Tag: ವೀರಪ್ಪ ಮೊಯ್ಲಿ

  • ಮೊಯ್ಲಿ ವಿರೋಧಿ ಮುನಿಯಾಲು ಉದಯ್‌ಗೆ ಕಾಂಗ್ರೆಸ್ ಟಿಕೆಟ್ – ಕಾರ್ಕಳದಲ್ಲಿ ಟೈಟ್ ಫೈಟ್ ಫಿಕ್ಸ್

    ಮೊಯ್ಲಿ ವಿರೋಧಿ ಮುನಿಯಾಲು ಉದಯ್‌ಗೆ ಕಾಂಗ್ರೆಸ್ ಟಿಕೆಟ್ – ಕಾರ್ಕಳದಲ್ಲಿ ಟೈಟ್ ಫೈಟ್ ಫಿಕ್ಸ್

    ಉಡುಪಿ: ಜಿಲ್ಲೆಯ ಕಾರ್ಕಳ (Karkala) ಕ್ಷೇತ್ರದ ಕಾಂಗ್ರೆಸ್ (Congress) ಟಿಕೆಟ್ ಹಿಂದುತ್ವವಾದಿ ಗುತ್ತಿಗೆದಾರ ಮುನಿಯಾಲು ಉದಯ್ ಕುಮಾರ್ ಶೆಟ್ಟಿ (Muniyalu Uday Kumar Shetty) ಪಾಲಾಗಿದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa Moily) ಜೊತೆ ತೀವ್ರ ಸೆಣಸಾಟ ನಡೆಸಿ ಕಾರ್ಕಳದಲ್ಲಿ ನಾಲ್ವರು ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದರೂ ಉದಯ್ ಶೆಟ್ಟಿ ಬಿ ಫಾರಂ ಪಡೆದಿದ್ದಾರೆ.

    ಅರ್ಜಿ ಸಲ್ಲಿಸಿರುವ ನಾಲ್ವರಿಗೆ ಕೈ ಟಿಕೆಟ್ ಸಿಕ್ಕಿಲ್ಲ. ಬದಲಾಗಿ ಉದ್ಯಮಿ ಗುತ್ತಿಗೆದಾರ ಮುನಿಯಾಲು ಉದಯ್ ಕುಮಾರ್ ಶೆಟ್ಟಿಗೆ ಬಿ ಫಾರಂ ಸಿಕ್ಕಿದೆ. ಮಂಜುನಾಥ್ ಪೂಜಾರಿ (ಮೊಯ್ಲಿ ಅಭ್ಯರ್ಥಿ), ಸುರೇಂದ್ರ ಶೆಟ್ಟಿ, ಡಿಆರ್ ರಾಜು, ನೀರೆ ಕೃಷ್ಣ ಶೆಟ್ಟಿ ಕಾರ್ಕಳ ಟಿಕೆಟ್ ಆಕಾಂಕ್ಷಿಗಳಾಗಿದ್ದರು.

    2018ರ ಚುನಾವಣೆಯಲ್ಲಿ ಆಕಾಂಕ್ಷಿಯಾಗಿದ್ದ ಉದಯ್ ಶೆಟ್ಟಿ ಟಿಕೆಟ್ ಕೈ ತಪ್ಪಿದಾಗ ಬಹಿರಂಗವಾಗಿ ವೀರಪ್ಪ ಮೊಯ್ಲಿ ವಿರುದ್ಧ ಸಿಡಿದೆದ್ದಿದ್ದರು. ವೀರಪ್ಪ ಮೊಯ್ಲಿ ಮತ್ತು ಮಾಜಿ ಶಾಸಕ ಗೋಪಾಲ ಭಂಡಾರಿಯ ಶವಯಾತ್ರೆ ಮಾಡಿ ಮೊಯ್ಲಿ ಕೆಂಗಣ್ಣಿಗೆ ಗುರಿಯಾಗಿದ್ದರು. ಆನಂತರ ಉದಯ್ ಶೆಟ್ಟಿ ಮತ್ತು ವೀರಪ್ಪ ಮೊಯ್ಲಿಯ ನಡುವೆ ಭಾರೀ ಅಂತರ ಬೆಳೆದಿತ್ತು. ಹುಟ್ಟೂರಲ್ಲಿ ಗೌರವಕ್ಕೆ ಧಕ್ಕೆ ಆಗಿದೆ ಎಂದು ಉದಯ್ ಶೆಟ್ಟಿ ಬಣದ ವಿರುದ್ಧ ಮೊಯ್ಲಿ ಮುನಿಸಿಕೊಂಡಿದ್ದರು.

    ರಾಜ್ಯದ್ಯಂತ 40% ಕಮಿಷನ್ ಆರೋಪವನ್ನು ಕಾಂಗ್ರೆಸ್ ಮಾಡುತ್ತಿರುವಾಗಲೇ ಮುನಿಯಾಲು ಉಡುಪಿಯಲ್ಲಿ ಉದಯ್ ಶೆಟ್ಟಿ ಕಮಿಷನ್ ಎಲ್ಲ ಇಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಇರುಸುಮುರುಸು ತಂದಿದ್ದರು. ಉದಯ್ ಶೆಟ್ಟಿ ಹೆಸರು ಫೈನಲ್ ಆಗುತ್ತಿದ್ದಂತೆ ವೀರಪ್ಪ ಮೊಯ್ಲಿ ಪುತ್ರ ಹರ್ಷ ಮೊಯ್ಲಿ ಟ್ವೀಟ್ ಮಾಡಿದ್ದು, ರಾಜ್ಯಾದ್ಯಂತ ನಡೆಸುತ್ತಿರುವ ಅಭಿಯಾನಕ್ಕೆ ಇದು ಹಿನ್ನಡೆ ಅಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದುಗೆ ಕೋಲಾರ ಟಿಕೆಟ್‌ ಮಿಸ್‌ – ವರುಣಾ ಒಂದೇ ಫಿಕ್ಸ್‌

    ಹಿಂದು-ಹಿಂದು-ಹಿಂದು ಸ್ಪರ್ಧೆ:
    ಹಿಂದುತ್ವ ಅಭಿವೃದ್ಧಿ ಎನ್ನುವ ಇಂಧನ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ನನ್ನದು ಅಸಲಿ ಹಿಂದುತ್ವ ಎನ್ನುವ ಪ್ರಮೋದ್ ಮುತಾಲಿಕ್. ಕಳೆದ ಎರಡು ದಶಕಗಳಿಂದ ಉದಯ್ ಶೆಟ್ಟಿ ಮುನಿಯಾಲು ಕಾರ್ಕಳ ತಾಲೂಕಿನಾದ್ಯಂತ ಕೊಡುಗೈ ದಾನಿ ಎಂದು ಕರೆಸಿಕೊಂಡಿದ್ದಾರೆ. ಸಾಫ್ಟ್ ಹಿಂದುತ್ವದ ಮೂಲಕ ಯಾರದ್ದೂ ವಿರೋಧ ಕಟ್ಟಿಕೊಂಡಿಲ್ಲ. ಜಾತಿ ಸಮೀಕರಣದ ಲೆಕ್ಕಾಚಾರ ಮತ್ತು ಕಳೆದ ವರ್ಷ ಟಿಕೆಟ್ ಸಿಗದ ಸಹಾನುಭೂತಿಯ ಮತಗಳು ಪ್ರಮುಖವಾಗಿರುವುದರಿಂದ ಸುನಿಲ್ ಕುಮಾರ್ ಮತ್ತು ಉದಯ್ ಶೆಟ್ಟಿ ನಡುವೆ ಜೋರು ಜಟಾಪಟಿ ನಡೆಯಲಿದೆ. ಪ್ರಮೋದ್ ಮುತಾಲಿಕ್ ಎಷ್ಟು ಮತ ಪಡೆಯುತ್ತಾರೆ ಎಂಬುದು ಕೂಡಾ ಕುತೂಹಲಕಾರಿಯಾಗಿದೆ.

    ನನ್ನದೂ ಹಿಂದುತ್ವ, ನಾನು ನಿಜವಾದ ಹಿಂದು ಎಂದು ಹೇಳುವ ಉದಯ್ ಶೆಟ್ಟಿ ನಡುವೆ ಕಾರ್ಕಳದಲ್ಲಿ ಈ ಬಾರಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಬಿಜೆಪಿಯವರಿಂದಲೇ ಕಾಂಗ್ರೆಸ್ ಸೇರುವ ವಾತಾವರಣ ನಿರ್ಮಾಣ: ಲಕ್ಷ್ಮಣ ಸವದಿ

  • ಬಿಜೆಪಿಗೆ ಬೇರೆ ಪಕ್ಷಗಳಿಂದ ಕದಿಯೋ ರುಚಿ ಹಿಡಿದಿದೆ: ವೀರಪ್ಪ ಮೊಯ್ಲಿ ಲೇವಡಿ

    ಬಿಜೆಪಿಗೆ ಬೇರೆ ಪಕ್ಷಗಳಿಂದ ಕದಿಯೋ ರುಚಿ ಹಿಡಿದಿದೆ: ವೀರಪ್ಪ ಮೊಯ್ಲಿ ಲೇವಡಿ

    ರಾಯಚೂರು: ಬಿಜೆಪಿಗೆ (BJP) ಬೇರೆ ಪಕ್ಷಗಳಿಂದ ಕದಿಯುವ ರುಚಿ ಹಿಡಿದಿದೆ. ಬಿಜೆಪಿಗೆ ಇತಿಹಾಸವೂ ಇಲ್ಲ, ನಾಯಕತ್ವವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa Moily) ವ್ಯಂಗ್ಯವಾಡಿದ್ದಾರೆ.

    ರಾಯಚೂರಿನಲ್ಲಿ (Raichur) ಮಾತನಾಡಿದ ವೀರಪ್ಪ ಮೊಯ್ಲಿ, ಕಳೆದ 8 ವರ್ಷಗಳಲ್ಲಿ ಬಿಜೆಪಿ ಮಣಿಪುರ, ಮಹಾರಾಷ್ಟ್ರ, ಮಧ್ಯಪ್ರದೇಶ, ಗೋವಾ, ಕರ್ನಾಟಕದಲ್ಲೂ ಇರುವ ಸರ್ಕಾರಗಳನ್ನು ಕಸಿದುಕೊಂಡು ಅಧಿಕಾರ ನಡೆಸಿದೆ. ಪಶ್ಚಿಮ ಬಂಗಾಳದಲ್ಲಿ ಪ್ರಯತ್ನ ಮಾಡಿದರೂ ಯಶಸ್ವಿಯಾಗಲಿಲ್ಲ. ಇದು ಇಲ್ಲಿಗೇ ನಿಲ್ಲುತ್ತದೆ, ಇನ್ಮುಂದೆ ಯಶಸ್ವಿಯಾಗುವುದಿಲ್ಲ. ಜನರಿಗೆ ಬಿಜೆಪಿಯಿಂದ ಸಾಮಾಜಿಕ, ಆರ್ಥಿಕ, ರಾಜಕೀಯ ಲಾಭ ಸಿಗುತ್ತಿಲ್ಲ, ಇದು ಜನರಿಗೂ ಅರ್ಥವಾಗಿದೆ ಎಂದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಜೊಲ್ಲು ಸುರಿಸೋದ್ರಲ್ಲಿ ನಿಸ್ಸೀಮ – ಬಿಸಿ ಪಾಟೀಲ್ ಲೇವಡಿ

    ಬಿಹಾರದಲ್ಲಿ ನಿತೀಶ್ ಕುಮಾರ್, ಬಿಜೆಪಿ ಸಹವಾಸ ಬಿಟ್ಟಿದ್ದಾರೆ. 50 ಸೀಟ್‌ಗೆ ಇಳಿಸುತ್ತೇವೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಬಿಜೆಪಿಗೆ ಯಾವ ಪರಂಪರೆಯೂ ಇಲ್ಲ. ಜಾತೀಯತೆ, ಮತೀಯತೆಯಷ್ಟೇ ಬಿಜೆಪಿಗೆ ಇರುವುದು. ಅದಕ್ಕೆ ಬೇರೆ ಬೇರೆ ಸ್ವಾತಂತ್ರ‍್ಯ ಹೋರಾಟಗಾರರ ಹೆಸರನ್ನು ಬಳಸುತ್ತಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಬಗ್ಗೆ ಕ್ಲೇಮ್ ಮಾಡಿದ್ರು. ಕಲ್ಯಾಣ ಕರ್ನಾಟಕ ನಮ್ಮಿಂದಾಯಿತು ಅಂತ ಮಾತನಾಡುತ್ತಿದ್ದಾರೆ. ಈಗ ಸುಭಾಷ್ ಚಂದ್ರಬೋಸ್ ತಂದಿದ್ದಾರೆ ಅಂತ ಕಿಡಿಕಾರಿದರು. ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಬಾಲಕಿ ಕಾಲಿಗೆ ಚಪ್ಪಲಿ ತೊಡಿಸಿದ ರಾಹುಲ್‌ ಗಾಂಧಿ – ಸರಳಜೀವಿ ಎಂದ ನೆಟ್ಟಿಗರು

    Live Tv
    [brid partner=56869869 player=32851 video=960834 autoplay=true]

  • ನಾಲ್ಕು ತಲೆಮಾರಿಗೆ ಬೇಕಾಗುವಷ್ಟು ಸಂಪಾದನೆ ಮಾಡಿದ್ದಾರೆ ಅಂತ ಹೇಳಿರೋದು ಕಾಂಗ್ರೆಸ್ಸಿಗರಿಗೆ ಅಲ್ಲ: ಮೊಯ್ಲಿ

    ನಾಲ್ಕು ತಲೆಮಾರಿಗೆ ಬೇಕಾಗುವಷ್ಟು ಸಂಪಾದನೆ ಮಾಡಿದ್ದಾರೆ ಅಂತ ಹೇಳಿರೋದು ಕಾಂಗ್ರೆಸ್ಸಿಗರಿಗೆ ಅಲ್ಲ: ಮೊಯ್ಲಿ

    ತುಮಕೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು, ನಾಲ್ಕು ತಲೆಮಾರಿಗೆ ಬೇಕಾಗುವಷ್ಟು ಸಂಪಾದನೆ ಮಾಡಿದ್ದಾರೆ ಎಂದು ಹೇಳಿರೋದು ಕಾಂಗ್ರೆಸ್ಸಿಗರಿಗೆ ಅಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಸಮರ್ಥಿಸಿಕೊಂಡಿದ್ದಾರೆ.

    ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗಿಯಾಗಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ಹೇಳಿಕೆಗೆ ಅವರೇ ಸ್ಪಷ್ಟೀಕರಣ ಕೊಟ್ಟಿದ್ದಾರೆ. ನಾಲ್ಕು ತಲೆಮಾರಿಗೆ ಬೇಕಾಗುವಷ್ಟು ಸಂಪಾದನೆ ಮಾಡಿದ್ದಾರೆ ಎಂದು ಹೇಳಿರೋದು ಕಾಂಗ್ರೆಸ್ಸಿಗರಿಗೆ ಅಲ್ಲ. ಬದಲಾಗಿ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿಯ ಫಲವನ್ನ ಅನುಭವಿಸಿದ್ದ ದೇಶದ ಜನರಿಗೆ ಹೇಳಿದ್ದು. ಅವರು ನಮ್ಮ ಶ್ರೇಷ್ಠ ನಾಯಕರು. ಅದರ ಬಗ್ಗೆ ನಾನೇನು ಮಾತನಾಡಲ್ಲ ಎಂದು ತಿಳಿಸಿದರು. ಇದನ್ನೂ ಓದಿ:  3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ, ಈಗ ಋಣ ತೀರಿಸುವ ಸಮಯ ಬಂದಿದೆ: ರಮೇಶ್ ಕುಮಾರ್

    ನಾನು ಸಿಎಂ ಆಕಾಂಕ್ಷಿ ಅಲ್ಲ. ನಾನು ಮುಖ್ಯಮಂತ್ರಿ ಆಗಿದ್ದೀನಿ,ಕೇಂದ್ರ ಸಚಿವ ಆಗಿದ್ದೀನಿ. ನನಗೆ ತೃಪ್ತಿ ಇದೆ. ಕಾಂಗ್ರೆಸ್ಸನ್ನು ಬಲಪಡಿಸೋ ಕೆಲಸ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರು ಮಾಡಬೇಕು. ಸಿಎಂ ಆಕಾಂಕ್ಷಿಗಳ ಬಗ್ಗೆ ಈಗ ಚರ್ಚೆ ಏನಿಲ್ಲ. 2023ಕ್ಕೆ ಕಾಂಗ್ರೆಸ್ ಖಂಡಿತಾ ಅಧಿಕಾರಕ್ಕೆ ಬರುತ್ತೆ. ಹೈಕಮಾಂಡ್ ಹಾಗೂ ಶಾಸಕರು ಯಾರನ್ನ ಸೂಚಿಸುತ್ತಾರೆ ಅವರು ಸಿಎಂ ಆಗ್ತಾರೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • 40% ಕಮಿಷನ್ ರಾಜ್ಯ ಸರ್ಕಾರದ ಬಹುದೊಡ್ಡ ಸಾಧನೆ – ಬಿಜೆಪಿ ಸಾಧನಾ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರ ಟೀಕೆ

    40% ಕಮಿಷನ್ ರಾಜ್ಯ ಸರ್ಕಾರದ ಬಹುದೊಡ್ಡ ಸಾಧನೆ – ಬಿಜೆಪಿ ಸಾಧನಾ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರ ಟೀಕೆ

    ಚಿಕ್ಕಬಳ್ಳಾಪುರ: 40% ಕಮಿಷನ್ ರಾಜ್ಯ ಸರ್ಕಾರದ ಬಹುದೊಡ್ಡ ಸಾಧನೆ ಎಂದು ಟೀಕಿಸಿ, ಜುಲೈ 28 ರಂದು ದೊಡ್ಡಬಳ್ಳಾಪುರದಲ್ಲಿ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ಬಿಜೆಪಿ ಸಾಧನಾ ಸಮಾವೇಶದ ವಿರುದ್ಧ ಕಾಂಗ್ರೆಸ್ ನಾಯಕರು ಕೆಂಡಕಾರಿದ್ದಾರೆ

    ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರಾದ ವೀರಪ್ಪ ಮೊಯ್ಲಿ ಹಾಗೂ ವಿ.ಎಸ್ ಉಗ್ರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮಾಜಿ ಸಿಎಂ ವೀರಪ್ಪ ಮೊಯ್ಲಿ ಮಾತನಾಡಿ, ಅದು ಸಾಧನಾ ಸಮಾವೇಶ ಅಲ್ಲ ಅದು ಶೂನ್ಯ ಸಮಾವೇಶ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಚಿವ ಜೆ.ಸಿ ಮಾಧುಸ್ವಾಮಿಗೆ ಆನೆಯಿಂದ ಮಾಲಾರ್ಪಣೆ

    ಉಗ್ರಪ್ಪ ಮಾತನಾಡಿ, ಕಳೆದ 1 ವರ್ಷದಲ್ಲಿ ಯಾವ ಸಾಧನೆ ರಾಜ್ಯ ಸರ್ಕಾರ ಮಾಡಿದೆ ಎಂದು ಬಿಜೆಪಿ ನಾಯಕರಿಗೆ ಪ್ರಶ್ನೆ ಮಾಡಿದರು. 40% ಕಮಿಷನ್ ಪಡೆಯೋದು ರಾಜ್ಯ ಸರ್ಕಾರದ ಬಹು ದೊಡ್ಡ ಸಾಧನೆ. ರೈತರು, ನಿರುದ್ಯೋಗಿಗಳು, ಮೂಲಭೂತ ಸೌಲಭ್ಯಗಳು, ಸಮಾಜದ ಯಾವ ವರ್ಗಕ್ಕೆ ಏನು ಮಾಡಿದ್ದಾರೆ? ಏನಾದ್ರೂ ಸಾಧನೆಗಳನ್ನು ಮಾಡಿದ್ರೇ ಅದನ್ನು ವೈಭವೀಕರಿಸಿಕೊಳ್ಳಲಿ. ರಾಜ್ಯ ಸರ್ಕಾರದಿಂದ ಭ್ರಷ್ಟಾಚಾರದ ಗಂಗೋತ್ರಿ ಹರಿಯುತ್ತಿದೆ. ಅದೇ ಅವರ ದೊಡ್ಡ ಸಾಧನೆ ಎಂದು ಬಿಂಬಿಸಿಕೊಳ್ಳಲು ಹೊರಟಿದ್ದಾರೆ. ಇದನ್ನು ಜನ ಅರ್ಥ ಮಾಡಿಕೊಳ್ಳುತ್ತಾರೆ. ನಾ ಖಾವುಂಗಾ ನಾ ಖಾನೆ ದುಂಗಾ ಅಂತೀರಲ್ಲ ನಾಚಿಕೆ ಅಗಲ್ವಾ ಪ್ರಧಾನ ಮಂತ್ರಿ ಮೋದಿಗೆ. ರಾಜ್ಯದಲ್ಲಿ ಪಿಎಸ್‍ಐ ಹಗರಣದಿಂದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ. ರಾಜ್ಯ ಸರ್ಕಾರದಿಂದ ಯಾರು ಹಗರಣದ ನೈತಿಕ ಜವಾಬ್ದಾರಿ ಹೊಣೆ ಹೊತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಕೆನಡಾ ಬಳಿಕ ಪಂಜಾಬ್‍ನಲ್ಲಿ ಗಾಂಧಿ ಪ್ರತಿಮೆ ಧ್ವಂಸ

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ಸಿನಲ್ಲಿ ಮಾತ್ರ ಸಚಿನ್ ಪೈಲಟ್‍ಗೆ ಉತ್ತಮ ಭವಿಷ್ಯವಿರೋದು: ವೀರಪ್ಪ ಮೊಯ್ಲಿ

    ಕಾಂಗ್ರೆಸ್ಸಿನಲ್ಲಿ ಮಾತ್ರ ಸಚಿನ್ ಪೈಲಟ್‍ಗೆ ಉತ್ತಮ ಭವಿಷ್ಯವಿರೋದು: ವೀರಪ್ಪ ಮೊಯ್ಲಿ

    ಬೆಂಗಳೂರು: ರಾಜಸ್ಥಾನದ ರಾಜಕೀಯ ಹೈಡ್ರಾಮಾಕ್ಕೆ ಕಾರಣರಾಗಿರುವ ಸಚಿನ್ ಪೈಲಟ್ ಅವರಿಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯ ಅಂತ ಇರುವುದು ಅದು ಕಾಂಗ್ರೆಸ್ಸಿನಲ್ಲಿ ಮಾತ್ರ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟಿದ್ದಾರೆ.

    ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜಸ್ಥಾನದಲ್ಲಾಗುತ್ತಿರುವ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಚಿನ್ ಪೈಲಟ್ ಕಾಂಗ್ರೆಸ್ ಪಕ್ಷದಲ್ಲಿ ಇರುವಾಗಲೇ ಎಲ್ಲವನ್ನೂ ಸಾಧಿಸಿದ್ದಾರೆ. ಕಾಂಗ್ರೆಸ್‍ನಲ್ಲಿದ್ದುಕೊಂಡೇ ಸಂಸದ, ಕೇಂದ್ರ ಸಚಿವ, ರಾಜಸ್ಥಾನದ ಪಿಸಿಸಿ ಅಧ್ಯಕ್ಷ ಹಾಗೂ ರಾಜಸ್ಥಾನದ ಉಪಮುಖ್ಯಮಂತ್ರಿ ಕೂಡ ಆಗಿದ್ದರು. ಹೀಗಾಗಿ ಸಚಿನ್ ಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಪಕ್ಷದೊಳಗಡೆಯೇ ಮಾತುಕತೆ ನಡೆಸಿ ಪರಿಹರಿಸಬಹುದಾಗಿತ್ತು. ಅದಕ್ಕಾಗಿ ಇಷ್ಟೊಂದು ಆತುರ ಪಡುವ ಅವಶ್ಯಕತೆ ಇರಲಿಲ್ಲ ಎಂದರು.

    ಸಚಿನ್ ಪೈಲಟ್ ಇಂದು ಏನು ಸಾಧಿಸಿದ್ದಾರೆಯೋ ಅದು ಕಾಂಗ್ರೆಸ್ಸಿನಲ್ಲಿದ್ದುಕೊಂಡೇ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಲಿ. ಅಲ್ಲದೆ ಮೊದಲು ಅದನ್ನು ಅವರು ಅರಿತುಕೊಳ್ಳಲಿ. ಅವರು ಯಾವುದೇ ಕಾರಣಕ್ಕೂ ನಾನು ಬಿಜೆಪಿ ಸೇರಲ್ಲ ಎಂದು ಹೇಳಿದ್ದಾರೆ. ಇದು ತುಂಬಾ ಒಳ್ಳೆಯ ನಿರ್ಧಾರವಾಗಿದೆ ಎಂದು ಮೊಯ್ಲಿ ತಿಳಿಸಿದರು.

    ಸಚಿನ್ ಅವರಿಗೆ ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿಯಾಗಲು ಸಾಧ್ಯವಾಗಿಲ್ಲ. ಯಾಂಕದರೆ ಮಧ್ಯಪ್ರದೇಶ ಅಥವಾ ರಾಜಸ್ಥಾನದಲ್ಲಿ ಹೈಕಮಾಂಡ್ ಶಾಸಕರ ಅಭಿಪ್ರಾಯವನ್ನು ಪಡೆದುಕೊಳ್ಳುತ್ತದೆ. ಅಲ್ಲಿ ಚುನಾಯಿತ ಶಾಸಕರ ಬೆಂಬಲವನ್ನು ಪಡೆಯುವ ಮುಖಂಡನನ್ನು ಮಾತ್ರ ಮುಖ್ಯಮಂತ್ರಿಯನ್ನಾಗಿ ಮಾಡಲಾಗುತ್ತದೆ. ಹೀಗಾಗಿ ಅವರಿಗೆ ಸಿಎಂ ಆಗುವ ಅವಕಾಶ ಸಿಕ್ಕಿಲ್ಲ ಎಂದು ಹೇಳಿದರು.

    ಕಳೆದ ಕೆಲ ದಿನಗಳಿಂದ ರಾಜಸ್ಥಾನದ ರಾಜಕೀಯದಲ್ಲಿ ಭಾರೀ ಹೈಡ್ರಾಮಾ ನಡೆಯುತ್ತಿದ್ದು, ಜುಲೈ 14ರಂದು ಕಾಂಗ್ರೆಸ್ ಪಕ್ಷ ಸಚಿನ್ ಪೈಲಟ್ ಅವರನ್ನು ರಾಜಸ್ಥಾನದ ಉಪಮುಖ್ಯಮಂತ್ರಿ ಹಾಗೂ ಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತ್ತು.

  • ಹರ್ಷ ಮೊಯ್ಲಿ ವಿರುದ್ಧ ಕೈ ನಾಯಕ ಕಿಡಿ

    ಹರ್ಷ ಮೊಯ್ಲಿ ವಿರುದ್ಧ ಕೈ ನಾಯಕ ಕಿಡಿ

    ಉಡುಪಿ: ಮಾಜಿ ಸಚಿವ ಪ್ರಮೋದ್ ಜೆಡಿಎಸ್ ನಲ್ಲೇ ಇದ್ದಾರೋ ಕಾಂಗ್ರೆಸ್‍ಗೆ ಬಂದಿದ್ದಾರೋ ಎಂದು ಕರಾವಳಿಯಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ಇದೇ ವಿಚಾರದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರನ ಜೊತೆ ಕಾಂಗ್ರೆಸ್ ನಾಯಕನ ಫೋನ್ ಸಂಭಾಷಣೆ ವೈರಲಾಗಿದೆ.

    ಶನಿವಾರ ವೀರಪ್ಪ ಮೊಯ್ಲಿ ಅವರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಪತ್ರಕರ್ತರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಪ್ರಮೋದ್ ಮಧ್ವರಾಜ್ ಯಾವಾಗ ಕಾಂಗ್ರೆಸ್ ಗೆ ಮರಳ್ತಾರೆ ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಮೊಯ್ಲಿ, ಪ್ರಮೋದ್ ಜೆಡಿಎಸ್ ನಲ್ಲಿದ್ದಾರೆ. ಅರ್ಜಿ ಹಾಕಿದರೆ ಮತ್ತೆ ಕಾಂಗ್ರೆಸ್ಸಿಗೆ ಬರಬಹುದು ಅಂದಿದ್ದರು.

    ಈ ವಿಚಾರ ಸ್ಥಳೀಯ ಕಾರ್ಯಕರ್ತರನ್ನು ಕೆರಳಿಸಿದೆ. ಸುದ್ದಿಗೋಷ್ಠಿಯ ನಂತರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ್ ಅಮೀನ್ ಅವರು ಹರ್ಷ ಮೊಯ್ಲಿಗೆ ಕರೆ ಮಾಡಿ ಪ್ರಮೋದ್ ಮಧ್ವರಾಜ್ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಹರ್ಷ ಮೊಯ್ಲಿ, ಪ್ರಮೋದ್ ಜೆಡಿಎಸ್ ನಲ್ಲೇ ಇದ್ದಾನೆ ಎಂದು ಹೇಳುವ ಮೂಲಕ ಏಕವಚನ ಬಳಕೆ ಮಾಡಿದ್ದಾರೆ. ಇದರಿಂದ ಕುಪಿತರಾದ ಸದಾಶಿವ್, ಪದಾಧಿಕಾರಿ ಅಲ್ಲದೆ ಇದ್ದರೂ ನೀವ್ಯಾಕೆ ಕಾಂಗ್ರೆಸ್ ಸಭೆಯಲ್ಲಿ, ಸುದ್ದಿಗೋಷ್ಠಿಯಲ್ಲಿ ಕೂತಿದ್ದು ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಪ್ರಮೋದ್ ಗೆ ಗೌರವ ಕೊಟ್ಟು ಮಾತಾಡಿ ಎಂದು ಕಿಡಿಕಾರಿದ್ದಾರೆ. ತುಳು ಭಾಷೆಯ ಈ ಸಂಭಾಷಣೆ ವೈರಲ್ ಆಗಿದೆ.

    ತಾನು ಕಾಂಗ್ರೆಸ್ ತೊರೆದೇ ಇಲ್ಲ. ನಾನು ಮೈತ್ರಿ ಅಭ್ಯರ್ಥಿಯಾಗಿದ್ದೆ ಎಂದು ಪ್ರಮೋದ್ ಮಧ್ವರಾಜ್ ತಟಸ್ಥವಾಗಿ ಕೂತಿದ್ದಾರೆ. ಆದರೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಮೋದ್ ಅರ್ಜಿ ಹಾಕಿ ಕಾಂಗ್ರೆಸ್ ಗೆ ಮರಳಲಿ ಎಂದು ಕಾಂಗ್ರೆಸ್ ಜಿಲ್ಲಾ ಘಟಕ ಮೌನವಹಿಸಿದೆ. ಇದು ಕೆಲ ಕಾರ್ಯಕರ್ತರ ಕೋಪಕ್ಕೆ ಕಾರಣವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹರ್ಷ ಮೊಯಿಲಿ ಕಾರ್ಕಳ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆಗ ಹರ್ಷ ಬಗ್ಗೆ ಕಾರ್ಯಕರ್ತರ ವಿರೋಧಿಸಿದ್ದರು.

  • ಕಾಶ್ಮೀರ ವಿಭಜನೆ, ಬ್ಯಾಂಕ್ ವಿಲೀನ ಮೋದಿಯ ಆತುರದ ನಿರ್ಧಾರ- ವೀರಪ್ಪ ಮೊಯ್ಲಿ

    ಕಾಶ್ಮೀರ ವಿಭಜನೆ, ಬ್ಯಾಂಕ್ ವಿಲೀನ ಮೋದಿಯ ಆತುರದ ನಿರ್ಧಾರ- ವೀರಪ್ಪ ಮೊಯ್ಲಿ

    ಉಡುಪಿ: ಕಾಶ್ಮೀರ ವಿಭಜನೆ ಹಾಗೂ ಬ್ಯಾಂಕ್ ವಿಲೀನ ಪ್ರಧಾನಿ ನರೇಂದ್ರ ಮೋದಿಯವರ ಆತುರದ ನಿರ್ಧಾರವಾಗಿವೆ. ರಾತ್ರಿ ನಿರ್ಧಾರ ಮಾಡುತ್ತಾರೆ, ಬೆಳಗ್ಗೆ ಘೋಷಣೆ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ.ಕ.ಜಿಲ್ಲೆ ಬ್ಯಾಂಕ್‍ಗಳ ತೊಟ್ಟಿಲು. ಅವಿಭಜಿತ ಜಿಲ್ಲೆಗಳು ನಾಲ್ಕು ಬ್ಯಾಂಕ್‍ಗಳ ತವರು. ವಿಜಯ ಬ್ಯಾಂಕ್ ವಿಲೀನ ಆಯ್ತು ಈಗ ಕೆನರಾ, ಸಿಂಡಿಕೇಟ್, ಕಾರ್ಪೋರೇಷನ್ ಬ್ಯಾಂಕ್ ಸರದಿ. ಬ್ಯಾಂಕ್ ವಿಲೀನದ ಸಾಧಕ ಬಾಧಕ ಕುರಿತು ಚರ್ಚೆ ಮಾಡಿಲ್ಲ. ಈ ಎಲ್ಲ ಬ್ಯಾಂಕ್‍ಗಳಿಗೂ ಒಂದು ಅಸ್ಮಿತೆ ಇದೆ. ಬಡ ಜನರಿಗೆ ಸೇವೆ ಕೊಡುವ ಉದ್ದೇಶದಿಂದ ಆರಂಭವಾದ ಬ್ಯಾಂಕ್‍ಗಳನ್ನು ಜನರಿಂದ ದೂರ ಕೊಂಡೊಯ್ಯಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ವಿಲೀನ ಮಾಡುವ ಮೂಲಕ ದೊಡ್ಡ ಬ್ಯಾಂಕ್ ಮಾಡುತ್ತೇವೆ ಎನ್ನುತ್ತಾರೆ. ಈ ಬ್ಯಾಂಕ್‍ಗಳು ಇನ್ನು ಹಳ್ಳಿಗರಿಗೆ ತಲುಪುವುದಿಲ್ಲ. ದೊಡ್ಡ ಉದ್ಯಮಿಗಳಿಗೆ ಸಾಲ ಕೊಡಲು ದೊಡ್ಡ ಬ್ಯಾಂಕ್ ಮಾಡಿದ್ದಾರೆ. ನಮ್ಮ ಬ್ಯಾಂಕ್ ಗಳನ್ನು ಹೊರದೇಶದ ಬ್ಯಾಂಕ್ ಗಳಿಗೆ ವಿಲೀನ ಮಾಡುತ್ತಾರೆ. ಪವಿತ್ರವಾದ ರಿಸರ್ವ್ ಬ್ಯಾಂಕ್ ದೇಶದ ಆರ್ಥಿಕತೆಯ ಬುನಾದಿ. ಇವತ್ತು ರಿಸರ್ವ್ ಫಂಡನ್ನೇ ಕೇಂದ್ರ ಪಡೆದಿದೆ. ಆರ್ಥಿಕ ತುರ್ತುಪರಿಸ್ಥಿತಿ ಇದ್ದಾಗ ಮಾತ್ರ ಹೀಗೆ ಮಾಡುತ್ತಾರೆ. ಈಗ ದೇಶದಲ್ಲಿ ಅಘೊಷಿತ ಆರ್ಥಿಕ ತುರ್ತು ಪರಿಸ್ಥಿತಿ ಉಂಟಾಗಿದೆ. ವಿಲೀನ ನಿರ್ಧಾರದಿಂದ ಕರಾವಳಿಯ ಬ್ಯಾಂಕಿಂಗ್ ಚರಿತ್ರೆಗೆ ಧಕ್ಕೆಯಾಗಿದೆ ಎಂದು ಖೇದ ವ್ಯಕ್ತಪಡಿಸಿದರು.

    ಪ್ರವಾಹದಿಂದ 5 ಲಕ್ಷ ಕೋಟಿ ನಷ್ಟ
    ಪ್ರವಾಹದಿಂದ ಆಗಿರುವ ನಷ್ಟ ಐವತ್ತು ಸಾವಿರ ಕೋಟಿ ಅಲ್ಲ, ರಾಜ್ಯದಲ್ಲಿ ಸುಮಾರು 5 ಲಕ್ಷ ಕೋಟಿ ರೂ. ನಷ್ಟವಾಗಿದೆ. ಐಎಎಸ್ ಅಧಿಕಾರಿಗಳ ನಿಯೋಗದಿಂದ ಪರಿಶೀಲನೆ ನಡೆಸಿ ಪ್ರಯೋಜನ ಇಲ್ಲ. ತಜ್ಞರ ಸಮಿತಿ ಮಾಡಬೇಕು. ಕೇಂದ್ರ ಸರ್ಕಾರ ಪ್ರವೇಶ ಆಗಬೇಕು. ಇವತ್ತಿನ ವರೆಗೆ ಕೇಂದ್ರ ನಯಾಪೈಸೆ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದರು.

    ಪ್ರಧಾನಿ ಸೆಪ್ಟೆಂಬರ್ 7 ಕ್ಕೆ ರಾಜ್ಯಕ್ಕೆ ಬರುತ್ತಾರಂತೆ. ಅವರು ಬಂದು ಘೋಷಣೆ ಮಾಡಬೇಕು ಅಂತ ಏನಿದೆ? ಪರಿಹಾರ ಘೋಷಣೆಗೆ ಕಾಯುವುದು ಸರಿಯಲ್ಲ. ಗೃಹ ಸಚಿವರು ರಾಷ್ಟ್ರೀಯ ವಿಪತ್ತು ಸಮಿತಿ ಅಧ್ಯಕ್ಷರೂ ಆಗಿದ್ದಾರೆ. ಅಮಿತ್ ಶಾ ರಾಜ್ಯದ ಸ್ಥಿತಿ ನೋಡಿದ್ದಾರೆ. ಹಾಗಿದ್ರೂ ಪರಿಹಾರ ಘೋಷಣೆಗೆ ವಿಳಂಬ ಯಾಕೆ? ಕೇಂದ್ರ ಮತ್ತು ರಾಜ್ಯ ಪ್ರವಾಹವನ್ನು ಸಾಮಾನ್ಯವೆಂಬಂತೆ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಸಿಎಂ ವಿರೋಧ ಪಕ್ಷದ ನಾಯಕರ ವಿಶ್ವಾಸ ಪಡೆದಿಲ್ಲ. ಪ್ರವಾಹದ ಕುರಿತು ಕರೆದು ಮಾತನಾಡಿಸಿಲ್ಲ. ಯಾವುದೇ ಅಭಿಪ್ರಾಯ ಪಡೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

  • ಶಶಿ ತರೂರ್ ಅಪ್ರಬುದ್ಧ ರಾಜಕಾರಣಿ, ಯುಪಿಎ-2 ಅವಧಿಯ ಎಡವಟ್ಟುಗಳಿಗೆ ರಮೇಶ್ ಕಾರಣ: ಮೊಯ್ಲಿ

    ಶಶಿ ತರೂರ್ ಅಪ್ರಬುದ್ಧ ರಾಜಕಾರಣಿ, ಯುಪಿಎ-2 ಅವಧಿಯ ಎಡವಟ್ಟುಗಳಿಗೆ ರಮೇಶ್ ಕಾರಣ: ಮೊಯ್ಲಿ

    ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ನಾಯಕ ಮಧ್ಯೆ ವಾಗ್ದಾಳಿ ನಡೆದಿದ್ದು, ಪರಸ್ಪರ ಕೆಸರೆರಚಾಟ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪರ ಬ್ಯಾಟ್ ಬೀಸಿದ್ದ ಮಾಜಿ ಸಚಿವರಾದ ಜೈರಾಮ್ ರಮೇಶ್ ಹಾಗೂ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

    ಶಶಿ ತರೂರ್ ಅವರ ಬೆಂಬಲಕ್ಕೆ ನಿಂತು ಪ್ರಧಾನಿ ಮೋದಿ ಪರ ಕಾಂಗ್ರೆಸ್‍ನ ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಬ್ಯಾಟ್ ಬೀಸಿದ್ದರು. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ವೀರಪ್ಪ ಮೊಯ್ಲಿ ಅವರು, ಯುಪಿಎ-2 ಅವಧಿಯ ನೀತಿ ನಿರೂಪಣೆಯ ಎಡವಟ್ಟುಗಳಿಗೆ ಜೈರಾಮ್ ಅವರೇ ಕಾರಣ. ಹಲವು ಸಂದರ್ಭದಲ್ಲಿ ಸರ್ಕಾರ ತನ್ನ ತತ್ವಗಳಲ್ಲಿ ರಾಜಿ ಮಾಡಿಕೊಳ್ಳಲು ಕಾರಣವಾದರು. ಈಗ ಪ್ರಧಾನಿ ಮೋದಿ ಪರ ಹೇಳಿಕೆ ಮೂಲಕ ಜೈರಾಮ್ ರಮೇಶ್ ಅವರು ಬಿಜೆಪಿ ಜೊತೆಯೂ ರಾಜಿ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: ಮಾನ ಮರ್ಯಾದೆ ಇದ್ರೆ ಕಾಂಗ್ರೆಸ್ ಕಚೇರಿಗೆ ಕಾಲಿಡ್ಬಾರ್ದು: ಮುನಿಯಪ್ಪ ಆಕ್ರೋಶ

    ಶಶಿ ತರೂರ್ ಅವರು ಪ್ರಬುದ್ಧ ರಾಜಕಾರಣಿ ಎಂದು ನಾನು ಪರಿಗಣಿಸಿಲ್ಲ. ಮಾಧ್ಯಮಗಳಲ್ಲಿ ಗುರುತಿಸಿಕೊಳ್ಳಲು ಆಗಾಗ ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಹೀಗಾಗಿ ಶಶಿ ತರೂರ್ ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವಿಲ್ಲ. ಅವರು ಗಂಭೀರ ರಾಜಕಾರಣಿಯಾಗಬೇಕು ಎಂಬುದು ನಮ್ಮ ಪ್ರಾರ್ಥನೆ ಎಂದು ವ್ಯಂಗ್ಯವಾಡಿದ್ದಾರೆ.

    ಜೈರಾಮ್ ರಮೇಶ್ ಹಾಗೂ ಶಶಿ ತರೂರ್ ಅವರ ಹೇಳಿಕೆ ದುರದೃಷ್ಟಕರ. ಅಷ್ಟೇ ಅಲ್ಲದೆ ಈ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಕ್ಷದ ಹೈಕಮಾಂಡನ್ನು ಆಗ್ರಹಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧವೂ ಅಸಮಾಧಾನ ಹೊರ ಹಾಕಿದ್ದಾರೆ.

    ಈ ಹಿಂದೆ ಆಗಿದ್ದೇನು?:
    ಸರಿಯಾದ ನಿರ್ಧಾರಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಬೇಕು. ಇದರಿಂದ ಅವರ ಬಗೆಗಿನ ವಿರೋಧ ಪಕ್ಷಗಳ ಟೀಕೆಗಳಿಗೆ ಹೆಚ್ಚಿನ ವಿಶ್ವಾಸಾರ್ಹತೆ ಸಿಗುತ್ತದೆ ಎಂದು ಶಶಿ ತರೂರ್ ಹೇಳಿದ್ದರು. ಈ ಬೆನ್ನಲ್ಲೆ ಪ್ರಧಾನಿ ಮೋದಿ ಪರ ಬ್ಯಾಟ್ ಬೀಸಿದ ಜೈರಾಮ್ ರಮೇಶ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಐದು ವರ್ಷಗಳಲ್ಲಿ ಮಾಡಿರುವ ಕೆಲಸಗಳನ್ನು ಗುರುತಿಸಬೇಕಾಗಿದೆ. ಈ ಬಗ್ಗೆ ಟೀಕೆ ಮಾಡುವ ಬದಲು ಅವುಗಳ ಅಧ್ಯಯನ ಮಾಡಬೇಕಾಗಿದೆ. ಅವರು ಜನರಿಗೆ ಹತ್ತಿರವಾಗುವ ಕೆಲಸ ಮಾಡಿದ್ದಾರೆ. ಹೀಗಾಗಿಯೇ 2019ರಲ್ಲಿ ಶೇಕಡ 30ರಷ್ಟು ಹೆಚ್ಚು ಮಂದಿ ಮೋದಿ ಮೆಚ್ಚಿಕೊಂಡಿದ್ದಾರೆ ಎಂದು ತಿಳಿಸಿದ್ದರು.

    ಪ್ರಧಾನಿ ಮೋದಿ ಅವರನ್ನು ಸದಾ ಟೀಕಿಸುತ್ತಿರುವುದರಿಂದ ಯಾವುದೇ ಪ್ರಯೋಜನವಿಲ್ಲ. ಅವರು ಮಾಡಿರುವ ಕೆಲಸಗಳ ಬಗ್ಗೆ ವಿಮರ್ಶೆ ಮಾಡಬೇಕಾಗಿದೆ. ಅಧ್ಯಯನ ಮಾಡಬೇಕಾಗಿದೆ. ಜನರನ್ನು ಸೆಳೆಯುವ ಕಲೆ ಮೋದಿ ಅವರಲ್ಲಿ ಮನೆ ಮಾಡಿದೆ. ಹೀಗಾಗಿ ಅವರನ್ನು ಜನ ವಿಶ್ವಾಸದಿಂದ ಕಾಣುತ್ತಾರೆ, ನಂಬುತ್ತಾರೆ. ಇದನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದರು.

  • ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಶುಲ್ಕ ಏರಿಕೆಯನ್ನ ಸಮರ್ಥಿಸಿಕೊಂಡ ಸಚಿವ ತುಕಾರಂ

    ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಶುಲ್ಕ ಏರಿಕೆಯನ್ನ ಸಮರ್ಥಿಸಿಕೊಂಡ ಸಚಿವ ತುಕಾರಂ

    ಬಳ್ಳಾರಿ: ವೈದ್ಯಕೀಯ ವಿದ್ಯಾರ್ಥಿಗಳ ಶುಲ್ಕ ಏರಿಕೆ ಇಂದಿನ ವ್ಯವಸ್ಥೆಗೆ ಅನುಗುಣವಾಗಿದೆ ಎಂದು ಶುಲ್ಕ ಏರಿಕೆ ಕ್ರಮವನ್ನು ವೈದ್ಯಕೀಯ ಶಿಕ್ಷಣ ಸಚಿವ ಈ. ತುಕಾರಾಂ ಸಮರ್ಥಿಸಿಕೊಂಡಿದ್ದಾರೆ.

    ಜಿಲ್ಲೆಯ ಜಿಂದಾಲ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಎಲ್ಲಾ ಸೌಕರ್ಯಗಳನ್ನು ಒದಗಿಸಬೇಕಾದಾಗ ಹಣಕಾಸಿನ ಅವಶ್ಯಕತೆ ಇರುತ್ತದೆ. ಹಾಗಾಗಿ ಶುಲ್ಕ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದರು.

    ಇದೇ ವೇಳೆ ಚುನಾವಣೆ ನಂತರ ಜಿಲ್ಲೆಯ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಬಳ್ಳಾರಿಗೆ ಕಾಲಿಟ್ಟಿಲ್ಲ ಎನ್ನುವ ಆರೋಪವನ್ನು ತಳ್ಳಿ ಹಾಕಿದ ಸಚಿವ ತುಕಾರಾಂ, ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿ ಡಿ.ಕೆ ಶಿವಕುಮಾರ್‍ರವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ನನಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಕೊಟ್ಟಿದ್ದಾರೆ. ಈ ವಿಚಾರಗಳು ಹೈಕಮಾಂಡ್ ತಿರ್ಮಾನಗಳಾಗಿದ್ದು, ಆದರ ಬಗ್ಗೆ ನಾನು ಮಾತನಾಡುವುದಿಲ್ಲ. ಅಲ್ಲದೇ ಪಕ್ಷ ಬಳ್ಳಾರಿಯ ಜವಾಬ್ದಾರಿಯನ್ನು ಕೊಟ್ಟರೆ ನಾನು ನಿರ್ವಹಿಸುವೆ ಎಂದು ಹೇಳುವ ಮೂಲಕ ಬಳ್ಳಾರಿ ಉಸ್ತುವಾರಿ ಸಚಿವನಾಗುವ ಆಸೆಯನ್ನು ಹೊರ ಹಾಕಿದರು.

    ಮೈತ್ರಿ ಸರ್ಕಾರ ಬಗ್ಗೆ ಮಾಜಿ ಸಂಸದ ವೀರಪ್ಪ ಮೊಯ್ಲಿ ಅಸಮಧಾನ ಹೇಳಿಕೆ ವಿಚಾರ ಪ್ರತಿಕ್ರಿಯಿಸಿ, ಮೈತ್ರಿಯಲ್ಲಿ ಜತೆಗೂಡಿ ಚುನಾವಣೆ ಎದುರಿಸಿದ್ದೇವೆ. ಪ್ರತ್ಯೇಕ ಚುನಾವಣೆ ಮಾಡಿದ್ದರೆ ಅನುಕೂಲವಾಗುತ್ತೇನೋ, ಜತೆಗೂಡಿ ಚುನಾವಣೆ ನಡೆಸಿದ್ದರಿಂದ ಅನಾನುಕೂಲವಾಗಿದೆ ಎಂಬ ವಿಚಾರಗಳು ಚರ್ಚೆಗೆ ಬರುವುದು ಸಹಜ. ಅಲ್ಲದೆ ವೀರಪ್ಪ ಮೊಯ್ಲಿ ಸಾಹೇಬರು ಹಿರಿಯರು ಅವರು ವಿಶ್ಲೇಷಣೆ ಮಾಡುತ್ತಾರೆ. ಆ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಚುನಾವಣಾ ಸೋಲಿಗೆ ದೋಸ್ತಿ ನಾಯಕರೇ ಕಾರಣ, ಪ್ರಣಾಳಿಕೆ ಪ್ರಿಂಟ್ ಆಗಲೇ ಇಲ್ಲ – ಮೊಯ್ಲಿ

    ಚುನಾವಣಾ ಸೋಲಿಗೆ ದೋಸ್ತಿ ನಾಯಕರೇ ಕಾರಣ, ಪ್ರಣಾಳಿಕೆ ಪ್ರಿಂಟ್ ಆಗಲೇ ಇಲ್ಲ – ಮೊಯ್ಲಿ

    ಚಿಕ್ಕಬಳ್ಳಾಪುರ: ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್, ಸಿಎಂ ಕುಮಾರಸ್ವಾಮಿ ಹಾಗೂ ದೇವೇಗೌಡರಿಗಷ್ಟೇ ದೋಸ್ತಿ ಸರ್ಕಾರದಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳುವುದರಿಂದ ಶಿಸ್ತು ಸಮನ್ವಯತೆ ಬರುವುದಿಲ್ಲ ಎಂದು ದೋಸ್ತಿ ಸರ್ಕಾರದ ನಾಯಕರ ವಿರುದ್ಧವೇ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅಸಮಾಧಾನ ಹೊರಹಾಕಿದ್ದಾರೆ.

    ಚಿಕ್ಕಬಳ್ಳಾಪುರ ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ವೀರಪ್ಪ ಮೊಯ್ಲಿ, ಸಚಿವ ಸಂಪುಟ ವಿಸ್ತರಣೆ ಪುನಾರಚನೆ ಬಗ್ಗೆ ದೋಸ್ತಿ ಸರ್ಕಾರದ ಯಾವುದೇ ನಾಯಕರು ನಮ್ಮ ಬಳಿ ಚರ್ಚೆ ಮಾಡಿಲ್ಲ. ಯಾರನ್ನು ಮಂತ್ರಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿಲ್ಲ. ಕೇವಲ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್, ಸಿಎಂ ಕುಮಾರಸ್ವಾಮಿ, ಎಚ್‍ಡಿ ದೇವೇಗೌಡರೇ ಎಲ್ಲ ತೀರ್ಮಾನ ಮಾಡುತ್ತಿದ್ದಾರೆ ಎಂದರು.

    ಹಿರಿಯ ನಾಯಕರ ನಡುವೆ ಸಹ ಸರಿಯಾದ ಸಮಾಲೋಚನೆ ಮಾಡುತ್ತಿಲ್ಲ. ಈ ದೋಸ್ತಿ ಪಕ್ಷಗಳ ವ್ಯವಸ್ಥೆ ಸರಿಯಿಲ್ಲ. ಇದಲ್ಲದೇ ದೋಸ್ತಿ ಪಕ್ಷಗಳ ನಾಯಕರ ನಡುವೆ ಸಹ ಸಮನ್ವಯತೆಯ ಕೊರತೆ ಇದೆ. ವಲಸಿಗರು-ಹೊಸ ಕಾಂಗ್ರೆಸ್ಸಿಗರೆಂಬ ಬೇಧಭಾವ ಮಾಡಬಾರದು. ಎಲ್ಲರೂ ಕೂತು ಒಮ್ಮತದ ನಿರ್ಣಯ ತೆಗೆದುಕೊಳ್ಳಬೇಕು. ಹಳೆಯ ಹಾಗೂ ವಲಸಿಗರ ನಡುವೆ ಸಹ ಭಾವೈಕ್ಯತೆ ಮೂಡಬೇಕು ಅದೇ ರೀತಿ ದೋಸ್ತಿ ಪಕ್ಷಗಳ ನಾಯಕರ ನಡುವೆಯೂ ಒಮ್ಮತ ಮೂಡಬೇಕು. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಹಿನ್ನೆಡೆಗೆ ಸಮನ್ವಯತೆಯ ಕೊರತೆಯೇ ನೇರ ಕಾರಣ ಎಂದರು.

    ಜಾತ್ಯಾತೀತ ರಾಜ್ಯ ಕರ್ನಾಟಕದಲ್ಲಿ ಬಿಜೆಪಿ ಹೊರಗೆ ಇಡುವ ಉದ್ದೇಶದಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿದ ರಾಹುಲ್ ಗಾಂಧಿಯವರ ನಿರ್ಧಾರ ಸರಿ ಇದೆ. ಆದರೆ ಜೆಡಿಎಸ್-ಕಾಂಗ್ರೆಸ್ ನಾಯಕರು ಮಾತ್ರ ಸರ್ಕಾರ ನಡೆಸಿದರೆ ಸಾಲದು, ಎಲ್ಲ ಕಡೆಯಲ್ಲೂ ಸಮನ್ವಯತೆ ಮೂಡಿಸಬೇಕಿತ್ತು. ಇಲ್ಲದಿದ್ದರೆ ಅದು ಹೊಂದಾಣಿಕೆಯಾಗುವುದಿಲ್ಲ. ಕೇರಳದಲ್ಲೂ ಸಹ ಮೈತ್ರಿ ಸರ್ಕಾರ ರಚಿಸಿದ್ದೇವೆ. ಅಲ್ಲಿ ಏನೇ ಕಾರ್ಯಕ್ರಮ ರೂಪಿಸಿದರೂ ಎಲ್ಲಾ ಪಕ್ಷಗಳು ಒಂದುಗೂಡಿ ಮಾಡಿದ್ದೇವು. ಆದರೆ ಅಂತಹ ವ್ಯವಸ್ಥೆ ಕರ್ನಾಟಕದಲ್ಲಿ ನಿರ್ಮಾಣ ಆಗಲಿಲ್ಲ. ಕೇವಲ ಸರ್ಕಾರ ನಡೆಸಲಿಕ್ಕಷ್ಟೇ ತೃಪ್ತಿಪಟ್ಟುಕೊಂಡು ಕೂತರು. ಇದು ಸರಿಯಾಗಲಿಲ್ಲ ಎಂದು ಕಿರಿಕಾಡಿದರು.

    ಲೋಕಚುನಾವಣೆಗೆ ನನ್ನ ಅಧ್ಯಕ್ಷತೆಯಲ್ಲೇ ಪ್ರಣಾಳಿಕೆ ಸಹ ಸಿದ್ದಪಡಿಸಿದ್ದೇವು. ಆದರೆ ದೋಸ್ತಿ ಸರ್ಕಾರ ಅದನ್ನು ಪ್ರಿಂಟ್ ಸಹ ಮಾಡಲಿಲ್ಲ. ಅದು ಜನರಿಗೆ ಹಂಚಿಕೆ ಮಾಡಬೇಕಿತ್ತು. ಅದನ್ನು ಸಹ ಮಾಡಲಿಲ್ಲ. ಇದರಿಂದ ಜನರ ಮನಸ್ಸಿನಲ್ಲೂ ಸಹ ದೋಸ್ತಿ ಸರ್ಕಾರ ಎಂದು ಬರುವಂತೆ ಮಾಡಲಾಗಲಿಲ್ಲ. ಲೋಕಸಭಾ ಚುನಾವಣೆಗೆ ಹಠಾತ್ ಆಗಿ ಸಮನ್ವಯತೆ ಇಲ್ಲದೆ ಮಾಡಿದ್ದೇವೆ. ಆದರಿಂದ ಜಯ ಸಿಗಲಿಲ್ಲ. ನಿಗಮ ಮಂಡಳಿ, ಸಚಿವ ಸ್ಥಾನ ಹಂಚಿಕೆ ಸಮರ್ಪಕವಾಗಿ ಆಗಬೇಕು. ಅಧಿಕಾರ ಎಲ್ಲರಿಗೂ ಹಂಚಿಕೆಯಾಗಬೇಕು ಎಂದರು.

    ಸಚಿವ ಸ್ಥಾನ ಹಂಚಿಕೊಂಡರಷ್ಟೇ ಸಾಲದು. ತಳ ಮಟ್ಟದಲ್ಲೂ ಸಹ ಅಧಿಕಾರದ ಹಂಚಿಕೆ ಆಗಬೇಕು. ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಮಿತಿ ರಚನೆ ಆಗಬೇಕಿತ್ತು. ಅದು ಯಾವುದು ಆಗದ ಕಾರಣ ಸಮನ್ವಯತೆಯ ಕೊರತೆಯೇ ಸೋಲಿಗೆ ಕಾರಣ ಆಯಿತು ಎಂದು ವೀರಪ್ಪ ಮೊಯ್ಲಿ ವಿಮರ್ಶಿಸಿದರು. ಈ ಎಲ್ಲಾ ಕಾರಣಗಳಿಂದ ಮೈತ್ರಿ ವಿಫಲವಾಗಿ ಸೋಲುವಂತಾಯಿತು ಎಂದು ವೀರಪ್ಪ ಮೊಯ್ಲಿ ಅಸಮಾಧಾನ ಹೊರಹಾಕಿದರು.