Tag: ವೀರಶೈವ ಲಿಂಗಾಯಿತ

  • ಲಿಂಗಾಯತ ಪಂಚಮಸಾಲಿ ಜನಾಂಗವನ್ನು 2ಎ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆ – ಕೊಡಗಿನಲ್ಲಿ ವಿರೋಧ

    ಲಿಂಗಾಯತ ಪಂಚಮಸಾಲಿ ಜನಾಂಗವನ್ನು 2ಎ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆ – ಕೊಡಗಿನಲ್ಲಿ ವಿರೋಧ

    ಮಡಿಕೇರಿ: ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗವನ್ನು ಹಿಂದುಳಿದ ವರ್ಗ 2ಎಗೆ ಸೇರಿಸಬೇಕೆಂಬ ಬೇಡಿಕೆಗೆ ಕೊಡಗಿನಲ್ಲಿ ವಿರೋಧ ವ್ಯಕ್ತವಾಗಿದೆ. ಸರ್ಕಾರದ ಆದೇಶದಂತೆ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಲು ರಾಜ್ಯ ಪ್ರವಾಸ ಕೈಗೊಂಡಿರುವ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ನೇತೃತ್ವದ ತಂಡ ಕೊಡಗು ಜಿಲ್ಲೆಗೆ ಆಗಮಿಸಿ, ಸಮುದಾಯದವರಿಂದ ವಿವರ ಬಯಸಿದ ಸಂದರ್ಭ ವೀರಶೈವಲಿಂಗಾಯತರು, ಪಂಚಮಸಾಲಿಗಳು ಎಂಬುದು ಯಾರು ಎನ್ನುವುದೇ ಗೊತ್ತಿಲ್ಲ. ಆದ್ದರಿಂದ ಮೀಸಲಾತಿ ನೀಡಿದರೆ ಎಲ್ಲಾ ವೀರಶೈವಲಿಂಗಾಯತರಿಗೂ ನೀಡಿ ಎಂದು ವೀರಶೈವಲಿಂಗಾಯತ ಸಂಘಟನೆ ಪ್ರಮುಖರು ಆಗ್ರಹಿಸಿದರು.

    ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಕೂಗೆಕೋಡಿ ಹಾಗೂ ಕೊಡ್ಲಿಪೇಟೆಗೆ ತೆರಳಿದ ತಂಡ ಕೆಲವು ಮನೆಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿದರೆ ಮತ್ತೊಂದೆಡೆ ಸಾರ್ವಜನಿಕವಾಗಿ ಅಭಿಪ್ರಾಯ ಸಂಗ್ರಹಿಸಿದರು. ಕೊಡಗು ಜಿಲ್ಲೆಯಲ್ಲಿ ವೀರಶೈವ ಲಿಂಗಾಯತ ಬಿಟ್ಟರೆ ನಮಗೇನೂ ಗೊತ್ತಿಲ್ಲ. ಎಲ್ಲರೂ ಒಟ್ಟಾಗಿ, ಒಗ್ಗಟ್ಟಾಗಿ ಬದುಕುತ್ತಿದ್ದೇವೆ. ಆದರೆ ಕೆಲವರು ತಮ್ಮ ರಾಜಕೀಯಕ್ಕಾಗಿ ನಮ್ಮ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಜಸ್ಥಾನದಲ್ಲಿ ಮುಸ್ಲಿಂ ಏರಿಯಾಗಳಿಗೆ ದಿನದ 24 ಗಂಟೆ ನಿರಂತರ ವಿದ್ಯುತ್

    ಪಂಚಮಸಾಲಿಗಳೆನ್ನುವವರು ಕೊಡಗಿನಲ್ಲಿ ಇಲ್ಲ. ಆದರೂ ಇದ್ದಾರೆ ಎಂಬ ತಪ್ಪು ಮಾಹಿತಿ ನೀಡಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನಮ್ಮನ್ನು ಬಳಸಿಕೊಳ್ಳಬೇಡಿ. ಮೀಸಲಾತಿ ನೀಡುವುದಾದರೆ ಎಲ್ಲಾ ವೀರಶೈವಲಿಂಗಾಯತರಿಗೂ ನೀಡಿ. ಅದು ಬಿಟ್ಟು ಸಮುದಾಯ ಒಡೆದು ಮೀಸಲಾತಿ ನೀಡುವ ಅವಶ್ಯಕತೆ ಇಲ್ಲ ಎಂದರು. ಇದನ್ನೂ ಓದಿ: ಕಪ್ಪು ಹಣ ಸಿಕ್ಕರೆ, ನನ್ನ ಸಂಪೂರ್ಣ ಆಸ್ತಿಯನ್ನು ಬಿಜೆಪಿಗೆ ದಾನ ಮಾಡುತ್ತೇನೆ : ಸಂಜಯ್ ರಾವತ್

    ಈ ಸಂದರ್ಭ ಮಾತನಾಡಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಸರ್ಕಾರದ ಆದೇಶದಂತೆ ನಾವು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿನೀಡಿ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ನಿಮ್ಮ ಅಭಿಪ್ರಾಯಗಳನ್ನು ವರದಿಯ ರೂಪದಲ್ಲಿ ಸರ್ಕಾರಕ್ಕೆ ಸಲ್ಲಿಸುತ್ತೇವೆ. ಈ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.

  • ಜಾಮದಾರನನ್ನು ಮೊದಲು ಹುಚ್ಚಾಸ್ಪತ್ರೆಗೆ ಕಳುಹಿಸಬೇಕು: ಶಾಮನೂರು

    ಜಾಮದಾರನನ್ನು ಮೊದಲು ಹುಚ್ಚಾಸ್ಪತ್ರೆಗೆ ಕಳುಹಿಸಬೇಕು: ಶಾಮನೂರು

    ದಾವಣಗೆರೆ: ಜಾಮದಾರನನ್ನು ಮೊದಲು ಹುಚ್ಚಾಸ್ಪತ್ರೆಗೆ ಸೇರಿಸಬೇಕೆಂದು ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

    ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತ ಎರಡು ಬೇರೆ, ಬೇರೆ ಎಂದು ಎರಡು ಮಾಡಲು ಹೊರಟಿದ್ದವರು, ಈಗ ಕಾಂಗ್ರೆಸ್ ಸೋತು ಸುಣ್ಣ ಆದ ಮೇಲೆ ಎಲ್ಲಾ ಒಂದೇ ಎಂದು ಬರುತ್ತಿದ್ದಾರೆ, ಬರಲಿ ಎಂದು ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸ್ವಪಕ್ಷದವರ ವಿರುದ್ಧ ಗುಡುಗಿದ್ದಾರೆ. ಇದನ್ನೂ ಓದಿ: ಬ್ಯಾಡ್ಮಿಂಟನ್ ಅವಳಿ ಪದಕ- ಪ್ರಮೋದ್ ಭಗತ್‍ಗೆ ಚಿನ್ನ, ಮನೋಜ್ ಸರ್ಕಾರ್‌ಗೆ ಕಂಚು

    ಬಂದರೆ ಜೊತೆಗೆ ಕರೆದುಕೊಂಡು ಹೋಗುತ್ತೇವೆ. ವೀರಶೈವ ಲಿಂಗಾಯಿತ ಎರಡು ಒಂದೇ, ಬೆಂಬಲ ಕೊಟ್ಟರೆ ಎಲ್ಲ ಬಡವರಿಗೆ ಸಹಾಯ ಆಗಲಿದೆ. ಮುಂದೆ ಎಲ್ಲಾ ಸರಿ ಹೋಗುತ್ತದೆ. ಹೀಗಾಗಿ ಎಂಬಿ ಪಾಟೀಲ್ ಈಗ ಎಲ್ಲರನ್ನು ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.

    ಜನರು ಅಷ್ಟು ದಡ್ಡರಲ್ಲ, ಎಲ್ಲವನ್ನು ನೋಡುತ್ತಿದ್ದಾರೆ. ಶಿವಾನಂದ ಜಾಮದಾರನನ್ನು ಮೊದಲು ಹುಚ್ಚಾಸ್ಪತ್ರೆಗೆ ಕಳುಹಿಸಬೇಕು. 99 ಉಪ ಪಂಗಡಗಳಿವೆ. ಎಲ್ಲರು ಒಂದೇ, ಅದರಲ್ಲಿ ಜಾಮದಾರ್ ಯಾರು ಎನ್ನುವುದು ಮೊದಲು ನಿರ್ಣಯಿಸಲಿ, ಅಧಿಕಾರದಲ್ಲಿ ಇದ್ದಾಗ ಯಾರಿಗೂ ಸಹಾಯ ಮಾಡಲಿಲ್ಲ, ಈಗ ನೂರೆಂಟು ಮಾತನಾಡುತ್ತಾರೆ ಎಂದು ಶಾಮನೂರು ಕಿಡಿಕಾರಿದ್ದಾರೆ. ಇದನ್ನೂ ಓದಿ:ಕೊಚ್ಚೆ ನೀರೇ ಕುಡಿದಿದ್ದೇನೆ – ಹೆಚ್‍ಡಿಕೆಗೆ ಜೆಡಿಎಸ್ ಶಾಸಕ ಟಾಂಗ್

  • ಸಿದ್ದರಾಮಯ್ಯನವರಿಗೆ ಈಗ ಬುದ್ಧಿ ಬಂದಿದೆ: ರಂಭಾಪುರಿ ಶ್ರೀ

    ಸಿದ್ದರಾಮಯ್ಯನವರಿಗೆ ಈಗ ಬುದ್ಧಿ ಬಂದಿದೆ: ರಂಭಾಪುರಿ ಶ್ರೀ

    ವಿಜಯಪುರ: ಧರ್ಮ ಒಡೆಯುವುದಕ್ಕೆ ಹೋಗಿ ಕಾಂಗ್ರೆಸ್ ಪಕ್ಷ ಸೋಲನ್ನು ಕಂಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಈಗ ಒಪ್ಪಿಕೊಂಡಿದ್ದಾರೆ ಎಂದು ರಂಭಾಪುರ ಶ್ರೀಗಳು ಹೇಳಿದ್ದಾರೆ.

    ಇಂದು ಜಿಲ್ಲೆಯ ನಿಡಗುಂದಿಯಲ್ಲಿ ಮಾತನಾಡಿದ ರಂಭಾಪುರ ಶ್ರೀಗಳು, ಮಾಜಿ ಸಿಎಂ ಸಿದ್ದರಾಮಯ್ಯನವರು ವೀರಶೈವ ಲಿಂಗಾಯಿತ ಧರ್ಮವನ್ನು ಒಡೆಯೋ ಪ್ರಯತ್ನದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಈ ಬುದ್ಧಿ ಚುನಾವಣಾ ಪೂರ್ವದಲ್ಲೇ ಇದ್ದಿದ್ದರೇ ಪಕ್ಷಕ್ಕೆ ಇಂತಹ ಹೊಡೆತ ಬೀಳುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಚುನಾವಣೆಯಲ್ಲಿ ನಾವು ಸೋತಿದ್ದು ಹೇಗೆ: ಕೆಪಿಸಿಸಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಆತ್ಮಾವಲೋಕನ

    ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಉತ್ತರ ಕರ್ನಾಟಕಕ್ಕೆ ಕೊಡುಗೆ ನೀಡಿಲ್ಲ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಧ್ವನಿ ಕೇಳ್ತಾ ಇದೆ. ಇನ್ನು ರೈತರ ಸಂಪೂರ್ಣ ಸಾಲ ಮನ್ನಾ ಮಾಡ್ತೀನಿ ಅಂತಾ ಹೇಳಿದ್ದರು. ಆದರೆ ಸಂಪೂರ್ಣ ಸಾಲಮನ್ನಾ ಮಾಡಿಲ್ಲ ಎಂದು ಎಚ್‍ಡಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

    ಯಾವುದೇ ಜಿಲ್ಲೆಗಳಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಬಾರದು. ಉತ್ತರ ಕರ್ನಾಟಕದ ರೈತರು ಕಷ್ಟದಲ್ಲಿ ಇದ್ದಾರೆ. ಜಾತ್ಯಾತೀತ ದೇಶದಲ್ಲಿ ಇನ್ನೂ ಜಾತಿ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡ್ತಾ ಇದ್ದಾರೆ. ಸ್ಥಾನ ಮಾನಗಳನ್ನು ನೀಡಬೇಕಾದರೂ ಜಾತಿ ಆಧಾರ ಮೇಲೆ ಮಾಡ್ತಾ ಇದ್ದಾರೆ. ಯಾವುದೇ ಸರ್ಕಾರವಿರಲಿ ವ್ಯಕ್ತಿಯ ಕೆಲಸ, ಸಾಮಾಜಿಕ ಸೇವೆಗಳನ್ನು ನೋಡಿ ಅವಕಾಶ ನೀಡಬೇಕೇ ಹೊರತು, ಜಾತಿಯಿಂದ ಗುರುತಿಸುವುದಲ್ಲ ಎಂದು ಅಭಿಪ್ರಾಯಪಟ್ಟರು.