Tag: ವೀರಶೈವ

  • ತುಮಕೂರಲ್ಲಿ ರಾಜಕೀಯ ಶತ್ರುಗಳ ಸಮಾಗಮ – ವೀರಶೈವದಿಂದ ಒಂದಾದ ಸೊಗಡು-ಬಸವರಾಜು

    ತುಮಕೂರಲ್ಲಿ ರಾಜಕೀಯ ಶತ್ರುಗಳ ಸಮಾಗಮ – ವೀರಶೈವದಿಂದ ಒಂದಾದ ಸೊಗಡು-ಬಸವರಾಜು

    ತುಮಕೂರು: ಜಿಲ್ಲೆಯ ಬಿಜೆಪಿಯಲ್ಲಿ ಬದಲಾವಣೆಯ ಗಾಳಿ ಬೀಸುವ ಮುನ್ಸೂಚನೆ ಸಿಕ್ಕಿದೆ. ಬಿಜೆಪಿಯ ರಾಜಕೀಯ ಬದ್ಧ ವೈರಿಗಳು ಎಂದೇ ಬಿಂಬಿತ್ತರಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ಮಾಜಿ ಸಂಸದ ಜಿ.ಎಸ್.ಬಸವರಾಜು ಒಂದಾಗಿದ್ದಾರಾ ಅನ್ನುವ ತೀವ್ರ ಚರ್ಚ ಶುರುವಾಗಿದೆ.

    ವೀರಶೈವ ಸಮಾಜದ ಮುಖಂಡರು ಇಬ್ಬರ ಸಮಾಗಮವನ್ನ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ವೀರಶೈವ ಸಮಾಜದ ಅಧ್ಯಕ್ಷ ಶೇಖರ್ ,ಚಂದ್ರಮೌಳಿ ನೇತೃತ್ವದಲ್ಲಿ ಶುಕ್ರವಾರ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ.

    ವೀರಶೈವ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಧಾನ ಮಾಡಿಸಿ, ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಮೂಲಕ ರಾಜಿ ಮಾಡಿಸಿದ್ದಾರೆ ಎನ್ನಲಾಗಿದೆ. ಆದರೆ ಈ ರೀತಿ ಸಂಧಾನ ಈ ಹಿಂದೆಯೂ ಅನೇಕ ಬಾರಿ ನಡೆದಿದ್ದು, ಈ ದೋಸ್ತಿಯನ್ನ ಉಭಯ ನಾಯಕರು ಮುಂದುವರೆಸಿಕೊಳ್ಳತ್ತಾರಾ ಅನ್ನೋದು ಸದ್ಯದ ಪ್ರಶ್ನೆಯಾಗಿದೆ.

  • ಬಿಜೆಪಿಯವರು ಹರಾಮ್‍ಕೋರರು ಎಂದು ಹೇಳಿ ನಂತ್ರ ಉಲ್ಟಾ ಹೊಡೆದ ಉಮೇಶ್ ಕತ್ತಿ

    ಬಿಜೆಪಿಯವರು ಹರಾಮ್‍ಕೋರರು ಎಂದು ಹೇಳಿ ನಂತ್ರ ಉಲ್ಟಾ ಹೊಡೆದ ಉಮೇಶ್ ಕತ್ತಿ

    ಬೆಂಗಳೂರು: ಬಿಜೆಪಿಯವರನ್ನು ಹರಾಮ್‍ಕೋರರು ಎಂದಿದ್ದ ಮಾಜಿ ಸಚಿವ, ಬೆಳಗಾವಿಯ ಹುಕ್ಕೇರಿಯ ಶಾಸಕ ಉಮೇಶ್ ಕತ್ತಿ ಉಲ್ಟಾ ಹೊಡೆದಿದ್ದು, ನಾನು ನನ್ನ ಆಪ್ತನಿಗೆ ಅಂದಿದ್ದು ಬಿಜೆಪಿ ಅವರಿಗೆ ಅಂದಿಲ್ಲ ಎಂದು ಹೇಳಿದ್ದಾರೆ.

    ಸಿಎಂ ಸಿದ್ದರಾಮಯ್ಯ ಅವರ ಭೇಟಿ ಬಳಿಕ ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಮಾತನಾಡುತ್ತಾ ಬಿಜೆಪಿಯವರು ಹರಾಮ್‍ಕೋರರು ಎಂದು ಹೇಳಿದ್ದರು.

    ವಿವಾದ ಜೋರಾಗುತ್ತಿದ್ದಂತೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಉಮೇಶ್ ಕತ್ತಿ, ನಾನು ಬಿಜೆಪಿ ಅವರಿಗೆ ಹೇಳಿಲ್ಲ. ಜಗದೀಶ್ ಶೆಟ್ಟರ್ ಅವರು ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಹೋಗಬೇಡಿ ಎಂದು ಹೇಳಿದ್ದರು. ಲಿಂಗಾಯತ ವೀರಶೈವರನ್ನು ಒಡೆಯಲು ಎಂಬಿ ಪಾಟೀಲ್, ವಿನಯ್ ಕುಲಕರ್ಣಿ, ಬಸವರಾಜ ರಾಯರೆಡ್ಡಿ ಮುಂದಾಗಿದ್ದಾರೆ. ಆದರೆ ಇಗ ಬಸವರಾಜರಾಯರೆಡ್ಡಿ ಈ ವಿಚಾರದಿಂದ ಹಿಂದೆ ಸರಿದಿದ್ದಾರೆ. ನಾನು ವೀರಶೈವ ಲಿಂಗಾಯತನಾಗಿದ್ದು ನನ್ನ ಧರ್ಮ ಹಿಂದೂ. ಎಂ.ಬಿ.ಪಾಟೀಲ್ ನಡೆಸಿದ ಸಮಾವೇಶಕ್ಕೆ ಹೋದರೆ ಲಿಂಗಾಯತನಾಗಲ್ಲ. ನಾನು ಹುಟ್ಟಿದಾಗಿನಿಂದಲೇ ಲಿಂಗಾಯತ. ಲಿಂಗಾಯತನಾಗಿಯೇ ಸಾಯುತ್ತೇನೆ ಎಂದು ಹೇಳಿದರು.

    ಇದೆ ವೇಳೆ ಬಿಜೆಪಿಯಿಂದ ನಿಮಗೆ ಟಿಕೆಟ್ ಸಿಗುತ್ತಾ ಎಂದು ಕೇಳಿದ್ದಕ್ಕೆ, ಇನ್ನೂ ನಿರ್ಧಾರವಾಗಿಲ್ಲ. ಖಂಡಿತವಾಗಿಯೂ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುತ್ತದೆ ಎನ್ನುವ ವಿಶ್ವಾಸವಿದೆ ಎಂದರು. ಒಂದು ವೇಳೆ ಟಿಕೆಟ್ ಸಿಗದೇ ಇದ್ದಲ್ಲಿ ಎನ್ನುವ ಮರು ಪ್ರಶ್ನೆಗೆ, ನಾನು ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.

    https://youtu.be/vdLowLrsQL0

     

     

  • ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಕಲಬುರಗಿಯಲ್ಲಿ ಇಂದು ಬೃಹತ್ ರ‍್ಯಾಲಿ

    ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಕಲಬುರಗಿಯಲ್ಲಿ ಇಂದು ಬೃಹತ್ ರ‍್ಯಾಲಿ

    ಕಲಬುರಗಿ: ಪರ ವಿರೋಧದ ಮಧ್ಯೆ ಕಲಬುರಗಿಯಲ್ಲಿಂದು ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಬೃಹತ್ ರ‍್ಯಾಲಿ ನಡೆಸಲಾಗುತ್ತಿದೆ. ಈ ಮೂಲಕ ಬಸವ ತತ್ವದವರು ವೈಧಿಕ ಮಠಾಧೀಶರ ವಿರುದ್ಧ ಮತ್ತೆ ತಿರುಗಿ ಬಿದಿದ್ದಾರೆ. ಇನ್ನು ಈ ರ‍್ಯಾಲಿಯನ್ನು ಯಶಸ್ವಿ ಮಾಡಲು ಸಚಿವ ಎಂ.ಬಿ.ಪಾಟೀಲ್ ಸಂಪೂರ್ಣ ನೇತೃತ್ವವನ್ನು ವಹಿಸಿಕೊಂಡಿದ್ದಾರೆ.

    ಗಡಿ ಜಿಲ್ಲೆ ಬೀದರ್‍ನಿಂದ ಆರಂಭವಾದ ಪ್ರತ್ಯೇಕ ಲಿಂಗಾಯತ ಧರ್ಮ ಚಳುವಳಿ ಇದೀಗ ಕಲಬುರಗಿಗೆ ಕಾಲಿಟ್ಟಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಇಂದು ನಗರದ ಎನ್‍ವಿ ಮೈದಾನದಲ್ಲಿ ಬೃಹತ್ ರ‍್ಯಾಲಿ ಆಯೋಜಿಸಲು ಸಕಲ ಸಿದ್ಧತೆ ನಡೆದಿದೆ. ರ‍್ಯಾಲಿ ಹಿನ್ನೆಲೆ ನಗರದ ಬಹುತೇಕ ರಸ್ತೆಗಳಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಬ್ಯಾನರ್ ಮತ್ತು ಕಟೌಟ್‍ಗಳು ರಾರಾಜಿಸುತ್ತಿವೆ.

    ಲಿಂಗಾಯತ ಧರ್ಮಕ್ಕೆ ಕಟಿಬದ್ಧರಾಗಿರೋ ಸಚಿವ ಎಂ.ಬಿ.ಪಾಟೀಲ್ ರ‍್ಯಾಲಿಯ ಸಂಪೂರ್ಣ ಉಸ್ತುವಾರಿ ವಹಿಸಿದ್ದು, ಸಮಾವೇಶದ ಯಶ್ವಸಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ರ‍್ಯಾಲಿ ನಡೆಯುವ ಎನ್‍ವಿ ಮೈದಾನಕ್ಕೆ ತೆರಳಿದ ಸಚಿವ ಎಂಬಿ ಪಾಟೀಲ್ ಎಲ್ಲಾ ಸಿದ್ಧತೆಗಳನ್ನು ತಾವೆ ಖುದ್ದಾಗಿ ನಿಂತು ಪರಿಶೀಲನೆ ನಡೆಸಿದ್ದಾರೆ.

    ಈ ಬೃಹತ್ ಸಮಾವೇಶದಲ್ಲಿ ಲಿಂಗಾತ ಧರ್ಮ ಬೇಕೆಂದು ಪ್ರತಿಪಾದಿಸುವ ಸ್ವಾಮೀಜಿಗಳು, ಮಠಾಧೀಶರು, ರಾಜಕಾರಣಿಗಳು ಪಾಲ್ಗೊಳ್ಳಲಿದ್ದಾರೆ. ಲಿಂಗಾಯತ ಸಮುದಾಯದ ಬರೋಬ್ಬರಿ 2 ಲಕ್ಷ ಮಂದಿ ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದ್ದು ಪ್ರತ್ಯೇಕ ಧರ್ಮದ ಕಹಳೆ ಮೊಳಗಿಸಲಿದ್ದಾರೆ.

    ಈ ಮಧ್ಯೆ ಲಿಂಗಾಯತ ರ‍್ಯಾಲಿಯಲ್ಲಿ ಯಾರು ಪಾಲ್ಗೊಳ್ಳಬಾರದು ಎಂದು ವೀರಶೈವ ಲಿಂಗಾಯತರು ಜಾಗೃತಿ ಮೂಡಿಸೋ ಕಾರ್ಯದಲ್ಲಿ ನಿರತರಾಗಿದ್ದಾರೆ. ಪ್ರತ್ಯೇಕ ಧರ್ಮ ರ‍್ಯಾಲಿ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಕೈಗೊಳ್ಳಲಾಗಿದೆ.

  • ಸಿದ್ದಗಂಗಾ ಶ್ರೀಗಳ ಜ್ಞಾಪಕ ಶಕ್ತಿ ಕೆಲವರಿಂದ ದುರುಪಯೋಗ: ಮಾತೆ ಮಹಾದೇವಿ

    ಸಿದ್ದಗಂಗಾ ಶ್ರೀಗಳ ಜ್ಞಾಪಕ ಶಕ್ತಿ ಕೆಲವರಿಂದ ದುರುಪಯೋಗ: ಮಾತೆ ಮಹಾದೇವಿ

    ಬಾಗಲಕೋಟೆ: ಸಿದ್ದಗಂಗಾ ಶ್ರೀಗಳಿಗೆ ವಯೋಮಾನದ ದೃಷ್ಟಿಯಿಂದ ನೆನಪಿನ ಶಕ್ತಿ ಉಳಿದಿಲ್ಲ ಎಂದು ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿಕೆ ನೀಡಿದ್ದಾರೆ.

    ಸ್ವಾಮೀಜಿಗಳ ಜ್ಞಾಪಕ ಶಕ್ತಿಯನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಸಿದ್ದಗಂಗಾ ಶ್ರೀಗಳ ಪಕ್ಕ ಇರುವ ವೀರಶೈವ ಮಹಾಸಭಾದವರು ಒತ್ತಡ ತಂದಿದ್ದಾರೆ. ಪೂಜ್ಯ ಶ್ರೀಗಳ ಸಹಿಮಾತ್ರ ಪಡೆದು ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಹಾಗೊಂದು ವೇಳೆ ಶ್ರೀಗಳೇ ಈ ರೀತಿ ಹೇಳಿಕೆ ನೀಡಿದ್ದರೆ ಅದನ್ನು ನಾವು ಒಪ್ಪುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ಕೊಡಿಸುತ್ತೇವೆ. ಹೀಗಾಗಿ ವೀರಶೈವ ಮಹಾಸಭಾದಂತೆ ನಡೆಯಿರಿ ಎಂದು ಯಡಿಯೂರಪ್ಪ ಮತ್ತು ಸೋಮಣ್ಣ ಮಠದ ಕಡೆಯವರಿಗೆ ಒತ್ತಡ ಹಾಕಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ ಎಂದು ಆರೋಪಿಸಿದರು.

    ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಅವರ ಏಳಿಗೆಯನ್ನ ಸಹಿಸದ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಲಿಂಗಾಯತ ಸ್ವತಂತ್ರ ಧರ್ಮ ವಿಚಾರವಾಗಿ ಕಲಬುರಗಿ ಹಾಗೂ ಹೈದರಾಬಾದ್ ನಲ್ಲಿಯೂ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಿದ್ದೇವೆ ಎಂದು ಮಾತೆ ಮಹಾದೇವಿ ಹೇಳಿದರು.

  • ಏನ್ ಕೇಳಿಸ್ಕೊಂಡ್ಯೋ ಪಾಟೀಲ್, ಇದ್ರಿಂದ ನಿಂಗೂ, ನಮಗೂ ಡ್ಯಾಮೇಜ್: ಸಿಎಂ ಕ್ಲಾಸ್

    ಏನ್ ಕೇಳಿಸ್ಕೊಂಡ್ಯೋ ಪಾಟೀಲ್, ಇದ್ರಿಂದ ನಿಂಗೂ, ನಮಗೂ ಡ್ಯಾಮೇಜ್: ಸಿಎಂ ಕ್ಲಾಸ್

    ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ತುಮಕೂರಿನ ಸಿದ್ಧಗಂಗಾ ಶ್ರೀಗಳು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತಂದಿಟ್ಟ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

    ಸಂಪುಟ ಸಭೆಯಲ್ಲಿ ಇಂದು ಸಿದ್ದರಾಮಯ್ಯ, ಶ್ರೀಗಳ ಜತೆ ಮಾತನಾಡಿದ್ದನ್ನ ಅವಸರದಲ್ಲಿ ಮಾಧ್ಯಮಗಳ ಮುಂದೆ ಹೋಗಿದ್ದು ಯಾಕೆ ಎಂದು ಪಾಟೀಲ್ ಅವರನ್ನು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ, ಅವರು ಏನು ಹೇಳಿದ್ದನ್ನ ನೀನು ಏನ್ ಕೇಳಿಸ್ಕೊಂಡಿದ್ದಿ. ಶ್ರೀಗಳು ಸಮುದಾಯದ ಸುಪ್ರೀಂ ಕೋರ್ಟ್ ಇದ್ದಂತೆ. ಅವರ ವಿರುದ್ಧವೇ ಏನೇನೋ ಮಾತನಾಡಿದ್ದಿ. ಇದರಿಂದ ನಿನಗೂ, ಪಕ್ಷಕ್ಕೂ, ಸರ್ಕಾರಕ್ಕೂ ಡ್ಯಾಮೇಜ್ ಆಗಿದೆ ಎಂದು ಹೇಳಿ ತರಾಟಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿವೆ.

    ಇದನ್ನೂ ಓದಿ: ನಡೆದಾಡುವ ದೇವರಲ್ಲಿ ಸಾರ್ವಜನಿಕವಾಗಿ ಎಂಬಿ ಪಾಟೀಲ್ ಕ್ಷಮೆ ಕೇಳಬೇಕು: ಎಚ್‍ಡಿಕೆ

    ಪೌರಾಡಳಿತ ಖಾತೆಯ ಸಚಿವ ಈಶ್ವರ್ ಖಂಡ್ರೆ ಅವರಿಗೂ ಕ್ಲಾಸ್ ತೆಗೆದುಕೊಂಡ ಸಿಎಂ, ನಿಮ್ದು ಏನ್ರೀ? ನೀವು ಮಾಧ್ಯಮಗಳ ಮುಂದೆ ಏನೇನೋ ಮಾತಾಡ್ತಿದ್ದೀರಿ. ಇದರಿಂದ ನಮ್ಗೆ ಅನುಕೂಲ ಏನಿಲ್ಲ, ಬಿಜೆಪಿ ಅವರಿಗೆ ಅನುಕೂಲ ಆಗುತ್ತೆ ಅಷ್ಟೇ. ಅದೇನ್ ಮಾಡ್ತಿರೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

    ಕೊನೆಗೆ ಸಿದ್ಧಗಂಗಾ ಶ್ರೀಗಳ ವಿಚಾರವಾಗಿ ಆಗಿರೋ ಡ್ಯಾಮೇಜ್ ಅನ್ನು ನೀವೇ ಸರಿ ಮಾಡಬೇಕು. ಇನ್ನೆರಡು ದಿನದೊಳಗೆ ಬಗೆಹರಿಸಿಕೊಳ್ಳಿ ಎಂದು ಇಬ್ಬರು ಸಚಿವರಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

    ಪ್ರತಿಕ್ರಿಯೆ ನೀಡಲ್ಲ: ಶಿವಕುಮಾರ ಸ್ವಾಮೀಜಿಗಳ ಸ್ಪಷ್ಟನೆ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಎಂಬಿ ಪಾಟೀಲ್, ಇನ್ನು ಎರಡು ದಿನಗಳ ಕಾಲ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನಾನು ನಿರ್ಧಾರ ತೆಗೆದುಕೊಂಡಿದ್ದೇನೆ. ಎರಡು ದಿನಗಳ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತೇನೆ ಎಂದು ಹೇಳಿದರು.

  • ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಹಿನ್ನಡೆ, ಎಂಬಿ ಪಾಟೀಲ್‍ಗೆ ಭಾರೀ ಮುಖಭಂಗ

    ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಹಿನ್ನಡೆ, ಎಂಬಿ ಪಾಟೀಲ್‍ಗೆ ಭಾರೀ ಮುಖಭಂಗ

    ತುಮಕೂರು: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದ್ದು, ತಮ್ಮ ಹೇಳಿಕೆಯನ್ನ ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ತಿರುಚಿದ್ದಾರೆ ಅಂತ ಸಿದ್ದಗಂಗಾ ಮಠ ಅಧಿಕೃತ ಪ್ರಕಟಣೆ ಹೊರಡಿಸಿದೆ.

    ಲಿಂಗಾಯತ-ವೀರಶೈವ ಎರಡು ಒಂದೇ, ಧರ್ಮವನ್ನ ಒಡೆಯಬೇಡಿ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಚಿವ ಎಂ.ಬಿ ಪಾಟೀಲ್‍ಗೆ ಭಾರೀ ಮುಖಭಂಗವಾಗಿದೆ.

    ಕಳೆದ ಭಾನುವಾರ ಮಾತನಾಡಿದ್ದ ಸಚಿವ ಎಂ.ಬಿ ಪಾಟೀಲ್, ದೊಡ್ಡ ಶ್ರೀಗಳು ಪ್ರತ್ಯೇಕ ಲಿಂಗಾಯತ ಬೇಕೆಂದಿದ್ದಾರೆ ಎಂದು ತಿಳಿಸಿದ್ದರು. ಇವರ ಈ ಹೇಳಿಕೆ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಇವತ್ತು ಮತ್ತೆ ಪ್ರತಿಕ್ರಿಯಿಸಿದ್ದ ಸಚಿವ ಎಂ.ಬಿ ಪಾಟೀಲ್, ನಾನು ಸುಳ್ಳು ಹೇಳಿದ್ದೇ ಆದ್ರೆ ಆ ಪಾಪ ನನಗೆ ನನ್ನ ಕುಟುಂಬಕ್ಕೆ ತಟ್ಟಲಿ ಅಂತ ಸವಾಲು ಹಾಕಿದ್ದಾರೆ.

    ಪತ್ರಿಕಾ ಪ್ರಕಟಣೆಯಲ್ಲಿ ಏನಿದೆ?
    ಜಲಸಂಪನ್ಮೂಲ ಸಚಿವರಾದ ಎಂ.ಬಿ.ಪಾಟೀಲ್‍ರವರು ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದಾಗ ಅವರು ನಮ್ಮೊಡನೆ ವೀರಶೈವ/ಲಿಂಗಾಯತ ಸ್ವತಂತ್ರ ಧರ್ಮದ ವಿಷಯದ ಬಗ್ಗೆ ಚರ್ಚಿಸಿದಾಗ ವೀರಶೈವ ಎಂಬ ಪದ ವಿದ್ಯಾವಂತರು ಮತ್ತು ನಗರ ಪ್ರದೇಶದಲ್ಲಿ ಬಳಕೆಯಲ್ಲಿದೆ. ಲಿಂಗಾಯತ ಎಂಬ ಪದ ಗ್ರಾಮೀಣ ಪ್ರದೇಶದಲ್ಲಿ ಬಳಕೆಯಲ್ಲಿದ್ದು, ಈ ಎರಡೂ ಪದಗಳು ಒಂದೇ ಆಗಿದ್ದು, ಎಲ್ಲಾ ಧಾರ್ಮಿಕ ಮುಖಂಡರು ಹಾಗೂ ಸಮಾಜ ಬಾಂದವರು ಒಂದೆಡೆ ಕುಳಿತು ಸರ್ವ ಸಮ್ಮತವಾದ ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂದು ನಮ್ಮ ಅಭಿಪ್ರಾಯ ತಿಳಿಸಿರುತ್ತೇವೆ.

    ಆದ್ರೆ ಮಾನ್ಯ ಶ್ರೀ.ಎಂ.ಬಿ.ಪಾಟೀಲ್‍ರವರು ಲಿಂಗಾಯತ ಪದದ ಪರವಾಗಿ ಬೆಂಬಲ ಸೂಚಿಸಿದ್ದಾರೆ ಎಂಬಂತೆ ಮಾಧ್ಯಮಗಳಲ್ಲಿ ಪ್ರಕಟಿಸಿರುವುದು ತಿಳಿದು ಬಂದಿದೆ. ಸಮಾಜವನ್ನ ಈ ರೀತಿ ಇಬ್ಭಾಗ ಮಾಡುವ ರೀತಿಯಲ್ಲಿ ಯಾರೇ ಪ್ರಯತ್ನಿಸಿದ್ರೂ ಸಮಾಜದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಸಮಾಜದ ಮುಖಂಡರೆಲ್ಲಾ ಕುಳಿತು ಚರ್ಚಿಸಿ ಒಮ್ಮತ ರೂಪಿಸುವುದು ಅತ್ಯಂತ ಅಗತ್ಯವಾಗಿದೆ.

    ಇದನ್ನೂ ಓದಿ: ಸಚಿವ ಎಂ.ಬಿ.ಪಾಟೀಲ್ ರಿಂದ ಹೊಸ `ಸಿಡಿ’ ಬಾಂಬ್!

     

     

     

     

  • ಚಾಮರಾಜನಗರಕ್ಕೆ ಪದೇ ಪದೇ ನಾನು ಬರೋದು ಯಾಕೆ: ಸಿಎಂ ಉತ್ತರಿಸಿದ್ದು ಹೀಗೆ

    ಚಾಮರಾಜನಗರಕ್ಕೆ ಪದೇ ಪದೇ ನಾನು ಬರೋದು ಯಾಕೆ: ಸಿಎಂ ಉತ್ತರಿಸಿದ್ದು ಹೀಗೆ

    ಚಾಮರಾಜನಗರ: ಅಂಟಿರುವ ಮೌಢ್ಯವನ್ನು ಹೋಗಲಾಡಿಸಲು ನಾನು ಪದೇ ಪದೇ ಚಾಮರಾಜನಗರಕ್ಕೆ ಬರುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ನಗರದ ಬಿ.ರಾಚಯ್ಯ ಜೋಡಿರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ತಾಲೂಕಿನ ಆಲೂರು ಗ್ರಾಮದಲ್ಲಿ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಸ್ಮಾರಕ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿ ಮಾಧ್ಯಮದ ಜೊತೆ ಮಾತನಾಡಿದ ಸಿಎಂ, ನಾನು ಇಲ್ಲಿ 7 ಬಾರಿ ಬಂದಿರುವುದು ಇಲ್ಲಿನ ಮೌಢ್ಯವನ್ನು ತಡೆಯಲು ಎಂದು ಹೇಳಿದರು.

    ನಾನು ಇಲ್ಲಿಗೆ ಬರುತ್ತಿರುವುದರಿಂದ ಈ ಜಿಲ್ಲೆಯ ನಗರದ ಮೌಢ್ಯ ಅಳಿಸಿ ಹೋಗಿದೆ. ಅಷ್ಟೇ ಅಲ್ಲದೇ ನನ್ನ ಕುರ್ಚಿಯೂ ಸಹ ಗಟ್ಟಿಯಾಗಿದೆ ಎಂದು ಚಾಮರಾಜನಗರಕ್ಕಿರುವ ಅಪನಂಬಿಕೆ ವಿರುದ್ಧ ಸಿಎಂ ಧ್ವನಿ ಎತ್ತಿದರು.

    ವೀರಶೈವ ಲಿಂಗಾಯಿತ ಧರ್ಮದ ವಿಚಾರದಲ್ಲಿ ಸರ್ಕಾರದ ನಿಲುವು ಯಾವುದು ಇಲ್ಲ ಎಂದು ಸ್ಪಷ್ಟಪಡಿಸಿದ ಅವರು ವೀರಶೈವ ಲಿಂಗಾಯಿತ ಧರ್ಮದ ವಿಚಾರದಲ್ಲಿ ಸರ್ಕಾರದ ಯಾವುದೇ ನಿಲುವು ಇಲ್ಲ. ಆದರೆ ಇದನ್ನು ನಾನೂ ಹುಟ್ಟಿ ಹಾಕಿದ್ದು ಎಂದು ಬಿಂಬಿಸಲಾಗುತ್ತಿದೆ. ಆದರೆ ಈ ವಿಚಾರವನ್ನ ನಾನೂ ಹುಟ್ಟಾಕಿದ್ದಲ್ಲ. ಇದರಲ್ಲಿ ನನ್ನ ಪಾತ್ರ ಮತ್ತು ನಿಲುವು ಏನು ಇಲ್ಲ. ಮಾತೇ ಮಹದೇವಿ ಮತ್ತು ಶಾಮನೂರು ಶಿವಶಂಕರಪ್ಪ ಪತ್ರ ಬರೆದಿದ್ದರು ಅಷ್ಟೆ ಎಂದರು.

    ತಮಿಳುನಾಡಿಗೆ ಕಬಿನಿ ನೀರು ಬಿಟ್ಟಿರುವ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ನಾಲ್ಕು ಜಲಾಶಯಗಳಲ್ಲಿ 40 ಟಿ ಎಂಸಿ ಯಷ್ಟು ನೀರಿದೆ. ನೀರು ಬಿಡದೇ ಇದ್ದರೆ ನ್ಯಾಯಾಂಗ ನಿಂದನೆಯಾಗುತ್ತದೆ. ಹಾಗಾಗಿ ಕಾವೇರಿ ನ್ಯಾಯಾಧಿಕರಣದ ಆದೇಶದ ಪ್ರಕಾರ ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ. ಅದೇ ರೀತಿ ನಮ್ಮ ರೈತರಿಗೂ ಇಂದಿನಿಂದ ನೀರು ಬಿಡಲಾಗುತ್ತಿದೆ ಎಂದು ತಿಳಿಸಿದರು.

  • ಲಿಂಗಾಯತವೇ ಪ್ರತ್ಯೇಕ ಧರ್ಮಕ್ಕೆ ಯೋಗ್ಯ.. ವೀರಶೈವ ಅಲ್ಲ: ಸಭೆಯ ಪಂಚ ನಿರ್ಣಯಗಳು ಇಲ್ಲಿದೆ

    ಲಿಂಗಾಯತವೇ ಪ್ರತ್ಯೇಕ ಧರ್ಮಕ್ಕೆ ಯೋಗ್ಯ.. ವೀರಶೈವ ಅಲ್ಲ: ಸಭೆಯ ಪಂಚ ನಿರ್ಣಯಗಳು ಇಲ್ಲಿದೆ

    ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೇ ಮಾನ್ಯತೆ ನೀಡಬೇಕು ಎಂದು ಗುರುವಾರ ನಡೆದ ಲಿಂಗಾಯತ ಮುಖಂಡರು ಮತ್ತು ಮಠಾಧೀಶರ ಮಹತ್ವದ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

    ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೀರಶೈವ ಮಹಾಸಭಾ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿರುವ ಲಿಂಗಾಯತ ಮಠಾಧೀಶರು ವೀರಶೈವ ಪದ ಬಳಕೆ ಸಲ್ಲದು ಅಂತಾ ವೀರಶೈವ ಮಹಾಸಭಾಗೆ ಎಚ್ಚರಿಕೆ ನೀಡಿದ್ದಾರೆ.

    ವೀರಶೈವ ಎಂಬುದು ಹಿಂದು ಧರ್ಮದಲ್ಲಿ ಶೈವ ಪಂಥದಲ್ಲೇ ಬರುತ್ತದೆ. ಲಿಂಗಾಯತ ಬೇರೆ ವೀರಶೈವ ಬೇರೆ. ಇವೆರಡು ಕೂಡಲು ಸಾಧ್ಯವಿಲ್ಲ. ಇದು ಎಣ್ಣೆ ನೀರು ಇದ್ದ ಹಾಗೇ ಅಂತಾ ತೋಂಟದಾರ್ಯ ಶ್ರೀಗಳು ಸಭೆಯಲ್ಲಿ ಪ್ರಸ್ತಾಪಿಸಿದರು.

    ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಿ ಎಂದು ಪ್ರಸ್ತಾವನೆ ಸಲ್ಲಿಸಿದರೆ ಮಾತ್ರ ಕಾನೂನಿನ ಮಾನ್ಯತೆ ಸಿಗಲಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಶಿವಾನಂದ ಜಾಮ್ದಾರ ವಾದ ಮಂಡಿಸಿದರು.

    ವೀರಶೈವರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಲಿಂಗಾಯತ ಅಂತಾನೇ ಪ್ರತ್ಯೇಕ ಧರ್ಮ ಮಾನ್ಯತೆ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಭೆ ನಿರ್ಣಯಿಸಿತು.

    ಸಭೆಯಲ್ಲಿ ಸಚಿವ ಎಂ.ಬಿ ಪಾಟೀಲ್, ಶರಣು ಪ್ರಕಾಶ್ ಪಾಟೀಲ್, ವಿನಯ ಕುಲಕರ್ಣಿ, ಬಸವರಾಜ್ ರಾಯರೆಡ್ಡಿ, ಮಾಜಿ ಸಚಿವ ಬಸವರಾಜ್ ಹೊರಟ್ಟಿ, ಸಂಸದ ಪ್ರಕಾಶ್ ಹುಕ್ಕೇರಿ, ಶಾಸಕ ಅಸೋಕ್ ಪಟ್ಟಣ್ ಸೇರಿದಂತೆ ಮುರುಘಾ ಮಠದ ಶ್ರೀಗಳು, ತೋಂಟದಾರ್ಯ ಶ್ರೀಗಳು ಹಾಗೂ ಇಳಕಲ್ ಮಾಹಂತೇಶ ಸ್ವಾಮೀಜಿ ಹಾಗೂ ಹಲವು ಮಠಾಧೀಶರು ಭಾಗವಹಿಸಿದರು.

    ಸಭೆ ಬಳಿಕ ಮಠಾಧೀಶರು ಹಾಗೂ ಮುಖಂಡರ ನಿಯೋಗ ಸಿಎಂ ನಿವಾಸಕ್ಕೆ ತೆರಳಿ, ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡಲು ಪ್ರಸ್ತಾವನೆ ಸಲ್ಲಿಸಿತು. ಸಭೆಗೆ ವೀರಶೈವ ಮಹಾಸಭಾದ ಮುಖಂಡರು ಮಾತ್ರ ಯಾರು ಪಾಲ್ಗೊಂಡಿರಲಿಲ್ಲ.

    ಸಭೆಯ ನಿರ್ಣಯಗಳು ಹೀಗಿವೆ
    1. ಬಸವಣ್ಣ ಸ್ಥಾಪಿಸಿದ ಐತಿಹಾಸಿಕ ಸಿದ್ದಾಂತ, ವಚನಗಳನ್ನು ವೀರಶೈವರು ಬಳಸಬಾರದು.
    2. ಬಸವಾದಿ ತತ್ವಗಳನ್ನು ವಿರಕ್ತ ಮಠಗಳ ಮಠಾಧೀಶರು ಧರ್ಮಪ್ರಚಾರದ ಮೂಲಕ ಲೋಕಕ್ಕೆ ತಲುಪಿಸಬೇಕು,ಇಲ್ಲವೇ ಪೀಠ ತ್ಯಜಿಸಬೇಕು.
    3. ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ.

    4. ಲಿಂಗಾಯತ ಧರ್ಮವನ್ನು ಬಸವಣ್ಣ ಸ್ಥಾಪಿಸಿದ್ದಾರೆ.ಅವರೇ ಧರ್ಮಸ್ಥಾಪಕರು. ವಚನಗಳೇ ಧರ್ಮಗ್ರಂಥ.
    5. 1941ರಲ್ಲಿ ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾಸಭೆಯ ಸಮಾವೇಶದಲ್ಲಿ ಅಖಿಲ ಭಾರತ ಲಿಂಗಾಯತ ಮಹಾಸಭಾ ಎಂದು ಹೆಸರು ಬದಲಿಸುವ ನಿರ್ಣಯ ಕೈಗೊಂಡುದ್ದು, ಅದು ಜಾರಿಗೆ ಆಗ್ರಹ.

  • ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ-ಇಂದು ಮಠಾಧೀಶರು, ಮುಖಂಡರ ಸಭೆ

    ಲಿಂಗಾಯತ ಪ್ರತ್ಯೇಕ ಧರ್ಮ ವಿವಾದ-ಇಂದು ಮಠಾಧೀಶರು, ಮುಖಂಡರ ಸಭೆ

    ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಬಗ್ಗೆ ಒಮ್ಮತ ಮೂಡಿಸುವ ಸಲುವಾಗಿ ಇವತ್ತು ಲಿಂಗಾಯತ ಸ್ವಾಮೀಜಿಗಳು ಹಾಗೂ ಮುಖಂಡರ ಸಭೆ ನಡೆಯಲಿದೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದೆ.

    ಮೊದಲು ವೀರಶೈವ ಮತ್ತು ಲಿಂಗಾಯತ ಎರಡು ಬೇರೆ ಬೇರೆಯೇ ಎಂಬ ಗೊಂದಲ ಬಗೆಹರಿಸಿ. ಬಳಿಕ ಪ್ರಸ್ತಾವನೆ ಸಲ್ಲಿಸಿದ್ರೆ ಪ್ರತ್ಯೇಕ ಧರ್ಮದ ಮಾನ್ಯತೆ ಸಂಬಂಧ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಅಂತಾ ಸಿಎಂ ಹೇಳಿದ್ದಾರೆ.

    ಸಭೆಯಲ್ಲಿ ಲಿಂಗಾಯತ ಹಾಗೂ ವೀರಶೈವ ಗೊಂದಲ ಪರಿಹಾರದ ಬಗ್ಗೆ ಸಾಕಷ್ಟು ಚರ್ಚೆ ನಡೆಯಲಿದೆ. ಈ ಮೂಲಕ ಕಾಂಗ್ರೆಸ್ ಪರ ವಾತಾವರಣ ಮೂಡಿಸಲು ಸಿಎಂ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಲಿಂಗಾಯತ ಸಮುದಾಯದ ಬೇಡಿಕೆ ಈಡೇರಿಕೆಗೆ ಸಿಎಂ ಆಸಕ್ತಿ ಹೊಂದಿದ್ದಾರೆ.

    ಪ್ರತ್ಯೇಕ ಧರ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ ಅನ್ನೋ ಸಂದೇಶ ರವಾನೆಯಾಗಬೇಕು. ಕಾಂಗ್ರೆಸ್ ಪರ ಪೂರಕ ವಾತಾವರಣ ನಿರ್ಮಾಣವಾಗ್ಬೇಕು ಎಂದು ಪ್ರಭಾವಿ ಲಿಂಗಾಯತ ಸಚಿವರು, ಮುಖಂಡರಿಗೆ ಸಿಎಂ ಸೂಚಿಸಿದ್ದಾರೆ. ಆದ್ರೆ ಬಿಜೆಪಿ ನಾಯಕರೂ ಪ್ರತ್ಯೇಕ ಧರ್ಮದ ಮಾನ್ಯತೆಯ ಕ್ರೆಡಿಟ್ ನಮಗೆ ಸಿಗಬೇಕು ಅಂತಾ ವಾದಿಸ್ತಿರೋ ಹಿನ್ನೆಲೆಯಲ್ಲಿ ಸಭೆಯಲ್ಲಿ ಗೊಂದಲ ಸೃಷ್ಟಿಯಾಗೋ ಸಾಧ್ಯತೆಗಳಿವೆ.

     

  • ಧರ್ಮದ ಹೆಸರಲ್ಲಿ ಬೆಂಕಿ ಹಚ್ಚಿ ಸಿದ್ದರಾಮಯ್ಯ ಚಳಿ ಕಾಯಿಸಿಕೊಳ್ಳುತ್ತಿದ್ದಾರೆ: ಎಚ್.ವಿಶ್ವನಾಥ್

    ಧರ್ಮದ ಹೆಸರಲ್ಲಿ ಬೆಂಕಿ ಹಚ್ಚಿ ಸಿದ್ದರಾಮಯ್ಯ ಚಳಿ ಕಾಯಿಸಿಕೊಳ್ಳುತ್ತಿದ್ದಾರೆ: ಎಚ್.ವಿಶ್ವನಾಥ್

    ರಾಯಚೂರು: ವೀರಶೈವ ಮತ್ತು ಲಿಂಗಾಯತ ಸಮಾಜದವರ ನಡುವೆ ಬೆಂಕಿ ಹಚ್ಚಿ ಅವರ ಜಗಳದಲ್ಲಿ ಸಿಎಂ ಸಿದ್ದರಾಮಯ್ಯ ಚಳಿ ಕಾಯಿಸಿಕೊಳ್ಳುತ್ತಿದ್ದಾರೆ ಅಂತ ಮಾಜಿ ಸಂಸದ ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

    ಜಿಲ್ಲೆಯ ಸಿಂಧನೂರಿನಲ್ಲಿ ಮಾತನಾಡಿದ ವಿಶ್ವನಾಥ್ ಇತ್ತೀಚಿನ ಶತಮಾನದಲ್ಲಿ ಯಾವ ಹೊಸ ಧರ್ಮಗಳು ಹುಟ್ಟಿರುವ ಉದಾಹರಣೆ ಇಲ್ಲ. ಸಂವಿಧಾನದಲ್ಲಿ ಹೊಸ ಧರ್ಮಕ್ಕೆ ಅವಕಾಶ ಇಲ್ಲ. ಚುನಾವಣೆ ಹತ್ತಿರ ಬಂದಿರುವುದರಿಂದ ಧರ್ಮದ ಹೆಸರಿನಲ್ಲಿ ಸಿದ್ದರಾಮಯ್ಯ ಬೆಂಕಿ ಹಚ್ಚಿದ್ದಾರೆ. ಸಮಾಜದವರು ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳಬಾರದು ಎಂದು ಅವರು ಹೇಳಿದರು.

    ಇನ್ನೂ ಅಹ್ಮದ್ ಪಟೇಲ್ ಒಬ್ಬ ದುರಹಂಕಾರಿ ಮನುಷ್ಯ. ಅವರನ್ನ ಗೆಲ್ಲಿಸಲು ಕರ್ನಾಟಕದಲ್ಲಿ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಣ್ಮರೆಯಾಗಿದ್ದ ಕೆಟ್ಟ ಸಂಸ್ಕೃತಿ ಮತ್ತೆ ಕಾಣಿಸಿಕೊಂಡಿದೆ ಅಂತ ಎಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು.