Tag: ವೀರ

  • ಚುನಾವಣೆ, ಐಪಿಎಲ್ ಹಾವಳಿ ನಡುವೆ ‘ವೀರಂ’ ಜೊತೆ ‘ಪೆಂಟಗನ್’ ರಿಲೀಸ್

    ಚುನಾವಣೆ, ಐಪಿಎಲ್ ಹಾವಳಿ ನಡುವೆ ‘ವೀರಂ’ ಜೊತೆ ‘ಪೆಂಟಗನ್’ ರಿಲೀಸ್

    ರಾಜ್ಯದ ಜನತೆ ಚುನಾವಣೆ ಹಾಗೂ ಐಪಿಎಲ್ ಪಂದ್ಯಾವಳಿಯಲ್ಲಿ ಮುಳುಗಿ ಹೋಗಿರುವ ಸಂದರ್ಭದಲ್ಲಿ ಕನ್ನಡದ ಎರಡು ಮಹತ್ವದ ಚಿತ್ರಗಳು ಇಂದು ಬಿಡುಗಡೆ ಆಗುತ್ತಿವೆ. ತಮ್ಮದೇ ಆದ ಕಾರಣಗಳಿಂದಾಗಿ ಈ ಚಿತ್ರಗಳು ನಿರೀಕ್ಷೆ ಮೂಡಿಸಿವೆ. ಆದರೆ, ಪ್ರೇಕ್ಷಕ ಈ ಸಿನಿಮಾಗಳನ್ನು ಯಾವ ರೀತಿಯಲ್ಲಿ ಸ್ವೀಕರಿಸುತ್ತಾನೆ ಎನ್ನುವುದನ್ನು ಕಾದು ನೋಡಬೇಕಿದೆ.

    ವೀರಂ

    ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್ ಮೂಲಕ  ಕೆ.ಎಂ. ಶಶಿಧರ್ ಅವರು ನಿರ್ಮಿಸಿರುವ  ಫ್ಯಾಮಿಲಿ ಎಮೋಷನ್  ಜೊತೆಗೆ ಲವ್,  ಆಕ್ಷನ್, ಥ್ರಿಲ್ಲರ್ ಡ್ರಾಮಾ ಕಥಾಹಂದರ ಹೊಂದಿರುವ ಚಿತ್ರ ವೀರಂ‌ (Veeram) ರಾಜ್ಯಾದ್ಯಂತ ತೆರೆಕಾಣುತ್ತಿದೆ. ಟ್ರೈಲರ್, ಹಾಡುಗಳ ಮೂಲಕ ದೊಡ್ಡ ಮಟ್ಟದ ಕುತೂಹಲ ಹುಟ್ಟುಹಾಕಿರುವ  ಈ ಚಿತ್ರಕ್ಕೆ ಖದರ್ ಕುಮಾರ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಒಂದು ಕುಟುಂಬಕ್ಕೆ ತೊಂದರೆ ಬಂದಾಗ ಎಲ್ಲರೂ ಹೇಗೆ ಜೊತೆಗೆ ನಿಲ್ತಾರೆ ಎನ್ನುವುದು ಚಿತ್ರದ ಕಥೆ.

    ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ (Rachita Ram) ಹಾಗೂ ನಟಿ  ಶೃತಿ, ಅಕ್ಕ ತಮ್ಮನಾಗಿ ಅಲ್ಲದೆ  ಶ್ರೀನಗರ ಕಿಟ್ಟಿ ಅಣ್ಣನಾಗಿಯೂ ಕಾಣಿಸಿಕೊಂಡಿದ್ದಾರೆ. ರಚಿತಾರಾಮ್, ಶಿಶ್ಯ ದೀಪಕ್, ಬಲ ರಾಜವಾಡಿ, ಅಚ್ಯುತ್‌ಕುಮಾರ್, ಸ್ವಾತಿ, ಮೈಕೋ ನಾಗರಾಜ್, ಪ್ರಶಾಂತ್ ನಟನಾ, ಹನುಮಂತೇಗೌಡ ಅಲ್ಲದೆ ನಿರ್ದೇಶಕರಾದ ಜೋಸೈಮನ್, ವಿ.ನಾಗೇಂದ್ರಪ್ರಸಾದ್ ಉಳಿದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ರಿಲಯನ್ಸ್ ಜ್ಯುವೆಲ್ಸ್‌ಗಾಗಿ ಬೆಂಗಳೂರಿಗೆ ಬಂದ ಜಾನ್ವಿ ಕಪೂರ್

    5 ವಿಭಿನ್ನ ಕಥೆಗಳ ಪೆಂಟಗನ್

    ಐದು ಬೇರೆ ಬೇರೆ ಜಾನರ್ ಕಥೆಗಳನ್ನು ಇಟ್ಟುಕೊಂಡು ಮಾಡಿರುವ  ಅಂಥಾಲಜಿ ಸಿನಿಮಾ ಪೆಂಟಗನ್ (Pentagon) ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈ ಚಿತ್ರವನ್ನು ನಿರ್ದೇಶಕ ಕಮ್ ನಿರ್ಮಾಪಕ ಗುರು ದೇಶಪಾಂಡೆ ಅವರು ತಮ್ಮ ಜಿ.ಅಕಾಡೆಮಿ ಅಡಿಯಲ್ಲಿ ನಿರ್ಮಿಸಿದ್ದು,  ಚಿತ್ರದ 5 ಕಥೆಗಳಿಗೆ ಆಕಾಶ್ ಶ್ರೀವತ್ಸ, ಚಂದ್ರಮೋಹನ್, ರಾಘು ಶಿವಮೊಗ್ಗ, ಕಿರಣ್ ಕುಮಾರ್ ಹಾಗೂ ಗುರು ದೇಶಪಾಂಡೆ  ಆ್ಯಕ್ಷನ್-ಕಟ್ ಹೇಳಿದ್ದಾರೆ.

    ಚಿತ್ರದಲ್ಲಿ ಬರುವ ಡೆತ್ ಥೀಮ್ 5 ಕಥೆಗಳಲ್ಲೂ ಕಾಮನ್ ಆಗಿದ್ದು, ಈ ಐದೂ ಕತೆಗಳ ಕೊನೆಯಲ್ಲಿ ಕಾಗೆಯೊಂದು ಕತೆಗಳಿಗೆ ಲಿಂಕ್ ಮಾಡುತ್ತ ಹೋಗುತ್ತದೆ. ಮಣಿಕಾಂತ್ ಕದ್ರಿ ಅವರ ಸಂಗೀತ, ಕಿರಣ್ ಹಂಪಾಪುರ, ಅಭಿಲಾಶ್ ಕಲ್ಲತ್ತಿ, ಗುರುಪ್ರಸಾದ್ ಅವರ ಛಾಯಾಗ್ರಹಣ, ವೆಂಕಟೇಶ್ ಯುವಿಡಿ ಅವರ ಸಂಕಲನ ಚಿತ್ರಕ್ಕಿದೆ.

    ಈ ಚಿತ್ರದಲ್ಲಿ ಹಿರಿಯನಟ ಪ್ರಕಾಶ್ ಬೆಳವಾಡಿ, ಪ್ರಮೋದ್ ಶೆಟ್ಟಿ, ಕೃತಿಕಾ ದೇಶಪಾಂಡೆ, ರವಿಶಂಕರ್, ಅನುಷಾ ರೈ, ವಂಶಿಕೃಷ್ಣ, ಅಪೂರ್ವ, ತನಿಶಾ, ಪ್ರೇರಣಾ ಕಂಬಂ, ಕಿರಣ್ ನಾಯಕ್, ಕಿಶೋರ್, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ, ಅಶ್ವಿನಿ, ನಟ ಪೃಥ್ವಿ ಅಂಬರ್, ಬಿರಾದಾರ್ ಹಾಗೂ ಬಾಲನಟಿ ಆರಾಧ್ಯ ಹಾಗೂ ಇತರರು ಅಭಿನಯಿಸಿದ್ದಾರೆ.

  • ಖಡಕ್ ವಿಲನ್ ಆಗಿ ಮತ್ತೆ ಚಿತ್ರೋದ್ಯಮಕ್ಕೆ ಎಂಟ್ರಿ ಕೊಟ್ಟ ಶಿಷ್ಯ ದೀಪಕ್

    ಖಡಕ್ ವಿಲನ್ ಆಗಿ ಮತ್ತೆ ಚಿತ್ರೋದ್ಯಮಕ್ಕೆ ಎಂಟ್ರಿ ಕೊಟ್ಟ ಶಿಷ್ಯ ದೀಪಕ್

    ಶಿಷ್ಯ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ದೀಪಕ್ ಕೆಲ ವರ್ಷಗಳ ನಂತರ ಮತ್ತೆ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಾರಿ ಅವರು ಪೂರ್ಣ ಪ್ರಮಾಣದಲ್ಲಿ ಖಳನಾಯಕರಾಗಿ ವೀರಂ ಸಿನಿಮಾದಲ್ಲಿ ಅಬ್ಬರಿಸಿದ್ದಾರೆ. ಈ ಸಿನಿಮಾ ಮೂಲಕ ಮತ್ತೆ ತಮ್ಮ ಕರಿಯರ್ ಅನ್ನು ಹೊಸ ರೀತಿಯಲ್ಲಿ ಪ್ರಾರಂಭಿಸುತ್ತಿದ್ದಾರೆ. ಅಲ್ಲದೇ, ಹೆಸರಾಂತ ಕಲಾವಿದರ ಜೊತೆ ವೀರಂ ಚಿತ್ರದಲ್ಲಿ ತೆರೆಹಂಚಿಕೊಂಡಿದ್ದು ವಿಶೇಷ.

    ಈಗಾಗಲೇ ನಾನಾ ರೀತಿಯ ಪಾತ್ರಗಳನ್ನು ಮಾಡಿರುವ ಪ್ರಜ್ವಲ್ ದೇವರಾಜ್, ಇದೇ ಮೊದಲ ಬಾರಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಯಾಗಿ ನಟಿಸಿದ್ದಾರೆ. ವೀರಂ ಚಿತ್ರದಲ್ಲಿ ಅವರದ್ದು ವಿಷ್ಣುವರ್ಧನ್ ಅಭಿಮಾನಿ ಪಾತ್ರವಾಗಿದ್ದು, ಈ ಸಿನಿಮಾವನ್ನು ನೋಡಲು ವಿಷ್ಣು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಮಾಸ್ ಮತ್ತು ಕ್ಲಾಸ್ ಅಂಶಗಳನ್ನು ಒಳಗೊಂಡಿರುವ ಚಿತ್ರ ಇದಾಗಿದ್ದು, ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ಮೂಲಕ ನಿರೀಕ್ಷೆ ಹೆಚ್ಚಿಸಿದೆ. ಇದನ್ನೂ ಓದಿ: ಕಿಸ್ಸಿಂಗ್ ಪ್ರಕರಣ: 16 ವರ್ಷಗಳ ನಂತರ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್

    ನಿರ್ಮಾಪಕ ಕೆ.ಎಂ. ಶಶಿಧರ್ (Shashidhar) ಅವರು ತಮ್ಮ ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್‌ನ ಮೂರನೇ ಪ್ರಾಜೆಕ್ಟ್ ಆಗಿ ಎಮೋಷನಲ್, ಆಕ್ಷನ್, ಥ್ರಿಲ್ಲರ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ‘ವೀರಂ’ (Veeram) ಚಿತ್ರವನ್ನು  ನಿರ್ಮಿಸಿದ್ದಾರೆ. ಡಾಟರ್ ಆಫ್ ಪಾರ್ವತಮ್ಮ, ಶುಗರ್‌ಲೆಸ್ ಚಿತ್ರದ ನಂತರ ಈಗ ಆಕ್ಷನ್ ಥ್ರಿಲ್ಲರ್  ಜಾನರ್ ಚಿತ್ರದೊಂದಿಗೆ ಬರುತ್ತಿದ್ದಾರೆ.

    ಪ್ರಜ್ವಲ್ ದೇವರಾಜ್, ರಚಿತಾರಾಮ್  ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರದ ಟ್ರೈಲರ್ ಮತ್ತು ಹಾಡುಗಳಿಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ.  ಖದರ್ ಕುಮಾರ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ಏಪ್ರಿಲ್ 7ಕ್ಕೆ ರಾಜ್ಯಾದ್ಯಂತ  ತೆರೆಕಾಣುತ್ತಿದೆ.   ವೀರಂ ಎಂದರೆ ಯಾರಿಗೂ ಹೆದರದ ವ್ಯಕ್ತಿ. ಖದರ್‌ಕುಮಾರ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ  ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಹಾಗೂ ಹಿರಿಯನಟಿ ಶೃತಿ (Shruti), ಅಕ್ಕ ತಮ್ಮನಾಗಿ ಅಲ್ಲದೆ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳಾಗಿ ಕಾಣಿಸಿಕೊಂಡಿದ್ದಾರೆ.

    ಎಮೋಷನಲ್ ಥ್ರಿಲ್ಲರ್ ಡ್ರಾಮಾ  ಜೊತೆಗೆ ಕಂಪ್ಲೀಟ್ ಪ್ಯಾಕೇಜ್ಡ್ ಮೂವೀ ಇದಾಗಿದ್ದು,  ಸೆಕೆಂಡ್ ಹಾಫ್‌ನಲ್ಲಿ  ಥ್ರಿಲ್ಲರ್ ಅಂಶವಿದೆ. ಜೊತೆಗೆ  ಶಿಷ್ಯ ದೀಪಕ್‌ (Shishya Deepak) ಮೊದಲಬಾರಿಗೆ ಪೂರ್ಣಪ್ರಮಾಣದ ಖಳನಾಯಕನಾಗಿ ನಟಿಸಿದ್ದಾರೆ. ವಿಶೇಷವಾಗಿ ಸಾಹಸಸಿಂಹ ವಿಷ್ಣುವರ್ಧನ್ ಅವರ ಪಾತ್ರವನ್ನಿಟ್ಟುಕೊಂಡು ಕಥೆ ಹೇಳಲಾಗಿದೆ. ಹಾಗಾಗಿ ಈ ಸಿನಿಮಾವನ್ನು ವಿಷ್ಣು   ಅವರಿಗೇ ಅರ್ಪಣೆ ಮಾಡಿದ್ದಾರೆ ಚಿತ್ರತಂಡ.

  • ‘ವೀರಂ’ ಮೂಲಕ ವಿಷ್ಣುವರ್ಧನ್ ಅಭಿಮಾನಿಯಾದ ಪ್ರಜ್ವಲ್ ದೇವರಾಜ್

    ‘ವೀರಂ’ ಮೂಲಕ ವಿಷ್ಣುವರ್ಧನ್ ಅಭಿಮಾನಿಯಾದ ಪ್ರಜ್ವಲ್ ದೇವರಾಜ್

    ಗಾಗಲೇ ನಾನಾ ರೀತಿಯ ಪಾತ್ರಗಳನ್ನು ಮಾಡಿರುವ ಪ್ರಜ್ವಲ್ ದೇವರಾಜ್, ಇದೇ ಮೊದಲ ಬಾರಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಯಾಗಿ ನಟಿಸಿದ್ದಾರೆ. ವೀರಂ ಚಿತ್ರದಲ್ಲಿ ಅವರದ್ದು ವಿಷ್ಣುವರ್ಧನ್ ಅಭಿಮಾನಿ ಪಾತ್ರವಾಗಿದ್ದು, ಈ ಸಿನಿಮಾವನ್ನು ನೋಡಲು ವಿಷ್ಣು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಮಾಸ್ ಮತ್ತು ಕ್ಲಾಸ್ ಅಂಶಗಳನ್ನು ಒಳಗೊಂಡಿರುವ ಚಿತ್ರ ಇದಾಗಿದ್ದು, ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ಮೂಲಕ ನಿರೀಕ್ಷೆ ಹೆಚ್ಚಿಸಿದೆ.

    ನಿರ್ಮಾಪಕ ಕೆ.ಎಂ. ಶಶಿಧರ್ (Shashidhar) ಅವರು ತಮ್ಮ ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್‌ನ ಮೂರನೇ ಪ್ರಾಜೆಕ್ಟ್ ಆಗಿ ಎಮೋಷನಲ್, ಆಕ್ಷನ್, ಥ್ರಿಲ್ಲರ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ‘ವೀರಂ’ (Veeram) ಚಿತ್ರವನ್ನು  ನಿರ್ಮಿಸಿದ್ದಾರೆ. ಡಾಟರ್ ಆಫ್ ಪಾರ್ವತಮ್ಮ, ಶುಗರ್‌ಲೆಸ್ ಚಿತ್ರದ ನಂತರ ಈಗ ಆಕ್ಷನ್ ಥ್ರಿಲ್ಲರ್  ಜಾನರ್ ಚಿತ್ರದೊಂದಿಗೆ ಬರುತ್ತಿದ್ದಾರೆ.

    ಪ್ರಜ್ವಲ್ ದೇವರಾಜ್, ರಚಿತಾರಾಮ್  ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರದ ಟ್ರೈಲರ್ ಮತ್ತು ಹಾಡುಗಳಿಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ.  ಖದರ್ ಕುಮಾರ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ಏಪ್ರಿಲ್ 7ಕ್ಕೆ ರಾಜ್ಯಾದ್ಯಂತ  ತೆರೆಕಾಣುತ್ತಿದೆ.   ವೀರಂ ಎಂದರೆ ಯಾರಿಗೂ ಹೆದರದ ವ್ಯಕ್ತಿ. ಖದರ್‌ಕುಮಾರ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ  ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಹಾಗೂ ಹಿರಿಯನಟಿ ಶೃತಿ (Shruti), ಅಕ್ಕ ತಮ್ಮನಾಗಿ ಅಲ್ಲದೆ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳಾಗಿ ಕಾಣಿಸಿಕೊಂಡಿದ್ದಾರೆ.

    ಎಮೋಷನಲ್ ಥ್ರಿಲ್ಲರ್ ಡ್ರಾಮಾ  ಜೊತೆಗೆ ಕಂಪ್ಲೀಟ್ ಪ್ಯಾಕೇಜ್ಡ್ ಮೂವೀ ಇದಾಗಿದ್ದು,  ಸೆಕೆಂಡ್ ಹಾಫ್‌ನಲ್ಲಿ  ಥ್ರಿಲ್ಲರ್ ಅಂಶವಿದೆ. ಜೊತೆಗೆ  ಶಿಷ್ಯ ದೀಪಕ್‌ (Shishya Deepak) ಮೊದಲಬಾರಿಗೆ ಪೂರ್ಣಪ್ರಮಾಣದ ಖಳನಾಯಕನಾಗಿ ನಟಿಸಿದ್ದಾರೆ. ವಿಶೇಷವಾಗಿ ಸಾಹಸಸಿಂಹ ವಿಷ್ಣುವರ್ಧನ್ ಅವರ ಪಾತ್ರವನ್ನಿಟ್ಟುಕೊಂಡು ಕಥೆ ಹೇಳಲಾಗಿದೆ. ಹಾಗಾಗಿ ಈ ಸಿನಿಮಾವನ್ನು ವಿಷ್ಣು   ಅವರಿಗೇ ಅರ್ಪಣೆ ಮಾಡಿದ್ದಾರೆ ಚಿತ್ರತಂಡ.

  • ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಟ್ರೈಲರ್ ರಿಲೀಸ್

    ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಟ್ರೈಲರ್ ರಿಲೀಸ್

    ನಿರ್ಮಾಪಕ ಕೆ.ಎಂ. ಶಶಿಧರ್ (Shashidhar) ಅವರು ತಮ್ಮ ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್‌ನ ಮೂರನೇ ಪ್ರಾಜೆಕ್ಟ್ ಆಗಿ ಎಮೋಷನಲ್, ಆಕ್ಷನ್, ಥ್ರಿಲ್ಲರ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ‘ವೀರಂ’ (Veeram) ಚಿತ್ರವನ್ನು  ನಿರ್ಮಿಸಿದ್ದಾರೆ, ಡಾಟರ್ ಆಫ್ ಪಾರ್ವತಮ್ಮ, ಶುಗರ್‌ಲೆಸ್ ಚಿತ್ರದ ನಂತರ ಈಗ ಆಕ್ಷನ್ ಥ್ರಿಲ್ಲರ್  ಜಾನರ್ ಚಿತ್ರದೊಂದಿಗೆ ಬರುತ್ತಿದ್ದಾರೆ.  ಪ್ರಜ್ವಲ್ ದೇವರಾಜ್, ರಚಿತಾರಾಮ್  ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಪ್ರಸನ್ನ ಥಿಯೇಟರ್‌ನಲ್ಲಿ ನೆರೆದಿದ್ದ ಸಾವಿರಾರು ಪ್ರೇಕ್ಷಕರ ನಡುವೆ ನೆರವೇರಿತು.  ಖದರ್ ಕುಮಾರ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಏಪ್ರಿಲ್ 7ಕ್ಕೆ ರಾಜ್ಯಾದ್ಯಂತ  ತೆರೆಕಾಣುತ್ತಿದೆ.  ಹಿರಿಯನಟ ದೇವರಾಜ್ ಅವರು ಚಿತ್ರದ ಟ್ರೈಲರ್ (Trailer) ಬಿಡುಗಡೆಗೊಳಿಸಿ ಶುಭ ಹಾರೈಸಿದರು. ವೀರಂ ಎಂದರೆ ಯಾರಿಗೂ ಹೆದರದ ವ್ಯಕ್ತಿ. ಖದರ್‌ಕುಮಾರ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ  ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಹಾಗೂ ಹಿರಿಯನಟಿ ಶೃತಿ (Shruti), ಅಕ್ಕ ತಮ್ಮನಾಗಿ ಅಲ್ಲದೆ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳಾಗಿ ಕಾಣಿಸಿಕೊಂಡಿದ್ದಾರೆ.

    ಟ್ರೈಲರ್ ನೋಡಿದ ನಂತರ ಮಾತನಾಡಿದ ದೇವರಾಜ್, ಟ್ರೈಲರ್‌ನಲ್ಲಿ ವೀರಾವೇಶ ಕಾಣಿಸ್ತಿದೆ. ಶೃತಿ ಅವರಿದ್ದ ಮೇಲೆ ಎಮೋಷನ್ ಸೀನ್‌ಗಳು ಇದ್ದೇ ಇರುತ್ತದೆ, ಪ್ರಜ್ವಲ್, ಕಿಟ್ಟಿ ಹೀಗೆ ಎಲ್ಲ ಯಂಗ್ ಸ್ಟರ್ಸ್  ಸೇರಿ ಈ ಚಿತ್ರ ಮಾಡಿದ್ದಾರೆ.  ಥೇಟರ್‌ನಲ್ಲಿ ಟ್ರೈಲರ್ ನೋಡಿದ್ದು ನನಗೆ ಮೊದಲ ಅನುಭವ, ಜನರ ಕೂಗಾಟ, ಚಪ್ಪಾಳೆ ಕೇಳಿ ತುಂಬಾ ಖುಷಿಯಾಯ್ತು ಎಂದು ಹೇಳಿದರು. ನಟ ಶೃತಿ ಮಾತನಾಡಿ ಇವರೆಲ್ಲ ಸಿನಿಮಾನ ಪ್ರೀತಿಸುವಂಥ ಜನ, ಚಪ್ಪಾಳೆ ಶಿಳ್ಳೆ ಇದನ್ನೆಲ್ಲ ಬಹಳ ದಿನಗಳ ನಂತರ ನೋಡಿ ಖುಷಿಯಾಯ್ತು. ಸಿನಿಮಾದಲ್ಲಿರುವ ಹೋರಾಟ, ಸಾಹಸ ಜನರಿಗೆ ತಲುಪಬೇಕು, ಈ ಸಿನಿಮಾ ನನಗೆ ತುಂಬಾ ವಿಶೇಷ, ಏಕೆಂದರೆ ನಾನು ವಿಷ್ಣು ಸರ್ ಅಭಿಮಾನಿಯಾಗಿಯೇ ಬಂದವಳು, ಇದರಲ್ಲೂ ಅದೇಥರದ ಪಾತ್ರವಿದೆ, ಫಸ್ಟ್ ಟೈಮ್ ಪ್ರಜ್ವಲ್ ಅವರ ಅಭಿನಯ ನೋಡಿ ಕಣ್ಣಲ್ಲಿ ನೀರುಬಂತು, ಸಾಮಾನ್ಯವಾಗಿ ನಾನು ಡಬ್ಬಿಂಗ್ ಮಾಡುವಾಗ, ನನ್ನ ಪಾತ್ರನೋಡಿ ನಾನೇ ನಗುತ್ತೇನೆ. ಈಗ ಎಲ್ಲಾಕಡೆ ಪ್ಯಾನ್ ಇಂಡಿಯಾ ಬಂದಿದೆ, ಆದರೆ ಫ್ಯಾನ್ಸ್ ಇಂಡಿಯಾ ಸಿನಿಮಾ ಇರುವುದು ಕರ್ನಾಟಕದಲ್ಲಿ ಮಾತ್ರ. ಅವರ ಶಿಳ್ಳೆ, ಕೇಕೆಯೇ ಕಲಾವಿದರಿಗೆ ಖುಷಿ ಎಂದರು.

    ಶ್ರೀನಗರಕಿಟ್ಟಿ ಮಾತನಾಡಿ ವಿಷ್ಣು ದಾದಾ ಅವರ ಸವಿನೆನಪಿನಲ್ಲಿ ಈ ಚಿತ್ರ ರಿಲೀಸಾಗುತ್ತಿದೆ. ಒಂದು ಸಿನಿಮಾನ ತೆರೆಯಮೇಲೆ ತಂದು ನಿಲ್ಲಿಸುವುದರ ಕಷ್ಟ ಆ ನಿರ್ಮಾಪಕನಿಗಷ್ಟೇ ಗೊತ್ತು ಎಂದರು. ನಿರ್ಮಾಪಕ ಶಶಿಧರ್ ಮಾತನಾಡಿ, ಈ ಸಿನಿಮಾ ನಿಂತೋಯ್ತು, ಆಗೋದೇ ಇಲ್ಲ ಎಂದು ಕೆಲವರು ಹೇಳಿದ್ದರು, ಅವರಿಗೆಲ್ಲ ಈ ಸಿನಿಮಾ ತೋರಿಸುತ್ತೇನೆ. ಎಮೋಷನಲ್ ಥ್ರಿಲ್ಲರ್ ಡ್ರಾಮಾ  ಜೊತೆಗೆ ಕಂಪ್ಲೀಟ್ ಪ್ಯಾಕೇಜ್ಡ್ ಮೂವೀ ಇದಾಗಿದ್ದು,  ಸೆಕೆಂಡ್ ಹಾಫ್‌ನಲ್ಲಿ  ಥ್ರಿಲ್ಲರ್ ಕಥೆಯಿದೆ.  ಶಿಷ್ಯ ದೀಪಕ್‌ (Shishya Deepak) ಮೊದಲಬಾರಿಗೆ ಪೂರ್ಣಪ್ರಮಾಣದ ಖಳನಾಯಕನಾಗಿ ನಟಿಸಿದ್ದಾರೆ. ವಿಶೇಷವಾಗಿ ಸಾಹಸಸಿಂಹ ವಿಷ್ಣುವರ್ಧನ್ ಅವರ ಪಾತ್ರವನ್ನಿಟ್ಟುಕೊಂಡು ಕಥೆ ಹೇಳಿದ್ದೇವೆ, ವಿಷ್ಣು  ಫ್ಯಾನ್ಸ್ಗೆ ಚಿತ್ರ ತುಂಬಾನೇ ಇಷ್ಟವಾಗುತ್ತದೆ, ಚಿತ್ರವನ್ನು ವಿಷ್ಣು ಅವರಿಗೇ ಅರ್ಪಣೆ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಮಗಳ ನಟನೆ ಬಗ್ಗೆ ತಂದೆ-ತಾಯಿಗೆ ಖುಷಿ ಇದ್ಯಾ? ಅಸಲಿ ವಿಚಾರ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

    ನಿರ್ದೇಶಕ ಖದರ್‌ಕುಮಾರ್ ಮಾತನಾಡಿ ನಾನು ಚಿಕ್ಕವನಿದ್ದಾಗ ವಿಷ್ಣು ಅವರ ದಾದಾ ಚಿತ್ರವನ್ನು 2.75 ರೂಪಾಯಿ ಕೊಟ್ಟು ಇಲ್ಲೇ ನೋಡಿದ್ದೆ. ಈಗ ಇದೇ ಚಿತ್ರಮಂದಿರದಲ್ಲಿ ನನ್ನ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಬಲ ರಾಜವಾಡಿ, ಅಚ್ಯುತ್‌ಕುಮಾರ್, ಸ್ವಾತಿ, ಮೈಕೋ ನಾಗರಾಜ್, ಪ್ರಶಾಂತ್ ನಟನಾ, ಹನುಮಂತೇಗೌಡ ಅಲ್ಲದೆ ನಿರ್ದೇಶಕರಾದ ಜೋಸೈಮನ್, ವಿ.ನಾಗೇಂದ್ರಪ್ರಸಾದ್ ಹೀಗೆ ಬಹುದೊಡ್ಡ ತಾರಾಗಣವೇ ಇದೆ ಎಂದು ಹೇಳಿದರು.

    ನಾಯಕ ಪ್ರಜ್ವಲ್ ಮಾತನಾಡಿ ನಾನು ಹೋದ ಜನ್ಮದಲ್ಲಿ ತುಂಬಾ ಪುಣ್ಯ ಮಾಡಿದ್ದೆ ಅಂತ ಕಾಣಿಸುತ್ತೆ, ಇಂಥ ತಂದೆ ತಾಯಿ ಪಡೆದ ನಾನೇ ಧನ್ಯ, ಆರಂಭದಲ್ಲಿ ನಿರ್ಮಾಪಕ, ನಿರ್ದೇಶಕರು ನನ್ನ ಬಳಿ ಬಂದಾಗ ಅವರ ಕಣ್ನಲ್ಲಿ ಒಂದು ಕನಸಿತ್ತು. ಕಿಟ್ಟಣ್ಣ ಕೂಡ ನನ್ನ ಜೊತೆ ಅಂದಕೂಡಲೇ ಕಥೆಕೇಳದೆ ಒಪ್ಪಿಕೊಂಡರು. ದಾದಾ ಅವರ ಅಚ್ಚೆ ಕೈಮೇಲೆ ಹಾಕಿಕೊಂಡು ಆಕ್ಟ್ ಮಾಡಲು ತುಂಬಾ ಖುಷಿಯಾಗಿತ್ತು. ನನ್ನ ದೊಡ್ಡ ಪವರ್ ಅಂದ್ರೆ ನನ್ನ ಅಭಿಮಾನಿಗಳು, ಮತ್ತೊಂದುಕಡೆ ನನ್ನ ಕುಟುಂಬ ಎಂದು ಹೇಳಿದರು.

    ಖಳನಟನಾಗಿ ಕಾಣಿಸಿಕೊಂಡಿರುವ ಶಿಷ್ಯ ದೀಪಕ್ ಮಾತನಾಡುತ್ತಾ ಈ ಪಾತ್ರವನ್ನು ನಾನು ಅನುಭವಿಸಿ ಮಾಡಿದ್ದೇನೆ. ನಿರ್ಮಾಪಕರು ನನ್ನ ಬಗ್ಗೆ ಬಹಳಷ್ಟು ಜನ ನೆಗೆಟಿವ್ ಮಾತಾಡಿದರೂ ಅದನ್ನು ಲೆಕ್ಕಿಸದೆ ನನಗೆ ಸಪೋರ್ಟ್ ಮಾಡಿದರು. ಶಿಶ್ಯ ದೀಪಕ್‌ನನ್ನು ಜೇಡ ದೀಪಕ್ ಮಾಡಿದ್ದಾರೆ ಎಂದು ಗಗ್ಗದಿತರಾದರು, ಅನೂಪ ಸೀಳನ್ ಅವರ ಸಂಗೀತ ಸಂಯೋಜನೆ, ಲವಿತ್ ಅವರ ಕ್ಯಾಮೆರಾವರ್ಕ್ ಚಿತ್ರಕ್ಕಿದೆ.

  • ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

    ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

    ಚಿತಾ ರಾಮ್ (Rachita Ram) ಮತ್ತು ಪ್ರಜ್ವಲ್ ದೇವರಾಜ್ (Prajwal Devaraj) ಕಾಂಬಿನೇಷನ್ ನ ‘ವೀರಂ’ (Veeram) ಸಿನಿಮಾದ ಬಿಡುಗಡೆ (Release) ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 7 ರಂದು ರಾಜ್ಯಾದ್ಯಂತ ಸಿನಿಮಾ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಶಶಿಧರ್ ಕೆ.ಎಂ (Shashidhar) ತಿಳಿಸಿದ್ದಾರೆ. ದೊಡ್ಡಮಟ್ಟದಲ್ಲಿ ಥಿಯೇಟರ್ ಗೆ  ಈ ಸಿನಿಮಾ ತರುವ ಕುರಿತು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಅಂದುಕೊಂಡಂತೆ ಆಗಿದ್ದರೆ ಕಳೆದ ವರ್ಷವೇ ಈ ಚಿತ್ರ ಬಿಡುಗಡೆ ಆಗಬೇಕಿತ್ತು. ಕೋವಿಡ್ ಕಾರಣದಿಂದಾಗಿ ಮುಂದೂಡಲಾಗಿತ್ತು.

    ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮೂಡಿಸಿದೆ. ಮೊದಲ ಬಾರಿಗೆ ಪ್ರಜ್ವಲ್ ಮತ್ತು ರಚಿತಾ ಒಟ್ಟಿಗೆ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದಲ್ಲಿ ಪ್ರಜ್ವಲ್, ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದಾರೆ. ಅದಕ್ಕಾಗಿ ಅವರು ಕೈ ಮೇಲೆ ವಿಷ್ಣು ಟ್ಯಾಟೂ ಕೂಡ ಹಾಕಿಸಿಕೊಂಡಿದ್ದರು. ಈಗಾಗಲೇ ರಿಲೀಸ್ ಆಗಿರುವ ಪೋಸ್ಟರ್ ನಲ್ಲೂ ಈ ವಿಷಯವನ್ನು ಬಹಿರಂಗ ಪಡಿಸಿದ್ದರು. ಇದನ್ನೂ ಓದಿ: ರಿಷಬ್ ಶೆಟ್ಟಿ ಮಗಳ ಬರ್ತ್‌ಡೇ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ತಾರೆಯರು

    ಪ್ರಜ್ವಲ್ ಈ ಸಿನಿಮಾದಲ್ಲಿ ಮಾಸ್ ಮತ್ತು ಕ್ಲಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಮನೆಮಂದಿ ಕೂತು ನೋಡುವಂತಹ ಕಥೆಯನ್ನು ಈ ಚಿತ್ರದಲ್ಲಿ ಹೇಳಲಿದ್ದಾರೆ ನಿರ್ದೇಶಕ ಖದರ್ ಕುಮಾರ್. ಅನೂಪ್ ಸಿಳೀನ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿದ್ದು, ಶ್ರೀನಗರ ಕಿಟ್ಟಿ, ಶ್ರುತಿ ಸೇರಿದಂತೆ ನುರಿತ ತಾರಾಬಳಗವೇ ಈ ಸಿನಿಮಾದಲ್ಲಿದೆ.

  • ಶಿವರಾತ್ರಿ ಸಡಗರಕ್ಕೆ ಸಿದ್ಧಗೊಂಡ ಸ್ಯಾಂಡಲ್ ವುಡ್

    ಶಿವರಾತ್ರಿ ಸಡಗರಕ್ಕೆ ಸಿದ್ಧಗೊಂಡ ಸ್ಯಾಂಡಲ್ ವುಡ್

    ನಾಳೆ (ಫೆ.01) ಶಿವರಾತ್ರಿ. ಹಬ್ಬ ಹರಿದಿನಗಳನ್ನು ಸಮರ್ಥವಾಗಿ ಬಳಸಿಕೊಳ್ಳಲು ಸ್ಯಾಂಡಲ್ ವುಡ್ ಸದಾ ಸಿದ್ಧವಿರುತ್ತದೆ. ಪ್ರತಿ ಸಲದಂತೆಯೂ ಈ ಬಾರಿಯೂ ಶಿವರಾತ್ರಿಯನ್ನು ಸಡಗರದಿಂದ ಕನ್ನಡ ಚಿತ್ರರಂಗ ಬರಮಾಡಿಕೊಳ್ಳುತ್ತಿದೆ. ಒಂದು ಕಡೆ ಈ ವಾರ ಐದಕ್ಕೂ ಹೆಚ್ಚು ಚಿತ್ರಗಳು ರಿಲೀಸ್ ಆಗಿದ್ದರೆ, ನಾಳೆ ಮತ್ತಷ್ಟು ಕಾರ್ಯಕ್ರಮಗಳು ಪ್ಲ್ಯಾನ್ ಆಗಿವೆ. ಇದನ್ನೂ ಓದಿ : ಮಾರ್ಚ್ ನಲ್ಲಿ ರಿಲೀಸ್ ಆಗಲಿರುವ ಬಿಗ್ ಬಜೆಟ್ ಸಿನಿಮಾಗಳಿಗೆ ಮತ್ತೆ ಸಂಕಷ್ಟ

    ಸಲಗ ಸಿನಿಮಾದ ನಂತರ ದುನಿಯಾ ವಿಜಯ್ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿರುವ ವಿಜಯ್, ಈ ಸಿನಿಮಾದಲ್ಲಿ ಅವರು ಯಾವೆಲ್ಲ ಪಾತ್ರ ನಿರ್ವಹಿಸಲಿದ್ದಾರೆ ಎಂದು ಈವರೆಗೂ ಗುಟ್ಟು ಬಿಟ್ಟುಕೊಟ್ಟಿಲ್ಲ. ಈಗಾಗಲೇ ರಿಲೀಸ್ ಆದ ಪೋಸ್ಟರ್ ಹೇಳುವ ಪ್ರಕಾರ, ದುನಿಯಾ ವಿಜಯ್ ಅವರು ನಟನೆಯೊಂದಿಗೆ ನಿರ್ದೇಶನ ಮಾಡಲಿದ್ದಾರೆ ಎನ್ನುತ್ತದೆ. ಶಿವರಾತ್ರಿ ದಿನದಂದು ಇದೆಲ್ಲದಕ್ಕೂ ಉತ್ತರ ಸಿಗಲಿದೆ. ಹಾಗೂ ಟೈಟಲ್ ಕೂಡ ಲಾಂಚ್ ಆಗಲಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ವಿಕ್ರಾಂತ್ ರೋಣ 2 ಮುನ್ಸೂಚನೆ ಕೊಟ್ಟರಾ ಸುದೀಪ್?

    ಪ್ರಜ್ವಲ್ ದೇವರಾಜ್ ಮತ್ತು ರಚಿತಾ ರಾಮ್ ಕಾಂಬಿನೇಷನ್ ನ ವೀರಂ ಸಿನಿಮಾದ ಹಾಡೊಂದು ಶಿವರಾತ್ರಿಗಾಗಿ ರಿಲೀಸ್ ಆಗುತ್ತಿದೆ. ಶಿವನ ಆರಾಧನೆಯ ಕುರಿತಾಗಿಯೇ ಈ ಹಾಡು ಮೂಡಿ ಬಂದಿದ್ದು, ಖ್ಯಾತ ಗಾಯಕಿ ಅನನ್ಯ ಭಟ್ ಈ ಗೀತೆಯನ್ನು ಹಾಡಿದ್ದಾರೆ. ಅನೂಪ್ ಸೀಳೀನ್ ಸಂಗೀತ ಸಂಯೋಜನೆಯಲ್ಲಿ ಹಾಡು ಮೂಡಿ ಬಂದಿದ್ದು, ನಾಗೇಂದ್ರ ಪ್ರಸಾದ್ ಈ ಗೀತೆಯನ್ನು ಬರೆದಿದ್ದಾರೆ. ಈ ಹಾಡು ಅಕ್ಕ ಮತ್ತು ತಂಗಿಯ ಭಾವನಾತ್ಮಕ ಸನ್ನಿವೇಶದಲ್ಲಿ ಸ್ಥಳ ಪಡೆದಿದೆ. ಇದನ್ನೂ ಓದಿ : ಏನಾಯ್ತು ಅಮಿತಾಭ್ ಬಚ್ಚನ್ ಗೆ? ಆತಂಕದಲ್ಲಿ ಅಭಿಮಾನಿಗಳು

    ಅಲ್ಲದೇ ಶಿವರಾತ್ರಿ ಮುನ್ನ ದಿನವೇ ಸುನಿ ನಿರ್ದೇಶನದ ಹೊಸ ಸಿನಿಮಾದ ಪೋಸ್ಟರ್ ಮತ್ತು ನಾಯಕನ ಪರಿಚಯದ ಟೀಸರ್ ವೊಂದು ಬಿಡುಗಡೆ ಆಗಿದೆ. ಹೊಸ ಹುಡುಗನಿಗಾಗಿ ಸುನಿ ವಿಶೇಷ ಟೀಸರ್ ವೊಂದನ್ನು ತಯಾರಿಸಿ, ಆ ಮೂಲಕ ತಮ್ಮ ಸಿನಿಮಾದ ನಾಯಕನನ್ನು ಪರಿಚಯಿಸಿದ್ದಾರೆ. ಶಿವರಾತ್ರಿ ಒಂದು ದಿನ ಮುನ್ನವೇ ಈ ಟೀಸರ್ ಅಭಿಮಾನಿಗಳಿಗೆ ಇಷ್ಟವಾಗಿದೆ.

  • 8 ಮಂದಿಯ ಜೀವ ಉಳಿಸಿ ಪ್ರಾಣ ತ್ಯಾಗ ಮಾಡಿದ ವೀರ ರಾವಣ

    8 ಮಂದಿಯ ಜೀವ ಉಳಿಸಿ ಪ್ರಾಣ ತ್ಯಾಗ ಮಾಡಿದ ವೀರ ರಾವಣ

    ಚಂಡೀಗಢ: ವಿಜಯದಶಮಿಯ ಪ್ರಯುಕ್ತ ಅಮೃತಸರದ ಜೋದಾ ಪಾಟ್ಕರ್ ನಲ್ಲಿ ರಾಮಲೀಲಾ ಕಾರ್ಯಕ್ರಮ ನಡೆಯುತ್ತಿತ್ತು. ರಾವಣನ ವೇಷಧಾರಿಯಾದ 24 ವರ್ಷದ ದಲ್ಬೀರ್ ಸಿಂಗ್ ರೈಲು ಹಳಿಯ ಮೇಲೆ ನಿಂತಿದ್ದ ಜನರನ್ನ ದೂಡಿ ತನ್ನ ಪ್ರಾಣ ತ್ಯಾಗ ಮಾಡಿ 8 ಮಂದಿಯ ಜೀವವನ್ನ ಉಳಿಸಿದ್ದಾರೆ.

    ರಾಮಲೀಲಾ ಕಾರ್ಯಕ್ರಮವನ್ನ ವೀಕ್ಷಿಸಲು ಸಾವಿರಾರು ಮಂದಿ ಸೇರಿದ್ದರು. ರಾವಣ ದಹನ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ರೈಲಿನ ಹಳಿಯ ಮೇಲೆ ನಿಂತಿದ್ದ ಜನರ ಮೇಲೆ ರೈಲು ಬರುವುದನ್ನ ಗಮನಿಸಿದ ದಲ್ಬೀರ್ ಸಿಂಗ್, ಜನರನ್ನ ಹಳಿ ಬಿಟ್ಟು ಹೋಗುವಂತೆ ಕೂಗಿ ಹೇಳಿದ್ದಾರೆ. ಅಲ್ಲದೆ ಹಲವರನ್ನು ಹಳಿಯಿಂದ ಹೊರಗೆ ದೂಡಿದ್ದಾರೆ. ಆದರೆ ಕೊನೆಯಲ್ಲಿ ಹಳಿಯಿಂದ ಹೊರಬರಲಾಗದೇ ತಾವೇ ಪ್ರಾಣ ಕಳೆದುಕೊಂಡಿದ್ದಾರೆ.

    ಎಲ್ಲರ ಮೆಚ್ಚಿನ ಪಾತ್ರಧಾರಿಯಾದ ದಲ್ಬೀರ್ ಸಿಂಗ್, ಪ್ರತಿ ವರ್ಷ ರಾವಣ ವೇಷಧಾರಿಯಾಗಿ ಎಲ್ಲರನ್ನ ಮನರಂಜಿಸುತ್ತಿದ್ದರು ಎಂದು ಅವರ ಸ್ನೇಹಿತ ರಾಜೇಶ್ ಹೇಳಿದ್ದಾರೆ.

    ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾರ್ಯಕ್ರಮ ಆಯೋಜಿಸಿದ್ದ ಸ್ಥಳದ ಸಮೀಪವೇ ರೈಲು ಮಾರ್ಗ ಹಾದುಹೋಗಿತ್ತು. ಜನ ರೈಲು ಹಳಿಯ ಮೇಲೆ ನಿಂತು ಕಾರ್ಯಕ್ರಮ ವೀಕ್ಷಿಸುತ್ತಿದ್ದರು. ಕಾರ್ಯಕ್ರಮದಲ್ಲಿ ದೊಡ್ಡದಾದ ಪಟಾಕಿಗಳನ್ನು ಹೊಡೆಯುತ್ತಿದ್ದರಿಂದ ರೈಲು ಬರುತ್ತಿರುವ ಶಬ್ಧ ಯಾರಿಗೂ ಕೇಳಿಸಲಿಲ್ಲ. ಒಮ್ಮೆಲೆ ರೈಲು ಜನರ ಮೇಲೆಯೇ ಹರಿದಿತ್ತು. ಸ್ಥಳದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಸುಮಾರು 700 ಮಂದಿ ಇದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: 20 ಜನರ ಪ್ರಾಣ ಉಳಿಸಿ ಗೋಕಾಕ್‍ನ ವೀರಯೋಧ ಹುತಾತ್ಮ!

    ಈ ದುರಂತದಲ್ಲಿ ದಲ್ಬೀರ್ ಸಿಂಗ್ ಸೇರಿದಂತೆ 61 ಮಂದಿ ಮೃತಪಟ್ಟಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಳಿಪಟ ನಿರ್ಮಾಣ ಮಾಡುವ ದಲ್ಬೀರ್ ಸಿಂಗ್ ಅವರು ತಮ್ಮ ಮನೆಯಲ್ಲಿ ಅಂಗಡಿ ಹೊಂದಿದ್ದು, ತಾಯಿ, ಪತ್ನಿ ಹಾಗೂ 8 ತಿಂಗಳ ಮಗುವನ್ನು ಅಗಲಿದ್ದಾರೆ. ಈ ದುರಂತದ ನಂತರ ತನ್ನ ಸೊಸೆಗೆ ಸರ್ಕಾರ ಉದ್ಯೋಗ ನೀಡಲಿ ಎಂದು ದಲ್ಬೀರ್ ಸಿಂಗ್ ತಾಯಿ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರಿಗೆ ಬೇಡಿಕೆ ಇಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv