Tag: ವೀಡಿಯೋ ವೈರಲ್

  • ಚಿರಯುವಕರಂತೆ ವಾಲಿಬಾಲ್ ಆಡಿದ ಭಗವಂತ್ ಮಾನ್ – ವೀಡಿಯೋ ವೈರಲ್

    ಚಿರಯುವಕರಂತೆ ವಾಲಿಬಾಲ್ ಆಡಿದ ಭಗವಂತ್ ಮಾನ್ – ವೀಡಿಯೋ ವೈರಲ್

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು, ಸೋಮವಾರ ಜಲಂಧರ್‌ನ ಗುರು ಗೋವಿಂದ್ ಸಿಂಗ್ ಕ್ರೀಡಾಂಗಣದಲ್ಲಿ ವಾಲಿಬಾಲ್ ಆಟವನ್ನು ಆಡಿದ್ದಾರೆ.

    Bhagwant Mann

    ಎರಡು ತಿಂಗಳ ಕಾಲ ನಡೆಯುವ ವಾಲಿಬಾಲ್ ಕ್ರೀಡಾಕೂಟವನ್ನು ಉದ್ಘಾಟಿಸಿದ ಬಳಿಕ ಭಗವಂತ್ ಮಾನ್ ಅವರು ಸುಮಾರು 10-15 ನಿಮಿಷಗಳ ಕಾಲ ಕ್ರೀಡಾಪಟುಗಳೊಂದಿಗೆ ವಾಲಿಬಾಲ್ ಪಂದ್ಯವನ್ನು ಆಡಿದ್ದಾರೆ. ನೆಟ್‍ನಲ್ಲಿ ತಾವೂ ಕೂಡ ವಾಲಿಬಾಲ್ ಸರ್ವ್ ಮಾಡಿ ಆಟದ ಕೌಶಲ್ಯ ಮೆರೆದಿದ್ದಾರೆ. ಇದನ್ನೂ ಓದಿ: ರೈಲ್ವೆ ನಿಲ್ದಾಣದಲ್ಲಿ ಕಿಡ್ನ್ಯಾಪ್ ಆಗಿದ್ದ ಮಗು ಬಿಜೆಪಿ ಕಾರ್ಪೊರೇಟರ್ ಮನೆಯಲ್ಲಿ ಪತ್ತೆ

    ವಾಲಿಬಾಲ್ ಅಂಕಣದ ಹೊರಗೆ ಭದ್ರತಾ ಸಿಬ್ಬಂದಿ ನಿಂತಿದ್ದರು. ಈ ವೇಳೆ ಟ್ರ್ಯಾಕ್‍ಸೂಟ್ ಮತ್ತು ಕ್ಯಾಪ್ ಧರಿಸಿ ಮೈದಾನಕ್ಕೆ ಇಳಿದ ಭಗವಂತ್ ಮಾನ್ ಅವರು ಎದುರಾಳಿಗಳು ನೀಡಿದ ಪಾಸ್ ಅನ್ನು ಒಂದೇ ಕೈಯಿಂದ ತಡೆದು ನಿಲ್ಲಿಸಿದ್ದು ಅಲ್ಲಿದ್ದವರಿಗೆ ಬೆರಗು ಮೂಡಿಸಿದೆ. ಭಗವಂತ್ ಮಾನ್ ಅವರು ಕೇವಲ ಆಟವಷ್ಟೇ ಅಲ್ಲ. ತಮ್ಮ ತಂಡಕ್ಕೆ ಅಂಕವನ್ನು ಸಹ ತಂದು ಕೊಟ್ಟಿದ್ದಾರೆ. ಇದನ್ನೂ ಓದಿ: ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿ – ಸರ್ಕಾರಕ್ಕೆ ಕೆಎಂಎಫ್‌ ಪ್ರಸ್ತಾವ

    ವಾಲಿಬಾಲ್ ಕ್ರೀಡಾಕೂಟವನ್ನು ಉದ್ಘಾಟಿಸುವ ಮುನ್ನ ಮಾತನಾಡಿದ ಅವರು, ನಾಲ್ಕು ಲಕ್ಷಕ್ಕೂ ಹೆಚ್ಚು ಆಟಗಾರರು 28 ಕ್ರೀಡಾ ವಿಭಾಗಗಳಲ್ಲಿ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರಾಜ್ಯಮಟ್ಟದ ವಿಜೇತರಿಗೆ ಒಟ್ಟು 6 ಕೋಟಿ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಈ ಬಾರಿಯ ಕ್ರೀಡಾಕೂಟಗಳು ರಾಜ್ಯದ ಕ್ರೀಡಾ ಕ್ಯಾಲೆಂಡರ್‌ನಲ್ಲಿ ವಾರ್ಷಿಕ ವೈಶಿಷ್ಟ್ಯವಾಗಲಿದೆ. ಪಂಜಾಬ್ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಯುವಕರು ಸಂತೋಷವಾಗಿರುವುದನ್ನು ಕಂಡು ನಾನು ಹರ್ಷಗೊಂಡಿದ್ದೇನೆ. ರಾಜ್ಯ ಸರ್ಕಾರವು ರಾಜ್ಯಾದ್ಯಂತ ಕ್ರೀಡೆಯನ್ನು ಉತ್ತೇಜಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಯುವಕರ ಸಾಮರ್ಥ್ಯವನ್ನು ಬೆಂಬಲಿಸುತ್ತಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆದಾಯಕ್ಕಾಗಿ ಕಮ್ಯುನಿಸ್ಟ್ ಸರ್ಕಾರ ಹಿಂದೂ ದೇಗುಲವನ್ನು ವಶಪಡಿಸಿಕೊಳ್ತಿದೆ: ಸುಪ್ರಿಂಕೋರ್ಟ್ ಮಾಜಿ ಜಡ್ಜ್ ವೀಡಿಯೋ ವೈರಲ್

    ಆದಾಯಕ್ಕಾಗಿ ಕಮ್ಯುನಿಸ್ಟ್ ಸರ್ಕಾರ ಹಿಂದೂ ದೇಗುಲವನ್ನು ವಶಪಡಿಸಿಕೊಳ್ತಿದೆ: ಸುಪ್ರಿಂಕೋರ್ಟ್ ಮಾಜಿ ಜಡ್ಜ್ ವೀಡಿಯೋ ವೈರಲ್

    ನವದೆಹಲಿ: ಸುಪ್ರೀಂ ಕೋರ್ಟ್‍ನ ಮಾಜಿ ನ್ಯಾಯಾಧೀಶರೊಬ್ಬರು ಆದಾಯಕ್ಕಾಗಿ ಕಮ್ಯುನಿಸ್ಟ್ ಸರ್ಕಾರಗಳು ಹಿಂದೂ ದೇವಾಲಯಗಳನ್ನು ವಶಪಡಿಸಿಕೊಳ್ಳುತ್ತವೆ ಎಂದು ಹೇಳಿರುವ ವೀಡಿಯೋಯೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    SUPREME COURT

    ಕೇರಳದ ತಿರುವನಂತಪುರಂನಲ್ಲಿರುವ ಶ್ರೀ ಪದ್ಮನಾಭ ಸ್ವಾಮಿ ದೇವಾಲಯದ ಆಡಳಿತದ ವಿಚಾರವಾಗಿ 2020ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಮತ್ತು ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಅವರ ಪೀಠವು ನೀಡಿದ ತೀರ್ಮಾನವನ್ನು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಎಂತಹ ರೋಚಕ ಪಂದ್ಯ – ಪಾಕ್ ಮಣಿಸಿದ ಭಾರತಕ್ಕೆ ರಾಹುಲ್ ವಿಶ್

    ವೈರಲ್ ಆಗುತ್ತಿರುವ ವೀಡಿಯೋದಲ್ಲಿ ಇಂದು ಮಲ್ಹೋತ್ರಾ ಅವರು, ಈ ಕಮ್ಯುನಿಸ್ಟ್ ಸರ್ಕಾರಗಳದ್ದು ಇದೇ ಗೋಳಾಗಿದೆ. ಆದಾಯಕ್ಕಾಗಿ ಅಧಿಕಾರ ಪಡೆದುಕೊಳ್ಳಲು ಬಯಸುತ್ತಾರೆ. ಅವರ ಮುಖ್ಯ ಸಮಸ್ಯೆ ಆದಾಯವಾಗಿದೆ. ಅದರಲ್ಲಿಯೂ ಹಿಂದೂ ದೇವಾಲಯಗಳನ್ನು ಮಾತ್ರ ವಶಪಡಿಸಿಕೊಳ್ಳುತ್ತಿದ್ದಾರೆ. ಆದರೆ ಇದಕ್ಕೆ ನ್ಯಾಯಮೂರ್ತಿ ಲಲಿತ್ ಹಾಗೂ ನಾನು ಅವಕಾಶ ನೀಡುವುದಿಲ್ಲ ಎಂದು ಜನರ ಗುಂಪಿನ ಮಧ್ಯೆ ನಿಂತುಕೊಂಡು ಮಾತನಾಡುತ್ತಿರುವುದನ್ನು ಕಾಣಬಹುದಾಗಿದೆ. ಇದೇ ವೇಳೆ ಮಹಿಳೆಯೊಬ್ಬರು ನಿಮ್ಮ ಬಗ್ಗೆ ನಮಗೆ ಹೆಮ್ಮೆಯಾಗುತ್ತಿದೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಇಂದು ಮಲ್ಹೋತ್ರಾ ಧನ್ಯವಾದ ತಿಳಿಸಿದ್ದಾರೆ.

    ಕೇರಳ ರಾಜ್ಯದ ತಿರುವನಂತಪುರದಲ್ಲಿರುವ ಪ್ರಖ್ಯಾತ ಪದ್ಮನಾಭ ಸ್ವಾಮಿ ದೇಗುಲದ ಆಸ್ತಿ ಮತ್ತು ಅದರ ಕಾರ್ಯನಿರ್ವಹಣೆಯ ಮೇಲೆ ಹಿಡಿತ ಸಾಧಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದ ಕೇರಳ ಹೈಕೋರ್ಟ್ 2011ರ ತೀರ್ಪನ್ನು ತಳ್ಳಿ ಹಾಕಿ, ಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತದ ಹಕ್ಕು ತಿರುವಾಂಕೂರು ರಾಜಮನೆತನಕ್ಕೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿಲಾಗಿತ್ತು. ಇದನ್ನೂ ಓದಿ: ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ

    Live Tv
    [brid partner=56869869 player=32851 video=960834 autoplay=true]

  • ಪತ್ನಿ ಜೊತೆ ಲಂಡನ್‍ನಲ್ಲಿ ಗೋ ಪೂಜೆ ಮಾಡಿದ ರಿಷಿ ಸುನಾಕ್

    ಪತ್ನಿ ಜೊತೆ ಲಂಡನ್‍ನಲ್ಲಿ ಗೋ ಪೂಜೆ ಮಾಡಿದ ರಿಷಿ ಸುನಾಕ್

    ಲಂಡನ್: ಬ್ರಿಟನ್ ಪ್ರಧಾನಿ ಅಭ್ಯರ್ಥಿ ಸ್ಪರ್ಧೆಯಲ್ಲಿರುವ ಮಾಜಿ ಬ್ರಿಟಿಷ್ ಹಣಕಾಸು ಸಚಿವ, ಇನ್ಫೋಸಿಸ್ ನಾರಾಯಣ ಮೂರ್ತಿಯವರ ಅಳಿಯ ರಿಷಿ ಸುನಕ್ ಅವರು ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಲಂಡನ್‍ನಲ್ಲಿ ಗೋ ಪೂಜೆ ಮಾಡಿದ್ದಾರೆ. ಇದೀಗ ಈ ವೀಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇಂಗ್ಲೆಂಡ್‌ನಲ್ಲಿ ವಾಸಿಸುವ ಭಾರತೀಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.

    ಇತ್ತೀಚೆಗಷ್ಟೇ ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ಭಕ್ತಿವೇದಾಂತ ಮೇನರ್ ದೇವಾಲಯಕ್ಕೆ ಪತ್ನಿ ಜೊತೆಗೆ ರಿಷಿ ಸುನಕ್ ಅವರು ಭೇಟಿ ನೀಡಿದ್ದರು. ಇದರ ಕೆಲ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ: ಗೋ ಬ್ಯಾಕ್ ಇಂಡಿಯಾ, ನೀವು ನಮ್ಮ ದೇಶ ಹಾಳು ಮಾಡ್ತಿದ್ದೀರಾ – ಭಾರತೀಯ ಮಹಿಳೆಯರ ಮೇಲೆ ವಿದೇಶಿ ಮಹಿಳೆಯಿಂದ ಹಲ್ಲೆ

    ಇದೀಗ ರಿಷಿ ಸುನಕ್ ದಂಪತಿ ಗೋಶಾಲೆಗೆ ಭೇಟಿ ನೀಡಿ, ಹಸುವಿನ ಪೂಜೆ ಮಾಡಿದ್ದಾರೆ. ವಿಡಿಯೋದಲ್ಲಿ ರಿಷಿ ಸುನಕ್- ಅಕ್ಷತಾ ಮೂರ್ತಿ ದಂಪತಿ ಗೋಪೂಜೆಗೆ ಸಿದ್ಧವಾಗಿರುವ ಹಸುವಿನ ಪಕ್ಕದಲ್ಲಿ ನಿಂತಿರುವುದನ್ನು ಕಾಣಬಹುದು. ಪಾತ್ರೆಯಲ್ಲಿದ್ದ ಪವಿತ್ರವಾದ ನೀರನ್ನು ಹಸುವಿನ ಕಾಲಿನ ಮೇಲೆ ಸಿಂಪಡಿಸಿ ನಂತರ ದಂಪತಿ ಆರತಿ ಬೆಳಗಿದ್ದಾರೆ. ಕೊನೆಗೆ ಹಸುವಿಗೆ ಕೈ ಮುಗಿದು ರಿಷಿ ಸುನಕ್ ನಮಸ್ಕರಿಸಿರುವುದನ್ನು ಕಾಣಬಹುದಾಗಿದೆ.

    ರಿಷಿ ಸುನಕ್ ಅವರು ಯಾರ್ಕ್‍ಷೈರ್‍ನ ರಿಚ್‍ಮಂಡ್‍ನಿಂದ ಮೂರನೇ ಬಾರಿಗೆ ಮರು ಆಯ್ಕೆಯಾದಾಗ ಭಗವದ್ಗೀತೆಯನ್ನು ಹಿಡಿದುಕೊಂಡು ಇಂಗ್ಲೆಂಡ್‍ನ ಸಂಸತ್ತಿನಲ್ಲಿ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಗೇ, ಅವರು ಚಾನ್ಸಲರ್ ಆಗಿದ್ದಾಗ ದೀಪಾವಳಿ ಹಬ್ಬವನ್ನು ಆಚರಿಸುವ ಮೂಲಕ ಇಂಗ್ಲೆಂಡ್‍ನಲ್ಲಿರುವ ಭಾರತೀಯರ ಮನಗೆದ್ದಿದ್ದರು. ಇದನ್ನೂ ಓದಿ: 3 ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಬಿದ್ದು ಐವರು ಸಾವು, 7 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಪ್ಲೀಸ್ ಬ್ರೇಕಪ್ ಮಾಡಬೇಡ, ನನ್ನನ್ನು ಬಿಡಬೇಡ – ನಡು ರಸ್ತೆಯಲ್ಲಿ ಗೆಳೆಯನ ಗೋಳಾಟ

    ಪ್ಲೀಸ್ ಬ್ರೇಕಪ್ ಮಾಡಬೇಡ, ನನ್ನನ್ನು ಬಿಡಬೇಡ – ನಡು ರಸ್ತೆಯಲ್ಲಿ ಗೆಳೆಯನ ಗೋಳಾಟ

    ಪ್ರತಿಯೊಬ್ಬರ ಜೀವನದಲ್ಲಿಯೂ ಮೊದಲ ಪ್ರೀತಿ ಅದ್ಭುತವಾಗಿರುತ್ತದೆ. ಅದೇ ರೀತಿ ಲವ್ ಬ್ರೇಕ್ ಅಪ್ ಕೂಡ ಜೀವನದ ಪಾಠವನ್ನು ಕಲಿಸುತ್ತದೆ. ಫಸ್ಟ್ ಲವ್ ಬ್ರೇಕ್ ಅಪ್ ಅಲ್ಲಿ ಅದೆಷ್ಟೋ ಭಾವನೆಗಳಿರುತ್ತದೆ. ಅನೇಕ ಮಂದಿ ತಮ್ಮ ಶಾಲೆಯ ದಿನಗಳಲ್ಲಿಯೇ ಲವ್ ಬ್ರೇಕ್ ಅಪ್ ಅನುಭವವನ್ನು ಅನುಭವಿಸಿರುತ್ತಾರೆ. ಅದೇ ರೀತಿ ಹುಡುಗನೊಬ್ಬ ತನ್ನ ಪ್ರೀತಿಯನ್ನು ಮರಳಿ ಪಡೆಯಲು ಹುಡುಗಿಯ ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಿರುವ ವೀಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

     

    View this post on Instagram

     

    A post shared by FunTaap Official ???? (@funtaap)

    ಈ ವೀಡಿಯೋವನ್ನು ಫಂಟಾಪ್ ಎಂಬ ಹೆಸರಿನ ಇನ್‍ಸ್ಟಾಗ್ರಾಮ್ ಪೇಜ್‍ನಲ್ಲಿ ಹಂಚಿಕೊಳ್ಳಲಾಗಿದ್ದು, ವೀಡಿಯೋದಲ್ಲಿ ಹುಡುಗನೊಬ್ಬ ಲವ್ ಬ್ರೇಕ್ ಅಪ್ ಮಾಡಿಕೊಂಡಿದ್ದ ಶಾಲಾ ಬಾಲಕಿಯ ಫುಟ್‍ಪಾತ್ ಮೇಲೆ ನಿಂತಿದ್ದಾಗ, ಆಕೆಯ ಹಿಡಿದುಕೊಂಡು ತನ್ನನ್ನು ಬಿಟ್ಟು ಹೋಗಬೇಡ, ನನ್ನನ್ನು ಕರೆದುಕೊಂಡು ಹೋಗು ಎಂದು ಬೇಡಿಕೊಳ್ಳುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಮಾಂಸಾಹಾರಿಗಳ ಓಟು ನಮಗೆ ಬೇಡ ಅಂತ ಬಿಜೆಪಿ ಹೇಳಲಿ – ದಿನೇಶ್ ಗುಂಡೂರಾವ್ ಸವಾಲ್

    ಹುಡುಗಿಯ ಪಾದ ಹಿಡಿದು ಆಕೆಯ ಮನವೊಲಿಸಲು ಹುಡುಗ ಎಷ್ಟೇ ಪ್ರಯತ್ನಿಸುತ್ತಿದ್ದರೂ, ಆಕೆ ಮಾತ್ರ ಇಲ್ಲ ಎಂದು ತಲೆಯಾಡಿಸುತ್ತಿರುತ್ತಾಳೆ. ಸದ್ಯ ವೈರಲ್ ಆಗುತ್ತಿರುವ ಈ ವೀಡಿಯೋವನ್ನು ಇಲ್ಲಿಯವರೆಗೂ ಸುಮಾರು 73 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದು, 4,600ಕ್ಕೂ ಹೆಚ್ಚು ಲೈಕ್ಸ್ ಹರಿದುಬಂದಿದೆ. ಅಲ್ಲದೇ ಅನೇಕ ನೆಟ್ಟಿಗರು ವ್ಯಂಗ್ಯವಾಗಿ ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕ ಚಟುವಟಿಕೆ ಆತಂಕ – ಹೊರಗಿನಿಂದ ಬರುವ ಮಸೀದಿ, ಮದರಸಾ ಧರ್ಮಗುರುಗಳಿಗೆ ಅಸ್ಸಾಂನಲ್ಲಿ ಹೊಸ ನಿಯಮ

    Live Tv
    [brid partner=56869869 player=32851 video=960834 autoplay=true]

  • ಪೊಲೀಸ್ ವಾಹನದಲ್ಲೇ ಕುಳಿತು ರಾಜಾರೋಷವಾಗಿ ಕೇಕ್ ಕತ್ತರಿಸಿದ ಕೊಲೆ ಆರೋಪಿ – ವೀಡಿಯೋ ವೈರಲ್

    ಪೊಲೀಸ್ ವಾಹನದಲ್ಲೇ ಕುಳಿತು ರಾಜಾರೋಷವಾಗಿ ಕೇಕ್ ಕತ್ತರಿಸಿದ ಕೊಲೆ ಆರೋಪಿ – ವೀಡಿಯೋ ವೈರಲ್

    ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್‍ನಗರದಲ್ಲಿ ಕೊಲೆ ಮಾಡಿದ್ದ ಆರೋಪಿಯೊಬ್ಬ ತನ್ನ ಬರ್ತ್‍ಡೇ ಕೇಕ್ ಅನ್ನು ಪೊಲೀಸ್ ವಾಹನದಲ್ಲಿ ಕಟ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದೀಗ ವೀಡಿಯೋ ಭಾರೀ ಚರ್ಚೆಗೆ ಕಾರಣವಾಗಿದ್ದು, ಪೊಲೀಸರ ಕಾರ್ಯ ದಕ್ಷತೆ ಮತ್ತು ನೈತಿಕತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

    ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೋಷನ್ ಝಾ ಜೈಲಿನಲ್ಲಿದ್ದಾನೆ. ಉಲ್ಲಾಸನಗರದ ನಿವಾಸಿಯಾಗಿರುವ ರೋಷನ್ ಝಾ ಒಬ್ಬ ದರೋಡೆಕೋರನಾಗಿದ್ದು, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಸುಲಿಗೆ ಸೇರಿದಂತೆ ಹಲವು ಪ್ರಕರಣಗಳು ಈತನ ಮೇಲೆ ದಾಖಲಾಗಿದೆ. ಇದನ್ನೂ ಓದಿ: ಗಣೇಶೋತ್ಸವದ ವೇಳೆ ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ

    ಪ್ರಕರಣಕ್ಕೆ ಸಂಬಂಧಿಸಿದಂತೆ ರೋಷನ್ ಝಾ ಅನ್ನು ಜೈಲಿನಿಂದ ಕಲ್ಯಾಣ್ ನ್ಯಾಯಾಲಯಕ್ಕೆ ಕರೆದೊಯ್ಯಲಾಗಿತ್ತು. ಜೈಲಿನಿಂದ ಹೊರ ಹೋಗುತ್ತಿರುವ ಆರೋಪಿಯ ಬೆಂಬಲಿಗರು ಕೇಕ್ ತಂದಿದ್ದರು. ಅದನ್ನು ಆರೋಪಿ ಪೊಲೀಸ್ ವಾಹನದಲ್ಲಿಯೇ ಕುಳಿತುಕೊಂಡು ಕಿಟಕಿಯಿಂದ ಕತ್ತರಿಸಿದ್ದಾನೆ. ಇದನ್ನೂ ಓದಿ: ವಿಜಯಪುರ ಕಾಂಗ್ರೆಸ್ ಕಚೇರಿಯಲ್ಲಿ ಸಾವರ್ಕರ್ ಫೋಟೋ ಪ್ರತ್ಯಕ್ಷ

    ರೋಷನ್ ಝಾ ಕೇಕ್ ಕತ್ತರಿಸುತ್ತಿರುವ ವೀಡಿಯೋವನ್ನು ಆತನ ಬೆಂಬಲಿಗರು ಮೊಬೈಲ್‍ನಲ್ಲಿ ಸೆರೆಹಿಡಿದು ನಂತರ ತಮ್ಮ ವಾಟ್ಸಾಪ್ ಸ್ಟೇಟಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಳಿಕ ವೀಡಿಯೋ ವೈರಲ್ ಆಗಿದ್ದು, ಪೊಲೀಸರು ಆರೋಪಿಗೆ ಕೇಕ್ ಕತ್ತರಿಸಲು ಅವಕಾಶ ಮಾಡಿಕೊಟ್ಟಿದ್ದು, ಮಧ್ಯಪ್ರವೇಶಿಸದೇ ಇರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸೀಟಿಗಾಗಿ ಮೆಟ್ರೋದಲ್ಲಿ ಮಹಿಳೆಯರಿಬ್ಬರ ಕಿತ್ತಾಟ – ವೀಡಿಯೋ ವೈರಲ್

    ಸೀಟಿಗಾಗಿ ಮೆಟ್ರೋದಲ್ಲಿ ಮಹಿಳೆಯರಿಬ್ಬರ ಕಿತ್ತಾಟ – ವೀಡಿಯೋ ವೈರಲ್

    ನವದೆಹಲಿ: ಆಫೀಸ್‍ಗೆ ಹೋಗುವ ಸಮಯಗಳಲ್ಲಿ ಮೆಟ್ರೋದಲ್ಲಿ ಸೀಟ್ ಹಿಡಿದುಕೊಳ್ಳುವುದು ದೊಡ್ಡ ಕೆಲಸವಾಗಿ ಹೋಗಿದೆ. ಯಾವಾಗಲೂ ಕಡಿಮೆ ಜನ ಇರುವ ಹಾಗೂ ಕುಳಿತುಕೊಳ್ಳಲು ಸೀಟ್ ಖಾಲಿ ಇರುವ ಸ್ಥಳಗಳನ್ನೇ ಜನರು ಹೆಚ್ಚಾಗಿ ಹುಡುಕುತ್ತಾರೆ. ಒಂದು ಸೀಟು ಸಿಕ್ಕರೆ ಅದನ್ನು ಮತ್ತೊಬ್ಬರಿಗೆ ಬಿಟ್ಟುಕೊಡಲು ಕಷ್ಟಪಡುತ್ತಾರೆ.

    ಸದ್ಯ ಇತ್ತೀಚೆಗಷ್ಟೇ ದೆಹಲಿ ಮೆಟ್ರೋದಲ್ಲಿ ಮಹಿಳೆಯರಿಬ್ಬರು ಪ್ರಯಾಣಿಸುವ ವೇಳೆ ಸೀಟಿಗಾಗಿ ಕಿತ್ತಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋವನ್ನು ಪ್ರಯಾಣಿಕರೊಬ್ಬರು ತಮ್ಮ ಫೋನ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.  ಇದನ್ನೂ ಓದಿ: ಈ ಬಾರಿ ಗಣಪನ ಜೊತೆ ಸಾವರ್ಕರ್ ಫೋಟೋ- ಹಿಂದೂ ಸಂಘಟನೆಗಳಿಂದ ಹೊಸ ಪ್ಲ್ಯಾನ್

    ಪ್ರತಿಭಾ ಶರ್ಮಾ ಎಂಬವರು ಈ ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದು, ಸೀರೆಯುಟ್ಟ ಮಹಿಳೆಯೊಬ್ಬರು ಮೆಟ್ರೋದಲ್ಲಿ ಖಾಲಿ ಸೀಟಿನಲ್ಲಿ ಇಟ್ಟಿದ ತಮ್ಮ ಬ್ಯಾಗ್ ಅನ್ನು ಪಕ್ಕಕ್ಕೆ ಸರಿಸಲು ನಿರಾಕರಿಸಿರುವುದನ್ನು ಕಾಣಬಹುದಾಗಿದೆ. ಸೀಟಿಗಾಗಿ ಸೀರೆಯುಟ್ಟ ಮಹಿಳೆಗೆ, ಮತ್ತೋರ್ವ ಮಹಿಳೆ ತಾನು ಕುಳಿತುಕೊಳ್ಳಲು ಜಾಗ ನೀಡಬಹುದಲ್ಲವೇ ಎಂದು ಕೇಳುತ್ತಾರೆ. ಇನ್ನೋರ್ವ ಮಹಿಳೆ ಕೂಡ ಸೀರೆಯುಟ್ಟ ಮಹಿಳೆಗೆ ತಮ್ಮ ಬ್ಯಾಗ್ ಅನ್ನು ಪಕ್ಕಕ್ಕೆ ಸರಿಸುವಂತೆ ಒತ್ತಾಯಿಸುತ್ತಿರುತ್ತಾರೆ. ಆದರೂ ಬ್ಯಾಗ್ ಎತ್ತಿಕೊಳ್ಳಲು ಮಹಿಳೆ ನಿರಾಕರಿದ್ದು, ಕೊನೆಗೆ ರೊಚ್ಚಿಗೆದ್ದ ಮತ್ತೋರ್ವ ಮಹಿಳೆ ಜಗ್ಗದೇ ಸಿಕ್ಕ ಜಾಗದಲ್ಲಿಯೇ ತುರುಕಿಕೊಂಡು ಕುಳಿತುಕೊಳ್ಳುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

     

    View this post on Instagram

     

    A post shared by Pratibha Sharma (@pratibha.sharma_09)

     

    ವೀಡಿಯೋ ಜೊತೆಗೆ ಈ ಮಹಿಳೆಗೆ ಮೆಟ್ರೋದಲ್ಲಿ ಬ್ಯಾಗ್ ಇರಿಸಿಕೊಳ್ಳಲು ಸಹ ಸೀಟ್ ಬೇಕಂತೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಈ ವೀಡಿಯೋಗೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಕಾಮೆಂಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – ಪತಿಯ ಗುಪ್ತಾಂಗಕ್ಕೆ ಬಿಸಿ ನೀರು ಎರಚಿದ್ಲು

    Live Tv
    [brid partner=56869869 player=32851 video=960834 autoplay=true]

  • ನಡು ರಸ್ತೆಯಲ್ಲಿ ಮಾವನಿಗೆ ಚಪ್ಪಲಿಯಿಂದ ಹೊಡೆದ ಸೊಸೆ

    ನಡು ರಸ್ತೆಯಲ್ಲಿ ಮಾವನಿಗೆ ಚಪ್ಪಲಿಯಿಂದ ಹೊಡೆದ ಸೊಸೆ

    ಲಕ್ನೋ: ನಡುರಸ್ತೆಯಲ್ಲಿ ಮಹಿಳೆಯೊಬ್ಬಳು ತನ್ನ ಮಾವನಿಗೆ ನಿಷ್ಕರುಣೆಯಿಂದ ಚಪ್ಪಲಿಯಿಂದ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಮಹಿಳೆ ತನ್ನ ತಂದೆ ಹಾಗೂ ಸಹೋದರನೊಂದಿಗೆ ಮಾವನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ. ಚಪ್ಪಲಿಯಲ್ಲಿ ಥಳಿಸಿದ್ದಲ್ಲದೇ ಕಿಂಚಿತ್ತು ಕರುಣೆ ತೋರದೇ ಮೂವರು ಸೇರಿಕೊಂಡು ವೃದ್ಧನನ್ನು ರಸ್ತೆಯಲ್ಲಿ ಧರಧರನೇ ಎಳೆದೊಯ್ದಿದ್ದಾರೆ. ಇದನ್ನೂ ಓದಿ: ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಈಶ್ವರ ಖಂಡ್ರೆ ವಾಗ್ದಾಳಿ

    ಈ ಸಂಪೂರ್ಣ ಘಟನೆಯು ಹೆದ್ದಾರಿಯ ನಡುವಿನ ಛೇದಕದಲ್ಲಿ ಪೊಲೀಸ್ ಚೌಕಿಯ ಸಮೀಪ ಸಂಭವಿಸಿದೆ. ವೀಡಿಯೋದಲ್ಲಿ ಸಹೋದರ ನನ್ನ ಸಹೋದರಿಯ ತಪ್ಪು ಏನಿದೆ. ಅವಳನ್ನೆ ಏಕೆ ಹೊಡೆದೆ ಎಂದು ಪದೇ, ಪದೇ ಕೇಳುತ್ತಾ ಹೊಡೆದಿದ್ದಾನೆ. ಈ ವೇಳೆ ಅಸಹಾಯಕನಾದ ವೃದ್ಧ, ತನಗೆ ಬಿಡುವಂತೆ ಅಂಗಲಾಚಿ ಬೇಡಿಕೊಳ್ಳುತ್ತಿದ್ದರು. ಮೂವರು ಸೇರಿಕೊಂಡು ವೃದ್ಧನಿಗೆ ಹೊಡೆದು ಮತ್ತು ಕಾಲಿನಿಂದ ಒದ್ದಿದ್ದಾರೆ.

    ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಮಹಿಳೆ ಮತ್ತು ಆಕೆಯ ತಂದೆಯನ್ನು ವಶಕ್ಕೆ ಪಡೆದಿದ್ದು, ತಲೆ ಮರೆಸಿಕೊಂಡಿರುವ ಆಕೆಯ ಸಹೋದರನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದೀಗ ಗಾಯಗೊಂಡಿರುವ ವೃದ್ಧನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮೈಸೂರು ಉದ್ಯಮಿಯ ಕೊಲೆಗೆ ಕೇಸ್‍ಗೆ ಟ್ವಿಸ್ಟ್ – ತಂದೆಯನ್ನೇ ಬರ್ಬರ ಹತೈಗೈದ 16ರ ಮಗ!

    ಘಟನೆ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಗಾಯಾಳು ಸುಖದೇವ್ ಸಿಂಗ್ ಯಾದವ್ ಅವರ ಪುತ್ರ ಬಬ್ಲು ಯಾದವ್ ಅವರು, ತಮ್ಮ ಕಿರಿಯ ಸಹೋದರ ಕೆಲವು ತಿಂಗಳ ಹಿಂದೆ ಸಾವನ್ನಪ್ಪಿದ್ದು, ಅವರ ಪತ್ನಿ ಪುಷ್ಪಾ, ಸಹೋದರ ಕಮಲೇಶ್ ಮತ್ತು ಅವರ ತಂದೆ ರಾಮ್ ವಿಲಾಸ್ ನಮ್ಮ ತಂದೆಗೆ ಸಂಪೂರ್ಣ ಆಸ್ತಿಯನ್ನು ಪುಷ್ಪಾ ಅವರ ಹೆಸರಿಗೆ ಮಾಡುವಂತೆ ಒತ್ತಾಯಿಸಿದ್ದರು. ನಂತರ ಆಸ್ತಿಯನ್ನು ಹಂಚುವಂತೆ ಒತ್ತಡ ಹೇರಿದ್ದಕ್ಕೆ ನಾನು ಆಸ್ತಿಯನ್ನು ಹಂಚಲು ಸಿದ್ಧನಿಲ್ಲ ಎಂದು ತಿಳಿಸಿದ್ದರು. ಅಲ್ಲದೇ ಆಕೆಗೆ ಇರಲು ಒಂದು ಕೋಣೆಯನ್ನು ಸಹ ನೀಡಲಾಗಿತ್ತು. ಆದರೆ ಅಷ್ಟಕ್ಕೆ ತೃಪ್ತಿ ಕಾಣದೇ, ಮಹಿಳೆ ತನ್ನ ತಂದೆ ಮತ್ತು ಕುಟುಂಬಸ್ಥರನ್ನು ಕರೆಸಿ ನಮ್ಮ ತಂದೆಗೆ ಹೊಡೆಸಿದ್ದಾಳೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೆದ್ದಾರಿಯಲ್ಲಿ ಮಹಿಳೆಯ ಟ್ರಕ್ ಸವಾರಿ – ಲೇಡಿ ಡ್ರೈವರ್‌ಗೆ ಸಲಾಂ ಅಂದ ನೆಟ್ಟಿಗರು

    ಹೆದ್ದಾರಿಯಲ್ಲಿ ಮಹಿಳೆಯ ಟ್ರಕ್ ಸವಾರಿ – ಲೇಡಿ ಡ್ರೈವರ್‌ಗೆ ಸಲಾಂ ಅಂದ ನೆಟ್ಟಿಗರು

    ಚೆನ್ನೈ: ‘ಉದ್ಯೋಗಂ ಪುರುಷ ಲಕ್ಷಣಂ’ ಅನ್ನುವ ಹಳೆಯ ಗಾದೆ ಮಾತು ಈಗ ಅಕ್ಷರಶಃ ಬದಲಾಗಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ. ಪುರುಷರಿಗೆ ಮಹಿಳೆಯರು ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ ಎಂಬುವುದು ಪದೇ, ಪದೇ ಸಾಬೀತಾಗುತ್ತಲೇ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಮಹಿಳೆಯೊಬ್ಬರು ಹೈವೆಯಲ್ಲಿ ಟ್ರಕ್ ಚಲಾಯಿಸುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋ ನೋಡಿ ನೆಟ್ಟಿಗರು ಮಹಿಳೆಯ ಆತ್ಮವಿಶ್ವಾಸಕ್ಕೆ ಸೆಲ್ಯೂಟ್ ಎನ್ನುತ್ತಿದ್ದಾರೆ.

    ಸಾಮಾನ್ಯವಾಗಿ ಮಹಿಳೆಯರು ದ್ವಿಚಕ್ರ ವಾಹನ, ಕಾರು ಹಾಗೂ ಆಟೋವನ್ನು ಚಲಾಯಿಸುವುದನ್ನು ನೀವು ನೋಡಿರಬಹುದು. ಆದರೆ ಟ್ರಕ್ ಚಲಾಯಿಸುವುದನ್ನು ನೋಡಿದ್ದೀರಾ? ಹೌದು ತಮಿಳುನಾಡಿನ ಮಹಿಳೆಯೊಬ್ಬರು ಟ್ರಕ್ ಚಲಾಯಿಸುವ ಮೂಲಕ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ. ಇದನ್ನೂ ಓದಿ: ದ್ರೌಪದಿ ಮುರ್ಮು, ಸಿನ್ಹಾ ಇಬ್ಬರಿಗೂ ವೋಟು ಹಾಕಲ್ಲ: ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ ಅಕಾಲಿ ದಳ ಶಾಸಕ

    ಐಪಿಎಸ್ ಅಧಿಕಾರಿ ಅವನೀಶ್ ಶರಣ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಹಿಳೆಯೊಬ್ಬರು ಹೆದ್ದಾರಿಯಲ್ಲಿ ನಂಬರ್ ಪ್ಲೇಟ್ ಇರುವ ಟ್ರಕ್ ಅನ್ನು ವೇಗವಾಗಿ ಚಲಿಸುತ್ತಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ವೀಡಿಯೋ ಆರಂಭದಲ್ಲಿ ದೂರದಲ್ಲಿದ್ದ ಟ್ರಕ್ ಹತ್ತಿರ ಬರುತ್ತಿದ್ದಂತೆಯೇ ಮಹಿಳೆ ಟ್ರಕ್ ಅನ್ನು ಅತೀ ಸುಲಭವಾಗಿ ಚಲಾಯಿಸುತ್ತಿರುವುದನ್ನು ಕಾಣುಬಹುದಾಗಿದೆ. ವೀಡಿಯೋ ಸೆರೆ ಹಿಡಿಯುತ್ತಿರುವುದನ್ನು ನೋಡಿದ ಮಹಿಳೆ ನಗುತ್ತಾ, ವೇಗವಾಗಿ ಮುಂದಕ್ಕೆ ಗಾಡಿಯನ್ನು ಚಲಾಯಿಸಿಕೊಂಡು ಹೋಗುವುದನ್ನು ನೋಡಬಹುದಾಗಿದೆ.

    ಈ ವೀಡಿಯೋ ಜೊತೆಗೆ ಟ್ರಕ್ ಚಲಾಯಿಸುವ ಡ್ರೈವರ್ ‘ಪುರುಷ’ ಅಥವಾ ಮಹಿಳೆ ಯಾರದರೇನು ಹೆದರುವುದಿಲ್ಲ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಈ ವೀಡಿಯೋವನ್ನು ಇಲ್ಲಿಯವರೆಗೂ ಸುಮಾರು 22 ಸಾವಿರ ಮಂದಿ ವೀಕ್ಷಿಸಿದ್ದು, ಹಲವಾರು ಮಂದಿ ಕಾಮೆಂಟ್ ಮಾಡಿದ್ದಾರೆ. ಸಾಕಷ್ಟು ಮಂದಿ ಮಹಿಳೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಆಕೆಯ ಸ್ಟೈಲ್, ಆತ್ಮವಿಶ್ವಾಸಕ್ಕೆ ಸೆಲ್ಯೂಟ್ ಎಂದಿದ್ದಾರೆ. ಇದೊಂದು ಮಹಿಳಾ ಸಬಲೀಕರಣಕ್ಕೆ ಉದಾಹರಣೆಯಾಗಿದೆ ಎಂದು ಹೇಳುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಸ್ತ್ರಾಪಹರಣ ದೃಶ್ಯಕ್ಕೆ ದ್ರೌಪದಿ ಬದಲು ಸೀತಾದೇವಿ ಹೆಸರು ಹೇಳಿದ ರಣದೀಪ್ ಸುರ್ಜೆವಾಲಾ: ವೀಡಿಯೋ ವೈರಲ್

    ವಸ್ತ್ರಾಪಹರಣ ದೃಶ್ಯಕ್ಕೆ ದ್ರೌಪದಿ ಬದಲು ಸೀತಾದೇವಿ ಹೆಸರು ಹೇಳಿದ ರಣದೀಪ್ ಸುರ್ಜೆವಾಲಾ: ವೀಡಿಯೋ ವೈರಲ್

    ಚಂಡೀಗಢ: ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಹಾಭಾರತದಲ್ಲಿ ವಸ್ತ್ರಾಪಹರಣ ದೃಶ್ಯವನ್ನು ಉದಾಹರಣೆಗೆ ತೆಗೆದುಕೊಳ್ಳಲು ಹೋಗಿ ದ್ರೌಪದಿ ಬದಲಿಗೆ ಸೀತಾದೇವಿಯ ಹೆಸರು ಹೇಳಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಸತ್ತಾತ್ಮಕ ಸಂಸ್ಥೆಗಳು, ಇಡಿ, ಸಿಬಿಐ ಮತ್ತು ಆದಾಯ ತೆರಿಗೆಯಂತಹ ತನಿಖಾ ಸಂಸ್ಥೆಗಳು ಕೇಂದ್ರ ಅಪಖ್ಯಾತಿಗೊಳಿಸಿದೆ. ಕೇಂದ್ರವು ಎಲ್ಲಾ ಸಂಸ್ಥೆಗಳ ಮಹತ್ವವನ್ನು ಕಸಿದುಕೊಳ್ಳುತ್ತಿದೆ ಎಂದು ಟೀಕಿಸಿದರು.  ಇದನ್ನೂ ಓದಿ:  ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಬೆಳಗಾವಿ ಜಿಲ್ಲಾಡಳಿತ ಡೋಂಟ್ ಕೇರ್, ಹೆಚ್ಚಿದ ಆತಂಕ 

    ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ. ಈ ಚುನಾವಣೆಯಲ್ಲಿ ಸತ್ಯ, ಪ್ರಜಾಪ್ರಭುತ್ವ, ಕಾನೂನು ಮತ್ತು ನೈತಿಕತೆ ಗೆಲ್ಲುತ್ತದೆ. ಸೀತಾದೇವಿಯ ವಸ್ತ್ರಾಪಹರಣದಂತೆ ಬಿಜೆಪಿ ಪ್ರಜಾಪ್ರಭುತ್ವದ ವಸ್ತ್ರಾಪಹರಣ ಮಾಡಲು ಬಯಸುತ್ತದೆ. ಆದರೆ ರಾಜ್ಯಸಭಾ ಚುನಾವಣೆಯಲ್ಲಿ ಅವರ ಮುಖವಾಡ ಕಳೆದುಕೊಳ್ಳುತ್ತೆ ಎಂದು ಹೇಳಿದರು.

    ಮಹಾಭಾರತದಲ್ಲಿ ರಾಜ ಧೃತರಾಷ್ಟ್ರನ ಆಸ್ಥಾನದಲ್ಲಿ ಪಂಚಪಾಂಡವರು ಸೇರಿದಂತೆ ಗಣ್ಯರ ಮುಂದೆ ಇಡೀ ಸಭೆಯಲ್ಲಿ ದ್ರೌಪದಿ ವಸ್ತ್ರಾಪಹರಣ ಮಾಡಲಾಗಿತ್ತು. ಈ ಘಟನೆಯನ್ನು ಉಲ್ಲೇಖಿಸಲು ಹೋಗಿ ರಣದೀಪ್ ಅವರು ದ್ರೌಪದಿ ಬದಲಿಗೆ ಸೀತಾದೇವಿಯ ಹೆಸರು ಹೇಳಿದ್ದಾರೆ.

    ಸುರ್ಜೆವಾಲಾ ಅವರ ಹೇಳಿಕೆಯನ್ನು ಟೀಕಿಸಿರುವ ಬಿಜೆಪಿ, ಕಾಂಗ್ರೆಸ್ ರಾಮನ ಅಸ್ತಿತ್ವವನ್ನು ನಿರಾಕರಿಸುತ್ತಿದೆ ಎಂದು ವ್ಯಂಗ್ಯವಾಡಿದೆ. ಅಲ್ಲದೇ ಹಲವು ಕಡೆಗಳಿಂದ ಈ ಬಗ್ಗೆ ವಿರೋಧ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:  ಎಂಟು ವರ್ಷಗಳಲ್ಲಿ ಭಾರತದ ಜೈವಿಕ ಆರ್ಥಿಕತೆ 8 ಪಟ್ಟು ಬೆಳೆದಿದೆ: ಪ್ರಧಾನಿ

  • ಮದುವೆ ನಂತ್ರ ವಧು, ವರನ ಬೆಂಕಿ ಎಕ್ಸಿಟ್ – ವೀಡಿಯೋ ವೈರಲ್

    ಮದುವೆ ನಂತ್ರ ವಧು, ವರನ ಬೆಂಕಿ ಎಕ್ಸಿಟ್ – ವೀಡಿಯೋ ವೈರಲ್

    ವಾಷಿಂಗ್ಟನ್: ಪ್ರತಿಯೊಬ್ಬರೂ ತಮ್ಮ ಮದುವೆಯು ತಮ್ಮ ಜೀವನದಲ್ಲಿ ಮರೆಯಲಾಗದ ದಿನಗಳಂತಿರಬೇಕು ಅಂತ ಬಯಸುತ್ತಾರೆ. ಕೆಲವರು ತಮ್ಮ ಮದುವೆಗೆ ಆಗಮಿಸಿದ ಅತಿಥಿಗಳಿಗೆ ಅದ್ದೂರಿ ಪಾರ್ಟಿಗಳನ್ನು ನೀಡುವ ಮೂಲಕ ತಮ್ಮ ವಿವಾಹವನ್ನು ಸ್ಮರಣೀಯವಾಗಿಸಲು ಪ್ರಯತ್ನಿಸುತ್ತಾರೆ. ಆದರೆ ಅಮೆರಿಕದ ದಂಪತಿ ಒಂದು ಹೆಜ್ಜೆ ಮುಂದೆ ಹೋಗಿ ಮದುವೆಯಲ್ಲಿ ಭಾರೀ ಸಾಹಸವೊಂದನ್ನುಗೈದು ನೆಟ್ಟಿಗರನ್ನು ದಿಗ್ಭ್ರಮೆಗೊಳ್ಳುವಂತೆ ಮಾಡಿದ್ದಾರೆ.

    ನವವಿವಾಹಿತ ದಂಪತಿ ಗೇಬ್ ಜೆಸ್ಸಾಪ್ ಮತ್ತು ಆಂಬಿರ್ ಬಾಂಬಿರ್ ದಂಪತಿ ತಮ್ಮ ಮದುವೆಯ ಆರತಕ್ಷತೆಯಿಂದ ನಿರ್ಗಮಿಸುವ ವೇಳೆ ಉದ್ದೇಶಪೂರ್ವಕವಾಗಿ ಕ್ಯಾಮೆರಾ ಮುಂದೆ ಬೆಂಕಿ ಹಚ್ಚಿಕೊಂಡು ತಮ್ಮ ಸಾಹಸವನ್ನು ಪ್ರದರ್ಶಿಸಿದ್ದಾರೆ. ಇಬ್ಬರು ವೃತ್ತಿಪರ ಹಾಲಿವುಡ್ ಸೆಟ್‍ಗಳಲ್ಲಿ ಸ್ಟಂಟ್ ಕಲಾವಿದರಾಗಿ ಕೆಲಸ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸನ್ನಿ ಲಿಯೋನ್ ಮೂರು ಮಕ್ಕಳ ತಾಯಿ, ನೂರಾರು ಕೋಟಿ ಒಡತಿ : ಜಸ್ಟ್ @ 40

    ಈ ಕುರಿತು ವೀಡಿಯೋವನ್ನು ದಂಪತಿಯ ಛಾಯಾಗ್ರಾಹಕ ರಸ್ ಪೊವೆಲ್, ಅವರು ತಮ್ಮ ಇನ್‍ಸ್ಟಾಗ್ರಾಮ್ ಮತ್ತು ಟಿಕ್‍ಟಾಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ವಧುವು ಬೆಂಕಿ ಹೊತ್ತಿಕೊಂಡಿರುವ ಪುಷ್ಪಗುಚ್ಚವನ್ನು ಕೈಯಲ್ಲಿ ಹಿಡಿದಿಟ್ಟುಕೊಂಡಿರುವುದನ್ನು ಕಾಣಬಹುದು. ವಧು ಮತ್ತು ವರನ ಹಿಂಭಾಗದಲ್ಲಿ ಮೊದಲಿಗೆ ಪಟಾಕಿಗಳನ್ನು ಸಿಡಿಸಲಾಗುತ್ತದೆ. ನಂತರ ಇಬ್ಬರೂ ಬೆನ್ನಿಗೆ ಬೆಂಕಿ ಹಚ್ಚಿಕೊಂಡು, ಅತಿಥಿಗಳತ್ತ ಕೈ ಬೀಸುತ್ತಾ, ಓಡಲಾರಂಬಿಸುತ್ತಾರೆ. ಕೊನೆಗೆ ಇಬ್ಬರು ಮಂಡಿಯೂರಿ ಕುಳಿತುಕೊಳ್ಳುತ್ತಾರೆ. ನಂತರ ಇಬ್ಬರು ವ್ಯಕ್ತಿಗಳು ಬೆಂಕಿಯನ್ನು ನಂದಿಸುತ್ತಾರೆ. ಇದನ್ನೂ ಓದಿ : Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು