನಿತ್ಯಾನಂದ?

    ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರುಹುಟ್ಟು ನೀಡಿದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಗೆಲ್ಲುವಲ್ಲಿ ಮೋಟಮ್ಮ ಅವರ ಶ್ರಮ ಮಹತ್ವದ್ದಾಗಿದೆ. ಆದರೆ ಅಂತಹವರನ್ನೇ ಕಾಂಗ್ರೆಸ್ ಹೀನಾಮಾನವಾಗಿ ನಡೆಸಿಕೊಂಡಿದೆ. ಇದು ದಲಿತ ಹಾಗೂ ಮಹಿಳಾ ಸಮಾಜಕ್ಕೆ ಮಾಡಿದ ಅಪಮಾನ.

    Siddaramaiah

    ದಲಿತರಿಗೆ ಅನ್ಯಾಯ ಮಾಡುವಾಗ ಸಿದ್ದರಾಮಯ್ಯ ಅವರ ಅಹಿಂದ ಮಂತ್ರ ಎಲ್ಲಿತ್ತು? ಸಿದ್ದರಾಮಯ್ಯ ಕಾಂಗ್ರೆಸ್ ಹೇಗೆ ದಲಿತ ವಿರೋಧಿಯಾಗಿ ಬೆಳೆದಿದೆ ಎಂದು ಮಾಜಿ ಸಚಿವೆ ಮೋಟಮ್ಮ ಅವರು ತಮ್ಮ ಆತ್ಮಕಥೆಯಲ್ಲಿ ಕಂಬನಿ ಮಿಡಿದಿದ್ದಾರೆ. ಸಿದ್ದರಾಮಯ್ಯ ಅವರೇ ಅಹಿಂದ ರಾಜಕಾರಣದಲ್ಲಿ ಈಗ ದಲಿತರನ್ನು ಹೊರಗಿಟ್ಟಿದ್ದೀರಾ?

    ಇಂದಿರಾ ಗಾಂಧಿ ಕಾಲದಿಂದಲೂ ಕಾಂಗ್ರೆಸ್ ಕಟ್ಟಾಳುವಾಗಿದ್ದ ಮೋಟಮ್ಮ ಅವರನ್ನು ಸಿದ್ದರಾಮಯ್ಯ ರಾಜಕೀಯವಾಗಿ ಮೂಲೆಗುಂಪು ಮಾಡಿದರು. ಅವರನ್ನು ಸಚಿವರಾಗಿ ಮಾಡುವ ಸಂದರ್ಭ ಬಂದಾಗ ವಿಧಾನಪರಿಷತ್ ಸದಸ್ಯರು ಎಂದು ಕಡೆಗಣಿಸಲಾಗಿತ್ತು. ಸಿದ್ದರಾಮಯ್ಯ ಈಗ ದಲಿತ ವಿರೋಧಿಯಾಗಿ ಬದಲಾಗಿದ್ದಾರೆ. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು

    bjP

    ವಿಧಾನ ಪರಿಷತ್ತಿನಲ್ಲಿ ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದ ಮೋಟಮ್ಮ ಅವರು ಸಚಿವರಾಗುವುದಕ್ಕೆ ಎಲ್ಲ ಅರ್ಹತೆ ಹೊಂದಿದ್ದರು. ಆದರೆ ಮೈಸೂರು `ಜಲದರ್ಶಿನಿ’ ಬಳಗಕ್ಕೆ ಅವಕಾಶ ನೀಡಬೇಕೆಂಬ ಕಾರಣಕ್ಕೆ ಸಿದ್ದರಾಮಯ್ಯ ಅವರು ಅರ್ಹ ಮೋಟಮ್ಮ ಅವರನ್ನು ಮೂಲೆಗುಂಪು ಮಾಡಿದರು. ಬಿಜೆಪಿ ಎಸ್ಸಿ ಮೋರ್ಚಾ ರಾಜಾಧ್ಯಕ್ಷರು ಸಿದ್ದರಾಮಯ್ಯ ಅವರ ಬಗ್ಗೆ ಮಾಡಿದ ವ್ಯಾಖ್ಯಾನಕ್ಕೆ ಮೋಟಮ್ಮ ಆತ್ಮಕಥನ ಇನ್ನಷ್ಟು ಪುಷ್ಠಿ ಒದಗಿಸಿದೆ. ಅಧಿಕಾರಕ್ಕಾಗಿ ನಾನೇ ದಲಿತ ಎಂದವರು, ರಾಜಕೀಯದುದ್ದಕ್ಕೂ ದಲಿತ ದ್ರೋಹವನ್ನೇ ಮಾಡಿದ್ದಾರೆ. ದಲಿತ ಸಮುದಾಯದ ಮಹಿಳಾ ನಾಯಕಿ ಮೋಟಮ್ಮ ಅವರ ಬೆಳವಣಿಗೆ ಸಹಿಸದೇ ಅವರನ್ನು ಮಂತ್ರಿ ಮಂಡಲದಲ್ಲಿ ತೆಗೆದುಕೊಳ್ಳದೇ ಸಿದ್ದರಾಮಯ್ಯ ಮೂಲೆಗುಂಪು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.