Tag: ವೀರಶೈವ

  • ವೀರಶೈವ-ಲಿಂಗಾಯತರು ಹಾಳಾದ್ರೆ ಇಡೀ ರಾಜ್ಯವೇ ಹಾಳಾಗುತ್ತೆ: ಈಶ್ವರ್‌ ಖಂಡ್ರೆ

    ವೀರಶೈವ-ಲಿಂಗಾಯತರು ಹಾಳಾದ್ರೆ ಇಡೀ ರಾಜ್ಯವೇ ಹಾಳಾಗುತ್ತೆ: ಈಶ್ವರ್‌ ಖಂಡ್ರೆ

    – ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಿದ್ದರಾಮಯ್ಯ ಹೆಸರು ತಳಕು ಹಾಕಬಾರದು

    ಬೆಂಗಳೂರು: ಯಾವುದೇ ಶಕ್ತಿ ವೀರಶೈವ-ಲಿಂಗಾಯತರನ್ನ ಬೇರ್ಪಡಿಸಲು ಸಾಧ್ಯವಿಲ್ಲ. ʻವೀರಶೈವ ಲಿಂಗಾಯತರು (Lingayats) ಹಾಳಾದ್ರೆ ಇಡೀ ರಾಜ್ಯವೇ ಹಾಳಾಗುತ್ತೆ, ಅವರು ಸುಧಾರಿಸಿದ್ರೆ, ಕರ್ನಾಟಕ ಉದ್ಧಾರ ಆಗುತ್ತೆʼ ಅಂತ ಸಾಹಿತಿಯೊಬ್ಬರು ಹೇಳ್ತಾರೆ. ಹಾಗಾಗಿ ಎಲ್ಲರ ಉದ್ಧಾರ ಆಗಬೇಕಾದ್ರೆ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಿರುವುದು ಅತ್ಯವಶ್ಯಕವಾಗಿದೆ. ಯಾರಾದ್ರೂ ಈ ಧರ್ಮವನ್ನ ಹಾಳು ಮಾಡಲು ಪ್ರಯತ್ನಿಸಿದ್ರೆ, ಇಡೀ ಕರ್ನಾಟಕವೇ ಹಾಳಾಗುತ್ತೆ ಎಂದು ಸಚಿವ ಈಶ್ವರ್‌ ಖಂಡ್ರೆ (Eshwar Khandre) ಹೇಳಿದ್ದಾರೆ.

    ʻಪಬ್ಲಿಕ್‌ ಟಿವಿʼ ಜೊತೆಗೆ ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿಕೆಗೆ ಪ್ರತಕ್ರಿಯಿಸಿದ್ದಾರೆ. ಎಂ.ಬಿ.ಪಾಟೀಲ್ ನನಗೆ ಸ್ನೇಹಿತರು ಅವರ ಬಗ್ಗೆ ಮಾತನಾಡಲ್ಲ. ಯಾರಿಂದಲೂ ವೀರಶೈವ ಲಿಂಗಾಯತ (Veerashaiva Lingayat) ಬೇರೆ ಮಾಡಲು ಸಾಧ್ಯವಿಲ್ಲ. ಎಲ್ಲರೂ ಒಗ್ಗಟ್ಟಿನಿಂದಲೇ ಇದೀವಿ. ಅಲ್ಲದೇ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಿದ್ದರಾಮಯ್ಯ ಹೆಸರನ್ನ ತಳಕು ಹಾಕಬಾರದು. ಈ ಹಿಂದೆಯೂ ಅವರಿಗೆ ಸಂಬಂಧ ಇರಲಿಲ್ಲ, ಈಗಲೂ ಇಲ್ಲ, ನಮ್ಮ ಸರ್ಕಾರಕ್ಕೂ ಇಲ್ಲ. ವೀರಶೈವ ಲಿಂಗಾಯತ ಮಹಾಸಭಾ ನಿರ್ಣಯವೇ ಅಂತಿಮ ಎಂದು ಹೇಳಿದ್ದಾರೆ.

    ನಮ್ಮ ನಿಲುವು ಸ್ಪಷ್ಟವಾಗಿ ಹೇಳಿದ್ದೇನೆ. ಲಿಂಗಾಯತ-ವೀರಶೈವ ಎರಡೂ ಒಂದೇ. ಶಿವಕುಮಾರ ಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯತ ಸಭೆಯ ಎಲ್ಲಾ ಅಧ್ಯಕ್ಷರು ಇವತ್ತು ವೀರಶೈವ-ಲಿಂಗಾಯತ ಎರಡು ಸಮಾನಾರ್ಥಕ ಪದಗಳು ಇವೆ ಅಂತ ಹೇಳಿದ್ದಾರೆ. ವೀರಶೈವ-ಲಿಂಗಾಯತ ಭಿನ್ನ ಇಲ್ಲ ಎಂದಿದ್ದಾರೆ.

    ಇಷ್ಟ ಲಿಂಗ ಪೂಜೆ ಮಾಡುವವರು, ಅಷ್ಟಾಚರಣ ವ್ಯವಸ್ಥೆ ಪಾಲನೆ ಮಾಡುವರು, ಗುರುಗಳು ಇದ್ದಾರೆ, ವಿರಕ್ತರು ಇದ್ದಾರೆ. ಹೀಗಾಗಿ ಎಲ್ಲರು ಒಗ್ಗಟ್ಟಾಗಿ, ಸಂಘಟಿತರಾಗಿ ಇರಬೇಕು. ಸಂಘಟನೆಯಲ್ಲಿ ಶಕ್ತಿ ಇದೆ. ವಿಘಟನೆಯಲ್ಲಿ ಯಾವುದೇ ಉಪಯೋಗ ಆಗೊಲ್ಲ ಎಂಬುದು ನಮ್ಮ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

    ಪ್ರತ್ಯೇಕ ಲಿಂಗಾಯತ ಧರ್ಮದಲ್ಲಿ (Lingayat Religion) ಮಹಾಸಭಾದ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾಸಭಾ ಇವತ್ತು ಅಲ್ಲ ಸ್ವಾತಂತ್ರ‍್ಯ ಪೂರ್ವದಿಂದ ಹಿಡಿದು 2,000 ಇಸವಿಯಿಂದ ನಡೆದ ಜನಗಣತಿ ಸಮಯದಲ್ಲಿ ಎಲ್ಲರ ಅಭಿಪ್ರಾಯ ತೆಗೆದುಕೊಳ್ಳಾಗಿದೆ. ಭೌಗೋಳಿಕವಾಗಿ ನಾವೆಲ್ಲರೂ ಹಿಂದೂಗಳೇ ಆದರೂ ನಮ್ಮ ಆಚಾರ-ವಿಚಾರದಲ್ಲಿ ಸಿಖ್, ಜೈನರು, ಬೌದ್ಧ, ಪಾರ್ಸಿ ಗಳಿಗೆ ಪ್ರತ್ಯೇಕ ಧರ್ಮ ಅಂತ ಕೊಡಲಾಗಿದೆ. ಅದೇ ಆಧಾರದಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ನೀಡಬೇಕು ಅಂತ ಪದೇ ಪದೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಜನಗಣತಿಯಲ್ಲೂ ಪ್ರತ್ಯೇಕ ಕಾಲಂ ಕೊಡಬೇಕು ಅಂತ ವಿನಂತಿ ಮಾಡಿದ್ದೇವೆ. ಇಲ್ಲಿವರೆಗೂ ಸರ್ಕಾರ ಅದನ್ನ ಗುರುತಿಸಿಲ್ಲ. ನಮ್ಮ ಮಹಾಸಭೆಯ ವತಿಯಿಂದ ಇನ್ನು ಮುಂದೆಯೂ ಪ್ರತ್ಯೇಕ ಧರ್ಮ ಮಾನ್ಯತೆ ಸಿಗಲು ಪ್ರಯತ್ನ ಮಾಡ್ತೀವಿ ಅಂತ ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕ ಧರ್ಮದ ವಿಚಾರ ಮತ್ತು ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ. ಸಿದ್ದರಾಮಯ್ಯ ಜನಸಮುದಾಯದ ನಾಯಕರು ಇದ್ದಾರೆ. ನಾವು ಯಾರಾದ್ರು ಪ್ರತ್ಯೇಕ ಧರ್ಮದ ಬಗ್ಗೆ ಅವರ ಬಳಿ ಮಾತಾಡಿದ್ರೆ ಸಿಎಂ ನಿರ್ಧಾರ ತೆಗೆದುಕೊಳ್ತಾರೆ. ಮೊದಲು ಕೂಡಾ ನೀವೆಲ್ಲರು ಬಂದು ಏನ್ ಹೇಳ್ತಿರೋ ಅದನ್ನ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ ಅಂತ ಹೇಳಿದ್ರು. ವಿನಾಃ ಕಾರಣ ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ಬಗ್ಗೆ ಮಾತಾಡೋದು ಸರಿಯಲ್ಲ ಅಂತ ತಿಳಿಸಿದ್ದಾರೆ.

  • ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು: ಈಶ್ವರ್‌ ಖಂಡ್ರೆ

    ವೀರಶೈವ-ಲಿಂಗಾಯತ ಎರಡೂ ಒಂದೇ, ಪ್ರತ್ಯೇಕ ಧರ್ಮ ಕೊಡಬೇಕು: ಈಶ್ವರ್‌ ಖಂಡ್ರೆ

    ಬೆಂಗಳೂರು: ವೀರಶೈವ-ಲಿಂಗಾಯತ ಎರಡೂ ಒಂದೇ. ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ (Veerashaiva Lingayat Religion) ಕೊಡಬೇಕು ಎಂಬುದು ಮಹಾಸಭಾದ ಒಕ್ಕೊರಳ ಅಭಿಪ್ರಾಯ ಅಂತ ಸಚಿವ ಈಶ್ವರ್ ಖಂಡ್ರೆ (Eshwar Khandre) ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ನಿಲುವು ಸ್ಪಷ್ಟವಾಗಿ ಹೇಳಿದ್ದೇನೆ. ಲಿಂಗಾಯತ-ವೀರಶೈವ ಎರಡೂ ಒಂದೇ. ಶಿವಕುಮಾರ ಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯತ ಸಭೆಯ ಎಲ್ಲಾ ಅಧ್ಯಕ್ಷರು ಇವತ್ತು ವೀರಶೈವ-ಲಿಂಗಾಯತ ಎರಡು ಸಮಾನಾರ್ಥಕ ಪದಗಳು ಇವೆ ಅಂತ ಹೇಳಿದ್ದಾರೆ. ವೀರಶೈವ-ಲಿಂಗಾಯತ ಭಿನ್ನ ಇಲ್ಲ ಎಂದಿದ್ದಾರೆ.

    ಇಷ್ಟ ಲಿಂಗ ಪೂಜೆ ಮಾಡುವವರು, ಅಷ್ಟಾಚರಣ ವ್ಯವಸ್ಥೆ ಪಾಲನೆ ಮಾಡುವರು, ಗುರುಗಳು ಇದ್ದಾರೆ, ವಿರಕ್ತರು ಇದ್ದಾರೆ. ಹೀಗಾಗಿ ಎಲ್ಲರು ಒಗ್ಗಟ್ಟಾಗಿ, ಸಂಘಟಿತರಾಗಿ ಇರಬೇಕು. ಸಂಘಟನೆಯಲ್ಲಿ ಶಕ್ತಿ ಇದೆ. ವಿಘಟನೆಯಲ್ಲಿ ಯಾವುದೇ ಉಪಯೋಗ ಆಗೊಲ್ಲ ಎಂಬುದು ನಮ್ಮ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

    ಪ್ರತ್ಯೇಕ ಲಿಂಗಾಯತ ಧರ್ಮದಲ್ಲಿ (Lingayat Religion) ಮಹಾಸಭಾದ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾಸಭಾ ಇವತ್ತು ಅಲ್ಲ ಸ್ವಾತಂತ್ರ‍್ಯ ಪೂರ್ವದಿಂದ ಹಿಡಿದು 2,000 ಇಸವಿಯಿಂದ ನಡೆದ ಜನಗಣತಿ ಸಮಯದಲ್ಲಿ ಎಲ್ಲರ ಅಭಿಪ್ರಾಯ ತೆಗೆದುಕೊಳ್ಳಾಗಿದೆ. ಭೌಗೋಳಿಕವಾಗಿ ನಾವೆಲ್ಲರೂ ಹಿಂದೂಗಳೇ ಆದರೂ ನಮ್ಮ ಆಚಾರ-ವಿಚಾರದಲ್ಲಿ ಸಿಖ್, ಜೈನರು, ಬೌದ್ಧ, ಪಾರ್ಸಿ ಗಳಿಗೆ ಪ್ರತ್ಯೇಕ ಧರ್ಮ ಅಂತ ಕೊಡಲಾಗಿದೆ. ಅದೇ ಆಧಾರದಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ನೀಡಬೇಕು ಅಂತ ಪದೇ ಪದೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಜನಗಣತಿಯಲ್ಲೂ ಪ್ರತ್ಯೇಕ ಕಾಲಂ ಕೊಡಬೇಕು ಅಂತ ವಿನಂತಿ ಮಾಡಿದ್ದೇವೆ. ಇಲ್ಲಿವರೆಗೂ ಸರ್ಕಾರ ಅದನ್ನ ಗುರುತಿಸಿಲ್ಲ. ನಮ್ಮ ಮಹಾಸಭೆಯ ವತಿಯಿಂದ ಇನ್ನು ಮುಂದೆಯೂ ಪ್ರತ್ಯೇಕ ಧರ್ಮ ಮಾನ್ಯತೆ ಸಿಗಲು ಪ್ರಯತ್ನ ಮಾಡ್ತೀವಿ ಅಂತ ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕ ಧರ್ಮದ ವಿಚಾರ ಮತ್ತು ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ. ಸಿದ್ದರಾಮಯ್ಯ ಜನಸಮುದಾಯದ ನಾಯಕರು ಇದ್ದಾರೆ. ನಾವು ಯಾರಾದ್ರು ಪ್ರತ್ಯೇಕ ಧರ್ಮದ ಬಗ್ಗೆ ಅವರ ಬಳಿ ಮಾತಾಡಿದ್ರೆ ಸಿಎಂ ನಿರ್ಧಾರ ತೆಗೆದುಕೊಳ್ತಾರೆ. ಮೊದಲು ಕೂಡಾ ನೀವೆಲ್ಲರು ಬಂದು ಏನ್ ಹೇಳ್ತಿರೋ ಅದನ್ನ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ ಅಂತ ಹೇಳಿದ್ರು. ವಿನಾಃ ಕಾರಣ ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ಬಗ್ಗೆ ಮಾತಾಡೋದು ಸರಿಯಲ್ಲ ಅಂತ ತಿಳಿಸಿದ್ದಾರೆ.

  • ಕಾಂಗ್ರೆಸ್‌ನ ವೀರಶೈವ, ಲಿಂಗಾಯತ ಸಚಿವರಲ್ಲಿ ಮತ್ತೆ ಬಿರುಕು?

    ಕಾಂಗ್ರೆಸ್‌ನ ವೀರಶೈವ, ಲಿಂಗಾಯತ ಸಚಿವರಲ್ಲಿ ಮತ್ತೆ ಬಿರುಕು?

    ಬೆಂಗಳೂರು: ಕಾಂಗ್ರೆಸ್‌ನ ವೀರಶೈವ, ಲಿಂಗಾಯತ (Veerashaiva, Lingayat) ಸಚಿವರಲ್ಲಿ ಮತ್ತೊಮ್ಮೆ ಬಿರುಕು ಶುರುವಾಯ್ತಾ ಎಂಬ ಪ್ರಶ್ನೆ ಎದ್ದಿದೆ. ಪ್ರತ್ಯೇಕ ಲಿಂಗಾಯತ ಧರ್ಮದ (Separate Lingayat Religion) ಕೂಗಿನ ವಿಚಾರದಲ್ಲಿ ಮೂಡಿರುವ ಅಸಮಾಧಾನ ಮತ್ತೊಮ್ಮೆ ಸಚಿವ ಈಶ್ವರ್ ಖಂಡ್ರೆ ವರ್ಸಸ್ ಎಂ.ಬಿ ಪಾಟೀಲ್ ಫೈಟ್ ಜೋರಾಗುವ ಸಾಧ್ಯತೆಯಿದೆ.

    ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು. ವೀರಶೈವರು ಲಿಂಗಾಯತದ ಒಂದು ಭಾಗ ಎಂದು ಎಂಬಿ ಪಾಟೀಲ್‌ (MB Patil) ಹೇಳಿದರೆ ವೀರಶೈವ – ಲಿಂಗಾಯತ ಎರಡೂ ಒಂದೇ ಎಂಬ ವಾದವನ್ನು ಈಶ್ವರ್ ಖಂಡ್ರೆ (Eshwar Khandre) ಪುನರುಚ್ಚರಿಸಿದ್ದಾರೆ.

    2017 ರಲ್ಲಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರದಲ್ಲಿ ಇದೇ ವಿಚಾರದಲ್ಲಿ ವಿವಾದದ ಕಿಡಿ ಹೊತ್ತಿತ್ತು. ಈಗ ಮತ್ತೊಮ್ಮೆ ಪ್ರತ್ಯೇಕ ಲಿಂಗಾಯತ ಧರ್ಮ ಕೂಗು ಎದ್ದ ಬೆನ್ನಲ್ಲೇ ಮತ್ತೆ ವೀರಶೈವ, ಲಿಂಗಾಯತ ನಾಯಕರ ಮಧ್ಯೆ ಜಟಾಪಟಿ ಜೋರಾಗುವ ಸಾಧ್ಯತೆಯಿದೆ.  ಇದನ್ನೂ ಓದಿ:  ಕೊಪ್ಪಳದ ಕಾಂಗ್ರೆಸ್ ಸಚಿವ, ಸಂಸದ, ಶಾಸಕರು ಮೋಸಗಾರರು: ಸಿಎಂ ಭೇಟಿಗೂ ಮುನ್ನ ಇಕ್ಬಾಲ್ ಅನ್ಸಾರಿ ಬಾಂಬ್

    ಈಶ್ವರ್‌ ಖಂಡ್ರೆ ಹೇಳಿದ್ದೇನು?
    ವೀರಶೈವ-ಲಿಂಗಾಯತ ಎರಡೂ ಒಂದೇ. ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಕೊಡಬೇಕು ಎಂಬುದು ಮಹಾಸಭಾದ ಅಭಿಪ್ರಾಯ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕ ಲಿಂಗಾಯತ ಧರ್ಮ ಆಗಬೇಕು ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ನಿಲುವು ಸ್ಪಷ್ಟವಾಗಿ ಹೇಳಿದ್ದೇನೆ. ಲಿಂಗಾಯತ-ವೀರಶೈವ ಎರಡು ಒಂದೇ. ಶಿವಕುಮಾರ ಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯತ ಸಭೆಯ ಎಲ್ಲಾ ಅಧ್ಯಕ್ಷರು ಳು ಇವತ್ತು ವೀರಶೈವ-ಲಿಂಗಾಯತ ಎರಡು ಸಮಾನಾರ್ಥಕ ಪದಗಳು ಇವೆ ಅಂತ ಹೇಳಿವೆ. ವೀರಶೈವ-ಲಿಂಗಾಯತ ಭಿನ್ನ ಇಲ್ಲ.ಇಷ್ಟ ಲಿಂಗ ಪೂಜೆ ಮಾಡುವವರು, ಅಷ್ಟಾವರಣ ವ್ಯವಸ್ಥೆ ಪಾಲನೆ ಮಾಡುವರು, ಗುರುಗಳು ಇದ್ದಾರೆ, ವಿರಕ್ತರು ಇದ್ದಾರೆ. ಹೀಗಾಗಿ ಎಲ್ಲರು ಒಗ್ಗಟ್ಟಾಗಿ, ಸಂಘಟಿತರಾಗಿ ಇರಬೇಕು.ಸಂಘಟನೆಯಲ್ಲಿ ಶಕ್ತಿ ಇದೆ. ವಿಘಟನೆಯಲ್ಲಿ ಯಾವುದೇ ಉಪಯೋಗ ಆಗೊಲ್ಲ ಎಂಬುದು ನಮ್ಮ ನಿಲುವು. ಆ ನಿಲುವಿಗೆ ನಾವು ಬದ್ದರಾಗಿದ್ದೇವೆ ಎಂದರು. ಇದನ್ನೂ ಓದಿ: ಕ್ರಿಕೆಟ್‌ ನೋಡಿ ಮರಳುತ್ತಿದ್ದಾಗ ಬಿತ್ತು ಮರ – ಯುವತಿಯ ಮೃತದೇಹ ವಿಕ್ಟೋರಿಯಾಗೆ ರವಾನೆ

    ಪ್ರತ್ಯೇಕ ಲಿಂಗಾಯತ ಧರ್ಮದಲ್ಲಿ ಮಹಾಸಭಾದ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾಸಭಾ ಇವತ್ತು ಅಲ್ಲ ಸ್ವಾತಂತ್ರ್ಯ ಪೂರ್ವದಿಂದ ಹಿಡಿದು 2000 ಇಸವಿಯಿಂದ ನಡೆದ ಜನಗಣತಿ ಸಮಯದಲ್ಲಿ ಎಲ್ಲರ ಅಭಿಪ್ರಾಯ ತೆಗೆದುಕೊಳ್ಳಾಗಿದೆ . ಭೌಗೋಳಿಕವಾಗಿ ನಾವೆಲ್ಲರು ಹಿಂದೂಗಳೇ ಆದರೂ ನಮ್ಮ ಆಚಾರ-ವಿಚಾರದಲ್ಲಿ ಸಿಖ್, ಜೈನರು, ಬೌದ್ದ, ಪಾರ್ಸಿ ಗಳಿಗೆ ಪ್ರತ್ಯೇಕ ಧರ್ಮ ಅಂತ ಕೊಡಲಾಗಿದೆ. ಅದೇ ಆಧಾರದಲ್ಲಿ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ನೀಡಬೇಕು ಅಂತ ಪದೇ ಪದೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಜನಗಣತಿಯಲ್ಲೂ ಪ್ರತ್ಯೇಕ ಕಾಲಂ ಕೊಡಬೇಕು ಅಂತ ವಿನಂತಿ ‌ಮಾಡಿದ್ದೇವೆ. ಇಲ್ಲಿವರೆಗೂ ಸರ್ಕಾರ ಅದನ್ನ ಗುರುತಿಸಿಲ್ಲ. ನಮ್ಮ ಮಹಾಸಭೆಯ ವತಿಯಿಂದ ಇನ್ನು ಮುಂದೆಯೂ ‌ಪ್ರತ್ಯೇಕ ಧರ್ಮ ಮಾನ್ಯತೆ ಸಿಗಲು ಪ್ರಯತ್ನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಪ್ರತ್ಯೇಕ ಧರ್ಮದ ವಿಚಾರ ಮತ್ರು ಸರ್ಕಾರಕ್ಕೆ ಯಾವುದೇ ಸಂಬಂಧವಿಲ್ಲ. ಸಿದ್ದರಾಮಯ್ಯ ಜನಸಮುದಾಯದ ನಾಯಕರು ಇದ್ದಾರೆ. ನಾವು ಯಾರಾದರೂ ಪ್ರತ್ಯೇಕ ಧರ್ಮದ ಬಗ್ಗೆ ಅವರ ಬಳಿ ಮಾತಾಡಿದ್ರೆ ಸಿಎಂ ನಿರ್ಧಾರ ತೆಗೆದುಕೊಳ್ತಾರೆ. ಮೊದಲು ‌ಕೂಡಾ ನೀವೆಲ್ಲರೂ ಬಂದು ಏನ್ ಹೇಳುತ್ತಿರೋ ಅದನ್ನು ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆಯೇ ವಿನಾ: ರಾಜಕೀಯ ದುರುದ್ದೇಶದಿಂದ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು.

  • ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

    ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

    ಚಿಕ್ಕೋಡಿ: ಒಕ್ಕಲಿಗ ಸಮಾಜದ ಚಂದ್ರಶೇಖರ ಸ್ವಾಮೀಜಿ ಡಿ.ಕೆ ಶಿವಕುಮಾರ್‌ (DK Shivakumar) ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಹೇಳಿಕೆ ನೀಡಿದ ಬೆನ್ನಲ್ಲೇ ವೀರಶೈವ ಲಿಂಗಾಯತ (Veershaiv Lingayat) ಸಮಾಜದ ಪಂಚ ಪೀಠದಿಂದ ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ಎದ್ದಿದೆ.

    ಮುಖ್ಯಮಂತ್ರಿ ಬದಲಾವಣೆ ಮಾಡುವುದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ (Sri Channa Siddharama Panditaradhya Shivacharya swami of Sri Saila) ಆಗ್ರಹಿಸಿದ್ದಾರೆ.

    \

    ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನು ಹೆಚ್ಚುವರಿ ಮಾಡಿದರೆ ಲಿಂಗಾಯತ ಮಂತ್ರಿಗಳಿಗೆ ಹೆಚ್ಚಿನ ಸ್ಥಾನ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಡಿಕೆಗೆ ಸಿಎಂ ಸ್ಥಾನ ಹೇಳಿಕೆ ಹಿಂದಿದ್ಯಾ ಕುತಂತ್ರ? – ಆಪ್ತರ ಬಳಿ ಸಿಎಂ ತೀವ್ರ ಅಸಮಾಧಾನ

    ಎಂಬಿ ಪಾಟೀಲ್‌, ಈಶ್ವರ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ನೀಡಬೇಕು. ಕಾಶಿ, ಉಜ್ಜಯಿನಿ, ಜಗದ್ಗುರುಗಳ ಜೊತೆಗೂ ಈ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ. ಒಂದು ವೇಳೆ ಮುಖ್ಯಮಂತ್ರಿಯಾಗುವ ಸಂದರ್ಭದಲ್ಲಿ ಒಪ್ಪಂದ ಆಗಿದ್ದರೆ ಒಪ್ಪಂದದ ಪ್ರಕಾರ ನಡೆದುಕೊಳ್ಳಲಿ ಎಂದು ಶ್ರೀಶೈಲ ಜಗದ್ಗುರುಗಳು ಹೇಳಿದರು.

     

  • ರಾಜ್ಯದಲ್ಲಿ ಜಾತಿಗಣತಿ ಸಂಘರ್ಷ – ಕಾಂತರಾಜು ವರದಿಗೆ ವೀರಶೈವರಿಂದಲೂ ತೀವ್ರ ವಿರೋಧ

    ರಾಜ್ಯದಲ್ಲಿ ಜಾತಿಗಣತಿ ಸಂಘರ್ಷ – ಕಾಂತರಾಜು ವರದಿಗೆ ವೀರಶೈವರಿಂದಲೂ ತೀವ್ರ ವಿರೋಧ

    ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ (Caste Census) ಸಂಘರ್ಷ ತೀವ್ರಗೊಂಡಿದೆ. ನಿರೀಕ್ಷೆಯಂತೆಯೇ ವೀರಶೈವ ಸಮುದಾಯ (Veerashaiva Community) ಕೂಡ ಕಾಂತರಾಜು ವರದಿಯನ್ನೂ ತೀವ್ರವಾಗಿ ವಿರೋಧಿಸಿದೆ.

    ಬೆಂಗಳೂರಿನಲ್ಲಿ (Bengaluru) ಗುರುವಾರ ಸಭೆ ನಡೆಸಿದ ಅಖಿಲ ಭಾರತ ವೀರಶೈವ ಮಹಾಸಭಾ, ಜಾತಿಗಣತಿಯಲ್ಲಿನ ಲೋಪದೋಷ ಸರಿಪಡಿಸುವಂತೆ ಸರ್ಕಾರವನ್ನ ಆಗ್ರಹಿಸಿದೆ. ಮಹಾಸಭಾ ಅಧ್ಯಕ್ಷ, ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು, ಕಾಂತರಾಜು ಜಾತಿಗಣತಿ ವರದಿಯನ್ನ ಮನೆಯಲ್ಲೇ ಕೂತು ಬರೆದಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ಧವೇ ಸಿಡಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರ 10 ಸಾವಿರ ಕೋಟಿ ಬರ ಪರಿಹಾರ ಘೋಷಣೆ ಮಾಡದಿದ್ರೆ ಬಿಜೆಪಿಯಿಂದ ವಿಧಾನಸೌಧ ಮುತ್ತಿಗೆ: ಕೋಟ ಎಚ್ಚರಿಕೆ

    ನಾವು ಜಾತಿಗಣತಿಯ ವಿರೋಧಿಗಳಲ್ಲ, ಆದ್ರೆ ಯಾವುದೇ ವರದಿ ವೈಜ್ಞಾನಿಕವಾಗಿರಬೇಕು ಎಂಬುದಷ್ಟೇ ನಮ್ಮ ಒತ್ತಾಯ. ನಮ್ಮ ಸಮುದಾಯದ ಮನೆಗಳಿಗೆ ಹೋಗಿ ಯಾರೂ ಸಮೀಕ್ಷೆಯನ್ನೇ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅನುದಾನ ತಾರತಮ್ಯ, ಆರ್‌ಆರ್‌ ನಗರದಲ್ಲಿ ಅರ್ಧಕ್ಕೆ ನಿಂತಿವೆ ಕಾಮಗಾರಿಗಳು – ಬಿಎಸ್‌ವೈಯಿಂದ 3 ದಿನ ಸತ್ಯಾಗ್ರಹದ ಎಚ್ಚರಿಕೆ

    ಮತ್ತೊಂದೆಡೆ ಕಾಂತರಾಜು ಆಯೋಗದ ವರದಿಯನ್ನ ಸರ್ಕಾರ ಸ್ವೀಕರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಗೃಹಮಂತ್ರಿ ಮನವಿ ಮಾಡಿದ್ದಾರೆ. ಇನ್ನೂ ಕಾಂಗ್ರೆಸ್‌ನಲ್ಲಿ ಲಿಂಗಾಯತರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಲಿಂಗಾಯತ ನಾಯಕರು ಕಾಂಗ್ರೆಸ್‌ನಲ್ಲಿ ಅಲೆಮಾರಿಗಳಾಗಿದ್ದಾರೆ: ಗೋವಿಂದ ಕಾರಜೋಳ

  • ರಷ್ಯಾದ 8 ವರ್ಷದ ಬಾಲಕನಿಗೆ ಇಷ್ಟಲಿಂಗ ದೀಕ್ಷೆ- ಗಣೇಶನಾಗಿ ಬದಲಾದ ಆ್ಯಂಡ್ರೆ

    ರಷ್ಯಾದ 8 ವರ್ಷದ ಬಾಲಕನಿಗೆ ಇಷ್ಟಲಿಂಗ ದೀಕ್ಷೆ- ಗಣೇಶನಾಗಿ ಬದಲಾದ ಆ್ಯಂಡ್ರೆ

    ಹುಬ್ಬಳ್ಳಿ: ರಷ್ಯಾದ (Russia) 8 ವರ್ಷದ ಬಾಲಕ ಕಾಶಿ ಪೀಠದ ಶ್ರೀಗಳಿಂದ ಇಷ್ಟಲಿಂಗ ದೀಕ್ಷೆ ಪಡೆದಿದ್ದಾನೆ. ಈ ಮೂಲಕ ಮಾಸ್ಕೋ ನಿವಾಸಿ ಪಾರ್ವತಿ ಎನ್ನುವವರ ಪುತ್ರ ಆ್ಯಂಡ್ರೆ ಎಂಬ 8 ವರ್ಷದ ಬಾಲಕ ಈಗ ಗಣೇಶನಾಗಿ ಬದಲಾಗಿದ್ದಾನೆ.

    ಈ ಹಿಂದೆ ಉತ್ತರ ಕನ್ನಡ ಗೋಕರ್ಣದಲ್ಲಿ ಸಾವಿರಾರು ಜನರು ಕಾಶಿ ಶ್ರೀಗಳಿಂದ ಇಷ್ಟಲಿಂಗ ದೀಕ್ಷೆ ಪಡೆದಿದ್ದರು. ಈ ವೇಳೆ ರಷ್ಯಾದ ಮಹಿಳೆಯಾದ ಬಾಲಕನ ತಾಯಿ ಸಹ ವೀರಶೈವ ಧರ್ಮ ಸ್ವೀಕರಿಸಿದ್ದರು. ಬಳಿಕ ಪಾರ್ವತಿ ಎಂದು ಹೆಸರು ಬದಲಾಯಿಸಿಕೊಂಡಿದ್ದರು. ಅವರು ಚಾಚು ತಪ್ಪದೆ ವೀರಶೈವ ಧರ್ಮವನ್ನು (Veerashaiva) ಪಾಲಿಸುತ್ತಿದ್ದರು. ಅಲ್ಲದೇ ಇಷ್ಟಲಿಂಗ ಪೂಜೆಯನ್ನು ಸಹ ನಿತ್ಯವೂ ನಡೆಸುತ್ತಿದ್ದರು. ಇದರಿಂದ ಮಗ ಕೂಡ ಪ್ರಭಾವಿತನಾಗಿದ್ದು, ಅವರಂತೆ ಇಷ್ಟಲಿಂಗ ಧರಿಸಲು ಬಯಸಿದ್ದ. ಇದನ್ನೂ ಓದಿ: ನಡ್ಡಾ ಪ್ರಾರ್ಥನೆ ವೇಳೆ ಗಣೇಶ ಪೆಂಡಾಲ್‍ನಲ್ಲಿ ಅಗ್ನಿ ದುರಂತ – ಪವಾಡದಂತೆ ಸುರಿದ ಮಳೆಯಿಂದ ತಪ್ಪಿದ ಅನಾಹುತ

    ಅವನ ಇಷ್ಟದಂತೆ ಪಾಲಕರು ಆತನಿಗೆ ಕಾಶಿ ಪೀಠದ ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳಿಂದ ಇಷ್ಟಲಿಂಗ ದೀಕ್ಷೆ ಕೊಡಿಸಿದ್ದಾರೆ. ಬಳಿಕ ಆತನಿಗೆ ಮರು ನಾಮಕರಣಮಾಡಿ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಝಡ್ ಪ್ಲಸ್ ಭದ್ರತೆ ಇದ್ರೂ ಚಂದ್ರಬಾಬು ನಾಯ್ಡುಗೆ ಜೈಲಲ್ಲಿ ಸೊಳ್ಳೆ ಕಾಟ- ಡೆಂಗ್ಯೂ ಭೀತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೀರಶೈವರು ನಮ್ಮಲ್ಲಿ ದಲಿತರ ರಕ್ತ ಹರಿಯುತ್ತಿದೆ ಎಂದು ಹೇಳಲಿ: ಜ್ಞಾನ ಪ್ರಕಾಶ ಸ್ವಾಮೀಜಿ

    ವೀರಶೈವರು ನಮ್ಮಲ್ಲಿ ದಲಿತರ ರಕ್ತ ಹರಿಯುತ್ತಿದೆ ಎಂದು ಹೇಳಲಿ: ಜ್ಞಾನ ಪ್ರಕಾಶ ಸ್ವಾಮೀಜಿ

    ಬೀದರ್: ವೀರಶೈವ (VeeraShivas) ಜಂಗಮರು, ದೊಡ್ಡ-ದೊಡ್ಡ ಪೀಠಾಧ್ಯಕ್ಷರು ಎಲ್ಲ ಸ್ವಾಮೀಜಿಗಳು ವಿಧಾನಸೌಧದ ಮುಂದೆ ಬನ್ನಿ, ಬಂದು ನಮ್ಮಲ್ಲಿ ದಲಿತರ ರಕ್ತ ಹರಿಯುತ್ತಿದೆ ಎಂದು ಬಹಿರಂಗವಾಗಿ ಸುದ್ದಿಗೋಷ್ಠಿ ಮಾಡಿ ಹೇಳಿ ಎಂದು ಮೈಸೂರಿನ ಉರಿಲಿಂಗ ಪೆದ್ದಿ ಮಠದ ಮಠಾಧೀಶರಾದ ಜ್ಞಾನ ಪ್ರಕಾಶ ಸ್ವಾಮೀಜಿ (Jnanaprakash Swamiji) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಮುಂದುವರಿದು ಮಾತನಾಡಿದ ಅವರು, ನಾವು ಹೊಲೆಯಾ, ಮಾದಿಗರಿಗೆ ಹುಟ್ಟಿದ್ದೇವೆ. ನಾವೆಲ್ಲ ಅಣ್ಣ ತಮ್ಮಂದಿರು, ನಾವೆಲ್ಲ ಸಮಾನರಾಗಿರೋಣ ಎಂದು ಹೇಳಿ ಬೇಕಿದ್ದರೆ ನಾನು ಬರುತ್ತೇನೆ. ಚರ್ಚೆ ಮಾಡೋಣ ಎಂದು ವೀರಶೈವ, ಲಿಂಗಾಯತ ಜಂಗಮರಿಗೆ ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ `ಸಿಎಂ ಅಂಕಲ್’ ಅಭಿಯಾನ – ಭುಗಿಲೆದ್ದ ಕೇಸರಿ ವಿವಾದ, ಸರ್ಕಾರಕ್ಕೆ ಹಲವು ಪ್ರಶ್ನೆ

    ನಂತರ ನೀವು ಸರ್ಟಿಫಿಕೇಟ್ ತೆಗೆದುಕೊಳ್ಳಿ ಬೇಡ ಅಂತ ಹೇಳಲ್ಲ ಎಂದು ಪಂಚ ಪೀಠದ ಜಗದ್ಗುರುಗಳನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ಇದನ್ನೂ ಓದಿ: ಸಕ್ಕರೆ ಕಾಯಿಲೆ ಇರುವವರಿಗೆ ಬೇರೆ ಊಟ – ಹೊಸ ಮೆನುವಿಗೆ ರೈಲ್ವೆ ಮಂಡಳಿ ಸೂಚನೆ

    ಎಸ್ಟಿ-ಎಸ್ಟಿ ವರ್ಗದವರನ್ನ (SCST Community) ಮುಟ್ಟಬಾರದು ಅಂತಾರೆ, ಹಾಗಾದ್ರೆ ಐದು ವರ್ಷಕ್ಕೊಮ್ಮೆ ವೋಟಿಗಾಗಿ ಎಲ್ಲರೂ ಬಂದು ಕಾಲಿಗೆ ನಮಸ್ಕಾರ ಮಾಡ್ತಾರೆ. ಅಂಬೇಡ್ಕರರು (Ambedkar) ಸಂವಿಧಾವನ್ನು (Constitution) ಎಚ್ಚರಿಕೆಯಿಂದ ಮಾಡಿದ್ದಾರೆ. ನಮ್ಮೆಲ್ಲರಿಗೂ ಮತದಾನದ ಹಕ್ಕು ಕೊಟ್ಟಿದ್ದಾರೆ. ಆದರೆ ನಾವು ನಮ್ಮೆಲ್ಲಾ ಆಯುಧಗಳನ್ನು ಉಳ್ಳವರ ಕೈಗೆ ಕೊಟ್ಟು ಸುಮ್ಮನಿದ್ದೇವೆ ಬೇಸರ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವೀರಶೈವ, ಲಿಂಗಾಯತ ಎರಡೂ ಒಂದೇ: ಬಿದರಿ ಸ್ಪಷ್ಟನೆ

    ವೀರಶೈವ, ಲಿಂಗಾಯತ ಎರಡೂ ಒಂದೇ: ಬಿದರಿ ಸ್ಪಷ್ಟನೆ

    ರಾಯಚೂರು: ವೀರಶೈವ (Veerashaiva), ಲಿಂಗಾಯತ (Lingayat) ಅಂತಾ ಪ್ರತ್ಯೇಕ ಧರ್ಮ ಅಥವಾ ಒಂದು ಜಾತಿಯಿಲ್ಲ. ವೀರಶೈವ, ಲಿಂಗಾಯತ ಎರಡೂ ಒಂದೇ ಅಂತಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಶಂಕರ ಮಹದೇವ ಬಿದರಿ ಸ್ಪಷ್ಟಪಡಿಸಿದ್ದಾರೆ.

    ರಾಯಚೂರಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ (All India Veerashaiva Lingayat Mahasabha) ನಡೆದ ಬಯಲು ಸಿರಿ ಬೆಳಕು ಪ್ರಶಸ್ತಿ ಪ್ರದಾನ ಹಾಗೂ ಮಹಿಳಾ ಕಾನೂನು (Women’s Law) ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಪತಿಯ ಕಿರುಕುಳ – ಪ್ರೀತಿಸಿ ಮದುವೆಯಾಗಿದ್ದ ತುಂಬು ಗರ್ಭಿಣಿ ನೇಣಿಗೆ ಶರಣು

    ವೀರಶೈವ, ಲಿಂಗಾಯತ ಎರಡೂ ಒಂದೇ, ವೀರಶೈವ ಮಹಾಸಭೆಯಲ್ಲಿ ಇತ್ತೀಚೆಗೆ ವಿನಂತಿ ಮಾಡಿಕೊಂಡು ಲಿಂಗಾಯತ ಪದವನ್ನ ಕೂಡಿಸುವ ಪ್ರಯತ್ನ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೊಂದು ಹನಿಟ್ರ್ಯಾಪ್ ಕೇಸ್ – ಪ್ರೀತ್ಸೋ ನೆಪದಲ್ಲಿ ಮಾಯಾಂಗನೆ ಹನಿಟ್ರ್ಯಾಪ್ ಖೆಡ್ಡಕ್ಕೆ ಬಿದ್ದ ಯುವಕ

    ಒಳ್ಳೆಯ ರೀತಿಯಲ್ಲಿ ಒಗ್ಗಟ್ಟಾಗಿದ್ದ ನಮ್ಮ ಸಮಾಜದಲ್ಲಿ ಕೆಲವರು ಚಿಲ್ಲರೆ ವಿಚಾರಗಳು ಹಾಗೂ ತಾತ್ವಿಕ ವಿಚಾರಗಳನ್ನ ತಂದು ಸಮಾಜ ಒಡೆಯುವಂತ ಪ್ರಯತ್ನ ನಡೆಯಿತು. ಇದಕ್ಕಾಗಿ ಮಹಾಸಭಾದಲ್ಲಿ ಲಿಂಗಾಯತ ಪದ ಸೇರಿಸಿದ್ದೇವೆ. ವೀರಶೈವ ಲಿಂಗಾಯತ ಸಮಾಜವನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ. ಆದರೆ ಶೈಕ್ಷಣಿಕ ಹಾಗೂ ಸಾಂಸ್ಕೃತಿಕವಾಗಿ ಅಭಿವೃದ್ಧಿ ಹೊಂದಲು ಪ್ರಯತ್ನಿಸಬೇಕಿದೆ. ಎಲ್ಲರ ಒಗ್ಗಟ್ಟಿನಿಂದ ಮಾತ್ರ ಸಮಾಜ ಉಳಿಯಲು ಸಾಧ್ಯ ಎಂದು ಸಲಹೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುರಾಘಾಶ್ರೀ ವೀರಶೈವ ಲಿಂಗಾಯತ ವೆಬ್‍ಸೈಟ್‍ಗೆ ವಿರೋಧ: ಬಸವ ಕೇಂದ್ರದಿಂದ ಅಸಮಧಾನ

    ಮುರಾಘಾಶ್ರೀ ವೀರಶೈವ ಲಿಂಗಾಯತ ವೆಬ್‍ಸೈಟ್‍ಗೆ ವಿರೋಧ: ಬಸವ ಕೇಂದ್ರದಿಂದ ಅಸಮಧಾನ

    ರಾಯಚೂರು: ಚಿತ್ರದುರ್ಗ ಮುರುಘಾಮಠದ ಡಾ.ಶಿವಮೂರ್ತಿಮುರುಘಾ ಶರಣರಿಂದ ಆರಂಭವಾದ ವೀರಶೈವ ಲಿಂಗಾಯತ ವೆಬ್ ಸೈಟ್‍ಗೆ ರಾಯಚೂರಿನ ಬಸವ ಕೇಂದ್ರದ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

    ಲಿಂಗಾಯತರೇ ಬೇರೆ ವೀರಶೈವರೇ ಬೇರೆ. ಇಬ್ಬರೂ ಒಂದೇ ಅನ್ನೋ ರೀತಿಯಲ್ಲಿ ಒಟ್ಟಾಗಿ ವೆಬ್‍ಸೈಟ್ ಬಿಡುಗಡೆ ಮಾಡಿರುವುದರು ಸರಿಯಲ್ಲ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿಂತಿಲ್ಲ, ನಿರಂತರವಾಗಿ ನಡೆದಿದೆ. ಬಸವ ತತ್ವಕ್ಕೆ ಬದ್ಧವಾಗಿರುವವರು ಲಿಂಗಾಯತರು. ಮುರುಘಾಶ್ರೀಗಳು ಲಿಂಗಾಯತರು, ವೀರಶೈವರು ಒಂದೇ ಎನ್ನುವಂತ ವೆಬ್ ಸೈಟ್ ಆರಂಭಿಸಬಾರದಿತ್ತು ಅಂತ ಬಸವ ಕೇಂದ್ರದ ಸದಸ್ಯರು ಬೇಸರ ವ್ಯಕ್ತಪಡಿಸಿದ್ದಾರೆ.

    ಸ್ವಪ್ರತಿಷ್ಠೆಗಾಗಿ ವೆಬ್ ಸೈಟ್ ಆರಂಭಿಸಿದ್ದು, ಇದಕ್ಕೆ ನಮ್ಮ ವಿರೋಧವಿದೆ ಅಂತ ಬಸವ ಕೇಂದ್ರದ ಸದಸ್ಯರು ಹೇಳಿದ್ದಾರೆ. ಜಿಲ್ಲಾ ಬಸವಕೇಂದ್ರದ ಅಧ್ಯಕ್ಷ ಕುರಕುಂದಿ ವೀರಭದ್ರಪ್ಪ, ಕಾರ್ಯದರ್ಶಿ ಚನ್ನಬಸವಣ್ಣ ಮಹಾಜನಶಟ್ಟಿ ,ಹಿರಿಯ ಸದಸ್ಯ ಬಸವರಾಜದೇವರು ಅರಿವಿನಮನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾರ್ ಕಿಟಕಿಯ ಮೇಲೆ ಕುಳಿತು ಸ್ಟಂಟ್ – ಪೊಲೀಸರು ಕೊಟ್ರು 20-20ಯ ತ್ರಿಪಲ್ ಶಾಕ್!

  • ಬಿಜೆಪಿ ಹೈಕಮಾಂಡಿಗೆ ತಲೆನೋವು ತಂದ ಮೀಸಲಾತಿ ಹೋರಾಟ

    ಬಿಜೆಪಿ ಹೈಕಮಾಂಡಿಗೆ ತಲೆನೋವು ತಂದ ಮೀಸಲಾತಿ ಹೋರಾಟ

    ಬೆಂಗಳೂರು: ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಈಗ ಮೀಸಲಾತಿ ಹೋರಾಟ ತಲೆನೋವು ತಂದಿದೆ. ಏಕಕಾಲಕ್ಕೆ ಮೂರು ಪ್ರಬಲ ಸಮುದಾಯಗಳಿಂದ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿರುವ ಕಾರಣ ಬಿಜೆಪಿ ಸಚಿವರು, ಶಾಸಕರು, ಮುಖಂಡರಿಗೆ ಸಂದೇಶ ರವಾನೆ ಮಾಡಿ ಸುಮ್ಮನಿರಿಸಲು ಹೈಕಮಾಂಡ್‌ ಮುಂದಾಗಿದೆ.

    ಹೌದು. ಪಂಚಮಸಾಲಿ, ಕುರುಬ, ವಾಲ್ಮೀಕಿ ಸಮುದಾಯದಿಂದ ಮೀಸಲಾತಿ ಹೋರಾಟ ಈಗ ಜಾಸ್ತಿಯಾಗುತ್ತಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದ್ದರೂ ಈ ಹೋರಾಟದಲ್ಲಿ ಬಿಜೆಪಿ ಸಚಿವರು, ಶಾಸಕರು ಮುಂದಾಳತ್ವ ವಹಿಸಿರುವುದು ರಾಷ್ಟ್ರೀಯ ನಾಯಕರಿಗೆ ದೊಡ್ಡ ತಲೆನೋವಾಗಿದೆ.

    ಕುರುಬ ಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿ ಸಚಿವ ಈಶ್ವರಪ್ಪ ಜೊತೆ ಸರ್ಕಾರದ ಮೂವರು ಸಚಿವರು ಭಾಗಿಯಾಗಿದ್ದಾರೆ. ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಶಾಸಕ ಯತ್ನಾಳ್ ಸಕ್ರಿಯವಾಗಿದ್ದರೆ ವೀರಶೈವ-ಲಿಂಗಾಯತ ಒಬಿಸಿ ಮೀಸಲಾತಿ ಪರ ಬಿಎಸ್‍ವೈ ಸರ್ಕಾರದ ಸಚಿವರಿದ್ದಾರೆ.

    ಒಂದು ವೇಳೆ ಮೀಸಲಾತಿ ನೀಡಿದರೆ ಇತರ ಸಮಾಜಗಳಿಗೆ ಪೆಟ್ಟು ಬೀಳಬಹುದು ಎಂಬ ಮಾಹಿತಿ ಹೈಕಮಾಂಡ್‌ ಅಂಗಳಕ್ಕೆ ತಲುಪಿದೆ. ಈ ಕಾರಣಕ್ಕೆ ಮೀಸಲಾತಿ ಹೋರಾಟ ತೀವ್ರ ಹೊತ್ತಲ್ಲೇ ಗುರುವಾರ ಬಿಜೆಪಿ ಹೈಕಮಾಂಡ್‍ನಿಂದ ಸಂದೇಶ ಹೊತ್ತುಕೊಂಡು ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಬೆಂಗಳೂರಿಗೆ ಬರುತ್ತಿದ್ದಾರೆ.

    ಹಾಸನದಲ್ಲಿ ರಾಜ್ಯ ಬಿಜೆಪಿಯ ವಿವಿಧ ಘಟಕಗಳು, ಸಹ ಸಂಚಾಲಕರ ಸಭೆ ನಡೆಯಲಿದ್ದು ಅಂದು ಸಂಜೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ ಬಿಎಸ್‍ವೈ, ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಜೊತೆ ಮೀಸಲಾತಿ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.

    ಹೈಕಮಾಂಡ್‌ ಆತಂಕ ಏನು?
    ಮೀಸಲಾತಿ ಹೋರಾಟದ ಗೊಂದಲದಿಂದ ಬಿಜೆಪಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ಈ ಹಿಂದೆ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಕಾಂಗ್ರೆಸ್ ಬಹುದೊಡ್ಡ ನಷ್ಟ ಅನುಭವಿಸಿದೆ. ಕಾಂಗ್ರೆಸ್‍ಗೆ ಬಂದ ಪರಿಸ್ಥಿತಿ ನಮ್ಮ ಪಕ್ಷಕ್ಕೂ ಬಾರದಂತೆ ಮೀಸಲಾತಿ ವಿಚಾರದಲ್ಲಿ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಬೇಕು. ಈ ಕಾರಣಕ್ಕೆ ಬಿಜೆಪಿ ಸಚಿವರು, ಶಾಸಕರು, ಮುಖಂಡರು ಸುಮ್ಮನಿರಬೇಕು.