Tag: ವೀರಪ್ಪ ಮೊಯ್ಲಿ

  • ನಾನು 1980 ರಲ್ಲೇ ಸಿಎಂ ಆಗಬೇಕಿತ್ತು, ಸಿಗದ್ದಕ್ಕೆ ನಾನು ಪಶ್ಚಾತ್ತಾಪ ಪಡಲಿಲ್ಲ: ಮೊಯ್ಲಿ

    ನಾನು 1980 ರಲ್ಲೇ ಸಿಎಂ ಆಗಬೇಕಿತ್ತು, ಸಿಗದ್ದಕ್ಕೆ ನಾನು ಪಶ್ಚಾತ್ತಾಪ ಪಡಲಿಲ್ಲ: ಮೊಯ್ಲಿ

    ಬಾಗಲಕೋಟೆ: ನಮಗೆ ಅರ್ಹತೆ ಇದ್ದರೆ, ಸರದಿ ಬಂದರೆ ಮುಖ್ಯಮಂತ್ರಿ (Chief Minister) ಆಗುತ್ತೇವೆ. ನಾನು 1980 ರಲ್ಲೇ ಸಿಎಂ ಆಗಬೇಕಿತ್ತು. ಆದರೆ ಸಮಯದಲ್ಲಿ ಸಿಎಂ ಸ್ಥಾನ ಸಿಗಲಿಲ್ಲ. ನಾನು ಸಿಎಂ ಆಗಲು 10 ವರ್ಷ ಕಾದಿದ್ದೆ ಎಂದು ವೀರಪ್ಪ ಮೊಯ್ಲಿ (Veerappa Moily) ಹೇಳಿದ್ದಾರೆ.

    ಪಕ್ಷವನ್ನು ಅಧಿಕಾರಕ್ಕೆ ತಂದರೂ ಸಿಎಂ ಅವಕಾಶ ಕೈತಪ್ಪಿತು ಎಂಬ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 1979 ರಿಂದ 1995 ರವರೆಗೆ ನಾನೇ ಪಕ್ಷದ ಸಂಘಟನೆ ಮಾಡಿದ್ದೆ. ಆದರೆ ಆಗ ನನ್ನ ಬದಲು ಆರ್ ಗುಂಡೂರಾವ್ ಸಿಎಂ ಆದರು, ನಂತರ ಬಂಗಾರಪ್ಪ ಸಿಎಂ ಆದರು. ಅದಕ್ಕಿಂತ ಮೊದಲು ವೀರೇಂದ್ರ ಪಾಟಿಲ್ ಸಿಎಂ ಆದರು. ಹಾಗಂತ ನನಗೆ ಸಿಗಲಿಲ್ಲ ಎಂದು ನಾನು ಪಶ್ಚಾತ್ತಾಪ ಪಡಲಿಲ್ಲ ಎಂದು ಹೇಳಿದರು.

    ನನ್ನಿಂದಲೇ ಪಕ್ಷದ ಅಧಿಕಾರಕ್ಕೆ ಬಂತು ಎಂದು ಹೇಳಲು ಆಗುವುದಿಲ್ಲ. ಎಷ್ಟು ವರ್ಷ ಸಿಎಂ ಆಗಿದ್ದೇವೆ ಎನ್ನುವುದು ಮುಖ್ಯವಲ್ಲ, ಏನು ಕೆಲಸ ಮಾಡಿದ್ದೇವೆ ಎನ್ನುವುದು ಮುಖ್ಯ ಎಂದು ತಿಳಿಸಿದರು. ಇದನ್ನೂ ಓದಿ: ಕಷ್ಟ ಪಟ್ಟಿದ್ದು ನಾನು, ಕೃಷ್ಣ ಸಿಎಂ ಆದ್ರು – ಮುಖ್ಯಮಂತ್ರಿ ಸ್ಥಾನ ಸಿಗದಿದ್ದಕ್ಕೆ ಖರ್ಗೆ ಬಹಿರಂಗ ಬೇಸರ

     

    ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು, ಪೈಪೋಟಿ ಇರುವುದು ಸಾಮಾನ್ಯ. ಕೆಲವರಿಗೆ ಸಿಗುತ್ತದೆ ಕೆಲವರಿಗೆ ಸಿಗುವುದಿಲ್ಲ. ಸಾಯುವವರೆಗೂ ಕೆಲವರಿಗೆ ಮುಖ್ಯಮಂತ್ರಿ ಆಗಿ ಅಧಿಕಾರ ಸಿಗುವುದಿಲ್ಲ. ಆದರೆ ಆಧಿಕಾರವನ್ನು ವಾಮಮಾರ್ಗದ ಮೂಲಕ ಸಾಧಿಸಬಾರದು ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.

    ಈಗ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಆಡಳಿತ ಮಾಡುತ್ತೇನೆ ಎನ್ನುತ್ತಾರೆ. ಅವರಿಗೆ ಆ ಆಸೆ ಇದೆ, ಅದರೆ ಬಗ್ಗೆ ತಪ್ಪು ತಿಳಿದುಕೊಳ್ಳಲು ಆಗುವುದಿಲ್ಲ. ಡಿಸಿಎಂ ಆದವರು ಸಿಎಂ ಆಗಬೇಕು ಅಂತ ಆಸೆ ಪಡ್ತಾರೆ. ಆದರೆ ಕೆಲವೊಂದು ಸಾರಿ ಡೆಪ್ಯುಟಿ ಸಿಎಂ ಆದವರು ಡಿಸಿಎಂ ಆಗಿಯೇ ನಿವೃತ್ತಿಯಾಗಬಹುದು. ನನಗೆ ಸಿಗಲಿಲ್ಲ ಅಂತ ಪಶ್ಚಾತ್ತಾಪ ಪಡುವುದು ಬೇಡ ಎಂದು ತಿಳಿಸಿದರು. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಆಗೋ ಅರ್ಹತೆ ಇತ್ತು: ಆರ್.ವಿ.ದೇಶಪಾಂಡೆ

    ಗ್ಯಾರಂಟಿಯಿಂದ ಸರಕಾರದಲ್ಲಿ ಅಭಿವೃದ್ಧಿ ಕೆಲಸಕ್ಕೆ ಹಣದ ಕೊರತೆ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಲಂಚ ನಿಂತರೆ ಎಲ್ಲದಕ್ಕೂ ಹಣವಿದೆ. ಸಂಪನ್ಮೂಲ ಕ್ರೋಢಿಕರಣ, ವ್ಯಾಟ್ ಇರಬಹುದು, ಜಿಎಸ್‌ಟಿ ಇರಬಹುದು. ಅದೆಲ್ಲವನ್ನು ಸರಿಯಾಗಿ ವಸೂಲಿ ಮಾಡಿದರೆ ಎಲ್ಲದಕ್ಕೂ ಹಣ ಇದೆ. ಹಣವಿಲ್ಲ ಅಂತೇನಿಲ್ಲ ನಾನು ಹಣಕಾಸು ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸರಿಯಾಗಿ ಆಡಳಿತ ಮಾಡಿದರೆ ಎಲ್ಲದಕ್ಕೂ ಹಣ ಇದೆ. ಖರ್ಚು ಮಾಡುವವರಿಗೆ ಹಣವಿದೆ. ಖರ್ಚು ಮಾಡದವರಿಗೆ ಹಣವಿಲ್ಲ ಎಂದರು.

     

  • ವೀರಪ್ಪ ಮೊಯ್ಲಿ ಹೇಳಿಕೆಗಿಂತಲೂ ಹೈಕಮಾಂಡ್ ಹೇಳಿಕೆ ಮುಖ್ಯ : ಸಿಎಂ

    ವೀರಪ್ಪ ಮೊಯ್ಲಿ ಹೇಳಿಕೆಗಿಂತಲೂ ಹೈಕಮಾಂಡ್ ಹೇಳಿಕೆ ಮುಖ್ಯ : ಸಿಎಂ

    – ಗುತ್ತಿಗೆದಾರರಿಗೆ ಏಪ್ರಿಲ್‌ನಲ್ಲಿ ಹಣ ಬಿಡುಗಡೆ ಮಾಡ್ತೀನಿ

    ಬೆಂಗಳೂರು: ವೀರಪ್ಪ ಮೊಯ್ಲಿ (Veerappa Moily) ಅಥವಾ ಬೇರೆಯವರು ಸಿಎಂ ಬದಲಾವಣೆ ವಿಚಾರ ಹೇಳುವುದು ಮುಖ್ಯವಲ್ಲ. ಹೈಕಮಾಂಡ್ ಏನು ಹೇಳುತ್ತಾರೋ ಅದು ಮುಖ್ಯ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು.

    ಡಿಕೆಶಿ ಸಿಎಂ ಆಗೇ ಆಗ್ತಾರೆ ಎಂಬ ವೀರಪ್ಪ ಮೊಯ್ಲಿ ಹೇಳಿಕೆ ವಿಚಾರವಾಗಿ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮ ತೀರ್ಮಾನ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಬೇರೆ ಅವರು ಮಾತನಾಡಿದರೆ ನಾನೇನು ಮಾತನಾಡಲಿ. ನಾನು ಹೈಕಮಾಂಡ್ ನಿರ್ದೇಶನದಂತೆ ಹೋಗುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಖಚಿತ – ಬಿ.ವೈ.ವಿಜಯೇಂದ್ರ

    ಗುತ್ತಿಗೆದಾರರಿಗೆ ಏಪ್ರಿಲ್‌ನಲ್ಲಿ ಹಣ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದೇನೆ. 30 ಸಾವಿರ ಕೋಟಿ ರೂ. ಬಾಕಿ ಇದೆ. 15 ಸಾವಿರ ಕೋಟಿ ರೂ. ಕೊಡಬೇಕು ಎಂದು ಹೇಳಿದ್ದಾರೆ. ಆದರೆ ಅಷ್ಟೆಲ್ಲಾ ಕೊಡಲು ಆಗುವುದಿಲ್ಲ. ಎಷ್ಟು ಸಾಧ್ಯವೋ ಅಷ್ಟು ಕೊಡುತ್ತೇವೆ ಎಂದರು.

    ಹೈಕಮಾಂಡ್ ದೂರು ನೀಡುತ್ತೇವೆ ಎಂಬ ಗುತ್ತಿಗೆದಾರರ ಸಂಘದವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿ ಯಾರು ಬೇಡ ಅಂದರು. ನಾವು ಹಣಕಾಸು ಪರಿಸ್ಥಿತಿ ನೋಡಿಕೊಂಡು ಹಣ ಬಿಡುಗಡೆ ಮಾಡುತ್ತೇವೆ. ಹಣ ಬಾಕಿ ಉಳಿದಿದ್ದು ಯಾರಿಂದ? ಬಜೆಟ್‌ನಲ್ಲಿ ಹಣ ಇಡದೇ ಟೆಂಡರ್ ಕರೆದು ಕೆಲಸ ಶುರು ಮಾಡಿದರು. ಅದಕ್ಕೆ ನಾವು ಹೊಣೆನಾ? ಗುತ್ತಿಗೆದಾರರು ಯಾರಿಗಾದರೂ ದೂರು ಕೊಡಲಿ. ನಾವು ಹಣಕಾಸು ಪರಿಸ್ಥಿತಿ ನೋಡಿಕೊಂಡು ಹಣ ಬಿಡುಗಡೆ ಮಾಡುವುದು ಎಂದು ಖಡಕ್ ಉತ್ತರ ನೀಡಿದರು. ಇದನ್ನೂ ಓದಿ: ಓಲಾದ 1 ಸಾವಿರ ಉದ್ಯೋಗಿಗಳು ಮನೆಗೆ

    ಅಧಿಕಾರಿಗಳು ಕಮಿಷನ್ ಕೇಳುತ್ತಾರೆ ಎಂಬ ಆರೋಪ ಕುರಿತು ಮಾತನಾಡಿ, ಅಧಿಕಾರಿಗಳು ಕಮಿಷನ್ ಕೇಳಿದರೆ ಕೊಡುವುದು ಬೇಡ. ಯಾಕೆ ಕಮಿಷನ್ ಕೊಡುತ್ತೀರಾ. ಲಂಚ ತೆಗೆದುಕೊಳ್ಳುವುದು ಅಪರಾಧ. ಅದೇ ರೀತಿ ಲಂಚ ಕೊಡುವವನು ಅಪರಾಧಿನೇ. ಕಮಿಷನ್ ಯಾರು ಕೊಡಬಾರದು. ನಾನು ಇದೂವರೆಗೂ ಹಣ ಬಿಡುಗಡೆಗೆ ದುಡ್ಡು ಕೇಳಿಲ್ಲ ಎಂದು ಹೇಳಿದರು.

    ಬಜೆಟ್ ನಿರೀಕ್ಷೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಮಾ. 7ರಂದು ಬಜೆಟ್ ಮಂಡನೆ ಮಾಡುತ್ತೇವೆ. ಬಜೆಟ್ ಮಂಡನೆ ಆದ ಮೇಲೆ ನೋಡಿ. ಬಜೆಟ್ ಮಂಡನೆ ಮಾಡೋವರೆಗೂ ಅದು ಸೀಕ್ರೆಟ್ ಡಾಕ್ಯುಮೆಂಟ್ ಆಗಿರುತ್ತದೆ. ಅದರಲ್ಲಿ ಏನಿದೆ ಅಂತ ಹೇಳಲು ಆಗುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಡಿಕೆ ಸಾಹೇಬ್ರು ಹೇಳಿರೋದ್ರಲ್ಲಿ ತಪ್ಪೇನಿಲ್ಲ, ಎಲ್ಲರೂ ಬರಲಿ ಅನ್ನೋದಷ್ಟೇ ಅವರ ಉದ್ದೇಶ – ಸಾಧು ಕೋಕಿಲ

  • ಸಿಎಂ ಆಗ್ತಾರೆ ಅಂದಾಗ ಡಿಕೆಶಿ ಮೊಗದಲ್ಲಿ ಹಾಲಿನ ಮಳೆಯೋ, ಜೇನಿನ ಹೊಳೆಯೋ ಅನ್ನೋ ಖುಷಿಯಿತ್ತು: ಅಶೋಕ್

    ಸಿಎಂ ಆಗ್ತಾರೆ ಅಂದಾಗ ಡಿಕೆಶಿ ಮೊಗದಲ್ಲಿ ಹಾಲಿನ ಮಳೆಯೋ, ಜೇನಿನ ಹೊಳೆಯೋ ಅನ್ನೋ ಖುಷಿಯಿತ್ತು: ಅಶೋಕ್

    – ಖುದ್ದು ಸಿದ್ದರಾಮಯ್ಯನವರೇ ಅಧಿಕಾರ ಬಿಡುವಂತೆ ಡಿಕೆಶಿ ಮಾಡ್ತಾರೆಂದ ವಿಪಕ್ಷ ನಾಯಕ

    ಬೆಂಗಳೂರು: ಡಿಕೆಶಿ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲ ಎಂದು ವೀರಪ್ಪ ಮೊಯ್ಲಿ (Veerappa Moily)  ಹೇಳಿದಾಗ ಹಾಲಿನ ಮಳೆಯೋ, ಜೇನಿನ ಹೊಳೆಯೋ ಎನ್ನುವಂತ ಖುಷಿ ಡಿಕೆಶಿ ಮೊಗದಲ್ಲಿ ಇತ್ತು ಎಂದು ವಿಪಕ್ಷ ನಾಯಕ ಆರ್ ಅಶೋಕ್ (R Ashok) ಲೇವಡಿ ಮಾಡಿದರು.

    ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ ಕುರಿತು ಮಾಧ್ಯಮದರೊಂದಿಗೆ ಪ್ರತಿಕ್ರಿಯಿಸಿದ ಅವರು, ನಾನೂ ಕೂಡಾ ಮೊಯ್ಲಿಯವರ ಅಬ್ಬರದ ಭಾಷಣ ನೋಡಿದೆ. ಡಿಕೆಶಿ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಆಗಲ್ಲ ಅಂದಿದ್ದಾರೆ. ಆಗ ಡಿಕೆಶಿ ಮೊಗದಲ್ಲಿ ಹಾಲಿನ ಮಳೆಯೋ, ಜೇನಿನ ಹೊಳೆಯೋ ಎನ್ನುವಂತಹ ಖುಷಿ ಇತ್ತು ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ – ಪಶುಸಂಗೋಪನೆ ಇಲಾಖೆಯಿಂದ ಕೋಳಿ ಸೇವನೆಗೆ ಮಾರ್ಗಸೂಚಿ ಪ್ರಕಟ

    ಇದು ಸಿದ್ದರಾಮಯ್ಯ ಅವರ ಲಾಸ್ಟ್ ಬಜೆಟ್ ಆಗಬಹುದು. ಲಾಸ್ಟ್ ಆದರೂ ಲೀಸ್ಟ್ ಅಲ್ಲ. ಅತೀ ಹೆಚ್ಚು ಸಾಲಮಾಡಿ ಡಿಕೆಶಿಗೆ ಬಿಟ್ಟು ಹೋಗಬಹುದು. ಸಿದ್ದರಾಮಯ್ಯ ಇರುತ್ತಾರೋ, ಹೋಗುತ್ತಾರೆ ಎನ್ನುವ ಎಪಿಸೋಡ್ ಕಳೆದ 2 ವರ್ಷಗಳಿಂದ ನಡೆಯುತ್ತಲೇ ಇದೆ ಎಂದು ಹೇಳಿದರು. ಇದನ್ನೂ ಓದಿ: ಗ್ಯಾರಂಟಿಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ: ಆರ್. ಅಶೋಕ್

    ಮೊಯ್ಲಿಯವರು ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಆಗಿದ್ದವರು. ಅವರಿಗೆ ಪವರ್ ಶೇರ್ ಒಪ್ಪಂದದ ಬಗ್ಗೆ ಗೊತ್ತಿದೆ. ಹಾಗಾಗಿ ಧೈರ್ಯವಾಗಿ ಮೊಯ್ಲಿ ಹಾಗೆ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯ ನಾನೇ ಸಿಎಂ ಅಂತಿದ್ದಾರೆ. ನಾವು ಮಾತನಾಡಿದರೆ ಜಾತಕ ಹೇಳುತ್ತಾರೆ ಅಂತಾರೆ. ಹಾಗಾದರೆ ಶನಿಬಲ, ಗುರುಬಲ ಯಾಕೆ ಕೇಳುತ್ತಾರೆ. ಕೋಡಿ ಮಠದ ಸ್ವಾಮೀಜಿ ಸಹ ಸಿದ್ದರಾಮಯ್ಯ ಸುಲಭಕ್ಕೆ ಅಧಿಕಾರ ಕೊಡಲ್ಲ ಅಂದಿದ್ದಾರೆ. ನಾನು, ಯಾವಾಗ ಒದ್ದು ಕಿತ್ತುಕೊಳ್ಳುತ್ತೀರಾ ಅಂತ ಹೇಳಿದ್ದಕ್ಕೂ ಕೋಡಿಮಠದ ಸ್ವಾಮೀಜಿ ಹೇಳಿಕೆಗೂ, ಮೊಯ್ಲಿ ಹೇಳಿಕೆಗೂ ತಾಳೆ ಆಯ್ತಲ್ಲ. ಸಿಎಂ ಸ್ಥಾನ ಸಾಕಪ್ಪ ಅಂತ ಖುದ್ದು ಸಿದ್ದರಾಮಯ್ಯ ಅವರೇ ಅಧಿಕಾರ ಬಿಟ್ಟು ಹೋಗುವಂತೆ ಡಿಕೆಶಿ ಮಾಡುತ್ತಾರೆ ಎಂದರು. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್ – ರಸ್ತೆ ಗುಂಡಿ ಮುಚ್ಚೋಕು ಸರ್ಕಾರದ ಬಳಿ ದುಡ್ಡಿಲ್ಲ: ಹೆಚ್.ಟಿ ಮಂಜು

  • ಡಿಕೆಶಿ ಸಿಎಂ ಆಗೋದು ಸೆಟಲ್ಡ್ ಮ್ಯಾಟರ್, ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಮೊಯ್ಲಿ

    ಡಿಕೆಶಿ ಸಿಎಂ ಆಗೋದು ಸೆಟಲ್ಡ್ ಮ್ಯಾಟರ್, ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಮೊಯ್ಲಿ

    ಉಡುಪಿ: ಡಿಕೆ ಶಿವಕುಮಾರ್ (DK Shivakumar) ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಡಿಕೆಶಿ ಮುಖ್ಯಮಂತ್ರಿ (Chief Minister) ಆಗುವುದು ಸೆಟಲ್ಡ್ ಮ್ಯಾಟರ್ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ (Veerappa Moily) ಹೇಳಿದ್ದಾರೆ.

    ಕಾರ್ಕಳದಲ್ಲಿ ಆಯೋಜನೆಗೊಂಡಿದ್ದ ಕಾಂಗ್ರೆಸ್ (Congress) ಕುಟುಂಬೋತ್ಸವ ಸಮಾವೇಶ ಉದ್ದೇಶಿಸಿ ಡಿಕೆಶಿ ಸಮ್ಮುಖದಲ್ಲೇ ಈ ಮಾತನ್ನು ನುಡಿದಿದ್ದಾರೆ.

    ಡಿಕೆ ಬೆಂಬಲಿಗರು ಮಾತನಾಡದೇ ಸುಮ್ಮನಿರಬೇಕು. ಡಿಕೆಶಿ ಮುಖ್ಯಮಂತ್ರಿಯಾಗುವುದು ಜನರ ಮನಸ್ಸಿನಲ್ಲಿ ತೀರ್ಮಾನವಾಗಿದೆ. ಇತಿಹಾಸ ತೀರ್ಮಾನ ಮಾಡಿದೆ. ಮ್ಯಾಟರ್ ಆಫ್ ಟೈಮ್ ಅಷ್ಟೇ ಎಂದು ತಿಳಿಸಿದರು.

     

    ಶಿವಕುಮಾರ್‌ಗೆ ಪ್ರಥಮ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದವನು ನಾನು. ಇಂದು ಯಶಸ್ವಿ ನಾಯಕರಾಗಿ ಕರ್ನಾಟಕದಲ್ಲಿ ಮೂಡಿ ಬಂದಿದ್ದಾರೆ. ಡಿಕೆಶಿ ಸದ್ಯದಲ್ಲೇ ಮುಖ್ಯಮಂತ್ರಿ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಪರೀಕ್ಷೆಯಲ್ಲಿ ನಕಲು| ಪೋಷಕರ ಸಮ್ಮುಖದಲ್ಲಿ ಸಿಸಿಟಿವಿ ಪರೀಕ್ಷಿಸಿದ್ದಕ್ಕೆ ಮನನೊಂದು ಕೆರೆಗೆ ಹಾರಿದ ವಿದ್ಯಾರ್ಥಿನಿ

    ಕಾರ್ಕಳ ಗೊಮ್ಮಟೇಶ್ವರನ ಪುಣ್ಯಭೂಮಿ. ಅವರು ಗೊಮ್ಮಟೇಶ್ವರನ ತರ ಬೆಳೆಯಬೇಕು. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿರುವಾಗ ಸಂಚಲನ ಮೂಡಿಸಿದ್ದಾರೆ. ರಾಷ್ಟ್ರದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ ಧೀಮಂತ ನಾಯಕ ಎಂದು ಹಾಡಿ ಹೊಗಳಿದರು.

    ಪಕ್ಷಕ್ಕೆ ಒಳ್ಳೆಯ ನಾಯಕತ್ವ ನೀಡಿ ಸಂಘಟನೆ ಮಾಡಿದ್ದಾರೆ. ವಿಭಿನ್ನ ಹೇಳಿಕೆಗಳು ಬರಬಹುದು ಹೋಗಬಹುದು. ನೀವು ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾರು ಕೂಡ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಟೀಕೆ ಮಾಡುವವರು ವೈಯಕ್ತಿಕ ತೃಪ್ತಿಗೆ ಟೀಕೆ ಮಾಡಬಹುದು. ಮುಖ್ಯಮಂತ್ರಿ ಹುದ್ದೆ ಯಾರು ಕೊಡುವ ವರ ಅಲ್ಲ. ಅದು ಅವರು ಸಂಪಾದನೆ ಮಾಡಿರುವ ಶಕ್ತಿ. ಸಂಪಾದನೆ ಮಾಡಿರುವ ಶಕ್ತಿಯೇ ಮುಖ್ಯಮಂತ್ರಿ ಪದವಿ ಎಂದರು.

    ಕಾರ್ಕಳದ ಪುಣ್ಯ ಭೂಮಿಯಲ್ಲಿ ಆಡಿದ ಈ ಮಾತು ನೂರಕ್ಕೆ ನೂರು ಸತ್ಯ. ಡಿಕೆಶಿ ಅವರೇ ನೀವು ಯಾವುದಕ್ಕೂ ಪ್ರತಿಕ್ರಿಯೆ ಕೊಡಬಾರದು. ಕೋಟಿ ಕೋಟಿ ಪ್ರಯತ್ನ ಮಾಡಿದರೂ ಮುಖ್ಯಮಂತ್ರಿ ಹುದ್ದೆ ತಪ್ಪಿಸಲು ಸಾಧ್ಯವಿಲ್ಲ ಅನ್ನೋದು ಶತ:ಸಿದ್ಧ. ನೀವು ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪಿಲ್ಲ. ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ದೇವರ ಭೂಮಿ. ಬಿಜೆಪಿ ದೇವರ ಭೂಮಿಯನ್ನು ಋಣಭೂಮಿ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

     

  • ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ

    ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ

    ಬೆಳಗಾವಿ: ದೇವೇಗೌಡರ (H.D.Deve Gowda) ಕುಟುಂಬದ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa Moily) ವಾಗ್ದಾಳಿ ನಡೆಸಿದರು.

    ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ದೇವಗೌಡರ ಮಗ, ಮೊಮ್ಮಗನಿಂದ ಒಂದಲ್ಲ 2 ಸಾವಿರ ಮಹಿಳೆಯರ ಮೇಲೆ ದೌರ್ಜನ್ಯವಾಗಿದೆ. ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ. ರಾಜಕೀಯ ಕೆಡಸಿದ್ದಾರೆ, ದೇಶದ ಎದುರು ಕರ್ನಾಟಕ ತಲೆತಗ್ಗಿಸುವಂತೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರಿಶಕ್ತಿ, ಬೇಟಿ ಪಡಾವೋ, ಬೇಟಿ ಬಚಾವೋ ಅಂತಾರೆ. ಭಾರತ ಸರ್ಕಾರದ ಬಳಿಯೇ ನ್ಯಾಷನಲ್ ಕ್ರೈಂ ರೆಕಾರ್ಡ್ ಮಾಹಿತಿ ಇದೆ. ಯುಪಿಎ ಸಮಯದಲ್ಲಿ ಮೂರು ಲಕ್ಷ ಮಹಿಳೆಯರ ಮೇಲೆ ದೌರ್ಜನ್ಯ ಆಗ್ತಿತ್ತು. ಈಗ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣಗಳ ಪ್ರಮಾಣ 22 ಲಕ್ಷ ದಾಟಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ: ಅಣ್ಣಾಮಲೈ

    ಬಿಜೆಪಿ ಆಡಳಿತ ನಡೆಸುತ್ತಿರುವ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಅಧಿಕವಾಗಿವೆ. ಪ್ರಜ್ವಲ್ ಸೆಕ್ಸ್ ಸ್ಕ್ಯಾಂಡಲ್‌ನ ಎಲ್ಲ ಸೂತ್ರದಾರರು ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಮಲಗಿದ್ದಾರೆಯೇ? ಇಂಥ ಕೃತ್ಯ ಎಸಗಿ, ಹಣದೋಚಿಕೊಂಡು ದೇಶದಿಂದ ಪರಾರಿ ಆಗ್ತಿದ್ದಾರೆ. ಕೇಂದ್ರದಲ್ಲಿ ಇಂಥ ಸರ್ಕಾರ ಇದ್ದರೆ ಏನು ಪ್ರಯೋಜನ ಎಂದು ಮೊಯ್ಲಿ ಆಕ್ರೋಶ ಹೊರಹಾಕಿದರು.

    ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗವೂ ಆಗಲಿಲ್ಲ. ಮಹಾದಾಯಿ ಯೋಜನೆಯನ್ನು ಜಾರಿಗೆ ತರಲಿಲ್ಲ. ಕರ್ನಾಟಕದಲ್ಲಿ ನರೇಂದ್ರ ಮೋದಿಗೆ ಮತ ಕೇಳಲು ನೈತಿಕ ಹಕ್ಕೂ ಇಲ್ಲ, ಭೌತಿಕ ಹಕ್ಕೂ ಇಲ್ಲ. ಹೊಸ ಮುಖಗಳಿಗೆ ಈ ಸಲ ಕಾಂಗ್ರೆಸ್ ಅವಕಾಶ ಕೊಟ್ಟಿದೆ, ಅವರ ಗೆಲುವು ಆಗಬೇಕು. ಬೆಳಗಾವಿ ಬಿಜೆಪಿ ಟಿಕೆಟ್ ಆ ಪುಣ್ಯಾತ್ಮ ಜಗದೀಶ್ ಶೆಟ್ಟರ್‌ಗೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷಕ್ಕೆ ಜಗದೀಶ್ ಶೆಟ್ಟರ್ ವಿಶ್ವಾಸದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಹಂಚಿದ ಆರೋಪ- ನವೀನ್ ಗೌಡಗೆ SIT ನೋಟಿಸ್

    ಅನಾರೋಗ್ಯದ ಮಧ್ಯೆಯೂ ಸೋನಿಯಾ ಗಾಂಧಿ ಹುಬ್ಬಳ್ಳಿಗೆ ಬಂದು ಪ್ರಚಾರ ಮಾಡಿದ್ರು. ನಮ್ಮ ಜೊತೆಗೆ ಬಂದವರಿಗೆ ಗೌರವ ಕೊಡಬೇಕೆಂದು ಅಂದು ಸೋನಿಯಾ ಬಂದಿದ್ರು. ಹೀಗಿದ್ದರೂ ಈ ಪುಣ್ಯಾತ್ಮನಿಗೆ ಕೃತಜ್ಞತಾ ಭಾವ ಇಲ್ಲ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದು ಯಾರಿಗೂ ನೆನಪಿಲ್ಲ. ಏಕೆಂದರೆ ಅವರ ಕೊಡುಗೆ ಶೂನ್ಯ. ಹುಬ್ಬಳ್ಳಿಯಿಂದ ಕಣಕ್ಕಿಳಿದಿದ್ರೆ ಇನ್ನೂ ಹಲವು ಸಲ ಸೋಲಿಸುತ್ತಿದ್ದರು. ಅಲ್ಲಿ ಸಲ್ಲದವರು ಇಲ್ಲಿ ಸಲ್ಲುವುದು ಸಾಧ್ಯವೇ? ಪಾಪ ಮಹಿಳೆ, ಗಂಡನ ಕಳೆದುಕೊಂಡ ವಿಧವೆಯ ಟಿಕೆಟ್‌ನ್ನು ಶೆಟ್ಟರ್ ತಪ್ಪಿಸಿದರು. ವಿಧವೆ ಟಿಕೆಟ್ ತಪ್ಪಿಸಿ ಜಗದೀಶ್ ಶೆಟ್ಟರ್ ಬೆಳಗಾವಿಯಿಂದ ಸ್ಫರ್ಧಿಸುತ್ತಿದ್ದಾರೆ ಎಂದು ಟೀಕಿಸಿದರು.

    ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಿದ್ದು ನಾಚಿಕೆಗೇಡಿನ ಸಂಗತಿ. ದೇವಗೌಡರು ಈ ಪ್ರಕರಣದಲ್ಲಿ ಸುಮ್ಮನೆ ಇರಬೇಕು, ಅಂದಾಗ ಅವರೂ ಕೃತ್ಯ ಖಂಡಿಸಿದಂತೆ ಆಗ್ತದೆ. ರಮೇಶ್ ಜಾರಕಿಹೊಳಿ, ಪ್ರಜ್ವಲ್ ರೇವಣ್ಣ ಅನ್ಯಾಯ ಮಾಡಿದ್ದಾರೆ. ಈ ಇಬ್ಬರು ಏನು ಪುರುಷಾರ್ಥದ ಕೆಲಸ ಮಾಡಿದ್ದಾರಾ? ದೌರ್ಜನ್ಯ ಎಸಗಿದ್ದು ಸ್ಪಷ್ಟವಾಗಿದೆ. ದಾಖಲೆಗಳಿವೆ ನಾಚಿಕೆಗೇಡಿನ ಕೆಲಸ ಮಾಡಿದ್ದಾರೆ. ಈಗ ಡಿಕೆ ಶಿವಕುಮಾರ್ ವಿರುದ್ಧ ಬೆರಳು ತೋರುವ ಕೆಲಸ ಮಾಡಬಾರದು ಎಂದರು.

  • ಹೆಚ್‍ಡಿಕೆ ಸಹವಾಸ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ: ವೀರಪ್ಪ ಮೊಯ್ಲಿ

    ಹೆಚ್‍ಡಿಕೆ ಸಹವಾಸ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲ: ವೀರಪ್ಪ ಮೊಯ್ಲಿ

    ಚಿಕ್ಕಬಳ್ಳಾಪುರ: ಕುಮಾರಸ್ವಾಮಿಯವರ (H.D Kumaraswamy) ಸಹವಾಸ ಮಾಡಿದವರು ಯಾರೂ ಉದ್ಧಾರವಾದ ಇತಿಹಾಸ ಇಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ (Veerappa Moily) ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಕಥೆ ಇತಿಹಾಸ ಹೇಳುತ್ತಾ ಹೋದರೆ ಹಲವು ವರ್ಷಗಳೆ ಬೇಕು. ಅವರ ಸಹವಾಸದಿಂದ ಸುಖವಿಲ್ಲ. ಅವರನ್ನು ನಂಬಿದವರಿಗೆ ದೇವರೇ ಗತಿ. ನನಗೆ ಸಿಎಂ ಆಗಿ, ರಾಜಕೀಯದಲ್ಲಿ 50-55 ವರ್ಷದ ರಾಜಕೀಯ ಅನುಭವವಿದೆ. ನನ್ನ ರಾಜಕೀಯ ಇತಿಹಾಸದಲ್ಲಿ ಈ ಅನುಭವ ಇದೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದ ಅಮಲಿನಲ್ಲಿ ಹೀಗೆಲ್ಲ ಆಡ್ತಿದೆ: ಹನುಮಧ್ವಜ ತೆರವು ವಿಚಾರಕ್ಕೆ ಬಿವೈವಿ ಕಿಡಿ

    ಕುಮಾರಸ್ವಾಮಿಯವರ ತಂದೆಯವರ ಜೊತೆ ನಾನು ಚೆನ್ನಾಗಿ ಇದ್ದ ಕಾಲವೂ ಇದೆ. ಅದೇ ಪ್ರಕಾರ ಕಷ್ಟ ನಷ್ಟ ಅನುಭವಿಸಿದ್ದು ಇದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕುಮಾರಸ್ವಾಮಿ ಜೊತೆ ಬಹಳ ಜನ ಸ್ನೇಹ ಮಾಡಿದ್ರು, ಯಾರೂ ಉದ್ಧಾರ ಆಗಿಲ್ಲ. ಅವರ ಜೊತೆ ಸ್ನೇಹ ಮಾಡಿದವರು ಗುಂಡಿಗೆ ಬೀಳುತ್ತಾರೆ. ಬಿಜೆಪಿ (BJP) ಉದ್ಧಾರ ಆಗುವುದಾದರೆ ಆಗಲಿ ಎಂದಿದ್ದಾರೆ. ಇದನ್ನೂ ಓದಿ: ರಾಹುಲ್ ಬಿಜೆಪಿಯ ಸ್ಟಾರ್ ಪ್ರಚಾರಕ: ಹಿಮಂತ್ ಬಿಸ್ವಾ ಶರ್ಮಾ

  • 11 ದಿನಗಳ ಕಾಲ ಮೋದಿ ಉಪವಾಸ ಮಾಡಿದ್ದೇ ಅನುಮಾನ: ವೀರಪ್ಪ ಮೊಯ್ಲಿ

    11 ದಿನಗಳ ಕಾಲ ಮೋದಿ ಉಪವಾಸ ಮಾಡಿದ್ದೇ ಅನುಮಾನ: ವೀರಪ್ಪ ಮೊಯ್ಲಿ

    ಚಿಕ್ಕಬಳ್ಳಾಪುರ: ಅಯೋಧ್ಯೆ (Ayodhya) ರಾಮಮಂದಿರ (Ram Mandir) ಲೋಕಾರ್ಪಣೆ, ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) 11 ದಿನಗಳ ಕಾಲ ಉಪವಾಸ (Fasting) ವ್ರತ ಮಾಡಿದ್ದೇ ಅನುಮಾನ ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ (Veerappa Moily) ಅನುಮಾನ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಕಾಂಗ್ರೆಸ್ (Congress) ವತಿಯಿಂದ ಪ್ರತಿಭಟನೆ ನಡೆಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರೀ ಎಳನೀರು ಕುಡಿದು ಉಪವಾಸ ಮಾಡಿದ್ರೆ ಮನುಷ್ಯ ಒಂದೆರೆಡು ದಿನದಲ್ಲಿ ಕೆಳಗೆ ಬೀಳುತ್ತಾನೆ. 11 ದಿನಗಳ ಕಾಲ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಬಿಜೆಪಿಯವರು ಬೀದಿ ಬೀದಿಯಲ್ಲಿ ರಾಮನನ್ನು ಆಟ ಆಡಿಸಿದ್ದಾರೆ: ಮಧು ಬಂಗಾರಪ್ಪ

    ನಾನು ಬೆಳಗ್ಗೆ ವಾಕಿಂಗ್ ಮಾಡಬೇಕಾದರೆ ವೈದ್ಯರ ಬಳಿ ಈ ಬಗ್ಗೆ ಚರ್ಚೆ ಮಾಡಿದೆ. ವೈದ್ಯರ ಅಭಿಪ್ರಾಯದ ಪ್ರಕಾರ ಮನುಷ್ಯ ಬದುಕೋದು ಅಸಾಧ್ಯ. ಹಾಗಾಗಿ ನರೇಂದ್ರ ಮೋದಿಯವರು ಉಪವಾಸ ವ್ರತ ಮಾಡಿರೋದು ಅನುಮಾನ. ಹಾಗೆ ಉಪವಾಸ ಮಾಡದೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಿದ್ರೆ ಆ ಕ್ಷೇತ್ರಕ್ಕೆ ಎಷ್ಟು ಪಾವಿತ್ರತ್ಯತೆ ಬರಲಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನನಗೆ ರಾಮನ ಬಗ್ಗೆ ಭಕ್ತಿ ಇಲ್ಲ, ಅಯೋಧ್ಯೆಗೆ ಹೋಗಲ್ಲ: ಪ್ರಿಯಾಂಕ್ ಖರ್ಗೆ

  • ನಿಜವಾದ ಬ್ರಾಹ್ಮಣರು, ಸ್ವಾಮೀಜಿಗಳು ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು: ವೀರಪ್ಪ ಮೊಯ್ಲಿ

    ನಿಜವಾದ ಬ್ರಾಹ್ಮಣರು, ಸ್ವಾಮೀಜಿಗಳು ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು: ವೀರಪ್ಪ ಮೊಯ್ಲಿ

    ಚಿಕ್ಕಬಳ್ಳಾಪುರ: ನಿಜವಾದ ಬ್ರಾಹ್ಮಣರು-ಸ್ವಾಮೀಜಿಗಳು ಆಗಿದ್ರೆ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು (Narendra Modi) ಗರ್ಭಗುಡಿಗೆ ಬಿಡಬಾರದಿತ್ತು ಅಂತ ಮಾಜಿ ಸಿಎಂ ವೀರಪ್ಪಮೊಯ್ಲಿ (Veerappa Moily) ಹೇಳಿದರು.

    ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ (Congress) ವತಿಯಿಂದ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ರಾಮಮಂದಿರ ಅಪೂರ್ಣ ಮಂದಿರ. ಕೇವಲ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಮಾಡಿದ್ರೆ ಸಾಲದು. ಅಲ್ಲಿ ರಾಮ ಲಕ್ಷಣ, ಸೀತಾ ಹಾಗೂ ಆಂಜನೇಯನ ವಿಗ್ರಹಗಳು ಇರಬೇಕು ಆಗಲೇ ರಾಮಮಂದಿರ ಪೂರ್ಣ ಆಗೋದು ಎಂದರು.

    ಗುಜರಾತ್‍ನ (Gujrat) ಹತ್ಯಾಕಾಂಡದ ವೇಳೆ ಅಂದಿನ ಸಿಎಂ ಆಗಿದ್ದ ನರೇಂದ್ರ ಮೋದಿ ರಾಜಧರ್ಮ, ಕಾನೂನು ಪರಿಪಾಲನೆ ಮಾಡಲಿಲ್ಲ. ಅಂತಹ ನರೇಂದ್ರ ಮೋದಿಯವರಿಂದ ರಾಮಲಲ್ಲಾ ಪ್ರತಿಷ್ಠಾಪನೆ ಮಾಡಿಸಿದ್ದು ಎಷ್ಟು ಸರಿ..? ಅವರಿಂದ ದೇವಾಲಯಕ್ಕೆ ಎಷ್ಟು ಪಾವಿತ್ರತ್ಯತೆ ಬರಲಿದೆ..? ನರೇಂದ್ರ ಮೋದಿ ಗರ್ಭಗುಡಿಗೆ ಪ್ರವೇಶ ಮಾಡಿದ್ದೇ ತಪ್ಪು, ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು ಸಹ ತಪ್ಪು, ನಿಜವಾದ ಸ್ವಾಮೀಜಿಗಳು, ಬ್ರಾಹ್ಮಣರು ಆಗಿದ್ರೆ ನರೇಂದ್ರ ಮೋದಿಯನ್ನ ಗರ್ಭಗುಡಿ ಒಳಗೆ ಬಿಡಬಾರದಿತ್ತು ಅಂತ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಮಲಲ್ಲಾನಿಗೆ 11 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಗುಜರಾತ್ ವ್ಯಾಪಾರಿ!

  • ಬಿಜೆಪಿಯವರಿಗೆ ಬೇರೆಯವರ ಕೆರೆಯಲ್ಲಿ ಮೀನು ಹಿಡಿಯುವುದೇ ಕೆಲಸ: ವೀರಪ್ಪ ಮೊಯ್ಲಿ

    ಬಿಜೆಪಿಯವರಿಗೆ ಬೇರೆಯವರ ಕೆರೆಯಲ್ಲಿ ಮೀನು ಹಿಡಿಯುವುದೇ ಕೆಲಸ: ವೀರಪ್ಪ ಮೊಯ್ಲಿ

    ಬೆಳಗಾವಿ: ಬಿಜೆಪಿಯವರಿಗೆ (BJP) ಬೇರೆಯವರ ಕೆರೆಯಲ್ಲಿ ಮೀನು ಹಿಡಿಯುವುದೇ ಕೆಲಸ. ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗದಿರುವುದು ವಿಪರ್ಯಾಸ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ (Veerappa Moily) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    ಬೆಳಗಾವಿಯಲ್ಲಿ (Belagavi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯವರಿಗೆ ಆಪರೇಷನ್ ಕಮಲದ (Operation Kamala) ರುಚಿ ಹಿಡಿದಿದೆ. ಈ ಅಸ್ತ್ರ ಪ್ರಯೋಗಿಸಿ ಏಳೆಂಟು ರಾಜ್ಯಗಳಲ್ಲಿ ಅಧಿಕಾರ ಹಿಡಿದಿದ್ದಾರೆ. ಆದರೆ ಕರ್ನಾಟಕದಲ್ಲಿ ಅವರ ಆಟ ನಡೆಯುವುದಿಲ್ಲ ಎಂದರು. ಇದನ್ನೂ ಓದಿ: ಲಾ ಓದ್ಬೇಡ ಎಂದಿದ್ದ ಶಾನುಭೋಗರ ಆಸ್ತಿಗೆ ನಾನೇ ಲಾಯರ್ ಆದೆ: ಸಿಎಂ

    ಇದೇ ವೇಳೆ ಎರಡೂವರೆ ವರ್ಷದ ಬಳಿಕ ಸಿಎಂ ಬದಲಾಗುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ (Siddaramaiah) ನಮ್ಮ ಮುಖ್ಯಮಂತ್ರಿ. ಈಗ ಸರ್ಕಾರ ಸುಭದ್ರವಾಗಿದೆ. ನಾವು ಯಾವುದೇ ವದಂತಿಗಳಿಗೆ ಕಿವಿಗೊಡುವುದಿಲ್ಲ. ಎರಡೂವರೆ ವರ್ಷ ಬಳಿಕ ಸಿಎಂ ಬದಲಾವಣೆ ಆಗುವ ಕುರಿತು ಯಾವುದೇ ಒಪ್ಪಂದ, ಮಾತುಕತೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಜನವರಿಯಲ್ಲಿ ಜಾತಿಗಣತಿ ವರದಿ ಸ್ವೀಕಾರ: ಸಿದ್ದರಾಮಯ್ಯ

    ಚುನಾವಣೆಯಲ್ಲಿ ಘೋಷಿಸಿದಂತೆ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇವೆ. ಮಂತ್ರಿ ಆಗುವ ಆಸೆಯಿಂದ ಒಂದಿಬ್ಬರು ಶಾಸಕರು ಅಸಮಾಧಾನದಿಂದ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡಿರಬಹುದು. ಅದು ಸರಿಯಲ್ಲ. ಅವರು ಹೇಳಿಕೆ ಕೊಟ್ಟ ಮಾತ್ರಕ್ಕೆ ಮುಖ್ಯಮಂತ್ರಿ ಬದಲಾಗುವುದಿಲ್ಲ. ಶಾಸಕರು ಹೀಗೆ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಆಡಳಿತದಲ್ಲಿ ಕರ್ನಾಟಕಕ್ಕೆ ಗ್ರಹಣ- ಬಿಜೆಪಿ ವ್ಯಂಗ್ಯ

    ಬಿಜೆಪಿ ಮತ್ತು ಜೆಡಿಎಸ್ (JDS) ಬಣ್ಣ ಈಗ ಬಯಲಾಗಿದೆ. ತಾವಿಬ್ಬರೂ ಸೇರದಿದ್ದರೆ ಉಳಿಗಾಲವಿಲ್ಲ ಎಂದು ಹೆದರಿ ಒಂದಾಗಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ (Congress) ಅನುಕೂಲವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: KEA ಪರೀಕ್ಷೆ- ಉದ್ದ ತೋಳಿನ ಶರ್ಟ್ ಧರಿಸಿದ್ದ ಪರೀಕ್ಷಾರ್ಥಿಗಳಿಗೆ ಶಾಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಅಂತ ಅರ್ಥ: ವೀರಪ್ಪ ಮೊಯ್ಲಿ

    ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಅಂತ ಅರ್ಥ: ವೀರಪ್ಪ ಮೊಯ್ಲಿ

    ಮಂಗಳೂರು: ಜೆಡಿಎಸ್ (JDS) ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಅಂತ ಅರ್ಥ. ಅವರ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ, ಈಗ ಅದು ಬಿಜೆಪಿಗೆ ಹೋಗಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ (Veerappa Moily) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಬಾರಿಯೂ ಚಿಕ್ಕಬಳ್ಳಾಪುರದಲ್ಲಿ (Chikkaballapur) ಸ್ಪರ್ಧೆ ಮಾಡುತ್ತೇನೆ. ಬಿ.ಕೆ.ಹರಿಪ್ರಸಾದ್ ವಿಚಾರ ಶಿಸ್ತು ಕಮಿಟಿ ಮುಂದೆ ಇದೆ. ಅವರಿಗೆ ನೊಟೀಸ್ ಕೊಟ್ಟು ಇದರ ಬಗ್ಗೆ ಸಮಿತಿ ನೋಡಿಕೊಳ್ಳುತ್ತದೆ ಎಂದರು.

    ಮೂರು ಡಿಸಿಎಂ (DCM) ಪಕ್ಷದ ಅಭಿಪ್ರಾಯ ಅಲ್ಲ, ಕೆಲವರ ವೈಯಕ್ತಿಕ ಅಭಿಪ್ರಾಯ. ನಮ್ಮ ಪಕ್ಷ ಬಲಿಷ್ಠವಾಗಿದೆ, ಅದರೆ ಕೆಲವರು ಪಕ್ಷ ಗಟ್ಟಿ ಮಾಡಲು ಹೇಳುತ್ತಾರೆ. ಅವರ ಸಲಹೆ ಸೂಚನೆಗಳನ್ನೂ ನಾವು ಕೇಳುತ್ತೇವೆ. ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಆದರೆ ಸದ್ಯಕ್ಕೆ ಮೂರು ಡಿಸಿಎಂ ಚರ್ಚೆ ಇಲ್ಲ ಎಂದು ತಿಳಿಸಿದರು.

    ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಹೋರಾಟ ವಿಚಾರದ ಕುರಿತು ಮಾತನಾಡಿ, ಒಂದು ಮಳೆ ಬಂದರೆ ಕಾವೇರಿ ವಿಚಾರ ತಣ್ಣಗಾಗುತ್ತೆ. ಈಗ ನಮ್ಮ ಸರ್ಕಾರ ಇರುವಾಗ ವಿರೋಧ ಮಾಡಲು ಆಗಲ್ಲ. ನಮ್ಮ ಸರ್ಕಾರ ಕೋರ್ಟ್ ಮೂಲಕ ಸಮಸ್ಯೆ ಸರಿ ಮಾಡಲು ಯತ್ನಿಸ್ತಿದೆ. ಬಿಜೆಪಿಯವರು (BJP) ಈಗ ವಿರೋಧ ಪಕ್ಷದಲ್ಲಿ ಇದ್ದು ವಿರೋಧಿಸ್ತಾ ಇದ್ದಾರೆ. ನಮ್ಮ ಸರ್ಕಾರ ಈ ರಾಜ್ಯದ ಜನರ ಪರವಾಗಿಯೇ ಕೆಲಸ ಮಾಡಲಿದೆ. ಕರ್ನಾಟಕ ಕಾವೇರಿ ವಿಚಾರದಲ್ಲಿ ಸೋಲಲು ಅನೇಕ ಕಾರಣಗಳಿವೆ ಎಂದರು.

    ನಾವು ಕಾವೇರಿ ನೀರನ್ನು ಗರಿಷ್ಠವಾಗಿ ಉಪಯೋಗ ಮಾಡಿಲ್ಲ. ಆ ಕಾಲದ ಆಡಳಿತಗಾರರು ಮಾಡಿದ ತಪ್ಪಿನಿಂದ ಹೀಗಾಗುತ್ತಿದೆ. ಯಗಚಿ ಅಣೆಕಟ್ಟು ಮಾಡೋದನ್ನೂ ಅನೇಕರು ತಡೆದಿದ್ದರು. ಇದರಿಂದ ನಮಗೆ ಸಿಗಬೇಕಾದ ನೀರಿನ ಪಾಲು ಸಿಗಲಿಲ್ಲ ಎಂದು ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]