Tag: ವೆಂಕಟ್ ಭಾರದ್ವಾಜ್

  • ಮುದ್ದಾದ ಹಾಡಾಗಿ ಬಂತು ನಗುವಿನ ಹೂಗಳ ಮೇಲೆ

    ಮುದ್ದಾದ ಹಾಡಾಗಿ ಬಂತು ನಗುವಿನ ಹೂಗಳ ಮೇಲೆ

    ವೆಂಕಟ್ ಭಾರದ್ವಾಜ್ (Venkat Bharadwaj) ನಿರ್ದೇಶನದ `ನಗುವಿನ ಹೂಗಳ ಮೇಲೆ’ (Naguvina Hoogala Mele) ಚಿತ್ರ ನಾಳೆ ಬಿಡುಗಡೆಗೊಳ್ಳಲಿದೆ. ತೆರೆಗಾಣುವ ಕಡೇ ಘಳಿಗೆಯವರೆಗೂ ಪ್ರೇಕ್ಷಕರನ್ನು ಬೆರಗಾಗಿಸುವ ಸಲುವಾಗಿ ಇದೀಗ ಮುದ್ದಾದ ಹಾಡೊಂದನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ. ಈಗಾಗಲೇ ನಗುವಿನ ಹೂಗಳ ಮೇಲೆ ಗಾಢ ನಿರೀಕ್ಷೆಗಳ ಇಬ್ಬನಿ ಮೂಡಿಕೊಂಡಿದೆ. ಅದನ್ನು ಮತ್ತಷ್ಟು ತೀವ್ರವಾಗಿಸುವ ನಿಟ್ಟಿನಲ್ಲಿ ಈ ಹಾಡು ಪರಿಣಾಮಕಾರಿಯಾಗಿ ಮೂಡಿ ಬಂದಿದೆ. ಸದರಿ ಸಿನಿಮಾದಲ್ಲಿ ಪ್ರೇಮದ ನಾನಾ ಮಜಲುಗಳಿವೆ. ಅದರಲ್ಲೊಂದು ಭಾವದ ಅಭಿವ್ಯಕ್ತಿಯೆಂಬಂತೆ ಸದರಿ ಹಾಡನ್ನು ರೂಪಿಸಿದಂತಿದೆ.

    ಮುದ್ದು ಬೇಬಿ ಲವ್ ಯು ಬೇಬಿ ಅಂತ ಶುರುವಾಗುವ ಈ ಗೀತೆ ಲವ್ ಫ್ರಾನ್ ಮೆಹತಾ ಸಂಗೀತ ಸ್ಪರ್ಶದೊಂದಿಗೆ ಮೂಡಿ ಬಂದಿದೆ. ಕಿರಣ್ ನಾಗರಾಜ್ ಸಾಹಿತ್ಯ ಮತ್ತು ರೋನಿ, ಮೇಘನಾ ಕಠಸಿರಿಯಲ್ಲಿ ಮುದ್ದಾಗಿ ರೂಪುಗೊಂಡಿರುವ ಈ ಹಾಡು ಫಲಿಸಿದ ಪ್ರೇಮದ ಎಲ್ಲ ಭಾವಗಳನ್ನೂ ಸಶಕ್ತವಾಗಿ ಹಿಡಿದಿಟ್ಟಂತೆ ಭಾಸವಾಗುತ್ತದೆ. ಜೀ ಮ್ಯೂಸಿಕ್ ಮೂಲಕ ಬಿಡುಗಡೆಗೊಂಡಿರುವ ಮುದ್ದು ಬೇಬಿ ಹಾಡು ಬಹು ಬೇಗನೆ ಸಂಗೀತ ಪ್ರಿಯರನ್ನು ಸೆಳೆಯುತ್ತಿದೆ. ಇನ್ನೇನು ಪ್ರೇಮಿಗಳ ದಿನ ಹತ್ತಿರದಲ್ಲಿದೆ. ಆ ಹೊತ್ತಿಗೆಲ್ಲ ಈ ಹಾಡು ಸಮಸ್ತ ಪ್ರೇಮಿಗಳ ಫೇವರಿಟ್ ಆಗಿ ಬದಲಾಗುವ ಲಕ್ಷಣಗಳಿವೆ.

    ನಿರ್ದೇಶಕ ವೆಂಕಟ್ ಭಾರದ್ವಾಜ್ ಸಣ್ಣ ಸಣ್ಣ ವಿಚಾರಗಳನ್ನೂ ಗಮನದಲ್ಲಿಟ್ಟುಕೊಂಡು ಈ ಸಿನಿಮಾವನ್ನು ರೂಪಿಸಿದ್ದಾರೆ. ಅದರಲ್ಲಿಯೂ ಕಥೆಯ ಓಘಕ್ಕೆ ತಕ್ಕುದಾಗಿ ಹಾಡುಗಳನ್ನು ರೂಪಿಸಲು ಒಂದು ಅನ್ವೇಷಣೆಯನ್ನೇ ನಡೆಸಿದ್ದರಂತೆ. ಅದರ ಭಾಗವಾಗಿ ಪಂಜಾಬ್ ಮೂಲದ ಪ್ರಸಿದ್ಧ ಸಂಗೀತ ನಿರ್ದೇಶಕ ಲವ್ ಫ್ರಾನ್ ಮೆಹತ ಮಾತ್ರವಲ್ಲದೇ, ಬೇರೆ ಬೇರೆ ರಾಜ್ಯಗಳ ಗಾಯಕರನ್ನೂ ಒಂದೆಡೆ ಕಲೆಹಾಕಿದ್ದಾರೆ. ಇಂಥಾದ್ದೊಂದು ಪರಿಶ್ರಮ, ಕನಸಿನ ಪ್ರತಿಫಲವಾಗಿಯೇ ನಗುವಿನ ಹೂಗಳ ಮೇಲೆ ಚಿತ್ರದ ಒಂದೊಂದು ಹಾಡುಗಳೂ ಒಂದೊಂದು ಬೆರಗು ಹೊತ್ತು ಬಂದಿವೆ. ಇದೀಗ ಬಿಡುಗಡೆಗೊಂಡಿರುವ ಹಾಡಿನಲ್ಲಿಯೂ ಅಂತಹ ಛಾಯೆಯಿದೆ.

     

    ಇದು ಪರಿಶುದ್ಧ ಪ್ರೇಮ ಕಥನದ ಭೂಮಿಕೆಯಲ್ಲಿ ತೆರೆದುಕೊಳ್ಳುವ ಬದುಕಿಗೆ ಹತ್ತಿರವಾದ ಕಥನ. ಈ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕ ಕೆ.ಕೆ ರಾಧಾ ಮೋಹನ್ ಶ್ರೀ ಸತ್ಯಸಾಯಿ ಆಟ್ರ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಅಭಿ ದಾಸ್ (Abhi Das) ಹಾಗೂ ಶರಣ್ಯಾ ಶೆಟ್ಟಿ ನಾಯಕ ನಾಯಕಿಯರಾಗಿ ನಟಿಸಿದ್ದಾರೆ. ಬಲ ರಾಜವಾಡಿ, ಆಶಾ ಸುಜಯ್, ಗಿರೀಶ್ ನಂಜಪ್ಪ, ಹರ್ಷಿತ್ ಗೌಡ, ಅಭಿಷೇಕ್ ಐಯಂಗಾರ್, ಹರೀಶ್ ಚೌಹಾಣ್, ಹರ್ಷ ಗೋ ಭಟ್ ಮುಂತಾದವರ ತಾರಾಗಣ ಈ ಚಿತ್ರದಲ್ಲಿದೆ. ಪ್ರಮೋದ್ ಭಾರತೀಯ ಛಾಯಾಗ್ರಹಣ, ಅಭಿಷೇಕ್ ಐಯಂಗಾರ್ ಸಂಭಾಷಣೆ, ಲವ್ ಫ್ರಾನ್ ಮೆಹತಾ ಸಂಗೀತ ನಿರ್ದೇಶನ, ಚಂದನ್ ಪಿ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

  • ‘ನಗುವಿನ ಹೂಗಳ ಮೇಲೆ’ ಹಾಡುಗಳ ಎವರ್ ಗ್ರೀನ್ ಜೋಗುಳ

    ‘ನಗುವಿನ ಹೂಗಳ ಮೇಲೆ’ ಹಾಡುಗಳ ಎವರ್ ಗ್ರೀನ್ ಜೋಗುಳ

    ಯಾವುದೇ ಸಿನಿಮಾವಾದರೂ ಹಾಡುಗಳು (Song) ಪ್ರೇಕ್ಷಕರ ಎದೆಗಿಳಿದು, ಆ ಮೂಲಕ ಮೂಡಿಕೊಳ್ಳುವ ಕೌತುಕ ಮೊದಲ ಗೆಲುವಿದ್ದಂತೆ. ಅಂಥಾದ್ದೊಂದು ಮೆಲೋಡಿಯಸ್ ಮೋಡಿಯ ದೆಸೆಯಿಂದಲೇ ಗೆದ್ದು ಬೀಗಿದ ಸಾಕಷ್ಟು ಸಿನಿಮಾಗಳ ಉದಾಹರಣೆಗಳಿದ್ದಾವೆ. ಆ ಸಾಲಿಗೆ ಸೇರ್ಪಡೆಯಾಗಬಲ್ಲ ಎಲ್ಲ ಗುಣ ಲಕ್ಷಣಗಳನ್ನು ಒಳಗೊಂಡಿರುವ ಚಿತ್ರ `ನಗುವಿನ ಹೂಗಳ ಮೇಲೆ’ (Naguvina hoogala mele).  ಶೀರ್ಷಿಕೆಯಲ್ಲಿಯೇ ನವಿರು ಭಾವವನ್ನು ಬಚ್ಚಿಟ್ಟುಕೊಂಡಿರುವ, ಅಷ್ಟೇ ತಾಜಾ ತಾಜ ಕಥೆಯನ್ನೊಳಗೊಂಡಿರುವ ಈ ಚಿತ್ರವನ್ನು ವೆಂಕಟ್ ಭಾರದ್ವಾಜ್ (Venkat Bharadwaj) ನಿರ್ದೇಶನ ಮಾಡಿದ್ದಾರೆ. ಇದೇ ಫೆಬ್ರವರಿ 9ರಂದು ತೆರೆಗಾಣಲಿರುವ ನಗುವಿನ ಹೂಗಳ ಮೇಲೆ ಒಂದಷ್ಟು ಬೆರಗುಗಳಿವೆ. ಅದರಲ್ಲಿ ಹಾಡುಗಳು ಮತ್ತು ತಾಂತ್ರಿಕ ಶ್ರೀಮಂತಿಕೆಯದ್ದೇ ಮೇಲುಗೈ.

    ಇದು ಪ್ರೇಮ ಕಥಾನಕವೆಂಬ ವಿಚಾರ ತಿಳಿದಾಕ್ಷಣವೇ ನಗುವ ಹೂಗಳ ಮೇಲೆ ಸಿದ್ಧಸೂತ್ರಗಳ ಛಾಯೆ ಇದೆ ಅಂದುಕೊಳ್ಳುವಂತಿಲ್ಲ. ಯಾಕೆಂದರೆ, ಈ ಕಥೆಯ ಹುಟ್ಟಿನ ಮೂಲದಲ್ಲಿಯೇ ಭಿನ್ನ ಆಲೋಚನೆಗಳಿವೆ. ಅಷ್ಟಕ್ಕೂ ವೆಂಕಟ್ ಭಾರದ್ವಾಜ್ ಅವರ ನಿರ್ದೇಶನದ ಗ್ರಾಫ್ ಅನ್ನೊಮ್ಮೆ ಪರಿಶೀಲಿಸಿದರೆ ಎಲ್ಲವೂ ಮನದಟ್ಟಾಗುತ್ತದೆ. ಹದಿನೆಂಟರಿಂದ ಎಂಬತ್ತನೇ ವಯೋಮಾನದವರೆಗೂ ಹಿಡಿಸಬಲ್ಲಂಥಾ ವಿಶಿಷ್ಟ ಪ್ರೇಮ ಕಥೆ ಇಲ್ಲಿದೆ. ಹಾಗಿದ್ದ ಮೇಲೆ ಇಲ್ಲಿನ ಹಾಡುಗಳನ್ನೂ ಕೂಡಾ ಭಿನ್ನವಾಗಿಯೇ ರೂಪಿಸಬೇಕೆಂಬ ಇರಾದೆಯಿಂದ ವೆಂಕಟ್ ಅದಕ್ಕಾಗಿ ಸಾಕಷ್ಟು ಶ್ರಮ ವಹಿಸಿದ್ದಾರೆ. ಅದರ ಭಾಗವಾಗಿಯೇ ಪಂಜಾಬ್ ಮೂಲದ ಪ್ರಸಿದ್ಧ ಸಂಗೀತ ನಿರ್ದೇಶಕ ಲವ್ ಫ್ರಾನ್ ಮೆಹತಾರನ್ನು ನೆಚ್ಚಿಕೊಂಡಿದ್ದಾರೆ.

    ಲವ್ ಫ್ರಾನ್ ಮೆಹೆತಾ ಪಂಜಾಬ್ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿರುವ ಸಂಗೀತ ನಿರ್ದೇಶಕ. ಅವರ ಸಾರಥ್ಯದಲ್ಲಿ ಹಾಡುಗನ್ನು ರೂಪಿಸಿರುವ ವೆಂಕಟ್, ಆ ಭಾವಕ್ಕೆ ತಕ್ಕುದಾದ ಕಂಠಗಳನ್ನೇ ತಲಾಶು ನಡೆಸಿದ್ದಾರೆ. ಈ ಹಾಡುಗಳಿಗೆ ಕನ್ನಡದ ಖ್ಯಾತ ಕವಿ ಚಿದಂಬರ ನರೇಂದ್ರ ಎರಡು ಹಾಡುಗಳನ್ನು ಬರೆದಿದ್ದಾರೆ. ಇನ್ನುಳಿದಂತೆ ಕಾಂತಾರ ಖ್ಯಾತಿಯ ಪ್ರಮೋದ್ ಮರವಂತೆ ಎರಡು ಹಾಗೂ ನರೇಂದ್ರ ಬಾಬು ಅವರು ಒಂದು ಹಾಡನ್ನು ಬರೆದಿದ್ದಾರೆ. ಅದಕ್ಕೆ ಇಂಡಿಯನ್ ಐಡಲ್ ರನ್ನರ್ ಅಪ್ ಆಗಿರುವ ತೇಜೇಂದರ್ ಸಿಂಗ್, ನಿಹಾರಿಕಾ, ಕೇರಳ ಮೂಲದ ವಿಮಲ್ ಮತ್ತು ಮೇಘನಾ ಭಟ್ ಧ್ವನಿಯಾಗಿದ್ದಾರೆ. ಈ ಐದೂ ಹಾಡುಗಳೂ ಕೂಡಾ ಸೂಪರ್ ಹಿಟ್ ಆಗಿವೆ.

    ಪ್ರಧಾನವಾಗಿ, ರಂಗಭೂಮಿಯಲ್ಲಿ ಕ್ರಿಯಾಶೀಲರಾಗಿರುವ ಅಭಿಷೇಕ್ ಅಯ್ಯಂಗಾರ್ ಈ ಮೂಲಕ ಸಂಭಾಷಣಾಕಾರರಾಗಿದ್ದಾರೆ. ಎಲ್ಲವೂ ವಿಶೇಷವಾಗಿರಬೇಕೆಂಬ ದೃಷ್ಟಿಯಿಂದ ಐದು ವರ್ಷನ್ ಸಂಭಾಷಣೆ ರೆಡಿ ಮಾಡಿ, ಅದರಲ್ಲೊಂದನ್ನು ಆಯ್ಕೆ ಮಾಡಿಕೊಳ್ಳಲಾಗಿದೆಯಂತೆ. ಅಂದಹಾಗೆ ಮೇಲುನೋಟಕ್ಕೆ ಇದು ಪ್ರೇಮ ಕಥೆಯ ಚಿತ್ರ ಅನ್ನಿಸೋದು ನಿಜ. ಆದರೆ, ಇಲ್ಲಿ ಬದುಕಿಗೆ ಹತ್ತಿರಾದಂಥಾ, ನೋಡಿದ ಪ್ರತಿಯೊಬ್ಬರಿಗೂ ತಮ್ಮದೇ ಅನ್ನಿಸುವಂಥಾ ಸೂಕ್ಷ್ಮ ಭಾವಗಳಿದ್ದಾವಂತೆ. ಸಮಯವೆಂಬುದು ಎಂತೆಂಥಾ ಅಚ್ಚರಿಗಳಿಗೆ, ಆಘಾತಗಳಿಗೆ ಕಾರಣವಾಗುತ್ತದೆಂಬುದರ ಸುತ್ತ ಕಥೆ ಚಲಿಸುತ್ತದೆಯಂತೆ.

     

    ಕೇವಲ ಹಾಡುಗಳ ವಿಚಾರದಲ್ಲಿ ಮಾತ್ರವಲ್ಲದೇ, ತಾಂತ್ರಿಕವಾಗಿಯೂ ನಗುವಿನ ಹೂಗಳ ಮೇಲೆ ಹೊಸತನ ಮೇಳೈಸಿದೆ. ಇದರ ಹಿನ್ನೆಲೆ ಸಂಗೀತವನ್ನು ಲಂಡನ್ನಿನಲ್ಲಿ ಹೊಳಪುಗಟ್ಟಿಸಲಾಗಿದೆ. ಅಲ್ಲಿನ ಪ್ರಸಿದ್ಧ ತಂತ್ರಜ್ಞರು ಕೂಡಾ ಈ ಕಾರ್ಯದಲ್ಲಿ ಸಾಥ್ ಕೊಟ್ಟಿದ್ದಾರೆ. ಹೀಗೆ ಎಲ್ಲದರಲ್ಲಿಯೂ ವಿಶೇಷತೆಗಳನ್ನು ಹೊಂದಿರುವ ಈ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕರಾದ ಕೆ.ಕೆ ರಾಧ ಮೋಹನ್ ನಿರ್ಮಾಣ ಮಾಡಿದ್ದಾರೆ. ಅಭಿದಾಸ್ ಮತ್ತು ಶರಣ್ಯಾ ಈ ಚಿತ್ರದಲ್ಲಿ ನಾಯಕ ನಾಯಕಿಯರಾಗಿ ನಟಿಸಿದ್ದಾರೆ. ಬಲ ರಾಜವಾಡಿ, ಆಶಾ ಸುಜಯ್, ಗಿರೀಶ್ ನಂಜಪ್ಪ, ಹರ್ಷಿತ್ ಗೌಡ, ಅಭಿಷೇಕ್ ಐಯಂಗಾರ್, ಹರೀಶ್ ಚೌಹಾಣ್, ಹರ್ಷ ಗೋ ಭಟ್ ಮುಂತಾದವರ ತಾರಾಗಣವಿದೆ. ಪ್ರಮೋದ್ ಭಾರತೀಯ ಛಾಯಾಗ್ರಹಣ, ಅಭಿಷೇಕ್ ಐಯಂಗಾರ್ ಸಂಭಾಷಣೆ, ಲವ್ ಫ್ರಾನ್ ಮೆಹತಾ ಸಂಗೀತ ನಿರ್ದೇಶನ, ಚಂದನ್ ಪಿ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

  • ‘ನಗುವಿನ ಹೂಗಳ ಮೇಲೆ’ ಚಿತ್ರದ ಮೂಲಕ ಕನ್ನಡಕ್ಕೆ ಬಂದ ತೆಲುಗು ನಿರ್ಮಾಪಕ

    ‘ನಗುವಿನ ಹೂಗಳ ಮೇಲೆ’ ಚಿತ್ರದ ಮೂಲಕ ಕನ್ನಡಕ್ಕೆ ಬಂದ ತೆಲುಗು ನಿರ್ಮಾಪಕ

    ಪ್ರೇಮಕಥಾನಕವೆಂಬುದು ಯಾವತ್ತಿದ್ದರೂ ಸಿನಿಮಾ ಫ್ರೇಮಿಗೆ ಫ್ರೆಶ್ ಆಗಿ ಒಗ್ಗುವಂಥಾ ಮಾಯೆ. ಆದರೆ, ನಿರ್ದೇಶಕರು ಯಾವ ರೀತಿಯ ಜಾಣ್ಮೆ ಅನುಸರಿಸುತ್ತಾರೆ? ಅದೆಷ್ಟು ಹೊಸತನದಲ್ಲಿ ಸಿನಿಮಾವನ್ನು ರೂಪಿಸಿದ್ದಾರೆಂಬುದರ ಮೇಲೆ ಪ್ರೇಕ್ಷಕರ ನಿರ್ಧಾರ ನಿಂತಿರುತ್ತೆ. ಅದರಲ್ಲಿಯೂ ಸದಾ ಹೊಸತನಗಳಿಗೆ ಹಾತೊರೆಯುತ್ತಾ, ಆ ಹಾದಿಯಲ್ಲಿಯೇ ಗೆದ್ದಿರೋ ವೆಂಕಟ್ ಭಾರದ್ವಾಜ್ (Venkat Bharadwaj) ಅವರು ಸಾರಥ್ಯ ವಹಿಸಿದ್ದಾರೆಂದ ಮೇಲೆ ನಿರೀಕ್ಷೆ ಮತ್ತಷ್ಟು ತೀವ್ರವಾಗೋದರಲ್ಲಿ ಅಚ್ಚರಿಯೇನಿಲ್ಲ. ಆ ಕಾರಣದಿಂದಲೇ ಗಮನ ಸೆಳೆದು, ಇದೇ ಫೆಬ್ರವರಿ 9ರಂದು ಬಿಡುಗಡೆಗೊಳ್ಳುತ್ತಿರುವ ಚಿತ್ರ `ನಗುವಿನ ಹೂಗಳ ಮೇಲೆ’.

    `ಆಮ್ಲೆಟ್, `ಕೆಂಪಿರ್ವೆ’ ಮುಂತಾದ ಸಿನಿಮಾಗಳ ಮೂಲಕ ತಮ್ಮದು ಭಿನ್ನ ಹಾದಿ ಎಂಬುದನ್ನು ಸಾಬೀತು ಪಡಿಸಿರುವ ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ `ನಗುವಿನ ಹೂಗಳ ಮೇಲೆ’ ನಿರೀಕ್ಷೆಗಳ ಮೆರವಣಿಗೆ ಶುರುವಾಗಿದೆ. ವಿಶೇಷವೆಂದರೆ, ಈ ಚಿತ್ರದ ಮೂಲಕ ತೆಲುಗಿನ ಖ್ಯಾತ ನಿರ್ಮಾಪಕರೊಬ್ಬರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. `ಪಂಥಂ’, `ಬೆಂಗಾಲ್ ಟೈಗರ್’, `ಒಡೇಲ ರೈಲ್ವೇ ಸ್ಟೇಷನ್’ ಮುಂತಾದ ಸೂಪರ್ ಹಿಟ್ ಸಿನಿಮಾಗಳ ನಿರ್ಮಾಪಕರಾಗಿರುವ ಕೆ.ಕೆ ರಾಧಾ ಮೋಹನ್ (KK Radha Mohan) ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

    ಕೆ.ಕೆ ರಾಧಾ ಮೋಹನ್ ಅವರ ಶ್ರೀ ಸತ್ಯಸಾಯಿ ಆಟ್ರ್ಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊದಲ ಚಿತ್ರವೆಂಬ ಹೆಗ್ಗಳಿಕೆಯೂ `ನಗುವಿನ ಹೂಗಳ ಮೇಲೆ’ ಚಿತ್ರಕ್ಕೆ ಸಲ್ಲುತ್ತದೆ. ಇದು ನಿಜಕ್ಕೂ ಕನ್ನಡ ಚಿತ್ರರಂಗದ ಘನತೆ ಪರಭಾಷಾ ಚಿತ್ರರಂಗದಲ್ಲಿಯೂ ಮಿಂಚುತ್ತಿರೋದರ ಸಂಕೇತ. ಕೆ.ಕೆ ರಾಧಾ ಮೋಹನ್ ಯಾವುದೇ ಸಿನಿಮಾವನ್ನು ಎಲ್ಲ ದಿಕ್ಕಿನಲ್ಲಿಯೂ ಪರಾಮರ್ಶಿಸಿ ನಿರ್ಮಾಣಕ್ಕಿಳಿಯುವವರು. ವೆಂಕಟ್ ಭಾರದ್ವಾಜ್ ಸಿದ್ಧಪಡಿಸಿಕೊಂಡಿದ್ದ ಕಥೆ, ಅದರಲ್ಲಿ ಮಿಂಚುತ್ತಿದ್ದ ಹೊಸತನಗಳನ್ನು ಕಂಡು ಥ್ರಿಲ್ ಆಗಿಯೇ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರಂತೆ. ಅಂಥಾ ನಂಬಿಕೆಯನ್ನು ಉಳಿಸಿಕೊಳ್ಳುವಂತೆ, ಎಲ್ಲ ವರ್ಗದ ಪ್ರೇಕ್ಷಕರನ್ನೂ ಆವರಿಸಿಕೊಳ್ಳುವಂತೆ ಈ ಸಿನಿಮಾವನ್ನು ನಿರ್ದೇಶನ ಮಾಡಿರುವ ತುಂಬು ತೃಪ್ತಿ ವೆಂಕಟ್ ಭಾರಧ್ವಾಜ್ ಅವರಲ್ಲಿದೆ.

    ಹೊಸಾ ತೆರನಾದ ಪ್ರೇಮಕಥನವನ್ನೊಳಗೊಂಡಿರುವ ಚಿತ್ರ `ನಗುವಿನ ಹೂಗಳ ಮೇಲೆ’. ಇದರಲ್ಲಿ ಅಭಿದಾಸ್ ನಾಯಕನಾಗಿ ನಟಿಸಿದ್ದಾರೆ. ಈಗಾಗಲೇ ಸೀರಿಯಲ್ಲುಗಳ ಮೂಲಕ ಮನೆಮಾತಾಗಿರುವ ಅಭಿ ಪಾಲಿಗೆ ಒಂದೊಳ್ಳೆ ಪಾತ್ರವೇ ಸಿಕ್ಕಿದೆಯಂತೆ. ಇನ್ನು ಒಂದಷ್ಟು ಪಾತ್ರಗಳ ಮೂಲಕ ಸೆಳೆದುಕೊಂಡಿದ್ದ ಶರಣ್ಯಾ ಶೆಟ್ಟಿ (Sharanya Shetty) ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕಿಯಾಗಿದ್ದಾರೆ. ಬಲ ರಾಜವಾಡಿ, ಆಶಾ ಸುಜಯ್, ಗಿರೀಶ್ ನಂಜಪ್ಪ, ಹರ್ಷಿತ್ ಗೌಡ, ಅಭಿಷೇಕ್ ಐಯಂಗಾರ್, ಹರೀಶ್ ಚೌಹಾಣ್, ಹರ್ಷ ಗೋ ಭಟ್ ಮುಂತಾದವರ ತಾರಾಗಣವಿದೆ. ಪ್ರಮೋದ್ ಭಾರತೀಯ ಛಾಯಾಗ್ರಹಣ, ಅಭಿಷೇಕ್ ಐಯಂಗಾರ್ ಸಂಭಾಷಣೆ, ಲವ್ ಫ್ರಾನ್ ಮೆಹತಾ ಸಂಗೀತ ನಿರ್ದೇಶನ, ಚಂದನ್ ಪಿ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

  • ಪ್ರಕೃತಿಯ ದೃಶ್ಯ ವೈಭವದ ಅನುಭೂತಿ ನೀಡಲಿದೆ ‘ನಗುವಿನ ಹೂಗಳ ಮೇಲೆ’ ಚಿತ್ರ

    ಪ್ರಕೃತಿಯ ದೃಶ್ಯ ವೈಭವದ ಅನುಭೂತಿ ನೀಡಲಿದೆ ‘ನಗುವಿನ ಹೂಗಳ ಮೇಲೆ’ ಚಿತ್ರ

    ನ್ನಡ ಚಿತ್ರರಂಗದ ಮಟ್ಟಿಗೆ ಹೊಸಾ ಆವೇಗವೊಂದರ ಪರ್ವ ಕಾಲ ಶುರುವಾಗಿ ಒಂದಷ್ಟು ವರ್ಷಗಳು ಕಳೆದಿವೆ. ಈಗ ಎಲ್ಲರ ಗಮನವಿರುವುದು ಹೊಸ ವರ್ಷವನ್ನು ಯಾವೆಲ್ಲ ಬಗೆಯ ಸಿನಿಮಾಗಳು ಕಳೆಗಟ್ಟಿಸಲಿವೆಯೆಂಬ ಪುಳಕದಂತಹ ನಿರೀಕ್ಷೆ ಮಾತ್ರ. ಆ ದೃಷ್ಟಿಯಲ್ಲಿ ಒಂದಷ್ಟು ಕಣ್ಣಾಡಿಸಿದರೆ ಕೆಲವಾರು ಸಿನಿಮಾಗಳು ಗಮನ ಸೆಳೆಯುತ್ತವೆ. ಆ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಚಿತ್ರ ವೆಂಕಟ್ ಭಾರದ್ವಾಜ್ ನಿರ್ದೇಶನದ `ನಗುವಿನ ಹೂಗಳ ಮೇಲೆ’ ಚಿತ್ರ.

    ಈಗಾಗಲೇ ಹಾಡುಗಳೂ ಸೇರಿದಂತೆ ನಾನಾ ರೀತಿಯಲ್ಲಿ ಸಂಚಲನ ಸೃಷ್ಟಿಸಿರುವ ಈ ಚಿತ್ರ, ಇದೇ ಫೆಬ್ರವರಿ 9ರಂದು ತೆರೆಗಾಣುತ್ತಿದೆ. ವೆಂಕಟ್ ಭಾರದ್ವಾಜ್ ನಿರ್ದೇಶನದ ಸಿನಿಮಾ ಅಂದರೆ, ಬೇರೆಯದ್ದೇ ದಿಕ್ಕಿನಲ್ಲಿ ಕೌತುಕ ಮುಡೋದು ಸಹಜ. ಯಾಕೆಂದರೆ, ನಿರ್ದೇಶಕನಾಗಿ ಇದುವರೆಗಿನ ನಡಿಗೆಯಲ್ಲಿಯೇ ಅವರು ಅಂಥದ್ದೊಂದು ಛಾಪು ಮೂಡಿಸಿದ್ದಾರೆ. ಪ್ರೇಕ್ಷಕರ ಮೆಚ್ಚುಗೆಯನ್ನೂ ಗಳಿಸಿದ್ದಾರೆ. ತಮ್ಮ ಇದುವರೆಗಿನ ಯಾನದಲ್ಲೇ ನಗುವಿನ ಹೂಗಳ ಮೇಲೆ ಚಿತ್ರದ ಮೂಲಕ ಮಹತ್ತರವಾದ ಅನುಭೂತಿಯೊಂದನ್ನು ಮೊಗೆದು ಕೊಡಲು ವೆಂಕಟ್ ಭಾರದ್ವಾಜ್ ತಯಾರಾದಂತಿದೆ.

    ಇಲ್ಲಿರೋದು ಪರಿಶುದ್ಧ ಪ್ರೇಮದ ನಾನಾ ಮಜಲುಗಳನ್ನು ತೆರೆದಿಡುವ ವಿಶಿಷ್ಟ ಕಥಾನಕ. ಪರಿಶುದ್ಧವಾದ, ಪ್ರಾಮಾಣಿಕವಾದ ಪ್ರೇಮವೆಂಬುದು ಯಾವತ್ತಿದ್ದರೂ ಪ್ರಕೃತಿಗೆ ಹತ್ತಿರವಾದದ್ದು. ಅದನ್ನು ಕೃತಕವಾದವುಗಳಿಂದ ಸಿಂಗರಿಸುವ ಯಾವ ದರ್ದೂ ಇಲ್ಲ. ಒಂದು ವೇಳೆ ಸಿಂಗರಿಸಿದರೂ ಕೂಡಾ ಅದು ಪ್ರೇಮವೆಂಬ ಅಸಲೀ ಹೊಳಪಿನ ಮುಂದೆ ಮಂಕಾಗುತ್ತದೆ. ಈ ಸೂಕ್ಷ್ಮವನ್ನು ಅರಿತಿರುವ ವೆಂಕಟ್ ಭಾರದ್ವಾಜ್, ಅತ್ಯಂತ ಸಹಜವಾಗಿ ಈ ಸಿನಿಮಾವನ್ನು ದೃಶ್ಯೀಕರಿಸಿದ್ದಾರೆ.

    ಸಾಮಾನ್ಯವಾಗಿ, ಯಾವುದೇ ಸಿನಿಮಾಗಳಿಗೆ ದೃಶ್ಯ ರೂಪ ಕೊಡುವಾಗಲ ದುಬಾರಿ ಸೆಟ್ಟುಗಳತ್ತ ಗಮನ ಹರಿಸಲಾಗುತ್ತೆ. ಅದರ ಮೇಲೆಯೇ ಸಿನಿಮಾವೊಂದರ ಕಿಮ್ಮತ್ತನ್ನು ಅಳೆಯುವ ಮಾನದಂಡಗಳೂ ಇವೆ. ಆದರೆ, ವೆಂಕಟ್ ಭಾರದ್ವಾಜ್ ಸೆಟ್ಟುಗಳ ಗೊಡವೆಯಿಲ್ಲದೆ, ಸಹಜ ಸುಂದರವಾದ ತಾಣಗಳಲ್ಲಿ ಇಲ್ಲಿನ ದೃಶ್ಯಗಳನ್ನು ರೂಪಿಸಿದ್ದಾರಂತೆ. ಕಣ್ಣಿಗೆ ಹಬ್ಬವೆನಿಸುವಂಥಾ, ಕಥೆಗೆ ಪೂರಕವಾಗಿ, ಒಮ್ಮೊಮ್ಮೆ ದೃಶ್ಯಗಳೇ ಕಥೆಯಾಗುವಂತಹ ಕಲಾವಂತಿಕೆಯಿಂದ ಈ ಚಿತ್ರವನ್ನು ರೂಪಿಸಿರುವ ಖುಷಿ ನಿರ್ದೇಶಕರಲ್ಲಿದೆ. ಇಲ್ಲಿ ದೃಶ್ಯರೂಪ ಧರಿಸಿರುವ ಸಹಜ ಪ್ರಾಕೃತಿಕ ವೈಭವ ಕಥೆಯ ಜೊತೆ ಜೊತೆಗೇ ಪ್ರೇಕ್ಷಕರನ್ನು ಥ್ರಿಲ್ ಮಾಡಲಿದೆ ಎಂಬುದು ಚಿತ್ರತಂಡದ ಭರವಸೆ.

     

    `ನಗುವಿನ ಹೂಗಳ ಮೇಲೆ’ ಚಿತ್ರ ಶೀರ್ಷಿಕೆಯಷ್ಟೇ ಮೆಲುವಾಗಿ ಪ್ರೇಕ್ಷಕರನ್ನು ತಾಕಿ, ಸಮ್ಮೋಹಕ ಗೆಲುವಿನ ಮೂಲಕ ವರ್ಷಾರಂಭಕ್ಕೊಂದು ಕಳೆ ತಂದು ಕೊಡುವ ಸಾಧ್ಯತೆಗಳಿವೆ. ಅಂದಹಾಗೆ, ಈ ಚಿತ್ರವನ್ನು ತೆಲುಗಿನ ಪ್ರಸಿದ್ದ ನಿರ್ಮಾಪಕರಾದ ಕೆ.ಕೆ ರಾಧ ಮೋಹನ್ ನಿರ್ಮಾಣ ಮಾಡಿದ್ದಾರೆ. ಅಭಿದಾಸ್ ಹಾಗೂ ಶರಣ್ಯಾ ನಾಯಕ ನಾಯಕಿಯರು. ಬಲ ರಾಜವಾಡಿ, ಆಶಾ ಸುಜಯ್, ಗಿರೀಶ್ ನಂಜಪ್ಪ, ಹರ್ಷಿತ್ ಗೌಡ, ಅಭಿಷೇಕ್ ಐಯಂಗಾರ್, ಹರೀಶ್ ಚೌಹಾಣ್, ಹರ್ಷ ಗೋ ಭಟ್ ಮುಂತಾದವರ ತಾರಾಗಣವಿದೆ. ಪ್ರಮೋದ್ ಭಾರತೀಯ ಛಾಯಾಗ್ರಹಣ, ಅಭಿಷೇಕ್ ಐಯಂಗಾರ್ ಸಂಭಾಷಣೆ, ಲವ್ ಫ್ರಾನ್ ಮೆಹತಾ ಸಂಗೀತ ನಿರ್ದೇಶನ, ಚಂದನ್ ಪಿ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನದೊಂದಿಗೆ `ನಗುವಿನ ಹೂಗಳ ಮೇಲೆ’ ನಳನಳಿಸಿದೆ.

  • ಟ್ರೈಲರ್ ನಲ್ಲೇ ಮೋಡಿ ಮಾಡಿದೆ ‘ನಗುವಿನ ಹೂಗಳ ಮೇಲೆ’

    ಟ್ರೈಲರ್ ನಲ್ಲೇ ಮೋಡಿ ಮಾಡಿದೆ ‘ನಗುವಿನ ಹೂಗಳ ಮೇಲೆ’

    ಶ್ರೀಸತ್ಯಸಾಯಿ ಆರ್ಟ್ಸ್ ಲಾಂಛನದಲ್ಲಿ ಕೆ.ಕೆ ರಾಧಾಮೋಹನ್ ನಿರ್ಮಿಸಿರುವ, ‘ಕೆಂಪಿರ್ವೆ’ ಖ್ಯಾತಿಯ ವೆಂಕಟ್ ಭಾರದ್ವಾಜ್ (Venkat Bharadwaj)ನಿರ್ದೇಶನದ ಹಾಗೂ ಅಭಿ ದಾಸ್ –  ಶರಣ್ಯ ಶೆಟ್ಟಿ ಜೋಡಿಯಾಗಿ ನಟಿಸಿರುವ ‘ನಗುವಿನ ಹೂಗಳ ಮೇಲೆ’ (Naguvina hugala mele)ಚಿತ್ರದ ಟ್ರೈಲರ್ ಇತ್ತೀಚಿಗೆ ಬಿಡುಗಡೆಯಾಗಿದೆ.  ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈಗಾಗಲೇ ಚಿತ್ರದ ಟೀಸರ್, ಟ್ರೈಲರ್ ಹಾಗೂ ಹಾಡುಗಳ ಮೂಲಕ ಮನೆಮಾತಾಗಿರುವ ಈ ಕನ್ನಡ ಮಣ್ಣಿನ ನಿಜ ಪ್ರೇಮ ಕಥೆ  ಫೆಬ್ರವರಿ 9 ರಂದು ತೆರೆಗೆ ಬರುತ್ತಿದೆ.

    ನಿರ್ದೇಶಕ ವೆಂಕಟ್ ಭಾರದ್ವಾಜ್ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ  ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ ಬರೆದಿದ್ದಾರೆ. ಪ್ರಮೋದ್ ಮರವಂತೆ, ಚದಂಬರ ನರೇಂದ್ರ, ಕಬ್ಬಡಿ ನರೇಂದ್ರ‌ಬಾಬು ಹಾಗೂ ಕಿರಣ್ ನಾಗರಾಜ್ ಅವರು ರಚಿಸಿರುವ ಹಾಡುಗಳಿಗೆ ಲವ್ ಪ್ರಾಣ್ ಮೆಹ್ತಾ ಸಂಗೀತ ಸಂಯೋಜಿಸಿದ್ದಾರೆ. ಪ್ರಮೋದ್ ಭಾರತೀಯ ಛಾಯಾಗ್ರಹಣ, ಚಂದನ್ ಪಿ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಲರ್ವಿನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

    ಅಭಿದಾಸ್ (Abhidas), ಶರಣ್ಯ ಶೆಟ್ಟಿ (Sharanya Shetty), ಗಿರೀಶ್ ಬೆಟ್ಟಪ್ಪ, ಹರ್ಷ ಗೋ ಭಟ್, ಬಾಲ ರಾಜವಾಡಿ, ಬೆನಕ ನಂಜಪ್ಪ, ಜ್ಯೋತಿ ಮರೂರ್, ಆಶಾ ಸುಜಯ್ ಮುಂತಾದವರು “ನಗುವಿನ ಹೂಗಳ ಮೇಲೆ” ಚಿತ್ರದಲ್ಲಿ ನಟಿಸಿದ್ದಾರೆ.

  • ವೆಂಕಟ್ ಭಾರದ್ವಾಜ್ ನಿರ್ದೇಶನದ ಚಿತ್ರಕ್ಕೆ ‘ಯು’ ಪ್ರಮಾಣಪತ್ರ

    ವೆಂಕಟ್ ಭಾರದ್ವಾಜ್ ನಿರ್ದೇಶನದ ಚಿತ್ರಕ್ಕೆ ‘ಯು’ ಪ್ರಮಾಣಪತ್ರ

    ರೋಮ್ಯಾಂಟಿಕ್ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ನಗುವಿನ ಹೂಗಳ ಮೇಲೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಈಗ ಸೆನ್ಸಾರ್ ಮಂಡಳಿಯಿಂದ ಕ್ಲೀನ್ ಚಿಟ್ ಪಡೆದುಕೊಂಡಿದೆ. ಯಾವುದೇ ಕಟ್ ಮತ್ತು ಯಾವುದೇ ದೃಶ್ಯಕ್ಕೆ ಮ್ಯೂಟ್ ಇಲ್ಲದೇ ಯು ಪ್ರಮಾಣ ಪತ್ರ  ತನ್ನದಾಗಿಸಿಕೊಂಡಿದೆ.

    ಶ್ರೀರಂಗ , ಕೆಂಪಿರ್ವೆ ಮತ್ತು  ಆಮ್ಲೆಟ್  ಸೇರಿದಂತೆ ಹತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿರುವ ವೆಂಕಟ್ ಭಾರದ್ವಾಜ್ (Venkat Bharadwaj) ಆಕ್ಷನ್ ಕಟ್ ಹೇಳಿರುವ ನಗುವಿನ ಹೂಗಳ ಮೇಲೆ  (Naguvin Hugala mele) ಸಿನಿಮಾದಲ್ಲಿ ಕಿರುತೆರೆಯಲ್ಲಿ ಖ್ಯಾತಿ ಗಳಿಸಿರುವ ಅಭಿದಾಸ್ (Abhidas), ಶರಣ್ಯ ಶೆಟ್ಟಿ (Sharanya Shetty)ಜೋಡಿಯಾಗಿ ನಟಿಸುತ್ತಿದ್ದು, ಬಾಲ ರಾಜವಾಡಿ, ಆಶಾ ಸುಜಯ್, ಗಿರೀಶ್, ನಂಜಪ್ಪ, ಅಭಿಷೇಕ್ ಅಯ್ಯಂಗರ್, ಹರ್ಷಿತ್ ಗೌಡ, ಹರೀಶ್ ಚೌಹಾನ್, ಹರ್ಷ ಗೋ ಭಟ್ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ:ಮಗಳ ವಯಸ್ಸಿನ ಫಾತಿಮಾ ಜೊತೆ ಮತ್ತೆ ಮದುವೆಗೆ ಸಜ್ಜಾದ ಆಮೀರ್‌ ಖಾನ್

    ಈಗಾಗಲೇ ಬಿಡುಗಡೆಯಾಗಿರುವ ಇರಲಿ ಬಿಡು ಈ ಜೀವ ನಿನಗಾಗಿ ಎಂಬ ರೋಮ್ಯಾಂಟಿಕ್ ಹಾಡು ಪ್ರೇಕ್ಷಕರನ್ನು ಆಕರ್ಷಿಸುತ್ತಿದೆ. ವೆಂಕಟ್‌ ಭಾರದ್ವಾಜ್‌ ಕಥೆ, ಚಿತ್ರಕಥೆ ಬರೆದು‌ ನಿರ್ದೇಶಿಸಿರುವ ನಗುವಿನ ಹೂಗಳ ಮೇಲೆ ಸಿನಿಮಾವನ್ನು ಟಾಲಿವುಡ್ ನಲ್ಲಿ ಸೂಪರ್ ಹಿಟ್ ಚಿತ್ರಗಳಾದ  ಬೆಂಗಾಲ್ ಟೈಗರ್, ಪಂಥಂ, ಒರೆ ಬುಜ್ಜುಗ , ಒಡೇಲ ರೈಲ್ವೆ ಸ್ಟೇಷನ್  ಮತ್ತು ಪ್ಯಾರ್  ಮೇ ಪಡೀಪೊಯಾನು ಚಿತ್ರಗಳನ್ನು ನಿರ್ಮಾಣ ಮಾಡಿರುವ  ಕೆ. ಕೆ.ರಾಧಾ ಮೋಹನ್ ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಇವರ ನಿರ್ಮಾಣದ ಮೊದಲ ಕನ್ನಡ ಸಿನಿಮಾವಾಗಿದೆ.

    ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ, ಪ್ರಮೋದ್ ಭಾರತಿಯ ಛಾಯಾಗ್ರಹಣ, ಚಂದನ್ ಪಿ ಸಂಕಲನ, ಲವ್ ಪ್ರಾನ್ ಮೆಹತಾ ಸಂಗೀತ ನಿರ್ದೇಶನ, ಟೈಗರ್ ಶಿವು ಸಾಹಸವಿರುವ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

  • ಭಾರತದ ವೈಶಿಷ್ಟ್ಯತೆಯನ್ನು ಕಟ್ಟಿಕೊಡಲಿದೆ ‘ಹೈನ’ ಚಿತ್ರ

    ಭಾರತದ ವೈಶಿಷ್ಟ್ಯತೆಯನ್ನು ಕಟ್ಟಿಕೊಡಲಿದೆ ‘ಹೈನ’ ಚಿತ್ರ

    ನಿರ್ದೇಶಕ ವೆಂಕಟ್ ಭಾರದ್ವಾಜ್ (Venkat Bhardwaj) ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಹೈನ (Haina) ಎಂದು ಶೀರ್ಷಿಕೆ ಇಡಲಾಗಿದ್ದು, ‘ಹೈನ’ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಕಳೆದವಾರ ಸೆಟ್ಟೇರಿರುವ ಹೈನ ಚಿತ್ರ ಕಂಟೆಂಟ್ ಬೇಸ್ಡ್ ಚಿತ್ರವಾಗಿದ್ದು ಸಂಪೂರ್ಣ ನವ ಕಲಾವಿದರ ತಾರಾಗಣವನ್ನೊಳಗೊಂಡಿದೆ.

    ಚೆನ್ನೈನ ಕಪಾಲೇಶ್ವರ ದೇವಸ್ಥಾನದಲ್ಲಿ ‘ಹೈನ’ ಚಿತ್ರ ಮುಹೂರ್ತ (Muhurta) ನೆರವೇರಿದ್ದು, ಚಿತ್ರೀಕರಣ ಕೂಡ ಆರಂಭವಾಗಿದೆ. ಡೆಡ್ಲಿ ಸ್ಕ್ವಾಡ್ ಅಡಿ ಬರಹವಿರುವ ಈ ಚಿತ್ರದಲ್ಲಿ ಭಾರತದ ಮಣ್ಣಿನ ಸೊಗಡನ್ನು ವಿಶೇಷವಾಗಿ ಛಲ, ವಿಶ್ವದಲ್ಲಿ ಭಾರತದ ಪ್ರಾಬಲ್ಯ ಸೇರಿದಂತೆ ಹಲವು ಕುತೂಹಲಭರಿತ ವಿಷಯಗಳನ್ನು ತೆರೆ ಮೇಲೆ ತರಲು ಹೊರಟಿದ್ದಾರೆ ವೆಂಕಟ್ ಭಾರಧ್ವಾಜ್. ಈ ಪ್ರಯೋಗಕ್ಕೆ ನವ ಹಾಗೂ ನುರಿತ ಕಲಾವಿದರು ಜೊತೆಯಾಗಲಿದ್ದಾರೆ. ಇದನ್ನೂ ಓದಿ: ಹೂವುಗಳನ್ನ ದೇಹಕ್ಕೆ ಅಂಟಿಸಿ, ಪ್ಲಾಸ್ಟಿಕ್ ಕವರ್‌ನಲ್ಲಿ ಮೈಮುಚ್ಚಿಕೊಂಡು ಬಂದ ಉರ್ಫಿ

    ಏಕಕಾಲದಲ್ಲಿ ಕನ್ನಡ, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ‘ಹೈನ’ ಸಿನಿಮಾ ನಿರ್ಮಾಣವಾಗುತ್ತಿದೆ. ಬೆಂಗಳೂರು, ಹೈದ್ರಾಬಾದ್, ಚೆನ್ನೈ, ಕರಾವಳಿ ಭಾಗದಲ್ಲಿ ಚಿತ್ರೀಕರಣ ನಡೆಯಲಿದೆ. ರಾಜ್ ಕಮಲ್, ಲಕ್ಷ್ಮಣ್ ಶಿವಶಂಕರ್, ಪ್ರಮೋದ್ ಮರವಂತೆ, ಶಾಂತಕುಮಾರ್ ಚಿತ್ರದ ತಾಂತ್ರಿಕ ಬಳಗದಲ್ಲಿದ್ದು, ಕೆ.ಕೆ ಕಂಬೈನ್ಸ್ ಹಾಗೂ ಅಮೃತ ಫಿಲಂ ಸೆಂಟರ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

    ಚಿತ್ರದ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಸದ್ಯದಲ್ಲೇ ಹಂಚಿಕೊಳ್ಳಲಿದೆ. ವೆಂಕಟ್ ಭಾರದ್ವಾಜ್ ನಿರ್ದೇಶನದ ‘ಆಹತ’ ಮತ್ತು ‘ನಗುವಿನ ಹೂಗಳ ಮೇಲೆ’ ತೆರೆಗೆ ಬರಲು ಸಿದ್ದವಾಗಿದ್ದು, ಶೀಘ್ರದಲ್ಲೇ  ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪ್ರಕಟಿಸಲಿದೆ.

  • ಲಂಡನ್ ಸ್ಟುಡಿಯೋದಲ್ಲಿ ಕನ್ನಡ ಚಿತ್ರಕ್ಕೆ ಹಿನ್ನೆಲೆ ಸಂಗೀತ

    ಲಂಡನ್ ಸ್ಟುಡಿಯೋದಲ್ಲಿ ಕನ್ನಡ ಚಿತ್ರಕ್ಕೆ ಹಿನ್ನೆಲೆ ಸಂಗೀತ

    ಮ್ಲೆಟ್, ಕೆಂಪಿರ್ವೆ ಖ್ಯಾತಿಯ ನಿರ್ದೇಶಕ ವೆಂಕಟ್ ಭಾರದ್ವಾಜ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ’. ಕಥೆ, ಚಿತ್ರಕಥೆ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ನಿಭಾಯಿಸಿ ಸಿನಿಮಾವನ್ನು ತೆರೆ ಮೇಲೆ ತರಲು ಸಜ್ಜಾಗಿದ್ದಾರೆ ವೆಂಕಟ್ ಭಾರದ್ವಾಜ್. ಬಿಡುಗಡೆಯ ಸನಿಹದಲ್ಲಿರುವ ಚಿತ್ರತಂಡ ಸದ್ಯ ಹಿನ್ನೆಲೆ ಸಂಗೀತ ಯಶಸ್ವಿಯಾಗಿ ಮುಗಿಸಿದ ಸಂಭ್ರಮದಲ್ಲಿದೆ.

    ಚಿತ್ರದ ಸಂಗೀತ ನಿರ್ದೇಶಕ ಲವ್ ಪ್ರಾನ್ ಮೆಹತಾ ಲಂಡನ್ ನ Mellifluous ಸ್ಟುಡಿಯೋ ನಲ್ಲಿ ಚಿತ್ರದ ಹಿನ್ನೆಲೆ ಸಂಗೀತ, ಎಫೆಕ್ಟ್ಸ್, ಫೈನಲ್ ಮಿಕ್ಸಿಂಗ್ ಸುಸೂತ್ರವಾಗಿ ಮುಗಿಸಿದ್ದು 7.1 ಫೈನಲ್ ಔಟ್ ಪುಟ್ ದೊರೆತಿದೆ. ಔಟ್ ಪುಟ್ ಕಂಡು ನಿರ್ದೇಶಕ ವೆಂಕಟ್ ಭಾರದ್ವಾಜ್ ಹರುಷಗೊಂಡಿದ್ದು, ಸಂತಸ ಹಂಚಿಕೊಂಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯವನ್ನು ಭರ್ಜರಿಯಾಗಿ ನಡೆಸುತ್ತಿದೆ. ಇದೀಗ ಚಿತ್ರದ ಬ್ಯಾಗ್ರೌಂಡ್ ಸ್ಕೋರ್ ಅಂದುಕೊಂಡಂತೆ ಯಶಸ್ವಿಯಾಗಿರೋದು ಚಿತ್ರತಂಡದ ಸಂಭ್ರಮ ಹೆಚ್ಚಿಸಿದೆ. ಇದನ್ನೂ ಓದಿ:ಶ್ರದ್ಧಾ ಹೆಸರಿನ ಮುಂದಿರುವ ಈ ರಮಾ ಯಾರು? 

    ನಾಯಕ ಅಭಿಷೇಕ್ ರಾಮದಾಸ್, ನಾಯಕಿ ಶರಣ್ಯಾ ಶೆಟ್ಟಿ ಚಿತ್ರದ ಪ್ರಚಾರ ಕಾರ್ಯವನ್ನು ವಿಭಿನ್ನವಾಗಿ ನಡೆಸುತ್ತಿದ್ದು, ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಾಲ ರಾಜವಾಡಿ, ಗಿರೀಶ್, ಆಶಾ ಸುಜಯ್, ನಂಜಪ್ಪ, ಅಭಿಷೇಕ್ ಅಯ್ಯಂಗರ್, ಹರ್ಷಿತಾ ಗೌಡ, ಹರೀಶ್ ಚೌಹಾನ್, ಹರ್ಷ ಗೋ ಭಟ್ ಒಳಗೊಂಡ ಕಲಾವಿದರ ಬಳಗ ಚಿತ್ರದಲ್ಲಿದೆ. ರೋಮ್ಯಾಂಟಿಕ್  ಜೊತೆಗೆ ಆಕ್ಷನ್ ಕಥಾಹಂದರ ಒಳಗೊಂಡ ಈ ಚಿತ್ರವನ್ನು ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್ ನಡಿ ತೆಲುಗಿನ ಖ್ಯಾತ ನಿರ್ಮಾಪಕರಾದ ಕೆ.ಕೆ ರಾಧಾ ಮೋಹನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಇವರ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಮೊದಲ ಕನ್ನಡ ಸಿನಿಮಾವಾಗಿದೆ. ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ,  ಪ್ರಮೋದ್ ಭಾರತಿಯ ಛಾಯಾಗ್ರಹಣ, ಟೈಗರ್ ಶಿವು ಸಾಹಸ ಚಿತ್ರಕ್ಕಿದೆ.

     

    Live Tv
    [brid partner=56869869 player=32851 video=960834 autoplay=true]