ಮೈಸೂರು: ಕಡು ಬಡವರ ಕುಟುಂಬದ ಮೇಲೆ ಗ್ರಾಮ ಪಂಚಾಯ್ತಿ ಸದಸ್ಯನ ಮಗನು ದೌರ್ಜನ್ಯವೆಸಗಿ ವೃದ್ಧೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಹೊಸೂರು ಕಲ್ಲಹಳ್ಳಿಯಲ್ಲಿ ನಡೆದಿದೆ.
ಜಯಮ್ಮ (60) ಕೊಲೆಯಾದ ವೃದ್ಧೆ. ಗ್ರಾಮ ಪಂಚಾಯತಿ ಸದಸ್ಯ ಮಹಾಲಿಂಗನ ಪುತ್ರ ವಿಶ್ವಕುಮಾರ್ ಮೇಲೆ ಕೊಲೆಗೈದ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಮುಸ್ಲಿಮರ ಎಲ್ಲಾ ಚಿಹ್ನೆಗಳನ್ನು ನಾಶ ಮಾಡ್ತಿದೆ ಬಿಜೆಪಿ: ಹಿಜಬ್ ಕುರಿತು ಮುಫ್ತಿ ಪ್ರತಿಕ್ರಿಯೆ

ಮಳೆಯಿಂದಾಗಿ ಜಯಮ್ಮನ ಮನೆ ಕುಸಿದಿತ್ತು. ವಾಸಕ್ಕೆ ಜಾಗವಿಲ್ಲದ ಕಾರಣ ಅವರ ಕುಟುಂಬವು ಸಮುದಾಯ ಭವನಕ್ಕೆ ಶೀಫ್ಟ್ ಆಗಿದ್ದರು. ಈ ವೇಳೆ ಆರೋಪಿಯು ಸಮುದಾಯ ಭವನ ಖಾಲಿ ಮಾಡುವಂತೆ ಧಮ್ಕಿ ಹಾಕಿದ್ದಲ್ಲದೇ ಏಕಾಏಕಿ ಅವರ ಮನೆಗೆ ನುಗ್ಗಿ ಗಲಾಟೆ ಮಾಡಿದ ಅವನು ವೃದ್ಧೆಯ ತಲೆಯನ್ನು ಗೋಡೆಗೆ ಗುದ್ದಿದ್ದಾನೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಹೆಲ್ಮೆಟ್ ಹಾಕಿದ್ರೆ ಸೇಫ್ಟಿ ಅಲ್ವಾ ಅದ್ಕೆ ಹಿಜಬ್ ಹಾಕಿದ್ರೆ ಸೇಫ್ಟಿ ಅಂದಿದ್ದು: ಜಮೀರ್ ಸಮರ್ಥನೆ
ಗಾಯಗೊಂಡಿದ್ದ ಜಯಮ್ಮ ಚಿಕಿತ್ಸೆ ಫಲಿಸದೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಸಾವನ್ನಪಿದ್ದಾರೆ. ಘಟನೆ ಕುರಿತು ಕೆ.ಆರ್ ನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





ಶಿವಗಂಗಮ್ಮ ಅಜ್ಜಿ ತವರು ಮನೆಗೆ ಬಂದಿದ್ದರು. ಈ ವೇಳೆ ಮನೆಯ ಕಟ್ಟೆಯ ಮೇಲೆ ಕುಳಿತಾಗ ಮನೆಯ ಮೇಲ್ಛಾವಣಿ ಕುಸಿದು ಈ ದುರ್ಘಟನೆ ಸಂಭವಿಸಿದೆ. ವೃದ್ಧೆಯನ್ನು ಮೊದಲು ಗುತ್ತಲದ ಆಸ್ಪತ್ರೆಗೆ ಕರೆದೊಯ್ದು ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ರಾಣೇಬೆನ್ನೂರಿನ ನಂದಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.




