Tag: ವೃಷಭ

  • ವೃಷಭ ಟೈಟಲ್ ಸಮಸ್ಯೆ – ದಿಕ್ಕು ತೋಚದಂತೆ ಕೂತಿರುವ ಟೀಮ್

    ವೃಷಭ ಟೈಟಲ್ ಸಮಸ್ಯೆ – ದಿಕ್ಕು ತೋಚದಂತೆ ಕೂತಿರುವ ಟೀಮ್

    ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಬಂದ ಮೇಲೆ ಇತ್ತೀಚಿನ ದಿನಗಳಲ್ಲಿ ಒಂದೇ ಹೆಸರಿನಲ್ಲಿ ಎರಡು ಚಿತ್ರಗಳು ತೆರೆ ಕಾಣುತ್ತಿರುವುದು ಮೂಲ ಕನ್ನಡದಲ್ಲಿ ಮಾಡಿದ ಸಿನಿಮಾಗಳಿಗೆ ಸಮಸ್ಯೆಯಾಗುತ್ತಿದೆ. ಬೇರೆ ಭಾಷೆಯವರು ರಿಲೀಸ್ ಹಂತದಲ್ಲಿ ಡಬ್ಬಿಂಗ್ ವರ್ಷನ್‌ಗೆ ಟೈಟಲ್ ಕೊಟ್ಟು ಬಿಡುಗಡೆ ಮಾಡುತ್ತಾರೆ. ಅದೇ ರೀತಿ ಯುವ ನಿರ್ದೇಶಕ ಉಮೇಶ್ ಹೆಬ್ಬಾಳ ಅವರು ಕಳೆದ 2-3 ವರ್ಷಗಳಿಂದ ಹೆಚ್ಚಿನ ಶ್ರಮ ಹಾಕಿ, ಕಷ್ಟಪಟ್ಟು ವೃಷಭ (Vrishabha) ಎಂಬ ಚಿತ್ರವನ್ನು ಮಾಡಿದ್ದಾರೆ. ಉಮೇಶ್ ಹೆಬ್ಬಾಳ ಅವರೇ ನಾಯಕನಾಗಿ ನಟಿಸಿ ಬಿಗ್ ಬಜೆಟ್‌ನಲ್ಲಿ ಈ ಚಿತ್ರ ನಿರ್ಮಾಣ ಸಹ ಮಾಡಿದ್ದಾರೆ. ವೃಷಭ ಚಿತ್ರವೀಗ ಪೋಸ್ಟ್‌ ಪ್ರೊಡಕ್ಷನ್ ಕೊನೇ ಹಂತದಲ್ಲಿದ್ದು, ಸಧ್ಯದಲ್ಲೇ ರಿಲೀಸ್ ಮಾಡುವ ಯೋಚನೆಯಲ್ಲಿರೋವಾಗಲೇ, ಮೋಹನ್ ಲಾಲ್ ಅಭಿನಯದ, ನಂದಕಿಶೋರ್ ನಿರ್ದೇಶನದ ಮಲಯಾಳಂನ ಪ್ಯಾನ್ ಇಂಡಿಯಾ ಚಿತ್ರ ವೃಷಭ ಕೂಡ ನ.6ಕ್ಕೆ ರಿಲೀಸಾಗುತ್ತಿದೆ. ಕನ್ನಡದಲ್ಲೂ ಸಹ ಅದೇ ಹೆಸರಲ್ಲಿ ತೆರೆ ಕಾಣುತ್ತಿದೆ.

    ಈ ಟೈಟಲ್ ವಿವಾದದ ಬಗ್ಗೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಮೇಶ್, ವೃಷಭ ಚಿತ್ರ ನನ್ನ ಬಹುದಿನಗಳ ಕನಸು. ವರ್ಷದ ಹಿಂದೆ ಏಕ್ತಾ ಕಪೂರ್ ಸಂಸ್ಥೆಗೆ ಲೆಟರ್ ಬರೆದಾಗ ಟೈಟಲ್ ಕೊಡ್ತೀರಾ ಎಂದು ಕೇಳಿದ್ದರು. ಆನಂತರ ನಮ್ಮ ಸಂಪರ್ಕಕ್ಕೆ ಬರಲಿಲ್ಲ. ನಾವು ಕೆ.ಮಂಜು ಅವರ ಮೂಲಕ ನಂದಕಿಶೋರ್ ಸಂಪರ್ಕಿಸಿ ಕೇಳಿದಾಗ ಅವರು ಕನ್ನಡದಲ್ಲಿ ರಿಲೀಸ್ ಮಾಡುತ್ತಿಲ್ಲ ಎಂದಿದ್ದರು. ಹಾಗಾಗಿ, ಎಲ್ಲಾ ರೆಡಿ ಮಾಡಿಕೊಂಡು ರಿಲೀಸ್‌ಗೆ ಹೋಗಬೇಕೆಂದಾಗ ನಮಗೀಗ ಸಮಸ್ಯೆ ಎದುರಾಗಿದೆ. ಏಕ್ತಾ ಕಪೂರ್ ಅವರ ಸಂಸ್ಥೆ ನಮ್ಮ ಟೈಟಲ್ ಬಳಸಿಕೊಳ್ತಿದೆ. ಅದು ಸ್ಟಾರ್ ಸಿನಿಮಾ. ನ.6ಕ್ಕೆ ರಿಲೀಸಾಗುತ್ತಿದೆ. ಆಮೇಲೆ ನಾವು ಬಂದರೆ ಜನರಿಗೆ ಕನ್ಫ್ಯೂಸ್ ಆಗುತ್ತೆ. ಫಿಲಂ ಚೇಂಬರ್‌ನಲ್ಲಿ ಟೈಟಲ್ ರಿಜಿಸ್ಟರ್ ಮಾಡಿಸಿ, ರಿನೆವಲ್ ಕೂಡ ಮಾಡಿಸಿದ್ದೇವೆ. ಅವರು ಕನ್ನಡ ಟೈಟಲ್ ರಿಜಿಸ್ಟರ್ ಮಾಡಿಸದೇ ರಿಲೀಸ್ ಮಾಡಲು ಹೊರಟಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ಆ ಸಂಸ್ಥೆಯನ್ನು ಸಂಪರ್ಕಿಸಿ ಇತ್ಯರ್ಥ ಪಡಿಸುವ ಪ್ರಯತ್ನದಲ್ಲಿದೆ ಎಂದರು.

    ನಂತರ ವೃಷಭ ಬಗ್ಗೆ ಮಾತಾಡುತ್ತ ಗೂಳಿ ಥರದ ವ್ಯಕ್ತಿತ್ವ ಇರೋ ರೈತನೊಬ್ಬನ ಕಥೆ ನಮ್ಮ ಚಿತ್ರದಲ್ಲಿದೆ. ನಾನು ತೋರಿಸ್ತಿರೋ ರೈತನೇ ಬೇರೆ, ಕನ್ನಡ ಶಾಲೆಗಳನ್ನು ಉಳಿಸಲು ಏನು ಪರಿಹಾರವಿದೆ. ಹೀಗೆ ಸಾಕಷ್ಟು ವಿಷಯಗಳನ್ನು ಚಿತ್ರದಲ್ಲಿ ಹೇಳಿದ್ದೇವೆ. ವೃಷಭ ಟೈಟಲ್ ಮೇಲೆ ನಮ್ಮಿಡೀ ಚಿತ್ರ ನಿಂತಿದೆ. ಈಗ ನಂದ ಕಿಶೋರ್ ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡರು. ರೈತ ಎಂದರೆ ಬರೀ ಹೊಲದಲ್ಲಿ ಕೆಲಸ ಮಾಡುವವನಲ್ಲ. ಆತನನ್ನು ಕೆಣಕಿದರೆ ಸುಮ್ಮನಿರಲ್ಲ. ಆತನಿಗೂ ತಾಕತ್ತಿರುತ್ತೆ ಅಂತ ಹೇಳಲು ಹೊರಟಿದ್ದೇವೆ ಎಂದೂ ಮಾಹಿತಿ ನೀಡಿದರು.

    ರಾಯ ಬಡಿಗೇರ್ ಚಿತ್ರದ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿದ್ದಾರೆ. ಪ್ರಶಾಂತ್ ಸಾಗರ್ ಚಿತ್ರದ ಕ್ಯಾಮೆರಾ ವರ್ಕ್ ನಿಭಾಯಿಸಿದ್ದು, ಪ್ರಣವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಮಂಡ್ಯ ಸುತ್ತಮುತ್ತ 38 ದಿನ, ಬೆಂಗಳೂರಲ್ಲಿ ಎಂಟು ದಿನ ಸೇರಿ 46 ದಿನಗಳ ಕಾಲ ವೃಷಭ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

  • ವೃಷಭ ಟೀಸರ್ ಔಟ್; ರಾಜನಾದ ನಟ ಮೋಹನ್ ಲಾಲ್

    ವೃಷಭ ಟೀಸರ್ ಔಟ್; ರಾಜನಾದ ನಟ ಮೋಹನ್ ಲಾಲ್

    ಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ (Mohanlal) ನಟನೆಯ ಬಹು ನಿರೀಕ್ಷಿತ `ವೃಷಭ’ ಸಿನಿಮಾದ (Vrushabha Movie) ಟೀಸರ್ ರಿಲೀಸ್ ಆಗಿದೆ. 1 ನಿಮಿಷ 43 ಸೆಕೆಂಡ್ ಇರುವ ಟೀಸರ್ ಪ್ರಾಮಿಸಿಂಗ್ ಆಗಿದೆ. ಮೋಹನ್ ಲಾಲ್ ರಾಜನ ಲುಕ್‌ನಲ್ಲಿ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ.

    ಆಂಥೋನಿ ಸ್ಯಾಮ್ಸನ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಸ್ಯಾಮ್ ಸಿಎಸ್ ಸಂಗೀತವು ಈ ಟೀಸರ್‌ನ ಹೈಲೆಟ್ಸ್ ಆಗಿವೆ. ನಂದ ಕಿಶೋರ್ ಕಥೆ ಬರೆದು `ವೃಷಭ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ಕನ್ನಡ ಕಲಾವಿದರೂ ಮಿಂಚಿದ್ದು, ನಿರ್ದೇಶಕ ಇಂದ್ರಜಿತ್ ಲಂಕೇಶ್ ಪುತ್ರ ಸರ್ಮಜಿತ್, ಸಿನಿಮಾದಲ್ಲಿ ಮೋಹನ್ ಲಾಲ್ ಮಗನಾಗಿ ಅಭಿನಯಿಸಿದ್ದಾರೆ. ನಟಿ ರಾಗಿಣಿ ದ್ವಿವೇದಿ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    ನಿರ್ಮಾಪಕಿ ಏಕ್ತಾ ಆರ್ ಕಪೂರ್ ಮಾತನಾಡಿ, ವೃಷಭ ಅದ್ಭುತವಾದ ಪ್ರಾಜೆಕ್ಟ್. ಇದು ಕೇವಲ ಸಿನಿಮಾವಲ್ಲ. ಸಂಬಂಧ, ಸೇಡು ಮತ್ತು ಪುನರ್ಜನ್ಮದ ಮಹಾಕಾವ್ಯವಾಗಿದೆ. ಈ ಸಿನಿಮೀಯ ಅನುಭವವನ್ನು ಪ್ರಸ್ತುತಪಡಿಸಲು ಅದ್ಭುತ ಪ್ರತಿಭೆಗಳೊಂದಿಗೆ ಸಹಕರಿಸಲು ನಾವು ರೋಮಾಂಚನಗೊಂಡಿದ್ದೇವೆ ಎಂದು ಹೇಳಿದರು.

    ನಿರ್ದೇಶಕ ನಂದ ಕಿಶೋರ್ ಮಾತನಾಡಿ, ವೃಷಭವು ಕೇವಲ ಸಿನಿಮಾವಲ್ಲ, ಅದೊಂದು ಎಮೋಶನ್. ಲೆಜೆಂಡ್ ಎನಿಸಿಕೊಂಡಿರುವ ಮೋಹನ್ ಲಾಲ್ ಅವರೊಂದಿಗೆ ಕೆಲಸ ಮಾಡಿರುವುದು ಖುಷಿ ಇದೆ. ಮಗನ ಪಾತ್ರದಲ್ಲಿ ಸಮರ್ಜಿತ್ ಲಂಕೇಶ್ ನಟಿಸಿದ್ದಾರೆ. ಅದ್ಭುತ ಸಾಮರ್ಥ್ಯ ಹೊಂದಿರುವ ಯುವ ಪ್ರತಿಭೆ. ವೃಷಭವು ತಂದೆ ಮತ್ತು ಮಗನ ಬಾಂಧವ್ಯದ ಕಥೆಯಾಗಿದೆ. ಪ್ರೇಕ್ಷಕರು ಇದನ್ನು ಬೆಳ್ಳಿಪರದೆಯ ಮೇಲೆ ಯಾವ ರೀತಿ ತೆಗೆದುಕೊಳ್ಳುತ್ತಾರೆ ಎಂಬುದನ್ನು ನಾನು ನೋಡಲು ಕಾತುರನಾಗಿದ್ದೇನೆ ಎಂದರು.

    ಕನೆಕ್ಟ್ ಮೀಡಿಯಾ ಮತ್ತು ಬಾಲಾಜಿ ಟೆಲಿಫಿಲ್ಮ್ಸ್, ಅಭಿಷೇಕ್ ಎಸ್ ವ್ಯಾಸ್ ಸ್ಟುಡಿಯೋಸ್ ಜೊತೆಗೂಡಿ ಪ್ರಸ್ತುತಪಡಿಸುತ್ತಿರುವ `ವೃಷಭ’ ಚಿತ್ರವನ್ನು ಶೋಭಾ ಕಪೂರ್, ಏಕ್ತಾ ಕಪೂರ್, ಸಿ.ಕೆ.ಪದ್ಮ ಕುಮಾರ್, ವರುಣ್ ಮಾಥುರ್, ಸೌರಭ್ ಮಿಶ್ರಾ, ಅಭಿಷೇಕ್ ಎಸ್ ವ್ಯಾಸ್, ಪ್ರವೀರ್ ಸಿಂಗ್, ವಿಶಾಲ್ ಗುರ್ನಾನಿ ಮತ್ತು ಜೂಹಿ ಪರೇಖ್ ಮೆಹ್ತಾ ನಿರ್ಮಿಸಿದ್ದಾರೆ.

    ಮಲಯಾಳಂ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾದ ಈ ಚಿತ್ರ ಹಿಂದಿ ಮತ್ತು ಕನ್ನಡದಲ್ಲಿಯೂ ಬಿಡುಗಡೆಯಾಗಲಿದೆ. ಈ ಚಿತ್ರವು ದೀಪಾವಳಿಯಂದು ವಿಶ್ವದಾದ್ಯಂತ ತೆರೆ ಕಾಣಲಿದೆ.

  • ಅಮೆರಿಕಾಗೆ ಹಾರಲು ಸಜ್ಜಾದ ನಂದಕಿಶೋರ್- ಮೋಹನ್ ಲಾಲ್

    ಅಮೆರಿಕಾಗೆ ಹಾರಲು ಸಜ್ಜಾದ ನಂದಕಿಶೋರ್- ಮೋಹನ್ ಲಾಲ್

    ಲಯಾಳಂ ಹೆಸರಾಂತ ನಟ ಮೋಹನ್ ಲಾಲ್ ಮತ್ತು ಕನ್ನಡದ ನಿರ್ದೇಶಕ ನಂದಕಿಶೋರ್ ಅತೀ ಶೀಘ್ರದಲ್ಲೇ ಅಮೆರಿಕಾಗೆ (America) ಪ್ರಯಾಣ ಬೆಳೆಸಲಿದ್ದಾರೆ. ಈ ಜೋಡಿಯ ಮುಂದಿನ ಹಂತದ ಚಿತ್ರೀಕರಣ ಅಮೆರಿಕಾದಲ್ಲಿ ನಡೆಯಲಿದ್ದು, ಈಗಾಗಲೇ ಮೊದಲ ಹಂತದ ಶೂಟಿಂಗ್ (Shooting) ಅನ್ನು ಮೈಸೂರಿನಲ್ಲಿ ಮುಗಿಸಿಕೊಂಡಿದ್ದಾರೆ.

    ಹು ನಿರೀಕ್ಷಿತ ‘ವೃಷಭ’ (Vrishabh) ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.  ಒಂದು ತಿಂಗಳ ಕಾಲ ಮೈಸೂರಿನಲ್ಲಿ (Mysore) ಚಿತ್ರೀಕರಣ ನಡೆದಿದೆ.  ಭಾರತೀಯ ಚಿತ್ರರಂಗದಲ್ಲಿ ಕಂಡು ಕೇಳರಿಯದ ಬೃಹತ್ ಆಕ್ಷನ್ ದೃಶ್ಯಗಳನ್ನು ಈ ಹಂತದಲ್ಲಿ ಚಿತ್ರೀಕರಣ ಮಾಡಲಾಗಿದೆ. ನಂದಕಿಶೋರ್ (Nandakishor) ನಿರ್ದೇಶನದ ವೃಷಭ ಚಿತ್ರದ ಚಿತ್ರೀಕರಣ ಕಳೆದ ತಿಂಗಳು 22 ರಂದು ಮೈಸೂರಿನಲ್ಲಿ ಪ್ರಾರಂಭವಾಗಿತ್ತು. ಈ ಭಾಗದ  ಚಿತ್ರೀಕರಣದಲ್ಲಿ ಮೋಹನ್ ಲಾಲ್ (Mohanlal), ರೋಶನ್ ಮೇಕಾ, ಶನಾಯ ಕಪೂರ್, ಶ್ರೀಕಾಂತ್ ಮೇಕಾ, ರಾಗಿಣಿ ದ್ವಿವೇದಿ (Ragini Dwivedi) ಮುಂತಾದವರು ಪಾಲ್ಗೊಂಡಿದ್ದರು.

    ಹಾಲಿವುಡ್‌ ನ ಜನಪ್ರಿಯ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಗುರುತಿಸಿಕೊಂಡಿರುವ ನಿಕ್ ಥರ್ಲೋ ಈ ಚಿತ್ರಕ್ಕೆ ಕೆಲಸ ಮಾಡುತ್ತಿರುವುದು ಒಂದು ವಿಶೇಷತೆಯಾದರೆ, ಬಾಹುಬಲಿ,  ಪುಲಿಮುರುಗನ್, ಶಿವಾಜಿ – ದಿ ಬಾಸ್, ಎಂದಿರನ್, ಪುಷ್ಪ – ದಿ ರೈಸ್ ಸೇರಿದಂತೆ ಹಲವು ಚಿತ್ರಗಳಿಗೆ ಕೆಲಸ ಮಾಡಿರುವ ಭಾರತೀಯ ಚಿತ್ರರಂಗದ ಜನಪ್ರಿಯ ಸಾಹಸ ನಿರ್ದೇಶಕರಾದ ಪೀಟರ್ ಹೇನ್ಸ್ ಈ ಚಿತ್ರದ ಸಾಹಸ ದೃಶ್ಯಗಳನ್ನು ಸಂಯೋಜಿಸುತ್ತಿರುವುದು ಇನ್ನೊಂದು ಹೆಗ್ಗಳಿಕೆ.

    ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ನಂದಕಿಶೋರ್, ‘ಮೊದಲ ಹಂತದ ಚಿತ್ರೀಕರಣದಲ್ಲಿ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿನದನ್ನು ಸಾಧಿಸಿದ ಖುಷಿ ನಮಗಿದೆ.  ಜೊತೆಗೆ ಹಗಲು ರಾತ್ರಿ ಕಷ್ಟಪಟ್ಟು ದುಡಿದ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಹೇಳುವುದಕ್ಕೆ ಬಯಸುತ್ತೇನೆ.  ಮೋಹನ್ ಲಾಲ್ ಸರ್, ರೋಶನ್, ಶ್ರೀಕಾಂತ್, ರಾಗಿಣಿ ಮುಂತಾದವರು ನಮ್ಮ ಡೆಡ್ ಲೈನ್ ಗಳನ್ನು ಪೂರೈಸುವಲ್ಲಿ ಪೂರಕವಾಗಿ ಕೆಲಸ ಮಾಡಿದ್ದಾರೆ. ಪುಲಿಮುರುಗನ್ ಚಿತ್ರದ ನಂತರ ಮೋಹನ್ ಲಾಲ್ ಮತ್ತು ಪೀಟರ್ ಹೇನ್ಸ್ ಈ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದು, ವೃಷಭ ಚಿತ್ರವು ಭಾರತದ ಅತೀ ದೊಡ್ಡ ಆಕ್ಷನ್ ಚಿತ್ರವಾಗಿ ಮೂಡಿಬರಲಿದೆ’ ಎಂದಿದ್ದಾರೆ.

    ವೃಷಭ ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಅತೀ ದೊಡ್ಡ  ಆಕ್ಷನ್ ಚಿತ್ರವಾಗಿದ್ದು, ಮೋಹನ್ ಲಾಲ್, ರೋಶನ್ ಮೇಕಾ, ಶನಾಯ ಕಪೂರ್, ಝಹ್ರ ಎಸ್ ಖಾನ್, ಶ್ರೀಕಾಂತ್ ಮೇಕಾ, ರಾಗಿಣಿ ದ್ವಿವೇದಿ ಮುಂತಾದವರು ನಟಿಸಿದ್ದಾರೆ. ಚಿತ್ರದಲ್ಲಿ ವಿಎಫ್ಎಕ್ಸ್ ದೊಡ್ಡ ಪ್ರಮಾಣದಲ್ಲಿದ್ದು, ಇದೊಂದು ಬರೀ ಆಕ್ಷನ್ ಚಿತ್ರವಷ್ಟೇ ಅಲ್ಲ, ಅದ್ಭುತ ಸೆಂಟಿಮೆಂಟ್ ಚಿತ್ರವಾಗಿ ಮೂಡಿಬರುತ್ತಿದ್ದು, 2024ರ ಅತೀ ಜನಿರೀಕ್ಷಿತ ಚಿತ್ರವಾಗಿದೆ.

     

    ವೃಷಭ ಚಿತ್ರವನ್ನು ಕನೆಕ್ಟ್ ಮೀಡಿಯಾ ಮತ್ತು ಬಾಲಾಜಿ ಟೆಲಿಫಿಲಂಸ್, ಎವಿಎಸ್ ಸ್ಟುಡಿಯೋಸ್ ನ ಜೊತೆಗೆ ಅರ್ಪಿಸುತ್ತಿದೆ‌. ನಂದಕಿಶೋರ್ ನಿರ್ದೇಶನದ ಈ ಚಿತ್ರವನ್ನು, ವಿಶಾಲ್ ಗುರ್ನಾನಿ, ಜೂಹಿ ಪಾರೇಖ್ ಮೆಹ್ತಾ, ಅಭಿಷೇಕ್ ವ್ಯಾಸ್ (ಏವಿಎಸ್), ಶ್ಯಾಮ್ ಸುಂದರ್ (ಫರ್ಸ್ಟ್ ಸ್ಟೆಪ್ ಮೂವೀಸ್), ಏಕ್ತಾ ಕಪೂರ್, ಶೋಭಾ ಕಪೂರ್ (ಬಾಲಾಜಿ ಟೆಲಿಫಿಲಂಸ್), ವರುಣ್ ಮಾಥುರ್ ಮತ್ತು ಸೌರಭ್ ಮಿಶ್ರಾ (ಕನೆಕ್ಟ್ ಮೀಡಿಯಾ) ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ತೆಲುಗು, ಮಲಯಾಳಂನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಈ ಚಿತ್ರವು ತೆಲುಗು, ಮಲಯಾಳಂ, ಹಿಂದಿ, ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರದಲ್ಲಿ ರಾಗಿಣಿ

    ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರದಲ್ಲಿ ರಾಗಿಣಿ

    ಭಾರತದ ಬೃಹತ್ ಸಾಹಸಮಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ (Mohanlal) ಅಭಿನಯದ ‘ವೃಷಭ’ (Vrishabha) ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ.

    ‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಸಾಹಸ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಜೊತೆಗೆ ರೋಶನ್ ಮೇಕಾ, ಶನಾಯ ಕಪೂರ್, ಝಾರಾ ಖಾನ್, ಶ್ರೀಕಾಂತ್ ಮೇಕಾ ಮುಂತಾದವರು ನಟಿಸುತ್ತಿದ್ದಾರೆ. ಕನ್ನಡದ ರಾಗಿಣಿ ದ್ವಿವೇದಿ ಸಹ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

    ‘ಕಾಂದಹಾರ್’ ನಂತರ ಇದೇ ಎರಡನೆಯ ಬಾರಿಗೆ ಮೋಹನ್ ಲಾಲ್ ಜೊತೆಗೆ ರಾಗಿಣಿ (Ragini Dwivedi) ನಟಿಸುತ್ತಿದ್ದಾರೆ. ಕನ್ನಡದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ನಂದಕಿಶೋರ್ (Nandakishor) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದನ್ನೂ ಓದಿ:‘ಸಿಂಗಂ’ ಖ್ಯಾತಿಯ ನಟ ಜಯಂತ್ ಸಾವರ್ಕರ್ ವಿಧಿವಶ

    ಚಿತ್ರ ಪ್ರಾರಂಭವಾದ ವಿಷಯವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡ ನಟ ಮೋಹನ್ ಲಾಲ್, ‘ವೃಷಭ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು, ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದದ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.

     

    ‘ವೃಷಭ’ ಚಿತ್ರವನ್ನು ಬಾಲಿವುಡ್‌ ನ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಬಾಲಾಜಿ ಟೆಲಿಫಿಲಂಸ್ ಮತ್ತು ಕನೆಕ್ಟ್ ಮೀಡಿಯಾ, ಎವಿಸ್ ಸ್ಟುಡಿಯೋದ ಸಹಯೋಗದೊಂದಿಗೆ ನಿರ್ಮಿಸುತ್ತಿದೆ. ಏಕ್ತಾ ಕಪೂರ್, ಶೋಭಾ ಕಪೂರ್, ಅಭಿಷೇಕ್ ವ್ಯಾಸ್, ವಿಶಾಲ್ ಗುರ್ನಾನಿ, ಜೂಹಿ ಪಾರೇಖ್ ಮೆಹ್ತಾ, ಶ್ಯಾಮಸುಂದರ್, ವರುಣ್ ಮಾಥುರ್ ಮತ್ತು ಸೌರಭ್ ಮಿಶ್ರಾ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರವು ಮುಂದಿನ ವರ್ಷ ಜಗತ್ತಿನಾದ್ಯಂತ 4500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೋಹನ್ ಲಾಲ್-ನಂದಕಿಶೋರ್ ಚಿತ್ರಕ್ಕೆ ಚಾಲನೆ: ಇದು ಪ್ಯಾನ್ ಇಂಡಿಯಾ ಸಿನಿಮಾ

    ಮೋಹನ್ ಲಾಲ್-ನಂದಕಿಶೋರ್ ಚಿತ್ರಕ್ಕೆ ಚಾಲನೆ: ಇದು ಪ್ಯಾನ್ ಇಂಡಿಯಾ ಸಿನಿಮಾ

    ನ್ನಡದ ಮತ್ತೋರ್ವ ಪ್ರತಿಭಾವಂತ ನಿರ್ದೇಶಕ ಬೇರೆ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಹಿಟ್ ಸಿನಿಮಾಗಳನ್ನು ನೀಡಿರುವ ನಂದಕಿಶೋರ್, ಇದೀಗ ಮಲಯಾಳಂ (Malayalam) ಚಿತ್ರರಂಗಕ್ಕೆ ಹಾರಿದ್ದಾರೆ. ಮಲಯಾಳಂ ಚಿತ್ರರಂಗದ ದಿಗ್ಗಜ ಮೋಹನ್ ಲಾಲ್ (Mohanlal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ನಿನ್ನೆಯಷ್ಟೇ ಅಧಿಕೃತವಾಗಿ ಚಾಲನೆ ಸಿಕ್ಕಿದೆ.

    ಈ ಹಿಂದೆ ಮೋಹನ್ ಲಾಲ್ ಜೊತೆಗಿರುವ ನಂದಕಿಶೋರ್ (Nandakishor) ಫೋಟೋ ವೈರಲ್ ಆಗಿತ್ತು. ಅವರೊಂದಿಗೆ ಸಿನಿಮಾ ಮಾಡಲಿದ್ದಾರಾ ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಅದೀಗ ನಿಜವಾಗಿದೆ. ಚಿತ್ರಕ್ಕೆ ವೃಷಭ  (Vrushabha) ಎಂದು ಹೆಸರಿಟ್ಟಿದ್ದು, ಇದೇ ತಿಂಗಳಿನಿಂದಲೇ ಚಿತ್ರೀಕರಣ ಆರಂಭಿಸುವುದಾಗಿ ನಂದಕಿಶೋರ್ ತಿಳಿಸಿದ್ದಾರೆ. ಮೋಹಲ್ ಲಾಲ್ ಜೊತೆ ಸಿನಿಮಾ ಮಾಡುತ್ತಿರುವುದು ತಮ್ಮ ಪುಣ್ಯ ಎಂದೂ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಮನೀಷ್ ಮಲ್ಹೋತ್ರಾ ನಿರ್ದೇಶನದಲ್ಲಿ ಮೀನಾ ಕುಮಾರಿ ಬಯೋಪಿಕ್- ಕೃತಿ ಸನೋನ್ ನಾಯಕಿ?

    ಇದೊಂದು ಪೌರಾಣಿಕ ಹಾಗೂ ಫ್ಯಾಂಟಸಿ ಕಥಾ ಹಂದರವನ್ನು ಹೊಂದಿರುವ ಸಿನಿಮಾ ಎಂದು ಹೇಳಿಕೊಂಡಿರುವ ನಂದಕಿಶೋರ್, ಸಾಹಸ ಪ್ರಧಾನ ದೃಶ್ಯಗಳನ್ನೂ ಹೊಂದಿರುವುದಾಗಿ ತಿಳಿಸಿದ್ದಾರೆ. ಸತತ ಎಂಟು ತಿಂಗಳ ಕಾಲ ಸ್ಕ್ರಿಪ್ಟ್ ಮೇಲೆಯೇ ಕೆಲಸ ಮಾಡಿದ್ದಾರಂತೆ ನಂದಕಿಶೋರ್, ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದೆ.

     

    ಮೋಹನ್ ಲಾಲ್ ಜೊತೆ ಹೆಸರಾಂತ ತಾರಾಬಳಗವೇ ಸಿನಿಮಾದಲ್ಲಿದ್ದು, ಶ್ರೀಕಾಂತ್ ಮೇಕಾ ಪುತ್ರ ರೋಷನ್ ಕೂಡ ನಟಿಸುತ್ತಿದ್ದಾರೆ. ಅಲ್ಲದೇ, ಕನ್ನಡದ ಕಲಾವಿದರಿಗೂ ಅವಕಾಶ ನೀಡಲಿದ್ದಾರಂತೆ. ಹಿಂದಿ ಸಿನಿಮಾಗಳಲ್ಲಿ ಪಳಗಿರುವ ಸಂತೋಷ್ ತುಂಡಿಯಲ್ ಸಿನಿಮಾಟೋಗ್ರಾಫರ್ ಆಗಿದ್ದು, ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಅವರ ಸಂಗೀತ ಚಿತ್ರಕ್ಕಿದೆ. ಮೂಲ ತೆಲುಗು ಮತ್ತು ಮಲಯಾಳಂನಲ್ಲಿ ಸಿನಿಮಾ ತಯಾರಾಗಲಿದ್ದು, ನಂತರ ಇತರ ಭಾಷೆಗಳಿಗೆ ಡಬ್ ಮಾಡುತ್ತಾರಂತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಲಯಾಳಂ ಚಿತ್ರರಂಗಕ್ಕೆ ಹಾರಿದ ನಂದಕಿಶೋರ್ : ಮೋಹನ್ ಲಾಲ್ ಹೀರೋ

    ಮಲಯಾಳಂ ಚಿತ್ರರಂಗಕ್ಕೆ ಹಾರಿದ ನಂದಕಿಶೋರ್ : ಮೋಹನ್ ಲಾಲ್ ಹೀರೋ

    ನ್ನಡದ ಮತ್ತೋರ್ವ ಪ್ರತಿಭಾವಂತ ನಿರ್ದೇಶಕ ಬೇರೆ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಹಿಟ್ ಸಿನಿಮಾಗಳನ್ನು ನೀಡಿರುವ ನಂದಕಿಶೋರ್, ಇದೀಗ ಮಲಯಾಳಂ (Malayalam) ಚಿತ್ರರಂಗಕ್ಕೆ ಹಾರಿದ್ದಾರೆ. ಮಲಯಾಳಂ ಚಿತ್ರರಂಗದ ದಿಗ್ಗಜ ಮೋಹನ್ ಲಾಲ್ (Mohanlal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ.

    ಈ ಹಿಂದೆ ಮೋಹನ್ ಲಾಲ್ ಜೊತೆಗಿರುವ ನಂದಕಿಶೋರ್ (Nandakishor) ಫೋಟೋ ವೈರಲ್ ಆಗಿತ್ತು. ಅವರೊಂದಿಗೆ ಸಿನಿಮಾ ಮಾಡಲಿದ್ದಾರಾ ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಅದೀಗ ನಿಜವಾಗಿದೆ. ಚಿತ್ರಕ್ಕೆ ವೃಷಭ  (Vrushabha) ಎಂದು ಹೆಸರಿಟ್ಟಿದ್ದು, ಇದೇ ತಿಂಗಳಿನಿಂದಲೇ ಚಿತ್ರೀಕರಣ ಆರಂಭಿಸುವುದಾಗಿ ನಂದಕಿಶೋರ್ ತಿಳಿಸಿದ್ದಾರೆ. ಮೋಹಲ್ ಲಾಲ್ ಜೊತೆ ಸಿನಿಮಾ ಮಾಡುತ್ತಿರುವುದು ತಮ್ಮ ಪುಣ್ಯ ಎಂದೂ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:3ನೇ ಪತ್ನಿಯಿಂದಲೂ ದೂರಾವಾದ್ರಾ ನಟ ಪವನ್ ಕಲ್ಯಾಣ್?

    ಇದೊಂದು ಪೌರಾಣಿಕ ಹಾಗೂ ಫ್ಯಾಂಟಸಿ ಕಥಾ ಹಂದರವನ್ನು ಹೊಂದಿರುವ ಸಿನಿಮಾ ಎಂದು ಹೇಳಿಕೊಂಡಿರುವ ನಂದಕಿಶೋರ್, ಸಾಹಸ ಪ್ರಧಾನ ದೃಶ್ಯಗಳನ್ನೂ ಹೊಂದಿರುವುದಾಗಿ ತಿಳಿಸಿದ್ದಾರೆ. ಸತತ ಎಂಟು ತಿಂಗಳ ಕಾಲ ಸ್ಕ್ರಿಪ್ಟ್ ಮೇಲೆಯೇ ಕೆಲಸ ಮಾಡಿದ್ದಾರಂತೆ ನಂದಕಿಶೋರ್, ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಜುಲೈ 22 ರಿಂದ ಶೂಟಿಂಗ್ ಶುರು ಮಾಡುತ್ತಾರಂತೆ.

    ಮೋಹನ್ ಲಾಲ್ ಜೊತೆ ಹೆಸರಾಂತ ತಾರಾಬಳಗವೇ ಸಿನಿಮಾದಲ್ಲಿದ್ದು, ಶ್ರೀಕಾಂತ್ ಮೇಕಾ ಪುತ್ರ ರೋಷನ್ ಕೂಡ ನಟಿಸುತ್ತಿದ್ದಾರೆ. ಅಲ್ಲದೇ, ಕನ್ನಡದ ಕಲಾವಿದರಿಗೂ ಅವಕಾಶ ನೀಡಲಿದ್ದಾರಂತೆ. ಹಿಂದಿ ಸಿನಿಮಾಗಳಲ್ಲಿ ಪಳಗಿರುವ ಸಂತೋಷ್ ತುಂಡಿಯಲ್ ಸಿನಿಮಾಟೋಗ್ರಾಫರ್ ಆಗಿದ್ದು, ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಅವರ ಸಂಗೀತ ಚಿತ್ರಕ್ಕಿದೆ. ಮೂಲ ತೆಲುಗು ಮತ್ತು ಮಲಯಾಳಂನಲ್ಲಿ ಸಿನಿಮಾ ತಯಾರಾಗಲಿದ್ದು, ನಂತರ ಇತರ ಭಾಷೆಗಳಿಗೆ ಡಬ್ ಮಾಡುತ್ತಾರಂತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಗೆ ಕನ್ನಡದ ನಂದಕಿಶೋರ್ ಆ್ಯಕ್ಷನ್ ಕಟ್

    ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಗೆ ಕನ್ನಡದ ನಂದಕಿಶೋರ್ ಆ್ಯಕ್ಷನ್ ಕಟ್

    ದ್ಯ ರಾಣಾ ಸಿನಿಮಾದಲ್ಲಿ ಬ್ಯುಸಿ ಆಗಿರುವ ನಿರ್ದೇಶಕ ನಂದ ಕಿಶೋರ್ ಸದ್ಯದಲ್ಲೇ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ಸಿನಿಮಾ ಮಾಡಲಿದ್ದಾರೆ. ಹಾಗಂತ ಸ್ವತಃ ಮೋಹನ್ ಲಾಲ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಬಹಿರಂಗ ಪಡಿಸಿದ್ದಾರೆ. ನಂದಕಿಶೋರ್ ನಿರ್ದೇಶನದ ಸಿನಿಮಾದಲ್ಲಿ ನಟಿಸಲು ಎಕ್ಸೈಟ್ ಆಗಿದ್ದೇನೆ ಎಂದು ಹೇಳಿದ್ದಾರೆ.

    ಈ ಚಿತ್ರಕ್ಕೆ ವೃಷಭ ಎಂದು ಹೆಸರಿಡಲಾಗಿದ್ದು, ಎವಿಎಸ್ ಸ್ಟುಡಿಯೋ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಅಭಿಷೇಕ್ ‍ವ್ಯಾಸ್, ಪ್ರವೀಣ್ ಸಿಂಗ್ ಮತ್ತು ಶ್ಯಾಂಸ್ ಸುಂದರ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಎವಿಎಸ್ ಸ್ಟುಡಿಯೋ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಮೊದಲ ಸಿನಿಮಾ ಇದಾಗಿದೆ.  ಹಾಗಾಗಿ ಇಂತಹ ಸಿನಿಮಾಗೆ ನಿಮ್ಮ ಬೆಂಬಲವಿರಲಿ ಎಂದೂ ಮೋಹನ್ ಲಾಲ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ದುಬಾರಿ ಸಂಭಾವನೆ ಕೇಳಿ, ಅವಕಾಶ ಕಳೆದುಕೊಂಡ `ವಜ್ರಕಾಯ’ ನಟಿ ನಭಾ ನಟೇಶ್

    ಇದೊಂದು ಔಟ್ ಅಂಡ್ ಔಟ್ ಕಮರ್ಷಿಯಲ್ ಸಿನಿಮಾವಾಗಿದ್ದು, ಕಥಾ ನಾಯಕ ಹಲವು ಆಯಾಮಗಳಲ್ಲಿ ತೆರೆದುಕೊಳ್ಳುವಂತಹ ಪಾತ್ರವಾಗಿದೆ ಎಂದು ನಂದಕಿಶೋರ್ ಮಾತನಾಡಿದ್ದಾರೆ. ಜುಲೈ 2023 ರಿಂದ ಈ ಸಿನಿಮಾ ಶುರುವಾಗಲಿದ್ದು, ತೆಲುಗಿನ ಸ್ಟಾರ್ ನಟರೊಬ್ಬರು ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]