Tag: ವೀರ್ ಸಾವರ್ಕರ್

  • ಸಾವರ್ಕರ್ ಪತ್ನಿ ಪಾತ್ರದಲ್ಲಿ ಬಿಗ್ ಬಾಸ್ ಸ್ಪರ್ಧಿ ಅಂಕಿತಾ

    ಸಾವರ್ಕರ್ ಪತ್ನಿ ಪಾತ್ರದಲ್ಲಿ ಬಿಗ್ ಬಾಸ್ ಸ್ಪರ್ಧಿ ಅಂಕಿತಾ

    ಬಾಲಿವುಡ್ ನಲ್ಲಿ ಮೂಡಿ ಬರುತ್ತಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದ ಪ್ರೊಮೋ ರಿಲೀಸ್ ಆಗಿದ್ದು, ಸಾರ್ವಕರ್ ಪತ್ನಿಯಾಗಿ ಬಿಗ್ ಬಾಸ್ ಸ್ಪರ್ಧಿ ಅಂಕಿತಾ ಲೋಕಂಡೆ  (Ankita Lokande) ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟ ರಣದೀಪ್ ಹೂಡಾ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಅವರೇ ಸಾವರ್ಕರ್ ಪಾತ್ರವನ್ನೂ ನಿರ್ವಹಿಸಿದ್ದಾರೆ.

    ಈ ನಡುವೆ ಸಿನಿಮಾ ಬಗ್ಗೆ ಅಪಸ್ವರ ಕೇಳಿ ಬಂದಿದೆ. ನಿರ್ದೇಶಕರ ವಿರುದ್ಧ ನೇತಾಜಿ ಸುಭಾಷ್ ಚಂದ್ರ ಬೋಸ್ (Netaji Subhash Chandra Bose) ಕುಟುಂಬ ಅಸಮಾಧಾನಗೊಂಡಿದೆ. ರಣದೀಪ್ ನಿರ್ದೇಶಿಸಿ, ನಟಿಸುತ್ತಿರುವ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾದ ಕುರಿತಾದ ಪೋಸ್ಟರ್ ನಲ್ಲಿ ನೇತಾಜಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ನೇತಾಜಿ ಮರಿ ಮೊಮ್ಮಗ ಚಂದ್ರಕುಮಾರ್ ಬೋಸ್ (Chandrakumar Bose) ಗರಂ ಆಗಿದ್ದಾರೆ.

    ಸಾವರ್ಕರ್ (Veer Savarkar) ಹುಟ್ಟು ಹಬ್ಬದ ದಿನದಂದು ರಣದೀಪ್ ತಮ್ಮ ಸಿನಿಮಾದ ಪೋಸ್ಟರ್ ನ್ನು ಹಂಚಿಕೊಂಡಿದ್ದರು. ಆ ಪೋಸ್ಟರ್ ಪೋಸ್ಟ್ ಮಾಡುವಾಗ ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಹಾಗೂ ಖುದಿರಾಮ್ ಬೋಸ್ ಇವರೆಲ್ಲರಿಗೂ ಸಾವರ್ಕರ್ ಸ್ಫೂರ್ತಿಯಾಗಿದ್ದರು ಎನ್ನುವ ಅರ್ಥದಲ್ಲಿ ಬರೆದಿದ್ದರು. ಈ ಬರಹವೇ ನೇತಾಜಿ ಕುಟುಂಬಕ್ಕೆ ಕೋಪ ತರಿಸಿದೆ.

    ನೇತಾಜಿ ಮರಿ ಮೊಮ್ಮಗ ಈ ಕುರಿತು ಮಾತನಾಡಿ, ‘ಸುಳ್ಳು ಇತಿಹಾಸವನ್ನು ಯಾರೂ ಹೇಳಬಾರದು. ಸಾವರ್ಕರ್ ಸಿದ್ಧಾಂತಕ್ಕೆ ನೇತಾಜಿ ವಿರೋಧಿಯಾಗಿದ್ದರು. ನೇತಾಜಿ ಜಾತ್ಯಾತೀತ  ಗುಣಗಳನ್ನು ಹೊಂದಿದವರು. ನಿಮ್ಮ ಸಿನಿಮಾ ಪ್ರಚಾರಕ್ಕೆ, ಗಿಮಿಕ್ ಗಾಗಿ ಸುಳ್ಳು ಹೇಳಬೇಡಿ. ಸತ್ಯವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಿ. ಇಲ್ಲವೇ ಸುಮ್ಮನಿದ್ದು ಬಿಡಿ’ ಎಂದು ಹೇಳಿದ್ದಾರೆ.

     

    ನೇತಾಜಿಗೆ ಪ್ರೇರಣೆ ಕಂಡಿತಾ ಸಾವರ್ಕರ್ ಅಲ್ಲ. ಅವರಿಗೆ ಪ್ರೇರಣೆ ಸ್ವಾಮಿ ವಿವೇಕಾನಂದರು. ಅವರು ಅಧ್ಯಾತ್ಮದ ಗುರು ಕೂಡ ಆಗಿದ್ದರು. ಮತ್ತೊಬ್ಬರು ಸ್ವಾತಂತ್ರ್ಯ ಹೋರಾಟಗಾರ ದೇಶಬಂಧು ಚಿತ್ತರಂಜನ್ ದಾಸ್. ಇವರ ಹೊರತಾಗಿ ಯಾರೂ ಅವರಿಗೆ ಸ್ಫೂರ್ತಿ ಆಗಿರಲಿಲ್ಲವೆಂದು ನೇತಾಜಿ ಮರಿಮೊಮ್ಮಗ ಹೇಳಿದ್ದಾರೆ. ಸಾವರ್ಕರ್ ಅವರನ್ನು ನೇತಾಜಿ ವಿರೋಧಿಸುತ್ತಲೇ ಬಂದಿದ್ದರು ಎಂದು ಗಟ್ಟಿಯಾಗಿ ಹೇಳಿದ್ದಾರೆ.

  • ವೀರ್ ಸಾವರ್ಕರ್ ಎಂದರೆ ಆನೆ, ನಾಯಿ ನರಿ ಮಾತಿಗೆಲ್ಲ ಅದು ತಲೆಕೆಡಿಸಿಕೊಳ್ಳಲ್ಲ: ಕಾಂತೇಶ್

    ವೀರ್ ಸಾವರ್ಕರ್ ಎಂದರೆ ಆನೆ, ನಾಯಿ ನರಿ ಮಾತಿಗೆಲ್ಲ ಅದು ತಲೆಕೆಡಿಸಿಕೊಳ್ಳಲ್ಲ: ಕಾಂತೇಶ್

    ಹಾವೇರಿ: ಕೆಲವರು ವೀರ್ ಸಾವರ್ಕರ್ (V.D Savarkar) ಅವರನ್ನು ರಾಷ್ಟ್ರದ್ರೋಹಿ ಎಂದು ಕರೆಯುತ್ತಿದ್ದಾರೆ. ಸಾವರ್ಕರ್ ಎಂದರೆ ಆನೆ ಇದ್ದಂತೆ, ಆನೆ ನಡೆಯುವಾಗ ನಾಯಿ ನರಿ ಮಾತನಾಡುತ್ತವೆ. ಅದಕ್ಕೆಲ್ಲಾ ಆನೆ ತಲೆ ಕೆಡೆಸಿಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಅವರ ಪುತ್ರ ಕೆ.ಈ ಕಾಂತೇಶ್ (K.E Kantesh) ವ್ಯಂಗ್ಯವಾಡಿದ್ದಾರೆ.

    ಹಾವೇರಿಯಲ್ಲಿ (Haveri) ಸಾವರ್ಕರ್ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವೇಳೆ ಸಾವರ್ಕರ್ ವಿಚಾರವಾಗಿ ಇತ್ತೀಚಿನ ಬೆಳವಣಿಗೆ ಕುರಿತಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾವೆಲ್ಲಾ ಆನೆಗೆ ಹೂವು ಕೊಡ್ತೀವಿ. ಹಾಗೇ ನಾಯಿ ನರಿಗಳ ಮಾತಿಗೆ ತಲೆ ಕೆಡೆಸಿಕೊಳ್ಳಬೇಕಿಲ್ಲ. ಸಾವರ್ಕರ್ ಎಂದರೆ ಆನೆ ಇದ್ದಂತೆ. ಆನೆ ಸಂಚರಿಸುವಾಗ ಇದೆಲ್ಲ ಸಹಜ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ವಸತಿ ಶಾಲೆಯಲ್ಲಿ ಬಾಲಕಿಯರ ಬಟ್ಟೆ ಬದಲಿಸುವ ವೀಡಿಯೋ ತೆಗೆದ ಸಿಬ್ಬಂದಿ – ಪೋಷಕರ ಆಕ್ರೋಶ

    ನಮ್ಮ ದೇಶ ಹಿಂದೂರಾಷ್ಟ್ರ ಆಗುವುದರಲ್ಲಿ ಯಾವುದೇ ಅನುಮಾನ ಇಲ್ಲ. ನಮ್ಮ ದೇಶಕ್ಕಾಗಿ ರಾಷ್ಟ್ರಭಕ್ತರ ಸಂಖ್ಯೆ ಹೆಚ್ಚಾಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

    ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆಯವರು, ಸಾವರ್ಕರ್ ಫೋಟೋವನ್ನು ವಿಧಾನಸೌಧ ಸಭಾಂಗಣದಲ್ಲಿರುವ ಸಾವರ್ಕರ್ ಫೋಟೋ ತೆರವುಗೊಳಿಸಬೇಕು ಎಂದಿದ್ದರು. ಬಳಿಕ ತೀವ್ರ ಟೀಕೆಗಳು ವ್ಯಕ್ತವಾದ ಬಳಿಕ, ನನ್ನ ಸಿದ್ಧಾಂತ ಬಸವ ತತ್ವ, ನಾರಾಯಣ ಗುರು, ಡಾ.ಬಿ.ಆರ್.ಅಂಬೇಡ್ಕರ್ ಅವರ ಸಿದ್ಧಾಂತ. ಹೀಗಾಗಿ ಸಾವರ್ಕರ್ ಸಿದ್ಧಾಂತವನ್ನು ನಾನು ಒಪ್ಪುವುದಿಲ್ಲ. ವಿಧಾನಸೌಧ ಸಭಾಂಗಣದಲ್ಲಿ ವಿ.ಡಿ. ಸಾವರ್ಕರ್ ಅವರ ಭಾವಚಿತ್ರ ತೆರವು ಮಾಡುವ ಕುರಿತು ನನ್ನ ಹೇಳಿಕೆಗೆ ನಾನು ಈಗಲೂ ಬದ್ಧವಾಗಿದ್ದೇನೆ. ಸಾವರ್ಕರ್ ಅವರು ಬ್ರಿಟೀಷರಿಂದ ಪಿಂಚಣಿ ಪಡೆಯುತ್ತಿದ್ದರು ಎಂದು ಸಮರ್ಥಿಸಿಕೊಂಡಿದ್ದರು. ಇದನ್ನೂ ಓದಿ: ಆಟವಾಡುತ್ತಾ ನದಿಗೆ ಬಿದ್ದ ಮಗುವಿನ ರಕ್ಷಣೆಗಾಗಿ ಧುಮುಕಿದ ಐವರು ಸಾವು!

  • ಕಾಂಗ್ರೆಸ್ ಪದೇ ಪದೇ ಸಾವರ್ಕರ್‌ಗೆ ಅಪಮಾನಿಸುತ್ತಿದೆ – ಅಮಿತ್ ಶಾ ಕಿಡಿ

    ಕಾಂಗ್ರೆಸ್ ಪದೇ ಪದೇ ಸಾವರ್ಕರ್‌ಗೆ ಅಪಮಾನಿಸುತ್ತಿದೆ – ಅಮಿತ್ ಶಾ ಕಿಡಿ

    ಬೆಳಗಾವಿ: ಸ್ವಾತಂತ್ರ್ಯ ಸೇನಾನಿ ವೀರ್ ಸಾವರ್ಕರ್ ಅವರನ್ನು ಕಾಂಗ್ರೆಸ್ (Congress) ಪದೇಪದೇ ಅಪಮಾನ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕಿಡಿಕಾರಿದ್ದಾರೆ.

    ಸವದತ್ತಿಯಲ್ಲಿ (Savadatti) ಚುನಾವಣಾ (Election) ಪ್ರಚಾರದ ವೇಳೆ ಮಾತನಾಡಿದ ಅವರು, ಎರಡು ಬಾರಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಏಕೈಕ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಆಗಿದ್ದರು. ಅಲ್ಲದೆ ಕಾಂಗ್ರೆಸ್ ಸಾವರ್ಕರ್ ಅವರನ್ನು ಹಿಂಡಲಗ (Hindalga) ಜೈಲಿಗೆ ಹಾಕಿಸಿತ್ತು. ಈಗಲೂ ಕಾಂಗ್ರೆಸ್ ಅವರನ್ನು ಅಪಮಾನಿಸುವುದನ್ನು ನಿಲ್ಲಿಸಿಲ್ಲ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಖರ್ಗೆ ಹತ್ಯೆಗೆ ಸಂಚು ಆಡಿಯೋ ಬಾಂಬ್‌ – ಸಿಎಂ ಬೊಮ್ಮಾಯಿ ಹೇಳಿದ್ದೇನು?

    ರಾಹುಲ್ ಗಾಂಧಿಯವರು (Rahul Gandhi) ಸಾವರ್ಕರ್ ಅವರಿಗೆ ಅಪಮಾನ ಮಾಡುತ್ತಾರೆ. ಅವರು 10 ಜನ್ಮ ಹುಟ್ಟಿದರೂ ಸಾವರ್ಕರ್‍ರಂತಹ ಬಲಿದಾನ ನೋಡಲು ಸಾಧ್ಯವಿಲ್ಲ. ಅವರ ತ್ಯಾಗದ ಪ್ರತೀಕವಾಗಿ ಸುವರ್ಣ ಸೌಧದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ಹಾಕಲಾಗಿದೆ ಎಂದಿದ್ದಾರೆ.

    ಕಾಂಗ್ರೆಸ್ ಪಕ್ಷ ನಿರಂತರವಾಗಿ ರೈತರಿಗೆ ಅನ್ಯಾಯ ಮಾಡಿದೆ. ವಿಶೇಷವಾಗಿ ಉತ್ತರ ಕರ್ನಾಟಕ ರೈತರಿಗೆ ಅನ್ಯಾಯ ಮಾಡಿದೆ. ಹಿಂದೆ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಕಾಂಗ್ರೆಸ್ ಸರ್ಕಾರ ಮಹದಾಯಿ (Mahadayi) ವಿವಾದ ಬಗೆಹರಿಸಲಿಲ್ಲ. 2007ರಲ್ಲಿ ಸೋನಿಯಾ ಗಾಂಧಿ ಮಹದಾಯಿ ನದಿ ನೀರು ಕರ್ನಾಟಕಕ್ಕೆ ಕೊಡುವುದಿಲ್ಲ ಎಂದಿದ್ದರು. ಈಗ ಅವರ ಸರ್ಕಾರ ಹೋಗಿದೆ. ಪ್ರಧಾನಿ ಮೋದಿ ಆಗಮಿಸಿ ಕರ್ನಾಟಕಕ್ಕೆ ಮಹದಾಯಿ ನೀರು ಹರಿಸುವ ನಿರ್ಧಾರ ಮಾಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಬೆಳಗಾವಿಯ ಈ ನೆಲ ಬಸವಣ್ಣರವರ ಕ್ಷೇತ್ರ, ಜಗತ್ತಿಗೆ ಪ್ರಜಾಪ್ರಭುತ್ವ ಪಾಠ ಮಾಡಿದ ಬಸವಣ್ಣರಿಗೆ ನಮಿಸುತ್ತೇನೆ. ಅಲ್ಲದೆ ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರನ್ನು ಸ್ಮರಿಸುತ್ತೇನೆ. ಬೆಂಗಳೂರಿನಿಂದ ತಡವಾಗಿ ಹೊರಟೆ ಹೀಗಾಗಿ ಸವದತ್ತಿಗೆ ಆಗಮಿಸಲು ವಿಳಂಬವಾಗಿದೆ. ಕ್ಷಮೆ ಇರಲಿ ಎಂದು ಜನರಲ್ಲಿ ಕೇಳಿಕೊಂಡರು. ಈ ಬಾರಿ ಜಿಲ್ಲೆಯ 18 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ – ಓರ್ವ ಅರೆಸ್ಟ್

  • ಐತಿಹಾಸಿಕ ಬೆಳಗಾವಿ ಗಣೇಶೋತ್ಸವದಲ್ಲಿ ವೀರ್ ಸಾವರ್ಕರ್ ಹವಾ

    ಐತಿಹಾಸಿಕ ಬೆಳಗಾವಿ ಗಣೇಶೋತ್ಸವದಲ್ಲಿ ವೀರ್ ಸಾವರ್ಕರ್ ಹವಾ

    ಬೆಳಗಾವಿ: ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ.

    ಸ್ಥಳೀಯ ಬಿಜೆಪಿ ನಾಯಕ, ಬೆಳಗಾವಿ ಮಹಾನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ್ ನೇತೃತ್ವದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ. ಈ ಬಾರಿ ಗಣೇಶೋತ್ಸವ ವೀರ್ ಸಾವರ್ಕರ್ ಗಣೇಶೋತ್ಸವವನ್ನಾಗಿ ಆಚರಿಸಲು ಕರೆ ನೀಡಲಾಗಿದೆ. ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಒಟ್ಟು 378 ಸಾರ್ವಜನಿಕ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

    ಗಣೇಶ ಪ್ರತಿಷ್ಠಾಪನೆಗೂ ಮುನ್ನವೇ ಮಂಟಪಗಳಿಗೆ ತೆರಳಿ ಸಾವರ್ಕರ್ ಭಾವಚಿತ್ರ ವಿತರಿಸಲಾಗಿದೆ. ಇಂದು ರಾತ್ರಿ ವೇಳೆ ಬೆಳಗಾವಿಯ ವಿವಿಧ ಬಡಾವಣೆಗಳಲ್ಲಿ 378 ಗಣೇಶ ವಿಗ್ರಹಗಳು ಪ್ರತಿಷ್ಠಾಪನೆಗೊಳ್ಳಲಿವೆ. ಕೋವಿಡ್ ಹಿನ್ನೆಲೆ ಎರಡು ವರ್ಷ ಅದ್ಧೂರಿ ಗಣೇಶೋತ್ಸವಕ್ಕೆ ಬ್ರೇಕ್ ಬಿದ್ದಿತ್ತು. ಈ ಬಾರಿ ಗಣೇಶೋತ್ಸವ ಸಾವರ್ಕರ್ ಗಣೇಶ ಉತ್ಸವವನ್ನಾಗಿ ಆಚರಿಸಲು ಹಿಂದೂಪರ ಸಂಘಟನೆಗಳು ನಿರ್ಧರಿಸಿವೆ. ಇದನ್ನೂ ಓದಿ: ನಮ್ಮ ಭಾವನೆಗಳನ್ನು ವಿರೋಧಿಸಿದವರಿಗೆ ಕಪಾಳಮೋಕ್ಷವಾಗಿದೆ: ಮುತಾಲಿಕ್

    ಹಿಂದೂಪರ ಸಂಘಟನೆಗಳಿಗೆ ಸ್ಥಳೀಯ ಬಿಜೆಪಿ ಶಾಸಕರು, ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಗಣೇಶೋತ್ಸವಕ್ಕಿದೆ ತನ್ನದೇ ಆದ ಇತಿಹಾಸ ಇದ್ದು, 1905ರಲ್ಲಿ ಖುದ್ದು ಬಾಲಗಂಗಾಧರ ತಿಲಕ್‍ರಿಂದ ಬೆಳಗಾವಿಯಲ್ಲಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಪ್ರತಿ ವರ್ಷ 11 ದಿನಗಳ ಕಾಲ ನಡೆಯುವ ಅದ್ಧೂರಿ ಗಣೇಶೋತ್ಸವ ನಡೆಯುತ್ತಾ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಮನೆ ಮನೆಗೆ ಸಾವರ್ಕರ್ ಅಭಿಯಾನ ಆರಂಭ – 6 ರೂ.ಗೆ ಪುಸ್ತಕ ಬಿಡುಗಡೆ

    ಮನೆ ಮನೆಗೆ ಸಾವರ್ಕರ್ ಅಭಿಯಾನ ಆರಂಭ – 6 ರೂ.ಗೆ ಪುಸ್ತಕ ಬಿಡುಗಡೆ

    ಬೆಂಗಳೂರು: ಸಾವರ್ಕರ್ ಗಣೇಶೋತ್ಸವಕ್ಕೆ ಕರೆಕೊಟ್ಟ ಯುವಾ ಬಿಗ್ರೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯಿಂದ ಈಗ ಸಾವರ್ಕರ್ ಪುಸ್ತಕವನ್ನು ಮನೆ ಮನೆಗೆ ತಲುಪಿಸಲು ಮುಂದಾಗಿದ್ದಾರೆ.

    ಕೇವಲ ಆರು ರೂಪಾಯಿಗೆ ಸಾವರ್ಕರ್ ಪುಸ್ತಕವನ್ನು ಮಾರಾಟ ಮಾಡುವುದಾಗಿ ಹೇಳಿದ್ದಾರೆ. ಸಾವರ್ಕರ್ ಯಾತನೆ ಸಾಹಸ ಅವಮಾನಗಳ ಬಗ್ಗೆ ಬರೆದಿರುವ ಪುಸ್ತಕವನ್ನು ಅತಿ ಕಡಿಮೆ ಬೆಲೆಯಲ್ಲಿ ತಲುಪಿಸಲಿದ್ದೇವೆ ಎಂದು ಸೂಲಿಬೆಲೆ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಗಣೇಶನ ಹಬ್ಬದಂದೇ ಅದ್ಧೂರಿ ಸಾವರ್ಕರ್‌ ಉತ್ಸವ ಆಚರಣೆಗೆ ಸಿದ್ಧತೆ

    ಪೋಸ್ಟ್‌ನಲ್ಲಿ ಏನಿದೆ?
    ಸಾವರ್ಕರ್ ಸಾಹಸ, ಯಾತನೆ ಮತ್ತು ಅವಮಾನಗಳ ಕುರಿತ ಪುಟ್ಟ ಕೃತಿಯೊಂದು ಸಿದ್ಧವಾಗಿದೆ. ಈ ಕೃತಿಯನ್ನು ಎಲ್ಲರಿಗೂ ಕೈಗೆಟುಕುವಂತೆ ಆರೇ ರೂಪಾಯಿಗೆ ಕೊಡಬೇಕೆಂದು ನಿಶ್ಚಯಿಸಲಾಗಿದೆ. ಹೀಗಾಗಿ ಈ ಪುಸ್ತಕವನ್ನು ಹಂಚಬೇಕೆಂದು ಬಯಸುವವರು ಈ ಸಂಖ್ಯೆಗೆ ವಾಟ್ಸಪ್ ಮಾಡಿ ತಮ್ಮ ಬೇಡಿಕೆಯನ್ನು ಮುಂದಿಡಬಹುದು. ಒಂದು ಪ್ರತಿಗೆ ಆರು ರೂಪಾಯಿ ಇರುವುದರಿಂದ ಕನಿಷ್ಠ ನೂರು ಪ್ರತಿಗಳನ್ನಾದರೂ ತರಿಸಿಕೊಳ್ಳುವವರಿಗೆ ಮೊದಲ ಆದ್ಯತೆ. ಒಂದು-ಎರಡು ಪ್ರತಿಗಳು ಬೇಕಾದವರು ಸ್ಥಳೀಯ ಕಾರ್ಯಕರ್ತರನ್ನು ಸಂಪರ್ಕಿಸಬಹುದು. ಸಂಪರ್ಕಿಸಿ – 72597 44503, 91138 96395

    Live Tv
    [brid partner=56869869 player=32851 video=960834 autoplay=true]

  • ಒಂದೆಡೆ ಧರ್ಮ ಒಡೆಯೋ, ಮತ್ತೊಂದೆಡೆ ಸಾವರ್ಕರ್‌ಗೆ ಅವಹೇಳನ ಮಾಡ್ತಿರೋದನ್ನ ಜನ ಗಮನಿಸ್ತಿದ್ದಾರೆ: ಸಿದ್ದುಗೆ ವಿಜಯೇಂದ್ರ ಗುದ್ದು

    ಒಂದೆಡೆ ಧರ್ಮ ಒಡೆಯೋ, ಮತ್ತೊಂದೆಡೆ ಸಾವರ್ಕರ್‌ಗೆ ಅವಹೇಳನ ಮಾಡ್ತಿರೋದನ್ನ ಜನ ಗಮನಿಸ್ತಿದ್ದಾರೆ: ಸಿದ್ದುಗೆ ವಿಜಯೇಂದ್ರ ಗುದ್ದು

    ಬೆಂಗಳೂರು: ಸಿದ್ದರಾಮಯ್ಯನವರು ಒಂದು ಕಡೆ ಧರ್ಮ ಒಡೆಯುವ, ಮತ್ತೊಂದು ಕಡೆ ವೀರ್ ಸಾವರ್ಕರ್‌ರಂತಹ ಸ್ವಾತಂತ್ರ್ಯ ಸೇನಾನಿಗಳನ್ನು ಅವಹೇಳನ ಮಾಡುತ್ತಿರುವುದನ್ನು ಜನ ಗಮನಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

    ಧರ್ಮ ವಿಭಜನೆಗೆ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಟ್ವೀಟ್ ಮಾಡಿರುವ ಬಿ.ವೈ. ವಿಜಯೇಂದ್ರ ಅವರು, ತಮ್ಮ ಅವಧಿಯ ಜನ ವಿರೋಧಿ ಆಡಳಿತ ಹಾಗೂ ರಾಜಕಾರಣದ ವೈಫಲ್ಯ ಮುಚ್ಚಿಕೊಳ್ಳಲು ಧರ್ಮ ರಾಜಕಾರಣಕ್ಕೆ ಕೈ ಹಾಕಿ ಮುಖಭಂಗ ಅನುಭವಿಸಿ ತಕ್ಕ ಬೆಲೆ ತೆತ್ತ ಮಾನ್ಯ ಸಿದ್ದರಾಮಯ್ಯನವರೇ, ಪಶ್ಚಾತ್ತಾಪದ ಮಾತು ನಿಮ್ಮಿಂದ ಯಾರೂ ನಿರೀಕ್ಷಿಸುವುದಿಲ್ಲ. ಆದರೆ ಧರ್ಮಗುರುಗಳ ದರ್ಶನಕ್ಕೆ ತೆರಳಿ ಅಲ್ಲಿಯೂ ವಿತಂಡ ವಿವಾದ ಸೃಷ್ಟಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪರೀಕ್ಷೆಯಲ್ಲಿ ನಡೆಯುವ ಅಕ್ರಮ ತಡೆಗೆ ಇಂಟರ್‌ನೆಟ್ ಸ್ಥಗಿತಗೊಳಿಸಿದ ಸರ್ಕಾರ

    ಸಿದ್ದರಾಮಯ್ಯನವರೇ ಒಂದು ಕಡೆ ಧರ್ಮ ಒಡೆಯುವ, ಮತ್ತೊಂದು ಕಡೆ ವೀರ್ ಸಾವರ್ಕರ್‌ರಂತಹ ಸ್ವಾತಂತ್ರ್ಯ ಸೇನಾನಿಗಳನ್ನು ಅವಹೇಳನ ಮಾಡುವ ಮೂಲಕ ಮತಾಂಧರನ್ನು ಎತ್ತಿ ಕಟ್ಟುವ ನಿಮ್ಮ ರಾಜಕೀಯ ನಡೆ ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಧರ್ಮರಾಜಕಾರಣದ ಬಿಸಿ ಅನುಭವಿಸಿಯೂ ಮತ್ತದೇ ಹಾದಿಯಲ್ಲಿ ಸಾಗಿರುವ ನಿಮಗಾಗಿ ಬಹುದೊಡ್ಡ ಕಂದಕ ಕಾಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಸಿನಿಮಾ ನೋಡಿಕೊಂಡು ಬರುತ್ತಿದ್ದಾಗ ಭೀಕರ ಅಪಘಾತ – ನವ ವಿವಾಹಿತೆ ಸ್ಥಳದಲ್ಲೇ ಸಾವು, ಪತಿ ಗಂಭೀರ

    ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಮಠಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರನ್ನು ರಂಭಾಪುರಿ ಪೀಠದ ಶ್ರೀ ಪ್ರಸನ್ನ ವೀರ ಸೋಮೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದು, ವೀರಭದ್ರನಾಥ ಸ್ವಾಮಿ, ರೇಣುಕಾಚಾರ್ಯರ ಗದ್ದುಗೆಯ ದರ್ಶನ ಸಹ ಪಡೆದಿದ್ದರು. ಇದೇ ವೇಳೆ ಶ್ರೀಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಧರ್ಮ ಒಡೆಯುವುದು ನನ್ನ ಉದ್ದೇಶ ಆಗಿರಲಿಲ್ಲ. ಕೆಲವರು ನನ್ನನ್ನ ದಾರಿ ತಪ್ಪಿಸಿದರು. ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ. ರಾಜ್ಯ ಜನರ ಅಭಿವೃದ್ದಿಗೆ ಆದ್ಯತೆ ನೀಡುತ್ತೇನೆ ಎಂದಿದ್ದರು.

    ಇದಾದ ನಂತರ ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯನವರು ಪಶ್ಚಾತ್ತಾಪದ ಮಾತುಗಳನ್ನು ಆಡಿದ್ದಾರೆ ಎನ್ನಲಾಗಿತ್ತು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ನಾನು ಯಾವುದೇ ಪಶ್ಚಾತಾಪದ ಮಾತುಗಳನ್ನು ಆಡಿಲ್ಲ. ನಾವು ಲಿಂಗಾಯಿತ ಧರ್ಮ ಮಾಡುವಾಗ ಏನೇನು ಮಾಡಿದ್ದೇನೆ ಅಂತ ಹೇಳಿದ್ದೀನಿ ಅಷ್ಟೇ. ಇದು ಅಪಪ್ರಚಾರ ಆಗಿದೆ. ಧರ್ಮದ ಬಗ್ಗೆ ನಾನೇನು ತಲೆ ಕೆಡಿಸಿಕೊಳ್ಳಲು ಹೋಗಿರಲಿಲ್ಲ. ಶ್ಯಾಮನೂರು ಶಿವಶಂಕರಪ್ಪ ಅವರು ವೀರಶೈವ ಧರ್ಮ ಮಾಡಿ ಅಂತ ಅರ್ಜಿ ಕೊಟ್ಟರು ಆಗಿನಿಂದ ಇದು ಶುರುವಾಯ್ತು ಅಷ್ಟೇ ಎಂದು ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

  • ಗೋವು ಮಾತೆ ಅಲ್ಲ, ಗೋಮಾಂಸ ಸೇವನೆ ತಪ್ಪಲ್ಲ ಎಂದಿದ್ರು ಸಾವರ್ಕರ್‌: ದಿಗ್ವಿಜಯ್‌ ಸಿಂಗ್‌

    ಗೋವು ಮಾತೆ ಅಲ್ಲ, ಗೋಮಾಂಸ ಸೇವನೆ ತಪ್ಪಲ್ಲ ಎಂದಿದ್ರು ಸಾವರ್ಕರ್‌: ದಿಗ್ವಿಜಯ್‌ ಸಿಂಗ್‌

    ಭೋಪಾಲ್: ಗೋವು ನಮ್ಮ ತಾಯಿ ಅಲ್ಲ, ಗೋಮಾಂಸ ಸೇವನೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಾರ್ವಕರ್ ಅವರೇ ತಮ್ಮ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

    ಭೋಪಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಜನಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಹಿಂದುತ್ವ ಮತ್ತು ಹಿಂದೂ ಧರ್ಮಕ್ಕೆ ಯಾವುದೇ ಸಂಬಂಧವಿಲ್ಲ. ಗೋವು ನಮ್ಮ ಮಾತೆಯಲ್ಲ. ಗೋಮಾಂಸ ತಿನ್ನುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ವೀರ್ ಸಾರ್ವಕರ್ ಅವರ ಪುಸ್ತಕದಲ್ಲಿ ಬರೆದಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ: ಮೋದಿ

    ದಿಗ್ವಿಜಯ್ ಸಿಂಗ್ ಹೇಳಿಕೆ ಕುರಿತಂತೆ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ನಾಯಕರು ಯಾವಾಗಲೂ ಹಿಂದೂಗಳಿಗೆ ಮಾನಹಾನಿ ಮಾಡುವುದರಲ್ಲಿ ನಿರತರಾಗಿದ್ದಾರೆ. ಹಿಂದೂಗಳ ವಿರುದ್ಧ ಷಡ್ಯಂತ್ರ ಮಾಡಲು ಹಗಲಿರುಳು ಶ್ರಮಿಸುತ್ತಿರುವ ದಿಗ್ವಿಜಯ್ ಸಿಂಗ್ ಅವರೇ ಹಿಂದೂಗಳು ಮತ್ತು ಹಿಂದೂಸ್ತಾನದ ಅಭ್ಯುದಯಕ್ಕಾಗಿ ನೀವು ಶ್ರಮಿಸಿದ್ದರೆ, ಪಾಕಿಸ್ತಾನದಲ್ಲಿ ಜಿನ್ನಾ ಹುಟ್ಟುತ್ತಿರಲಿಲ್ಲ. ಭಯೋತ್ಪಾದನೆಯೂ ಇರುತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಿಂದಿನ ಸರ್ಕಾರ ಹಣವನ್ನು ಕಬ್ರಿಸ್ತಾನ್‍ಗಳಿಗಾಗಿ ವ್ಯರ್ಥ ಮಾಡಿದೆ: ಯೋಗಿ ಆದಿತ್ಯನಾಥ್

    ಕೆಲವೊಮ್ಮೆ ಸಾವರ್ಕರ್ ಮತ್ತು ಇತರೆ ಮಹಾನ್ ಪುರುಷರ ಹೆಸರಿನಲ್ಲಿ ದಿಗ್ವಿಜಯ್ ಸಿಂಗ್ ಸುಳ್ಳು ಹೇಳಿಕೆಗಳನ್ನು ನೀಡುತ್ತಾರೆ. ದಿಗ್ವಿಜಯ್ ಸಿಂಗ್ ಅವರ ದೃಷ್ಟಿಯಲ್ಲಿ ಭಯೋತ್ಪಾದಕರು ದೇವರು. ಹೀಗಾಗಿ ದೇಶದ್ರೋಹಿಗಳಿಗೆ ಬಿರಿಯಾನಿ ತಿನ್ನಿಸುವ ಉದ್ದೇಶವನ್ನು ಹೊಂದಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

  • ಪಂಪ್‍ವೆಲ್ ಫ್ಲೈ ಓವರ್ ಮೇಲೆ ವೀರ್ ಸಾವರ್ಕರ್ ಬ್ಯಾನರ್ ಅಳವಡಿಕೆ

    ಪಂಪ್‍ವೆಲ್ ಫ್ಲೈ ಓವರ್ ಮೇಲೆ ವೀರ್ ಸಾವರ್ಕರ್ ಬ್ಯಾನರ್ ಅಳವಡಿಕೆ

    ಮಂಗಳೂರು: ನಗರದಲ್ಲಿರುವ ಪಂಪ್‍ವೆಲ್ ಫ್ಲೈ ಓವರ್ ಮೇಲೆ ವೀರ್ ಸಾವರ್ಕರ್ ಮೇಲ್ಸೇತುವೆ ಎಂಬ ಬ್ಯಾನರ್ ಹಾಕಿರೋ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

    ಕೆಲ ಅಪರಿಚಿತರು ಮೇಲ್ಸೇತುವೆ ಮೇಲೆ ವೀರ್ ಸಾವರ್ಕರ್ ಹೆಸರಿನ ಬ್ಯಾನರ್ ಹಾಕಿ ಪಕ್ಕದಲ್ಲಿಯೇ ಬಜರಂಗದಳ ಎಂದು ಬರೆದು ಫೋಟೋ ಕ್ಲಿಕ್ಕಿಸಿದ್ದಾರೆ. ಫೋಟೋ ಕ್ಲಿಕ್ಕಿಸಿದ ಬಳಿಕ ಬ್ಯಾನರ್ ತೆಗೆದು ಹಾಕಿದ್ದಾರೆ. ಸದ್ಯ ಸ್ಥಳೀಯ ಮಟ್ಟದಲ್ಲಿ ವೀರ್ ಸಾವರ್ಕರ್ ಬ್ಯಾನರ್ ಫೋಟೋಗಳು ಮಿಂಚಿನಂತೆ ಹರಿದಾಡುತ್ತಿವೆ.

    ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ವೀರ್ ಸಾವರ್ಕರ್ ಹೆಸರಿಡಲು ಸರ್ಕಾರ ಮುಂದಾಗಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆ ಸರ್ಕಾರ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡಿದೆ.

  • ವೀರ್ ಸಾವರ್ಕರ್ ಹೆಸರಿಟ್ಟರೇ ತಪ್ಪೇನು?-ಸಂಸದ ಬಿ.ಎನ್.ಬಚ್ಚೇಗೌಡ

    ವೀರ್ ಸಾವರ್ಕರ್ ಹೆಸರಿಟ್ಟರೇ ತಪ್ಪೇನು?-ಸಂಸದ ಬಿ.ಎನ್.ಬಚ್ಚೇಗೌಡ

    ಚಿಕ್ಕಬಳ್ಳಾಪುರ: ವಿವಾದಿತ ಯಲಹಂಕ ಡೈರಿ ವೃತ್ತದ ಮೇಲ್ಸುತೇವೆಗೆ ವೀರ ಸಾವರ್ಕರ್ ಹೆಟರಿಟ್ರೇ ತಪ್ಪೇನು? ವೀರ ಸಾವರ್ಕರ್ ರಾಷ್ಟ್ರವಾದಿ, ಸ್ವಾತಂತ್ರಕ್ಕಾಗಿ ಹೋರಾಟ ಮಾಡಿದವರು, ಜೈಲುವಾಸ ಅನುಭವಿಸಿದವರು. ಅಂತಹವರ ಹೆಸರಿಟ್ಟರೆ ತಪ್ಪೇನು ಅಂತ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಪ್ರಶ್ನೆ ಮಾಡಿದ್ದಾರೆ.

    ಚಿಕ್ಕಬಳ್ಳಾಪುರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ಎನ್.ಬಚ್ಚೇಗೌಡ, ವೀರ್ ಸಾವರ್ಕರ್ ಹೆಸರಿಡಬೇಕು ಅಂತ ನಾನು ಒತ್ತಾಯಿಸುತ್ತೇನೆ. ಕೆಲವರು ವಿನಾಕಾರಣ ವಿರೋಧ ಮಾಡ್ತಿದ್ದು, ಅದು ಅನಾವಶ್ಯಕ ವಿಚಾರ. ಇಡೀ ದೇಶದಲ್ಲಿ ಯಾರ ಹೆಸರನ್ನ ಎಲ್ಲಿ ಬೇಕಾದರೂ ಇಡಬಹುದು. ಆಯಾ ರಾಜ್ಯದವರ ಹೆಸರನ್ನ ಆಯಾ ರಾಜ್ಯದಲ್ಲಿಯೇ ಇಡಬೇಕು ಅಂತ ಏನಾದ್ರೂ ಇದೆಯಾ ಅಂತ ಪ್ರಶ್ನಿಸಿದರು.

    ಇದೇ ವೇಳೆ ಬಿಜೆಪಿಯಲ್ಲಿನ ಭಿನ್ನಮತದ ಬಗ್ಗೆ ಪ್ರತಿಕ್ರಿಯಿಸಿ, ಪಕ್ಷದಲ್ಲಿ ಯಾವುದೇ ಬಣಗಳೂ ಇಲ್ಲ. ಅವರೇ ಸರಿ ಹೋಗ್ತಾರೆ. ಸಿಎಂ ಯಡಿಯೂರಪ್ಪನವರು ತಮ್ಮ ಮೂರೂವರೆ ವರ್ಷದ ಅವಧಿ ಸಂಪೂರ್ಣ ಸಿಎಂ ಆಗಿ ಪೂರ್ಣಗೊಳಿಸುತ್ತಾರೆ ಎಂದರು. ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದರು, ಕೇಂದ್ರ ಸರ್ಕಾರದ ಎರಡನೇ ಅವಧಿಯ ಮೊದಲ ವರ್ಷದ ಸಾಧನೆಗಳ ಬಗ್ಗೆ ಮಾತನಾಡಿದರು. ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಉತ್ತಮ ಕೆಲಸ ಮಾಡ್ತಿವೆ ಅಂತ ಪ್ರಶಂಸೆ ವ್ಯಕ್ತಪಡಿಸಿದರು.

  • ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ- ಸಾವರ್ಕರ್ ಮೊಮ್ಮಗ

    ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ- ಸಾವರ್ಕರ್ ಮೊಮ್ಮಗ

    ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿವಾದಾತ್ಮಕ ಹೇಳಿಕೆ ಕುರಿತು ಆಕ್ರೋಶ ಭುಗಿಲೆದ್ದಿದ್ದು, ವೀರ್ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ತಿಳಿಸಿದ್ದಾರೆ.

    ಹಿಂದುತ್ವದ ಪ್ರತೀಕಪಾದಕರಾಗಿರುವ ವೀರ್ ಸಾವರ್ಕರ್ ಕುರಿತು ರಾಹುಲ್ ಗಾಂಧಿ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಾನು ರಾಹುಲ್ ಗಾಂಧಿಯೇ ಹೊರತು ರಾಹುಲ್ ಸಾವರ್ಕರ್ ಅಲ್ಲ ಎಂದು ಹೇಳಿದ್ದರು. ಇದಕ್ಕೆ ಆಡಳಿತ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇದೀಗ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಹೇಳಿದ್ದಾರೆ.

    ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭೇಟಿ ನಂತರ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಈ ರೀತಿ ಹೇಳಿಕೆ ನೀಡಿರುವುದು ದುರದೃಷ್ಟಕರ. ಇಂತಹ ಹೇಳಿಕೆಗಳನ್ನು ನೀಡುವುದನ್ನೇ ಅಭ್ಯಾಸವನ್ನಾಗಿಸಿಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಜವಾಹರ್‍ಲಾಲ್ ನೆಹರು ಅವರು ಶಿವಾಜಿ ಮಹಾರಾಜರನ್ನು ಲೂಟಿಕೋರ ಎಂದು ಕರೆದಿದ್ದರು. ನಂತರ ತಮ್ಮ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದರು. ಇದೀಗ ಅವರ ಕುಟುಂಬದ ತಪ್ಪನ್ನು ಮತ್ತೆ ಪುನರಾವರ್ತಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಅಲ್ಪಸಂಖ್ಯಾತ ಸರ್ಕಾರವನ್ನು ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ನಾವು ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡುವುದಿಲ್ಲ. ಆದರೆ ಕಾಂಗ್ರೆಸ್ ಸಾವರ್ಕರ್ ಅವರಿಗೆ ಅವಮಾನ ಮಾಡುತ್ತಿದೆ. ಶಿವ ಸೇನೆ ಕಾಂಗ್ರೆಸ್‍ನ ಸಚಿವರನ್ನು ತೆಗೆದು ಹಾಕಬೇಕು ಎಂದು ರಂಜಿತ್ ಒತ್ತಾಯಿಸಿದ್ದಾರೆ.

    ರಾಹುಲ್ ಗಾಂಧಿ ಹೇಳಿದ್ದೇನು?
    ರಾಮಲೀಲಾ ಮೈದಾನದಲ್ಲಿ ನಡೆದ ಭಾರತ್ ಬಚಾವೋ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ನನ್ನ ಹೆಸರು ರಾಹುಲ್ ಗಾಂಧಿಯೇ ಹೊರತು, ರಾಹುಲ್ ಸಾವರ್ಕರ್ ಅಲ್ಲ. ಸತ್ಯ ಹೇಳಿದ್ದೇನೆ ಹೀಗಾಗಿ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದರು. ಈ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ.

    ಸತ್ಯ ಹೇಳಿದ್ದರ ಕುರಿತು ನಾನೆಂದೂ ಕ್ಷಮೆಯಾಚಿಸುವುದಿಲ್ಲ. ನನ್ನ ಹೆಸರು ರಾಹುಲ್ ಗಾಂಧಿಯೇ ಹೊರತು ರಾಹುಲ್ ಸಾವರ್ಕರ್ ಅಲ್ಲ. ನಾನು ಕ್ಷಮೆಯಾಚಿಸುವುದಿಲ್ಲ, ಕಾಂಗ್ರೆಸ್‍ನ ಯಾವ ನಾಯಕರೂ ಈ ರೀತಿ ಕ್ಷಮೆಯಚಿಸುವುದಿಲ್ಲ. ಅಲ್ಲದೆ ಕ್ಷಮೆ ಕೇಳಬೇಕಿರುವುದು ನಾನಲ್ಲ. ದೇಶದ ಆರ್ಥಿಕತೆಯನ್ನು ನಾಶಪಡಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಹಾಯಕ ಅಮಿತ್ ಶಾ ಕ್ಷಮೆಯಾಚಿಸಬೇಕು. ಲೋಕಸಭೆಯ ಅಧಿವೇಶನದಲ್ಲಿಯೂ ನಾನು ಈ ಕುರಿತು ಸ್ಪಷ್ಟಪಡಿಸಿದ್ದೇನೆ. ನಾನು ಸತ್ಯ ಹೇಳಿದ್ದೇನೆ ಹೀಗಾಗಿ ಕ್ಷಮೆ ಕೇಳುವುದಿಲ್ಲ ತಿರಸ್ಕರಿಸಿದರು.

    ತಮ್ಮ ಹೇಳಿಕೆ ಕುರಿತು ಲೋಕಸಭೆಯ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿ ಸ್ಪಷ್ಟಪಡಿಸಿದ್ದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮೇಕ್ ಇನ್ ಇಂಡಿಯಾ ಬಗ್ಗೆ ಮಾತನಾಡುತ್ತಾರೆ. ಆದರೆ ಯಾವುದೇ ಪತ್ರಿಕೆಗಳನ್ನು ತೆರೆದು ನೋಡಿದರೂ ಅದರಲ್ಲಿ ಬಹುತೇಕ ಅತ್ಯಾಚಾರದ ಸುದ್ದಿಗಳೇ ಕಣ್ಣಿಗೆ ಕಾಣುತ್ತವೆ. ಹೀಗಾಗಿ ಎಲ್ಲಿ ನೋಡಿದರೂ ರೇಪ್ ಇನ್ ಇಂಡಿಯಾ ಆಗಿದೆ ಎಂದು ಹೇಳಿಕೆ ನೀಡಿದೆ ಎಂದರು.

    ಜಾರ್ಖಂಡ್‍ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಮೇಕ್ ಇಂಡಿಯಾ ಎಂದು ಹೇಳುತ್ತಾರೆ. ಆದರೆ ದೇಶದಲ್ಲಿ ಎಲ್ಲಿ ನೋಡಿದರೂ ರೇಪ್ ಇನ್ ಇಂಡಿಯಾ ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಇದಕ್ಕೆ ಆಡಳಿತ ಪಕ್ಷಗಳು ಭಾರೀ ಆಕ್ರೋಶ ವ್ಯಕ್ತಪಡಿಸಿ, ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದವು. ಅಲ್ಲದೆ ಈ ಕುರಿತು ಲೋಕಸಭೆಯಲ್ಲಿ ಸಹ ಪಟ್ಟು ಹಿಡಿಯುವ ಮೂಲಕ ಗದ್ದಲ ಎಬ್ಬಿಸಲಾಗಿತ್ತು. ಅಲ್ಲದೆ ಈ ಹಿಂದೆ ವೈಯನಾಡಿಗೆ ಭೇಟಿ ನೀಡಿದ ವೇಳೆ ಭಾರತ ರೇಪ್ ರಾಜಧಾನಿಯಾಗಿದೆ ಎಂದು ಹೇಳಿಕೆ ನೀಡಿ ಚರ್ಚೆಗೆ ಕಾರಣರಾಗಿದ್ದರು.