Tag: ವೀರ್ ಸಾವರ್ಕರ್

  • ನಾನೇ ಖುದ್ದು ಭೇಟಿಯಾಗಿ, ಸಿದ್ದರಾಮಯ್ಯಗೆ ಸಾವರ್ಕರ್ ಪುಸ್ತಕ ನೀಡುತ್ತೇನೆ- ಸಿಟಿ ರವಿ

    ನಾನೇ ಖುದ್ದು ಭೇಟಿಯಾಗಿ, ಸಿದ್ದರಾಮಯ್ಯಗೆ ಸಾವರ್ಕರ್ ಪುಸ್ತಕ ನೀಡುತ್ತೇನೆ- ಸಿಟಿ ರವಿ

    ಧಾರವಾಡ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆಯ ಸಚಿವ ಸಿ.ಟಿ.ರವಿ ಮಧ್ಯೆ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಕುರಿತು ವಾಗ್ವಾದ ಮುಂದುವರಿದಿದೆ. ಸಿದ್ದರಾಮಯ್ಯನವರಿಗೆ ಪುಸ್ತಕ ತಲುಪಿಸಲು ಸಾಧ್ಯವಾಗಿಲ್ಲ, ನಾನೇ ಖುದ್ದಾಗಿ ತೆರಳಿ ಪುಸ್ತಕ ನೀಡುತ್ತೇನೆ ಸಿ.ಟಿ.ರವಿ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಪುಸ್ತಕವನ್ನು ಸಿದ್ದರಾಮಯ್ಯನವರಿಗೆ ತಲುಪಿಸುತ್ತೇನೆಂದು ಹೇಳಿದ್ದೆ. ಕೆಲಸದ ಒತ್ತಡದಿಂದ ಪುಸ್ತಕ ತಲುಪಿಸಲು ಸಾಧ್ಯವಾಗಿಲ್ಲ. ಶೀಘ್ರದಲ್ಲೇ ಸಿದ್ದರಾಮಯ್ಯನವರನ್ನು ಖುದ್ದು ಭೇಟಿಯಾಗಿ ಪುಸ್ತಕ ನೀಡಿ, ಮಾತನಾಡುತ್ತೇನೆ ಎಂದರು.

    ಸಿದ್ದರಾಮಯ್ಯನವರು ಸಾವರ್ಕರ್ ಅವರ ಆತ್ಮಾಹುತಿ ಪುಸ್ತಕವನ್ನು ಓದಲಿ, ಅಭಿನವ ಭಾರತ ಸಂಘಟನೆ ಯಾಕೆ ಕಟ್ಟಿದರು ತಿಳಿದು ನಂತರ ಅವರ ಬಗ್ಗೆ ಮಾತನಾಡಲಿ. ಅಧಿಕಾರ ಹಿಡಿಯುತ್ತಿದ್ದ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮ ಕುಟುಂಬವನ್ನೇ ಸಾವರ್ಕರ್ ಅರ್ಪಿಸಿದರು. ಸತ್ಯ ಸಂಗತಿ ತಿಳಿದರೆ ಸಾವರ್ಕರ್ ಗೆ ಅಪಮಾನ ಮಾಡುವ ಕೆಲಸವಾಗುವುದಿಲ್ಲ. ಇದು ಸಾವರ್ಕರ್ ಗೆ  ಮಾಡುವ ಅಪಮಾನ ಅಲ್ಲ, ಅವರಷ್ಟಕ್ಕೆ ಅವರೇ ಮಾಡಿಕೊಂಡ ಅಪಮಾನ ಎಂದರು.

    ಸಾವರ್ಕರ್ ಬಗ್ಗೆ ಸತ್ಯ ಸಂಗತಿ ತಿಳಿದರೆ ಭಾರತ ಮಾತೆಗೆ ಅವಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುವುದಿಲ್ಲ. ಇದು ಅವರಿಗೆ ಮಾಡುವ ಅಪಮಾನ ಅಲ್ಲ. ಇಂಥವರ ಬಗ್ಗೆ ಮಾತನಾಡಿದರೆ ಅವರ ಮುಖಕ್ಕೆ ಅವರೇ ಉಗಿದುಕೊಂಡಂತೆ ಎಂದು ಕಿಡಿಕಾರಿದರು.

    ಇನ್ನೊಂದು ವಿಚಾರವೆಂದರೆ ನಾಥೂರಾಮ್ ಗೋಡ್ಸೆ ಗಾಂಧಿ ದೇಹಕ್ಕೆ ಮಾತ್ರ ಗುಂಡು ಹಾಕಿದ. ಆದರೆ ಮಹಾತ್ಮ ಗಾಂಧಿ ತತ್ವಾದರ್ಶಗಳನ್ನು ಜನಮಾನಸದಿಂದ ದೂರ ಮಾಡಿದವರು ಯಾರು ಎಂದು ಚರ್ಚೆಯಾಗಬೇಕು. ಗಾಂಧೀಜಿಯ ಪಕ್ಷದವರು ನಾವು ಎಂದು ಹೇಳುತ್ತಾರೆ. ಆದರೆ ನಿಜವಾಗಿಯೂ ಇವರು ಗಾಂಧೀಜಿಯ ತತ್ವದ ವಾರಸುದಾರರಾಗಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

    ಮಹಾರಾಷ್ಟ್ರ, ಹರಿಯಾಣ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ಸೋಲುತ್ತೇವೆ ಎಂದು ಗೊತ್ತಾಗಿಯೇ ಮುಂಚಿತವಾಗಿಯೇ ಇವಿಎಂ ಮೇಲೆ ಬೆರಳು ಮಾಡುತ್ತಿದ್ದಾರೆ. ಅವರು ಗೆದ್ದರೆ ಜನಾದೇಶ, ಬಿಜೆಪಿ ಗೆದ್ದರೆ ಇವಿಎಂ ದೋಷ ಎನ್ನುತ್ತಾರೆ. ಇವರು ಸೋತ ತಕ್ಷಣ ಇವಿಎಂನಲ್ಲಿ ಲೋಪ ಎನ್ನುತ್ತಾರೆ. ಹಿಂದೆ ಗಾಂಧೀಜಿ ಕಾಂಗ್ರೆಸ್ ವಿಸರ್ಜನೆ ಮಾಡಿ ಅಂದಿದ್ದರು. ಅದನ್ನು ಈಗ ಜನರೇ ಮಾಡುತ್ತಿದ್ದಾರೆ ಎಂದು ಹೇಳಿ ತಿರುಗೇಟು ನೀಡಿದರು.

  • ಸಿದ್ದರಾಮಯ್ಯರನ್ನ ಹಡಗಿನಲ್ಲಿ ಅಂಡಮಾನ್‍ಗೆ ಕಳುಹಿಸಿಕೊಡಬೇಕು: ಡಿ.ವಿ.ಸದಾನಂದಗೌಡ

    ಸಿದ್ದರಾಮಯ್ಯರನ್ನ ಹಡಗಿನಲ್ಲಿ ಅಂಡಮಾನ್‍ಗೆ ಕಳುಹಿಸಿಕೊಡಬೇಕು: ಡಿ.ವಿ.ಸದಾನಂದಗೌಡ

    – ಗೂಬೆ ಕೂರಿಸುವುದರಲ್ಲೂ ಸಿದ್ದರಾಮಯ್ಯ ನಿಸ್ಸೀಮರು

    ಬೆಂಗಳೂರು: ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹಡಗಿನಲ್ಲಿ ಅಂಡಮಾನ್, ನಿಕೋಬಾರ್​ಗೆ ಕಳುಹಿಸಬೇಕು. ಅಲ್ಲಿ ವೀರ್ ಸಾವರ್ಕರ್ ಹೇಗಿದ್ದರು ಎನ್ನುವುದು ಅವರಿಗೆ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಸಿದ್ದರಾಮಯ್ಯ ಅವರಿಗೆ ಬೇರೆ ಕೆಲಸ ಇಲ್ಲ. ರಾತ್ರಿಯಲ್ಲ ನಿದ್ದೆಗೆಟ್ಟು ಏನ್ಮಾಡಬೇಕು ಅಂತ ಯೋಚನೆ ಮಾಡುತ್ತಿರುತ್ತಾರೆ. ಇಂತಹ ಸಮಯದಲ್ಲಿ ಈ ರೀತಿಯ ಇತಿಹಾಸ ತಿರುಚುವ ಹೇಳಿಕೆ ನೀಡಿ ಅಪಹಾಸ್ಯಕ್ಕೆ ಈಡಾಗುತ್ತಿದ್ದಾರೆ. ಹಾಗಾಗಿ ಅವರು ಅಂಡಮಾನ್‍ಗೆ ಹೋಗಿ ವೀರ್ ಸಾವರ್ಕರ್ ವಾಸವಿದ್ದ ಜೈಲಿನ ಸ್ಥಿತಿಗತಿ ನೋಡಿಕೊಂಡು ಬರಬೇಕು. ಆಗ ಅವರಲ್ಲಿರುವ ಕೆಟ್ಟ ಬುದ್ಧಿ ಸರಿ ಹೋಗುತ್ತದೆ ಎಂದು ಕುಟುಕಿದರು.

    ಚರಿತ್ರೆಯನ್ನು ಮತ್ತೆ ತಾನೇ ಬರೆಯುತ್ತೇನೆ ಎಂಬ ಹುಂಬುತನದ ಕೆಲಸ ಸರಿಯಲ್ಲ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕಾಲದಲ್ಲಿ ವೀರ್ ಸಾವರ್ಕರ್ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಇಂದಿರಾ ಗಾಂಧಿ ಸಿದ್ದರಾಮಯ್ಯನವರ ನಾಯಕರಲ್ಲವೇ? ಸುಮ್ಮನೆ ಅವರ ಅಂಚೆ ಚೀಟಿ ಜಾರಿಗೆ ತರುತ್ತಿದ್ರಾ? ಸಿದ್ದರಾಮಯ್ಯ ಅವರನ್ನು 5 ವರ್ಷ ಮುಖ್ಯಮಂತ್ರಿಯಾಗಿ ಸಹಿಸಿಕೊಂಡಿರುವುದೇ ದೊಡ್ಡ ವಿಚಾರ ಎಂದು ವಾಗ್ದಾಳಿ ನಡೆಸಿದರು.

    ಗೂಬೆ ಕೂರಿಸುವದರಲ್ಲು ಸಿದ್ದರಾಮಯ್ಯನವರು ನಿಸ್ಸೀಮರು. ಕುಹಕದ ಮಾತು ಮತ್ತು ವಕ್ರ ಮಾತುಗಳನ್ನಾಡುವುದು ಅವರ ಕೆಲಸ. ಸಿದ್ದರಾಮಯ್ಯನವರು ಏನು ಅನ್ನೋದು ಕಾಂಗ್ರೆಸ್ಸಿವರಿಗೆ ಗೊತ್ತು. ಒಮ್ಮೆ ಅಂಡಮಾನ್, ನಿಕೋಬಾರ್ ಗೆ ಹೋಗಿ ಸಾವರ್ಕರ ಬಗ್ಗೆ ತಿಳಿಯಲಿ. ಸಾರ್ವಜಿಕರಿಂದ ಹಣ ಪಡೆದು ಅವರನ್ನು ಕಳುಹಿಸಿಕೊಡುವ ವ್ಯವಸ್ಥೆ ಮಾಡೋಣ ಎಂದರು.

    ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಬೇಕು ಎನ್ನುವುದು ನಮ್ಮದು ಆದ್ಯತೆ. ಆದರೆ ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರವನ್ನು ಅದಕ್ಕೆ ತಳಕು ಹಾಕುವುದು ಸರಿಯಲ್ಲ. ಇಂತಹ ಮಾತುಗಳಿಂದ ಜನರ ತಲೆ ಹಾಳು ಮಾಡುವ ಪ್ರವೃತ್ತಿ ಯಾರಿಗೂ ಶೋಭೆ ತರುವಂತದ್ದಲ್ಲ ಎಂದು ಗುಡುಗಿದರು.

    ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ವಿಳಂಭ ವಿಚಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ಈಗಾಗಲೆ ಒಂದು ಹಂತದ ಹಣ ಬಿಡುಗಡೆಯಾಗಿದೆ. ಬಾಕಿ ಹಣ ಬಿಡುಗಡೆಗು ಸಿದ್ಧತೆ ನಡೆದಿದೆ. ರಾಜ್ಯ ಸರ್ಕಾರವು ಕೇಂದ್ರಕ್ಕೆ ಎಲ್ಲಾ ದಾಖಲೆಗಳನ್ನು ಸಲ್ಲಿಸಿದೆ. ಮುಂದಿನ ಹಂತದಲ್ಲಿ ಹಣ ಬಿಡುಗಡೆಯಾಗಲಿದೆ. ಮೊದಲ ಹಂತದಲ್ಲಿ ಕರ್ನಾಟಕ 1,200 ಕೋಟಿ ರೂ. ಹಾಗೂ ಬಿಹಾರ ರಾಜ್ಯಕ್ಕೆ 400 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.

    ಎಸ್.ಟಿ.ಸೋಮಶೇಖರ್ ಬಿಜೆಪಿ ಸೇರ್ಪಡೆಗೆ ಯಶವಂತಪುರ ಬಿಜೆಪಿ ಘಟಕ ಪರ ವಿರೋಧ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಅವರಿಗೆ ಟಿಕೆಟ್ ನೀಡಬೇಕಾ ಅಥವಾ ಬೇಡ್ವಾ ಎನ್ನುವ ತೀರ್ಮಾನ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದು ತಿಳಿಸಿದರು.

  • ಸಿದ್ದರಾಮಯ್ಯ ಕಾಂಗ್ರೆಸ್‍ನಿಂದ ಹೊರ ಬಂದ್ರೂ ಆಶ್ಚರ್ಯವಿಲ್ಲ: ರೇಣುಕಾಚಾರ್ಯ

    ಸಿದ್ದರಾಮಯ್ಯ ಕಾಂಗ್ರೆಸ್‍ನಿಂದ ಹೊರ ಬಂದ್ರೂ ಆಶ್ಚರ್ಯವಿಲ್ಲ: ರೇಣುಕಾಚಾರ್ಯ

    ದಾವಣಗೆರೆ: ಸಿದ್ದರಾಮಯ್ಯ ಕಾಂಗ್ರೆಸ್‍ನಿಂದ ಹೊರಗೆ ಬಂದರೂ ಆಶ್ಚರ್ಯ ಇಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

    ಜಿಲ್ಲೆಯ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಡಿ ಬೇಡಿ ವಿರೋಧ ಪಕ್ಷದ ನಾಯಕನ ಸ್ಥಾನ ಪಡೆದವರು. ಮೂರು ತಿಂಗಳು ಪ್ರತಿಪಕ್ಷದ ನಾಯಕ ಸ್ಥಾನ ಖಾಲಿ ಇತ್ತು. ಇದರಿಂದ ಸಿದ್ದರಾಮಯ್ಯನವರಿಗೆ ಎಷ್ಟರ ಮಟ್ಟಿಗೆ ಕಾಂಗ್ರೆಸ್‍ನಲ್ಲಿ ಗೌರವ ಇತ್ತು ಎನ್ನುವುದು ತಿಳಿಯುತ್ತದೆ. ಹೀಗಾಗಿ ಸಿದ್ದರಾಮಯ್ಯನವರು ಕಾಂಗ್ರೆಸ್‍ನಿಂದ ಹೊರ ಬಂದರೂ ಆಶ್ಚರ್ಯಪಡಬೇಡಿ ಎಂದು ಹೇಳಿದ್ದಾರೆ.

    ಸಿದ್ದರಾಮಯ್ಯನವರು ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ಪ್ರತಿಪಕ್ಷದ ನಾಯಕರಾಗಿದ್ದಂತಹವರು. ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಹಗುರವಾಗಿ ಮಾತನಾಡುವುದು ತಪ್ಪು. ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಗೋಲಿ ಆಡುವವರು ಅಂತ ಹೇಳಿಕೆ ನೀಡುವುದು ಸರಿಯಲ್ಲ.

    ಕಾಂಗ್ರೆಸ್‍ನವರು ಭ್ರಮೆಯಲ್ಲಿದ್ದಾರೆ, ಅವರು ಭ್ರಮನಿರಸನವಾಗಿದ್ದಾರೆ. ಸಿದ್ದರಾಮಯ್ಯನವರು 5 ವರ್ಷ ಮುಖ್ಯಮಂತ್ರಿಯಾಗಿ, ನಂತರ ಸಮ್ಮಿಶ್ರ ಸರ್ಕಾರ ಬಂತು. ಈಗಲೂ ಕಾಂಗ್ರೆಸ್‍ನವರು ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂದು ಹಗಲುಗನಸು ಕಾಣುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರ್ತನೆ ನೋಡಿದರೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯನವರ ಮಧ್ಯೆ ಎಷ್ಟು ಸಾಮರಸ್ಯವಿದೆ ಎಂದು ತಿಳಿಯುತ್ತದೆ ಎಂದರು.

    ವೀರಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಕುರಿತು ಹಗುರವಾಗಿ ಮಾತನಾಡಬಾರದು. ಅವರು ಅಪ್ರತಿಮ ದೇಶಭಕ್ತರು. ಮತಾಂಧ ಟಿಪ್ಪು ಜಯಂತಿ ಆಚರಿಸುತ್ತೀರಿ. ನಾವು ದೇಶಭಕ್ತರಿಗೆ ಭಾರತರತ್ನ ನೀಡಿದರೆ ತಪ್ಪೇ. ಸಾವರ್ಕರ್ ಬಗ್ಗೆ ಇತಿಹಾಸ ಓದಿ ತಿಳಿದುಕೊಳ್ಳಲಿ. ಈ ಕುರಿತು ಸಿದ್ದರಾಮಯ್ಯ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.

  • ಕಾಂಗ್ರೆಸ್ ಸಾವರ್ಕರ್‌ಗೆ ಭಾರತರತ್ನ ನೀಡದೆ ಅವಮಾನಿಸಿದೆ – ಮೋದಿ

    ಕಾಂಗ್ರೆಸ್ ಸಾವರ್ಕರ್‌ಗೆ ಭಾರತರತ್ನ ನೀಡದೆ ಅವಮಾನಿಸಿದೆ – ಮೋದಿ

    ಮುಂಬೈ: ಹಿಂದುತ್ವದ ವಿಚಾರವಾದಿ ವಿ.ಡಿ.ಸಾವರ್ಕರ್ ಅವರಿಗೆ ಭಾರತ ರತ್ನ ನೀಡದೆ ಕಾಂಗ್ರೆಸ್ ಅವಮಾನಿಸಿದೆ. ಅವರ ಮೌಲ್ಯಗಳು ರಾಷ್ಟ್ರ ನಿರ್ಮಾಣಕ್ಕೆ ಆಧಾರವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

    ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲು ಕಾಂಗ್ರೆಸ್ ನಿರಾಕರಿಸಿತು. ಅಲ್ಲದೆ ವೀರ ಸಾವರ್ಕರ್ ಅವರಿಗೆ ಭಾರತರತ್ನ ನೀಡದೆಯೂ ಅವಮಾನಿಸಿದೆ. ಮಾತ್ರವಲ್ಲದೆ ಇದೀಗ ಜಮ್ಮು ಕಾಶ್ಮೀರದ 370ನೇ ವಿಧಿ ರದ್ದು ಪಡಿಸಿರುವುದನ್ನು ಸಹ ವಿರೋಧಿಸುತ್ತಿದೆ. ಆದರೆ ನಾವು ಸಾವರ್ಕರ್ ಅವರ ಸಂಸ್ಕಾರಗಳನ್ನು ರಾಷ್ಟ್ರ ನಿರ್ಮಾಣಕ್ಕೆ ಆಧಾರವನ್ನಾಗಿಸಿಕೊಂಡಿದ್ದೇವೆ ಎಂದರು.

    ಅಕ್ಟೋಬರ್ 21ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯನ್ನು ಬಿಜೆಪಿ ನಿನ್ನೆಯಷ್ಟೇ ಬಿಡುಗಡೆ ಮಾಡಿದ್ದು, ಇದರಲ್ಲಿ ಸಹ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವುದು ಪ್ರಮುಖ ಅಂಶವಾಗಿದೆ. ಪ್ರಣಾಳಿಕೆಯಲ್ಲಿ ಘೋಷಣೆಯಾದ ಮರುದಿನವೇ ಇಂದು ಪ್ರಧಾನಿ ನರೇಂದ್ರ ಮೋದಿ ಇದೇ ವಿಚಾರವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

    ವಿರೋಧ ಪಕ್ಷಗಳು ನಾಚಿಕೆ ಇಲ್ಲದವು, ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದು ಪಡಿಸಿದ ಕುರಿತು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಮಾಹಾರಾಷ್ಟ್ರ ಚುನಾವಣೆಯ ಸಂದರ್ಭದಲ್ಲಿ 370ನೇ ವಿಧಿ ಏನು ಎಂದು ಬಹಿರಂಗವಾಗಿ ಪ್ರಶ್ನಿಸುವ ಜನರಿದ್ದಾರೆ. ನಾನು ಅಂತಹವರಿಗೆ ಹೇಳಲು ಬಯಸುತ್ತೇನೆ, ಮಹಾರಾಷ್ಟ್ರದಂತೆಯೇ ಜಮ್ಮು ಕಾಶ್ಮೀರದ ಜನರು ಸಹ ಭಾರತಕ್ಕೆ ಸೇರಿದವರು ಎಂದರು.

    ಕಾಂಗ್ರೆಸ್-ಎನ್‍ಸಿಪಿಯದ್ದು ಭ್ರಷ್ಟ ಮೈತ್ರಿ, ಇದು ಮಹಾರಾಷ್ಟ್ರವನ್ನು ಒಂದು ದಶಕ ಹಿಂದಕ್ಕೆ ಕೊಂಡೊಯ್ದಿದೆ ಎಂದು ಮೈತ್ರಿ ಕುರಿತು ವಾಗ್ದಾಳಿ ನಡೆಸಿದರು.