Tag: ವೀರಶೈವ

  • ವೀರಶೈವ ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ – ಮತ್ತೆ ಪ್ರತ್ಯೇಕ ಧರ್ಮದ ಕೂಗು

    ವೀರಶೈವ ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ – ಮತ್ತೆ ಪ್ರತ್ಯೇಕ ಧರ್ಮದ ಕೂಗು

    ಬೆಂಗಳೂರು: ಮತ್ತೊಮ್ಮೆ ಪ್ರತ್ಯೇಕ ಲಿಂಗಾಯತ ಧರ್ಮದ ಕೂಗು ಕೇಳಿಬಂದಿದೆ. ರಾಜ್ಯ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿಸುತ್ತಿರುವ ಬೆನ್ನಲ್ಲೇ ನಿಗಮಕ್ಕೆ ಲಿಂಗಾಯತ ಎಂಬ ಹೆಸರನ್ನು ಮಾತ್ರ ಬಳಸುವಂತೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹಿಸಿದೆ.

    ಬಸವ ಸಮಿತಿಯ ಅರಿವಿನ ಮನೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಲಿಂಗಾಯತ ಸ್ವಾಮೀಜಿಗಳು, ಸರ್ಕಾರದ ನಿರ್ಧಾರವನ್ನು ಜಾಗತಿಕ ಲಿಂಗಾಯತ ಮಹಾಸಭಾದ ಸ್ವಾಗತಿಸುತ್ತದೆ. ಆದರೆ, ವೀರಶೈವ ಎನ್ನುವುದನ್ನು ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಎಂದು ಸ್ಥಾಪಿಸಿ. ಅಲ್ಲದೆ, ಪ್ರತ್ಯೇಕ ಧರ್ಮ ಮತ್ತು ಹಿಂದುಳಿದ ವರ್ಗದ ವಿಚಾರ ಬೇರೆ. ಹೀಗಾಗಿ ಧರ್ಮದ ಹೋರಾಟ ನಿರಂತರವಾಗಿ ನಡೆಯುತ್ತದೆ. ಲಿಂಗಾಯತ ಅಸ್ಮಿತೆಗಾಗಿ ಹಾಗೂ ಸ್ವಾತಂತ್ರ್ಯ ಧರ್ಮಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ಈ ವಿಚಾರವಾಗಿ ನಾವು ಸುಪ್ರೀಂ ಕೋರ್ಟ್‍ಗೆ ಹೋಗಲು ಸಿದ್ಧರಿದ್ದೇವೆ ಎಂದು ಒಕ್ಕೂರಲಿನಿಂದ ತಿಳಿಸಿದ್ದಾರೆ.


    ಸುದ್ದಿಗೋಷ್ಠಿಯಲ್ಲಿ ಗದಗನ ಡಂಬಳ ಮಠದ ಶ್ರೀ ಸಿದ್ದರಾಮ ಸಾಮೀಜಿ, ಬಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ ದೇವರು, ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಮುಂಡರಗಿ ಮಠದ ಶ್ರೀ ನಿಜಗುಣಾನಂದ ಸ್ವಾಮೀಜಿ, ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದ ಮಾತೋಶ್ರಿ ಗಂಗಾಮಾತೆ, ವಿಜಯ ಮಹಾಂತೇಶ್ವರ ಮಠದ ಗುರು ಮಹಾಂತ ಸ್ವಾಮೀಜಿ ಸೇರಿದಂತೆ ಹಲವರು ಭಾಗಿಯಾಗಿ ಕಾಂಗ್ರಸ್‍ನ ಕೆಲ ಲಿಂಗಾಯತ ನಾಯಕರ ನಿಲುವನ್ನು ಖಂಡಿಸಿದ್ದಾರೆ.

    ಗದಗ ಡಂಬಳ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ ಮಾತನಾಡಿ, ವಿರಶೈವ ಲಿಂಗಾಯತ ನಿಗಮ ಮಂಡಳಿ ಸ್ಥಾಪಿಸುವ ಕುರಿತು ಕಾಂಗ್ರೆಸ್ ನಾಯಕರು ಸಭೆ ಮಾಡಿದ್ದು, ಇದಕ್ಕೆ ನಮ್ಮ ತಕರಾರಿಲ್ಲ. ಅದರೆ, ವೀರಶೈವ ಲಿಂಗಾಯತ ಎಂದು ಎಲ್ಲೂ ಇಲ್ಲ ಹೀಗಾಗಿ ಹೆಸರನ್ನು ಲಿಂಗಾಯತ ಎಂದು ಬದಲಿಸಬೇಕು. ವೀರಶೈವ ಎನ್ನುವುದೇ ಇಲ್ಲದಿದ್ದಾಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಎಂಬ ಹೆಸರನ್ನೇಕೆ ಇಡಬೇಕು ಎಂದು ಪ್ರಶ್ನಿಸಿದ್ದಾರೆ.

    ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಮುಗಿದ ಅಧ್ಯಾಯ ಎಂದು ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಇದು ಸುಳ್ಳು ಲಿಂಗಾಯತರ ಹೋರಾಟ ನಿರಂತರವಾಗಿರುತ್ತದೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಲಿಂಗಾಯತ ಹೋರಾಟ ಮುಗಿದ ಅಧ್ಯಾಯ ಎಂಬುದು ಕಾಂಗ್ರೆಸ್ ಪಕ್ಷದ ಹೇಳಿಕೆ ಅಗಿರಬಹುದು. ಅದರೆ, ಸ್ವತಂತ್ರ ಧರ್ಮದ ಹೋರಾಟ ನಮ್ಮ ಅಸ್ಮಿತೆ. ನಾವು ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಸಿದ್ದರಾಮ ಸ್ವಾಮೀಜಿ ತಿಳಿಸಿದರು.

    ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ನಿಗಮ ಮಂಡಳಿ ಸ್ಥಾಪನೆ ಮಾಡಿ ಲಿಂಗಾಯತ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಲು ಮುಂದಾಗಿದ್ದಾರೆ. ಇದಕ್ಕೆ ನಮ್ಮ ಒಪ್ಪಿಗೆ ಇದೆ. ಆದರೆ ಸ್ವತಂತ್ರ ಧರ್ಮದ ಹೋರಾಟಕ್ಕೂ ನಿಗಮ ಮಂಡಳಿ ಸ್ಥಾಪನೆಗೂ ಸಂಬಂಧವಿಲ್ಲ. ಕಾಂಗ್ರಸ್ ಪಕ್ಷದ ಕೆಲ ಲಿಂಗಾಯತ ನಾಯಕರು ಈ ಗೊಂದಲವನ್ನು ಸೃಷ್ಟಿಸುತ್ತಿದ್ದಾರೆ. ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿರುತ್ತದೆ. ನಿಗಮ ಮಂಡಳಿಗೂ ಸಹ ವೀರಶೈವ ಎನ್ನುವುದನ್ನು ಬಿಟ್ಟು ಲಿಂಗಾಯತ ಅಭಿವೃದ್ಧಿ ನಿಗಮ ಎಂದು ಸ್ಥಾಪಿಸಿ ಎಂದು ಸಲಹೆ ನೀಡಿದ್ದಾರೆ.

    ಎಲ್ಲೂ ಉಲ್ಲೇಖವಾಗಿಲ್ಲ
    ಮಂಡಲ್ ವರದಿಯಲ್ಲಿ ಲಿಂಗಾಯತದ ಕುರಿತು ಪ್ರಸ್ತಾಪವಾಗಿಲ್ಲ. 30 ಪಂಗಡಗಳನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಕ್ಕೆ ಸೇರಿಸಲಾಗಿತ್ತು. ಉಳಿದ 90 ಪಂಗಡಗಳನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕೆಂಬ ಒತ್ತಡ ನಮ್ಮದಾಗಿದೆ. ಲಿಂಗಾಯತ ಗಾಣಿಗ, ನೇಕಾರ ಲಿಂಗಾಯತ, ಬಡಿಗ ಲಿಂಗಾಯತ ಸೇರಿದಂತೆ 30 ಪಂಗಡಗಳಿಗೆ ಲಿಂಗಾಯತ ಎಂದೇ ಸೇರಿಸಿದ್ದಾರೆ. ಯಾವ ಜಾತಿಯಲ್ಲೂ ವೀರಶೈವ ಲಿಂಗಾಯತ ಎಂದು ಉಲ್ಲೇಖವಾಗಿಲ್ಲ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಎಸ್.ಎಂ.ಜಾಮದಾರ್ ಸ್ಪಷ್ಟಪಡಿಸಿದ್ದಾರೆ.

    ವೀರಶೈವವನ್ನು ಉಪಪಂಗಡವಾಗಿ ನಾವು ಗೌರವಿಸುತ್ತೇವೆ. ಆದರೆ, ತಾವೇ ಜಾತಿ ಹುಟ್ಟುಹಾಕಿದವರು, ಬಸವಣ್ಣ ಶಿಷ್ಯ ಎಂದರೆ ನಾವು ಒಪ್ಪುವುದಿಲ್ಲ. ಈ ಕುರಿತು ಬಹುತೇಕ ಜನರಿಗೆ ಜಾತಿ ಪ್ರಮಾಣ ಪತ್ರದಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ಇದೀಗ ಮತ್ತೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಿ ಎಂದರೆ, ಅವರೇನು ಹುಚ್ಚರಾ? 2002ರ ಗೆಜೆಟ್ ನೋಟಿಫಿಕೇಷನ್ ಸರ್ಕಾರ ಹಿಂಪಡೆಯಬೇಕು. ಇಲ್ಲವಾದಲ್ಲಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಲೂ ಸಿದ್ಧ. ಈ ಕುರಿತು ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸಬೇಡಿ ಎಂದು ಜಾಮದಾರ್ ಮನವಿ ಮಾಡಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಕಾಂಗ್ರೆಸ್‍ಗೆ ಯಾಕ್ರೋ ವೋಟ್ ಹಾಕಿಲ್ಲ- ವೀರಶೈವ ಲಿಂಗಾಯತರಿಗೆ ನಿಂದನೆ

    ಕಾಂಗ್ರೆಸ್‍ಗೆ ಯಾಕ್ರೋ ವೋಟ್ ಹಾಕಿಲ್ಲ- ವೀರಶೈವ ಲಿಂಗಾಯತರಿಗೆ ನಿಂದನೆ

    ದಾವಣಗೆರೆ: ರಾಜ್ಯದಲ್ಲಿ ಎರಡೂ ಹಂತದ ಚುನಾವಣೆ ಮುಗಿದಿದೆ. ಈ ಬೆನ್ನಲ್ಲೇ ಇದೀಗ ವೀರಶೈವ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ಮುಖಂಡ  ಕ್ಲಾಸ್ ತೆಗೆದುಕೊಂಡಿದ್ದಾರೆ.

    ದಾವಣಗೆರೆ ತಾಲೂಕಿನ ನೇರ್ಲಿಗೆ ಗ್ರಾಮದಲ್ಲಿ ವೈ.ರಾಮಪ್ಪ ಅವರೇ ನಿಂದಿಸಿದ ಕಾಂಗ್ರೆಸ್ ಮುಖಂಡ. ಇವರು ಕಾಂಗ್ರೆಸ್‍ಗೆ ಯಾಕೆ ವೋಟ್ ಹಾಕಿಲ್ಲ ಎಂದು ವೀರಶೈವ ಲಿಂಗಾಯತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಯಾಕೆ ಕೆಲಸ ಮಾಡಲಿಲ್ಲ ಎಂದು ವೀರಶೈವ ಲಿಂಗಾಯತರನ್ನ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಇದನ್ನು ಅಲ್ಲೇ ಇದ್ದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಅಲ್ಲದೆ ನಂತರ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

    ಇದೀಗ ಈ ವಿಡಿಯೋ ವೈರಲ್ ಆಗುತ್ತಿದ್ದು, ರಾಮಪ್ಪ ವಿರುದ್ಧ ವೀರಶೈವ ಲಿಂಗಾಯತರ ಆಕ್ರೋಶ ಹೊರಹಾಕುತ್ತಿದ್ದಾರೆ.

  • ಸಿಎಂಗೆ ನಮ್ ವೋಟ್ ಎಂದಿದ್ದಕ್ಕೇ ವೀರಶೈವ ಮಹಾಸಭಾದಿಂದಲೇ ವಜಾ!

    ಸಿಎಂಗೆ ನಮ್ ವೋಟ್ ಎಂದಿದ್ದಕ್ಕೇ ವೀರಶೈವ ಮಹಾಸಭಾದಿಂದಲೇ ವಜಾ!

    ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಮ್ಮ ವೋಟ್ ಎಂದಿದ್ದ ಮೈಸೂರು ಜಿಲ್ಲಾ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜ್ ಅವರನ್ನು ಆಡಳಿತ ಮಂಡಳಿಯಿಂದಲೇ ವಜಾಗೊಳಿಸಲಾಗಿದೆ.

    ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜ್, ಸಂಘಟನಾ ಕಾರ್ಯದರ್ಶಿ ಟಿ.ಎಸ್. ಲೋಕೇಶ್, ಪದಾಧಿಕಾರಿಗಳಾದ ಸಿ.ಗುರುಸ್ವಾಮಿ, ಹಡಜನ ಚಂದ್ರಶೇಖರ್ ಅವರನ್ನು ಮಹಾಸಭಾದ ಕೇಂದ್ರ ಸಮಿತಿ ಸದಸ್ಯ ಪುಟ್ಟಬುದ್ದಿ ವಜಾಗೊಳಿಸಿದ್ದಾರೆ. ಮೈಸೂರಿನ ಗನ್‍ಹೌಸ್ ವೃತ್ತದ ಬಸವ ಪುತ್ಥಳಿಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಮಹಾಸಭೆ ತೆಗೆದುಕೊಂಡಿದೆ.

    ಕಾಂಗ್ರೆಸ್ ಬೆಂಬಲಿಸಿ ಎಂದು ಮಾತೇ ಮಹಾದೇವಿ ಹೇಳಿದ ಬಳಿಕ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವೀರಶೈವ-ಲಿಂಗಾಯತರು ಸಿದ್ದರಾಮಯ್ಯರನ್ನು ಬೆಂಬಲಿಸುತ್ತೇವೆ ಎಂದು ವೀರಶೈವ ಮಹಾ ಸಭಾದ ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜ್ ಸಿಎಂ ಸಮ್ಮುಖದಲ್ಲಿ ಪ್ರಮಾಣ ಮಾಡಿದ್ದರು.

    ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವೀರಶೈವ ಸಂಘಟನೆಗಳು, ಬಸವ ಬಳಗಗಳ ಪರವಾಗಿ ಪ್ರಮಾಣ ಮಾಡುತ್ತಿದ್ದೇನೆ ಎಂದು ಹಿನಕಲ್ ಬಸವರಾಜ್ ಹೇಳಿದ್ದರು. ಮುಂದಿನ ಸಿಎಂ ಸಿದ್ದರಾಮಯ್ಯ ಆಗಬೇಕು. ಸಿದ್ದರಾಮಯ್ಯ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿರುತ್ತದೆ. ಸಿದ್ದರಾಮಯ್ಯ ವೀರಶೈವ ಲಿಂಗಾಯತರ ವಿರೋಧಿಯಲ್ಲ ಹಿನಕಲ್ ಬಸವರಾಜ್ ಹೇಳಿದ್ದರು.

  • ಧಮ್ ಇದ್ರೆ ವೀರಶೈವ ಸಮಾವೇಶಕ್ಕೆ ಬಂದೋಗಿ: ಎಂ.ಬಿ ಪಾಟೀಲರಿಗೆ ಸವಾಲೆಸೆದ ಮಹಿಳೆ

    ಧಮ್ ಇದ್ರೆ ವೀರಶೈವ ಸಮಾವೇಶಕ್ಕೆ ಬಂದೋಗಿ: ಎಂ.ಬಿ ಪಾಟೀಲರಿಗೆ ಸವಾಲೆಸೆದ ಮಹಿಳೆ

    ವಿಜಯಪುರ: ಧಮ್ ಇದ್ರೆ ವೀರಶೈವ ಸಮಾವೇಶಕ್ಕೆ ಬಂದು ಹೋಗಿ ಅಂತ ದಿವ್ಯಾ ಹಾದರಗಿ ಎಂಬವರು ಸಚಿವ ಎಂ.ಬಿ ಪಾಟೀಲರಿಗೆ ಸವಾಲೆಸೆದಿದ್ದಾರೆ.

    ವಿಜಯಪುರದಲ್ಲಿ ನಡೆಯುತ್ತಿರುವ ವೀರಶೈವ ಲಿಂಗಾಯತ ಸಮಾವೇಶದಲ್ಲಿ ಮಾತನಾಡಿದ ಅವರು, ನೀವು ಇಲ್ಲಿ ಬಂದಿದ್ದೇ ಆದರೆ ಬರೀ ಒಂದು ರೌಂಡ್ ಹಾಕಿ ತೋರಿಸಿ. ನೀವು ನಮ್ಮ ಧರ್ಮಕ್ಕೆ ನೀವು ಕೈ ಹಾಕಿದ್ದು ಸರಿಯಲ್ಲ. ಅದಕ್ಕೆ ಪುರುಷರು ಯಾರು ಬೇಡ. ನಾವು ಮಹಿಳೆಯರು ಸಾಕು. ಒಂದು ಒನಕೆ ಅಥವಾ ಖಡ್ಗ ಕೊಟ್ರೆ ಸಾಕು ನಿಮ್ಮಂಥ ಎಷ್ಟೇ ಧರ್ಮ ವಿರೋಧಿಗಳು ಬಂದರೂ ಅವರನ್ನು ಪಿಸ್ ಪಿಸ್ ಮಾಡುತ್ತೇವೆ ಎಂದು ಎಂ.ಬಿ ಪಾಟೀಲರಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆಯನ್ನು 2013ರಲ್ಲಿ ತಿರಸ್ಕರಿಸಿತ್ತು ಯುಪಿಎ

    ಈ ಕೃತ್ಯ ಎಸಗಲು ನಾವು ಹೆದರಲ್ಲ. ನಮ್ಮಲ್ಲಿ ಎಷ್ಟು ಜನರನ್ನು ಬೇಕಾದ್ರೂ ಜೈಲಿಗೆ ಹಾಕಿ. ಪರ್ವಾಗಿಲ್ಲ. ಆದ್ರೆ ನಾವು ಅದನ್ನು ಮಾಡೇ ಮಾಡುತ್ತೇವೆ ಅಂತ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಿಂಗಾಯತ, ವೀರಶೈವರಿಗೆ ಅಲ್ಪಸಂಖ್ಯಾತ ಸ್ಥಾನ ಸಿಕ್ಕಿದ್ರೆ ಯಾವ ಸೌಲಭ್ಯ ಸಿಗುತ್ತೆ?

  • ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮ: ಸಿಎಂಗೆ ತಿರುಗೇಟು ನೀಡಲು ಬಿಜೆಪಿ ಮಾಸ್ಟರ್ ಗೇಮ್

    ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮ: ಸಿಎಂಗೆ ತಿರುಗೇಟು ನೀಡಲು ಬಿಜೆಪಿ ಮಾಸ್ಟರ್ ಗೇಮ್

    ಬೆಂಗಳೂರು: ಲಿಂಗಾಯತ ವೀರಶೈವ ಧರ್ಮ ಸ್ಥಾಪನೆ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಿರುವ ಸಿಎಂ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಲು ಬಿಜೆಪಿ ಮುಂದಾಗಿದೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ರಾಜ್ಯದ ಪ್ರಮುಖ ಲಿಂಗಾಯತ ಮಠಕ್ಕೆ ಕರೆದೊಯ್ಯಲು ಬಿಜೆಪಿ ಈಗ ಸಿದ್ಧತೆ ನಡೆಸಿದೆ.

    ನಾಲ್ಕು ಜಿಲ್ಲೆಗಳ ಪ್ರವಾಸಕ್ಕಾಗಿ ಮಾರ್ಚ್ 25ರಂದು ರಾತ್ರಿ ಬೆಂಗಳೂರಿಗೆ ಅಮಿತ್ ಶಾ ಆಗಮಿಸಲಿದ್ದಾರೆ. ಎರಡು ದಿನಗಳ ಮಧ್ಯ ಕರ್ನಾಟಕ ಭೇಟಿ ವೇಳೆ ನಾಲ್ಕು ಮಠಗಳಿಗೆ ಶಾ ಭೇಟಿ ನೀಡಲಿದ್ದಾರೆ.

    ಮಾರ್ಚ್ 26ರಂದು ಬೆಳಗ್ಗೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಸಿದ್ಧಗಂಗಾ ಶಿವಕುಮಾರ ಶ್ರೀಗಳನ್ನು ಶಾ ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ. ಮಾರ್ಚ್ 27ರಂದು ದಾವಣಗೆರೆ ಜಿಲ್ಲೆಯ ಸಿರಿಗೆರೆ ಮಠ, ಮಾದಾರ ಚನ್ನಯ್ಯ ಸ್ವಾಮೀಜಿ ಮಠ ಮತ್ತು ಚಿತ್ರದುರ್ಗದ ಮುರುಘಾ ಮಠಕ್ಕೆ ಶಾ ಭೇಟಿ ಕೊಡಲಿದ್ದಾರೆ.

    ಅಮಿತ್ ಶಾ ಫೆಬ್ರವರಿ ನಾಲ್ಕನೇಯ ವಾರದಲ್ಲಿ ಎರಡು ದಿನ ಕರಾವಳಿ ಜಿಲ್ಲೆಯಲ್ಲಿ ಪಕ್ಷದ ಪ್ರಚಾರ ನಡೆಸಿದ್ದರು. ಫೆ.21ರಂದು ರಾತ್ರಿ ಉಡುಪಿಯಲ್ಲಿ ಪೇಜಾವರ ಮಠಕ್ಕೆ ಆಗಮಿಸಿದ ಅಮಿತ್ ಶಾ, ಮೂರು ಜಿಲ್ಲೆಯ ಸ್ವಾಮೀಜಿಗಳ ಜೊತೆ ಸಮಾಲೋಚನೆ ಮಾಡಿದ್ದರು.

  • ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆಯನ್ನು 2013ರಲ್ಲಿ ತಿರಸ್ಕರಿಸಿತ್ತು ಯುಪಿಎ

    ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವನೆಯನ್ನು 2013ರಲ್ಲಿ ತಿರಸ್ಕರಿಸಿತ್ತು ಯುಪಿಎ

    ನವದೆಹಲಿ: ಜನಗಣತಿ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವಂತೆ ಅಖಿಲ ಭಾರತ ವೀರಶೈವ ಮಹಾಸಭಾ 2010ರಲ್ಲಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು 2013ರಲ್ಲಿ ಯಪಿಎ ಸರ್ಕಾರ ತಿರಸ್ಕರಿಸಿದ ವಿಚಾರ ಈಗ ಬೆಳಕಿಗೆ ಬಂದಿದೆ.

    ಲಿಂಗಾಯತ ಸಮುದಾಯವು 4 ಕೋಟಿಗೂ ಅಧಿಕ ಸಂಖ್ಯೆಯ ಅನುಯಾಯಿಗಳನ್ನು ಒಳಗೊಂಡಿದ್ದು, ಬೌದ್ಧ, ಸಿಖ್ ಹಾಗೂ ಜೈನ ಧರ್ಮದ ಅನುಯಾಯಿಗಳಿಗಿಂತ ಅಧಿಕ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದೆ. ಹೀಗಾಗಿ ಜಾತಿಗಣತಿ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮವನ್ನು ಸೂಚಿಸುವ ಪ್ರತ್ಯೇಕ ಕಾಲಂ, ಸಾಲು ಹಾಗೂ ಕೋಡ್ ಸಂಖ್ಯೆ ನಮೂದಿಸಿ, ಜನಗಣತಿಯ ಅರ್ಜಿ ನಮೂನೆ ಮುದ್ರಿಸುವಂತೆ ವೀರಶೈವ ಮಹಾಸಭಾ ಕೇಳಿಕೊಂಡಿತ್ತು.

    ಈ ಮನವಿಯನ್ನು ತಿರಸ್ಕರಿಸಿದ್ದ ಕಾಂಗ್ರೆಸ್ ನೇತೃತ್ವದ ಯಪಿಎ ಸರ್ಕಾರ ವೀರಶೈವ ಮತ್ತು ಲಿಂಗಾಯತ ಸಮುದಾಯವು ಹಿಂದೂ ಧರ್ಮದ ಒಂದು ಪಂಗಡ ಎಂದು ಹೇಳಿತ್ತು. ಕೇಂದ್ರದ ಗೃಹ ಕಚೇರಿಯ ಕೋರಿಕೆಯ ಮೇರೆಗೆ ಪರಿಶೀಲನೆ ನಡೆಸಿದ್ದ ಭಾರತೀಯ ರಿಜಿಸ್ಟ್ರಾರ್ ಜನರಲ್ ಕಚೇರಿಯು 2013ರ ನವೆಂಬರ್ 14ರಂದು `ವೀರಶೈವ ಮಹಾಸಭಾದ ಪ್ರತ್ಯೇಕ ಧರ್ಮ ಸ್ಥಾನಮಾನದ ಬೇಡಿಕೆಯು ಅತಾರ್ಕಿಕವಾದದ್ದು’ ಎಂದು ಅಭಿಪ್ರಾಯಪಟ್ಟಿತ್ತು.

    ಈ ಸಂಬಂಧ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಸುದ್ದಿಗೋಷ್ಠಿ ನಡೆಸಿ, ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವಂತೆ 2013ರಲ್ಲಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಶಿಫಾರಸನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತಿರಸ್ಕರಿಸಿತ್ತು ಎಂದು ಹೇಳಿದರು.

    ಕಾಂಗ್ರೆಸ್ ಸರ್ಕಾರ ರಾಜಕೀಯ ದುರುದ್ದೇಶಕ್ಕಾಗಿ ಈ ವಿಷಯವನ್ನು ಬಳಸಿಕೊಳ್ಳುವ ಮೂಲಕ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಅವರು ದೂರಿದರು .

     

  • ಸರ್ಕಾರದ ಲಿಂಗಾಯತ ಪ್ರತ್ಯೇಕ ಧರ್ಮ ನಿರ್ಧಾರ ಒಪ್ಪಲ್ಲ: ವೀರಶೈವ ಮಹಾಸಭಾ

    ಸರ್ಕಾರದ ಲಿಂಗಾಯತ ಪ್ರತ್ಯೇಕ ಧರ್ಮ ನಿರ್ಧಾರ ಒಪ್ಪಲ್ಲ: ವೀರಶೈವ ಮಹಾಸಭಾ

    ದಾವಣಗೆರೆ: ಧರ್ಮ ದಂಗಲ್ ರಾಜ್ಯದಲ್ಲಿ ಜೋರಾಗುತ್ತಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿದ ರಾಜ್ಯ ಸರ್ಕಾರದ ವಿರುದ್ಧ ವೀರಶೈವರು ಸಿಡಿದೆದ್ದಿದ್ದಾರೆ. ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ನಿನ್ನೆ ವೀರಶೈವ ಮಹಾಸಭಾ ಅಧ್ಯಕ್ಷ, ಮಾಜಿ ಮಂತ್ರಿ ಶಾಮನೂರು ಶಿವಶಂಕರಪ್ಪ ಒಪ್ಪಿಕೊಂಡಿದ್ದರು. ಆದರೆ ಇವತ್ತು ವಿರೋಧಿಸಿದ್ದಾರೆ.

    ದಾವಣಗೆರೆಯ ತಮ್ಮ ನಿವಾಸದಲ್ಲಿ ರಂಭಾಪುರಿ ಶ್ರೀಗಳು, ಉಜ್ಜಯಿನಿ ಶ್ರೀಗಳ ಜೊತೆ ಪ್ರತ್ಯೇಕ ಧರ್ಮದ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿದ ಬಳಿಕ ಶಾಮನೂರು ಶಿವಶಂಕರಪ್ಪ, ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

    ನಿನ್ನೆ ಕ್ಯಾಬಿನೆಟ್ ಕೈಗೊಂಡ ನಿರ್ಧಾರವನ್ನು ಸ್ಪಷ್ಟವಾಗಿ ಓದಿದ ಮೇಲೆ ನಮಗೆ ಗೊತ್ತಾಯಿತು. ತಜ್ಞರು ಒನ್ ಸೈಡ್ ವರದಿ ನೀಡಿದ್ದಾರೆ. ವೀರಶೈವ ಲಿಂಗಾಯತ ಒಂದೇ ಎನ್ನುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನಿರ್ಧಾರ ಅಚಲ. ಈ ಬಗ್ಗೆ ಇದೇ 23 ರಂದು ಬೆಂಗಳೂರಿನಲ್ಲಿ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ತೆಗೆದುಕೊಳ್ತೇವೆ ಅಂತಾ ಸ್ಪಷ್ಟಪಡಿಸಿದ್ರು.ಕೆಲ ಸ್ವಾಮೀಜಿಗಳು ಬಹಳ ಬುದ್ಧಿವಂತಿಕೆಯಿಂದ ಪ್ರತ್ಯೇಕ ಧರ್ಮ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

    ರಂಭಾಪುರಿ ಶ್ರೀಗಳು ಸಿಎಂ ಸಿದ್ದರಾಮಯ್ಯ ಅವರದ್ದು ಆತುರದ ನಿರ್ಧಾರ, ಏಕಪಕ್ಷೀಯವಾಗಿ ತೀರ್ಮಾನ ಅಂತಾ ಟೀಕಿಸಿದ್ರು. ಇನ್ನು ಈ ಸಂಬಂಧ ಬೆಳಗ್ಗೆ ಮಾತನಾಡಿದ್ದ ಬಿಎಸ್‍ವೈ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೈಗೊಳ್ಳೋ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದರು.

  • ಸರ್ಕಾರದ ನಿರ್ಧಾರಕ್ಕೆ ಸ್ವಾಗತ, ಹಿಂದೂ ಧರ್ಮದ ಆಚರಣೆಗಳು ಜೊತೆಯಲ್ಲಿ ನಡೆದುಕೊಂಡು ಹೋಗುತ್ತದೆ: ಸಿದ್ದಗಂಗಾ ಕಿರಿಯ ಶ್ರೀ

    ಸರ್ಕಾರದ ನಿರ್ಧಾರಕ್ಕೆ ಸ್ವಾಗತ, ಹಿಂದೂ ಧರ್ಮದ ಆಚರಣೆಗಳು ಜೊತೆಯಲ್ಲಿ ನಡೆದುಕೊಂಡು ಹೋಗುತ್ತದೆ: ಸಿದ್ದಗಂಗಾ ಕಿರಿಯ ಶ್ರೀ

    ತುಮಕೂರು: ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ತುಮಕೂರಿನ ಸಿದ್ದಗಂಗಾ ಮಠದ ಕಿರಿಯ ಶ್ರಿಗಳು ಸ್ವಾಗತಿಸಿದ್ದಾರೆ.

    ಈ ಕುರಿತು ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕೇಂದ್ರದಲ್ಲಿ ಯಾವ ನಿರ್ಣಯ ತೆಗೆದುಕೊಳ್ತಾರೆ ಅನ್ನೋದನ್ನು ಕಾದು ನೋಡಬೇಕು. ವೀರಶೈವ ಮತ್ತು ಲಿಂಗಾಯತ ಎರಡನ್ನೂ ಸೇರಿಸಿ ಶಿಫಾರಸ್ಸು ಮಾಡಿರೋದು ಖುಷಿ ತಂದಿದೆ. ಎಲ್ಲರೂ ಜೊತೆಯಲ್ಲಿ ಹೋಗಬೇಕು ಅನ್ನೋದು ನಮ್ಮ ಆಶಯ ಅಂತ ಕಿರಿಯ ಶ್ರೀ ಸಿದ್ದಲಿಂಗಸ್ವಾಮಿಗಳು ತಿಳಿಸಿದ್ದಾರೆ.

    ಲಿಂಗಾಯತ ವೀರಶೈವ ಬಹಳ ವರ್ಷದಿಂದ ಹಿಂದೂ ಧರ್ಮದ ಒಂದು ಭಾಗವಾಗಿ ಬಂದಿದೆ. ಜೈನ ಧರ್ಮ ಹಾಗೂ ಬೌದ್ಧ ಧರ್ಮ ಪ್ರತ್ಯೇಕವಾದ್ರೂ ಹಿಂದೂ ಧರ್ಮದ ಆಚರಣೆ ಒಳಗೊಂಡಿದೆ. ಲಿಂಗಾಯತ ಪ್ರತ್ಯೇಕ ಧರ್ಮದಿಂದ ಹಿಂದೂ ಧರ್ಮಕ್ಕೆ ಧಕ್ಕೆ ಬರುವುದಿಲ್ಲ. ಪ್ರತ್ಯೇಕತೆ ಸಿಕ್ಕಿದ್ರೂ ಹಿಂದೂ ಧರ್ಮದ ಆಚರಣೆಗಳು ಜೊತೆಯಲ್ಲಿ ನಡೆದುಕೊಂಡು ಹೋಗುತ್ತದೆ. ಬಸವಣ್ಣರನವರ ದೃಷ್ಟಿಯಲ್ಲಿ ಎಲ್ಲರೂ ಒಂದೇ ಎಂದು ಅವರು ಅಭಿಪ್ರಾಯಿಸಿದ್ದಾರೆ.

    ಮಕ್ಕಳ ವಿದ್ಯಾಭ್ಯಾಸ, ಉದ್ಯೋಗ ಹಾಗೂ ಮತ್ತಿತರ ಸೌಲಭ್ಯಗಳಿಗೆ ಅನುಕೂಲವಾಗುತ್ತದೆ ಎನ್ನುವ ದೊಡ್ಡ ಕಾರಣವನ್ನು ಕಂಡುಕೊಂಡಿದ್ದಾರೆ. ಸಂಪುಟದಲ್ಲಿ ನಿರ್ಣಯ ಮಾಡುವ ಮುನ್ನ ಇದಕ್ಕೊಂದು ಸಮಿತಿ ರಚನೆ ಮಾಡಿ, ಆ ಸಮಿತಿಯ ವರದಿಯ ಆಧಾರದ ಮೇಲೆ ಮತ್ತೆ ಸಮಿತಿಯವರು ಒಂದಾಗಿ ಮಹತ್ವದ ನಿರ್ಧಾರ ತೆಗೆದುಕೊಂಡು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ ಅಂತ ಹೇಳಿದ್ರು.

    ಎಲ್ಲರೂ ಹೊಂದಿಕೊಂಡು ಹೋಗುವುದೇ ಮುಖ್ಯವಾಗಿರುವುದು. ಬಸವಣ್ಣ ಹೇಳಿರುವುದು ಇಷ್ಟೇ “ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ.. ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ” ಎಂಬ ಭಾವನೆ ಇರುವುದರಿಂದ ಎಲ್ಲರನ್ನೂ ಒಳಗೊಂಡು ಹಾಗೂ ಎಲ್ಲರ ಜೊತೆ ಹೋಗುವುದು ಸಂತೋಷ, ನೆಮ್ಮದಿ. ಎಲ್ಲವನ್ನೂ ಪ್ರತ್ಯೇಕವಾಗಿ ಮಾಡಿಕೊಂಡು ಹೋದ್ರೆ ಯಾವುದಕ್ಕೂ ನೆಮ್ಮದಿ ಇರುವುದಿಲ್ಲ ಅಂದ್ರು.

    ಇದು ಬಹಳ ವರ್ಷದಿಂದಲೂ ಹಿಂದೂ ಧರ್ಮದ ಭಾಗವಾಗಿ ನಡೆದುಕೊಂಡು ಬರುತ್ತಿದೆ. ಇಂದು ಜೈನ ಧರ್ಮದಲ್ಲೂ ಹಿಂದೂ ಧರ್ಮದ ಅನೇಕ ತತ್ವಗಳನ್ನು ಪಾಲಿಸುತ್ತಿದ್ದಾರೆ. ಹೀಗಾಗಿ ಹಿಂದೂ ಧರ್ಮ ವಿಶಾಲವಾಗಿದ್ದು, ಅದಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ ಅಂದ್ರು.

    ವೀರಶೈವರಿಂದ ಸರ್ಕಾರದ ನಿರ್ಧಾರಕ್ಕೆ ವಿರೋಧವಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಈ ಬಗ್ಗೆ ನಾವೇನು ಹೇಳಲು ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ತಮ್ಮ ವೈಯಕ್ತಿಯ ಅಭಿಪ್ರಾಯವನ್ನು ವ್ಯಕ್ತಪಡಿಸಲು ಹಕ್ಕಿದೆ. ಒಟ್ಟಿನಲ್ಲಿ ಹಿಂದೂ ಧರ್ಮದಿಂದ ಪ್ರತ್ಯೇಕವಾಗಿ ಸ್ವತಂತ್ರ ಧರ್ಮ ಅನ್ನೋ ಮಾನ್ಯತೆ ಸಿಕ್ಕಿದಾಗ ಹಿಂದೂ ಧರ್ಮದಲ್ಲೇ ಇರುತ್ತದೆ ಅನ್ನೋದಿಕ್ಕೆ ಸಾಧ್ಯವಿಲ್ಲ ಅಂತ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ರು.

    ಸೋಮವಾರ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆದಿದ್ದು, ಈ ವೇಳೆ ನ್ಯಾ.ನಾಗಮೋಹನ್ ದಾಸ್ ಸಮಿತಿಯ ಸದಸ್ಯರ ಅಭಿಪ್ರಾಯದಂತೆ ಲಿಂಗಾಯತ ಮತ್ತು ವೀರಶೈವರಾಗಿದ್ದು ಬಸವ ತತ್ವವವನ್ನು ಅನುಸರಿಸುತ್ತಿರುವ ಮಂದಿಗೆ ಪ್ರತ್ಯೇಕ ಧರ್ಮದ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಈ ಮೂಲಕ ಶತ ಶತಮಾನಗಳಿಂದ ಹಿಂದೂ ಧರ್ಮದ ಭಾಗವಾಗಿ ಇದ್ದ ವೀರಶೈವ-ಲಿಂಗಾಯತರು ಇನ್ಮೇಲೆ ಹಿಂದೂಗಳಲ್ಲ. ಅವರು ಅಲ್ಪಸಂಖ್ಯಾತರು. ಹೀಗೆಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಣಯ ತೆಗೆದುಕೊಂಡಿತ್ತು.

  • ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ಕೇಂದ್ರಕ್ಕೆ ಶೀಘ್ರವೇ ಸಿದ್ದು ಸರ್ಕಾರದಿಂದ ಶಿಫಾರಸ್ಸು

    ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ಕೇಂದ್ರಕ್ಕೆ ಶೀಘ್ರವೇ ಸಿದ್ದು ಸರ್ಕಾರದಿಂದ ಶಿಫಾರಸ್ಸು

    ಬೆಂಗಳೂರು: ರಾಜ್ಯದ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೊನೆಗೂ ಸಿದ್ದರಾಮುಯ್ಯ ನೇತೃತ್ವದ ರಾಜ್ಯಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

    ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆದಿದ್ದು, ಈ ವೇಳೆ ಸಮಿತಿಯ ಸದಸ್ಯರ ಅಭಿಪ್ರಾಯದಂತೆ ಲಿಂಗಾಯಿತ ಮತ್ತು ವೀರಶೈವರಾಗಿದ್ದು ಬಸವ ತತ್ವವವನ್ನು ಅನುಸರಿಸುತ್ತಿರುವ ಮಂದಿಗೆ ಪ್ರತ್ಯೇಕ ಧರ್ಮದ ಕುರಿತು ಕೇಂದ್ರ ಸರ್ಕಾರಕ್ಕೆ ಶೀಘ್ರವೇ ಶಿಫಾರಸ್ಸು ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

    ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್, ಇಂದು ಐತಿಹಾಸಿಕ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಮಿತಿ ನೀಡಿದ್ದ ವರದಿ ಬಗ್ಗೆ ಚರ್ಚೆ ಆಗಿದೆ. ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ನ್ಯಾ. ನಾಗಮೋಹನ ದಾಸ್ ಸಮಿತಿ ವರದಿಯನ್ವಯ ಪ್ರತ್ಯೇಕ ವೀರಶೈವ ಲಿಂಗಾಯಿತ ಸ್ವತಂತ್ರ ಧರ್ಮದ ಮಾನ್ಯತೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಅಂದ್ರು.

    ಇದೀಗ ಸರ್ಕಾರ ಎಲೆಕ್ಷನ್ ಹೊತ್ತಲ್ಲಿ ಲಿಂಗಾಯತರು- ವೀರಶೈವರನ್ನು ಓಲೈಸಲು ಯತ್ನ ಮಾಡುತ್ತಿದ್ದೆಯಾ ಎಂಬ ಪ್ರಶ್ನೆ ಎದ್ದಿದೆ. ಶತಶತಮಾನಗಳಿಂದ ಹಿಂದೂ ಧರ್ಮದ ಭಾಗವಾಗಿದ್ದ ವೀರಶೈವ-ಲಿಂಗಾಯತರನ್ನು ಇದೀಗ ಸರ್ಕಾರ `ಅಲ್ಪಸಂಖ್ಯಾತರು’ ಎಂದು ಪರಿಗಣಿಸಲು ಮುಂದಾಗಿರುವುದು ಬಹುಸಂಖ್ಯಾತ ಹಿಂದೂ ಧರ್ಮೀಯರ ಆಕ್ರೋಶಕ್ಕೆ ತುತ್ತಾಗುತ್ತಾ ಎನ್ನುವ ಪ್ರಶ್ನೆ ಎದ್ದಿದೆ.