Tag: ವೀರಕಪುತ್ರ ಶ್ರೀನಿವಾಸ್

  • ವಿಷ್ಣು ಸ್ಮಾರಕ ಉದ್ಘಾಟನೆಗೆ ಭರ್ಜರಿ ಸಿದ್ಧತೆ : ಬೆಂಗಳೂರು ಟು ಮೈಸೂರು ಕಟೌಟ್ ಜಾತ್ರೆ

    ವಿಷ್ಣು ಸ್ಮಾರಕ ಉದ್ಘಾಟನೆಗೆ ಭರ್ಜರಿ ಸಿದ್ಧತೆ : ಬೆಂಗಳೂರು ಟು ಮೈಸೂರು ಕಟೌಟ್ ಜಾತ್ರೆ

    ಮೈಸೂರಿನಲ್ಲಿ ನಿರ್ಮಾಣವಾದ ಮೇರುನಟ ವಿಷ್ಣುವರ್ಧನ್ (Vishnuvardhan) ಅವರ ಸ್ಮಾರಕ (Memorial)  ಜನವರಿ 29 ರಂದು ಉದ್ಘಾಟನೆಗೊಳ್ಳಲಿದ್ದು, ಅಭಿಮಾನಿಗಳು ಈ ಸಡಗರವನ್ನು ಕಣ್ತುಂಬಿಕೊಳ್ಳಲು ಭರ್ಜರಿಯಾಗಿಯೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಡಾ.ವಿಷ್ಣುಸೇನಾ ಸಮಿತಿಯು ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಲಕ್ಷಾಂತರ ಅಭಿಮಾನಿಗಳು ಅಂದು ಆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

    ಈ ಕುರಿತು ಡಾ.ವಿಷ್ಣುಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ (Veerakaputra Srinivas) ಮಾತನಾಡಿ, ‘ಸ್ಮಾರಕ ಉದ್ಘಾಟನೆ ಅನ್ನುವುದು ಅಭಿಮಾನಿಗಳ ಪಾಲಿಗೆ ಜಾತ್ರೆ ಇದ್ದಂತೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಹದಿಮೂರು ವರ್ಷ ಕಾದಿದ್ದೇವೆ. ಹಾಗಾಗಿ ನಮ್ಮ ನಮ್ಮ ಊರುಗಳಿಂದ ಸಂಭ್ರಮ ಶುರುವಾಗಿ ಮೈಸೂರುವರೆಗೂ ಅದು ತಲುಪಲಿದೆ. ಜನವರಿ 29ರಂದು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಚಿತ್ರೋದ್ಯಮದಲ್ಲಿ ಹಿಂದೆ ಆಗಿರಬಾರದು, ಮುಂದೆ ಆಗಬಾರದು ಆ ರೀತಿಯಲ್ಲಿ ಪ್ಲ್ಯಾನ್ ಮಾಡಲಾಗಿದೆ’ ಎನ್ನುತ್ತಾರೆ. ಇದನ್ನೂ ಓದಿ: ರವಿಚಂದ್ರನ್ ಸಿನಿಮಾದ ಹೆಸರು ಮತ್ತು ನಾಯಕಿ ಬದಲು

    ಜನವರಿ 29 ರಂದು ಬೆಳಗ್ಗೆ ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಪುಣ್ಯಭೂಮಿಯಿಂದ ನೂರಾರು ವಾಹನಗಳು ಮೈಸೂರಿಗೆ ಹೊರಡುತ್ತವೆ. ವಿಷ್ಣುವರ್ಧನ್ ಬಾವುಟ ಇರುವ ನೂರಾರು ಕಾರುಗಳು ಪಥಸಂಚಲನದಂತೆ ಬೆಂಗಳೂರಿನಿಂದ ಮೈಸೂರುನತ್ತ ಸಾಗಲಿವೆ. ಅಲ್ಲದೇ, ಬೆಂಗಳೂರಿನಿಂದ ಮೈಸೂರುವರೆಗೂ ಕಟೌಟ್ ಗಳು ರಸ್ತೆಯುದ್ದಕ್ಕೂ ರಾರಾಜಿಸಲಿವೆ. ಮೈಸೂರಿನಲ್ಲಿ ಕುಂಭಮೇಳ, ಜಾನಪದ ವಾದ್ಯಗಳ ಮೆರವಣಿಗೆ, ಜಾನಪದ ಕುಣಿತ, ದೀಪೋತ್ಸವ ಹೀಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

    ಮೈಸೂರಿಗೆ ಬರುವ ಅಭಿಮಾನಿಗಳಿಗಾಗಿ ವಿಷ್ಣುಸೇನಾ ಸಮಿತಿಯಿಂದಲೇ ಅನ್ನ ಸಂತರ್ಪಣೆ ಮಾಡಲಾಗುತ್ತಿದ್ದು ಕಟೌಟ್, ವಿಷ್ಣು ದೀಪೋತ್ಸವ, ವಿವಿಧ ಪೋಸ್ಟರ್ಸ್, ಕುಂಭಮೇಳ, ವಾಹನ ಪಥಸಂಚಲನ ಇತ್ಯಾದಿ ಕಾರ್ಯಕ್ರಮಗಳನ್ನು ಅಂದು ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ ವೀರಕಪುತ್ರ ಶ್ರೀನಿವಾಸ್. ಜನವರಿ 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಮಾರಕವನ್ನು ಲೋಕಾಪರ್ಣೆ ಮಾಡಲಿದ್ದು, ಚಿತ್ರೋದ್ಯಮದ ಹಲವು ಗಣ್ಯರು ಕೂಡ ಭಾಗಿಯಾಗಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Exclusive- ‘ಮೇರುನಟ’ ವಿಷ್ಣುವರ್ಧನ್ ಸಮಾಧಿ ನೆಲಸಮ ಆಗತ್ತಾ? ಆತಂಕ ಹೊರಹಾಕಿದ ಅಭಿಮಾನಿ

    Exclusive- ‘ಮೇರುನಟ’ ವಿಷ್ಣುವರ್ಧನ್ ಸಮಾಧಿ ನೆಲಸಮ ಆಗತ್ತಾ? ಆತಂಕ ಹೊರಹಾಕಿದ ಅಭಿಮಾನಿ

    ನ್ನಡ ಸಿನಿಮಾ ರಂಗದ ಮೇರುನಟ ಡಾ.ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಆಗುತ್ತಾ? ಇಂತಹ ಆತಂಕದ ಮಾಹಿತಿಯನ್ನು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಹೊರಹಾಕಿದ್ದಾರೆ. ಈ ಕುರಿತು ಅವರು ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಯಾವುದೇ ಕಾರಣಕ್ಕೂ ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲಿರುವ ಯಜಮಾನರ (ವಿಷ್ಣುವರ್ಧನ್) ಸಮಾಧಿಯನ್ನು ನೆಲಸಮ ಮಾಡುವುದಕ್ಕೆ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ.

    ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿಯ ಜಾಗದ ಕುರಿತು ಕಳೆದ ಹದಿಮೂರು ವರ್ಷಗಳಿಂದ ವಿವಾದ ಕೋರ್ಟ್ ನಲ್ಲಿದೆ. ಹಾಗಾಗಿ ಹಿರಿಯ ನಟ ಬಾಲಣ್ಣ ಕುಟುಂಬ ಹಾಗೂ ವಿಷ್ಣು ಅಭಿಮಾನಿಗಳ ನಡುವೆ ತಿಕ್ಕಾಟವೂ ಹಲವು ವರ್ಷಗಳಿಂದ ನಡೆಯುತ್ತಾ ಬಂದಿದೆ. ಕೋರ್ಟ್ ನಲ್ಲಿರುವ ಕೇಸ್ ಅಂತಿಮ ಹಂತಕ್ಕೆ ತಲುಪಿದ್ದು, ಬಾಲಣ್ಣ ಕುಟುಂಬದವರು ವಿಷ್ಣು ಸಮಾಧಿಯನ್ನು ನೆಲಸಮ ಮಾಡುವಂತೆ ಮಾನ್ಯ ನ್ಯಾಯಾಲಯಕ್ಕೆ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಷಯವನ್ನೇ ವೀರಕಪುತ್ರ ಶ್ರೀನಿವಾಸ್ ತಮ್ಮ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.

    ವೀರಕಪುತ್ರ ಶ್ರೀನಿವಾಸ್ ವಿಡಿಯೋದಲ್ಲಿ ಹೇಳಿದಂತೆ, ‘ಬಾಲಣ್ಣ ಕುಟುಂಬದವರಾದ ಕಾರ್ತಿಕ್ ಯಜಮಾನರ ಪುಣ್ಯಭೂಮಿಗೆ ಸಾಕಷ್ಟು ತೊಂದರೆ ಕೊಡುತ್ತಿದ್ದಾರೆ. ವಿಷ್ಣುವರ್ಧನ್ ಕುಟುಂಬದವರಿಗೆ ಈ ಜಾಗವೇ ಇಷ್ಟವಿಲ್ಲವೆಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಅಭಿಮಾನಿಗಳು ಪುಣ್ಯಭೂಮಿಗೆ ಕಾಲಿಡದಂತೆ ಪೊಲೀಸ್ ಠಾಣೆಗೆ ದೂರು ನೀಡುತ್ತಾರೆ. ಇಲ್ಲಿಗೆ ನೂರು ಜನರೂ ಬರುವುದಿಲ್ಲ ಎಂದು ಸುಳ್ಳುಗಳನ್ನು ಹರಡುತ್ತಿದ್ದಾರೆ. ಹೀಗೆಯೇ ಸುಳ್ಳು ಹೇಳಿದರೆ, ನಾವೂ ಕೂಡ ಅವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಹಾಗಂತ ಅಭಿಮಾನ ಸ್ಟುಡಿಯೋದ ಜಾಗ, ಅವರ ಪಿತ್ರಾರ್ಜಿತ ಆಸ್ತಿಲ್ಲ. ಸರಕಾರ ನೀಡಿದ್ದು. ಈ ಕುರಿತು ನಾವೂ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

    ಮುಂದುವರೆದು ಮಾತನಾಡಿರುವ ಶ್ರೀನಿವಾಸ್, ‘ವಿಷ್ಣುವರ್ಧನ್ ಪುಣ್ಯಭೂಮಿಗೆ ಕೇಳುತ್ತಿರುವುದು ಕೇವಲ ಹತ್ತು ಗುಂಟೆ ಜಾಗ. ಈ ಹಿಂದೆ ಬಾಲಣ್ಣ ಕುಟುಂಬದವರು ಜಿಲ್ಲಾಧಿಕಾರಿಗಳ ಎದುರು ಹತ್ತು ಗುಂಟೆ ಜಾಗ ಕೊಡುವುದಾಗಿ ಹೇಳಿದ್ದರು. ಪತ್ರವನ್ನೂ ಕೊಟ್ಟಿದ್ದರು. ಈಗ ಬೇರೆ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ನಾವು ಪುಣ್ಯಭೂಮಿಯನ್ನು ಉಳಿಸಿಕೊಳ್ಳಲು ಎಂತಹ ಹೋರಾಟಕ್ಕೂ ಸಿದ್ಧ. ಈ ಕುರಿತು ಬೃಹತ್ ಪ್ರತಿಭಟನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ಹೇಳಿದ್ದಾರೆ.

    ಇದೇ ವಿಷಯವಾಗಿ ವಿಷ್ಣುವರ್ಧನ್ ಅಳಿಯ ಅನಿರುದ್ಧ ಕೂಡ ವಿಡಿಯೋ ಸಂದೇಶವೊಂದನ್ನು ಕಳುಹಿಸಿದ್ದು, ‘ಅಭಿಮಾನ ಸ್ಟುಡಿಯೋದಲ್ಲೇ ಸಮಾಧಿ ಇರಬೇಕು ಎನ್ನುವುದು ನಮ್ಮ ಕುಟುಂಬದ ಆಸೆ. ಅಭಿಮಾನಿಗಳಿಗೆ ಪೂಜೆ ಸಲ್ಲಿಸಲು, ಅಲ್ಲಿಗೆ ಭೇಟಿ ನೀಡಲು ಬಾಲಣ್ಣ ಕುಟುಂಬ ಅನುಮತಿ ಕೊಡಬೇಕು. ಯಾವುದೇ ಕಾರಣಕ್ಕೂ ನೆಲಸಮ ಮಾಡುವಂತಹ ನಿರ್ಧಾರ ತಗೆದುಕೊಳ್ಳಬಾರದು. ನಮ್ಮ ಕುಟುಂಬ ಕೂಡ ಈ ವಿಷಯದಲ್ಲಿ ಅಭಿಮಾನಿಗಳ ಜೊತೆ ಇರುತ್ತದೆ’ ಎಂದು ಅವರು ಹೇಳಿದ್ದಾರೆ.

    ಅಭಿಮಾನಿ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಉಳಿಸಿಕೊಳ್ಳಲು ಲಕ್ಷಾಂತರ ಅಭಿಮಾನಿಗಳು ಮತ್ತು ವಿಷ್ಣುವರ್ಧನ್ ಕುಟುಂಬ ಪಣತೊಟ್ಟಿದೆ. ಆದರೆ, ಬಾಲಣ್ಣ ಕುಟುಂಬ ಇದಕ್ಕೆ ಅವಕಾಶ ಕೊಡುತ್ತಾ? ಮತ್ತು ಕೋರ್ಟ್ ಈ ಕುರಿತು ಯಾವ ರೀತಿಯ ತೀರ್ಪು ಕೊಡಬಹುದು ಎನ್ನುವ ಕುತೂಹಲ ಎಲ್ಲರದ್ದು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟ ವಿಷ್ಣುವರ್ಧನ್ ಅಭಿಮಾನಿಗಳ ಆದರ್ಶ ಯಾತ್ರೆ: ಆಸ್ಟ್ರೇಲಿಯಾ ವಾಸಿ ಬಲರಾಮ್ ನೇತೃತ್ವ

    ನಟ ವಿಷ್ಣುವರ್ಧನ್ ಅಭಿಮಾನಿಗಳ ಆದರ್ಶ ಯಾತ್ರೆ: ಆಸ್ಟ್ರೇಲಿಯಾ ವಾಸಿ ಬಲರಾಮ್ ನೇತೃತ್ವ

    ಆಸ್ಟ್ರೇಲಿಯಾದಲ್ಲಿ ವಾಸವಿರುವ ಅನಿವಾಸಿ ಭಾರತೀಯ ಬಲರಾಮ್ ತಮ್ಮ ನೆಚ್ಚಿನ ನಟ ವಿಷ್ಣುವರ್ಧನ್ ಅವರಿಗಾಗಿ ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಈ ಪಾದಯಾತ್ರೆಗೆ ‘ಆದರ್ಶ ಯಾತ್ರೆ’ ಎಂದು ಹೆಸರಿಟ್ಟಿದ್ದು, ವಿಷ್ಣುವರ್ಧನ್ ಅವರ ಸಾಕಷ್ಟು ಅಭಿಮಾನಿಗಳು ಅವರೊಂದಿಗೆ ಹೆಜ್ಜೆ ಹಾಕಲಿದ್ದಾರೆ. ಬಲರಾಮ್ ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಿದರೆ, ವಿಷ್ಣು ಅಭಿಮಾನಿಗಳು ರಾಜ್ಯದ ನಾನಾ ಭಾಗಗಳಿಂದ ಬೆಂಗಳೂರಿಗೆ ಬರಲಿದ್ದಾರೆ.

    ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿರುವ ಡಾ.ವಿಷ್ಣುಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ‘ಡಾ.ವಿಷ್ಣುವರ್ಧನ್ ಹೆಸರಿನಲ್ಲಿ ಆದರ್ಶ ಯಾತ್ರೆ ಪ್ರಾರಂಭಿಸಿದ್ದು, ನಾಳೆ (ಡಿ.25) ಬೆಳಗ್ಗೆ ಏಳು ಗಂಟೆಗೆ ಮೈಸೂರಿನ ಕೋರ್ಟ್ ಆವರಣದಿಂದ ಯಾತ್ರೆ ಪ್ರಾರಂಭವಾಗುತ್ತದೆ. ಬಲರಾಮ್ ಅವರು ಇದರ ನೇತೃತ್ವವಹಿಸಿದ್ದಾರೆ. ಜೊತೆಗೆ ವಿಷ್ಣು ಸೇನಾನಿಗಳು ಕೂಡ ಜೊತೆಯಾಗುತ್ತಿದ್ದಾರೆ. ಇದು ಐದು ದಿನಗಳ ಕಾಲ ನಡೆಯುವ ಯಾತ್ರೆಯಾಗಿದ್ದು ಡಿ.29ಕ್ಕೆ ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣು ಅವರ ಪುಣ್ಯಭೂಮಿಯಲ್ಲಿ ಮುಕ್ತಾಯಗೊಳ್ಳಲಿದೆ. ಪ್ರತಿ ವರ್ಷವೂ ಇದನ್ನು ನಡೆಸುವ ಉದ್ದೇಶ ಹೊಂದಲಾಗಿದೆ’ ಎಂದರು. ಇದನ್ನೂ ಓದಿ: ‘ಪುಷ್ಪಾ 2’ ಟೀಮ್ ಸೇರಿಕೊಂಡ ನಟಿ ಸಾಯಿ ಪಲ್ಲವಿ: ರಶ್ಮಿಕಾ ಮಂದಣ್ಣ ಪಾತ್ರವೇನು?

    ಇಂಥದ್ದೊಂದು ಆದರ್ಶ ಯಾತ್ರೆ ಶುರು ಮಾಡುವುದಕ್ಕೆ ಕಾರಣವೂ ಇದೆ. ವಿಷ್ಣುವರ್ಧನ್ ಅವರು ಸಿನಿಮಾ ರಂಗಕ್ಕೆ ಬಂದು ಡಿ.30ಕ್ಕೆ ಐವತ್ತು ವರ್ಷಗಳು ತುಂಬುತ್ತಿವೆ. ಅಲ್ಲದೇ, ಅವತ್ತು ಅವರ ಪುಣ್ಯಸ್ಮರಣೆ ಕೂಡ. ನೆಚ್ಚಿನ ನಟನನ್ನು ಸ್ಮರಿಸುವ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಿಸುವ ಉದ್ದೇಶ ಈ ಯಾತ್ರೆಯ ಹಿಂದಿದೆ ಎನ್ನುವುದು ವಿಷ್ಣು ಸೇನಾನಿಗಳ ಮಾತು. ಅಲ್ಲದೇ, ಪ್ರತಿ ವರ್ಷವೂ ವಿಷ್ಣುವರ್ಧನ್ ಅವರ ಹೆಸರಿನಲ್ಲಿ ಆರೋಗ್ಯಕ್ಕಾಗಿ ನಡೆಯಿರಿ ಎನ್ನುವ ಸಂಕಲ್ಪವನ್ನು ಇದು ಹೊಂದಿದೆಯಂತೆ.

    ಆದರ್ಶ ಯಾತ್ರೆಯನ್ನು ಯಶಸ್ವಿಗೊಳಿಸಲು ರಾಜ್ಯದ ನಾನಾ ಮೂಲೆಗಳಿಂದ ವಿಷ್ಣುವರ್ಧನ್ ಅಭಿಮಾನಿಗಳು ತಾವಿದ್ದ ಸ್ಥಳದಿಂದಲೇ ಯಾತ್ರೆಯನ್ನು ಆರಂಭಿಸುತ್ತಿದ್ದು, ಎಲ್ಲರೂ ಡಿಸೆಂಬರ್ 29 ರಂದೇ ಯಾತ್ರೆಯನ್ನು ಮುಗಿಸಲಿದ್ದಾರೆ. ಡಿ.30ಕ್ಕೆ ಪುಣ್ಯಭೂಮಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಆ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಕೋಟಿಗೊಬ್ಬ’ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್

    ‘ಕೋಟಿಗೊಬ್ಬ’ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್

    ಡಾ.ವಿಷ್ಣು ಸೇನಾ ಸಮಿತಿಯು (Vishnusena Samithi) ಸತತ ಹತ್ತು ವರ್ಷಗಳಿಂದ ಹೊರತರುತ್ತಿರುವ ‘ಕೋಟಿಗೊಬ್ಬ ಕ್ಯಾಲೆಂಡರ್’ (Kotigobba Calender) ಇಂದು ಬೆಂಗಳೂರಿನ ಲಲಿತ ಕಲಾ ಅಕಾಡೆಮಿಯ ಆವರಣದಲ್ಲಿ ಬಿಡುಗಡೆ ಆಯಿತು. ಪ್ರತಿ ವರ್ಷವೂ ವಿಭಿನ್ನ, ವಿಶೇಷ ಶೈಲಿಯಲ್ಲೇ ಮೂಡಿಬರುತ್ತಿರುವ ಈ ಕ್ಯಾಲೆಂಡರ್‌ಗೆ ದಶಕದ ಸಂಭ್ರಮವಾಗಿದ್ದರಿಂದ, ಈ ಬಾರಿ ಮತ್ತಷ್ಟು ವಿಭಿನ್ನತೆಯಿಂದ ಕ್ಯಾಲೆಂಡರ್ ಅನ್ನು ರೂಪಿಸಲಾಗಿದೆ. ನಾಡಿನ ಸುಪ್ರಸಿದ್ಧ ಕಲಾವಿದರಾದ ಬಾಗೂರು ಮಾರ್ಕಂಡೇಯ ಮತ್ತು ತಂಡ ಈ ಕ್ಯಾಲೆಂಡರ್‌ಗೆ ಚಿತ್ರಬಿಡಿಸಲೆಂದೇ ಕಲಾಶಿಬಿರ ಮಾಡಿ, ಹನ್ನೆರಡು ಚಿತ್ರಗಳನ್ನು ಬಿಡಿಸಲಾಗಿದ್ದು, ಹನ್ನೆರಡು ಚಿತ್ರಗಳೂ ಒಂದೊಂದು ಕಾನ್ಸೆಪ್ಟ್ ಹೊಂದಿರುವುದು ವಿಶೇಷ.

    ಕ್ಯಾಲೆಂಡರ್ ತಯಾರಿಕೆ ಮತ್ತು ವಿನ್ಯಾಸದ ಕುರಿತು ಮಾತನಾಡಿದ ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್(Virakaputra Srinivas)  ʻಕೋಟಿಗೊಬ್ಬʼ ಕ್ಯಾಲೆಂಡರ್ ಪ್ರಾರಂಭ ಮಾಡಿದ್ದು 2011ರಲ್ಲಿ. ಆಗ ಸಾವಿರ ಕ್ಯಾಲೆಂಡರ್ ಮುದ್ರಣ ಮಾಡಲಾಗಿತ್ತು. ಮಾರಾಟವಾಗಿದ್ದು ಕೇವಲ 200 ಮಾತ್ರ. ಆದರೆ, ಈಗ ಇಪ್ಪತ್ತೈದು ಸಾವಿರ ಕ್ಯಾಲೆಂಡರ್ ಮುದ್ರಣವಾಗುತ್ತಿವೆ. ದಿವಂಗತ ವಿಷ್ಣುವರ್ಧನ್ (Vishnuvardhan) ಮೇಲಿರುವ ಅಭಿಮಾನಕ್ಕಾಗಿ ಮುದ್ರಣಕ್ಕೆ ಖರ್ಚಾದ ಹಣಕ್ಕಿಂತಲೂ ಕಡಿಮೆ ದರದಲ್ಲಿ ಮನೆಮನೆಗೂ ತಲುಪಿಸಲಾಗುತ್ತಿದೆ’ ಎಂದರು. ಹೊಸವರ್ಷದ ಕ್ಯಾಲೆಂಡರ್‌ನಲ್ಲಿ ವಿಷ್ಣುವರ್ಧನ್ ಅವರನ್ನು ಹೊಸ ರೂಪದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದ್ದು ಯುವಕರ ಪ್ರತಿನಿಧಿ, ಮಾತೃಪ್ರೇಮಿ, ಸಿಂಹರೂಪಿ, ಕನ್ನಡಪರ ಹೋರಾಟಗಾರ, ದಾನವೀರ ಶೂರ, ಮಹಿಳಾಪರ, ವೃಕ್ಷಪ್ರೇಮಿ, ಸಂತ, ರೈತ, ಸಂಗೀತ ಪ್ರೇಮಿ, ದೇಶಭಕ್ತ, ವಿಷ್ಣುವರ್ಧನ್ ಹಾಗೂ ಕಟೌಟ್ ಜಾತ್ರೆಯ ಕಾನ್ಸೆಪ್ಟ್ ಗಳನ್ನು ಇದು ಹೊಂದಿದೆ. ಮತ್ತೊಂದು ವಿಶೇಷವೆಂದರೆ `ಸಿಂಬಲ್ ಆಫ್ ವಿಷ್ಣು ಕುಲ’ ಎನ್ನುವ ಸ್ಲೋಗನ್ ಆಗಿಸುವ ಚಿತ್ರ ಕೂಡ ಇದೆ. ಇದನ್ನೂ ಓದಿ: ನನ್ನ ಮನಸಾಕ್ಷಿ ಒಪ್ಪುತ್ತಿಲ್ಲ: ಗುರೂಜಿಗೆ ಕಳಪೆ ಎಂದ ಅಮೂಲ್ಯ

    ಈ ಕ್ಯಾಲೆಂಡರ್ ಬಿಡುಗಡೆಗಾಗಿ ವಿಷ್ಣುವರ್ಧನ್ ಅವರ ಅಪ್ಪಟ ಅಭಿಮಾನಿ ಬಾಲಣ್ಣ ಆಸ್ಟ್ರೇಲಿಯಾದಿಂದ ಆಗಮಿಸಿದ್ದರು. ಕ್ಯಾಲೆಂಡರ್ ಕುರಿತು ಮಾತನಾಡಿದ ಅವರು ‘ಕ್ಯಾಲೆಂಡರ್ ನಲ್ಲಿ ಅದ್ಭುತ ಲೋಕವೊಂದು ತೆರೆದುಕೊಂಡಿದೆ. ವಿಷ್ಣುವರ್ಧನ್ ಅವರು ಪ್ರತಿ ಪುಟಪುಟದಲ್ಲೂ ಜೀವಿಸಿದ್ದಾರೆ. ವೀರಕಪುತ್ರ ಶ್ರೀನಿವಾಸ್ ಅವರು ದಾದಾ ಅವರ ಕನಸುಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದು ಹೆಮ್ಮೆ ಅನಿಸುತ್ತಿದೆ’ ಅಂದರು.

    ಅತಿಥಿಯಾಗಿ ಆಗಮಿಸಿದ್ದ ಮತ್ತು ಕ್ಯಾಲೆಂಡರ್ ನಲ್ಲಿ ಕೆಲವು ಚಿತ್ರಗಳನ್ನೂ ಬಿಡಿಸಿರುವ ಸುನೀಲ್ ಮಿಶ್ರ ಮಾತನಾಡಿ ‘ವಿಷ್ಣುವರ್ಧನ್ ಅವರ ವಿವಿಧ ಭಂಗಿಯನ್ನು ಕಲ್ಪಿಸಿಕೊಂಡು ಚಿತ್ರ ಬಿಡಿಸುತ್ತಿದ್ದೆವು, ವಿಷ್ಣುವರ್ಧನ್ ಅವರನ್ನು ಈ ರೀತಿ ಕೆಲಸಗಳ ಮೂಲಕ ಜೀವಂತವಾಗಿಸುತ್ತಿರುವುದು ಖುಷಿ ತಂದಿದೆ. ಕ್ಯಾಲೆಂಡರ್ ನಲ್ಲಿ ಕೇವಲ ಅಂಕಿಗಳು ಮಾತ್ರವಿಲ್ಲ, ಭಾವಗಳು ಅಲ್ಲಿವೆ. ಒಂದೊಂದು ಪುಟಕ್ಕೂ ಕಾನ್ಸೆಪ್ಟ್ ಮಾಡಿಯೇ ರೆಡಿ ಮಾಡಲಾಗಿದೆ. ಬಳಸಲಾದ ಬಣ್ಣ ಮತ್ತು ಭಾವಕ್ಕೂ ಒಂದೊಂದು ಅರ್ಥವಿದೆ. ಒಂದು ರೀತಿಯಲ್ಲಿ ವಿಷ್ಣುವರ್ಧನ್ ಅವರ ಜೀವನ ಜರ್ನಿಯೇ ಇದರಲ್ಲಿದೆ ಅಂದರು.

    ಈ ವಿಶೇಷ ಕ್ಯಾಲಂಡರ್‌ಗಾಗಿ ಬಾಗೂರು ಮಾರ್ಕಂಡೇಯ, ಸುನಿಲ್ ಮಿಶ್ರಾ, ಕೀರ್ತಿ ವರ್ಮಾ, ಮಂಜು, ವಿನಯ್ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಕಲಾವಿದರ ಶಿಬಿರದಲ್ಲಿ ಭಾಗಿಯಾಗಿ ಚಿತ್ರಗಳನ್ನು ಬಿಡಿಸಿದ್ದು ವಿಶೇಷ.

    Live Tv
    [brid partner=56869869 player=32851 video=960834 autoplay=true]

  • ಸುದೀಪ್ ಪ್ರೇರಣೆಯಿಂದ ಗೋವು ದತ್ತು ಪಡೆದ ಯುವ ಉದ್ಯಮಿ ವೀರಕಪುತ್ರ ಶ್ರೀನಿವಾಸ್

    ಸುದೀಪ್ ಪ್ರೇರಣೆಯಿಂದ ಗೋವು ದತ್ತು ಪಡೆದ ಯುವ ಉದ್ಯಮಿ ವೀರಕಪುತ್ರ ಶ್ರೀನಿವಾಸ್

    ಕಿಚ್ಚ ಸುದೀಪ್ ನಿನ್ನೆಯಷ್ಟೇ ಗೋಪೂಜೆ ನೆರವೇರಿಸಿ 31 ಗೋವುಗಳನ್ನು ದತ್ತು ಪಡೆದಿದ್ದರು. ಸುದೀಪ್ ಅವರ ಈ ಕೆಲಸದ ಪ್ರೇರಣೆಯಿಂದಾಗಿ ಯುವ ಉದ್ಯಮಿ, ಡಾ.ವಿಷ್ಣುಸೇನಾ ಸಮಿತಿಯ ಅಧ್ಯಕ್ಷರೂ ಆಗಿರುವ ವೀರಕಪುತ್ರ ಶ್ರೀನಿವಾಸ್ ಕೂಡ ಗೋವುಗಳನ್ನು ದತ್ತು ಪಡೆದಿದ್ದಾರೆ. ಅಲ್ಲದೇ, ಇತರರು ಈ ಕೆಲಸಕ್ಕೆ ಮುಂದಾಗಿ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಚಿತ್ರನಟ ಸುದೀಪ್ ಹೇಳಿದ್ದಾರೆ. ನಿನ್ನೆ ತಮ್ಮ ನಿವಾಸದಲ್ಲಿ ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರೊಂದಿಗೆ ಗೋಪೂಜೆ ನೇರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ವೈಷ್ಣವಿ ಜೊತೆಗಿನ ವಿದ್ಯಾಭರಣ್ ಫೋಟೋ ವೈರಲ್ ಬೆನ್ನಲ್ಲೇ ‘ರಹಸ್ಯ’ ನಟಿ ಗಂಭೀರ ಆರೋಪ!

    ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿ ಹೆಚ್ಚಿಸಿದೆ. ನನ್ನನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಪ್ರಭು ಚವ್ಹಾಣ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಸುದೀಪ್ ಮನವಿ ಮಾಡಿದ್ದರು. ಈ ಮನವಿಯ ಬೆನ್ನಲ್ಲೇ ವೀರಕಪುತ್ರ ಅವರು ಐದು ಹಸುಗಳನ್ನು ದತ್ತು ಪಡೆದು ಮಾದರಿಯಾಗಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಹುಟ್ಟುಹಬ್ಬದಂದು 11 ಗೋವು ದತ್ತು ಪಡೆದು, ತಮ್ಮ ಕನಸಿನ ಕೂಸಾದ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದಿದ್ದಾರೆ. ಸಚಿವ ಪ್ರಭು ಚವ್ಹಾನ್ ಕೂಡ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆದಿದ್ದಾರೆ.

    ಜಾನುವಾರುಗಳ ದತ್ತು ಯೋಜನೆಯಡಿ ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳ ಪ್ರತಿ ಜಾನುವಾರಿಗೆ ವಾರ್ಷಿಕ ರೂ.11,000/- (ರೂಪಾಯಿ ಹನ್ನೊಂದು ಸಾವಿರ ಮಾತ್ರ)ಗಳು, ಜಾನುವಾರುಗಳಿಗಾಗಿ ಆಹಾರ ಪೂರೈಕೆಗೆ ಯೋಜನೆಯಡಿ ಸಾರ್ವಜನಿಕರು ತಮ್ಮ ಜೀವನದ ವಿಶೇಷ ಸಂದರ್ಭಗಳಲ್ಲಿ (ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಇತ್ಯಾದಿ) ರಾಸುಗಳಿಗೆ ಒಂದು ದಿನಕ್ಕೆ ರೂ.70ಗಳು, ಗೋಶಾಲೆಗಳಿಗೆ ದೇಣಿಗೆ ಮತ್ತು ಗೋಶಾಲೆ ನಿರ್ವಹಣೆ ಯೋಜನೆಯಡಿ ಸಾರ್ವಜನಿಕರು ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳಿಗೆ ಕನಿಷ್ಠ ರೂ.10/- ಯಿಂದ ತಮ್ಮ ಶಕ್ತಾನುಸಾರ ಎಷ್ಟು ಬೇಕಾದರೂ ಮೂಲಭೂತ ಸೌಕರ್ಯ ಹಾಗೂ ಇತರೆ ವೆಚ್ಚಗಳಿಗಾಗಿ ದೇಣಿಗೆ ನೀಡಬಹುದು.

    Live Tv
    [brid partner=56869869 player=32851 video=960834 autoplay=true]

  • ಡಾ.ವಿಷ್ಣು ನಂತರ ಮರಳು ಶಿಲ್ಪದ ಗೌರವಕ್ಕೆ ಪಾತ್ರರಾದ ಕಿಚ್ಚ ಸುದೀಪ್

    ಡಾ.ವಿಷ್ಣು ನಂತರ ಮರಳು ಶಿಲ್ಪದ ಗೌರವಕ್ಕೆ ಪಾತ್ರರಾದ ಕಿಚ್ಚ ಸುದೀಪ್

    ಳೆದ ವರ್ಷ ಡಾ.ವಿಷ್ಣುವರ್ಧನ್ ಅವರ ಹುಟ್ಟು ಹಬ್ಬಕ್ಕೆ ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರು ನೆಚ್ಚಿನ ನಟನ ಮರಳು ಶಿಲ್ಪ ಮಾಡಿಸಿ, ಗೌರವ ಸೂಚಿಸಿದ್ದರು. ಇದೀಗ  ಆ ಉಡುಗೊರೆಯನ್ನು ಕಿಚ್ಚ ಸುದೀಪ್ ಅವರಿಗೆ ಸಲ್ಲುವಂತೆ ಮಾಡಿದ್ದಾರೆ. ಸುದೀಪ್ ಅವರ ಜನ್ಮ ದಿನಕ್ಕೆ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚನ ಮರಳು ಶಿಲ್ಪ ರಾರಾಜಿಸುತ್ತಿದೆ.

    ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.  ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿ: ಆರ್ಯವರ್ಧನ್ ಅಲ್ಲ, ಅವನ ಸಹೋದರನ ಪಾತ್ರದಲ್ಲಿ ಹರೀಶ್ ರಾಜ್

    ಈ ಶಿಲ್ಪವು 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಎಂದು ಶಿಲ್ಪಿ ತಿಳಿಸಿದ್ದಾರೆ. ಸುದೀಪ್ ಅವರ ಆಪ್ತರಾದ ವೀರಕಪುತ್ರ ಶ್ರೀನಿವಾಸ ಅವರು ಯಾವಫೋಟೋ ಬಳಸಬೇಕು ಮತ್ತು ಕನ್ನಡ ಬರವಣಿ ಹೇಗಿರಬೇಕು ಎಂಬ ಗೊಂದಲಕ್ಕೆ ಅಗತ್ಯವಿದ್ದ ಮಾಹಿತಿಯನ್ನು ನೀಡಿರುವುದನ್ನು ತಿಳಿಸಿದರು.

    ದಕ್ಷಿಣ ಭಾರತದಲ್ಲಿಯೇ ಈ ಮರಳು ಶಿಲ್ಪ ಗೌರವಕ್ಕೆ ಪಾತ್ರವಾಗುತ್ತಿರುವ ಎರಡನೇ ಕಲಾವಿದರೆಂದರೆ ಅದು ಕಿಚ್ಚ ಸುದೀಪ್ ಅವರು ಮಾತ್ರ. ಈ ಹಿಂದೆ 2020ರಲ್ಲಿ ಡಾ.ವಿಷ್ಣುವರ್ಧನ್ ಅವರ 70ನೇ ಜನ್ಮದಿನ ಪ್ರಯುಕ್ತ ಮರಳು ಶಿಲ್ಪದ ಗೌರವ ನೀಡಲಾಗಿತ್ತು ಎಂಬುದು ಬಿಟ್ಟರೆ ಇದುವರೆಗೆ ಯಾವುದೇ ದಕ್ಷಿಣ ಭಾರತದ ನಟರಿಗೆ ಈ ಗೌರವ ದಕ್ಕಿರಲಿಲ್ಲ. ಈಗ ಎರಡನೆಯವರಾಗಿ ಕಿಚ್ಚ ಸುದೀಪ್ ಅವರು ಅಂತಹ ಗೌರವವಕ್ಕೆ ಪಾತ್ರರಾಗಿದ್ದಾರೆ. ನಿನ್ನೆ ತಾನೇ ಅಂಚೆ ಇಲಾಖೆಯಿಂದ ವಿಶೇಷ ಲಕೋಟೆಯ ಗೌರವವನ್ನು ಪಡೆದಿದ್ದಂತಹ ಸುದೀಪ್ ಅವರು ಈಗ ಮರಳು ಶಿಲ್ಪ ಗೌರವಕ್ಕೂ ಪಾತ್ರರಾಗಿರುವುದು ಅವರ ಅಭಿಮಾನಿಗಳನ್ನು ಖುಷಿಯಿಂದ ಕುಣಿಯುವಂತೆ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಅಂಚೆ ಇಲಾಖೆಯಿಂದ ಕಿಚ್ಚನಿಗೆ ಗೌರವ:  ಸುದೀಪ್ ಅವರ ವಿಶೇಷ ಅಂಚೆ ಲಕೋಟೆ ಬಿಡುಗಡೆಗೆ ಸಿದ್ಧತೆ

    ಅಂಚೆ ಇಲಾಖೆಯಿಂದ ಕಿಚ್ಚನಿಗೆ ಗೌರವ: ಸುದೀಪ್ ಅವರ ವಿಶೇಷ ಅಂಚೆ ಲಕೋಟೆ ಬಿಡುಗಡೆಗೆ ಸಿದ್ಧತೆ

    ಭಾರತೀಯ ಅಂಚೆ ಇಲಾಖೆಯು ನಮ್ಮ ಪ್ರೀತಿಯ ಕಿಚ್ಚ ಸುದೀಪ್ ಅವರ “ವಿಶೇಷ ಅಂಚೆ ಲಕೋಟೆ” ಯನ್ನು ಹೊರ ತರುತ್ತಿದೆ. ಈ ಹಿಂದೆ ಡಾ.ವಿಷ್ಣುವರ್ಧನ್ ಅವರ ಅಂಚೆ ಲಕೋಟೆ ತರಲು ಹರಸಾಹಸ ಪಟ್ಟಿದ್ದ ಡಾ.ವಿಷ್ಣು ಸೇನಾಸಮಿತಿಯ ವೀರಕಪುತ್ರ ಶ್ರೀನಿವಾಸ್ ಅವರೇ, ಈ ಅಂಚೆ ಲಕೋಟೆ ಹಿಂದಿರುವ ಶಕ್ತಿ ಎನ್ನಲಾಗುತ್ತಿದೆ.

    ಭಾರತ ಸರ್ಕಾರದ ಅಂಚೆ ಇಲಾಖೆಯು ದೇಶದ ಮಹತ್ತರ ಘಟನೆಗಳನ್ನು, ಪ್ರಶಸ್ತಿಗಳನ್ನು ಅಥವಾ ವ್ಯಕ್ತಿಗಳ ಸಾಧನೆಗಳನ್ನು ನೂರಾರು ವರ್ಷ ದಾಖಲೆಯಾಗಿ ಉಳಿಸಬೇಕೆಂಬ ಕಾರಣಕ್ಕೆ   “ವಿಶೇಷ ಅಂಚೆ ಲಕೋಟೆಯನ್ನು ” ಬಿಡುಗಡೆ ಮಾಡುತ್ತದೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್

    ಅದೇ ಪ್ರಕಾರ 25ವರ್ಷಗಳ ಸಿನಿ ಜರ್ನಿಯನ್ನು ಪೂರ್ಣಗೊಳಿಸಿರುವ ರಾಷ್ಟ್ರತಾರೆ ಸುದೀಪ್ ಅವರ ಸಾಧನೆಯನ್ನು ಸಹ ಭಾರತೀಯ ಅಂಚೆ ಇಲಾಖೆ ದಾಖಲೆ ಮಾಡುತ್ತಿದೆ.  ಆ ನಿಮಿತ್ತ ಇಂದು ಅಂಚೆ ಇಲಾಖೆಯ ಅಧೀಕ್ಷರಾದ ಶ್ರೀ ಮಾದೇಶ್ ಅವರು ಕಿಚ್ಚ ಸುದೀಪ್ ಅವರ ಮನೆಗೆ ಆಗಮಿಸಿ ಅವರಿಂದ NOC ಯನ್ನು ಪಡೆದರು ಮತ್ತು ಬಿಡುಗಡೆ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಿದರು. ಈ ವಿಶೇಷ ಅಂಚೆ ಲಕೋಟೆಯ ಬಿಡುಗಡೆ ಸಮಾರಂಭವು ಶೀಘ್ರದಲ್ಲಿಯೇ ನೆರವೇರಲಿದೆ.

    ಕಿಚ್ಚ ಸುದೀಪ್ ಅವರ ಸಾಧನೆಗಳನ್ನು ಗುರುತಿಸಿ “ವಿಶೇಷ ಅಂಚೆ ಲಕೋಟೆ” ಮೂಲಕ ಗೌರವ ಸಲ್ಲಿಸುತ್ತಿರುವ  ಭಾರತೀಯ ಅಂಚೆ ಇಲಾಖೆಯನ್ನು ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಮತ್ತು ಕನ್ನಡ ಮನಸುಗಳು ಸಾಮಾಜಿಕ ಜಾಲತಾಣದಲ್ಲಿ ಹೃದಯತುಂಬಿ ಶ್ಲಾಘಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಟ ರಮೇಶ್ ಅರವಿಂದ್ ಬರೆದ ಪುಸ್ತಕವನ್ನು ಬಿಡುಗಡೆ ಮಾಡಿದ ಕಿಚ್ಚ ಸುದೀಪ್ : ರಮೇಶ್ ಸೇರಿ ಹತ್ತು ಲೇಖಕರ ಕೃತಿಗಳು ಬಿಡುಗಡೆ

    ನಟ ರಮೇಶ್ ಅರವಿಂದ್ ಬರೆದ ಪುಸ್ತಕವನ್ನು ಬಿಡುಗಡೆ ಮಾಡಿದ ಕಿಚ್ಚ ಸುದೀಪ್ : ರಮೇಶ್ ಸೇರಿ ಹತ್ತು ಲೇಖಕರ ಕೃತಿಗಳು ಬಿಡುಗಡೆ

    ಸಿನಿಮಾ ಟೀಸರ್, ಟ್ರೈಲರ್ ಮಾತ್ರವಲ್ಲ ಕಿಚ್ಚ ಸುದೀಪ್ ಇದೀಗ ಸಾಹಿತ್ಯ ಕ್ಷೇತ್ರಕ್ಕೂ ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿದ್ದಾರೆ. ಮೊನ್ನೆಯಷ್ಟೇ ಸಾವಣ್ಣ ಪ್ರಕಾಶನದ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ‘ನೀನೇ ರಾಜಕುಮಾರ್’ ರಿಲೀಸ್ ಮಾಡಿದ್ದರು. ಇದೀಗ ರಮೇಶ್ ಅರವಿಂದ್ ಬರೆದ ಆರ್ಟ್ ಆಫ್ ಸಕ್ಸಸ್ ಕೃತಿಯ ಜೊತೆಗೆ ಇತರ ಒಂಬತ್ತು ಜನ ಲೇಖಕರ ಕೃತಿಯನ್ನು ಸುದೀಪ್ ನಿನ್ನೆ ಬಿಡುಗಡೆ ಮಾಡಿದ್ದಾರೆ.

    ಪುಸ್ತಕ ಕ್ಷೇತ್ರದಲ್ಲೊಂದು ವಿಭಿನ್ನ ಬಗೆಯ ಪ್ರಯತ್ನಕ್ಕೆ ವೀರಕಪುತ್ರ ಶ್ರೀನಿವಾಸ್ ಮುನ್ನುಡಿ ಬರೆದಿದ್ದಾರೆ. ಕಾಫಿ ಶಾಪ್‌, ಹೋಟೆಲ್, ರೆಸ್ಟೋರೆಂಟ್, ಔಷಧ ಮಳಿಗೆ, ಆಸ್ಪತ್ರೆ, ಮಾಲ್‌, ಕಾರ್ಪೊರೇಟ್‌ ಕಂಪನಿಗಳ ಕಚೇರಿಗಳು ಸೇರಿದಂತೆ ವಿವಿಧೆಡೆ ಕನ್ನಡ ಪುಸ್ತಕಗಳು ದೊರೆಯುವಂತಹ ಅವಕಾಶವನ್ನು ಶ್ರೀನಿವಾಸ್ ಕಲ್ಪಿಸಿದ್ದಾರೆ. ವೀರಕಪುತ್ರ ಶ್ರೀನಿವಾಸ್ ವೀರಲೋಕ ಪ್ರಕಾಶನ ಸಂಸ್ಥೆ ಆರಂಭಿಸಿದ್ದಾರೆ. ಈ ಮೂಲಕ ಕನ್ನಡ ಪುಸ್ತಕಗಳ ಓದುಗರಿಗೆ ಉತ್ತಮ ವೇದಿಕೆ ಒದಗಿಸಿ, ಓದುಗರ ಸಂಖ್ಯೆ ವೃದ್ಧಿಸಲು ಸಜ್ಜಾದ್ದಾರೆ. ಇದನ್ನೂ ಓದಿ: ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದ ಮೊದಲ ವಿಮರ್ಶೆ ಮಾಡಿದ ನಟ ರಮೇಶ್ ಅರವಿಂದ್

    ವೀರಲೋಕ ಪ್ರಕಾಶನ ಹೊರತಂದಿರುವ ಹತ್ತು ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು. ಪುಸ್ತಕಗಳು ಜ್ಞಾನದ ಕೀಲಿಕೈ ಎಂಬ ಹೆಸರಿನಡಿ ನಡೆದ ಕಾರ್ಯಕ್ರಮಕ್ಕೆ ಕನ್ನಡ ಪುಸ್ತಕಗಳ ರಾಯಭಾರಿಯಾಗಿರುವ ನಟ ರಮೇಶ್ ಅರವಿಂದ್‌ ಕಾರ್ಯಕ್ರಮ ಉದ್ಘಾಟಿಸಿದರು. ನಟ ಕಿಚ್ಚ ಸುದೀಪ್ ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ರಮೇಶ್ ಅರವಿಂದ್, ಫೌಡ್ರಶಿಕ್ಷಣದಲ್ಲಿ ವಿದ್ಯಾಭ್ಯಾಸ ಮಾಡುವ ಸಮಯದಲ್ಲಿ ಸಿನಿಮಾವೊಂದರಲ್ಲಿ ನಟಿಸುವ ಅವಕಾಶ ಸಿಕ್ಕಿತು.  ಆ ಪಾತ್ರಕ್ಕಾಗಿ ತಲೆ ಕೂದಲು ತೆಗೆದಿದ್ದೆ. ಹೀಗಾಗಿ ಶಾಲೆಗೆ ಹೋಗುವ ಬದಲು ಗ್ರಂಥಾಲಯಕ್ಕೆ ತೆರಳಿ ಪುಸ್ತಕ ಓದಲು ಶುರುಮಾಡಿದೆ. ನಂತ್ರ ಅದು ಹವ್ಯಾಸವಾಯಿತು. ಹಲವು ಪುಸ್ತಕಗಳನ್ನು ಓದಿದ ಪರಿಣಾಮ ನಾನು ಈಗ ಪುಸ್ತಕ ಬರೆಯಲು ಶುರು ಮಾಡಿದ್ದೇನೆ ಎಂದರು.

    ಸುದೀಪ್ ಮಾತಾನಾಡಿ, ನಾನು ಜಾಸ್ತಿ ಓದದೆ ಇರುವುದು ತುಂಬಾ ಒಳ್ಳೆಯದಾಗಿದೆ. ಏಕಂದ್ರೆ ಇದರಿಂದ ಹೆಚ್ಚು ಪುಸ್ತಕ ಓದಲು ಸಾಧ್ಯವಾಗದೇ ಇದೀಗ ಹಲವು ಪುಸ್ತಕಗಳನ್ನು ಒಮ್ಮೆಲೇ ಬಿಡುಗಡೆ ಮಾಡಿ ಜೀವನದಲ್ಲಿ ಒಳ್ಳೆ ಕೆಲಸ ಮಾಡಿದೆ. ಎಲ್ಲಾ ಬರಹ ಹತ್ತಿರವಿಟ್ಟುಕೊಂಡಿದ್ದೇನೆ ಎಂದು ತಿಳಿಸಿದರು. ವೀರ ಲೋಕದ ಮುಖ್ಯಸ್ಥ ವೀರಕಪುತ್ರ ಶ್ರೀನಿವಾಸ್, ‘ಕನ್ನಡ ಪುಸ್ತಕ ಎಲ್ಲಿ ಬೇಕಾದರೂ ಸಿಗುವಂತಾಗಲು ಮೊದಲ ಹಂತದಲ್ಲಿ 1 ಸಾವಿರ ಪುಸ್ತಕಗಳ ಸ್ಟ್ಯಾಂಡ್‌ಗಳನ್ನು ಬೆಂಗಳೂರಿನ ಮಾಲ್, ಅಂಗಡಿ ಮಳಿಗೆಗಳಲ್ಲಿ ಇರಿಸಲಾಗುವುದು. ಸ್ಥಳದಲ್ಲೇ ಖರೀದಿಗೆ ಅವಕಾಶ ಇದೆ’ ಎಂದರು. ‘ಕನ್ನಡ ಪುಸ್ತಕಗಳನ್ನು ಪರಿಚಯಿಸಿ ಮಾರಾಟ ಮಾಡಲು ಕಾಲ್ ಸೆಂಟರ್ ಸ್ಥಾಪಿಸಲಾಗಿದೆ. ನಮ್ಮ ಬಳಿ 11 ಲಕ್ಷ ಓದುಗರ ಮಾಹಿತಿ ಇದೆ. ಅವರನ್ನು ಸಂಪರ್ಕಿಸಿ ಪುಸ್ತಕ ಪರಿಚಯ, ಮಾರಾಟ ಮಾಡುತ್ತೇವೆ’ ಎಂದರು. ಇದನ್ನೂ ಓದಿ: ಶ್ರದ್ಧಾ ಶ್ರೀನಾಥ್ ಗುಡ್ ಬೈ ಹೇಳಿದ್ದು ಯಾಕೆ.?

    ಕೈಹಿಡಿದು ನೀ ನಡೆಸು ತಂದೆ(ವಿಶ್ವೇಶ್ವರ ಭಟ್), ಅವರು ಇವರು ದೇವರು(ಜೋಗಿ), ಲಾಸ್ಟ್ ಡೇಸ್ ಆಫ್ ಲೆಜೆಂಡ್ಸ್(ಗಣೇಶ್ ಕಾಸರಗೋಡು), ವಿಶ್ವ ಸುಂದರಿ(ಕುಂ. ವೀರಭದ್ರಪ್ಪ), ಸೋಲೆಂಬ ಗೆಲುವು(ದೀಪಾ ಹಿರೇಗುತ್ತಿ), ಮನಿ ಮನಿ ಎಕಾನಮಿ(ರಂಗಸ್ವಾಮಿ ಮೂಕನಹಳ್ಳಿ), ಆರ್ಟ್ ಆಫ್ ಸಕ್ಸಸ್( ರಮೇಶ್ ಅರವಿಂದ್), ನಿಮಗೆಷ್ಟು ಹಣ ಬೇಕು?(ಅನಂತ ಹುದೆಂಗಜೆ), ಒಳ್ಳೆಯ ಬದುಕಿನ ಸೂತ್ರಗಳು(ರವಿಕೃಷ್ಣಾ ರೆಡ್ಡಿ) ಕೃತಿಗಳು ಬಿಡುಗಡೆಯಾದವು.

  • ಯಜಮಾನ ಪ್ರೀಮಿಯರ್ ಲೀಗ್ ಶುರು: ಡಾ.ವಿಷ್ಣು ಹೆಸರಿನಲ್ಲಿ ಅಭಿಮಾನಿಗಳ ಅಭಿಮಾನ

    ಯಜಮಾನ ಪ್ರೀಮಿಯರ್ ಲೀಗ್ ಶುರು: ಡಾ.ವಿಷ್ಣು ಹೆಸರಿನಲ್ಲಿ ಅಭಿಮಾನಿಗಳ ಅಭಿಮಾನ

    ಇಂದಿನಿಂದ ಎರಡು ದಿನಗಳ ಕಾಲ ಡಾ.ವಿಷ್ಣುವರ್ಧನ್ ಹೆಸರಿನಲ್ಲಿ ಅವರ ಅಭಿಮಾನಿಗಳು ‘ಯಜಮಾನ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿದೆ. ಹಲವು ತಂಡಗಳು ಈ ಲೀಗ್ ನಲ್ಲಿ ಭಾಗಿಯಾಗಿದ್ದು, ಕ್ರಿಕೆಟ್ ಪಂದ್ಯಾವಳಿಯನ್ನು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಇಂದು ಉದ್ಘಾಟಿಸಿದ್ದಾರೆ. ಇದನ್ನೂ ಓದಿ : ಪ್ರಶಾಂತ್ ನೀಲ್ -ಜ್ಯೂ.ಎನ್‌ಟಿಆರ್ ವಿವಾಹ ವಾರ್ಷಿಕೋತ್ಸವ ಸಂಭ್ರಮ ಹೇಗಿತ್ತು ಗೊತ್ತಾ?

    ಐಪಿಎಲ್, ಸಿಸಿಎಲ್, ಬಿಸಿಎಲ್ ಹೀಗೆ ಹಲವು ಹೆಸರಿನಲ್ಲಿ ಸಿಲೆಬ್ರಿಟಿ ಕ್ರಿಕೆಟ್ ಲೀಗ್ ನೋಡಿದವರು ಇದೀಗ ಡಾ.ವಿಷ್ಣು ಹೆಸರಿನ ವೈಪಿಎಲ್ ನೋಡುವ ಭಾಗ್ಯವನ್ನು ವಿಷ್ಣು ಅವರ ಅಭಿಮಾನಿಗಳು ಕ್ರಿಕೆಟ್ ಪ್ರೇಮಿಗಳಿಗೆ ಕಲ್ಪಿಸಿಕೊಟ್ಟಿದ್ದು ವಿಶೇಷ. ಹಲವು ತಂಡಗಳು ಈ ವೈಪಿಎಲ್ ನಲ್ಲಿ ಈಗಾಗಲೇ ಭಾಗಿಯಾಗಿ ಕ್ರಿಕೆಟ್ ಆಡುತ್ತಿವೆ. ಇದನ್ನೂ ಓದಿ : ಯಶ್ ಮುಂದಿನ ಚಿತ್ರ ಯಾರ ಜೊತೆ? ಹೊರಬಿತ್ತು ಬಿಗ್ ನ್ಯೂಸ್

    ಮೇ 7 ಮತ್ತು 8 ರಂದು ಪಂದ್ಯಾವಳಿ ಆಯೋಜನೆಯಾಗಿದ್ದು, ಇದರ ಪ್ರಯುಕ್ತವಾಗಿ ಥೀಮ್ ಸಾಂಗ್ ಕೂಡ ನಿನ್ನೆ ಬಿಡುಗಡೆಯಾಗಿದೆ. ಪ್ರಮೋದ್ ಮೆರವಂತೆ ಸಾಹಿತ್ಯ, ಹೇಮಂತ್ ಜೋಯಿಸ್ ಸಂಗೀತ ಹಾಗೂ ಚೇತನ್ ನಾಯ್ಕ ಅವರ ಕಂಠಸಿರಿಯಲ್ಲಿ ಈ ಥೀಮ್ ಸಾಂಗ್ ಮೂಡಿ ಬಂದಿದೆ. 12 ತಂಡಗಳಿಗೆ ಈ ಹಾಡು ಉತ್ತೇಜನ ನೀಡಲಿದೆ. ಇದನ್ನೂ ಓದಿ : ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

    ಇಂದು ಬೆಳಗ್ಗೆ ಬೆಂಗಳೂರಿನ ಮಾಗಡಿ ಮುಖ್ಯರಸ್ತೆಯ ಗಿಡ್ಡೇನಹಳ್ಳಿ ಗಾಡಿ ಬಳಿ ಪಂದ್ಯಗಳು ನಡೆಯಲಿದ್ದು, ಅಸಂಖ್ಯಾತ ಅಭಿಮಾನಿಗಳು ಈ ಮೈದಾನದಲ್ಲಿ ಜಮಾಯಿಸಿದ್ದಾರೆ. ‘ಯಜಮಾನ್ರೆಗೆ ಕ್ರಿಕೆಟ್ ಅಂದರೆ ಪ್ರಾಣ. ಈ ಹಿಂದೆ ವೃತ್ತಿ ನಿರತ ಕ್ರಿಕೆಟ್ ಆಟಗಾರರ ಜತೆಯೂ ಯಜಮಾನರಾದ ಡಾ.ವಿಷ್ಣು ಸರ್ ಕ್ರಿಕೆಟ್ ಆಡಿದ್ದಾರೆ. ಪ್ರತಿ ವರ್ಷವೂ ಅವರು ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡುತ್ತಿದ್ದರು. ಅದನ್ನು ನಾವು ಮುಂದುವರೆಸಿಕೊಂಡು ಹೋಗುತ್ತಿದ್ದೇವೆ’ ಅಂತಾರೆ ವೀರಕಪುತ್ರ ಶ್ರೀನಿವಾಸ್.

    ಬೆಂಗಳೂರು ವಿಷ್ಣುಸೇನಾ ಸಮಿತಿಯ ಅಧ್ಯಕ್ಷ ಯದುನಂದನ್ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ಆನಂದ್ ಸೇರಿದಂತೆ ಹಲವು ಪದಾಧಿಕಾರಿಗಳು ಈ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದಾರೆ. ಈ ಪಂದ್ಯಾವಳಿಯ ನೇತೃತ್ವವನ್ನು ವೀರಕಪುತ್ರ ಶ್ರೀನಿವಾಸ್ ವಹಿಸಿಕೊಂಡಿದ್ದಾರೆ. ವೀರಲೋಕ ಸೇರಿದಂತೆ ಹಲವು ಟೀಮ್ ಗಳು ಈ ಪಂದ್ಯಾವಳಿಯಲ್ಲಿ ಭಾಗಿಯಾಗಿರುವುದು ವಿಶೇಷ.

  • ಅಂದು ವಿಷ್ಣು ಹೆಸರಿನಲ್ಲಿ ‘ಉಪ್ಪಿನಕಾಯಿ’ ಇಂದು ‘ಮೆಡಿಕಲ್ ಸ್ಟೋರ್’

    ಅಂದು ವಿಷ್ಣು ಹೆಸರಿನಲ್ಲಿ ‘ಉಪ್ಪಿನಕಾಯಿ’ ಇಂದು ‘ಮೆಡಿಕಲ್ ಸ್ಟೋರ್’

    ಮ್ಮ ನೆಚ್ಚಿನ ನಟನ ಹೆಸರಿನಲ್ಲಿ ಅಭಿಮಾನಿಗಳು ನಾನಾ ರೀತಿಯ ಕೆಲಸಗಳನ್ನು ಮಾಡುತ್ತಲೇ ಇರುತ್ತಾರೆ. ಅದರಲ್ಲೂ ಡಾ.ವಿಷ್ಣು ವರ್ಧನ್ ಅವರ ಹೆಸರಿನಲ್ಲಿ ಈಗಾಗಲೇ ಸಾಕಷ್ಟು ಜನಪರ ಕೆಲಸಗಳು ಆಗಿವೆ. ಅವುಗಳ ಜತೆ ಡಾ.ವಿಷ್ಣು ಹೆಸರಿನಲ್ಲೇ ಕೆಲ ಉತ್ಪನ್ನಗಳು ಕೂಡ ಮಾರುಕಟ್ಟೆಗೆ ಬಂದಿವೆ. ಇದನ್ನೂ ಓದಿ : ಹಿಂದಿ ರಾಷ್ಟ್ರ ಭಾಷೆ : ನಾನು ಕನ್ನಡ ಪಂಡಿತನೂ, ಹಿಂದಿ ಪಂಡಿತನೂ ಹೌದು -ಯೋಗರಾಜ್ ಭಟ್

    ಮಂಗಳೂರಿನ ಅಭಿಮಾನಿಯೊಬ್ಬರು ಮಿಡಿ ಉಪ್ಪಿನಕಾಯಿಯನ್ನು ಮಾರುತ್ತಿದ್ದರು. ಅವರು ವಿಷ್ಣುವರ್ಧನ್ ಅವರು ಮಹಾನ್ ಅಭಿಮಾನಿ. ಯಜಮಾನ ಸಿನಿಮಾ ನೋಡಿದ ನಂತರ ತಮ್ಮ ಮಿಡಿ ಉಪ್ಪಿನಕಾಯಿಗೆ ‘ಯಜಮಾನ ಮಿಡಿ ಉಪ್ಪಿನಕಾಯಿ’ ಎಂದು ಹೆಸರಿಟ್ಟರು. ಈಗ ಅದು ಅದೇ ಹೆಸರಿನಲ್ಲೇ ಫೇಮಸ್ ಆಗಿದೆ. ಇದನ್ನೂ ಓದಿ : ಪುನೀತ್‌ಗೆ ಅವಮಾನ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆ

    ಈಗ ಮತ್ತೊಬ್ಬ ದೊಡ್ಡ ಅಭಿಮಾನಿ ಡಾ.ವಿಷ್ಣುವರ್ಧನ್ ಅವರ ಹೆಸರಿನಲ್ಲೇ ಅವರ ಕೋಟಿಗೊಬ್ಬ ಸಿನಿಮಾವನ್ನು ಸ್ಫೂರ್ತಿಯಾಗಿ ತಗೆದುಕೊಂಡು ಮೆಡಿಕಲ್ ಶಾಪ್ ತೆರೆದಿದ್ದಾರೆ. ಈ ವಿಷಯವನ್ನು ಡಾ. ವಿಷ್ಣು ಸೇನಾ ಸಮಿತಿಯ ಅಧಿಕೃತ ವೆಬ್ ಸೈಟ್ ನಲ್ಲಿ ಹಂಚಿಕೊಂಡಿದ್ದು, ಈ ಮೆಡಿಕಲ್ ಶಾಪ್ ಅನ್ನು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಉದ್ಘಾಟಿಸಿದ್ದಾರೆ. ‘ಯಜಮಾನ್ರ ಮೇಲಿನ ಅಗಾಧ ಅಭಿಮಾನದ ಕಾರಣಕ್ಕಾಗಿ ಕೋಟಿಗೊಬ್ಬ ಹೆಸರಿಟ್ಟು, ಮೆಡಿಕಲ್ ಶಾಪ್ ಒಳಗೂ ವಿಷ್ಣು ಅವರ ದೊಡ್ಡ ಫೋಟೋ ಇಟ್ಟಿದ್ದಾರೆ. ಹೀಗೆ ಇಟ್ಟು ಪೂಜಿಸುತ್ತಾ ಇರುವುದು ಡಾ.ವಿಷ್ಣು ಅವರ ಅಪ್ಪಟ ಅಭಿಮಾನಿ ಹಾಸನದ ವಿಜಯ್ ಬಿಳಿಮಗ್ಗ’ ಎಂದು ಬರೆದುಕೊಂಡಿದ್ದಾರೆ ವೀರಕಪುತ್ರ ಶ್ರೀನಿವಾಸ್. ಇದನ್ನೂ ಓದಿ : ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್

    ಇದರ ಹೊರತಾಗಿಯೂ ವಿಷ್ಣು ಅವರ ಹೆಸರಿನಲ್ಲಿ ಐಎಎಸ್ ಉಚಿತ ಕೋಚಿಂಗ್ ನೀಡಲಾಗುತ್ತಿದೆ. ಕನ್ನಡ ಶಾಲೆಗಳನ್ನು ದತ್ತು ಪಡೆಯಲಾಗಿದೆ. ಸಾವಿರಾರು ಗಿಡಗಳನ್ನು ನಡೆಲಾಗಿದೆ. ರಕ್ತದಾನ ಶಿಬಿರ, ಅನ್ನದಾನ ಶಿಬಿರದಂತೆ ಕಾರ್ಯಗಳನ್ನು ಅಭಿಮಾನಿಗಳು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ.