Tag: ವೆಂಕಯ್ಯ ನಾಯ್ಡು

  • 40 ವರ್ಷಗಳ ಸ್ನೇಹವನ್ನ ನೆನೆದು ಕಣ್ಣೀರಿಟ್ಟ ವೆಂಕಯ್ಯ ನಾಯ್ಡು

    40 ವರ್ಷಗಳ ಸ್ನೇಹವನ್ನ ನೆನೆದು ಕಣ್ಣೀರಿಟ್ಟ ವೆಂಕಯ್ಯ ನಾಯ್ಡು

    ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷರಾಗಿರುವ ವೆಂಕಯ್ಯ ನಾಯ್ಡು ಅವರು ರಾಜ್ಯ ಸಭೆಯಲ್ಲಿ ಅಗಲಿದ ಸ್ನೇಹಿತನನ್ನು ನೆನೆದು ಕಣ್ಣೀರಿಟ್ಟರು. ರಾಜ್ಯಸಭೆಯಲ್ಲಿ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಂದರ್ಭದಲ್ಲಿ ನಾಯ್ದು ಭಾವನಾತ್ಮಕ ಸೆಲೆಗೆ ಸಿಲುಕಿ ದುಃಖಿತರಾದರು.

    ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ಅವರನ್ನು ನೆನೆದು ನಾಯ್ದು ಅವರು ಕಣ್ಣೀರಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜೈಪಾಲ್ ರೆಡ್ಡಿ ಉತ್ತಮ ಸಂಸದೀಯ ಪಟುವಾಗಿದ್ದು, ಅತ್ಯುತ್ತಮ ವಾಗ್ಮಿಯಾಗಿದ್ದರು. 70ರ ದಶಕದಲ್ಲಿ ಆಂಧ್ರ ವಿಧಾನಸಭೆಯಲ್ಲಿ ಅವರೊಂದಿಗೆ ಕೆಲಸ ಮಾಡಿದ್ದೆ. ಸದನ 8 ಗಂಟೆಗೆ ಇದ್ದರೆ, 7 ಗಂಟೆಗೆ ಉಪಾಹಾರಕ್ಕೆ ಹಾಜರಾಗುತ್ತಿದ್ದ ನಾವು ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಿದ್ದೇವು. ಜನರ ಸಮಸ್ಯೆಗಳ ಬಗ್ಗೆ ತಮ್ಮದೇ ರೀತಿಯಲ್ಲಿ ವಾದಿಸುತ್ತಿದ್ದೆವು ಎಂದು ಸ್ಮರಿಸಿಕೊಂಡರು.

    ಜೈಪಾಲ್ ರೆಡ್ಡಿ ನನಗಿಂತ 6 ವರ್ಷ ಚಿಕ್ಕವರಾಗಿದ್ದು, ಅವರು ನನಗೆ ಸ್ನೇಹಿತರಾಗಿ, ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ್ದರು. ಅವರ ನಿಧನ ತೀವ್ರ ದುಃಖ ತಂದಿದೆ. ನನ್ನ ಭಾವನೆಗಳನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಎಂದು ವೆಂಕಯ್ಯ ನಾಯ್ಡು ಅವರು ಹೇಳಿದರು.

    ಹೈದರಾಬಾದಿನ ಆಸ್ಪತ್ರೆಯಲ್ಲಿ ಭಾನುವಾರ ಮುಂಜಾನೆ 77 ವರ್ಷದ ಜೈಪಾಲ್ ರೆಡ್ಡಿ ನಿಧನರಾಗಿದ್ದರು. ನ್ಯೂಮೋನಿಯಾದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಜೈಪಾಲ್ ರೆಡ್ಡಿ ಅವರನ್ನು ಚಿಕಿತ್ಸೆಗೆ ದಾಖಲಿಸಲಾಗಿತ್ತು. 1984 ರಿಂದ ಐದು ಬಾರಿ ಸಂಸದರಾಗಿ ಆಯ್ಕೆ ಆಗಿದ್ದ ಅವರು 2 ಬಾರಿ ರಾಜ್ಯಸಭೆಗೂ ಆಯ್ಕೆ ಆಗಿದ್ದರು. ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆದಿದ್ದರು. ಅಜಾತಶತ್ರು, ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ಜೈಪಾಲ್ ರೆಡ್ಡಿ ಅಂತ್ಯಕ್ರಿಯೆ ಹೈದರಾಬಾದ್‍ನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ನೆಕ್ಲೆಸ್ ರೋಡ್‍ನ ಪಿವಿ ಘಾಟ್‍ನಲ್ಲಿ ಜೈಪಾಲ್ ರೆಡ್ಡಿ ಅಂತ್ಯಕ್ರಿಯೆಯನ್ನು ಪುತ್ರ ಅರವಿಂದ್ ರೆಡ್ಡಿ ನೆರವೇರಿಸಿದರು. ಇದಕ್ಕೂ ಮುನ್ನ ಜೈಪಾಲ್ ರೆಡ್ಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಗಣ್ಯರ ದಂಡೇ ಹರಿದುಬಂದಿತ್ತು. ಸಿದ್ದರಾಮಯ್ಯ, ರಮೇಶ್ ಕುಮಾರ್, ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್ ಸೇರಿದಂತೆ ಹಲವು ನಾಯಕರು ಜೈಪಾಲ್ ರೆಡ್ಡಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಇದನ್ನು ಓದಿ:   ಜೈಪಾಲ್ ರೆಡ್ಡಿಗೆ ಹೆಗಲು ಕೊಟ್ಟ ಸಿದ್ದರಾಮಯ್ಯ, ರಮೇಶ್ ಕುಮಾರ್

  • ಕರುಣಾನಿಧಿ ಆರೋಗ್ಯ ಸ್ಥಿರ: ಚೆನ್ನೈ ಆಸ್ಪತ್ರೆಗೆ ಉಪರಾಷ್ಟ್ರಪತಿ ಭೇಟಿ

    ಕರುಣಾನಿಧಿ ಆರೋಗ್ಯ ಸ್ಥಿರ: ಚೆನ್ನೈ ಆಸ್ಪತ್ರೆಗೆ ಉಪರಾಷ್ಟ್ರಪತಿ ಭೇಟಿ

    ಚೆನ್ನೈ: ಡಿಎಂಕೆ ವರಿಷ್ಠ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.

    94 ವರ್ಷದ ಕರುಣಾನಿಧಿಯವರು ಶುಕ್ರವಾರ ಮೂತ್ರನಾಳದ ಸೋಂಕು ತಗುಲಿ ಜ್ವರದಿಂದ ಬಳಲಿದ್ದು, ನಂತರ ರಕ್ತದೊತ್ತಡ ಕಡಿಮೆಯಾದ ಪರಿಣಾಮ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಇಂದು ಕಾವೇರಿ ಆಸ್ಪತ್ರೆಗೆ ಖುದ್ದು ಭೇಟಿ ನೀಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರವರು ಕರುಣಾನಿಧಿಯವರ ಆರೋಗ್ಯ ವಿಚಾರಿಸಿದ್ದಾರೆ. ವೆಂಕಯ್ಯನಾಯ್ಡುರವರ ಭೇಟಿಯ ಫೋಟೊವನ್ನು ಡಿಎಂಕೆ ಬಿಡುಗಡೆಮಾಡಿದೆ.

    ವೈದ್ಯರ ತಂಡ ನಿರಂತರ ಮೇಲ್ವಿಚಾರಣೆ ನಡೆಸಿ ಕರುಣಾನಿಧಿಯವರಿಗೆ ಚಿಕಿತ್ಸೆ ನೀಡುತ್ತಿದೆ. ಇಂದು ಕರುಣಾನಿಧಿಯವರು ಹಾಗೂ ಅವರ ಕುಟುಂಬಸ್ಥರು ಮತ್ತು ವೈದ್ಯರ ಬಳಿ ಅವರ ಆರೋಗ್ಯ ವಿಚಾರಿಸಿದ್ದೇನೆ. ವೈದ್ಯರು ಅವರ ಆರೋಗ್ಯ ಸ್ಥಿರವಾಗಿದೆ. ಅವರು ಬೇಗ ಗುಣಮುಖರಾಗಲಿದ್ದಾರೆ ಎಂದು ವಿಪಿಎಸ್ ಸೆಕ್ರೆಟರಿಯೆಟ್ ಟ್ವೀಟ್ ಮಾಡಿ ತಿಳಿಸಿದೆ.

  • ಸಿಜೆಐ ಮಹಾಭಿಯೋಗ ನೋಟಿಸ್ ನಿರಾಕರಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

    ಸಿಜೆಐ ಮಹಾಭಿಯೋಗ ನೋಟಿಸ್ ನಿರಾಕರಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

    ನವದೆಹಲಿ: ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಾಧೀಶ (ಸಿಜೆಐ) ದೀಪಕ್ ಮಿಶ್ರಾ ವಿರುದ್ಧ ಪ್ರತಿಪಕ್ಷಗಳು ಸಲ್ಲಿಸಿದ್ದ ಮಹಾಭಿಯೋಗ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಸ್ಪೀಕರ್ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದಾರೆ.

    ನೋಟಿಸ್ ನಲ್ಲಿ ಹೇಳಲಾದ ಯಾವುದೇ ಅಂಶಗಳಿಗೆ ಸೂಕ್ತ ಸಾಕ್ಷಿಗಳಾಗಲಿ, ಆಧಾರಗಳಾಗಲಿ ಇಲ್ಲ. ಕಾನೂನು ಮತ್ತು ಸಂವಿಧಾನ ತಜ್ಞರ ಜೊತೆ ಚರ್ಚೆ ಮಾಡಿದ್ದೇನೆ. ನಿಲುವಳಿ ನೋಟಿಸ್ ಸ್ವೀಕರಿಸಲು ಅನರ್ಹವಾಗಿದೆ. ಹಾಗಾಗಿ ನಿರಾಕರಿಸಿದ್ದೇನೆ ಎಂದು ಹೇಳಿದ್ದಾರೆ.

    ಮಹಾಭಿಯೋಗ ನಿಲುವಳಿ ನೋಟಿಸ್ ನಲ್ಲಿ ಮಾಡಿರುವ 5 ಆರೋಪಗಳು ಹಾಗೂ ಅದಕ್ಕೆ ಒದಗಿಸಿರುವ ದಾಖಲಾತಿಗಳನ್ನು ಪರಿಶೀಲಿಸಿದ್ದೇನೆ. ಎಲ್ಲೂ ಕೂಡ ಸಿಜೆಐ ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ಕಂಡು ಬಂದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ:ಸುಪ್ರೀಂ ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗಕ್ಕೆ ಮನಮೋಹನ್ ಸಿಂಗ್ ಸಹಿ ಮಾಡಿಲ್ಲ ಏಕೆ?

    ಒಂದು ವೇಳೆ ನಿಲುವಳಿ ನೋಟಿಸ್ ನಿರಾಕರಿಸಿದ್ದೇ ಆದಲ್ಲಿ ಸುಪ್ರಿಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುತ್ತೇವೆ ಎಂದು ಕಾಂಗ್ರೆಸ್ ಪಕ್ಷ ಹೇಳಿತ್ತು. ರಾಜ್ಯಸಭಾಧ್ಯಕ್ಷರ ನಿರಾಕರಣೆಯ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ನಡೆಯನ್ನು ನಿರ್ಧಾರ ಮಾಡುತ್ತೇವೆ ಎಂದು ಕಾಂಗ್ರೆಸ್ ಸದಸ್ಯ ಪಿ ಎಲ್ ಪುನಿಯಾ ಹೇಳಿದ್ದಾರೆ.ಇದನ್ನೂ ಓದಿ:ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗ ನಡೆಯುವುದು ಹೇಗೆ?

    ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಹಿರಿಯ ಕಾನೂನು ತಜ್ಞ ಕೆ ಪರಾಶರನ್, ಮಾಜಿ ಸಿಜೆಐ ಬಿ ಸುದರ್ಶನ್ ರೆಡ್ಡಿ ಅವರ ಜೊತೆ ಕೂಡ ವೆಂಕಯ್ಯ ನಾಯ್ಡು ಈ ವಿಚಾರದ ಬಗ್ಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

  • ಟ್ವೀಟ್ ನಲ್ಲಿ ‘ಸ್ಪೆಲ್ಲಿಂಗ್’ ಮಿಸ್ಟೇಕ್: ರಾಜ್ಯಸಭೆಯಲ್ಲಿ ರಾಹುಲ್ ಗಾಂಧಿಗೆ ನೋಟಿಸ್

    ಟ್ವೀಟ್ ನಲ್ಲಿ ‘ಸ್ಪೆಲ್ಲಿಂಗ್’ ಮಿಸ್ಟೇಕ್: ರಾಜ್ಯಸಭೆಯಲ್ಲಿ ರಾಹುಲ್ ಗಾಂಧಿಗೆ ನೋಟಿಸ್

    ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಉದ್ದೇಶ ಪೂರ್ವಕವಾಗಿ ಕೇಂದ್ರ ಅರ್ಥಿಕ ಸಚಿವ ಅರುಣ್ ಜೇಟ್ಲಿ ಅವರ ಹೆಸರನ್ನು ತಿರುಚಿ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದರು ರಾಜ್ಯಸಭೆಯಲ್ಲಿ ನೋಟಿಸ್ ಜಾರಿ ಮಾಡಿದ್ದಾರೆ.

    ಬಿಜೆಪಿ ಸಂಸದ ಭುಪೇಂದ್ರ ಯಾದವ್ ಮಾಡಿರುವ ಆರೋಪವನ್ನು ರಾಜ್ಯಸಭಾ ಸ್ಪೀಕರ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.

    ಸಂಸದ ಭುಪೇಂದ್ರ ಯಾದವ್ ಅವರು ರಾಹುಲ್ ಗಾಂಧಿ ಅವರು ಉದ್ದೇಶ ಪೂರ್ವಕವಾಗಿ ಆರುಣ್ ಜೇಟ್ಲಿ ಅವರ ಹೆಸರನ್ನು ತಪ್ಪಾಗಿ ತಿರುಚಿದ್ದಾರೆ ಎಂದು ಆರೋಪಿಸಿ ನೋಟಿಸ್ ಜಾರಿ ಮಾಡಿದ್ದರು. ಈ ಕುರಿತು ಸದನಕ್ಕೆ ಪ್ರತಿಕ್ರಿಯೆ ನೀಡಿದ ಸ್ಪೀಕರ್ ಅವರು ಭುಪೇಂದ್ರ ಅವರು ನೀಡಿದ ಸೂಚನೆಯನ್ನು ಪರಿಶೀಲಿಸಿ ನಂತರ ಈ ಕುರಿತು ನೋಟಿಸ್ ಪಡೆಯಲಾಗುವುದು ಎಂದು ಗುರುವಾರ ಹೇಳಿದ್ದರು.

    ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವುದು ಒಂದು, ಆದರೆ ಮಾಡುವುದು ಮತ್ತೊಂದು. ಈ ಕುರಿತು ನೆನಪಿಸಿದಕ್ಕೆ ಧನ್ಯವಾದಗಳು ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬುಧವಾರ ಟ್ವೀಟ್ ಮಾಡಿದ್ದರು. ಆದರೆ ತಮ್ಮ ಟ್ವೀಟ್ ನಲ್ಲಿ ಅರುಣ್ ಜೇಟ್ಲಿ ಹೆಸರಿಗೆ ಬದಲಾಗಿ Mr Jaitlie ಎಂದು ಟ್ವೀಟ್ ಮಾಡಿದ್ದರು.

    ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಚುನಾವಣೆಯ ಸಂದರ್ಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಮಾಜಿ ಉಪರಾಷ್ಟ್ರಪತಿ ಹಂಮೀದ್ ಅನ್ಸಾರಿ ಅವರು ಪಾಕಿಸ್ತಾನ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು ಎಂದು ಆರೋಪಿಸಿದ್ದರು.

    ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿಗಳ ವಿರುದ್ಧ ಮಾಡಿದ ಆರೋಪ ಆಧಾರ ರಹಿತವಾಗಿದೆ, ಕೂಡಲೇ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕರು ಸದನದಲ್ಲಿ ಬೇಡಿಕೆ ಇಟ್ಟಿದ್ದರು. ಪ್ರತಿ ಪಕ್ಷದ ಒತ್ತಡಕ್ಕೆ ಮಣಿದ ಬಿಜೆಪಿ ಕೇಂದ್ರ ಸಚಿವ ಅರಣ್ ಜೇಟ್ಲಿ ಪ್ರಧಾನಿಗಳ ಹೇಳಿಕೆಗೆ ಸ್ಪಷ್ಟನೆಯನ್ನು ನೀಡಿದ್ದರು. ಈ ವಿಚಾರದ ಬಗ್ಗೆ ರಾಹುಲ್ ಗಾಂಧಿ ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದರು.

  • 93ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ವಾಜಪೇಯಿ – ಮೋದಿ, ವೆಂಕಯ್ಯ ನಾಯ್ಡುರಿಂದ ಶುಭಾಶಯ

    93ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ವಾಜಪೇಯಿ – ಮೋದಿ, ವೆಂಕಯ್ಯ ನಾಯ್ಡುರಿಂದ ಶುಭಾಶಯ

    ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಇಂದು ತಮ್ಮ 93ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನವದೆಹಲಿಯಲ್ಲಿರುವ ವಾಜಪೇಯಿ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹಾಗೂ ಕೇಂದ್ರ ಗೃಹ ಮಂತ್ರಿ ರಾಜ್‍ನಾಥ್ ಸಿಂಗ್ ತೆರಳಿ ಶುಭಾಶಯ ತಿಳಿಸಿದರು.

    ಇವರ ಚಮತ್ಕಾರ ಹಾಗೂ ನಾಯಕತ್ವದಿಂದ ಭಾರತ ಸಾಕಷ್ಟು ಅಭಿವೃದ್ಧಿ ಕಂಡಿದೆ. ವಿಶ್ವ ಮಟ್ಟದಲ್ಲಿ ನಮ್ಮ ದೇಶದ ಪ್ರತಿಷ್ಠಿತೆಯನ್ನು ಹೆಚ್ಚಿಸಿದ್ದಾರೆ. ಅವರ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

    ವಾಜಪೇಯಿ ಅವರು ಜನರನ್ನು ಒಟ್ಟಾಗಿ ಇರಲು ಒತ್ತಾಯಿಸಿದರು ಮತ್ತು ಕಷ್ಟದ ಕಾಲದಲ್ಲಿ ಭರವಸೆಯನ್ನು ಅವರು ಬಿಡಲಿಲ್ಲ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕವಿತೆ ಮೂಲಕ ವಾಜಪೇಯಿ ಅವರಿಗೆ ಶುಭ ಕೋರಿದ್ದಾರೆ.

    ವಾಜಪೇಯಿ ಅವರು 1991, 1996, 1998, 1999 ಹಾಗೂ 2004ರಲ್ಲಿ ಲಕ್ನೋ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಆಗಿದ್ದರು. 1924ರಲ್ಲಿ ಜನಿಸಿದ ವಾಜಪೇಯಿ ಅವರು 1942 ‘ಭಾರತ ಬಿಟ್ಟು ತೊಲಗಿ ಚಳುವಳಿ’ಯಲ್ಲಿ ರಾಜಕಾರಣಕ್ಕೆ ಪ್ರವೇಶಿಸಿದ್ದರು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ ಮೊದಲ ವಿದೇಶಾಂಗ ವ್ಯವಹಾರಗಳ ಸಚಿವ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

  • ನಟ ಜಗ್ಗೇಶ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರಿಂದ ಭಾರೀ ಆಕ್ರೋಶ!

    ನಟ ಜಗ್ಗೇಶ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರಿಂದ ಭಾರೀ ಆಕ್ರೋಶ!

    ಬೆಂಗಳೂರು: ನಟ ಹಾಗೂ ಬಿಜೆಪಿಯ ವಿಧಾನ ಪರಿಷತ್ ಮಾಜಿ ಸದಸ್ಯ ಜಗ್ಗೇಶ್ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಹೊಗಳಿ ಟ್ವೀಟ್ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

    ವೆಂಕಯನಾಯ್ಡು ಅವರು ಇದೀಗ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು ಹಿನ್ನೆಲೆಯಲ್ಲಿ ಜಗ್ಗೇಶ್ ಈ ಟ್ವೀಟ್ ಮಾಡಿ ಅಭಿನಂದಿಸಿದ್ದರು. ತಮ್ಮ ಟ್ವೀಟ್ ನಲ್ಲಿ ಕರ್ನಾಟಕದಲ್ಲಿ ಅವರನ್ನು ಭಾಷಾಭಾವನೆಯಲ್ಲಿ ರಾಜ್ಯ ಸಭೆಗೆ ಆಕ್ಷೇಪಿಸಿದರು. ಆದರೆ ಇಂದು ಭಾರತಕ್ಕೆ ಉಪರಾಷ್ಟ್ರಪತಿ! ಬಾರದು ಬಪ್ಪುದು, ಬಪ್ಪುದು ತಪ್ಪದು ಇದೇ ದೇವರ ಲೀಲೆ ಅಂತ ಬರೆದುಕೊಂಡಿದ್ದರು.

    ಇದೀಗ ಜಗ್ಗೇಶ್ ಅವರು ಪರೋಕ್ಷವಾಗಿ ಕನ್ನಡಿಗರಿಗೆ ಅಪಮಾನವಾಗುವ ರೀತಿ ಟ್ವೀಟ್ ಮಾಡಿದ್ದಾರೆ ಅಂತ ಸಾಮಾಜಿಕ ಜಾಲ ತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ವಿವಾದಾತ್ಮಕ ಟ್ವೀಟ್ ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜಗ್ಗೇಶ್ ಟ್ವೀಟ್ ಡಿಲೀಟ್ ಮಾಡಿದ್ದಾರೆ.

    ಕನ್ನಡಿಗರ ವಿರೋಧ ಯಾಕೆ?: ರಾಜ್ಯಸಭೆಯ ಚುನಾವಣೆ ವೇಳೆ ಬಿಜೆಪಿ ಈ ಬಾರಿ ಮತ್ತೊಮ್ಮೆ ಕರ್ನಾಟಕದಿಂದ ವೆಂಕಯ್ಯ ನಾಯ್ಡು ಅವರನ್ನು ಕಳುಹಿಸಲು ಮುಂದಾಗಿತ್ತು. ಆದರೆ ಈ ಹಿಂದೆ ಎರಡೂ ಬಾರಿ ರಾಜ್ಯದಿಂದ ಆಯ್ಕೆ ಆಗಿದ್ದರೂ ರಾಜ್ಯಕ್ಕೆ ಏನು ಕೆಲಸ ಮಾಡಿಲ್ಲ ಎಂದು ಕನ್ನಡಿಗರು ಮತ್ತೊಮ್ಮೆ ಆರಿಸಿ ಕಳುಹಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ `ವೆಂಕಯ್ಯ ಸಾಕಯ್ಯ’ ಅನ್ನೋ ಅಭಿಯಾನ ನಡೆಸಿದ್ದರು. ಈ ವೇಳೆ ಕನ್ನಡಪರ ಧ್ವನಿ ಎತ್ತದೆ, ಕನ್ನಡ ಪರ ಕೆಲಸ ಮಾಡದ ಬಗ್ಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಆ ಸಂದರ್ಭದಲ್ಲಿ ವೆಂಕಯ್ಯ ನಾಯ್ಡುಗೆ ರಾಜ್ಯಸಭೆ ಟಿಕೆಟ್ ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೊನೆಗೆ ರಾಜ್ಯದ ಜನರ ಅಭಿಪ್ರಾಯಕ್ಕೆ ಬಿಜೆಪಿ ಮಣಿದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಿದ್ದರೆ, ವೆಂಕಯ್ಯ ನಾಯ್ಡು ಅವರಿಗೆ ರಾಜಸ್ಥಾನದಲ್ಲಿ ಟಿಕೆಟ್ ನೀಡಿತ್ತು. ಈ ವಿಚಾರವನ್ನು ನೆನಪಿಸಿಕೊಂಡು ನಟ ಜಗ್ಗೇಶ್ ಈ ಟ್ವೀಟ್ ಮಾಡಿದ್ದರು.

    ದೇಶದ 15ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ ಆಗಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರನ್ನು 272 ಮತಗಳ ಅಂತರದಿಂದ ಸೋಲಿಸುವ ಮೂಲಕ ಈ ಉಪರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದಾರೆ. ಒಟ್ಟು 785 ಮತದಾರರ ಪೈಕಿ ಬಿಜೆಪಿ ಇಬ್ಬರು ಸೇರಿ 14 ಮಂದಿ ಮತ ಹಾಕಿಲ್ಲ. ಶೇಕಡವಾರು ಲೆಕ್ಕದಲ್ಲಿ ನೋಡೋದಾದ್ರೆ 98.21ರಷ್ಟು ಮತದಾನ ಆಗಿತ್ತು. ಒಟ್ಟು ಮತಗಳ ಶೇ. 68 ರಷ್ಟು ಅಂದ್ರೆ 516 ಸಂಸದರು ಎನ್‍ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು ಪರ ಮತ ಚಲಾಯಿಸಿದ್ರೆ, ಶೇ. 32ರಷ್ಟು ಅಂದ್ರೆ 244 ಮಂದಿ ಸಂಸದರು ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಪರ ಮತ ಚಲಾಯಿಸಿದ್ದಾರೆ.

  • 13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ

    13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ

    ನವದೆಹಲಿ: ದೇಶದ 13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ ಆಗಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರನ್ನು 272 ಮತಗಳ ಅಂತರದಿಂದ ಸೋಲಿಸುವ ಮೂಲಕ ಈ ಉಪರಾಷ್ಟ್ರಪತಿಯಾಗಿ ಆಯ್ಕೆ ಆಗಿದ್ದಾರೆ.

    ಒಟ್ಟು 785 ಮತದಾರರ ಪೈಕಿ ಬಿಜೆಪಿ ಇಬ್ಬರು ಸೇರಿ 14 ಮಂದಿ ಮತ ಹಾಕಿರಲಿಲ್ಲ. ಶೇಕಡವಾರು ಲೆಕ್ಕದಲ್ಲಿ ನೋಡೋದಾದ್ರೆ 98.21ರಷ್ಟು ಮತದಾನ ಆಗಿತ್ತು. ಒಟ್ಟು ಮತಗಳ ಶೇ. 68 ರಷ್ಟು ಅಂದರೆ  516 ಸಂಸದರು ಎನ್‍ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು ಪರ ಮತ ಚಲಾಯಿಸಿದರೆ,  ಶೇ. 32ರಷ್ಟು ಅಂದರೆ 244 ಮಂದಿ ಸಂಸದರು ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಪರ ಮತ ಚಲಾಯಿಸಿದ್ದಾರೆ.

    ಉಪರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವೆಂಕಯ್ಯ ನಾಯ್ಡು ಅವರನ್ನು ಅಭಿನಂದಿಸಿದ್ದಾರೆ.

    ಈ ಚುನಾವಣೆಯಲ್ಲೂ ಅಡ್ಡಮತದಾನ ನಡೆದಿದ್ದು, ವೆಂಕಯ್ಯ ನಾಯ್ಡು ಅವರಿಗೆ ಹೆಚ್ಚುವರಿಯಾಗಿ 17 ಮತಗಳು ಬಿದ್ದಿದ್ದು,   ಗೋಪಾಲಕೃಷ್ಣ ಗಾಂಧಿ ಅವರಿಗೆ 33 ಮತಗಳು ಕಡಿಮೆ ಬಿದ್ದಿದೆ.

     

  • ಸಚಿವೆ ಸ್ಮೃತಿ ಇರಾನಿಗೆ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ

    ಸಚಿವೆ ಸ್ಮೃತಿ ಇರಾನಿಗೆ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ

     

    ನವದೆಹಲಿ: ಜವಳಿ ಸಚಿವೆ ಸ್ಮೃತಿ ಇರಾನಿ ಅವರಿಗೆ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ ಎಂದು ಸರ್ಕಾರ ಇಂದು ಘೋಷಿಸಿದೆ.

    ಹಿರಿಯ ಬಿಜೆಪಿ ನಾಯಕ ಎಂ ವೆಂಕಯ್ಯ ನಾಯ್ಡು ಅವರು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮಾಂಕಿತರಾಗಿರುವ ಹಿನ್ನೆಲೆಯಲ್ಲಿ ಅವರು ನಿರ್ವಹಿಸುತ್ತಿದ್ದ ವಾರ್ತಾ ಮತ್ತು ಪ್ರಸಾರ ಸಚಿವ ಸ್ಥಾನಕ್ಕೆ ಸೋಮವಾರದಂದು ರಾಜೀನಾಮೆ ನೀಡಿದ್ದರು. ಅಲ್ಲದೆ ಅವರು ನಗರಾಭಿವೃದ್ಧಿ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

    ಈ ಹಿನ್ನೆಲೆಯಲ್ಲಿ ಸದ್ಯ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಜವಾಬ್ದಾರಿಯನ್ನು ಸಚಿವೆ ಸ್ಮೃತಿ ಇರಾನಿಗೆ ನೀಡಲಾಗಿದೆ. ನಗರಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನರೇಂದ್ರ ಸಿಂಗ್ ತೋಮರ್ ಅವರಿಗೆ ನೀಡಲಾಗಿದೆ. ಈ ಬಗ್ಗೆ ಪ್ರಧಾನಿ ಸಚಿವಾಲಯ ಟ್ವಿಟ್ಟರ್‍ನಲ್ಲಿ ತಿಳಿಸಿದೆ.

    ತೋಮರ್ ಅವರು ಸದ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿದ್ದಾರೆ.

  • 30 ಸ್ಮಾರ್ಟ್ ಸಿಟಿ ಪಟ್ಟಿ ರಿಲೀಸ್: ಕರ್ನಾಟಕಕ್ಕೆ ದಕ್ಕಿದ್ದು ಒಂದೇ ಒಂದು, ತಮಿಳುನಾಡು, ಯುಪಿಗೆ ಸಿಂಹಪಾಲು

    30 ಸ್ಮಾರ್ಟ್ ಸಿಟಿ ಪಟ್ಟಿ ರಿಲೀಸ್: ಕರ್ನಾಟಕಕ್ಕೆ ದಕ್ಕಿದ್ದು ಒಂದೇ ಒಂದು, ತಮಿಳುನಾಡು, ಯುಪಿಗೆ ಸಿಂಹಪಾಲು

    ನವದೆಹಲಿ: ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 30 ನಗರ ಪಟ್ಟಿಯಲ್ಲಿ ಕರ್ನಾಟಕ ಬೆಂಗಳೂರಿಗೆ ಸ್ಥಾನ ಸಿಕ್ಕಿದೆ. ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡ ಹೊಸ ಪಟ್ಟಿಯನ್ನು ಬಿಡುಗಡೆಗೊಳಿಸಿದರು.

    ಕೇಂದ್ರ ಸರ್ಕಾರ ಈ ಬಾರಿ 40 ನಗರಗಳ ಪಟ್ಟಿಯನ್ನು ಘೋಷಿಸಲಿದೆ ಎನ್ನಲಾಗಿತ್ತು. ಆದರೆ ಕೆಲವು ನಗರಗಳು ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ನಿಗದಿಯಾಗಿದ್ದ ಕನಿಷ್ಠ ಮಾನದಂಡಗಳನ್ನು ಹೊಂದಿರದ ಕಾರಣ 30 ನಗರಗಳಿಗೆ ಮಾತ್ರ ಪಟ್ಟಿ ಸೀಮಿತವಾಗಿದೆ.

    ಇಂದಿನ 30 ಸೇರಿ ಒಟ್ಟು 90 ನಗರಗಳನ್ನು ಸ್ಮಾರ್ಟ್ ಸಿಟಿಯನ್ನಾಗಿ ಘೋಷಣೆ ಮಾಡಲಾಗಿದ್ದು, ಈ ನಗರಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ 500 ಕೋಟಿ ರೂ.ಗಳನ್ನು ಹೂಡಿಕೆ ಮಾಡಲಿದೆ.

    ಕೇಂದ್ರ ಸರ್ಕಾರದ ಸ್ಮಾಟ್ ಸಿಟಿ ಪಟ್ಟಿಯಲ್ಲಿ ಇದೂವರೆಗೆ ಕರ್ನಾಟಕದ ಮಂಗಳೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ತುಮಕೂರು ನಗರಗಳು ಸ್ಥಾನ ಪಡೆದಿತ್ತು.

    1. ತಿರುವನಂತಪುರಂ(ಕೇರಳ)
    2. ರಾಯ್‍ಪುರ್ (ಛತ್ತೀಸ್‍ಗಢ)
    3. ರಾಜ್‍ಕೋಟ್(ಗುಜರಾತ್
    4. ಅಮರಾವತಿ(ಆಂಧ್ರಪ್ರದೇಶ)
    5. ಪಾಟ್ನಾ(ಬಿಹಾರ)

    6. ಕರೀಂನಗರ್(ಉತ್ತರಪ್ರದೇಶ)
    7. ಮುಜಾಫರ್‍ಪುರ್(ಉತ್ತರಪ್ರದೇಶ)
    8. ಪುದುಚೇರಿ(ಕೇಂದ್ರಾಡಳಿತ ಪ್ರದೇಶ)
    9. ಗಾಂಧಿನಗರ(ಗುಜರಾತ್)
    10. ಶ್ರೀನಗರ(ಜಮ್ಮು ಕಾಶ್ಮೀರ)

    11. ಸಗರ್(ಮಧ್ಯಪ್ರದೇಶ)
    12. ಕರ್ನಲ್(ಹರ್ಯಾಣ)
    13. ಸಾಟ್ನಾ(ಮಧ್ಯಪ್ರದೇಶ)
    14. ಬೆಂಗಳೂರು(ಕರ್ನಾಟಕ)
    15. ಶಿಮ್ಲಾ(ಹಿಮಾಚಲ ಪ್ರದೇಶ)

    16. ಡೆಹ್ರಾಡೂನ್(ಉತ್ತರಾಖಂಡ್)
    17. ತಿರುಪ್ಪುರ್(ತಮಿಳುನಾಡು)
    18. ಪಿಂಪ್ರಿ ಚಿಂಚ್ವಾಡ್( ಮಹಾರಾಷ್ಟ್ರ- ಪುಣೆ)
    19. ಬಿಲಾಸ್‍ಪುರ್(ಛತ್ತೀಸ್‍ಗಢ)
    20. ಪಾಸಿಘಾಟ್(ಅರುಣಾಚಲ ಪ್ರದೇಶ)

    21. ಜಮ್ಮು(ಜಮ್ಮುಕಾಶ್ಮೀರ)
    22. ದಾಹೂದ್(ಗುಜರಾತ್)
    23. ತಿರುನೆಲ್ವೇಲಿ(ತಮಿಳುನಾಡು)
    24. ತೂತುಕೂಡಿ(ತಮಿಳುನಾಡು)
    25. ತಿರುಚನಾಪಳ್ಳಿ(ತಮಿಳುನಾಡು)

    26. ಝಾನ್ಸಿ(ಉತ್ತರಪ್ರದೇಶ)
    27. ಐಜ್ವಾಲ್(ಮಿಜೋರಾಂ)
    28. ಅಲಿಗಢ್(ಉತ್ತರಪ್ರದೇಶ)
    29. ಅಲಹಾಬಾದ್(ಉತ್ತರಪ್ರದೇಶ)
    30. ಗ್ಯಾಂಗ್ಟಾಕ್ (ಸಿಕ್ಕಿಂ)

  • ರೈತರ ಸಾಲಮನ್ನಾ ಈಗ ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು

    ರೈತರ ಸಾಲಮನ್ನಾ ಈಗ ಫ್ಯಾಶನ್ ಆಗಿದೆ: ವೆಂಕಯ್ಯ ನಾಯ್ಡು

    ಮುಂಬೈ: ರೈತರ ಸಾಲಮನ್ನಾ ಮಾಡುವುದು ಈಗ ಫ್ಯಾಶನ್ ಆಗಿದೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.

    ಮುಂಬೈಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತೀವ್ರ ಸಂದರ್ಭದಲ್ಲಿ ಸಾಲವನ್ನು ಮನ್ನಾ ಮಾಡಬೇಕು. ಆದರೆ ಇದೇ ಅಂತಿಮ ಪರಿಹಾರವಾಗಬಾರದು. ಸರ್ಕಾರಗಳು ರೈತರ ರಕ್ಷಣೆಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಏರ್ ಇಂಡಿಯಾದ ಉದಾಹರಣೆ ನೀಡಿದ ಅವರು, ಏರ್‍ಇಂಡಿಯಾದಲ್ಲಿ ಏನಾಯ್ತು? ಸರ್ಕಾರವು ಈ ವ್ಯವಹಾರದಲ್ಲಿ ಯಾವುದೇ ವ್ಯವಹಾರವನ್ನು ಹೊಂದಿಲ್ಲ. ಕೇಂದ್ರ ಸರ್ಕಾರ ಹೆಲ್ತ್ ಕೇರ್, ಆಡಳಿತ, ಶಿಕ್ಷಣ ಮತ್ತು ಮೂಲ ಸೌಲಭ್ಯಗಳ ಕ್ಷೇತ್ರಗಳಿಗೆ ಹೆಚ್ಚು ಗಮನಕೊಡಬೇಕಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

    ರೈತರಿಗೆ ಅವಮಾನ: ವೆಂಕಯ್ಯ ನಾಯ್ಡು ಹೇಳಿಕೆಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತರಾಮ್ ಯಚೂರಿ ಪ್ರತಿಕ್ರಿಯಿಸಿ, ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ 36 ರಿಂದ 40 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ನಡುವೆ ಸಾಲಮನ್ನಾ ಮಾಡುವುದನ್ನು ಫ್ಯಾಶನ್ ಎಂದು ಹೇಳುವ ಮೂಲಕ ಅನ್ನದಾತನಿಗೆ ಅವಮಾನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

    ಉತ್ತರಪ್ರದೇಶ, ಮಹಾರಾಷ್ಟ್ರ, ಪಂಜಾಬ್ ಸರ್ಕಾರಗಳು ರೈತರ ಸಾಲವನ್ನು ಮನ್ನಾ ಮಾಡಿದ ಬಳಿಕ ಬುಧವಾರ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಹಕಾರಿ ಸಂಘಗಳಲ್ಲಿ ರೈತರು ಮಾಡಿದ 50 ಸಾವಿರ ರೂ.ವರೆಗಿನ ಸಾಲವನ್ನು ಮಾಡಲಾಗುವುದು ಎಂದು ತಿಳಿಸಿದ್ದಾರೆ.

     

    ಇದನ್ನೂ ಓದಿ: ಸಾಲ ಮನ್ನಾ ಮಾಡಿದ ನಂತ್ರ ಮೋದಿಗೆ ಸಿಎಂ ಸವಾಲ್ ಹಾಕಿದ್ದು ಹೀಗೆ

    ಇದನ್ನೂ ಓದಿ:ಯಾವ ರಾಜ್ಯದಲ್ಲಿ ಎಷ್ಟು ಸಾಲಮನ್ನಾ? ಕೇಂದ್ರ ಸರ್ಕಾರ ಮತ್ತು ಆರ್‍ಬಿಐ ಹೇಳಿದ್ದು ಏನು?