Tag: ವೀರ ಸವರ್ಕರ್

  • ಸ್ವಾತಂತ್ರ್ಯ ಹೋರಾಟದ ಗಂಧ ಗಾಳಿ ಗೊತ್ತಿಲ್ಲದ ಸಿದ್ದರಾಮಯ್ಯಗೆ ನಾಚಿಕೆಯಾಗಬೇಕು: ರವಿಕುಮಾರ್

    ಸ್ವಾತಂತ್ರ್ಯ ಹೋರಾಟದ ಗಂಧ ಗಾಳಿ ಗೊತ್ತಿಲ್ಲದ ಸಿದ್ದರಾಮಯ್ಯಗೆ ನಾಚಿಕೆಯಾಗಬೇಕು: ರವಿಕುಮಾರ್

    – ಭಾರತ ರತ್ನವನ್ನು ಗಾಂಧಿ ಫ್ಯಾಮಿಲಿಗೆ ಬರೆದುಕೊಟ್ಟಿದ್ದಾರಾ?

    ಕಲಬುರಗಿ: ಮಹಾತ್ಮ ಗಾಂಧಿ ಹತ್ಯೆಗೆ ವೀರ ಸಾವರ್ಕರ್ ಸಂಚು ರೂಪಿಸಿದ್ದರು, ಅಂಥವರಿಗ್ಯಾಕೆ ಭಾರತ ರತ್ನ ಕೊಡ್ತಿದಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿ ಮುಖಂಡ ಎನ್ ರವಿಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರವಿಕುಮಾರ್, ಸಿದ್ದರಾಮಯ್ಯ ಅವರು ಹತ್ಯೆಗೆ ಸಂಚು ರೂಪಿಸಿದ್ದರ ಬಗ್ಗೆ ಸ್ಟಡಿ ಮಾಡಿದ್ದಾರಾ? ಮಹಾತ್ಮ ಗಾಂಧಿ ಹತ್ಯೆ ವಿಚಾರದಲ್ಲಿ ಆರ್‍ಎಸ್‍ಎಸ್ ಹಾಗೂ ವೀರ ಸಾವರ್ಕರ್ ಪಾತ್ರವಿಲ್ಲ ಎಂದು ನ್ಯಾಯಲಯವೇ ಹೇಳಿದ್ದು, ಸ್ವಾತಂತ್ರ್ಯ ಹೋರಾಟದ ಗಂಧ ಗಾಳಿ ಗೊತ್ತಿಲ್ಲದ ಸಿದ್ದರಾಮಯ್ಯಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು.

    ಸ್ವಾತಂತ್ರ್ಯ ಹೋರಾಟದಲ್ಲಿ ವೀರ ಎಂದು ಹೆಸರು ಬಂದಿದ್ದು ಸಾವರ್ಕರ್ ಗೆ ಮಾತ್ರ. ಹೀಗಾಗಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ಓದಿ ತಿಳಿದುಕೊಳ್ಳಲಿ ಎಂದು ಹೇಳಿದರು. ಭಾರತ ರತ್ನ ಗಾಂಧಿ ಫ್ಯಾಮಿಲಿಗೆ ಮಾತ್ರ ಕೊಡಬೇಕು ಅಂತಾ ಬರೆದುಕೊಟ್ಟಿದ್ದಾರಾ? ಅಂಬೇಡ್ಕರ್‍ರವರಿಗೆ ಕಾಂಗ್ರೆಸ್ ಪಕ್ಷ ಯಾಕೆ ಭಾರತ ರತ್ನ ನೀಡಲಿಲ್ಲ ಎಂದು ರವಿಕುಮಾರ್ ಪ್ರಶ್ನಿಸಿದರು. ಇದನ್ನು ಓದಿ: ಅಧಿಕಾರದಲ್ಲಿ ಮುಂದುವರಿದಿದ್ರೆ ಕೊಲೆಗಡುಕರಿಗೆ ಪ್ರಶಸ್ತಿ ಕೊಡ್ತಿದ್ರು: ಸಿದ್ದುಗೆ ಸಿಟಿ ರವಿ ತಿರುಗೇಟು

    ಕೆಲ ವಿಷಯಗಳಲ್ಲಿ ಸಿದ್ದರಾಮಯ್ಯ ನೀಚ ರಾಜಕಾರಣ ಮಾಡುತ್ತಿದ್ದು, ಆತ್ಮ ಇಲ್ಲದ ವ್ಯಕ್ತಿ ಅಂದರೆ ಅದು ಸಿದ್ದರಾಮಯ್ಯ ಮಾತ್ರ ಎಂದರು. ಮಹಾರಾಷ್ಟ್ರ ಚುನಾವಣೆಯಲ್ಲಿ ಐವತ್ತಕ್ಕಿಂತ ಜಾಸ್ತಿ ಸಿಟ್ ಬಂದರೆ ನಾನು ರಾಜೀನಾಮೆ ಕೊಡುತ್ತೇನೆ. ಕಡಿಮೆ ಸಿಟ್ ಬಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಸವಾಲ್ ಹಾಕಿದರು.

  • ಇತಿಹಾಸ ಗೊತ್ತಿಲ್ಲದ ಸಿದ್ದರಾಮಯ್ಯರಿಂದ ಹುಚ್ಚು ಹುಚ್ಚು ಹೇಳಿಕೆ – ಈಶ್ವರಪ್ಪ

    ಇತಿಹಾಸ ಗೊತ್ತಿಲ್ಲದ ಸಿದ್ದರಾಮಯ್ಯರಿಂದ ಹುಚ್ಚು ಹುಚ್ಚು ಹೇಳಿಕೆ – ಈಶ್ವರಪ್ಪ

    ಶಿವಮೊಗ್ಗ: ವೀರ ಸಾವರ್ಕರ್ ಅವರಿಗೆ ಭಾರತ ರತ್ನ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ರಾಜಕೀಯ ನಾಯಕರುಗಳ ಮಧ್ಯೆ ಟಾಕ್ ವಾರ್ ನಡೆಯುತ್ತಿದ್ದು, ಇದೀಗ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರ ಸಾವರ್ಕರ್ ಹೆಸರು ನಾಲಗೆಯಲ್ಲಿ ತರುವುದಕ್ಕೂ ಸಿದ್ದರಾಮಯ್ಯ ಅವರಿಗೆ ಯೋಗ್ಯತೆ ಇಲ್ಲ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ತೃಪ್ತಿಪಡಿಸಲು ಸಾವರ್ಕರ್ ಬಗ್ಗೆ ಹೀಗೆ ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

    ಸಾವರ್ಕರ್ ಅವರನ್ನು ಬ್ರಿಟಿಷರು ಸರೋವರದಾಚೆ ಅಂಡಮಾನ್ ಜೈಲಿನಲ್ಲಿ ಇಟ್ಟಿದ್ದರು. ಆ ಜೈಲನ್ನು ಸಿದ್ದರಾಮಯ್ಯ ಒಂದು ಸಾರಿ ನೋಡಿಕೊಂಡು ಬರಲಿ. ಕಾಂಗ್ರೆಸ್ ನವರು ಬೇರೆ ಬೇರೆ ಕಾರಣಕ್ಕೆ ಜೈಲಿಗೆ ಹೋಗುತ್ತಿದ್ದಾರೆ, ಆದರೆ ಸಾವರ್ಕರ್ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟ ಮಾಡಿ ಜೈಲಿಗೆ ಹೋದವರು. ಸಾವರ್ಕರ್ ಇಂದಿಗೂ ಯುವಕರಿಗೆ ಸ್ಫೂರ್ತಿ. ಹೀಗಿರುವಾಗ ಇತಿಹಾಸ ಗೊತ್ತಿಲ್ಲದ ಸಿದ್ದರಾಮಯ್ಯ ಹುಚ್ಚು ಹುಚ್ಚಾಗಿ ಹೇಳಿಕೆ ಕೊಡುತ್ತಿದ್ದಾರೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು. ಇದನ್ನು ಓದಿ: ಸಿಟಿ ರವಿ ಯಾಕೆ ಹೆಗಲು ಮುಟ್ಟಿ ನೋಡ್ಕೊಳ್ತಿದ್ದಾರೆ ಅರ್ಥವಾಗಿಲ್ಲ- ಸಿದ್ದರಾಮಯ್ಯ

    ಅಲ್ಲದೆ ಸಿದ್ದಗಂಗಾ ಸ್ವಾಮೀಜಿಯವರಿಗೆ ಭಾರತ ರತ್ನ ಕೊಡಿ ಎಂದು ನಾವು ಹೇಳಿದ್ದೇವೆ. ಆದರೆ ಕೇಂದ್ರ ಸರ್ಕಾರ ನಾವು ಹೇಳಿದ ತಕ್ಷಣ ಅದನ್ನು ಮಾಡುವುದಿಲ್ಲ. ಭಾರತ ರತ್ನ ಯಾರಿಗೆ ಕೊಡಬೇಕು ಎನ್ನುವುದನ್ನು ಚಿಂತನೆ ನಡೆಸುತ್ತಿದೆ. ಸಿದ್ದಗಂಗಾ ಶ್ರೀಗಳಿಗೆ ಇಂದಲ್ಲಾ ನಾಳೆ ಭಾರತ ರತ್ನ ಸಿಗಲಿದೆ ಎಂದು ಇದೇ ವೇಳೆ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.