Tag: ವೀರ ಮಹಾದೇವಿ

  • ಸನ್ನಿಲಿಯೋನ್ ವಿರೋಧಿಸಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡ ಕರವೇ ಯುವಸೇನೆ ಕಾರ್ಯಕರ್ತರು!

    ಸನ್ನಿಲಿಯೋನ್ ವಿರೋಧಿಸಿ ಬ್ಲೇಡ್‍ನಿಂದ ಕೈ ಕೊಯ್ದುಕೊಂಡ ಕರವೇ ಯುವಸೇನೆ ಕಾರ್ಯಕರ್ತರು!

    ಬೆಂಗಳೂರು: ಬಾಲಿವುಡ್ ನ ಮೋಹಕ ನಟಿ ಸನ್ನಿ ಲಿಯೋನ್ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆಯ ಕಾರ್ಯಕರ್ತರು ಬ್ಲೇಡ್ ನಿಂದ ಕೈ ಕೊಯ್ದುಕೊಂಡು ಪ್ರತಿಭಟನೆ ನಡೆಸಿದ್ದಾರೆ.

    ಇಂದು ನಗರದ ಟೌನ್ ಹಾಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು, ತಮ್ಮ ಕೈ ಕೊಯ್ದುಕೊಳ್ಳುವ ಮೂಲಕ ವೀರ ಮಹಾದೇವಿ ಚಿತ್ರಕ್ಕೆ ಸನ್ನಿಲಿಯೋನ್ ಬೇಡ. ಅವರು ಈ ಚಿತ್ರದಲ್ಲಿ ನಟಿಸಬಾರದು ಅಂತ ಆಗ್ರಹಿಸಿದ್ದಾರೆ. ಅಲ್ಲದೇ ರಕ್ತ ಚೆಲ್ಲುತ್ತೇವೆ ಹೊರತು ಸನ್ನಿಗೆ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡಲ್ಲ ಅಂತಾ ಆಕ್ರೋಶ ವ್ಯಕ್ತಪಡಿಸಿದ್ರು.

    ಕೆಲ ದಿನಗಳ ಹಿಂದೆಯಷ್ಟೇ ಕರವೇ ಅವರು ವೀರ ಮಹಾದೇವಿ ಚಿತ್ರದಲ್ಲಿ ಸನ್ನಿ ಲಿಯೋನ್ ನಟಿಸಬಾರದು ಎಂದು ಸನ್ನಿ ಲಿಯೋನ್ ಹಾಗೂ ನಿರ್ಮಾಪಕ ಡಿ.ಸಿ ವಾಡಿ ಉದಯನ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ವೀರ ಮಹಾದೇವಿ ಐತಿಹಾಸಿಕ ಚಿತ್ರವಾಗಿದೆ. ಹೀಗಾಗಿ ಈ ಚಿತ್ರದಲ್ಲಿ ನೀಲಿ ತಾರೆ ಸನ್ನಿ ಲಿಯೋನ್ ನಟಿಸಬಾರದು ಎಂದು ಕಾರ್ಯಕರ್ತರು ಒತ್ತಾಯಿಸಿದ್ದರು. ಅಲ್ಲದೇ ಪ್ರತಿಭಟನೆಯಲ್ಲಿ ಸನ್ನಿಲಿಯೋನ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಕಾರ್ಯಕರ್ತರು ತಮ್ಮ ಆಕ್ರೋಶ ಹೊರಹಾಕಿದ್ದರು.

    ವೀರ ಮಹಾದೇವಿ ಚಿತ್ರ ಪಂಚ ಭಾಷೆಗಳಲ್ಲಿ ತಯಾರಾಗುತ್ತಿದ್ದು, ಒಟ್ಟು 100 ಕೋಟಿ ವೆಚ್ಚದಲ್ಲಿ ಈ ಸಿನಿಮಾ ರೆಡಿಯಾಗುತ್ತಿದೆ.

    ತಮಿಳು ಲಕ್ಷ್ಮೀ ಮಹಾದೇವಿ ಚಿತ್ರಕ್ಕೆ ನೀಲಿ ಚಿತ್ರದ ನಟಿ ಸನ್ನಿ ಲಿಯೋನ್ ಆಯ್ಕೆ ವಿರೋಧಿಸಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಇಂದು ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟಿಸಿ ತಮ್ಮ ಆಕ್ರೋಶ ಹೊರಹಾಕಿದ್ರು. ಮಹಾರಾಣಿ ಲಕ್ಷ್ಮಿ ಮಹಾದೇವಿ ಪಾತ್ರಕ್ಕೆ ಸನ್ನಿ ಲಿಯೋನ್ ಆಯ್ಕೆ ಖಂಡಿಸಿದ ಕಾರ್ಯಕರ್ತರು ಸನ್ನಿ ಲಿಯೋನ್ ಪ್ರತಿಕೃತಿ ಸುಟ್ಟು ಹಾಕಿ ಕೂಡಲೇ ನೀಲಿ ತಾರೆ ಸನ್ನಿ ಲಿಯೋನ್ ಪಾತ್ರದಿಂದ ಕೈಬಿಡುವಂತೆ ಆಗ್ರಹಿಸಿದರು.

    ಇದೇ ವೇಳೆ ಕರವೇ ಉತ್ತರ ಕರ್ನಾಟಕ ಉಪಾಧ್ಯಕ್ಷ ಪುನೀತ್ ರೆಡ್ಡಿಯಿಂದ ಕೈ ಕೊಯ್ದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರ್ಮಾಪಕ ವಿ.ಸಿ ವಾಡಿ ಹಾಗೂ ಸನ್ನಿ ಲಿಯೋನ್ ಕನ್ನಡಗರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ದೂರಿದರು.

    ಕನ್ನಡದ ಹೆಮ್ಮೆಯ ರಾಷ್ಟ್ರಕೂಟರ ಸತಿಸಾತ್ವಿಯಾದ ಮಹಾರಾಣಿ ವೀರಮಹಾದೇವಿ ಜೀವನಾಧಾರಿತ ಚಿತ್ರ ಇದಾಗಿದ್ದು, ಸತಿ ಸಾತ್ವಿಯ ಪಾತ್ರಕ್ಕೆ ನೀಲಿ ತಾರೆ ಸನ್ನಿ ಲಿಯೋನ್‍ಳನ್ನು ಕೂಡಲೇ ಚಿತ್ರದಿಂದ ಕೈ ಬಿಡಬೇಕು ಎಂದು ಅಗ್ರಹಿಸಿದರು. ಇಲ್ಲವಾದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸನ್ನಿಲಿಯೋನ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಬೆಂಗ್ಳೂರಲ್ಲಿ ಪ್ರತಿಭಟನೆ

    ಸನ್ನಿಲಿಯೋನ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಬೆಂಗ್ಳೂರಲ್ಲಿ ಪ್ರತಿಭಟನೆ

    ಬೆಂಗಳೂರು: ಬಾಲಿವುಡ್ ಮೋಹಕ ನಟಿ ವಿರುದ್ಧ ಮತ್ತೊಮ್ಮೆ ಬೆಂಗಳೂರಲ್ಲಿ ಪ್ರತಿಭಟನೆ ನಡೆದಿದೆ. ವೀರ ಮಹಾದೇವಿ ಚಿತ್ರದಲ್ಲಿ ಸನ್ನಿ ಲಿಯೋನ್ ನಟಿಸಬಾರದು ಎಂದು ಸನ್ನಿ ಲಿಯೋನ್ ಹಾಗೂ ನಿರ್ಮಾಪಕ ಡಿ.ಸಿ ವಾಡಿ ಉದಯನ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

    ವೀರ ಮಹಾದೇವಿ ಐತಿಹಾಸಿಕ ಚಿತ್ರವಾಗಿದೆ. ಹೀಗಾಗಿ ಈ ಚಿತ್ರದಲ್ಲಿ ನೀಲಿ ತಾರೆ ಸನ್ನಿ ಲಿಯೋನ್ ನಟಿಸಬಾರದು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಸನ್ನಿಲಿಯೋನ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಕಾರ್ಯಕರ್ತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

    ವೀರ ಮಹಾದೇವಿ ಚಿತ್ರ ಪಂಚ ಭಾಷೆಗಳಲ್ಲಿ ತಯಾರಾಗುತ್ತಿದ್ದು, ಒಟ್ಟು 100 ಕೋಟಿ ವೆಚ್ಚದಲ್ಲಿ ಈ ಸಿನಿಮಾ ರೆಡಿಯಾಗುತ್ತಿದೆ.

    ಹೊಸ ವರ್ಷ ಆಚರಣೆಗೆ ಸಿಲಿಕಾನ್ ಸಿಟಿಗೆ ಬಾಲಿವುಡ್ ಮೋಹಕ ನಟಿ ಸನ್ನಿಲಿಯೋನ್ ಅವರು ಬರುವುದನ್ನು ನಿಷೇಧಿಸಿದ್ದು, ಇತ್ತೀಚೆಗಷ್ಟೇ ಮತ್ತೆ ಅವರ ಎಂಟ್ರಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ನವೆಂಬರ್ 3 ರಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸನ್ನಿ ನೈಟ್ ಹೆಸರಿನಲ್ಲಿ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಸನ್ನಿ, ಕನ್ನಡ ಹಾಡುಗಳಿಗೆ ಹೆಜ್ಜೆ ಹಾಕಲಿದ್ದು, ಆದ್ರೆ ಇದೀಗ ಸನ್ನಿ ಎಂಟ್ರಿಗೆ ಕನ್ನಡ ರಕ್ಷಣಾ ವೇದಿಕೆ ಯುವಸೇನೆ ವಿರೋಧ ವ್ಯಕ್ತಪಡಿಸಿತ್ತು.

    `ವೀರ ಮಹಾದೇವಿ’ ಚಿತ್ರದಲ್ಲಿ ಸನ್ನಿಲಿಯೋನ್ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇದು ಅಪರಾಧ ಯಾವುದೇ ಕಾರಣಕ್ಕೂ ಈ ಚಿತ್ರದಲ್ಲಿ ಸನ್ನಿ ನಟಿಸಬಾರದು. ಹೀಗಾಗಿ ಈ ಚಿತ್ರದ ವಿರುದ್ಧ ಹೋರಾಟ ಮಾಡುತ್ತೀವಿ. ಸನ್ನಿ ಲಿಯೋನ್ ಎಲ್ಲಿಗೆ ಬಂದರೂ ನಾವು ಅವರನ್ನ ತಡೆ ಮಾಡ್ತೀವಿ. ಇದು ನಮ್ಮ ಸಂಸ್ಕೃತಿ ವಿಚಾರ. ಹೀಗಾಗಿ ನಾವು ಅದನ್ನ ವಿರೋಧಿಸ್ತೀವಿ. ಆದ್ರೆ ನಾವು ಕಾರ್ಯಕ್ರಮವನ್ನ ವಿರೋಧ ಮಾಡುತ್ತಿಲ್ಲ. ಬದಲಾಗಿದೆ ಸನ್ನಿ ಲೀಯೊನ್ ಅವರನ್ನ ಮಾತ್ರ ವಿರೋಧಿಸುತ್ತೇವೆ ಅಂತ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕರವೇ ಯುವಸೇನೆಯ ಹರೀಶ್ ಹೇಳಿದ್ದರು.

    ಸನ್ನಿ ಲಿಯೋನ್ ಯಾವುದೇ ಕಾರಣಕ್ಕೂ ಬೆಂಗಳೂರಿಗೆ ಬರಬಾರದು. ಅವರ ಹಿನ್ನೆಲೆ ನೋಡಿದ್ರೆ ಬರೋದು ಬೇಡ ಅನ್ನಿಸುತ್ತೆ. ಸನ್ನಿ ಲಿಯೋನ್ `ನೀಲಿ ಚಿತ್ರದ ತಾರೆ’. ಇದರಿಂದ ನಮ್ಮ ಸಂಸ್ಕೃತಿಗೆ ಧಕ್ಕೆ ಉಂಟಾಗುತ್ತದೆ. ನಮ್ಮದು ಸಂಸ್ಕೃತಿಯ ನಾಡು. ಇದ್ರಿಂದ ನಮ್ಮ ಹಿಂದೂ ಸಂಸ್ಕೃತಿಗೆ ಹಾಳಾಗುತ್ತೆ ಅಂತ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv