Tag: ವೃದ್ಧ ದಂಪತಿ

  • ಕೈಯಲಿದ್ದ ವೃದ್ಧ ದಂಪತಿಯ ಮೊಬೈಲ್ ಕ್ಷಣಾರ್ಧದಲ್ಲಿ ಮಾಯ

    ಕೈಯಲಿದ್ದ ವೃದ್ಧ ದಂಪತಿಯ ಮೊಬೈಲ್ ಕ್ಷಣಾರ್ಧದಲ್ಲಿ ಮಾಯ

    ಬೆಂಗಳೂರು: ಸಿಲಿಕಾನ್‍ನಲ್ಲಿ ಮೊಬೈಲ್ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಜೇಬಲ್ಲಿ ಇದ್ದರೂ ಎಗರಿಸುತ್ತಾರೆ. ಕೈಯಲ್ಲಿ ಇದ್ದರೂ ಕಿತ್ಕೊಂಡು ಹೋಗುತ್ತಾರೆ. ಆದರೆ ಈಗ ಮಾತನಾಡಿಕೊಂಡು ಹೋಗುವಾಗ ಮೊಬೈಲ್ ಕಿತ್ಕೊಂಡು ಹೋಗಿದ್ದಾರೆ.

    ಹೌದು ಬೆಂಗಳೂರಿನ ವಿವೇಕನಗರದಲ್ಲಿ ವೃದ್ಧ ದಂಪತಿ ಫೋನ್ ಅಲ್ಲಿ ಮಾತನಾಡಿಕೊಂಡು ಹೋಗುವಾಗ ಇಬ್ಬರು ದುಷ್ಕರ್ಮಿಗಳು ಬೈಕ್ ನಲ್ಲಿ ಬಂದಿದ್ದಾರೆ. ಸುತ್ತ ಮುತ್ತ ಖಾಲಿ ಇರೋದನ್ನು ನೋಡಿದ ದುಷ್ಕರ್ಮಿಗಳು ಕಣ್ಣು ಮುಚ್ಚಿ ಬಿಡೋ ಹೊತ್ತಿಗೆ ಮೊಬೈಲ್ ಕಿತ್ಕೊಂಡು ಪರಾರಿಯಾಗಿದ್ದಾರೆ.

    ವಿವೇಕ್ ನಗರ ಒಂದರಲ್ಲೇ ಈ ರೀತಿ ಸಾಕಷ್ಟು ಪ್ರಕರಣಗಳು ನಡೆದಿವೆ. ಸಾಕಷ್ಟು ದಿನದಿಂದಲೂ ಇದೇ ರೀತಿ ಮೊಬೈಲ್ ಕಳವು ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಸದ್ಯ ಮೊಬೈಲ್ ಕದ್ದುಕೊಂಡು ಹೋಗುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

    ಈ ಸಂಬಂಧ ವಿವೇಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸಾವಿನಲ್ಲೂ ಒಂದಾದ ಆದರ್ಶ ವೃದ್ಧ ದಂಪತಿ

    ಸಾವಿನಲ್ಲೂ ಒಂದಾದ ಆದರ್ಶ ವೃದ್ಧ ದಂಪತಿ

    ಕೋಲಾರ: 60 ವರ್ಷ ಜೊತೆಯಾಗಿ ಬಾಳಿ ಬದುಕಿದ ಆದರ್ಶ ವೃದ್ಧ ದಂಪತಿ ಈಗ ಸಾವಿನಲ್ಲೂ ಒಂದಾಗಿದ್ದಾರೆ.

    ಚಿನ್ನದನಾಡು ಕೋಲಾರದ ಪಿಸಿ ಬಡವಾಣೆಯ ನಿವಾಸಿಗಳಾದ 80 ವರ್ಷದ ಕೃಷ್ಣಪ್ಪ ಹಾಗೂ ಪತ್ನಿ 70 ವರ್ಷದ ಜಯಮ್ಮ 60 ವರ್ಷಗಳ ಹಿಂದೆ ಮದುವೆಯಾಗಿ ಅನ್ಯೋನ್ಯವಾಗಿ ತುಂಬು ಸಂಸಾರ ನಡೆಸಿದ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.

    ಕೃಷಿಕ ವಂಶವಾಗಿರುವ ಕೃಷ್ಣಪ್ಪ ಹಾಗೂ ಭಾಗ್ಯಮ್ಮ ದಂಪತಿ ತಮ್ಮ ಆರು ಜನ ಮಕ್ಕಳಲ್ಲಿ ಮೂರು ಗಂಡು, ಮೂರು ಹೆಣ್ಣು ಮಕ್ಕಳನ್ನು ಒಳ್ಳೆಯ ಸ್ಥಾನ ಮಾನಕ್ಕೆ ಬೆಳೆಸಿ, ಎಲ್ಲರಿಗೂ ಮದುವೆ ಮಾಡಿ ಮೊಮ್ಮಕ್ಕಳನ್ನು ಕಂಡಿದ್ದಾರೆ. ಕೊನೆ ಮಗ ಗಣೇಶ್ ಮನೆಯಲ್ಲಿ ವಾಸವಾಗಿದ್ದ ಇವರಿಬ್ಬರಿಗೆ ಕಳೆದ ಹಲವು ವರ್ಷಗಳಿಂದ ವಯೋಸಹಜ ಕಾಯಿಲೆಗಳು ಕಾಣಿಸಿಕೊಂಡಿತ್ತು.

    ಸಕ್ಕರೆ ಖಾಯಿಲೆಯಿಂದ ಕೃಷ್ಣಪ್ಪ ಬಳಲುತ್ತಿದ್ರೆ, ಪತ್ನಿ ಭಾಗ್ಯಮ್ಮ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಸೋಮವಾರ ಬೆಳಗ್ಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಇವರಿಬ್ಬರು ಒಟ್ಟಾಗಿ ಕೊನೆಯುಸಿರು ಎಳೆದಿದ್ದು, ಮಕ್ಕಳು, ಮೊಮ್ಮಕಳು ಹಾಗೂ ಸೊಸೆಯಂದಿರಿಗೆ ಅಚ್ಚರಿ ಮೂಡಿಸಿದೆ. ರಾತ್ರಿ ಊಟ ಮಾಡಿ ಮಲಗಿದ್ದ ಮೃತ ಕೃಷ್ಣಪ್ಪ ಜೋರಾಗಿ ಗೊರಕೆ ಹೊಡೆಯುತ್ತಿರುವ ಶಬ್ಧ ಕೇಳಿ ಮಗ ಗಣೇಶ್ ಮಧ್ಯರಾತ್ರಿ ತಂದೆಯ ಆರೋಗ್ಯ ವಿಚಾರಿಸಿಕೊಂಡು ಮಲಗಿದ್ದಾರೆ.

    ಸಂಜೆಯೇ ಗಣೇಶ್ ಕೋಲಾರದ ಬೇತಮಂಗಲದಲ್ಲಿರುವ ಅಕ್ಕ ಶೋಭಾಗೆ ಕರೆ ಮಾಡಿ ತಾಯಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಸಿದೆ. ಬೆಳಗ್ಗೆ 6 ಗಂಟೆಗೆ ಬಾ ಬೆಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡೋಣ ಎಂದು ತಿಳಿಸಿದ್ದಾರೆ. ಅದರಂತೆ ಬೆಳಗ್ಗೆ ತಾಯಿಗೆ ಸ್ನಾನ ಮಾಡಿಸಿ ಬೇಗ ರೆಡಿ ಆಗೋಣ ಎಂದು ತನ್ನ ತಾಯಿ ಮಲಗಿದ್ದ ಕೊಠಡಿಗೆ ಮಗ ಗಣೇಶ್ ಹಾಗೂ ಸೊಸೆ ಹೋಗಿ ನೋಡಿದಾಗ ಭಾಗ್ಯಮ್ಮ ಕೂಡ ಉಸಿರಾಟ ನಿಲ್ಲಿಸಿದ್ದಾರೆ.

    ಕೂಡಲೇ ಈ ವಿಚಾರವನ್ನು ತಂದೆ ಕೃಷ್ಣಪ್ಪ ಅವರಿಗೆ ತಿಳಿಸಲು ಮತ್ತೊಂದು ಕೊಠಡಿಗೆ ಹೋದಾಗ ಅಲ್ಲಿಯೂ ತಂದೆ ಮೃತಪಟ್ಟಿರೋದು ತಿಳಿದಿದೆ. ಒಂದೂ ಕ್ಷಣ ನಂಬಲೂ ಅಸಾಧ್ಯವಾದರೂ, ವೃದ್ಧ ದಂಪತಿ ಒಂದೇ ರಾತ್ರಿಯಲ್ಲಿ ಹೀಗೆ ಆಗಿದ್ದು ಅಚ್ಚರಿಯೇ ಸರಿ. ಕೂಡಲೇ ಮಕ್ಕಳು, ಮೊಮ್ಮಕ್ಕಳು ಹಾಗೂ ಸೊಸೆಯಂದಿರಿಗೆ ವಿಷಯ ಮುಟ್ಟಿಸಿದ್ದಾರೆ. ಈ ಅಪರೂಪದ ಜೋಡಿಗಳ ಅಂತಿಮ ದರ್ಶನ ಮಾಡಲು ದಂಪತಿ ಸಮೇತ ಬಂದ ಕೆಲವರು ಪೂಜೆ ಸಲ್ಲಿಸಿ ಅಚ್ಚರಿ ವ್ಯಕ್ತಪಡಿಸಿದರು.

  • ಸಿಡಿಲು ಬಡಿದು ಮನೆ ಕಳೆದುಕೊಂಡ ವೃದ್ಧ ದಂಪತಿ

    ಸಿಡಿಲು ಬಡಿದು ಮನೆ ಕಳೆದುಕೊಂಡ ವೃದ್ಧ ದಂಪತಿ

    -ಬಿದ್ದೋದ ಮನೆಯಲ್ಲಿ 5 ತಿಂಗಳಿನಿಂದ ವಾಸ

    ದಾವಣಗೆರೆ: ಸಿಡಿಲು ಬಡಿದು ಮನೆಯನ್ನು ಕಳೆದುಕೊಂಡ ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಬಡ ಕುಟುಂಬವೊಂದು ಬೀದಿಯಲ್ಲಿ ಜೀವನ ಮಾಡುವ ಪರಿಸ್ಥಿತಿ ಎದುರಾಗಿದೆ.

    ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂಗಾಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಳೆದ ಐದು ತಿಂಗಳ ಹಿಂದೆ ಕೂಲಿ ಕೆಲಸ ಮಾಡುತ್ತಿದ್ದ ಶಿವಪ್ಪ ಎನ್ನುವರ ಮನೆಗೆ ಸಿಡಿಲು ಬಡಿದಿತ್ತು. ಈ ಸಂದರ್ಭದಲ್ಲಿ ಮನೆಯಲ್ಲಿದ್ದ ಚಿನ್ನಾಭರಣ, ಹಣ ಹಾಗೂ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು. ಇಡೀ ಕುಟುಂಬವೇ ಬೀದಿಗೆ ಬಿದ್ದಂತಾಯಿತು.

    ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಕೇವಲ ಐದು ಸಾವಿರ ರೂ. ನೀಡಿ ಕೈ ತೊಳೆದುಕೊಂಡಿದ್ದಾರೆ. ಉಟ್ಟಬಟ್ಟೆಯಲ್ಲಿ ಮನೆಯಿಂದ ಬಂದು ಜೀವ ಉಳಿಸಿಕೊಂಡ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಸಿಗದೇ ಬೀದಿಗೆ ಬಿದ್ದಿದ್ದಾರೆ. ಮಾಯಕೊಂಡ ಕ್ಷೇತ್ರದ ಶಾಸಕ ಪ್ರೋ. ಲಿಂಗಣ್ಣನವರ ಮನೆ ಬಾಗಿಲು ಕಾದರೂ ಕೂಡ ಶಾಸಕರಿಗೆ ಬಡ ಕುಟುಂಬದ ಮೇಲೆ ಕರುಣೆ ಎನ್ನುವುದೇ ಬಂದಿಲ್ಲ.

    ಕಳೆದ ಐದು ತಿಂಗಳಿಂದ ಯಾವುದೋ ಬಿದ್ದೋದ ಮನೆಯಲ್ಲಿ ವೃದ್ಧ ದಂಪತಿ ಜೀವನ ನಡೆಸುತ್ತಿದ್ದು, ಸರ್ಕಾರ ಮಾತ್ರ ಇವರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ತುತ್ತು ಅನ್ನಕ್ಕಾಗಿ ಪರದಾಡುತ್ತಿರುವ ವೃದ್ಧ ದಂಪತಿ ನಮಗೆ ವಿಷವಾದರೂ ಕೊಡಿ ಎಂದು ಅಂಗಲಾಚುತ್ತಿದ್ದಾರೆ. ಅಲ್ಲದೆ ಸಿಡಿಲು ಬಡಿದ ರಭಸಕ್ಕೆ ಶಿವಪ್ಪನ ಪತ್ನಿ ಕರಿಯಮ್ಮನಿಗೆ ತಲೆಗೆ ಪೆಟ್ಟು ಬಿದ್ದಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದಾರೆ.

  • ವೃದ್ಧ ದಂಪತಿ ಮುಂದೆ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದ ಮಹಾನುಭಾವ

    ವೃದ್ಧ ದಂಪತಿ ಮುಂದೆ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದ ಮಹಾನುಭಾವ

    ಬೆಂಗಳೂರು: ಮಗನ ರ‍್ಯಾಶ್ ಡ್ರೈವಿಂಗ್ ಫೋಟೋ ತೆಗೆದಿದ್ದಕ್ಕೆ ಪತ್ನಿ ಪೊರಕೆ ಹಿಡಿದು ರೋಡಿನಲ್ಲಿ ನಿಂತರೆ, ಇತ್ತ ಪತಿ ಫೋಟೋಶೂಟ್ ಮಾಡಿಕೋ ಎಂದು ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಕ್ಷುಲ್ಲಕ ಕಾರಣಕ್ಕೆ ವೃದ್ಧ ದಂಪತಿ ಮೇಲೆ ಪತ್ನಿ ಪೊರಕೆಯಲ್ಲಿ ಹಲ್ಲೆ ಮಾಡಲು ಮುಂದಾಗಿದ್ದು, ಪತಿ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದಿದ್ದಾನೆ. ವೃದ್ಧ ದಂಪತಿ ಮೇಲಾಗಿರುವ ದೌರ್ಜನ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು, ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ವೃದ್ಧ ದಂಪತಿ ಆಗಿರುವ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಬೆನೆಟ್ ಮತ್ತು ಸುಶೀಲಾ ಅರಕೆರೆಯ ಸರಸ್ವತಿ ಪುರಂನಲ್ಲಿ ವಾಸವಾಗಿದ್ದಾರೆ. ಪಕ್ಕದ ಮನೆಯ ಮಹೇಂದ್ರ ಕಶ್ಯಪ್ ಹಾಗೂ ಭಾಗ್ಯ ದಂಪತಿ ಮಗ ಮೈನರ್ ಆಗಿದ್ದು, ನಿತ್ಯ ಮನೆ ಮುಂದೆ ರ‍್ಯಾಶ್ ಡ್ರೈವಿಂಗ್ ಮಾಡುತ್ತಿರುತ್ತಾನೆ. ಯುವಕನಿಗೆ ಬುದ್ಧಿವಾದ ಹೇಳಿದರೂ ಕಿವಿಗೆ ಹಾಕಿಕೊಳ್ಳದಕ್ಕೆ ಬೆನೆಟ್ ಫೋಟೋ ತೆಗೆದುಕೊಂಡಿದ್ದಾರೆ.

    ಮಗನ ಫೋಟೋ ತೆಗೆದ ಕಾರಣಕ್ಕೆ ನಮ್ಮ ಮೇಲೆ ಮಹೇಂದ್ರ ಕಶ್ಯಾಪ್ ದಂಪತಿ ಪೋರಕೆ ಹಾಗೂ ದೊಣ್ಣೆಗಳಿಂದ ಹಲ್ಲೆಗೆ ಮುಂದಾಗಿದಲ್ಲದೇ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದ್ದಾರೆ ಎಂದು ಬೆನೆಟ್ ಆರೋಪಿಸಿದ್ದಾರೆ.

    ಬೆನೆಟ್ ತಮ್ಮ ಮೇಲಾದ ದೌರ್ಜನ್ಯದ ಸಿಸಿಟಿವಿ ದೃಶ್ಯಗಳಿಡಿದು ಹುಳಿಮಾವು ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದಾರೆ. ಆದರೆ ಪೊಲೀಸರು ಮಾತ್ರ ದೂರು ದಾಖಲಿಸಿಕೊಂಡಿಲ್ಲ. ಹುಳಿಮಾವು ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎನ್ನುವ ಕಾರಣಕ್ಕೆ ವೃದ್ಧ ದಂಪತಿ ಕಮಿಷನರ್ ಕಚೇರಿಗೆ ಬಂದಿದ್ದಾರೆ. ಕಮಿಷನರ್ ಕಚೇರಿಯಲ್ಲೂ ಸಮರ್ಪಕವಾಗಿ ಉತ್ತರ ಸಿಕ್ಕಿದೇ ಇರುವುದರಿಂದ ವೃದ್ಧ ದಂಪತಿ ನ್ಯಾಯಕ್ಕಾಗಿ ಅಲೆದಾಡುವಂತಾಗಿದೆ.

     

  • ನೆರೆಯಿಂದ ಸೂರು ಕಳೆದುಕೊಂಡ ವೃದ್ಧ ದಂಪತಿಗೆ ಯುವಾ ಬ್ರಿಗೇಡಿನಿಂದ ಮನೆ ಹಸ್ತಾಂತರ

    ನೆರೆಯಿಂದ ಸೂರು ಕಳೆದುಕೊಂಡ ವೃದ್ಧ ದಂಪತಿಗೆ ಯುವಾ ಬ್ರಿಗೇಡಿನಿಂದ ಮನೆ ಹಸ್ತಾಂತರ

    – ದೀಪ ಹಚ್ಚಿ ಮನೆ ಹಸ್ತಂತರಿಸಿದ ಚಕ್ರವರ್ತಿ ಸೂಲಿಬೆಲೆ
    – 1.25 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ

    ಶಿವಮೊಗ್ಗ: ಪ್ರವಾಹದಲ್ಲಿ ಮನೆ ಕಳೆದುಕೊಂಡಿದ್ದ ಅಜ್ಜ-ಅಜ್ಜಿಗೆ ಶಿವಮೊಗ್ಗದ ಯುವಾ ಬ್ರಿಗೇಡ್ ಸಂಘಟನೆ ತಂಡ ಮತ್ತು ನಿವೇದಿತಾ ಪ್ರತಿಷ್ಠಾನ ತಂಡ ಮನೆಯನ್ನು ನಿರ್ಮಿಸಿಕೊಟ್ಟಿದ್ದು ಇಂದು ಮನೆಯ ಗೃಹ ಪ್ರವೇಶ ಸಮಾರಂಭ ನಡೆಯಿತು.

    ರಾಜ್ಯದಲ್ಲಿ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಕಂಡು ಕೇಳರಿಯದ ಭೀಕರ ಪ್ರವಾಹ ಬಂದು ಸಾಕಷ್ಟು ಹಾನಿ ಮಾಡಿತ್ತು. ಮಳೆ ಹೆಚ್ಚಾದ ಕಾರಣ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿಯೂ ಕೂಡ ತುಂಗಾ ನದಿ ಉಕ್ಕಿ ಹರಿದು, ರಾಜಕಾಲುವೆಗಳ ಮೂಲಕ ಅದೆಷ್ಟೋ ಬಡಾವಣೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾ ಬಡಾವಣೆಯ ನಿವಾಸಿ ವೃದ್ಧ ದಂಪತಿ ಮುನಿಯಪ್ಪ ಹಾಗೂ ನರಸಮ್ಮ ಕೂಡ ನೆರೆ ಅವಘಡಕ್ಕೆ ಮನೆ ಕಳೆದುಕೊಂಡು ಅಕ್ಷರಶಃ ಬೀದಿಗೆ ಬಿದ್ದಿದ್ದರು.

    ಈ ವೇಳೆ ಯುವಾ ಬ್ರಿಗೇಡ್ ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನ ತಂಡದ ಸದಸ್ಯರು ಈ ಅಜ್ಜ-ಅಜ್ಜಿಯ ನೆರವಿಗೆ ಧಾವಿಸಿದ್ದು, ಗುಡಿಸಲು ಬಿದ್ದು ಜೀವನವೇ ಹೋಯ್ತು ಎಂದುಕೊಂಡಿದ್ದ ವೃದ್ಧ ದಂಪತಿಗೆ ಆಸರೆಯಾಗಿ ‘ನಮ್ಮನೆ’ ಹೆಸರಿನಲ್ಲಿ ಮನೆ ನಿರ್ಮಿಸಿಕೊಟ್ಟಿದ್ದಾರೆ. ಸುಮಾರು 1.25 ಲಕ್ಷ ರೂ. ವೆಚ್ಚದಲ್ಲಿ ಯಾವುದಕ್ಕೂ ಕೊರತೆಯಾಗದಂತೆ, ಅಚ್ಚುಕಟ್ಟಾಗಿ ಮನೆ ನಿರ್ಮಿಸಿಕೊಟ್ಟು ಸಾರ್ಥಕತೆ ಮೆರೆದಿದ್ದಾರೆ. ಈ ಮನೆಯ ಗೃಹಪ್ರವೇಶಕ್ಕೆ ಇಂದು ಯುವಾ ಬ್ರಿಗೇಡ್ ಸಂಘಟನೆಯ ಸಂಚಾಲಕ ಚಕ್ರವರ್ತಿ ಸೂಲಿಬೆಲೆ ಆಗಮಿಸಿ ದೀಪ ಹಚ್ಚಿ ಮನೆಯನ್ನು ಹಸ್ತಾಂತರಿಸಿದ್ದಾರೆ.

    ಕಳೆದೆರೆಡು ತಿಂಗಳಿನಿಂದ ಮಳೆಗೆ ಬಿದ್ದಿದ್ದ ಗುಡಿಸಲು ಮುಂಭಾಗದಲ್ಲೇ ಇರುವ ದೇವಾಲಯದಲ್ಲಿ ಈ ವೃದ್ಧ ದಂಪತಿ ವಾಸವಾಗಿದ್ದು, ಅಲ್ಲಿಯೇ ಜೀವನದ ಬಂಡಿ ಸಾಗಿಸುತ್ತಿದ್ದರು.

    ಈ ವೇಳೆ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಅವರು, ಯುವಾ ಬ್ರಿಗೇಡ್ ಸಂಘಟನೆ ತಂಡ ಮತ್ತು ನಿವೇದಿತಾ ಪ್ರತಿಷ್ಠಾನ ತಂಡದ ನೆರೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನರಿಗೆ ಸಹಾಯ ಮಾಡಲು ತೀರ್ಮಾನ ಮಾಡಿದ್ದೆವು. ಮಹಾ ಪ್ರವಾಹ-ಯುವ ಸಹಾಯ ಎಂಬ ಯೋಜನೆಯಡಿಯಲ್ಲಿ ಈ ರೀತಿ ಹಲವಾರು ಜನರಿಗೆ ಇವರು ತಮ್ಮ ಯುವ ಬ್ರಿಗೇಡ್ ತಂಡದ ಮೂಲಕ ಸ್ಪಂದಿಸಲಾಗುತ್ತಿದೆ. ಇವರ ಯೋಜನೆಯಂತೆ ಆಯ್ದ ಕುಟುಂಬಗಳಿಗೆ ಪ್ರತಿ ತಿಂಗಳು 10 ಸಾವಿರ ರೂ. ಸಹಾಯ ಮಾಡುತ್ತಿದ್ದು, ರಾಜ್ಯದಲ್ಲಿ ಕಷ್ಟದಲ್ಲಿರುವ ಸೂರು ಕಳೆದುಕೊಂಡಿರುವ ಆಯ್ದ ಕುಟುಂಬಕ್ಕೆ ಸೂರು ಒದಗಿಸುವ ಕೆಲಸ ಕೂಡ ಮಾಡುತ್ತಿದ್ದೇವೆ. ಅದರಂತೆ ಇದೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಮನೆ ನಿರ್ಮಿಸಿಕೊಟ್ಟಿದ್ದು ಶಿವಮೊಗ್ಗದ ಮುನಿಯಪ್ಪ ಮತ್ತು ನರಸಮ್ಮ ದಂಪತಿಗೆ ಇಂದು ಸೂರನ್ನು ಹಸ್ತಾಂತರಿಸಿದ್ದೇವೆ ಎಂದು ತಿಳಿಸಿದರು.

    ವಿದ್ಯುತ್ ಸಂಪರ್ಕ ಕೂಡ ಇಲ್ಲದ ಗುಡಿಸಲಲ್ಲಿ ವಾಸವಾಗಿ ಅದನ್ನೂ ನೆರೆಯಿಂದ ಕಳೆದುಕೊಂಡಿದ್ದ ಅಜ್ಜ-ಅಜ್ಜಿಯ ನೂತನ ಮನೆಗೆ ವಿದ್ಯುತ್ ಸಂಪರ್ಕವನ್ನ ಕೂಡ ಕೊಡಿಸಲಾಗಿದೆ. ನಗರದ ಯುವಾ ಬ್ರಿಗೇಡ್ ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನ ತಂಡದ ಸದಸ್ಯರ ಆಸಕ್ತಿಯಿಂದಾಗಿ ಇದೀಗ ತಮ್ಮ ಬಾಳ ಪಯಣದ ಇಳಿ ಸಂಜೆಯಲ್ಲಿರುವ ವೃದ್ಧ ದಂಪತಿ ಬೆಳಕು ಕಾಣುವಂತಾಗಿದೆ.

  • ನೆರೆಯಿಂದ ಸೂರು ಕಳೆದುಕೊಂಡಿದ್ದ ಅಜ್ಜ, ಅಜ್ಜಿಗೆ ಮನೆ ನಿರ್ಮಿಸಿ ಆಸರೆಯಾದ ಯುವಾ ಬ್ರಿಗೇಡ್

    ನೆರೆಯಿಂದ ಸೂರು ಕಳೆದುಕೊಂಡಿದ್ದ ಅಜ್ಜ, ಅಜ್ಜಿಗೆ ಮನೆ ನಿರ್ಮಿಸಿ ಆಸರೆಯಾದ ಯುವಾ ಬ್ರಿಗೇಡ್

    – ಸಂಪೂರ್ಣ ನೆಲಸಮವಾಗಿತ್ತು ಗುಡಿಸಲು
    – ನ. 15 ರಂದು ಮನೆಯ ಗೃಹಪ್ರವೇಶ
    – ಚಕ್ರವರ್ತಿ ಸೂಲಿಬೆಲೆಯವರಿಂದ ಕೀ ಹಸ್ತಾಂತರ

    ಶಿವಮೊಗ್ಗ: ರಾಜ್ಯ ಸರ್ಕಾರ ನೆರೆ ಸಂತ್ರಸ್ತರಿಗೆ ಇನ್ನು ಸರಿಯಾಗಿ ಪರಿಹಾರದ ಹಣ ವಿತರಣೆ ಮಾಡಿಲ್ಲ. ಆದರೆ ಶಿವಮೊಗ್ಗದಲ್ಲಿ ನೆರೆ ಸಂತ್ರಸ್ತ ವೃದ್ಧ ದಂಪತಿಗೆ ಯುವಾ ಬ್ರಿಗೇಡ್ ಸದಸ್ಯರು ಮನೆ ನಿರ್ಮಿಸಿಕೊಟ್ಟಿದ್ದಾರೆ.

    ರಾಜ್ಯದಲ್ಲಿ ಕಳೆದ ಎರಡು ತಿಂಗಳ ಹಿಂದಷ್ಟೇ ಕಂಡು ಕೇಳರಿಯದ ಭೀಕರ ಪ್ರವಾಹ ಬಂದು ಸಾಕಷ್ಟು ಹಾನಿ ಮಾಡಿತ್ತು. ಮಳೆ ಹೆಚ್ಚಾದ ಕಾರಣ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿಯೂ ಕೂಡ ತುಂಗಾ ನದಿ ಉಕ್ಕಿ ಹರಿದು, ರಾಜಕಾಲುವೆಗಳ ಮೂಲಕ ಅದೆಷ್ಟೋ ಬಡಾವಣೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಈ ಪ್ರವಾಹದಲ್ಲಿ ನೂರಾರು ಮನೆಗಳು ನೆಲಕಚ್ಚಿದ್ದವು. ನೆರೆಯಿಂದ ನಲುಗಿದ ಜನರು ಅಕ್ಷರಶಃ ಬೀದಿಗೆ ಬಿದ್ದಿದ್ದರು. ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾ ಬಡಾವಣೆಯ ನಿವಾಸಿ ಮುನಿಯಪ್ಪ ಹಾಗೂ ನರಸಮ್ಮ ವೃದ್ಧ ದಂಪತಿ ಕೂಡ ನೆರೆ ಅವಘಡಕ್ಕೆ ಮನೆ ಕಳೆದುಕೊಂಡು ಅಕ್ಷರಶಃ ಬೀದಿಗೆ ಬಿದ್ದಿದ್ದರು. ಇದನ್ನೂ ಓದಿ:ಮಿಮ್ಸ್ ನೋಡಿ ಯುವ ಬ್ರಿಗೇಡ್‍ನಿಂದ ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯ

    ನೆರೆಗೆ ಅಜ್ಜ-ಅಜ್ಜಿಯ ಮನೆ ಸಂಪೂರ್ಣವಾಗಿ ನೆಲಸಮವಾಗಿತ್ತು. ಇದ್ದ ಒಂದು ಗುಡಿಸಲು ಕಳೆದುಕೊಂಡು ಪಡಬಾರದ ಕಷ್ಟ ಪಡುವಂತಾಗಿತ್ತು. ಇರುವ ಒಬ್ಬ ಮಗ ತನಗೂ ಇದಕ್ಕೂ ಸಂಬಂಧವಿಲ್ಲವೆಂಬಂತೆ ಇದ್ದುಬಿಟ್ಟಿದ್ದನು. ಇಂತಹ ಸಂದರ್ಭದಲ್ಲಿ ಶಿವಮೊಗ್ಗದ ಯುವಾ ಬ್ರಿಗೇಡ್ ಸಂಘಟನೆ ತಂಡ ಇವರ ನೆರವಿಗೆ ಧಾವಿಸಿತ್ತು. ಇದನ್ನೂ ಓದಿ:ಯುವ ಬ್ರಿಗೇಡ್‍ನಿಂದ ಕುಮಾರ ಸಂಸ್ಕಾರ – ಬೆಚ್ಚಿ ಬೀಳುವ ಮಟ್ಟದಲ್ಲಿ ತ್ಯಾಜ್ಯದ ರಾಶಿ ಪತ್ತೆ

    ಯುವಾ ಬ್ರಿಗೇಡ್ ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನ ತಂಡದ ಸದಸ್ಯರು ಈ ಅಜ್ಜ-ಅಜ್ಜಿಯ ನೆರವಿಗೆ ಧಾವಿಸಿದ್ದು, ಗುಡಿಸಲು ಬಿದ್ದು ಜೀವನವೇ ಹೋಯ್ತು ಎಂದುಕೊಂಡಿದ್ದ ವೃದ್ಧ ದಂಪತಿಗೆ ಆಸರೆಯಾಗಿ ಮನೆ ನಿರ್ಮಿಸಿಕೊಟ್ಟಿದ್ದಾರೆ. ಸುಮಾರು 1.25 ಲಕ್ಷ ರೂ. ವೆಚ್ಚದಲ್ಲಿ ಯಾವುದಕ್ಕೂ ಕೊರತೆಯಾಗದಂತೆ, ಅಚ್ಚುಕಟ್ಟಾಗಿ ಮನೆ ನಿರ್ಮಿಸಿಕೊಟ್ಟು ಸಾರ್ಥಕತೆ ಮೆರೆದಿದ್ದಾರೆ. ಸರ್ಕಾರದಿಂದ ಆಗದ ಕೆಲಸವನ್ನು ಯುವಾ ಬ್ರಿಗೇಡ್ ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನ ತಂಡದ ಸದಸ್ಯರು ಮಾಡಿ ತೋರಿಸಿದ್ದಾರೆ. ಮಹಾ ಪ್ರವಾಹ-ಯುವಾ ಸಹಾಯ ಯೋಜನೆಯನ್ನ ಹಾಕಿಕೊಂಡು ಸಹಾಯದ ಹಸ್ತ ಚಾಚಿದ್ದಾರೆ.

    ನೆರೆಯಿಂದ ಸಂತ್ರಸ್ತಗೊಂಡರಿಗೆ ಸರಿಯಾಗಿ ಪರಿಹಾರ ಇನ್ನೂ ವಿತರಣೆ ಆಗಿಲ್ಲ. ಹೀಗಿರುವಾಗ ಸಿ.ಎಂ ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲಿಯೇ ದಂಪತಿಗೆ ಮನೆ ಕಟ್ಟಿಸುವ ಮೂಲಕ ಯುವಾ ಬ್ರಿಗೇಡ್ ಮೆಚ್ಚುಗೆಗೆ ಪಾತ್ರವಾಗಿದೆ. ಇದನ್ನೂ ಓದಿ:ಪ್ರತಿನಿತ್ಯ 15 ನಿಮಿಷ ಫೋನಿನಲ್ಲಿ ಕನ್ನಡ ಕಲಿಯಿರಿ – ಯುವಾ ಬ್ರಿಗೇಡಿನಿಂದ ಕನ್ನಡ ಸುಗಂಧ

    ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಈ ರೀತಿಯ ಮನೆ ನಿರ್ಮಿಸಿಕೊಡಲು ಯುವಾ ಬ್ರಿಗೇಡ್ ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನ ತಂಡದ ಪ್ಲ್ಯಾನ್ ರೂಪಿಸಿಕೊಂಡಿದ್ದೇವೆ. ಈಗಾಗಲೇ ಇದಕ್ಕೆ ಪಟ್ಟಿಯೂ ಕೂಡ ಸಿದ್ಧಪಡಿಸಿಕೊಂಡಿದ್ದೇವೆ ಎಂದು ಸಂಚಾಲಕ ಹರ್ಷ ತಿಳಿಸಿದ್ದಾರೆ.

    ಕಳೆದೆರೆಡು ತಿಂಗಳಿನಿಂದ ಮಳೆಗೆ ಬಿದ್ದಿದ್ದ ಗುಡಿಸಲು ಮುಂಭಾಗದಲ್ಲೇ ಇರುವ ದೇವಾಲಯದಲ್ಲಿ ಈ ವೃದ್ಧ ದಂಪತಿ ವಾಸವಾಗಿದ್ದು, ಅಲ್ಲಿಯೇ ಜೀವನದ ಬಂಡಿ ಸಾಗಿಸುತ್ತಿದ್ದಾರೆ. ನವೆಂಬರ್ 15ರ ಶುಕ್ರವಾರದಂದು ಈ ಮನೆಯ ಗೃಹಪ್ರವೇಶ ನಡೆಸಲು ಯುವಾ ಬ್ರಿಗೇಡ್ ತಂಡದ ಸದಸ್ಯರು ಉತ್ಸುಕರಾಗಿದ್ದು, ಅಂದು ಇದಕ್ಕೆಲ್ಲಾ ಬೆನ್ನೆಲುಬಾಗಿರುವ ಹಾಗೂ ಈ ಯೋಜನೆಯ ಸೂತ್ರದಾರರಾಗಿರುವ ಚಕ್ರವರ್ತಿ ಸೂಲಿಬೆಲೆ ಅವರಿಂದ ನೂತನ ಮನೆಯ ಬೀಗದ ಕೈಯನ್ನು ವೃದ್ಧ ದಂಪತಿ ಹಸ್ತಾಂತರಿಸುವುದಾಗಿ ಸದಸ್ಯರು ಹೇಳಿದ್ದಾರೆ.

    ವಿದ್ಯುತ್ ಸಂಪರ್ಕ ಕೂಡ ಇಲ್ಲದ ಗುಡಿಸಲಲ್ಲಿ ವಾಸವಾಗಿ ಅದನ್ನೂ ನೆರೆಯಿಂದ ಕಳೆದುಕೊಂಡಿದ್ದ ಅಜ್ಜ-ಅಜ್ಜಿಯ ನೂತನ ಮನೆಗೆ ವಿದ್ಯುತ್ ಸಂಪರ್ಕವನ್ನ ಕೂಡ ಕೊಡಿಸಲಾಗಿದೆ. ನಗರದ ಯುವಾ ಬ್ರಿಗೇಡ್ ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನ ತಂಡದ ಸದಸ್ಯರ ಆಸಕ್ತಿಯಿಂದಾಗಿ ಇದೀಗ ತಮ್ಮ ಬಾಳ ಪಯಣದ ಇಳಿ ಸಂಜೆಯಲ್ಲಿರುವ ವೃದ್ಧ ದಂಪತಿ ಬೆಳಕು ಕಾಣುವಂತಾಗಿದೆ.

  • ಪತ್ನಿಗೆ ವಿಷ ಕುಡಿಸಿ ತಾನೂ ಆತ್ಮಹತ್ಯೆಗೆ ಶರಣಾದ ವೃದ್ಧ

    ಪತ್ನಿಗೆ ವಿಷ ಕುಡಿಸಿ ತಾನೂ ಆತ್ಮಹತ್ಯೆಗೆ ಶರಣಾದ ವೃದ್ಧ

    ಬೆಂಗಳೂರು: ವೃದ್ಧನೊಬ್ಬ ಪತ್ನಿಗೆ ವಿಷ ಕುಡಿಸಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಿರಿನಗರದಲ್ಲಿ ನಡೆದಿದೆ.

    ಗಿರಿನಗರದ ನಿವಾಸಿ ಕೃಷ್ಣಮೂರ್ತಿ ಹಾಗೂ ಸ್ವರ್ಣ ಮೃತ ದುರ್ದೈವಿಗಳು. ಕೃಷ್ಣಮೂರ್ತಿ ಅವರು ಮೊದಲು ಪತ್ನಿ ಸ್ವರ್ಣ ಅವರಿಗೆ ವಿಷ ಕುಡಿಸಿ ಕೊಲೆ ಮಾಡಿದ್ದಾರೆ. ಬಳಿಕ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಸ್ವರ್ಣ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹಾಸಿಗೆ ಹಿಡಿದ ಅವರನ್ನು ಆರೈಕೆ ಮಾಡಬೇಕಾದ ಮಗ ಹಾಗೂ ಸೊಸೆ ನಿಷ್ಕಾಳಜಿ ತೋರುತ್ತಿದ್ದರು. ಅಷ್ಟೇ ಅಲ್ಲದೆ ಸಣ್ಣಪುಟ್ಟ ವಿಚಾರಕ್ಕೂ ವೃದ್ಧ ದಂಪತಿಯ ಜೊತೆಗೆ ಜಳವಾಡುತ್ತಿದ್ದರು. ಇದರಿಂದ ಮನನೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಈ ಕುರಿತು ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ದರೋಡೆಕೋರರನ್ನು ಹಿಮ್ಮೆಟ್ಟಿಸಿದ ವೃದ್ಧ ದಂಪತಿಗೆ ಪುರಸ್ಕಾರ

    ದರೋಡೆಕೋರರನ್ನು ಹಿಮ್ಮೆಟ್ಟಿಸಿದ ವೃದ್ಧ ದಂಪತಿಗೆ ಪುರಸ್ಕಾರ

    ಚೆನ್ನೈ: ಕಳೆದ ಕೆಲ ದಿನಗಳ ಹಿಂದೆ ದರೋಡೆಕೋರರೊಂದಿಗೆ ಹೋರಾಡಿ ಜೀವ ಉಳಿಸಿಕೊಂಡಿದ್ದ ವೃದ್ಧ ದಂಪತಿಗೆ ತಮಿಳುನಾಡು ರಾಜ್ಯ ಸರ್ಕಾರ ಸಹಾಸ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

    ತಮಿಳುನಾಡಿನ ತಿರುವನ್ವೇಲಿಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿತ್ತು. ವೃದ್ಧ ದಂಪತಿಗಳಾದ 75 ವರ್ಷದ ಶನ್ಮುಗವೆಲ್ ಹಾಗೂ ಪತ್ನಿ 68 ವರ್ಷದ ಸೆಂತಮರೈ ದರೋಡೆಕೋರರ ಜೊತೆ ಹೋರಾಡಿದರು. ಇಬ್ಬರು ದರೋಡೆಕೋರರೊಂದಿಗೆ ಹೋರಾಟ ಮಾಡುತ್ತಿರುವ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ದಂಪತಿಯ ಸಹಾಸಕ್ಕೆ ಭಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು.

    ವಿಡಿಯೋದಲ್ಲೇನಿದೆ..?
    ದಂಪತಿ ಭಾನುವಾರ ರಾತ್ರಿ ಊಟ ಮುಗಿಸಿದ್ದ ಕಡಾಯಮ್ ನ ತಮ್ಮ ಮನೆಯ ಹೊರಗಡೆ ಕುಳಿತುಕೊಂಡು ಮಾತನಾಡುತ್ತಿದ್ದರು. ಹೀಗೆ ಮಾತನಾಡುತ್ತಾ ಪತ್ನಿ ಎದ್ದು ಮನೆಯೊಳಗೆ ಹೋಗುತ್ತಾರೆ. ಪತಿ ಅಲ್ಲೇ ಕುಳಿತಿದ್ದು, ಅವರ ಹಿಂದಿನಿಂದ ಮುಖಕ್ಕೆ ಬಟ್ಟೆ ಮುಚ್ಚಿಕೊಂಡಿದ್ದ ವ್ಯಕ್ತಿಯೊಬ್ಬ ಬರುತ್ತಾನೆ. ಅಲ್ಲದೆ ಆತ ತನ್ನ ಕೈಯಲಿದ್ದ ಟವೆಲನ್ನು ಅಜ್ಜನ ಕುತ್ತಿಗೆಗೆ ಸುತ್ತಿ ಅಲ್ಲೇ ಕಂಬಕ್ಕೆ ಕಟ್ಟಿ ಹಾಕಲು ಪ್ರಯತ್ನಿಸಿದ್ದಾನೆ. ಈ ವೇಳೆ ಮತ್ತೊಬ್ಬ ಅಲ್ಲಿಗೆ ಆಗಮಿಸುತ್ತಾನೆ.

    ಇದರಿಂದ ಗಾಬರಿಗೊಂಡ ಶನ್ಮುಗವೆಲ್ ಜೋರಾಗಿ ಕಿರುಚಿಕೊಂಡಿದ್ದು, ಕೂಡಲೇ ಪತ್ನಿ ಮನೆಯೊಳಗಿಂದ ಓಡಿ ಬಂದಿದ್ದು, ಅಲ್ಲೇ ಇದ್ದ ಕುರ್ಚಿಯಿಂದ ಇಬ್ಬರೂ ದಾಳಿಕೋರರ ವಿರುದ್ಧ ಹೋರಾಡಿದ್ದರು. ದರೋಡೆಕೋರರಲ್ಲಿ ಕೈಯಲ್ಲಿ ಆಯುಧವಿದ್ದರು ಕೂಡ ದಾಳಿಕೋರರಿಂದ ವೃದ್ಧ ದಂಪತಿ ತಮ್ಮ ಧೈರ್ಯದಿಂದ ಪರಾಗಿದ್ದರು. ಇಬ್ಬರ ಧೈರ್ಯ ಕಂಡ ದರೋಡೆಕೋರರು ಏನೂ ಮಾಡಲಾಗದೆ ಸ್ಥಳದಿಂದ ಎಸ್ಕೇಪ್ ಆಗಿದ್ದರು.

    ಸಿಎಂ ಕೈಯಿಂದ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಶನ್ಮುಗವೆಲ್ ಅವರು, ರಾಜ್ಯ ಸರ್ಕಾರದಿಂದ ಪ್ರಶಸ್ತಿ ಪಡೆದಿರುವುದು ಹೆಮ್ಮೆ ಎನಿಸಿದೆ. ತಮ್ಮ ದೂರಿನ ಮೇರೆಗೆ ಬಹುಬೇಗ ಸಂಘಟನೆ ಬಗ್ಗೆ ಸ್ಪಂಧಿಸಿದ ಪೊಲೀಸರಿಗೆ ನಾವು ಧನ್ಯವಾದ ಹೇಳುತ್ತೇವೆ. ಇಂದಿನ ಯುವ ಸಮುದಾಯಕ್ಕೆ ನಾವು ಸ್ಫೂರ್ತಿಯಾಗಿ ನಿಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದರು.

  • ದರೋಡೆಕೋರರನ್ನು ಹಿಮ್ಮೆಟ್ಟಿಸಿದ ವೃದ್ಧ ದಂಪತಿಯ ವಿಡಿಯೋ ವೈರಲ್

    ದರೋಡೆಕೋರರನ್ನು ಹಿಮ್ಮೆಟ್ಟಿಸಿದ ವೃದ್ಧ ದಂಪತಿಯ ವಿಡಿಯೋ ವೈರಲ್

    ಚೆನ್ನೈ: ವೃದ್ಧ ದಂಪತಿ ದರೋಡೆಕೋರರೊಂದಿಗೆ ಹೋರಾಡಿದ ಸಾಹಸಮಯ ಘಟನೆಯೊಂದು ತಮಿಳುನಾಡಿನ ತಿರುವನ್ವೇಲಿಯಲ್ಲಿ ನಡೆದಿದೆ.

    ಈ ಘಟನೆ ಭಾನುವಾರ ರಾತ್ರಿ ನಡೆದಿದೆ. 75 ವರ್ಷದ ಶನ್ಮುಗವೆಲ್ ಹಾಗೂ ಪತ್ನಿ 68 ವರ್ಷದ ಸೆಂತಮರೈ ದರೋಡೆಕೋರರ ಜೊತೆ ಹೋರಾಡಿದ ವೃದ್ಧ ದಂಪತಿಯಾಗಿದ್ದಾರೆ. ಇವರು ಇಬ್ಬರು ದರೋಡೆಕೋರರೊಂದಿಗೆ ಹೋರಾಟ ಮಾಡುತ್ತಿರುವ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ದಂಪತಿಯ ಸಾಹಸದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ವಿಡಿಯೋದಲ್ಲೇನಿದೆ..?
    ದಂಪತಿ ಭಾನುವಾರ ರಾತ್ರಿ ಊಟ ಮುಗಿಸಿ ಕಡಾಯಮ್ ನ ತಮ್ಮ ಮನೆಯ ಹೊರಗಡೆ ಕುಳಿತುಕೊಂಡು ಮಾತನಾಡುತ್ತಿದ್ದರು. ಹೀಗೆ ಮಾತನಾಡುತ್ತಾ ಪತ್ನಿ ಎದ್ದು ಮನೆಯೊಳಗೆ ಹೋಗುತ್ತಾರೆ. ಪತಿ ಅಲ್ಲೇ ಕುಳಿತಿದ್ದು, ಅವರ ಹಿಂದಿನಿಂದ ಮುಖಕ್ಕೆ ಬಟ್ಟೆ ಮುಚ್ಚಿಕೊಂಡಿದ್ದ ವ್ಯಕ್ತಿಯೊಬ್ಬ ಬರುತ್ತಾನೆ. ಅಲ್ಲದೆ ಆತ ತನ್ನ ಕೈಯಲಿದ್ದ ಟವೆಲನ್ನು ಅಜ್ಜನ ಕುತ್ತಿಗೆಗೆ ಸುತ್ತಿ ಅಲ್ಲೇ ಕಂಬಕ್ಕೆ ಕಟ್ಟಿ ಹಾಕಲು ಪ್ರಯತ್ನಿಸಿದ್ದಾನೆ. ಈ ವೇಳೆ ಮತ್ತೊಬ್ಬ ಅಲ್ಲಿಗೆ ಆಗಮಿಸುತ್ತಾನೆ.

    ಇದರಿಂದ ಗಾಬರಿಗೊಂಡ ಶನ್ಮುಗವೆಲ್ ಜೋರಾಗಿ ಕಿರುಚಿಕೊಂಡಿದ್ದಾರೆ. ಕೂಡಲೇ ಪತ್ನಿ ಮನೆಯೊಳಗಿಂದ ಓಡಿ ಬಂದಿದ್ದು, ಅಲ್ಲೇ ಇದ್ದ ಕುರ್ಚಿಯಿಂದ ಇಬ್ಬರೂ ದಾಳಿಕೋರರ ವಿರುದ್ಧ ಹೋರಾಡಿದ್ದಾರೆ. ಈ ಮೂಲಕ ಅವರಿಂದ ಅಜ್ಜ ಬಚಾವ್ ಆಗಿದ್ದಾರೆ.

    ದರೋಡೆಕೋರರಲ್ಲಿ ಕೈಯಲ್ಲಿ ಆಯುಧವಿದ್ದು ವೃದ್ಧ ದಂಪತಿಯ ಕೊಲೆಗೆ ಯತ್ನಿಸಿದ್ದಾರೆ. ಆದರೆ ದಂಪತಿ ಅಲ್ಲೇ ಇದ್ದ ಕುರ್ಚಿಗಳಿಂದ ದರೋಡೆಕೋರರ ವಿರುದ್ಧ ಹೋರಾಟ ಮಾಡಿದ್ದಾರೆ. ಆದರೂ ಬಿಡದ ಖದೀಮರು ತಮ್ಮ ಕೈಯಲ್ಲಿದ್ದ ಆಯುಧಗಳಿಂದ ಎಲ್ಲೆಂದರಲ್ಲಿ ಕಡಿದಿದ್ದಾರೆ. ಪರಿಣಾಮ ವೃದ್ಧರು ಹೋರಾಡಿದ ಕುರ್ಚಿಯೆಲ್ಲ ಪೀಸ್ ಪೀಸ್ ಆಗಿದೆ.

    ಆ ಪೀಸ್ ನಿಂದಲೇ ದಂಪತಿ ಕೂಡ ಬಿಡದೇ ದರೋಡೆಕೋರರನ್ನು ಹಿಮ್ಮೆಟ್ಟಿಸಿದ್ದಾರೆ. ಬಳಿಕ ಏನೂ ಮಾಡಲು ಸಾಧ್ಯವಾಗದೇ ದರೋಡೆಕೋರರು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವೈರಲ್ ಆಗುತ್ತಿದ್ದು, ವೃದ್ಧ ದಂಪತಿಯ ಧೈರ್ಯವನ್ನು ಜನ ಕೊಂಡಾಡುತ್ತಿದ್ದಾರೆ.

  • ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹ ಪತ್ತೆ

    ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹ ಪತ್ತೆ

    ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ.

    ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ದಂಪತಿ ಸ್ಥಳೀಯರಿಗೆ ಕಾಣದ ಹಿನ್ನೆಲೆ ಅವರ ಮನೆ ಬಳಿ ನೆರೆಹೊರೆ ಮನೆಯವರು ಹೋಗಿ ನೋಡಿದಾಗ ಮೃತಪಟ್ಟಿರುವ ಬಗ್ಗೆ ತಿಳಿದಿದೆ. ಬಳಿಕ ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಸ್ಥಳಕ್ಕೆ ಬಂದ ಉಳ್ಳಾಲ ಠಾಣಾ ಪೊಲೀಸರು ಮನೆಯೊಳಗೆ ಹೋದಾಗ ದಂಪತಿ ಮೃತದೇಹಗಳು ಅರ್ಧ ಸುಟ್ಟು, ಕೊಳೆತು ಸ್ಥಿತಿಯಲ್ಲಿ ಪತ್ತೆಯಾಗಿದೆ.

    ವೃದ್ಧ ದಂಪತಿ ಹೇಗೆ ಸಾವನ್ನಪ್ಪಿರಬಹುದು ಎಂಬ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಇಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಜೊತೆಗೆ ಈ ನಿಗೂಢ ಸಾವಿನ ಸುತ್ತ ಹಲವು ಅನುಮಾನಗಳು ಕೂಡ ಹುಟ್ಟಿಕೊಂಡಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]